70th National Film Awards: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ರೇಸ್‌ನಲ್ಲಿ ರಿಷಬ್‌ ಶೆಟ್ಟಿ; ʼಕಾಂತಾರʼಕ್ಕೆ ಸಿಗುತ್ತಾ ಇನ್ನೊಂದು ಪ್ರತಿಷ್ಠಿತ ಗರಿ? - Vistara News

ಸಿನಿಮಾ

70th National Film Awards: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ರೇಸ್‌ನಲ್ಲಿ ರಿಷಬ್‌ ಶೆಟ್ಟಿ; ʼಕಾಂತಾರʼಕ್ಕೆ ಸಿಗುತ್ತಾ ಇನ್ನೊಂದು ಪ್ರತಿಷ್ಠಿತ ಗರಿ?

70th National Film Awards: 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಗೆ ದಿನಗಣನೆ ಆರಂಭವಾಗಿದೆ. ವಿಶೇಷ ಎಂದರೆ ಅತ್ಯುತ್ತಮ ನಟ ವಿಭಾಗದಲ್ಲಿ ಕನ್ನಡದ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಮತ್ತು ಮಲಯಾಳಂ ಸೂಪರ್‌ ಸ್ಟಾರ್‌ ಮಮ್ಮುಟ್ಟಿ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದೆ. ಅಂತಿಮ ಸುತ್ತಿಗೆ ಈ ಇಬ್ಬರು ಆಯ್ಕೆಯಾಗಿದ್ದಾರೆ ಎನ್ನಲಾಗಿದ್ದು, ಯಾರಿಗೆ ಪ್ರಶಸ್ತಿ ಸೇರಲಿದೆ ಎನ್ನುವ ಮಿಲಿಯನ್‌ ಡಾಲರ್‌ ಪ್ರಶ್ನ ಅಭಿಮಾನಿಗಳನ್ನು ಕಾಡುತ್ತಿದೆ.

VISTARANEWS.COM


on

70th National Film Awards
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ (70th National Film Awards) ಘೋಷಣೆಗೆ ದಿನಗಣನೆ ಆರಂಭವಾಗಿದೆ. ಈ ತಿಂಗಳೊಳಗೆ ಪ್ರಶಸ್ತಿ ವಿಜೇತರ ಹೆಸರು ಪ್ರಕಟವಾಗುವ ಸಾಧ್ಯತೆ ಇದೆ. ಇದಕ್ಕಾಗಿ ಚಲನಚಿತ್ರ ಆಯ್ಕೆ ಮಂಡಳಿ ಸಿದ್ಧತೆಯಲ್ಲಿ ತೊಡಗಿದೆ. 2022ರಲ್ಲಿ ತೆರೆಕಂಡ ಭಾರತದ ವಿವಿಧ ಭಾಷೆಗಳ ಅತ್ಯುತ್ತಮ ಚಿತ್ರಗಳಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ವಿವಿಧ ವಿಭಾಗಳಲ್ಲಿ ಅತ್ಯುತ್ತಮರನ್ನು ಆಯ್ಕೆ ಮಾಡುವ ಈ ಪ್ರಶಸ್ತಿ ಈಗಾಗಲೇ ಕುತೂಹಲ ಮೂಡಿಸಿದೆ. ವಿಶೇಷ ಎಂದರೆ ಅತ್ಯುತ್ತಮ ನಟ ವಿಭಾಗದಲ್ಲಿ ಕನ್ನಡದ ನಟ, ನಿರ್ದೇಶಕ ರಿಷಬ್‌ ಶೆಟ್ಟಿ (Rishab Shetty) ಮತ್ತು ಮಲಯಾಳಂ ಸೂಪರ್‌ ಸ್ಟಾರ್‌ ಮಮ್ಮುಟ್ಟಿ (Mammootty) ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದೆ. ಅಂತಿಮ ಸುತ್ತಿಗೆ ಈ ಇಬ್ಬರು ಆಯ್ಕೆಯಾಗಿದ್ದಾರೆ ಎನ್ನಲಾಗಿದ್ದು, ಯಾರಿಗೆ ಪ್ರಶಸ್ತಿ ಸೇರಲಿದೆ ಎನ್ನುವ ಮಿಲಿಯನ್‌ ಡಾಲರ್‌ ಪ್ರಶ್ನ ಅಭಿಮಾನಿಗಳನ್ನು ಕಾಡುತ್ತಿದೆ.

ರಿಷಬ್‌ ಶೆಟ್ಟಿ

2022ರಲ್ಲಿ ತೆರೆಕಂಡು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಗಮನ ಸೆಳೆದ, ರಿಷಬ್‌ ಶೆಟ್ಟಿ ನಿರ್ದೇಶಿಸಿ, ನಟಿಸಿದ ʼಕಾಂತಾರʼ ಚಿತ್ರ ಈಗಾಗಲೇ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಅತ್ಯುತ್ತಮ ಚಿತ್ರದ ಜತೆಗೆ ನಟ, ನಿರ್ದೇಶಕ ವಿಭಾಗದಲ್ಲಿಯೂ ರಿಷಬ್‌ ಶೆಟ್ಟಿ ವಿವಿಧ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಇದೀಗ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಆಯ್ಕೆ ಸಮಿತಿ ಗಮನವನ್ನೂ ಸೆಳೆದಿದ್ದಾರೆ. ʼಕಾಂತಾರʼ ಚಿತ್ರದ ಶಿವ ಪಾತ್ರದ ಮೂಲಕ ಅತ್ಯುತ್ತಮ ನಟ ವಿಭಾಗದಲ್ಲಿ ರಿಷಬ್‌ ಶೆಟ್ಟಿ ಪ್ರಬಲ ಪೈಪೋಟಿ ಒಡ್ಡಿದ್ದಾರೆ. ತುಳುನಾಡಿನ ವಿಶಿಷ್ಟ ಭೂತಾರಾಧನೆಯ ಸಂಸ್ಕೃತಿಯನ್ನು ಜಗತ್ತಿಗೇ ಸಾರಿದ ಈ ಸಿನಿಮಾ ಮೇಕಿಂಗ್‌ನಿಂದಲೇ ಪ್ರೇಕ್ಷಕರ ಗಮನ ಸೆಳೆದಿತ್ತು. ಅದರಲ್ಲಿಯೂ ನಾಯಕನಾಗಿ ರಿಷಭ್‌ ಶೆಟ್ಟಿ ಎಲ್ಲರ ಮೆಚ್ಚುಗೆ ಗಳಿಸಿದ್ದರು. ಕ್ಲೈಮಾಕ್ಸ್‌ನಲ್ಲಂತೂ ಅವರ ಅಭಿನಯ ಅಮೋಘ ಎಂದಿದ್ದ ಹಲವರು ಅಂದೇ ನ್ಯಾಷನಲ್‌ ಅವಾರ್ಡ್‌ ಬಗ್ಗೆ ಭವಿಷ್ಯ ನುಡಿದಿದ್ದರು.

