Raichur News: ಶಿಕ್ಷಕಿಗೆ ಅಶ್ಲೀಲ ಮೆಸೇಜ್‌ ಕಳಿಸಿದ ಪ್ರಭಾರಿ ಪ್ರಾಚಾರ್ಯನಿಗೆ ಧರ್ಮದೇಟು - Vistara News

ಕ್ರೈಂ

Raichur News: ಶಿಕ್ಷಕಿಗೆ ಅಶ್ಲೀಲ ಮೆಸೇಜ್‌ ಕಳಿಸಿದ ಪ್ರಭಾರಿ ಪ್ರಾಚಾರ್ಯನಿಗೆ ಧರ್ಮದೇಟು

Raichur News: ಮೆಹಬೂಬ್ ಅಲಿ ಎಂಬಾತನೇ ಏಟು ತಿಂದ ಪ್ರಭಾರಿ ಪ್ರಾಚಾರ್ಯ. ಈತ ಶಿಕ್ಷಕಿಯ ಮೊಬೈಲ್‌ಗೆ ಅಶ್ಲೀಲ ಮೆಸೇಜ್‌ಗಳನ್ನು ಕಳಿಸುತ್ತಿದ್ದನಲ್ಲದೆ, ರಾತ್ರಿ ಮಲಗಲು ಬಾ ಎಂದೂ ಕರೆದಿದ್ದ.

VISTARANEWS.COM


on

raichur news misbehave
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯಚೂರು: ರಾಯಚೂರು ನಗರ (Raichur news) ಸಮೀಪದ ಯರಮರಸ್ ಬಳಿಯ ಆದರ್ಶ ವಿದ್ಯಾಲಯದ ಪ್ರಭಾರಿ ಪ್ರಾಚಾರ್ಯನೊಬ್ಬ (Principal in charge) ತರಬೇತಿಗೆ ಬಂದಿದ್ದ ಶಿಕ್ಷಕಿ ಜತೆ ಅನುಚಿತವಾಗಿ (Misbehave) ವರ್ತಿಸಿದ್ದರಿಂದ ಥಳಿತಕ್ಕೊಳಗಾದ (Beaten) ಘಟನೆ ಸೋಮವಾರ ನಡೆದಿದೆ.

ಮೆಹಬೂಬ್ ಅಲಿ ಎಂಬಾತನೇ ಏಟು ತಿಂದ ಪ್ರಭಾರಿ ಪ್ರಾಚಾರ್ಯ. ಈತ ಶಿಕ್ಷಕಿಯ ಮೊಬೈಲ್‌ಗೆ ಅಶ್ಲೀಲ ಮೆಸೇಜ್‌ಗಳನ್ನು ಕಳಿಸುತ್ತಿದ್ದನಲ್ಲದೆ, ರಾತ್ರಿ ಮಲಗಲು ಬಾ ಎಂದೂ ಕರೆದಿದ್ದ. ಇದರಿಂದ ನೊಂದ ಶಿಕ್ಷಕಿ ತಮ್ಮವರಿಗೆ ಮಾಹಿತಿ ತಿಳಿಸಿದ್ದರು. ಶಾಲೆಗೆ ಬಂದ ಶಿಕ್ಷಕಿಯ ಬಂಧುಗಳು, ಸಾರ್ವಜನಿಕರು ಪ್ರಭಾರ ಪ್ರಾಚಾರ್ಯನಿಗೆ ಚೆನ್ನಾಗಿ ಥಳಿಸಿ ಬುದ್ಧಿ ಕಲಿಸಿದ್ದಾರೆ.

ಪ್ರಭಾರಿ ಪ್ರಾಚಾರ್ಯ ಮೆಹಬೂಬ್ ಅಲಿ, ತಾನು ಮಾಡಿದ್ದು ತಪ್ಪಾಗಿದೆ. ಇನ್ನು ಮುಂದೆ ಹಾಗೆ ಮಾಡುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟಿದ್ದಾನೆ. ಶಿಕ್ಷಕಿಯ ಕಾಲಿಗೆ ಬಿದ್ದು ಕ್ಷಮೆ ಕೇಳಿದ್ದಾನೆ. ಈ ಕುರಿತು ಗ್ರಾಮೀಣ ಠಾಣೆ ಅಥವಾ ಮಹಿಳಾ ಠಾಣೆಯಲ್ಲಾಗಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.

ಬೆಂಗಳೂರಿನಲ್ಲಿ ಮತ್ತೊಬ್ಬ ಟೆಕ್ಕಿ ಮಿಸ್ಸಿಂಗ್‌! ಪತಿಯನ್ನು ಹುಡುಕಿಕೊಡಿ ಎಂದು ಅಂಗಲಾಚಿದ ಪತ್ನಿ

ಬೆಂಗಳೂರು: ಈ ಹಿಂದೆ ಕೂಡ ಟೆಕ್ಕಿಯೊಬ್ಬರು (Techie Missingನಿಗೂಢವಾಗಿ ನಾಪತ್ತೆಯಾಗಿದ್ದರು. ಇದರ ಬೆನ್ನಲ್ಲೇ ಎಟಿಎಂನಲ್ಲಿ ಹಣ ಡ್ರಾ ಮಾಡಲು ಹೋದ ಮತ್ತೊಬ್ಬ ಟೆಕ್ಕಿ ನಾಪತ್ತೆಯಾಗಿದ್ದಾರೆ. ಪತಿಯನ್ನು ಹುಡುಕಿ ಕೊಡಿ ಪ್ಲೀಸ್‌ ಅಂತ ಪತ್ನಿ ಬೇಡಿಕೊಳ್ಳುತ್ತಿದ್ದಾರೆ.

