Indian Bank Recruitment 2024: 300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಇಂಡಿಯನ್‌ ಬ್ಯಾಂಕ್‌; ಕರ್ನಾಟಕದಲ್ಲಿಯೂ ಇದೆ ನೇಮಕಾತಿ - Vistara News

ಉದ್ಯೋಗ

Indian Bank Recruitment 2024: 300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಇಂಡಿಯನ್‌ ಬ್ಯಾಂಕ್‌; ಕರ್ನಾಟಕದಲ್ಲಿಯೂ ಇದೆ ನೇಮಕಾತಿ

Indian Bank Recruitment 2024: ಬ್ಯಾಂಕ್‌ನಲ್ಲಿ ಉದ್ಯೋಗ ನಿರ್ವಹಿಸಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಸುವರ್ಣಾವಕಾಶ. ತಮಿಳುನಾಡಿನ ಚೆನ್ನೈಯಲ್ಲಿ ಪ್ರಧಾನ ಕಚೇರಿ ಹೊಂದಿರುವ ದೇಶದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾದ ಇಂಡಿಯನ್‌ ಬ್ಯಾಂಕ್‌ 300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಲೋಕಲ್‌ ಬ್ಯಾಂಕ್‌ ಆಫೀಸರ್‌ ಹುದ್ದೆ ಇದಾಗಿದ್ದು, ಕರ್ನಾಟಕದಲ್ಲಿಯೂ ನೇಮಕಾತಿ ನಡೆಯಲಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್‌ 2.

VISTARANEWS.COM


on

Indian Bank Recruitment 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬ್ಯಾಂಕ್‌ನಲ್ಲಿ ಉದ್ಯೋಗ ನಿರ್ವಹಿಸಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಸುವರ್ಣಾವಕಾಶ (Bank Jobs). ತಮಿಳುನಾಡಿನ ಚೆನ್ನೈಯಲ್ಲಿ ಪ್ರಧಾನ ಕಚೇರಿ ಹೊಂದಿರುವ ದೇಶದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾದ ಇಂಡಿಯನ್‌ ಬ್ಯಾಂಕ್‌ (Indian Bank) 300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (Indian Bank Recruitment 2024). ಲೋಕಲ್‌ ಬ್ಯಾಂಕ್‌ ಆಫೀಸರ್‌ (Local Bank Officer) ಹುದ್ದೆ ಇದಾಗಿದ್ದು, ಪದವಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ವಿಶೇಷ ಎಂದರೆ ಕರ್ನಾಟಕದಲ್ಲಿಯೂ ನೇಮಕಾತಿ ನಡೆಯಲಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್‌ 2 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಕರ್ನಾಟಕ-35, ತಮಿಳುನಾಡು / ಪುದುಚೇರಿ-160, ಆಂಧ್ರ ಪ್ರದೇಶ & ತೆಲಂಗಾಣ-50, ಮಹಾರಾಷ್ಟ್ರ-40, ಗುಜರಾತ್‌-15 ಹುದ್ದೆಗಳಿವೆ. ದೇಶದ ಯಾವುದೇ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು.

ವಯೋಮಿತಿ

ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ವಿಶೇಷ ಚೇತನರಿಗೆ 10 ವರ್ಷ, ಮಾಜಿ ಯೋಧರಿಗೆ 5 ವರ್ಷಗಳ ರಿಯಾಯಿತಿ ಇದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 175 ರೂ. ಪಾವತಿಸಬೇಕು. ಉಳಿದ ಎಲ್ಲ ವಿಭಾಗದ ಅಭ್ಯರ್ಥಿಗಳು 1,000 ರೂ. ಅನ್ನು ಅರ್ಜಿ ಶುಲ್ಕವಾಗಿ ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್‌. ಲಿಖಿತ / ಆನ್‌ಲೈನ್‌ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಮಾಸಿಕ ವೇತನ

ಆಯ್ಕೆಯಾದ ಅಭ್ಯರ್ಥಿಗಳಿಗೆ 48,480 ರೂ. – 85,920 ರೂ. ಮಾಸಿಕ ವೇತನ ದೊರೆಯಲಿದೆ.

Indian Bank Recruitment 2024 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://ibpsonline.ibps.in/iblbojul24/).
  • ಮೊಬೈಲ್‌ ನಂಬರ್‌, ಇಮೇಲ್‌ ವಿಳಾಸ ನೀಡಿ ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಸೂಕ್ತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಇಂಡಿಯನ್‌ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ ವಿಳಾಸ: indianbank.inಗೆ ಭೇಟಿ ನೀಡಿ.

ಇದನ್ನೂ ಓದಿ: Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ 55 ಹುದ್ದೆ; ಹೀಗೆ ಅಪ್ಲೈ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಗ್ಯಾಸ್‌ ಅಥಾರಟಿ ಆಫ್‌ ಇಂಡಿಯಾ ಲಿಮಿಟೆಡ್‌ನಲ್ಲಿದೆ 391 ಹುದ್ದೆ; ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಿ

Job Alert: ಗ್ಯಾಸ್‌ ಅಥಾರಟಿ ಆಫ್‌ ಇಂಡಿಯಾ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಜೂನಿಯರ್‌ ಎಂಜಿನಿಯರ್‌, ಫಾರ್‌ಮ್ಯಾನ್‌, ಜೂನಿಯರ್‌ ಸೂಪರಿಟೆಂಡೆಂಟ್‌ ಸೇರಿ ಒಟ್ಟು 391 ಹುದ್ದೆಗಳಿವೆ. ದ್ವಿತೀಯ ಪಿಯುಸಿ, ಡಿಪ್ಲೊಮಾ, ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಸೆಪ್ಟೆಂಬರ್‌ 7.

VISTARANEWS.COM


on

Job Alert
Koo

ಬೆಂಗಳೂರು: ಗ್ಯಾಸ್‌ ಅಥಾರಟಿ ಆಫ್‌ ಇಂಡಿಯಾ ಲಿಮಿಟೆಡ್‌ (Gas Authority of India Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಜೂನಿಯರ್‌ ಎಂಜಿನಿಯರ್‌, ಫಾರ್‌ಮ್ಯಾನ್‌, ಜೂನಿಯರ್‌ ಸೂಪರಿಟೆಂಡೆಂಟ್‌ ಸೇರಿ ಒಟ್ಟು 391 ಹುದ್ದೆಗಳಿವೆ (GAIL Recruitment 2024). ದ್ವಿತೀಯ ಪಿಯುಸಿ, ಡಿಪ್ಲೊಮಾ, ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಸೆಪ್ಟೆಂಬರ್‌ 7 (Job Alert).

