Assault Case: ಪಾರ್ಕಿಂಗ್‌ ವಿಚಾರಕ್ಕೆ ಡಿಶುಂ ಡಿಶುಂ; ಮಹಿಳೆಗೆ ಕಪಾಳಮೋಕ್ಷ! - Vistara News

ಬೆಂಗಳೂರು

Assault Case: ಪಾರ್ಕಿಂಗ್‌ ವಿಚಾರಕ್ಕೆ ಡಿಶುಂ ಡಿಶುಂ; ಮಹಿಳೆಗೆ ಕಪಾಳಮೋಕ್ಷ!

Assault Case: ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದ್ದು, ಒಬ್ಬರಿಗೊಬ್ಬರು ಬಡಿದಾಡಿಕೊಂಡಿದ್ದಾರೆ. ಚಿಕ್ಕೋಡಿಯಲ್ಲಿ ಮೂಲಭೂತ ಸೌಕರ್ಯ ಕೇಳಿದ್ದಕ್ಕೆ ಗ್ರಾಮ‌ ಪಂಚಾಯಿತಿ ಸದಸ್ಯ ಗೂಂಡಾ ವರ್ತನೆ ತೋರಿದ್ದಾನೆ

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನಲ್ಲಿ ಸಣ್ಣ-ಪುಟ್ಟ ವಿಚಾರಕ್ಕೂ ಜನರು ಕಿರಿಕ್‌ ಮಾಡಿಕೊಳ್ಳುತ್ತಿರುವ ಘಟನೆಗಳು (Assault Case) ಹೆಚ್ಚಾಗುತ್ತಿದೆ. ಸದ್ಯ ಬೆಂಗಳೂರಿನ ಬಂಡೆಪಾಳ್ಯದ ಅಪಾರ್ಟ್ಮೆಂಟ್ ಒಂದರ ಮುಂಭಾಗ ನಿನ್ನೆ ಸೋಮವಾರ ರಾತ್ರಿ ಪಾರ್ಕಿಂಗ್ ವಿಚಾರಕ್ಕೆ ಗಲಾಟೆ ನಡೆದಿದೆ.

ಗಲಾಟೆ ಮಾಡಿಕೊಂಡು ಕಿತ್ತಾಡಿಕೊಂಡಿರುವ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪಾರ್ಕಿಂಗ್ ವಿಚಾರಕ್ಕೆ ಶುರುವಾದ ಕಿರಿಕ್ ಕೈ-ಕೈ ಮಿಲಾಯಿಸಿಕೊಳ್ಳುವ ಹಂತಕಕ್ಕೆ ತಲುಪಿತ್ತು. ಈ ವೇಳೆ ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡಿರುವ ಆರೋಪವು ಕೇಳಿ ಬಂದಿದೆ. ಗಲಾಟೆಯ ವಿಡಿಯೋ ಎಕ್ಸ್‌ನಲ್ಲಿ ಶೇರ್ ಮಾಡಿ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ. ಸದ್ಯ ಗಲಾಟೆಯ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ವಿಶೇಷ ಚೇತನ ವ್ಯಕ್ತಿಗೆ ಇಬ್ಬರು‌ ವ್ಯಕ್ತಿಗಳಿಂದ ಹಲ್ಲೆ

ವಿಶೇಷ ಚೇತನ ವ್ಯಕ್ತಿಗೆ ಇಬ್ಬರು ವ್ಯಕ್ತಿಗಳಿಂದ ಹಲ್ಲೆ ನಡೆಸಲಾಗಿದೆ. ಸಿಸಿಟಿವಿಯಲ್ಲಿ ಹಲ್ಲೆಯ ದೃಶ್ಯ ಸೆರೆಯಾಗಿದೆ. ಬೆಂಗಳೂರಿನ ಅಶೋಕ್ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೃತ್ಯಕ್ಕೆ ಪೊಲೀಸರಿಂದ ಎನ್ ಸಿ ಆರ್ ದಾಖಲಾಗಿದೆ. ಆದರೆ ಎಫ್ ಐ ಅರ್ ಯಾಕಿಲ್ಲ ಎಂದು ಎಕ್ಸ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿ ಪ್ರಶ್ನೆ ಮಾಡಿದ್ದಾರೆ. ಹುಸೇನ್ ಎಂಬ ಖಾತೆಯಿಂದ‌ ವಿಡಿಯೋ ಪೋಸ್ಟ್ ಪೊಲೀಸ್ ಇಲಾಖೆಗೆ ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ: Borewell water : ಬೋರ್‌ವೆಲ್ ನೀರು ಕುಡಿದು 40ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ

ನೀರು ಕೊಡಿ ಎಂದರೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಗ್ರಾಪಂ ಸದಸ್ಯ

ಚಿಕ್ಕೋಡಿ: ಮೂಲಭೂತ ಸೌಕರ್ಯ ಕೇಳಿದ್ದಕ್ಕೆ ಗ್ರಾಮ‌ ಪಂಚಾಯಿತಿ ಸದಸ್ಯ ಗೂಂಡಾ ವರ್ತನೆ ತೋರಿದ್ದಾನೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮದಲ್ಲಿ ಘಟನೆ ನಡೆದಿದೆ. ಹಿಡಕಲ್‌ ಗ್ರಾಮದ ಸೂರಣ್ಣವರ ತೋಟದ ವಾರ್ಡ್ ನಂ 5ರ ಸದಸ್ಯ ಯಲ್ಲಪ್ಪ ಸಣ್ಣಕ್ಕಿನವರ‌ ಎಂಬಾತ ಗೂಂಡಾ ವರ್ತನೆ ತೋರಿದವನು.