ವಿಪುಲ್ ಗುಪ್ತಾ ಎಂಬ ಟೆಕ್ಕಿ ಕಾಣೆಯಾದವರು. ಆತ ಹೊರಗೆ ಹೋಗಿದ್ದಕ್ಕೆ ಸುಳಿವು ಎಂಬಂತೆ ಒಂದು ಸಿಸಿಟಿವಿ ವಿಡಿಯೋ ಬಿಟ್ಟರೆ, ಎಲ್ಲಿ ಹೋದ ಎಂಬ ಮಾಹಿತಿ ಮಾತ್ರ ಕಿಂಚಿತ್ತು ಕುಟುಂಬಸ್ಥರಿಗಿಲ್ಲ. ಪತಿಯನ್ನು ಹುಡುಕಿಕೊಡಿ ಎಂದು ಪತ್ನಿ ಶ್ರೀಪರ್ಣದತ್ತ ಗೋಗರೆಯುತ್ತಿದ್ದಾರೆ.

ಸೋಲೋ ರೈಡ್‌ಗೆ ಹೋಗುತ್ತಿದ್ದವನ ಸುಳಿವೇ ಇಲ್ಲ!

ಈ ಹಿಂದೆ ಅಮಿತಾಬ್ ಎಂಬ ಟೆಕ್ಕಿ ಕೂಡ ಇದೇ ರೀತಿ ನಿಗೂಢವಾಗಿ ನಾಪತ್ತೆಯಾಗಿದ್ದ . ಆದರೆ ಆತನ ಸುಳಿವು ಇಂದಿಗೂ ಸಿಕ್ಕಿಲ್ಲ. ಇನ್ನು ಕೊಡಿಗೇಹಳ್ಳಿಯ ಟಾಟಾ ನಗರ ನಿವಾಸಿಯಾಗಿರುವ ವಿಪುಲ್‌ಗೆ ಇಬ್ಬರು ಮಕ್ಕಳಿದ್ದಾರೆ. ಪತಿ -ಪತ್ನಿ ಇಬ್ಬರಿಗೂ ಪೋಷಕರಿಲ್ಲ. ಆದರೂ ದುಡಿದು ತಮ್ಮ ಸಂಸಾರ ಸಾಗಿಸುತ್ತಿದ್ದರು. ಶ್ರೀಮಂತಿಕೆ ಇಲ್ಲದಿದ್ದರೂ ಜೀವನಕ್ಕಾಗುವಷ್ಟು ಸಿರಿವಂತರೇ ಆಗಿದ್ದರು. ಅಂತಹ ಕುಟುಂಬದಲ್ಲಿ ಏಕಾಏಕಿ ಪತಿ ಕಾಣೆಯಾಗಿರುವುದು ಪತ್ನಿ ಶ್ರೀಪರ್ಣ ದತ್ತಾಳಿಗೆ ನಿಜಕ್ಕೂ ಆತಂಕ ಮೂಡಿಸಿದೆ.

ವಿಪುಲ್‌ ಕಾಣೆಯಾಗಿ ಹೆಚ್ವು ಕಮ್ಮಿ ಎಂಟು ದಿನಗಳಾಗಿದೆ. ಆಗಸ್ಟ್ 4ರಂದು ಮನೆ ಪಕ್ಕದಲ್ಲಿರುವ ಹೆಚ್ ಡಿ ಎಫ್ ಸಿ ಬ್ಯಾಂಕ್‌ನಲ್ಲಿ ಒಟ್ಟು 1,80,000 ರೂ. ಹಣ ಡ್ರಾ ಮಾಡಿದ್ದಾರೆ. ನಂತರ ನಿಂಜಾ ಬೈಕ್ ತೆಗೆದುಕೊಂಡು ಹೊರ ಹೋದವನ ಸುಳಿವೂ ಕೂಡ ಇರಲಿಲ್ಲ. ಎಲ್ಲಿಗಾದರೂ ಹೋಗುವಾಗ ಪತ್ನಿಗೆ ಹೇಳಿ ಹೋಗಿದ್ದರಂತೆ. ಆದರೆ ಈ ಬಾರಿ ಯಾರಿಗೂ ವಿಚಾರ ತಿಳಿಸದೆ ಮನೆಯಿಂದ ಹೊರ ಹೋಗಿದ್ದಾರೆ. ರಾತ್ರಿಯಾದರೂ ಬಾರದ ಹಿನ್ನೆಲೆ ಮೊಬೈಲ್‌ ನಂಬರ್‌ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಬಂದಿದೆ. ಆತನ ಸ್ನೇಹಿತರಿಗೂ ಕರೆ ಮಾಡಿ ಕೇಳಿದಾಗ ಅವರ್ಯಾರಿಗೂ ವಿಪುಲ್ ಬಗ್ಗೆ ಮಾಹಿತಿಯೇ ಇರಲಿಲ್ಲ.

ಇದನ್ನೂ ಓದಿ: Murder Case : ಶೆಡ್ಡಿಗೆ ಬಾರೋ ಎಂದ ಸ್ನೇಹಿತ; ಮಲಗಿದ್ದವನ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಕೊಲೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಅಬ್ಬಾ…ಈತ ಮನುಷ್ಯನೋ ರಾಕ್ಷಸನೋ..? ಪತ್ನಿಯ ಕಾಲುಗಳನ್ನು ಬೈಕ್‌ಗೆ ಕಟ್ಟಿ ರೋಡಲ್ಲಿ ಎಳೆದಾಡಿದ ಪಾಪಿ ಪತಿ-ವಿಡಿಯೋ ಇದೆ

Viral Video: ದಂಪತಿ ನಹರ್‌ಸಿಂಗ್‌ಪುರದಲ್ಲಿ ಬಂದು ನೆಲೆಸಿದ್ದರು. ನೆರೆಹೊರೆಯವರು ಹೇಳುವ ಪ್ರಕಾರ ಇಬ್ಬರು ಸದಾ ಜಗಳವಾಡುತ್ತಿದ್ದರು. ತಿಂಗಳ ಹಿಂದೆ ಸುಮಿತ್ರಾ ಸಹೋದರಿ ಮನೆಗೆ ಹೋಗುವ ವಿಚಾರಕ್ಕೆ ಇಬ್ಬರು ನಡುವೆ ಜಗಳವಾಗಿತ್ತು ಎನ್ನಲಾಗಿದೆ. ಹೀಗಾಗಿ ಸಿಟ್ಟಿನ ಭರದಲ್ಲಿ ಮೇಘಾವಲ್‌ ಸುಮಿತ್ರಾಳ ಕಾಲನ್ನು ಬೈಕಿಗೆ ಕಟ್ಟಿ ಚಲಾಯಿಸಿದ್ದಾನೆ. ಘಟನೆಯಲ್ಲಿ ಸುಮಿತ್ರಾಗೆ ಗಂಭೀರ ಗಾಯಗಳಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎನ್ನಲಾಗಿದೆ.

