Techie Missing: ಬೆಂಗಳೂರಿನಲ್ಲಿ ಮತ್ತೊಬ್ಬ ಟೆಕ್ಕಿ ಮಿಸ್ಸಿಂಗ್‌! ಪತಿಯನ್ನು ಹುಡುಕಿಕೊಡಿ ಎಂದು ಅಂಗಲಾಚಿದ ಪತ್ನಿ - Vistara News

ಬೆಂಗಳೂರು

Techie Missing: ಬೆಂಗಳೂರಿನಲ್ಲಿ ಮತ್ತೊಬ್ಬ ಟೆಕ್ಕಿ ಮಿಸ್ಸಿಂಗ್‌! ಪತಿಯನ್ನು ಹುಡುಕಿಕೊಡಿ ಎಂದು ಅಂಗಲಾಚಿದ ಪತ್ನಿ

Techie Missing : ಬೆಂಗಳೂರಿನಲ್ಲಿ ಮತ್ತೊಬ್ಬ ಟೆಕ್ಕಿ ಮಿಸ್ಸಿಂಗ್‌ ಆಗಿದ್ದಾರೆ. ನಾಪತ್ತೆಯಾಗಿರುವ ಪತಿಯನ್ನು ಹುಡುಕಿ ಕೊಡಿ ಎಂದು ಮಹಿಳೆಯೊಬ್ಬರು ಮನವಿ ಮಾಡಿದ್ದಾರೆ. ಹೆಚ್ ಡಿ ಎಫ್ ಸಿ ಬ್ಯಾಂಕ್ ಎಟಿಎಂಗೆ ಹೋದವರು ಮರಳಿ ಬಂದಿಲ್ಲ ಎಂದು ಟೆಕ್ಕಿ ಪತ್ನಿ ಕಂಗಲಾಗಿದ್ದಾರೆ.

VISTARANEWS.COM


on

techie missing in Bengaluru
ನಾಪತ್ತೆಯಾಗಿರುವ ಟೆಕ್ಕಿ ವಿಪುಲ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಈ ಹಿಂದೆ ಕೂಡ ಟೆಕ್ಕಿಯೊಬ್ಬರು (Techie Missing) ನಿಗೂಢವಾಗಿ ನಾಪತ್ತೆಯಾಗಿದ್ದರು. ಇದರ ಬೆನ್ನಲ್ಲೇ ಎಟಿಎಂನಲ್ಲಿ ಹಣ ಡ್ರಾ ಮಾಡಲು ಹೋದ ಮತ್ತೊಬ್ಬ ಟೆಕ್ಕಿ ನಾಪತ್ತೆಯಾಗಿದ್ದಾರೆ. ಪತಿಯನ್ನು ಹುಡುಕಿ ಕೊಡಿ ಪ್ಲೀಸ್‌ ಅಂತ ಪತ್ನಿ ಬೇಡಿಕೊಳ್ಳುತ್ತಿದ್ದಾರೆ.

ವಿಪುಲ್ ಗುಪ್ತಾ ಎಂಬ ಟೆಕ್ಕಿ ಕಾಣೆಯಾದವರು. ಆತ ಹೊರಗೆ ಹೋಗಿದ್ದಕ್ಕೆ ಸುಳಿವು ಎಂಬಂತೆ ಒಂದು ಸಿಸಿಟಿವಿ ವಿಡಿಯೋ ಬಿಟ್ಟರೆ, ಎಲ್ಲಿ ಹೋದ ಎಂಬ ಮಾಹಿತಿ ಮಾತ್ರ ಕಿಂಚಿತ್ತು ಕುಟುಂಬಸ್ಥರಿಗಿಲ್ಲ. ಪತಿಯನ್ನು ಹುಡುಕಿಕೊಡಿ ಎಂದು ಪತ್ನಿ ಶ್ರೀಪರ್ಣದತ್ತ ಗೋಗರೆಯುತ್ತಿದ್ದಾರೆ.

ಸೋಲೋ ರೈಡ್‌ಗೆ ಹೋಗುತ್ತಿದ್ದವನ ಸುಳಿವೇ ಇಲ್ಲ!

ಈ ಹಿಂದೆ ಅಮಿತಾಬ್ ಎಂಬ ಟೆಕ್ಕಿ ಕೂಡ ಇದೇ ರೀತಿ ನಿಗೂಢವಾಗಿ ನಾಪತ್ತೆಯಾಗಿದ್ದ . ಆದರೆ ಆತನ ಸುಳಿವು ಇಂದಿಗೂ ಸಿಕ್ಕಿಲ್ಲ. ಇನ್ನು ಕೊಡಿಗೇಹಳ್ಳಿಯ ಟಾಟಾ ನಗರ ನಿವಾಸಿಯಾಗಿರುವ ವಿಪುಲ್‌ಗೆ ಇಬ್ಬರು ಮಕ್ಕಳಿದ್ದಾರೆ. ಪತಿ -ಪತ್ನಿ ಇಬ್ಬರಿಗೂ ಪೋಷಕರಿಲ್ಲ. ಆದರೂ ದುಡಿದು ತಮ್ಮ ಸಂಸಾರ ಸಾಗಿಸುತ್ತಿದ್ದರು. ಶ್ರೀಮಂತಿಕೆ ಇಲ್ಲದಿದ್ದರೂ ಜೀವನಕ್ಕಾಗುವಷ್ಟು ಸಿರಿವಂತರೇ ಆಗಿದ್ದರು. ಅಂತಹ ಕುಟುಂಬದಲ್ಲಿ ಏಕಾಏಕಿ ಪತಿ ಕಾಣೆಯಾಗಿರುವುದು ಪತ್ನಿ ಶ್ರೀಪರ್ಣ ದತ್ತಾಳಿಗೆ ನಿಜಕ್ಕೂ ಆತಂಕ ಮೂಡಿಸಿದೆ.

ವಿಪುಲ್‌ ಕಾಣೆಯಾಗಿ ಹೆಚ್ವು ಕಮ್ಮಿ ಎಂಟು ದಿನಗಳಾಗಿದೆ. ಆಗಸ್ಟ್ 4ರಂದು ಮನೆ ಪಕ್ಕದಲ್ಲಿರುವ ಹೆಚ್ ಡಿ ಎಫ್ ಸಿ ಬ್ಯಾಂಕ್‌ನಲ್ಲಿ ಒಟ್ಟು 1,80,000 ರೂ. ಹಣ ಡ್ರಾ ಮಾಡಿದ್ದಾರೆ. ನಂತರ ನಿಂಜಾ ಬೈಕ್ ತೆಗೆದುಕೊಂಡು ಹೊರ ಹೋದವನ ಸುಳಿವೂ ಕೂಡ ಇರಲಿಲ್ಲ. ಎಲ್ಲಿಗಾದರೂ ಹೋಗುವಾಗ ಪತ್ನಿಗೆ ಹೇಳಿ ಹೋಗಿದ್ದರಂತೆ. ಆದರೆ ಈ ಬಾರಿ ಯಾರಿಗೂ ವಿಚಾರ ತಿಳಿಸದೆ ಮನೆಯಿಂದ ಹೊರ ಹೋಗಿದ್ದಾರೆ. ರಾತ್ರಿಯಾದರೂ ಬಾರದ ಹಿನ್ನೆಲೆ ಮೊಬೈಲ್‌ ನಂಬರ್‌ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಬಂದಿದೆ. ಆತನ ಸ್ನೇಹಿತರಿಗೂ ಕರೆ ಮಾಡಿ ಕೇಳಿದಾಗ ಅವರ್ಯಾರಿಗೂ ವಿಪುಲ್ ಬಗ್ಗೆ ಮಾಹಿತಿಯೇ ಇರಲಿಲ್ಲ.

