Naga Chaitanya: ನಾಗ ಚೈತನ್ಯ-ಶೋಭಿತಾ ನಿಶ್ಚಿತಾರ್ಥದ ಫೋಟೊ ಹಂಚಿಕೊಂಡ ಸಮಂತಾ - Vistara News

ಸಿನಿಮಾ

Naga Chaitanya: ನಾಗ ಚೈತನ್ಯ-ಶೋಭಿತಾ ನಿಶ್ಚಿತಾರ್ಥದ ಫೋಟೊ ಹಂಚಿಕೊಂಡ ಸಮಂತಾ

Naga Chaitanya:ಟಾಲಿವುಡ್‌ ನಟ ನಾಗ ಚೈತನ್ಯ ಆಗಸ್ಟ್ 8ರಂದು ನಟಿ ಶೋಭಿತಾ ಧೂಳಿಪಾಲ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಹೈದರಾಬಾದ್‌ನಲ್ಲಿರುವ ನಾಗಾರ್ಜುನ ಅವರ ನಿವಾಸದಲ್ಲಿ ಸಮಾರಂಭ ಆಯೋಜಿಸಲಾಗಿತ್ತು. ಕುಟುಂಬದ ಆಪ್ತರು, ಸ್ನೇಹಿತರು ಈ ಸಮಾರಂಭದಲ್ಲಿ ಹಾಜರಿದ್ದರು. ಸದ್ಯ ಸಮಾರಂಭದ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.

VISTARANEWS.COM


on

Naga Chaitanya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್‌: ಟಾಲಿವುಡ್‌ ನಟ ನಾಗ ಚೈತನ್ಯ (Naga Chaitanya) ಆಗಸ್ಟ್ 8ರಂದು ನಟಿ ಶೋಭಿತಾ ಧೂಳಿಪಾಲ (Sobhita Dhulipala) ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಹೈದರಾಬಾದ್‌ನಲ್ಲಿರುವ ನಾಗಾರ್ಜುನ ಅವರ ನಿವಾಸದಲ್ಲಿ ಸಮಾರಂಭ ಆಯೋಜಿಸಲಾಗಿತ್ತು. ಕುಟುಂಬದ ಆಪ್ತರು, ಸ್ನೇಹಿತರು ಈ ಸಮಾರಂಭದಲ್ಲಿ ಹಾಜರಿದ್ದರು. ಇದೀಗ ಶೋಭಿತಾ ಅವರ ಸಹೋದರಿ ಸಮಂತಾ ಧೂಳಿಪಾಲ ನಿಶ್ಚಿತಾರ್ಥದ ಫೋಟೊಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್‌ ಮಾಡಿ ಶುಭ ಹಾರೈಸಿದ್ದಾರೆ.

ಸಮಂತಾ-ಶೋಭಿತಾ ಅವರ ಪೋಷಕರು ನಾಗ ಚೈತನ್ಯ ಅವರ ಪೋಷಕರೊಂದಿಗೆ ನಗು ನಗುತ್ತಾ ಪೋಸ್‌ ಕೊಟ್ಟಿದ್ದಾರೆ. ನಾಗ ಚೈತನ್ಯ ತನ್ನ ಅತ್ತೆ ಮಾವನೊಂದಿಗೆ ನಿಂತಿರುವುದು, ಜೋಡಿ ಇಡೀ ಕುಟುಂಬದೊಂದಿಗೆ ಖುಷಿಯಿಂದ ಇರುವ ಕ್ಷಣಗಳ ಫೋಟೊ ಇದಾಗಿದೆ.

ಮಗನ ನಿಶ್ಚಿತಾರ್ಥದ ಬಗ್ಗೆ ನಾಗಾರ್ಜುನ ಮನಸ್ಸು ಬಿಚ್ಚಿ ಮಾತನಾಡಿದ್ದಾರೆ. ʼʼಶೋಭಿತಾ ಅವರ ಪೋಷಕರೂ ನಾಗ ಚೈತನ್ಯನನ್ನು ಪ್ರೀತಿಸುತ್ತಾರೆ. ಅವನು ಖುಷಿಯಿಂದ ಇರಬೇಕು ಎನ್ನುವುದೇ ನನ್ನ ಆಸೆ. ನನ್ನ ಇಬ್ಬರ ಮಕ್ಕಳ ಬಗ್ಗೆಯೂ ಹೆಮ್ಮೆ ಇದೆʼʼ ಎಂದು ಹೇಳಿದ್ದಾರೆ. ಮದುವೆ ಹೀಗೆ ಆಗಬೇಕು ಎನ್ನುವುದರ ಬಗ್ಗೆ ಇದುವರೆಗೆ ಯಾವುದೇ ಯೋಜನೆ ಹಾಕಿಕೊಂಡಿಲ್ಲ ಎಂದೂ ಅವರು ತಿಳಿಸಿದ್ದಾರೆ.

ಈ ಹಿಂದೆ ನಾಗ ಚೈತನ್ಯ 2017ರಲ್ಲಿ ಬಹುಭಾಷಾ ನಟಿ, ಸೂಪರ್‌ ಸ್ಟಾರ್‌ ಸಮಂತಾ ರುತ್‌ ಪ್ರಭು ಅವರನ್ನು ಮದುವೆಯಾಗಿದ್ದರು. ಪ್ರೀತಿಸಿ ಮದುವೆಯಾಗಿದ್ದರೂ ಬಳಿಕ ಭಿನ್ನಾಭಿಪ್ರಾಯ ತಲೆದೋರಿದ ಹಿನ್ನಲೆಯಲ್ಲಿ 2021ರಲ್ಲಿ ದಂಪತಿ ವಿಚ್ಛೇದನ ಪಡೆದುಕೊಂಡಿದ್ದರು.

