Bangladesh Unrest: ಬಾಂಗ್ಲಾದಲ್ಲಿ 1971ರ ಪಾಕ್‌ ಸೇನೆ ಶರಣಾಗತಿ ಬಿಂಬಿಸುವ ಪ್ರತಿಮೆ ಧ್ವಂಸ; ಬೇಸರ ವ್ಯಕ್ತಪಡಿಸಿದ ಕಾಂಗ್ರೆಸ್‌ ಮುಖಂಡ - Vistara News

ವಿದೇಶ

Bangladesh Unrest: ಬಾಂಗ್ಲಾದಲ್ಲಿ 1971ರ ಪಾಕ್‌ ಸೇನೆ ಶರಣಾಗತಿ ಬಿಂಬಿಸುವ ಪ್ರತಿಮೆ ಧ್ವಂಸ; ಬೇಸರ ವ್ಯಕ್ತಪಡಿಸಿದ ಕಾಂಗ್ರೆಸ್‌ ಮುಖಂಡ

Bangladesh Unrest: ಬಾಂಗ್ಲಾದೇಶದ ವಿಮೋಚನೆಯ ನೆನಪಿಗಾಗಿ ಸ್ಥಾಪಿಸಿದ್ದ, 1971ರ ಪಾಕ್ ಸೇನೆಯ ಶರಣಾಗತಿಯನ್ನು ಪ್ರತಿಬಿಂಬಿಸುವ ಪ್ರತಿಮೆಯನ್ನು ಭಾರತ ವಿರೋಧಿ ಗಲಭೆಕೋರರು ನಾಶಪಡಿಸಿದ್ದಾರೆ. ಈ ಫೋಟೊಗಳನ್ನು ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

Bangladesh Unrest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಢಾಕಾ: ಶೇಖ್ ಹಸೀನಾ (Sheikh Hasina) ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ (Resignation) ನೀಡಿ ಭಾರತಕ್ಕೆ ಪಲಾಯನ ಮಾಡಿದ ನಂತರವೂ ಬಾಂಗ್ಲಾದೇಶದಲ್ಲಿ ಗಲಭೆ ಮುಂದುವರಿದಿದೆ. ಈ ಮಧ್ಯೆ ಬಾಂಗ್ಲಾದೇಶದ ವಿಮೋಚನೆಯ ನೆನಪಿಗಾಗಿ ಸ್ಥಾಪಿಸಿದ್ದ, 1971ರ ಪಾಕ್ ಸೇನೆಯ ಶರಣಾಗತಿಯನ್ನು ಪ್ರತಿಬಿಂಬಿಸುವ ಪ್ರತಿಮೆಯನ್ನು ಭಾರತ ವಿರೋಧಿ ಗಲಭೆಕೋರರು ನಾಶಪಡಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ (Shashi Tharoor) ಹೇಳಿದ್ದಾರೆ. 1971ರ ಯುದ್ಧದ ನಂತರ ಪಾಕಿಸ್ತಾನ ಶರಣಾದ ಕ್ಷಣವನ್ನು ಚಿತ್ರಿಸುವ ಪ್ರತಿಮೆಗಳನ್ನು ಧ್ವಂಸಗೊಳಿಸಿರುವ ಫೋಟೊಗಳನ್ನು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ (Bangladesh Unrest).

ʼʼಮುಜೀಬ್ ನಗರದ ಶಹೀದ್ ಸ್ಮಾರಕ ಸಂಕೀರ್ಣದಲ್ಲಿ 1971ರ ಐತಿಹಾಸಿಕ ಘಟನೆಯನ್ನು ಬಿಂಬಿಸುವ ಪ್ರತಿಮೆಗಳನ್ನು ಭಾರತ ವಿರೋಧಿ ದುಷ್ಕರ್ಮಿಗಳಿಂದ ನಾಶ ಪಡಿಸಿರುವುದನ್ನು ನೋಡಿ ದುಃಖವಾಗಿದೆ” ಎಂದು ತಿರುವನಂತಪುರಂನ ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಬರೆದುಕೊಂಡಿದ್ದಾರೆ.

ʼʼಬಾಂಗ್ಲಾದಲ್ಲಿ ಹಿಂದೂ ಮನೆಗಳ ಮೇಲೆ ದಾಳಿ ಮುಂದುವರಿದಿದೆ. ಈ ಮಧ್ಯೆ ಕೆಲವು ಮುಸ್ಲಿಂ ನಾಗರಿಕರು ಅಲ್ಪಸಂಖ್ಯಾತರ ಮನೆ, ಸಾಂಸ್ಕೃತಿಕ ಕೇಂದ್ರ ಮತ್ತು ಪೂಜಾ ಸ್ಥಳಗಳನ್ನು ರಕ್ಷಿಸುತ್ತಿದ್ದಾರೆ ಎಂಬ ವರದಿಯೂ ಬರುತ್ತಿದೆʼʼ ಎಂದು ಅವರು ಹೇಳಿದ್ದಾರೆ.

1971ರಲ್ಲಿ ಏನಾಗಿತ್ತು?

1971ರ ಯುದ್ಧದಲ್ಲಿ ಭಾರತೀಯ ಸೇನೆ ಪಾಕಿಸ್ತಾನ ಸೇನೆ ವಿರುದ್ಧ ಹೋರಾಡಿ ಬಾಂಗ್ಲಾದೇಶವನ್ನು ಸ್ವತಂತ್ರಗೊಳಿಸಿತು. ಪಾಕಿಸ್ತಾನ ಸೇನೆಯ ಮೇಜರ್ ಜನರಲ್ ಅಮೀರ್ ಅಬ್ದುಲ್ಲಾ ಖಾನ್ ನಿಯಾಜಿ ಭಾರತೀಯ ಸೇನೆ ಮತ್ತು ಬಾಂಗ್ಲಾದೇಶದ ಮುಕ್ತಿ ಬಾಹಿನಿಯ ಶರಣಾಗತಿ ಪತ್ರಕ್ಕೆ ಸಹಿ ಹಾಕಿರುವುದನ್ನು ಈ ಪ್ರತಿಮೆ ಚಿತ್ರಿಸಿದೆ. ಮೇಜರ್ ಜನರಲ್ ನಿಯಾಜಿ ತನ್ನ 93,000 ಸೈನಿಕರೊಂದಿಗೆ ಭಾರತದ ಪೂರ್ವ ಕಮಾಂಡ್‌ ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಲೆಫ್ಟಿನೆಂಟ್ ಜನರಲ್ ಜಗಜಿತ್ ಸಿಂಗ್ ಅರೋರಾ ಅವರ ಮುಂದೆ ಶರಣಾದರು. ಇದು ಎರಡನೇ ಮಹಾಯುದ್ಧದ ನಂತರದ ಅತಿದೊಡ್ಡ ಮಿಲಿಟರಿ ಶರಣಾಗತಿ ಎನಿಸಿಕೊಂಡಿತ್ತು. ಈ ಘಟನೆಯನ್ನು ಸ್ಮರಿಸಲು ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು.

