Viral Video: ಫುಟ್ಬಾಲ್ ಪಂದ್ಯದಲ್ಲಿ ಸೋತಿದ್ದಕ್ಕೆ ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸಿದ ದೈಹಿಕ ಶಿಕ್ಷಕ; ವಿಡಿಯೊ ನೋಡಿ ಜನಾಕ್ರೋಶ - Vistara News

Latest

Viral Video: ಫುಟ್ಬಾಲ್ ಪಂದ್ಯದಲ್ಲಿ ಸೋತಿದ್ದಕ್ಕೆ ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸಿದ ದೈಹಿಕ ಶಿಕ್ಷಕ; ವಿಡಿಯೊ ನೋಡಿ ಜನಾಕ್ರೋಶ

Viral Video: ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ದೈಹಿಕ ಶಿಕ್ಷಕರೊಬ್ಬರು ಫುಟ್ಬಾಲ್ ಆಟ ಆಡುವಾಗ ಕಳಪೆ ಪ್ರದರ್ಶನ ನೀಡಿದ್ದಾರೆ ಎಂದು ಅಸಮಾಧಾನಗೊಂಡು ತಮ್ಮ ವಿದ್ಯಾರ್ಥಿಗಳನ್ನು ಥಳಿಸುತ್ತಿರುವ ಆಘಾತಕಾರಿ ದೃಶ್ಯವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಈ ಕೃತ್ಯ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ವಿಡಿಯೊ ವೈರಲ್ ಆದ ನಂತರ, ಈ ಬಗ್ಗೆ ಸಂಗಗಿರಿ ಜಿಲ್ಲಾ ಶಿಕ್ಷಣ ಅಧಿಕಾರಿ ತನಿಖೆ ನಡೆಸಿದ್ದಾರೆ. ನಂತರ ಡಿಇಒ ತಮ್ಮ ತನಿಖೆಯ ವಿವರಗಳನ್ನು ಇಲಾಖೆ ಮತ್ತು ಜಿಲ್ಲಾಧಿಕಾರಿ ಇಬ್ಬರಿಗೂ ಸಲ್ಲಿಸಿದ್ದಾರೆ. ಆ ಬಳಿಕ ಅಣ್ಣಾಮಲೈ ಅವರನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಆಟದಲ್ಲಿ ಸೋಲು ಗೆಲುವುಗಳು ಇದ್ದೇ ಇರುತ್ತವೆ. ಸೋತಾಗ ಅಂಜಬಾರದು, ಗೆದ್ದಾಗ ಹಿಗ್ಗಬಾರದು ಎಂಬ ನೀತಿ ಮಾತಿದೆ. ವಿದ್ಯಾರ್ಥಿಗಳು ಆಟದಲ್ಲಿ ಗೆದ್ದಾಗ ಅವರನ್ನು ಪ್ರಶಂಸಿಸುವ ಶಿಕ್ಷಕರು ಅವರು ಸೋತಾಗ ಅವರಿಗೆ ಧೈರ್ಯ ಹೇಳಬೇಕು. ಅದನ್ನು ಬಿಟ್ಟು ಮಕ್ಕಳಿಗೆ ನೀತಿ ಪಾಠ ಹೇಳಿಕೊಡುವ ಶಿಕ್ಷಕರೇ ಅವರು ಸೋತಾಗ ಅವರನ್ನು ಹೀಯಾಳಿಸಿದರೆ, ಶಿಕ್ಷಿಸಿದರೆ ಅವರು ಶಿಕ್ಷಕರ ಸ್ಥಾನಕ್ಕೆ ಅರ್ಹರಲ್ಲ ಎಂದೇ ಹೇಳಬಹುದು. ಇದೀಗ ಅಂತಹದೊಂದು ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ಪಿಟಿ ಮಾಸ್ಟರೊಬ್ಬರು ವಿದ್ಯಾರ್ಥಿಗಳು ಫುಟ್ಬಾಲ್ ಆಟ ಆಡುವಾಗ ಕಳಪೆ ಪ್ರದರ್ಶನ ನೀಡಿದ್ದಾರೆ ಎಂದು ಅಸಮಾಧಾನಗೊಂಡು ಅವರನ್ನು ಥಳಿಸುತ್ತಿರುವ ಆಘಾತಕಾರಿ ದೃಶ್ಯವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಇದು ಸಖತ್ ವೈರಲ್ (Viral Video)ಆಗಿದೆ.