ಹುದ್ದೆಗಳ ವಿವರ

ಜೂನಿಯರ್ ಎಂಜಿನಿಯರ್ (ಕೆಮಿಕಲ್)- 2 ಹುದ್ದೆ, ವಿದ್ಯಾರ್ಹತೆ: ಕೆಮಿಕಲ್ / ಪೆಟ್ರೋಕೆಮಿಕಲ್/ ಕೆಮಿಕಲ್ ಟೆಕ್ನಾಲಜಿ/ ಪೆಟ್ರೋಕೆಮಿಕಲ್ ಟೆಕ್ನಾಲಜಿ ಎಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ
ಜೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್)- 1 ಹುದ್ದೆ, ವಿದ್ಯಾರ್ಹತೆ: ಮೆಕ್ಯಾನಿಕಲ್/ ಪ್ರೊಡಕ್ಷನ್/ ಪ್ರೊಡಕ್ಷನ್ & ಇಂಡಸ್ಟ್ರಿಯಲ್/ ಮ್ಯಾನುಫ್ಯಾಕ್ಚರಿಂಗ್/ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ
ಫಾರ್‌ಮ್ಯಾನ್‌ (ಎಲೆಕ್ಟ್ರಿಕಲ್) 1 ಹುದ್ದೆ, ವಿದ್ಯಾರ್ಹತೆ: ಎಲೆಕ್ಟ್ರಿಕಲ್/ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ
ಫಾರ್‌ಮ್ಯಾನ್‌ (ಇನ್‌ಸ್ಟ್ರುಮೆಂಟೇಶನ್) 14 ಹುದ್ದೆ, ವಿದ್ಯಾರ್ಹತೆ: ಇನ್‌ಸ್ಟ್ರುಮೆಂಟೇಶನ್ / ಇನ್‌ಸ್ಟ್ರುಮೆಂಟೇಶನ್ & ಕಂಟ್ರೋಲ್/ ಎಲೆಕ್ಟ್ರಾನಿಕ್ಸ್ & ಇನ್‌ಸ್ಟ್ರುಮೆಂಟೇಶನ್/ ಎಲೆಕ್ಟ್ರಿಕಲ್ & ಇನ್‌ಸ್ಟ್ರುಮೆಂಟೇಶನ್/ ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ
ಫಾರ್‌ಮ್ಯಾನ್‌ (ಸಿವಿಲ್) 6 ಹುದ್ದೆ, ವಿದ್ಯಾರ್ಹತೆ: ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ
ಜೂನಿಯರ್‌ ಸೂಪರಿಟೆಂಡೆಂಟ್‌ 5 ಹುದ್ದೆ, ವಿದ್ಯಾರ್ಹತೆ: ಪದವಿ
ಜೂನಿಯರ್ ಕೆಮಿಸ್ಟ್ 8 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ, ಎಂ.ಎಸ್‌ಸಿ
ಜೂನಿಯರ್ ಅಕೌಂಟೆಂಟ್ 14 ಹುದ್ದೆ, ವಿದ್ಯಾರ್ಹತೆ: ಸಿಎ ಅಥವಾ ಐಸಿಡಬ್ಲ್ಯುಎ (ಇಂಟರ್), ಸ್ನಾತಕೋತ್ತರ ಪದವಿ, ಎಂ.ಕಾಂ
ಟೆಕ್ನಿಕಲ್ ಅಸಿಸ್ಟೆಂಟ್ (ಲ್ಯಾಬೊರೇಟರಿ) 3 ಹುದ್ದೆ, ವಿದ್ಯಾರ್ಹತೆ: ಪದವಿ, ಬಿ.ಎಸ್‌ಸಿ
ಆಪರೇಟರ್ (ಕೆಮಿಕಲ್) 73 ಹುದ್ದೆ, ವಿದ್ಯಾರ್ಹತೆ: ಪದವಿ, ಬಿ.ಎಸ್‌ಸಿ
ಟೆಕ್ನಿಷಿಯನ್ (ಎಲೆಕ್ಟ್ರಿಕಲ್) 44 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐ
ಟೆಕ್ನಿಷಿಯನ್ (ಇನ್‌ಸ್ಟ್ರುಮೆಂಟೇಶನ್) 45 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐ
ಟೆಕ್ನಿಷಿಯನ್ (ಮೆಕ್ಯಾನಿಕಲ್) 39 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐ
ಟೆಕ್ನಿಷಿಯನ್ (ಟೆಲಿಕಾಂ ಮತ್ತು ಟೆಲಿಮೆಟ್ರಿ) 11 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐ
ಆಪರೇಟರ್ (ಫೈರ್) 39 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ
ಆಪರೇಟರ್ (ಬಾಯ್ಲರ್) 8 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐ
ಅಕೌಂಟ್ಸ್ ಅಸಿಸ್ಟೆಂಟ್ 13 ಹುದ್ದೆ, ವಿದ್ಯಾರ್ಹತೆ: ಕಾಮರ್ಸ್‌ನಲ್ಲಿ ಪದವಿ, ಬಿ.ಕಾಂ
ಬಿಸಿನೆಸ್ ಅಸಿಸ್ಟೆಂಟ್ 65 ಹುದ್ದೆ, ವಿದ್ಯಾರ್ಹತೆ: ಬಿಬಿಎ, ಬಿಬಿಎಸ್, ಬಿಬಿಎಂ, ಪದವಿ

ವಯೋಮಿತಿ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ 26ರಿಂದ 45 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಸಾಮಾನ್ಯ, ಇಡಬ್ಲ್ಯುಎಸ್‌ ಮತ್ತು ಒಬಿಸಿ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 50 ರೂ. ಪಾವತಿಸಬೇಕು. ಉಳಿದ ವಿಭಾಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಲಿಖಿತ ಪರೀಕ್ಷೆ, ಕಂಪ್ಯೂಟರ್‌ ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://gailonline.com/CRApplyingGail.html)
  • ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಸೂಕ್ತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಇದನ್ನೂ ಓದಿ: Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ 55 ಹುದ್ದೆ; ಹೀಗೆ ಅಪ್ಲೈ ಮಾಡಿ

Continue Reading

ದೇಶ

Festive Season Hiring: 12.5 ಲಕ್ಷ ಜನಕ್ಕೆ ಜಾಬ್ ಕೊಡಲು ಮುಂದಾದ ಇ-ಕಾಮರ್ಸ್‌ ಸಂಸ್ಥೆಗಳು; ಹಬ್ಬಕ್ಕೆ ಇನ್ನೇನು ಖುಷಿ ಬೇಕು!

Festive Season Hiring: ಭಾರತದಲ್ಲಿ ಆನ್‌ಲೈನ್‌ ಮೂಲಕ ಕೋಟ್ಯಂತರ ಜನ ಆರ್ಡರ್‌ ಮಾಡುತ್ತಾರೆ. ಮನೆಗೆ ಬೇಕಾಗುವ ಅಗತ್ಯ ವಸ್ತುಗಳಿಂದ ಹಿಡಿದು, ಎಲೆಕ್ಟ್ರಾನಿಕ್ಸ್‌ ಉಪಕರಣಗಳು, ಸೌಂದರ್ಯ ವರ್ಧಕಗಳು, ಮನೆಯ ಸಿಂಗಾರ, ಬಟ್ಟೆ ಸೇರಿ ಹತ್ತಾರು ಉಪಕರಣಗಳನ್ನು ಆನ್‌ಲೈನ್‌ ಮೂಲಕವೇ ಆರ್ಡರ್‌ ಮಾಡುತ್ತಾರೆ. ಗ್ರಾಹಕರ ಬೇಡಿಕೆಗಳನ್ನು ಪೂರೈಸಲು ಇ-ಕಾಮರ್ಸ್‌ ಸಂಸ್ತೆಗಳು ಹೆಚ್ಚಿನ ಉದ್ಯೋಗಿಗಳನ್ನು ನೇಮಿಸಲು ತೀರ್ಮಾನಿಸಿವೆ.

VISTARANEWS.COM


on

Festive Season Hiring
Koo

ನವದೆಹಲಿ: ಕರ್ನಾಟಕ ಸೇರಿ ದೇಶಾದ್ಯಂತ ನಾಗರ ಪಂಚಮಿ ಹಬ್ಬದ ಖುಷಿ ಮನೆಮಾಡಿದೆ. ರಕ್ಷಾ ಬಂಧನ, ಗಣೇಶ ಚತುರ್ಥಿ, ದಸರಾ, ದೀಪಾವಳಿ ಸೇರಿ ಸಾಲು ಸಾಲು ಹಬ್ಬಗಳು (Festival Season) ಸಮೀಪಿಸುತ್ತಿವೆ. ಬಟ್ಟೆ, ಚಿನ್ನ, ಆಪ್ತರಿಗೆ ಉಡುಗೊರೆ ಸೇರಿ ಹತ್ತಾರು ವಸ್ತುಗಳನ್ನು ಖರೀದಿಸವು ಮೂಲಕ ದೇಶದ ಜನರು ಎಲ್ಲ ಹಬ್ಬಗಳನ್ನು ಸಡಗರ ಸಂಭ್ರಮದಿಂದ ಆಚರಿಸಲು ಸಜ್ಜಾಗಿದ್ದಾರೆ. ಇದರ ಬೆನ್ನಲ್ಲೇ, ಇ-ಕಾಮರ್ಸ್‌ ಸಂಸ್ಥೆಗಳು (E Commerce Companies) ಸುಮಾರು 12.5 ಲಕ್ಷ ಜನರಿಗೆ ಉದ್ಯೋಗ (Festive Season Hiring) ನೀಡಲು ಮುಂದಾಗಿವೆ ಎಂದು ತಿಳಿದುಬಂದಿದೆ.

