Nanu Mattu Gunda-2: ಬರ್ತಿದೆ ʻನಾನು ಮತ್ತು ಗುಂಡ-2ʼ ಸಿನಿಮಾ; ಡಬ್ಬಿಂಗ್‌ಗೆ ಇಳಿದ ಸಿಂಬ! - Vistara News

ಸ್ಯಾಂಡಲ್ ವುಡ್

Nanu Mattu Gunda-2: ಬರ್ತಿದೆ ʻನಾನು ಮತ್ತು ಗುಂಡ-2ʼ ಸಿನಿಮಾ; ಡಬ್ಬಿಂಗ್‌ಗೆ ಇಳಿದ ಸಿಂಬ!

Nanu Mattu Gunda-2:ನಾನು ಮತ್ತು ಗುಂಡ’ ಚಿತ್ರದ ಸೀಕ್ವೇಲ್ ಆಗಿ ತೆರೆಗೆ ಬರುತ್ತಿರುವ ನಾನು ಮತ್ತು ಗುಂಡ -‌2 ನಲ್ಲಿ ನಾಯಕ ರಾಕೇಶ್ ಅಡಿಗ ಜೊತೆ ಡಾಗ್ ಸಿಂಬ ಕೂಡ ಪ್ರಮುಖ‌ ಪಾತ್ರದಲ್ಲಿ ಕಾಣಿಸಿಕೊಂಡಿದೆ.

VISTARANEWS.COM


on

Nanu Mattu Gunda-2 dog simba dubbing rakesh adiga in main roles
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಾನು ಮತ್ತು ಗುಂಡ-2 (Nanu Mattu Gunda-2) ಚಿತ್ರದ ಒಂದು ವಿಡಿಯೋ ಈ ಹಿಂದೆ ರಿಲೀಸ್ ಆಗಿತ್ತು. ಇದು ಚಿತ್ರದ ಟೈಟಲ್ ರಿವೀಲ್ ಮಾಡಿತ್ತು. ಗುಂಡನ ಪಾತ್ರದ ಹೇಗಿರುತ್ತದೆ ಅನ್ನುವುದನ್ನು ತೋರಿಸಿಕೊಟ್ಟಿತ್ತು. ನಾನು ಮತ್ತು ಗುಂಡ ಚಿತ್ರದಲ್ಲಿ ರಾಕೇಶ್ ಅಡಿಗ ಹೀರೋ ಆಗಿದ್ದಾರೆ. ಲವ್ ಮಾಕ್ಟೆಲ್ ಚಿತ್ರದಲ್ಲಿ ನಟಿಸಿದ್ದ ರಚನಾ ಇಂದರ್ ಈ ಚಿತ್ರದ ಹೀರೋಯಿನ್ ಆಗಿದ್ದಾರೆ.ನಾನು ಮತ್ತು ಗುಂಡ’ ಚಿತ್ರದ ಸೀಕ್ವೇಲ್ ಆಗಿ ತೆರೆಗೆ ಬರುತ್ತಿರುವ ನಾನು ಮತ್ತು ಗುಂಡ -‌2 ನಲ್ಲಿ ನಾಯಕ ರಾಕೇಶ್ ಅಡಿಗ ಜೊತೆ ಡಾಗ್ ಸಿಂಬ ಕೂಡ ಪ್ರಮುಖ‌ ಪಾತ್ರದಲ್ಲಿ ಕಾಣಿಸಿಕೊಂಡಿದೆ.

ರಘುಹಾಸನ್ ಆಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರ ಕನ್ನಡ, ತೆಲುಗು, ಹಿಂದಿ ಸೇರಿ ಐದು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದು ಡಬ್ಬಿಂಗ್ ಕೆಲಸ ಈಗಷ್ಟೇ ಶುರುವಾಗಿದೆ. ಇಡೀ ಸಿನಿಮಾದಲ್ಲಿ ಎಲ್ಲಾ ರೀತಿಯ ಎಮೋಷನ್ಸ್ ಇದ್ದು, ವಿಶೇಷವಾಗಿ ಡಾಗ್ ಸಿಂಬಾ ರೆಕಾರ್ಡಿಂಗ್ ಸ್ಟುಡೊಯೋಗೆ ಬಂದು ತನ್ನ ಪಾತ್ರಕ್ಕೆ ತಾನೇ ಡಬ್ ಮಾಡುತ್ತಿದೆ. ಎಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಅದರ ಬೊಗಳೋ ಸೌಂಡ್ ರೆಕಾರ್ಡ್ ಮಾಡಲಾಗುತ್ತಿದೆ.

ʻʻಪ್ರತಿ ಜಾತಿಯ ನಾಯಿಯದೂ ಒಂದೊಂದು ರೀತಿ ಸೌಂಡ್ ಇರುತ್ತದೆ. ಹಾಗಾಗಿಯೇ ನಾವು ನಮ್ಮ ಗುಂಡನ ಪಾತ್ರ ಮಾಡಿರೋ ಸಿಂಬಾನಿಂದಲೇ ಡಬ್ಬಿಂಗ್ ಮಾಡಿಸುತ್ತಿದ್ದೇವೆ.ಡಾಗ್ ಕೈಲಿ ಡಬ್ಬಿಂಗ್ ಮಾಡಿಸುತ್ತಿರುವುದು ನಾವೇ ಮೊದಲೆನ್ನಬಹುದು. ಹಿಂದಿನ ಪಾರ್ಟ್ ಒನ್ ಚಿತ್ರದಲ್ಲೂ ಡಾಗ್‌ನಿಂದಲೇ ಡಬ್ಬಿಂಗ್ ಮಾಡಿಸಿದ್ದೇವೆ. ಆದರೆ, ಅದು ಕೆಲವೇ ಕೆಲವು ದೃಶ್ಯಗಳಲ್ಲಿ ಮಾತ್ರ ಆಗಿತ್ತು. ಪಾರ್ಟ್-2ನ ಇಡೀ ಸಿನಿಮಾದಲ್ಲಿ ಡಾಗ್ ಸಿಂಬಾನೇ ಡಬ್ ಮಾಡುತ್ತಿದೆ. ಇಂಡಿಯಾದಲ್ಲಿ ಇಲ್ಲಿವರೆಗೂ ಯಾರೂ ಈ ಪ್ರಯತ್ನ ಮಾಡಿಲ್ಲʼʼ ಎಂದು ನಿರ್ದೇಶಕ ರಘು ಹಾಸನ್ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: Kannada New Movie: `ಗೋಪಿಲೋಲ’ ಸಿನಿಮಾದ ಎರಡನೇ ಹಾಡು ರಿಲೀಸ್ !