ಇದನ್ನೂ ಓದಿ: Hindus in Bangla: ಬಾಂಗ್ಲಾದಲ್ಲಿ ಹಿಂದೂ ಆಗಿರುವುದೇ ಅಪರಾಧ; ಕರಾಳ ದಿನ ನೆನಪಿಸಿಕೊಳ್ಳುವ ವಲಸಿಗರು; ವಿಡಿಯೊಗಳಿವೆ

ಅಲ್ಪಸಂಖ್ಯಾತರ ಮೇಲೆ ದಾಳಿ

ಶೇಕ್‌ ಹಸೀನಾ ಅವರು ರಾಜೀನಾಮೆ ನೀಡಿ ಪಲಾಯನ ಮಾಡಿದ ಬಳಿಕ ನಡೆದ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿ ನಡೆದಿದೆ. ಹಿಂದೂಗಳ ಮನೆಗಳು, ವ್ಯವಹಾರಗಳು ಮತ್ತು ದೇವಾಲಯಗಳನ್ನು ಗುರಿಯಾಗಿಸಿಕೊಂಡು ನಡೆದ ಹಿಂಸಾಚಾರದಲ್ಲಿ ಹಲವು ಮಂದಿ ತೊಂದರೆಗೆ ಒಳಗಾಗಿದ್ದಾರೆ. ಬಾಂಗ್ಲಾದೇಶದ 17 ಕೋಟಿ ಜನಸಂಖ್ಯೆಯ ಸುಮಾರು 8 ಪ್ರತಿಶತ ಹಿಂದೂಗಳಿದ್ದಾರೆ. ಇವರು ಸಾಂಪ್ರದಾಯಿಕವಾಗಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷದ ಬೆಂಬಲಿಗರು. ಹೀಗಾಗಿ ಇವರನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತದೆ ಎನ್ನಲಾಗಿದೆ.

ನೊಬೆಲ್ ಪ್ರಶಸ್ತಿ ವಿಜೇತ ಅರ್ಥ ಶಾಸ್ತ್ರಜ್ಞ ಮುಹಮ್ಮದ್ ಯೂನಸ್ ನೇತೃತ್ವದಲ್ಲಿ ಗುರುವಾರ ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರವನ್ನು ರಚಿಸಲಾಗಿದೆ. ಸಂವಿಧಾನದ ಅಡಿಯಲ್ಲಿ, 90 ದಿನಗಳಲ್ಲಿ ಚುನಾವಣೆಯನ್ನು ನಡೆಸಬೇಕಾಗಿದೆ. ಆದರೆ ಯೂನಸ್ ಹಾಗೂ ಮಿಲಿಟರಿ ಮತ್ತು ಅಧ್ಯಕ್ಷರು, ಚುನಾವಣೆಗಳು ಯಾವಾಗ ನಡೆಯುತ್ತವೆ ಎಂಬುದರ ಕುರಿತು ಪ್ರತಿಕ್ರಿಯಿಸಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Faiz Hameed : ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್​​ಐನ ಮಾಜಿ ಮುಖ್ಯಸ್ಥ ಫೈಜ್ ಹಮೀದ್ ಬಂಧನ

Faiz Hameed :

VISTARANEWS.COM


on

Faiz Hameed
Koo

ಇಸ್ಲಾಮಾಬಾದ್: ವಸತಿ ಯೋಜನೆ ಹಗರಣದಲ್ಲಿ ಸಿಲುಕಿಕೊಂಡಿರುವ ಪಾಕಿಸ್ತಾನದ ಗುಪ್ತಚರ ಸಂಸ್ಥೆಯಾಗಿರುವ ಐಎಸ್​ಐ ಮಾಜಿ ಲೆಫ್ಟಿನೆಂಟ್ ಜನರಲ್ ಫೈಜ್ ಹಮೀದ್ (Faiz Hameed) ಅವರನ್ನು ಪಾಕ್​ನ ಮಿಲಿಟರಿ ಬಂಧಿಸಿದೆ. ಪಾಕಿಸ್ತಾನ ಸೇನೆ ಸೋಮವಾರ ಈ ಮಾಹಿತಿಯನ್ನು ಪ್ರಕಟಿಸಿದೆ. ಪಾಕ್​ ಸುಪ್ರಿಂ ಕೋರ್ಟ್​​ ಆದೇಶಗಳಿಗೆ ಅನುಸಾರವಾಗಿ ಅವರನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದೆ.

ಟಾಪ್ ಸಿಟಿ ವಸತಿ ಯೋಜನೆಯಲ್ಲಿ ಮಾಜಿ ಅಧಿಕಾರಿ ಲೆಫ್ಟಿನೆಂಟ್ ಜನರಲ್ ಫೈಜ್ ಹಮೀದ್ ವಿರುದ್ಧ ಮಾಡಲಾದ ಆರೋಪಗಳ ನಿಖರತೆ ಪತ್ತೆ ಹಚ್ಚಲು ಪಾಕಿಸ್ತಾನ ಸೇನೆಯು ವಿವರ ವಿಚಾರಣೆ ಕೈಗೊಂಡಿದೆ ಎಂದು ಸೇನೆಯ ಮಾಧ್ಯಮ ವಿಭಾಗವಾದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಪರಿಣಾಮವಾಗಿ, ಪಾಕಿಸ್ತಾನ ಸೇನಾ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಲೆಫ್ಟಿನೆಂಟ್ ಜನರಲ್ ಫೈಜ್ ಹಮೀದ್ ವಿರುದ್ಧ ಸೂಕ್ತ ಶಿಸ್ತು ಕ್ರಮ ಪ್ರಾರಂಭಿಸಲಾಗಿದೆ” ಎಂದು ಅದು ಹೇಳಿದೆ.

ನಿವೃತ್ತಿಯ ನಂತರ ಪಾಕಿಸ್ತಾನ ಸೇನಾ ಕಾಯ್ದೆಯ ಉಲ್ಲಂಘನೆಯ ಅನೇಕ ಆರೋಪಗಳು ಅವರ ಮೇಲಿವೆ. ಫೀಲ್ಡ್ ಜನರಲ್ ಕೋರ್ಟ್ ಮಾರ್ಷಲ್ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಮತ್ತು ಲೆಫ್ಟಿನೆಂಟ್ ಜನರಲ್ ಫೈಜ್ ಹಮೀದ್ ಅವರನ್ನು ಮಿಲಿಟರಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಮುಖ್ಯಸ್ಥರ ವಿರುದ್ಧ ಅಧಿಕಾರ ದುರುಪಯೋಗದ ಆರೋಪದ ಬಗ್ಗೆ ತನಿಖೆ ನಡೆಸಲು ಮಿಲಿಟರಿ ಏಪ್ರಿಲ್ನಲ್ಲಿ ವಿಚಾರಣಾ ಸಮಿತಿಯನ್ನು ರಚಿಸಿದೆ.

ಫೈಜ್ ಹಮೀದ್ ಯಾರು?

ಲೆಫ್ಟಿನೆಂಟ್ ಜನರಲ್ (ನಿವೃತ್ತ) ಹಮೀದ್ ಅವರು ಜೂನ್ 2019 ರಿಂದ ಅಕ್ಟೋಬರ್2021 ರವರೆಗೆ ಗುಪ್ತಚರ ಸಂಸ್ಥೆಯ ಮಹಾನಿರ್ದೇಶಕರಾಗಿ ನೇತೃತ್ವ ವಹಿಸಿದ್ದರು. ಈ ವೇಳೆ ಅವರು ಪ್ರಭಾವಿ ಅಧಿಕಾರಿ ಎಂದು ಪರಿಗಣಿಸಲಾಗಿತ್ತು.

ಹಮೀದ್ ಅವರನ್ನು ಆಗಿನ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಆಪ್ತರೆಂದು ಪರಿಗಣಿಸಲಾಗಿದೆ. ಅವರು ಅವರನ್ನು ಮುಂದಿನ ಪಾಕಿಸ್ತಾನ ಸೇನಾ ಮುಖ್ಯಸ್ಥರನ್ನಾಗಿ ನೇಮಿಸಲು ಬಯಸಿದ್ದರು.

ಹಕ್ಕಾನಿ ನೆಟ್ವರ್ಕ್​​ನ​ ಸಿರಾಜುದ್ದೀನ್ ಹಕ್ಕಾನಿ ಮತ್ತು ಮುಲ್ಲಾ ಯಾಕೂಬ್ ನೇತೃತ್ವದ ತಾಲಿಬಾನ್ ನಡುವಿನ ಸಂಧಾನ ನಡೆಸುವ ಮೂಲಕ ಫೈಜ್ ಹಮೀದ್ ಹೆಸರುವಾಸಿಯಾಗಿದ್ದರು.

