Love Failure : ಹುಬ್ಬಳ್ಳಿ ಬಳಿಕ ಮಂಗಳೂರಿನಲ್ಲಿ ಪ್ರೇಮ ವೈಫಲ್ಯಕ್ಕೆ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದ ಪಾಗಲ್‌ ಪ್ರೇಮಿ - Vistara News

ದಕ್ಷಿಣ ಕನ್ನಡ

Love Failure : ಹುಬ್ಬಳ್ಳಿ ಬಳಿಕ ಮಂಗಳೂರಿನಲ್ಲಿ ಪ್ರೇಮ ವೈಫಲ್ಯಕ್ಕೆ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದ ಪಾಗಲ್‌ ಪ್ರೇಮಿ

Love Failure : ಯುವತಿ ಮಸೇಜ್‌ ಮಾಡಲಿಲ್ಲ ಎಂದು ಸಿಟ್ಟಾದ ಪಾಗಲ್‌ ಪ್ರೇಮಿಯೊಬ್ಬ ಕ್ಲಾಸ್‌ ರೂಮಿಗೆ ತೆರಳಿ ಕತ್ತರಿಯಿಂದ ಇರಿದಿದ್ದಾನೆ. ಗಂಭೀರವಾಗಿ ಹಲ್ಲೆಗೊಳಗಾದ ಯುವತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯುವಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ.

VISTARANEWS.COM


on

love failure
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣ (Love Failure) ಮರೆಯಾಗುವ ಮುನ್ನವೇ ಮಂಗಳೂರಿನಲ್ಲಿ ಮತ್ತೊಬ್ಬ ಯುವಕ ಪ್ರೇಮ ವೈಫಲ್ಯಕ್ಕೆ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ಘಟನೆ ನಡೆದಿದೆ.

ನಿನ್ನೆ ಸೋಮವಾರ ಮುಂಜಾನೆ ಮೂಡಬಿದರೆಯ ಆಳ್ವಾಸ್ ಕಾಲೇಜಿನಲ್ಲಿ ಘಟನೆ ನಡೆದಿದೆ. ತುಮಕೂರು ಮೂಲದ ಮಂಜುನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ಮೂಲದ ಯುವತಿ ಆಳ್ವಾಸ್‌ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದಳು.

ಈ ಮಂಜುನಾಥ್ ಹಾಗು ಹಲ್ಲೆಗೊಳಗಾದ ಯುವತಿ ಪಿಯುಸಿ ತನಕ ಜತೆಯಲ್ಲೇ ವಿದ್ಯಾಭ್ಯಾಸ ಮಾಡಿದ್ದರು. ಬಳಿಕ ಮಂಜುನಾಥ್‌ ಕಾಲೇಜು ತೊರೆದು ಮನೆಗೆ ತೆರಳಿದ್ದ. ಯುವತಿ ಮೆಸೇಜ್‌ಗೆ ಉತ್ತರಿಸುತ್ತಿಲ್ಲ ಎಂದು ಕೋಪಗೊಂಡ ಮಂಜುನಾಥ್‌ ತುಮಕೂರಿನಿಂದ ಮೂಡಬಿದರೆಗೆ ಬಂದಿದ್ದ.

ಆದರೆ ಯುವತಿ ಮಂಜುನಾಥ್‌ನನ್ನು ಭೇಟಿ ಮಾಡಲು ನಿರಾಕರಿಸಿದ್ದಳು. ಇದರಿಂದ ಮತ್ತಷ್ಟು ಕೆರಳಿದ ಮಂಜುನಾಥ್‌ ಕಾಲೇಜಿಗೆ ನುಗ್ಗಿ ತರಗತಿಯಲ್ಲಿದ್ದ ಯುವತಿಗೆ ಕತ್ತರಿಯಿಂದ ಇರಿದಿದ್ದಾನೆ. ಘಟನೆಯಲ್ಲಿ ಯುವತಿಯ ಮುಖಕ್ಕೆ ಗಾಯವಾಗಿದೆ.