ಸೇಲಂ ಜಿಲ್ಲೆಯ ಮೆಟ್ಟೂರು ಬಳಿಯ ಸರ್ಕಾರಿ ಅನುದಾನಿತ ಶಾಲೆಯಲ್ಲಿ ಈ ಘಟನೆ ನಡೆದಿದೆ. ಎನ್ಎಚ್ಎಸ್ಎಸ್‍ನ ಫುಟ್ಬಾಲ್ ತಂಡವು ಸ್ಪರ್ಧೆಯಲ್ಲಿ ಭಾಗವಹಿಸಿತ್ತು. ಆದರೆ ನಿರೀಕ್ಷೆಗಳಂತೆ ಅವರು ಗೆಲುವು ಸಾಧಿಸಲಿಲ್ಲ. ಆಗ ಅಣ್ಣಾಮಲೈ ಎಂದು ಗುರುತಿಸಲ್ಪಟ್ಟ ಪಿಟಿ ಮಾಸ್ಟರ್ ವಿದ್ಯಾರ್ಥಿಗಳು ಆಟದಲ್ಲಿ ಸೋತರೆಂದು ಅವರನ್ನು ಕ್ರೂರವಾಗಿ ಥಳಿಸಿದ್ದಾರೆ. ಆಟಗಾರರ ಕೆನ್ನೆಗೆ ಹೊಡೆಯುವುದು, ಒದೆಯುವುದು ಮತ್ತು ಕೂದಲನ್ನು ಎಳೆಯುವುದನ್ನು ಮಾಡಿ ಅಮಾನುಷವಾಗಿ ವರ್ತಿಸಿದ್ದಾರೆ. ಅಣ್ಣಾಮಲೈ ಹುಡುಗರನ್ನು ಹೊಡೆಯುವ ಮೂಲಕ ಅನಾಗರಿಕ ವರ್ತನೆ ತೋರಿದ್ದಾರೆ ಎಂದು ಆಟಗಾರರೊಬ್ಬರ ಪೋಷಕರು ವಿಡಿಯೊ ಸಮೇತ ವರದಿ ಮಾಡಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೊದಲ್ಲಿ, ಅಣ್ಣಾಮಲೈ ಅವರು ತಂಡದ ಗೋಲ್ ಕೀಪರ್ ಆಗಿರುವ ವಿದ್ಯಾರ್ಥಿಯೊಬ್ಬನಿಗೆ, “ನೀನು ಗಂಡಸಾ ಅಥವಾ ಹೆಂಗಸಾ? ನೀನು ಎದುರಾಳಿಗೆ ಸ್ಕೋರ್ ಗಳಿಸಲು ಹೇಗೆ ಅವಕಾಶ ಕೊಟ್ಟೆ?, ಚೆಂಡು ನಿನ್ನನ್ನು ದಾಟಿ ಮುಂದೆ ಹೋಗಲು ಹೇಗೆ ಬಿಟ್ಟೆ?” ಎಂದು ಥಳಿಸಿದ್ದಾರೆ. ಹಾಗೇ ಮತ್ತೊಬ್ಬ ವಿದ್ಯಾರ್ಥಿಯನ್ನು ಪ್ರಶ್ನಿಸಿದ ಅವರು, “ನಿನಗೆ ಅವರ ಮೇಲೆ ಫ್ರೆಷರ್‌ ಹಾಕಿ ಆಡಲು ಸಾಧ್ಯವಿಲ್ಲವೇ? ಅಲ್ಲಿ ಯಾಕೆ ಕಮ್ಯೂನಿಕೇಷನ್ ಮಾಡಲಿಲ್ಲ?” ಎಂದು ಥಳಿಸಿದ್ದಾರೆ. ದೈಹಿಕ ಶಿಕ್ಷಕರ ಈ ವರ್ತನೆಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶಿಕ್ಷಕಿ, ಸಹಪಾಠಿಗಳ ಕಿರುಕುಳ ತಾಳಲಾರದೆ ನೇಣಿಗೆ ಶರಣಾದ ಬಾಲಕ

ವಿಡಿಯೊ ವೈರಲ್ ಆದ ನಂತರ, ಈ ಬಗ್ಗೆ ಸಂಗಗಿರಿ ಜಿಲ್ಲಾ ಶಿಕ್ಷಣ ಅಧಿಕಾರಿ ತನಿಖೆ ನಡೆಸಿದ್ದಾರೆ. ನಂತರ ಡಿಇಒ ತಮ್ಮ ತನಿಖೆಯ ವಿವರಗಳನ್ನು ಇಲಾಖೆ ಮತ್ತು ಜಿಲ್ಲಾಧಿಕಾರಿ ಇಬ್ಬರಿಗೂ ಸಲ್ಲಿಸಿದ್ದಾರೆ. ಆ ಬಳಿಕ ಅಣ್ಣಾಮಲೈ ಅವರನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Independence day 2024: ಕೆಂಪು ಕೋಟೆ ಮೇಲೆ ಭಾಷಣ; ನೆಹರೂ, ಇಂದಿರಾ ಬಳಿಕ ಮೋದಿ ಹೊಸ ದಾಖಲೆ!

ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ದಾಖಲೆ ಬರೆದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಈ ಬಾರಿಯ ಸ್ವಾತಂತ್ರ್ಯ ದಿನದ (Independence day 2024) ಭಾಷಣ ಹೊಸ ದಾಖಲೆಯನ್ನು ಬರೆಯಲಿದೆ. ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿಯವರ ಅನಂತರ ಕೆಂಪು ಕೋಟೆಯಲ್ಲಿ ಸತತ 11 ಸ್ವಾತಂತ್ರ್ಯ ದಿನದ ಭಾಷಣ ಮಾಡುವ ಮೂರನೇ ಭಾರತೀಯ ಪ್ರಧಾನಿಯಾಗಿ ಅವರು ದಾಖಲೆ ನಿರ್ಮಿಸಲಿದ್ದಾರೆ.

VISTARANEWS.COM


on

By

Independence day 2024
Koo

ಕಳೆದ ಹತ್ತು ವರ್ಷಗಳಿಂದ ದೇಶದ ಪ್ರಧಾನಿಯಾಗಿರುವ ನರೇಂದ್ರ ಮೋದಿ (PM Modi) ಅವರು ಈ ಬಾರಿಯು ಸ್ವಾತಂತ್ರ್ಯ ದಿನದ (Independence day 2024) 11ನೇ ಭಾಷಣ ಮಾಡಲಿದ್ದಾರೆ. ಎಲ್ಲರಲ್ಲೂ ಸಾಕಷ್ಟು ಕುತೂಹಲ ಮೂಡಿಸುವ ಅವರ ಭಾಷಣದಲ್ಲಿ ಎಂದಿನಂತೆ ಏನಾದರೂ ವಿಶೇಷ ಇದ್ದೇ ಇರುತ್ತದೆ. ಹೀಗಾಗಿ ಅವರ ಭಾಷಣವನ್ನು ಕೇಳಲು ದೇಶದ ಮೂಲೆಮೂಲೆಯಲ್ಲೂ ಜನರು ಕಾತರರಾಗಿರುತ್ತಾರೆ. ಮೂರನೇ ಅವಧಿಗೆ ದೇಶದ ಪ್ರಧಾನಿ ಆಗಿರುವ ನರೇಂದ್ರ ಮೋದಿ ಅವರು ಈ ಬಾರಿ ಸ್ವಾತಂತ್ರ್ಯ ದಿನವದ ಆಗಸ್ಟ್ 15ರಂದು ಗುರುವಾರ ತಮ್ಮ ಸತತ 11ನೇ ಸ್ವಾತಂತ್ರ್ಯ ದಿನದ ಭಾಷಣವನ್ನು ಮಾಡಲು ಸಿದ್ಧರಾಗಿದ್ದಾರೆ.

ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ದಾಖಲೆ ಬರೆದಿರುವ ಅವರು, ಈ ಅವಧಿಯ ಮೊದಲ ಸ್ವಾತಂತ್ರ್ಯ ದಿನದ ಭಾಷಣವಾಗಿದೆ. ಈ ಭಾಷಣದೊಂದಿಗೆ ಪ್ರಧಾನಿ ಮೋದಿ ಅವರು ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿಯವರ ಅನಂತರ ಕೆಂಪು ಕೋಟೆಯಲ್ಲಿ ಸತತ 11 ಸ್ವಾತಂತ್ರ್ಯ ದಿನದ ಭಾಷಣ ಮಾಡುವ ಮೂರನೇ ಭಾರತೀಯ ಪ್ರಧಾನಿಯಾಗಲಿದ್ದಾರೆ.


ದಾಖಲೆ ನಿರ್ಮಿಸಿದ ಮೋದಿ

ಮೋದಿಯವರ ಈ ಬಾರಿಯ 11ನೇ ಭಾಷಣ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸಂಖ್ಯೆಯನ್ನು ಮೀರಿಸಲಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 10 ಸ್ವಾತಂತ್ರ್ಯ ದಿನದ ಭಾಷಣಗಳನ್ನು ಮಾಡಿರುವ ದಾಖಲೆ ಹೊಂದಿದ್ದಾರೆ.


ಭಾರತದ ಮೊದಲ ಪ್ರಧಾನಿ ನೆಹರೂ ಅವರು 17 ಬಾರಿ ನಿರಂತರವಾಗಿ ಸ್ವಾತಂತ್ರ್ಯ ದಿನದ ಭಾಷಣಗಳನ್ನು ಮಾಡಿದ ದಾಖಲೆಯನ್ನು ಹೊಂದಿದ್ದಾರೆ.

ಜನವರಿ 1966ರಿಂದ ಮಾರ್ಚ್ 1977ರವರೆಗೆ ಮತ್ತು ಅನಂತರ ಜನವರಿ 1980ರಿಂದ ಅಕ್ಟೋಬರ್ 1984ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಇಂದಿರಾ ಗಾಂಧಿ ಅವರು ಒಟ್ಟು 16 ಬಾರಿ ರಾಷ್ಟ್ರವನ್ನು ಉದ್ದೇಶಿಸಿ ಭಾಷಣಗಳನ್ನು ಮಾಡಿದ್ದರು.

Independence day 2024
Independence day 2024


ಮಾತಿನ ಅವಧಿ

ಇನ್ನು ಪ್ರಧಾನಿಯವರ ಸ್ವಾತಂತ್ರ್ಯ ದಿನದ ಭಾಷಣದ ಅವಧಿಗೆ ಹೋಲಿಸಿದರೆ ಮೋದಿಯವರೇ ಅತಿ ಉದ್ದದ ಭಾಷಣ ಮಾಡಿರುವ ಪ್ರಧಾನಿಯಾಗಿದ್ದರೆ. ಪ್ರಧಾನಿ ಮೋದಿಯವರು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರತಿ ಭಾಷಣವನ್ನೂ ಸರಾಸರಿ 82 ನಿಮಿಷಗಳ ಕಾಲ ನಡೆಸಿದ್ದಾರೆ. ಇದು ಭಾರತದ ಇತಿಹಾಸದಲ್ಲೇ ಪ್ರಧಾನಿಯವರ ಅತಿ ಉದ್ದದ ಭಾಷಣವಾಗಿದೆ.


ಮಾಜಿ ಪ್ರಧಾನಿ ಐ.ಕೆ. ಗುಜ್ರಾಲ್ ಅವರು 1997ರಲ್ಲಿ 71 ನಿಮಿಷಗಳ ಕಾಲ ಕೆಂಪುಕೋಟೆಯಲ್ಲಿ ಭಾಷಣ ಮಾಡಿದ್ದರು. ಪಿಎಂ ಮೋದಿಯವರ ಭಾಷಣಗಳ ಉದ್ದವು 2017ರಲ್ಲಿ 55 ನಿಮಿಷಗಳ ಕಡಿಮೆ ಅವಧಿಯಿಂದ 2016ರಲ್ಲಿ 94 ನಿಮಿಷಗಳವರೆಗೆ ವಿಸ್ತರಿಸಿತ್ತು.

ಇದನ್ನೂ ಓದಿ: Paris Olympics 2024 : ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ಮೋದಿಯಿಂದ ಪ್ಯಾರಿಸ್ ಒಲಿಂಪಿಕ್ಸ್ ಸಾಧಕರಿಗೆ ಆತಿಥ್ಯ


