Viral News : ಪತ್ನಿಯ ಮರ್ಮಾಂಗದೊಳಗೆ ಲಟ್ಟಣಿಗೆ ತುರುಕಿ ಭೀಕರವಾಗಿ ಕೊಂದ ಪತಿ - Vistara News

Latest

Viral News : ಪತ್ನಿಯ ಮರ್ಮಾಂಗದೊಳಗೆ ಲಟ್ಟಣಿಗೆ ತುರುಕಿ ಭೀಕರವಾಗಿ ಕೊಂದ ಪತಿ

Viral News: ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಖಾಸಗಿ ಭಾಗಕ್ಕೆ ಚಪಾತಿ ಮಾಡುವ ಲಟ್ಟಣಿಗೆ ತೂರಿಸಿ ಥಳಿಸಿ ಕೊಂದಿದ್ದಾನೆ. ಆರೋಪಿ ಪತಿ ತನ್ನ ಸಹೋದರರೊಂದಿಗೆ ಸೇರಿ ಪತ್ನಿಯ ಮೇಲೆ ಇಂತಹ ಘೋರ ಕೃತ್ಯ ಎಸಗಿದ್ದಾನೆ. ಮಹಿಳೆಯ ಗುಪ್ತಾಂಗದೊಳಗೆ ಲಟ್ಟಣಿಗೆ ತೂರಿಸಿದ್ದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದು ಬಂದಿದೆ. ಈ ಭೀಕರ ಕೃತ್ಯ ನಾಗರಿಕ ಸಮಾಜವನ್ನು ತಲ್ಲಣಿಸುವಂತಿದೆ.

VISTARANEWS.COM


on

Viral News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಪತಿ ಪತ್ನಿಯ ಮೇಲೆ ದೌರ್ಜನ್ಯ ಎಸಗುವಂತಹ ಘಟನೆಗಳೂ ವರದಿಯಾಗುತ್ತಲೇ ಇರುತ್ತವೆ. ಕುಡಿದ ಮತ್ತಿನಲ್ಲಿ, ವರದಕ್ಷಿಣೆಗಾಗಿ ಪತ್ನಿಗೆ ಚಿತ್ರಹಿಂಸೆ ನೀಡುವ ಪತಿಮಹಾಶಯರು ಅನೇಕರಿದ್ದಾರೆ. ಆದರೆ ಉತ್ತರ ಪ್ರದೇಶದಲ್ಲಿ ಒಬ್ಬ ವ್ಯಕ್ತಿ ಕುಡಿದ ಮತ್ತಿನಲ್ಲಿ ಪತ್ನಿಯನ್ನು ಬಹಳ ಕ್ರೂರವಾಗಿ ಕೊಲೆ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಪಟ್ಟ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral News)ಆಗಿ ಜನರನ್ನು ಬೆಚ್ಚಿಬೀಳಿಸಿದೆ.

ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಗುಪ್ತಾಂಗದೊಳಗೆ ಚಪಾತಿ ಮಾಡುವ ಲಟ್ಟಣಿಗೆ ತೂರಿಸಿ ಥಳಿಸಿ ಕೊಂದಿದ್ದಾನೆ. ಆರೋಪಿ ಪತಿ ತನ್ನ ಸಹೋದರರೊಂದಿಗೆ ಸೇರಿ ಪತ್ನಿಯ ಮೇಲೆ ಇಂತಹ ಘೋರ ಕೃತ್ಯ ಎಸಗಿದ್ದಾನೆ. ಮಹಿಳೆಯ ಖಾಸಗಿ ಭಾಗಗಳ ಒಳಗೆ ಚಪಾತಿ ಮಾಡುವ ಲಟ್ಟಣಿಗೆ ತೂರಿಸಿದ್ದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದು ಬಂದಿದೆ. ಹಲ್ಲೆಯಿಂದಾಗಿ ಆಕೆಯ ದೇಹದಾದ್ಯಂತ ಅನೇಕ ಗಾಯಗಳ ಗುರುತುಗಳು ಸಹ ಇದ್ದವು. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಲಟ್ಟಣಿಗೆ ಮಹಿಳೆಯ ಕರುಳಿನವರೆಗೂ ತಲುಪಿ ಹಾನಿಗೊಳಿಸಿದ್ದರಿಂದ ಆಕೆ ಸಾವನಪ್ಪಿದ್ದಾಳೆ ಎಂಬುದಾಗಿ ತಿಳಿಸಿದ್ದಾರೆ.

ಆರೋಪಿ ಪತಿಯನ್ನು ಸುರ್ಜೀತ್ ಎಂದು ಗುರುತಿಸಲಾಗಿದ್ದು, ಸೋಮವಾರ (ಆಗಸ್ಟ್ 5)ರಂದು ರಾತ್ರಿ ತನ್ನ 28 ವರ್ಷದ ಪತ್ನಿ ರೇಷ್ಮಾ ಅವರೊಂದಿಗೆ ಜಗಳವಾಡಿದ್ದಾನೆ. ಕುಡಿದ ಮತ್ತಿನಲ್ಲಿದ್ದ ಆರೋಪಿ ಮೊದಲು ರೇಷ್ಮಾಳನ್ನು ಕಟ್ಟಿಹಾಕಿ ತನ್ನ ಸಹೋದರರೊಂದಿಗೆ ಮನೆಯಲ್ಲಿ ಥಳಿಸಿದ್ದಾನೆ. ಇದರಿಂದ ಆಕೆ ಸಾವನಪ್ಪಿದ್ದಾಳೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಮರಣೋತ್ತರ ಪರೀಕ್ಷೆಯ ಬಳಿಕ ಆತನ ಘೋರ ಕೃತ್ಯ ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿದ್ದ ಆರೋಪಿ ತನ್ನ ಹೆಂಡತಿಯ ಖಾಸಗಿ ಭಾಗಗಳಿಗೆ ಲಟ್ಟಣಿಗೆ ಹಾಕಿ ಚಿತ್ರಹಿಂಸೆ ನೀಡಿ ಅವಳನ್ನು ಕಚ್ಚಿ ಮತ್ತು ಬೆಲ್ಟ್‌ನಿಂದ ಹೊಡೆದು ಕೊಂದಿದ್ದಾನೆ ಎಂಬುದು ತಿಳಿದು ಬಂದಿದೆ.

ವರದಿ ಪ್ರಕಾರ, ಆರೋಪಿ ಸುರ್ಜೀತ್ 10 ವರ್ಷಗಳ ಹಿಂದೆ ಸಂತ್ರಸ್ತೆ ರೇಷ್ಮಾಳನ್ನು ಮದುವೆಯಾಗಿದ್ದ. ಅವರು ಆಗಾಗ ಜಗಳವಾಡುತ್ತಿದ್ದರು. ಆದರೆ, ಸೋಮವಾರ (ಆಗಸ್ಟ್ 5) ರಾತ್ರಿ, ಸುರ್ಜೀತ್ ಕುಡಿದ ಅಮಲಿನಲ್ಲಿ ಮನೆಗೆ ಬಂದು ತನ್ನ ಪತ್ನಿ ರೇಷ್ಮಾಳೊಂದಿಗೆ ಜಗಳವಾಡಿ, ನಂತರ ಆಕೆಯನ್ನು ಥಳಿಸಿ ಚಿತ್ರಹಿಂಸೆ ನೀಡುವ ಮೂಲಕ ಇಂತಹ ಘೋರ ಕೃತ್ಯ ಎಸಗಿದ್ದಾನೆ ಎಂದು ವರದಿಯಾಗಿದೆ. ಆತನ ಕ್ರೌರ್ಯವನ್ನು ಕಂಡು ಜನರು ಹಾಗೂ ಪೊಲೀಸರು ಬೆಚ್ಚಿಬಿದ್ದಿದ್ದಾರೆ.