ನಾಗ ಚೈತನ್ಯ-ಶೋಭಿತಾ ಲವ್‌ ಸ್ಟೋರಿ

2022ರ ಮೇಯಲ್ಲಿ ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಮೊದಲ ಬಾರಿಗೆ ಹೈದರಾಬಾದ್‌ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಶೋಭಿತಾ ಧೂಳಿಪಾಲ ತಮ್ಮ ʻಮೇಜರ್ʼ ಚಿತ್ರದ ಪ್ರಚಾರಕ್ಕಾಗಿ ನಗರಕ್ಕೆ ಬಂದಿದ್ದರು. ಆ ಸಮಯದಲ್ಲಿ ಅವರು ಜನ್ಮದಿನ ಆಚರಿಸಿಕೊಂಡಿದ್ದರು. ನಾಗ ಚೈತನ್ಯ ಕೂಡ ಪಾರ್ಟಿಯಲ್ಲಿ ಭಾಗವಹಿಸಿದ್ದರು. ಅಲ್ಲಿಂದ ಇಬ್ಬರೂ ಸ್ನೇಹಿತರಾದರು. ಅವರ ಸ್ನೇಹ ಬಲವಾಗಿ ಡೇಟಿಂಗ್ ಪ್ರಾರಂಭಿಸಿದರು. ಎರಡು ವರ್ಷಗಳ ಕಾಲ ಒಟ್ಟಿಗೆ ಸಮಯ ಕಳೆದಿದ್ದರು. ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಇಬ್ಬರೂ ಜತೆಯಾಗಿ ಪ್ರವಾಸ ಮಾಡುವ ಹಲವು ಫೋಟೊಗಳು ವೈರಲ್‌ ಆಗಿದ್ದವು. ಆದರೆ ಪ್ರತಿ ಬಾರಿ ಡೇಟಿಂಗ್‌ ವಂದತಿ ಹಬ್ಬಿದ್ದಾಗಲೂ ಜೋಡಿ ಈ ಬಗ್ಗೆ ಮಾತನಾಡಿರಲಿಲ್ಲ. ಇದೀಗ ಉಂಗುರ ಬದಲಾಯಿಸುವ ಮೂಲಕ ತಮ್ಮ ಪ್ರೀತಿಗೆ ಅಧಿಕೃತ ಮುದ್ರೆ ಒತ್ತಿದ್ದಾರೆ.

2022ರಲ್ಲಿ ನಾಗ ಚೈತನ್ಯ ʼಲಾಲ್‌ ಸಿಂಗ್‌ ಛಡ್ಡಾʼ ಸಿನಿಮಾ ಮೂಲಕ ಬಾಲಿವುಡ್‌ಗೆ ಪ್ರವೇಶಿಸಿದ್ದರೂ ಹೇಳಿಕೊಳ್ಳುವಂತಹ ಬ್ರೇಕ್‌ ಸಿಗಲಿಲ್ಲ. ಕಳೆದ ವರ್ಷ ತಮಿಳು ಮತ್ತು ತೆಲುಗಿನಲ್ಲಿ ತೆರೆಕಂಡ ʼಕಸ್ಟಡಿʼ ಚಿತ್ರವೂ ಬಾಕ್ಸ್‌ ಆಫೀಸ್‌ನಲ್ಲಿ ಮುಗ್ಗರಿಸಿತ್ತು. ಜತೆಗೆ ʼಧೂತʼ ಎನ್ನುವ ವೆಬ್‌ಸೀರಿಸ್‌ನಲ್ಲಿ ಕಾಣಿಸಿಕೊಂಡಿದ್ದರು. ಇದು ತೆಲುಗಿನಲ್ಲಿ ತಯಾರಾಗಿತ್ತು. ಸದ್ಯ ʼಥಂಡೆಲ್‌ʼ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇನ್ನು ಶೋಭಿತಾ 2016ರಲ್ಲಿ ಬಿಡುಗಡೆಯಾದ ʼರಾಮನ್‌ ರಾಘವ್‌ 2.0ʼ ಹಿಂದಿ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಬಳಿಕ ತೆಲುಗು, ತಮಿಳು, ಮಲಯಾಳಂನಲ್ಲಿಯೂ ಅಭಿನಯಿಸಿರುವ ಅವರು ಸದ್ಯ ʼಮಂಕಿ ಮ್ಯಾನ್‌ʼ ಎನ್ನುವ ಇಂಗ್ಲಿಷ್‌ ಚಿತ್ರ ಮತ್ತು ಹಿಂದಿಯ ʼಸಿತಾರಾʼ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Naga Chaitanya: ಸಮಂತಾಗೆ ಪ್ರಪೋಸ್‌ ಮಾಡಿದ ದಿನವೇ ಎಂಗೇಜ್‌ ಆದ ನಾಗಚೈತನ್ಯ! ಮಾಜಿ ಪತ್ನಿ ವಿರುದ್ಧ ಸೇಡು ತೀರಿಸಿಕೊಂಡ್ರಾ ನಟ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Janhvi Kapoor: ಇಂದು ನಟಿ ಶ್ರೀದೇವಿ ಜನ್ಮದಿನ; ಬಾಯ್‌ಫ್ರೆಂಡ್‌ ಜತೆ ತಿರುಪತಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಜಾಹ್ನವಿ ಕಪೂರ್‌

Janhvi Kapoor: ಬಾಲಿವುಡ್‌ ನಟಿ, ಬಹುಭಾಷಾ ತಾರೆ ಶ್ರೀದೇವಿ ಹುಟ್ಟಿದ ದಿನ ಇಂದು. ಈ ಹಿನ್ನೆಲೆಯಲ್ಲಿ ಅವರ ಪುತ್ರಿ, ನಟಿ ಜಾಹ್ನವಿ ಕಪೂರ್‌ ಪ್ರತಿವರ್ಷದಂತೆ ಈ ಬಾರಿಯೂ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಅವರ ಜತೆಗೆ ಬಾಯ್‌ಫ್ರೆಂಡ್‌ ಶಿಖರ್ ಪಹಾರಿಯಾ ಕೂಡ ಇದ್ದರು. ನಟಿ ಶ್ರೀದೇವಿ 2018ರ ಫೆಬ್ರವರಿ 24ರಂದು ತಮ್ಮ 54ನೇ ವಯಸ್ಸಿನಲ್ಲಿ ದುಬೈಯಲ್ಲಿ ನಿಧನ ಹೊಂದಿದ್ದರು.

VISTARANEWS.COM


on

Janhvi Kapoor
Koo

ಹೈದರಾಬಾದ್‌: ಬಾಲಿವುಡ್‌ ನಟಿ, ಬಹುಭಾಷಾ ತಾರೆ ಶ್ರೀದೇವಿ (Sridevi) ಹುಟ್ಟಿದ ದಿನ ಇಂದು (ಆಗಸ್ಟ್‌ 13). ಈ ಹಿನ್ನೆಲೆಯಲ್ಲಿ ಅವರ ಪುತ್ರಿ, ನಟಿ ಜಾಹ್ನವಿ ಕಪೂರ್‌ ಪ್ರತಿವರ್ಷದಂತೆ ಈ ಬಾರಿಯೂ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಸಾಂಪ್ರದಾಯಿಕ ಹಳದಿ ರೇಷ್ಮೆ ಸೀರೆಯಲ್ಲಿ ಕಂಗೊಳಿಸಿದ ಅವರು ತಮ್ಮ ಬಾಯ್‌ಫ್ರೆಂಡ್‌ ಶಿಖರ್ ಪಹಾರಿಯಾ (Shikhar Pahariya) ಜತೆಗೆ ದೇಗುಲಕ್ಕೆ ಅಗಮಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಶಿಖರ್ ಪಹಾರಿಯಾ ಕೂಡ ಸಾಂಪ್ರದಾಯಿಕ ಉಡುಪು ಪಂಚೆ ಧರಿಸಿ ಸಾಥ್‌ ನೀಡಿದರು.

