Faiz Hameed : ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್​​ಐನ ಮಾಜಿ ಮುಖ್ಯಸ್ಥ ಫೈಜ್ ಹಮೀದ್ ಬಂಧನ - Vistara News

ಪ್ರಮುಖ ಸುದ್ದಿ

Faiz Hameed : ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್​​ಐನ ಮಾಜಿ ಮುಖ್ಯಸ್ಥ ಫೈಜ್ ಹಮೀದ್ ಬಂಧನ

Faiz Hameed :

VISTARANEWS.COM


on

Faiz Hameed
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಸ್ಲಾಮಾಬಾದ್: ವಸತಿ ಯೋಜನೆ ಹಗರಣದಲ್ಲಿ ಸಿಲುಕಿಕೊಂಡಿರುವ ಪಾಕಿಸ್ತಾನದ ಗುಪ್ತಚರ ಸಂಸ್ಥೆಯಾಗಿರುವ ಐಎಸ್​ಐ ಮಾಜಿ ಲೆಫ್ಟಿನೆಂಟ್ ಜನರಲ್ ಫೈಜ್ ಹಮೀದ್ (Faiz Hameed) ಅವರನ್ನು ಪಾಕ್​ನ ಮಿಲಿಟರಿ ಬಂಧಿಸಿದೆ. ಪಾಕಿಸ್ತಾನ ಸೇನೆ ಸೋಮವಾರ ಈ ಮಾಹಿತಿಯನ್ನು ಪ್ರಕಟಿಸಿದೆ. ಪಾಕ್​ ಸುಪ್ರಿಂ ಕೋರ್ಟ್​​ ಆದೇಶಗಳಿಗೆ ಅನುಸಾರವಾಗಿ ಅವರನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದೆ.

ಟಾಪ್ ಸಿಟಿ ವಸತಿ ಯೋಜನೆಯಲ್ಲಿ ಮಾಜಿ ಅಧಿಕಾರಿ ಲೆಫ್ಟಿನೆಂಟ್ ಜನರಲ್ ಫೈಜ್ ಹಮೀದ್ ವಿರುದ್ಧ ಮಾಡಲಾದ ಆರೋಪಗಳ ನಿಖರತೆ ಪತ್ತೆ ಹಚ್ಚಲು ಪಾಕಿಸ್ತಾನ ಸೇನೆಯು ವಿವರ ವಿಚಾರಣೆ ಕೈಗೊಂಡಿದೆ ಎಂದು ಸೇನೆಯ ಮಾಧ್ಯಮ ವಿಭಾಗವಾದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಪರಿಣಾಮವಾಗಿ, ಪಾಕಿಸ್ತಾನ ಸೇನಾ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಲೆಫ್ಟಿನೆಂಟ್ ಜನರಲ್ ಫೈಜ್ ಹಮೀದ್ ವಿರುದ್ಧ ಸೂಕ್ತ ಶಿಸ್ತು ಕ್ರಮ ಪ್ರಾರಂಭಿಸಲಾಗಿದೆ” ಎಂದು ಅದು ಹೇಳಿದೆ.

ನಿವೃತ್ತಿಯ ನಂತರ ಪಾಕಿಸ್ತಾನ ಸೇನಾ ಕಾಯ್ದೆಯ ಉಲ್ಲಂಘನೆಯ ಅನೇಕ ಆರೋಪಗಳು ಅವರ ಮೇಲಿವೆ. ಫೀಲ್ಡ್ ಜನರಲ್ ಕೋರ್ಟ್ ಮಾರ್ಷಲ್ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಮತ್ತು ಲೆಫ್ಟಿನೆಂಟ್ ಜನರಲ್ ಫೈಜ್ ಹಮೀದ್ ಅವರನ್ನು ಮಿಲಿಟರಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಮುಖ್ಯಸ್ಥರ ವಿರುದ್ಧ ಅಧಿಕಾರ ದುರುಪಯೋಗದ ಆರೋಪದ ಬಗ್ಗೆ ತನಿಖೆ ನಡೆಸಲು ಮಿಲಿಟರಿ ಏಪ್ರಿಲ್ನಲ್ಲಿ ವಿಚಾರಣಾ ಸಮಿತಿಯನ್ನು ರಚಿಸಿದೆ.

ಫೈಜ್ ಹಮೀದ್ ಯಾರು?

ಲೆಫ್ಟಿನೆಂಟ್ ಜನರಲ್ (ನಿವೃತ್ತ) ಹಮೀದ್ ಅವರು ಜೂನ್ 2019 ರಿಂದ ಅಕ್ಟೋಬರ್2021 ರವರೆಗೆ ಗುಪ್ತಚರ ಸಂಸ್ಥೆಯ ಮಹಾನಿರ್ದೇಶಕರಾಗಿ ನೇತೃತ್ವ ವಹಿಸಿದ್ದರು. ಈ ವೇಳೆ ಅವರು ಪ್ರಭಾವಿ ಅಧಿಕಾರಿ ಎಂದು ಪರಿಗಣಿಸಲಾಗಿತ್ತು.

ಹಮೀದ್ ಅವರನ್ನು ಆಗಿನ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಆಪ್ತರೆಂದು ಪರಿಗಣಿಸಲಾಗಿದೆ. ಅವರು ಅವರನ್ನು ಮುಂದಿನ ಪಾಕಿಸ್ತಾನ ಸೇನಾ ಮುಖ್ಯಸ್ಥರನ್ನಾಗಿ ನೇಮಿಸಲು ಬಯಸಿದ್ದರು.

ಹಕ್ಕಾನಿ ನೆಟ್ವರ್ಕ್​​ನ​ ಸಿರಾಜುದ್ದೀನ್ ಹಕ್ಕಾನಿ ಮತ್ತು ಮುಲ್ಲಾ ಯಾಕೂಬ್ ನೇತೃತ್ವದ ತಾಲಿಬಾನ್ ನಡುವಿನ ಸಂಧಾನ ನಡೆಸುವ ಮೂಲಕ ಫೈಜ್ ಹಮೀದ್ ಹೆಸರುವಾಸಿಯಾಗಿದ್ದರು.

ಇದನ್ನೂ ಓದಿ: Hindenburg Report : ಭಾರತೀಯ ಷೇರು ಮಾರುಕಟ್ಟೆಗೆ ಘಾಸಿ ಮಾಡುವ ಸಂಚು ವಿಫಲ; ಠುಸ್​ ಆದ ಹಿಂಡೆನ್​ಬರ್ಗ್ ವರದಿ

ಅವರ ಅಧಿಕಾರಾವಧಿಯಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡಿತ್ತು. ಆಗಸ್ಟ್ 15, 2021 ರಂದು ಯುನೈಟೆಡ್ ಸ್ಟೇಟ್ಸ್ ನಿರ್ಗಮನವನ್ನು ಕಂಡಿತು. ಅವರ ನೇತೃತ್ವದ ಐಎಸ್ಐ ಅಧಿಕಾರವನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ತಾಲಿಬಾನ್​​ಗೆ ಬೆಂಬಲಿಸಿದೆ ಎಂದು ನಂಬಲಾಗಿದೆ.