ಇದನ್ನೂ ಓದಿ:  ಕಂಠ ಪೂರ್ತಿ ಕುಡಿದ ಪಿಯು ಹುಡುಗನ ಕಾರು ಚಾಲನೆ; ಜೀವ ಕಳೆದುಕೊಂಡ ಅಮಾಯಕ
ಸುರ್ಜೀತ್ ಹಾಗೂ ಆತನ ಇಬ್ಬರು ಸಹೋದರರು ಸಹ ತನ್ನ ಸಹೋದರಿಯನ್ನು ಥಳಿಸಿ ಚಿತ್ರಹಿಂಸೆ ನೀಡುವಲ್ಲಿ ಭಾಗಿಯಾಗಿದ್ದಾರೆ ಎಂದು ರೇಷ್ಮಾ ಸಹೋದರ ಅವಧೇಶ್ ಆರೋಪಿಸಿದ್ದಾರೆ. ರೇಷ್ಮಾ ಸಹೋದರ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಇತರರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Pralhad Joshi: ಪ್ರತಿ ಜಿಲ್ಲೆಗೊಂದು ‘ಮಾದರಿ ಸೌರ ಗ್ರಾಮ’ ಅನುಷ್ಠಾನಕ್ಕೆ ಕ್ರಮ; ಪ್ರಲ್ಹಾದ್‌ ಜೋಶಿ

Pralhad Joshi: ಪಿಎಂ ಸೂರ್ಯ ಘರ್ ಯೋಜನೆಯಡಿ ಪ್ರತಿ ಜಿಲ್ಲೆಗೊಂದು ‘ಮಾದರಿ ಸೌರ ಗ್ರಾಮ’ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿರುವ ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ, ಮಾದರಿ ಸೌರ ಗ್ರಾಮ ಅನುಷ್ಠಾನಕ್ಕೆ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದಿಂದ ಕಾರ್ಯಾಚರಣೆ ಮಾರ್ಗಸೂಚಿ ಸಹ ಬಿಡುಗಡೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

VISTARANEWS.COM


on

Pralhad Joshi
Koo

ನವದೆಹಲಿ: ಪಿಎಂ ಸೂರ್ಯ ಘರ್ ಯೋಜನೆಯಡಿ ಪ್ರತಿ ಜಿಲ್ಲೆಗೊಂದು ‘ಮಾದರಿ ಸೌರ ಗ್ರಾಮ’ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ. ಮಾದರಿ ಸೌರ ಗ್ರಾಮ ಅನುಷ್ಠಾನಕ್ಕೆ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದಿಂದ ಕಾರ್ಯಾಚರಣೆ ಮಾರ್ಗಸೂಚಿ ಸಹ ಬಿಡುಗಡೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Tungabhadra Dam: ತುಂಗಭದ್ರಾ ಜಲಾಶಯಕ್ಕೆ ಸಮಾನಾಂತರ ಜಲಾಶಯ ನಿರ್ಮಿಸಲು ಬೊಮ್ಮಾಯಿ ಆಗ್ರಹ

800 ಕೋಟಿ ರೂ. ನಿಗದಿ

ದೇಶಾದ್ಯಂತ ಪ್ರತಿ ಜಿಲ್ಲೆಗೆ ಒಂದು ಮಾದರಿ ಸೌರ ಗ್ರಾಮವನ್ನು ರಚಿಸಲು ಒತ್ತು ನೀಡಿದ್ದು, ಇದಕ್ಕಾಗಿ ಒಟ್ಟು ರೂ. 800 ಕೋಟಿ ಆರ್ಥಿಕ ವೆಚ್ಚವನ್ನು ನಿಗದಿಪಡಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಮಾದರಿ ಗ್ರಾಮಕ್ಕೆ 1 ಕೋಟಿ ನೆರವು

ಸೌರ ಮಾದರಿ ಗ್ರಾಮದಲ್ಲಿ ಪ್ರತಿ ಜಿಲ್ಲೆಯ ವಿಜೇತ ಗ್ರಾಮವು ಕೇಂದ್ರದಿಂದ ಹಣಕಾಸು ನೆರವಾಗಿ ರೂ. 1 ಕೋಟಿ ಅನುದಾನ ಪಡೆಯುತ್ತದೆ ಎಂದು ಮಾಹಿತಿ ನೀಡಿರುವ ಸಚಿವ ಪ್ರಲ್ಹಾದ್‌ ಜೋಶಿ, ಸೌರಶಕ್ತಿ ಅಳವಡಿಕೆಯನ್ನು ಉತ್ತೇಜಿಸುವ ಮತ್ತು ಗ್ರಾಮ ಸಮುದಾಯಗಳನ್ನು ಸ್ವಾವಲಂಬಿಯಾಗಿಸುವ ನಿಟ್ಟಿನಲ್ಲಿ ಈ ಹೆಜ್ಜೆ ಇರಿಸಿ ಮಾದರಿ ಸೌರ ಗ್ರಾಮ ರಚಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ.

ಸೌರ ಮೇಲ್ಛಾವಣಿಯ ಸೂರ್ಯ ಘರ್ ಯೋಜನೆ 75,021 ಕೋಟಿ ರೂ. ವೆಚ್ಚವನ್ನು ಹೊಂದಿದ್ದು, 2026-27ರ ಆರ್ಥಿಕ ವರ್ಷದವರೆಗೆ ಅನ್ವಯಿಸಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಮಾರ್ಗಸೂಚಿ ವಿವರ

ಮಾದರಿ ಸೌರ ಗ್ರಾಮವೆಂದು ಪರಿಗಣಿಸಲು, ಗ್ರಾಮವು 5,000 (ವಿಶೇಷ ವರ್ಗದ ರಾಜ್ಯಗಳಿಗೆ 2,000) ಜನಸಂಖ್ಯೆಯುಳ್ಳ ಕಂದಾಯ ಗ್ರಾಮವಾಗಿರಬೇಕು.

ಆಯ್ಕೆ ಪ್ರಕ್ರಿಯೆ ಸ್ಪರ್ಧಾತ್ಮಕವಾಗಿದ್ದು, ಅಲ್ಲಿ ಜಿಲ್ಲಾ ಮಟ್ಟದ ಸಮಿತಿಯು (DLC) ಸಂಭಾವ್ಯ ಅಭ್ಯರ್ಥಿಯ ಘೋಷಣೆಯ ನಂತರ 6 ತಿಂಗಳ ನಂತರ ಸ್ಥಾಪಿಸಲಾದ ಒಟ್ಟಾರೆ ವಿತರಿಸಿದ ನವೀಕರಿಸಬಹುದಾದ ಶಕ್ತಿ (RE) ಸಾಮರ್ಥ್ಯದ ಮೇಲೆ ಗ್ರಾಮಗಳನ್ನು ಮೌಲ್ಯಮಾಪನ ಮಾಡಲಾಗುತ್ತದೆ.

