Borewell water : ಬೋರ್‌ವೆಲ್ ನೀರು ಕುಡಿದು 40ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ - Vistara News

ಬೆಳಗಾವಿ

Borewell water : ಬೋರ್‌ವೆಲ್ ನೀರು ಕುಡಿದು 40ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ

Borewell water : ಚಚಡಿ ಗ್ರಾಮದಲ್ಲಿ ಬೋರ್‌ವೆಲ್‌ ನೀರು ಕುಡಿದ ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ. ಬೋರ್‌ವೆಲ್‌ ನೀರು ಕುಡಿಯುತ್ತಿದ್ದಂತೆ ವಾಂತಿ- ಭೇದಿ ಕಾಣಿಸಿಕೊಂಡಿದ್ದು, ಎಲ್ಲರೂ ಆಸ್ಪತ್ರೆಗೆ ದಾಖಲಾಗಿದ್ದಾರೆ.

VISTARANEWS.COM


on

borewell water More than 40 people suffer from vomiting after drinking borewell water
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಬೋರ್‌ವೆಲ್ ನೀರು ಕುಡಿದು 41 ಜನರಿಗೆ ವಾಂತಿ ಭೇದಿ (Borewell water) ಕಾಣಿಸಿಕೊಂಡಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಬೋರ್‌ವೆಲ್ ನೀರಿನಿಂದಾಗಿ 41 ಜನ ಅಸ್ವಸ್ಥಗೊಂಡಿದ್ದು, ಓರ್ವ ಮಹಿಳೆ ಗಂಭೀರವಾಗಿದ್ದಾರೆ.

ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮೂವರನ್ನು ದಾಖಲು ಮಾಡಿದ್ದು, ಓರ್ವ ಮಹಿಳೆಗೆ ಐಸಿಯುವಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೈಲಹೊಂಗಲ ತಾಲೂಕು ಆಸ್ಪತ್ರೆಗೆ ಮೂವರು ದಾಖಲಾಗಿದ್ದು, ಇನ್ನೂಳಿದವರಿಗೆ ಚಚಡಿ ಗ್ರಾಮದ ಪಿಎಚ್‌ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಆರೋಗ್ಯ ಅಧಿಕಾರಿಗಳು ಬೋರ್‌ವೆಲ್ ನೀರನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಗ್ರಾಮದಲ್ಲೇ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಬಿಡು ಬಿಟ್ಟಿದ್ದಾರೆ. ಸ್ಥಳಕ್ಕೆ ಡಿಎಚ್ಒ ಮಹೇಶ್ ಕೋಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಸ್ಥರ ಜತೆಗೆ ತುರ್ತು ಸಭೆ ನಡೆಸಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಸೂಚನೆ ನೀಡಲಾಗಿದೆ. ಸದ್ಯಕ್ಕೆ ಬೋರ್ ವೆಲ್ ನೀರು ಕುಡಿಯದಂತೆ ಗ್ರಾಮಸ್ಥರಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: 70th National Film Awards: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ರೇಸ್‌ನಲ್ಲಿ ರಿಷಬ್‌ ಶೆಟ್ಟಿ; ʼಕಾಂತಾರʼಕ್ಕೆ ಸಿಗುತ್ತಾ ಇನ್ನೊಂದು ಪ್ರತಿಷ್ಠಿತ ಗರಿ?

