Pushpa 2: ಪುಷ್ಪ 2 ಚಿತ್ರದಲ್ಲಿ ಇರಲಿದ್ದಾರಂತೆ ಈ ಕನ್ನಡದ ಹೀರೋಯಿನ್​? - Vistara News

ಟಾಲಿವುಡ್

Pushpa 2: ಪುಷ್ಪ 2 ಚಿತ್ರದಲ್ಲಿ ಇರಲಿದ್ದಾರಂತೆ ಈ ಕನ್ನಡದ ಹೀರೋಯಿನ್​?

Pushpa 2: ಶ್ರೀಲೀಲಾ (Sreeleela) ಅವರು ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೇ ಟಾಲಿವುಡ್​ನಲ್ಲೂ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಅಲ್ಲು ಅರ್ಜುನ್​ ಅಭಿನಯದ ‘ಪುಷ್ಪ 2’ (Pushpa 2 Movie) ಸಿನಿಮಾದಲ್ಲಿನ ಸ್ಪೆಷಲ್​ ಸಾಂಗ್​ಗೆ ಶ್ರೀಲೀಲಾ ಡ್ಯಾನ್ಸ್​ ಮಾಡುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬರುತ್ತಿದೆ. ‘

VISTARANEWS.COM


on

Pushpa 2 Leela offered to do special song in Pushpa 2
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಟಾಲಿವುಡ್‌ನ ಅಲ್ಲು ಅರ್ಜುನ್‌ ಮತ್ತು ನಟಿ ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ʼಪುಷ್ಪಾ: ದಿ ರೈಸ್‌ʼ (Pushpa 2) ಸಿನಿಮಾ ಭಾರತದಾದ್ಯಂತ ಹಿಟ್‌ ಆಗಿತ್ತು. . ಸಮಂತಾ ರುತ್​ ಪ್ರಭು ಅವರು ಡ್ಯಾನ್ಸ್ ಮಾಡಿದ್ದ ‘ಉ ಅಂಟಾವಾ ಮಾವ, ಉಊ ಅಂಟಾವಾ ಮಾವ..’ ಹಾಡು ಸೂಪರ್​ ಹಿಟ್​ ಆಗಿತ್ತು. ಈಗ ಎರಡನೇ ಪಾರ್ಟ್​ನಲ್ಲಿ ಯಾರು ಹೆಜ್ಜೆ ಹಾಕಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ‘ಪುಷ್ಪ 2’ ಸಿನಿಮಾದಲ್ಲಿ ಬಾಲಿವುಡ್ ನಟಿ ಜಾನ್ಹವಿ ಕಪೂರ್ ಐಟಂ ಸಾಂಗ್ ಮಾಡಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಜಾನ್ವಿ ಜೊತೆಗೆ ಕನ್ನಡದ ನಟಿ ಶ್ರೀಲೀಲಾ ಹೆಸರು ಕೂಡ ಚರ್ಚೆಗೆ ಬಂದಿದೆ. ಆದರೆ ಇನ್ನೂ ಅಧಿಕೃತ ಘೋಷಣೆ ಹೊರಬಿದ್ದಿಲ್ಲ.

ಶ್ರೀಲೀಲಾ (Sreeleela) ಅವರು ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೇ ಟಾಲಿವುಡ್​ನಲ್ಲೂ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಅಲ್ಲು ಅರ್ಜುನ್​ ಅಭಿನಯದ ‘ಪುಷ್ಪ 2’ (Pushpa 2 Movie) ಸಿನಿಮಾದಲ್ಲಿನ ಸ್ಪೆಷಲ್​ ಸಾಂಗ್​ಗೆ ಶ್ರೀಲೀಲಾ ಡ್ಯಾನ್ಸ್​ ಮಾಡುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬರುತ್ತಿದೆ. ‘ಸೀಕ್ವೆಲ್​ನಲ್ಲಿ ಆ ಅವಕಾಶ ಶ್ರೀಲೀಲಾ ಪಾಲಾಗಿದೆ ಎನ್ನಲಾಗುತ್ತಿದೆ.‘ಪುಷ್ಪ 2’ ಸಿನಿಮಾದಲ್ಲಿ ಏನೆಲ್ಲಾ ಡಿಫರೆಂಟ್ ಆಗಲಿದೆ ಎಂದು ಅಭಿಮಾನಿಗಳು ಕೂಡ ಕಾತರರಾಗಿದ್ದಾರೆ. ಅಭಿಮಾನಿಗಳ ಮನದಲ್ಲಿ ಸಿನಿಮಾದ ಕುತೂಹಲ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Pushpa 2 New Poster: ಲುಂಗಿಯುಟ್ಟು ಒಂದು ಕೈಯಲ್ಲಿ ಕೊಡಲಿ, ಇನ್ನೊಂದು ಕೈಯಲ್ಲಿ ಗನ್ ಹಿಡಿದು ಅಬ್ಬರಿಸಿದ ಫಹಾದ್ ಫಾಸಿಲ್! ​

ಇದನ್ನೂ ಓದಿ: Nanu Mattu Gunda-2: ಬರ್ತಿದೆ ʻನಾನು ಮತ್ತು ಗುಂಡ-2ʼ ಸಿನಿಮಾ; ಡಬ್ಬಿಂಗ್‌ಗೆ ಇಳಿದ ಸಿಂಬ!