ಅತಿ ಹೆಚ್ಚು ಆರ್‌ಇ ಸಾಮರ್ಥ್ಯ ಹೊಂದಿರುವ ಪ್ರತಿ ಜಿಲ್ಲೆಯ ವಿಜೇತ ಗ್ರಾಮಕ್ಕೆ ರೂ.1 ಕೋಟಿ ಕೇಂದ್ರ ಹಣಕಾಸು ನೆರವು ಸಿಗಲಿದೆ.

ಇದನ್ನೂ ಓದಿ: Namma Metro: ಹಸಿರು ಮಾರ್ಗದಲ್ಲಿ ಆ.13ರಿಂದ 15ರವರೆಗೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

ಈ ಯೋಜನೆಯ ಅನುಷ್ಠಾನವನ್ನು ರಾಜ್ಯ/UT ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಏಜೆನ್ಸಿಯು ಜಿಲ್ಲಾ ಮಟ್ಟದ ಸಮಿತಿಯ (DLC) ಮೇಲ್ವಿಚಾರಣೆಯಲ್ಲಿ ಮಾಡುತ್ತದೆ. ಆಯ್ದ ಗ್ರಾಮಗಳು ಸೌರಶಕ್ತಿ-ಚಾಲಿತ ಸಮುದಾಯಗಳಿಗೆ ಪರಿಣಾಮಕಾರಿಯಾಗಿ ಪರಿವರ್ತನೆಯಾಗುವುದನ್ನು ಖಚಿತಪಡಿಸುತ್ತದೆ ಮತ್ತು ದೇಶದಾದ್ಯಂತ ಇತರ ಹಳ್ಳಿಗಳಿಗೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತದೆ.

Continue Reading

ಕರ್ನಾಟಕ

CM Siddaramaiah: 6000ಕ್ಕೂ ಹೆಚ್ಚು ಗ್ರಂಥಾಲಯ ಮೇಲ್ಚಿಚಾರಕರು ಕನಿಷ್ಠ ವೇತನ ವ್ಯಾಪ್ತಿಗೆ; ಸಿದ್ದರಾಮಯ್ಯ ಮಹತ್ವದ ಘೋಷಣೆ

CM Siddaramaiah: ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಗ್ರಂಥ ಪಾಲಕರ ದಿನಾಚರಣೆ ಮತ್ತು ಮೇಲ್ವಿಚಾರಕರ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ, ರಾಜ್ಯದಲ್ಲಿ 6599 ಹೊಸ ಗ್ರಾಮ ಗ್ರಂಥಾಲಯ ಕಾರ್ಯಕ್ರಮ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

VISTARANEWS.COM


on

CM Siddaramaiah
Koo

ಬೆಂಗಳೂರು: ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ 6000ಕ್ಕೂ ಹೆಚ್ಚು ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಘೋಷಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಗ್ರಂಥ ಪಾಲಕರ ದಿನಾಚರಣೆ ಮತ್ತು ಮೇಲ್ವಿಚಾರಕರ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ, ರಾಜ್ಯದಲ್ಲಿ 6599 ಹೊಸ ಗ್ರಾಮ ಗ್ರಂಥಾಲಯ ಕಾರ್ಯಕ್ರಮ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಪುಸ್ತಕಗಳು ಒಳ್ಳೆಯ ಸ್ನೇಹಿತನಿದ್ದಂತೆ. ಗ್ರಂಥಾಲಯಗಳಿಗೆ ಹೋಗುವುದು ಅತ್ಯಂತ ಉತ್ತಮ ಹವ್ಯಾಸ. ಗ್ರಾಮಗಳಲ್ಲಿ 6599 ಗ್ರಾಮ‌ಮಟ್ಟದ ಗ್ರಂಥಾಲಯಗಳನ್ಮು ತೆರೆಯುವ ನಿರ್ಧಾರ ಮಾಡಿ ಘೋಷಣೆ ಮಾಡಿದ್ದೇವೆ ಎಂದರು.

ಜ್ಞಾನ ವಿಕಾಸ ಕೇವಲ ಶಾಲಾ ಶಿಕ್ಷಣದಿಂದ ಮಾತ್ರ ಸಾಧ್ಯವಿಲ್ಲ. ಶಾಲೆಗಳ ಹೊರಗೂ ಕಲಿಕೆ ಅಗತ್ಯ. ಸಾವಿರಾರು ವರ್ಷಗಳ ಕಾಲ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಸಮುದಾಯಗಳಿಗೆ ಅಂಬೇಡ್ಕರ್ ಅವರ ಸಂವಿಧಾನದ ಕಾರಣದಿಂದ ಶಿಕ್ಷಣ ಪಡೆಯುವ ಅವಕಾಶ ಸಿಕ್ಕಿದೆ. ನಾವು 78 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಸ್ವಾತಂತ್ರ್ಯ ಬಂದು ಇಷ್ಡು ವರ್ಷಗಳಾದರೂ ನೂರಕ್ಕೆ ನೂರು ಸಾಕ್ಷರತೆ ಸಾಧ್ಯವಾಗಿಲ್ಲ. ಇದನ್ನು ಸಾಧಿಸುವ ದಿಕ್ಕಿನಲ್ಲಿ ನಾವು ಶ್ರಮಿಸಬೇಕಿದೆ ಎಂದರು.

ಇದನ್ನೂ ಓದಿ: Part Time Lecturers: ಅರೆಕಾಲಿಕ ಉಪನ್ಯಾಸಕರಿಗೆ ಗುಡ್ ನ್ಯೂಸ್; ಗೌರವಧನದಲ್ಲಿ ಭಾರಿ ಹೆಚ್ಚಳ

ಮೌಢ್ಯ, ಕಂದಾಚಾರಗಳು ತೊಲಗಬೇಕಾದರೆ ಓದು ಮುಖ್ಯ. ಮೌಢ್ಯದ ಕಾರಣದಿಂದ ಗ್ರಾಮೀಣ ಜನರ ಬದುಕು ಬಹಳ ಹಿಂದುಳಿಯುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಪ್ರತಿಯೊಬ್ಬ ಯುವಕ, ಯುವತಿಯರು ಹಾಗೂ ಮಕ್ಕಳು ಗ್ರಂಥಾಲಯಗಳ ಸದುಪಯೋಗ ಪಡಿಸಿಕೊಂಡು ಜ್ಞಾನಾರ್ಜನೆ ಮಾಡಬೇಕು. ಇದೇ ಅಂಬೇಡ್ಕರ್ ಅವರ ಕನಸಾಗಿತ್ತು ಎಂದು ಸಿಎಂ ತಿಳಿಸಿದರು.

ಜ್ಞಾನ ಪಡೆಯುವುದು ಎಂದರೆ ಮನುಷ್ಯರಾಗಿ ಬಾಳುವುದು. ಎಲ್ಲಾ ಮಕ್ಕಳೂ ವಿಶ್ವ ಮಾನವರಾಗಿ ಹುಟ್ಟುತ್ತಾರೆ. ಸಾಮಾಜಿಕ ಪ್ರಭಾವದಿಂದ ಬೆಳೆಯುತ್ತಾ ಬೆಳೆಯುತ್ತಾ ಅಲ್ಪ ಮಾನವರಾಗುತ್ತಾರೆ ಎಂದು ಕುವೆಂಪು ಅವರು ಹೇಳಿದ್ದಾರೆ. ಆದ್ದರಿಂದ ಬೆಳೆಯುತ್ತಲೂ ನಾವು ವಿಶ್ವ ಮಾನವರಾಗಿ ಉಳಿಯುವಂತಹ ಪ್ರಯತ್ನ ಮಾಡಬೇಕು. ಆಗ ಮಾತ್ರ ಮಾನವನ ಹುಟ್ಟು ಸಾರ್ಥಕ ಆಗುತ್ತದೆ ಎಂದರು.