ದೆ. ಮೊದಲ ಭಾಗದಲ್ಲಿ ಮರಣ ಹೊಂದಿದ್ದ ನಾಯಕ ಶಂಕರ​ನಿಗೆ ಎರಡನೇ ಭಾಗದಲ್ಲಿ ಪುನರ್ಜನ್ಮವಾಗಿರುತ್ತದೆ. ಗೋವಿಂದೇ ಗೌಡ ಹಾಗೂ ನಾಯಿಯ ಪಾತ್ರದ ಮೂಲಕ ಚಿತ್ರಕಥೆ ಮುಂದುವರೆಯಲಿದೆ. ಸೋಷಿಯಲ್ ಕನ್ಸರ್ನ್ ಜೊತೆಗೆ ಡಿವೈನ್ ಕಂಟೆಂಟ್ ಕೂಡ ಚಿತ್ರದಲ್ಲಿದೆ. ಸಂಭಾಷಣೆ ಹಾಗೂ ಸಾಹಿತ್ಯವನ್ನು ರೋಹಿತ್ ರಮನ್ ರಚಿಸಿದ್ದಾರೆ.ಸಿನಿಮಾ ನಿರ್ದೇಶನದ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನೂ ರಘು ಹಾಸನ್ ಹೊತ್ತಿದ್ದಾರೆ. ಪೊಯೆಮ್ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾಗುತ್ತಿರುವ ‘ನಾನು ಮತ್ತು ಗುಂಡ 2’ಗೆ ಆರ್.ಪಿ.ಪಟ್ನಾಯಕ್ ಸಂಗೀತ, ರುತ್ವಿಕ್ ಮುರಳೀಧರ್ ಹಿನ್ನೆಲೆ ಸಂಗೀತ, ತನ್ವಿಕ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ಹಾಗು ರಾಘು ನೃತ್ಯ ನಿರ್ದೇಶನವಿದೆ. ಕನ್ನಡ, ತೆಲುಗು, ಹಿಂದಿ ಸೇರಿ ಐದು ಭಾಷೆಗಳಲ್ಲಿ ಚಿತ್ರ ತೆರೆಗೆ ಬರಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Duniya Vijay: ಅಬ್ಬರ ಮುಂದುವರಿಸಿದ ʻಭೀಮʼ: ಕಲೆಕ್ಷನ್‌ ಎಷ್ಟು?

Duniya Vijay: ಚಿತ್ರಮಂದಿರಗಳಲ್ಲಿ ‘ಭೀಮ’ನ ಕಾರುಬಾರು ಜೋರಾಗಿತ್ತು. ರಜಾ ದಿನ ಅಲ್ಲದೇ ವಾರದ ದಿನದಲ್ಲಿ(ಶುಕ್ರವಾರ) ಕೆಲವೆಡೆ ಶೋಗಳು ಹೌಸ್‌ಫುಲ್ ಆಗಿತ್ತು. ಸಂಜೆ ಮೇಲೆ ಶೋಗಳಿಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಬುಕ್‌ಮೈ ಶೋನಲ್ಲಿ ಟಿಕೆಟ್ ಬುಕ್ಕಿಂಗ್‌ಗೂ ರೆಸ್ಪಾನ್ಸ್ ಚೆನ್ನಾಗಿತ್ತು.

VISTARANEWS.COM


on

Duniya Vijay bheema collection 2nd day
Koo

ಬೆಂಗಳೂರು: ದುನಿಯಾ ವಿಜಯ್ ನಟಿಸಿ (Duniya Vijay), ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾ ರಾಜ್ಯಾದ್ಯಂತ ಅದ್ಧೂರಿಯಾಗಿ ಆಗಸ್ಟ್‌ 9ರಂದು ರಿಲೀಸ್‌ ಆಗಿದೆ. ಸಲಗ ಸಿನಿಮಾದ ನಂತರ ಸಿನಿಪ್ರೇಕ್ಷಕರ ಮುಂದೆ ಮತ್ತೆ ಬಂದಿದ್ದಾರೆ ದುನಿಯಾ. ಹೀಗಾಗಿ ಸಹಜವಾಗಿಯೇ ಸಿನಿಮಾ ನಿರೀಕ್ಷೆ ಮೂಡಿಸಿತ್ತು. ಒಂದರ್ಥದಲ್ಲಿ ಈ ವರ್ಷ ಬಂದಿರುವ ಮೊದಲ ಸ್ಟಾರ್ ನಟನ ಸಿನಿಮಾ. ದುನಿಯಾ ವಿಜಯ್ ಅವರ ನಟನೆಯ ‘ಭೀಮ’ ಮೊದಲ ದಿನ 3.5 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು ವರದಿಯಾಗಿತ್ತು. ಈ ಸಮಯದಲ್ಲಿ ‘ಭೀಮ’ ಸಿನಿಮಾ ಎರಡು ದಿನ ಸೇರಿ ಒಟ್ಟು 20 ಕೋಟಿ ರೂಪಾಯಿ ಗಳಿಸಿದೆ ಎನ್ನಲಾಗುತ್ತಿದೆ. ಆದರೆ ‘ಭೀಮ’ ಸಿನಿಮಾ ಬಾಕ್ಸ್ ಆಫಿಸ್ ಕಲೆಕ್ಷನ್ ಬಗ್ಗೆ ದುನಿಯಾ ವಿಜಯ್ ಅವರೇ ಆಗಲಿ ಅಥವಾ ಸಿನಿಮಾ ತಂಡವೇ ಆಗಲಿ ಅಧಿಕೃತ ಮಾಹಿತಿ ನೀಡಿಲ್ಲ.