ತಾಯಿಯನ್ನು ನೆನೆಸಿಕೊಂಡು ಭಾವುಕ ಪೋಸ್ಟ್‌

ಜಾಹ್ನವಿ ಕಪೂರ್‌ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ತಾಯಿಯನ್ನು ನೆನಪಿಸಿಕೊಂಡು ಭಾವುಕ ಪೋಸ್ಟ್‌ ಶೇರ್‌ ಮಾಡಿದ್ದಾರೆ. ಶ್ರೀದೇವಿಯೊಂದಿಗಿನ ತಮ್ಮ ಬಾಲ್ಯದ ಫೋಟೊ ಹಂಚಿಕೊಂಡು ʼʼಹುಟ್ಟುಹಬ್ಬದ ಶುಭಾಶಯಗಳು ಅಮ್ಮ. ಐ ಲವ್‌ ಯೂʼʼ ಎಂದು ಬರೆದುಕೊಂಡಿದ್ದಾರೆ. ತಿರುಪತಿ ದೇವಸ್ಥಾನದ ಜತೆ ಶ್ರೀದೇವಿ ಅವರ ಕುಟುಂಬಕ್ಕೆ ವಿಶೇಷ ನಂಟಿದೆ. ಶ್ರೀದೇವಿ ಆಗಾಗ ಕುಟುಂಬ ಸಮೇತ ಇಲ್ಲಿಗೆ ಭೇಟಿ ನೀಡುತ್ತಿದ್ದರು. ಈಗ ಜಾಹ್ನವಿ ಕಪೂರ್‌ ಕೂಡ ನಿಯಮಿತವಾಗಿ ದೇಗುಲಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸುತ್ತಿರುತ್ತಾರೆ. ಜಾಹ್ನವಿ ಕಪೂರ್‌ ಮತ್ತು ಶಿಖರ್ ಪಹಾರಿಯಾ ಅವರು ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದುಕೊಳ್ಳುತ್ತಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ನಟಿ ಶ್ರೀದೇವಿ ಮೃತಪಟ್ಟು 6 ವರ್ಷ ಕಳೆದಿದೆ. 2018ರ ಫೆಬ್ರವರಿ 24ರಂದು ಅವರು ತಮ್ಮ 54ನೇ ವಯಸ್ಸಿನಲ್ಲಿ ದುಬೈಯಲ್ಲಿ ನಿಧನ ಹೊಂದಿದ್ದರು.

ನಿರೀಕ್ಷೆ ಹುಟ್ಟುಹಾಕಿದ ʼದೇವರʼ

ಸದ್ಯ ಜಾಹ್ನವಿ ಕಪೂರ್‌ ಪ್ಯಾನ್‌ ಇಂಡಿಯಾ ತೆಲುಗು ಚಿತ್ರ ʼದೇವರʼದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ದಕ್ಷಿಣ ಭಾರತದ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಕೊರಟಾಲ ಶಿವ ನಿರ್ದೇಶನದ ಈ ಸಿನಿಮಾದಲ್ಲಿ ನಾಯಕನಾಗಿ ಜೂನಿಯರ್‌ ಎನ್‌ಟಿಆರ್‌ ನಟಿಸುತ್ತಿದ್ದು, ಈಗಾಗಲೇ ನಿರೀಕ್ಷೆ ಮೂಡಿಸಿದೆ. ಸೈಫ್‌ ಆಲಿಖಾನ್‌, ಪ್ರಕಾಶ್‌ ರೈ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ರಿಲೀಸ್‌ ಆಗಿರುವ ಹಾಡುಗಳು ಹಿಟ್‌ ಲಿಸ್ಟ್‌ ಸೇರಿವೆ. ಮೊದಲ ಭಾಗ ಸೆಪ್ಟೆಂಬರ್‌ 27ರಂದು ಬಿಡುಗಡೆಯಾಗಲಿದೆ. ಇದರ ಜತೆಗೆ ಜಾಹ್ನವಿ ʼಸನ್ನಿ ಸಂಸ್ಕಾರಿ ಕಿ ತುಳಸಿ ಕುಮಾರಿʼ ಎನ್ನುವ ಹಿಂದಿ ಸಿನಿಮಾದಲ್ಲಿಯೂ ಅಭಿನಯಿಸುತ್ತಿದ್ದಾರೆ. ಇತ್ತೀಚೆಗೆ ತೆರೆಕಂಡ ಸಿನಿಮಾಗಳೆಲ್ಲ ಬಾಕ್ಸ್‌ ಆಫೀಸ್‌ನಲ್ಲಿ ಮುಗ್ಗರಿಸಿರುವುದರಿಂದ ಜಾಹ್ನವಿಗೆ ತುರ್ತಾಗಿ ಗೆಲವೊಂದು ಬೇಕಾಗಿದ್ದು, ʼದೇವರʼದ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಶಿಖರ್ ಪಹಾರಿಯಾ ಜತೆ ಸುತ್ತಾಟ

