Kolkata Doctor Murder Case: ʼಬೇಕಿದ್ದರೆ ಗಲ್ಲಿಗೇರಿಸಿʼ.. ವಿಚಾರಣೆ ವೇಳೆ ವೈದ್ಯೆಯ ಹಂತಕನ ಉಡಾಫೆ ಉತ್ತರ - Vistara News

ದೇಶ

Kolkata Doctor Murder Case: ʼಬೇಕಿದ್ದರೆ ಗಲ್ಲಿಗೇರಿಸಿʼ.. ವಿಚಾರಣೆ ವೇಳೆ ವೈದ್ಯೆಯ ಹಂತಕನ ಉಡಾಫೆ ಉತ್ತರ

Kolkata Doctor Murder Case: ಹಂತಕ ರಾಯ್ ಕೋಲ್ಕತ್ತಾ ಪೊಲೀಸರೊಂದಿಗೆ ನಾಗರಿಕ ಸ್ವಯಂಸೇವಕರಾಗಿ ಕೆಲಸ ಮಾಡಿದ್ದ. ನಾಗರಿಕ ಸ್ವಯಂಸೇವಕರು ಟ್ರಾಫಿಕ್ ನಿರ್ವಹಣೆ ಮತ್ತು ವಿಪತ್ತು ಪ್ರತಿಕ್ರಿಯೆ ಸೇರಿದಂತೆ ವಿವಿಧ ರೀತಿಯ ಕೆಲಸಗಳಲ್ಲಿ ಪೊಲೀಸರಿಗೆ ಸಹಾಯ ಮಾಡಲು ನೇಮಕಗೊಂಡ ಗುತ್ತಿಗೆ ಸಿಬ್ಬಂದಿಯಾಗಿದ್ದ. 2019 ರಲ್ಲಿ ಕೋಲ್ಕತ್ತಾ ಪೊಲೀಸರ ವಿಪತ್ತು ನಿರ್ವಹಣಾ ಗುಂಪಿಗೆ ಸ್ವಯಂಸೇವಕನಾಗಿ ಸೇವೆ ಸೇರಿಕೊಂಡಿದ್ದ ಎನ್ನಲಾಗಿದೆ.

VISTARANEWS.COM


on

Kolkata Doctor Murder Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದ(Kolkata) ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ(Kolkata Doctor Murder Case) ಮಾಡಿದ ಆರೋಪಿ ಸಂಜೋಯ್ ರಾಯ್ ಆಸ್ಪತ್ರೆಯ ಉದ್ಯೋಗಿ ಅಲ್ಲ, ಆದರೆ ಕ್ಯಾಂಪಸ್‌ನ ಕಟ್ಟಡಗಳಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದ ಎಂಬ ಸಂಗತಿ ತನಿಖೆ ವೇಳೆ ಇದೀಗ ಬೆಳಕಿಗೆ ಬಂದಿದೆ.

ಹಂತಕ ರಾಯ್ ಕೋಲ್ಕತ್ತಾ ಪೊಲೀಸರೊಂದಿಗೆ ನಾಗರಿಕ ಸ್ವಯಂಸೇವಕರಾಗಿ ಕೆಲಸ ಮಾಡಿದ್ದ. ನಾಗರಿಕ ಸ್ವಯಂಸೇವಕರು ಟ್ರಾಫಿಕ್ ನಿರ್ವಹಣೆ ಮತ್ತು ವಿಪತ್ತು ಪ್ರತಿಕ್ರಿಯೆ ಸೇರಿದಂತೆ ವಿವಿಧ ರೀತಿಯ ಕೆಲಸಗಳಲ್ಲಿ ಪೊಲೀಸರಿಗೆ ಸಹಾಯ ಮಾಡಲು ನೇಮಕಗೊಂಡ ಗುತ್ತಿಗೆ ಸಿಬ್ಬಂದಿಯಾಗಿದ್ದ. 2019 ರಲ್ಲಿ ಕೋಲ್ಕತ್ತಾ ಪೊಲೀಸರ ವಿಪತ್ತು ನಿರ್ವಹಣಾ ಗುಂಪಿಗೆ ಸ್ವಯಂಸೇವಕನಾಗಿ ಸೇವೆ ಸೇರಿಕೊಂಡಿದ್ದ ಎನ್ನಲಾಗಿದೆ.

ನಂತರ ಪೊಲೀಸ್ ಕಲ್ಯಾಣ ವಿಭಾಗಕ್ಕೆ ವರ್ಗಾವಣೆಗೊಂಡಿದ್ದ. ಬಳಿಕ ಆತ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪೊಲೀಸ್ ಹೊರಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ. ಹೀಗಾಗಿ ಆ ಎಲ್ಲಾ ವಿಭಾಗಗಳಿಗೆ ಪ್ರವೇಶಕ್ಕೆ ಅನುಮತಿ ಆತನಿಗಿತ್ತು. ಇನ್ನು ಆಸ್ಪತ್ರೆಗಳಲ್ಲಿ ಬೆಡ್‌ಗಳನ್ನು ರೋಗಿಗಳಿಂದ ಹೆಚ್ಚು ಹಣ ಪಡೆದು ಅದನ್ನು ನೀಡುವುದು ಹೀಗೆ ಹಲವು ದಂಧೆಗಳಲ್ಲಿ ಆತ ಭಾಗಿಯಾಗಿದ್ದ ಎನ್ನಲಾಗಿದೆ.

ಪಶ್ಚಾತ್ತಾಪ ಇಲ್ಲ, ಬೇಕಿದ್ದರೆ ಗಲ್ಲಿಗೇರಿಸಿ

ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಪೊಲೀಸರು ಅವರನ್ನು ಪ್ರಶ್ನಿಸಲು ಪ್ರಾರಂಭಿಸಿದ ಕೂಡಲೇ ರಾಯ್ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಆತನಿಗೆ ಯಾವುದೇ ಪಶ್ಚಾತ್ತಾಪ ಇಲ್ಲ. ಅಲ್ಲದೇ ನೀವು ಬಯಸಿದರೆ ನನ್ನನ್ನು ಗಲ್ಲಿಗೇರಿಸಿ” ಎಂದು ಅಸಡ್ಡೆಯಿಂದ ಉತ್ತರ ಕೊಟ್ಟಿದ್ದಾನೆ. ಇನ್ನು ಆತನ ಮೊಬೈಲ್ ಫೋನ್‌ನಲ್ಲಿ ಅಶ್ಲೀಲ ವಿಡಿಯೋಗಳಿಂದ ತುಂಬಿತ್ತು ಎಂದು ತಿಳಿದುಬಂದಿದೆ.

ಏನಿದು ಘಟನೆ?

ಕೋಲ್ಕತಾದಲ್ಲಿನ ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಶುಕ್ರವಾರ ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಗುರುವಾರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್‌ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್‌ಗೆ ಓದುವ ಸಲುವಾಗಿ ತೆರಳಿದ್ದರು. ಶುಕ್ರವಾರ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು.