ಜನರು ಕುಡಿಯೋದಕ್ಕೆ ನೀರು ಬರುತ್ತಿಲ್ಲ, ನೀರು ಕೊಡಿ ಎಂದಿದ್ದಕ್ಕೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ. ಗ್ರಾಮಸ್ಥರು ಕುಡಿಯುವ ನೀರು ಸೇರಿ ಇತರೆ ಸೌಲಭ್ಯ ಕೇಳಲು ಗ್ರಾಮ ಪಂಚಾಯಿತಿಗೆ ತೆರಳಿದ್ದರು. ಈ ವೇಳೆ ಸಮಸ್ಯೆಗೆ ಸ್ಪಂದಿಸದೇ ಯಲ್ಲಪ್ಪ ಸಣ್ಣಕ್ಕಿನವರ ಗ್ರಾಮಸ್ಥರ ಮೇಲೆ ಗೂಂಡಾವರ್ತನೆ ತೋರಿರುವುದು ಮೊಬೈಲ್‌ನಲ್ಲಿ ಸೆರೆಯಾಗಿದೆ.

ಪ್ರತಿ ಸೌಲಭ್ಯವನ್ನು ತನ್ನ ಮನೆಗೆ ಬಳಸಿಕೊಳ್ಳುತ್ತಿದ್ದು ಸಾರ್ವಜನಿಕರಿಗೆ ಸೌಲಭ್ಯ ನೀಡಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಯಲ್ಲಪ್ಪನ ಸದಸ್ಯತ್ವ ರದ್ದು ಪಡಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Bengaluru Police: ಸಿಟಿ ಸಿವಿಲ್‌ ಕೋರ್ಟ್‌ನಿಂದ ಕೊಲೆ ಆರೋಪಿ ಎಸ್ಕೇಪ್‌! ಸಿನಿಮಾ ಸ್ಟೈಲ್‌ನಲ್ಲಿ ಚೇಸ್‌ ಮಾಡಿದ ಖಾಕಿ

Bengaluru Police : ಕೊಲೆ ಆರೋಪಿಯೊಬ್ಬ ಸಿಟಿ ಸಿವಿಲ್‌ ಕೋರ್ಟ್‌ನಿಂದ (City Civil Court) ಎಸ್ಕೇಪ್‌ ಆಗಲು ಹೋಗಿ ವಾಪಸ್‌ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ.

VISTARANEWS.COM


on

By

Bengaluru Police
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ಗೆ ಕೊಲೆ ಆರೋಪಿಯನ್ನು ಕರೆದುಕೊಂಡು ಬಂದಿದ್ದಾಗ, ಎಸ್ಕೇಪ್‌ ಆಗಲು ಯತ್ನಿಸಿದ್ದಾನೆ. ಪೊಲೀಸರು (Bengaluru Police) ಸಿನಿಮೀಯ ರೀತಿಯಲ್ಲಿ ಚೇಸ್‌ ಮಾಡಿ ಆರೋಪಿಯನ್ನು ಹಿಡಿದಿದ್ದಾರೆ.

ಕೊಲೆ ಆರೋಪಿ ಜೀಪ್ ಇಳಿಯುತ್ತಿದ್ದಂತೆ ಪೊಲೀಸರಿಂದ ತಪ್ಪಿಸಿಕೊಂಡು ಓಡಿ ಹೋಗಿದ್ದ. ಬಳಿಕ ಮೈಸೂರು ಬ್ಯಾಂಕ್ ಸರ್ಕಲ್‌ವರೆಗೂ ಬೆನ್ನಟ್ಟಿದ್ದ ಪೊಲೀಸರು ಹಿಡಿದಿದ್ದಾರೆ. ಆರೋಪಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ. ಸದ್ಯ ಆರೋಪಿಯನ್ನು ಸೆರೆ ಹಿಡಿದು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಕರೆದೊಯ್ದಿದ್ದಾರೆ.

ಇದನ್ನೂ ಓದಿ: Road Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ! ಬೈಕ್‌, ಕಾರುಗಳಿಗೆ ಡಿಕ್ಕಿ ಹೊಡೆದ ಬಿಎಂಟಿಸಿ; ನರಳಾಡಿದ ಸವಾರರು

ಮನೆಗಳ್ಳರನ್ನು ಬೇಟೆಯಾಡಿದ ಪೊಲೀಸರು

ಹುಬ್ಬಳ್ಳಿಯ ಕೇಶ್ವಾಪುರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಮನೆಗಳ್ಳನನ್ನು ಬಂಧಿಸಿದ್ದಾರೆ. ನಾಗಶೆಟ್ಟಿಕೊಪ್ಪದ ಶಾಂಡಿಲ್ಯಾಶ್ರಮದ ಬಳಿಯ ಮನೆಯೊಂದರಲ್ಲಿ ಕಳ್ಳತನ ನಡೆದಿತ್ತು. ಅಶೋಕ ನಗರ ಠಾಣಾ ವ್ಯಾಪ್ತಿಯ ವಿಜಯ ನಗರದಲ್ಲಿ ಹಗಲಿನಲ್ಲಿ ಮನೆಗಳ್ಳತನ ಮಾಡುತ್ತಿದ್ದ. ಇದೀಗ ಕೇಶ್ವಾಪುರದ ಮಹಮ್ಮದಅಲಿ ನಾಲಬಂದ ಎಂಬಾತನ ಬಂಧನವಾಗಿದೆ. ಬಂಧಿತನಿಂದ 3.10 ಲಕ್ಷ ರೂ ಮೌಲ್ಯದ 47 ಗ್ರಾಂ ಚಿನ್ನಭರಣ ಮತ್ತು ಒಂದು ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ. ಉಪನಗರ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡಿದ್ದ. ಹೊಸಪೇಟೆ, ಕೊಪ್ಪಳ, ಗದಗ, ಹುಬ್ಬಳ್ಳಿ – ಧಾರವಾಡ ಸೇರಿ ಒಟ್ಟು 19 ಪ್ರಕರಣಗಳಲ್ಲಿ ಆರೋಪಿ ಭಾಗಿಯಾಗಿದ್ದ.