ಇದನ್ನೂ ಓದಿ: Murder Case : ಶೆಡ್ಡಿಗೆ ಬಾರೋ ಎಂದ ಸ್ನೇಹಿತ; ಮಲಗಿದ್ದವನ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಕೊಲೆ

ಈ ಹಿಂದೆ ಸೋಲೋ ರೈಡ್ ಎಂದು ಪತ್ನಿಗೆ ಹೇಳಿ ತನ್ನ ನಿಂಜಾ ಬೈಕ್ ತೆಗೆದುಕೊಂಡು ಊರು ಸುತ್ತಲು ಹೋಗಿದ್ದರಂತೆ. ಆದರೂ ಪ್ರತಿ ದಿನ ಕಾಂಟಾಕ್ಟ್‌ನಲ್ಲಿರುತ್ತಿದ್ದರು. ಹೇಳಿದಂತೆ ಮೂರ್ನಾಲ್ಕು ದಿನಗಳಲ್ಲಿ ವಾಪಾಸ್ ಬರುತ್ತಿದ್ದರಂತೆ. ಆದರೆ ಈ ಬಾರಿ ಆತನ ಸುಳಿವೇ ಇರದ ಕಾರಣ ಎಲ್ಲಾ ಕಡೆ ಹುಡುಕಿ ಕೊನೆಗೆ ಪೊಲೀಸ್ ಠಾಣೆಗೆ ತೆರಳಿದ್ದಾರೆ. ಎಲ್ಲೋ ಸೋಲೋ ರೈಡ್ ಹೋಗಿಬೇಕೆಂದು ಪೊಲೀಸರೂ ಕೂಡ ನಿರ್ಲಕ್ಷ್ಯ ಮಾಡಿದ್ದರಂತೆ. ನಂತರ ಒತ್ತಾಯ ಮಾಡಿದ ಬಳಿಕ ಎಫ್ ಐ ಆರ್ ಮಾಡಿದ್ದಾರೆಂದು ಶ್ರೀಪರ್ಣ ಆರೋಪಿಸಿದ್ದಾರೆ.

ಸದ್ಯ ವಿಪುಲ್‌ ಕಾಣೆಯಾಗಿ ಇಂದಿಗೆ ಎಂಟು ದಿನಗಳಾಗಿದೆ. ಪತಿಯ ಬಗ್ಗೆ ಸಣ್ಣ ಸುಳಿವೂ ಇರದ ಹಿನ್ನೆಲೆ ಪತ್ನಿ ಶ್ರೀಪರ್ಣ ನೊಂದಿದ್ದು ಕೊನೆಗೆ ಪೊಲೀಸರಿಗೆ ಪೋಸ್ಟ್ ಮಾಡಿ ಅಳಲು ತೋಡಿಕೊಂಡಿದ್ದಾರೆ. ಸದ್ಯ ಈ ಸಂಬಂಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Government Employees Sports: ಆ.17ರಿಂದ 19ರವರೆಗೆ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

Government Employees Sports: ಆ. 17ರಿಂದ 19ರವರೆಗೆ ಬೆಂಗಳೂರಿನಲ್ಲಿ 2023-24ನೇ ಸಾಲಿನ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಆಯೋಜಿಸಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತೀರ್ಮಾನಿಸಿದೆ.

VISTARANEWS.COM


on

Government Employees Sports
Koo

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆ. 17ರಿಂದ 19ರವರೆಗೆ ಬೆಂಗಳೂರಿನಲ್ಲಿ 2023-24ನೇ ಸಾಲಿನ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ (Government Employees Sports) ಆಯೋಜಿಸಲು ತೀರ್ಮಾನಿಸಲಾಗಿದೆ. ಹೀಗಾಗಿ ಕ್ರೀಡಾಕೂಟ ಆಯೋಜನೆಗೆ ಸಿದ್ಧತೆ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೂಚನೆ ನೀಡಿದೆ.

ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಜೂನ್ 3ರಂದು ನಡೆದ ಪೂರ್ವಭಾವಿ ಸಭೆಯಲ್ಲಿ ಶಿವಮೊಗ್ಗದಲ್ಲಿ ಕ್ರೀಡಾಕೂಟವನ್ನು ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಇದೀಗ ಕ್ರೀಡಾಕೂಟವನ್ನು ಬೆಂಗಳೂರು ನಗರದಲ್ಲಿ ಆ.17ರಿಂದ 19ರವರೆಗೆ (ಮೂರು ದಿನ) ನಡೆಸಲು ಸಂಘವು ತೀರ್ಮಾನಿಸಿದೆ. ಅದರಂತೆ ಕ್ರೀಡಾಕೂಟವನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ ಆಯೋಜಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸುತ್ತೋಲೆಯನ್ನು ಹೊರಡಿಸಿದೆ.