ಆಸ್ಪತ್ರೆಯ ವೈದ್ಯರೊಬ್ಬರು ಮಾಹಿತಿ ನೀಡಿ, ʼʼಸಂತ್ರಸ್ತೆ ಶುಕ್ರವಾರ ಮುಂಜಾನೆ 2 ಗಂಟೆ ಸುಮಾರಿಗೆ ತಮ್ಮ ಸಹೋದ್ಯೋಗಿಗಳೊಂದಿಗೆ ಊಟ ಮಾಡಿದ್ದಾರೆ. ಬಳಿಕ ಸೆಮಿನಾರ್ ಹಾಲ್‌ಗೆ ತೆರಳಿದ್ದರು. ನಂತರ ಸೆಮಿನಾರ್‌ ಹಾಲ್‌ನಲ್ಲಿ ಅವರ ಶವ ಪತ್ತೆಯಾಗಿತ್ತುʼʼ ಎಂದು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ(West Bengal)ದ ರಾಜಧಾನಿ ಕೋಲ್ಕತಾದಲ್ಲಿ ದೇಶವೇ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, 31 ವರ್ಷದ ಮಹಿಳಾ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಇಂದು ದೆಹಲಿ ಏಮ್ಸ್‌(AIIMS) ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಮತ್ತೊಂದೆಡೆ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್(FORDA) ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ಕೊಟ್ಟಿದೆ.

ಇದನ್ನೂ ಓದಿ: ಕಣ್ಣು, ಬಾಯಿಯಿಂದ ರಕ್ತಸ್ರಾವ, ಕುತ್ತಿಗೆ ಮೂಳೆ ತುಂಡು: ಹತ್ಯೆಯಾದ ಟ್ರೈನಿ ವೈದ್ಯೆಯ ಮರಣೋತ್ತರ ಪರೀಕ್ಷಾ ವರದಿಯಲ್ಲಿದೆ ಬೆಚ್ಚಿ ಬೀಳಿಸುವ ಸತ್ಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Hindenburg Report : ಭಾರತೀಯ ಷೇರು ಮಾರುಕಟ್ಟೆಗೆ ಘಾಸಿ ಮಾಡುವ ಸಂಚು ವಿಫಲ; ಠುಸ್​ ಆದ ಹಿಂಡೆನ್​ಬರ್ಗ್ ವರದಿ

Hindenburg Report : ಆದಾಗ್ಯೂ, ಸೆನ್ಸೆಕ್ಸ್ ಇಂಟ್ರಾ-ಡೇ ವಹಿವಾಟಿನಲ್ಲಿ 300 ಪಾಯಿಂಟ್​ಗಳ ಜಿಗಿತ ಕಂಡು ಅಲ್ವಾವಧಿಯವರೆಗೆ 80,000 ಅಂಕಗಳ ಮಟ್ಟವನ್ನು ದಾಟಿತ್ತು. ಇದು ಮಾರುಕಟ್ಟೆಯಒಟ್ಟಾರೆ ಆರ್ಥಿಕ ಬೆಳವಣಿಗೆಯಲ್ಲಿ ಭಾರತೀಯ ಹೂಡಿಕೆದಾರರ ನಂಬಿಕೆಯನ್ನು ಪ್ರತಿಬಿಂಬಿಸಿದೆ. ದಿನದ ಅಂತ್ಯಕ್ಕೆ ಸೆನ್ಸೆಕ್ಸ್ ಕೇವಲ 57 ಪಾಯಿಂಟ್ಸ್ ಕುಸಿದು 79,648 ಕ್ಕೆ ನಿಂತಿದ್ದು. ನಿಫ್ಟಿ 20 ಪಾಯಿಂಟ್ಸ್ ಕುಸಿದು 24,347 ಕ್ಕೆ ತಲುಪಿದೆ. ಹೀಗಾಗಿ ಭಾರೀ ಕುಸಿತ ಕಾಣುತ್ತದೆ ಎಂಬ ಅಂದಾಜಿ ಸುಳ್ಳಾಗಿದೆ.

VISTARANEWS.COM


on

Hindenburg Report
Koo

ನವದೆಹಲಿ: ಭಾರತೀಯ ಷೇರು ಮಾರುಕಟ್ಟೆಗೆ (Stock Market) ಹಾನಿ ಮಾಡಬೇಕು ಎಂಬ ಉದ್ದೇಶದಿಂದ ಅಮೆರಿಕದ ಮೂಲಕ ಶಾರ್ಟ್​ ಸೆಲ್ಲಿಂಗ್​ ಸಂಸ್ಥೆ ಹಿಂಡೆನ್​ಬರ್ಗ್​​ ರೀಸರ್ಚ್​ ಎಲ್​ಎಲ್​​ಸಿ ಬಿಡುಗಡೆ ಮಾಡಿರುವ ವರದಿ (Hindenburg Report) ಠುಸ್ ಎಂದಿದೆ. ಸೋಮವಾರ ಭಾರತೀಯ ಷೇರು ಮಾರುಕಟ್ಟೆಗೆ ಯಾವುದೇ ಯಾನಿ ಉಂಟಾಗಿಲ್ಲ ಎಂಬುದಾಗಿ ವರದಿಯಾಗಿದೆ. ಈ ಮೂಲಕ ಮಾರುಕಟ್ಟೆ ನಿಯಂತ್ರಕ ಸಂಸ್ಥೆಯ ಅಧ್ಯಕ್ಷರಾದ ಮಾಧಾಬಿ ಪುರಿ ಬುಚ್ ಮತ್ತು ಅವರ ಪತಿ ಧವಳ್ ಬುಚ್ ವಿರುದ್ಧದ ಹಿಂಡನ್​ಬರ್ಗ್​ ಆರೋಪಗಳನ್ನು ಭಾರತೀಯ ಹೂಡಿಕೆದಾರರು ಸಾರಾಸಗಟು ತಿರಸ್ಕರಿಸಿದ್ದಾರೆ.

ಸೆಬಿ ಮುಖ್ಯಸ್ಥರ ವಿರುದ್ಧದ ಗಂಭೀರ ಆರೋಪಗಳ ಬಗ್ಗೆ ಜಂಟಿ ಸದನ ಸಮಿತಿಯಿಂದ ತನಿಖೆ ನಡೆಸುವುದಾಗಿ ಪ್ರಧಾನಿ ಘೋಷಿಸಬೇಕು ಎಂದು ರಾಹುಲ್ ಗಾಂಧಿ ಭಾನುವಾರ ವೀಡಿಯೊ ಸಂದೇಶದಲ್ಲಿ ಒತ್ತಾಯಿಸಿದರು, “ಸಣ್ಣ ಚಿಲ್ಲರೆ ಹೂಡಿಕೆದಾರರ ಸಂಪತ್ತನ್ನು ರಕ್ಷಿಸುವ ಜವಾಬ್ದಾರಿ ಹೊಂದಿರುವ ಸೆಕ್ಯುರಿಟೀಸ್ ನಿಯಂತ್ರಕದ ಸಮಗ್ರತೆಗೆ ಅದರ ಅಧ್ಯಕ್ಷರ ವಿರುದ್ಧದ ಆರೋಪಗಳಿಂದ ತೀವ್ರವಾಗಿ ಹಾನಿಯಾಗಿದೆ ” ಎಂದು ಹೇಳಿದರು. ಹೀಗಾಗಿ ಸೋಮವಾರ ವರದಿಯು ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಆ ವರದಿಯನ್ನು ಭಾರತೀಯ ಹೂಡಿಕೆದಾರರು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ.