2016ರಲ್ಲಿ ʼರಿಕ್ಕಿʼ ಚಿತ್ರ ನಿರ್ದೇಶಿಸುವ ಮೂಲಕ ಅವರು ಸ್ಯಾಂಡಲ್‌ವುಡ್‌ಗೆ ಕಾಲಿಟ್ಟರು. ಬಳಿಕ ತೆರೆಕಂಡ ʼಕಿರಿಕ್‌ ಪಾರ್ಟಿʼ ಮತ್ತು ʼಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡುʼ ಸಿನಿಮಾದಿಂದ ಸ್ಯಾಂಡಲ್‌ವುಡ್‌ನ ಗಮನ ಸೆಳೆದರು. ಇನ್ನು 2022ರಲ್ಲಿ ತೆರೆಕಂಡ ʼಕಾಂತಾರʼ ಕೇವಲ 16 ಕೋಟಿ ರೂ. ಬಜೆಟ್‌ನಲ್ಲಿ ತಯಾರಾಗಿ ಬಾಕ್ಸ್‌ ಆಫೀಸ್‌ನಲ್ಲಿ 400 ಕೋಟಿ ರೂ.ಗಿಂತ ಹೆಚ್ಚು ಗಳಿಸಿ ಮೈಲಿಗಲ್ಲು ನೆಟ್ಟಿದೆ. ಈಗಾಗಲೇ ಫಿಲಂಫೇರ್‌ನಂತಹ ಪ್ರಶಸ್ತಿ ಮುಡುಗೇರಿಸಿಕೊಂಡ ರಿಷಬ್‌ ಶೆಟ್ಟಿ ಅವರಿಗೆ ನ್ಯಾಷನಲ್‌ ಅವಾರ್ಡ್‌ ಪಡೆಯುವ ಎಲ್ಲ ಅರ್ಹತೆಗಳಿವೆ ಎಂದು ಚಿತ್ರಪ್ರೇಮಿಗಳು ಅಭಿಪ್ರಾಯಪಟ್ಟಿದ್ದಾರೆ. ಇನ್ನೇನು ಈ ಕುತೂಹಲಕ್ಕೆ ಕೆಲವೇ ದಿನಗಳಲ್ಲಿ ತೆರೆ ಬೀಳಲಿದೆ.

ಮಮ್ಮುಟ್ಟಿ

ಮಾಲಿವುಡ್‌ ನಟ, ಬಹುಭಾಷಾ ಕಲಾವಿದ ಮಮ್ಮುಟ್ಟಿ ಕೂಡ ಅತ್ಯುತ್ತಮ ನಟ ವಿಭಾಗದ ರೇಸ್‌ನಲ್ಲಿದ್ದಾರೆ. ಈಗಾಗಲೇ 3 ಬಾರಿ ರಾಷ್ಟ್ರೀಯ ಚಲನಚಿತ್ರ ಮುಡಿಗೇರಿಸಿಕೊಂಡ ಅವರು ʼರೋಷಾಕ್‌ʼ (Rorschach) ಮತ್ತು ʼನಾನ್‌ಪಗಲ್‌ ನೇರತ್ತ್‌ ಮಯಕ್ಕಂʼ (Nanpakal Nerathu Mayakkam) ಚಿತ್ರದಲ್ಲಿನ ಅಭಿನಯಕ್ಕಾಗಿ ಮತ್ತೊಮ್ಮೆ ಪ್ರಬಲ ಪೈಪೋಟಿ ಒಡ್ಡಿದ್ದಾರೆ.

2022ರಲ್ಲಿ ತೆರೆಕಂಡ ಈ ಚಿತ್ರಗಳ ಮೂಲಕ ಮಮ್ಮುಟ್ಟಿ ಮತ್ತೊಮ್ಮೆ ತಮ್ಮ ಅಭಿನಯ ಸಾಮರ್ಥ್ಯ ಸಾಬೀತು ಪಡಿಸಿದ್ದಾರೆ. ʼರೋಷಾಕ್‌ʼ ಅನ್ನು ಸಿಸ್ಸಾಮ್‌ ಬಷೀರ್‌ ನಿರ್ದೇಶಿಸಿದರೆ, ʼನಾನ್‌ಪಗಲ್‌ ನೇರತ್ತ್‌ ಮಯಕ್ಕಂʼ ಸಿನಿಮಾಕ್ಕೆ ಲಿಜೊ ಜೋಸ್‌ ಪೆಲ್ಲಿಶ್ಶೇರಿ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ʼನಾನ್‌ಪಗಲ್‌ ನೇರತ್ತ್‌ ಮಯಕ್ಕಂʼ ಚಿತ್ರಕ್ಕಾಗಿ ಈಗಾಗಲೇ ಮಮ್ಮುಟ್ಟಿ ಕೇರಳ ರಾಜ್ಯ ಚಲನಚಿತ್ರ, ಫಿಲಂಫೇರ್‌ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪ್ರೇಕ್ಷಕರಿಂದ, ವಿಮರ್ಷಕರಿಂದ ಮೆಚ್ಚುಗೆ ಗಳಿಸಿದ ಮಮ್ಮುಟಿ 4ನೇ ಬಾರಿ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರಾ? ಕಾದು ನೋಡಬೇಕಿದೆ.

ಇದನ್ನೂ ಓದಿ: Modi Meets Celebrities: ನರೇಂದ್ರ ಮೋದಿ ಭೇಟಿ ನಂತರ ಯಶ್‌, ರಿಷಭ್‌ ಶೆಟ್ಟಿ, ಅನಿಲ್‌ ಕುಂಬ್ಳೆ, ಮನೀಶ್‌ ಪಾಂಡೆ, ಅಯ್ಯೋ ಶ್ರದ್ಧಾ ಹೇಳಿದ್ದೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Kannada New Movie: ರವೀಂದ್ರ ಸೊರಗಾವಿ ಕಂಠಸಿರಿಯಲ್ಲಿ ʼಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರುʼ ಚಿತ್ರದ ಹಾಡು

Kannada New Movie: ಜಮಖಂಡಿ ತಾಲೂಕಿನ ಕೃಷ್ಣಾ ನದಿ ತೀರದ ಹಿಪ್ಪರಗಿಯ ಇಂಚಗೇರಿ ಮಠದ ಕಲ್ಪತರುವಾದ ಶ್ರೀ ಸಂಗಮೇಶ್ವರ ಮಹಾರಾಜರ ಜೀವನ ಚರಿತ್ರೆ “ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು” ಚಿತ್ರದ “ಇಂಚಗೇರಿ ಆಧ್ಯಾತ್ಮಿಕ ಸಂಪ್ರದಾಯ ಗುರುಲಿಂಗ ಜಂಗಮ ಮಹಾರಾಜ” ಭಕ್ತಿ ಪ್ರಧಾನ ಹಾಡಿಗೆ ಖ್ಯಾತ ಗಾಯಕ ರವೀಂದ್ರ ಸೊರಗಾವಿ ಧ್ವನಿಯಾಗಿದ್ದಾರೆ.