ಓದುವ ಹವ್ಯಾಸ ಬೆಳೆಸುವ ಉದ್ದೇಶದಿಂದಲೇ ಗ್ರಾಮ ಮಟ್ಟದಲ್ಲೂ ಉತ್ತಮ ಗ್ರಂಥಾಲಯಗಳನ್ನು ಆರಂಭಿಸುತ್ತಿದೆ ಎಂದು ತಿಳಿಸಿದ ಅವರು, ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಘೋಷಿಸಿದರು.

ಇದನ್ನೂ ಓದಿ: Government Employees Sports: ಆ.17ರಿಂದ 19ರವರೆಗೆ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

ಈ ವೇಳೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ವಿಧಾನ‌ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಉಪಸ್ಥಿತರಿದ್ದರು.

Continue Reading

ದೇಶ

Independence day speech in Kannada: ವಿದ್ಯಾರ್ಥಿಗಳಿಗಾಗಿ ಇಲ್ಲಿದೆ ಸ್ವಾತಂತ್ರ್ಯ ದಿನಾಚರಣೆಯ ಸಿದ್ಧ ಭಾಷಣ!

Independence day speech in Kannada: ಆಗಸ್ಟ್ 15 ದೇಶಾದ್ಯಂತ ಎಲ್ಲರಿಗೂ ಹೊಸ ಉತ್ಸಾಹ, ಸಂತೋಷವನ್ನು ತರುವ ದಿನ. ಯಾಕೆಂದರೆ ಪ್ರತಿ ವರ್ಷದಂತೆ ಮತ್ತೆ ಈ ಬಾರಿಯೂ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿದ್ದೇವೆ. ಇದಕ್ಕಾಗಿ ಸಾಕಷ್ಟು ಸಿದ್ಧತೆಗಳನ್ನು ಪ್ರಾರಂಭಿಸಿದ್ದೇವೆ. ವಿದ್ಯಾರ್ಥಿಗಳಂತೂ ಭಾಷಣ, ಗಾಯನ, ನೃತ್ಯಕ್ಕೆ ಸಿದ್ಧತೆಯಲ್ಲಿ ತೊಡಗಿದ್ದಾರೆ. ಈಗಾಗಲೇ ಶಾಲೆ, ಕಾಲೇಜು ಸೇರಿದಂತೆ ವಿವಿಧೆಡೆ ಭಾಷಣಕ್ಕೆ ಹೆಸರು ನೋಂದಾಯಿಸಿದ್ದರೆ ಇದಕ್ಕಾಗಿ ಎರಡು ಸಿದ್ಧ ಭಾಷಣಗಳು ಇಲ್ಲಿವೆ.

VISTARANEWS.COM


on

By

Independence day speech in Kannada
Koo

ಭಾರತ ಸ್ವಾತಂತ್ರ್ಯ ಪಡೆದ ದಿನವನ್ನು (Independence day speech in Kannada) ಆಗಸ್ಟ್ 15ರಂದು (independence day 2024) ದೇಶಾದ್ಯಂತ ಆಚರಿಸಲು ಸಿದ್ಧತೆ ನಡೆಯುತ್ತಿದೆ. ಈ ದಿನವು ನಮ್ಮ ರಾಷ್ಟ್ರದ ಇತಿಹಾಸದಲ್ಲಿ ಮಹತ್ವದ ಮೈಲುಗಲ್ಲು, ವಸಾಹತುಶಾಹಿ ಆಳ್ವಿಕೆಯಿಂದ ದೇಶದ ವಿಮೋಚನೆಯನ್ನು ಗುರುತಿಸುತ್ತದೆ. ಈ ದಿನ ನಾವು ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದವರನ್ನು ಮತ್ತು ದೇಶಕ್ಕೆ ದಣಿವರಿಯಿಲ್ಲದೆ ಸೇವೆ ಸಲ್ಲಿಸಿದವರನ್ನು ಗೌರವಿಸುತ್ತೇವೆ. ಅವರ ಶೌರ್ಯ ಮತ್ತು ಸಮರ್ಪಣೆ ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡಲಿ ಎಂದು ಆಶಿಸುತ್ತೇವೆ.

78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ನಾವು ಸಜ್ಜಾಗುತ್ತಿರುವಾಗ ಈ ದಿನದ ಮಹತ್ವವನ್ನು ಅರ್ಥಮಾಡಿಕೊಳ್ಳಬೇಕು ಮತ್ತು ನಮ್ಮ ಪೂರ್ವಜರು ಮಾಡಿದ ತ್ಯಾಗವನ್ನು ನೆನಪಿಸಿಕೊಳ್ಳಬೇಕು. ಇದಕ್ಕಾಗಿ ವಿದ್ಯಾರ್ಥಿಗಳಿಗೆ ದೀರ್ಘ ಮತ್ತು ಸಣ್ಣ ಭಾಷಣದ ಸಿದ್ಧ ಪಾಠಗಳು ಇಲ್ಲಿವೆ.


ಸ್ವಾತಂತ್ರ್ಯೋತ್ಸವದ ದಿನ ವಿದ್ಯಾರ್ಥಿಗಳು ಮಾಡಬಹುದಾದ ದೀರ್ಘ ಭಾಷಣ:

ಶುಭೋದಯ ಗುರುಗಳೇ, ಗಣ್ಯ ಅತಿಥಿಗಳೇ ಹಾಗೂ ನನ್ನ ಎಲ್ಲಾ ಆತ್ಮೀಯ ಸಹಪಾಠಿಗಳೇ…

ಪ್ರತಿ ವರ್ಷ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನವನ್ನು ಆಚರಿಸುವುದು ನಮಗೆಲ್ಲ ಸಂಭ್ರಮದ ಕ್ಷಣ. ದೇಶವು ತನ್ನ ಸ್ವಾತಂತ್ರ್ಯ ಮತ್ತು ಸಾರ್ವಭೌಮತ್ವವನ್ನು ಗಳಿಸಿದ ದಿನವನ್ನು ಗೌರವಿಸುವ ಸಲುವಾಗಿ ಈ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸುತ್ತೇವೆ.

ಇಂದು ನಮ್ಮ ರಾಷ್ಟ್ರದ ಇತಿಹಾಸದಲ್ಲಿ ಒಂದು ಮಹತ್ವದ ಸಂದರ್ಭವನ್ನು ಆಚರಿಸಲು ನಾವೆಲ್ಲರೂ ಒಟ್ಟುಗೂಡಿದ್ದೇವೆ. ಬ್ರಿಟಿಷರ ವಸಾಹತುಶಾಹಿ ಆಳ್ವಿಕೆಯ ಅನೇಕ ವರ್ಷಗಳ ಬಳಿಕ ಭಾರತವು ಸ್ವತಂತ್ರ ರಾಷ್ಟ್ರವಾಗಿ ಹೊರಹೊಮ್ಮಿತು. ಅಂದಿನಿಂದ ನಮ್ಮ ದೇಶವು ಕೈಗೊಂಡ ಪ್ರಯಾಣಕ್ಕೆ ಕೃತಜ್ಞತೆಯನ್ನು ಸಲ್ಲಿಸಬೇಕಿದೆ. ಇದು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಸ್ವರಾಜ್ಯವನ್ನು ಸಾಧಿಸುವ ರಾಷ್ಟ್ರದ ಸಂಕಲ್ಪವನ್ನು ಪ್ರತಿನಿಧಿಸುತ್ತದೆ.

ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಸುಭಾಸ್ ಚಂದ್ರ ಬೋಸ್ ಅವರಂತಹ ಪ್ರಮುಖ ನಾಯಕರು ನಮ್ಮ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅಸಹಕಾರ ಚಳವಳಿ, ಉಪ್ಪಿನ ಯಾತ್ರೆ, ಭಾರತ ಬಿಟ್ಟು ತೊಲಗಿ ಚಳವಳಿಗಳು ನಮ್ಮ ಸ್ವಾತಂತ್ರ್ಯಕ್ಕೆ ದಾರಿಮಾಡಿಕೊಟ್ಟ ಕೆಲವು ಮೈಲುಗಲ್ಲುಗಳು.

ಸ್ವಾತಂತ್ರ್ಯ ದಿನವು ಕೇವಲ ರಾಷ್ಟ್ರೀಯ ರಜಾ ದಿನವಲ್ಲ. ಇದು ಪ್ರಜಾಪ್ರಭುತ್ವ, ಏಕತೆ ಮತ್ತು ನ್ಯಾಯದ ತತ್ತ್ವಗಳ ಆಚರಣೆಯಾಗಿದೆ. ರಾಷ್ಟ್ರದ ಸಾರ್ವಭೌಮತ್ವವನ್ನು ಬಿಂಬಿಸಲು ಸ್ವಾತಂತ್ರ್ಯ ದಿನದಂದು ವಿವಿಧ ಸಂಪ್ರದಾಯಗಳನ್ನು ಆಚರಿಸಲಾಗುತ್ತದೆ. ಸಾಮಾನ್ಯ ಚಟುವಟಿಕೆಗಳಲ್ಲಿ ಧ್ವಜಾರೋಹಣ ಸಮಾರಂಭ, ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸುವ ಮೆರವಣಿಗೆ, ಸಾಂಸ್ಕೃತಿಕ ಪ್ರದರ್ಶನ ಸೇರಿವೆ. ಇದು ನಾಗರಿಕರನ್ನು ಏಕತೆ ಮತ್ತು ದೇಶಭಕ್ತಿಯಲ್ಲಿ ಒಟ್ಟುಗೂಡಿಸುವ ದಿನವಾಗಿದೆ. ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರದ ಸ್ವಾತಂತ್ರ್ಯದ ಪ್ರಯಾಣವನ್ನು ಪ್ರತಿಬಿಂಬಿಸುತ್ತದೆ ಮತ್ತು ಉಜ್ವಲ ಭವಿಷ್ಯವನ್ನು ಎದುರು ನೋಡುತ್ತಿದೆ ಎಂಬುದನ್ನು ಸಾರುತ್ತದೆ.

ಎಲ್ಲರೂ ಈ ದಿನವನ್ನು ಬಹಳ ಉತ್ಸಾಹದಿಂದ ಆಚರಿಸುತ್ತಾರೆ. ಜನರು ರಾಷ್ಟ್ರೀಯ ಬಣ್ಣಗಳನ್ನು ಧರಿಸುತ್ತಾರೆ. ಕಟ್ಟಡಗಳನ್ನು ಧ್ವಜ ಮತ್ತು ಬ್ಯಾನರ್‌ಗಳಿಂದ ಅಲಂಕರಿಸುತ್ತಾರೆ. ದೇಶದ ಪರಂಪರೆ ಮತ್ತು ಸಾಧನೆಗಳನ್ನು ಪ್ರದರ್ಶಿಸುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಾರೆ. ಇಂಥ ಚಟುವಟಿಕೆಗಳಲ್ಲಿ ಭಾಗವಹಿಸುವುದೇ ನಮಗೆಲ್ಲ ಹೆಮ್ಮೆಯ ಕ್ಷಣ.

ಸ್ವಾತಂತ್ರ್ಯ ದಿನವು ರಾಷ್ಟ್ರದ ಇತಿಹಾಸದಲ್ಲಿ ಎದುರಾದ ಸವಾಲುಗಳು ಮತ್ತು ವಿಜಯಗಳನ್ನು ನಮಗೆ ನೆನಪಿಸುತ್ತದೆ. ದೇಶದಲ್ಲಿ ಎಲ್ಲರೂ ಒಂದೇ ಎಂಬ ಭಾವನೆ ಮೂಡುವಂತೆ ಮಾಡುತ್ತದೆ. ದೇಶದ ರಕ್ಷಣೆಗಾಗಿ ಒಟ್ಟಾಗುವಂತೆ ಮಾಡುತ್ತದೆ. ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಮತ್ತು ಏಕತೆಯ ತತ್ತ್ವಗಳ ಬಗ್ಗೆ ಯೋಚಿಸುವಂತೆ ಮಾಡುತ್ತದೆ. ಸ್ವಾತಂತ್ರ್ಯ ದಿನವಾದ ಇಂದು ಹಿಂದಿನದನ್ನು ನೆನಪಿಸಿಕೊಳ್ಳೋಣ, ವರ್ತಮಾನವನ್ನು ಪಾಲಿಸಿ ಶಾಂತಿ ಮತ್ತು ಸಮೃದ್ಧಿಯ ಭವಿಷ್ಯಕ್ಕಾಗಿ ಹಾರೈಸೋಣ. ಮತ್ತಷ್ಟು ಸದೃಢ ದೇಶವನ್ನು ಕಟ್ಟಲು ನಾವೆಲ್ಲ ಪಣ ತೊಡೋಣ.

ಜೈ ಹಿಂದ್!


ಸ್ವಾತಂತ್ರ್ಯೋತ್ಸವದ ದಿನ ವಿದ್ಯಾರ್ಥಿಗಳು ಮಾಡಬಹುದಾದ ಸಂಕ್ಷಿಪ್ತ ಭಾಷಣ:

ಶುಭೋದಯ ಗುರುಗಳೇ, ಗಣ್ಯ ಅತಿಥಿಗಳೇ ಮತ್ತು ನನ್ನ ಎಲ್ಲಾ ಆತ್ಮೀಯ ಸಹಪಾಠಿಗಳೇ,

ಪ್ರತಿ ವರ್ಷದಂತೆ ಈ ಬಾರಿಯೂ ನಾವು ಸ್ವಾತಂತ್ರ್ಯ ದಿನವನ್ನು ಅಭಿಮಾನದಿಂದ ಮತ್ತು ಹೆಮ್ಮೆಯಿಂದ ಆಚರಿಸುತ್ತಿದ್ದೇವೆ. ದೇಶವು ತನ್ನ ಸ್ವಾತಂತ್ರ್ಯ ಮತ್ತು ಸಾರ್ವಭೌಮತ್ವವನ್ನು ಗಳಿಸಿದ ಈ ದಿನವನ್ನು ಗೌರವಿಸುವ ಸಲುವಾಗಿ ಅತ್ಯಂತ ಸಂಭ್ರಮದಿಂದ ಈ ದಿನವನ್ನು ಆಚರಿಸಲಾಗುತ್ತದೆ.