ಕ್ರೀಡಾಕೂಟದಲ್ಲಿ ಭಾಗವಹಿಸಲು ನಿಯಮಾವಳಿ

  1. ಕ್ರೀಡಾಕೂಟದಲ್ಲಿ ರಾಜ್ಯ ಸರ್ಕಾರದ ಎಲ್ಲಾ ಕಾಯಂ ನೌಕರರು ಭಾಗವಹಿಸಲು ಅರ್ಹರಾಗಿರುತ್ತಾರೆ.
  2. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿನ ತರಬೇತುದಾರರು. ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಕರು, ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಕ್ರೀಡಾಕೋಟಾದಡಿ ನೇಮಕಗೊಂಡ ನೌಕರರು ಭಾಗವಹಿಸಲು ಅರ್ಹರಾಗಿರುವುದಿಲ್ಲ.
  3. ಎಲ್ಲಾ ಕ್ರೀಡಾಪಟುಗಳು ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕ್ರೀಡೆಯಲ್ಲಿ ಭಾಗವಹಿಸಲು ನೀಡಿರುವ ಅಧಿಕೃತ ಗುರುತಿನ ಚೀಟಿ ಕಡ್ಡಾಯವಾಗಿ ಸಲ್ಲಿಸತಕ್ಕದ್ದು.
  4. ಸಂಗೀತ, ನೃತ್ಯ ಮತ್ತು ಕಲಾ ಶಿಕ್ಷಕರು, ಸಂಗೀತ, ನೃತ್ಯ ಮತ್ತು ಕರಕುಶಲ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗಿರುವುದಿಲ್ಲ.
  5. ದಿನಗೂಲಿ ನೌಕರರು, ಅರೆಕಾಲಿಕ ನೌಕರರು, ಕ್ಷೇಮಾಭಿವೃದ್ಧಿ ನೌಕರರು, ಗುತ್ತಿಗೆ ನೌಕರರು, ನಿಗಮ/ಮಂಡಳಿ ನೌಕಕರು ಮತ್ತು ಇತರೇ ಕಾಯಂ ಅಲ್ಲದ ನೌಕರರು ಭಾಗವಹಿಸಲು ಅರ್ಹರಾಗಿರುವುದಿಲ್ಲ.
  6. ಪೊಲೀಸ್ ಇಲಾಖೆ, ಅರಣ್ಯ ಇಲಾಖೆಗಳಲ್ಲಿ ಸಮವಸ್ತ್ರ ವೃಂದಕ್ಕೆ ಪ್ರತ್ಯೇಕ ಕ್ರೀಡಾಕೂಟಗಳಿರುವುದರಿಂದ ಈ ಎರಡೂ ಇಲಾಖೆಗಳ ಕಛೇರಿ ಹಾಗೂ ಲಿಪಿಕ ನೌಕರರು/ಕಚೇರಿ ಸಿಬ್ಬಂದಿ ಮಾತ್ರ ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿದೆ.
  7. ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಅಬಕಾರಿ, ಅರಣ್ಯ, ಅಗ್ನಿಶಾಮಕ ಇಲಾಖೆಗಳ ಕ್ರೀಡಾ ಕೋಟಾದಡಿ ನೇಮಕವಾದ ನೌಕರರು ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ.
  8. 1 ಟ್ರಾಕ್ ಮತ್ತು 2 ಫೀಲ್ಡ್ ಅಥವಾ 2 ಟ್ರ್ಯಾಕ್ ಮತ್ತು 1 ಫೀಲ್ಡ್ ಸೇರಿ ಒಟ್ಟು ಮೂರು ಆಟಗಳಲ್ಲಿ ಮಾತ್ರ ಭಾಗವಹಿಸತಕ್ಕದ್ದು
  9. 45 ವರ್ಷ ಮೇಲ್ಪಟ್ಟ ಸ್ಪರ್ಧಿಗಳು 45 ವರ್ಷಕ್ಕೊಳಪಟ್ಟವರಿಗೆ ಇರುವ ಸ್ಪರ್ಧೆಗಳಲ್ಲಿ, ಸ್ವಂತ ಜವಾಬ್ದಾರಿ ಮೇಲೆ ಭಾಗವಹಿಸಬಹುದು. 45 ವರ್ಷಕ್ಕೊಳಪಟ್ಟವರು 45 ವರ್ಷ ಮೇಲ್ಪಟ್ಟವರ ಜೊತೆಯಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ.
  10. ತೀರ್ಪುಗಾರರ ತೀರ್ಮಾನವೇ ಅಂತಿಮ ತೀರ್ಮಾನ, ತಕರಾರಿಗೆ ಅವಕಾಶವಿರುವುದಿಲ್ಲ.
  11. ಏಕಕಾಲದಲ್ಲಿ ಸ್ಪರ್ಧೆಗಳನ್ನು ನಡೆಸಲಿದ್ದು, ಯಾವುದೇ ಕಾರಣಕ್ಕೂ ಸ್ಪರ್ಧಿಗಳನ್ನು ಕಾಯುವುದಿಲ್ಲ.
  12. ಕರಕುಶಲ ವಸ್ತು ಪ್ರದರ್ಶನದಲ್ಲಿ ಸಿದ್ಧವಿರುವ ವಸ್ತುಗಳ ಪ್ರದರ್ಶನಕ್ಕೆ ಅವಕಾಶವಿರುವುದಿಲ್ಲ. ಸ್ಥಳದಲ್ಲಿ ತಯಾರಾಗಿ (ಮೊದಲನೇ ದಿನ) ಇಡಬೇಕು. 2ನೇ ದಿನ ತೀರ್ಪುಗಾರರಿಂದ ಪರಿಶೀಲಿಸಲಾಗುವುದು.
  13. ಸ್ಪರ್ಧೆ ನಡೆಯದ ಕ್ರೀಡೆಗಳಲ್ಲಿ ಆಯ್ಕೆಯಾದ ಕ್ರೀಡಾಪಟುಗಳಿಗೆ ಕ್ರೀಡಾ ಪ್ರಶಸ್ತಿ ಪತ್ರ ಹಾಗೂ ಬಹುಮಾನವನ್ನು ನೀಡಲಾಗುವುದಿಲ್ಲ.
  14. ಸಂಘಟಕರೊಡನೆ ಅಥವಾ ತೀರ್ಪುಗಾರರೊಡನೆ ಅಸಭ್ಯವಾಗಿ ವರ್ತಿಸುವ ಕ್ರೀಡಾಪಟುಗಳನ್ನು ಕ್ರೀಡಾ ಸ್ಪರ್ಧೆಯಿಂದ ಹೊರಹಾಕುವುದಲ್ಲದೆ, ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರ ಗಮನಕ್ಕೆ ತಂದು ತಪ್ಪಿತಸ್ಯ ಕ್ರೀಡಾಪಟುವಿನ ಮೇಲೆ ಸೇವಾ ನಿಯಮಗಳ ರೀತ್ಯಾ ಶಿಸ್ತಿನ ಕ್ರಮ ಜರುಗಿಸಲು ಶಿಫಾರಸು ಮಾಡಲಾಗುವುದು.
  15. ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಸ್ಪರ್ಧೆ ಪ್ರಾರಂಭವಾಗುವ ನಿಗದಿತ ಸಮಯಕ್ಕೆ ಕನಿಷ್ಠ 1 ಗಂಟೆ ಮುಂಚಿತವಾಗಿ ಹಾಜರಿದ್ದು, ಕ್ರೀಡಾ ಸಂಘಟಕನಾಧಿಕಾರಿಗಳಲ್ಲಿ ವರದಿ ಮಾಡಿಕೊಳ್ಳತಕ್ಕದ್ದು.
  16. ಕ್ರೀಡಾ ಸ್ಪರ್ಧೆಗಳಲ್ಲಿ ಸಂಗೀತ, ನೃತ್ಯ ಹಾಗೂ ನಾಟಕಗಳಲ್ಲಿ ಭಾಗವಹಿಸುವ ಸ್ಪರ್ಧಿಗಳು ತಮ್ಮದೇ ಆದ ಸಲಕರಣೆಗಳನ್ನು ತರತಕ್ಕದ್ದು
  17. ಸಂಗೀತ ಮತ್ತು ನೃತ್ಯ ಸ್ಪರ್ಧೆಗಳಲ್ಲಿ ಚಲನಚಿತ್ರ ಗೀತೆಯ ತುಣುಕು ಇತ್ಯಾದಿಗಳಿಗೆ ಅವಕಾಶವಿಲ್ಲ
  18. ಸಂಗೀತ, ನೃತ್ಯ, ಚೆಸ್ ಮತ್ತು ನಾಟಕ ಸ್ಪರ್ಧೆಗಳಲ್ಲಿ ಪ್ರತ್ಯೇಕವಾಗಿ ಪುರುಷರಿಗೆ ಮತ್ತು ಮಹಿಳೆಯರಿಗೆ ಸ್ಪರ್ಧೆಗಳು ಇರುವುದಿಲ್ಲ.
  19. ಸ್ಪರ್ಧಿಗಳು ಉದ್ಘಾಟನಾ ಸಮಾರಂಭದ ಪಥ ಸಂಚಲನದಲ್ಲಿ ಆಯಾ ಜಿಲ್ಲೆಯ ಬಾವುಟದೊಂದಿಗೆ ಭಾಗವಹಿಸುವುದು ಕಡ್ಡಾಯವಾಗಿದೆ. ಉದ್ಘಾಟನಾ ಸಮಾರಂಭಕ್ಕೆ ಮೊದಲು ನೋಂದಾವಣೆ ಮಾಡಿಕೊಳ್ಳುವ ಕ್ರೀಡಾಪಟುಗಳಿಗೆ ಮಾತ್ರ ಹಾಜರಾತಿ ನೀಡಲಾಗುವುದು.
  20. ಸರ್ಕಾರಿ ಆದೇಶ ಸಂ:ಎಫ್‌ಡಿಎ/ಎಸ್‌ಆರ್‌ಎಸ್/2002, ಬೆಂಗಳೂರು, ದಿನಾಂಕ:27-11-2002ರಂ ರಾಜ್ಯ ಸರ್ಕಾರದ ವತಿಯಿಂದ ನಡೆಸುವ ರಾಜ್ಯಮಟ್ಟದ ಮತ್ತು ಜಿಲ್ಲಾಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸುವ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಮತ್ತು ಪ್ರಯಾಣ ಭತ್ಯೆ ಸೌಲಭ್ಯಗಳನ್ನು ಷರತ್ತಿಗೊಳಪಟ್ಟು ಮಂಜೂರಾತಿ ನೀಡಿದೆ.
  21. ಒಬ್ಬ ಸರ್ಕಾರಿ ನೌಕರನು ಹಲವು ಕ್ರೀಡೆಗಳಲ್ಲಿ ಭಾಗವಹಿಸಲು ನೋಂದಾಯಿಸಿದ್ದರು ಸಹ ಒಂದು ಜೊತೆ ಕ್ರೀಡಾ ಸಮವಸ್ತ್ರ/ಟ್ರ್ಯಾಕ್ ಸೂಟ್ ನೀಡಲು ಕ್ರಮವಹಿಸುವುದು.
  22. ಯಾವ ಸ್ಪರ್ಧೆಗಳಲ್ಲಿ ಕ್ರೀಡಾಪಟುಗಳು ಭಾಗವಹಿಸಿರುವುದಿಲ್ಲವೋ ಅಂತಹ ಸ್ಪರ್ಧೆಗಳಿಗೆ ಕ್ರೀಡಾಪಟುವಲ್ಲದ ನೌಕರರನ್ನು ಸೇರ್ಪಡೆಗೊಳಿಸುವ ಕ್ರಮವನ್ನು ಕೈಬಿಡುವುದು. ಒಂದು ವೇಳೆ ತಪ್ಪು ಮಾಹಿತಿ ನೀಡಿರುವುದು ಕಂಡುಬಂದಲ್ಲಿ ಅಂತಹ ಸಹಾಯಕ ನಿರ್ದೇಶಕರು ಹಾಗೂ ನೌಕರರ ವಿರುದ್ಧ ಶಿಸ್ತು ಕ್ರಮ ಅನಿವಾರ್ಯವಾಗಲಿದೆ ಎಂಬ ಅಂಶವನ್ನು ಸ್ಪಷ್ಟಪಡಿಸುವುದು.