2021ರಲ್ಲಿ ತೆರೆಕಂಡು ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡುದ್ದ ಪ್ಯಾನ್‌ ಇಂಡಿಯಾ ಸಿನಿಮಾ ʼಪುಷ್ಪʼದ ಮುಂದುವರಿದ ಭಾಗ ಇದು. ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಮೊದಲ ಹಾಡು ಈಗಾಗಲೇ ರಿಲೀಸ್‌ ಆಗಿ ಧೂಳೆಬ್ಬಿಸುತ್ತಿದೆ. ಅದರಲ್ಲಿಯೂ ಯೂಟ್ಯೂಬ್‌ನಲ್ಲಿ ದಾಖಲೆಯ ವೀಕ್ಷಣೆ ಕಂಡಿದೆ. ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಇದರಲ್ಲಿನ ಹುಕ್ ಸ್ಟೆಪ್ ವೈರಲ್‌ ಆಗಿದೆ. ಎರಡನೇ ಹಾಡು ಕೂಡ ಔಟ್‌ ಆಗಿದ್ದು, ಅಲ್ಲು ಅರ್ಜುನ್‌ ಜತೆ ರಶ್ಮಿಕಾ ಹೆಜ್ಜೆ ಹಾಕಿದ್ದಾರೆ. ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಣೆ ಪಡೆದುಕೊಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Mahesh Babu: ಮಹೇಶ್ ಬಾಬು ಲುಕ್‌ಗೆ ಫ್ಯಾನ್ಸ್‌ ಫಿದಾ; ಫೋಟೊ ವೈರಲ್‌!

Mahesh Babu: ಈ ಸಿನಿಮಾಗೆ ‘ಗೋಲ್ಡ್​’ ಎಂದು ಹೆಸರು ಇಟ್ಟಿದ್ದಾರೆ ಎಂಬ ಗಾಸಿಪ್​ ಇದೆ. ಆದರೆ ಆ ಬಗ್ಗೆ ಚಿತ್ರತಂಡದವರು ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಸದ್ಯಕ್ಕೆ ಈ ಚಿತ್ರವನ್ನು ‘ಎಸ್​ಎಸ್​ಎಂಬಿ 29’ ಎಂದು ತಾತ್ಕಾಲಿಕವಾಗಿ ಕರೆಯಲಾಗುತ್ತಿದೆ.

VISTARANEWS.COM


on

Mahesh Babu’s new look goes viral ahead of SSMB29
Koo

ಬೆಂಗಳೂರು: ಸೂಪರ್‌ಸ್ಟಾರ್ ಮಹೇಶ್ ಬಾಬು (Mahesh Babu) ಮತ್ತು ಖ್ಯಾತ ನಿರ್ದೇಶಕ ಎಸ್‌ಎಸ್ ರಾಜಮೌಳಿ ( S.S. Rajamouli) ಅಭಿನಯದ ಮುಂಬರುವ ಚಿತ್ರದ ಬಗ್ಗೆ ಅಭಿಮಾನಿಗಳು ಉತ್ಸುಕರಾಗಿದ್ದಾರೆ. ಸಿನಿಮಾ ಇನ್ನೂ ಶುರುವಾಗದಿದ್ದರೂ, ಮಹೇಶ್ ಬಾಬು ಈಗಾಗಲೇ ತಮ್ಮ ಪಾತ್ರಕ್ಕೆ ಸಿದ್ಧರಾಗುತ್ತಿದ್ದಾರೆ. ಇತ್ತೀಚೆಗಷ್ಟೇ ಅವರು ಗಡ್ಡ ಮತ್ತು ಉದ್ದನೆಯ ಕೂದಲಿನೊಂದಿಗೆ ಕಾಣಿಸಿಕೊಂಡಿದ್ದಾರೆ.

ಇತ್ತೀಚೆಗೆ ಮಹೇಶ್​ ಬಾಬು ಅವರು ಕುಟುಂಬದ ಜೊತೆ ಜೈಪುರ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಈ ವೇಳೆ ಅವರು ಉದ್ದ ಕೂದಲಿನ ಗೆಪಟ್​ನಲ್ಲಿ ಇರುವ ಫೋಟೋ ಮತ್ತು ವಿಡಿಯೋ ವೈರಲ್​ ಆಗಿದೆ. ಮಹೇಶ್​ ಬಾಬು ಅವರ ಗಡ್ಡದ ಲುಕ್​ ಕೂಡ ಗಮನ ಸೆಳೆದಿದೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋ ಮತ್ತು ವಿಡಿಯೋ ವೈರಲ್​ ಆಗುತ್ತಿವೆ. 

ಈ ಸಿನಿಮಾಗೆ ‘ಗೋಲ್ಡ್​’ ಎಂದು ಹೆಸರು ಇಟ್ಟಿದ್ದಾರೆ ಎಂಬ ಗಾಸಿಪ್​ ಇದೆ. ಆದರೆ ಆ ಬಗ್ಗೆ ಚಿತ್ರತಂಡದವರು ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಸದ್ಯಕ್ಕೆ ಈ ಚಿತ್ರವನ್ನು ‘ಎಸ್​ಎಸ್​ಎಂಬಿ 29’ ಎಂದು ತಾತ್ಕಾಲಿಕವಾಗಿ ಕರೆಯಲಾಗುತ್ತಿದೆ.

ಎಸ್‌ಎಸ್ ರಾಜಮೌಳಿ (SS Rajamouli) ಅವರು ಪತ್ನಿ ರಮಾ ರಾಜಮೌಳಿ ಅವರೊಂದಿಗೆ ಮಾರ್ಚ್ 18ರಂದು ಜಪಾನ್‌ನಲ್ಲಿ ‘ಆರ್‌ಆರ್‌ಆರ್’ ಪ್ರದರ್ಶನಕ್ಕೆ ಹಾಜರಾಗಿದ್ದರು. ಮತ್ತೊಮ್ಮೆ ಸಿನಿಮಾ ಸ್ಕ್ರೀನಿಂಗ್‌ಗಾಗಿ ನಿರ್ದೇಶಕ ರಾಜಮೌಳಿ ಅಲ್ಲಿಗೆ ಹೋಗಿದ್ದರು. ಅಭಿಮಾನಿಗಳೊಂದಿಗೆ ಸಂವಾದದ ಸಮಯದಲ್ಲಿ, ಅವರು ಮಹೇಶ್ ಬಾಬು ಅವರೊಂದಿಗಿನ ತಮ್ಮ ಮುಂಬರುವ ಚಿತ್ರದ ಬಗ್ಗೆ ಮಾತನಾಡಿದ್ದರು.