ಸವದತ್ತಿಯ ಚಚಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬೀಮ್ಸ್ ಆಸ್ಪತ್ರೆಗೆ ಡಿಹೆಚ್ಒ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದರು. ಬೈಲಗೊಂಗಲ, ಇಂಚಲ ಸೇರಿ ಬೀಮ್ಸ್ ಆಸ್ಪತ್ರೆಯಲ್ಲಿ ಅಸ್ವಸ್ಥರು ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರ ಅಸ್ವಸ್ಥರಾಗಿದ್ದ ಈರವ್ವ ಗಾಳಿಮಠ (54) ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಳಿಕ ಮಾತನಾಡಿದ ಡಿಹೆಚ್‌ಓ ಮಹೇಶ ಕೋಣಿ, ಚಚಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 41 ಜನ ಅಸ್ವಸ್ಥರಾಗಿದ್ದಾರೆ. ಬೈಲಗೊಂಗಲ, ಇಂಚಲ ಆಸ್ಪತ್ರೆಗಳಲ್ಲಿ ಅಸ್ವಸ್ಥರಿಗೆ ಚಿಕಿತ್ಸೆ ನೀಡಾಗುತ್ತಿದೆ. ಚಚಡಿ ಗ್ರಾಮದಲ್ಲಿ 15 ಬೋರ್‌ವೇಲ್, 2 ಬಾವಿ, 3 ಓವರ್ ಹೆಡ್ ಟ್ಯಾಂಕ್ ಇವೆ. ಮೋಲ್ನೋಟಕ್ಕೆ ಇದು ಬ್ಯಾಕ್ಟಿರಿಯಲ್ ಇನ್ಫೆಕ್ಷನ್‌ ಆದಂತಿದೆ. ಈಗಾಗಲೇ ಕಲುಷಿತ ನೀರು ಟೆಸ್ಟಿಂಗ್‌ಗೆ ಕಳಿಸಲಾಗಿದೆ. ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಸದ್ಯ ಊರಿಗೆ ಟ್ಯಾಂಕರ್ ನೀರು ಪೂರೈಕೆ ಮಾಡಲಾಗುತ್ತಿದೆ. ಊರಲ್ಲಿ ಚಿಕಿತ್ಸೆಗೆ ವೈದ್ಯರ ತಂಡ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿಕ್ಕೋಡಿ

Murder Case : ಕೆಲ್ಸ ಜಾಸ್ತಿ ಮನೆಗೆ ಬರಲ್ಲ ಎಂದವನು, ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಬೀದಿ ಹೆಣವಾದ

Murder case : ಕೆಲಸ ಜಾಸ್ತಿ ಇದೆ ಇಂದು ಮನೆಗೆ ಬರುವುದಿಲ್ಲ ಎಂದವನು ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಅಥಣಿ ಸಮೀಪ ವ್ಯಕ್ತಿಯೊಬ್ಬ ಕೊಲೆಯಾಗಿ ಹೋಗಿದ್ದಾನೆ. ಇತ್ತ ಉಡುಪಿಯಲ್ಲಿ ಕೆಲಸದಲ್ಲಿ ಅಶಿಸ್ತು ತೋರಿದ ಸೆಕ್ಯೂರಿಟಿ ಗಾರ್ಡ್‌ಗೆ ವಾರ್ನಿಂಗ್‌ ಕೊಟ್ಟ ಮ್ಯಾನೇಜರ್‌ಗೆ ಹಲ್ಲೆ ನಡೆಸಲಾಗಿದೆ.

VISTARANEWS.COM


on

By

Murder case
Koo

ಚಿಕ್ಕೋಡಿ: ಬೆಳಗಾವಿಯ ಅಥಣಿ ತಾಲೂಕಿನ ಅನಂತಪುರ ಗ್ರಾಮದ ಬಸ್ ನಿಲ್ದಾಣದಲ್ಲಿ ಕೊಲೆಯಾದ (Murder Case) ಸ್ಥಿತಿಯಲ್ಲಿ ವ್ಯಕ್ತಿಯ ಶವ (Dead body Found) ಪತ್ತೆಯಾಗಿದೆ. ಮಧಬಾವಿ ಗ್ರಾಮದ ಅಪ್ಪಾಸಾಬ ಕಾಂಬಳೆ (37) ಕೊಲೆಯಾದವರು.

ಅಪ್ಪಾಸಾಬ ಕಾಂಬಳೆ ದುಡಿಯಲು ನಿತ್ಯ ಪಕ್ಕದ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದರು. ಕಳೆದ ರಾತ್ರಿ 9 ಗಂಟೆಗೆ ಪತ್ನಿಗೆ ಕರೆ ಮಾಡಿದ ಅಪ್ಪಾಸಾಬ ಇಂದು ಕೆಲಸ ಇದೆ ಮನೆ ಬರಲು ಆಗುವುದಿಲ್ಲ ಎಂದು ಮಾಹಿತಿ ನೀಡಿದ್ದರು. ಆದರೆ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಅಪ್ಪಾಸಾಬ ಬೀದಿ ಹೆಣವಾಗಿದ್ದಾರೆ.

