Kolkata Doctor Murder Case: ನೋ ಸೇಫ್ಟಿ...ನೋ ಡ್ಯೂಟಿ- ವೈದ್ಯೆ ಕೊಲೆ ಖಂಡಿಸಿ ದೇಶವ್ಯಾಪಿ ಭಾರೀ ಪ್ರತಿಭಟನೆ - Vistara News

ದೇಶ

Kolkata Doctor Murder Case: ನೋ ಸೇಫ್ಟಿ…ನೋ ಡ್ಯೂಟಿ- ವೈದ್ಯೆ ಕೊಲೆ ಖಂಡಿಸಿ ದೇಶವ್ಯಾಪಿ ಭಾರೀ ಪ್ರತಿಭಟನೆ

Kolkata Doctor Murder Case: ಪಶ್ಚಿಮ ಬಂಗಾಳ, ಉತ್ತರಪ್ರದೇಶ, ದಿಲ್ಲಿ ಸೇರಿದಂತೆ ಅನೇಕ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮತ್ತು ವೈದ್ಯರು ಪ್ರತಿಭಟನೆ ನಡೆಸಿ, ನೋ ಸೇಫ್ಟಿ….ನೋ ಡ್ಯೂಟಿ ಎಂದು ಘೋಷಣೆ ಕೂಗಿದರು. ಇನ್ನು ಹಲವೆಡೆ ಚಿಕಿತ್ಸೆ ನೀಡುವಂತೆ ರೋಗಿಗಳು ಒಪಿಡಿ ಬಾಗಿಲು ಬಡಿಯುತ್ತಿರುವ ದೃಶ್ಯ ಕಂಡು ಬಂತು. ಅಗತ್ಯ ಸೇವೆಗಳು ತೆರೆದಿರುತ್ತವೆ ಎಂದು ವೈದ್ಯರ ಸಂಘ ಸ್ಪಷ್ಟಪಡಿಸಿದ್ದರೂ, ಹೊರರೋಗಿ ವಿಭಾಗಗಳ (OPDs) ಹೊರಗೆ ರೋಗಿಗಳು ಸರತಿ ಸಾಲಿನಲ್ಲಿ ನಿಂತಿರುವುದನ್ನು ಕಾಣಬಹುದಾಗಿದೆ.

VISTARANEWS.COM


on

kolkata doctor murder case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲ್ಕತಾ: ಪಶ್ಚಿಮ ಬಂಗಾಳ(West Bengal)ದ ಕೋಲ್ಕತ್ತಾ(Kolkata)ದಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ(Kolkata Doctor Murder Case) ಖಂಡಿಸಿ ರಾಷ್ಟ್ರವ್ಯಾಪಿ ಪ್ರತಿಭಟನೆ, ಧರಣಿ ಭುಗಿಲೆದ್ದಿದೆ. ಅನೇಕ ಆಸ್ಪತ್ರೆಗಳಲ್ಲಿ ಒಪಿಡಿ ಬಂದ್‌ ಮಾಡಿ ವೈದ್ಯರು ಪ್ರತಿಭಟನೆ ನಡೆಸಿದ್ದು, ರೋಗಿಗಳು ಸಕಾಲಕ್ಕೆ ಚಿಕಿತ್ಸೆ ಸಿಗದೇ ಪರದಾಡುವಂತಾಯಿತು.

ಪಶ್ಚಿಮ ಬಂಗಾಳ, ಉತ್ತರಪ್ರದೇಶ, ದಿಲ್ಲಿ ಸೇರಿದಂತೆ ಅನೇಕ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮತ್ತು ವೈದ್ಯರು ಪ್ರತಿಭಟನೆ ನಡೆಸಿ, ನೋ ಸೇಫ್ಟಿ….ನೋ ಡ್ಯೂಟಿ ಎಂದು ಘೋಷಣೆ ಕೂಗಿದರು. ಇನ್ನು ಹಲವೆಡೆ ಚಿಕಿತ್ಸೆ ನೀಡುವಂತೆ ರೋಗಿಗಳು ಒಪಿಡಿ ಬಾಗಿಲು ಬಡಿಯುತ್ತಿರುವ ದೃಶ್ಯ ಕಂಡು ಬಂತು. ಅಗತ್ಯ ಸೇವೆಗಳು ತೆರೆದಿರುತ್ತವೆ ಎಂದು ವೈದ್ಯರ ಸಂಘ ಸ್ಪಷ್ಟಪಡಿಸಿದ್ದರೂ, ಹೊರರೋಗಿ ವಿಭಾಗಗಳ (OPDs) ಹೊರಗೆ ರೋಗಿಗಳು ಸರತಿ ಸಾಲಿನಲ್ಲಿ ನಿಂತಿರುವುದನ್ನು ಕಾಣಬಹುದಾಗಿದೆ.

ಏನಿದು ಘಟನೆ?