ಇದನ್ನೂ ಓದಿ: Hindenburg Report : ಭಾರತೀಯ ಷೇರು ಮಾರುಕಟ್ಟೆಗೆ ಘಾಸಿ ಮಾಡುವ ಸಂಚು ವಿಫಲ; ಠುಸ್​ ಆದ ಹಿಂಡೆನ್​ಬರ್ಗ್ ವರದಿ

ಅವರ ಅಧಿಕಾರಾವಧಿಯಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡಿತ್ತು. ಆಗಸ್ಟ್ 15, 2021 ರಂದು ಯುನೈಟೆಡ್ ಸ್ಟೇಟ್ಸ್ ನಿರ್ಗಮನವನ್ನು ಕಂಡಿತು. ಅವರ ನೇತೃತ್ವದ ಐಎಸ್ಐ ಅಧಿಕಾರವನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ತಾಲಿಬಾನ್​​ಗೆ ಬೆಂಬಲಿಸಿದೆ ಎಂದು ನಂಬಲಾಗಿದೆ.

ತಾಲಿಬಾನ್ ಅಧಿಕಾರ ವಹಿಸಿಕೊಂಡ ಒಂದು ತಿಂಗಳ ನಂತರ ಹಮೀದ್ ಕಾಬೂಲ್​ಗೆ ಭೇಟಿ ನೀಡಿದ್ದರು. ಅಮೆರಿಕ ತೆರಳಿದ ನಂತರ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚಿಸಿದ್ದರು. ಐಎಸ್ಐನಲ್ಲಿ ಕೆಲಸ ಮಾಡುವ ಮೊದಲು, ಅವರು ರಾವಲ್ಪಿಂಡಿಯ ಜನರಲ್ ಆರ್ಮಿ ಪ್ರಧಾನ ಕಚೇರಿಯಲ್ಲಿ ಅಡ್ಜುಟಂಟ್ ಜನರಲ್ ಆಗಿ ಸೇವೆ ಸಲ್ಲಿಸಿದರು. ನಿವೃತ್ತರಾಗುವ ಮೊದಲು ಪೇಶಾವರ ಮತ್ತು ಬಹವಾಲ್ಪುರ ಘಟಕಗಳಲ್ಲಿ ಕಾರ್ಪ್ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದಾರೆ.

    Continue Reading

    ವಿದೇಶ

    Foreign Conspiracy: ಬಾಂಗ್ಲಾ ನೆಪದಲ್ಲಿ ದೇಶ ಅಸ್ಥಿರಗೊಳಿಸುವ ಹುನ್ನಾರ; ವಿದೇಶಿ ಸಂಚನ್ನು ಭಾರತ ತಡೆದಿದ್ದು ಹೇಗೆ?

    Foreign Conspiracy: ಭಾರತ-ಬಾಂಗ್ಲಾದೇಶ ಗಡಿಯಲ್ಲಿನ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮತ್ತು ಭಾರತೀಯ ಸೇನೆಯ ಪೂರ್ವ ಕಮಾಂಡ್‌ನ ಎಡಿಜಿ ನೇತೃತ್ವದ ಸಮಿತಿಯನ್ನು ರಚಿಸಿರುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ಘೋಷಿಸಿದ್ದರು. ಈ ಸಮಿತಿಯು ಬಾಂಗ್ಲಾದೇಶದಲ್ಲಿ ಭಾರತೀಯ ಪ್ರಜೆಗಳು, ಹಿಂದೂಗಳು ಮತ್ತು ತೊಂದರೆಗೊಳಗಾದ ದೇಶದಲ್ಲಿ ವಾಸಿಸುವ ಇತರ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಕೆಲಸವನ್ನು ಮಾಡುತ್ತಿದೆ.

    VISTARANEWS.COM


    on

    By

    Foreign Conspiracy
    Koo

    ನೆರೆಹೊರೆಯ ರಾಷ್ಟ್ರಗಳಲ್ಲಿ ಮುಖ್ಯವಾಗಿ ಭಾರತದ ಗಡಿಯನ್ನು (Indian border) ಹಂಚಿಕೊಂಡಿರುವ ಬಾಂಗ್ಲಾದಲ್ಲಿ (Bangladesh Unrest) ಸಾಮಾಜಿಕ ಅಶಾಂತಿ, ರಾಜಕೀಯ ಅಸ್ಥಿರತೆ ಉಂಟಾಗಿದ್ದರೂ ಇದು ಭಾರತದ ಮೇಲೆ ಯಾವುದೇ ಪ್ರಭಾವವನ್ನು ಬೀರಿಲ್ಲ. ರಾಷ್ಟ್ರವನ್ನು ಅಸ್ಥಿರಗೊಳಿಸುವ ಗುರಿ ಹೊಂದಿರುವ ವಿದೇಶಿ ಹಸ್ತಕ್ಷೇಪಗಳನ್ನು (Foreign Conspiracy) ತಡೆಗಟ್ಟುವ ಮೂಲಕ ಭಾರತದೊಳಗೆ ಉದ್ಭವವಾಗಬಹುದಾಗಿದ್ದ ಬಾಂಗ್ಲಾದಂತಹ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಯಶಸ್ವಿಯಾಗಿ ತಪ್ಪಿಸಿದೆ. ಭಾರತದೊಳಗೆ ಅಶಾಂತಿಯನ್ನು ಪ್ರಚೋದಿಸಲು ಬಾಹ್ಯ ಶಕ್ತಿಗಳ ಮೂಲಕ ಪ್ರಯತ್ನಗಳು ನಡೆದಿದ್ದರೂ ಭಾರತ ಸರ್ಕಾರದ ಪೂರ್ವಭಾವಿ ಕ್ರಮಗಳು ದೇಶವು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸುರಕ್ಷಿತವಾಗಿ ಉಳಿಯುವಂತೆ ಮಾಡಿದೆ.


    ಭಾರತ- ಬಾಂಗ್ಲಾದೇಶ ಗಡಿಯಲ್ಲಿನ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮತ್ತು ಭಾರತೀಯ ಸೇನೆಯ ಪೂರ್ವ ಕಮಾಂಡ್‌ನ ಎಡಿಜಿ ನೇತೃತ್ವದ ಸಮಿತಿಯನ್ನು ರಚಿಸಿರುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ಘೋಷಿಸಿದ್ದರು. ಈ ಸಮಿತಿಯು ಬಾಂಗ್ಲಾದೇಶದಲ್ಲಿ ಭಾರತೀಯ ಪ್ರಜೆಗಳು, ಹಿಂದೂಗಳು ಮತ್ತು ತೊಂದರೆಗೊಳಗಾದ ದೇಶದಲ್ಲಿ ವಾಸಿಸುವ ಇತರ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಕೆಲಸವನ್ನು ಮಾಡುತ್ತಿದೆ. ನೆರೆಹೊರೆಯ ರಾಷ್ಟ್ರದಲ್ಲಿ ಉಂಟಾಗಿರುವ ಪರಿಸ್ಥಿತಿಯು ದೇಶದೊಳಗೆ ಪ್ರಭಾವ ಬೀರದಂತೆ ಯಶಸ್ವಿಯಾಗಿ ತಡೆಗಟ್ಟಿದ ಭಾರತದ ಕ್ರಮಕ್ಕೆ ಶ್ಲಾಘನೆ ವ್ಯಕ್ತವಾಗುತ್ತಿದೆ.