ತಾಲಿಬಾನ್ ಅಧಿಕಾರ ವಹಿಸಿಕೊಂಡ ಒಂದು ತಿಂಗಳ ನಂತರ ಹಮೀದ್ ಕಾಬೂಲ್​ಗೆ ಭೇಟಿ ನೀಡಿದ್ದರು. ಅಮೆರಿಕ ತೆರಳಿದ ನಂತರ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚಿಸಿದ್ದರು. ಐಎಸ್ಐನಲ್ಲಿ ಕೆಲಸ ಮಾಡುವ ಮೊದಲು, ಅವರು ರಾವಲ್ಪಿಂಡಿಯ ಜನರಲ್ ಆರ್ಮಿ ಪ್ರಧಾನ ಕಚೇರಿಯಲ್ಲಿ ಅಡ್ಜುಟಂಟ್ ಜನರಲ್ ಆಗಿ ಸೇವೆ ಸಲ್ಲಿಸಿದರು. ನಿವೃತ್ತರಾಗುವ ಮೊದಲು ಪೇಶಾವರ ಮತ್ತು ಬಹವಾಲ್ಪುರ ಘಟಕಗಳಲ್ಲಿ ಕಾರ್ಪ್ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದಾರೆ.

    ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
    ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
    Continue Reading
    Click to comment

    Leave a Reply

    Your email address will not be published. Required fields are marked *

    ಕ್ರೀಡೆ

     Emmanuel Macron : ಒಲಿಂಪಿಕ್ಸ್​ಗೆ ಆತಿಥ್ಯ ವಹಿಸುವ ಭಾರತದ ಉತ್ಸಾಹಕ್ಕೆ ಬೆಂಬಲ ನೀಡಿದ ಫ್ರಾನ್ಸ್​ ಪ್ರಧಾನಿ ಎಮ್ಯಾನುಯೆಲ್ ಮ್ಯಾಕ್ರೋನ್

    Emmanuel Macron : ಭಾರತ ಮತ್ತು ಈಜಿಪ್ಟ್ ಎರಡೂ ಈ ಹಿಂದೆ ಒಲಿಂಪಿಕ್ಸ್ ಅನ್ನು ಆಯೋಜಿಸಿಲ್ಲ/ ಎರಡೂ ದೇಶಗಳು ತಮ್ಮ ಕ್ರೀಡಾ ಸಂಸ್ಕೃತಿಯನ್ನು ಅಭಿವೃದ್ಧಿಪಡಿಸಲು ಪ್ರಯತ್ನಿಸುತ್ತಿರುವುದರಿಂದ ಇದನ್ನು ಆದ್ಯತಾ ಕ್ರಮವೆಂದು ಲೆಕ್ಕಹಾಕಿದೆ. ಒಲಿಂಪಿಕ್ಸ್ ಆತಿಥ್ಯ ವಹಿಸುವುದು ತೀವ್ರ ಸ್ಪರ್ಧೆಯಾಗಿದೆ ಎಂದು ಒಪ್ಪಿಕೊಂಡ ಅವರು, ಭಾರತವು ತನ್ನ ಸಾಮರ್ಥ್ಯವನ್ನು ಕಡೆಗಣಿಸಬಾರದು ಎಂದರು. 2024ರ ಒಲಿಂಪಿಕ್ಸ್​ಗೆ ಬಿಡ್ ಮಾಡುವಾಗ ಅಮೆರಿಕದೊಂದಿಗಿನ ಸ್ಪರ್ಧೆಯನ್ನು ಅವರು ನೆನಪಿಸಿಕೊಂಡರು.

    VISTARANEWS.COM


    on

    Emmanuel Macron
    Koo

    ಬೆಂಗಳೂರು: ಒಲಿಂಪಿಕ್ ಕ್ರೀಡಾಕೂಟದ ಆತಿಥ್ಯ ವಹಿಸುವ ಭಾರತದ ಸಾಮರ್ಥ್ಯದ ಬಗ್ಗೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ನಂಬಿಕೆ ವ್ಯಕ್ತಪಡಿಸಿದ್ದಾರೆ. ಭಾರತಕ್ಕೆ ಜಾಗತಿಕ ಕ್ರೀಡಾಕೂಟ ಆಯೋಜಿಸುವ ಸಾಮರ್ಥ್ಯವಿದೆ ಎಂದು ಹೇಳಿದ್ದಾರೆ. 2036 ರಲ್ಲಿ ಪ್ರತಿಷ್ಠಿತ ಅಂತರರಾಷ್ಟ್ರೀಯ ಕ್ರೀಡಾಕೂಟದ ಆತಿಥ್ಯ ವಹಿಸುವುದಕ್ಕಾಗಿ ಭಾರತ ಯತ್ನಿಸುತ್ತಿದೆ. ಈ ನಡುವೆ ಜಿಯೋ ಸಿನೆಮಾಗೆ ನೀಡಿದ ಸಂದರ್ಶನದಲ್ಲಿ, ಮ್ಯಾಕ್ರನ್ ಭಾರತದ ಸಾಮರ್ಥ್ಯದ ಬಗ್ಗೆ ತಮ್ಮ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಂದ ಹಾಗೆ 2026ರ ಒಲಿಂಪಿಕ್ಸ್​​ ಭಾರತ ಮತ್ತು ಈಜಿಪ್ಟ್ ಸೇರಿದಂತೆ ಹಲವಾರು ದೇಶಗಳು ಬಿಡ್ ಸಲ್ಲಿಸಿವೆ.

    ಭಾರತ ಮತ್ತು ಈಜಿಪ್ಟ್ ಎರಡೂ ಈ ಹಿಂದೆ ಒಲಿಂಪಿಕ್ಸ್ ಅನ್ನು ಆಯೋಜಿಸಿಲ್ಲ. ಎರಡೂ ದೇಶಗಳು ತಮ್ಮ ಕ್ರೀಡಾ ಸಂಸ್ಕೃತಿಯನ್ನು ಅಭಿವೃದ್ಧಿಪಡಿಸಲು ಪ್ರಯತ್ನಿಸುತ್ತಿರುವುದರಿಂದ ಇದನ್ನು ಆದ್ಯತಾ ಕ್ರಮವೆಂದು ಲೆಕ್ಕಹಾಕಿದೆ. ಒಲಿಂಪಿಕ್ಸ್ ಆತಿಥ್ಯ ವಹಿಸುವುದು ತೀವ್ರ ಸ್ಪರ್ಧೆಯಾಗಿದೆ ಎಂದು ಒಪ್ಪಿಕೊಂಡ ಅವರು, ಭಾರತವು ತನ್ನ ಸಾಮರ್ಥ್ಯವನ್ನು ಕಡೆಗಣಿಸಬಾರದು ಎಂದರು. 2024ರ ಒಲಿಂಪಿಕ್ಸ್​ಗೆ ಬಿಡ್ ಮಾಡುವಾಗ ಅಮೆರಿಕದೊಂದಿಗಿನ ಸ್ಪರ್ಧೆಯನ್ನು ಅವರು ನೆನಪಿಸಿಕೊಂಡರು.