ಕೂಡಲೇ ಇತರೆ ವಿದ್ಯಾರ್ಥಿಗಳು ಮಂಜುನಾಥ್‌ನನ್ನು ಹಿಡಿದುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಂಜುನಾಥ್‌ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Self harming : ಶಿವಮೊಗ್ಗದಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮದುವೆಗೆ ಪೋಷಕರ ವಿರೋಧ; ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ

ಬಾಗಲಕೋಟೆ: ಮದುವೆಗೆ ಪೋಷಕರು ವಿರೋಧಿಸಿದಕ್ಕೆ ಪ್ರೇಮಿಗಳಿಬ್ಬರು (Love Case) ನೇಣಿಗೆ ಶರಣಾಗಿದ್ದಾರೆ. ಬಾಗಲಕೋಟೆಯ ರಬಕವಿ-ಬನಹಟ್ಟಿ ತಾಲೂಕಿನ ನಂದಗಾಂವ ಗ್ರಾಮದಲ್ಲಿ ಘಟನೆ ನಡೆದಿದೆ.

ಸಚಿನ್ ದಳವಾಯಿ, ಪ್ರಿಯಾ ಮಡಿವಾಳರ ಮೃತ ಪ್ರೇಮಿಗಳು. ಇವರಿಬ್ಬರು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಮನೆಯಲ್ಲಿ ಇವರಿಬ್ಬರ ಮದುವೆಗೆ ವಿರೋಧ ವ್ಯಕ್ತವಾಗಿತ್ತು. ಇದರಿಂದ ಮನನೊಂದು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ‌ ಮಾಡಿಕೊಂಡಿದ್ದಾರೆ.

ಮಹಾಲಿಂಗಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ .ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಉತ್ತರ ಧ್ರುವದಿಂದ ದಕ್ಷಿಣ ಧ್ರುವದ ಕಡೆ ಮುಖ ಮಾಡಿದ ಮಳೆರಾಯ

Karnataka Weather Forecast : ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ (Rain News) ರೈತರು ಕಂಗಲಾಗಿದ್ದಾರೆ. ಮಳೆಯ ಆರ್ಭಟಕ್ಕೆ ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿದ್ದು ಜಮೀನುಗಳು ನೀರುಪಾಲಾಗಿವೆ.

VISTARANEWS.COM


on

By

karnataka Weather Forecast
Koo

ಹಾಸನ: ಮಳೆರಾಯ ಉತ್ತರ ಧ್ರುವದಿಂದ ದಕ್ಷಿಣ ಧ್ರುವದ ಕಡೆ ಮುಖ ಮಾಡಿದ್ದಾನೆ. ಮುಂದಿನ ಒಂದು ವಾರದಲ್ಲಿ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

ಹಾಸನದ ವಿವಿಧೆಡೆ ಕಳೆದ ರಾತ್ರಿಯಿಂದ ಧಾರಾಕಾರ ಮಳೆ ಸುರಿದಿದೆ. ಭಾರಿ ಮಳೆಗೆ ನಾಟಿ ಮಾಡಿದ್ದ ಭತ್ತದ ಸಸಿಗಳು ಕೊಚ್ಚಿ ಹೋಗಿವೆ. ಹಾಸನದ ಆಲೂರು ತಾಲೂಕಿನ ಬೆಂಬಳೂರು ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ಹಳ್ಳಕೊಳ್ಳಗಳು ಉಕ್ಕಿ ಹರಿದಿದೆ. ಭತ್ತದ ಗದ್ದೆಗಳಿಗೆ ಬಾರಿ ಪ್ರಮಾಣದ ನೀರು ನುಗ್ಗಿದೆ.

ನೀರಿನ‌ ರಭಸಕ್ಕೆ ಗದ್ದೆಯ ಬದುಗಳು ಕೊಚ್ಚಿ ಹೋಗಿವೆ. ನಾಟಿ ಮಾಡಲು ಸಿದ್ಧತೆ ನಡೆಸಿದ್ದ ರೈತರ ಆಸೆಗೆ ಮಳೆರಾಯ ತಣ್ಣೀರು ಎರಚಿದ್ದಾನೆ. ಐವತ್ತಕ್ಕೂ ಹೆಚ್ಚು ಎಕರೆ ಪ್ರದೇಶದ ಭತ್ತದ ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿದೆ. ಧಾರಾಕಾರ ಮಳೆಯಿಂದ ಕಂಗಾಲಾದ ರೈತರು ಆಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: CM Siddaramaiah: ತುಂಗಭದ್ರಾ ಜಲಾಶಯ ಮತ್ತೆ ತುಂಬುವ ನಿರೀಕ್ಷೆ, ರೈತರಿಗೆ ತೊಂದರೆಯಾಗದಂತೆ ಕ್ರಮ: ಸಿಎಂ