ಇದನ್ನೂ ಓದಿ | Part Time Lecturers: ಅರೆಕಾಲಿಕ ಉಪನ್ಯಾಸಕರಿಗೆ ಗುಡ್ ನ್ಯೂಸ್; ಗೌರವಧನದಲ್ಲಿ ಭಾರಿ ಹೆಚ್ಚಳ

Continue Reading

ಬೆಂಗಳೂರು

Bengaluru Rain: ಕಟ್ಟಡ ನಿರ್ಮಾಣ ತ್ಯಾಜ್ಯ ತೆರವು; ಒಳಚರಂಡಿ, ರಸ್ತೆ ಬದಿ ಚರಂಡಿಗಳ ಸ್ವಚ್ಛತೆಗೆ ಡಿ. ಕೆ. ಶಿವಕುಮಾರ್ ಸೂಚನೆ

Bengaluru Rain: ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಸುರಿದ ಮಳೆಯಿಂದ ನೀರು ನುಗ್ಗಿ ಹಾನಿಗೊಳಗಾದ ವಿವಿಧ ಪ್ರದೇಶಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪರಿಶೀಲನೆ ನಡೆಸಿದರು. ನಗರದ ಹೆಬ್ಬಾಳ ಸಮೀಪದ ಯೋಗೇಶ್ವರ ನಗರ, ನಾಗವಾರ ಜಂಕ್ಷನ್ ಹಾಗೂ ಎಚ್ಬಿಆರ್ ಲೇಔಟ್ 5ನೇ ಬ್ಲಾಕ್, ಸಿಲ್ಕ್ ಬೋರ್ಡ್, ಜಯದೇವ ಜಂಕ್ಷನ್ ಸೇರಿದಂತೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಕೈಗೊಳ್ಳಬೇಕಿರುವ ಅಗತ್ಯ ಕ್ರಮಗಳ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದರು.

VISTARANEWS.COM


on

Bengaluru Rain
Koo

ಬೆಂಗಳೂರು: ಭಾನುವಾರ ರಾತ್ರಿ ಸುರಿದ ಮಳೆಯಿಂದ ನೀರು ನುಗ್ಗಿ ಹಾನಿಗೊಳಗಾದ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪರಿಶೀಲನೆ ನಡೆಸಿದರು. ಹೆಬ್ಬಾಳ ಸಮೀಪದ ಯೋಗೇಶ್ವರ ನಗರ, ನಾಗವಾರ ಜಂಕ್ಷನ್ ಹಾಗೂ ಎಚ್ಬಿಆರ್ ಲೇಔಟ್ 5ನೇ ಬ್ಲಾಕ್, ಸಿಲ್ಕ್ ಬೋರ್ಡ್, ಜಯದೇವ ಜಂಕ್ಷನ್ ಸೇರಿದಂತೆ ಹಾನಿಗೊಳಗಾದ ಪ್ರದೇಶಗಳಿಗೆ (Bengaluru Rain) ಭೇಟಿ ನೀಡಿ, ಕೈಗೊಳ್ಳಬೇಕಿರುವ ಅಗತ್ಯ ಕ್ರಮಗಳ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯೋಗೇಶ್ವರ ನಗರದ ಮೇಲ್ಸೇತುವೆ ಬಳಿ ನೀರಿನ ಹರಿವು ಹಾಗೂ ರಾಜಕಾಲುವೆ ವೀಕ್ಷಣೆ ಮಾಡಿ, ನೀರು ಹರಿವಿಗೆ ತೊಂದರೆ ಏಕೆ ಉಂಟಾಗಿದೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಕಾಮಗಾರಿಗಳು ನಡೆದ ನಂತರ ಕಟ್ಟಡ ತ್ಯಾಜ್ಯಗಳನ್ನು ಸ್ಥಳದಲ್ಲೇ ಏಕೆ ಬಿಡಲಾಗಿದೆ? ಕೂಡಲೇ ಎಲ್ಲಾ ಕಡೆ ಸ್ವಚ್ಛಗೊಳಿಸಿ ಎಂದು ಡಿಸಿಎಂ ಅಧಿಕಾರಿಗಳಿಗೆ ಸೂಚಿಸಿದರು.

ಇಡೀ ಪ್ರದೇಶದಲ್ಲಿ ಒಂದು ಸುತ್ತು ಬಂದ ಡಿಸಿಎಂ ಶಿವಕುಮಾರ್, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಕ್ರಮವಹಿಸಬೇಕು. ಎಲ್ಲಾ ಕಡೆ ರಸ್ತೆ ಬದಿ ಚರಂಡಿಗಳು ಹಾಗೂ ಒಳಚರಂಡಿಗಳನ್ನು ಸ್ವಚ್ಛಗೊಳಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಪವರ್‌ ಕಟ್‌

ಸಿಲ್ಕ್ ಬೋರ್ಡ್ ಜಂಕ್ಷನ್ ಬಳಿ ರಾಜಕಾಲುವೆ ವೀಕ್ಷಣೆ ಮಾಡಿ ಮಾತನಾಡಿದ ಅವರು, ಬಿಬಿಎಂಪಿ ಅಧಿಕಾರಿಗಳು ರಾಜಕಾಲುವೆ ಸ್ವಚ್ಛತೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ. ಎಲ್ಲೆಲ್ಲಿ ಬಿಎಂಆರ್‌ಸಿಎಲ್ ಅವರು ಕಾಮಗಾರಿ ನಡೆಸುವಾಗ ಕಟ್ಟಡ ತ್ಯಾಜ್ಯಗಳು ರಾಜಕಾಲುವೆಯಲ್ಲಿ ಉಳಿದಿದ್ದರೇ ಕೂಡಲೇ ತೆರವು ಮಾಡಬೇಕು ಎಂದು ಸೂಚನೆ ನೀಡಿದ್ದೇನೆ. ಕೆಲವೊಂದು ಕಡೆ ನೀರು ಹರಿಯುವ ಜಾಗಗಳು ಕಿರಿದಾಗಿದ್ದು ಅವುಗಳ ಅಗಲೀಕರಣ ಮಾಡುವಂತೆ ತಿಳಿಸಲಾಗಿದೆ ಎಂದರು.

ಮಾರುತಿ ಸೇವಾನಗರದಲ್ಲಿ ಸೋಮವಾರ ಬೆಳಗ್ಗೆ ಮರ ಬಿದ್ದ ಕಾರಣಕ್ಕೆ ನಾಲ್ವರು ಗಾಯಗೊಂಡಿದ್ದರು. ಬಾಣಸವಾಡಿಯ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡಿರುವವರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು ಹಾಗೂ ಗಾಯಾಳುಗಳ ಎಲ್ಲಾ ಖರ್ಚು ವೆಚ್ಚಗಳನ್ನು ಬಿಬಿಎಂಪಿಯಿಂದ ಭರಿಸಲಾಗುವುದು ಎಂದು ಈ ವೇಳೆ ತಿಳಿಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌, “ನಗರ ಸಂಚಾರದ ವೇಳೆ ಸಾಕಷ್ಟು ರಸ್ತೆಗುಂಡಿಗಳು ಕಂಡು ಬಂದವು. ಮಳೆ ಹೆಚ್ಚಾದ ಕಾರಣಕ್ಕೆ ಸುಮಾರು ಅರ್ಧ ಅಡಿಗೂ ಆಳದ ಗುಂಡಿಗಳಾಗಿವೆ. ಇವುಗಳನ್ನು ಕೂಡಲೇ ಮುಚ್ಚಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಪೊಲೀಸರಿಗೂ ಎಲ್ಲಿಲ್ಲಿ ರಸ್ತೆಗುಂಡಿಗಳಿವೆ ಅದರ ಬಗ್ಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದೇನೆ. ಈಗಾಗಲೇ ನೂತನ ಆಪ್ ಅನ್ನು ಬಿಡುಗಡೆ ಮಾಡಿದ್ದು, ಅಲ್ಲಿ ಫೋಟೊ ತೆಗೆದು ಹಾಕಿದರೆ ಕೂಡಲೇ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದರು.

ಇದನ್ನೂ ಓದಿ: Teachers Recruitment: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌; ಶೀಘ್ರವೇ 12 ಸಾವಿರ ಶಿಕ್ಷಕರ ನೇಮಕಾತಿ

ರಾಜಕಾಲುವೆಗಳಿಗೆ ರಕ್ಷಣಾ ಗೋಡೆಗಳನ್ನು ಎಲ್ಲಾ ಕಡೆ ನಿರ್ಮಾಣ ಹಾಗೂ ರಸ್ತೆ ನಿರ್ಮಾಣದ ತೀರ್ಮಾನ ಮಾಡಲಾಗಿದೆ. ಅಲ್ಲದೇ ಅನೇಕ ಕಡೆ ರಸ್ತೆ ಫುಟ್‌ಪಾತ್‌ಗಳಲ್ಲಿ ಕಟ್ಟಡ ನಿರ್ಮಾಣ ತ್ಯಾಜ್ಯ ಸುರಿಯಲಾಗಿದೆ. ಇದರ ಬಗ್ಗೆ ಕ್ರಮವಹಿಸಲಾಗುವುದು. ಇದರಿಂದ ಮೋರಿ ಮುಚ್ಚಿಕೊಳ್ಳುವುದು, ನೀರಿನ ಹರಿವಿಗೆ ತೊಂದರೆ ಉಂಟಾಗುತ್ತಿದೆ. ಅನೇಕ ಉದ್ಯಾನಗಳಲ್ಲೂ ಕಟ್ಟಡ ತ್ಯಾಜ್ಯಗಳನ್ನು ಸುರಿಯುತ್ತಿದ್ದು, ಇದರ ಬಗ್ಗೆ ಗಮನಹರಿಸಲಾಗುವುದು ಎಂದರು.