    ಇನ್‌ಸ್ಟಿಟ್ಯೂಟ್ ಆಫ್ ಪೀಸ್ ಆಂಡ್ ಕಾನ್‌ಫ್ಲಿಕ್ಟ್ ಸ್ಟಡೀಸ್‌ನಲ್ಲಿ (IPCS) ಹಿರಿಯ ಫೆಲೋ ಆಗಿರುವ ಅಭಿಜಿತ್ ಅಯ್ಯರ್ ಮಿತ್ರ ಅವರು ಮಾತನಾಡಿ, ಭಾರತದ ದೃಢವಾದ ವಿದೇಶಾಂಗ ನೀತಿ ಮತ್ತು ವಿದೇಶಿ ಎನ್‌ಜಿಒ ನಿಧಿಯ ಕಟ್ಟುನಿಟ್ಟಾದ ನಿಯಂತ್ರಣ ಭಾರತವನ್ನು ಸುರಕ್ಷಿತವಾಗಿ ಇರಿಸಿದೆ. ಒಮಿಡ್ಯಾರ್ ಮತ್ತು ಹಿಂಡೆನ್‌ಬರ್ಗ್‌ನಂತಹ ಗುಂಪುಗಳು ಭಾರತವನ್ನು ಅಸ್ಥಿರಗೊಳಿಸಲು ಉದ್ದೇಶಪೂರ್ವಕವಾಗಿ ಟೀಕಿಸುತ್ತಿವೆ. ಸರ್ಕಾರದ ಬಲವಾದ ನಿಲುವು ಗಮನಾರ್ಹ ಹಾನಿಯನ್ನುಂಟು ಮಾಡುವುದನ್ನು ತಪ್ಪಿಸಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

    Foreign Conspiracy
    Foreign Conspiracy


    ವಿದೇಶಾಂಗ ನೀತಿ ಮತ್ತು ರಾಜಕೀಯ ಆರ್ಥಿಕತೆಯಲ್ಲಿ ಪರಿಣಿತರಾದ ಪ್ರಮಿತ್ ಪಾಲ್ ಚೌಧುರಿ ಈ ಕುರಿತು ಮಾತನಾಡಿ, 1971ರಿಂದ ಬಾಂಗ್ಲಾದಲ್ಲಿ ಹಿಂದೂಗಳು ರಾಜಕೀಯ ಮತ್ತು ಧಾರ್ಮಿಕ ಮೂಲಭೂತವಾದಿಗಳ ದಾಳಿಗಳನ್ನು ಎದುರಿಸುತ್ತಿದ್ದಾರೆ. ಅಲ್ಲಿ ಬಂಗಾಳಿ ಬೌದ್ಧಿಕ ವರ್ಗವನ್ನು ಉದ್ದೇಶಪೂರ್ವಕವಾಗಿ ನಿರ್ಮೂಲನೆ ಮಾಡಲಾಗಿದೆ ಎಂದು ವಿವರಿಸಿದ್ದಾರೆ.

    ಇದನ್ನೂ ಓದಿ: Hindus in Bangla: ಬಾಂಗ್ಲಾದಲ್ಲಿ ಹಿಂದೂ ಆಗಿರುವುದೇ ಅಪರಾಧ; ಕರಾಳ ದಿನ ನೆನಪಿಸಿಕೊಳ್ಳುವ ವಲಸಿಗರು; ವಿಡಿಯೊಗಳಿವೆ

    ಈ ಸವಾಲುಗಳನ್ನು ಎದುರಿಸುವಲ್ಲಿ ಭಾರತವು ಯಶಸ್ವಿಯಾಗಿದೆ. ಇತ್ತೀಚೆಗೆ ಕೃಷಿ ಕಾನೂನುಗಳ ವಿರುದ್ಧ ನಡೆದ ಪ್ರತಿಭಟನೆಗಳ ಮೇಲೆ ಪ್ರಭಾವ ಬೀರಲು ಅಂತಾರಾಷ್ಟ್ರೀಯ ವ್ಯಕ್ತಿಗಳು ಪ್ರಯತ್ನಿಸಿದರೂ ಭಾರತ ಸರ್ಕಾರವು ದೃಢವಾಗಿ ಇದನ್ನು ಎದುರಿಸಿತು. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಭಾರತವು ಜಾಗತಿಕ ಶಕ್ತಿಯಾಗಿ ತನ್ನ ಸ್ಥಾನವನ್ನು ಗಟ್ಟಿಗೊಳಿಸಿದೆ. ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿಹಿಡಿಯಲು ಮತ್ತು ರಾಷ್ಟ್ರೀಯ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ ಎಂಬುದನ್ನು ಹಲವಾರು ಮಂದಿ ಒಪ್ಪಿಕೊಂಡಿದ್ದಾರೆ ಎಂದು ಔಧರಿ ಹೇಳಿದ್ದಾರೆ.

    ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಈ ಸುದ್ದಿ ಜತೆ ಕೊಟ್ಟಿರುವ ವಿಡಿಯೊ ನೋಡಿ.

    Continue Reading

    ವಿದೇಶ

    Bangladesh Unrest: ಹಿಂದೂಗಳ ಮೇಲಿನ ದಾಳಿ ಖಂಡಿಸಿ ಬಾಂಗ್ಲಾದೇಶದಲ್ಲಿ ಭಾರೀ ಪ್ರತಿಭಟನೆ; ಅಮೆರಿಕ, ಯುಕೆಯಲ್ಲೂ ಧರಣಿ

    Bangladesh Unrest: ಹಿಂಸಾಚಾರ ಪೀಡಿತ ಬಾಂಗ್ಲಾದೇಶದ ಅಲ್ಪಸಂಖ್ಯಾತ ಸಮುದಾಯಗಳ ಸದಸ್ಯರು ಆಗಸ್ಟ್ 5 ರಂದು Ms ಹಸೀನಾ ನೇತೃತ್ವದ ಸರ್ಕಾರ ಪತನದ ನಂತರ 52 ಜಿಲ್ಲೆಗಳಲ್ಲಿ 205 ಕ್ಕೂ ಹೆಚ್ಚು ದಾಳಿಯ ಘಟನೆಗಳನ್ನು ಎದುರಿಸಿದ್ದಾರೆ. ನೂರಾರು ಹಿಂದೂಗಳು ತಮ್ಮ ಮನೆಗಳು ಮತ್ತು ವ್ಯವಹಾರಗಳ ಮೇಲಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ ಎಂದು ನಂಬಲಾಗಿದೆ.

    VISTARANEWS.COM


    on

    Bangladesh Unrest
    Koo

    ನವದೆಹಲಿ: ಶೇಖ್ ಹಸೀನಾ(Sheikh Hasina) ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ(Resignation) ನೀಡಿ ಭಾರತಕ್ಕೆ ಪಲಾಯನ ಮಾಡಿದ ನಂತರ ಬಾಂಗ್ಲಾದೇಶದ ಸಮುದಾಯದ ಮೇಲೆ ನಡೆಯುತ್ತಿರುವ ದಾಳಿ(Bangladesh Unrest)ಯನ್ನು ವಿರೋಧಿಸಿ ಲಕ್ಷಾಂತರ ಹಿಂದೂಗಳು ಶನಿವಾರ ಬೀದಿಗಿಳಿದಿದ್ದಾರೆ. ಬಾಂಗ್ಲಾದೇಶದ ರಾಜಧಾನಿ ಢಾಕಾ ಮತ್ತು ದೇಶದ ಎರಡನೇ ಅತಿದೊಡ್ಡ ನಗರವಾದ ಚಿತ್ತಗಾಂಗ್, ಬೃಹತ್ ರ್ಯಾಲಿಗಳಲ್ಲಿ ಲಕ್ಷಾಂತರ ಜನರು ಭಾಗಿಯಾದರು.