ಇದನ್ನೂ ಓದಿ: Mahesh Babu: ಸಹೋದರಿ ಮಂಜುಳಾ, ಪ್ರಭಾಸ್ ಚಿಕ್ಕಮ್ಮ ಜತೆ ಸಿಹಿಕ್ಷಣ ಹಂಚಿಕೊಂಡ ಮಹೇಶ್‌ ಬಾಬು!

ಜಪಾನ್‌ನಲ್ಲಿ ನಡೆದ ಸ್ಕ್ರೀನಿಂಗ್‌ನಲ್ಲಿ ಮಾತನಾಡಿದ ಎಸ್‌ಎಸ್ ರಾಜಮೌಳಿ, “ನಮ್ಮ ಮುಂದಿನ ಚಿತ್ರದ ಸ್ಕ್ರಿಪ್ಟ್‌ ಕೆಲಸ ಮಗಿಸಿದ್ದೇವೆ. ಚಿತ್ರ ಪ್ರಿ-ಪ್ರೊಡಕ್ಷನ್ ಪ್ರಕ್ರಿಯೆಯಲ್ಲಿದೆ. ಇನ್ನೂ ಕಾಸ್ಟಿಂಗ್ ಪೂರ್ಣಗೊಂಡಿಲ್ಲ. ಮುಖ್ಯ ನಾಯಕ, ಅಂದರೆ ಮಹೇಶ್‌ ಬಾಬು ಅವರು ಮಾತ್ರ ಫಿಕ್ಸ್‌ ಆಗಿದ್ದಾರೆ. ಆತ ತುಂಬಾ ಒಳ್ಳೆಯ ನಟ. ಸುಂದರ ಕೂಡ. ಸಿನಿಮಾ ಬಿಡುಗಡೆ ಸಮಯದಲ್ಲಿ ಅವರನ್ನು ಇಲ್ಲಿಗೆ ಕರೆತಂದು ನಿಮಗೆ ಪರಿಚಯಿಸುತ್ತೇನೆʼʼ ಎಂದಿದ್ದರು

2022ರಲ್ಲಿ ತೆರೆಕಂಡ ʼಆರ್‌.ಆರ್‌.ಆರ್‌.ʼ ಸಿನಿಮಾ ಬಳಿಕ ರಾಜಮೌಳಿ ನಿರ್ದೇಶನದ ಯಾವುದೇ ಚಿತ್ರ ಬಿಡುಗಡೆಯಾಗಿಲ್ಲ. ಅವರು ಈ ಚಿತ್ರಕ್ಕಾಗಿಯೇ ಹಲವು ವರ್ಷಗಳಿಂದ ಸಿದ್ಧತೆ ನಡೆಸುತ್ತಿದ್ದಾರೆ. ದಾಖಲೆ ಬರೆದ ʼಬಾಹುಬಲಿʼ, ʼಬಾಹುಬಲಿ 2ʼ, ʼಆರ್‌.ಆರ್‌.ಆರ್‌.ʼ ಮುಂತಾದ ಸಿನಿಮಾಗಳಿಗೆ ಕಥೆ ಬರೆದಿದ್ದ ವಿಜಯೇಂದ್ರ ಪ್ರಸಾದ್‌ ಅವರೇ ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದ ಬರವಣಿಗೆಯಲ್ಲಿ ತೊಡಗಿರುವುದು ನಿರೀಕ್ಷೆ ಹೆಚ್ಚಲು ಮತ್ತೊಂದು ಕಾರಣ. ಇತ್ತೀಚೆಗೆ ತೆರೆಕಂಡ ಮಹೇಶ್‌ ಬಾಬು ಅಭಿನಯದ ʼಗುಂಟೂರು ಖಾರಂʼ ಸಿನಿಮಾ ಸಾಧಾರಣ ಗೆಲುವು ದಾಖಲಿಸಿದೆ. ಹೀಗಾಗಿ ಅವರು ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದತ್ತ ಗಮನ ಹರಿಸಿದ್ದಾರೆ.

Continue Reading

ಟಾಲಿವುಡ್

Samantha Ruth Prabhu: ನಾಗ ಚೈತನ್ಯ ಎಂಗೇಜ್‌ ಆದ ಬೆನ್ನಲ್ಲೇ ಸಮಂತಾಗೆ ಬಂತು ಪ್ರಪೋಸಲ್‌; ಗ್ಲೀನ್‌ ಸಿಗ್ನಲ್‌ ಕೊಟ್ರಾ ನಟಿ?

Samantha Ruth Prabhu: ಮುಕೇಶ್ ಎಂಬವರು ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊವೊಂದನ್ನು ಶೇರ್‌ ಮಾಡಿದ್ದಾರೆ ಅದರಲ್ಲಿ ಮೊದಲಿಗೆ ಮುಕೇಶ್‌ ಸಮಂತಾಗೆ ಚಿಂತಿಸಬೇಕಾಗಿಲ್ಲ ಏಕೆಂದರೆ ನಾನು ಯಾವಾಗಲೂ ಅವರೊಂದಿಗೆ ಇರುತ್ತೇನೆ ಎಂದು ಹೇಳಿದ್ದಾರೆ. ರೀಲ್ಸ್‌ನಲ್ಲಿ ಸಮಂತಾ ‘ಮನೆ’ಯನ್ನು ತಲುಪಿದ ನಂತರ ಜಿಮ್‌ಗೆ ಹೋಗುತ್ತಾರೆ. ಬಳಿಕ ಅಲ್ಲಿಯೇ ‘ಹೃದಯ’ವನ್ನು ನೀಡಿ ಬೇಡಿಕೊಳ್ಳುವುದರೊಂದಿಗೆ ರೀಲ್ಸ್‌ ಕೊನೆಗೊಳ್ಳುತ್ತದೆ.