ಸರ್ಕಾರಿ ಶಾಲೆ ಜಲಾವೃತ, ರಸ್ತೆಗಳೆಲ್ಲವೂ ಗುಂಡಿ ಮಯ

ನಿನ್ನೆ ಸುರಿದ ಮಳೆಗೆ ಸರ್ಕಾರಿ ಶಾಲೆಯೊಂದು ಜಲಾವೃತಗೊಂಡಿದೆ. ಬೆಂಗಳೂರಿನ ವರ್ತೂರಿನ ಸಿದ್ದಾಪುರ ಸರ್ಕಾರಿ ಶಾಲೆಯ ಆವರಣದ ಸುತ್ತಲೂ ಮಳೆ ನೀರು ನಿಂತಿತ್ತು. ಬೆಳಗ್ಗೆ ಶಾಲೆಗೆ ಬಂದ ಮಕ್ಕಳು, ಎರಡು ಗಂಟೆಗಳ‌ ಕಾಲ ಶಾಲಾ ಕೊಠಡಿಗಳು ಸ್ವಚ್ಚತೆ ಮಾಡಿದರು.

ಇತ್ತ ಮಳೆ ನಿಂತು ಹೋದಮೇಲೆ ಗುಂಡಿಗಳು ಬಿದ್ದಿವೆ. ಎರಡು ದಿನದಿಂದ ಸುರಿದ ಮಳೆಗೆ ಬೆಂಗಳೂರಿನ ಟೌನ್ ಹಾಲ್ ಎದುರೇ 50ಕ್ಕೂ ಹೆಚ್ಚು ರಸ್ತೆ ಗುಂಡಿ ಬಿದ್ದಿವೆ. ಬಿಬಿಎಂಪಿಯಿಂದ 500 ಮೀಟರ್ ದೂರದಲ್ಲಿರುವ ಟೌನ್ ಹಾಲ್‌ ಸುತ್ತಮುತ್ತ ಇರುವ ಗುಂಡಿಗಳು ಬೈಕ್ ಸವಾರರ ಪಾಲಿಗೆ ಮೃತ್ಯುಕೂಪವಾಗಿದೆ.

ಕ್ಯಾರೆ ಎನ್ನದ ಬಿಬಿಎಂಪಿ

ಗುಂಡಿ ಫೋಟೋ ತೆಗೆದು ಕಳಿಸಿ ಅಂದರೆ ಬಿಬಿಎಂಪಿ ಕೆಲಸ ಮುಗಿತಾ? ಕೇವಲ ಆ್ಯಪ್ ಮಾಡಿ ಕೈತೊಳೆದು ಕೊಳ್ಳುತ್ತಿದೆ. ಮೊಣಕಾಲು ಉದ್ದ ಗುಂಡಿ ಇದ್ದರೂ ಬಿಬಿಎಂಪಿ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ. ಬೆಂಗಳೂರಿನ ಸಿಂಗಯ್ಯನಪಾಳ್ಯ ರಸ್ತೆಯ ಮಧ್ಯದಲ್ಲಿ ಯಮ ಸ್ವರೂಪಿ ಗುಂಡಿ ಬಿದ್ದಿದೆ. ಸ್ವಲ್ಪ ಎಚ್ಚರ ತಪ್ಪಿದ್ದರೂ, ಜೀವಕ್ಕೆ ಅಪಾಯ ಗ್ಯಾರಂಟಿ. ಇನ್‌ಸ್ಟಾಗ್ರಾಂ‌ಮ್‌ನಲ್ಲಿ ಪೋಸ್ಟ್ ಹಾಕಿ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: Tungabhadra Dam: ಗೇಟ್‌ ರಿಪೇರಿಗಾಗಿ 60 ಟಿಎಂಸಿ ನೀರು ಖಾಲಿ, 8 ಜಿಲ್ಲೆಗಳ ರೈತರಿಗೆ ನೀರಿಲ್ಲ!

ನಾಳೆ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ರಾಮನಗರ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಚದುರಿದಂತೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲೂ ಮಳೆಯು ಅಬ್ಬರಿಸಲಿದೆ. ಇತ್ತ ಕೊಪ್ಪಳ, ಗದಗ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಗುಡುಗು ಸಾಥ್‌ ನೀಡಲಿದೆ.