ಹಂತಕರು ಯಾರೋ ಅಪ್ಪಾಸಾಬನನ್ನು ಕೊಲೆ ಮಾಡಿ ಅನಂತಪುರ ಬಸ್ ನಿಲ್ದಾಣದಲ್ಲಿ ಹಾಕಿ ಹೋಗಿದ್ದಾರೆ. ಮೈಮೇಲೆ ಹೊಡೆದಿರುವ ಗಾಯದ ಗುರುತುಗಳು ಪತ್ತೆಯಾಗಿವೆ. ಬೇರೆಡೆ ಕೊಲೆ ಮಾಡಿ ಶವ ಹಾಕಿ ಹೋಗಿರುವ ಶಂಕೆ ಇದೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುರಿಸಿದ್ದಾರೆ.

ಇದನ್ನೂ ಓದಿ: Love Failure : ಹುಬ್ಬಳ್ಳಿ ಬಳಿಕ ಮಂಗಳೂರಿನಲ್ಲಿ ಪ್ರೇಮ ವೈಫಲ್ಯಕ್ಕೆ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದ ಪಾಗಲ್‌ ಪ್ರೇಮಿ

ಚೂರಿ ಹಿಡಿದು ಮ್ಯಾನೇಜರ್‌ನನ್ನು ಅಟ್ಟಾಡಿಸಿದ ಸೆಕ್ಯೂರಿಟಿ ಗಾರ್ಡ್‌!

ಸೆಕ್ಯೂರಿಟಿ ಗಾರ್ಡ್‌ನಿಂದ ಶೋರೂಂ ಕ್ಲಸ್ಟರ್ ಮ್ಯಾನೇಜರ್‌ ಚೂರಿಯಿಂದ ಇರಿದು ಅಟ್ಟಾಡಿಸಿಕೊಂಡು ಹೋಗಿರುವ ಘಟನೆ ನಡೆದಿದೆ. ಚೂರಿಯಿಂದ ಇರಿದ ದೃಶ್ಯ ವಿಸ್ತಾರ ನ್ಯೂಶ್‌ಗೆ ಲಭ್ಯವಾಗಿದೆ. ಉಡುಪಿಯ ಹರ್ಷ ಶೋರೂಂನಲ್ಲಿ ಘಟನೆ ನಡೆದಿದೆ.

ಹರ್ಷ ಶೋರೂಂನಲ್ಲಿ ಕ್ಲಸ್ಟರ್ ಮ್ಯಾನೇಜರ್ ರೋನ್ಸನ್ ಎವರೆಸ್ಟ್ (36) ಇರಿತಕ್ಕೊಳಗಾದವರು. ಅಲ್ಲೇ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ಆರೋಪಿ ಪ್ರಸಾದ್ ಹಲ್ಲೆ ನಡೆಸಿದವನು. ಪ್ರಸಾದ್‌ ಕೆಲಸದಲ್ಲಿ ಅಶಿಸ್ತು ತೋರಿದ್ದಕ್ಕಾಗಿ ರೋನ್ಸನ್‌ ವಾರ್ನಿಂಗ್ ನೀಡಿದ್ದರು. ಕೆಲಸದಿಂದ ತೆಗೆಯದಂತೆ ರೋನ್ಸನ್ ಬಳಿ ಪ್ರಸಾದ್ ಕೇಳಿಕೊಂಡಿದ್ದ. ಮರುದಿನ ಮೀಟಿಂಗ್‌ನಲ್ಲಿ ಚರ್ಚಿಸುವುದಾಗಿ ರೋನ್ಸನ್‌ ಹೇಳಿದ್ದರು.

ಆಗಸ್ಟ್ 10 ರ ಸಂಜೆ 7.30ರಂದು ಮಾತುಕತೆ ಬಳಿಕ ಗ್ರೌಂಡ್ ಫ್ಲೋರ್‌ನಲ್ಲಿ ಕಾದು ಕುಳಿತಿದ್ದ ಆರೋಪಿ ಪ್ರಸಾದ್ ಕ್ಲಸ್ಟರ್ ಮ್ಯಾನೇಜರ್ ರೋನ್ಸನ್ ಬರುತ್ತಿದ್ದಂತೆ ಚೂರಿಯಲ್ಲಿ ಇರಿದಿದ್ದ. ಕೂಡಲೇ ಈತನಿಂದ ತಪ್ಪಿಸಿಕೊಂಡು ರೋನ್ಸನ್‌ ಓಡಿದ್ದರು. ಆದರೂ ಬಿಡದೇ ಪ್ರಸಾದ್‌ ಬೆನ್ನಟ್ಟಿ ಹೋಗಿ ಕೊಲೆಗೆ ಯತ್ನಿಸಿದ್ದಾನೆ. ಇದೆಲ್ಲವೂ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉಡುಪಿ ನಗರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Assault Case: ಪಾರ್ಕಿಂಗ್‌ ವಿಚಾರಕ್ಕೆ ಡಿಶುಂ ಡಿಶುಂ; ಮಹಿಳೆಗೆ ಕಪಾಳಮೋಕ್ಷ!