ಆದಾಗ್ಯೂ, ಸೆನ್ಸೆಕ್ಸ್ ಇಂಟ್ರಾ-ಡೇ ವಹಿವಾಟಿನಲ್ಲಿ 300 ಪಾಯಿಂಟ್​ಗಳ ಜಿಗಿತ ಕಂಡು ಅಲ್ವಾವಧಿಯವರೆಗೆ 80,000 ಅಂಕಗಳ ಮಟ್ಟವನ್ನು ದಾಟಿತ್ತು. ಇದು ಮಾರುಕಟ್ಟೆಯಒಟ್ಟಾರೆ ಆರ್ಥಿಕ ಬೆಳವಣಿಗೆಯಲ್ಲಿ ಭಾರತೀಯ ಹೂಡಿಕೆದಾರರ ನಂಬಿಕೆಯನ್ನು ಪ್ರತಿಬಿಂಬಿಸಿದೆ. ದಿನದ ಅಂತ್ಯಕ್ಕೆ ಸೆನ್ಸೆಕ್ಸ್ ಕೇವಲ 57 ಪಾಯಿಂಟ್ಸ್ ಕುಸಿದು 79,648 ಕ್ಕೆ ನಿಂತಿದ್ದು. ನಿಫ್ಟಿ 20 ಪಾಯಿಂಟ್ಸ್ ಕುಸಿದು 24,347 ಕ್ಕೆ ತಲುಪಿದೆ. ಹೀಗಾಗಿ ಭಾರೀ ಕುಸಿತ ಕಾಣುತ್ತದೆ ಎಂಬ ಅಂದಾಜಿ ಸುಳ್ಳಾಗಿದೆ.

ಮಾರುಕಟ್ಟೆ ತಜ್ಞರ ಪ್ರಕಾರ, ಸೆಬಿ ಅಧ್ಯಕ್ಷೆ ಮಾಧಾಬಿ ಪುರಿ ಬುಚ್ ಮತ್ತು ಅವರ ಪತಿ ಧವಳ್ ಬುಚ್ ವಿರುದ್ಧ ಹಿಂಡೆನ್​​​ಬರ್ಗ್​ ಅವರ ಆರೋಪಗಳ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆ ದೃಢತೆಯನ್ನು ಪ್ರದರ್ಶಿಸಿದೆ, ನಕಾರಾತ್ಮಕ ವರದಿಯ ಹೊರತಾಗಿಯೂ, ದೇಶೀಯ ಷೇರು ಮಾರುಕಟ್ಟೆಗಳು ಅವರನ್ನು ತಿರಸ್ಕರಿಸಿದೆ.

ಜಾಗತಿಕ ಮಾರುಕಟ್ಟೆಗಳಿಂದ ಸಕಾರಾತ್ಮಕ ಸೂಚನೆ ಪಡೆದುಕೊಂಡು ಮಾರುಕಟ್ಟೆಯು ಹಿಂಡೆನ್ಬರ್ಗ್ ಆರೋಪಗಳಿಗೆ ಕಿಮ್ಮತ್ತು ನೀಡಲಿಲ್ಲ. ಹಿಂಡೆನ್ಬರ್ಗ್ ವರದಿಯು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿಲ್ಲ ಮತ್ತು ಗೂಳಿಯ ಓಟವು ಉತ್ತಮವಾಗಿದೆ ಎಂದು ಮಾರುಕಟ್ಟೆ ವೀಕ್ಷಕರು ಹೇಳಿದ್ದಾರೆ.

ಇದನ್ನೂ ಓದಿ: Bangladesh Unrest: ಬಾಂಗ್ಲಾದಲ್ಲಿ 1971ರ ಪಾಕ್‌ ಸೇನೆ ಶರಣಾಗತಿ ಬಿಂಬಿಸುವ ಪ್ರತಿಮೆ ಧ್ವಂಸ; ಬೇಸರ ವ್ಯಕ್ತಪಡಿಸಿದ ಕಾಂಗ್ರೆಸ್‌ ಮುಖಂಡ

ತಪ್ಪಾದ ವರದಿ

ಹಿಂಡೆನ್​ಬರ್ಗ್​ನಂಥ ಆಧಾರವಿಲ್ಲದ ವರದಿಗಳಿಗೆ ಪ್ರತಿಕ್ರಿಯಿಸುವ ಬದಲು ಶಾಂತವಾಗಿರುವಂತೆ ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿ ಹೂಡಿಕೆದಾರರಿಗೆ ಭಾನುವಾರ ಸಲಹೆ ನೀಡಿತ್ತು. ಅಮೆರಿಕದ ಶಾರ್ಟ್​ ಸೆಲ್ಲರ್​ ಹಿಂಡೆನ್ಬರ್ಗ್ ರಿಸರ್ಚ್ ಮಾಡಿದ ಆರೋಪಗಳಿಗೆ ಸೆಬಿ ಅಧ್ಯಕ್ಷರು ಮತ್ತು ಅವರ ಪತಿ ವಿವರವಾದ ಪ್ರತಿಕ್ರಿಯೆ ನೀಡಿದ್ದಾರೆ. ಶೋಕಾಸ್ ನೋಟಿಸ್​ಗೆ ಉತ್ತರಿಸುವ ಬದಲು, ಅವರು ಸೆಬಿಯ ವಿಶ್ವಾಸಾರ್ಹತೆಯ ಮೇಲೆ ದಾಳಿ ಮಾಡಲು ಮತ್ತು ಅದರ ಅಧ್ಯಕ್ಷರ ಚಾರಿತ್ರ್ಯ ಹರಣ ಮಾಡಲು ಪ್ರಯತ್ನಿಸಲು ನಿರ್ಧರಿಸಿರುವುದು ದುರದೃಷ್ಟಕರ ಎಂದು ಹೇಳಿದರು.

ದಂಪತಿ ಎಲ್ಲಾ ಆರೋಪಗಳನ್ನು ದೃಢವಾಗಿ ವಿವರಣೆ ನೀಡಿದ್ದಾರೆ. ಸೆಬಿಯಲ್ಲಿ ಮಾಧಾಬಿ ಅವರ ಅಧಿಕಾರಾವಧಿಗೆ ಮುಂಚಿತವಾಗಿ ಹೂಡಿಕೆ ನಡೆದಿದೆ ಎಂಬುದಾಗಿ ಹೇಳಿದ್ದಾರೆ.

Continue Reading

ದೇಶ

Independence Day 2024: ಈ ಬಾರಿ ಆಚರಿಸುತ್ತಿರುವುದು ಎಷ್ಟನೇ ಸ್ವಾತಂತ್ರ್ಯೋತ್ಸವ? 77 or 78?

ದೇಶಾದ್ಯಂತ ಈಗ ಶಾಲೆ, ಕಚೇರಿ, ಸ್ಥಳೀಯ ಸಂಘ ಸಂಸ್ಥೆಗಳು ಸ್ವಾತಂತ್ರ್ಯ ದಿನವನ್ನು ಆಚರಿಸಲು ತಯಾರಿ ನಡೆಸುತ್ತಿದೆ. ದೇಶಭಕ್ತಿಯ ಉತ್ಸಾಹವು ಎಲ್ಲರಲ್ಲೂ ಮೂಡುತ್ತಿದೆ. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಕೊಡುಗೆಗಳನ್ನು ಗುರುತಿಸಿ, ಗೌರವಿಸುವ ದಿನಕ್ಕಾಗಿ ಎಲ್ಲರೂ ಕಾತರರಾಗಿದ್ದಾರೆ. ಈ ನಡುವೆ ಈ ಬಾರಿಯದು 77 ಅಥವಾ 78ನೇ ಸ್ವಾತಂತ್ರ್ಯ ದಿನಾಚರಣೆಯೇ (Independence Day 2024) ಎನ್ನುವ ಗೊಂದಲ ಹಲವರನ್ನು ಕಾಡುತ್ತಿದೆ. ಇದಕ್ಕೆ ಉತ್ತರ ಇಲ್ಲಿದೆ.