ಬೆಂಗಳೂರಲ್ಲಿ ಗುಡುಗು ಸಹಿತ ಮಳೆ

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ; ಈ ನಾಲ್ಕು ಜಿಲ್ಲೆಗಳಿಗೆ ಎಚ್ಚರಿಕೆ

Rain News: ಕರಾವಳಿ, ಮಲೆನಾಡು ಭಾಗದಲ್ಲಿ ವರುಣ ಸೈಲೆಂಟ್‌ ಆಗಿದ್ದು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯು ವೈಲೆಂಟ್‌ ಆಗಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Karnataka Weather Forecast) ಸಾಧ್ಯತೆಯಿದ್ದು, ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಮಧ್ಯಮ ಮಳೆಯಾದರೆ, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಸಾಧಾರಣದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಕೋಲಾರ, ಮಂಡ್ಯ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದೆಡೆ ಮಧ್ಯಮದಿಂದ ಕೂಡಿದ ಮಳೆಯಾಗುವ ಸಂಭವವಿದೆ.

ಉತ್ತರ ಒಳನಾಡಿನಲ್ಲಿ ರಾಯಚೂರು, ಗದಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain : ಧಾರಾಕಾರ ಮಳೆಗೆ ಕೆರೆಯಂತಾದ ಬೆಂಗಳೂರು-ಹೊಸೂರು ಹೈವೆ; ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ

ಬೆಂಗಳೂರಲ್ಲಿ ವ್ಯಾಪಕ ಮಳೆ ಎಚ್ಚರಿಕೆ

ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಗದ್ದೆಯಲ್ಲಿ ನಾಟಿ ಮಾಡುತ್ತಿದ್ದಾಗಲೇ ಬಡಿದ ಸಿಡಿಲು; 15 ಮಂದಿ ಆಸ್ಪತ್ರೆ ಪಾಲು

Karnataka Weather Forecast : ಹಲವು ದಿನದಿಂದ ಬಿಡುವು ಕೊಟ್ಟಿದ್ದ ವರುಣ ಮತ್ತೆ (Rain News) ಅಬ್ಬರಿಸುತ್ತಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಹಾಸನದಲ್ಲಿ ಸಿಡಿಲು ಬಡಿದು 15ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ.

VISTARANEWS.COM


on

By

Karnataka weather forecast
Koo

ಚಿಕ್ಕಬಳ್ಳಾಪುರ/ಹಾಸನ: ಗದ್ದೆಯಲ್ಲಿ ಭತ್ತ ನಾಟಿ ಮಾಡುತ್ತಿದ್ದ ವೇಳೆ ಮಳೆ (Karnataka Weather Forecast) ಜತೆಗೆ ಸಿಡಿಲು ಬಡಿದು ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿದೆ. ಸುಮಾರು ಹದಿನೈದು ಮಂದಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ, ಕೋರ್ಲಗದ್ದೆ ಗ್ರಾಮದಲ್ಲಿ ಘಟನೆ ನಡೆದಿದೆ.

ಕೆ.ಬಿ.ಚಂದ್ರು ಎಂಬುವವರಿಗೆ ಸೇರಿದ ಗದ್ದೆಯಲ್ಲಿ 25 ಮಂದಿ ನಾಟಿ ಮಾಡುತ್ತಿದ್ದರು. ಈ ವೇಳೆ ಗುಡುಗು, ಸಿಡಿಲು ಸಹಿತ ದಿಢೀರ್ ಮಳೆ ಶುರುವಾಗಿತ್ತು. ಭತ್ತದ ಗದ್ದೆಯಲ್ಲಿ ನಾಟಿ ಮಾಡುತ್ತಿದ್ದ ವೇಳೆಯೇ ಸಿಡಿಲಾಘಾತಕ್ಕೆ ಲತಾ (35) ಎಂಬುವವರ ಸ್ಥಿತಿ ಗಂಭೀರವಾಗಿದೆ.