VISTARANEWS.COM


on

Viral Video
Koo

ಜೈಪುರ: ಕಟ್ಟಿಕೊಂಡ ಹೆಂಡತಿಯ ಕಾಲುಗಳನ್ನು ಬೈಕ್‌ ಕಟ್ಟಿ ರಸ್ತೆಯಲ್ಲಿ ಪಾಪಿ ಪತಿಯೊಬ್ಬ ಎಳೆದಾಡಿದ ಅಮಾನುಷ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಈ ಅಮಾನವೀಯ ಕೃತ್ಯವನ್ನು ಸ್ಥಳೀಯರೊಬ್ಬರು ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿದ್ದು, ಎಲ್ಲೆಡೆ ವೈರಲ್‌(Viral Video) ಆಗುತ್ತಿದೆ. ಇನ್ನು ನಾಗೌರ್‌ ಜಿಲ್ಲೆಯಲ್ಲಿ ಈ ಹೀನ ಕೃತ್ಯ ಒಂದು ತಿಂಗಳ ಹಿಂದೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಘಟನೆ ವಿವರ:

ಆರು ತಿಂಗಳ ಹಿಂದೆ ಆರೋಪಿ ನಹರ್‌ಸಿಂಗ್‌ಪುರ ನಿವಾಸಿ ಪ್ರೇರಮಂ ಮೇಘಾವಲ್‌ ಮತ್ತು ಸುಮಿತ್ರಾ ವಿವಾಹವಾಗಿದ್ದರು. ಬಿಹಾರ ಮೂಲದ ಸುಮಿತ್ರಾಳನ್ನು ಆಕೆಯ ಪೋಷಕರು ಅಪಾರ ವರದಕ್ಷಿಣೆ ನೀಡಿ ಮೇಘಾವಲ್‌ಗೆ ಮದುವೆ ಮಾಡಿಕೊಟ್ಟಿದ್ದರು. ಬಳಿಕ ದಂಪತಿ ನಹರ್‌ಸಿಂಗ್‌ಪುರದಲ್ಲಿ ಬಂದು ನೆಲೆಸಿದ್ದರು. ನೆರೆಹೊರೆಯವರು ಹೇಳುವ ಪ್ರಕಾರ ಇಬ್ಬರು ಸದಾ ಜಗಳವಾಡುತ್ತಿದ್ದರು. ತಿಂಗಳ ಹಿಂದೆ ಸುಮಿತ್ರಾ ಸಹೋದರಿ ಮನೆಗೆ ಹೋಗುವ ವಿಚಾರಕ್ಕೆ ಇಬ್ಬರು ನಡುವೆ ಜಗಳವಾಗಿತ್ತು ಎನ್ನಲಾಗಿದೆ. ಹೀಗಾಗಿ ಸಿಟ್ಟಿನ ಭರದಲ್ಲಿ ಮೇಘಾವಲ್‌ ಸುಮಿತ್ರಾಳ ಕಾಲನ್ನು ಬೈಕಿಗೆ ಕಟ್ಟಿ ಚಲಾಯಿಸಿದ್ದಾನೆ. ಘಟನೆಯಲ್ಲಿ ಸುಮಿತ್ರಾಗೆ ಗಂಭೀರ ಗಾಯಗಳಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎನ್ನಲಾಗಿದೆ.

ಘಟನೆ ಬೆಳಕಿಗೆ ಬಂದಿದ್ದೇ ರೋಚಕ

ಇನ್ನು ಒಂದು ತಿಂಗಳ ಹಿಂದೆ ನಡೆದಿದ್ದ ಘಟನೆ ವಿಡಿಯೋ ಈಗ ವೈರಲ್‌ ಆಗುತ್ತಿದೆ. ಮೇಘವಾಲ್‌ನ ಸ್ನೇಹಿತನೇ ವಿಡಿಯೋ ಹರಿಬಿಟ್ಟಿದ್ದಾನೆ. ಈ ಘಟನೆ ನಂತರ ಮೇಘವಾಲ್‌ ತನ್ನ ಪತ್ನಿಯನ್ನು ಮನೆಯಿಂದ ಹೊರ ಹಾಕಿದ್ದ. ಆಕೆ ಜೈಸಲ್ಮೇರ್‌ನಲ್ಲಿರುವ ತನ್ನ ಸಹೋದರಿ ಮನೆಯಲ್ಲಿ ವಾಸವಾಗಿದ್ದಾಳೆ.ಎರಡು ದಿನಗಳ ಹಿಂದೆ ಆರೋಪಿ ತನ್ನ ಸ್ನೇಹಿತನೊಂದಿಗೆ ಮದ್ಯ ಸೇವಿಸಿದ್ದ. ಇದೇ ವೇಳೆ ಸ್ನೇಹಿತರಿಬ್ಬರ ನಡುವೆ ಜಗಳ ನಡೆದಿದ್ದು, ಈ ಜಗಳದಲ್ಲಿ ಸ್ನೇಹಿತ ಆರೋಪಿಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾನೆ.