ಕೋಲ್ಕತಾದಲ್ಲಿನ ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಶುಕ್ರವಾರ ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಗುರುವಾರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್‌ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್‌ಗೆ ಓದುವ ಸಲುವಾಗಿ ತೆರಳಿದ್ದರು. ಶುಕ್ರವಾರ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು.
ಆಸ್ಪತ್ರೆಯ ವೈದ್ಯರೊಬ್ಬರು ಮಾಹಿತಿ ನೀಡಿ, ʼʼಸಂತ್ರಸ್ತೆ ಶುಕ್ರವಾರ ಮುಂಜಾನೆ 2 ಗಂಟೆ ಸುಮಾರಿಗೆ ತಮ್ಮ ಸಹೋದ್ಯೋಗಿಗಳೊಂದಿಗೆ ಊಟ ಮಾಡಿದ್ದಾರೆ. ಬಳಿಕ ಸೆಮಿನಾರ್ ಹಾಲ್‌ಗೆ ತೆರಳಿದ್ದರು. ನಂತರ ಸೆಮಿನಾರ್‌ ಹಾಲ್‌ನಲ್ಲಿ ಅವರ ಶವ ಪತ್ತೆಯಾಗಿತ್ತುʼʼ ಎಂದು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ(West Bengal)ದ ರಾಜಧಾನಿ ಕೋಲ್ಕತಾದಲ್ಲಿ ದೇಶವೇ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, 31 ವರ್ಷದ ಮಹಿಳಾ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಇಂದು ದೆಹಲಿ ಏಮ್ಸ್‌(AIIMS) ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಮತ್ತೊಂದೆಡೆ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್(FORDA) ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ಕೊಟ್ಟಿದೆ.

ಇದನ್ನೂ ಓದಿ: Kolkata Doctor Murder Case: ಟ್ರೈನಿ ವೈದ್ಯೆಯ ಅತ್ಯಾಚಾರ, ಕೊಲೆ; ಏಮ್ಸ್‌ ವೈದ್ಯರ ಪ್ರೊಟೆಸ್ಟ್‌-ಪ್ರಾಂಶುಪಾಲರು ರಿಸೈನ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Kolkata Doctor Murder Case: ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ; ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

Kolkata Doctor Murder Case: ಆರಂಭದಲ್ಲಿಯೇ ಕೊಲೆ ಪ್ರಕರಣವನ್ನು ಏಕೆ ದಾಖಲಿಸಲಿಲ್ಲ ಎಂದು ಪ್ರಶ್ನಿಸಿದ ಕೋರ್ಟ್‌, ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆಗಿನ ಪ್ರಾಂಶುಪಾಲರಾದ ಡಾ ಸಂದೀಪ್ ಘೋಷ್ ಅವರನ್ನು ಮೊದಲು ವಿಚಾರಣೆಗೆ ಒಳಪಡಿಸಬೇಕಿತ್ತು ಎಂದು ಅಭಿಪ್ರಾಯ ಪಟ್ಟಿದೆ.

VISTARANEWS.COM


on

kolkata doctor murder case
Koo

ಕೋಲ್ಕತಾ: ಪಶ್ಚಿಮ ಬಂಗಾಳ(West Bengal)ದ ಕೋಲ್ಕತ್ತಾ(Kolkata)ದಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ(Kolkata Doctor Murder Case) ಪ್ರಕರಣವನ್ನು ಹೈಕೋರ್ಟ್‌ ಸಿಬಿಐ(CBI Probe) ತನಿಖೆಗೆ ಆದೇಶಿಸಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಪುರಸ್ಕರಿಸಿದ ಕೋಲ್ಕತಾ ಹೈಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ.

ಆರಂಭದಲ್ಲಿಯೇ ಕೊಲೆ ಪ್ರಕರಣವನ್ನು ಏಕೆ ದಾಖಲಿಸಲಿಲ್ಲ ಎಂದು ಪ್ರಶ್ನಿಸಿದ ಕೋರ್ಟ್‌, ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆಗಿನ ಪ್ರಾಂಶುಪಾಲರಾದ ಡಾ ಸಂದೀಪ್ ಘೋಷ್ ಅವರನ್ನು ಮೊದಲು ವಿಚಾರಣೆಗೆ ಒಳಪಡಿಸಬೇಕಿತ್ತು ಎಂದು ಅಭಿಪ್ರಾಯ ಪಟ್ಟಿದೆ. ಅಲ್ಲದೇ ಘೋಷ್ ಅವರು ರಾಜೀನಾಮೆ ನೀಡಿದ ಗಂಟೆಗಳ ನಂತರ ಮತ್ತೊಂದು ಕಾಲೇಜಿನ ಪ್ರಾಂಶುಪಾಲರಾಗಿ ಏಕೆ ನೇಮಕಗೊಂಡರು ಎಂದು ಪೀಠವು ರಾಜ್ಯ ಸರ್ಕಾರದ ವಕೀಲರನ್ನು ಪ್ರಶ್ನಿಸಿತು.

ಏನಿದು ಘಟನೆ?