VISTARANEWS.COM


on

By

Independence Day 2024
Koo

ದೇಶ ಈಗ ಸ್ವಾತಂತ್ರ್ಯ ದಿನಾಚರಣೆಯ (Independence Day 2024) ಸಂಭ್ರಮದಲ್ಲಿದೆ. ಈ ನಡುವೆ ಈ ಬಾರಿಯದು 77ನೇ ಅಥವಾ 78ನೇ ಸ್ವಾತಂತ್ರ್ಯ ದಿನಾಚರಣೆಯೇ ಎನ್ನುವ ಗೊಂದಲ ಹಲವರನ್ನು ಕಾಡುತ್ತಿದೆ. ಪ್ರತಿ ಬಾರಿ ಸ್ವಾತಂತ್ರ್ಯ ದಿನಾಚರಣೆಯ (Independence day celebration) ಬಗ್ಗೆ ಇಂತಹ ಒಂದು ಗೊಂದಲ ಹಲವರನ್ನು ಕಾಡುವುದು ಸಹಜ. ಯಾಕೆ ಇದು ಎನ್ನುವುದಕ್ಕೆ ಉತ್ತರ ಇಲ್ಲಿದೆ.

1947ರ ಆಗಸ್ಟ್ 15ರಂದು ಭಾರತವನ್ನು ಬ್ರಿಟಿಷ್ ವಸಾಹತುಶಾಹಿಯಿಂದ ಭಾರತವನ್ನು ಸ್ವತಂತ್ರವೆಂದು ಘೋಷಿಸಲಾಯಿತು. ದೇಶದ ನಿಯಂತ್ರಣವನ್ನು ಭಾರತದ ನಾಯಕರಿಗೆ ಹಸ್ತಾಂತರಿಸಲಾಯಿತು. ಬಳಿಕ ದೇಶಾದ್ಯಂತ ಪ್ರತೀ ವರ್ಷ ಆಗಸ್ಟ್ 15ರಂದು ಭಾರತದ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತಿದೆ. ಶಾಲೆ, ಕಚೇರಿಗಳು, ಸ್ಥಳೀಯ ಸಂಘ ಸಂಸ್ಥೆಗಳು ಈಗ ಸ್ವಾತಂತ್ರ್ಯ ದಿನವನ್ನು ಆಚರಿಸಲು ತಯಾರಿ ನಡೆಸುತ್ತಿದೆ. ದೇಶಭಕ್ತಿಯ ಉತ್ಸಾಹವು ಎಲ್ಲರಲ್ಲೂ ಮೂಡುತ್ತಿದೆ. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಕೊಡುಗೆಗಳನ್ನು ಗುರುತಿಸಿ, ಗೌರವಿಸುವ ದಿನಕ್ಕಾಗಿ ಎಲ್ಲರೂ ಕಾತರರಾಗಿದ್ದಾರೆ. ಈ ದಿನ ತ್ರಿವರ್ಣವನ್ನು ಹಾರಿಸುವುದು, ದೇಶಭಕ್ತಿ ಗೀತೆಗಳ ಗಾಯನ ಮತ್ತು ಸಾಂಸ್ಕೃತಿಕ ಚಟುವಟಿಕೆಗಳೊಂದಿಗೆ ಗುರುತಿಸಲಾಗುತ್ತದೆ.

ಪ್ರತಿ ಬಾರಿಯೂ ಇದು ಎಷ್ಟನೇ ಸ್ವಾತಂತ್ರ್ಯೋತ್ಸವ ಎಂಬ ಪ್ರಶ್ನೆ ಬಂದೇ ಬರುತ್ತದೆ. ಸಾಮಾನ್ಯವಾಗಿ ಒಂದು ವರ್ಷದ ಬಳಿಕ ವಾರ್ಷಿಕೋತ್ಸವ ಆಚರಿಸಲಾಗುತ್ತದೆ. ಹಾಗಾಗಿ ಇದು 77ನೇ ಸ್ವಾತಂತ್ರ್ಯೋತ್ಸವ ಎಂದು ವಾದಿಸುವವರೂ ಇದ್ದಾರೆ. ಆದರೆ ಸ್ವಾತಂತ್ರ್ಯೋತ್ಸವ ವಿಚಾರದಲ್ಲಿ ಹೀಗಲ್ಲ. ಈ ವರ್ಷ ಭಾರತವು ತನ್ನ 78ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತದೆ. ಯಾಕೆಂದರೆ 1947ರ ಆಗಸ್ಟ್ 15ರಂದು ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತ್ತು. ಆ ದಿನವೇ ಮೊದಲ ಸ್ವಾತಂತ್ರ್ಯೋತ್ಸವ ಆಚರಿಸಲಾಗಿತ್ತು. ಹಾಗಾಗಿ ಈ ಬಾರಿಯದು 78ನೇ ಸ್ವಾತಂತ್ರ್ಯೋತ್ಸವ. ಇದರ ಜತೆಗೆ ಬೇಕಿದ್ದರೆ ಈ ಬಾರಿಯ ಸ್ವಾತಂತ್ರ್ಯದ ದಿನವನ್ನು 77ನೇ ಸ್ವಾತಂತ್ರ್ಯ ʼವಾರ್ಷಿಕೋತ್ಸವʼ ಎಂದು ಕರೆಯಬಹುದು!


ಸ್ವಾತಂತ್ರ್ಯ ದಿನಾಚರಣೆ 2024ರ ಆಚರಣೆಗಳು ಆಗಸ್ಟ್ 9ರಂದೇ ‘ಹರ್ ಘರ್ ತಿರಂಗ’ ಅಭಿಯಾನದ ಮೂಲಕ ಪ್ರಾರಂಭವಾಗಿದೆ. ಹರ್ ಘರ್ ತಿರಂಗದ ಮೂರನೇ ಸರಣಿಯು 78ನೇ ಸ್ವಾತಂತ್ರ್ಯ ದಿನಾಚರಣೆಯ ಆಗಸ್ಟ್ 15ರವರೆಗೆ ಆಚರಿಸಲಾಗುತ್ತದೆ.


ಪ್ರತಿಯೊಬ್ಬ ಭಾರತೀಯನು ರಾಷ್ಟ್ರಧ್ವಜವನ್ನು ಹಾರಿಸುವಂತೆ ಪ್ರೋತ್ಸಾಹಿಸುವ ಮೂಲಕ ನಾಗರಿಕರಲ್ಲಿ ದೇಶಭಕ್ತಿ ಮತ್ತು ರಾಷ್ಟ್ರೀಯ ಹೆಮ್ಮೆಯ ಮನೋಭಾವವನ್ನು ಮೂಡಿಸುವ ಉದ್ದೇಶವನ್ನು ಇದು ಹೊಂದಿದೆ ಎಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ಹೇಳಿದರು. ನಾಗರಿಕರು ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲು ಮತ್ತು ಧ್ವಜದೊಂದಿಗೆ ಸೆಲ್ಫಿ ಕ್ಲಿಕ್ ಮಾಡಿ ಅದನ್ನು ಹೆಚ್ ಜಿ ಟಿ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಲು ಸಚಿವರು ತಿಳಿಸಿದ್ದಾರೆ.