    ನಾನು ನಿಮ್ಮ ದೇಶ ಮತ್ತು ನಿಮ್ಮ ದೇಶದ ಭವಿಷ್ಯದ ಬಗ್ಗೆ ಬಲವಾದ ನಂಬಿಕೆ ಹೊಂದಿದ್ದೇನೆ. ನಿಮಗೆ ಒಲಿಂಪಿಕ್​ನಂಥ ಕಾರ್ಯಕ್ರಮಗಳನ್ನು ಆಯೋಜಿಸುವ ಸಾಮರ್ಥ್ಯವಿದೆ. ಇದು ತೀವ್ರ ಸ್ಪರ್ಧೆ ವಿಚಾರ ಎಂದು ನಾನು ಭಾವಿಸುತ್ತೇನೆ. ಆ ಸಂಗತಿಯನ್ನು ಕಡಿಮೆ ಅಂದಾಜು ಮಾಡಬಾರದು. ಏಳು ವರ್ಷಗಳ ಹಿಂದೆ ನಾವು ಲೌಸಾನ್ ಗೆ ಹೋದಾಗ, ನಾವು ಆ ಸಮಯದಲ್ಲಿ ಯುಎಸ್ ನೊಂದಿಗೆ ಸ್ಪರ್ಧಿಸಿದ್ದೆವು. ಬಿಡ್​ಗಾಗಿ ಸ್ಪರ್ಧಿಸುವುದು ಉತ್ತಮ ಸಿದ್ಧತೆ” ಎಂದು ಮಾರ್ಕಾನ್ ಜಿಯೋ ಸಿನೆಮಾಗೆ ತಿಳಿಸಿದರು.

    ಒಲಿಂಪಿಕ್ಸ್​​ ತಯಾರಿ ನಡೆಸುವಲ್ಲಿ ಫ್ರಾನ್ಸ್ ಮತ್ತು ಭಾರತದ ನಡುವಿನ ಸಹಯೋಗದ ಪ್ರಯತ್ನಗಳನ್ನು ಮ್ಯಾಕ್ರನ್ ಎತ್ತಿ ತೋರಿಸಿದರು. ಸಿದ್ಧತೆಗಳಲ್ಲಿ ಸಹಾಯ ಮಾಡಲು ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್​​ ತಾಂತ್ರಿಕ ತಂಡವನ್ನು ವಿನಂತಿಸಿದ್ದಾರೆ. ಭಾರತೀಯ ಅಧಿಕಾರಿಗಳು ತಮ್ಮ ಅನುಭವದಿಂದ ಕಲಿಯಲು ಫ್ರೆಂಚ್ ತಂಡಗಳನ್ನು ಭೇಟಿ ಮಾಡಿದ್ದಾರೆ. ಒಲಿಂಪಿಕ್ಸ್​ಗೆ ಭಾರತದ ಸಂಭಾವ್ಯ ಬಿಡ್ ಅನ್ನು ಬೆಂಬಲಿಸಲು ತಂತ್ರಜ್ಞಾನವನ್ನು ನೀಡುವುದಾಗಿ ಹೇಳಿದರು.

    ಇದಲ್ಲದೆ, ಒಲಿಂಪಿಕ್ಸ್ ಅನ್ನು ಯಶಸ್ವಿಯಾಗಿ ಆಯೋಜಿಸುವಲ್ಲಿ ಕ್ರೀಡಾ ಸಂಸ್ಥೆಗಳು, ಸ್ಥಳೀಯ ಸಮುದಾಯಗಳು ಮತ್ತು ರಾಜ್ಯ ಸೇರಿದಂತೆ ವಿವಿಧ ಮಧ್ಯಸ್ಥಗಾರರ ನಡುವೆ ಏಕತೆಯ ಮಹತ್ವವನ್ನು ಮ್ಯಾಕ್ರನ್ ಒತ್ತಿ ಹೇಳಿದರು. ಕಳೆದ ಏಳು ವರ್ಷಗಳಲ್ಲಿ ಈ ಕಾರ್ಯಕ್ರಮದಲ್ಲಿ ಫ್ರಾನ್ಸ್ ನ ಗಮನಾರ್ಹ ಹೂಡಿಕೆ ಮಾಡಿತ್ತು. ಸಿದ್ಧತೆ ಪ್ರಕ್ರಿಯೆಯಲ್ಲಿ ಉದ್ಭವಿಸುವ ಸವಾಲುಗಳನ್ನು ನಿವಾರಿಸುವಲ್ಲಿ ಸ್ಥಿರತೆ ಮತ್ತು ಬದ್ಧತೆ ನಿರ್ಣಾಯ ಎಂದು ನುಡಿದರು.

    ಇದನ್ನೂ ಓದಿ: Paris Olympics 2024 : ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ಮೋದಿಯಿಂದ ಪ್ಯಾರಿಸ್ ಒಲಿಂಪಿಕ್ಸ್ ಸಾಧಕರಿಗೆ ಆತಿಥ್ಯ

    ನನ್ನ ಪ್ರಕಾರ, ಒಲಿಂಪಿಕ್ ಕ್ರೀಡಾಕೂಟವನ್ನು ಆಯೋಜಿಸಲು ಪ್ರಮುಖವಾದುದು ಸಮಗ್ರತೆ. ಸ್ಥಳೀಯ ಸಮುದಾಯಗಳು, ಸ್ಥಳೀಯ ಕ್ಷೇತ್ರಗಳು ಮತ್ತು ನಿಸ್ಸಂಶಯವಾಗಿ ರಾಜ್ಯಗಳ ನೆರವು ಬೇಕು. ಭದ್ರತೆಯಿಂದ ಸಂಘಟನೆಯವರೆಗೆ ಎಲ್ಲವೂ ವಿಶೇಷ.” ಎಂದು ಮ್ಯಾಕ್ರನ್ ಹೇಳಿದ್ದಾರೆ.