ಕೃಷ್ಣ ಸಾರ್ಥಕ್ ಹಾಗೂ ಜಗದೀಶ್ ಗೌಡ ನಿರ್ಮಾಣದ ‘ಭೀಮ’ ಚಿತ್ರದಲ್ಲಿ ಅನುಭವಿ ಕಲಾವಿದರ ಜೊತೆ ಹೊಸ ಪ್ರತಿಭೆಗಳಿಗೆ ಅವಕಾಶ ಸಿಕ್ಕಿದೆ. ಮಾಸ್ತಿ ಸಂಭಾಷಣೆ, ಚರಣ್ ರಾಜ್ ಸಂಗೀತ ಚಿತ್ರಕ್ಕೆ ಪ್ಲಸ್ ಆಗಿದೆ. ಒಂದಷ್ಟು ತಪ್ಪುಗಳ ನಡುವೆಯೂ ಮಾಸ್ ಪ್ರೇಕ್ಷಕರನ್ನು ಸಿನಿಮಾ ರಂಜಿಸ್ತಿದೆ. ಮತ್ತೆ ಚಿತ್ರಮಂದಿರಗಳಲ್ಲಿ ಶಿಳ್ಳೆ ಚಪ್ಪಾಳೆ ಸದ್ದು ಕೇಳುವಂತಾಗಿದೆ.

ಚಿತ್ರಮಂದಿರಗಳಲ್ಲಿ ‘ಭೀಮ’ನ ಕಾರುಬಾರು ಜೋರಾಗಿತ್ತು. ರಜಾ ದಿನ ಅಲ್ಲದೇ ವಾರದ ದಿನದಲ್ಲಿ(ಶುಕ್ರವಾರ) ಕೆಲವೆಡೆ ಶೋಗಳು ಹೌಸ್‌ಫುಲ್ ಆಗಿತ್ತು. ಸಂಜೆ ಮೇಲೆ ಶೋಗಳಿಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಬುಕ್‌ಮೈ ಶೋನಲ್ಲಿ ಟಿಕೆಟ್ ಬುಕ್ಕಿಂಗ್‌ಗೂ ರೆಸ್ಪಾನ್ಸ್ ಚೆನ್ನಾಗಿತ್ತು.

ಇತ್ತೀಚೆಗೆ ರಿಲೀಸ್ ಆದ ಹಿಂದಿ ಸಿನಿಮಾಗಳು ಮೊದಲ ದಿನ ಇಷ್ಟು ಗಳಿಕೆ ಮಾಡಲು ವಿಫಲವಾಗಿವೆ. ‘ಭೀಮ’ ಕಾರಣದಿಂದ ಚಿತ್ರಮಂದಿರಗಳಿಗೆ ಹೊಸ ಹುರುಪು ಸಿಕ್ಕಿದೆ.

ಇದನ್ನೂ ಓದಿ: Duniya Vijay: ಮೊದಲ ದಿನದ ಗಳಿಕೆಯಲ್ಲಿ ʻಬ್ಲಾಕ್‌ ಕೋಬ್ರಾʼ ಭರ್ಜರಿ ಅಬ್ಬರ; ʻಭೀಮʼಗೆ ಬಹುಪರಾಕ್ ಎಂದ ಪ್ರೇಕ್ಷಕರು!

`ಭೀಮ’ ದುನಿಯಾ ವಿಜಯ್ ನಿರ್ದೇಶಿಸಿರುವ ಎರಡನೇ ಸಿನಿಮಾ ಆಗಿದೆ. ‘ಸಲಗ’ ಸಿನಿಮಾ ಮೂಲಕ ಗೆಲುವು ಕಂಡಿರುವ ದುನಿಯಾ ವಿಜಯ್ ಈ ಬಾರಿ ಮತ್ತೊಂದು ಗೆಲುವಿನ ಭರವಸೆಯಲ್ಲಿದ್ದಾರೆ. ಈ ಸಿನಿಮಾ ನೋಡಲು ಕನಿಷ್ಠ 18 ವರ್ಷ ಆಗಿರಬೇಕಾಗಿರುವುದು ಕಡ್ಡಾಯ. ಅದಕ್ಕಿಂತ ಕಡಿಮೆ ವಯಸ್ಸಿನ ದುನಿಯಾ ವಿಜಯ್‌ ಅಭಿಮಾನಿಗಳು ಈ ಚಿತ್ರವನ್ನು ನೋಡಲು ಸಾಧ್ಯವಿಲ್ಲ. ಯಾಕೆಂದರೆ ಈ ಸಿನಿಮಾಕ್ಕೆ ದೊರಕಿರುವುದು “ಎ” ಸರ್ಟಿಫಿಕೇಟ್‌.