ಕೋಲ್ಕತಾದಲ್ಲಿನ ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಶುಕ್ರವಾರ ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಗುರುವಾರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್‌ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್‌ಗೆ ಓದುವ ಸಲುವಾಗಿ ತೆರಳಿದ್ದರು. ಶುಕ್ರವಾರ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು.
ಆಸ್ಪತ್ರೆಯ ವೈದ್ಯರೊಬ್ಬರು ಮಾಹಿತಿ ನೀಡಿ, ʼʼಸಂತ್ರಸ್ತೆ ಶುಕ್ರವಾರ ಮುಂಜಾನೆ 2 ಗಂಟೆ ಸುಮಾರಿಗೆ ತಮ್ಮ ಸಹೋದ್ಯೋಗಿಗಳೊಂದಿಗೆ ಊಟ ಮಾಡಿದ್ದಾರೆ. ಬಳಿಕ ಸೆಮಿನಾರ್ ಹಾಲ್‌ಗೆ ತೆರಳಿದ್ದರು. ನಂತರ ಸೆಮಿನಾರ್‌ ಹಾಲ್‌ನಲ್ಲಿ ಅವರ ಶವ ಪತ್ತೆಯಾಗಿತ್ತುʼʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Kolkata Doctor Murder Case: ನೋ ಸೇಫ್ಟಿ…ನೋ ಡ್ಯೂಟಿ- ವೈದ್ಯೆ ಕೊಲೆ ಖಂಡಿಸಿ ದೇಶವ್ಯಾಪಿ ಭಾರೀ ಪ್ರತಿಭಟನೆ

Continue Reading

ದೇಶ

Independence day 2024: ಕೆಂಪು ಕೋಟೆ ಮೇಲೆ ಭಾಷಣ; ನೆಹರೂ, ಇಂದಿರಾ ಬಳಿಕ ಮೋದಿ ಹೊಸ ದಾಖಲೆ!

ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ದಾಖಲೆ ಬರೆದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಈ ಬಾರಿಯ ಸ್ವಾತಂತ್ರ್ಯ ದಿನದ (Independence day 2024) ಭಾಷಣ ಹೊಸ ದಾಖಲೆಯನ್ನು ಬರೆಯಲಿದೆ. ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿಯವರ ಅನಂತರ ಕೆಂಪು ಕೋಟೆಯಲ್ಲಿ ಸತತ 11 ಸ್ವಾತಂತ್ರ್ಯ ದಿನದ ಭಾಷಣ ಮಾಡುವ ಮೂರನೇ ಭಾರತೀಯ ಪ್ರಧಾನಿಯಾಗಿ ಅವರು ದಾಖಲೆ ನಿರ್ಮಿಸಲಿದ್ದಾರೆ.

VISTARANEWS.COM


on

By

Independence day 2024
Koo

ಕಳೆದ ಹತ್ತು ವರ್ಷಗಳಿಂದ ದೇಶದ ಪ್ರಧಾನಿಯಾಗಿರುವ ನರೇಂದ್ರ ಮೋದಿ (PM Modi) ಅವರು ಈ ಬಾರಿಯು ಸ್ವಾತಂತ್ರ್ಯ ದಿನದ (Independence day 2024) 11ನೇ ಭಾಷಣ ಮಾಡಲಿದ್ದಾರೆ. ಎಲ್ಲರಲ್ಲೂ ಸಾಕಷ್ಟು ಕುತೂಹಲ ಮೂಡಿಸುವ ಅವರ ಭಾಷಣದಲ್ಲಿ ಎಂದಿನಂತೆ ಏನಾದರೂ ವಿಶೇಷ ಇದ್ದೇ ಇರುತ್ತದೆ. ಹೀಗಾಗಿ ಅವರ ಭಾಷಣವನ್ನು ಕೇಳಲು ದೇಶದ ಮೂಲೆಮೂಲೆಯಲ್ಲೂ ಜನರು ಕಾತರರಾಗಿರುತ್ತಾರೆ. ಮೂರನೇ ಅವಧಿಗೆ ದೇಶದ ಪ್ರಧಾನಿ ಆಗಿರುವ ನರೇಂದ್ರ ಮೋದಿ ಅವರು ಈ ಬಾರಿ ಸ್ವಾತಂತ್ರ್ಯ ದಿನವದ ಆಗಸ್ಟ್ 15ರಂದು ಗುರುವಾರ ತಮ್ಮ ಸತತ 11ನೇ ಸ್ವಾತಂತ್ರ್ಯ ದಿನದ ಭಾಷಣವನ್ನು ಮಾಡಲು ಸಿದ್ಧರಾಗಿದ್ದಾರೆ.

ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ದಾಖಲೆ ಬರೆದಿರುವ ಅವರು, ಈ ಅವಧಿಯ ಮೊದಲ ಸ್ವಾತಂತ್ರ್ಯ ದಿನದ ಭಾಷಣವಾಗಿದೆ. ಈ ಭಾಷಣದೊಂದಿಗೆ ಪ್ರಧಾನಿ ಮೋದಿ ಅವರು ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿಯವರ ಅನಂತರ ಕೆಂಪು ಕೋಟೆಯಲ್ಲಿ ಸತತ 11 ಸ್ವಾತಂತ್ರ್ಯ ದಿನದ ಭಾಷಣ ಮಾಡುವ ಮೂರನೇ ಭಾರತೀಯ ಪ್ರಧಾನಿಯಾಗಲಿದ್ದಾರೆ.


ದಾಖಲೆ ನಿರ್ಮಿಸಿದ ಮೋದಿ

ಮೋದಿಯವರ ಈ ಬಾರಿಯ 11ನೇ ಭಾಷಣ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸಂಖ್ಯೆಯನ್ನು ಮೀರಿಸಲಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 10 ಸ್ವಾತಂತ್ರ್ಯ ದಿನದ ಭಾಷಣಗಳನ್ನು ಮಾಡಿರುವ ದಾಖಲೆ ಹೊಂದಿದ್ದಾರೆ.


ಭಾರತದ ಮೊದಲ ಪ್ರಧಾನಿ ನೆಹರೂ ಅವರು 17 ಬಾರಿ ನಿರಂತರವಾಗಿ ಸ್ವಾತಂತ್ರ್ಯ ದಿನದ ಭಾಷಣಗಳನ್ನು ಮಾಡಿದ ದಾಖಲೆಯನ್ನು ಹೊಂದಿದ್ದಾರೆ.

ಜನವರಿ 1966ರಿಂದ ಮಾರ್ಚ್ 1977ರವರೆಗೆ ಮತ್ತು ಅನಂತರ ಜನವರಿ 1980ರಿಂದ ಅಕ್ಟೋಬರ್ 1984ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಇಂದಿರಾ ಗಾಂಧಿ ಅವರು ಒಟ್ಟು 16 ಬಾರಿ ರಾಷ್ಟ್ರವನ್ನು ಉದ್ದೇಶಿಸಿ ಭಾಷಣಗಳನ್ನು ಮಾಡಿದ್ದರು.

Independence day 2024
Independence day 2024


ಮಾತಿನ ಅವಧಿ

ಇನ್ನು ಪ್ರಧಾನಿಯವರ ಸ್ವಾತಂತ್ರ್ಯ ದಿನದ ಭಾಷಣದ ಅವಧಿಗೆ ಹೋಲಿಸಿದರೆ ಮೋದಿಯವರೇ ಅತಿ ಉದ್ದದ ಭಾಷಣ ಮಾಡಿರುವ ಪ್ರಧಾನಿಯಾಗಿದ್ದರೆ. ಪ್ರಧಾನಿ ಮೋದಿಯವರು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರತಿ ಭಾಷಣವನ್ನೂ ಸರಾಸರಿ 82 ನಿಮಿಷಗಳ ಕಾಲ ನಡೆಸಿದ್ದಾರೆ. ಇದು ಭಾರತದ ಇತಿಹಾಸದಲ್ಲೇ ಪ್ರಧಾನಿಯವರ ಅತಿ ಉದ್ದದ ಭಾಷಣವಾಗಿದೆ.


ಮಾಜಿ ಪ್ರಧಾನಿ ಐ.ಕೆ. ಗುಜ್ರಾಲ್ ಅವರು 1997ರಲ್ಲಿ 71 ನಿಮಿಷಗಳ ಕಾಲ ಕೆಂಪುಕೋಟೆಯಲ್ಲಿ ಭಾಷಣ ಮಾಡಿದ್ದರು. ಪಿಎಂ ಮೋದಿಯವರ ಭಾಷಣಗಳ ಉದ್ದವು 2017ರಲ್ಲಿ 55 ನಿಮಿಷಗಳ ಕಡಿಮೆ ಅವಧಿಯಿಂದ 2016ರಲ್ಲಿ 94 ನಿಮಿಷಗಳವರೆಗೆ ವಿಸ್ತರಿಸಿತ್ತು.

ಇದನ್ನೂ ಓದಿ: Paris Olympics 2024 : ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ಮೋದಿಯಿಂದ ಪ್ಯಾರಿಸ್ ಒಲಿಂಪಿಕ್ಸ್ ಸಾಧಕರಿಗೆ ಆತಿಥ್ಯ