    Continue Reading

    ಪ್ರಮುಖ ಸುದ್ದಿ

    Paris Olympics 2024 : ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ಮೋದಿಯಿಂದ ಪ್ಯಾರಿಸ್ ಒಲಿಂಪಿಕ್ಸ್ ಸಾಧಕರಿಗೆ ಆತಿಥ್ಯ

    Paris Olympics 2024 : ಪ್ಯಾರಿಸ್​ನಲ್ಲಿ ಭಾರತದ ಪದಕ ವಿಜೇತರ ಜತೆ ಪ್ರಧಾನಿ ಫೋನ್ ಮಾಡಿ ಮಾತನಾಡಿದ್ದರು. ವೇದಿಕೆ ಏರಿದ್ದ ಕ್ರೀಡಾಪಟುಗಳಿಗೆ ತಮ್ಮ ಬೆಂಬಲ ವ್ಯಕ್ತಡಪಡಿಸಿದ್ದರು. ಕುಸ್ತಿ ಫೈನಲ್​ನಿಂದ ಅನರ್ಹಗೊಂಡ ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಬೆಂಬಲ ವ್ಯಕ್ತಪಡಿಸಿ ಮೋದಿ ಟ್ವೀಟ್ ಮಾಡಿದ್ದರು. ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತದ ಅಥ್ಲೀಟ್ಗಳು 6 ಪದಕಗಳನ್ನು ಗೆದ್ದಿದ್ದಾರೆ. ಟೋಕಿಯೊದಲ್ಲಿ ನಡೆದ ಹಿಂದಿನ ಒಲಿಂಪಿಕ್ಸ್​ನಲ್ಲಿ ಭಾರತ ಚಿನ್ನ ಸಮೇತ 7 ಪದಕ ಗೆದ್ದಿದ್ದರೆ, ಈ ಬಾರಿ ಭಾರತೀಯ ತಂಡವು 5 ಕಂಚಿನ ಪದಕಗಳು ಮತ್ತು ಒಂದು ಬೆಳ್ಳಿಯೊಂದಿಗೆ ಮರಳಿದೆ.

    VISTARANEWS.COM


    on

    Paris Olympics 2024
    Koo

    ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ (Paris Olympics 2024) ಸ್ಪರ್ಧಿಸಿದ್ದ ಭಾರತದ ಅಥ್ಲೀಟ್​ಗಳ ನಿಯೋಗವನ್ನು ಭೇಟಿಯಾಗಲಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ನಂತರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಪಿಎಂ ಮೋದಿ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ಆಗಸ್ಟ್ 15 ರಂದು ನಡೆಯಲಿರುವ ಸಮಾರಂಭದಲ್ಲಿ 117 ಕ್ರೀಡಾಪಟುಗಳ ಸಂಪೂರ್ಣ ಭಾರತೀಯ ತಂಡ ಭಾಗವಹಿಸುವ ನಿರೀಕ್ಷೆಯಿದೆ. ಬೆಳಗ್ಗಿನ ಕಾರ್ಯಕ್ರಮದ ನಂತರ ಪ್ರಧಾನಿ ಒಲಿಂಪಿಕ್ಸ್​​ನ ಭಾರತಕ್ಕೆ 6 ಪದಕಗಳನ್ನು ಮರಳಿ ತಂದ ಕ್ರೀಡಾಪಟುಗಳನ್ನು ಭೇಟಿ ಮಾಡಲಿದ್ದಾರೆ.

    ಪ್ಯಾರಿಸ್​ನಲ್ಲಿ ಭಾರತದ ಪದಕ ವಿಜೇತರ ಜತೆ ಪ್ರಧಾನಿ ಫೋನ್ ಮಾಡಿ ಮಾತನಾಡಿದ್ದರು. ವೇದಿಕೆ ಏರಿದ್ದ ಕ್ರೀಡಾಪಟುಗಳಿಗೆ ತಮ್ಮ ಬೆಂಬಲ ವ್ಯಕ್ತಡಪಡಿಸಿದ್ದರು. ಕುಸ್ತಿ ಫೈನಲ್​ನಿಂದ ಅನರ್ಹಗೊಂಡ ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಬೆಂಬಲ ವ್ಯಕ್ತಪಡಿಸಿ ಮೋದಿ ಟ್ವೀಟ್ ಮಾಡಿದ್ದರು. ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತದ ಅಥ್ಲೀಟ್ಗಳು 6 ಪದಕಗಳನ್ನು ಗೆದ್ದಿದ್ದಾರೆ. ಟೋಕಿಯೊದಲ್ಲಿ ನಡೆದ ಹಿಂದಿನ ಒಲಿಂಪಿಕ್ಸ್​ನಲ್ಲಿ ಭಾರತ ಚಿನ್ನ ಸಮೇತ 7 ಪದಕ ಗೆದ್ದಿದ್ದರೆ, ಈ ಬಾರಿ ಭಾರತೀಯ ತಂಡವು 5 ಕಂಚಿನ ಪದಕಗಳು ಮತ್ತು ಒಂದು ಬೆಳ್ಳಿಯೊಂದಿಗೆ ಮರಳಿದೆ.

    ಪ್ಯಾರಿಸ್ 2024 ಒಲಿಂಪಿಕ್ಸ್​ನಲ್ಲಿ ಭಾರತದ ಪ್ರದರ್ಶನವು ಸಾಧನೆಗಳು ಮತ್ತು ನಿರಾಶೆಗಳ ಮಿಶ್ರಣವಾಗಿದೆ. ಈ ಒಲಿಂಪಿಕ್ಸ್​ನಲ್ಲಿ ಭಾರತವು 10 ಪದಕಗಳ ಮೈಲುಗಲ್ಲು ದಾಟಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಕೆಲವು ಕ್ರೀಡಾಪಟುಗಳು ನಾಲ್ಕನೇ ಸ್ಥಾನ ಪಡೆದಿದ್ದರಿಂದ ಅದು ಸಾಧ್ಯವಾಗಲಿಲ್ಲ.

    ಟೋಕಿಯೊ 2020 ರಲ್ಲಿ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ನೇತೃತ್ವದ ದೇಶದ ಅಥ್ಲೆಟಿಕ್ಸ್ ತಂಡವು ಗಮನಾರ್ಹ ಹೈಲೈಟ್ ಆಗಿದೆ. ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಬೆಳ್ಳಿಯೊಂದಿಗೆ ಚೋಪ್ರಾ ಅಥ್ಲೆಟಿಕ್ಸ್​​ನಲ್ಲಿ ಭಾರತದ ಏಕೈಕ ಪದಕ ಗೆದ್ದರು, ಒಲಿಂಪಿಕ್ಸ್​​ನಲ್ಲಿ ಅಥ್ಲೆಟಿಕ್ಸ್​​ನಲ್ಲಿ ಎರಡು ಪದಕಗಳನ್ನು ಗೆದ್ದ ಮೊದಲ ಭಾರತೀಯ ಎಂಬ ಇತಿಹಾಸ ನಿರ್ಮಿಸಿದರು.