VISTARANEWS.COM


on

Kannada New Movie
Koo

ಬೆಂಗಳೂರು: ಚುಟು ಚುಟು ಖ್ಯಾತಿಯ ತಮ್ಮ ಅದ್ಭುತ ಗಾಯನದಿಂದ ಜನಪ್ರಿಯರಾಗಿರುವ ಗಾಯಕ ರವೀಂದ್ರ ಸೊರಗಾವಿ, “ಇಂಚಗೇರಿ ಆಧ್ಯಾತ್ಮಿಕ ಸಂಪ್ರದಾಯ ಗುರುಲಿಂಗ ಜಂಗಮ ಮಹಾರಾಜ” ಭಕ್ತಿ ಪ್ರಧಾನ ಹಾಡಿಗೆ ಧ್ವನಿಯಾಗಿದ್ದಾರೆ. (Kannada New Movie) ಸುಮಾರು 130 ಚಲನಚಿತ್ರಗಳಿಗೆ ಹಿನ್ನೆಲೆ ಗಾಯಕರಾಗಿರುವ ರವೀಂದ್ರ ಸೊರಗಾವಿ ಅವರಿಗೆ ಇತ್ತೀಚೆಗೆ ಚಂದನವನ ಕ್ರಿಟಿಕ್ಸ್ ಅಕಾಡೆಮಿಯ ಅತ್ಯುತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿಯನ್ನು ಪಡೆದಿದ್ದಾರೆ.

ಜಮಖಂಡಿ ತಾಲೂಕಿನ ಕೃಷ್ಣಾ ನದಿ ತೀರದ ಹಿಪ್ಪರಗಿಯ ಇಂಚಗೇರಿ ಮಠದ ಕಲ್ಪತರುವಾದ ಶ್ರೀ ಸಂಗಮೇಶ್ವರ ಮಹಾರಾಜರ ಜೀವನ ಚರಿತ್ರೆ “ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು” ಚಿತ್ರದ ವಿಶೇಷವಾಗಿ ಗುರುಪರಂಪರೆ ಹೇಳುವ ಹಾಡು ನಿರ್ದೇಶಕ ರಾಜಾ ರವಿಶಂಕರ್ ರಚಿಸಿದ್ದಾರೆ ಸಂಗೀತವನ್ನು ನಿರ್ದೇಶಕ ಎ.ಟಿ. ರವೀಶ್ ಸಂಯೋಜಿಸಿದ್ದಾರೆ.

ಕೆಲವು ತಿಂಗಳುಗಳ ಹಿಂದೆ ಶ್ರೀ ಸ.ಸ.ಪ್ರಭುಜೀ ಮಾಹಾರಾಜರ ದಿವ್ಯ ಸಾನಿಧ್ಯದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರು ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರುವುದರ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದರು. ಶ್ರೀ ಗಿರಿಮಲ್ಲೇಶ್ವರ ಕಂಬೈನ್ಸ್ ಅಡಿಯಲ್ಲಿ ನಿರ್ಮಾಪಕ ಮಾಧವಾನಂದ ಅವರ ನಿರ್ಮಾಣದಲ್ಲಿ ಈ ಚಿತ್ರ ಅದ್ಧೂರಿಯಾಗಿ ಮೂಡಿ ಬರುತ್ತಿದೆ.

ರಾಜ್ಯದೆಲ್ಲೆಡೆ ಇಂಚಗೇರಿ ಸಂಪ್ರದಾಯಕ್ಕೆ ಅದರದೇ ಆದ ಮಹತ್ವವಿದೆ‌. ಅದನ್ನು ಶ್ರೀಸಂಗಮೇಶ್ವರ ಮಹಾರಾಜರು ಪಾಲಿಸಿಕೊಂಡು ಬರುತ್ತಿದ್ದರು. ಕಲಿಯುಗದ ಕಲ್ಪತರುವೆಂದೇ ಖ್ಯಾತರಾಗಿರುವ ಶ್ರೀ ಸಂಗಮೇಶ್ವರರ ಚಿತ್ರದ ಹಾಡುಗಳು ಹಾಗು ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಶ್ರೀ ಪ್ರಭುಜೀ ಮಹಾರಾಜರು ಆಶೀರ್ವದಿಸಿದರು.

ನೂತನ ಪ್ರತಿಭೆ ರವಿ ನಾರಾಯಣ್ ಶ್ರೀ ಸಂಗಮೇಶ್ವರರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತದ್ದಾರೆ. ಹಿರಿಯ ನಟರಾದ ರಾಮಕೃಷ್ಣ, ವಿಜಯಕಾಶಿ, ವಿನಯಪ್ರಸಾದ್, ಸಂದೀಪ್ ಮಲಾನಿ, ನಾರಾಯಣ ಸ್ವಾಮಿ, ತುಷಾರ್ ಮಲಗೊಂಡ, ಭವ್ಯಶ್ರೀ ರೈ ಹಾಗೂ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: Gold Rate Today: ಮತ್ತೆ ಕೈ ಸುಡುತ್ತಿದೆ ಚಿನ್ನ; ಬಂಗಾರ ದರದಲ್ಲಿ ಇಂದು ಭಾರಿ ಏರಿಕೆ

ರಾಜಾ ರವಿಶಂಕರ್ ನಿರ್ದೇಶನ, ಸಿ. ನಾರಾಯಣ್ ಛಾಯಾಗ್ರಾಹಣ, ಎ.ಟಿ. ರವೀಶ್ ಸಂಗೀತ, ಡಿ. ರವಿ ಸಂಕಲನ, ಕುಮಾರ್ ನೊಣವಿನಕೆರೆ ಪ್ರಸಾದನ ಈ ಚಿತ್ರಕ್ಕಿದೆ.