Assault Case: ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದ್ದು, ಒಬ್ಬರಿಗೊಬ್ಬರು ಬಡಿದಾಡಿಕೊಂಡಿದ್ದಾರೆ. ಚಿಕ್ಕೋಡಿಯಲ್ಲಿ ಮೂಲಭೂತ ಸೌಕರ್ಯ ಕೇಳಿದ್ದಕ್ಕೆ ಗ್ರಾಮ‌ ಪಂಚಾಯಿತಿ ಸದಸ್ಯ ಗೂಂಡಾ ವರ್ತನೆ ತೋರಿದ್ದಾನೆ

VISTARANEWS.COM


on

By

Koo

ಬೆಂಗಳೂರು: ಬೆಂಗಳೂರಿನಲ್ಲಿ ಸಣ್ಣ-ಪುಟ್ಟ ವಿಚಾರಕ್ಕೂ ಜನರು ಕಿರಿಕ್‌ ಮಾಡಿಕೊಳ್ಳುತ್ತಿರುವ ಘಟನೆಗಳು (Assault Case) ಹೆಚ್ಚಾಗುತ್ತಿದೆ. ಸದ್ಯ ಬೆಂಗಳೂರಿನ ಬಂಡೆಪಾಳ್ಯದ ಅಪಾರ್ಟ್ಮೆಂಟ್ ಒಂದರ ಮುಂಭಾಗ ನಿನ್ನೆ ಸೋಮವಾರ ರಾತ್ರಿ ಪಾರ್ಕಿಂಗ್ ವಿಚಾರಕ್ಕೆ ಗಲಾಟೆ ನಡೆದಿದೆ.

ಗಲಾಟೆ ಮಾಡಿಕೊಂಡು ಕಿತ್ತಾಡಿಕೊಂಡಿರುವ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪಾರ್ಕಿಂಗ್ ವಿಚಾರಕ್ಕೆ ಶುರುವಾದ ಕಿರಿಕ್ ಕೈ-ಕೈ ಮಿಲಾಯಿಸಿಕೊಳ್ಳುವ ಹಂತಕಕ್ಕೆ ತಲುಪಿತ್ತು. ಈ ವೇಳೆ ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡಿರುವ ಆರೋಪವು ಕೇಳಿ ಬಂದಿದೆ. ಗಲಾಟೆಯ ವಿಡಿಯೋ ಎಕ್ಸ್‌ನಲ್ಲಿ ಶೇರ್ ಮಾಡಿ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ. ಸದ್ಯ ಗಲಾಟೆಯ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ವಿಶೇಷ ಚೇತನ ವ್ಯಕ್ತಿಗೆ ಇಬ್ಬರು‌ ವ್ಯಕ್ತಿಗಳಿಂದ ಹಲ್ಲೆ

ವಿಶೇಷ ಚೇತನ ವ್ಯಕ್ತಿಗೆ ಇಬ್ಬರು ವ್ಯಕ್ತಿಗಳಿಂದ ಹಲ್ಲೆ ನಡೆಸಲಾಗಿದೆ. ಸಿಸಿಟಿವಿಯಲ್ಲಿ ಹಲ್ಲೆಯ ದೃಶ್ಯ ಸೆರೆಯಾಗಿದೆ. ಬೆಂಗಳೂರಿನ ಅಶೋಕ್ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೃತ್ಯಕ್ಕೆ ಪೊಲೀಸರಿಂದ ಎನ್ ಸಿ ಆರ್ ದಾಖಲಾಗಿದೆ. ಆದರೆ ಎಫ್ ಐ ಅರ್ ಯಾಕಿಲ್ಲ ಎಂದು ಎಕ್ಸ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿ ಪ್ರಶ್ನೆ ಮಾಡಿದ್ದಾರೆ. ಹುಸೇನ್ ಎಂಬ ಖಾತೆಯಿಂದ‌ ವಿಡಿಯೋ ಪೋಸ್ಟ್ ಪೊಲೀಸ್ ಇಲಾಖೆಗೆ ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ: Borewell water : ಬೋರ್‌ವೆಲ್ ನೀರು ಕುಡಿದು 40ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ

ನೀರು ಕೊಡಿ ಎಂದರೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಗ್ರಾಪಂ ಸದಸ್ಯ

ಚಿಕ್ಕೋಡಿ: ಮೂಲಭೂತ ಸೌಕರ್ಯ ಕೇಳಿದ್ದಕ್ಕೆ ಗ್ರಾಮ‌ ಪಂಚಾಯಿತಿ ಸದಸ್ಯ ಗೂಂಡಾ ವರ್ತನೆ ತೋರಿದ್ದಾನೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮದಲ್ಲಿ ಘಟನೆ ನಡೆದಿದೆ. ಹಿಡಕಲ್‌ ಗ್ರಾಮದ ಸೂರಣ್ಣವರ ತೋಟದ ವಾರ್ಡ್ ನಂ 5ರ ಸದಸ್ಯ ಯಲ್ಲಪ್ಪ ಸಣ್ಣಕ್ಕಿನವರ‌ ಎಂಬಾತ ಗೂಂಡಾ ವರ್ತನೆ ತೋರಿದವನು.

ಜನರು ಕುಡಿಯೋದಕ್ಕೆ ನೀರು ಬರುತ್ತಿಲ್ಲ, ನೀರು ಕೊಡಿ ಎಂದಿದ್ದಕ್ಕೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ. ಗ್ರಾಮಸ್ಥರು ಕುಡಿಯುವ ನೀರು ಸೇರಿ ಇತರೆ ಸೌಲಭ್ಯ ಕೇಳಲು ಗ್ರಾಮ ಪಂಚಾಯಿತಿಗೆ ತೆರಳಿದ್ದರು. ಈ ವೇಳೆ ಸಮಸ್ಯೆಗೆ ಸ್ಪಂದಿಸದೇ ಯಲ್ಲಪ್ಪ ಸಣ್ಣಕ್ಕಿನವರ ಗ್ರಾಮಸ್ಥರ ಮೇಲೆ ಗೂಂಡಾವರ್ತನೆ ತೋರಿರುವುದು ಮೊಬೈಲ್‌ನಲ್ಲಿ ಸೆರೆಯಾಗಿದೆ.

ಪ್ರತಿ ಸೌಲಭ್ಯವನ್ನು ತನ್ನ ಮನೆಗೆ ಬಳಸಿಕೊಳ್ಳುತ್ತಿದ್ದು ಸಾರ್ವಜನಿಕರಿಗೆ ಸೌಲಭ್ಯ ನೀಡಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಯಲ್ಲಪ್ಪನ ಸದಸ್ಯತ್ವ ರದ್ದು ಪಡಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ; ಈ ನಾಲ್ಕು ಜಿಲ್ಲೆಗಳಿಗೆ ಎಚ್ಚರಿಕೆ

Rain News: ಕರಾವಳಿ, ಮಲೆನಾಡು ಭಾಗದಲ್ಲಿ ವರುಣ ಸೈಲೆಂಟ್‌ ಆಗಿದ್ದು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯು ವೈಲೆಂಟ್‌ ಆಗಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Karnataka Weather Forecast) ಸಾಧ್ಯತೆಯಿದ್ದು, ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಮಧ್ಯಮ ಮಳೆಯಾದರೆ, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಸಾಧಾರಣದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಕೋಲಾರ, ಮಂಡ್ಯ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದೆಡೆ ಮಧ್ಯಮದಿಂದ ಕೂಡಿದ ಮಳೆಯಾಗುವ ಸಂಭವವಿದೆ.

ಉತ್ತರ ಒಳನಾಡಿನಲ್ಲಿ ರಾಯಚೂರು, ಗದಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain : ಧಾರಾಕಾರ ಮಳೆಗೆ ಕೆರೆಯಂತಾದ ಬೆಂಗಳೂರು-ಹೊಸೂರು ಹೈವೆ; ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ

ಬೆಂಗಳೂರಲ್ಲಿ ವ್ಯಾಪಕ ಮಳೆ ಎಚ್ಚರಿಕೆ

ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಗದ್ದೆಯಲ್ಲಿ ನಾಟಿ ಮಾಡುತ್ತಿದ್ದಾಗಲೇ ಬಡಿದ ಸಿಡಿಲು; 15 ಮಂದಿ ಆಸ್ಪತ್ರೆ ಪಾಲು

Karnataka Weather Forecast : ಹಲವು ದಿನದಿಂದ ಬಿಡುವು ಕೊಟ್ಟಿದ್ದ ವರುಣ ಮತ್ತೆ (Rain News) ಅಬ್ಬರಿಸುತ್ತಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಹಾಸನದಲ್ಲಿ ಸಿಡಿಲು ಬಡಿದು 15ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ.