ಕಿಮ್ಸ್‌ ಆಸ್ಪತ್ರೆಯ ಹಿಂಭಾಗದಲ್ಲಿ ಗಾಂಜಾ ಮಾರಾಟ

ಗಾಂಜಾ ಮಾರಾಟ ಮತ್ತು ಸೇವನೆ ಮಾಡಿದ 17 ಜನರ ಬಂಧನವಾಗಿದೆ. ಈ ಬಗ್ಗೆ ಹುಬ್ಬಳ್ಳಿ- ಧಾರವಾಡ ಪೊಲೀಸ್ ಉಪ ಆಯುಕ್ತ ಮಹಾನಿಂಗ ನಂದಗಾವಿ ಮಾಹಿತಿ ನೀಡಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಹಿಂಭಾಗದಲ್ಲಿ ಗಾಂಜಾ ಮಾರಾಟ ನಡೆಯುತ್ತಿತ್ತು. ಬಂಧಿತರಿಂದ ಗಾಂಜಾ, ಒಂದು ಬೈಕ್, ಏಳು ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.

ಹಳೇ ಹುಬ್ಬಳ್ಳಿ ಠಾಣೆ ವ್ಯಾಪ್ತಿಯಲ್ಲಿಯೂ ದಾಳಿ ಮಾಡಿ, 9 ಜನರನ್ನು ಬಂಧಿಸಿಲಾಗಿದೆ. ಮಿರ್ಜಾನ ಅಷ್ಪಕ್ ಮುಲ್ಲಾ, ಶಿವಕುಮಾರ, ಇಕ್ಬಾಲ್ ಅಹ್ಮದ, ಆರೀಫ್, ಅಭಿಷೇಕ ದೇವಮಾನೆ, ಅಮೃತ ಹವಳದ, ಮೊಹ್ಮದ ರೆಹಾನ, ಸಾಧಿಕ ಕಿತಾಬ್‌ವಾಲೆ, ಮೆಹಬೂಬಸಾಬ ಡೌಗಿ ಬಂಧಿತರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Road Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ! ಬೈಕ್‌, ಕಾರುಗಳಿಗೆ ಡಿಕ್ಕಿ ಹೊಡೆದ ಬಿಎಂಟಿಸಿ; ನರಳಾಡಿದ ಸವಾರರು

Road Accident : ಬೆಂಗಳೂರಿನಲ್ಲಿ ದಿನಕ್ಕೊಂದು ಅಪಘಾತಗಳು ನಡೆಯುತ್ತಲೇ ಇರುತ್ತವೆ. ಅದರಲ್ಲೂ ಕಿಲ್ಲರ್‌ ಎಂದು ಹಣೆಪಟ್ಟಿ ಹೊಂದಿರುವ ಬಿಎಂಟಿಸಿ (Killer BMTC) ಇಂದು ಅವಾಂತರವೇ ಸೃಷ್ಟಿಸಿತ್ತು. ಮತ್ತೊಂದು ಕಡೆ ಕಸದ ಲಾರಿ ಹರಿದು ವೃದ್ಧೆಯೊಬ್ಬರು (Lorry Accident) ಪ್ರಾಣವನ್ನೇ ಕಳೆದುಕೊಂಡಿದ್ದಾರೆ.

VISTARANEWS.COM


on

By

Road Accident
Koo

ಬೆಂಗಳೂರು: ಬಿಎಂಟಿಸಿ ಚಾಲಕನ ಯಡವಟ್ಟಿಗೆ (Road Accident) ಸಾರ್ವಜನಿಕರು ನೋವು ಅನುಭವಿಸಬೇಕಾಯಿತು. ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದಿದ್ದ ಬಿಎಂಟಿಸಿ ಡ್ರೈವರ್‌ ಬಳಿಕ ನೇರ ಬೈಕ್‌ಗಳಿಗೆ, ಕಾರುಗಳಿಗೆ ಗುದ್ದಿದ್ದ. ಬೆಂಗಳೂರಿನ ಹೆಬ್ಬಾಳ ಫ್ಲೈಓವರ್ ಮೇಲೆ ಬಿಎಂಟಿಸಿ ಬಸ್ (BMTC Accident) ಅಪಘಾತದ ದೃಶ್ಯ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ.