ಕೆಲವೇ ಸಮಯದಲ್ಲಿ ಈ ವಿಡಿಯೋ ವೈರಲ್ ಆಗತೊಡಗಿತು. ವೀಡಿಯೋ ನೋಡಿದ ನಾಗೌರ್‌ನ ಪಂಚೌರಿ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಗುರುತಿಸಿ ಸೋಮವಾರ ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆಯ ಪತ್ನಿ ಇನ್ನೂ ಯಾವುದೇ ದೂರು ದಾಖಲಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಹೀಗಾಗಿ ಪೊಲೀಸರು ತಮ್ಮ ಮಟ್ಟದಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಇದರೊಂದಿಗೆ ಆರೋಪಿಯ ಪತ್ನಿ ಮತ್ತು ಆತನ ಕುಟುಂಬ ಸದಸ್ಯರನ್ನು ಸಂಪರ್ಕಿಸಲು ಪ್ರಯತ್ನಿಸಲಾಗುತ್ತಿದೆ.

ಇದನ್ನೂ ಓದಿ: Viral Video: ಪ್ಯಾರಿಸ್‌ ಒಲಿಂಪಿಕ್‌ ಸಮಾರೋಪ ಸಮಾರಂಭದಲ್ಲಿ ನಟನಿಗೆ ಕಿಸ್ಸಿಂಗ್-‌ ವಿಡಿಯೋ ವೈರಲ್‌

Continue Reading

ದೇಶ

SP Leader arrest: ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ; ಸಮಾಜವಾದಿ ಪಕ್ಷದ ನಾಯಕ ಅರೆಸ್ಟ್‌

SP Leader arrest:ಕೆಲಸ ಕೊಡಿಸುವಂತೆ ಮನವಿ ಮಾಡಿಕೊಂಡು ನವಾಬ್‌ ಸಿಂಗ್‌ ಮನೆಗೆ ಮಹಿಳೆಯೊಬ್ಬಳು ತೆರಳಿದ್ದಳು. ಈ ವೇಳೆ ಆಕೆಯ ಜೊತೆ ಇದ್ದ ಬಾಲಕಿಗೆ ನವಾಬ್‌ ಸಿಂಗ್‌ ಕಿರುಕುಳ ನೀಡಿದ್ದಾನೆ. ಬಟ್ಟೆ ಬಿಚ್ಚುವಂತೆ ಬಾಲಕಿಗೆ ಒತ್ತಾಯಿಸಿ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಈ ವೇಳೆ ಪೊಲೀಸರು ಸ್ಥಳಕ್ಕೆ ಧಾವಿಸಿ ಬಾಲಕಿಯನ್ನು ರಕ್ಷಿಸಿದ್ದಾರೆ. ನವಾಬ್‌ ಸಿಂಗ್‌ನನ್ನು ಅರೆಸ್ಟ್‌ ಮಾಡಿದ್ದಾರೆ.

VISTARANEWS.COM


on

SP leader arrested
Koo

ಲಖನೌ: 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ(Physical abuse)ಕ್ಕೆ ಯತ್ನಿಸಿದ ಆರೋಪದಲ್ಲಿ ಸಮಾಜವಾದಿ ಪಕ್ಷದ ನಾಯಕನನ್ನು ಅರೆಸ್ಟ್‌(SP Leader arrest) ಮಾಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಎಸ್‌ಪಿ ನಾಯಕ ನವಾಬ್‌ ಸಿಂಗ್‌ ಯಾದವ್‌ ಬಂಧಿತ ಆರೋಪಿ. ಮಧ್ಯರಾತ್ರಿ ಪೊಲೀಸ್‌ ಸಹಾಯವಾಣಿ ಬಂದ ದೂರಿನಾಧಾರದಲ್ಲಿ ಪೊಲೀಸರು ರೇಡ್‌ ಮಾಡಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗುತ್ತಿದೆ.

ಕೆಲಸ ಕೊಡಿಸುವಂತೆ ಮನವಿ ಮಾಡಿಕೊಂಡು ನವಾಬ್‌ ಸಿಂಗ್‌ ಮನೆಗೆ ಮಹಿಳೆಯೊಬ್ಬಳು ತೆರಳಿದ್ದಳು. ಈ ವೇಳೆ ಆಕೆಯ ಜೊತೆ ಇದ್ದ ಬಾಲಕಿಗೆ ನವಾಬ್‌ ಸಿಂಗ್‌ ಕಿರುಕುಳ ನೀಡಿದ್ದಾನೆ. ಬಟ್ಟೆ ಬಿಚ್ಚುವಂತೆ ಬಾಲಕಿಗೆ ಒತ್ತಾಯಿಸಿ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಈ ವೇಳೆ ಪೊಲೀಸರು ಸ್ಥಳಕ್ಕೆ ಧಾವಿಸಿ ಬಾಲಕಿಯನ್ನು ರಕ್ಷಿಸಿದ್ದಾರೆ. ನವಾಬ್‌ ಸಿಂಗ್‌ನನ್ನು ಅರೆಸ್ಟ್‌ ಮಾಡಿದ್ದಾರೆ.

ಸದ್ಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ತನ್ನ ವಿರುದ್ಧ ಪಿತೂರಿ ನಡೆಸಲಾಗಿದೆ ಎಂದು ದೂರಿದ್ದಾನೆ. ಇನ್ನು ನವಾಬ್ ಸಿಂಗ್ ವಿರುದ್ಧ ಆರೋಪ ಕೇಳಿಬರುತ್ತಿದ್ದಂತೆ ಆತನಿಂದ ಪಕ್ಷದ ನಾಯಕರು ಅಂತರ ಕಾಯ್ದುಕೊಂಡಿದ್ದಾರೆ. ಸಿಂಗ್ ಅವರು ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ ಎಂದು ಕನೌಜ್ ಜಿಲ್ಲಾಧ್ಯಕ್ಷ ಕಲೀಂ ಖಾನ್ ಹೇಳಿದ್ದಾರೆ.