ಮಾತಿನ ವಿಷಯ

ಪ್ರಧಾನಿ ಮೋದಿ ಅವರು ಪ್ರತಿ ಬಾರಿಯೂ ಸ್ವಾತಂತ್ರ್ಯ ದಿನದಂದು ವಿಶೇಷ ಘೋಷಣೆಗಳನ್ನು ಮಾಡಿರುವುದು ಹಿಂದಿನ ದಾಖಲೆಗಳಿಂದ ತಿಳಿಯುತ್ತದೆ. 2014ರಲ್ಲಿ ಅವರು ತಮ್ಮ ಮೊದಲ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಸ್ವಚ್ಛ ಭಾರತ ಮತ್ತು ಜನ್ ಧನ್ ಖಾತೆಗಳಂತಹ ಹೊಸ ಕಾರ್ಯಕ್ರಮಗಳನ್ನು ಘೋಷಿಸಿದರು. ಅಂದಿನಿಂದ ಅವರು ವಿವಿಧ ಪ್ರಮುಖ ಘೋಷಣೆಗಳನ್ನು ಮಾಡಲು ಈ ವೇದಿಕೆಯನ್ನು ಬಳಸಿಕೊಂಡಿದ್ದಾರೆ. ಅಲ್ಲದೇ ಅವರ ಭಾಷಣಗಳ ಜೊತೆಗೆ ಅವರು ಧರಿಸುವ ವಿವಿಧ ರೀತಿಯ ಪೇಟಗಳು ಎಲ್ಲರ ಗಮನ ಸೆಳೆಯುತ್ತಿವೆ.

Continue Reading

ವಿದೇಶ

Bangladesh Unrest: ಬಾಂಗ್ಲಾ ಹಿಂದೂಗಳ ಪರ ಸೋಶಿಯಲ್‌ ಮೀಡಿಯಾ ಅಭಿಯಾನ; All eyes on hindus ಭಾರೀ ಟ್ರೆಂಡ್!

Bangladesh Unrest: ಬಾಂಗ್ಲಾದೇಶದ ಹಿಂದೂಗಳು ಮತ್ತು ದೇವಾಲಯಗಳ ಮೇಲಿನ ದಾಳಿಯ ಬಗ್ಗೆ ಮೌನವಾಗಿರುವುದಕ್ಕೆ ಬಾಲಿವುಡ್ ಸೆಲೆಬ್ರಿಟಿಗಳನ್ನು ನೆಟ್ಟಿಗರು ಟೀಕಿಸುತ್ತಿರುವ ಪರಿಕಲ್ಪನೆ ‘ಎಲ್ಲಾ ಕಣ್ಣುಗಳು ಬಾಂಗ್ಲಾದೇಶ ಹಿಂದೂಗಳ ಮೇಲೆ’ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡಿಂಗ್ ಆಗಿವೆ.

VISTARANEWS.COM


on

Bangladesh Unrest
Koo

ಢಾಕಾ: ಬಾಂಗ್ಲಾದೇಶ(Bangladesh Unrest)ದಲ್ಲಿ ತಲೆದೋರಿರುವ ಅರಾಜಕತೆ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಜೀವಕ್ಕೆ ಅಪಾಯವನ್ನು ತಂದೊಡ್ಡಿದೆ. ಅದಕ್ಕೆ ಪೂರಕ ಎನ್ನುವಂತೆ ಅಲ್ಲಿನ ಹಿಂದೂಗಳು ಸಹಾಯಕ್ಕಾಗಿ ಅಂಗಲಾಚುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇನ್ನು ಶೇಕ್ ಹಸೀನಾ ಪ್ರಧಾನಿ ಹುದ್ದೆಯಿಂದ ನಿರ್ಗಮನದ ಬಳಿಕ ಮೊಹಮ್ಮದ್ ಯೂನಸ್ ಅಧಿಕಾರ ವಹಿಸಿಕೊಂಡರೂ ದಾಳಿ ಕಡಿಮೆಯಾಗಿಲ್ಲ. ಈ ನಡುವೆ ಆಲ್‌ ಐಸ್‌ ಆನ್‌ ಬಾಂಗ್ಲಾದೇಶ್‌ ಹಿಂದೂಸ್‌(All eyes on Bangladesh Hindus) ಎಂಬ ಪರಿಕಲ್ಪನೆ ಸಾಮಾಜಿಕ ಜಾಲತಾಣದಲ್ಲಿ ಬಹಳ ಟ್ರೆಂಡಿಂಗ್‌ ಆಗುತ್ತಿದೆ.

ಬಾಂಗ್ಲಾದೇಶದ ಹಿಂದೂಗಳು ಮತ್ತು ದೇವಾಲಯಗಳ ಮೇಲಿನ ದಾಳಿಯ ಬಗ್ಗೆ ಮೌನವಾಗಿರುವುದಕ್ಕೆ ಬಾಲಿವುಡ್ ಸೆಲೆಬ್ರಿಟಿಗಳನ್ನು ನೆಟ್ಟಿಗರು ಟೀಕಿಸುತ್ತಿರುವ ಪರಿಕಲ್ಪನೆ ‘ಎಲ್ಲಾ ಕಣ್ಣುಗಳು ಬಾಂಗ್ಲಾದೇಶ ಹಿಂದೂಗಳ ಮೇಲೆ’ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡಿಂಗ್ ಆಗಿವೆ. ಕೆಲವು ತಿಂಗಳುಗಳ ಹಿಂದೆ ಇಸ್ರೇಲ್ ದಾಳಿಯನ್ನು ಖಂಡಿಸಿ ಪ್ಯಾಲೆಸ್ಟೈನ್‌ ಗೆ ಬೆಂಬಲ ಸೂಚಿಸಿ ಅನೇಕರು ಇನ್ ಸ್ಟಾ ಗ್ರಾಮ್ ನಲ್ಲಿ ‘ಆಲ್ ಐಸ್ ಆನ್ ರಫಾ’ ಘೋಷಣೆಯೊಂದಿಗೆ ಹಂಚಿಕೊಂಡಿದ್ದಾರೆ. ಇದನ್ನು ಇನ್ ಸ್ಟಾ ಗ್ರಾಮ್ ನಲ್ಲಿ ಹಂಚಿಕೊಂಡಿರುವವರ ಸಂಖ್ಯೆ 30 ಮಿಲಿಯನ್ ದಾಟಿತ್ತು. ಈ ಪೋಸ್ಟನ್ನು ಬಾಲಿವುಡ್‌ ತಾರೆಯರು ತಮ್ಮ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದರು.