‘ಹರ್ ಘರ್ ತಿರಂಗ’ ಅಭಿಯಾನವನ್ನು ಸ್ಮರಣೀಯ ಜನಾಂದೋಲನವನ್ನಾಗಿ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಕೂಡ ಜನರಿಗೆ ಕರೆ ನೀಡಿದ್ದಾರೆ. ಅವರು ತಮ್ಮ ಪ್ರೊಫೈಲ್ ಚಿತ್ರವನ್ನು ರಾಷ್ಟ್ರಧ್ವಜದೊಂದಿಗೆ ಬದಲಾಯಿಸಿದ್ದಾರೆ. ಎಲ್ಲರೂ ಅದೇ ರೀತಿ ಮಾಡುವಂತೆ ಹೇಳಿದ್ದಾರೆ.


ಇದನ್ನೂ ಓದಿ: Independence Day 2024: ಮನೆಮನೆಯಲ್ಲೂ ಉಲ್ಲಾಸ, ಉತ್ಸಾಹ ತುಂಬುವ ಸ್ವಾತಂತ್ರ್ಯೋತ್ಸವದ ಹಿನ್ನೋಟ

ಈ ವರ್ಷ ರಕ್ಷಣಾ ಸಚಿವಾಲಯವು ‘ಏಕ್ ಪೇಡ್ ಮಾ ಕೆ ನಾಮ್’ ಅಭಿಯಾನದ ಅಡಿಯಲ್ಲಿ ರಾಷ್ಟ್ರವ್ಯಾಪಿ 15 ಲಕ್ಷ ಮರಗಳನ್ನು ನೆಡುವ ಅಭಿಯಾನವನ್ನು ಪ್ರಾರಂಭಿಸಿದೆ. ಜೂನ್ 5ರಂದು ವಿಶ್ವ ಪರಿಸರ ದಿನದಂದು ಪ್ರಧಾನಿ ನರೇಂದ್ರ ಮೋದಿ ಅಭಿಯಾನಕ್ಕೆ ಚಾಲನೆ ನೀಡಿದ್ದರು. “ಪ್ಲಾಂಟೇಶನ್ ಡ್ರೈವ್ ‘ಏಕ್ ಪೇಡ್ ಮಾ ಕೆ ನಾಮ್’ – ʼತಾಯಿಯ ಹೆಸರಿನಲ್ಲಿ ಒಂದು ಮರʼ ಅಭಿಯಾನವನ್ನು ಡಿಆರ್‌ಡಿಒ, ರಕ್ಷಣಾ ಪಿಎಸ್‌ಯುಗಳು, ಸಿಜಿಡಿಎ, ಎನ್‌ಸಿಸಿ, ಸೈನಿಕ್‌ನಂತಹ ಸಂಬಂಧಿತ ಸಂಸ್ಥೆಗಳ ಮೂಲಕ ನಡೆಸಲಾಗುವುದು ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

Continue Reading

ದೇಶ

Viral Video: ಪ್ಯಾರಿಸ್‌ ಒಲಿಂಪಿಕ್‌ ಸಮಾರೋಪ ಸಮಾರಂಭದಲ್ಲಿ ನಟನಿಗೆ ಕಿಸ್ಸಿಂಗ್-‌ ವಿಡಿಯೋ ವೈರಲ್‌

Viral Video: ಮಹಿಳೆಯ ಕೃತ್ಯದ ದೃಶ್ಯಾವಳಿಗಳು ವೈರಲ್ ಆಗಿದ್ದು, ಅಭಿಮಾನಿಗಳು ಈ ಬಗ್ಗೆ ನಾನಾ ರೀತಿಯಲ್ಲಿ ಕಮೆಂಟ್‌ ಮಾಡಿದ್ದಾರೆ. ಅಭಿಮಾನಿಗಳಿಗೆ ಶುಭಾಶಯ ಕೋರಲು ಪ್ರಾರಂಭಿಸುತ್ತಿದ್ದಂತೆ, ಅವರಲ್ಲಿ ಒಬ್ಬರು ಅವರನ್ನು ಹಿಡಿದು ಕೆನ್ನೆಗೆ ಮುತ್ತಿಟ್ಟರು. ವೀಡಿಯೊ ಆನ್‌ಲೈನ್‌ನಲ್ಲಿ ವಿವಾದವನ್ನು ಹುಟ್ಟುಹಾಕಿದೆ. ಅನೇಕರು ಇದನ್ನು ಅನುಚಿತ ವರ್ತನೆ ಎಂದು ಕರೆದಿದ್ದಾರೆ.

VISTARANEWS.COM


on

Viral Video
Koo

ಪ್ಯಾರಿಸ್‌: ಪ್ಯಾರಿಸ್ ಒಲಿಂಪಿಕ್ಸ್​​ 2024ರ (Paris Olympics 2024) ಸ್ಪರ್ಧೆಗಳು ಭಾನುವಾರ ಸಂಜೆ ಅದ್ದೂರಿ ತೆರೆ ಕಂಡಿದೆ. ಈ ವೇಳೆ ಭಾಗಿಯಾಗಿದ್ದ ನಟ ಟಾಮ್‌ ಕ್ರೂಸ್‌(Tom Cruise)ನನ್ನು ಅಲ್ಲೇ ಇದ್ದ ಮಹಿಳೆಯೊಬ್ಬರು ಕಿಸ್‌ ಮಾಡಿರುವ ಘಟನೆ ನಡೆಯಿತು. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌(Viral Video) ಆಗುತ್ತಿದೆ.

ಮಹಿಳೆಯ ಕೃತ್ಯದ ದೃಶ್ಯಾವಳಿಗಳು ವೈರಲ್ ಆಗಿದ್ದು, ಅಭಿಮಾನಿಗಳು ಈ ಬಗ್ಗೆ ನಾನಾ ರೀತಿಯಲ್ಲಿ ಕಮೆಂಟ್‌ ಮಾಡಿದ್ದಾರೆ. ಅಭಿಮಾನಿಗಳಿಗೆ ಶುಭಾಶಯ ಕೋರಲು ಪ್ರಾರಂಭಿಸುತ್ತಿದ್ದಂತೆ, ಅವರಲ್ಲಿ ಒಬ್ಬರು ಅವರನ್ನು ಹಿಡಿದು ಕೆನ್ನೆಗೆ ಮುತ್ತಿಟ್ಟರು. ವೀಡಿಯೊ ಆನ್‌ಲೈನ್‌ನಲ್ಲಿ ವಿವಾದವನ್ನು ಹುಟ್ಟುಹಾಕಿದೆ. ಅನೇಕರು ಇದನ್ನು ಅನುಚಿತ ವರ್ತನೆ ಎಂದು ಕರೆದಿದ್ದಾರೆ.

2024ರ ಒಲಿಂಪಿಕ್‌ ಕ್ರೀಡಾಕೂಟ(2024 Olympics)ದ ಉದ್ಘಾಟನಾ ಸಮಾರಂಭದಲ್ಲಿ ಫ್ರಾನ್ಸ್‌ ಅಧ್ಯಕ್ಷ ಇಮಾನ್ಯುಯೆಲ್‌ ಮ್ಯಾಕ್ರಾನ್(Emmanuel Macron) ತಮ್ಮ ಕ್ರೀಡಾ ಸಚಿವೆಗೆ ತುಂಬಿದ ಸಭೆಯಲ್ಲಿ ಚುಂಬಿಸಿರುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದರು. 2024ರ ಒಲಿಂಪಿಕ್‌ ಕ್ರೀಡಾಕೂಟ(2024 Olympics)ದ ಉದ್ಘಾಟನಾ ಸಮಾರಂಭದಲ್ಲಿ ಮ್ಯಾಕ್ರಾನ್‌, ಕ್ರೀಡಾ ಸಚಿವೆ ಅಮೆಲಿ ಔಡಿಯಾ-ಕ್ಯಾಸ್ಟೆರಾ(Amélie Oudéa-Castéra) ಅವರಿಗೆ ಚುಂಬಿಸಿರುವ ವಿಡಿಯೋ ಎಲ್ಲೆಡೆ ವೈರಲ್‌ ಆಗಿತ್ತು.