Continue Reading

ಸ್ಯಾಂಡಲ್ ವುಡ್

Kannada New Movie: `ಗೋಪಿಲೋಲ’ ಸಿನಿಮಾದ ಎರಡನೇ ಹಾಡು ರಿಲೀಸ್ !

Kannada New Movie: ನಿರ್ಮಾಪಕರಾದ ಎಸ್.ಆರ್.ಸನತ್ ಕುಮಾರ್ ಮಾತನಾಡಿ, ಇದು ನಮ್ಮ ನಾಲ್ಕನೇ ಸಿನಿಮಾ. ನಮಗೆ ಸಿನಿಮಾ ಫ್ಯಾಷನ್. ಪುನೀತ್ ಸರ್ ಬಳಿ ಹೋಗಿ ಕಥೆ ಹೇಳಿದರು. ನಾನು ಮಾಡುತ್ತೇನೆ. ಮೂರು ವರ್ಷ ಟೈಮ್ ಬೇಕು ಎಂದರು. ಕಥೆ ಚೆನ್ನಾಗಿದೆ. ಒಂದಕ್ಕಿಂತ ಒಂದು ಹಾಡುಗಳು ಚೆನ್ನಾಗಿ ಇವೆ ಎಂದರು.

VISTARANEWS.COM


on

Kannada New Movie Gopilola cinema Song Out
Koo

ಬೆಂಗಳೂರು: ಈ ಹಿಂದೆ ಕನ್ನಡದಲ್ಲಿ ಛಲಗಾರ, ಸರ್ಕಾರಿ ಕೆಲಸ ದೇವರ ಕೆಲಸ, ಮನಸ್ಸಿನಾಟ, ಬಂಗಾರದ ಮಕ್ಕಳು, ಮರಾಠಿಯಲ್ಲಿ ಫೆಬ್ರವರಿ 14, ಮಿಷನ್ ಅಂಬ್ಯುಲೆನ್ಸ್ ಸಿನಿಮಾಗಳನ್ನು ನಿರ್ದೇಶಿಸಿದ್ದ ಆರ್ ರವೀಂದ್ರ ಈಗ `ಗೋಪಿಲೋಲ’ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಇದೀಗ ಈ ಚಿತ್ರದ ಎರಡನೇ ಹಾಡು ಬಿಡುಗಡೆ ಕಾರ್ಯಕ್ರಮ ಇತ್ತೀಚೆಗಷ್ಟೇ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಟೆಯಿತು. ಹಿರಿಯ ‌ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ನಿರ್ಮಾಪಕ ಉಮೇಶ್ ಬಣಕಾರ್ ನಿನ್ನೆ ನಿನ್ನೆ ನೆಚ್ಚಿಕೊಂಡೆ ಎಂಬ ಹಾಡನ್ನು ಅನಾವರಣ ಮಾಡಿದರು.

ಬಳಿಕ ರಾಜೇಂದ್ರ ಸಿಂಗ್ ಬಾಬು ಮಾತನಾಡಿ, ಒಂದು ಸಾಂಗ್ ನಾವು ನೋಡುತ್ತವೆ. ಆದರೆ ಆ ಹಾಡಿನ ಹಿಂದೆ ಎಷ್ಟು ಕೆಲಸ ಮಾಡಿರುತ್ತಾರೆ ಎಂದರೆ ಮೇಕಪ್, ಪ್ರೊಡಕ್ಷನ್, ಪ್ರೊಡಕ್ಷನ್ ಮ್ಯಾನೇಜರ್, ಕಾಸ್ಟ್ಯೂಮ್ ಡಿಸೈನ್..ಈ ರೀತಿ ಹಲವರ ಪ್ರಯತ್ನ ಇರುತ್ತದೆ. ಈ ಹಾಡನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ. ಲೋಕೇಷನ್, ನಟನೆ ಓವರ್ ಆಗಿ ಮಾಡದೇ ಹಾಡಿಗೆ ಎಷ್ಟು ಬೇಕೋ‌ ಅಷ್ಟೂ ಮಾಡಿದ್ದಾರೆ. ನಿರ್ದೇಶಕರು, ಕೊರಿಯೋಗ್ರಫರ್ ಎಲ್ಲರೂ ಅದ್ಭುತ ಕೆಲಸ ಮಾಡಿದ್ದಾರೆ. ಎಲ್ಲಿಯೂ ಹೊಸಬರು ಎನ್ನುವಂತೆ ಕಾಣುವುದಿಲ್ಲ. ಇವತ್ತಿನ ದಿನಗಳಲ್ಲಿ ಮೊದಲಿನ ಮ್ಯೂಸಿಕ್ ಅಂದಿನ ಮ್ಯೂಸಿಕ್ ವ್ಯತ್ಯಾಸ ಇದೆ. ಇಂಡಿಯನ್ ಸಿನಿಮಾಗಳಲ್ಲಿ ಹಾಡುಗಳು ಇಲ್ಲದೇ ಇದ್ದರೆ ಸಿನಿಮಾ ಪೂರ್ಣವಾಗಿ ಇರುವುದಿಲ್ಲ ಎಂದು ತಿಳಿಸಿದರು.

ನಿರ್ಮಾಪಕರಾದ ಎಸ್.ಆರ್.ಸನತ್ ಕುಮಾರ್ ಮಾತನಾಡಿ, ಇದು ನಮ್ಮ ನಾಲ್ಕನೇ ಸಿನಿಮಾ. ನಮಗೆ ಸಿನಿಮಾ ಫ್ಯಾಷನ್. ಪುನೀತ್ ಸರ್ ಬಳಿ ಹೋಗಿ ಕಥೆ ಹೇಳಿದರು. ನಾನು ಮಾಡುತ್ತೇನೆ. ಮೂರು ವರ್ಷ ಟೈಮ್ ಬೇಕು ಎಂದರು. ಕಥೆ ಚೆನ್ನಾಗಿದೆ. ಒಂದಕ್ಕಿಂತ ಒಂದು ಹಾಡುಗಳು ಚೆನ್ನಾಗಿ ಇವೆ ಎಂದರು.