ಹಿಂಸಾಚಾರ ಪೀಡಿತ ಬಾಂಗ್ಲಾದೇಶದ ಅಲ್ಪಸಂಖ್ಯಾತ ಸಮುದಾಯಗಳ ಸದಸ್ಯರು ಆಗಸ್ಟ್ 5 ರಂದು Ms ಹಸೀನಾ ನೇತೃತ್ವದ ಸರ್ಕಾರ ಪತನದ ನಂತರ 52 ಜಿಲ್ಲೆಗಳಲ್ಲಿ 205 ಕ್ಕೂ ಹೆಚ್ಚು ದಾಳಿಯ ಘಟನೆಗಳನ್ನು ಎದುರಿಸಿದ್ದಾರೆ. ನೂರಾರು ಹಿಂದೂಗಳು ತಮ್ಮ ಮನೆಗಳು ಮತ್ತು ವ್ಯವಹಾರಗಳ ಮೇಲಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ ಎಂದು ನಂಬಲಾಗಿದೆ. ಹಲವಾರು ಹಿಂದೂ ದೇವಾಲಯಗಳನ್ನು ಸಹ ಧ್ವಂಸಗೊಳಿಸಲಾಗಿದೆ ಮತ್ತು ಶೇಖ್‌ ಹಸೀನಾ ಅವರ ಅವಾಮಿ ಲೀಗ್ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಕನಿಷ್ಠ ಇಬ್ಬರು ಹಿಂದೂ ನಾಯಕರು ಹಿಂಸಾಚಾರದಲ್ಲಿ ಬಲಿಯಾಗಿದ್ದಾರೆ.

ಅಲ್ಪಸಂಖ್ಯಾತರ ಮೇಲಿನ ದಾಳಿಯ ಕುರಿತು ಬಾಂಗ್ಲಾದೇಶದ ಹಂಗಾಮಿ ನಾಯಕ ಬಾಂಗ್ಲಾದೇಶದ ಹಂಗಾಮಿ ನಾಯಕ ಮುಹಮ್ಮದ್ ಯೂನಸ್ ಪ್ರತಿಕ್ರಿಯಿಸಿದ್ದಾರೆ. ಶನಿವಾರ ಹಿಂಸಾಚಾರ ಪೀಡಿತ ರಾಷ್ಟ್ರದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ, ಅವರನ್ನು “ಹೇಯ ಕೃತ್ಯ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಶೇಖ್‌ ಹಸೀನಾ ಭಾರತದಲ್ಲಿ ಆಶ್ರಯ ಪಡೆದಿರುವುದು ದ್ವಿಪಕ್ಷೀಯ ಸಂಬಂಧದ ಮೇಲೆ ಪರಿಣಾಮ ಬೀರುತ್ತಾ? ಬಾಂಗ್ಲಾದೇಶ ಹೇಳಿದ್ದೇನು?

Continue Reading

ಮನಿ-ಗೈಡ್

PM Kisan Samman Nidhi: ಈ ದಿನಾಂಕದಂದು ಜಮೆ ಆಗಲಿದೆ ಕಿಸಾನ್‌ ಸಮ್ಮಾನ್‌ ನಿಧಿಯ 18ನೇ ಕಂತು; ಹೊಸದಾಗಿ ಅಪ್ಲೈ ಮಾಡುವ ವಿಧಾನ ಇಲ್ಲಿದೆ

PM Kisan Samman Nidhi: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ 2೦19ರಲ್ಲಿ ಜಾರಿಗೆ ತಂದ ಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ 18ನೇ ಕಂತಿನ ಹಣ ನವೆಂಬರ್‌ನಲ್ಲಿ ಬಿಡುಗಡೆಯಾಗಲಿದೆ. 17ನೇ ಕಂತು ಜೂನ್‌ನಲ್ಲಿ ರಿಲೀಸ್‌ ಆಗಿತ್ತು. ಅಂದು ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ 9.26 ಕೋಟಿ ಫಲಾನುಭವಿಗಳ ಖಾತೆಗೆ 21,000 ಕೋಟಿ ರೂ. ಜಮೆ ಮಾಡಿದ್ದರು. ಪಿಎಂ-ಕಿಸಾನ್ ಸಮ್ಮಾನ್‌ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಹೊಸದಾಗಿ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