ವಿಡಿಯೋದಲ್ಲಿ ಅಮೆಲಿ, ಒಂದು ಕೈಯಲ್ಲಿ ಮ್ಯಾಕ್ರಾನ್‌ ಅವರನ್ನು ಬಳಸಿ, ಅವರ ಕತ್ತಿಗೆ ಮುತ್ತಿಕ್ಕಿದ್ದಾರೆ. ಈ ಸಂದರ್ಭದಲ್ಲಿ ಫ್ರಾನ್ಸ್‌ ಪ್ರಧಾನಿ ಗ್ಯಾಬ್ರಿಯಲ್‌ ಅಟ್ಟಲ್‌ ಕೂಡ ಉಪಸ್ಥಿತರಿದ್ದರು. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಎಕ್ಸ್‌ನಲ್ಲಿ 4 ಮಿಲಿಯನ್ ವೀಕ್ಷಣೆಗಳನ್ನು ಪಡೆದಿವೆ. ಈ ವಿಡಿಯೋಗೆ ನೆಟ್ಟಿಗರು ನಾನಾ ರೀತಿಯಲ್ಲಿ ಕಮೆಂಟ್‌ ಮಾಡಿದ್ದಾರೆ.

ಇದು ಕೇವಲ ಅಭಿನಂದಿಸುವ ವಿಧಾನ ಅಷ್ಟೇ ಎಂದು ಒಬ್ಬ ನೆಟ್ಟಿಗರ ಕಮೆಂಟ್‌ ಮಾಡಿದ್ದಾರೆ. ಈ ರೀತಿಯಾಗಿ ನಾನು ನನ್ನ ಪ್ರೇಯಸಿಗೆ ಕಿಸ್‌ ಮಾಡುತ್ತೇನೆ..ಇದು ಅತ್ಯಂತ ಮುಜುಗರಕ್ಕೀಡು ಮಾಡುವಂತಹ ಘಟನೆ ಎಂದು ಮತ್ತೊರ್ವ ಪ್ರತಿಕ್ರಿಯಿಸಿದ್ದಾರೆ. ಇನ್ನು ಕೆಲವರು ಮ್ಯಾಕ್ರನ್‌ ಪತ್ನಿ ಈ ಘಟನೆಗೆ ಹೇಗೆ ರಿಯಾಕ್ಟ್‌ ಮಾಡಬಹುದೆಂಬ ಮೀಮ್ಸ್‌ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: ಕೋತಿಗಳ ಮುಂದೆ ಮಂಗಾಟ ಮಾಡುವ ಮುನ್ನ ಈ ವೈರಲ್‌ ವಿಡಿಯೋ ನೋಡಿ

Continue Reading

ದೇಶ

Independence Day 2024: ಮನೆಮನೆಯಲ್ಲೂ ಉಲ್ಲಾಸ, ಉತ್ಸಾಹ ತುಂಬುವ ಸ್ವಾತಂತ್ರ್ಯೋತ್ಸವದ ಹಿನ್ನೋಟ

ಸ್ವಾತಂತ್ರ್ಯ ದಿನಾಚರಣೆಯು ಭಾರತವನ್ನು ಬ್ರಿಟಿಷ್ ಆಳ್ವಿಕೆಯಿಂದ ಮುಕ್ತಗೊಳಿಸಲು ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಮಾಡಿದ ತ್ಯಾಗ ಮತ್ತು ಬಲಿದಾನವನ್ನು ನೆನಪಿಸುತ್ತದೆ. 1947ರ ಆಗಸ್ಟ್ 15ರಂದು ಭಾರತವನ್ನು ಬ್ರಿಟಿಷ್ ಸಾಮ್ರಾಜ್ಯಶಾಹಿಯಿಂದ ಮುಕ್ತಗೊಳಿಸಲಾಯಿತು. 78ನೇ ಸ್ವಾತಂತ್ರ್ಯ ದಿನಾಚರಣೆಯ (Independence day 2024) ಈ ಸಂದರ್ಭದಲ್ಲಿ ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ಹೇಗೆ ಆಚರಿಸಲಾಗುತ್ತದೆ ಮತ್ತು ಇದರ ಇತಿಹಾಸದ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

Independence day 2024
Koo

ಭಾರತದಾದ್ಯಂತ 78ನೇ ಸ್ವಾತಂತ್ರ್ಯ ದಿನಕ್ಕೆ (Independence day 2024) ಕ್ಷಣಗಣನೆ ಆರಂಭವಾಗಿದೆ. “ವಿಕಸಿತ ಭಾರತ” (Viksit Bharat) ಸಂದೇಶದೊಂದಿಗೆ ಈ ಬಾರಿ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತಿದೆ. ಭಾರತದ 100ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಅಂದರೆ 2047ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪರಿವರ್ತಿಸುವ ಕೇಂದ್ರ ಸರ್ಕಾರದ ಗುರಿಯನ್ನು ಇದು ಪ್ರತಿಬಿಂಬಿಸುತ್ತದೆ.

ಸ್ವಾತಂತ್ರ್ಯ ದಿನಾಚರಣೆಯು ಭಾರತವನ್ನು ಬ್ರಿಟಿಷ್ ಆಳ್ವಿಕೆಯಿಂದ ಮುಕ್ತಗೊಳಿಸಲು ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಮಾಡಿದ ಎಲ್ಲಾ ತ್ಯಾಗಗಳನ್ನು ನೆನಪಿಸುತ್ತದೆ. 1947ರ ಆಗಸ್ಟ್ 15ರಂದು ಭಾರತವನ್ನು ಬ್ರಿಟಿಷ್ ಸಾಮ್ರಾಜ್ಯಶಾಹಿಯಿಂದ ಮುಕ್ತಗೊಳಿಸಲಾಯಿತು ಮತ್ತು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾದ ಮತ ಆಧಾರಿತ ವ್ಯವಸ್ಥೆಯಾಗಿ ಪರಿವರ್ತಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಈ ಸಂದರ್ಭದಲ್ಲಿ ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ಹೇಗೆ ಆಚರಿಸಲಾಗುತ್ತದೆ, ಇದರ ಇತಿಹಾಸದ ಕುರಿತ ಹಿನ್ನೋಟ ಇಲ್ಲಿದೆ.

ಇತಿಹಾಸ ಅವಲೋಕನ


ಕಠಿಣ ಹೋರಾಟದ ಬಳಿಕ 1947ರ ಆಗಸ್ಟ್ 15ರಂದು ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರು ಮೊದಲ ಬಾರಿಗೆ ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದರು. ಇದು ಭಾರತದಲ್ಲಿ 200 ವರ್ಷಗಳಷ್ಟು ಹಳೆಯದಾದ ಬ್ರಿಟಿಷರ ಆಳ್ವಿಕೆಯನ್ನು ಅಧಿಕೃತವಾಗಿ ಕೊನೆಗೊಳಿಸಿತು.