ಹೌದು, ಇ-ಕಾಮರ್ಸ್‌ ಸಂಸ್ಥೆಗಳ ವಹಿವಾಟು ಹಬ್ಬದ ಸೀಸನ್‌ನಲ್ಲಿ ಶೇ.35ರಷ್ಟು ಏರಿಕೆಯಾಗುತ್ತದೆ. ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಿನ ವಹಿವಾಟು ಆಗಲಿದೆ ಎಂದು ಅಂದಾಜಿಸಲಾಗಿದೆ. ಹಾಗಾಗಿ, ಇ-ಕಾಮರ್ಸ್‌ ಸಂಸ್ಥೆಗಳು ಲಕ್ಷಾಂತರ ಜನರಿಗೆ ಉದ್ಯೋಗ ನೀಡಲು ಮುಂದಾಗಿವೆ. ಸುಮಾರು 10 ಲಕ್ಷ ಜನರಿಗೆ ತಾತ್ಕಾಲಿಕವಾಗಿ, ಇನ್ನೂ 2.5 ಲಕ್ಷ ಮಂದಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ತೀರ್ಮಾನಿಸಿವೆ. ಹಬ್ಬದ ಆಚರಣೆಯ ಖುಷಿಯ ಜತೆಗೆ ಉದ್ಯೋಗದ ಖುಷಿಯನ್ನೂ ನೀಡಲು ಕಂಪನಿಗಳು ಮುಂದಾಗಿವೆ.

ಭಾರತದಲ್ಲಿ ಆನ್‌ಲೈನ್‌ ಮೂಲಕ ಕೋಟ್ಯಂತರ ಜನ ಆರ್ಡರ್‌ ಮಾಡುತ್ತಾರೆ. ಮನೆಗೆ ಬೇಕಾಗುವ ಅಗತ್ಯ ವಸ್ತುಗಳಿಂದ ಹಿಡಿದು, ಎಲೆಕ್ಟ್ರಾನಿಕ್ಸ್‌ ಉಪಕರಣಗಳು, ಸೌಂದರ್ಯ ವರ್ಧಕಗಳು, ಮನೆಯ ಸಿಂಗಾರ, ಬಟ್ಟೆ ಸೇರಿ ಹತ್ತಾರು ಉಪಕರಣಗಳನ್ನು ಆನ್‌ಲೈನ್‌ ಮೂಲಕವೇ ಆರ್ಡರ್‌ ಮಾಡುತ್ತಾರೆ. ಇದನ್ನು ಅರಿತ ಇ-ಕಾಮರ್ಸ್‌ ಸಂಸ್ಥೆಗಳು ಗ್ರಾಹಕರಿಗೆ ಸಮಯಕ್ಕೆ ಸರಿಯಾಗಿ ಆರ್ಡರ್‌ಗಳನ್ನು ಮನೆಬಾಗಿಲಿಗೆ ತಲುಪಿಸಲು ಲಕ್ಷಾಂತರ ಜನರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿವೆ ಎಂದು ತಿಳಿದುಬಂದಿದೆ.

ಕಳೆದ ವರ್ಷ ಹಬ್ಬದ ಸೀಸನ್‌ನಲ್ಲಿ ಪ್ರತಿ ದಿನ ಸರಾಸರಿ 20 ಲಕ್ಷ ಆನ್‌ಲೈನ್‌ ಆರ್ಡರ್‌ಗಳು ದಾಖಲಾಗಿದ್ದವು. ಗ್ರಾಹಕರ ಬೇಡಿಕೆಗಳನ್ನು ಈಡೇರಿಸುವ ಸಲುವಾಗಿ ಇ-ಕಾಮರ್ಸ್‌ ಸಂಸ್ಥೆಗಳು ಪರದಾಡಿದವು. ಆದರೆ, ಈ ಬಾರಿ ಗ್ರಾಹಕರಿಗೆ ಯಾವುದೇ ವ್ಯತ್ಯಯ ಆಗದಂತೆ ನೋಡಿಕೊಳ್ಳಲು ಅಮೆಜಾನ್‌, ಫ್ಲಿಪ್‌ಕಾರ್ಟ್‌ ಸೇರಿ ಹತ್ತಾರು ಇ ಕಾಮರ್ಸ್‌ ಸಂಸ್ಥೆಗಳು ನೌಕರರನ್ನು ನೇಮಿಸಿಕೊಳ್ಳುತ್ತಿವೆ. ಇ-ಕಾಮರ್ಸ್‌ ಸಂಸ್ಥೆಗಳು ಮಾತ್ರವಲ್ಲ, ದೊಡ್ಡ ದೊಡ್ಡ ಶಾಪಿಂಗ್‌ ಮಾಲ್‌ಗಳು, ಚಿನ್ನಾಭರಣಗಳ ಮಳಿಗೆಗಳ್ಲಲೂ ಹೆಚ್ಚಿನ ನೇಮಕಾತಿ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Bangladesh Unrest: ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ನೇಮಕ

Continue Reading

ಉದ್ಯೋಗ

Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ 55 ಹುದ್ದೆ; ಹೀಗೆ ಅಪ್ಲೈ ಮಾಡಿ

Job Alert: ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್‌, ಅಸಿಸ್ಟಂಟ್‌ ಮ್ಯಾನೇಜರ್‌, ಡೆಪ್ಯುಟಿ ಮ್ಯಾನೇಜರ್‌, ಸೀನಿಯರ್‌ ಮ್ಯಾನೇಜರ್‌ ಮತ್ತು ಸೀನಿಯರ್‌ ಮೆಡಿಕಲ್‌ ಆಫೀಸರ್‌ ಸೇರಿ ಒಟ್ಟು 55 ಹುದ್ದೆಗಳಿವೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್‌ 16.

VISTARANEWS.COM


on

Job Alert
Koo

ಬೆಂಗಳೂರು: ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ ಲಿಮಿಟೆಡ್‌ (Tehri Hydro Development Corporation Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್‌, ಅಸಿಸ್ಟಂಟ್‌ ಮ್ಯಾನೇಜರ್‌, ಡೆಪ್ಯುಟಿ ಮ್ಯಾನೇಜರ್‌, ಸೀನಿಯರ್‌ ಮ್ಯಾನೇಜರ್‌ ಮತ್ತು ಸೀನಿಯರ್‌ ಮೆಡಿಕಲ್‌ ಆಫೀಸರ್‌ ಸೇರಿ ಒಟ್ಟು 55 ಹುದ್ದೆಗಳಿವೆ (THDC Recruitment 2024). ಪದವಿ, ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್‌ 16 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಮ್ಯಾನೇಜರ್ 25 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌, ಸ್ನಾತಕೋತ್ತರ ಪದವಿ
ಅಸಿಸ್ಟೆಂಟ್ ಮ್ಯಾನೇಜರ್ 19 ಹುದ್ದೆ, ವಿದ್ಯಾರ್ಹತೆ: ಪದವಿ, ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌
ಡೆಪ್ಯುಟಿ ಮ್ಯಾನೇಜರ್ 3 ಹುದ್ದೆ, ವಿದ್ಯಾರ್ಹತೆ: ಪದವಿ
ಸೀನಿಯರ್ ಮ್ಯಾನೇಜರ್ 3 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌
ಹಿರಿಯ ವೈದ್ಯಾಧಿಕಾರಿ 5 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್

ಗರಿಷ್ಠ ವಯೋಮಿತಿ

ಮ್ಯಾನೇಜರ್ 45 ವರ್ಷ
ಅಸಿಸ್ಟೆಂಟ್ ಮ್ಯಾನೇಜರ್ 32 ವರ್ಷ
ಡೆಪ್ಯುಟಿ ಮ್ಯಾನೇಜರ್ 40 ವರ್ಷ
ಸೀನಿಯರ್ ಮ್ಯಾನೇಜರ್ 48 ವರ್ಷ
ಹಿರಿಯ ವೈದ್ಯಾಧಿಕಾರಿ 34 ವರ್ಷ

ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ (ಸಾಮಾನ್ಯ / ಇಡಬ್ಲ್ಯುಎಸ್‌) ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಬಿಡಿ (ಎಸ್‌ಸಿ / ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಾಜಿ ಸೈನಿಕರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್‌ ಅಭ್ಯರ್ಥಿಗಳು ಅರ್ಜಿ ಸುಲ್ಕವಾಗಿ ಆನ್‌ಲೈನ್‌ನಲ್ಲಿ 600 ರೂ. ಪಾವತಿಸಬೇಕು. ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

THDC Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಇಮೇಲ್‌, ಮೊಬೈಲ್‌ ನಂಬರ್‌ ಬಳಸಿ ಹೆಸರು ನಮೂದಿಸಿ.
  • ಇಲ್ಲಿ ಕಂಡುಬರುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗೆ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ, ವೆಬ್‌ಸೈಟ್‌ ವಿಳಾಸ: thdc.co.inಕ್ಕೆ ಭೇಟಿ ನೀಡಿ ಅಥವಾ thdcrecruitment@thdc.co.in ಇಮೇಲ್‌ಗೆ ಸಂಪರ್ಕಿಸಿ.