    ಹಿಂಸಾಚಾರ ಪೀಡಿತ ಬಾಂಗ್ಲಾದೇಶದ ಅಲ್ಪಸಂಖ್ಯಾತ ಸಮುದಾಯಗಳ ಸದಸ್ಯರು ಆಗಸ್ಟ್ 5 ರಂದು Ms ಹಸೀನಾ ನೇತೃತ್ವದ ಸರ್ಕಾರ ಪತನದ ನಂತರ 52 ಜಿಲ್ಲೆಗಳಲ್ಲಿ 205 ಕ್ಕೂ ಹೆಚ್ಚು ದಾಳಿಯ ಘಟನೆಗಳನ್ನು ಎದುರಿಸಿದ್ದಾರೆ. ನೂರಾರು ಹಿಂದೂಗಳು ತಮ್ಮ ಮನೆಗಳು ಮತ್ತು ವ್ಯವಹಾರಗಳ ಮೇಲಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ ಎಂದು ನಂಬಲಾಗಿದೆ. ಹಲವಾರು ಹಿಂದೂ ದೇವಾಲಯಗಳನ್ನು ಸಹ ಧ್ವಂಸಗೊಳಿಸಲಾಗಿದೆ ಮತ್ತು Ms ಹಸೀನಾ ಅವರ ಅವಾಮಿ ಲೀಗ್ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಕನಿಷ್ಠ ಇಬ್ಬರು ಹಿಂದೂ ನಾಯಕರು ಹಿಂಸಾಚಾರದಲ್ಲಿ ಬಲಿಯಾಗಿದ್ದಾರೆ.

    ಹಿಂಸಾಚಾರದಿಂದ ತಪ್ಪಿಸಿಕೊಳ್ಳಲು ಸಾವಿರಾರು ಬಾಂಗ್ಲಾದೇಶಿ ಹಿಂದೂಗಳು ನೆರೆಯ ಭಾರತಕ್ಕೆ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದಾರೆ. ಅಲ್ಪಸಂಖ್ಯಾತರಿಗೆ ಕಿರುಕುಳ ನೀಡುವವರ ವಿಚಾರಣೆಯನ್ನು ತ್ವರಿತಗೊಳಿಸಲು ವಿಶೇಷ ನ್ಯಾಯಮಂಡಳಿಗಳು, ಅಲ್ಪಸಂಖ್ಯಾತರಿಗೆ ಶೇಕಡಾ 10 ರಷ್ಟು ಸಂಸದೀಯ ಸ್ಥಾನಗಳನ್ನು ಹಂಚಿಕೆ ಮತ್ತು ಇತರರೊಂದಿಗೆ ಅಲ್ಪಸಂಖ್ಯಾತರ ರಕ್ಷಣೆಗಾಗಿ ಕಾನೂನು ಜಾರಿಗೆ ಒತ್ತಾಯಿಸಿ, ಹಿಂದೂಗಳು ರ್ಯಾಲಿ ನಡೆಸಿ ಉಗ್ರ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಮುಸ್ಲಿಂ ಪ್ರತಿಭಟನಾಕಾರರು ಅಲ್ಪಸಂಖ್ಯಾತರ ಪರವಾಗಿ ಒಗ್ಗಟ್ಟನ್ನು ವ್ಯಕ್ತಪಡಿಸಿದರು.

    ಚಿತ್ತಗಾಂಗ್‌ನಲ್ಲಿ ಐತಿಹಾಸಿಕ ಚೆರಗಿ ಪಹಾರ್ ಚೌಕದಲ್ಲಿ ಬೃಹತ್ ಸಮಾವೇಶ ನಡೆಯಿತು. ಕೆಲವು ವರದಿಗಳ ಪ್ರಕಾರ, ಏಳು ಲಕ್ಷಕ್ಕೂ ಹೆಚ್ಚು ಜನರು ರ್ಯಾಲಿಯಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ.

    US,UK ಗಳಲ್ಲೂ ಪ್ರೊಟೆಸ್ಟ್‌

    ಇನ್ನು ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿ ಖಂಡಿಸಿ ಅಮೆರಿಕ ಮತ್ತು ಇಂಗ್ಲೆಂಡ್‌ನಲ್ಲೂ ಪ್ರತಿಭಟನೆ ನಡೆದಿದೆ. ವಾಷಿಂಗ್ಟನ್‌ ಮತ್ತು ಲಂಡನ್‌ನ ಬಿಬಿಸಿ ಪ್ರಧಾನ ಕಚೇರಿ ಎದುರು ಸಹಸ್ರಾರು ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಭಾಗಿ ಹಿಂದೂಗಳ ಮೇಲಿನ ದಾಳಿಗೆ ಖಂಡನೆ ವ್ಯಕ್ತಪಡಿಸಿದರು. ಅಲ್ಪಸಂಖ್ಯಾತರ ಮೇಲಿನ ದಾಳಿಯ ಕುರಿತು ಬಾಂಗ್ಲಾದೇಶದ ಹಂಗಾಮಿ ನಾಯಕ ಬಾಂಗ್ಲಾದೇಶದ ಹಂಗಾಮಿ ನಾಯಕ ಮುಹಮ್ಮದ್ ಯೂನಸ್ ಪ್ರತಿಕ್ರಿಯಿಸಿದ್ದಾರೆ. ಶನಿವಾರ ಹಿಂಸಾಚಾರ ಪೀಡಿತ ರಾಷ್ಟ್ರದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ, ಅವರನ್ನು “ಹೇಯ ಕೃತ್ಯ” ಎಂದು ಅಭಿಪ್ರಾಯಪಟ್ಟಿದ್ದಾರೆ.

    ಇದನ್ನೂ ಓದಿ: Hindus in Bangla: ಬಾಂಗ್ಲಾದಲ್ಲಿ ಹಿಂದೂ ಆಗಿರುವುದೇ ಅಪರಾಧ; ಕರಾಳ ದಿನ ನೆನಪಿಸಿಕೊಳ್ಳುವ ವಲಸಿಗರು; ವಿಡಿಯೊಗಳಿವೆ

    Continue Reading

    ವಿದೇಶ

    Munich Massacre: 11 ಇಸ್ರೇಲಿ ಅಥ್ಲೀಟ್‌ಗಳ ಹತ್ಯೆಯ ಪ್ರತಿಕಾರ ರೋಚಕ! ʼಮೊಸಾದ್‌ʼ ಏಜೆಂಟರ ಆಪರೇಷನ್‌ ಹೀಗಿತ್ತು

    1972ರ ಸೆಪ್ಟೆಂಬರ್ 5 ಮ್ಯೂನಿಚ್‌ನ (Munich Massacre) ಒಲಿಂಪಿಕ್ ಗ್ರಾಮಕ್ಕೆ ಎಂಟು ಸದಸ್ಯರು ನುಸುಳಿದರು. ಎಕೆ-47ಗಳೊಂದಿಗೆ ಶಸ್ತ್ರಸಜ್ಜಿತರಾಗಿದ್ದ ಅವರು 11 ಇಸ್ರೇಲ್ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಒತ್ತೆಯಾಳಾಗಿ ತೆಗೆದುಕೊಂಡರು, ಆರಂಭಿಕ ದಾಳಿಯಲ್ಲಿ ಇಬ್ಬರನ್ನು ಕೊಂದು ಹಾಕಿದ್ದರು. ಈ ಹತ್ಯಾಕಾಂಡಕ್ಕೆ ಇಸ್ರೇಲ್ ಹೇಗೆ ರಣತಂತ್ರ ರೂಪಿಸಿತ್ತು ಎನ್ನುವ ಮಾಹಿತಿ ಇಲ್ಲಿದೆ.