ರೇಣುಕಾ (49), ಸವಿತಾ (45), ಸುಮಿತ್ರ (51), ರೇಣುಕಮ್ಮಾ (55), ನೇತ್ರ (40), ನಿರ್ಮಲ (51), ವೀಣಾ (35), ಅನಿತಾ (55) ಸೇರಿ ಹದಿನೈದು ಮಂದಿಗೆ ಸಿಡಿಲು ಬಡಿದಿದೆ. ಎಲ್ಲರಿಗೂ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ತಿಂಗಳ ಬಳಿಕ ಚಿಕ್ಕಬಳ್ಳಾಪುರದಲ್ಲಿ ವರುಣ ಪ್ರತ್ಯಕ್ಷ

ಇಷ್ಟು ದಿನ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು, ಉತ್ತರ ಒಳನಾಡಿನ ಸುತ್ತಮುತ್ತ ಮಳೆಯು ಅಬ್ಬರಿಸಿತ್ತು. ದಕ್ಷಿಣ ಒಳನಾಡಿನಲ್ಲಿ ಕಣ್ಮರೆಯಾಗಿದ್ದ ಮಳೆಯು ಇದೀಗ ಕಳೆದೆರಡು ದಿನಗಳಿಂದ‌ ವ್ಯಾಪಿಸಿದೆ. ಉತ್ತರ ಧ್ರುವದಿಂದ ದಕ್ಷಿಣ ಧ್ರುವದ ಕಡೆ ಮಳೆರಾಯ ಮುಖ ಮಾಡಿದ್ದಾನೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಂದು ತಿಂಗಳಿನಿಂದ ಬಿಡುವು ಕೊಟ್ಟಿದ್ದ ಮಳೆಯು ಭಾನುವಾರ ರಾತ್ರಿ ಇಡೀ ಗುಡುಗು, ಮಿಂಚು ಸಮೇತ ಸುರಿದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಬಿತ್ತನೆ ಮಾಡಿ ಮಳೆಗಾಗಿ ಕಾಯುತ್ತಿದ್ದ ರೈತರು ಸಂತಸಗೊಂಡಿದ್ದರು.

ಇದನ್ನೂ ಓದಿ: Bengaluru Rains : ಬೃಹತ್‌ ಗಾತ್ರದ ಮರದ ಕೊಂಬೆಗಳು ಬಿದ್ದು 6 ಮಂದಿಗೆ ಗಾಯ; ಆರೋಗ್ಯ ವಿಚಾರಿಸಿದ ಡಿಕೆ ಶಿವಕುಮಾರ್

ನಾಳೆ ಚಾಮರಾಜನಗರ, ರಾಮನಗರದಲ್ಲಿ ಭಾರಿ ಮಳೆ

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆದರೆ ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯೊಂದಿಗೆ ಗುಡುಗು ಇರಲಿದೆ. ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಾಗಿ ಶುಷ್ಕ ಹವಾಮಾನ ಇರಲಿದೆ. ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಕೆರೆಯಂತಾದ ಬೆಂಗಳೂರು-ಹೊಸೂರು ಹೈವೆ; ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ

Karnataka Rain : ನಿನ್ನೆ ಮಧ್ಯರಾತ್ರಿ ಸುರಿದ ಮಳೆಗೆ (Bengaluru Rain) ನಾನಾ ಅವಾಂತರವೇ ಸೃಷ್ಟಿಯಾಗಿದೆ. ಬೆಂಗಳೂರು-ಹೊಸೂರು ಹೆದ್ದಾರಿ ಹಾಗೂ ಡ್ಯಾಡಿಸ್ ಗಾರ್ಡನ್ ಲೇಔಟ್‌ ಜಲಾವೃತಗೊಂಡಿದೆ. ಜನರು ಹೊರಬರಲು ಆಗದೆ ಸಂಕಷ್ಟ ಎದುರಿಸುತ್ತಿದ್ದಾರೆ.

VISTARANEWS.COM


on

By

karnataka rain weather forecast
Koo

ಬೆಂಗಳೂರು ಗ್ರಾಮಾಂತರ: ಕಳೆದ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ (Karnataka Rain) ಬೆಂಗಳೂರು ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. ನಾಲ್ಕೈದು ಗಂಟೆಗಳ ಕಾಲ ಸತತವಾಗಿ ಸುರಿದ ಮಳೆಗೆ (Bengaluru rain) ಬೆಂಗಳೂರು-ಹೊಸೂರು ಹೈವೆ ಕೆರೆಯಂತಾಗಿದೆ. ಬೆಂಗಳೂರು ಹೊಸೂರು ಹೆದ್ದಾರಿಯ ಸಿಲ್ಕ್ ಬೊರ್ಡ್ ಜಂಕ್ಷನ್‌ನಲ್ಲಿ ಮೂರ್ನಾಲ್ಕು ಅಡಿಗಳಷ್ಟು ಮಳೆ ನೀರು ನಿಂತಿದೆ.