ಬ್ರಿಟಿಷ್ ಆಳ್ವಿಕೆಯಲ್ಲಿ ಪ್ರತಿಯೊಬ್ಬ ಭಾರತೀಯನನ್ನು ಗುಲಾಮರಂತೆ ಪರಿಗಣಿಸಲಾಗುತ್ತಿತ್ತು. ವಾಕ್ ಸ್ವಾತಂತ್ರ್ಯ ಇರಲಿಲ್ಲ. ಬ್ರಿಟಿಷ್ ಶಿಬಿರಗಳಲ್ಲಿ ಭಾರತೀಯ ಹೋರಾಟಗಾರರನ್ನು ಕ್ರೌರ್ಯದಿಂದ ನಡೆಸಿಕೊಳ್ಳಲಾಗುತ್ತಿತ್ತು. ರೈತರು ಬೆಳೆಗಳನ್ನು ಬೆಳೆಯಲು ಸಾಧ್ಯವಾಗದೆ ಹಸಿವಿನಿಂದ ಬಳಲುತ್ತಿದ್ದರು ಮತ್ತು ಗಣನೀಯ ಭೂ ತೆರಿಗೆಯನ್ನು ಪಾವತಿಸಬೇಕಾಗಿತ್ತು.


ಇಂತಹ ಪರಿಸ್ಥಿತಿಯಲ್ಲಿ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ಪ್ರಯತ್ನವಿಲ್ಲದೆ ಭಾರತವು ಸ್ವಾತಂತ್ರ್ಯವನ್ನು ಗಳಿಸಲು ಸಾಧ್ಯವಾಗುತ್ತಿರಲಿಲ್ಲ. ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡಲು ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು, ಸುಭಾಷ್ ಚಂದ್ರ ಬೋಸ್, ಮೌಲಾನಾ ಅಬುಲ್ ಕಲಾಂ ಆಜಾದ್, ಸರ್ದಾರ್ ಪಟೇಲ್ ಮತ್ತು ಗೋಪಾಲಬಂಧು ದಾಸ್, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ರಾಮ್ ಪ್ರಸಾದ್ ಬಿಸ್ಮಿಲ್ ಮತ್ತು ಅಶ್ಫಾಕುಲ್ಲಾ ಖಾನ್ ಅವರಂತಹ ಅನೇಕ ನಾಯಕರು ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಪುರುಷರು ಮಾತ್ರವಲ್ಲ ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಹಲವಾರು ಮಹಿಳೆಯರೂ ಮಹತ್ವದ ಪಾತ್ರ ವಹಿಸಿದ್ದಾರೆ. ಸಾವಿತ್ರಿಬಾಯಿ ಫುಲೆ, ಮಹಾದೇವಿ ವರ್ಮಾ, ಕ್ಯಾಪ್ಟನ್ ಲಕ್ಷ್ಮಿ ಸೆಹಗಲ್, ರಾಣಿ ಲಕ್ಷ್ಮೀಬಾಯಿ ಮತ್ತು ಬಸಂತಿ ದೇವಿ ಸೇರಿದಂತೆ ಇನ್ನು ಅನೇಕರು ದೇಶಕ್ಕಾಗಿ ಪ್ರಾಣವನ್ನೇ ಪಣಕ್ಕಿಟ್ಟಿದ್ದರು.

‘ಒಳ್ಳೆಯ’ ಬ್ರಿಟಿಷ್ ಆಡಳಿತಗಾರರೂ ಇದ್ದರು!

ಎಲ್ಲಾ ಬ್ರಿಟಿಷರು ಕೆಟ್ಟವರಾಗಿರಲಿಲ್ಲ. ಕೆಲವರು ಅನೇಕ ಸುಧಾರಣೆಗಳನ್ನು ತಂದಿದ್ದಾರೆ. ಇವರಲ್ಲಿ ವಾರೆನ್ ಹೇಸ್ಟಿಂಗ್ಸ್ ಅವರು ನ್ಯಾಯಾಲಯದ ಸುಧಾರಣೆಗಳನ್ನು ಅಭಿವೃದ್ಧಿಪಡಿಸಿದರು. ಭಾರತೀಯ ರಾಷ್ಟ್ರೀಯತೆಯನ್ನು ಬೆಂಬಲಿಸಿದ ಫ್ರೆಡಾ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪ್ರಾರಂಭಿಸಿದ ಅಲನ್ ಆಕ್ಟೇವಿಯನ್ ಹ್ಯೂಮ್ ಇವರಲ್ಲಿ ಪ್ರಮುಖರು.

ಯಾಕೆ ಸ್ವಾತಂತ್ರ್ಯ ದಿನಾಚರಣೆ?

ಭಾರತವು 200 ವರ್ಷಗಳ ಸುದೀರ್ಘ ಹೋರಾಟದ ಬಳಿಕ ಸ್ವಾತಂತ್ರ್ಯವನ್ನು ಸಾಧಿಸಿತು. 1947ರ ಆಗಸ್ಟ್ 15ರಂದು ಬ್ರಿಟಿಷರಿಂದ ಸಂಪೂರ್ಣ ಸ್ವಾತಂತ್ರ್ಯವನ್ನು ಗಳಿಸಿತು. ಅದಕ್ಕಾಗಿಯೇ ಭಾರತ ಅಥವಾ ವಿದೇಶದಲ್ಲಿ ವಾಸಿಸುವ ಪ್ರತಿಯೊಬ್ಬ ಭಾರತೀಯ ಪ್ರಜೆಯ ಹೃದಯದಲ್ಲಿ ಈ ದಿನವು ಪ್ರಾಮುಖ್ಯತೆಯನ್ನು ಪಡೆದಿದೆ. ಈ ದಿನ ಪ್ರತಿಯೊಬ್ಬ ಭಾರತೀಯನೊಳಗೆ ದೇಶಭಕ್ತಿಯನ್ನು ಉದ್ದೀಪಿಸುತ್ತದೆ. ಪ್ರಸ್ತುತ ಪೀಳಿಗೆಗೆ ತಮ್ಮ ಸ್ವಾತಂತ್ರ್ಯದ ಹಿಂದಿರುವ ವ್ಯಕ್ತಿಗಳ ಹೋರಾಟಗಳನ್ನು ಅರ್ಥಮಾಡಿಕೊಳ್ಳುವಂತೆ ಮಾಡುತ್ತದೆ. ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ಪರಿಚಯಿಸಿಕೊಳ್ಳುವಂತೆ ಮಾಡುತ್ತದೆ.


ಸ್ವಾತಂತ್ರ್ಯ ದಿನಾಚರಣೆಯ ಮಹತ್ವ ಏನು?