    VISTARANEWS.COM


    on

    By

    Munich Massacre
    Koo

    ಪ್ಯಾರಿಸ್ ಒಲಿಂಪಿಕ್ಸ್ (Paris Olympics) ಮೇಲೆಯೂ ಪ್ಯಾಲೆಸ್ತೀನ್ ಉಗ್ರಗಾಮಿಗಳ (Palestinian militant) ಕರಿಛಾಯೆಯ ಆತಂಕ ಇತ್ತು. ಯಾಕೆಂದರೆ ಜರ್ಮನಿಯ (Germany) ಮ್ಯೂನಿಚ್‌ನಲ್ಲಿ (Munich Massacre) 1972ರ ಬೇಸಿಗೆ ಒಲಿಂಪಿಕ್ಸ್‌ನಲ್ಲಿ ನಡೆದ ಆ ಒಂದು ಘಟನೆಯನ್ನು ಯಾರೂ ಮರೆಯಲು ಸಾಧ್ಯವಿಲ್ಲ. ಪ್ಯಾಲೆಸ್ತೀನ್ ಉಗ್ರಗಾಮಿ ಸಂಘಟನೆಯ ಎಂಟು ಮಂದಿ 11 ಇಸ್ರೇಲಿ ಅಥ್ಲೀಟ್‌ಗಳನ್ನು (Israeli athletes) ಬರ್ಬರವಾಗಿ ಕೊಂದು ಹಾಕಿರುವ ನೋವು ಈಗಲೂ ಎಲ್ಲರನ್ನೂ ಕಾಡುತ್ತಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ಇಸ್ರೇಲ್ ಪ್ರಧಾನಮಂತ್ರಿ ಗೋಲ್ಡಾ ಮೀರ್ (Prime Minister Golda Meir) ಇಸ್ರೇಲ್‌ನ ಗುಪ್ತಚರ ಸಂಸ್ಥೆ ಮೊಸಾದ್‌ಗೆ ರಹಸ್ಯವಾಗಿ ಪ್ರತಿಕಾರ ತೆಗೆದುಕೊಳ್ಳುವಂತೆ ಆದೇಶಿಸಿದ್ದರು.

    ಮುಂದಿನ ಏಳು ವರ್ಷ “ಆಪರೇಷನ್ ವ್ರಾತ್ ಆಫ್ ಗಾಡ್” ಎಂದು ಕರೆಯಲ್ಪಡುವ ರಹಸ್ಯ ಕಾರ್ಯಾಚರಣೆಯು ಯುರೋಪ್ ಮತ್ತು ಮಧ್ಯಪ್ರಾಚ್ಯದಾದ್ಯಂತ 12ಕ್ಕಿಂತಲೂ ಹೆಚ್ಚು ಶಂಕಿತರನ್ನು ಗುರಿಯಾಗಿಟ್ಟುಕೊಂಡು ಹತ್ಯೆ ಮಾಡಲಾಯಿತು. ‘ಕಿಡಾನ್’ ಎಂದು ಕರೆಯಲ್ಪಡುವ ವಿಶೇಷ ತರಬೇತಿ ಪಡೆದ ಹಿಟ್-ತಂಡವನ್ನು ಒಳಗೊಂಡಿರುವ ಈ ರಹಸ್ಯ ಕಾರ್ಯಾಚರಣೆಯು ಹಲವಾರು ಪುಸ್ತಕಗಳು, ಸಾಕ್ಷ್ಯಚಿತ್ರಗಳು ಮತ್ತು ಸ್ಟೀವನ್ ಸ್ಪೀಲ್‌ಬರ್ಗ್‌ನ ಚಲನಚಿತ್ರ “ಮ್ಯೂನಿಚ್”ನಲ್ಲಿ ಮೂಡಿ ಬಂದಿದೆ.

    Munich Massacre
    Israeli athletes

    ಮ್ಯೂನಿಚ್ ಹತ್ಯಾಕಾಂಡ

    1972ರ ಸೆಪ್ಟೆಂಬರ್ 5ರಂದು ಎಂಟು ಉಗ್ರರು ಮ್ಯೂನಿಚ್‌ನ ಒಲಿಂಪಿಕ್ ಗ್ರಾಮಕ್ಕೆ ನುಸುಳಿದರು. ಎಕೆ 47ಗಳೊಂದಿಗೆ ಶಸ್ತ್ರಸಜ್ಜಿತರಾಗಿದ್ದ ಅವರು 11 ಇಸ್ರೇಲಿ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಒತ್ತೆಯಾಳಾಗಿ ತೆಗೆದುಕೊಂಡರು. ಆರಂಭಿಕ ದಾಳಿಯಲ್ಲಿ ಇಬ್ಬರನ್ನು ಕೊಂದರು. ಇಸ್ರೇಲ್ ಜೈಲಿನಲ್ಲಿರುವ 234 ಕೈದಿಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದರು. ಈ ಸಮಯದಲ್ಲಿ ಜರ್ಮನ್ ಅಧಿಕಾರಿಗಳು ಮಾತುಕತೆಗೆ ಪ್ರಯತ್ನಿಸಿದರು.

    ಅನಂತರ ಭಯೋತ್ಪಾದಕರು ವಾಯುನೆಲೆಗೆ ತೆರಳಿದರು. ಅಲ್ಲಿ ಎರಡು ಬೆಲ್ ಯುಹೆಚ್ -1 ಮಿಲಿಟರಿ ಹೆಲಿಕಾಪ್ಟರ್‌ಗಳು ಅವರನ್ನು ಕೈರೋಗೆ ಕರೆದುಕೊಂಡು ಹೋಗಿತ್ತು. ಜರ್ಮನ್ ಪೋಲೀಸರ ರಕ್ಷಣಾ ಪ್ರಯತ್ನದಲ್ಲಿ ಎಲ್ಲಾ ಒತ್ತೆಯಾಳುಗಳು, ಜರ್ಮನ್ ಪೊಲೀಸ್ ಅಧಿಕಾರಿ ಮತ್ತು ಐವರು ಭಯೋತ್ಪಾದಕರ ಸಾವಿಗೆ ಕಾರಣವಾಯಿತು.

    Munich Massacre
    Israeli PM Golda Meir

    ಇಸ್ರೇಲ್ ಪ್ರತಿಕಾರ ಹೇಗಿತ್ತು?

    ಮ್ಯೂನಿಚ್ ಹತ್ಯಾಕಾಂಡದ ಅನಂತರ ಪ್ರಧಾನಮಂತ್ರಿ ಗೋಲ್ಡಾ ಮೀರ್ ಅವರು ಮೊಸಾದ್ ಮುಖ್ಯಸ್ಥ ಝ್ವಿ ಜಮೀರ್ ಮತ್ತು ಭಯೋತ್ಪಾದನಾ ನಿಗ್ರಹ ಸಲಹೆಗಾರ ಅಹರಾನ್ ಯಾರಿವ್ ಅವರೊಂದಿಗೆ ಭಯೋತ್ಪಾದಕ ಗುಂಪುಗಳ ನಾಯಕರನ್ನು ಮುಗಿಸಲು ಯೋಜನೆಯನ್ನು ರೂಪಿಸಿದರು. ಈ ರಹಸ್ಯ ಕಾರ್ಯಾಚರಣೆಯು ವಿದೇಶಿ ನೆಲದಲ್ಲಿ ಹತ್ಯೆಗಳನ್ನು ನಡೆಸುವುದನ್ನು ಒಳಗೊಂಡಿತ್ತು. ಇದು ಬೃಹತ್ ರಾಜಕೀಯ ಮತ್ತು ನೈತಿಕ ಪರಿಣಾಮಗಳನ್ನು ಹೊಂದಿತ್ತು. ಭವಿಷ್ಯದ ದಾಳಿಗಳನ್ನು ತಡೆಗಟ್ಟಲು ಮತ್ತು ಮ್ಯೂನಿಚ್ ಸಂತ್ರಸ್ತರಿಗೆ ನ್ಯಾಯವನ್ನು ನೀಡಲು ನಿರ್ಣಾಯಕ ಕ್ರಮ ಅಗತ್ಯ ಎಂದು ಇಸ್ರೇಲ್ ನಾಯಕರು ನಂಬಿದ್ದರು.