ಸ್ವಾತಂತ್ರ್ಯ, ಏಕತೆ ಮತ್ತು ಸಮಾನತೆಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಈ ದಿನವನ್ನು ಗೌರವಿಸಬೇಕಿದೆ. ನಮ್ಮ ದೇಶವನ್ನು ಎಲ್ಲರಿಗೂ ಸೌಹಾರ್ದಯುತ ಸ್ಥಳವನ್ನಾಗಿ ಮಾಡಲು ನಾವು ಶ್ರಮಿಸಬೇಕಿದೆ. ನಮ್ಮ ಪೂರ್ವಜರು ಪ್ರಾರಂಭಿಸಿದ ಪ್ರಯಾಣವನ್ನು ಮುಂದುವರಿಸುವ ಪ್ರತಿಜ್ಞೆಯನ್ನು ನಾವು ಕೈಗೊಳ್ಳಬೇಕಿದೆ.

ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ಸಂಪ್ರದಾಯಗಳನ್ನು ಆಚರಿಸಲು ಈ ವಿಶೇಷ ದಿನದಂದು ನಾವೆಲ್ಲರೂ ಒಂದಾಗುತ್ತೇವೆ. ಇದಕ್ಕಾಗಿ ವಿವಿಧ ಚಟುವಟಿಕೆಗಳ ಮೂಲಕ ನಾವು ನಮ್ಮ ವೈವಿಧ್ಯಮಯ ರಾಷ್ಟ್ರದ ಸೌಂದರ್ಯವನ್ನು ಪ್ರದರ್ಶಿಸುತ್ತೇವೆ. ಈ ಮೂಲಕ ನಾಗರಿಕರಲ್ಲಿ ಸಾಮರಸ್ಯ ಮತ್ತು ಏಕತೆಯನ್ನು ಬೆಳೆಸುವ ಉದ್ದೇಶವಿದೆ.

ಸ್ವಾತಂತ್ರ್ಯ ದಿನಾಚರಣೆ 2024 ಕೇವಲ ಆಚರಣೆಯ ಸಮಯವಲ್ಲ. ಸ್ವತಂತ್ರ ರಾಷ್ಟ್ರದ ನಾಗರಿಕರಾಗಿ ನಮ್ಮ ಕರ್ತವ್ಯಗಳನ್ನು ನೆನಪಿಸುವ ದಿನವಾಗಿದೆ. ನಮ್ಮ ಸ್ವಾತಂತ್ರ್ಯವನ್ನು ಗೌರವಿಸೋಣ. ಅದರ ತತ್ವಗಳನ್ನು ಎತ್ತಿ ಹಿಡಿಯೋಣ. ಎಲ್ಲರಿಗೂ ಉಜ್ವಲವಾದ, ಹೆಚ್ಚು ಒಳಗೊಳ್ಳುವ ಭವಿಷ್ಯಕ್ಕಾಗಿ ಕೆಲಸ ಮಾಡೋಣ.

ಜೈ ಹಿಂದ್!

ಭಾಷಣದ ವಿಷಯಗಳ ಆಯ್ಕೆ ಹೇಗಿರಬೇಕು?

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾಡುವ ದೀರ್ಘ ಭಾಷಣದಲ್ಲಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಅನುಭವಿಸಿದ ಕಷ್ಟಗಳನ್ನು ಹೇಳಬಹುದು. ನಮ್ಮ ದೇಶದಲ್ಲಿ ಏಕತೆ ಮತ್ತು ವೈವಿಧ್ಯತೆಯ ಮಹತ್ವವನ್ನು ತಿಳಿಸಬಹುದು. ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ನಾಗರಿಕರಾಗಿ ನಾವು ಹೊಂದಿರುವ ಕರ್ತವ್ಯಗಳ ಬಗ್ಗೆ ಮಾತನಾಡಬಹುದು. ಈ ಭಾಷಣವು ವಿದ್ಯಾರ್ಥಿಗಳು ತಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಪಡುವಂತೆ ಮತ್ತು ರಾಷ್ಟ್ರದ ಉಜ್ವಲ ಭವಿಷ್ಯಕ್ಕಾಗಿ ಶ್ರಮಿಸುವಂತೆ ಪ್ರೇರೇಪಿಸಬೇಕು.

ಕಿರು ಭಾಷಣದಲ್ಲಿ ದೇಶಭಕ್ತಿ, ಏಕತೆ ಮತ್ತು ರಾಷ್ಟ್ರವನ್ನು ನಿರ್ಮಿಸುವಲ್ಲಿ ಯುವಜನರ ಪಾತ್ರದಂತಹ ಅಗತ್ಯ ವಿಷಯಗಳ ಮೇಲೆ ಬೆಳಕು ಚೆಲ್ಲಬಹುದು. ಸ್ವಾತಂತ್ರ್ಯ ಪಡೆದ ಅನಂತರ ಭಾರತ ಸಾಧಿಸಿದ ಪ್ರಗತಿ ಮತ್ತು ನಾವು ಇನ್ನೂ ಎದುರಿಸುತ್ತಿರುವ ಸವಾಲುಗಳ ಕುರಿತು ಮಾತನಾಡಬಹುದು. ಚಿಕ್ಕ ಭಾಷಣವು ಕೇಳುಗರಲ್ಲಿ ಸ್ಮರಣೀಯವಾದ ಪ್ರಭಾವವನ್ನು ಬಿರುವಂತಿರಬೇಕು.

ಇದನ್ನೂ ಓದಿ: Independence Day 2024: ಈ ಬಾರಿ ಆಚರಿಸುತ್ತಿರುವುದು ಎಷ್ಟನೇ ಸ್ವಾತಂತ್ರ್ಯೋತ್ಸವ? 77 or 78?

ಸ್ವಾತಂತ್ರ್ಯ ದಿನವು ಕೇವಲ ಆಚರಣೆಯಲ್ಲ. ಇದು ಸ್ಮರಣೆ ಮತ್ತು ಪ್ರತಿಬಿಂಬದ ಸಮಯ. ನಮ್ಮ ಸ್ವಾತಂತ್ರ್ಯವನ್ನು ಗೆಲ್ಲಲು ತ್ಯಾಗ ಮಾಡಿದ ಅನೇಕ ಜೀವಗಳನ್ನು ನೆನಪಿಸುತ್ತದೆ. ಈ ದಿನ ನಾವು ಮಾಡುವ ಭಾಷಣಗಳು ವಿದ್ಯಾರ್ಥಿಗಳನ್ನು ಜವಾಬ್ದಾರಿಯುತ ನಾಗರಿಕರಾಗಿ ಸಮಾಜಕ್ಕೆ ಧನಾತ್ಮಕ ಕೊಡುಗೆ ನೀಡಲು ಋಣಿಯಾಗಿರುವಂತೆ ಮಾಡುತ್ತದೆ. ನಾವು ಆನಂದಿಸುತ್ತಿರುವ ಸ್ವಾತಂತ್ರ್ಯಕ್ಕಾಗಿ 2024ರ ಸ್ವಾತಂತ್ರ್ಯ ದಿನವನ್ನು ಹೆಮ್ಮೆ ಮತ್ತು ಕೃತಜ್ಞತೆಯಿಂದ ಆಚರಿಸೋಣ.