ಜಲಾವೃತಗೊಂಡ ರಸ್ತೆಯ ನೀರಿನಲ್ಲಿಯೇ ಜನರು ಓಡಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಹೆದ್ದಾರಿ ಜಲಾವೃತದಿಂದಾಗಿ ಸೋಮವಾರ ಬೆಳಗ್ಗೆ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು. ಟ್ರಾಫಿಕ್ ಜಾಮ್‌ ಜತೆಗೆ ಕೆರೆಯಂತಾದ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು. ಮೆಟ್ರೋ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಳೆ ನೀರು ಹೊರಹೋಗಲು ಯಾವುದೇ ಸೂಕ್ತ ವ್ಯವಸ್ಥೆ ಇಲ್ಲ. ಇದರಿಂದಾಗಿ ರಸ್ತೆಯೆಲ್ಲ ಜಲಾವೃತಗೊಂಡಿತ್ತು. ಪ್ರತಿ ಬಾರಿ ಮಳೆ ಬಂದಾಗ ಸಿಲ್ಕ್ ಬೋರ್ಡ್ ಜಂಕ್ಷನ್‌ ಜಲಾವೃತಗೊಳ್ಳಲಿದೆ.

ಇದನ್ನೂ ಓದಿ: Heavy Rain: ಸಿಲಿಕಾನ್‌ ಸಿಟಿಯಲ್ಲಿ ಮಳೆಯ ಅಬ್ಬರ; ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ

ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ

ಭಾರಿ ಮಳೆಗೆ ಬೆಂಗಳೂರು ಹೊರವಲಯದ ಆನೇಕಲ್‌ ತಾಲೂಕಿನ ಹೆಬ್ಬಗೋಡಿಯ ಕಮ್ಮಸಂದ್ರದ ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ ಹಾಕಲಾಗಿದೆ. ಕಳೆದ ರಾತ್ರಿಯಿಂದ ಸುರಿದ ಧಾರಾಕಾರ ಮಳೆಗೆ ಬಡಾವಣೆ ಸಂಪೂರ್ಣ ಜಲಾವೃತಗೊಂಡಿದೆ. ಮನೆಯಿಂದ ಹೊರಬರಲಾಗದೆ ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೂರಾರು ಮನೆಗಳಿರುವ ಡ್ಯಾಡಿಸ್ ಗಾರ್ಡನ್ ಲೇಔಟ್‌ನಲ್ಲಿ ಮಳೆ ನೀರು ಹೊರಹೋಗಲು ಸೂಕ್ತ ವ್ಯವಸ್ಥೆ ಇಲ್ಲದೆ ಅವಾಂತರವೇ ಸೃಷ್ಟಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ತಂಡ ದೌಡಾಯಿಸಿದ್ದು, ನಿವಾಸಿಗಳನ್ನು ಸುರಕ್ಷಿತವಾಗಿ ಮನೆಯಿಂದ ಹೊರಕರೆತರುತ್ತಿದ್ದಾರೆ.

ಕಾಲೇಜು ಆವರಣದಲ್ಲಿ ಜಲಾವೃತ

ಬೆಂಗಳೂರು ಗ್ರಾಮಾಂತರದ ಆನೇಕಲ್ ಪಟ್ಟಣದ ಗೋಪಾಲರಾಜು ಕಾಲೇಜು ಜಲಾವೃತಗೊಂಡಿದೆ. ಬೆಳಗಿನ ಜಾವ ಕಾಲೇಜಿಗೆ ಬಂದ ವಿದ್ಯಾರ್ಥಿಗಳು ಪರದಾಡಿದರು. ಆನೇಕಲ್ ಪಟ್ಟಣದ ಏಕೈಕ ಸರ್ಕಾರಿ ಡಿಗ್ರಿ ಕಾಲೇಜು ಇದಾಗಿದ್ದು, ಮಳೆಗೆ ಕಾಲೇಜು ಒಳಗಡೆ ಹೋಗಲು ಆಗದೆ ವಿದ್ಯಾರ್ಥಿಗಳು ಸಂಕಷ್ಟ ಎದುರಿಸಿದ್ದರು. ಪುರಸಭೆ ಅಧಿಕಾರಿಗಳು ಸರಿಪಡಿಸಿ ಕೊಡುವಂತೆ ಆಗ್ರಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Muda Scam
ಕರ್ನಾಟಕ7 mins ago