ಇದನ್ನೂ ಓದಿ: Jr NTR: ಸಿನಿಮಾ ಮುಹೂರ್ತದಲ್ಲಿ ಜ್ಯೂ. ಎನ್​ಟಿಆರ್ ಧರಿಸಿದ ವಾಚ್ ಬೆಲೆ ಕೇಳಿದರೆ ನೀವು ಬೆರಗಾಗೋದು ಖಚಿತ​!

ನಿನ್ನೆ ನಿನ್ನೆ ನೆಚ್ಚಿಕೊಂಡೆ ಎಂಬ ಹಾಡಿಗೆ ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದು, ಅನುರಾಧ ಭಟ್ ಹಾಗೂ ರಾಜೇಶ್ ಕೃಷ್ಣನ್ ಧ್ವನಿಯಾಗಿದ್ದು, ಮಿದುನ್ ಅಸೋಕನ್ ಚೆನ್ನೈ ಟ್ಯೂನ್ ಹಾಕಿದ್ದಾರೆ. ನಾಯಕ ಮಂಜುನಾಥ್ ಅರಸು ನಾಯಕಿ ನಿಮಿಷಾ ಕೆ ಚಂದ್ರ ಮೆಲೋಡಿ ಗೀತೆಗೆ ಹೆಜ್ಜೆ ಹಾಕಿದ್ದಾರೆ.

ಸಹಜ ಕೃಷಿ ಹಾಗೂ ಪ್ರೇಮ ಕಥಾ ಹಂದರ ಹೊಂದಿರುವ ಗೋಪಿಲೋಲ ಸಿನಿಮಾಗೆ ಎಸ್.ಆರ್. ಸನತ್ ಕುಮಾರ್ ಬಂಡವಾಳ ಹೂಡಿದ್ದಾರೆ. ಸಹ ನಿರ್ಮಾಪಕರಾಗಿ ಚಿತ್ರದ ನಾಯಕ ಮಂಜುನಾಥ್ ಸಾಥ್ ಕೊಟ್ಟಿದ್ದಾರೆ‌. ಮಂಜುನಾಥ್ ಅವರಿಗೆ ಜೋಡಿಯಾಗಿ ನಿಮಿಷಾ ಕೆ ಚಂದ್ರ ಅಭಿನಯಿಸ್ತಿದ್ದು, ನಟಿ ಜಾಹ್ನವಿ, ಎಸ್.ನಾರಾಯಣ್, ಪದ್ಮಾ ವಾಸಂತಿ, ಕೆಂಪೇಗೌಡ, ಡಿಗ್ರಿ ನಾಗರಾಜ್, ರೇಖಾ ದಾಸ್, ನಾಗೇಶ್ ಯಾದವ್, ಸ್ವಾತಿ, ಹಿರಿಯ ನಿರ್ದೇಶಕ ಜೋಸೈಮನ್ ಸೇರಿದಂತೆ ತೆಲುಗು ನಟ ಸಪ್ತಗಿರಿ ತಾರಾಬಳಗದಲ್ಲಿದ್ದಾರೆ.

ಗೋಪಿಲೋಲ ಸಿನಿಮಾಗೆ ಕೇಶವಚಂದ್ರ ಚಿತ್ರಕಥೆ ಸಂಭಾಷಣೆ ಬರೆದಿದ್ದು, ಕೆಎಂ ಪ್ರಕಾಶ್ ಸಂಕಲನ, ಮಿದುನ್ ಅಸೋಕನ್ ಚೆನ್ನೈ ಸಂಗೀತ, ರಾಕೇಶ್ ಆಚಾರ್ಯ ಹಿನ್ನೆಲೆ ಸಂಗೀತ, ಸೂರ್ಯಕಾಂತ್ ಎಚ್ ಕ್ಯಾಮೆರಾ ವರ್ಕ್, ಥ್ರಿಲ್ಲರ್ ಮಂಜು, ಜಾನಿ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.

Continue Reading

ಸಿನಿಮಾ

Tharun Sudhir – Sonal: ತರುಣ್‌ ಸುಧೀರ್‌ -ಸೋನಲ್‌ ಕಲ್ಯಾಣ; ಹೇಗೆ ಕಾಣ್ತಿದ್ದಾಳೆ ನೋಡಿ ಮದುಮಗಳು!

Tharun Sudhir: ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಪೂರ್ಣಿಮಾ ಪ್ಯಾಲೇಸ್‌ನಲ್ಲಿ ಮದುವೆ ನಡೆದಿದೆ. ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಹಿಂದೂ ಸಂಪ್ರದಾಯದಂತೆ ದಾಂಪತ್ಯಕ್ಕೆ ಕಾಲಿಟ್ಟರು.

VISTARANEWS.COM


on

Tharun Sudhir - Sonal marriage vibe photos Out
Koo

ನಿರ್ದೇಶಕ ತರುಣ್‌ ಸುಧೀರ್‌ (Tharun Sudhir) ಹಾಗೂ ಸೋನಲ್‌ ಮೊಂಥೆರೋ ಸಪ್ತಪದಿ ತುಳಿದಿದ್ದಾರೆ. ತರುಣ್ ಮತ್ತು ಸೋನಲ್ ಸತಿ-ಪತಿ ಆಗಿದ್ದಾರೆ. 