ಇದನ್ನೂ ಓದಿ: Job Alert: CDACಯಲ್ಲಿದೆ 250 ಹುದ್ದೆ; ಆನ್‌ಲೈನ್‌ ಮೂಲಕ ಇಂದೇ ಅಪ್ಲೈ ಮಾಡಿ

Continue Reading

ಉದ್ಯೋಗ

Banking Recruitment 2024: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 896 ಸ್ಪೆಷಲಿಸ್ಟ್ ಆಫೀಸರ್ ಹುದ್ದೆ; ಆಯ್ಕೆ ಪ್ರಕ್ರಿಯೆ ಹೇಗೆ? Complete Details

Banking Recruitment 2024: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿ ಇರುವ 896ಕ್ಕೂ ಹೆಚ್ಚು ಸ್ಪೆಶಲಿಸ್ಟ್ ಆಫೀಸರ್ಸ್ ಹುದ್ದೆಗಳ ನೇಮಕಾತಿಗೆ ಐ.ಬಿ.ಪಿ.ಎಸ್ ಸಂಸ್ಥೆ ಅರ್ಜಿ ಆಹ್ವಾನಿಸಿದೆ. ಆಗಸ್ಟ್ 1ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಇದೇ 21 ಅರ್ಜಿ ಸಲ್ಲಿಕೆಗೆ ಕೊನೆ ದಿನ. ಆನ್ಲೈನ್ ಮೂಲಕ (https://www.ibps.in) ಅರ್ಜಿ ಸಲ್ಲಿಸಬೇಕು. ಎಲ್ಲ ಹುದ್ದೆಗಳು ಸ್ಕೇಲ್ -1 ಅಧಿಕಾರಿ ಹಂತದ ಹುದ್ದೆಗಳಾಗಿವೆ. ಆಯ್ಕೆ ಪ್ರಕ್ರಿಯೆ ಹೇಗೆ? ಪರೀಕ್ಷೆ ಹೇಗೆ ನಡೆಯುತ್ತದೆ? ಅರ್ಜಿ ಹೇಗೆ ಸಲ್ಲಿಸಬೇಕು ಇತ್ಯಾದಿ ವಿಸ್ತೃತ ಮಾಹಿತಿ ಇಲ್ಲಿದೆ.

VISTARANEWS.COM


on

Koo
R K Balachandra

-ಆರ್‌.ಕೆ. ಬಾಲಚಂದ್ರ. ಲೇಖಕರು, ಬ್ಯಾಂಕಿಂಗ್‌ ಮತ್ತು ವ್ಯಕ್ತಿತ್ವ ವಿಕಸನ ಹಾಗೂ ಸಾಪ್ಟ್ ಸ್ಕಿಲ್ ತರಬೇತುದಾರರು ಹಾಗೂ ವೃತ್ತಿ ಮಾರ್ಗದರ್ಶಕರು, ಬೆಂಗಳೂರು
ಈ ವರ್ಷದಲ್ಲಿ ಇಲ್ಲಿಯವರೆಗೆ 20,566ಕ್ಕೂ ಹೆಚ್ಚಿನ ಬ್ಯಾಂಕ್ ಹುದ್ದೆಗಳ (Banking Recruitment 2024) ನೇಮಕಾತಿಗೆ ಅರ್ಜಿ ಕರೆದಂತಾಗಿದೆ. ಪದವೀಧರ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿ ಸಿಕೊಳ್ಳಬೇಕಾಗಿದೆ. ಭಾರತದಲ್ಲಿ, ಬ್ಯಾಂಕಿಂಗ್ ವೃತ್ತಿಯನ್ನು ಆರಿಸಿಕೊಳ್ಳುವ ಹೊಸಬರಿಗೆ ಮತ್ತು ಅನುಭವಿ ವೃತ್ತಿಪರರಿಗೆ ಅತ್ಯಂತ ಪ್ರತಿಷ್ಠಿತ ಉದ್ಯೋಗಗಳಲ್ಲಿ ಒಂದಾಗಿದೆ. ಬ್ಯಾಂಕ್‌ಗಳು ತನ್ನ ಉದ್ಯೋಗಿಗಳಿಗೆ ಸುಂದರವಾದ ಪ್ಯಾಕೇಜ್‌ಗಳು, ಆಕರ್ಷಕ ಸಂಬಳ, ಉದ್ಯೋಗ ಭದ್ರತೆಯ ಜೊತೆಗೆ ಇತರ ಸವಲತ್ತುಗಳನ್ನು ನೀಡುತ್ತವೆ ಎಂಬುದು ಬಹಿರಂಗ ಸತ್ಯವಾಗಿದೆ. ಪ್ರತಿ ವರ್ಷ ದೇಶದಾದ್ಯಂತ ವಿವಿಧ ಬ್ಯಾಂಕ್‌ಗಳು ಮತ್ತು ಪರೀಕ್ಷಾ ಏಜೆನ್ಸಿಗಳು ನಡೆಸುವ ಬಹು ಬ್ಯಾಂಕ್ ಪರೀಕ್ಷೆಗಳಿವೆ.ಇಂತಹ ಕಾರಣಗಳಿಂದಾಗಿ ಬ್ಯಾಂಕ್ ಉದ್ಯೋಗಗಳನ್ನ ಪಡೆದುಕೊಳ್ಳಲು ಪೈಪೋಟಿ ಅತ್ಯಂತ ವೇಗದಲ್ಲಿ ಹೆಚ್ಚುತ್ತಿದೆ. ಆಕಾಂಕ್ಷಿಗಳು ಪರೀಕ್ಷೆಯಲ್ಲಿ ಯಶಸ್ಸು ಗಳಿಸಲು ಮತ್ತು ಬ್ಯಾಂಕ್ ಉದ್ಯೋಗಿಯಾಗಿ ಆಯ್ಕೆಯಾಗಲು ಸರಿಯಾದ ತಯಾರಿಯನ್ನು ಹೊಂದಿರಬೇಕು ಎಂಬುದನ್ನು ಸ್ಪರ್ಧೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳ ಸ್ಸಂಖ್ಯೆ ಸೂಚಿಸುತ್ತದೆ.

ಒಂದು ಕಾಲದಲ್ಲಿ ಕಾಮರ್ಸ್ ಪದವಿ ಓದಿದವರು ಕೃಷಿ ಪದವಿ ಅಧ್ಯಯನ ಮಾಡಿದವರಿಗಷ್ಟೇ ಬ್ಯಾಂಕಗಳಲ್ಲಿ ಉದ್ಯೋಗ ಎನ್ನುವಂತಿತ್ತು. ಆದರೆ, ಈಗ ಇವೆರಡರ ಜೊತೆಗೆ, ಕಾನೂನು, ಎಂಜಿನಿಯರಿಂಗ್, ಮಾರ್ಕೆಟಿಂಗ್, ಮ್ಯಾನೇಜ್ಮೆಂಟ್ ಸೇರಿದಂತೆ ಬೇರೆ ಬೇರೆ ವಿಷಯಗಳಲ್ಲಿ ಪದವಿ ಪಡೆದಿರುವವರಿಗೂ ಬ್ಯಾಂಕ್ ಉದ್ಯೋಗ ಕೈಬೀಸಿ ಕರೆಯುತ್ತಿದೆ. ಇಂಥ ವಿಶೇಷ ಪದವಿಗಳೊಂದಿಗೆ ಕೆಲಸದ ಅನುಭವವಿರುವನ್ನು ವಿಶೇಷ ಅಧಿಕಾರಿ (ಸ್ಪೆಷಲಿಸ್ಟ್ ಆಫೀಸರ್) ಹುದ್ದೆಗೆ ನೇಮಕ ಮಾಡಿಕೊಳ್ಳುತ್ತಿದೆ. ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್- ಐಬಿಪಿಎಸ್) ದೇಶದ ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಇಂಥ ಸ್ಪೆಷಲ್ ಆಫೀಸರ್ಸಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಗಾಗ್ಗೆ ನೇಮಕ ಮಾಡಿಕೊಳ್ಳುತ್ತಿರುತ್ತದೆ. ಅದರಂತೆ ಈ ವರ್ಷವೂ ದೇಶದ ಐದು ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ 896 ಸ್ಪೆಷಲ್ ಆಫೀಸರ್ಸ್ ನೇಮಕ ಮಾಡಿಕೊಳ್ಳುವುದಾಗಿ ಅಧಿಸೂಚನೆ ಹೊರಡಿಸಿದೆ.

application from
Businesswoman Interviewing

ಆಗಸ್ಟ್ 1 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಇದೇ 21 ಅರ್ಜಿ ಸಲ್ಲಿಕೆಗೆ ಕೊನೆ ದಿನ. ಆನ್ಲೈನ್ ಮೂಲಕ (https://www.ibps.in) ಅರ್ಜಿ ಸಲ್ಲಿಸಬೇಕು. ಎಲ್ಲ ಹುದ್ದೆಗಳು ಸ್ಕೇಲ್ -1 ಅಧಿಕಾರಿ ಹಂತದ ಹುದ್ದೆಗಳಾಗಿವೆ.