    ಶೂಟಿಂಗ್ ಸಾಧನೆ

    ಭಾರತದ ಶೂಟಿಂಗ್ ತಂಡವೂ ಗಮನಾರ್ಹ ಪ್ರಗತಿ ಸಾಧಿಸಿದೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮನು ಭಾಕರ್ ಕಂಚಿನ ಪದಕ ಗೆದ್ದರು, ಒಲಿಂಪಿಕ್ ಶೂಟಿಂಗ್ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಸರಬ್ಜೋತ್ ಸಿಂಗ್ ಅವರೊಂದಿಗೆ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಮತ್ತೊಂದು ಪದಕವನ್ನು ಗೆದ್ದಿದ್ದರೆ. ಒಲಿಂಪಿಕ್ಸ್​​ನ ಒಂದು ಆವೃತ್ತಿಯಲ್ಲಿ ಎರಡು ಪದಕಗಳನ್ನು ಗೆದ್ದ ಸ್ವತಂತ್ರ ಭಾರತದ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದರು.

    ಇದನ್ನೂ ಓದಿ: Manu Bhaker : ಮದುವೆಯಾಗ್ತೀರಾ ಹೇಗೆ? ನೀರಜ್​ ಚೋಪ್ರಾ- ಮನು ಭಾಕರ್​ ಭೇಟಿಯ ವಿಡಿಯೊ ವೈರಲ್ ಮಾಡಿದ ನೆಟ್ಟಿಗರು

    ಸ್ಪೇನ್ ತಂಡವನ್ನು 2-1 ಅಂತರದಿಂದ ಮಣಿಸಿದ ಭಾರತ ಹಾಕಿ ತಂಡ ಕಂಚಿನ ಪದಕ ಗೆದ್ದುಕೊಂಡಿತು. 1972ರ ಬಳಿಕ ಇದೇ ಮೊದಲ ಬಾರಿಗೆ ಭಾರತ ಸತತವಾಗಿ ಪದಕಗಳನ್ನು ಗೆದ್ದಿದೆ. ಹರ್ಮನ್ ಪ್ರೀತ್ ಸಿಂಗ್ ಗಳಿಸಿದ ಗೋಲಿನ ನೆರವಿನಿಂದ ಭಾರತ ಒಲಿಂಪಿಕ್ಸ್ ನಲ್ಲಿ ದಾಖಲೆಯ 13ನೇ ಹಾಕಿ ಪದಕ ಜಯಿಸಿದೆ.

    ಟೇಬಲ್ ಟೆನಿಸ್ನಲ್ಲಿ ಮಣಿಕಾ ಬಾತ್ರಾ ಮತ್ತು ಶ್ರೀಜಾ ಅಕುಲಾ ಗಮನಾರ್ಹ ಪ್ರಗತಿ ಸಾಧಿಸಿದ್ದಾರೆ. ಬಾತ್ರಾ ಒಲಿಂಪಿಕ್ ಕ್ರೀಡಾಕೂಟದ ಪ್ರಿ ಕ್ವಾರ್ಟರ್ ಫೈನಲ್ ತಲುಪಿದ ಮೊದಲ ಭಾರತೀಯ ಟೇಬಲ್ ಟೆನಿಸ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರೆ, ಅಕುಲಾ 16 ನೇ ಸುತ್ತು ಪ್ರವೇಶಿಸಿದ್ದರು.

    Continue Reading

    ಪ್ರಮುಖ ಸುದ್ದಿ

    Broadcasting Services Bill : ಸಾರ್ವಜನಿಕರ ಆಕ್ಷೇಪ; ಪ್ರಸಾರ ಸೇವೆಗಳ ಕರಡು ಬಿಲ್​ ವಾಪಸ್​ ಪಡೆದ ಕೇಂದ್ರ ಸರ್ಕಾರ

    Broadcasting Services Bill : ಕರಡು ಮಸೂದೆಯನ್ನು ಸಮಾಲೋಚನೆಗಾಗಿ ನವೆಂಬರ್ 11, 2023 ರಂದು ಸಾರ್ವಜನಿಕ ಡೊಮೈನ್​ನಲ್ಲಿ ಪ್ರಕಟಿಸಲಾಗಿತ್ತು. ಇತ್ತೀಚೆಗೆ, ಕರಡಿನ ಪರಿಷ್ಕೃತ ಆವೃತ್ತಿಯನ್ನು ಕೆಲವು ಆಯ್ದ ಪಾಲುದಾರಿಗೆ “ರಹಸ್ಯವಾಗಿ” ನೀಡಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ತೃಣಮೂಲ ಕಾಂಗ್ರೆಸ್ ಸಂಸದ ಜವಾಹರ್ ಸರ್ಕಾರ್ ಅವರು ರಾಜ್ಯಸಭೆಯಲ್ಲಿ ಈ ವಿಷಯವನ್ನು ಎತ್ತಿದ್ದಾರೆ.

    VISTARANEWS.COM


    on

    Broadcasting Services Bill
    Koo

    ಬೆಂಗಳೂರು: ಈಗಾಗಲೇ ಸಾರ್ವಜನಿಕ ಡೊಮೈನ್​ನಲ್ಲಿ ಪ್ರಕಟಿಸಲಾಗಿರುವ ಉದ್ದೇಶಿತ ಪ್ರಸಾರ ಸೇವೆಗಳ (ನಿಯಂತ್ರಣ) ಮಸೂದೆಯ ಹೊಸ ಕರಡನ್ನು (Broadcasting Services Bill) ವಾಪಸ್ ಪಡೆದು ಹೊಸದನ್ನು ಪ್ರಕಟಿಸಲಾಗುವುದು ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ. ಮಸೂದೆಯ ಕೆಲವು ನಿಬಂಧನೆಗಳು ಆನ್​​ಲೈನ್​ ಕಂಟೆಂಟ್​ ಕ್ರಿಯೇಟರ್​ಗಳಲ್ಲಿ ಕಳವಳ ಹುಟ್ಟುಹಾಕಿದ ನಂತರ ಸರ್ಕಾರ ಕ್ರಮ ಕೈಗೊಂಡಿದೆ. ತಮ್ಮನ್ನು ಒಟಿಟಿ ಅಥವಾ ಡಿಜಿಟಲ್ ಸುದ್ದಿ ಪ್ರಸಾರಕರೊಂದಿಗೆ ಸೇರಿಸಲು ಪ್ರಯತ್ನಿಸಿದ್ದಾರೆ ಎಂದು ಕಂಟೆಂಟ್ ಕ್ರಿಯೇಟರ್​ಗಳು ಆಕ್ಷೇಪ ವ್ಯಕ್ತಪಡಿಸಿದ್ದರು.