ಒಣಗಿದ್ದ ಬೃಹತ್ ಮರದ ತೆರವಿಗೆ ಈ ಹಿಂದೆಯೇ ಸಾರ್ವಜನಿಕರು ದೂರು ನೀಡಿದ್ದರೂ ಕ್ರಮ ತೆಗೆದುಕೊಳ್ಳಲಾಗಿಲ್ಲ ಎಂದು ಕೇಳಿದಾಗ, ಇಡೀ ಬೆಂಗಳೂರಿನಾದ್ಯಂತ ಕೂಡಲೇ ಒಣಗಿದ ಮರಗಳ ತೆರವು ಮಾಡಲಾಗುವುದು. ಎಲ್ಲೆಲ್ಲಿ ತೆರವು ಮಾಡಬೇಕು ಎನ್ನುವ ಬಗ್ಗೆ ಪಟ್ಟಿ ತಯಾರಿಸಿ ಮುಂದುವರೆಯಲಾಗುವುದು. ನಿರ್ಲಕ್ಷ್ಯವಹಿಸಿರುವ ಅಧಿಕಾರಿಗಳ ಬಗ್ಗೆ ಸಭೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಬೆಂಗಳೂರಿನಲ್ಲಿ ಅಂತಹ ಮಳೆ ಬಂದಿಲ್ಲ. ರಾಜ್ಯದ ಇತರೆಡೆ ಉತ್ತಮ ಮಳೆ ಬಂದಿದೆ. ಬೆಂಗಳೂರು ಸುತ್ತಲೂ ಯಾವ ಕೆರೆಗಳೂ ತುಂಬಿಲ್ಲ, ಅಕ್ಕಪಕ್ಕದ ಜಿಲ್ಲೆಗಳಲ್ಲೂ ಮಳೆ ಬಂದಿಲ್ಲ. ಪಶ್ಚಿಮ ಘಟ್ಟ ಸೇರಿದಂತೆ ಒಂದಷ್ಟು ಕಡೆ ಮಳೆ ಬಂದು ಅಣೆಕಟ್ಟುಗಳು ತುಂಬಿವೆ. ಬೆಂಗಳೂರು ನಗರದ ಒಳಗಿರುವ ಕೆರೆಗಳಲ್ಲೂ ಅಷ್ಟಾಗಿ ನೀರಿಲ್ಲ. ಅಪಾರ್ಟ್‌ಮೆಂಟ್‌ಗಳಿಗೆ ನೀರು ನುಗಿದ್ದರೆ ಸರಿ ಮಾಡೋಣ. ಜತೆಗೆ ಮಳೆಯೂ ಚೆನ್ನಾಗಿ ಬರಬೇಕು, ಕೆರೆಗಳು ತುಂಬಬೇಕು, ಅಂತರ್ಜಲ ಹೆಚ್ಚಾಗಬೇಕು. ಮಳೆ ಇನ್ನೂ ಸಾಲದು ಎಂದರು.

ಇದನ್ನೂ ಓದಿ: KSET Updates: ಕೆಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದವರಿಗೆ ಆ.17ಕ್ಕೆ ದಾಖಲೆ ಪರಿಶೀಲನೆ

ಸಂಚಾರಿ ಪೊಲೀಸರೆ ಹೆಚ್ಚು ಕೆಲಸ ಮಾಡುತ್ತಿದ್ದು ಬಿಬಿಎಂಪಿ ಅಧಿಕಾರಿಗಳು ಸಮಸ್ಯೆ ನಿವಾರಣೆಗೆ ಬರುತ್ತಿಲ್ಲ ಎಂದು ಕೇಳಿದಾಗ “ಇದರ ಬಗ್ಗೆ ಗಮನ ನೀಡಲಾಗುವುದು. ಪಾದಚಾರಿ ಮಾರ್ಗಗಳಲ್ಲಿ ಒತ್ತುವರಿ ಮಾಡಿಕೊಂಡ ಕಾರಣಕ್ಕೆ ಕಸ ಹೆಚ್ಚಾಗಿದೆ ಇದರ ತೆರವಿನ ಬಗ್ಗೆ ಗಮನ ನೀಡಲಾಗುವುದು ಎಂದು ಹೇಳಿದರು.

Continue Reading

ಪ್ರಮುಖ ಸುದ್ದಿ

Part Time Lecturers: ಅರೆಕಾಲಿಕ ಉಪನ್ಯಾಸಕರಿಗೆ ಗುಡ್ ನ್ಯೂಸ್; ಗೌರವಧನದಲ್ಲಿ ಭಾರಿ ಹೆಚ್ಚಳ

Part Time Lecturers: ವೇತನ ಪರಿಷ್ಕರಣೆ ಸಮಿತಿ ವರದಿ ಆಧರಿಸಿ ಉನ್ನತ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದ್ದು, ಸರ್ಕಾರಿ ಎಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಅರೆಕಾಲಿಕ ಉಪನ್ಯಾಸಕರಿಗೆ 5 ರಿಂದ 8 ಸಾವಿರ ರೂಪಾಯಿವರೆಗೆ ಗೌರವಧನ ಹೆಚ್ಚಿಸಲಾಗಿದೆ.

VISTARANEWS.COM


on

Part Time Lecturers
Koo

ಬೆಂಗಳೂರು: ಸರ್ಕಾರಿ ಎಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಅರೆಕಾಲಿಕ ಉಪನ್ಯಾಸಕರಿಗೆ (Part Time Lecturers) ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ವೇತನ ಪರಿಷ್ಕರಣೆ ಸಮಿತಿ ವರದಿ ಆಧರಿಸಿ ಉನ್ನತ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದ್ದು, ಅರೆಕಾಲಿಕ ಉಪನ್ಯಾಸಕರಿಗೆ 5 ರಿಂದ 8 ಸಾವಿರ ರೂಪಾಯಿವರೆಗೆ ಗೌರವಧನ ಹೆಚ್ಚಿಸಲಾಗಿದೆ.

ಎಐಸಿಟಿಯು ಮಾನದಂಡ ಇರುವವರಿಗೆ ಸರ್ಕಾರಿ ಕಾಲೇಜುಗಳಲ್ಲಿ 5 ವರ್ಷ ಮೇಲ್ಪಟ್ಟವರಿಗೆ 32 ಸಾವಿರ, ಪಾಲಿಟೆಕ್ನಿಕ್‌ಗಳಲ್ಲಿ 28 ಸಾವಿರ ರೂ. ಗೌರವಧನ ಹಾಗೂ 5 ವರ್ಷ ಒಳಗಿನವರಿಗೆ ಕ್ರಮವಾಗಿ 30 ಸಾವಿರ ರೂ. ಹಾಗೂ 26 ಸಾವಿರ ಸಾವಿರ ರೂ. ನೀಡಲಾಗುತ್ತದೆ. ಇನ್ನು ಎಐಸಿಟಿಯು ಮಾನದಂಡಕ್ಕಿಂತ ಕಡಿಮೆ ಹಾಗೂ 5 ವರ್ಷ ಪೂರೈಸಿದವರಿಗೆ 28 ಸಾವಿರ ರೂ. ಹಾಗೂ 24 ಸಾವಿರ ರೂ. ನಿಗದಿ ಮಾಡಲಾಗಿದೆ.