PM Kisan Samman Nidhi
Koo

ನವದೆಹಲಿ: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ (PM Kisan Samman Nidhi) ಯೋಜನೆಯ 18ನೇ ಕಂತಿನ ಹಣ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ನವೆಂಬರ್‌ನಲ್ಲಿ ಫಲಾನುಭವಿಗಳ ಖಾತೆಗೆ 2 ಸಾವಿರ ರೂ. ಜಮೆ ಆಗಲಿದೆ. 17ನೇ ಕಂತು ಜೂನ್‌ನಲ್ಲಿ ರಿಲೀಸ್‌ ಆಗಿತ್ತು. 16ನೇ ಕಂತು ಫೆಬ್ರವರಿಯಲ್ಲಿ ಬಿಡುಗಡೆಯಾಗಿತ್ತು. ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯನ್ನು 2೦19ರಲ್ಲಿ ಜಾರಿಗೆ ತಂದಿದೆ (Money Guide).

3 ಕಂತುಗಳಲ್ಲಿ ಪಾವತಿ

ಪಿಎಂ-ಕಿಸಾನ್ ಸಮ್ಮಾನ್‌ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಇ-ಕೆವೈಸಿ ಕಡ್ಡಾಯ

ಕಿಸಾನ್‌ ಸಮ್ಮಾನ್‌ ನಿಧಿಯ ಕಂತನ್ನು ಪಡೆಯಲು ಫಲಾನುಭವಿ ರೈತರು ಇ-ಕೆವೈಸಿ ಪೂರ್ಣಗೊಳಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಇ-ಕೆವೈಸಿ ಮಾಡದ ರೈತರಿಗೆ ಖಾತೆಗೆ ಹಣ ಬಿಡುಗಡೆಯಾಗುವುದಿಲ್ಲ. ಒಟಿಪಿ ಆಧಾರಿತ ಇ-ಕೆವೈಸಿಯನ್ನು ಆನ್‌ಲೈನ್‌ ಮತ್ತು ಆಫ್‌ಲೈನ್‌ ಮೂಲಕ ಮಾಡಬಹುದು.

ಹೆಸರು ನೋಂದಾಯಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ pmkisan.gov.in ಭೇಟಿ ನೀಡಿ
  •  ‘New Farmer Registration’ ಆಯ್ಕೆ ಮೇಲೆ ಕಲಿಕ್‌ ಮಾಡಿ ಮತ್ತು ಆಧಾರ್‌ ಕಾರ್ಡ್‌ ನಂಬರ್‌ ನಮೂದಿಸಿ ಕ್ಯಾಪ್ಚ ಕೋಡ್‌ ಭರ್ತಿ ಮಾಡಿ
  • ಅಗತ್ಯ ಮಾಹಿತಿ ತುಂಬಿ ‘Yes’ ಬಟನ್‌ ಕ್ಲಿಕ್‌ ಮಾಡಿ
  • ಅರ್ಜಿ ಫಾರಂ ತುಂಬಿ, ಸೇವ್‌ ಮಾಡಿ ಭವಿಷ್ಯದ ಅಗತ್ಯಗಳಿಗಾಗಿ ಪ್ರಿಂಟ್‌ ಔಟ್‌ ತೆಗೆದಿಡಿ.

ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ www.pmkisan.gov.inಗೆ ಭೇಟಿ ನೀಡಿ
  • ಆಗ ತೆರೆದುಕೊಳ್ಳುವ ಪುಟದಲ್ಲಿನ ‘Beneficiary list’ ಆಯ್ಕೆಯ ಮೇಲೆ ಕ್ಲಿಕ್‌ ಮಾಡಿ
  • ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್‌ ಮತ್ತು ಗ್ರಾಮವನ್ನು ಆಯ್ಕೆ ಮಾಡಿ
  • ‘Get report’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ.

ಹೀಗೆ ಚೆಕ್‌ ಮಾಡಿ

ನೀವು ಈ ಯೋಜನೆಯ ಫಲಾನುಭವಿಯಾಗಿದ್ದರೆ, ಹಣ ನಿಮ್ಮ ಖಾತೆಗೆ ಜಮೆ ಆಗಿದೆಯೇ ಎನ್ನುವುದನ್ನು ಆನ್‌ಲೈನ್‌ ಮೂಲಕ ನಿಮಗೇ ಪರಿಶೀಲಿಸಲು ಸಾಧ್ಯವಿದೆ. ಅದಕ್ಕಾಗಿ ಮಾಡಬೇಕಾದುದು ಇಷ್ಟೆ.