VISTARANEWS.COM


on

Samantha Ruth Prabhu to marry him instead after Naga Chaitanya
Koo

ಬೆಂಗಳೂರು: ಸಮಂತಾ (Samantha Ruth Prabhu: ) ಮಾಜಿ ಪತಿ ನಾಗ ಚೈತನ್ಯ ಅವರು ಆಗಸ್ಟ್ 8 ರಂದು ಶೋಭಿತಾ ಧೂಳಿಪಾಲ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಸಮಂತಾ ರುತ್ ಪ್ರಭು ಇತ್ತೀಚೆಗೆ ಅಭಿಮಾನಿಯಿಂದ ಮದುವೆಯ ಆಫರ್‌ವೊಂದನ್ನು ಸ್ವೀಕರಿಸಿದ್ದಾರೆ. ಈ ಬಗ್ಗೆ ನಟಿಯೂ ಪ್ರತಿಕ್ರಿಯೆ ನೀಡಿದ್ದಾರೆ.

ಮುಕೇಶ್ ಎಂಬವರು ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊವೊಂದನ್ನು ಶೇರ್‌ ಮಾಡಿದ್ದಾರೆ ಅದರಲ್ಲಿ ಮೊದಲಿಗೆ ಮುಕೇಶ್‌ ಸಮಂತಾಗೆ ಚಿಂತಿಸಬೇಕಾಗಿಲ್ಲ ಏಕೆಂದರೆ ನಾನು ಯಾವಾಗಲೂ ಅವರೊಂದಿಗೆ ಇರುತ್ತೇನೆ ಎಂದು ಹೇಳಿದ್ದಾರೆ. ರೀಲ್ಸ್‌ನಲ್ಲಿ ಸಮಂತಾ ‘ಮನೆ’ಯನ್ನು ತಲುಪಿದ ನಂತರ ಜಿಮ್‌ಗೆ ಹೋಗುತ್ತಾರೆ. ಬಳಿಕ ಅಲ್ಲಿಯೇ ‘ಹೃದಯ’ವನ್ನು ನೀಡಿ ಬೇಡಿಕೊಳ್ಳುವುದರೊಂದಿಗೆ ರೀಲ್ಸ್‌ ಕೊನೆಗೊಳ್ಳುತ್ತದೆ. ಅಷ್ಟೇ ಅಲ್ಲ ಆರ್ಥಿಕವಾಗಿ 2 ವರ್ಷದೊಳಗೆ ಗಟ್ಟಿಯಾಗುತ್ತೇನೆ ಎಂದು ಪ್ರಪೋಸ್‌ ಬಗ್ಗೆ ಮನವರಿಕೆ ಮಾಡುತ್ತಾರೆ. ಈ ರೀಲ್ಸ್‌ ಭಾರಿ ವೈರಲ್‌ ಆಗುತ್ತಿದ್ದಂತೆ ಸಮಂತಾ ಅವರ ಗಮನ ಕೂಡ ಸೆಳೆದಿದೆ.

ಫಿಟ್‌ನೆಸ್ ಫ್ರೀಕ್ ಎಂದು ಹೆಸರುವಾಸಿಯಾಗಿರುವ ಸಮಂತಾ ರೀಲ್ಸ್‌ಗೆ ಪ್ರತಿಕ್ರಿಯೆ ನೀಡಿದ್ದು ಹೀಗೆ, “ಹಿನ್ನೆಲೆಯಲ್ಲಿರುವ ಜಿಮ್ ನೋಡಿ ನನಗೆ ಬಹುತೇಕ ಮನವರಿಕೆ ಆಗಿದೆ” ಎಂದು ಕಮೆಂಟ್‌ ಮಾಡಿದ್ದಾರೆ. ಬಳಿಕ ಮತ್ತೆ ಮುಕೇಶ್‌ ಅವರು “ಜಗತ್ತು ಸಮಂತಾ ವಿರುದ್ಧವಾಗಿದ್ದರೆ, ನಾನು ಪ್ರಪಂಚದ ವಿರುದ್ಧವಾಗಿರುತ್ತೇನೆ” ಎಂದು ಅವರು ಇನ್ಸ್ಟಾಗ್ರಾಮ್ ಸ್ಟೋರಿಸ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: Prashanth Neel-Jr Ntr:‌ ಸೆಟ್ಟೇರಿತು ಪ್ರಶಾಂತ್ ನೀಲ್- ಜ್ಯೂ.ಎನ್‌ಟಿಆರ್ ಸಿನಿಮಾ; ರಿಲೀಸ್‌ ಡೇಟ್‌ ಅನೌನ್ಸ್!

ಸಮಂತಾ ಮತ್ತು ಚೈತನ್ಯ ಹೈದರಾಬಾದ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳುವ ಮೊದಲು ವರ್ಷಗಳ ಕಾಲ ಡೇಟಿಂಗ್ ಮಾಡುತ್ತಿದ್ದರು. 2017ರಲ್ಲಿ ಮದುವೆಯಾಗಿ 2021 ರಲ್ಲಿ ವಿಚ್ಛೇದನ ಪಡೆದರು.

ಇದೀಗ ಚೈತನ್ಯ ಆಗಸ್ಟ್ 8 ರಂದು ಹೈದರಾಬಾದ್‌ನಲ್ಲಿರುವ ತಮ್ಮ ನಿವಾಸದಲ್ಲಿ ಶೋಭಿತಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಾಗಾರ್ಜುನ ಅವರು ನಿಶ್ಚಿತಾರ್ಥದ ಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಪ್ರಕಟಿಸಿದರು.

Continue Reading

ಟಾಲಿವುಡ್

Prashanth Neel-Jr Ntr:‌ ಸೆಟ್ಟೇರಿತು ಪ್ರಶಾಂತ್ ನೀಲ್- ಜ್ಯೂ.ಎನ್‌ಟಿಆರ್ ಸಿನಿಮಾ; ರಿಲೀಸ್‌ ಡೇಟ್‌ ಅನೌನ್ಸ್!