ಜಾಹ್ನವಿ ಕಪೂರ್‌ ಸದ್ಯ ತಮ್ಮ ಬಾಯ್‌ಫ್ರೆಂಡ್‌ ಶಿಖರ್ ಜತೆಗೆ ಬಿಂದಾಸ್‌ ಆಗಿಯೇ ಓಡಾಡುತ್ತಿದ್ದಾರೆ. ಶಿಖರ್ ಜತೆಗಿನ ಪ್ರೀತಿಯನ್ನು ಯಾವುದೇ ಹಿಂಜರಿಕೆ ಇಲ್ಲದೆ ಒಪ್ಪಿಕೊಂಡಿದ್ದಾರೆ. ಇತ್ತೀಚೆಗೆ ಬೋನಿ ಕಪೂರ್ ಕೂಡ ತಮ್ಮ ಪುತ್ರಿ ಶಿಖರ್ ಜತೆ ಡೇಟಿಂಗ್‌ ನಡೆಸುತ್ತಿರುವ ಬಗ್ಗೆ ಹೇಳಿಕೊಂಡಿದ್ದರು. ಶಿಖರ್ ಪಹಾರಿಯಾ ಅವರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ ಅವರ ಮೊಮ್ಮಗ. ವರದಿಗಳ ಪ್ರಕಾರ ಶಿಖರ್ ಮತ್ತು ಜಾಹ್ನವಿ ಈ ಹಿಂದೆಯೇ ಪರಸ್ಪರ ಪ್ರೀತಿಸುತ್ತಿದ್ದರು. ಬಳಿಕ ವೈಮನಸ್ಸು ಮೂಡಿ ಬೇರ್ಪಟ್ಟಿದ್ದರು. ಕಳೆದ ವರ್ಷ ಮತ್ತೆ ಇಬ್ಬರೂ ಒಂದಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Janhvi Kapoor: ಉರ್ಫಿ ಸ್ಟೈಲ್ ಕಾಪಿ ಮಾಡಿದ್ರಾ ಜಾಹ್ನವಿ ಕಪೂರ್‌? ಟ್ರೋಲ್‌ ಆದ್ರು ನಟಿ!

Continue Reading

ಬೆಂಗಳೂರು

Kannada New Movie: ‘ಸಿ’ ಸಿನಿಮಾದ ಟ್ರೈಲರ್ ಔಟ್; ಗಮನ ಸೆಳೆಯುತ್ತಿದೆ ಹೊಸಬರ ವಿಭಿನ್ನ ಪ್ರಯತ್ನ!

Kannada New Movie: ಕಿರಣ್ ಸುಬ್ರಮಣಿ ನಿರ್ದೇಶನದ ‘ಸಿ’ ಸಿನಿಮಾದ ಟ್ರೈಲರ್ ಅನ್ನು ನಾಯಕ ರಾಜವರ್ಧನ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಆ.23 ರಂದು ಬಿಡುಗಡೆಯಾಗಲಿರುವ ಸಿ ಚಿತ್ರದ ಟ್ರೈಲರ್ ಸಿಕ್ಕಾಪಟ್ಟೆ ಇಂಟರೆಸ್ಟಿಂಗ್ ಆಗಿ ಮೂಡಿಬಂದಿದ್ದು, ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ʼಸಿʼ ಇದು ಹಾಡುಗಳು ಮತ್ತು ಟೀಸರ್ ಮೂಲಕ ಗಮನ ಸೆಳೆಯುತ್ತಿರುವ ಸಿನಿಮಾ. ಹೊಸಬರಹ ಹೊಸ ಪ್ರಯತ್ನಕ್ಕೆ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಸಿನಿಮಾ (Kannada New Movie) ತಂಡ ಟ್ರೈಲರ್ ಮೂಲಕ ಅಭಿಮಾನಿಗಳ ಮುಂದೆ ಬಂದಿರುವ ʼಸಿʼ ಸಿನಿಮಾ ಇದೇ 23ಕ್ಕೆ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ.

ಅಂದ ಹಾಗೆ ಸಿ ಸಿನಿಮಾದ ಟ್ರೈಲರ್ ಅನ್ನು ನಾಯಕ ರಾಜವರ್ಧನ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಟ್ರೈಲರ್ ಸಿಕ್ಕಾಪಟ್ಟೆ ಇಂಟರೆಸ್ಟಿಂಗ್ ಆಗಿ ಮೂಡಿಬಂದಿದ್ದು, ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.

ಇದು ಕಿರಣ್ ಸುಬ್ರಮಣಿ ನಿರ್ದೇಶನದ ಚೊಚ್ಚಲ ಸಿನಿಮಾ. ಕಿರಣ್ ಆಕ್ಷನ್ ಕಟ್ ಹೇಳುವ ಜತೆಗೆ ನಾಯಕನಾಗಿ ಮಿಂಚಿದ್ದಾರೆ. ಮೊದಲ ಬಾರಿಗೆ ನಾಯಕನಟನಾಗಿ ಬೆಳ್ಳಿ ತೆರೆಮೇಲೆ ಅಬ್ಬರಿಸುವ ಜತೆಗೆ ನಿರ್ದೇಶನದ ಜವಾಬ್ದಾರಿಯನ್ನು ಹೊತ್ತುಕೊಂಡಿರುವುದು ಅವರ ಹೆಚ್ಚುಗಾರಿಕೆಯಾಗಿದೆ.

ಟ್ರೇಲರ್ ರಿಲೀಸ್ ಮಾಡಿ ಮಾತನಾಡಿದ ನಟ ರಾಜವರ್ಧನ್, ‘ಟ್ರೇಲರ್ ಎಮೋಷನಲ್ ಆಗಿದೆ. ಇದ್ರಲ್ಲಿ ಏನೋ ವಿಷಯವನ್ನು ಹೇಳುತ್ತಿದ್ದಾರೆ. ಎಲ್ಲರೂ ಸಿನಿಮಾ ನೋಡಿ’ ಎಂದು ಹೇಳಿದರು.

ನಿರ್ಮಾಪಕ ಕೃಷ್ಣೇಗೌಡ ಮಾತನಾಡಿ, ‘ಎಲ್ಲರೂ ಸಿನಿಮಾ ನೋಡಿ, ನಿರ್ಮಾಪಕರನ್ನು ಉಳಿಸಿ’ ಎಂದು ತಿಳಿಸಿದರು.

ಸಿನಿಮಾದ ನಿರ್ದೇಶಕ ಹಾಗೂ ನಟ ಕಿರಣ್ ಮಾತನಾಡಿ, ‘ಸಿ’ ಎಂದರೆ ಸಿನಿಮಾದಲ್ಲಿ ಮೂರು ಅರ್ಥವಿದೆ. ಆದರೆ ಟ್ರೈಲರ್‌ನಲ್ಲಿ ಒಂದು ಸಿ ಬಗ್ಗೆ ಮಾತ್ರ ಬಿಟ್ಟುಕೊಟ್ಟಿದ್ದೇವೆ. ಮತ್ತೆರಡು ಸಿ ಏನ್ ಹೇಳುತ್ತೆ ಎಂದು ಥಿಯೇಟ‌ರ್‌ನಲ್ಲೇ ನೋಡಬೇಕು. ಸಿನಿಮಾ ಪ್ರಾರಂಭವಾದಾಗ ಎಂಟು ಜನ ಪ್ರೊಡ್ಯೂಸರ್ ಇದ್ದರು. ಆದರೆ ಕಾರಣಾಂತರಗಳಿಂದ ಎಲ್ಲರೂ ಹೊರಟು ಹೋದರು. ಎಲ್ಲರೂ ಸಿನಿಮಾ ನೋಡಿ ಎಂದರು.