    ಪ್ರತಿಕ್ರಿಯೆಯಾಗಿ, ವಿವಿಧ ಸಂಘಗಳಿಂದ ಸೇರಿದಂತೆ ಅನೇಕ ಶಿಫಾರಸುಗಳು, ಕಾಮೆಂಟ್​ಗಳು, ಸಲಹೆಗಳನ್ನು ಸ್ವೀಕರಿಸಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಕರಡು ಮಸೂದೆಯ ಬಗ್ಗೆ ಸಚಿವಾಲಯವು ಪಾಲುದಾರರ ಜತೆ ಸರಣಿ ಸಮಾಲೋಚನೆಗಳನ್ನು ನಡೆಸುತ್ತಿದೆ. ಅಕ್ಟೋಬರ್ 15 ರವರೆಗೆ ಅಭಿಪ್ರಾಯಗಳು ಮತ್ತು ಸಲಹೆಗಳನ್ನು ಕೋರಲು ಹೆಚ್ಚುವರಿ ಸಮಯ ನೀಡಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ. ವಿವರವಾದ ಸಮಾಲೋಚನೆಗಳ ನಂತರ ಹೊಸ ಕರಡು ಪ್ರಕಟಿಸಲಾಗುವುದು ಎಂದು ಅದು ಹೇಳಿದೆ.

    ಕರಡು ಮಸೂದೆಯನ್ನು ಸಮಾಲೋಚನೆಗಾಗಿ ನವೆಂಬರ್ 11, 2023 ರಂದು ಸಾರ್ವಜನಿಕ ಡೊಮೈನ್​ನಲ್ಲಿ ಪ್ರಕಟಿಸಲಾಗಿತ್ತು. ಇತ್ತೀಚೆಗೆ, ಕರಡಿನ ಪರಿಷ್ಕೃತ ಆವೃತ್ತಿಯನ್ನು ಕೆಲವು ಆಯ್ದ ಪಾಲುದಾರಿಗೆ “ರಹಸ್ಯವಾಗಿ” ನೀಡಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ತೃಣಮೂಲ ಕಾಂಗ್ರೆಸ್ ಸಂಸದ ಜವಾಹರ್ ಸರ್ಕಾರ್ ಅವರು ರಾಜ್ಯಸಭೆಯಲ್ಲಿ ಈ ವಿಷಯವನ್ನು ಎತ್ತಿದ್ದಾರೆ.

    ಮಸೂದೆಯ ವಿಷಯಗಳು ಚಲಾವಣೆಯಲ್ಲಿವೆ ಎಂದು ಆರೋಪಿಸಿ ಸಾಮಾಜಿಕ ಮಾಧ್ಯಮದಲ್ಲಿ ಹಲವಾರು ಪೋಸ್ಟ್​ಗಳು ಪ್ರಕಟಗೊಂಡಿವೆ.

    ಹೊಸ ವರ್ಗೀಕರಣ

    ವರದಿಗಳ ಪ್ರಕಾರ, ಪರಿಷ್ಕೃತ ಕರಡು ಮಸೂದೆಯು ಇನ್ಸ್ಟಾಗ್ರಾಮ್ ಇನ್​ಫ್ಲ್ಯುಯೆನ್ಸರ್​ಗಳು ಮತ್ತು ಯೂಟ್ಯೂಬರ್​ಗಳನ್ನು ಅವರ ಬಳಕೆದಾರರ ನೆಲೆಯನ್ನು ವ್ಯಾಖ್ಯಾನಿಸಲು “ಡಿಜಿಟಲ್ ಸುದ್ದಿ ಪ್ರಸಾರಕರು” ಎಂದು ವರ್ಗೀಕರಿಸಲು ಪ್ರಯತ್ನಿಸುತ್ತದೆ. ಕಂಟೆಂಟ್​ ಪರಿಶೀಲನೆಗಾಗಿ ಅವರು ಸರ್ಕಾರದೊಂದಿಗೆ ಪೂರ್ವ ನೋಂದಣಿ ಪಡೆಯಬೇಕಾಗುತ್ತದೆ ಎಂದಿತ್ತು. ಇದು ವಾಕ್ ಸ್ವಾತಂತ್ರ್ಯದ ಬಗ್ಗೆ ಕಳವಳ ಹುಟ್ಟುಹಾಕಿತು.

    ಇದನ್ನೂ ಓದಿ: Train Accident : ಮಧ್ಯಪ್ರದೇಶದಲ್ಲಿ ಹಳಿ ತಪ್ಪಿದ ಪ್ಯಾಸೆಂಜರ್ ರೈಲಿನ ಎರಡು ಬೋಗಿ

    ಈ ಡಿಜಿಟಲ್ ಸುದ್ದಿ ಪ್ರಸಾರಕರು ಒಟಿಟಿ ಪ್ರಸಾರ ಸೇವೆಗಳು ಮತ್ತು ನೋಂದಾಯಿತ ಡಿಜಿಟಲ್ ಮಾಧ್ಯಮದಿಂದ ಪ್ರತ್ಯೇಕವಾಗಿರುತ್ತಾರೆ ಎಂದು ವರದಿಯಾಗಿದೆ. ಯಾವುದೇ ರೀತಿಯ ವಿಷಯವನ್ನು ರಚಿಸುವ ಸ್ವಾತಂತ್ರ್ಯವನ್ನು ಹೊಂದಿರುವ ಒಟಿಟಿ ಪ್ಲಾಟ್​ಫಾರ್ಮ್​ಗಳು ಪ್ರೋಗ್ರಾಂ ಕೋಡ್​ಗೆ ಬದ್ಧವಾಗಿರುತ್ತವೆ ಎಂದು ಮಸೂದೆಯ ಮೊದಲ ಕರಡು ಈಗಾಗಲೇ ಪ್ರಸ್ತಾಪಿಸಿತ್ತು.

    ಕಳೆದ ವಾರ, 90 ಕ್ಕೂ ಹೆಚ್ಚು ಡಿಜಿಟಲ್ ಸುದ್ದಿ ಪ್ರಕಾಶಕರನ್ನು ಪ್ರತಿನಿಧಿಸುವ ಸಂಸ್ಥೆಯಾದ ಡಿಜಿಪಬ್ ನ್ಯೂಸ್ ಇಂಡಿಯಾ ಫೌಂಡೇಶನ್ ಮತ್ತು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಪ್ರತಿನಿಧಿಗಳು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಆಯ್ದ ಪಾಲುದಾರರೊಂದಿಗೆ ಸಮಾಲೋಚನೆಗಳನ್ನು ನಡೆಸಿದೆ. ಡಿಜಿಟಲ್ ಮಾಧ್ಯಮ ಸಂಸ್ಥೆಗಳು ಮತ್ತು ನಾಗರಿಕ ಸಮಾಜದ ಸಂಘಗಳೊಂದಿಗೆ ದೊಡ್ಡ ಚರ್ಚೆಗಳು ಇಲ್ಲಿಯವರೆಗೆ ನಡೆದಿಲ್ಲ ಎಂದು ಹೇಳಿದರು. ಕರಡು ಮಸೂದೆಯ ಪ್ರತಿಗಳನ್ನು ಕೋರಿ ಅವರು ಸಚಿವಾಲಯಕ್ಕೆ ಪತ್ರ ಬರೆದಿದ್ದರು.