ಮಾತಿನ ವಿಷಯ

ಪ್ರಧಾನಿ ಮೋದಿ ಅವರು ಪ್ರತಿ ಬಾರಿಯೂ ಸ್ವಾತಂತ್ರ್ಯ ದಿನದಂದು ವಿಶೇಷ ಘೋಷಣೆಗಳನ್ನು ಮಾಡಿರುವುದು ಹಿಂದಿನ ದಾಖಲೆಗಳಿಂದ ತಿಳಿಯುತ್ತದೆ. 2014ರಲ್ಲಿ ಅವರು ತಮ್ಮ ಮೊದಲ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಸ್ವಚ್ಛ ಭಾರತ ಮತ್ತು ಜನ್ ಧನ್ ಖಾತೆಗಳಂತಹ ಹೊಸ ಕಾರ್ಯಕ್ರಮಗಳನ್ನು ಘೋಷಿಸಿದರು. ಅಂದಿನಿಂದ ಅವರು ವಿವಿಧ ಪ್ರಮುಖ ಘೋಷಣೆಗಳನ್ನು ಮಾಡಲು ಈ ವೇದಿಕೆಯನ್ನು ಬಳಸಿಕೊಂಡಿದ್ದಾರೆ. ಅಲ್ಲದೇ ಅವರ ಭಾಷಣಗಳ ಜೊತೆಗೆ ಅವರು ಧರಿಸುವ ವಿವಿಧ ರೀತಿಯ ಪೇಟಗಳು ಎಲ್ಲರ ಗಮನ ಸೆಳೆಯುತ್ತಿವೆ.

Continue Reading

ಹುಬ್ಬಳ್ಳಿ

Tungabhadra Dam: ಜಲಾಶಯ ನಿರ್ವಹಣೆ ಕುರಿತ ಕೇಂದ್ರ ಸಮಿತಿ ಸಲಹೆಯನ್ನು ರಾಜ್ಯ ಸರ್ಕಾರ ಧಿಕ್ಕರಿಸಿದೆ; ಪ್ರಲ್ಹಾದ್‌ ಜೋಶಿ ಆರೋಪ

Tungabhadra Dam: ರಾಜ್ಯ ಸರ್ಕಾರದ ಬಳಿ ರಸ್ತೆ ರಿಪೇರಿಗೂ ಹಣವಿಲ್ಲ. ಇನ್ನು ಸಮಾನಾಂತರ ಜಲಾಶಯ ಹೇಗೆ ನಿರ್ಮಾಣ ಮಾಡುತ್ತದೆ ಎಂದು ಪ್ರಶ್ನಿಸಿರುವ ಸಚಿವ ಪ್ರಲ್ಹಾದ್‌ ಜೋಶಿ, ಕಳೆದ ಆರು ತಿಂಗಳ ಕಾಲ ಜಲಾಶಯ ಖಾಲಿ ಆಗಿತ್ತು. ರಾಜ್ಯ ಸರ್ಕಾರ ಆಗಲೇ ಸಮರ್ಪಕ ನಿರ್ವಹಣೆ ಕೈಗೊಳ್ಳಬೇಕಿತ್ತು. ಆದರೆ ಅದನ್ನು ಮಾಡಲಿಲ್ಲ. ಕೇಂದ್ರ ಸರ್ಕಾರದ ಸಲಹೆಗಳನ್ನೂ ಪಾಲಿಸದೇ ಧಿಕ್ಕರಿಸಿತು. ಸರ್ಕಾರ ಮತ್ತು ನಿರ್ವಹಣೆ ಹೊಣೆ ಹೊತ್ತವರ ತೀವ್ರ ನಿರ್ಲಕ್ಷ ತೋರಿದ್ದರಿಂದಲೇ ಈ ಅವಘಡ ಸಂಭವಿಸಿದೆ ಎಂದು ಆರೋಪಿಸಿದ್ದಾರೆ.

VISTARANEWS.COM


on

Tungabhadra Dam
Koo

ಹುಬ್ಬಳ್ಳಿ: ಜಲಾಶಯಗಳ (Tungabhadra Dam) ಸಮರ್ಪಕ ನಿರ್ವಹಣೆಗೆ ಕೇಂದ್ರ ಸಮಿತಿ ನೀಡಿದ ಸಲಹೆಗಳನ್ನು ರಾಜ್ಯ ಸರ್ಕಾರ ಧಿಕ್ಕರಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಆರೋಪಿಸಿದ್ದಾರೆ.

ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬಿರುಕು ಬಿಟ್ಟು ಆತಂಕ ಸೃಷ್ಟಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರು, ಜಲಾಶಯಗಳ ನಿರ್ವಹಣೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ. ಬೇಸಿಗೆಯಲ್ಲಿ ಜಲಾಶಯ ಖಾಲಿ ಇದ್ದಾಗಲೆ ನಿರ್ವಹಣೆ ಕಾರ್ಯ ಕೈಗೊಳ್ಳಬೇಕಿತ್ತು. ಆದರೆ, ರಾಜ್ಯ ಸರ್ಕಾರ ಉದಾಸೀನ ತೋರಿದೆ. ಈಗದರ ಪರಿಣಾಮ ಎದುರಿಸುವಂತಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Indian Bank Recruitment 2024: 300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಇಂಡಿಯನ್‌ ಬ್ಯಾಂಕ್‌; ಕರ್ನಾಟಕದಲ್ಲಿಯೂ ಇದೆ ನೇಮಕಾತಿ

ಕಳೆದ ಆರು ತಿಂಗಳ ಕಾಲ ಜಲಾಶಯ ಖಾಲಿ ಆಗಿತ್ತು. ರಾಜ್ಯ ಸರ್ಕಾರ ಆಗಲೇ ಸಮರ್ಪಕ ನಿರ್ವಹಣೆ ಕೈಗೊಳ್ಳಬೇಕಿತ್ತು. ಆದರೆ ಅದನ್ನು ಮಾಡಲಿಲ್ಲ. ಕೇಂದ್ರ ಸರ್ಕಾರದ ಸಲಹೆಗಳನ್ನೂ ಪಾಲಿಸದೇ ಧಿಕ್ಕರಿಸಿತು. ಸರ್ಕಾರ ಮತ್ತು ನಿರ್ವಹಣೆ ಹೊಣೆ ಹೊತ್ತವರ ತೀವ್ರ ನಿರ್ಲಕ್ಷ ತೋರಿದ್ದರಿಂದಲೇ ಈ ಅವಘಡ ಸಂಭವಿಸಿದೆ ಎಂದು ಜೋಶಿ ಆರೋಪಿಸಿದ್ದಾರೆ.