ಯಾವ್ಯಾವಹುದ್ದೆಗಳು?/ಯಾವ್ಯಾವ ಬ್ಯಾಂಕ್‌ಗಳಲ್ಲಿ ಹುದ್ದೆ?

  ಐಟಿ ಆಫೀಸರ್ಅಗ್ರಿಕಲ್ಬರಲ್ ಫೀಲ್ಡ್ ಆಫೀಸರ್ರಾಜ್ಭಾ ಷಾ ಅಧಿಕಾರಿಲಾ ಆಫೀಸರ್ಎಚ್ಆರ್/ಪರ್ಸನಲ್ ಆಫೀಸರ್ಮಾರ್ಕೆಟಿಂಗ್ ಆಫೀಸರ್
1ಬ್ಯಾಂಕ್ ಆಫ್ ಇಂಡಿಯಾ   510 
2ಇಂಡಿಯನ್ ಒವರಸೀಸ್ ಬ್ಯಾಂಕ್20  15 5
3uco bank 36    
4Canara bk   5  
5ಪಂಜಾಬ್ ನ್ಯಾಷನಲ್ ಬ್ಯಾಂಕ್1503102510015200
 total1703462512525205
ಅರ್ಜಿ ಶುಲ್ಕ : ಸಾಮಾನ್ಯ , ಒಬಿಸಿ ಹಾಗೂ ಇತರೆ ಅಭ್ಯರ್ಥಿಗಳಿಗೆ: ₹850. ಪ.ಜಾ, ಪ.ಪಂ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಹಾಗೂ ಮಾಜಿ ಯೋಧರಿಗೆ ₹175. ನೋಂದಣಿ ನಂತರ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು. ಅರ್ಜಿ ಶುಲ್ಕದ ಜೊತೆಯಲ್ಲಿ ಇಂಟಿಮೇಷನ್ ಶುಲ್ಕಗಳನ್ನು ಅಭ್ಯರ್ಥಿಯು ಭರಿಸಬೇಕಾಗುತ್ತದೆ.

ವಯೋಮಿತಿ:  01.08.2024 ಕ್ಕೆ ಕನಿಷ್ಠ 20 ವರ್ಷ  ಹಾಗೂ ಗರಿಷ್ಡ 30 ವರ್ಷಗಳಿಗಿಂತ ಹೆಚ್ಚಿರಬಾರದು. ಅಂದರೆ ಅಭ್ಯರ್ಥಿಗಳು 02.08.1994 ಕ್ಕಿಂತ ಮುಂಚಿತವಾಗಿ ಮತ್ತು 01.08.2004ರ ನಂತರ ಜನಿಸಿರಬಾರದು. ಸರ್ಕಾರದ ನಿಯಮಾನುಸಾರ ಎಸ್.ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳಷ್ಟು ವಯೋಮಿತಿ ಸಡಿಲಿಕೆ ಮಾಡಲಾಗಿದೆ.

Businesswoman Interviewing
Businesswoman Interviewing

ನೇಮಕಾತಿ ಪ್ರಕ್ರಿಯೆ: ಮೂರು ಹಂತಗಳಲ್ಲಿ ನೇಮಕಾತಿ ನಡೆಯಲಿದೆ. ಈ ಪ್ರಕ್ರಿಯೆಯಲ್ಲಿ ಪೂರ್ವ ಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ಇರಲಿದೆ. ಎರಡೂ ಲಿಖಿತ ಪರೀಕ್ಷೆಗಳೂ ಆನ್ಲೈನ್ ಮೂಲಕ ನಡೆಯಲಿವೆ. ಪೂರ್ವಭಾವಿ ಪರೀಕ್ಷೆಯಲ್ಲಿ ಆಯ್ಕೆಯಾದವರು, ಮುಖ್ಯ ಪರೀಕ್ಷೆಗೆ ಹಾಜರಾಗಬೇಕು. ಮುಖ್ಯ ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಸಂದರ್ಶನಕ್ಕೆ ಆಹ್ವಾನಿಸಲಾಗುವುದು. ತಪ್ಪು ಉತ್ತರಗಳಿಗೆ ಋಣಾತ್ಮಕ ಮೌಲ್ಯಮಾಪನವಿದೆ. ಪರೀಕ್ಷೆಗಳು ಇಂಗ್ಲಿಷ್/ ಹಿಂದಿ ಭಾಷೆಯಲ್ಲಿರಲಿದೆ.

ನೆನಪಿಡಿ: ಒಬ್ಬ ಅಭ್ಯರ್ಥಿ ಒಂದು ಹುದ್ದೆಗೆ ಮಾತ್ರ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ವೆಬ್ ಲಿಂಕ್: https://www.ibps.in/index.php/specialist-officers-xiv/https:/ ಹಾಗೂ ಅಧಿಸೂಚನೆಗೆ:www.ibps.in

ಪರೀಕ್ಷಾ ಪ್ರಕ್ರಿಯೆ: ಮೊದಲನೇ ಹಂತ– ಪೂರ್ವಬಾವಿ ಪರೀಕ್ಷೆ. ಇದು ಈ ವರ್ಷದ  ನವೆಂಬರ್‌ ನಲ್ಲಿ ನಡೆಯಲಿದೆ. ಎರಡನೇ ಹಂತ– ಮುಖ್ಯ ಪರೀಕ್ಷೆ. ಇದು ಡಿಸೆಂಬರ್ ನಲ್ಲಿ ನಿಗದಿಯಾಗಿದೆ. ಮೂರನೇ ಹಂತ– ಸಂದರ್ಶನ– 2025 ರ ಫೆಬ್ರವರಿ ಅಥವಾ ಮಾರ್ಚ್‌ನಲ್ಲಿ ನಡೆಯುವ ಸಾಧ್ಯತೆ ಇದೆ.

ಪರೀಕ್ಷಾ ಕೇಂದ್ರಗಳು

ಪೂರ್ವಭಾವಿ ಪರೀಕ್ಷೆ (ಪ್ರಿಲಿಮ್ಸ್): ಬೆಂಗಳೂರು,ಬೆಳಗಾವಿ, ಧಾರವಾಡ, ಕಲಬುರಗಿ, ಹುಬ್ಬಳ್ಳಿ- ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ.

ಮುಖ್ಯ ಪರೀಕ್ಷೆ: ಬೆಂಗಳೂರು, ಧಾರವಾಡ, ಹುಬ್ಬಳ್ಳಿ, ಮಂಗಳೂರು

ಶೈಕ್ಷಣಿಕ ಅರ್ಹತೆ: (21.08.2024 ಕ್ಕೆ ಅನ್ವಯಿಸುವಂತೆ)

1) ಐಟಿ ಆಫೀಸರ್ ಹುದ್ದೆಗೆ: ಕಂಪ್ಯೂಟರ್ ಮತ್ತು ಎಲೆಕ್ಟ್ರಾನಿಕ್ಸ್ ವಿಷಯಕ್ಕೆ ಸಂಬಂಧಿಸಿದ ನಾಲ್ಕು ವರ್ಷಗಳ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು ಅಥವಾ ಸ್ನಾತಕೋತ್ತ ರ ಪದವಿ ಪಡೆದಿರಬೇಕು ಅಥವಾ ಪದವಿ ಜೊತೆಯಲ್ಲಿ DOEACC “B” ಲೆವೆಲ್ ಪರೀಕ್ಷೆ ಪಾಸಾಗಿರಬೇಕು.