Continue Reading

ಬೆಂಗಳೂರು

Kannada New Movie: ಸಮರ್ಜಿತ್ ಲಂಕೇಶ್ ಅಭಿನಯದ ʼಗೌರಿʼ ಚಿತ್ರಕ್ಕೆ ನಟ ಉಪೇಂದ್ರ ಸಾಥ್‌; ಆ.15ಕ್ಕೆ ಸಿನಿಮಾ ರಿಲೀಸ್‌

Kannada New Movie: ಇಂದ್ರಜಿತ್ ಲಂಕೇಶ್ ನಿರ್ಮಾಣ ಹಾಗೂ ನಿರ್ದೇಶನದಲ್ಲಿ, ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ “ಗೌರಿ” ಚಿತ್ರದ ಪ್ರೀ ರಿಲೀಸ್ ಇವೆಂಟ್ ಅದ್ದೂರಿಯಾಗಿ ನೆರವೇರಿತು. ರಿಯಲ್ ಸ್ಟಾರ್ ಉಪೇಂದ್ರ ಮುಖ್ಯ ಅತಿಥಿಯಾಗಿ ಆಗಮಿಸಿ “ಗೌರಿ” ಚಿತ್ರಕ್ಕೆ ಸಾಥ್ ನೀಡಿದ್ದಾರೆ. ನಾಯಕ ಸಮರ್ಜಿತ್ ಹಾಗೂ ನಾಯಕಿ ಸಾನ್ಯಾ ಅಯ್ಯರ್ ಪಾಲ್ಗೊಂಡಿದ್ದರು. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಇಂದ್ರಜಿತ್ ಲಂಕೇಶ್ ನಿರ್ಮಾಣ ಹಾಗೂ ನಿರ್ದೇಶನದಲ್ಲಿ, ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ “ಗೌರಿ” ಚಿತ್ರದ ಪ್ರೀ ರಿಲೀಸ್ ಇವೆಂಟ್ ಅದ್ಧೂರಿಯಾಗಿ ನೆರವೇರಿದೆ. ರಿಯಲ್ ಸ್ಟಾರ್ ಉಪೇಂದ್ರ ಮುಖ್ಯ ಅತಿಥಿಯಾಗಿ ಆಗಮಿಸಿ “ಗೌರಿ” ಚಿತ್ರಕ್ಕೆ ಸಾಥ್ ನೀಡಿದ್ದಾರೆ. ಪ್ರೀ ರಿಲೀಸ್ ಇವೆಂಟ್‌ನಲ್ಲಿ ಫ್ಯಾಷನ್ ಶೋ ಸಹ ಆಯೋಜಿಸಲಾಗಿತ್ತು. (Kannada New Movie) ನಾಯಕ ಸಮರ್ಜಿತ್ ಹಾಗೂ ನಾಯಕಿ ಸಾನ್ಯಾ ಅಯ್ಯರ್ ಭಾಗಿಯಾಗಿದ್ದರು.

ಇಂದ್ರಜಿತ್‍ ಅವರದ್ದು ಗೋಲ್ಡನ್‍ ಹ್ಯಾಂಡ್‍ ಎಂದು ಮಾತನಾಡಿದ ನಟ ಉಪೇಂದ್ರ, ಇವರು ದೀಪಿಕಾ ಪಡುಕೋಣೆ ಅವರನ್ನು ಇಲ್ಲಿ ಕರೆದುಕೊಂಡು ಬಂದು ಬ್ರೇಕ್‍ ಕೊಟ್ಟರು. ಈಗ ಅವರು ಇಂಟರ್‌ನ್ಯಾಷನಲ್‌ ಸ್ಟಾರ್ ಆಗಿದ್ದಾರೆ. ಇವರ ಮಗ ಯಾವುದಾದರೂ ದೃಷ್ಟೀಲಿ ಇಲ್ಲಿ ಇರ್ತಾನೆ ಅನಿಸುತ್ತಾ? ಬಾಲಿವುಡ್ ಗೊ, ಹಾಲಿವುಡ್‌ಗೊ ಹೋಗೋ ತರಹ ಇದ್ದಾನೆ. ಅವನನ್ನು ಇಲ್ಲೇ ಇರಿಸಿಕೊಳ್ಳೋಕೆ ನಿಮ್ಮ ಕೈಲಿ ಸಾಧ್ಯ ಇದೆ. ಈ ತರಹ ಹೊಸ ತಲೆಮಾರಿನವರು ನಮ್ಮ ಕನ್ನಡ ಚಿತ್ರರಂಗದಲ್ಲಿ ಉಳಿದುಕೊಳ್ಳಬೇಕು ಅಂದರೆ ನಿಮ್ಮ ಕೈಯಲ್ಲಿ ಮಾತ್ರ ಸಾಧ್ಯ. ಅದಕ್ಕೆ ನೀವೆಲ್ಲಾ ಚಿತ್ರ ನೋಡಬೇಕು. ಈ ಬ್ಯೂಟಿ ಮತ್ತು ಬುದ್ಧಿವಂತಿಕೆ ಮುಗ್ಧತೆಯಿಂದ ಬರುತ್ತದೆ. ಮುಗ್ಧತೆ ಇದೆಯಲ್ಲಾ ಅದೇ ಬ್ಯೂಟಿ. ಇವರ ಮುಖವನ್ನು ನೋಡಿ. ಇವರಿಗೆ ನಾನು ಹಾರೈಸುವುದು ಮುಖ್ಯವಲ್ಲ. ನೀವು ಹಾರೈಸಬೇಕು.

ಫಸ್ಟ್ ಡೇ, ಫಸ್ಟ್ ಶೋ ಎಲ್ಲರೂ “ಗೌರಿ” ಸಿನಿಮಾ ನೋಡಿ. ಇವರ ಸಿನಿಮಾ ನೋಡಿದರೆ ನಮಗೂ ಖುಷಿ ಆಗುತ್ತೆ. ಇಂದ್ರಜಿತ್‍ ಅವರು ಶೋಮ್ಯಾನ್. ಈ ತರಹ ಕಾರ್ಯಕ್ರಮ ಮಾಡೋದಕ್ಕೆ ಅವರಿಂದಲೇ ಸಾಧ್ಯ. ಸಿನಿಮಾ ಸಹ ಅದೇ ರೀತಿ ಮಾಡಿರುತ್ತಾರೆ. ಕಾರ್ಯಕ್ರಮವನ್ನೇ ಹೀಗೆ ಮಾಡಿದ್ದಾರೆ, ಇನ್ನೂ ಸಿನಿಮಾ ಹೇಗೆ ಮಾಡಿರಬಹುದು ಯೋಚಿಸಿ ಎಂದು ತಿಳಿಸಿದರು.