ಏರ್‌ಪೋರ್ಟ್‌ನಿಂದ ನಗರದೊಳಗೆ ಬರುತ್ತಿದ್ದ ವೋಲ್ವೋ ಬಸ್ ಏಕಾಏಕಿ ಮುಂದಿದ್ದ ಬೈಕ್‌ಗಳಿಗೆ ಗುದ್ದಿದೆ. ಬಳಿಕ ಕಾರಿಗೆ ಗುದ್ದಿ ನಿಂತಿದೆ. ಬಸ್‌ನಲ್ಲಿದ್ದ ಕಂಡಕ್ಟರ್‌ ಬ್ರೇಕ್‌ ಹಿಡಿಯುವಂತೆ ಹೇಳಿದ್ದರೂ ಗಾಬರಿಯಲ್ಲಿ ಚಾಲಕ ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದಿದ್ದಾನೆ. ಬಸ್‌ ಚಾಲಕನ ನಿರ್ಲಕ್ಷ್ಯ ಚಾಲನೆಯೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಬಸ್ ಮುಂಭಾಗದಲ್ಲಿದ್ದ ಬೈಕ್‌ಗಳು ಹಾಗೂ ಕಾರು ಜಖಂಗೊಂಡಿದೆ. ಬೈಕ್‌ ಸವಾರರು ಗಾಯಗೊಂಡು ಚೀರಾಡುತ್ತಾ ನರಳಾಡುತ್ತಿದ್ದರು. ಬಸ್‌ ಗುದ್ದಿದ ರಭಸಕ್ಕೆ ಸವಾರರು ಒಬ್ಬರ ಮೇಲೆ ಒಬ್ಬರು ಬಿದ್ದಿದ್ದರು. ಅದೃಷ್ಟವಶಾತ್‌ ಸಣ್ಣಪುಟ್ಟ ಗಾಯದಿಂದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಿಎಂಟಿಸಿ ಚಾಲಕ ಅಮಾನತು

ಆ.12ರಂದು ಈ ಅಪಘಾತ ಸಂಭವಿಸಿದ್ದು ಚಾಲಕನನ್ನು ಅಮಾನತು ಮಾಡಿ ಬಿಎಂಟಿಸಿ ಆದೇಶ ಹೊರಡಿಸಿದೆ.
ಘಟಕ 25ಕ್ಕೆ ಸೇರಿದ ಬಿಎಂಟಿಸಿ ಬಸ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಎಚ್ಎಸ್ಆರ್ ಲೇಔಟ್ ಕಡೆಗೆ ಹೋಗುತ್ತಿತ್ತು. ಆ.12ರ ಬೆಳಗ್ಗೆ ಸುಮಾರು 9.25ಕ್ಕೆ ಎಸ್ಟೀಮ್ ಮಾಲ್ ಬಳಿ ಬಸ್ಸಿನ ಮುಂದಿನ ಭಾಗದಿಂದ ಕಾರಿನ ಹಿಂದಿನ ಭಾಗಕ್ಕೆ ಡಿಕ್ಕಿ ಆದ ಪರಿಣಾಮ ಕಾರು ಮುಂದೆ ಚಲಿಸಿ ಅದರ ಮುಂದೆ ಇದ್ದಂತಹ ಇನ್ನು ಎರಡು ಕಾರುಗಳಿಗೆ ಹಾಗೂ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಈ ಅಪಘಾತದಿಂದ ದ್ವಿಚಕ್ರ ವಾಹನ ಓರ್ವ ಸವಾರನ ಕಾಲಿಗೆ ಪೆಟ್ಟಾಗಿದೆ. ಘಟನೆಯಲ್ಲಿ ಯಾವುದೇ ರೀತಿಯ ಸಾವು-ನೋವು ಸಂಭವಿಸಿಲ್ಲ. ಸಂಸ್ಥೆಯ ಅಧಿಕಾರಿಗಳು ಅಪಘಾತಕ್ಕೆ ಸಂಬಂಧಪಟ್ಟ ಎಲ್ಲಾ ಅಂಶಗಳನ್ನು ಕೂಲಂಕೂಷವಾಗಿ ತನಿಖೆ ನಡೆಸುತ್ತಿದ್ದಾರೆ. ಈ ಅಪಘಾತಕ್ಕೆ ಸಂಬಂಧಿಸಿದಂತೆ ಚಾಲಕ ರಾಜಕುಮಾರ್ ಅಮಾನತ್ತಿನಲ್ಲಿಡಲಾಗಿದೆ ಎಂದು ಪ್ರಕಟಣೆ ಹೊರಡಿಸಿದೆ.

ಇದನ್ನೂ ಓದಿ: Murder Case : ಕೆಲ್ಸ ಜಾಸ್ತಿ ಮನೆಗೆ ಬರಲ್ಲ ಎಂದವನು, ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಬೀದಿ ಹೆಣವಾದ

ರಸ್ತೆ ದಾಟುತ್ತಿದ್ದ ವೃದ್ಧೆಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ

ರಸ್ತೆ ದಾಟುತ್ತಿದ್ದ ವೃದ್ಧೆಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆಂಧ್ರಪ್ರದೇಶ ಚಿತ್ತೂರಿನ ಆದಿಲಕ್ಷ್ಮಮ್ಮ‌ (69) ಎಂಬುವವರು ಮೃತಪಟ್ಟಿದ್ದಾರೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಜಂಬೂಸವಾರಿ ದಿಣ್ಣೆ ಬಳಿ ಅಪಘಾತ ನಡೆದಿದೆ. ನಿನ್ನೆ ಸೋಮವಾರ ಬೆಳಗ್ಗೆ 6 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ.