2) ಅಗ್ರಿಕಲ್ಬ ರಲ್ ಫೀಲ್ಡ್ ಆಫೀಸರ್: ಕೃಷಿ/ತೋಟಗಾರಿಕೆ / ಪಶುಸಂಗೋಪನೆ,/ ಪಶು ವೈದ್ಯಕೀಯ ವಿಜ್ಞಾನ/ ಡೇರಿ ಸೈನ್ಸ್/ ಅಗ್ರಿ ಎಂಜಿನಿಯರಿಂಗ್/ ಮೀನುಗಾರಿಕೆ ವಿಜ್ಞಾನ/ ಮೀನು ಸಾಕಣೆ, ಮಾರ್ಕೆಟಿಂಗ್ ಮತ್ತು ಸಹಕಾರ/ ಸಹಕಾರ ಮತ್ತು ಬ್ಯಾಂಕಿಂಗ್/ ಕೃಷಿ-ಅರಣ್ಯ /ಅರಣ್ಯ / ಕೃಷಿ ಜೈವಿಕ ತಂತ್ರಜ್ಞಾನ/ ಆಹಾರ ವಿಜ್ಞಾನ/ ಕೃಷಿ ವ್ಯ ವಹಾರ ನಿರ್ವ ಹಣೆ/ ಆಹಾರ ತಂತ್ರಜ್ಞಾನ/ ಡೇರಿ ತಂತ್ರಜ್ಞಾನ / ಕೃಷಿ ಎಂಜಿನಿಯರಿಂಗ್/ ರೇಷ್ಮೆ ಕೃಷಿ/ ಮೀನುಗಾರಿಕೆ ಎಂಜಿನಿಯರಿಂಗ್ ನಾಲ್ಕು ವರ್ಷಗಳ ಪದವಿ ಪಡೆದಿರಬೇಕು.

3) ಲಾ ಆಫೀಸರ್: ಕಾನೂನು ವಿಷಯದಲ್ಲಿ ಪದವಿ ಪಡೆದಿರಬೇಕು ಮತ್ತು ಬಾರ್ ಕೌನ್ಸಿಲ್ನ ಸದಸ್ಯ ತ್ವ ಪಡೆದಿರಬೇಕು.

4) ರಾಜ್ಯ ಭಾಷಾ ಅಧಿಕಾರಿ ಹುದ್ದೆಗೆ: ಹಿಂದಿಯಲ್ಲಿ ಸ್ನಾತಕೋತ್ತ ರ ಪದವಿ, ಜೊತೆಗೆ – ಪದವಿಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಾಸ ಮಾಡಿರಬೇಕು ಅಥವಾ ಸಂಸ್ಕೃತದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಜೊತೆಗೆ ಪದವಿಯಲ್ಲಿ ಇಂಗ್ಲಿಷ್ ಮತ್ತು ಹಿಂದಿಯನ್ನು ವಿಷಯವಾಗಿ ಅಭ್ಯಾಸ ಮಾಡಿರಬೇಕು.

5) ಎಚ್ ಆರ್ / ಪರ್ಸನಲ್ ಆಫೀಸರ್: ಪದವೀಧರರಾಗಿರಬೇಕು ಮತ್ತು ಪರ್ಸನಲ್ ಮ್ಯಾನೇಜ್ಮೆಂಟ್/ಇಂಡಸ್ಟ್ರಿಯಲ್ ರಿಲೇಷನ್ಸ್ ಎಚ್ಆರ್/ ಎಚ್ ಆರ್‌ಡಿ / ಸೋಷಿಯಲ್ ವರ್ಕ್/ ಕಾರ್ಮಿಕ ಕಾನೂನು ಇದ್ಯಾವುದಾದರೂ ವಿಷಯದಲ್ಲಿ ಪೂರ್ಣಾವಧಿಯ ಸ್ನಾತಕೋತ್ತರ ಪದವಿ ಅಥವಾ ಪೂರ್ಣಾವಧಿಯ ಸ್ನಾತಕೋತ್ತರ ಅಥವಾ ಡಿಪ್ಲೊಮಾ ಮಾಡಿರಬೇಕು.

6)ಮಾರ್ಕೆಟಿಂಗ್ ಆಫೀಸರ್: ಪದವೀಧರರಾಗಿರಬೇಕು ಮತ್ತು ಎರಡು ವರ್ಷಗಳ ಪೂರ್ಣಾವಧಿ ಎಂಎಂಎಸ್ (ಮಾರ್ಕೆಟಿಂಗ್) ಎಂಬಿಎ (ಮಾರ್ಕೆಟಿಂಗ್)/ PGDBA /PGDBM/PGPM/PGDM ಮಾರ್ಕೆಟಿಂಗ್ ನಲ್ಲಿ ಸ್ಪೆಷಲೈಸೇಷನ್ ಮಾಡಿರಬೇಕು.

ಗಮನಿಸಿ: IT ಆಫೀಸರ್ ಸ್ಕೇಲ್-I ಹೊರತುಪಡಿಸಿ ಬೇರೆ ಹುದ್ದೆಗಳಿಗೆ: ಅಭ್ಯರ್ಥಿಯು ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರುವುದು ಕಡ್ಡಾಯ. ಹೀಗಾಗಿ ಕಂಪ್ಯೂಟರ್ ಕಲಿಕೆಯ ಬಗ್ಗೆ ದೃಢೀಕರಣ ಪತ್ರ ವನ್ನು ಕೂಡ ಅಭ್ಯರ್ಥಿಯು ಹೊಂದಿರಬೇಕಾಗುತ್ತದೆ.

ಇದನ್ನೂ ಓದಿ: Job Alert: ಎಲೆಕ್ಟ್ರಾನಿಕ್ಸ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಐಟಿಐ ಪಾಸಾದವರು ಅಪ್ಲೈ ಮಾಡಿ

ಕ್ರೆಡಿಟ್ ಇತಿಹಾಸ

(i) ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅವರು ಆರೋಗ್ಯಕರ ಕ್ರೆಡಿಟ್ ಇತಿಹಾಸ (Credit History) ಹೊಂದಿರಬೇಕು. ಬ್ಯಾಂಕ್ ಗೆ ಸೇರುವ ಸಮಯದಲ್ಲಿ ಕನಿಷ್ಠ ಸಿಬಿಲ್ (CIBIL)ಸ್ಕೋರ್ ಅಥವಾ ಅದಕ್ಕಿಂತ ಹೆಚ್ಚಿರುವುದನ್ನು ಖಚಿತ ಪಡಿಸಿಕೊಳ್ಳಬೇಕು. ಕನಿಷ್ಠ ಕ್ರೆಡಿಟ್ ಸ್ಕೋರ್ ಭಾಗವಹಿಸುವ ಬ್ಯಾಂಕ್ ಗಳ ನೀತಿಯ ಪ್ರಕಾರ ಇರುತ್ತದೆ. ಕಾಲಕಾಲಕ್ಕೆ ಅವುಗಳನ್ನ ತಿದ್ದುಪಡಿ ಮಾಡಲಾಗುತ್ತದೆ.

(ii) ಹುದ್ದೆಗೆ ಸೇರ್ಪಡೆಗೊಳ್ಳುವ ದಿನಾಂಕದ ಮೊದಲು CIBIL ಸ್ಥಿತಿ ನವೀಕರಿಸಬೇಕು ಅಥವಾ CIBIL ನಲ್ಲಿ ಪ್ರತಿಕೂಲವಾಗಿ ಪ್ರತಿಬಿಂಬಿತವಾಗಿರುವ ಖಾತೆಗಳಿಗೆ ಸಂಬಂಧಿಸಿದಂತೆ ಯಾವುದೇ ಬಾಕಿ ಉಳಿದಿಲ್ಲ ಎಂದು ಸಾಲದಾತರಿಂದ ನಿರಾಪೇಕ್ಷಣಾ ಪತ್ರ (NOC)ಗಳನ್ನು ಪಡೆಯಬೇಕು. ವಿಫಲವಾದರೆ ಆಫರ್ ಪತ್ರವನ್ನು ಹಿಂಪಡೆಯಲಾಗುತ್ತದೆ /ರದ್ದುಗೊಳಿಸಲಾಗುತ್ತದೆ.

ಗಮನಿಸಿ: ಯಾವುದೇ ಬ್ಯಾಂಕ್ ಖಾತೆಯನ್ನು ಹೊಂದಿರದ ಅಭ್ಯರ್ಥಿಗಳು CIBIL ಸ್ಥಿತಿಯನ್ನು ಒದಗಿಸುವ ಅಗತ್ಯ ವಿಲ್ಲ.

ನೇಮಕ ಹೇಗೆ?