ನಟ ಪ್ರಶಾಂತ್ ನಟನ ಮಾತನಾಡಿ, ‘ಈ ಸಿನಿಮಾ ಮಗ ಅಪ್ಪನಿಗಾಗಿ ಮಾಡಿದ್ದು. ಈ ಸಿನಿಮಾದಲ್ಲಿ ನಾನು ವಿಭಿನ್ನವಾದ ಪಾತ್ರ ಮಾಡಿದ್ದೇನೆ ತುಂಬಾ ಚೆನ್ನಾಗಿ ಮೂಡಿ ಬಂದಿದೆ’ ಎಂದು ತಿಳಿಸಿದರು.

ಇದನ್ನೂ ಓದಿ: Indian Bank Recruitment 2024: 300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಇಂಡಿಯನ್‌ ಬ್ಯಾಂಕ್‌; ಕರ್ನಾಟಕದಲ್ಲಿಯೂ ಇದೆ ನೇಮಕಾತಿ

ಸದ್ಯ ರಿಲೀಸ್ ಆಗಿರುವ ಟ್ರೈಲರ್ ನೋಡುತ್ತಿದ್ದರೆ ಇದು ಅಪ್ಪ-ಮಗಳ ಬಾಂಧವ್ಯದ ಸಿನಿಮಾ ಎನ್ನುವುದು ಗೊತ್ತಾಗುತ್ತಿದೆ. ಜತೆಗೆ ಮೆಡಿಕಲ್ ಮಾಫಿಯಾದ ಬಗ್ಗೆಯೂ ಸಿನಿಮಾದಲ್ಲಿ ತೋರಿಸಲಾಗಿದೆ. ಕಣ್ಣು ಕಾಣದ ಮಗಳ ಆಸೆಯನ್ನು ಈಡೇರಿಸಲು ಹೋರಾಡುವ ಅಪ್ಪನ ಪಾತ್ರದಲ್ಲಿ ಸುಬ್ರಮಣಿ ಕಾಣಿಸಿಕೊಂಡಿದ್ದಾರೆ. ಮಗಳ ಪಾತ್ರದಲ್ಲಿ ಬಾಲ ನಟಿ ಸಾನ್ವಿತಾ ಅಭಿನಯಿಸಿದ್ದಾರೆ. ಇನ್ನು ಉಳಿದಂತೆ ಸಿನಿಮಾದಲ್ಲಿ ಪ್ರಶಾಂತ್ ನಟನ, ಶ್ರೀಧರ್ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ.

Continue Reading

ಬೆಂಗಳೂರು

Kannada New Movie: ರವೀಂದ್ರ ಸೊರಗಾವಿ ಕಂಠಸಿರಿಯಲ್ಲಿ ʼಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರುʼ ಚಿತ್ರದ ಹಾಡು

Kannada New Movie: ಜಮಖಂಡಿ ತಾಲೂಕಿನ ಕೃಷ್ಣಾ ನದಿ ತೀರದ ಹಿಪ್ಪರಗಿಯ ಇಂಚಗೇರಿ ಮಠದ ಕಲ್ಪತರುವಾದ ಶ್ರೀ ಸಂಗಮೇಶ್ವರ ಮಹಾರಾಜರ ಜೀವನ ಚರಿತ್ರೆ “ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು” ಚಿತ್ರದ “ಇಂಚಗೇರಿ ಆಧ್ಯಾತ್ಮಿಕ ಸಂಪ್ರದಾಯ ಗುರುಲಿಂಗ ಜಂಗಮ ಮಹಾರಾಜ” ಭಕ್ತಿ ಪ್ರಧಾನ ಹಾಡಿಗೆ ಖ್ಯಾತ ಗಾಯಕ ರವೀಂದ್ರ ಸೊರಗಾವಿ ಧ್ವನಿಯಾಗಿದ್ದಾರೆ.

VISTARANEWS.COM


on

Kannada New Movie
Koo

ಬೆಂಗಳೂರು: ಚುಟು ಚುಟು ಖ್ಯಾತಿಯ ತಮ್ಮ ಅದ್ಭುತ ಗಾಯನದಿಂದ ಜನಪ್ರಿಯರಾಗಿರುವ ಗಾಯಕ ರವೀಂದ್ರ ಸೊರಗಾವಿ, “ಇಂಚಗೇರಿ ಆಧ್ಯಾತ್ಮಿಕ ಸಂಪ್ರದಾಯ ಗುರುಲಿಂಗ ಜಂಗಮ ಮಹಾರಾಜ” ಭಕ್ತಿ ಪ್ರಧಾನ ಹಾಡಿಗೆ ಧ್ವನಿಯಾಗಿದ್ದಾರೆ. (Kannada New Movie) ಸುಮಾರು 130 ಚಲನಚಿತ್ರಗಳಿಗೆ ಹಿನ್ನೆಲೆ ಗಾಯಕರಾಗಿರುವ ರವೀಂದ್ರ ಸೊರಗಾವಿ ಅವರಿಗೆ ಇತ್ತೀಚೆಗೆ ಚಂದನವನ ಕ್ರಿಟಿಕ್ಸ್ ಅಕಾಡೆಮಿಯ ಅತ್ಯುತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿಯನ್ನು ಪಡೆದಿದ್ದಾರೆ.

ಜಮಖಂಡಿ ತಾಲೂಕಿನ ಕೃಷ್ಣಾ ನದಿ ತೀರದ ಹಿಪ್ಪರಗಿಯ ಇಂಚಗೇರಿ ಮಠದ ಕಲ್ಪತರುವಾದ ಶ್ರೀ ಸಂಗಮೇಶ್ವರ ಮಹಾರಾಜರ ಜೀವನ ಚರಿತ್ರೆ “ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು” ಚಿತ್ರದ ವಿಶೇಷವಾಗಿ ಗುರುಪರಂಪರೆ ಹೇಳುವ ಹಾಡು ನಿರ್ದೇಶಕ ರಾಜಾ ರವಿಶಂಕರ್ ರಚಿಸಿದ್ದಾರೆ ಸಂಗೀತವನ್ನು ನಿರ್ದೇಶಕ ಎ.ಟಿ. ರವೀಶ್ ಸಂಯೋಜಿಸಿದ್ದಾರೆ.