ಮಗಳ ಮನೆಗೆ ಬಂದಿದ್ದ ಆದಿಲಕ್ಷ್ಮಮ್ಮ ಚಿತ್ತೂರಿಗೆ ಹೊರಟಿದ್ದರು. ಬಸ್ ಹತ್ತಲು ಬಂದಿದ್ದ ಆದಿಲಕ್ಷ್ಮಮ್ಮ ರಸ್ತೆ ದಾಟುವಾಗ ಲಾರಿ ಡಿಕ್ಕಿ ಹೊಡೆದಿತ್ತು. ಡಿಕ್ಕಿ ರಭಸಕ್ಕೆ ಆದಿಲಕ್ಷ್ಮಮ್ಮ ಸ್ಥಳದಲ್ಲೇ ಮೃತಪಟ್ಟಿದ್ದರು. ಸದ್ಯ ಚಾಲಕನನ್ನು ಬಂಧಿಸಿರುವ ಕೆಎಸ್ ಲೇಔಟ್ ಸಂಚಾರಿ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ. ಬಿಬಿಎಂಪಿ ಕಸದ ಲಾರಿ ಚಾಲಕ ಮಹಮ್ಮದ್ ಬಂಧಿತ ಆರೋಪಿಯಾಗಿದ್ದಾನೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Kannada New Movie: ‘ಸಿ’ ಸಿನಿಮಾದ ಟ್ರೈಲರ್ ಔಟ್; ಗಮನ ಸೆಳೆಯುತ್ತಿದೆ ಹೊಸಬರ ವಿಭಿನ್ನ ಪ್ರಯತ್ನ!

Kannada New Movie: ಕಿರಣ್ ಸುಬ್ರಮಣಿ ನಿರ್ದೇಶನದ ‘ಸಿ’ ಸಿನಿಮಾದ ಟ್ರೈಲರ್ ಅನ್ನು ನಾಯಕ ರಾಜವರ್ಧನ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಆ.23 ರಂದು ಬಿಡುಗಡೆಯಾಗಲಿರುವ ಸಿ ಚಿತ್ರದ ಟ್ರೈಲರ್ ಸಿಕ್ಕಾಪಟ್ಟೆ ಇಂಟರೆಸ್ಟಿಂಗ್ ಆಗಿ ಮೂಡಿಬಂದಿದ್ದು, ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ʼಸಿʼ ಇದು ಹಾಡುಗಳು ಮತ್ತು ಟೀಸರ್ ಮೂಲಕ ಗಮನ ಸೆಳೆಯುತ್ತಿರುವ ಸಿನಿಮಾ. ಹೊಸಬರಹ ಹೊಸ ಪ್ರಯತ್ನಕ್ಕೆ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಸಿನಿಮಾ (Kannada New Movie) ತಂಡ ಟ್ರೈಲರ್ ಮೂಲಕ ಅಭಿಮಾನಿಗಳ ಮುಂದೆ ಬಂದಿರುವ ʼಸಿʼ ಸಿನಿಮಾ ಇದೇ 23ಕ್ಕೆ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ.

ಅಂದ ಹಾಗೆ ಸಿ ಸಿನಿಮಾದ ಟ್ರೈಲರ್ ಅನ್ನು ನಾಯಕ ರಾಜವರ್ಧನ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಟ್ರೈಲರ್ ಸಿಕ್ಕಾಪಟ್ಟೆ ಇಂಟರೆಸ್ಟಿಂಗ್ ಆಗಿ ಮೂಡಿಬಂದಿದ್ದು, ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.

ಇದು ಕಿರಣ್ ಸುಬ್ರಮಣಿ ನಿರ್ದೇಶನದ ಚೊಚ್ಚಲ ಸಿನಿಮಾ. ಕಿರಣ್ ಆಕ್ಷನ್ ಕಟ್ ಹೇಳುವ ಜತೆಗೆ ನಾಯಕನಾಗಿ ಮಿಂಚಿದ್ದಾರೆ. ಮೊದಲ ಬಾರಿಗೆ ನಾಯಕನಟನಾಗಿ ಬೆಳ್ಳಿ ತೆರೆಮೇಲೆ ಅಬ್ಬರಿಸುವ ಜತೆಗೆ ನಿರ್ದೇಶನದ ಜವಾಬ್ದಾರಿಯನ್ನು ಹೊತ್ತುಕೊಂಡಿರುವುದು ಅವರ ಹೆಚ್ಚುಗಾರಿಕೆಯಾಗಿದೆ.

ಟ್ರೇಲರ್ ರಿಲೀಸ್ ಮಾಡಿ ಮಾತನಾಡಿದ ನಟ ರಾಜವರ್ಧನ್, ‘ಟ್ರೇಲರ್ ಎಮೋಷನಲ್ ಆಗಿದೆ. ಇದ್ರಲ್ಲಿ ಏನೋ ವಿಷಯವನ್ನು ಹೇಳುತ್ತಿದ್ದಾರೆ. ಎಲ್ಲರೂ ಸಿನಿಮಾ ನೋಡಿ’ ಎಂದು ಹೇಳಿದರು.

ನಿರ್ಮಾಪಕ ಕೃಷ್ಣೇಗೌಡ ಮಾತನಾಡಿ, ‘ಎಲ್ಲರೂ ಸಿನಿಮಾ ನೋಡಿ, ನಿರ್ಮಾಪಕರನ್ನು ಉಳಿಸಿ’ ಎಂದು ತಿಳಿಸಿದರು.

ಸಿನಿಮಾದ ನಿರ್ದೇಶಕ ಹಾಗೂ ನಟ ಕಿರಣ್ ಮಾತನಾಡಿ, ‘ಸಿ’ ಎಂದರೆ ಸಿನಿಮಾದಲ್ಲಿ ಮೂರು ಅರ್ಥವಿದೆ. ಆದರೆ ಟ್ರೈಲರ್‌ನಲ್ಲಿ ಒಂದು ಸಿ ಬಗ್ಗೆ ಮಾತ್ರ ಬಿಟ್ಟುಕೊಟ್ಟಿದ್ದೇವೆ. ಮತ್ತೆರಡು ಸಿ ಏನ್ ಹೇಳುತ್ತೆ ಎಂದು ಥಿಯೇಟ‌ರ್‌ನಲ್ಲೇ ನೋಡಬೇಕು. ಸಿನಿಮಾ ಪ್ರಾರಂಭವಾದಾಗ ಎಂಟು ಜನ ಪ್ರೊಡ್ಯೂಸರ್ ಇದ್ದರು. ಆದರೆ ಕಾರಣಾಂತರಗಳಿಂದ ಎಲ್ಲರೂ ಹೊರಟು ಹೋದರು. ಎಲ್ಲರೂ ಸಿನಿಮಾ ನೋಡಿ ಎಂದರು.