ಪೂರ್ವಭಾವಿ ಪರೀಕ್ಷೆ ಒಂದು ಗಂಟೆಗಳ ಕಾಲ ನಡೆಯಲಿದ್ದು,(ಪ್ರತಿ ಪತ್ರಿಕೆಗೂ  40 ನಿಮಿಷಗಳಂತೆ  ಒಟ್ಟಾರೆ 120 ನಿಮಿಷಗಳು) 125 ಅಂಕಗಳಿಗೆ 150 ಪ್ರಶ್ನೆಗಳನ್ನು ಕೇಳಲಾಗುತ್ತದೆ. ಇದರಲ್ಲಿ ಇಂಗ್ಲೀಷ್ ಲಾಂಗ್ವೇಜ್‌ ಗೆ 50, ಕ್ವಾಂಟಿಟೇಟಿವ್  ಅಪ್ಟಿಟ್ಯೂಡ್ ಗೆ 50 ಹಾಗೂ ರೀಸನಿಂಗ್ ಎಬಿಲಿಟಿಯ 50 ಪ್ರಶ್ನೆಗಳಿರಲಿವೆ.( ಇದು ರಾಜ್‌ಭಾಷಾ ಅಧಿಕಾರಿ ಹಾಗೂ ಲಾ ಆಫೀಸರ್ ಹುದ್ದೆಗಳಿಗೆ  ಹೊರತಾಗಿ.ಇವೆರಡೂ ಹುದ್ದೆಗಳಿಗೆ ಕ್ವಾಂಟಿಟೇಟಿವ್  ಅಪ್ಟಿಟ್ಯೂಡ್ ಪರೀಕ್ಷೆ ಬದಲಾಗಿ General Awareness with Special Reference to Banking Industry 50 ಪ್ರಶ್ನೆಗಳಿರಲಿವೆ.) ಪ್ರತಿ ಪರೀಕ್ಷೆಯಲ್ಲೂ ಕನಿಷ್ಟ ಅಂಕ ಗಳಿಸಬೇಕೆಂಬ ನಿಯಮವಿದೆ. ಅದರೆ ಒಟ್ಟಾರೆ ಹೆಚ್ಚು ಅಂಕ ಗಳಿಸುವುದು ಮುಖ್ಯ.(ಆಯಾ ವರ್ಗಗಳಿಗೆ ಇರುವ ಹುದ್ದೆಗಳ ಸಂಖ್ಯೆಗಿಂತ 10 ಪಟ್ಟು ಹೆಚ್ಚು ಅಭ್ಯರ್ಥಿಗಳನ್ನ ಮುಖ್ಯ ಪರೀಕ್ಷೆಗೆ ಆಯ್ಕೆ ಮಾಡುವುದರಿಂದ 1:10 ಅನುಪಾತ) ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮುಂದಿನ ಹಂತದ ಅಂದರೆ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆಯುತ್ತಾರೆ. ಮುಖ್ಯ ಪರೀಕ್ಷೆಯು, ನಿಗದಿತ ದಿನದಂದು ಆನ್ ಲೈನ್‌ನಲ್ಲಿಯೇ ಪರೀಕ್ಷೆ ನಡೆಯಲಿವೆ. ಮುಖ್ಯ ಪರೀಕ್ಷೆಯು ವೃತ್ತಿಪರ ಜ್ಞಾನಕ್ಕೆ ಸಂಭಂದಿಸಿದ್ದು 45 ನಿಮಿಷಗಳ ಕಾಲ ನಡೆಯಲಿದ್ದು, 60 ಪ್ರಶ್ನೆಗಳನ್ನು  60 ಅಂಕಗಳಿಗೆ ಕೇಳಲಾಗುತ್ತದೆ.(ರಾಜ ಭಾಷಾ ಅಧಿಕಾರಿಗಳ ಹುದ್ದೆಗಳಿಗೆ ಡಿಸ್ಕೃಪ್ಟಿವ್ ಟೆಸ್ಟ್ ಎರಡು ಹಂತಗಳಲ್ಲಿ ನಡೆಯಲಿದ್ದು  ವೃತ್ತಿಪರ ಜ್ಞಾನಕ್ಕೆ ಸಂಭಂದಿಸಿದ 45 ಪ್ರಶ್ನೆ ಒಬ್ಜೆಕ್ಟಿವ್ ಮಾದರಿಯಲ್ಲಿದ್ದು,ವ್ತತ್ತಿಪರ ಜ್ಞಾನಕ್ಕೆ ಸಂಬಂದಿಸಿದಂತೆ ಇನ್ನೊಂದು ಡಿಸ್ಕ್ರೆಪ್ಟಿವ್ ಪತ್ರಿಕೆಯಲ್ಲಿ ಎರಡು ಪ್ರಶ್ನೆಗಳಿರಲಿದ್ದು ಅವಧಿ ಎರಡೂ ಪರೀಕ್ಷೆಗೆ 30 ನಿಮಿಷಗಳಂತೆ ಒಟ್ಟಾರೆ ಒಂದು ಗಂಟೆಯ ಅವಧಿ ನೀಡಲಾಗಿದ್ದು. ಅಭ್ಯರ್ಥಿಗಳು ಕಂಪ್ಯೂಟರ್ ನಲ್ಲಿಯೇ ಉತ್ತರವನ್ನು ಬರೆಯಬೇಕು.

ಬಾಕ್ಸ ಗಮನಿಸಿ: ಈ ಹಿಂದಿನಂತೆ ಇದ್ದ  ಮುಖ್ಯ ಪರೀಕ್ಷೆಯಲ್ಲಿ ಬದಲಾವಣೆ ಮಾಡಿದ್ದು ಈ ಸಲ ವೃತ್ತಿಪರ ಜ್ಞಾನದ ಪರೀಕ್ಷೆ ಬರೆಯಬೇಕು (ಸ್ಪೇಶಲಿಸ್ಟ್ ಹುದ್ದೆಗಳಾಗಿರೋದರಿಂದ)

ಇಂಗ್ಲೀಷ್ ಭಾಷೆ ಒಂದನ್ನು ಹೊರತುಪಡಿಸಿ ಮತ್ತೆಲ್ಲಾ ಪ್ರಶ್ನೆಗಳು ಇಂಗ್ಲೀಷ್ ಮತ್ತು ಹಿಂದಿಯಲ್ಲಿ ಇರುತ್ತದೆ. ತಪ್ಪು ಉತ್ತರ ಗುರುತಿಸಿದಲ್ಲಿ, ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆಗಳಲ್ಲಿ ಆಯಾ ವಿಷಯಕ್ಕೆ ಪ್ರತಿ ಪ್ರಶ್ನೆಗೆ ನಿಗದಿ ಪಡಿಸಿದ ಅಂಕದ 0.25 ಅಂಕವನ್ನು ಋಣಾತ್ಮಕ ಮೌಲ್ಯಮಾಪನದ ನಿಯಮದಂತೆ ಗಳಿಸಿದ ಅಂಕದಿಂದ ಕಳೆಯಲಾಗುತ್ತದೆ.

ಕನ್ನಡದಲ್ಲಿ ಪರೀಕ್ಷೆ ನಡೆಯೊಲ್ಲ. ಮುಖ್ಯ ಪರೀಕ್ಷೆಗಳಲ್ಲಿ ಬ್ಯಾಂಕ್ ನಿಗದಿಪಡಿಸಿದಷ್ಟು ಅಂಕ ಪಡೆದವರು ಮಾತ್ರ ಮೂರನೇ ಹಂತಕ್ಕೆ ಅರ್ಹರಾಗುತ್ತಾರೆ. ಇವುಗಳಿಗೆ ಬೇಕಾಗುವ ಕನಿಷ್ಠ ಅರ್ಹತಾ ಅಂಕಗಳನ್ನು ಬ್ಯಾಂಕ್ ನಿರ್ಧರಿಸುತ್ತದೆ. ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಸಂದರ್ಶನ (100 ಅಂಕಗಳು) ಬ್ಯಾಂಕ ನಡೆಸಲಿವೆ. ಸಂದರ್ಶನದ ಸಂದರ್ಭದಲ್ಲಿ ‘ಒಬಿಸಿ’ ವರ್ಗದ  ಅಡಿಯಲ್ಲಿ ಹಂತ-3 ಕ್ಕೆ ಅರ್ಹತೆ ಪಡೆದ ಅಭ್ಯರ್ಥಿಗಳು ಒಬಿಸಿ ಪ್ರಮಾಣಪತ್ರವನ್ನು ‘ಕೆನೆರಹಿತ ಪದರ'(‘Non-Creamy layer’) ಷರತ್ತನ್ನು ಒಳಗೊಂಡಿರುವುದನ್ನು ಸಲ್ಲಿಸಬೇಕಾಗುತ್ತದೆ. ಒಬಿಸಿ ಎಂದು ನೋಂದಾಯಿಸಿ ಕೊಂಡಿರುವ ಆದರೆ (‘Non-Creamy layer’)’ಕೆನೆರಹಿತ ಪದರ’ ಪ್ರಮಾಣಪತ್ರವನ್ನು ಸಲ್ಲಿಸದಿದ್ದಲ್ಲಿ ಅವರನ್ನು ಸಾಮಾನ್ಯ ವರ್ಗದ ಅಡಿಯಲ್ಲಿ ಸಂದರ್ಶನಕ್ಕೆ ಅವಕಾಶ ನೀಡಲಾಗುವುದಿಲ್ಲ. EWS ವರ್ಗದ ಅಡಿಯಲ್ಲಿ ಹಂತ-3 ಕ್ಕೆ ಅರ್ಹತೆ ಪಡೆದ ಅಭ್ಯರ್ಥಿಗಳು ಆರ್ಥಿಕ ವರ್ಷದ ಒಟ್ಟು ವಾರ್ಷಿಕ ಆದಾಯದ ಆಧಾರದ ಮೇಲೆ EWS ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ. EWS ಎಂದು ನೋಂದಾಯಿಸಿಕೊಂಡ ಅಭ್ಯರ್ಥಿಗಳು ಆರ್ಥಿಕ ವರ್ಷದ ಒಟ್ಟು ವಾರ್ಷಿಕ ಆದಾಯದ ಆಧಾರದ ಮೇಲೆ EWS ಪ್ರಮಾಣಪತ್ರವನ್ನು ಸಲ್ಲಿಸದಿದ್ದಲ್ಲಿ ಅಂತವರನ್ನು ಸಾಮಾನ್ಯ ವರ್ಗದ ಅಡಿಯಲ್ಲಿ ಸಂದರ್ಶನಕ್ಕೆ ಅವಕಾಶ ನೀಡಲಾಗುವುದಿಲ್ಲ.