ಕೆಲವು ತಿಂಗಳುಗಳ ಹಿಂದೆ ಶ್ರೀ ಸ.ಸ.ಪ್ರಭುಜೀ ಮಾಹಾರಾಜರ ದಿವ್ಯ ಸಾನಿಧ್ಯದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರು ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರುವುದರ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದರು. ಶ್ರೀ ಗಿರಿಮಲ್ಲೇಶ್ವರ ಕಂಬೈನ್ಸ್ ಅಡಿಯಲ್ಲಿ ನಿರ್ಮಾಪಕ ಮಾಧವಾನಂದ ಅವರ ನಿರ್ಮಾಣದಲ್ಲಿ ಈ ಚಿತ್ರ ಅದ್ಧೂರಿಯಾಗಿ ಮೂಡಿ ಬರುತ್ತಿದೆ.

ರಾಜ್ಯದೆಲ್ಲೆಡೆ ಇಂಚಗೇರಿ ಸಂಪ್ರದಾಯಕ್ಕೆ ಅದರದೇ ಆದ ಮಹತ್ವವಿದೆ‌. ಅದನ್ನು ಶ್ರೀಸಂಗಮೇಶ್ವರ ಮಹಾರಾಜರು ಪಾಲಿಸಿಕೊಂಡು ಬರುತ್ತಿದ್ದರು. ಕಲಿಯುಗದ ಕಲ್ಪತರುವೆಂದೇ ಖ್ಯಾತರಾಗಿರುವ ಶ್ರೀ ಸಂಗಮೇಶ್ವರರ ಚಿತ್ರದ ಹಾಡುಗಳು ಹಾಗು ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಶ್ರೀ ಪ್ರಭುಜೀ ಮಹಾರಾಜರು ಆಶೀರ್ವದಿಸಿದರು.

ನೂತನ ಪ್ರತಿಭೆ ರವಿ ನಾರಾಯಣ್ ಶ್ರೀ ಸಂಗಮೇಶ್ವರರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತದ್ದಾರೆ. ಹಿರಿಯ ನಟರಾದ ರಾಮಕೃಷ್ಣ, ವಿಜಯಕಾಶಿ, ವಿನಯಪ್ರಸಾದ್, ಸಂದೀಪ್ ಮಲಾನಿ, ನಾರಾಯಣ ಸ್ವಾಮಿ, ತುಷಾರ್ ಮಲಗೊಂಡ, ಭವ್ಯಶ್ರೀ ರೈ ಹಾಗೂ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: Gold Rate Today: ಮತ್ತೆ ಕೈ ಸುಡುತ್ತಿದೆ ಚಿನ್ನ; ಬಂಗಾರ ದರದಲ್ಲಿ ಇಂದು ಭಾರಿ ಏರಿಕೆ

ರಾಜಾ ರವಿಶಂಕರ್ ನಿರ್ದೇಶನ, ಸಿ. ನಾರಾಯಣ್ ಛಾಯಾಗ್ರಾಹಣ, ಎ.ಟಿ. ರವೀಶ್ ಸಂಗೀತ, ಡಿ. ರವಿ ಸಂಕಲನ, ಕುಮಾರ್ ನೊಣವಿನಕೆರೆ ಪ್ರಸಾದನ ಈ ಚಿತ್ರಕ್ಕಿದೆ.

Continue Reading

ಬೆಂಗಳೂರು

Kannada New Movie: ಸಮರ್ಜಿತ್ ಲಂಕೇಶ್ ಅಭಿನಯದ ʼಗೌರಿʼ ಚಿತ್ರಕ್ಕೆ ನಟ ಉಪೇಂದ್ರ ಸಾಥ್‌; ಆ.15ಕ್ಕೆ ಸಿನಿಮಾ ರಿಲೀಸ್‌

Kannada New Movie: ಇಂದ್ರಜಿತ್ ಲಂಕೇಶ್ ನಿರ್ಮಾಣ ಹಾಗೂ ನಿರ್ದೇಶನದಲ್ಲಿ, ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ “ಗೌರಿ” ಚಿತ್ರದ ಪ್ರೀ ರಿಲೀಸ್ ಇವೆಂಟ್ ಅದ್ದೂರಿಯಾಗಿ ನೆರವೇರಿತು. ರಿಯಲ್ ಸ್ಟಾರ್ ಉಪೇಂದ್ರ ಮುಖ್ಯ ಅತಿಥಿಯಾಗಿ ಆಗಮಿಸಿ “ಗೌರಿ” ಚಿತ್ರಕ್ಕೆ ಸಾಥ್ ನೀಡಿದ್ದಾರೆ. ನಾಯಕ ಸಮರ್ಜಿತ್ ಹಾಗೂ ನಾಯಕಿ ಸಾನ್ಯಾ ಅಯ್ಯರ್ ಪಾಲ್ಗೊಂಡಿದ್ದರು. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಇಂದ್ರಜಿತ್ ಲಂಕೇಶ್ ನಿರ್ಮಾಣ ಹಾಗೂ ನಿರ್ದೇಶನದಲ್ಲಿ, ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ “ಗೌರಿ” ಚಿತ್ರದ ಪ್ರೀ ರಿಲೀಸ್ ಇವೆಂಟ್ ಅದ್ಧೂರಿಯಾಗಿ ನೆರವೇರಿದೆ. ರಿಯಲ್ ಸ್ಟಾರ್ ಉಪೇಂದ್ರ ಮುಖ್ಯ ಅತಿಥಿಯಾಗಿ ಆಗಮಿಸಿ “ಗೌರಿ” ಚಿತ್ರಕ್ಕೆ ಸಾಥ್ ನೀಡಿದ್ದಾರೆ. ಪ್ರೀ ರಿಲೀಸ್ ಇವೆಂಟ್‌ನಲ್ಲಿ ಫ್ಯಾಷನ್ ಶೋ ಸಹ ಆಯೋಜಿಸಲಾಗಿತ್ತು. (Kannada New Movie) ನಾಯಕ ಸಮರ್ಜಿತ್ ಹಾಗೂ ನಾಯಕಿ ಸಾನ್ಯಾ ಅಯ್ಯರ್ ಭಾಗಿಯಾಗಿದ್ದರು.