ಆಗಸ್ಟ್-11 ರಂದು ಬೆಳಗ್ಗೆ 10:50 ರಿಂದ 11:35 ಸಮಯದ ತುಲಾ ಲಗ್ನದಲ್ಲಿ ಮಾಂಗಲ್ಯ ಧಾರಣೆ ನೆರವೇರಿದೆ. ಹಿಂದೂ ಸಂಪ್ರದಾಯದಂತೆ ನಡೆಯಲಿರೋ ಈ ಮದುವೆಗೆ ಗಣ್ಯಾತಿ ಗಣ್ಯರು ಹಾಗೂ ಸಿನಿಮಾ ಗಣ್ಯರು ಆಗಮಿಸಿದ್ದರು. 

ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಪೂರ್ಣಿಮಾ ಪ್ಯಾಲೇಸ್‌ನಲ್ಲಿ ಅದ್ಧೂರಿಯಾಗಿ ಆರತಕ್ಷತೆ ಹಾಗೂ ಮದುವೆ ನಡೆದಿದೆ.

ಇದನ್ನೂ ಓದಿ: Tharun Sudhir: ವೈವಾಹಿಕ ಜೀವನಕ್ಕೆ ಕಾಲಿಟ್ಟ ತರುಣ್‌ ಸುಧೀರ್‌- ಸೋನಲ್‌ ಮೊಂಥೆರೋ!

ಇನ್ನು ತರುಣ್‌ಗೆ ಗಾಡ್ ಫಾದರ್ ಆಗಿರುವ ದರ್ಶನ್ ಜೈಲಿನಲ್ಲಿ ಇದ್ದಾರೆ. ಹೀಗಾಗಿ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಮೊದಲ ಆಮಂತ್ರಣ ಪತ್ರಿಕೆ ನೀಡಿದ್ದರು.

ತರುಣ್ ಸುಧೀರ್ ಹಾಗೂ ಸೋನಲ್ ಮದುವೆ ಅದ್ಧೂರಿಯಾಗಿಯೇ ಪ್ಲಾನ್ ಆಗಿದೆ. ಮದುವೆ ಹಾಲ್‌ ಎಂಟ್ರನ್ಸ್‌ ವಿಶೇಷವಾಗಿಯೇ ಡಿಸೈನ್ ಆಗಿದೆ. ಮದುವೆ ಹಾಲ್‌ನ ಔಟ್ ಡೋರ್ ಫಿಲ್ಮ್‌ ಕಾನ್ಸೆಪ್ಟ್‌ನಲ್ಲಿಯೇ ರೆಡಿ ಆಗಿದೆ. ಸೋನಲ್ ಅವರು ಮಂಗಳೂರಿನವರು. ಅವರು ಮೊದಲು ತಮಿಳು ಸಿನಿಮಾದಲ್ಲಿ ನಟಿಸಿದ್ದರು. 

 ತರುಣ್ ಸುಧೀರ್ ಅವರಿಗೆ 41 ವರ್ಷ ಎನ್ನಲಾಗಿದೆ. ಈಗ ಅವರು ಜನಿಸಿದ್ದು 1983ರಲ್ಲಿ. ಅಂದರೆ, ಇಬ್ಬರ ಮಧ್ಯೆ ಸುಮರು 12 ವರ್ಷಗಳ ಅಂತರ ಇದೆ.

Continue Reading

ಸ್ಯಾಂಡಲ್ ವುಡ್

Tharun Sudhir: ವೈವಾಹಿಕ ಜೀವನಕ್ಕೆ ಕಾಲಿಟ್ಟ ತರುಣ್‌ ಸುಧೀರ್‌- ಸೋನಲ್‌ ಮೊಂಥೆರೋ!

Tharun Sudhir: ತರುಣ್ ಸುಧೀರ್ ಹಾಗೂ ಸೋನಲ್ ಮದುವೆ ಅದ್ಧೂರಿಯಾಗಿಯೇ ಪ್ಲಾನ್ ಆಗಿದೆ. ಮದುವೆ ಹಾಲ್‌ ಎಂಟ್ರನ್ಸ್‌ ವಿಶೇಷವಾಗಿಯೇ ಡಿಸೈನ್ ಆಗಿದೆ. ಮದುವೆ ಹಾಲ್‌ನ ಔಟ್ ಡೋರ್ ಫಿಲ್ಮ್‌ ಕಾನ್ಸೆಪ್ಟ್‌ನಲ್ಲಿಯೇ ರೆಡಿ ಆಗಿದೆ. ಸೋನಲ್ ಅವರು ಮಂಗಳೂರಿನವರು. ಅವರು ಮೊದಲು ತಮಿಳು ಸಿನಿಮಾದಲ್ಲಿ ನಟಿಸಿದ್ದರು. ಆನ್​ಲೈನ್​ನಲ್ಲಿ ಇರುವ ಮಾಹಿತಿ ಪ್ರಕಾರ ಅವರು ಜನಿಸಿದ್ದು 1995ರ ಆಗಸ್ಟ್ 11ರಂದು.