ನಟ ಪ್ರಶಾಂತ್ ನಟನ ಮಾತನಾಡಿ, ‘ಈ ಸಿನಿಮಾ ಮಗ ಅಪ್ಪನಿಗಾಗಿ ಮಾಡಿದ್ದು. ಈ ಸಿನಿಮಾದಲ್ಲಿ ನಾನು ವಿಭಿನ್ನವಾದ ಪಾತ್ರ ಮಾಡಿದ್ದೇನೆ ತುಂಬಾ ಚೆನ್ನಾಗಿ ಮೂಡಿ ಬಂದಿದೆ’ ಎಂದು ತಿಳಿಸಿದರು.

ಇದನ್ನೂ ಓದಿ: Indian Bank Recruitment 2024: 300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಇಂಡಿಯನ್‌ ಬ್ಯಾಂಕ್‌; ಕರ್ನಾಟಕದಲ್ಲಿಯೂ ಇದೆ ನೇಮಕಾತಿ

ಸದ್ಯ ರಿಲೀಸ್ ಆಗಿರುವ ಟ್ರೈಲರ್ ನೋಡುತ್ತಿದ್ದರೆ ಇದು ಅಪ್ಪ-ಮಗಳ ಬಾಂಧವ್ಯದ ಸಿನಿಮಾ ಎನ್ನುವುದು ಗೊತ್ತಾಗುತ್ತಿದೆ. ಜತೆಗೆ ಮೆಡಿಕಲ್ ಮಾಫಿಯಾದ ಬಗ್ಗೆಯೂ ಸಿನಿಮಾದಲ್ಲಿ ತೋರಿಸಲಾಗಿದೆ. ಕಣ್ಣು ಕಾಣದ ಮಗಳ ಆಸೆಯನ್ನು ಈಡೇರಿಸಲು ಹೋರಾಡುವ ಅಪ್ಪನ ಪಾತ್ರದಲ್ಲಿ ಸುಬ್ರಮಣಿ ಕಾಣಿಸಿಕೊಂಡಿದ್ದಾರೆ. ಮಗಳ ಪಾತ್ರದಲ್ಲಿ ಬಾಲ ನಟಿ ಸಾನ್ವಿತಾ ಅಭಿನಯಿಸಿದ್ದಾರೆ. ಇನ್ನು ಉಳಿದಂತೆ ಸಿನಿಮಾದಲ್ಲಿ ಪ್ರಶಾಂತ್ ನಟನ, ಶ್ರೀಧರ್ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ.

Continue Reading

ಕರ್ನಾಟಕ

Group Clash: ಅರಕೆರೆ ಶೆಡ್‌ನಲ್ಲಿ ದರ್ಶನ್ ಕಿರಿಕ್‌‌; ಯೂತ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಕ್ಕಾಗಿ‌ ನಡುರಸ್ತೆಯಲ್ಲೇ ಫೈಟ್

Group Clash: ಬೊಮ್ಮನಹಳ್ಳಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮಿಥುನ್‌ ಮತ್ತು ಮಂಜಪ್ಪ ಸ್ಪರ್ಧೆ ಮಾಡುತ್ತಿದ್ದಾರೆ. ಇದೇ ವಿಚಾರಕ್ಕೆ ಒಂದೇ ಬಣದ ಎರಡು ಗುಂಪುಗಳು ನಡುರಸ್ತೆಯಲ್ಲಿ ಕೈ ಕೈ ಮಿಲಾಯಿಸಿಕೊಂಡಿವೆ.

VISTARANEWS.COM


on

Group Clash
Koo

ಬೆಂಗಳೂರು: ಪಟ್ಟಣಗೆರೆ ಶೆಡ್ ನಂತರ ಮತ್ತೊಂದು ‌ಶೆಡ್‌ನಲ್ಲಿ ಗಲಾಟೆ (Group Clash) ನಡೆದಿರುವುದು ಕಂಡುಬಂದಿದೆ. ಬೊಮ್ಮನಹಳ್ಳಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಕ್ಕಾಗಿ ಗಲಾಟೆ ನಡೆದಿದ್ದು, ಒಂದೇ ಬಣದ ಎರಡು ಗುಂಪುಗಳು ಕೈ ಕೈ ಮಿಲಾಯಿಸಿಕೊಂಡಿವೆ.

ಬೊಮ್ಮನಹಳ್ಳಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಬೊಮ್ಮನಹಳ್ಳಿಯ ಮಿಥುನ್‌ ಮತ್ತು ಮಂಜಪ್ಪ ಸ್ಪರ್ಧೆ ಮಾಡುತ್ತಿದ್ದಾರೆ. ಇದೇ ವಿಚಾರಕ್ಕೆ ಕೆಪಿಸಿಸಿ ಮಾಜಿ ಸದಸ್ಯ ಶ್ರೀನಿವಾಸ್ ಮೂರ್ತಿ ಹಾಗೂ ಮತ್ತೊಬ್ಬ ಪ್ರಭಾವಿ ನಾಯಕನ ನಡುವೆ ಜಿದ್ದಾಜಿದ್ದಿ ನಡೆದಿದೆ. ಹುಳಿಮಾವು ಮಂಜಪ್ಪ ಪರ ಶ್ರೀನಿವಾಸ್ ಮೂರ್ತಿ ಆ್ಯಂಡ್ ಸನ್ಸ್ ಬ್ಯಾಟಿಂಗ್ ಮಾಡಿದ್ದಾರೆ.