ರಸ್ತೆ ರಿಪೇರಿಗೂ ಹಣವಿಲ್ಲ

ರಾಜ್ಯ ಸರ್ಕಾರದ ಬಳಿ ರಸ್ತೆ ರಿಪೇರಿಗೂ ಹಣವಿಲ್ಲ. ಇನ್ನು ಸಮಾನಾಂತರ ಜಲಾಶಯ ಹೇಗೆ ನಿರ್ಮಾಣ ಮಾಡುತ್ತಾರೆ ಎಂದು ಪ್ರಶ್ನಿಸಿದ ಸಚಿವ ಪ್ರಲ್ಹಾದ್‌ ಜೋಶಿ, ಬೇಕಾಬಿಟ್ಟಿ ಆಡಳಿತ, ಭ್ರಷ್ಟಾಚಾರದ ಫಲವಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ. ಹಾಗಾಗಿ ಜಲಾಶಯಗಳ ವ್ಯವಸ್ಥಿತ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದೆ ಎಂದು ಆರೋಪಿಸಿದ್ದಾರೆ.

ಹತ್ತು ಸಾವಿರ ಕೋಟಿ ರೂ. ಎಲ್ಲಿ?

ಹಿಂದೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿದ್ದಾಗ ಜಲಾಶಯಗಳ ನಿರ್ವಹಣೆಗೆ ಪ್ರತಿ ವರ್ಷ 10000 ಕೋಟಿ ರೂ. ವೆಚ್ಚ ಮಾಡುವುದಾಗಿ ಹೇಳಿದ್ದರು. ಆದರೆ, ಪ್ರತಿ ವರ್ಷವಲ್ಲ ಆಡಳಿತದ 5 ವರ್ಷವೂ ಹತ್ತು ಸಾವಿರ ಕೋಟಿ ಖರ್ಚು ಮಾಡಲಿಲ್ಲ. ರಾಜ್ಯ ಸರ್ಕಾರ ಇನ್ನಾದರೂ ತುಂಗಭದ್ರಾ ಡ್ಯಾಂ ಸೇರಿದಂತೆ ರಾಜ್ಯದ ಎಲ್ಲಾ ಜಲಾಶಯಗಳ ನಿರ್ವಹಣೆಗೆ ಗಮನ ಹರಿಸಬೇಕು ಎಂದು ಸಚಿವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Kannada New Movie: ಸಮರ್ಜಿತ್ ಲಂಕೇಶ್ ಅಭಿನಯದ ʼಗೌರಿʼ ಚಿತ್ರಕ್ಕೆ ನಟ ಉಪೇಂದ್ರ ಸಾಥ್‌; ಆ.15ಕ್ಕೆ ಸಿನಿಮಾ ರಿಲೀಸ್‌

ರೈತರಿಗೆ ಅನುಕೂಲ ಕಲ್ಪಿಸಲಿ

ರಾಜ್ಯ ಸರ್ಕಾರ ಕೂಡಲೇ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಸರಿಪಡಿಸಲು ಮುಂದಾಗಬೇಕು. ಈ ಮೂಲಕ ರೈತರಿಗೆ ಬೆಳೆ ಬೆಳೆಯಲು ಅನುಕೂಲ ಮಾಡಿಕೊಡಬೇಕು ಎಂದು ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹಿಸಿದ್ದಾರೆ.

Continue Reading

Latest

Murder Case: 90 ಲಕ್ಷ ರೂ. ಠೇವಣಿ ಎಗರಿಸಲು ವೃದ್ಧನ ಕೊಂದ ಮಹಿಳಾ ಬ್ಯಾಂಕ್‌ ಮ್ಯಾನೇಜರ್‌! ಪ್ಲ್ಯಾನ್‌ ಹೇಗಿತ್ತು ನೋಡಿ!

Murder Case: ಹಣದ ಮೇಲಿನ ಆಸೆಗೆ ವ್ಯಕ್ತಿಯೊಬ್ಬನನ್ನು ಪ್ಲ್ಯಾನ್ ಮಾಡಿ ಕೊಲೆ ಮಾಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಆರಂಭದಲ್ಲಿ ವೃದ್ಧರೊಬ್ಬರ ಸಾವು ರಸ್ತೆ ಅಪಘಾತ ಎಂದು ಪರಿಗಣಿಸಿದ್ದ ಪೊಲೀಸರಿಗೆ ಅದು ಪ್ರಿಪ್ಲ್ಯಾನ್ ಮರ್ಡರ್ ಎಂಬುದು ತಿಳಿದುಬಂತು. ಸೈಕಲ್‌ನಲ್ಲಿ ಹೋಗುತ್ತಿದ್ದ ಪಪ್ಪಚನ್ ಅವರು ಕಾರು ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸಿ ಕಾರು ಅಪಘಾತದ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಇದು ಅಪಘಾತವಲ್ಲ, ಕೊಲೆ ಎನ್ನುವುದು ಬೆಳಕಿಗೆ ಬಂತು.