ಇದನ್ನೂ ಓದಿ: Kolkata Doctor Murder Case: ನೋ ಸೇಫ್ಟಿ…ನೋ ಡ್ಯೂಟಿ- ವೈದ್ಯೆ ಕೊಲೆ ಖಂಡಿಸಿ ದೇಶವ್ಯಾಪಿ ಭಾರೀ ಪ್ರತಿಭಟನೆ

Continue Reading

ಕರ್ನಾಟಕ

Group Clash: ಅರಕೆರೆ ಶೆಡ್‌ನಲ್ಲಿ ದರ್ಶನ್ ಕಿರಿಕ್‌‌; ಯೂತ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಕ್ಕಾಗಿ‌ ನಡುರಸ್ತೆಯಲ್ಲೇ ಫೈಟ್

Group Clash: ಬೊಮ್ಮನಹಳ್ಳಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮಿಥುನ್‌ ಮತ್ತು ಮಂಜಪ್ಪ ಸ್ಪರ್ಧೆ ಮಾಡುತ್ತಿದ್ದಾರೆ. ಇದೇ ವಿಚಾರಕ್ಕೆ ಒಂದೇ ಬಣದ ಎರಡು ಗುಂಪುಗಳು ನಡುರಸ್ತೆಯಲ್ಲಿ ಕೈ ಕೈ ಮಿಲಾಯಿಸಿಕೊಂಡಿವೆ.

VISTARANEWS.COM


on

Group Clash
Koo

ಬೆಂಗಳೂರು: ಪಟ್ಟಣಗೆರೆ ಶೆಡ್ ನಂತರ ಮತ್ತೊಂದು ‌ಶೆಡ್‌ನಲ್ಲಿ ಗಲಾಟೆ (Group Clash) ನಡೆದಿರುವುದು ಕಂಡುಬಂದಿದೆ. ಬೊಮ್ಮನಹಳ್ಳಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಕ್ಕಾಗಿ ಗಲಾಟೆ ನಡೆದಿದ್ದು, ಒಂದೇ ಬಣದ ಎರಡು ಗುಂಪುಗಳು ಕೈ ಕೈ ಮಿಲಾಯಿಸಿಕೊಂಡಿವೆ.

ಬೊಮ್ಮನಹಳ್ಳಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಬೊಮ್ಮನಹಳ್ಳಿಯ ಮಿಥುನ್‌ ಮತ್ತು ಮಂಜಪ್ಪ ಸ್ಪರ್ಧೆ ಮಾಡುತ್ತಿದ್ದಾರೆ. ಇದೇ ವಿಚಾರಕ್ಕೆ ಕೆಪಿಸಿಸಿ ಮಾಜಿ ಸದಸ್ಯ ಶ್ರೀನಿವಾಸ್ ಮೂರ್ತಿ ಹಾಗೂ ಮತ್ತೊಬ್ಬ ಪ್ರಭಾವಿ ನಾಯಕನ ನಡುವೆ ಜಿದ್ದಾಜಿದ್ದಿ ನಡೆದಿದೆ. ಹುಳಿಮಾವು ಮಂಜಪ್ಪ ಪರ ಶ್ರೀನಿವಾಸ್ ಮೂರ್ತಿ ಆ್ಯಂಡ್ ಸನ್ಸ್ ಬ್ಯಾಟಿಂಗ್ ಮಾಡಿದ್ದಾರೆ.

ಯುವ ನಾಯಕ ಮಿಥುನ್‌ ಪರ ಬಿಜೆಪಿಯ ನಿಖಿಲ್, ಮಧು, ಅಂಬರೀಷ್ ಅಖಾಡಕ್ಕೆ ಇಳಿದು, ಪ್ರಚಾರ ಮಾಡಲು ಶೆಡ್‌ನಲ್ಲಿ ಪಾರ್ಟಿ ಆಯೋಜಿಸಿದ್ದರು. ಅಂಬರೀಶ್ ಬರ್ತಡೇ ನೆಪದಲ್ಲಿ ಮಿಥುನ್‌ ಪರ ವೋಟ್ ಮಾಡುವಂತೆ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಪಾರ್ಟಿಯಲ್ಲಿ ಶ್ರೀನಿವಾಸ್ ಮೂರ್ತಿ ಮಗ ದರ್ಶನ್, ನಿಖಿಲ್ ನಡುವೆ ಗಲಾಟೆ ನಡೆದಿದೆ. ಮಂಜಪ್ಪ ಪರವಾಗಿ ಪ್ರಚಾರ ಮಾಡಬೇಕೆಂದು ದರ್ಶನ್ ಆವಾಜ್ ಹಾಕಿದ್ದಾನೆ. ನಂತರ ಶೆಡ್‌ನಿಂದ ದರ್ಶನ್ ಗ್ಯಾಂಗ್ ಮನೆಗೆ ಹೊರಟಿದೆ. ಇದಾದ ಬಳಿಕ ಮನೆ ಬಳಿ ಕೇಳಲು ಹೋದ ನಿಖಿಲ್, ಮಿಥುನ್‌, ಅಂಬರೀಶ್ ಮೇಲೆ ಮಾರಕಾಸ್ತ್ರಗಳನ್ನು ಹಿಡಿದು ದರ್ಶನ್ ಗ್ಯಾಂಗ್ ಹಲ್ಲೆಗೆ ಯತ್ನಿಸಿದೆ. ಈ ವೇಳೆ ಎರಡು ಬಣಗಳ ಯುವಕರ ನಡುವೆ ಗಲಾಟೆ ನಡೆದಿದೆ.