VISTARANEWS.COM


on

Tharun Sudhir and Sonal Monteiro tie the knot
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನ ಭರವಸೆಯ ನಿರ್ದೇಶಕ ತರುಣ್‌ ಸುಧೀರ್‌ (Tharun Sudhir) ಹಾಗೂ ಸೋನಲ್‌ ಮೊಂಥೆರೋ ಸಪ್ತಪದಿ ತುಳಿದಿದ್ದಾರೆ. ತರುಣ್ ಮತ್ತು ಸೋನಲ್ ಸತಿ-ಪತಿ ಆಗಿದ್ದಾರೆ. ಆಗಸ್ಟ್-11 ರಂದು ಬೆಳಗ್ಗೆ 10:50 ರಿಂದ 11:35 ಸಮಯದ ತುಲಾ ಲಗ್ನದಲ್ಲಿ ಮಾಂಗಲ್ಯ ಧಾರಣೆ ನೆರವೇರಿದೆ. ಹಿಂದೂ ಸಂಪ್ರದಾಯದಂತೆ ನಡೆಯಲಿರೋ ಈ ಮದುವೆಗೆ ಗಣ್ಯಾತಿ ಗಣ್ಯರು ಹಾಗೂ ಸಿನಿಮಾ ಗಣ್ಯರು ಆಗಮಿಸಿದ್ದರು. ಬೆಂಗಳೂರಿನ ಕೆಂಗೇರಿ ಬಳಿಯ ಪೂರ್ಣಿಮಾ ಪ್ಯಾಲೇಸ್‌ನಲ್ಲಿ ತರುಣ್ ಮತ್ತು ಸೋನಲ್ ಮದುವೆ ನೆರವೇರಿದೆ.

ತರುಣ್ ಸುಧೀರ್ ಹಾಗೂ ಸೋನಲ್ ಮದುವೆ ಅದ್ಧೂರಿಯಾಗಿಯೇ ಪ್ಲಾನ್ ಆಗಿದೆ. ಮದುವೆ ಹಾಲ್‌ ಎಂಟ್ರನ್ಸ್‌ ವಿಶೇಷವಾಗಿಯೇ ಡಿಸೈನ್ ಆಗಿದೆ. ಮದುವೆ ಹಾಲ್‌ನ ಔಟ್ ಡೋರ್ ಫಿಲ್ಮ್‌ ಕಾನ್ಸೆಪ್ಟ್‌ನಲ್ಲಿಯೇ ರೆಡಿ ಆಗಿದೆ. ಸೋನಲ್ ಅವರು ಮಂಗಳೂರಿನವರು. ಅವರು ಮೊದಲು ತಮಿಳು ಸಿನಿಮಾದಲ್ಲಿ ನಟಿಸಿದ್ದರು. ಆನ್​ಲೈನ್​ನಲ್ಲಿ ಇರುವ ಮಾಹಿತಿ ಪ್ರಕಾರ ಅವರು ಜನಿಸಿದ್ದು 1995ರ ಆಗಸ್ಟ್ 11ರಂದು. ಕೆಲವೇ ದಿನಗಳಲ್ಲಿ 29 ವರ್ಷ ತುಂಬಲಿದೆ. ತರುಣ್ ಸುಧೀರ್ ಅವರಿಗೆ 41 ವರ್ಷ ಎನ್ನಲಾಗಿದೆ. ಈಗ ಅವರು ಜನಿಸಿದ್ದು 1983ರಲ್ಲಿ. ಅಂದರೆ, ಇಬ್ಬರ ಮಧ್ಯೆ ಸುಮರು 12 ವರ್ಷಗಳ ಅಂತರ ಇದೆ.

ಇದನ್ನೂ ಓದಿ: Tharun Sudhir: ನನ್ನ ಮಗ ಸುಂದರ ಇಲ್ವಾ, ಒಳ್ಳೆಯ ಗುಣ ಇಲ್ವಾ ಎಂದು ಕಣ್ಣೀರಿಟ್ಟಿದ್ದ ತರುಣ್ ಸುಧೀರ್ ತಾಯಿ!

ಲವ್‌ ಸ್ಟೋರಿ ಏನು?

ತರುಣ್‌ ಸುಧೀರ್‌ ಮಾತನಾಡಿ ʻʻನನ್ನ ಸೋನಲ್ ಪರಿಚಯ ಆಗಿದ್ದು ರಾಬರ್ಟ್ ಸಿನಿಮಾ ಮೂಲಕ. ಆಡಿಷನ್‌ನಲ್ಲಿ ಪರಿಚಯವಾದರು. ರಾಬರ್ಟ್ ಸೆಟ್ ಅಲ್ಲಿ ಲವ್ ಆಗಿಲ್ಲ. ಪ್ರೊಫೆಷನಲ್ ರಿಲೇಶನ್ ಶಿಪ್ ಅಲ್ಲಿ ಇದ್ವಿ. ಆದರೆ ಲವ್ ಆಗಿರಲಿಲ್ಲ. ಆಗಾಗ ಬರ್ತ್‌ಡೇ ವಿಶ್ ಮಾತ್ರ ಮೆಸೇಜ್ ಮಾಡ್ತಿದ್ವಿ. 2023 ಯಿಂದ ಇಬ್ಬರ ನಡುವೆ ಬಾಂಡಿಂಗ್ ಬೆಳೆದಿದ್ದು. ದರ್ಶನ್ ಅವರು ಕಾಲೆಳೆಯುತ್ತಿದ್ರು. ಸೋನಲ್ ಗೆ ಮಾತ್ರ ಯಾಕೆ ಚೆನ್ನಾಗ್ ಫ್ರೇಮ್ ಇಡ್ತಿಯಾ? ಅಂತ ತಮಾಷೆ ಮಾಡೋಕೆ ಶುರು ಮಾಡಿದ್ರು. ಏನು ಸೋನಲ್‌ನ ಲವ್ ಮಾಡ್ತಿದೀಯ ಎಂದು ರೇಗಿಸುತಿದ್ದರು. ನಂತರ ಮದುವೆ ಆಗ್ತೀಯಾ? ಅಂದ್ರು. ಅದ್ಕೆ ನಾನು ನೀವು ಯಾರನ್ನ ತೋರಿಸ್ತಿರೋ ಆಗ್ತೀನಿ ಅಂದೇ. ಕಾಟೇರ ಸೆಟ್ ನಲ್ಲೂ ದರ್ಶನ್ ಹಾಗು ಕೆಲವರು ಸೋನಲ್ ಹೆಸರಲ್ಲಿ ರೇಗಿಸುತಿದ್ರು. ಕೊನೆಗೆ ಒಂದು ಸಿನ ಸೋನಲ್ ನನಗೆ ಕಾಲ್ ಮಾಡಿ ಇಬ್ಬರು ಡೇಟ್ ಮಾಡುತ್ತಿದ್ದೇವೆ ಎನ್ನುವ ಸುದ್ದಿ ಹಬ್ಬುತಿದೆ. ತಪ್ಪು ತಿಳ್ಕೊಬೇಡಿ ಎಂದಿದ್ದರು. ನನಗೂ ಯಾಕೋ ಯೂನಿವರ್ಸ ನಮ್ಮಿಬ್ಬರನ್ನು ಕನೆಕ್ಟ್ ಮಾಡ್ತಿದೆ ಅನ್ಸಿತ್ತು. ನಾನು ಕಾಂಪ್ಲಿಕೇಟ್ ಇದೀನಿ ನೀವು ಸಿಂಪಲ್, ವರ್ಕ್ ಆಗುತ್ತ ಎಂದು ಸೋನಲ್ ಅವರನ್ನ ಕೇಳಿದ್ದೆ. ಕಾಟೇರ ವರೆಗೂ ಮದುವೆ ಬಗ್ಗೆ ಯೋಚಿಸಿಲ್ಲ. ಈ ಬಗ್ಗೆ ಸೋನಲ್‌ಗೂ ಹೇಳಿದ್ದೆ ಕಾಟೇರ ಸಕ್ಸಸ್ ಆಯಿತು. ಇದು ರೈಟ್ ಟೈಮ್ ಅಂತ ಸೋನಲ್ ಮನೆಯಲ್ಲಿ ಮದುವೆ ವಿಚಾರ ಪ್ರಸ್ತಾಪ ಆಯಿತು.ಇಬ್ಬರ ಕುಟುಂಬದ ಸಮ್ಮತಿಯಿಂದ ಮದುವೆ ಆಗುತ್ತಿದ್ದೇವೆʼʼ ಎಂದರು,