    Continue Reading

    ಪ್ರಮುಖ ಸುದ್ದಿ

    Train Accident : ಮಧ್ಯಪ್ರದೇಶದಲ್ಲಿ ಹಳಿ ತಪ್ಪಿದ ಪ್ಯಾಸೆಂಜರ್ ರೈಲಿನ ಎರಡು ಬೋಗಿ

    Train Accident : ಭಾನುವಾರ, ಉತ್ತರ ಪ್ರದೇಶದ ಸೋನ್ಭದ್ರದ ಶಕ್ತಿನಗರ ಪ್ರದೇಶದಲ್ಲಿ ಗೂಡ್ಸ್ ರೈಲಿನ ಎರಡು ವ್ಯಾಗನ್​ಗಳು ಮತ್ತು ಅದರ ಎಂಜಿನ್ ಹಳಿ ತಪ್ಪಿತ್ತು . ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಈ ರೈಲು ಖಾಡಿಯಾದಲ್ಲಿನ ನಾರ್ದರ್ನ್ ಕೋಲ್​ಫೀಲ್ಡ್ ಲಿಮಿಟೆಡ್ (ಎನ್ಸಿಎಲ್) ನಿಂದ ಅನ್ಪಾರಾ ವಿದ್ಯುತ್ ಸ್ಥಾವರಕ್ಕೆ ಕಲ್ಲಿದ್ದಲನ್ನು ಸಾಗಿಸುತ್ತಿತ್ತು.

    VISTARANEWS.COM


    on

    Koo

    ಬೆಂಗಳೂರು: ಮತ್ತೊಂದು ರೈಲು ದುರ್ಘಟನೆಯಲ್ಲಿ ರಾಣಿ ಕಮಲಾಪತಿ-ಸಹರ್ಸಾ ವಿಶೇಷ ಪ್ಯಾಸೆಂಜರ್ ರೈಲಿನ ಎರಡು ಬೋಗಿಗಳು ಮಧ್ಯಪ್ರದೇಶದಲ್ಲಿ ಸೋಮವಾರ ಸಂಜೆ ಹಳಿ ತಪ್ಪಿವೆ (Train Accident ). ಸಂಜೆ 6:10 ಕ್ಕೆ ರೈಲು ಇಟಾರ್ಸಿ ನಿಲ್ದಾಣವನ್ನು ಪ್ರವೇಶಿಸುತ್ತಿದ್ದಾಗ ಈ ಘಟನೆ ನಡೆದಿದೆ/ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ರೈಲು ಪ್ಲಾಟ್ ಫಾರ್ಮ್ ಸಂಖ್ಯೆ 2 ಅನ್ನು ಪ್ರವೇಶಿಸುತ್ತಿದ್ದಾಗ ಅದರ ಎರಡು ಬೋಗಿಗಳು ಹಳಿ ತಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಳಿ ತಪ್ಪಿದಾಗ ರೈಲು 5 ಕಿ.ಮೀ.ಗಿಂತ ಕಡಿಮೆ ವೇಗದಲ್ಲಿ ಚಲಿಸುತ್ತಿದ್ದರಿಂದ ಸಂಭವನೀಯ ದುರಂತ ತಪ್ಪಿದೆ. ಅಪಘಾತ ಸಂಭವಿಸಿದ ಎರಡೂವರೆ ಗಂಟೆಗಳ ನಂತರವೂ ರೈಲು ಹೋಶಂಗಾಬಾದ್ ಜಿಲ್ಲೆಯ ಇಟಾರ್ಸಿ ಜಂಕ್ಷನ್ನಲ್ಲಿ ನಿಂತಿತ್ತು.

    ಭಾನುವಾರ, ಉತ್ತರ ಪ್ರದೇಶದ ಸೋನ್ಭದ್ರದ ಶಕ್ತಿನಗರ ಪ್ರದೇಶದಲ್ಲಿ ಗೂಡ್ಸ್ ರೈಲಿನ ಎರಡು ವ್ಯಾಗನ್​ಗಳು ಮತ್ತು ಅದರ ಎಂಜಿನ್ ಹಳಿ ತಪ್ಪಿತ್ತು . ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಈ ರೈಲು ಖಾಡಿಯಾದಲ್ಲಿನ ನಾರ್ದರ್ನ್ ಕೋಲ್​ಫೀಲ್ಡ್ ಲಿಮಿಟೆಡ್ (ಎನ್ಸಿಎಲ್) ನಿಂದ ಅನ್ಪಾರಾ ವಿದ್ಯುತ್ ಸ್ಥಾವರಕ್ಕೆ ಕಲ್ಲಿದ್ದಲನ್ನು ಸಾಗಿಸುತ್ತಿತ್ತು.

    ಆಗಸ್ಟ್ 9 ರಂದು ಉತ್ತರ ಪ್ರದೇಶದ ಅಲಿಗಢದ ಬಳಿ ಕಲ್ಲಿದ್ದಲು ಸೈಡಿಂಗ್​ನಲ್ಲಿ ಸರಕು ರೈಲಿನ ಎರಡು ಖಾಲಿ ವ್ಯಾಗನ್​ಗಳು ಹಳಿ ತಪ್ಪಿದ್ದವು. ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಕುಮೇದ್ಪುರ ನಿಲ್ದಾಣದ ಬಳಿ ಸರಕು ರೈಲಿನ ಐದು ವ್ಯಾಗನ್ಗಳು ಹಳಿ ತಪ್ಪಿವೆ. ಬಿಹಾರದ ಕಟಿಹಾರ್ ಜಿಲ್ಲೆಯ ಕುಮೇದ್ಪುರ ಸೇತುವೆ ಬಳಿ ಸರಕು ರೈಲಿನ ಐದು ಟ್ಯಾಂಕ್ ವ್ಯಾಗನ್ಗಳು ಹಳಿ ತಪ್ಪಿವೆ. ಹಳಿ ತಪ್ಪಿದ ಕಾರಣ ಹಳಿಗೆ ಅಡ್ಡಿಯುಂಟಾಗಿದ್ದು, ಸುಗಮ ರೈಲು ಕಾರ್ಯಾಚರಣೆಗಾಗಿ ಮಾರ್ಗಗಳನ್ನು ತೆರವುಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ.