Continue Reading

ಶಿಕ್ಷಣ

NIRF 2024 Rank: ದೇಶದ ಟಾಪ್‌ 10 ಮೆಡಿಕಲ್‌ ಕಾಲೇಜುಗಳಲ್ಲಿ ನಿಮ್ಹಾನ್ಸ್‌ ನಂ.4; ಫಾರ್ಮಸಿಯಲ್ಲಿ ರಾಜ್ಯದ 2 ಕಾಲೇಜುಗಳಿಗೆ ಸ್ಥಾನ

ಎನ್‌ಐಆರ್‌ಎಫ್ 2024ರ (NIRF 2024 Rank) ಶ್ರೇಯಾಂಕಗಳನ್ನು ಬಿಡುಗಡೆ ಮಾಡಿದ್ದು, ಹಿಂದಿನ ವರ್ಷದ ಶ್ರೇಯಾಂಕದಂತೆಯೇ ಈ ಬಾರಿಯೂ ಏಮ್ಸ್ ದೆಹಲಿಯು ಭಾರತದ ಅತ್ಯುತ್ತಮ ವೈದ್ಯಕೀಯ ಕಾಲೇಜುಗಳಲ್ಲಿ ಅಗ್ರ ಸ್ಥಾನವನ್ನು ಉಳಿಸಿಕೊಂಡಿದೆ. ಉಳಿದ ಯಾವ ಸಂಸ್ಥೆಗಳು ವೈದ್ಯಕೀಯ, ದಂತ ಕಾಲೇಜುಗಳು ಮತ್ತು ಔಷಧಾಲಯಗಳು ಟಾಪ್ ಹತರರೊಳಗಿನ ಸ್ಥಾನದಲ್ಲಿದೆ ಎನ್ನುವ ಕುರಿತು ಮಾಹಿತಿಯಿ ಇಲ್ಲಿದೆ.

VISTARANEWS.COM


on

By

NIRF 2024 Rank
Koo

ದೆಹಲಿಯಲ್ಲಿರುವ ಏಮ್ಸ್ (AIIMS Delhi) ಭಾರತದ ಅತ್ಯುತ್ತಮ ವೈದ್ಯಕೀಯ ಕಾಲೇಜು ಎಂಬುದಾಗಿ ಎನ್‌ಐಆರ್‌ಎಫ್ (The National Institutional Ranking Framework) ಪ್ರಕಟಿಸಿದೆ. ಪಿಜಿಐ ಚಂಡೀಗಢ (PGI Chandigarh) ಮತ್ತು ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜು (Christian Medical College, Vellore) ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನ ಗಳಿಸಿದೆ. ಎನ್‌ಐಆರ್‌ಎಫ್ ನೀಡಿರುವ ಶ್ರೇಯಾಂಕಗಳನ್ನು (NIRF 2024 Rank) ಭಾರತದ ಶಿಕ್ಷಣ ಸಚಿವಾಲಯವು ಇತ್ತೀಚೆಗೆ ಬಿಡುಗಡೆ ಮಾಡಿದೆ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಸೋಮವಾರ ಭಾರತ್ ಮಂಟಪದಲ್ಲಿ ಎನ್‌ಐಆರ್‌ಎಫ್ 2024ರ ಶ್ರೇಯಾಂಕವನ್ನು ಅನಾವರಣಗೊಳಿಸಿದರು. ಹಿಂದಿನ ವರ್ಷದ ಶ್ರೇಯಾಂಕದಂತೆಯೇ ಏಮ್ಸ್ ದೆಹಲಿಯು ಭಾರತದ ಅತ್ಯುತ್ತಮ ವೈದ್ಯಕೀಯ ಕಾಲೇಜುಗಳಲ್ಲಿ ಅಗ್ರ ಸ್ಥಾನವನ್ನು ಉಳಿಸಿಕೊಂಡಿದೆ. ಡೆಂಟಲ್ ಕಾಲೇಜುಗಳಿಗೆ ಸಂಬಂಧಿಸಿದಂತೆ ಚೆನ್ನೈನ ಸವೀತಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಆಂಡ್ ಟೆಕ್ನಿಕಲ್ ಸೈನ್ಸಸ್ ಅಗ್ರ ಶ್ರೇಯಾಂಕವನ್ನು ಪಡೆದುಕೊಂಡಿದೆ. ಹೊಸದಿಲ್ಲಿಯ ಜಾಮಿಯಾ ಹಮ್ದರ್ದ್ ಫಾರ್ಮಸಿಯಲ್ಲಿ ಪ್ರಥಮ ಸ್ಥಾನದಲ್ಲಿದೆ.

ಟಾಪ್ ಐದರ ಸ್ಥಾನದಲ್ಲಿರುವ ಕಾಲೇಜುಗಳು

ವೈದ್ಯಕೀಯ ಕಾಲೇಜು ವಿಭಾಗದಲ್ಲಿ ನವದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್, ಚಂಡೀಗಢದ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ, ವೆಲ್ಲೂರಿನ ಕ್ರಿಶ್ಚಿಯನ್ ವೈದ್ಯಕೀಯ ಕಾಲೇಜು, ಬೆಂಗಳೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್(ನಿಮ್ಹಾನ್ಸ್‌) , ಪುದುಚೇರಿಯ ಜವಾಹರಲಾಲ್ ಇನ್ಸ್ಟಿಟ್ಯೂಟ್ ಆಫ್ ಪೋಸ್ಟ್ ಗ್ರಾಜುಯೇಟ್ ಮೆಡಿಕಲ್ ಎಜುಕೇಶನ್ ಅಂಡ್ ರಿಸರ್ಚ್ ಕ್ರಮವಾಗಿ ಸ್ಥಾನ ಪಡೆದಿವೆ.


ದಂತ ಕಾಲೇಜು ವಿಭಾಗದಲ್ಲಿ ಚೆನ್ನೈನ ಸವೀತಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಅಂಡ್ ಟೆಕ್ನಿಕಲ್ ಸೈನ್ಸಸ್, ಮಣಿಪಾಲದ ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್, ನವದೆಹಲಿಯ ಮೌಲಾನಾ ಆಜಾದ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್, ಲಕ್ನೋದ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯಗಳು, ಪುಣೆಯ ಡಾ. ಡಿ.ವೈ. ಪಾಟೀಲ್ ವಿದ್ಯಾಪೀಠ ಕ್ರಮವಾಗಿ ಸ್ಥಾನ ಪಡೆದಿವೆ.

NIRF 2024 Rank
NIRF 2024 Rank


ಫಾರ್ಮಸಿ ವಿಭಾಗದಲ್ಲಿ ಯಾವ ಕಾಲೇಜು?

ಹತ್ತು ಅತ್ಯುತ್ತಮ ಔಷಧಾಲಯ ವಿಭಾಗದಲ್ಲಿ ನವದೆಹಲಿಯ ಜಾಮಿಯಾ ಹಮ್ದರ್ದ್, ಹೈದರಾಬಾದ್‌ನ
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಎಜುಕೇಶನ್ ಅಂಡ್ ರಿಸರ್ಚ್, ಪಿಲಾನಿಯ
ಬಿರ್ಲಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಸೈನ್ಸ್, ಊಟಿಯ ಜೆಎಸ್ಎಸ್ ಕಾಲೇಜ್ ಆಫ್ ಫಾರ್ಮಸಿ, ಮುಂಬಯಿ ನ ಇನ್ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ, ಮೈಸೂರಿನ ಜೆಎಸ್‌ಎಸ್ ಕಾಲೇಜ್ ಆಫ್ ಫಾರ್ಮಸಿ, ಚಂಡೀಗಢದ ಪಂಜಾಬ್ ವಿಶ್ವವಿದ್ಯಾಲಯ, ಮಣಿಪಾಲದ ಮಣಿಪಾಲ ಕಾಲೇಜ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್, ಮೊಹಾಲಿಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಎಜುಕೇಶನ್ ಅಂಡ್ ರಿಸರ್ಚ್, ಮುಂಬಯಿನ ಎಸ್‌ವಿಕೆಎಂನ ನರ್ಸೀ ಮೊಂಜಿ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್ ಸ್ಥಾನ ಪಡೆದಿದೆ.