Prashanth Neel: ಕೆಲವು ವರ್ಷಗಳ ಹಿಂದೆ ಈ ಚಿತ್ರ ಘೋಷಿಸಲ್ಪಟ್ಟಿದ್ದರೂ, ಜೂನಿಯರ್ ಎನ್ಟಿಆರ್ ಮತ್ತು ಪ್ರಶಾಂತ್ ನೀಲ್ ಅವರ ಬಿಡುವಿಲ್ಲದ ವೇಳಾಪಟ್ಟಿಯಿಂದಾಗಿ ಸಿನಿಮಾ ವಿಳಂಬವಾಯಿತು. ಚಿತ್ರೀಕರಣವು ಸೆಪ್ಟೆಂಬರ್ 2024 ರಲ್ಲಿ ಪ್ರಾರಂಭವಾಗಲಿದೆ ಎಂಬ ವದಂತಿಗಳಿವೆ.

VISTARANEWS.COM


on

Prashanth Neel-Jr Ntr Gets A Release Date
Koo

ಬೆಂಗಳೂರು: ಡೈರೆಕ್ಟರ್ ಪ್ರಶಾಂತ್ ನೀಲ್ (Prashanth Neel) ಮತ್ತು ಜ್ಯೂ.ಎನ್‌ಟಿಆರ್ (Jr.Ntr) ಕಾಂಬಿನೇಷನ್‌ನ ಹೊಸ ಸಿನಿಮಾದ ಮುಹೂರ್ತ (ಆ.9) ಹೈದರಾಬಾದ್‌ನಲ್ಲಿ ಸರಳವಾಗಿ ಜರುಗಿದೆ.ಬಹು ನಿರೀಕ್ಷಿತ ಚಿತ್ರವನ್ನು ತಾತ್ಕಾಲಿಕವಾಗಿ NTR31 ಎಂದು ಹೆಸರಿಡಲಾಗಿದೆ. 2026 ರಜನವರಿ 9ರಂದು ಸಿನಿಮಾ ಥಿಯೇಟರ್‌ಗೆ ಲಗ್ಗೆ ಇಡಲಿದೆ.

ಮೈತ್ರಿ ಮೂವಿ ಮೇಕರ್ಸ್‌ ಅಧಿಕೃತ X ಹ್ಯಾಂಡಲ್ (ಚಿತ್ರದ ನಿರ್ಮಾಣ ಸಂಸ್ಥೆ), ಹೊಸ ಪೋಸ್ಟರ್ ಜೊತೆಗೆ ಬಿಡುಗಡೆಯ ದಿನಾಂಕವನ್ನು ಬಹಿರಂಗಪಡಿಸಿದೆ. “ಈ ಬಾರಿ, ಅವರ ಆಳ್ವಿಕೆಯಲ್ಲಿ ಭೂಮಿ ಕಂಪಿಸುತ್ತದೆ! MAN OF MASSES ʼʼಎಂದು ಬರೆದುಕೊಂಡಿದೆ. ಹೈದರಾಬಾದ್‌ನ ರಾಮನಾಯ್ಡು ಸ್ಟುಡಿಯೋದಲ್ಲಿ ಜ್ಯೂ.ಎನ್‌ಟಿಆರ್ ನಟನೆಯ 31ನೇ ಸಿನಿಮಾದ ಮುಹೂರ್ತ ಕಾರ್ಯಕ್ರಮ ಸಂಭ್ರಮದಿಂದ ಜರುಗಿದೆ. ಈ ವೇಳೆ, ಚಿತ್ರತಂಡದ ಜೊತೆ ತಾರಕ್ ಸಹೋದರ ಕಲ್ಯಾಣ್ ರಾಮ್ ಕುಟುಂಬ, ಪ್ರಶಾಂತ್ ನೀಲ್ ಕುಟುಂಬಸ್ಥರಷ್ಟೇ ಭಾಗಿಯಾಗಿದ್ದರು.

ಕೆಲವು ವರ್ಷಗಳ ಹಿಂದೆ ಈ ಚಿತ್ರ ಘೋಷಿಸಲ್ಪಟ್ಟಿದ್ದರೂ, ಜೂನಿಯರ್ ಎನ್ಟಿಆರ್ ಮತ್ತು ಪ್ರಶಾಂತ್ ನೀಲ್ ಅವರ ಬಿಡುವಿಲ್ಲದ ವೇಳಾಪಟ್ಟಿಯಿಂದಾಗಿ ಸಿನಿಮಾ ವಿಳಂಬವಾಯಿತು. ಚಿತ್ರೀಕರಣವು ಸೆಪ್ಟೆಂಬರ್ 2024 ರಲ್ಲಿ ಪ್ರಾರಂಭವಾಗಲಿದೆ ಎಂಬ ವದಂತಿಗಳಿವೆ.

ಇದನ್ನೂ ಓದಿ: Prashanth Neel: ʼಸಲಾರ್‌ʼ ಬಿಗ್‌ ಅಪ್‌ಡೇಟ್‌; ಕಥೆಯ ಗುಟ್ಟು ಬಿಟ್ಟುಕೊಟ್ಟ ಪ್ರಶಾಂತ್‌ ನೀಲ್‌!

ಚಿತ್ರಕ್ಕೆ ʻಡ್ರ್ಯಾಗನ್ʼ ಎಂದು ಹೆಸರಿಡಬಹುದು ಎಂಬ ಊಹಾಪೋಹವಿದೆ. ಹಲವಾರು ತಿಂಗಳುಗಳಿಂದ ಪ್ರೀ-ಪ್ರೊಡಕ್ಷನ್ ನಡೆಯುತ್ತಿದೆ. ಇಬ್ಬರ ಕಾಂಬಿನೇಷನ್‌ನಲ್ಲಿ ಸಿನಿಮಾ ಮಾಡೋದಾಗಿ ಘೋಷಣೆ ಮಾಡಿದ್ರೂ ಕೂಡ ಇತ್ತೀಚೆಗೆ ಈ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿರಲಿಲ್ಲ. ರಿಲೀಸ್ ಡೇಟ್ ಕೂಡ ಅನೌನ್ಸ್ ಮಾಡಿ ಮುಹೂರ್ತ ಕಾರ್ಯಕ್ರಮ ಮಾಡಿರೋದು ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ.