ಯುವ ನಾಯಕ ಮಿಥುನ್‌ ಪರ ಬಿಜೆಪಿಯ ನಿಖಿಲ್, ಮಧು, ಅಂಬರೀಷ್ ಅಖಾಡಕ್ಕೆ ಇಳಿದು, ಪ್ರಚಾರ ಮಾಡಲು ಶೆಡ್‌ನಲ್ಲಿ ಪಾರ್ಟಿ ಆಯೋಜಿಸಿದ್ದರು. ಅಂಬರೀಶ್ ಬರ್ತಡೇ ನೆಪದಲ್ಲಿ ಮಿಥುನ್‌ ಪರ ವೋಟ್ ಮಾಡುವಂತೆ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಪಾರ್ಟಿಯಲ್ಲಿ ಶ್ರೀನಿವಾಸ್ ಮೂರ್ತಿ ಮಗ ದರ್ಶನ್, ನಿಖಿಲ್ ನಡುವೆ ಗಲಾಟೆ ನಡೆದಿದೆ. ಮಂಜಪ್ಪ ಪರವಾಗಿ ಪ್ರಚಾರ ಮಾಡಬೇಕೆಂದು ದರ್ಶನ್ ಆವಾಜ್ ಹಾಕಿದ್ದಾನೆ. ನಂತರ ಶೆಡ್‌ನಿಂದ ದರ್ಶನ್ ಗ್ಯಾಂಗ್ ಮನೆಗೆ ಹೊರಟಿದೆ. ಇದಾದ ಬಳಿಕ ಮನೆ ಬಳಿ ಕೇಳಲು ಹೋದ ನಿಖಿಲ್, ಮಿಥುನ್‌, ಅಂಬರೀಶ್ ಮೇಲೆ ಮಾರಕಾಸ್ತ್ರಗಳನ್ನು ಹಿಡಿದು ದರ್ಶನ್ ಗ್ಯಾಂಗ್ ಹಲ್ಲೆಗೆ ಯತ್ನಿಸಿದೆ. ಈ ವೇಳೆ ಎರಡು ಬಣಗಳ ಯುವಕರ ನಡುವೆ ಗಲಾಟೆ ನಡೆದಿದೆ.

ಬಳಿಕ ಸ್ಥಳಕ್ಕೆ ಬಂದ ಪೋಲಿಸರು, ಅಂಬರೀಶ್‌ನನ್ನು ಮಾತ್ರ ವಶಕ್ಕೆ ಪಡೆದಿದ್ದಾರೆ. ಅಂಬರೀಶ್ ಹುಳಿಮಾವು ಠಾಣೆಯ ರೌಡಿಶೀಟರ್ ಎನ್ನಲಾಗಿದೆ. ಅಂಬರೀಶ್‌ನ ಠಾಣೆಗೆ ಕರೆದೊಯ್ದು ಮುಚ್ಚಳಿಕೆ ಬರೆಸಿಕೊಂಡು ಕಳುಹಿಸಲಾಗಿದೆ. ಆದರೆ ದರ್ಶನ್ ಗ್ಯಾಂಗ್‌ಗೆ ಪೋಲಿಸರು ವಾರ್ನಿಂಗ್ ಕೊಟ್ಟು ಕಳುಹಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ | Fraud Case: ಅಸಲಿ ಮದುವೆ, ನಕಲಿ ಹೆಣ್ಣು! 3 ವರ್ಷದಲ್ಲಿ 5 ಮದುವೆಯಾಗಿ ವಂಚನೆ; ಮದುಮಗಳು ಮತ್ತು ಗ್ಯಾಂಗ್‌ ಆರೆಸ್ಟ್

ಶಿಕ್ಷಕಿಗೆ ಅಶ್ಲೀಲ ಮೆಸೇಜ್‌ ಕಳಿಸಿದ ಪ್ರಭಾರಿ ಪ್ರಾಚಾರ್ಯನಿಗೆ ಧರ್ಮದೇಟು

ರಾಯಚೂರು: ರಾಯಚೂರು ನಗರ (Raichur news) ಸಮೀಪದ ಯರಮರಸ್ ಬಳಿಯ ಆದರ್ಶ ವಿದ್ಯಾಲಯದ ಪ್ರಭಾರಿ ಪ್ರಾಚಾರ್ಯನೊಬ್ಬ (Principal in charge) ತರಬೇತಿಗೆ ಬಂದಿದ್ದ ಶಿಕ್ಷಕಿ ಜತೆ ಅನುಚಿತವಾಗಿ (Misbehave) ವರ್ತಿಸಿದ್ದರಿಂದ ಥಳಿತಕ್ಕೊಳಗಾದ (Beaten) ಘಟನೆ ಸೋಮವಾರ ನಡೆದಿದೆ.