ಇದನ್ನೂ ಓದಿ: Job Alert: CDACಯಲ್ಲಿದೆ 250 ಹುದ್ದೆ; ಆನ್‌ಲೈನ್‌ ಮೂಲಕ ಇಂದೇ ಅಪ್ಲೈ ಮಾಡಿ

ಆಯ್ಕೆ ಪಟ್ಟಿ

ಅಂತಿಮ ಸುತ್ತಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಂತ- II ಪ್ರತ್ಯೇಕವಾಗಿ ಅರ್ಹತೆ ಪಡೆದಿರಬೇಕು.ಮುಖ್ಯ ಪರೀಕ್ಷೆಯಲ್ಲಿ  ಪಡೆದ ಅಂಕಗಳು (ಹಂತ- 2), ವಸ್ತುನಿಷ್ಠ ಪರೀಕ್ಷೆ ಮತ್ತು ವಿವರಣಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಹಾಗೂ ಹಂತ-3 ರಲ್ಲಿ ಪಡೆದ ಅಂಕಗಳಿಗೆ ಸೇರಿಸಲಾಗುತ್ತದೆ. ಅರ್ಹತೆ ಪಟ್ಟಿಗೆ ಪ್ರಾಥಮಿಕ ಪರೀಕ್ಷೆಯಲ್ಲಿ (ಹಂತ -1) ಪಡೆದ ಅಂಕಗಳನ್ನು ಪರಿಗಣಿಸುವುದಿಲ್ಲ. ಹಂತ-2 ರಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳನ್ನು (60 ಅಂಕಗಳನ್ನು 100 ಕ್ಕೆ ಪರಿವರ್ತನೆ ಮಾಡಿ) ಅದರ  80% ಅಂಕಗಳು ಮತ್ತು ಅಭ್ಯರ್ಥಿಗಳ ಹಂತ-3 ರಲ್ಲಿ ಪಡೆದ ಅಂಕಗಳನ್ನು (100 ಅಂಕಗಳಲ್ಲಿ)  ಅದರ 20% ಅಂಕಗಳನ್ನು ಸೇರಿಸಿ(100 ರಲ್ಲಿ) ಪರಿವರ್ತಿತ ಅಂಕಗಳನ್ನು ಒಟ್ಟು ಸೇರಿಸಿ ನಂತರ ಅಂತಿಮ ಅರ್ಹತಾ ಪಟ್ಟಿಯನ್ನು ತಯಾರಿಸಲಾಗುತ್ತದೆ. ಹಂತ-2 ಮತ್ತು ಹಂತ- 3 ರಲ್ಲಿ ಉನ್ನತ ಶ್ರೇಣಿಯನ್ನು ಪಡೆದ ಪ್ರತಿ ವರ್ಗದ ಅಭ್ಯರ್ಥಿಗಳಿಗೆ ಮಾತ್ರ ಆಯ್ಕೆ ಮಾಡಲಾಗುವುದು.

Continue Reading
Advertisement
Muda Scam
ಕರ್ನಾಟಕ3 mins ago

Muda Scam: ಸಿಎಂ ವಿರುದ್ಧದ ಸ್ನೇಹಮಯಿ ಕೃಷ್ಣ ಅರ್ಜಿ ಆದೇಶ ಆ.20ಕ್ಕೆ ಕಾಯ್ದಿರಿಸಿದ ಕೋರ್ಟ್‌; ಅಬ್ರಹಾಂ ಅರ್ಜಿ ವಿಚಾರಣೆ ಮುಂದೂಡಿಕೆ

Lakshmi Hebbalkar
ಕರ್ನಾಟಕ11 mins ago

Lakshmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಅಹವಾಲು ಸಲ್ಲಿಸಲು ಸಾಲುಸಾಲು ಜನ

Independence day 2024
ದೇಶ16 mins ago

Independence day 2024: ಆಗಸ್ಟ್ 15ರಂದು ಪ್ರಧಾನಿ ಮೋದಿ ಭಾಷಣವನ್ನು ಎಷ್ಟು ಹೊತ್ತಿಗೆ, ಎಲ್ಲಿ ವೀಕ್ಷಿಸಬಹುದು?

Ian Bell
ಕ್ರಿಕೆಟ್21 mins ago

Ian Bell : ಲಂಕಾ ತಂಡದ ನೂತನ ಬ್ಯಾಟಿಂಗ್​ ಕೋಚ್​ ಆಗಿ ಇಯಾನ್ ಬೆಲ್​ ನೇಮಕ

Prime fashion week
ಫ್ಯಾಷನ್28 mins ago

Prime Fashion week: ಪ್ರೈಮ್‌ ಫ್ಯಾಷನ್‌ ವೀಕ್‌ನಲ್ಲಿ ಸಂಜಯ್‌ ಚೊಲಾರಿಯಾ ಡಿಸೈನರ್‌ ವೇರ್ಸ್ ಅನಾವರಣ

Physical abuse
ಧಾರವಾಡ35 mins ago

Physical Abuse : ಅಪ್ರಾಪ್ತೆಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೊ ಹರಿಬಿಟ್ಟ ಯುವಕ!

Kaun Banega Crorepati Season 16
ಬಾಲಿವುಡ್51 mins ago

Kaun Banega Crorepati Season 16: 25 ಲಕ್ಷ ರೂ. ಪ್ರಶ್ನೆಗೆ ಉತ್ತರಿಸಲು ವಿಫಲರಾದ ಬೆಂಗಳೂರಿನ ಎಂಜಿನಿಯರ್! ಏನಿತ್ತು ಆ ಪ್ರಶ್ನೆ?

Tata Nexon EV
ಆಟೋಮೊಬೈಲ್1 hour ago

Tata Nexon EV: ಕೇವಲ 200 ರೂ. ಖರ್ಚಿನಲ್ಲಿ ಈ ಕಾರು 323 ಕಿ.ಮೀ ದೂರ ಸಾಗುತ್ತದೆ!

Arshad Nadeem
ಪ್ರಮುಖ ಸುದ್ದಿ1 hour ago

Arshad Nadeem : ಲಷ್ಕರ್ ಉಗ್ರನ ಜತೆ ಕಾಣಿಸಿಕೊಂಡ ಪಾಕಿಸ್ತಾನದ ಒಲಿಂಪಿಕ್ಸ್​ ಚಿನ್ನದ ಪದಕ ವಿಜೇತ ಅರ್ಷದ್​ ನದೀಮ್​!

World Organ Donation Day
ಆರೋಗ್ಯ1 hour ago

World Organ Donation Day: ಇಂದು ವಿಶ್ವ ಅಂಗಾಂಗದಾನ ದಿನ; ಯಾರದ್ದೋ ಬದುಕಿಗೆ ಭರವಸೆಯಾಗೋಣ! ನೋಂದಣಿ ಹೇಗೆ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