ಜ್ಯೂನಿಯರ್‌ ಎನ್‌ಟಿಆರ್‌ ಅವರ ಜನ್ಮದಿನವಾದ ಜನವರಿ 8 ರಂದು, ‘ದೇವರ’ ನಿರ್ಮಾಪಕರು ಫಸ್ಟ್‌ ಲುಕ್‌ವನ್ನು ಹಂಚಿಕೊಂಡಿದ್ದರು, ಅಲ್ಲಿಂದ ಸಿನಿಮಾ ಬಗ್ಗೆ ಸಿನಿರಸಿಕರಿಗೆ ನಿರೀಕ್ಷೆ ಹೆಚ್ಚಾಗಿತ್ತು. ಸೈಫ್ ಅಲಿಖಾನ್ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಕಾರಣಗಳಿಂದಾಗಿ ದೇವರ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಲಾಗಿದೆ.

ಜ್ಯೂನಿಯರ್‌ ಎನ್‌ಟಿಆರ್‌, ಸೈಫ್ ಅಲಿ ಖಾನ್ ಮತ್ತು ಜಾನ್ವಿ ಕಪೂರ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ದೇವರ’ ಚಿತ್ರವನ್ನು ಕೊರಟಾಲ ಶಿವ ನಿರ್ದೇಶಿಸಿದ್ದಾರೆ. 2016ರಲ್ಲಿ ಇವರು ಜನತಾ ಗ್ಯಾರೇಜ್ ಎಂಬ ಸಿನಿಮಾವನ್ನು ನಿರ್ದೇಶಿಸಿದ್ದರು. ಅದರಲ್ಲಿ ಕೂಡ ಜ್ಯೂನಿಯರ್ ಎನ್​ಟಿಆರ್ ನಾಯಕನಾಗಿದ್ದರು. ಅದಾದ ಮೇಲೆ ಕೊರಟಾಲ ಶಿವ ಅವರೊಟ್ಟಿಗೆ ಜ್ಯೂ.ಎನ್​ಟಿಆರ್ ಯಾವುದೇ ಸಿನಿಮಾವನ್ನೂ ಮಾಡಿರಲಿಲ್ಲ.

. ದೇವರ ಸಿನಿಮಾದಲ್ಲಿ ಜ್ಯೂನಿಯರ್ ಎನ್​ಟಿಆರ್​ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ವದಂತಿಯೂ ಇದೆ. ಅಪ್ಪ-ಮಗ ಎರಡೂ ಪಾತ್ರದಲ್ಲಿ ಇವರೇ ಅಭಿನಯ ಮಾಡಲಿದ್ದಾರಂತೆ. ಇದೊಂದು ಪಕ್ಕಾ ಆ್ಯಕ್ಷನ್​ ಚಿತ್ರದಂತೆ ಕಾಣಿಸುತ್ತಿದೆ. ಯುವಸುಧಾ ಆರ್ಟ್ಸ್ ಮತ್ತು ಜ್ಯೂನಿಯರ್‌ ಎನ್‌ಟಿಆರ್‌ ಆರ್ಟ್ಸ್ ಈ ಚಿತ್ರವನ್ನು ನಿರ್ಮಿಸಿದ್ದು, ನಂದಮೂರಿ ಕಲ್ಯಾಣ್ ರಾಮ್ ಅವರು ಪ್ರಸ್ತುತಪಡಿಸಿದ್ದಾರೆ.

ಈ ಚಿತ್ರದ OTT ಹಕ್ಕುಗಳನ್ನು ಸ್ಟ್ರೀಮಿಂಗ್ ಕಂಪನಿ ನೆಟ್ಫ್ಲಿಕ್ಸ್ ಭಾರಿ ಬೆಲೆಗೆ ಪಡೆದುಕೊಂಡಿದೆ. ಮಾಹಿತಿಯ ಪ್ರಕಾರ, ನೆಟ್ಫ್ಲಿಕ್ಸ್ 155 ಕೋಟಿ ರೂಪಾಯಿ ನೀಡಿ ಈ ಚಿತ್ರದ OTT ಹಕ್ಕುಗಳನ್ನು ಪಡೆದುಕೊಂಡಿದೆ ಎಂಬ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Continue Reading

ಟಾಲಿವುಡ್

Venu Swamy: ಚೈತು-ಶೋಭಿತಾದು ಜಾತಕ ಮಾತ್ರವಲ್ಲ ನಿಶ್ಚಿತಾರ್ಥ ಮುಹೂರ್ತವೇ ಸರಿಯಿಲ್ಲ ಎಂದ ಜ್ಯೋತಿಷಿ ವೇಣುಸ್ವಾಮಿ!

Venu Swamy: ʻʻಜಾತಕ ಮಾತ್ರವಲ್ಲ ನಿಶ್ಚಿತಾರ್ಥ ಮುಹೂರ್ತವೇ ಸರಿಯಿಲ್ಲ. ಚೈತನ್ಯ-ಸಮಂತಾಗೆ ನಾನು 100ಕ್ಕೆ 50 ಅಂಕ ಕೊಡ್ತೀನಿ. ಆದರೆ ಚೈತು-ಶೋಬಿತಾಗೆ 10 ಅಂಕ ಮಾತ್ರ ಕೊಡ್ತೀನಿʼʼಎಂದಿದ್ದಾರೆ. ಈ ಮುಂಚೆ ಚೈತನ್ಯ-ಸಮಂತಾ ಜಾತಕಗಳ ಪ್ರಕಾರ ಅವಿಬ್ಬರ ಮದುವೆ ಸಂಬಂಧ ಬಹಳ ದಿನ ಉಳಿಯಲ್ಲ ಎಂದಿದ್ದರು. ವೇಣುಸ್ವಾಮಿಹೇಳಿದಾಗ ಎಲ್ಲರೂ ಟೀಕಿಸಿದ್ದರು.