ಸಮರ್ಜಿತ್‍ ಲವ್‍ಸ್ಟೋರಿಗಳಿಗೂ ಸೂಟ್ ಆಗುತ್ತಾನೆ, ಆ್ಯಕ್ಷನ್‍ ಚಿತ್ರಗಳಿಗೂ ಹೊಂದುತ್ತಾನೆ. ದೇಹವನ್ನೂ ಚೆನ್ನಾಗಿ ಬೆಳೆಸಿದ್ದಾನೆ. ಡ್ಯಾನ್ಸ್ ಸಹ ಮಾಡ್ತಾನೆ. ಜನ ಈಗಾಗಲೇ ಹೃತಿಕ್‍ ರೋಶನ್‍ ಅಂತ ಹೇಳೋಕೆ ಶುರು ಮಾಡಿದ್ದಾರೆ. ನೀನು ನಿನ್ನ ಮುಗ್ಧತೆಯನ್ನ ಉಳಿಸಿಕೋ ಸಾಕು. ಎಷ್ಟು ಮುಗ್ಧನಪ್ಪಾ ನೀನು. ಇಲ್ಲಿ ಮುಗ್ಧತೆ ಉಳಿಸಿಕೊಳ್ಳೋದು ಬಹಳ ಕಷ್ಟ. ಸ್ವಲ್ಪ ದಿನ ಚಿತ್ರರಂಗದಲ್ಲಿ ಇದ್ದರೆ ಸಾಕು, ನಾವೆಲ್ಲಾ ಬಹಳ ಕಿಲಾಡಿಗಳಾಗಿ ಬಿಡ್ತೀವಿ. ಚಿಕ್ಕವರಾಗಿದ್ದಾಗ ಬಹಳ ಮುಗ್ಧರಾಗಿರುತ್ತೇವೆ. ಕೆಲವರು ವಯಸ್ಸಾದ ಮೇಲೂ ಹಾಗೇ ಇರುತ್ತಾರೆ. ಕೆಲವರು ಮಾತ್ರ ತಮಗೆ ಎಲ್ಲಾ ಗೊತ್ತು ಎಂದು ಕಳೆದುಕೊಂಡು ಬಿಡುತ್ತಾರೆ ಎಂದು ರಿಯಲ್ ಸ್ಟಾರ್ ಉಪೇಂದ್ರ ಸಮರ್ಜಿತ್ ಲಂಕೇಶ್ ಬಗ್ಗೆ ಮೆಚ್ಚುಗೆಯ ಮಾತುಗಳಾಡಿದರು.

ಸಿನಿಮಾ ಒಂದು ಕ್ರಿಯಾಶೀಲ ಮಾಧ್ಯಮ. ಪ್ರತಿ ಕ್ಷಣ ಯೋಚನೆ ಮಾಡಿ, ಏನಾದರೂ ಹೊಸತನ ತರುತ್ತಾರೆ ಎಂದರೆ ಅದು ಉಪೇಂದ್ರ. ಅವರು ಕನ್ನಡ ಚಿತ್ರರಂಗದಲ್ಲಿರುವುದು ನಮ್ಮ ಅದೃಷ್ಟ. ಉಪ್ಪಿ ಸಾರ್ ಅವರು ತಮ್ಮ ಬುದ್ಧಿವಂತಿಕೆಯಿಂದ ಮತ್ತು ಕ್ರಿಯಾಶೀಲತೆಯಿಂದ ಕನ್ನಡ ಚಿತ್ರರಂಗಕ್ಕೆ ದೊಡ್ಡ ಹೆಸರು ತಂದಿದ್ದಾರೆ. ಇವತ್ತು ಕನ್ನಡ ಚಿತ್ರರಂಗವನ್ನು ಜಗತ್ತಿಗೆ ತೆಗೆದುಕೊಂಡು ಹೋಗಿದ್ದಾರೆ. ‘ಎʼ, ‘ಉಪೇಂದ್ರʼ ಮತ್ತು ‘ಸೂಪರ್ʼ ಚಿತ್ರಗಳನ್ನು ನಾವು ಯೋಚನೆ ಮಾಡೋಕೂ ಸಾಧ್ಯವಿಲ್ಲ. ನನ್ನ ಮಗ ‘ಉಪೇಂದ್ರʼ ಸಿನಿಮಾ ಕ್ಲೈಮ್ಯಾಕ್ಸ್ ನೋಡಿದೆ, ಅವರು ಆಗಿನ ಕಾಲಕ್ಕೆ ಟೊರೋಂಟಿನೋ ಶೈಲಿಯ ಸಿನಿಮಾ ಮಾಡಿದ್ದರು ಎಂದು ಹೇಳುತ್ತಿದ್ದ. ಆ ರೀತಿಯ ಯೋಚನೆ ಮಾಡೋದು ಅಸಾಧ್ಯ. ಅವರು ನಮ್ಮ ನಡುವೆ ಇದ್ದಾರೆ ಅನ್ನೋದು ನಮ್ಮ ಹೆಮ್ಮೆ ಎಂದು ಹೇಳಿ, ಉಪೇಂದ್ರ ಅವರಿಗೆ ಧನ್ಯವಾದ ತಿಳಿಸಿದ ಇಂದ್ರಜಿತ್ ಲಂಕೇಶ್, ಆಗಸ್ಟ್‌ 15 ರಂದು ಬಿಡುಗಡೆಯಾಗುತ್ತಿರುವ “ಗೌರಿ” ಚಿತ್ರವನ್ನು ಎಲ್ಲರೂ ಚಿತ್ರಮಂದಿರಗಳಲ್ಲೇ ನೋಡಿ ಎಂದರು.

ಇದನ್ನೂ ಓದಿ: Gold Rate Today: ಮತ್ತೆ ಕೈ ಸುಡುತ್ತಿದೆ ಚಿನ್ನ; ಬಂಗಾರ ದರದಲ್ಲಿ ಇಂದು ಭಾರಿ ಏರಿಕೆ

ನಾಯಕ ಸಮರ್ಜಿತ್ ಲಂಕೇಶ್ ಹಾಗೂ ನಾಯಕಿ ಸಾನ್ಯಾ ಅಯ್ಯರ್ ತಮ್ಮ ಮೊದಲ ಚಿತ್ರಕ್ಕೆ ಪ್ರೋತ್ಸಾಹ ನೀಡಬೇಕು ಎಂದು ವಿನಂತಿಸಿದರು.

Continue Reading

ಬೆಂಗಳೂರು

Kannada New Movie: ಸ್ಯಾಂಡಲ್‌ವುಡ್‌ಗೆ ʼಮದ್ದಾನೆʼ ಆಗಮನ; ನಿಹಾಲ್ ರಾಜ್ ನಾಯಕ

Kannada New Movie: ಸತೀಶ್ ಕುಮಾರ್ ಎಸ್. ಚೊಚ್ಚಲ ನಿರ್ದೇಶನದ, ನಿರ್ಮಾಪಕಿ ರಂಜನ ಎಂ. ಕುಮಾವತ್ ನಿರ್ಮಿಸುತ್ತಿರುವ ನಿಹಾಲ್ ರಾಜ್ ಅಭಿನಯದ “ಮದ್ದಾನೆ” ಚಿತ್ರದ ಮುಹೂರ್ತ ಸಮಾರಂಭವು ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ನಿರ್ಮಾಪಕರಾದ ಕೆ.ಮಂಜು, ರಮೇಶ್ ಯಾದವ್ ಹಾಗೂ ಕಡ್ಡಿಪುಡಿ ಚಂದ್ರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

VISTARANEWS.COM


on

Kannada New Movie
Koo

ಬೆಂಗಳೂರು: ಪ್ಯಾಂಥರ್ಸ್ ಕ್ರಿಯೇಟಿವ್ ಸಿನಿಮಾಸ್ ಲಾಂಛನದಲ್ಲಿ ರಂಜನ ಎಂ. ಕುಮಾವತ್ ನಿರ್ಮಿಸುತ್ತಿರುವ ಹಾಗೂ ಸತೀಶ್ ಕುಮಾರ್ ಎಸ್. ಚೊಚ್ಚಲ ನಿರ್ದೇಶನದ “ಮದ್ದಾನೆ” ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ನಿರ್ಮಾಪಕರಾದ ಕೆ. ಮಂಜು, ರಮೇಶ್ ಯಾದವ್ ಹಾಗೂ ಕಡ್ಡಿಪುಡಿ ಚಂದ್ರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ (Kannada New Movie) ಶುಭ ಕೋರಿದರು. ನಿಹಾಲ್ ರಾಜ್ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ.