Muda Scam: ಸಿಎಂ ವಿರುದ್ಧದ ಸ್ನೇಹಮಯಿ ಕೃಷ್ಣ ಅರ್ಜಿ ಆದೇಶ ಆ.20ಕ್ಕೆ ಕಾಯ್ದಿರಿಸಿದ ಕೋರ್ಟ್‌; ಅಬ್ರಹಾಂ ಅರ್ಜಿ ವಿಚಾರಣೆ ಮುಂದೂಡಿಕೆ

Lakshmi Hebbalkar
ಕರ್ನಾಟಕ15 mins ago

Lakshmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಅಹವಾಲು ಸಲ್ಲಿಸಲು ಸಾಲುಸಾಲು ಜನ

Independence day 2024
ದೇಶ21 mins ago

Independence day 2024: ಆಗಸ್ಟ್ 15ರಂದು ಪ್ರಧಾನಿ ಮೋದಿ ಭಾಷಣವನ್ನು ಎಷ್ಟು ಹೊತ್ತಿಗೆ, ಎಲ್ಲಿ ವೀಕ್ಷಿಸಬಹುದು?

Ian Bell
ಕ್ರಿಕೆಟ್26 mins ago

Ian Bell : ಲಂಕಾ ತಂಡದ ನೂತನ ಬ್ಯಾಟಿಂಗ್​ ಕೋಚ್​ ಆಗಿ ಇಯಾನ್ ಬೆಲ್​ ನೇಮಕ

Prime fashion week
ಫ್ಯಾಷನ್33 mins ago

Prime Fashion week: ಪ್ರೈಮ್‌ ಫ್ಯಾಷನ್‌ ವೀಕ್‌ನಲ್ಲಿ ಸಂಜಯ್‌ ಚೊಲಾರಿಯಾ ಡಿಸೈನರ್‌ ವೇರ್ಸ್ ಅನಾವರಣ

Physical abuse
ಧಾರವಾಡ40 mins ago

Physical Abuse : ಅಪ್ರಾಪ್ತೆಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೊ ಹರಿಬಿಟ್ಟ ಯುವಕ!

Kaun Banega Crorepati Season 16
ಬಾಲಿವುಡ್56 mins ago

Kaun Banega Crorepati Season 16: 25 ಲಕ್ಷ ರೂ. ಪ್ರಶ್ನೆಗೆ ಉತ್ತರಿಸಲು ವಿಫಲರಾದ ಬೆಂಗಳೂರಿನ ಎಂಜಿನಿಯರ್! ಏನಿತ್ತು ಆ ಪ್ರಶ್ನೆ?

Tata Nexon EV
ಆಟೋಮೊಬೈಲ್1 hour ago

Tata Nexon EV: ಕೇವಲ 200 ರೂ. ಖರ್ಚಿನಲ್ಲಿ ಈ ಕಾರು 323 ಕಿ.ಮೀ ದೂರ ಸಾಗುತ್ತದೆ!

Arshad Nadeem
ಪ್ರಮುಖ ಸುದ್ದಿ1 hour ago

Arshad Nadeem : ಲಷ್ಕರ್ ಉಗ್ರನ ಜತೆ ಕಾಣಿಸಿಕೊಂಡ ಪಾಕಿಸ್ತಾನದ ಒಲಿಂಪಿಕ್ಸ್​ ಚಿನ್ನದ ಪದಕ ವಿಜೇತ ಅರ್ಷದ್​ ನದೀಮ್​!

World Organ Donation Day
ಆರೋಗ್ಯ1 hour ago

World Organ Donation Day: ಇಂದು ವಿಶ್ವ ಅಂಗಾಂಗದಾನ ದಿನ; ಯಾರದ್ದೋ ಬದುಕಿಗೆ ಭರವಸೆಯಾಗೋಣ! ನೋಂದಣಿ ಹೇಗೆ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