    ಕಿಡಾನ್ ಕಾರ್ಯಾಚರಣೆ

    ‘ಕಿಡಾನ್’ ಎಂದು ಕರೆಯಲ್ಪಡುವ ಮೊಸಾದ್‌ನ ವಿಶೇಷ ಘಟಕವು ಹತ್ಯೆಗಳನ್ನು ನಡೆಸುವ ಕಾರ್ಯವನ್ನು ನಿರ್ವಹಿಸುತ್ತಿತ್ತು. ಈ ಘಟಕವು ವಿವಿಧ ರೀತಿಯ ಯುದ್ಧ ಮತ್ತು ರಹಸ್ಯ ಕಾರ್ಯಾಚರಣೆ, ಹತ್ಯೆಯಲ್ಲಿ ಹೆಚ್ಚು ತರಬೇತಿ ಪಡೆದವರನ್ನು ಒಳಗೊಂಡಿತ್ತು. ಮ್ಯೂನಿಚ್ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪ್ಯಾಲೆಸ್ಟೈನ್ ಲಿಬರೇಶನ್ ಆರ್ಗನೈಸೇಶನ್ (PLO) ನ ಉನ್ನತ-ಶ್ರೇಣಿಯ ಸದಸ್ಯರನ್ನು ʼಕಿಡಾನ್ʼ ಗುರಿಯಾಗಿಸಿಕೊಂಡಿತ್ತು.

    ಸರಣಿ ಹತ್ಯೆಗಳು

    ಮುಂದಿನ ಹಲವಾರು ವರ್ಷಗಳಲ್ಲಿ ಮೊಸಾದ್‌ ತಂಡದವರು ಯುರೋಪ್ ಮತ್ತು ಮಧ್ಯಪ್ರಾಚ್ಯದಾದ್ಯಂತ ಉನ್ನತ ಮಟ್ಟದ ಹತ್ಯೆಗಳನ್ನು ನಡೆಸಿದ್ದರು. ಇದು ಅತ್ಯಂತ ಗಮನಾರ್ಹವಾದ ಕೆಲವು ಕಾರ್ಯಾಚರಣೆಗಳನ್ನು ಒಳಗೊಂಡಿತ್ತು.

    ವೇಲ್ ಜ್ವೈಟರ್

    ಮೊದಲ ಗುರಿ ರೋಮ್‌ನಲ್ಲಿ ವಾಸಿಸುತ್ತಿದ್ದ ಪ್ಯಾಲೆಸ್ಟೀನಿಯನ್ ಕವಿ ಮತ್ತು ಅನುವಾದಕ ವೇಲ್ ಜ್ವೈಟರ್ ಆಗಿದ್ದ. ಈತ ಸೆಪ್ಟೆಂಬರ್ ದಾಳಿಯ ಪ್ರಮುಖ ಮುಖ್ಯಸ್ಥನಾಗಿದ್ದ ಎನ್ನಲಾಗಿದೆ. 1972ರ ಅಕ್ಟೋಬರ್ 16ರಂದು ಇಬ್ಬರು ಮೊಸ್ಸಾದ್ ಹಿಟ್‌ಮ್ಯಾನ್‌ಗಳು ಜ್ವೈಟರ್‌ನ ಅಪಾರ್ಟ್ಮೆಂಟ್ ಕಟ್ಟಡದ ಲಾಬಿಯಲ್ಲಿ ಹೊಂಚು ಹಾಕಿ 11 ಬಾರಿ ಗುಂಡು ಹಾರಿಸಿದರು. ಆದರೆ ಜ್ವೈಟರ್ ಮೇಲಿನ ದಾಳಿಯನ್ನು ಮೊಸಾದ್‌ ಗುಪ್ತಚರವು ದೃಢೀಕರಿಸಿಲ್ಲ.

    ಮಹಮೂದ್ ಹಂಶರಿ

    ಫ್ರಾನ್ಸ್‌ನಲ್ಲಿ ಪಿಎಲ್‌ಒ ಪ್ರತಿನಿಧಿಯಾಗಿದ್ದ ಮಹಮೂದ್ ಹಂಶರಿ ಮುಂದಿನ ಗುರಿಯಾಗಿದ್ದ. ಮೊಸಾದ್ ಕಾರ್ಯಕರ್ತರು ಆತನನ್ನು ಪ್ಯಾರಿಸ್ ಅಪಾರ್ಟ್ಮೆಂಟ್ ನಲ್ಲಿ ಪತ್ತೆ ಹಚ್ಚಿದರು. ಪತ್ರಕರ್ತರಂತೆ ನಟಿಸಿ ಆತನ ದೂರವಾಣಿಯಲ್ಲಿ ಬಾಂಬ್ ಇಡುವಲ್ಲಿ ಯಶಸ್ವಿಯಾದರು. 1972ರ ಡಿಸೆಂಬರ್ 8ರಂದು ಬಾಂಬ್ ಸ್ಫೋಟಿಸಿ, ಹಂಶರಿಯನ್ನು ಕೊಂದರು.

    ಹುಸೇನ್ ಅಲ್ ಬಶೀರ್

    ಸೈಪ್ರಸ್ ಮೂಲದ ಪಿಎಲ್‌ಒ ಆಪರೇಟಿವ್ ಹುಸೇನ್ ಅಲ್ ಬಶೀರ್ ಮೇಲೆ ದಾಳಿಯ ಯೋಜನೆ ರೂಪಿಸಿದ ಮೊಸ್ಸಾದ್ ಏಜೆಂಟ್‌ಗಳು 1973ರ ಜನವರಿ 24ರಂದು ನಿಕೋಸಿಯಾ ಹೊಟೇಲ್‌ನಲ್ಲಿ ಅವನ ಹಾಸಿಗೆಯ ಕೆಳಗೆ ಬಾಂಬ್ ಇಟ್ಟರು. ಇದರ ಸ್ಫೋಟದಿಂದ ಬಶೀರ್ ತಕ್ಷಣ ಸಾವನ್ನಪ್ಪಿದ್ದ.

    Munich Massacre
    Munich Massacre


    ಬೈರುತ್ ಕಾರ್ಯಾಚರಣೆ

    1973ರ ಎಪ್ರಿಲ್ 10ರಂದು ಬೈರುತ್‌ನಲ್ಲಿ ಅತ್ಯಂತ ರೋಚಕ ಕಾರ್ಯಾಚರಣೆ ನಡೆಸಲಾಯಿತು. ಮೊಸ್ಸಾದ್ ಸಿಬ್ಬಂದಿ ಇಸ್ರೇಲ್ ಕಮಾಂಡೋಗಳೊಂದಿಗೆ ಸೇರಿ ಗಣ್ಯ ಸಯೆರೆಟ್ ಮಟ್ಕಲ್ ಘಟಕದ ಮಹಿಳೆಯರಂತೆ ವೇಷ ಧರಿಸಿ ಬೈರುತ್‌ಗೆ ನುಸುಳಿದರು. ಕಾರ್ಯಾಚರಣೆಯು ಮೂರು ಪ್ರಮುಖ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡಿತ್ತು. ಮೊಹಮ್ಮದ್ ಯೂಸೆಫ್ ಅಲ್-ನಜ್ಜರ್, ಕಮಲ್ ಅಡ್ವಾನ್ ಮತ್ತು ಕಮಲ್ ನಾಸರ್. ಈ ಕಾರ್ಯಾಚರಣೆ ಯಶಸ್ವಿಯಾಗಿತ್ತು.