ಮುಹೂರ್ತ ಸಮಾರಂಭದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ “ಮದ್ದಾನೆ” ಚಿತ್ರದ ಬಗ್ಗೆ ಚಿತ್ರತಂಡದವರು ಮಾತನಾಡಿದರು.

“ಮದ್ದಾನೆ” ನನ್ನ ಮೊದಲ ನಿರ್ದೇಶನದ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಸತೀಶ್ ಕುಮಾರ್, ಇದೊಂದು ಹಳ್ಳಿ ಹಾಗೂ ಕಾಡಿನ ನಡುವೆ ನಡೆಯುವ ಕಥೆ. ಹೆಚ್ಚಿನ ಭಾಗದ ಚಿತ್ರೀಕರಣ ಚಿಕ್ಕಮಗಳೂರಿನಲ್ಲೇ ನಡೆಯುತ್ತದೆ. ನಿಹಾಲ್ ರಾಜ್ ನಾಯಕನಾಗಿ ನಟಿಸುತ್ತಿದ್ದಾರೆ. ನನ್ನ ಶ್ರೀಮತಿ ರಂಜನ ಎಂ. ಕುಮಾವತ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ವಿನೋದ್ ಭಾರತಿ ಛಾಯಾಗ್ರಹಣ, ಸ್ವಾಮಿನಾಥನ್ ಸಂಗೀತ ನಿರ್ದೇಶನ, ಪುನೀತ್ ಆರ್ಯ ಸಾಹಿತ್ಯ ಹಾಗೂ ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಅರವಿಂದ್ ರಾವ್ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ. ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ. ಮೂಲತಃ ಮಾರ್ಷಲ್ ಆರ್ಟ್ಸ್ ಕಲಾವಿದನಾಗಿರುವ ನಾನು, ಈವರೆಗೂ ಸಾಕಷ್ಟು ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಭಾಗವಹಿಸಿ ಪದಕ ಪಡೆದಿದ್ದೇನೆ. ಬೆಂಗಳೂರಿನ ಕೆಲವು ಕಡೆ ಮಾರ್ಷಲ್ ಆರ್ಟ್ಸ್ ತರಬೇತಿ ಶಾಲೆಗಳನ್ನು ನಡೆಸುತ್ತಿದ್ದೇನೆ. ಮೂವತ್ತು ವರ್ಷಗಳಿಂದ ಕನ್ನಡ ಚಿತ್ರಗಳನ್ನೇ ನೋಡಿಕೊಂಡು ಬರುತ್ತಿರುವ ಪ್ರೇಕ್ಷಕ ನಾನು. ಸಿನಿಮಾ ನಿರ್ದೇಶನ ನನ್ನ ಕನಸು. ನಿರ್ದೇಶನದ ಬಗ್ಗೆಯೂ ಓದಿಕೊಂಡು ಬಂದು ಈಗ ಮೊದಲ‌ ನಿರ್ದೇಶನದ ಚಿತ್ರ ಆರಂಭಿಸಿದ್ದೇನೆ ಎಂದು ತಿಳಿಸಿದರು.

ನಾನು ಮೂಲತಃ ರಂಗಭೂಮಿ ಕಲಾವಿದ. “ರಾಣಾ” ಹಾಗೂ “ವಿಷ್ಣುಪ್ರಿಯ” ಚಿತ್ರಗಳಲ್ಲಿ ನಟಿಸಿದ್ದೇನೆ. ಕೆ.ಮಂಜು ಅವರ ಸಹಕಾರ ಮೊದಲಿನಿಂದಲೂ ಇದೆ. ಇಂದು ನಾನು ನಾಯಕನಾಗಿ ನಟಿಸುತ್ತಿರುವ ಮೊದಲ ಚಿತ್ರಕ್ಕೂ ಬಂದು ಅವರು ಹಾರೈಸಿದ್ದು ಸಂತೋಷವಾಗಿದೆ. ಅವರಿಗೆ ಹಾಗೂ ಅವಕಾಶ ನೀಡಿದ ನಿರ್ದೇಶಕ, ನಿರ್ಮಾಪಕರಿಗೆ ಧನ್ಯವಾದ ಎಂದರು ನಾಯಕ ನಿಹಾಲ್ ರಾಜ್.

ಇದನ್ನೂ ಓದಿ: Gold Rate Today: ಮತ್ತೆ ಕೈ ಸುಡುತ್ತಿದೆ ಚಿನ್ನ; ಬಂಗಾರ ದರದಲ್ಲಿ ಇಂದು ಭಾರಿ ಏರಿಕೆ

ಮೊದಲ ನಿರ್ಮಾಣದ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕಿ ರಂಜನ ಎಂ. ಕುಮಾವತ್. ಸಂಗೀತ ನಿರ್ದೇಶಕ ಸ್ವಾಮಿನಾಥನ್, ಛಾಯಾಗ್ರಾಹಕ ವಿನೋದ್ ಭಾರತಿ, ಗೀತರಚನೆಕಾರ ಪುನೀತ್ ಆರ್ಯ, ಸಾಹಸ ನಿರ್ದೇಶಕ ಡಿಫರೆಂಟ್ ಡ್ಯಾನಿ ಹಾಗೂ ನಟ ಅರವಿಂದ್ ರಾವ್ ತಮ್ಮ ಕಾರ್ಯಗಳ ಕುರಿತು ಮಾಹಿತಿ ನೀಡಿದರು.

Continue Reading

ಸಿನಿಮಾ

Naga Chaitanya: ನಾಗ ಚೈತನ್ಯ-ಶೋಭಿತಾ ನಿಶ್ಚಿತಾರ್ಥದ ಫೋಟೊ ಹಂಚಿಕೊಂಡ ಸಮಂತಾ

Naga Chaitanya:ಟಾಲಿವುಡ್‌ ನಟ ನಾಗ ಚೈತನ್ಯ ಆಗಸ್ಟ್ 8ರಂದು ನಟಿ ಶೋಭಿತಾ ಧೂಳಿಪಾಲ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಹೈದರಾಬಾದ್‌ನಲ್ಲಿರುವ ನಾಗಾರ್ಜುನ ಅವರ ನಿವಾಸದಲ್ಲಿ ಸಮಾರಂಭ ಆಯೋಜಿಸಲಾಗಿತ್ತು. ಕುಟುಂಬದ ಆಪ್ತರು, ಸ್ನೇಹಿತರು ಈ ಸಮಾರಂಭದಲ್ಲಿ ಹಾಜರಿದ್ದರು. ಸದ್ಯ ಸಮಾರಂಭದ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.