VISTARANEWS.COM


on

Murder Case
Koo


ಹಣಕ್ಕಾಗಿ ಜನರು ಯಾರನ್ನು ಬೇಕಾದರೂ ಕೊಲೆ ಮಾಡಲು ಮುಂದಾಗಿದ್ದಾರೆ. ಕೇವಲ ಹಣಕ್ಕಾಗಿ ಜನರನ್ನು ಪ್ರಾಣಿಗಳಂತೆ ಎಲ್ಲೆಂದರಲ್ಲಿ ಸಾಯಿಸುತ್ತಿದ್ದಾರೆ. ಇದೀಗ ಹಣದ ಮೇಲಿನ ಆಸೆಗೆ ವ್ಯಕ್ತಿಯೊಬ್ಬನನ್ನು ಪ್ಲ್ಯಾನ್ ಮಾಡಿ ಕೊಲೆ ಮಾಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಆರಂಭದಲ್ಲಿ ವೃದ್ಧರೊಬ್ಬರ ಸಾವು ರಸ್ತೆ ಅಪಘಾತ ಎಂದು ಪರಿಗಣಿಸಿದ್ದ ಪೊಲೀಸರಿಗೆ ಅದು ಪ್ರಿಪ್ಲ್ಯಾನ್ ಮರ್ಡರ್ ಎಂಬುದು ತಿಳಿದುಬಂದಿದೆ. ಹಾಗಾಗಿ 82 ವರ್ಷದ ನಿವೃತ್ತ ಬಿಎಸ್ಎನ್ಎಲ್ ಎಂಜಿನಿಯರ್ ಸಿ ಪಪ್ಪಚನ್ ಅವರ ಕೊಲೆ (Murder Case)ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲ್ಲಂ ಪೂರ್ವ ಪೊಲೀಸರು ಖಾಸಗಿ ಮಹಿಳಾ ಬ್ಯಾಂಕ್ ಮ್ಯಾನೇಜರ್ ಸೇರಿದಂತೆ ಐವರನ್ನು ಬಂಧಿಸಿದ್ದಾರೆ.

ಮೇ 26ರಂದು ಇಲ್ಲಿನ ಆಶ್ರಮದ ಮೈದಾನದ ಬಳಿ ಸೈಕಲ್‍ನಲ್ಲಿ ಹೋಗುತ್ತಿದ್ದ ಪಪ್ಪಚನ್ ಅವರು ಕಾರು ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದರು. ಡಿಕ್ಕಿ ಹೊಡೆದ ನಂತರ ಚಾಲಕ ಕಾರಿನ ಸಮೇತ ಅಲ್ಲಿಂದ ಪರಾರಿಯಾಗಿದ್ದ. ದಾರಿಹೋಕರು ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸಿ ಕಾರು ಅಪಘಾತದ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಅಪಘಾತವು ಪ್ರಿಪ್ಲ್ಯಾನ್ ಮರ್ಡರ್ ಎಂಬುದು ತಿಳಿಯಿತು. ಈ ಪ್ರಕರಣದಲ್ಲಿ ಮ್ಯಾನೇಜರ್ ಸರಿತಾ (45) ಸೇರಿದಂತೆ ಅನೂಪ್ (37) ಸಂಸ್ಥೆಯ ಅಕೌಂಟ್ ಎಕ್ಸಿಕ್ಯೂಟಿವ್; ಮಾಹೀನ್ (47), ಹಾಶಿಫ್ ಅಲಿ (27) ಮತ್ತು ಅನಿಮೋನ್ (44) ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿ ಸರಿತಾ ಕೆಲಸ ಮಾಡುತ್ತಿದ್ದ ಖಾಸಗಿ ಬ್ಯಾಂಕ್‍ನಲ್ಲಿ 90 ಲಕ್ಷ ರೂ.ಗಳ ಠೇವಣಿ ಹೊಂದಿದ್ದ ಪಪ್ಪಚನ್, ತನ್ನ ಠೇವಣಿಯಿಂದ 40 ಲಕ್ಷ ರೂ. ನಾಪತ್ತೆಯಾಗಿರುವುದರ ಬಗ್ಗೆ ಸರಿತಾ ಅವರನ್ನು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸರಿತಾ, ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಭರವಸೆ ನೀಡಿ, ಖಾತೆಗಳನ್ನು ಪರಿಶೀಲಿಸಿ ಇನ್ನೊಂದು ದಿನ ಭೇಟಿಯಾಗುವುದಾಗಿ ಭರವಸೆ ನೀಡಿ ವಾಪಸ್ ಕಳುಹಿಸಿದರು.

ಆದರೆ ಸರಿತಾ ಮತ್ತು ಅವಳ ಸಹಚರರು ಪಪ್ಪಚನ್ ಅವರನ್ನು ಕೊಲ್ಲಲು ಸಂಚು ರೂಪಿಸಿದರು. ಕೊಲೆಯನ್ನು ಕಾರ್ಯಗತಗೊಳಿಸಲು ಅನಿಮೋನ್ ಎಂಬಾತನ್ನು ಆಯ್ಕೆ ಮಾಡಿದರು. ಈ ಕೃತ್ಯ ಎಸಗಲು ಬಾಡಿಗೆ ಕಾರನ್ನು ಬಳಸಿದರು. ಅನೂಪ್ ಕಾರನ್ನು ಬಾಡಿಗೆಗೆ ಪಡೆದಿದ್ದರು. ಪಪ್ಪಚನ್ ಬಗ್ಗೆ ಚೆನ್ನಾಗಿ ತಿಳಿದಿದ್ದ ಸರಿತಾಗೆ ಅವರು ತನ್ನ ಕುಟುಂಬದೊಂದಿಗೆ ಉತ್ತಮ ಸಂಬಂಧ ಹೊಂದಿಲ್ಲ ಎಂದು ಗೊತ್ತಿತ್ತು. ಅವರು ಸತ್ತರೆ ಹಣವನ್ನು ಪಡೆಯಲು ಯಾರೂ ಬರುವುದಿಲ್ಲ ಎಂಬ ತಿಳುವಳಿಕೆಯಿಂದ ಅವರು ಈ ಪಿತೂರಿ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪಪ್ಪಚನ್ ಅವರು ಕೊಲ್ಲಂನಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಪ್ರಣಯಕ್ಕೆ ಡಿಸ್ಟರ್ಬ್‌ ಆಯಿತೆಂದು ಕೋಪಗೊಂಡ ಪ್ರಿಯತಮ ಮಹಿಳೆಯ ಮಗುವನ್ನು ನೆಲಕ್ಕೆ ಬಡಿದು ಕೊಂದ!