ಇಂದ್ರಜಿತ್‍ ಅವರದ್ದು ಗೋಲ್ಡನ್‍ ಹ್ಯಾಂಡ್‍ ಎಂದು ಮಾತನಾಡಿದ ನಟ ಉಪೇಂದ್ರ, ಇವರು ದೀಪಿಕಾ ಪಡುಕೋಣೆ ಅವರನ್ನು ಇಲ್ಲಿ ಕರೆದುಕೊಂಡು ಬಂದು ಬ್ರೇಕ್‍ ಕೊಟ್ಟರು. ಈಗ ಅವರು ಇಂಟರ್‌ನ್ಯಾಷನಲ್‌ ಸ್ಟಾರ್ ಆಗಿದ್ದಾರೆ. ಇವರ ಮಗ ಯಾವುದಾದರೂ ದೃಷ್ಟೀಲಿ ಇಲ್ಲಿ ಇರ್ತಾನೆ ಅನಿಸುತ್ತಾ? ಬಾಲಿವುಡ್ ಗೊ, ಹಾಲಿವುಡ್‌ಗೊ ಹೋಗೋ ತರಹ ಇದ್ದಾನೆ. ಅವನನ್ನು ಇಲ್ಲೇ ಇರಿಸಿಕೊಳ್ಳೋಕೆ ನಿಮ್ಮ ಕೈಲಿ ಸಾಧ್ಯ ಇದೆ. ಈ ತರಹ ಹೊಸ ತಲೆಮಾರಿನವರು ನಮ್ಮ ಕನ್ನಡ ಚಿತ್ರರಂಗದಲ್ಲಿ ಉಳಿದುಕೊಳ್ಳಬೇಕು ಅಂದರೆ ನಿಮ್ಮ ಕೈಯಲ್ಲಿ ಮಾತ್ರ ಸಾಧ್ಯ. ಅದಕ್ಕೆ ನೀವೆಲ್ಲಾ ಚಿತ್ರ ನೋಡಬೇಕು. ಈ ಬ್ಯೂಟಿ ಮತ್ತು ಬುದ್ಧಿವಂತಿಕೆ ಮುಗ್ಧತೆಯಿಂದ ಬರುತ್ತದೆ. ಮುಗ್ಧತೆ ಇದೆಯಲ್ಲಾ ಅದೇ ಬ್ಯೂಟಿ. ಇವರ ಮುಖವನ್ನು ನೋಡಿ. ಇವರಿಗೆ ನಾನು ಹಾರೈಸುವುದು ಮುಖ್ಯವಲ್ಲ. ನೀವು ಹಾರೈಸಬೇಕು.

ಫಸ್ಟ್ ಡೇ, ಫಸ್ಟ್ ಶೋ ಎಲ್ಲರೂ “ಗೌರಿ” ಸಿನಿಮಾ ನೋಡಿ. ಇವರ ಸಿನಿಮಾ ನೋಡಿದರೆ ನಮಗೂ ಖುಷಿ ಆಗುತ್ತೆ. ಇಂದ್ರಜಿತ್‍ ಅವರು ಶೋಮ್ಯಾನ್. ಈ ತರಹ ಕಾರ್ಯಕ್ರಮ ಮಾಡೋದಕ್ಕೆ ಅವರಿಂದಲೇ ಸಾಧ್ಯ. ಸಿನಿಮಾ ಸಹ ಅದೇ ರೀತಿ ಮಾಡಿರುತ್ತಾರೆ. ಕಾರ್ಯಕ್ರಮವನ್ನೇ ಹೀಗೆ ಮಾಡಿದ್ದಾರೆ, ಇನ್ನೂ ಸಿನಿಮಾ ಹೇಗೆ ಮಾಡಿರಬಹುದು ಯೋಚಿಸಿ ಎಂದು ತಿಳಿಸಿದರು.

ಸಮರ್ಜಿತ್‍ ಲವ್‍ಸ್ಟೋರಿಗಳಿಗೂ ಸೂಟ್ ಆಗುತ್ತಾನೆ, ಆ್ಯಕ್ಷನ್‍ ಚಿತ್ರಗಳಿಗೂ ಹೊಂದುತ್ತಾನೆ. ದೇಹವನ್ನೂ ಚೆನ್ನಾಗಿ ಬೆಳೆಸಿದ್ದಾನೆ. ಡ್ಯಾನ್ಸ್ ಸಹ ಮಾಡ್ತಾನೆ. ಜನ ಈಗಾಗಲೇ ಹೃತಿಕ್‍ ರೋಶನ್‍ ಅಂತ ಹೇಳೋಕೆ ಶುರು ಮಾಡಿದ್ದಾರೆ. ನೀನು ನಿನ್ನ ಮುಗ್ಧತೆಯನ್ನ ಉಳಿಸಿಕೋ ಸಾಕು. ಎಷ್ಟು ಮುಗ್ಧನಪ್ಪಾ ನೀನು. ಇಲ್ಲಿ ಮುಗ್ಧತೆ ಉಳಿಸಿಕೊಳ್ಳೋದು ಬಹಳ ಕಷ್ಟ. ಸ್ವಲ್ಪ ದಿನ ಚಿತ್ರರಂಗದಲ್ಲಿ ಇದ್ದರೆ ಸಾಕು, ನಾವೆಲ್ಲಾ ಬಹಳ ಕಿಲಾಡಿಗಳಾಗಿ ಬಿಡ್ತೀವಿ. ಚಿಕ್ಕವರಾಗಿದ್ದಾಗ ಬಹಳ ಮುಗ್ಧರಾಗಿರುತ್ತೇವೆ. ಕೆಲವರು ವಯಸ್ಸಾದ ಮೇಲೂ ಹಾಗೇ ಇರುತ್ತಾರೆ. ಕೆಲವರು ಮಾತ್ರ ತಮಗೆ ಎಲ್ಲಾ ಗೊತ್ತು ಎಂದು ಕಳೆದುಕೊಂಡು ಬಿಡುತ್ತಾರೆ ಎಂದು ರಿಯಲ್ ಸ್ಟಾರ್ ಉಪೇಂದ್ರ ಸಮರ್ಜಿತ್ ಲಂಕೇಶ್ ಬಗ್ಗೆ ಮೆಚ್ಚುಗೆಯ ಮಾತುಗಳಾಡಿದರು.