    ಇದನ್ನೂ ಓದಿ: S Jaishankar’s Maldives visit : ಚೀನಾ ವಿರುದ್ಧ ಭಾರತಕ್ಕೆ ರಾಜತಾಂತ್ರಿಕ ಗೆಲುವು, 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟುಕೊಟ್ಟ ಮಾಲ್ಡೀವ್ಸ್​​

    ಆಗಸ್ಟ್ 4 ರಂದು ಸಹರಾನ್ಪುರ ರೈಲ್ವೆ ನಿಲ್ದಾಣದಿಂದ ವಾಷಿಂಗ್ ಶೆಡ್​ಗೆ ಕರೆದೊಯ್ಯುವಾಗ ಖಾಲಿ ಸ್ಥಳೀಯ ರೈಲಿನ ಮೂರು ಬೋಗಿಗಳು ಹಳಿ ತಪ್ಪಿದ್ದವು. ಜುಲೈ 30 ರಂದು ಜಾರ್ಖಂಡ್​​ನ ಚಕ್ರಧರ್ಪುರ ಬಳಿ ಹೌರಾ-ಸಿಎಸ್ಎಂಟಿ ಎಕ್ಸ್​ಪ್ರೆಸ್​​ ಹಲವಾರು ಬೋಗಿಗಳು ಹಳಿ ತಪ್ಪಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದರು. ಆರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಐವರಲ್ಲಿ ಒಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೇ ದಿನ ಒಡಿಶಾದ ಸಂಬಲ್ಪುರ ವಿಭಾಗದ ಯಾರ್ಡ್ನಲ್ಲಿ ಖಾಲಿ ಗೂಡ್ಸ್ ರೈಲಿನ ಒಂದು ಟ್ರಾಲಿ ಹಳಿ ತಪ್ಪಿತ್ತು.

    Continue Reading
    Advertisement
    Emmanuel Macron
    ಕ್ರೀಡೆ3 hours ago

     Emmanuel Macron : ಒಲಿಂಪಿಕ್ಸ್​ಗೆ ಆತಿಥ್ಯ ವಹಿಸುವ ಭಾರತದ ಉತ್ಸಾಹಕ್ಕೆ ಬೆಂಬಲ ನೀಡಿದ ಫ್ರಾನ್ಸ್​ ಪ್ರಧಾನಿ ಎಮ್ಯಾನುಯೆಲ್ ಮ್ಯಾಕ್ರೋನ್

    Paris Olympics 2024
    ಪ್ರಮುಖ ಸುದ್ದಿ3 hours ago

    Paris Olympics 2024 : ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ಮೋದಿಯಿಂದ ಪ್ಯಾರಿಸ್ ಒಲಿಂಪಿಕ್ಸ್ ಸಾಧಕರಿಗೆ ಆತಿಥ್ಯ

    Broadcasting Services Bill
    ಪ್ರಮುಖ ಸುದ್ದಿ4 hours ago

    Broadcasting Services Bill : ಸಾರ್ವಜನಿಕರ ಆಕ್ಷೇಪ; ಪ್ರಸಾರ ಸೇವೆಗಳ ಕರಡು ಬಿಲ್​ ವಾಪಸ್​ ಪಡೆದ ಕೇಂದ್ರ ಸರ್ಕಾರ

    ಪ್ರಮುಖ ಸುದ್ದಿ4 hours ago

    Train Accident : ಮಧ್ಯಪ್ರದೇಶದಲ್ಲಿ ಹಳಿ ತಪ್ಪಿದ ಪ್ಯಾಸೆಂಜರ್ ರೈಲಿನ ಎರಡು ಬೋಗಿ

    Pralhad Joshi
    ದೇಶ5 hours ago

    Pralhad Joshi: ಪ್ರತಿ ಜಿಲ್ಲೆಗೊಂದು ‘ಮಾದರಿ ಸೌರ ಗ್ರಾಮ’ ಅನುಷ್ಠಾನಕ್ಕೆ ಕ್ರಮ; ಪ್ರಲ್ಹಾದ್‌ ಜೋಶಿ

    CM Siddaramaiah
    ಕರ್ನಾಟಕ5 hours ago

    CM Siddaramaiah: 6000ಕ್ಕೂ ಹೆಚ್ಚು ಗ್ರಂಥಾಲಯ ಮೇಲ್ಚಿಚಾರಕರು ಕನಿಷ್ಠ ವೇತನ ವ್ಯಾಪ್ತಿಗೆ; ಸಿದ್ದರಾಮಯ್ಯ ಮಹತ್ವದ ಘೋಷಣೆ

    Independence day speech in Kannada
    ದೇಶ5 hours ago

    Independence day speech in Kannada: ವಿದ್ಯಾರ್ಥಿಗಳಿಗಾಗಿ ಇಲ್ಲಿದೆ ಸ್ವಾತಂತ್ರ್ಯ ದಿನಾಚರಣೆಯ ಸಿದ್ಧ ಭಾಷಣ!

    S Jaishankar's Maldives visit
    ಪ್ರಮುಖ ಸುದ್ದಿ5 hours ago

    S Jaishankar’s Maldives visit : ಚೀನಾ ವಿರುದ್ಧ ಭಾರತಕ್ಕೆ ರಾಜತಾಂತ್ರಿಕ ಗೆಲುವು, 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟುಕೊಟ್ಟ ಮಾಲ್ಡೀವ್ಸ್​​

    Manu Bhaker
    ಕ್ರೀಡೆ5 hours ago

    Manu Bhaker : ಮದುವೆಯಾಗ್ತೀರಾ ಹೇಗೆ? ನೀರಜ್​ ಚೋಪ್ರಾ- ಮನು ಭಾಕರ್​ ಭೇಟಿಯ ವಿಡಿಯೊ ವೈರಲ್ ಮಾಡಿದ ನೆಟ್ಟಿಗರು

    Namma Metro
    ನೋಟಿಸ್ ಬೋರ್ಡ್5 hours ago

    Namma Metro: ಹಸಿರು ಮಾರ್ಗದಲ್ಲಿ ಆ.13ರಿಂದ 15ರವರೆಗೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

    Sharmitha Gowda in bikini
    ಕಿರುತೆರೆ10 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ10 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ10 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    Kannada Serials
    ಕಿರುತೆರೆ11 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    galipata neetu
    ಕಿರುತೆರೆ9 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ8 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    Kannada Serials
    ಕಿರುತೆರೆ11 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    varun
    ಕಿರುತೆರೆ9 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    karnataka Weather Forecast
    ಮಳೆ4 days ago

    Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

    Bellary news
    ಬಳ್ಳಾರಿ4 days ago

    Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

    Maravoor bridge in danger Vehicular traffic suspended
    ದಕ್ಷಿಣ ಕನ್ನಡ4 days ago

    Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

    Wild Animals Attack
    ಚಿಕ್ಕಮಗಳೂರು6 days ago

    Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

    Karnataka Weather Forecast
    ಮಳೆ6 days ago

    Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

    assault case
    ಬೆಳಗಾವಿ1 week ago

    Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

    karnataka rain
    ಮಳೆ1 week ago

    Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

    karnataka Rain
    ಮಳೆ2 weeks ago

    Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

    Karnataka Rain
    ಮಳೆ2 weeks ago

    Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

    karnataka Rain
    ಮಳೆ2 weeks ago

    Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

    ಟ್ರೆಂಡಿಂಗ್‌