ಮೆಹಬೂಬ್ ಅಲಿ ಎಂಬಾತನೇ ಏಟು ತಿಂದ ಪ್ರಭಾರಿ ಪ್ರಾಚಾರ್ಯ. ಈತ ಶಿಕ್ಷಕಿಯ ಮೊಬೈಲ್‌ಗೆ ಅಶ್ಲೀಲ ಮೆಸೇಜ್‌ಗಳನ್ನು ಕಳಿಸುತ್ತಿದ್ದನಲ್ಲದೆ, ರಾತ್ರಿ ಮಲಗಲು ಬಾ ಎಂದೂ ಕರೆದಿದ್ದ. ಇದರಿಂದ ನೊಂದ ಶಿಕ್ಷಕಿ ತಮ್ಮವರಿಗೆ ಮಾಹಿತಿ ತಿಳಿಸಿದ್ದರು. ಶಾಲೆಗೆ ಬಂದ ಶಿಕ್ಷಕಿಯ ಬಂಧುಗಳು, ಸಾರ್ವಜನಿಕರು ಪ್ರಭಾರ ಪ್ರಾಚಾರ್ಯನಿಗೆ ಚೆನ್ನಾಗಿ ಥಳಿಸಿ ಬುದ್ಧಿ ಕಲಿಸಿದ್ದಾರೆ.

ಇದನ್ನೂ ಓದಿ: Murder Case : ಶೆಡ್ಡಿಗೆ ಬಾರೋ ಎಂದ ಸ್ನೇಹಿತ; ಮಲಗಿದ್ದವನ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಕೊಲೆ

ಪ್ರಭಾರಿ ಪ್ರಾಚಾರ್ಯ ಮೆಹಬೂಬ್ ಅಲಿ, ತಾನು ಮಾಡಿದ್ದು ತಪ್ಪಾಗಿದೆ. ಇನ್ನು ಮುಂದೆ ಹಾಗೆ ಮಾಡುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟಿದ್ದಾನೆ. ಶಿಕ್ಷಕಿಯ ಕಾಲಿಗೆ ಬಿದ್ದು ಕ್ಷಮೆ ಕೇಳಿದ್ದಾನೆ. ಈ ಕುರಿತು ಗ್ರಾಮೀಣ ಠಾಣೆ ಅಥವಾ ಮಹಿಳಾ ಠಾಣೆಯಲ್ಲಾಗಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.

Continue Reading
Advertisement
kolkata doctor murder case
ದೇಶ30 mins ago

Kolkata Doctor Murder Case: ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ; ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

ಪ್ರಮುಖ ಸುದ್ದಿ31 mins ago

Sheikh Hasina : ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಕೇಸ್​ ದಾಖಲಿಸಿದ ಕೋರ್ಟ್​​

Janhvi Kapoor
ಸಿನಿಮಾ40 mins ago

Janhvi Kapoor: ಇಂದು ನಟಿ ಶ್ರೀದೇವಿ ಜನ್ಮದಿನ; ಬಾಯ್‌ಫ್ರೆಂಡ್‌ ಜತೆ ತಿರುಪತಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಜಾಹ್ನವಿ ಕಪೂರ್‌

Bengaluru Police
ಬೆಂಗಳೂರು45 mins ago

Bengaluru Police: ಸಿಟಿ ಸಿವಿಲ್‌ ಕೋರ್ಟ್‌ನಿಂದ ಕೊಲೆ ಆರೋಪಿ ಎಸ್ಕೇಪ್‌! ಸಿನಿಮಾ ಸ್ಟೈಲ್‌ನಲ್ಲಿ ಚೇಸ್‌ ಮಾಡಿದ ಖಾಕಿ

Maharaja Trophy 2024
ಕ್ರೀಡೆ46 mins ago

Maharaja Trophy 2024: ಮಹಾರಾಜ ಟಿ20 ಕ್ರಿಕೆಟ್​ ಟೂರ್ನಿ ಆರಂಭಕ್ಕೆ ಒಂದು ದಿನ ಬಾಕಿ; ತಂಡಗಳ ವಿವರ ಹೀಗಿದೆ

ಕರ್ನಾಟಕ1 hour ago

Kundapra Kannada Habba : ಬೆಂಗಳೂರಿನ ಅರಮನೆ ಮೈದಾನದಲ್ಲಿ 2 ದಿನ ಅದ್ಧೂರಿ ‘ಕುಂದಾಪ್ರ ಕನ್ನಡ ಹಬ್ಬ’

Independence day 2024
ದೇಶ1 hour ago

Independence day 2024: ಕೆಂಪು ಕೋಟೆ ಮೇಲೆ ಭಾಷಣ; ನೆಹರೂ, ಇಂದಿರಾ ಬಳಿಕ ಮೋದಿ ಹೊಸ ದಾಖಲೆ!

Bangladesh Unrest
ವಿದೇಶ1 hour ago

Bangladesh Unrest: ಬಾಂಗ್ಲಾ ಹಿಂದೂಗಳ ಪರ ಸೋಶಿಯಲ್‌ ಮೀಡಿಯಾ ಅಭಿಯಾನ; All eyes on hindus ಭಾರೀ ಟ್ರೆಂಡ್!

Road Accident
ಬೆಂಗಳೂರು1 hour ago

Road Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ! ಬೈಕ್‌, ಕಾರುಗಳಿಗೆ ಡಿಕ್ಕಿ ಹೊಡೆದ ಬಿಎಂಟಿಸಿ; ನರಳಾಡಿದ ಸವಾರರು

Kannada New Movie
ಬೆಂಗಳೂರು1 hour ago

Kannada New Movie: ‘ಸಿ’ ಸಿನಿಮಾದ ಟ್ರೈಲರ್ ಔಟ್; ಗಮನ ಸೆಳೆಯುತ್ತಿದೆ ಹೊಸಬರ ವಿಭಿನ್ನ ಪ್ರಯತ್ನ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು7 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ7 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