ಎನ್‌ಐಆರ್‌ಎಫ್ ಶ್ರೇಯಾಂಕ ಎಂದರೇನು?

ಎನ್‌ಐಆರ್‌ಎಫ್ ಅನ್ನು ಎಂಎಚ್‌ಆರ್‌ಡಿ ಅನುಮೋದಿಸಿದ್ದು, 2015ರ ಸೆಪ್ಟೆಂಬರ್ 29ರಲ್ಲಿ ಇದನ್ನು ಮೊದಲ ಬಾರಿಗೆ ಬಿಡುಗಡೆ ಮಾಡಲಾಗಿದೆ. ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರು ಇದನ್ನು ಪ್ರಾರಂಭಿಸಿದರು. ಇದು ದೇಶಾದ್ಯಂತ ಇರುವ ಶಿಕ್ಷಣ ಸಂಸ್ಥೆಗಳಿಗೆ ಶ್ರೇಯಾಂಕ ನೀಡುತ್ತದೆ.

ಇದನ್ನೂ ಓದಿ: NIRF 2024 Rank: ದೇಶದಲ್ಲೇ ಮದ್ರಾಸ್ ಐಐಟಿ ಬೆಸ್ಟ್; ಬೆಂಗಳೂರಿನ ಐಐಎಸ್‌ಸಿ ನೆಕ್ಸ್ಟ್;‌ ಇಲ್ಲಿದೆ ಪೂರ್ಣ ಪಟ್ಟಿ

ವಿಶ್ವವಿದ್ಯಾನಿಲಯ, ಕಾಲೇಜು, ಸಂಶೋಧನಾ ಸಂಸ್ಥೆ, ಎಂಜಿನಿಯರಿಂಗ್, ನಿರ್ವಹಣೆ, ಔಷಧಾಲಯ, ವೈದ್ಯಕೀಯ, ದಂತ ವೈದ್ಯಕೀಯ, ಕಾನೂನು, ವಾಸ್ತುಶಿಲ್ಪ ಮತ್ತು ಯೋಜನೆ, ಕೃಷಿ ಮತ್ತು ಸಂಬಂಧಿತ ವಲಯಗಳು, ನಾವೀನ್ಯತೆ, ರಾಜ್ಯ ವಿಶ್ವವಿದ್ಯಾಲಯ, ಕೌಶಲ್ಯ ವಿಶ್ವವಿದ್ಯಾಲಯ ಮತ್ತು ಮುಕ್ತ ವಿಶ್ವವಿದ್ಯಾಲಯ ಸೇರಿದಂತೆ ಒಟ್ಟು 16 ವಿವಿಧ ವಿಭಾಗಗಳಿಗೆ ಶ್ರೇಯಾಂಕಗಳನ್ನು ಇದರಲ್ಲಿ ಬಿಡುಗಡೆ ಮಾಡಲಾಗಿದೆ. ಬೋಧನೆ, ಕಲಿಕೆ, ಮತ್ತು ಸಂಪನ್ಮೂಲಗಳು, ಹಾಗೆಯೇ ಸಂಶೋಧನೆ ಮತ್ತು ವೃತ್ತಿಪರ ಅಭ್ಯಾಸ ಮತ್ತು ಪದವಿ ಫಲಿತಾಂಶಗಳ ಆಧಾರದಲ್ಲಿ ಈ ಶ್ರೇಯಾಂಕ ನೀಡಲಾಗಿದೆ.

Continue Reading
Advertisement
ಪ್ರಮುಖ ಸುದ್ದಿ40 mins ago

Train Accident : ಮಧ್ಯಪ್ರದೇಶದಲ್ಲಿ ಹಳಿ ತಪ್ಪಿದ ಪ್ಯಾಸೆಂಜರ್ ರೈಲಿನ ಎರಡು ಬೋಗಿ

Pralhad Joshi
ದೇಶ55 mins ago

Pralhad Joshi: ಪ್ರತಿ ಜಿಲ್ಲೆಗೊಂದು ‘ಮಾದರಿ ಸೌರ ಗ್ರಾಮ’ ಅನುಷ್ಠಾನಕ್ಕೆ ಕ್ರಮ; ಪ್ರಲ್ಹಾದ್‌ ಜೋಶಿ

CM Siddaramaiah
ಕರ್ನಾಟಕ58 mins ago

CM Siddaramaiah: 6000ಕ್ಕೂ ಹೆಚ್ಚು ಗ್ರಂಥಾಲಯ ಮೇಲ್ಚಿಚಾರಕರು ಕನಿಷ್ಠ ವೇತನ ವ್ಯಾಪ್ತಿಗೆ; ಸಿದ್ದರಾಮಯ್ಯ ಮಹತ್ವದ ಘೋಷಣೆ

Independence day speech in Kannada
ದೇಶ1 hour ago

Independence day speech in Kannada: ವಿದ್ಯಾರ್ಥಿಗಳಿಗಾಗಿ ಇಲ್ಲಿದೆ ಸ್ವಾತಂತ್ರ್ಯ ದಿನಾಚರಣೆಯ ಸಿದ್ಧ ಭಾಷಣ!

S Jaishankar's Maldives visit
ಪ್ರಮುಖ ಸುದ್ದಿ1 hour ago

S Jaishankar’s Maldives visit : ಚೀನಾ ವಿರುದ್ಧ ಭಾರತಕ್ಕೆ ರಾಜತಾಂತ್ರಿಕ ಗೆಲುವು, 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟುಕೊಟ್ಟ ಮಾಲ್ಡೀವ್ಸ್​​

Manu Bhaker
ಕ್ರೀಡೆ2 hours ago

Manu Bhaker : ಮದುವೆಯಾಗ್ತೀರಾ ಹೇಗೆ? ನೀರಜ್​ ಚೋಪ್ರಾ- ಮನು ಭಾಕರ್​ ಭೇಟಿಯ ವಿಡಿಯೊ ವೈರಲ್ ಮಾಡಿದ ನೆಟ್ಟಿಗರು

Namma Metro
ನೋಟಿಸ್ ಬೋರ್ಡ್2 hours ago

Namma Metro: ಹಸಿರು ಮಾರ್ಗದಲ್ಲಿ ಆ.13ರಿಂದ 15ರವರೆಗೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

Lakshmi Hebbalkar
ಕರ್ನಾಟಕ2 hours ago

Lakshmi Hebbalkar: ಹಾಲಕೆರೆ ಮಠದ ಬೆಳ್ಳಿ ರಥೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ

NIRF 2024 Rank
ಶಿಕ್ಷಣ2 hours ago

NIRF 2024 Rank: ದೇಶದ ಟಾಪ್‌ 10 ಮೆಡಿಕಲ್‌ ಕಾಲೇಜುಗಳಲ್ಲಿ ನಿಮ್ಹಾನ್ಸ್‌ ನಂ.4; ಫಾರ್ಮಸಿಯಲ್ಲಿ ರಾಜ್ಯದ 2 ಕಾಲೇಜುಗಳಿಗೆ ಸ್ಥಾನ

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಸಿಕ್ಕಿದ ಕೋಟಿಗಟ್ಟಲೆ ಬಹುಮಾನಗಳ ವಿವರ ಇಲ್ಲಿದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ4 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು6 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ6 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