VISTARANEWS.COM


on

By

Karnataka weather forecast
Koo

ಚಿಕ್ಕಬಳ್ಳಾಪುರ/ಹಾಸನ: ಗದ್ದೆಯಲ್ಲಿ ಭತ್ತ ನಾಟಿ ಮಾಡುತ್ತಿದ್ದ ವೇಳೆ ಮಳೆ (Karnataka Weather Forecast) ಜತೆಗೆ ಸಿಡಿಲು ಬಡಿದು ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿದೆ. ಸುಮಾರು ಹದಿನೈದು ಮಂದಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ, ಕೋರ್ಲಗದ್ದೆ ಗ್ರಾಮದಲ್ಲಿ ಘಟನೆ ನಡೆದಿದೆ.

ಕೆ.ಬಿ.ಚಂದ್ರು ಎಂಬುವವರಿಗೆ ಸೇರಿದ ಗದ್ದೆಯಲ್ಲಿ 25 ಮಂದಿ ನಾಟಿ ಮಾಡುತ್ತಿದ್ದರು. ಈ ವೇಳೆ ಗುಡುಗು, ಸಿಡಿಲು ಸಹಿತ ದಿಢೀರ್ ಮಳೆ ಶುರುವಾಗಿತ್ತು. ಭತ್ತದ ಗದ್ದೆಯಲ್ಲಿ ನಾಟಿ ಮಾಡುತ್ತಿದ್ದ ವೇಳೆಯೇ ಸಿಡಿಲಾಘಾತಕ್ಕೆ ಲತಾ (35) ಎಂಬುವವರ ಸ್ಥಿತಿ ಗಂಭೀರವಾಗಿದೆ.

ರೇಣುಕಾ (49), ಸವಿತಾ (45), ಸುಮಿತ್ರ (51), ರೇಣುಕಮ್ಮಾ (55), ನೇತ್ರ (40), ನಿರ್ಮಲ (51), ವೀಣಾ (35), ಅನಿತಾ (55) ಸೇರಿ ಹದಿನೈದು ಮಂದಿಗೆ ಸಿಡಿಲು ಬಡಿದಿದೆ. ಎಲ್ಲರಿಗೂ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ತಿಂಗಳ ಬಳಿಕ ಚಿಕ್ಕಬಳ್ಳಾಪುರದಲ್ಲಿ ವರುಣ ಪ್ರತ್ಯಕ್ಷ

ಇಷ್ಟು ದಿನ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು, ಉತ್ತರ ಒಳನಾಡಿನ ಸುತ್ತಮುತ್ತ ಮಳೆಯು ಅಬ್ಬರಿಸಿತ್ತು. ದಕ್ಷಿಣ ಒಳನಾಡಿನಲ್ಲಿ ಕಣ್ಮರೆಯಾಗಿದ್ದ ಮಳೆಯು ಇದೀಗ ಕಳೆದೆರಡು ದಿನಗಳಿಂದ‌ ವ್ಯಾಪಿಸಿದೆ. ಉತ್ತರ ಧ್ರುವದಿಂದ ದಕ್ಷಿಣ ಧ್ರುವದ ಕಡೆ ಮಳೆರಾಯ ಮುಖ ಮಾಡಿದ್ದಾನೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಂದು ತಿಂಗಳಿನಿಂದ ಬಿಡುವು ಕೊಟ್ಟಿದ್ದ ಮಳೆಯು ಭಾನುವಾರ ರಾತ್ರಿ ಇಡೀ ಗುಡುಗು, ಮಿಂಚು ಸಮೇತ ಸುರಿದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಬಿತ್ತನೆ ಮಾಡಿ ಮಳೆಗಾಗಿ ಕಾಯುತ್ತಿದ್ದ ರೈತರು ಸಂತಸಗೊಂಡಿದ್ದರು.