VISTARANEWS.COM


on

Naga Chaitanya
Koo

ಹೈದರಾಬಾದ್‌: ಟಾಲಿವುಡ್‌ ನಟ ನಾಗ ಚೈತನ್ಯ (Naga Chaitanya) ಆಗಸ್ಟ್ 8ರಂದು ನಟಿ ಶೋಭಿತಾ ಧೂಳಿಪಾಲ (Sobhita Dhulipala) ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಹೈದರಾಬಾದ್‌ನಲ್ಲಿರುವ ನಾಗಾರ್ಜುನ ಅವರ ನಿವಾಸದಲ್ಲಿ ಸಮಾರಂಭ ಆಯೋಜಿಸಲಾಗಿತ್ತು. ಕುಟುಂಬದ ಆಪ್ತರು, ಸ್ನೇಹಿತರು ಈ ಸಮಾರಂಭದಲ್ಲಿ ಹಾಜರಿದ್ದರು. ಇದೀಗ ಶೋಭಿತಾ ಅವರ ಸಹೋದರಿ ಸಮಂತಾ ಧೂಳಿಪಾಲ ನಿಶ್ಚಿತಾರ್ಥದ ಫೋಟೊಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್‌ ಮಾಡಿ ಶುಭ ಹಾರೈಸಿದ್ದಾರೆ.

ಸಮಂತಾ-ಶೋಭಿತಾ ಅವರ ಪೋಷಕರು ನಾಗ ಚೈತನ್ಯ ಅವರ ಪೋಷಕರೊಂದಿಗೆ ನಗು ನಗುತ್ತಾ ಪೋಸ್‌ ಕೊಟ್ಟಿದ್ದಾರೆ. ನಾಗ ಚೈತನ್ಯ ತನ್ನ ಅತ್ತೆ ಮಾವನೊಂದಿಗೆ ನಿಂತಿರುವುದು, ಜೋಡಿ ಇಡೀ ಕುಟುಂಬದೊಂದಿಗೆ ಖುಷಿಯಿಂದ ಇರುವ ಕ್ಷಣಗಳ ಫೋಟೊ ಇದಾಗಿದೆ.

ಮಗನ ನಿಶ್ಚಿತಾರ್ಥದ ಬಗ್ಗೆ ನಾಗಾರ್ಜುನ ಮನಸ್ಸು ಬಿಚ್ಚಿ ಮಾತನಾಡಿದ್ದಾರೆ. ʼʼಶೋಭಿತಾ ಅವರ ಪೋಷಕರೂ ನಾಗ ಚೈತನ್ಯನನ್ನು ಪ್ರೀತಿಸುತ್ತಾರೆ. ಅವನು ಖುಷಿಯಿಂದ ಇರಬೇಕು ಎನ್ನುವುದೇ ನನ್ನ ಆಸೆ. ನನ್ನ ಇಬ್ಬರ ಮಕ್ಕಳ ಬಗ್ಗೆಯೂ ಹೆಮ್ಮೆ ಇದೆʼʼ ಎಂದು ಹೇಳಿದ್ದಾರೆ. ಮದುವೆ ಹೀಗೆ ಆಗಬೇಕು ಎನ್ನುವುದರ ಬಗ್ಗೆ ಇದುವರೆಗೆ ಯಾವುದೇ ಯೋಜನೆ ಹಾಕಿಕೊಂಡಿಲ್ಲ ಎಂದೂ ಅವರು ತಿಳಿಸಿದ್ದಾರೆ.

ಈ ಹಿಂದೆ ನಾಗ ಚೈತನ್ಯ 2017ರಲ್ಲಿ ಬಹುಭಾಷಾ ನಟಿ, ಸೂಪರ್‌ ಸ್ಟಾರ್‌ ಸಮಂತಾ ರುತ್‌ ಪ್ರಭು ಅವರನ್ನು ಮದುವೆಯಾಗಿದ್ದರು. ಪ್ರೀತಿಸಿ ಮದುವೆಯಾಗಿದ್ದರೂ ಬಳಿಕ ಭಿನ್ನಾಭಿಪ್ರಾಯ ತಲೆದೋರಿದ ಹಿನ್ನಲೆಯಲ್ಲಿ 2021ರಲ್ಲಿ ದಂಪತಿ ವಿಚ್ಛೇದನ ಪಡೆದುಕೊಂಡಿದ್ದರು.

ನಾಗ ಚೈತನ್ಯ-ಶೋಭಿತಾ ಲವ್‌ ಸ್ಟೋರಿ

2022ರ ಮೇಯಲ್ಲಿ ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಮೊದಲ ಬಾರಿಗೆ ಹೈದರಾಬಾದ್‌ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಶೋಭಿತಾ ಧೂಳಿಪಾಲ ತಮ್ಮ ʻಮೇಜರ್ʼ ಚಿತ್ರದ ಪ್ರಚಾರಕ್ಕಾಗಿ ನಗರಕ್ಕೆ ಬಂದಿದ್ದರು. ಆ ಸಮಯದಲ್ಲಿ ಅವರು ಜನ್ಮದಿನ ಆಚರಿಸಿಕೊಂಡಿದ್ದರು. ನಾಗ ಚೈತನ್ಯ ಕೂಡ ಪಾರ್ಟಿಯಲ್ಲಿ ಭಾಗವಹಿಸಿದ್ದರು. ಅಲ್ಲಿಂದ ಇಬ್ಬರೂ ಸ್ನೇಹಿತರಾದರು. ಅವರ ಸ್ನೇಹ ಬಲವಾಗಿ ಡೇಟಿಂಗ್ ಪ್ರಾರಂಭಿಸಿದರು. ಎರಡು ವರ್ಷಗಳ ಕಾಲ ಒಟ್ಟಿಗೆ ಸಮಯ ಕಳೆದಿದ್ದರು. ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಇಬ್ಬರೂ ಜತೆಯಾಗಿ ಪ್ರವಾಸ ಮಾಡುವ ಹಲವು ಫೋಟೊಗಳು ವೈರಲ್‌ ಆಗಿದ್ದವು. ಆದರೆ ಪ್ರತಿ ಬಾರಿ ಡೇಟಿಂಗ್‌ ವಂದತಿ ಹಬ್ಬಿದ್ದಾಗಲೂ ಜೋಡಿ ಈ ಬಗ್ಗೆ ಮಾತನಾಡಿರಲಿಲ್ಲ. ಇದೀಗ ಉಂಗುರ ಬದಲಾಯಿಸುವ ಮೂಲಕ ತಮ್ಮ ಪ್ರೀತಿಗೆ ಅಧಿಕೃತ ಮುದ್ರೆ ಒತ್ತಿದ್ದಾರೆ.