VISTARANEWS.COM


on

Venu Swamy Prediction On Naga Chaitanya And Sobhita Dhulipala Engagement
Koo

ಬೆಂಗಳೂರು: ಜ್ಯೋತಿಷಿ ವೇಣುಸ್ವಾಮಿ (Venu Swamy) . ತೆಲುಗು ಚಿತ್ರರಂಗದವರ (Tollywood), ರಾಜಕಾರಣಿಗಳ ಭವಿಷ್ಯ ಹೇಳಿ ಜನಪ್ರಿಯವಾಗಿದ್ದ ಸೆಲೆಬ್ರಿಟಿ ಜ್ಯೋತಿಷಿ ರಶ್ಮಿಕಾ, ಸಮಂತಾ, ನಯನತಾರಾ ಹೀಗೆ ಹಲವು ಟಾಪ್‌ ನಟಿಯರ ಭವಿಷ್ಯ ನುಡಿದು ಫೇಮಸ್‌ ಆದವರು ವೇಣುಸ್ವಾಮಿ. ಈ ಮುಂಚೆ ಚೈತನ್ಯ-ಸಮಂತಾ ಜಾತಕಗಳ ಪ್ರಕಾರ ಅವಿಬ್ಬರ ಮದುವೆ ಸಂಬಂಧ ಬಹಳ ದಿನ ಉಳಿಯಲ್ಲ ಎಂದಿದ್ದರು. ವೇಣುಸ್ವಾಮಿಹೇಳಿದಾಗ ಎಲ್ಲರೂ ಟೀಕಿಸಿದ್ದರು. ಅದೇ ನಿಜವಾದಾಗ ಹುಬ್ಬೇರಿಸಿದ್ದರು. ಇದೀಗ ಮತ್ತೆ ನಾಗ ಚೈತನ್ಯ ಹಾಗೂ ಶೋಭಿತಾ ಅವರ ಭವಿಷ್ಯ ನುಡಿದಿದ್ದಾರೆ.

ವೇಣುಸ್ವಾಮಿ ಚೈತು-ಶೋಭಿತಾ ಮದುವೆ ಜೀವನದ ಬಗ್ಗೆ ಭವಿಷ್ಯ ನುಡಿದಿದ್ದಾರೆ. “ನಾಗ ಚೈತನ್ಯ- ಶೋಭಿತಾ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ನಾಗಾರ್ಜುನ ಅಧಿಕೃತವಾಗಿ ಘೋಷಿಸಿದ್ದಾರೆ. ಯಾವ ಮುಹೂರ್ತದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬುದನ್ನು ಯಾವ ಜ್ಯೋತಿಷಿಯೂ ಹೇಳಬಲ್ಲರು. ಅವರ ನಿಶ್ಚಿತಾರ್ಥ ಉತ್ತರಾ ನಕ್ಷತ್ರದಲ್ಲಿ ನಡೆದಿದೆ. ನಾಗ ಚೈತನ್ಯಾ ರಾಶಿ ಕರ್ಕಾಟಕ. ಶೋಭಿತಾದು ರಾಶಿ ಧನು ರಾಶಿ. ನಾಗ ಚೈತನ್ಯಗೆ 6 ಮತ್ತು ಶೋಭಿತಾಗೆ 8. ಇಬ್ಬರ ಜಾತಕ ಹೊಂದುವುದಿಲ್ಲ ಸಮಂತಾ, ಶೋಭಿತಾ ಜಾತಕಗಳನ್ನು ನೋಡಿದರೆ ಇಬ್ಬರ ಜಾತಕಗಳಲ್ಲಿ ಶನಿ ದೃಷ್ಟಿ ಕುಜನ ಮೇಲಿದೆ. ಶೋಭಿತಾ ಜಾತಕದಲ್ಲಿ ಶನಿ ದೃಷ್ಟಿ ಶುಕ್ರ, ಗುರುವಿನ ಮೇಲೆಯೂ ಇದೆ. ಇದನ್ನು ನೋಡಿದರೆ 2027ರಿಂದ ಸಮಸ್ಯೆ ಎದುರಾಗುವಂತಿದೆ. ಎಂದಿದ್ದಾರೆ.

ʻʻಜಾತಕ ಮಾತ್ರವಲ್ಲ ನಿಶ್ಚಿತಾರ್ಥ ಮುಹೂರ್ತವೇ ಸರಿಯಿಲ್ಲ. ಚೈತನ್ಯ-ಸಮಂತಾಗೆ ನಾನು 100ಕ್ಕೆ 50 ಅಂಕ ಕೊಡ್ತೀನಿ. ಆದರೆ ಚೈತು-ಶೋಬಿತಾಗೆ 10 ಅಂಕ ಮಾತ್ರ ಕೊಡ್ತೀನಿʼʼಎಂದಿದ್ದಾರೆ.

ಇದನ್ನೂ ಓದಿ: Venu Swamy: ನನ್ನ ಹೇಳಿಕೆ ಸುಳ್ಳಾಯ್ತು, ಟಿಡಿಪಿ ಪಕ್ಷ ಗೆದ್ದಿತು; ಇನ್ನೆಂದೂ ಭವಿಷ್ಯ ನುಡಿಯಲಾರೆ ಎಂದ ಖ್ಯಾತ ಜ್ಯೋತಿಷಿ!

ಜ್ಯೋತಿಷಿ ವೇಣುಸ್ವಾಮಿ (Venu Swamy) ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ಮುನ್ನ, ಜಗನ್​ ಪಕ್ಷ ಮತ್ತೆ ಗೆಲ್ಲುತ್ತದೆ, ಮತ್ತೆ ಜಗನ್ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಅವರ ಭವಿಷ್ಯ ಸುಳ್ಳಾಗಿತ್ತು. ರಾಜಕೀಯ ಮತ್ತು ಚಿತ್ರರಂಗದ ಗಣ್ಯರ ವೈಯಕ್ತಿಕ ಜೀವನದ ಬಗ್ಗೆ ಇನ್ನು ಮುಂದೆ ಭವಿಷ್ಯ ಹೇಳುವುದಿಲ್ಲ ಎಂದು ಜ್ಯೋತಿಷಿ ವೇಣು ಸ್ವಾಮಿ ವಿಡಿಯೊ ಮೂಲಕ ಹೇಳಿಕೊಂಡಿದ್ದರು.