ಇದನ್ನೂ ಓದಿ: Bengaluru Rains : ಬೃಹತ್‌ ಗಾತ್ರದ ಮರದ ಕೊಂಬೆಗಳು ಬಿದ್ದು 6 ಮಂದಿಗೆ ಗಾಯ; ಆರೋಗ್ಯ ವಿಚಾರಿಸಿದ ಡಿಕೆ ಶಿವಕುಮಾರ್

ನಾಳೆ ಚಾಮರಾಜನಗರ, ರಾಮನಗರದಲ್ಲಿ ಭಾರಿ ಮಳೆ

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆದರೆ ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯೊಂದಿಗೆ ಗುಡುಗು ಇರಲಿದೆ. ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಾಗಿ ಶುಷ್ಕ ಹವಾಮಾನ ಇರಲಿದೆ. ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Duleep Trophy
ಕ್ರೀಡೆ3 mins ago

Duleep Trophy: 14 ವರ್ಷಗಳ ಬಳಿಕ ದುಲೀಪ್‌ ಟ್ರೋಫಿ ಆಡಲಿದ್ದಾರೆ ವಿರಾಟ್​ ಕೊಹ್ಲಿ?

kolkata doctor murder case
ದೇಶ38 mins ago

Kolkata Doctor Murder Case: ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ; ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

ಪ್ರಮುಖ ಸುದ್ದಿ39 mins ago

Sheikh Hasina : ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಕೇಸ್​ ದಾಖಲಿಸಿದ ಕೋರ್ಟ್​​

Janhvi Kapoor
ಸಿನಿಮಾ48 mins ago

Janhvi Kapoor: ಇಂದು ನಟಿ ಶ್ರೀದೇವಿ ಜನ್ಮದಿನ; ಬಾಯ್‌ಫ್ರೆಂಡ್‌ ಜತೆ ತಿರುಪತಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಜಾಹ್ನವಿ ಕಪೂರ್‌

Bengaluru Police
ಬೆಂಗಳೂರು53 mins ago

Bengaluru Police: ಸಿಟಿ ಸಿವಿಲ್‌ ಕೋರ್ಟ್‌ನಿಂದ ಕೊಲೆ ಆರೋಪಿ ಎಸ್ಕೇಪ್‌! ಸಿನಿಮಾ ಸ್ಟೈಲ್‌ನಲ್ಲಿ ಚೇಸ್‌ ಮಾಡಿದ ಖಾಕಿ

Maharaja Trophy 2024
ಕ್ರೀಡೆ54 mins ago

Maharaja Trophy 2024: ಮಹಾರಾಜ ಟಿ20 ಕ್ರಿಕೆಟ್​ ಟೂರ್ನಿ ಆರಂಭಕ್ಕೆ ಒಂದು ದಿನ ಬಾಕಿ; ತಂಡಗಳ ವಿವರ ಹೀಗಿದೆ

ಕರ್ನಾಟಕ1 hour ago

Kundapra Kannada Habba : ಬೆಂಗಳೂರಿನ ಅರಮನೆ ಮೈದಾನದಲ್ಲಿ 2 ದಿನ ಅದ್ಧೂರಿ ‘ಕುಂದಾಪ್ರ ಕನ್ನಡ ಹಬ್ಬ’

Independence day 2024
ದೇಶ1 hour ago

Independence day 2024: ಕೆಂಪು ಕೋಟೆ ಮೇಲೆ ಭಾಷಣ; ನೆಹರೂ, ಇಂದಿರಾ ಬಳಿಕ ಮೋದಿ ಹೊಸ ದಾಖಲೆ!

Bangladesh Unrest
ವಿದೇಶ1 hour ago

Bangladesh Unrest: ಬಾಂಗ್ಲಾ ಹಿಂದೂಗಳ ಪರ ಸೋಶಿಯಲ್‌ ಮೀಡಿಯಾ ಅಭಿಯಾನ; All eyes on hindus ಭಾರೀ ಟ್ರೆಂಡ್!

Road Accident
ಬೆಂಗಳೂರು1 hour ago

Road Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ! ಬೈಕ್‌, ಕಾರುಗಳಿಗೆ ಡಿಕ್ಕಿ ಹೊಡೆದ ಬಿಎಂಟಿಸಿ; ನರಳಾಡಿದ ಸವಾರರು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು7 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