ಬಳಿಕ ಸ್ಥಳಕ್ಕೆ ಬಂದ ಪೋಲಿಸರು, ಅಂಬರೀಶ್‌ನನ್ನು ಮಾತ್ರ ವಶಕ್ಕೆ ಪಡೆದಿದ್ದಾರೆ. ಅಂಬರೀಶ್ ಹುಳಿಮಾವು ಠಾಣೆಯ ರೌಡಿಶೀಟರ್ ಎನ್ನಲಾಗಿದೆ. ಅಂಬರೀಶ್‌ನ ಠಾಣೆಗೆ ಕರೆದೊಯ್ದು ಮುಚ್ಚಳಿಕೆ ಬರೆಸಿಕೊಂಡು ಕಳುಹಿಸಲಾಗಿದೆ. ಆದರೆ ದರ್ಶನ್ ಗ್ಯಾಂಗ್‌ಗೆ ಪೋಲಿಸರು ವಾರ್ನಿಂಗ್ ಕೊಟ್ಟು ಕಳುಹಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ | Fraud Case: ಅಸಲಿ ಮದುವೆ, ನಕಲಿ ಹೆಣ್ಣು! 3 ವರ್ಷದಲ್ಲಿ 5 ಮದುವೆಯಾಗಿ ವಂಚನೆ; ಮದುಮಗಳು ಮತ್ತು ಗ್ಯಾಂಗ್‌ ಆರೆಸ್ಟ್

ಶಿಕ್ಷಕಿಗೆ ಅಶ್ಲೀಲ ಮೆಸೇಜ್‌ ಕಳಿಸಿದ ಪ್ರಭಾರಿ ಪ್ರಾಚಾರ್ಯನಿಗೆ ಧರ್ಮದೇಟು

ರಾಯಚೂರು: ರಾಯಚೂರು ನಗರ (Raichur news) ಸಮೀಪದ ಯರಮರಸ್ ಬಳಿಯ ಆದರ್ಶ ವಿದ್ಯಾಲಯದ ಪ್ರಭಾರಿ ಪ್ರಾಚಾರ್ಯನೊಬ್ಬ (Principal in charge) ತರಬೇತಿಗೆ ಬಂದಿದ್ದ ಶಿಕ್ಷಕಿ ಜತೆ ಅನುಚಿತವಾಗಿ (Misbehave) ವರ್ತಿಸಿದ್ದರಿಂದ ಥಳಿತಕ್ಕೊಳಗಾದ (Beaten) ಘಟನೆ ಸೋಮವಾರ ನಡೆದಿದೆ.

ಮೆಹಬೂಬ್ ಅಲಿ ಎಂಬಾತನೇ ಏಟು ತಿಂದ ಪ್ರಭಾರಿ ಪ್ರಾಚಾರ್ಯ. ಈತ ಶಿಕ್ಷಕಿಯ ಮೊಬೈಲ್‌ಗೆ ಅಶ್ಲೀಲ ಮೆಸೇಜ್‌ಗಳನ್ನು ಕಳಿಸುತ್ತಿದ್ದನಲ್ಲದೆ, ರಾತ್ರಿ ಮಲಗಲು ಬಾ ಎಂದೂ ಕರೆದಿದ್ದ. ಇದರಿಂದ ನೊಂದ ಶಿಕ್ಷಕಿ ತಮ್ಮವರಿಗೆ ಮಾಹಿತಿ ತಿಳಿಸಿದ್ದರು. ಶಾಲೆಗೆ ಬಂದ ಶಿಕ್ಷಕಿಯ ಬಂಧುಗಳು, ಸಾರ್ವಜನಿಕರು ಪ್ರಭಾರ ಪ್ರಾಚಾರ್ಯನಿಗೆ ಚೆನ್ನಾಗಿ ಥಳಿಸಿ ಬುದ್ಧಿ ಕಲಿಸಿದ್ದಾರೆ.

ಇದನ್ನೂ ಓದಿ: Murder Case : ಶೆಡ್ಡಿಗೆ ಬಾರೋ ಎಂದ ಸ್ನೇಹಿತ; ಮಲಗಿದ್ದವನ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಕೊಲೆ

ಪ್ರಭಾರಿ ಪ್ರಾಚಾರ್ಯ ಮೆಹಬೂಬ್ ಅಲಿ, ತಾನು ಮಾಡಿದ್ದು ತಪ್ಪಾಗಿದೆ. ಇನ್ನು ಮುಂದೆ ಹಾಗೆ ಮಾಡುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟಿದ್ದಾನೆ. ಶಿಕ್ಷಕಿಯ ಕಾಲಿಗೆ ಬಿದ್ದು ಕ್ಷಮೆ ಕೇಳಿದ್ದಾನೆ. ಈ ಕುರಿತು ಗ್ರಾಮೀಣ ಠಾಣೆ ಅಥವಾ ಮಹಿಳಾ ಠಾಣೆಯಲ್ಲಾಗಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.

Continue Reading

Latest

Murder Case: 90 ಲಕ್ಷ ರೂ. ಠೇವಣಿ ಎಗರಿಸಲು ವೃದ್ಧನ ಕೊಂದ ಮಹಿಳಾ ಬ್ಯಾಂಕ್‌ ಮ್ಯಾನೇಜರ್‌! ಪ್ಲ್ಯಾನ್‌ ಹೇಗಿತ್ತು ನೋಡಿ!

Murder Case: ಹಣದ ಮೇಲಿನ ಆಸೆಗೆ ವ್ಯಕ್ತಿಯೊಬ್ಬನನ್ನು ಪ್ಲ್ಯಾನ್ ಮಾಡಿ ಕೊಲೆ ಮಾಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಆರಂಭದಲ್ಲಿ ವೃದ್ಧರೊಬ್ಬರ ಸಾವು ರಸ್ತೆ ಅಪಘಾತ ಎಂದು ಪರಿಗಣಿಸಿದ್ದ ಪೊಲೀಸರಿಗೆ ಅದು ಪ್ರಿಪ್ಲ್ಯಾನ್ ಮರ್ಡರ್ ಎಂಬುದು ತಿಳಿದುಬಂತು. ಸೈಕಲ್‌ನಲ್ಲಿ ಹೋಗುತ್ತಿದ್ದ ಪಪ್ಪಚನ್ ಅವರು ಕಾರು ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸಿ ಕಾರು ಅಪಘಾತದ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಇದು ಅಪಘಾತವಲ್ಲ, ಕೊಲೆ ಎನ್ನುವುದು ಬೆಳಕಿಗೆ ಬಂತು.