  • ಅಧಿಕೃತ ವೆಬ್‌ಸೈಟ್‌ pmkisan.gov.in ಭೇಟಿ ನೀಡಿ
  • ಆಗ ಓಪನ್‌ ಆಗುವ ಪೇಜ್‌ನ ಬಲ ಬದಿಯಲ್ಲಿರುವ ‘Know Your Status’ ಆಯ್ಕೆ ಮೇಲೆ ಕ್ಲಿಕ್‌ ಮಾಡಿ
  • ರಿಜಿಸ್ಟ್ರೇಷನ್‌ ನಂಬರ್‌ ನಮೂದಿಸಿ, ಕ್ಯಾಪ್ಚ ಕೋಡ್‌ ಭರ್ತಿ ಮಾಡಿ ‘Get Data’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ
  • ಈಗ ಫಲಾನುಭವಿಯ ವಿವರ, ಹಣ ಜಮೆಯಾದ ಮಾಹಿತಿ ಸ್ಕ್ರೀನ್‌ ಮೇಲೆ ಮೂಡುತ್ತದೆ.

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌ 155261 ಮತ್ತು 011-24300606 ಅನ್ನು ಸಂಪರ್ಕಿಸಿ.

ಇದನ್ನೂ ಓದಿ: LIC New Plan For Youths: ಎಲ್‌ಐಸಿಯಿಂದ ಯುವ ಜನರಿಗಾಗಿ ಹೊಸ ವಿಮಾ ಯೋಜನೆ; ಏನಿದರ ವಿಶೇಷತೆ?

Continue Reading
Advertisement
kolkata doctor murder case
ದೇಶ34 mins ago

Kolkata Doctor Murder Case: ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ; ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

ಪ್ರಮುಖ ಸುದ್ದಿ34 mins ago

Sheikh Hasina : ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಕೇಸ್​ ದಾಖಲಿಸಿದ ಕೋರ್ಟ್​​

Janhvi Kapoor
ಸಿನಿಮಾ44 mins ago

Janhvi Kapoor: ಇಂದು ನಟಿ ಶ್ರೀದೇವಿ ಜನ್ಮದಿನ; ಬಾಯ್‌ಫ್ರೆಂಡ್‌ ಜತೆ ತಿರುಪತಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಜಾಹ್ನವಿ ಕಪೂರ್‌

Bengaluru Police
ಬೆಂಗಳೂರು49 mins ago

Bengaluru Police: ಸಿಟಿ ಸಿವಿಲ್‌ ಕೋರ್ಟ್‌ನಿಂದ ಕೊಲೆ ಆರೋಪಿ ಎಸ್ಕೇಪ್‌! ಸಿನಿಮಾ ಸ್ಟೈಲ್‌ನಲ್ಲಿ ಚೇಸ್‌ ಮಾಡಿದ ಖಾಕಿ

Maharaja Trophy 2024
ಕ್ರೀಡೆ49 mins ago

Maharaja Trophy 2024: ಮಹಾರಾಜ ಟಿ20 ಕ್ರಿಕೆಟ್​ ಟೂರ್ನಿ ಆರಂಭಕ್ಕೆ ಒಂದು ದಿನ ಬಾಕಿ; ತಂಡಗಳ ವಿವರ ಹೀಗಿದೆ

ಕರ್ನಾಟಕ1 hour ago

Kundapra Kannada Habba : ಬೆಂಗಳೂರಿನ ಅರಮನೆ ಮೈದಾನದಲ್ಲಿ 2 ದಿನ ಅದ್ಧೂರಿ ‘ಕುಂದಾಪ್ರ ಕನ್ನಡ ಹಬ್ಬ’

Independence day 2024
ದೇಶ1 hour ago

Independence day 2024: ಕೆಂಪು ಕೋಟೆ ಮೇಲೆ ಭಾಷಣ; ನೆಹರೂ, ಇಂದಿರಾ ಬಳಿಕ ಮೋದಿ ಹೊಸ ದಾಖಲೆ!

Bangladesh Unrest
ವಿದೇಶ1 hour ago

Bangladesh Unrest: ಬಾಂಗ್ಲಾ ಹಿಂದೂಗಳ ಪರ ಸೋಶಿಯಲ್‌ ಮೀಡಿಯಾ ಅಭಿಯಾನ; All eyes on hindus ಭಾರೀ ಟ್ರೆಂಡ್!

Road Accident
ಬೆಂಗಳೂರು1 hour ago

Road Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ! ಬೈಕ್‌, ಕಾರುಗಳಿಗೆ ಡಿಕ್ಕಿ ಹೊಡೆದ ಬಿಎಂಟಿಸಿ; ನರಳಾಡಿದ ಸವಾರರು

Kannada New Movie
ಬೆಂಗಳೂರು1 hour ago

Kannada New Movie: ‘ಸಿ’ ಸಿನಿಮಾದ ಟ್ರೈಲರ್ ಔಟ್; ಗಮನ ಸೆಳೆಯುತ್ತಿದೆ ಹೊಸಬರ ವಿಭಿನ್ನ ಪ್ರಯತ್ನ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು7 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ7 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