ಪಪ್ಪಚನ್ ಅವರ ದೇಹವನ್ನು ಅವರ ಹುಟ್ಟೂರಾದ ಪಂದಲಂನಲ್ಲಿ ಸಮಾಧಿ ಮಾಡಲಾಯಿತು. ಬಂಧಿತರನ್ನು ಬಿಎನ್ಎಸ್‍ನ ಸೆಕ್ಷನ್ 103 (ಕೊಲೆ) ಮತ್ತು ಸೆಕ್ಷನ್ 61 (ಕ್ರಿಮಿನಲ್ ಪಿತೂರಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Continue Reading

ಧಾರ್ಮಿಕ

Vastu Tips: ಈ ವಸ್ತುಗಳನ್ನು ಮನೆಯಲ್ಲಿಟ್ಟರೆ ಸಂತೋಷ, ಸಮೃದ್ಧಿ, ನೆಮ್ಮದಿ ಸಿಗುತ್ತವೆ!

ಕೆಲವೊಂದು ವಸ್ತುಗಳು ಮನೆಗೆ ಸಂತೋಷ, ಸಮೃದ್ಧಿ ತರುತ್ತದೆ ಎನ್ನುವುದು ನಂಬಿಕೆಯಾದರೂ ವಾಸ್ತು ಶಾಸ್ತ್ರದಲ್ಲಿ (Vastu Tips) ಕೆಲವು ವಸ್ತುಗಳನ್ನು ಮನೆಯ ನಿರ್ಧಿಷ್ಟ ಮೂಲೆಯಲ್ಲಿ ಇರಿಸುವುದರಿಂದ ಇದು ನಿಜವಾಗುತ್ತದೆ ಎನ್ನಲಾಗಿದೆ. ಹಾಗಾದರೆ ಅಂತಹ ವಸ್ತುಗಳು ಯಾವುದು, ಅದು ಮನೆಯ ಯಾವ ಮೂಲೆಯಲ್ಲಿ ಇರಬೇಕು ಎನ್ನುವ ಕುರಿತು ಇಲ್ಲಿದೆ ಮಾಹಿತಿ.

VISTARANEWS.COM


on

By

Vastu Tips
Koo

ಮನೆಯಲ್ಲಿ ಕೆಲವೊಂದು ವಸ್ತುಗಳನ್ನು ಇರಿಸುವುದು ಶುಭ ಸಂಕೇತವೆಂದು (Good sign) ಪರಿಗಣಿಸಲಾಗಿದೆ. ವಾಸ್ತು ಶಾಸ್ತ್ರದಲ್ಲೂ (Vastu Tips) ಇದನ್ನು ಉಲ್ಲೇಖಿಸಲಾಗಿದೆ. ಹಿಂದೂ ಧರ್ಮದಲ್ಲಿ (hindu dharma) ವಾಸ್ತು ಶಾಸ್ತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಯಾಕೆಂದರೆ ಇದು ಭಾರತೀಯರ ಅತ್ಯಂತ ಪುರಾತನ ವಿಜ್ಞಾನವೂ ಹೌದು.

ಕೆಲವೊಂದು ವಸ್ತುಗಳು ಮನೆಯಲ್ಲಿ ಇದ್ದರೆ ಅದು ನಮ್ಮ ಜೀವನದಿಂದ ನಕಾರಾತ್ಮಕತೆಯನ್ನು ತೆಗೆದುಹಾಕುತ್ತದೆ ಮತ್ತು ಸಕಾರಾತ್ಮಕತೆಯನ್ನು ತರುತ್ತದೆ. ಮನೆಯಲ್ಲಿ ಸಂತೋಷ, ಸಮೃದ್ಧಿ ಮತ್ತು ಸಂಪತ್ತನ್ನು ತುಂಬಲು ಬಯಸಿದರೆ ವಾಸ್ತು ಪ್ರಕಾರ ಈ ದಿಕ್ಕುಗಳಲ್ಲಿ ಈ ವಸ್ತುಗಳನ್ನು ಇರಿಸಿ.


ಆನೆಯ ಪ್ರತಿಮೆಗಳು

ಮನೆಯಲ್ಲಿ ಎರಡು ಜೋಡಿ ಎತ್ತರಿಸಿದ ಸೊಂಡಿಲು ಇರುವ ಆನೆಯ ಪ್ರತಿಮೆಗಳನ್ನು ಇಟ್ಟುಕೊಳ್ಳುವುದರಿಂದ ಕುಟುಂಬ ಸದಸ್ಯರಲ್ಲಿ ಸಂತೋಷ, ಶಾಂತಿ ಮತ್ತು ಪ್ರೀತಿಯನ್ನು ತರಬಹುದು. ಈ ಮೂರ್ತಿಗಳನ್ನು ಉತ್ತರ ದಿಕ್ಕಿನಲ್ಲಿ ಇಡುವುದು ವಿಶೇಷವಾಗಿ ಪ್ರಯೋಜನಕಾರಿಯಾಗಿದೆ.


ಕಾಮಧೇನು ಹಸುವಿನ ಪ್ರತಿಮೆ

ಕಾಮಧೇನು ಹಸುವಿನ ಪ್ರತಿಮೆಯನ್ನು ಮನೆಯಲ್ಲಿ ಇಡುವುದರಿಂದ ಉತ್ತಮ ಆರೋಗ್ಯ ಮತ್ತು ಸಂಪತ್ತು ಆಶೀರ್ವಾದವನ್ನು ತರುತ್ತದೆ. ಉತ್ತಮ ಫಲಿತಾಂಶಗಳಿಗಾಗಿ ಈ ಪ್ರತಿಮೆಯನ್ನು ಮನೆಯ ಈಶಾನ್ಯ ದಿಕ್ಕಿನಲ್ಲಿ ಇರಿಸಿ.