ಇದನ್ನೂ ಓದಿ | Teachers Recruitment: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌; ಶೀಘ್ರವೇ 12 ಸಾವಿರ ಶಿಕ್ಷಕರ ನೇಮಕಾತಿ

ಉನ್ನತ ಶಿಕ್ಷಣ ಇಲಾಖೆಯ ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು, ಸರ್ಕಾರಿ ಪಾಲಿಟೆಕ್ನಿಕ್‌ಗಳು ಮತ್ತು ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುವ ಅರೆಕಾಲಿಕ ಉಪನ್ಯಾಸಕರುಗಳಿಗೆ ಕ್ರಮವಾಗಿ ಹಾಲಿ ವಾರಕ್ಕೆ ಗರಿಷ್ಠ 8/9/9 ಗಂಟೆಗಳ ಕಾರ್ಯಭಾರಕ್ಕೆ ಬದಲಾಗಿ, ವಾರಕ್ಕೆ ಗರಿಷ್ಠ 15/17/14 ಗಂಟೆಗಳ ಕಾರ್ಯಭಾರವನ್ನು ನಿಗದಿಪಡಿಸಿದ್ದು, ಅವರ ಮಾಸಿಕ ಗೌರವಧನವನ್ನು ಭವಿಷ್ಯವರ್ತಿಯಾಗಿ ಅಂದರೆ ಈ ಆದೇಶ ಹೊರಡಿಸಿದ ದಿನಾಂಕದಿಂದ ಜಾರಿಗೆ ಬರುವಂತೆ ಷರತ್ತುಗಳಿಗೊಳಪಟ್ಟು ನಿಗದಿಪಡಿಸಿ ಉನ್ನತ ಶಿಕ್ಷಣ ಇಲಾಖೆ (ತಾಂತ್ರಿಕ) ಸರ್ಕಾರದ ಅಧೀನ ಕಾರ್ಯದರ್ಶಿ ಮಹಾಂತಪ್ಪ ಎಸ್. ತುರಕನೂರ ಆದೇಶ ಹೊರಡಿಸಿದ್ದಾರೆ.

Madhu Bangarappa

ಶೀಘ್ರವೇ 12 ಸಾವಿರ ಶಿಕ್ಷಕರ ನೇಮಕಾತಿ: ಮಧು ಬಂಗಾರಪ್ಪ

Madhu Bangarappa
ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಸರ್ಕಾರಿ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ಭರ್ತಿಗೆ ತೀವ್ರ ಒತ್ತಾಯಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಮತ್ತೆ 12 ಸಾವಿರ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದು, ಮುಂದಿನ ದಿನಗಳಲ್ಲಿ 10ರಿಂದ 12 ಸಾವಿರ ಶಿಕ್ಷಕರನ್ನು ನೇಮಕ (Teachers Recruitment) ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ತುಮಕೂರಿನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿರುವ ಸಚಿವರು, ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 12 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಮುಂದಿನ ದಿನಗಳಲ್ಲಿ 10ರಿಂದ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಇದಕ್ಕೆ ಸಂಬಂಧಿಸಿದ ಪ್ರಸ್ತಾವನೆ ಆರ್ಥಿಕ ಇಲಾಖೆ ಮುಂದಿದ್ದು, ಅನುಮತಿ ಸಿಕ್ಕ ನಂತರ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿದ್ದಾರೆ.

ತಕ್ಷಣಕ್ಕೆ ಸಮಸ್ಯೆ ಪರಿಹರಿಸಲು ಈ ಶೈಕ್ಷಣಿಕ ವರ್ಷಾರಂಭದಲ್ಲೇ 50 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಅನುದಾನಿತ ಶಾಲೆಗಳಲ್ಲಿ 2016ರಿಂದ 2020ರ ವರೆಗೆ ಖಾಲಿ ಇರುವ ಶಿಕ್ಷಕರ ಭರ್ತಿಗೆ ಆದೇಶ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನುಳಿದ ಹುದ್ದೆಗಳ ಭರ್ತಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ 2 ಸಾವಿರ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ತೆರೆಯಲಾಗಿದ್ದು, 1,008 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗಿದೆ. ಕೇವಲ 28 ದಿನಗಳಲ್ಲಿ 32 ಸಾವಿರ ಮಕ್ಕಳು ದಾಖಲಾಗುವ ಮೂಲಕ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮುಂದಿನ ವರ್ಷದ ವೇಳೆಗೆ ಇನ್ನೂ 500 ಕೆಪಿಎಸ್ ಶಾಲೆಗಳನ್ನು ತೆರೆಯಲಾಗುವುದು. ನಾಲ್ಕು ವರ್ಷಗಳಲ್ಲಿ ಹಂತಹಂತವಾಗಿ ಇಂತಹ 3 ಸಾವಿರ ಶಾಲೆ ತೆರೆಯಲು ಉದ್ದೇಶಿಸಲಾಗಿದೆ. ಇದರಿಂದ 45 ಲಕ್ಷ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗಲಿದೆ ಎಂದಿದ್ದಾರೆ.

ಇದನ್ನೂ ಓದಿ | KPSC Exam: ಆ.25ರಂದು 384 ಗೆಜೆಟೆಡ್‌ ಹುದ್ದೆಗಳ ನೇಮಕಾತಿಗಾಗಿ ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆ

ಇದಕ್ಕೂ ಮುನ್ನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, ‘ಮುಂದಿನ ವರ್ಷದಿಂದ 50 ಸಾವಿರ ಮಕ್ಕಳಿಗೆ ಸಿಇಟಿ, ನೀಟ್, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು. ಈ ವರ್ಷ 25 ಸಾವಿರ ಮಕ್ಕಳು ತರಬೇತಿಗೆ ಆಯ್ಕೆಯಾಗಿದ್ದಾರೆ’ ಎಂದು ತಿಳಿಸಿದ್ದಾರೆ.

Continue Reading

ಕರ್ನಾಟಕ

Mysore Dasara 2024: ಅ.3ರಿಂದ ಮೈಸೂರು ದಸರಾ ಅದ್ಧೂರಿ ಆಚರಣೆಗೆ ರಾಜ್ಯ ಸರ್ಕಾರ ನಿರ್ಧಾರ

Mysore Dasara 2024: ಈ ವರ್ಷ ವಾಡಿಕೆಗಿಂತ ಮಳೆ ಹೆಚ್ಚಾಗಿ ಸುರಿದಿದ್ದರಿಂದ ರೈತರು ಸಹ ಸಂತೋಷದಿಂದ ಇದ್ದಾರೆ. ಹೀಗಾಗಿ ಅದ್ಧೂರಿಯಾಗಿ ಮೈಸೂರು ದಸರಾ ಆಚರಣೆ ಮಾಡಬೇಕು ಎಂದು ನಿರ್ಧಾರ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

Koo

ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ-2024 (Mysore Dasara 2024) ಆಚರಣೆಗೆ ಸಿದ್ಧತೆ ಆರಂಭವಾಗಿದ್ದು, ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ಸೋಮವಾರ ನಡೆದಿದೆ. ಈ ಬಾರಿ ಅಕ್ಟೋಬರ್ 3ರಿಂದ 12ರವರೆಗೆ ಅದ್ಧೂರಿಯಾಗಿ ದಸರಾ ಆಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ದಸರಾ 2024 ಉನ್ನತ ಮಟ್ಟದ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌, ಮೈಸೂರು ಜಿಲ್ಲಾ ಉಸ್ತುವಾರಿ ಮಹದೇವಪ್ಪ, ಸಚಿವರಾದ ಕೆ.ವೆಂಕಟೇಶ್, ಕೆಜೆ ಜಾರ್ಜ್‌, ಹಿರಿಯ ಶಾಸಕ ಜಿಟಿ ದೇವೇಗೌಡ ಸೇರಿ ಮೈಸೂರು-ಕೊಡಗು, ಚಾಮರಾಜನಗರ ಭಾಗದ ಶಾಸಕರು, ಎಂಎಲ್‌ಸಿಗಳು ಭಾಗಿಯಾಗಿದ್ದರು.

ಸಭೆ ಬಳಿಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ಉಸ್ತುವಾರಿ ಸಚಿವ ಮಹಾದೇವಪ್ಪ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಬಾರಿ ಅಕ್ಟೋಬರ್ 3ರಿಂದ 12ರವರೆಗೆ ಅದ್ಧೂರಿ ದಸರಾ ಆಚರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಅ.3ರಂದು ದಸರಾ ಉದ್ಘಾಟನೆ ನಡೆಯಲಿದೆ, 12 ರಂದು ಜಂಬೂಸವಾರಿ ನಡೆಯಲಿದೆ. ಯಾರಿಂದ ಉದ್ಘಾಟನೆ ಮಾಡಿಸಬೇಕು ಎಂದು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ತಿಳಿಸಿದರು.

ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಡಹಬ್ಬ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಕಳೆದ ಬಾರಿ ಬರಗಾಲದ ಕಾರಣ ಅದ್ಧೂರಿಯಾಗಿ ಆಚರಿಸಲು ಆಗಿರಲಿಲ್ಲ. ಈ ಬಾರಿ ರಾಜ್ಯದಾದ್ಯಂತ ಉತ್ತಮ ಮಳೆಯಾಗಿದ್ದು, ಬಹುತೇಕ ಎಲ್ಲಾ ಜಲಾಶಯಗಳು ತುಂಬಿವೆ. ಈ ಹಿನ್ನೆಲೆಯಲ್ಲಿ ದಸರಾವನ್ನು ವಿಜೃಂಭಣೆಯಿಂದ ಜನರ ಹಬ್ಬವನ್ನಾಗಿ ಆಚರಿಸಲು ಮಾಡಲು ತೀರ್ಮಾನಿಸಲಾಗಿದೆ ಎಂದರು.

ಕಳೆದ ವರ್ಷ ದಸರಾ ಆಚರಣೆಗೆ 30 ಕೋಟಿ ರೂಪಾಯಿ ನೀಡಲಾಗಿತ್ತು. ಈ ಬಾರಿ ವಿಜೃಂಭಣೆಯಿಂದ ಆಚರಿಸಲು ಅಗತ್ಯ ಅನುದಾನ ಒದಗಿಸಲಾಗುವುದು. ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸುವ ಟ್ಯಾಬ್ಲೋಗಳು ಹೆಚ್ಚು ಆಕರ್ಷಕ, ಅರ್ಥಗರ್ಭಿತವಾಗಿ ಹಾಗೂ ವೈವಿಧ್ಯಮಯವಾಗಿರಬೇಕು ಎಂದು ಸೂಚಿಸಲಾಗಿದೆ.

ಅಕ್ಟೋಬರ್‌ 3ರಂದು ಚಾಮುಂಡಿ ಬೆಟ್ಟದಲ್ಲಿ ಬೆಳಿಗ್ಗೆ 9.15ಕ್ಕೆ ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. ಉದ್ಘಾಟನೆ ದಿನವೇ ವಸ್ತು ಪ್ರದರ್ಶನ ಕೂಡಾ ಆರಂಭಿಸಲು ಸೂಚಿಸಲಾಗಿದ್ದು, ಎಲ್ಲಾ ಮಳಿಗೆಗಳು ಉದ್ಘಾಟನೆಯಂದೇ ಸಜ್ಜುಗೊಳಿಸಲು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ. ವಸ್ತು ಪ್ರದರ್ಶನದಲ್ಲಿ ಎಲ್ಲ ಇಲಾಖೆಗಳ ಮಳಿಗೆಗಳಲ್ಲಿ ಸರ್ಕಾರದ ಸಾಧನೆಗಳು, ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ಕೆಲಸವಾಗಬೇಕು ಎಂದು ಸೂಚಿಸಲಾಗಿದೆ ಎಂದರು.

ಆಗಸ್ಟ್‌ 21 ರಂದು ಬೆಳಗ್ಗೆ 10.10 ಗಂಟೆಯಿಂದ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಗಜಪೂಜೆ ಮಾಡಲಾಗುವುದು. ಅಕ್ಟೋಬರ್‌ 3 ರಿಂದ 12ರ ವರೆಗೆ ನಡೆಯಲಿದೆ. ಸಂಪ್ರದಾಯದಂತೆ 9 ದಿನ ಕಾರ್ಯಕ್ರಮಗಳು ಹಾಗೂ 10ನೇ ದಿನ ಜಂಬೂ ಸವಾರಿ ಏರ್ಪಾಡು ಮಾಡಲಾಗತ್ತದೆ. ಅಕ್ಟೋಬರ್‌ 12 ರಂದು ಮಧ್ಯಾಹ್ನ 1.41 ರಿಂದ 2.10 ಗಂಟೆಯ ವರೆಗೆ ಜಂಬೂ ಸವಾರಿ, ನಂದಿ ಧ್ವಜ ಪೂಜೆ ಹಾಗೂ ಸಂಜೆ 4 ಗಂಟೆಯಿಂದ ಪುಷ್ಪಾರ್ಚನೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಪ್ರವಾಸಿಗರ ಅನುಕೂಲಕ್ಕಾಗಿ ದೀಪಾಲಂಕಾರವನ್ನು ಕಳೆದ ಬಾರಿ ಒಂದು ವಾರ ವಿಸ್ತರಣೆ ಮಾಡಲಾಗಿತ್ತು. ಈ ಬಾರಿಯೂ ದಸರಾ ನಂತರವೂ ದೀಪಾಲಂಕಾರ ಅವಧಿಯನ್ನು ವಿಸ್ತರಿಸಿ 21 ದಿನಗಳ ಕಾಲ ದೀಪಾಲಂಕಾರ ಮಾಡಲು ನಿರ್ಧರಿಸಲಾಗಿದೆ ಎಂದರು.

ಪ್ರವಾಸಿಗರ ನೆರವಿಗಾಗಿ ಟೂರಿಸ್ಟ್‌ ಮಿತ್ರ ಮತ್ತು ಹೋಂ ಗಾರ್ಡ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಕ ಮಾಡಲಾಗುವುದು. ಪಾರ್ಕಿಂಗ್‌, ಭದ್ರತಾ ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗದಂತೆ ಸಿದ್ದತೆಗಳನ್ನು ಕೈಗೊಳ್ಳುವಂತೆ ಪೊಲೀಸ್‌ ಇಲಾಖೆಗೆ ಸೂಚನೆ ನೀಡಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಮೈಸೂರನ್ನು ಕೇಂದ್ರವಾಗಿರಿಸಿಕೊಂಡು KSRTC ಸಹಯೋಗದೊಂದಿಗೆ ಪ್ರವಾಸಿ ಸರ್ಕ್ಯುಟ್‌ ರೂಪಿಸಲಾಗುವುದು ಎಂದು ಹೇಳಿದರು.

ಸಾಂಸ್ಕೃತಿಕ ಕಾರ್ಯಕ್ರಮ, ವಸ್ತು ಪ್ರದರ್ಶನ, ದೀಪಾಲಂಕಾರ, ಆಹಾರ ಮೇಳ ಮತ್ತಿತರ ಕಾರ್ಯಕ್ರಮಗಳನ್ನು ಅತ್ಯಂತ ವ್ಯವಸ್ಥಿತವಾಗಿ, ಅರ್ಥಪೂರ್ಣವಾಗಿ ಆಯೋಜಿಸಬೇಕು. ಸ್ಥಳೀಯರಿಗೆ ಪ್ರೋತ್ಸಾಹ ಕೊಡಬೇಕಾಗಿರುವುದರಿಂದ ಸ್ಥಳೀಯ ಕಲಾವಿದರಿಗೆ ಹೆಚ್ಚು ಅವಕಾಶ ದೊರಕಿಸಬೇಕು. ಇದೇ ವೇಳೆ ದಸರಾಕ್ಕೆ ಹೊಸ ರೂಪು ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಲು ಸೂಚನೆ ನೀಡಲಾಗಿದೆ. ದಸರಾ ಉದ್ಘಾಟನೆಗೆ ಯಾರನ್ನು ಆಹ್ವಾನಿಸಬೇಕು ಎಂಬುವುದನ್ನು ಮುಖ್ಯಮಂತ್ರಿ ಅವರ ತೀರ್ಮಾನಕ್ಕೆ ಸಭೆ ನೀಡಿದೆ ಎಂದು ಹೇಳಿದರು.

ಈ ಬಾರಿ 21 ದಿನಗಳ ಕಾಲ ದೀಪಾಲಂಕಾರ

ವಿಜೃಂಭಣೆಯ ದಸರಾ ಆಚರಣೆಗೆ ಎಷ್ಟು ಬೇಕೋ ಅಷ್ಟು ಅನುದಾನ ಸರ್ಕಾರ ನೀಡಲಿದೆ. ಕಳೆದ ಬಾರಿ 30 ಕೋಟಿ ಖರ್ಚು ಆಗಿತ್ತು, ಈ ಬಾರಿ ಅದಕ್ಕಿಂತ ಹೆಚ್ಚು ಆಗಬಹುದು. ವಸ್ತು ಪ್ರದರ್ಶನದಲ್ಲಿ ಸರ್ಕಾರದ ಸಾಧನೆಗಳನ್ನು ಬಿಂಬಿಸಲು ಸೂಚನೆ ನೀಡಲಾಗಿದೆ. ಈ ಬಾರಿ 21 ದಿನಗಳ ಕಾಲ ದೀಪಾಲಂಕಾರ ಇರಲಿದೆ. ಪ್ರವಾಸಿಗರು ಬಂದಾಗ ಸರಿಯಾದ ರೀತಿಯಲ್ಲಿ ಅವರಿಗೆ ಮಾರ್ಗದರ್ಶನ ಮತ್ತೆ ಭದ್ರತೆ ಹಾಗೂ ಟ್ರಾಫಿಕ್ ನಿಭಾಯಿಸಲು ಸೂಚನೆ ಕೊಟ್ಟಿದ್ದೇನೆ. ದಸರಾ ವೀಕ್ಷಣೆಗೆ ಗೋಲ್ಡ್ ಕಾರ್ಡ್ ಕೂಡ ಇರಲಿದ್ದು, ಉಳಿದವರಿಗೆ ಉಚಿತವಾಗಿ ದಸರಾ ನೋಡಲು ಅವಕಾಶ ಇರುತ್ತದೆ. ಒಟ್ಟಾರೆ ನಾಡ ಹಬ್ಬ ಹಾಗೂ ಜನರ ಉತ್ಸವವಾಗಿ ಇರಬೇಕು. ಈ ಸಂಬಂಧ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಸ್ಥಳೀಯ ಕಲೆ, ಪ್ರತಿಭೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿ

ಸ್ಥಳೀಯ ಕಲಾವಿದರಿಗೆ ಹೆಚ್ಚಿನ‌ ಅವಕಾಶ ನೀಡಬೇಕು. ನಮ್ಮ ಕಲಾವಿದರು ಹೆಚ್ಚು ಸಮರ್ಥರಿದ್ದಾರೆ. ಟ್ಯಾಬ್ಲೋಗಳು ಹೆಚ್ಚು ಆಕರ್ಷಕ ಮತ್ತು ಅರ್ಥಪೂರ್ಣವಾಗಿರಬೇಕು. ಕಲೆ, ಸಂಸ್ಕೃತಿ, ಸಾಹಿತ್ಯ, ಕ್ರೀಡೆ, ಆಹಾರ, ವಸ್ತು ಪ್ರದರ್ಶನ, ಕುಸ್ತಿ ಪ್ರದರ್ಶನ, ದೀಪಾಂಲಕಾರ ಸೇರಿ ಪ್ರತಿಯೊಂದೂ ಆಕರ್ಷಣೀಯ ಮತ್ತು ಅರ್ಥಪೂರ್ಣ ಆಗಿರಬೇಕು.
ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಸಾರ್ಥಕ‌ ಕೆಲಸಗಳ ಪ್ರದರ್ಶನ ಮತ್ತು ತಿಳಿವಳಿಕೆ ಮೂಡಿಸಬೇಕು. ಟ್ಯಾಬ್ಲೋಗಳಲ್ಲಿ ಹೊಸತನ ಇರಲಿ ಎಂದು ಸಿಎಂ ಸೂಚಿಸಿದ್ದಾರೆ.

ಯುವ ದಸರಾ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲೆ, ಪ್ರತಿಭೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿ. ಗೋಲ್ಡ್ ಕಾರ್ಡ್‌ಗಳನ್ನು ಮುಂಚಿತವಾಗಿ ವಿತರಣೆ ಮಾಡಿ. ಪಾರ್ಕಿಂಗ್, ಟ್ರಾಫಿಕ್, ಬಂದೋಬಸ್ತ್ ಕಡೆಗೆ ಪೊಲೀಸ್ ಇಲಾಖೆ ಹೆಚ್ಚಿನ ಗಮನ ಕೊಡಬೇಕು. ಕರ್ನಾಟಕ ಸಂಭ್ರಮ 50 ನವೆಂಬರ್‌ವರೆಗೂ ನಡೆಯಲಿದೆ. ದಸರಾದಲ್ಲಿ ಇದನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸಬೇಕು. ಏರ್ ಶೋಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದು ಮನವಿ ಮಾಡಲಾಗುವುದು. ಸ್ವಲ್ಪ ಹೆಚ್ಚಿನ ಸಮಯ ಏರ್ ನಡೆಸಲೂ ವಿನಂತಿಸಲಾಗುವುದು. ಅಧಿಕಾರಿಗಳು ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು ಎಂದು ಸೂಚಿಸಿದ್ದಾರೆ.

ಇದನ್ನೂ ಓದಿ | Kaveri Aarti: ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ; ದಸರಾ ಹೊತ್ತಿಗೆ ರೆಡಿ

ಪ್ರಮೋದಾ ದೇವಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ನಾವು ಕಾನೂನು ಮಾಡಿದ್ದೇವೆ. ಆದರೆ ಪ್ರಮೋದಾ ದೇವಿಯವರು ಕೋರ್ಟ್‌ಗೆ ಹೋಗಿ ಸ್ಟೇ ತಗೊಂಡು ಬಂದಿದ್ದಾರೆ. ಮುಂದೆ ಕಾನೂನು ತಜ್ಞರ ಜೊತೆ ಚರ್ಚೆ ಮಾಡಿ ಏನು ಮಾಡಬೇಕೆಂದು ತೀರ್ಮಾನ ಮಾಡುತ್ತೇವೆ ಎಂದರು.

Continue Reading
Advertisement
Lakshmi Hebbalkar
ಕರ್ನಾಟಕ2 mins ago

Lakshmi Hebbalkar: ಹಾಲಕೆರೆ ಮಠದ ಬೆಳ್ಳಿ ರಥೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ

NIRF 2024 Rank
ಶಿಕ್ಷಣ5 mins ago

NIRF 2024 Rank: ದೇಶದ ಟಾಪ್‌ 10 ಮೆಡಿಕಲ್‌ ಕಾಲೇಜುಗಳಲ್ಲಿ ನಿಮ್ಹಾನ್ಸ್‌ ನಂ.4; ಫಾರ್ಮಸಿಯಲ್ಲಿ ರಾಜ್ಯದ 2 ಕಾಲೇಜುಗಳಿಗೆ ಸ್ಥಾನ

Paris Olympics 2024
ಪ್ರಮುಖ ಸುದ್ದಿ18 mins ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಸಿಕ್ಕಿದ ಕೋಟಿಗಟ್ಟಲೆ ಬಹುಮಾನಗಳ ವಿವರ ಇಲ್ಲಿದೆ

Government Employees Sports
ಕರ್ನಾಟಕ21 mins ago

Government Employees Sports: ಆ.17ರಿಂದ 19ರವರೆಗೆ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

Uttara Kannada News
ಉತ್ತರ ಕನ್ನಡ30 mins ago

Uttara Kannada News: ʼಹರ್ ಘರ್ ತಿರಂಗಾʼ ಪ್ರಯುಕ್ತ ಉ.ಕ ಜಿಲ್ಲೆಯಾದ್ಯಂತ ಕಾರ್ಯಕ್ರಮ

Tungabhadra Dam
ಕರ್ನಾಟಕ32 mins ago

Tungabhadra Dam: ತುಂಗಭದ್ರಾ ಜಲಾಶಯಕ್ಕೆ ಸಮಾನಾಂತರ ಜಲಾಶಯ ನಿರ್ಮಿಸಲು ಬೊಮ್ಮಾಯಿ ಆಗ್ರಹ

Bengaluru Rain
ಬೆಂಗಳೂರು36 mins ago

Bengaluru Rain: ಕಟ್ಟಡ ನಿರ್ಮಾಣ ತ್ಯಾಜ್ಯ ತೆರವು; ಒಳಚರಂಡಿ, ರಸ್ತೆ ಬದಿ ಚರಂಡಿಗಳ ಸ್ವಚ್ಛತೆಗೆ ಡಿ. ಕೆ. ಶಿವಕುಮಾರ್ ಸೂಚನೆ

Whiten Your Yellow Teeth
ಆರೋಗ್ಯ48 mins ago

Whiten Your Yellow Teeth: ಈ ಆಹಾರಗಳು ನಿಮ್ಮ ಹಲ್ಲುಗಳ ಬಣ್ಣಗೆಡಿಸುತ್ತವೆ ಎನ್ನುವುದು ಗೊತ್ತಿದೆಯೆ?

Part Time Lecturers
ಪ್ರಮುಖ ಸುದ್ದಿ53 mins ago

Part Time Lecturers: ಅರೆಕಾಲಿಕ ಉಪನ್ಯಾಸಕರಿಗೆ ಗುಡ್ ನ್ಯೂಸ್; ಗೌರವಧನದಲ್ಲಿ ಭಾರಿ ಹೆಚ್ಚಳ

Faiz Hameed
ಪ್ರಮುಖ ಸುದ್ದಿ1 hour ago

Faiz Hameed : ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್​​ಐನ ಮಾಜಿ ಮುಖ್ಯಸ್ಥ ಫೈಜ್ ಹಮೀದ್ ಬಂಧನ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ4 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು6 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ6 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