Continue Reading
Advertisement
submarines
ದೇಶ7 mins ago

Submarines: ಎರಡು ಪರಮಾಣು ಜಲಾಂತರ್ಗಾಮಿ ನೌಕೆಗಳಿಗಾಗಿ ಕೇಂದ್ರಕ್ಕೆ ಭಾರತೀಯ ನೌಕಾಪಡೆ ಮನವಿ

Urfi Javed 'LED Display Top' On Mumbai Streets
ಬಾಲಿವುಡ್33 mins ago

Urfi Javed: ಎಲ್ಇಡಿ ಡಿಸ್ಪ್ಲೇ ಇಂದ ಮಾನ ಮುಚ್ಚಿಕೊಂಡು ಬಂದ ಉರ್ಫಿ ಜಾವೇದ್!

Tungabhadra Dam
ಬೆಂಗಳೂರು47 mins ago

Tungabhadra Dam: ರಾಜ್ಯದ ಎಲ್ಲ ಡ್ಯಾಮ್‌ಗಳ ಪರಿಶೀಲನೆಗೆ ಸಮಿತಿ ರಚನೆ: ಡಿ.ಕೆ. ಶಿವಕುಮಾರ್ ಸುಳಿವು

Self Harming
ಚಿತ್ರದುರ್ಗ58 mins ago

Self Harming : ಹೆಂಡ್ತಿ ಟಾರ್ಚರ್‌ಗೆ ನೇಣು ಬಿಗಿದುಕೊಂಡು ಗಂಡ ಆತ್ಮಹತ್ಯೆ

Pushpa 2 Leela offered to do special song in Pushpa 2
ಟಾಲಿವುಡ್2 hours ago

Pushpa 2: ಪುಷ್ಪ 2 ಚಿತ್ರದಲ್ಲಿ ಇರಲಿದ್ದಾರಂತೆ ಈ ಕನ್ನಡದ ಹೀರೋಯಿನ್​?

Hindenburg Report
ದೇಶ2 hours ago

Hindenburg Report: ಷೇರು ಮಾರುಕಟ್ಟೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿಗೆ ಬಿಜೆಪಿ ಟಾಂಗ್‌

karnataka rain weather forecast
ಮಳೆ2 hours ago

Karnataka Rain : ಧಾರಾಕಾರ ಮಳೆಗೆ ಕೆರೆಯಂತಾದ ಬೆಂಗಳೂರು-ಹೊಸೂರು ಹೈವೆ; ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ

Gold Rate Today
ಚಿನ್ನದ ದರ2 hours ago

Gold Rate Today: ಮತ್ತೆ ಹೆಚ್ಚಾಯ್ತು ಚಿನ್ನದ ದರ; ಬಂಗಾರ ಇಂದು ಇಷ್ಟು ದುಬಾರಿ

Tungabhadra Dam
ಕರ್ನಾಟಕ2 hours ago

Tungabhadra Dam: ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆ; ನದಿಪಾತ್ರದ ಗ್ರಾಮಗಳಲ್ಲಿ ಡಂಗುರ ಸಾರಿ ಎಚ್ಚರಿಕೆ

Physical abuse
ದೇಶ3 hours ago

Physical Abuse: 70 ವರ್ಷದ ಮುಸ್ಲಿಂ ಧರ್ಮ ಗುರು 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡುವಾಗ ಸಿಕ್ಕಿ ಬಿದ್ದ! ವಿಡಿಯೊ ಇದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ4 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು6 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ6 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