    ಇದನ್ನೂ ಓದಿ: Bangladesh: ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ ಹಿಂಸಾಚಾರ; 91 ಜನ ಸಾವು

    ಅಲಿ ಹಸನ್ ಸಲಾಮೆಹ್

    “ರೆಡ್ ಪ್ರಿನ್ಸ್” ಎಂದು ಕರೆಯಲ್ಪಡುವ ಅಲಿ ಹಸನ್ ಸಲಾಮೆ ಮೊಸ್ಸಾದ್ ನ ಪ್ರಮುಖ ಗುರಿಯಾಗಿತ್ತು. ಸಲಾಮೆ ಮ್ಯೂನಿಚ್ ದಾಳಿಯ ಮುಖ್ಯಸ್ಥನಾಗಿದ್ದ. ಪಿಎಲ್‌ಒ ಮಾಜಿ ಮುಖ್ಯಸ್ಥ ಯಾಸರ್ ಅರಾಫತ್ ಅವರ ನಿಕಟ ಸಹವರ್ತಿಯಾಗಿದ್ದ.

    ನಾರ್ವೆಯಲ್ಲಿ ವಿಫಲ ಪ್ರಯತ್ನದಲ್ಲಿ ಮೊಸ್ಸಾದ್ ತಂಡವು ಅಹ್ಮದ್ ಬೌಚಿಖಿ ಎಂಬ ಅಮಾಯಕ ಮೊರೊಕನ್ ಅಡುಗೆಯವನನ್ನು ತಪ್ಪಾಗಿ ಕೊಂದಿತು. ಬಳಿಕ ಸಲಾಮೆಯನ್ನು ಪತ್ತೆಹಚ್ಚಲು ತನ್ನ ಪ್ರಯತ್ನಗಳನ್ನು ತೀವ್ರಗೊಳಿಸಿತು. 1979ರಲ್ಲಿ ಸಲಾಮೆ ಮತ್ತು ಅವನ ಹೆಂಡತಿಯೊಂದಿಗೆ ಸ್ನೇಹ ಬೆಳೆಸಿದ ರಹಸ್ಯ ಕಾರ್ಯಾಚರಣೆಯ ತಂಡಕ್ಕೆ ಪ್ರಗತಿ ದೊರೆಯಿತು. 1979ರ ಜನವರಿ 22ರಂದು ಸಲಾಮೆ ಬೈರುತ್‌ನಲ್ಲಿ ಕಾರ್ ಬಾಂಬ್‌ನಿಂದ ಕೊಲ್ಲಲ್ಪಟ್ಟನು. ಹೀಗೆ ಇಸ್ರೇಲ್‌ ತನ್ನ ವೈರಿಗಳ ಮೇಲೆ ಸೇಡು ತೀರಿಸಿಕೊಂಡಿತು.

    Continue Reading
    Advertisement
    Lakshmi Hebbalkar
    ಕರ್ನಾಟಕ6 mins ago

    Lakshmi Hebbalkar: ಹಾಲಕೆರೆ ಮಠದ ಬೆಳ್ಳಿ ರಥೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ

    NIRF 2024 Rank
    ಶಿಕ್ಷಣ10 mins ago

    NIRF 2024 Rank: ದೇಶದ ಟಾಪ್‌ 10 ಮೆಡಿಕಲ್‌ ಕಾಲೇಜುಗಳಲ್ಲಿ ನಿಮ್ಹಾನ್ಸ್‌ ನಂ.4; ಫಾರ್ಮಸಿಯಲ್ಲಿ ರಾಜ್ಯದ 2 ಕಾಲೇಜುಗಳಿಗೆ ಸ್ಥಾನ

    Paris Olympics 2024
    ಪ್ರಮುಖ ಸುದ್ದಿ23 mins ago

    Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಸಿಕ್ಕಿದ ಕೋಟಿಗಟ್ಟಲೆ ಬಹುಮಾನಗಳ ವಿವರ ಇಲ್ಲಿದೆ

    Government Employees Sports
    ಕರ್ನಾಟಕ26 mins ago

    Government Employees Sports: ಆ.17ರಿಂದ 19ರವರೆಗೆ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

    Uttara Kannada News
    ಉತ್ತರ ಕನ್ನಡ35 mins ago

    Uttara Kannada News: ʼಹರ್ ಘರ್ ತಿರಂಗಾʼ ಪ್ರಯುಕ್ತ ಉ.ಕ ಜಿಲ್ಲೆಯಾದ್ಯಂತ ಕಾರ್ಯಕ್ರಮ

    Tungabhadra Dam
    ಕರ್ನಾಟಕ37 mins ago

    Tungabhadra Dam: ತುಂಗಭದ್ರಾ ಜಲಾಶಯಕ್ಕೆ ಸಮಾನಾಂತರ ಜಲಾಶಯ ನಿರ್ಮಿಸಲು ಬೊಮ್ಮಾಯಿ ಆಗ್ರಹ

    Bengaluru Rain
    ಬೆಂಗಳೂರು41 mins ago

    Bengaluru Rain: ಕಟ್ಟಡ ನಿರ್ಮಾಣ ತ್ಯಾಜ್ಯ ತೆರವು; ಒಳಚರಂಡಿ, ರಸ್ತೆ ಬದಿ ಚರಂಡಿಗಳ ಸ್ವಚ್ಛತೆಗೆ ಡಿ. ಕೆ. ಶಿವಕುಮಾರ್ ಸೂಚನೆ

    Whiten Your Yellow Teeth
    ಆರೋಗ್ಯ53 mins ago

    Whiten Your Yellow Teeth: ಈ ಆಹಾರಗಳು ನಿಮ್ಮ ಹಲ್ಲುಗಳ ಬಣ್ಣಗೆಡಿಸುತ್ತವೆ ಎನ್ನುವುದು ಗೊತ್ತಿದೆಯೆ?

    Part Time Lecturers
    ಪ್ರಮುಖ ಸುದ್ದಿ58 mins ago

    Part Time Lecturers: ಅರೆಕಾಲಿಕ ಉಪನ್ಯಾಸಕರಿಗೆ ಗುಡ್ ನ್ಯೂಸ್; ಗೌರವಧನದಲ್ಲಿ ಭಾರಿ ಹೆಚ್ಚಳ

    Faiz Hameed
    ಪ್ರಮುಖ ಸುದ್ದಿ1 hour ago

    Faiz Hameed : ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್​​ಐನ ಮಾಜಿ ಮುಖ್ಯಸ್ಥ ಫೈಜ್ ಹಮೀದ್ ಬಂಧನ

    Sharmitha Gowda in bikini
    ಕಿರುತೆರೆ10 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ10 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ10 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    Kannada Serials
    ಕಿರುತೆರೆ11 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    galipata neetu
    ಕಿರುತೆರೆ9 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ8 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    Kannada Serials
    ಕಿರುತೆರೆ11 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    varun
    ಕಿರುತೆರೆ9 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    karnataka Weather Forecast
    ಮಳೆ4 days ago

    Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

    Bellary news
    ಬಳ್ಳಾರಿ4 days ago

    Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

    Maravoor bridge in danger Vehicular traffic suspended
    ದಕ್ಷಿಣ ಕನ್ನಡ4 days ago

    Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

    Wild Animals Attack
    ಚಿಕ್ಕಮಗಳೂರು6 days ago

    Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

    Karnataka Weather Forecast
    ಮಳೆ6 days ago

    Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

    assault case
    ಬೆಳಗಾವಿ1 week ago

    Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

    karnataka rain
    ಮಳೆ1 week ago

    Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

    karnataka Rain
    ಮಳೆ2 weeks ago

    Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

    Karnataka Rain
    ಮಳೆ2 weeks ago

    Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

    karnataka Rain
    ಮಳೆ2 weeks ago

    Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

    ಟ್ರೆಂಡಿಂಗ್‌