ಆಗಸ್ಟ್ 8ರ ದಿನಾಂಕಕ್ಕೂ ಸಮಂತಾ ಮತ್ತು ನಾಗಚೈತನ್ಯಗೂ (Naga Chaitanya) ನಂಟಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ. ಕೆಲ ವರ್ಷಗಳ ಹಿಂದೆ ‘ಏ ಮಾಯಾ ಚೇಸಾವೆ’ ಸಿನಿಮಾ ಮಾಡುವಾಗ ಆ.8ರ ದಿನಾಂಕದಂದು ನಾಗಚೈತನ್ಯಗೆ ಸಮಂತಾ ಪ್ರೇಮ ನಿವೇದನೆ ಮಾಡಿದ್ದರು. ಹಾಗಾಗಿ ಈ ದಿನ ಇಬ್ಬರ ಪಾಲಿಗೆ ವಿಶೇಷವಾಗಿತ್ತು. ಈಗ ಬೇಕಂತಲೇ ಮಾಜಿ ಪತ್ನಿ ವಿರುದ್ಧ ಸೇಡು ತೀರಿಸಿಕೊಳ್ಳಲು ನಟ ಆಗಸ್ಟ್‌ 8ರಂದೇ ಶೋಭಿತಾ ಧೂಳಿಪಾಲ ಜತೆ ಎಂಗೇಜ್‌ ಆಗಿದ್ದಾರೆ ಎನ್ನಲಾಗಿದೆ.

Continue Reading
Advertisement
Vinesh Phogat
ಪ್ರಮುಖ ಸುದ್ದಿ19 seconds ago

Vinesh Phogat : ವಿನೇಶ್​ ಫೋಗಟ್ ಎಫೆಕ್ಟ್​​; ತೂಕದ ನಿಯಮಗಳ ಬದಲಾವಣೆಗೆ ವಿಶ್ವ ಕುಸ್ತಿ ಒಕ್ಕೂಟ ನಿರ್ಧಾರ?

DK Shivakumar
ಕರ್ನಾಟಕ7 mins ago

DK Shivakumar: ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂಪಡೆದ ಪ್ರಕರಣ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

Varamahalakshmi Festival 2024
Latest16 mins ago

Varamahalakshmi Festival 2024 : ವರಮಹಾಲಕ್ಷ್ಮಿ ಹಬ್ಬದ ದಿನ ಸುಲಭವಾಗಿ ಮಾಡಬಹುದಾದ ರುಚಿಕರ ಖಾದ್ಯಗಳಿವು; ವಿಡಿಯೊಗಳಿವೆ

Meghana Gaonkar workout get slim
ಸ್ಯಾಂಡಲ್ ವುಡ್19 mins ago

Meghana Gaonkar:  ಸಣ್ಣಗಾದ ಮೇಘನಾ ಗಾಂವ್ಕರ್; ನಟಿಯ ವರ್ಕೌಟ್ ಫೋಟೊ ವೈರಲ್‌!

Road Accident
ಬೆಂಗಳೂರು29 mins ago

Road Accident : ಟಿಪ್ಪರ್ ಲಾರಿಗೆ ಸಿಲುಕಿ ಸವಾರ ದುರ್ಮರಣ; ಬಸ್ ಪಲ್ಟಿಯಾಗಿ 13 ಪ್ರಯಾಣಿಕರು ಗಂಭೀರ

Kolkata Doctor Murder Case
ದೇಶ40 mins ago

Kolkata Doctor Murder Case: ʼಬೇಕಿದ್ದರೆ ಗಲ್ಲಿಗೇರಿಸಿʼ.. ವಿಚಾರಣೆ ವೇಳೆ ವೈದ್ಯೆಯ ಹಂತಕನ ಉಡಾಫೆ ಉತ್ತರ

Bangladesh Unrest
ವಿದೇಶ42 mins ago

Bangladesh Unrest: ಬಾಂಗ್ಲಾದಲ್ಲಿ 1971ರ ಪಾಕ್‌ ಸೇನೆ ಶರಣಾಗತಿ ಬಿಂಬಿಸುವ ಪ್ರತಿಮೆ ಧ್ವಂಸ; ಬೇಸರ ವ್ಯಕ್ತಪಡಿಸಿದ ಕಾಂಗ್ರೆಸ್‌ ಮುಖಂಡ

paris Olympics 2024
ಪ್ರಮುಖ ಸುದ್ದಿ47 mins ago

Paris Olympics 2024 : ಕಂಚಿನ ಪದಕ ಗೆದ್ದ ಭಾರತ ಪುರುಷರ ಹಾಕಿ ತಂಡಕ್ಕೆ ಎಫ್ಐಎಚ್ ರ್ಯಾಂಕಿಂಗ್​ನಲ್ಲಿ 2 ಸ್ಥಾನ ಏರಿಕೆ

techie missing in Bengaluru
ಬೆಂಗಳೂರು1 hour ago

Techie Missing: ಬೆಂಗಳೂರಿನಲ್ಲಿ ಮತ್ತೊಬ್ಬ ಟೆಕ್ಕಿ ಮಿಸ್ಸಿಂಗ್‌! ಪತಿಯನ್ನು ಹುಡುಕಿಕೊಡಿ ಎಂದು ಅಂಗಲಾಚಿದ ಪತ್ನಿ

Independence day 2024
ದೇಶ2 hours ago

Independence Day 2024: ಮನೆಮನೆಯಲ್ಲೂ ಉಲ್ಲಾಸ, ಉತ್ಸಾಹ ತುಂಬುವ ಸ್ವಾತಂತ್ರ್ಯೋತ್ಸವದ ಹಿನ್ನೋಟ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ4 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು6 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ6 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