ಗೂಬೆ ಪ್ರತಿಮೆ

ಇದು ಕೆಟ್ಟ ಕಣ್ಣು ಮತ್ತು ನಕಾರಾತ್ಮಕ ಶಕ್ತಿಗಳಿಂದ ರಕ್ಷಿಸುತ್ತದೆ. ಮನೆಯ ಮುಖ್ಯ ದ್ವಾರದಲ್ಲಿ ಗೂಬೆಯ ಪ್ರತಿಮೆಯನ್ನು ಇರಿಸುವುದು ನಕಾರಾತ್ಮಕ ಶಕ್ತಿಗಳನ್ನು ದೂರವಿಡಲು ಮತ್ತು ಮನೆಯವರ ಮೇಲೆ ಹೊರಗಿನವರ ಕೆಟ್ಟ ದೃಷ್ಟಿ ಬೀಳದಂತೆ ಮಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Varamahalakshmi Festival 2024 : ವರಮಹಾಲಕ್ಷ್ಮಿ ಹಬ್ಬದ ದಿನ ಸುಲಭವಾಗಿ ಮಾಡಬಹುದಾದ ರುಚಿಕರ ಖಾದ್ಯಗಳಿವು; ವಿಡಿಯೊಗಳಿವೆ


ಆಮೆಯ ಪ್ರತಿಮೆ

ಆಮೆಯು ದೀರ್ಘಾಯುಷ್ಯ ಮತ್ತು ಸ್ಥಿರತೆಯ ಸಂಕೇತವಾಗಿದೆ. ಮನೆಯ ಉತ್ತರ ದಿಕ್ಕಿನಲ್ಲಿ ಗಾಜು ಅಥವಾ ಲೋಹದಿಂದ ಮಾಡಿದ ಆಮೆಯ ಪ್ರತಿಮೆಯನ್ನು ಇರಿಸುವುದರಿಂದ ಕುಟುಂಬದ ಸದಸ್ಯರ ಆರೋಗ್ಯ ಸುಧಾರಿಸುತ್ತದೆ ಮತ್ತು ಆದಾಯವನ್ನು ಹೆಚ್ಚಿಸುತ್ತದೆ ಎಂಬ ನಂಬಿಕೆ ಇದೆ.

Continue Reading
Advertisement
Murder Case
ಬೆಳಗಾವಿ14 mins ago

Murder Case : ಕಂಡವರ ಹೆಂಡ್ತಿ ಮೇಲೆ ವ್ಯಾಮೋಹ; ಸುಪಾರಿ ಕೊಟ್ಟು ಚಟ್ಟ ಕಟ್ಟಿದ ಕಿರಾತಕ

Varamahalakshmi Festival Fashion
ಫ್ಯಾಷನ್15 mins ago

Varamahalakshmi Festival Fashion: ಫೆಸ್ಟಿವ್‌ ಸೀಸನ್‌ಗೆ ಮರಳಿದ ಹೆಣ್ಣುಮಕ್ಕಳ ಟ್ರೆಡಿಷನಲ್‌ ಉದ್ದ ಲಂಗ!

Hindenburg Report
ಪ್ರಮುಖ ಸುದ್ದಿ18 mins ago

Hindenburg Report : ಸೆಬಿ ಅಧ್ಯಕ್ಷರ ವಜಾಗೆ ಆಗ್ರಹಿಸಿದ ಕಾಂಗ್ರೆಸ್​ನಿಂದ ಆಗಸ್ಟ್​​ 22ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ

karnataka Weather Forecast
ಮಳೆ40 mins ago

Karnataka Weather : ಉತ್ತರ ಧ್ರುವದಿಂದ ದಕ್ಷಿಣ ಧ್ರುವದ ಕಡೆ ಮುಖ ಮಾಡಿದ ಮಳೆರಾಯ

MUDA SCAM
ಪ್ರಮುಖ ಸುದ್ದಿ43 mins ago

Muda Case : ಪಿಸಿಆರ್​ ಏನೆಂದು ಗೊತ್ತಿಲ್ಲದವರು ಸಿದ್ದರಾಮಯ್ಯ ಪರ ಅರ್ಜಿ ಸಲ್ಲಿಸಿದ್ದೀರಾ? ಸಿಎಂ ಪರ ಅರ್ಜಿ ಸಲ್ಲಿಸಿದವರಿಗೆ ಕೋರ್ಟ್ ತರಾಟೆ

Duleep Trophy
ಕ್ರೀಡೆ53 mins ago

Duleep Trophy: 14 ವರ್ಷಗಳ ಬಳಿಕ ದುಲೀಪ್‌ ಟ್ರೋಫಿ ಆಡಲಿದ್ದಾರೆ ವಿರಾಟ್​ ಕೊಹ್ಲಿ?

kolkata doctor murder case
ದೇಶ1 hour ago

Kolkata Doctor Murder Case: ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ; ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

ಪ್ರಮುಖ ಸುದ್ದಿ1 hour ago

Sheikh Hasina : ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಕೇಸ್​ ದಾಖಲಿಸಿದ ಕೋರ್ಟ್​​

Janhvi Kapoor
ಸಿನಿಮಾ2 hours ago

Janhvi Kapoor: ಇಂದು ನಟಿ ಶ್ರೀದೇವಿ ಜನ್ಮದಿನ; ಬಾಯ್‌ಫ್ರೆಂಡ್‌ ಜತೆ ತಿರುಪತಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಜಾಹ್ನವಿ ಕಪೂರ್‌

Bengaluru Police
ಬೆಂಗಳೂರು2 hours ago

Bengaluru Police: ಸಿಟಿ ಸಿವಿಲ್‌ ಕೋರ್ಟ್‌ನಿಂದ ಕೊಲೆ ಆರೋಪಿ ಎಸ್ಕೇಪ್‌! ಸಿನಿಮಾ ಸ್ಟೈಲ್‌ನಲ್ಲಿ ಚೇಸ್‌ ಮಾಡಿದ ಖಾಕಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