2022ರಲ್ಲಿ ನಾಗ ಚೈತನ್ಯ ʼಲಾಲ್‌ ಸಿಂಗ್‌ ಛಡ್ಡಾʼ ಸಿನಿಮಾ ಮೂಲಕ ಬಾಲಿವುಡ್‌ಗೆ ಪ್ರವೇಶಿಸಿದ್ದರೂ ಹೇಳಿಕೊಳ್ಳುವಂತಹ ಬ್ರೇಕ್‌ ಸಿಗಲಿಲ್ಲ. ಕಳೆದ ವರ್ಷ ತಮಿಳು ಮತ್ತು ತೆಲುಗಿನಲ್ಲಿ ತೆರೆಕಂಡ ʼಕಸ್ಟಡಿʼ ಚಿತ್ರವೂ ಬಾಕ್ಸ್‌ ಆಫೀಸ್‌ನಲ್ಲಿ ಮುಗ್ಗರಿಸಿತ್ತು. ಜತೆಗೆ ʼಧೂತʼ ಎನ್ನುವ ವೆಬ್‌ಸೀರಿಸ್‌ನಲ್ಲಿ ಕಾಣಿಸಿಕೊಂಡಿದ್ದರು. ಇದು ತೆಲುಗಿನಲ್ಲಿ ತಯಾರಾಗಿತ್ತು. ಸದ್ಯ ʼಥಂಡೆಲ್‌ʼ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇನ್ನು ಶೋಭಿತಾ 2016ರಲ್ಲಿ ಬಿಡುಗಡೆಯಾದ ʼರಾಮನ್‌ ರಾಘವ್‌ 2.0ʼ ಹಿಂದಿ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಬಳಿಕ ತೆಲುಗು, ತಮಿಳು, ಮಲಯಾಳಂನಲ್ಲಿಯೂ ಅಭಿನಯಿಸಿರುವ ಅವರು ಸದ್ಯ ʼಮಂಕಿ ಮ್ಯಾನ್‌ʼ ಎನ್ನುವ ಇಂಗ್ಲಿಷ್‌ ಚಿತ್ರ ಮತ್ತು ಹಿಂದಿಯ ʼಸಿತಾರಾʼ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Naga Chaitanya: ಸಮಂತಾಗೆ ಪ್ರಪೋಸ್‌ ಮಾಡಿದ ದಿನವೇ ಎಂಗೇಜ್‌ ಆದ ನಾಗಚೈತನ್ಯ! ಮಾಜಿ ಪತ್ನಿ ವಿರುದ್ಧ ಸೇಡು ತೀರಿಸಿಕೊಂಡ್ರಾ ನಟ?

Continue Reading
Advertisement
Viral Video
ವೈರಲ್ ನ್ಯೂಸ್9 mins ago

Viral Video: ಅಬ್ಬಾ…ಈತ ಮನುಷ್ಯನೋ ರಾಕ್ಷಸನೋ..? ಪತ್ನಿಯ ಕಾಲುಗಳನ್ನು ಬೈಕ್‌ಗೆ ಕಟ್ಟಿ ರೋಡಲ್ಲಿ ಎಳೆದಾಡಿದ ಪಾಪಿ ಪತಿ-ವಿಡಿಯೋ ಇದೆ

Sunil Gavaskar
ಕ್ರೀಡೆ20 mins ago

Sunil Gavaskar: ಪದಕ ಗೆಲ್ಲಲು ವಿಫಲವಾದ ಲಕ್ಷ್ಯ ಸೇನ್ ವಿರುದ್ಧ ವಾಗ್ದಾಳಿ ನಡೆಸಿದ ಗಾವಸ್ಕರ್

PM Kisan Samman Nidhi
ಮನಿ-ಗೈಡ್32 mins ago

PM Kisan Samman Nidhi: ಈ ದಿನಾಂಕದಂದು ಜಮೆ ಆಗಲಿದೆ ಕಿಸಾನ್‌ ಸಮ್ಮಾನ್‌ ನಿಧಿಯ 18ನೇ ಕಂತು; ಹೊಸದಾಗಿ ಅಪ್ಲೈ ಮಾಡುವ ವಿಧಾನ ಇಲ್ಲಿದೆ

SP leader arrested
ದೇಶ1 hour ago

SP Leader arrest: ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ; ಸಮಾಜವಾದಿ ಪಕ್ಷದ ನಾಯಕ ಅರೆಸ್ಟ್‌

Group Clash
ಕರ್ನಾಟಕ1 hour ago

Group Clash: ಅರಕೆರೆ ಶೆಡ್‌ನಲ್ಲಿ ದರ್ಶನ್ ಕಿರಿಕ್‌‌; ಯೂತ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಕ್ಕಾಗಿ‌ ನಡುರಸ್ತೆಯಲ್ಲೇ ಫೈಟ್

Tungabhadra Dam
ಹುಬ್ಬಳ್ಳಿ1 hour ago

Tungabhadra Dam: ಜಲಾಶಯ ನಿರ್ವಹಣೆ ಕುರಿತ ಕೇಂದ್ರ ಸಮಿತಿ ಸಲಹೆಯನ್ನು ರಾಜ್ಯ ಸರ್ಕಾರ ಧಿಕ್ಕರಿಸಿದೆ; ಪ್ರಲ್ಹಾದ್‌ ಜೋಶಿ ಆರೋಪ

Kannada New Movie
ಬೆಂಗಳೂರು1 hour ago

Kannada New Movie: ರವೀಂದ್ರ ಸೊರಗಾವಿ ಕಂಠಸಿರಿಯಲ್ಲಿ ʼಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರುʼ ಚಿತ್ರದ ಹಾಡು

Murder Case
Latest1 hour ago

Murder Case: 90 ಲಕ್ಷ ರೂ. ಠೇವಣಿ ಎಗರಿಸಲು ವೃದ್ಧನ ಕೊಂದ ಮಹಿಳಾ ಬ್ಯಾಂಕ್‌ ಮ್ಯಾನೇಜರ್‌! ಪ್ಲ್ಯಾನ್‌ ಹೇಗಿತ್ತು ನೋಡಿ!

Murder case
ಚಿಕ್ಕೋಡಿ1 hour ago

Murder Case : ಕೆಲ್ಸ ಜಾಸ್ತಿ ಮನೆಗೆ ಬರಲ್ಲ ಎಂದವನು, ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಬೀದಿ ಹೆಣವಾದ

Vastu Tips
ಧಾರ್ಮಿಕ2 hours ago

Vastu Tips: ಈ ವಸ್ತುಗಳನ್ನು ಮನೆಯಲ್ಲಿಟ್ಟರೆ ಸಂತೋಷ, ಸಮೃದ್ಧಿ, ನೆಮ್ಮದಿ ಸಿಗುತ್ತವೆ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು7 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ7 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