VISTARANEWS.COM


on

Murder Case
Koo


ಹಣಕ್ಕಾಗಿ ಜನರು ಯಾರನ್ನು ಬೇಕಾದರೂ ಕೊಲೆ ಮಾಡಲು ಮುಂದಾಗಿದ್ದಾರೆ. ಕೇವಲ ಹಣಕ್ಕಾಗಿ ಜನರನ್ನು ಪ್ರಾಣಿಗಳಂತೆ ಎಲ್ಲೆಂದರಲ್ಲಿ ಸಾಯಿಸುತ್ತಿದ್ದಾರೆ. ಇದೀಗ ಹಣದ ಮೇಲಿನ ಆಸೆಗೆ ವ್ಯಕ್ತಿಯೊಬ್ಬನನ್ನು ಪ್ಲ್ಯಾನ್ ಮಾಡಿ ಕೊಲೆ ಮಾಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಆರಂಭದಲ್ಲಿ ವೃದ್ಧರೊಬ್ಬರ ಸಾವು ರಸ್ತೆ ಅಪಘಾತ ಎಂದು ಪರಿಗಣಿಸಿದ್ದ ಪೊಲೀಸರಿಗೆ ಅದು ಪ್ರಿಪ್ಲ್ಯಾನ್ ಮರ್ಡರ್ ಎಂಬುದು ತಿಳಿದುಬಂದಿದೆ. ಹಾಗಾಗಿ 82 ವರ್ಷದ ನಿವೃತ್ತ ಬಿಎಸ್ಎನ್ಎಲ್ ಎಂಜಿನಿಯರ್ ಸಿ ಪಪ್ಪಚನ್ ಅವರ ಕೊಲೆ (Murder Case)ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲ್ಲಂ ಪೂರ್ವ ಪೊಲೀಸರು ಖಾಸಗಿ ಮಹಿಳಾ ಬ್ಯಾಂಕ್ ಮ್ಯಾನೇಜರ್ ಸೇರಿದಂತೆ ಐವರನ್ನು ಬಂಧಿಸಿದ್ದಾರೆ.

ಮೇ 26ರಂದು ಇಲ್ಲಿನ ಆಶ್ರಮದ ಮೈದಾನದ ಬಳಿ ಸೈಕಲ್‍ನಲ್ಲಿ ಹೋಗುತ್ತಿದ್ದ ಪಪ್ಪಚನ್ ಅವರು ಕಾರು ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದರು. ಡಿಕ್ಕಿ ಹೊಡೆದ ನಂತರ ಚಾಲಕ ಕಾರಿನ ಸಮೇತ ಅಲ್ಲಿಂದ ಪರಾರಿಯಾಗಿದ್ದ. ದಾರಿಹೋಕರು ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸಿ ಕಾರು ಅಪಘಾತದ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಅಪಘಾತವು ಪ್ರಿಪ್ಲ್ಯಾನ್ ಮರ್ಡರ್ ಎಂಬುದು ತಿಳಿಯಿತು. ಈ ಪ್ರಕರಣದಲ್ಲಿ ಮ್ಯಾನೇಜರ್ ಸರಿತಾ (45) ಸೇರಿದಂತೆ ಅನೂಪ್ (37) ಸಂಸ್ಥೆಯ ಅಕೌಂಟ್ ಎಕ್ಸಿಕ್ಯೂಟಿವ್; ಮಾಹೀನ್ (47), ಹಾಶಿಫ್ ಅಲಿ (27) ಮತ್ತು ಅನಿಮೋನ್ (44) ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿ ಸರಿತಾ ಕೆಲಸ ಮಾಡುತ್ತಿದ್ದ ಖಾಸಗಿ ಬ್ಯಾಂಕ್‍ನಲ್ಲಿ 90 ಲಕ್ಷ ರೂ.ಗಳ ಠೇವಣಿ ಹೊಂದಿದ್ದ ಪಪ್ಪಚನ್, ತನ್ನ ಠೇವಣಿಯಿಂದ 40 ಲಕ್ಷ ರೂ. ನಾಪತ್ತೆಯಾಗಿರುವುದರ ಬಗ್ಗೆ ಸರಿತಾ ಅವರನ್ನು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸರಿತಾ, ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಭರವಸೆ ನೀಡಿ, ಖಾತೆಗಳನ್ನು ಪರಿಶೀಲಿಸಿ ಇನ್ನೊಂದು ದಿನ ಭೇಟಿಯಾಗುವುದಾಗಿ ಭರವಸೆ ನೀಡಿ ವಾಪಸ್ ಕಳುಹಿಸಿದರು.