ಬ್ರಿಟಿಷರ ಆಳ್ವಿಕೆಯಿಂದ ನಾವು ಮುಕ್ತವಾದ ಬಳಿಕ ಸ್ವಾತಂತ್ರ್ಯ ದಿನವು ದೇಶಕ್ಕೆ ಸಕಾರಾತ್ಮಕ ಐತಿಹಾಸಿಕ ಘಟನೆಯ ಸಾಕ್ಷಿಯಾಗಿದೆ. ಇದು ದೇಶದಾದ್ಯಂತ ವಿವಿಧ ಜಾತಿ. ಧರ್ಮ, ಜನಾಂಗದ ವ್ಯಕ್ತಿಗಳನ್ನು ಒಂದುಗೂಡಿಸುತ್ತದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತದೆ. ಭಾರತದ ಮೂಲಭೂತ ತತ್ವ ಮತ್ತು ಶಕ್ತಿಯನ್ನು ಅರ್ಥಮಾಡಿಸುತ್ತದೆ. ಭಾರತವು ಈ ಭೂಮಿಯ ಮೇಲಿನ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದೆ. ಸ್ವಾತಂತ್ರ್ಯ ದಿನಾಚರಣೆಯು ಪ್ರತಿಯೊಬ್ಬ ಭಾರತೀಯ ಪ್ರಜೆಯ ಜೀವನದಲ್ಲಿ ಒಂದು ಪ್ರಮುಖ ದಿನವಾಗಿದೆ. ಇದು ನಮ್ಮ ಮಾತೃಭೂಮಿಯನ್ನು ಬ್ರಿಟಿಷ್ ಆಳ್ವಿಕೆಯಿಂದ ಮುಕ್ತಗೊಳಿಸಲು ತಮ್ಮ ಜೀವನವನ್ನು ತ್ಯಾಗ ಮಾಡಿದ ಮತ್ತು ಹೋರಾಡಿದ ನಮ್ಮ ಮಹಾನ್ ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪಿಸುತ್ತದೆ.


ಸ್ವಾತಂತ್ರ್ಯ ದಿನದ ಚಟುವಟಿಕೆಗಳು ಏನೇನು?

ತ್ರಿವರ್ಣ ಧ್ವಜಾರೋಹಣ ಸ್ವಾತಂತ್ರ್ಯ ದಿನಾಚರಣೆಯ ಕೇಂದ್ರ ಬಿಂದು. ದೆಹಲಿಯ ಕೆಂಪು ಕೋಟೆಯ ಮೇಲೆ ದೇಶದ ಪ್ರಧಾನಮಂತ್ರಿಯವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಕಳೆದ ವರ್ಷದ ಸರ್ಕಾರದ ಸಾಧನೆಗಳನ್ನು ಕೇಂದ್ರೀಕರಿಸುವ ಭಾಷಣ ಮಾಡುತ್ತಾರೆ.

ಇದನ್ನೂ ಓದಿ: Hindus in Bangla: ಬಾಂಗ್ಲಾದಲ್ಲಿ ಹಿಂದೂ ಆಗಿರುವುದೇ ಅಪರಾಧ; ಕರಾಳ ದಿನ ನೆನಪಿಸಿಕೊಳ್ಳುವ ವಲಸಿಗರು; ವಿಡಿಯೊಗಳಿವೆ

ಇನ್ನೂ ಗಮನಹರಿಸಬೇಕಾದ ವಿಷಯಗಳನ್ನು ಪ್ರಸ್ತಾಪಿಸುತ್ತಾರೆ. ಮತ್ತಷ್ಟು ಅಭಿವೃದ್ಧಿ ಪ್ರಯತ್ನಗಳಿಗೆ ಕರೆ ನೀಡುತ್ತಾರೆ. ಈ ಸಂದರ್ಭದಲ್ಲಿ ವಿದೇಶಿ ಗಣ್ಯರನ್ನು ಸಹ ಆಹ್ವಾನಿಸಲಾಗುತ್ತದೆ.
ಇದೇ ಸಂದರ್ಭದಲ್ಲಿ ಪ್ರಾಣ ತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ. ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲೂ ಆಯಾ ರಾಜ್ಯಗಳ ಮುಖ್ಯಮಂತ್ರಿಗಳು ರಾಷ್ಟ್ರಧ್ವಜ ಹಾರಿಸುತ್ತಾರೆ. ಶಾಲೆ, ಕಾಲೇಜು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲೂ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಗುತ್ತದೆ.

Continue Reading
Advertisement
Paris Olympics 2024
ಪ್ರಮುಖ ಸುದ್ದಿ12 mins ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಸಿಕ್ಕಿದ ಕೋಟಿಗಟ್ಟಲೆ ಬಹುಮಾನಗಳ ವಿವರ ಇಲ್ಲಿದೆ

Government Employees Sports
ಕರ್ನಾಟಕ15 mins ago

Government Employees Sports: ಆ.17ರಿಂದ 19ರವರೆಗೆ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

Uttara Kannada News
ಉತ್ತರ ಕನ್ನಡ24 mins ago

Uttara Kannada News: ʼಹರ್ ಘರ್ ತಿರಂಗಾʼ ಪ್ರಯುಕ್ತ ಉ.ಕ ಜಿಲ್ಲೆಯಾದ್ಯಂತ ಕಾರ್ಯಕ್ರಮ

Tungabhadra Dam
ಕರ್ನಾಟಕ26 mins ago

Tungabhadra Dam: ತುಂಗಭದ್ರಾ ಜಲಾಶಯಕ್ಕೆ ಸಮಾನಾಂತರ ಜಲಾಶಯ ನಿರ್ಮಿಸಲು ಬೊಮ್ಮಾಯಿ ಆಗ್ರಹ

Bengaluru Rain
ಬೆಂಗಳೂರು30 mins ago

Bengaluru Rain: ಕಟ್ಟಡ ನಿರ್ಮಾಣ ತ್ಯಾಜ್ಯ ತೆರವು; ಒಳಚರಂಡಿ, ರಸ್ತೆ ಬದಿ ಚರಂಡಿಗಳ ಸ್ವಚ್ಛತೆಗೆ ಡಿ. ಕೆ. ಶಿವಕುಮಾರ್ ಸೂಚನೆ

Whiten Your Yellow Teeth
ಆರೋಗ್ಯ42 mins ago

Whiten Your Yellow Teeth: ಈ ಆಹಾರಗಳು ನಿಮ್ಮ ಹಲ್ಲುಗಳ ಬಣ್ಣಗೆಡಿಸುತ್ತವೆ ಎನ್ನುವುದು ಗೊತ್ತಿದೆಯೆ?

Part Time Lecturers
ಪ್ರಮುಖ ಸುದ್ದಿ47 mins ago

Part Time Lecturers: ಅರೆಕಾಲಿಕ ಉಪನ್ಯಾಸಕರಿಗೆ ಗುಡ್ ನ್ಯೂಸ್; ಗೌರವಧನದಲ್ಲಿ ಭಾರಿ ಹೆಚ್ಚಳ

Faiz Hameed
ಪ್ರಮುಖ ಸುದ್ದಿ58 mins ago

Faiz Hameed : ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್​​ಐನ ಮಾಜಿ ಮುಖ್ಯಸ್ಥ ಫೈಜ್ ಹಮೀದ್ ಬಂಧನ

Varamahalakshmi Festival 2024
ಫ್ಯಾಷನ್1 hour ago

Varamahalakshmi Festival 2024: ಹಬ್ಬಕ್ಕೆ ಮಾರುಕಟ್ಟೆ ಪ್ರವೇಶಿಸಿವೆ ರೆಡಿಮೇಡ್‌ ವರಮಹಾಲಕ್ಷ್ಮಿ ಮೂರ್ತಿಗಳು!

Paris Olympics 2024
ಪ್ರಮುಖ ಸುದ್ದಿ1 hour ago

Paris Olympics 2024: 6 ಪದಕಗಳನ್ನು ಹೊರತುಪಡಿಸಿ ಪ್ಯಾರಿಸ್​​ ಒಲಿಂಪಿಕ್ಸ್​ನಲ್ಲಿ ಭಾರತದ ಸಾಧನೆಗಳು ಹಲವು…

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ4 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು6 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ6 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