ಸಿನಿಮಾ ಒಂದು ಕ್ರಿಯಾಶೀಲ ಮಾಧ್ಯಮ. ಪ್ರತಿ ಕ್ಷಣ ಯೋಚನೆ ಮಾಡಿ, ಏನಾದರೂ ಹೊಸತನ ತರುತ್ತಾರೆ ಎಂದರೆ ಅದು ಉಪೇಂದ್ರ. ಅವರು ಕನ್ನಡ ಚಿತ್ರರಂಗದಲ್ಲಿರುವುದು ನಮ್ಮ ಅದೃಷ್ಟ. ಉಪ್ಪಿ ಸಾರ್ ಅವರು ತಮ್ಮ ಬುದ್ಧಿವಂತಿಕೆಯಿಂದ ಮತ್ತು ಕ್ರಿಯಾಶೀಲತೆಯಿಂದ ಕನ್ನಡ ಚಿತ್ರರಂಗಕ್ಕೆ ದೊಡ್ಡ ಹೆಸರು ತಂದಿದ್ದಾರೆ. ಇವತ್ತು ಕನ್ನಡ ಚಿತ್ರರಂಗವನ್ನು ಜಗತ್ತಿಗೆ ತೆಗೆದುಕೊಂಡು ಹೋಗಿದ್ದಾರೆ. ‘ಎʼ, ‘ಉಪೇಂದ್ರʼ ಮತ್ತು ‘ಸೂಪರ್ʼ ಚಿತ್ರಗಳನ್ನು ನಾವು ಯೋಚನೆ ಮಾಡೋಕೂ ಸಾಧ್ಯವಿಲ್ಲ. ನನ್ನ ಮಗ ‘ಉಪೇಂದ್ರʼ ಸಿನಿಮಾ ಕ್ಲೈಮ್ಯಾಕ್ಸ್ ನೋಡಿದೆ, ಅವರು ಆಗಿನ ಕಾಲಕ್ಕೆ ಟೊರೋಂಟಿನೋ ಶೈಲಿಯ ಸಿನಿಮಾ ಮಾಡಿದ್ದರು ಎಂದು ಹೇಳುತ್ತಿದ್ದ. ಆ ರೀತಿಯ ಯೋಚನೆ ಮಾಡೋದು ಅಸಾಧ್ಯ. ಅವರು ನಮ್ಮ ನಡುವೆ ಇದ್ದಾರೆ ಅನ್ನೋದು ನಮ್ಮ ಹೆಮ್ಮೆ ಎಂದು ಹೇಳಿ, ಉಪೇಂದ್ರ ಅವರಿಗೆ ಧನ್ಯವಾದ ತಿಳಿಸಿದ ಇಂದ್ರಜಿತ್ ಲಂಕೇಶ್, ಆಗಸ್ಟ್‌ 15 ರಂದು ಬಿಡುಗಡೆಯಾಗುತ್ತಿರುವ “ಗೌರಿ” ಚಿತ್ರವನ್ನು ಎಲ್ಲರೂ ಚಿತ್ರಮಂದಿರಗಳಲ್ಲೇ ನೋಡಿ ಎಂದರು.

ಇದನ್ನೂ ಓದಿ: Gold Rate Today: ಮತ್ತೆ ಕೈ ಸುಡುತ್ತಿದೆ ಚಿನ್ನ; ಬಂಗಾರ ದರದಲ್ಲಿ ಇಂದು ಭಾರಿ ಏರಿಕೆ

ನಾಯಕ ಸಮರ್ಜಿತ್ ಲಂಕೇಶ್ ಹಾಗೂ ನಾಯಕಿ ಸಾನ್ಯಾ ಅಯ್ಯರ್ ತಮ್ಮ ಮೊದಲ ಚಿತ್ರಕ್ಕೆ ಪ್ರೋತ್ಸಾಹ ನೀಡಬೇಕು ಎಂದು ವಿನಂತಿಸಿದರು.

Continue Reading
Advertisement
kolkata doctor murder case
ದೇಶ32 mins ago

Kolkata Doctor Murder Case: ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ; ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

ಪ್ರಮುಖ ಸುದ್ದಿ33 mins ago

Sheikh Hasina : ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಕೇಸ್​ ದಾಖಲಿಸಿದ ಕೋರ್ಟ್​​

Janhvi Kapoor
ಸಿನಿಮಾ42 mins ago

Janhvi Kapoor: ಇಂದು ನಟಿ ಶ್ರೀದೇವಿ ಜನ್ಮದಿನ; ಬಾಯ್‌ಫ್ರೆಂಡ್‌ ಜತೆ ತಿರುಪತಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಜಾಹ್ನವಿ ಕಪೂರ್‌

Bengaluru Police
ಬೆಂಗಳೂರು48 mins ago

Bengaluru Police: ಸಿಟಿ ಸಿವಿಲ್‌ ಕೋರ್ಟ್‌ನಿಂದ ಕೊಲೆ ಆರೋಪಿ ಎಸ್ಕೇಪ್‌! ಸಿನಿಮಾ ಸ್ಟೈಲ್‌ನಲ್ಲಿ ಚೇಸ್‌ ಮಾಡಿದ ಖಾಕಿ

Maharaja Trophy 2024
ಕ್ರೀಡೆ48 mins ago

Maharaja Trophy 2024: ಮಹಾರಾಜ ಟಿ20 ಕ್ರಿಕೆಟ್​ ಟೂರ್ನಿ ಆರಂಭಕ್ಕೆ ಒಂದು ದಿನ ಬಾಕಿ; ತಂಡಗಳ ವಿವರ ಹೀಗಿದೆ

ಕರ್ನಾಟಕ1 hour ago

Kundapra Kannada Habba : ಬೆಂಗಳೂರಿನ ಅರಮನೆ ಮೈದಾನದಲ್ಲಿ 2 ದಿನ ಅದ್ಧೂರಿ ‘ಕುಂದಾಪ್ರ ಕನ್ನಡ ಹಬ್ಬ’

Independence day 2024
ದೇಶ1 hour ago

Independence day 2024: ಕೆಂಪು ಕೋಟೆ ಮೇಲೆ ಭಾಷಣ; ನೆಹರೂ, ಇಂದಿರಾ ಬಳಿಕ ಮೋದಿ ಹೊಸ ದಾಖಲೆ!

Bangladesh Unrest
ವಿದೇಶ1 hour ago

Bangladesh Unrest: ಬಾಂಗ್ಲಾ ಹಿಂದೂಗಳ ಪರ ಸೋಶಿಯಲ್‌ ಮೀಡಿಯಾ ಅಭಿಯಾನ; All eyes on hindus ಭಾರೀ ಟ್ರೆಂಡ್!

Road Accident
ಬೆಂಗಳೂರು1 hour ago

Road Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ! ಬೈಕ್‌, ಕಾರುಗಳಿಗೆ ಡಿಕ್ಕಿ ಹೊಡೆದ ಬಿಎಂಟಿಸಿ; ನರಳಾಡಿದ ಸವಾರರು

Kannada New Movie
ಬೆಂಗಳೂರು1 hour ago

Kannada New Movie: ‘ಸಿ’ ಸಿನಿಮಾದ ಟ್ರೈಲರ್ ಔಟ್; ಗಮನ ಸೆಳೆಯುತ್ತಿದೆ ಹೊಸಬರ ವಿಭಿನ್ನ ಪ್ರಯತ್ನ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು7 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ7 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