ಆದರೆ ಸರಿತಾ ಮತ್ತು ಅವಳ ಸಹಚರರು ಪಪ್ಪಚನ್ ಅವರನ್ನು ಕೊಲ್ಲಲು ಸಂಚು ರೂಪಿಸಿದರು. ಕೊಲೆಯನ್ನು ಕಾರ್ಯಗತಗೊಳಿಸಲು ಅನಿಮೋನ್ ಎಂಬಾತನ್ನು ಆಯ್ಕೆ ಮಾಡಿದರು. ಈ ಕೃತ್ಯ ಎಸಗಲು ಬಾಡಿಗೆ ಕಾರನ್ನು ಬಳಸಿದರು. ಅನೂಪ್ ಕಾರನ್ನು ಬಾಡಿಗೆಗೆ ಪಡೆದಿದ್ದರು. ಪಪ್ಪಚನ್ ಬಗ್ಗೆ ಚೆನ್ನಾಗಿ ತಿಳಿದಿದ್ದ ಸರಿತಾಗೆ ಅವರು ತನ್ನ ಕುಟುಂಬದೊಂದಿಗೆ ಉತ್ತಮ ಸಂಬಂಧ ಹೊಂದಿಲ್ಲ ಎಂದು ಗೊತ್ತಿತ್ತು. ಅವರು ಸತ್ತರೆ ಹಣವನ್ನು ಪಡೆಯಲು ಯಾರೂ ಬರುವುದಿಲ್ಲ ಎಂಬ ತಿಳುವಳಿಕೆಯಿಂದ ಅವರು ಈ ಪಿತೂರಿ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪಪ್ಪಚನ್ ಅವರು ಕೊಲ್ಲಂನಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಪ್ರಣಯಕ್ಕೆ ಡಿಸ್ಟರ್ಬ್‌ ಆಯಿತೆಂದು ಕೋಪಗೊಂಡ ಪ್ರಿಯತಮ ಮಹಿಳೆಯ ಮಗುವನ್ನು ನೆಲಕ್ಕೆ ಬಡಿದು ಕೊಂದ!

ಪಪ್ಪಚನ್ ಅವರ ದೇಹವನ್ನು ಅವರ ಹುಟ್ಟೂರಾದ ಪಂದಲಂನಲ್ಲಿ ಸಮಾಧಿ ಮಾಡಲಾಯಿತು. ಬಂಧಿತರನ್ನು ಬಿಎನ್ಎಸ್‍ನ ಸೆಕ್ಷನ್ 103 (ಕೊಲೆ) ಮತ್ತು ಸೆಕ್ಷನ್ 61 (ಕ್ರಿಮಿನಲ್ ಪಿತೂರಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Continue Reading
Advertisement
Viral Video
ವೈರಲ್ ನ್ಯೂಸ್1 min ago

Viral Video: ಅಬ್ಬಾ…ಈತ ಮನುಷ್ಯನೋ ರಾಕ್ಷಸನೋ..? ಪತ್ನಿಯ ಕಾಲುಗಳನ್ನು ಬೈಕ್‌ಗೆ ಕಟ್ಟಿ ರೋಡಲ್ಲಿ ಎಳೆದಾಡಿದ ಪಾಪಿ ಪತಿ-ವಿಡಿಯೋ ಇದೆ

Sunil Gavaskar
ಕ್ರೀಡೆ12 mins ago

Sunil Gavaskar: ಪದಕ ಗೆಲ್ಲಲು ವಿಫಲವಾದ ಲಕ್ಷ್ಯ ಸೇನ್ ವಿರುದ್ಧ ವಾಗ್ದಾಳಿ ನಡೆಸಿದ ಗಾವಸ್ಕರ್

PM Kisan Samman Nidhi
ಮನಿ-ಗೈಡ್24 mins ago

PM Kisan Samman Nidhi: ಈ ದಿನಾಂಕದಂದು ಜಮೆ ಆಗಲಿದೆ ಕಿಸಾನ್‌ ಸಮ್ಮಾನ್‌ ನಿಧಿಯ 18ನೇ ಕಂತು; ಹೊಸದಾಗಿ ಅಪ್ಲೈ ಮಾಡುವ ವಿಧಾನ ಇಲ್ಲಿದೆ

SP leader arrested
ದೇಶ1 hour ago

SP Leader arrest: ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ; ಸಮಾಜವಾದಿ ಪಕ್ಷದ ನಾಯಕ ಅರೆಸ್ಟ್‌

Group Clash
ಕರ್ನಾಟಕ1 hour ago

Group Clash: ಅರಕೆರೆ ಶೆಡ್‌ನಲ್ಲಿ ದರ್ಶನ್ ಕಿರಿಕ್‌‌; ಯೂತ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಕ್ಕಾಗಿ‌ ನಡುರಸ್ತೆಯಲ್ಲೇ ಫೈಟ್

Tungabhadra Dam
ಹುಬ್ಬಳ್ಳಿ1 hour ago

Tungabhadra Dam: ಜಲಾಶಯ ನಿರ್ವಹಣೆ ಕುರಿತ ಕೇಂದ್ರ ಸಮಿತಿ ಸಲಹೆಯನ್ನು ರಾಜ್ಯ ಸರ್ಕಾರ ಧಿಕ್ಕರಿಸಿದೆ; ಪ್ರಲ್ಹಾದ್‌ ಜೋಶಿ ಆರೋಪ

Kannada New Movie
ಬೆಂಗಳೂರು1 hour ago

Kannada New Movie: ರವೀಂದ್ರ ಸೊರಗಾವಿ ಕಂಠಸಿರಿಯಲ್ಲಿ ʼಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರುʼ ಚಿತ್ರದ ಹಾಡು

Murder Case
Latest1 hour ago

Murder Case: 90 ಲಕ್ಷ ರೂ. ಠೇವಣಿ ಎಗರಿಸಲು ವೃದ್ಧನ ಕೊಂದ ಮಹಿಳಾ ಬ್ಯಾಂಕ್‌ ಮ್ಯಾನೇಜರ್‌! ಪ್ಲ್ಯಾನ್‌ ಹೇಗಿತ್ತು ನೋಡಿ!

Murder case
ಚಿಕ್ಕೋಡಿ1 hour ago

Murder Case : ಕೆಲ್ಸ ಜಾಸ್ತಿ ಮನೆಗೆ ಬರಲ್ಲ ಎಂದವನು, ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಬೀದಿ ಹೆಣವಾದ

Vastu Tips
ಧಾರ್ಮಿಕ2 hours ago

Vastu Tips: ಈ ವಸ್ತುಗಳನ್ನು ಮನೆಯಲ್ಲಿಟ್ಟರೆ ಸಂತೋಷ, ಸಮೃದ್ಧಿ, ನೆಮ್ಮದಿ ಸಿಗುತ್ತವೆ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು7 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ7 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