Manu Bhaker : ಶೂಟಿಂಗ್​​ನಿಂದ ಬ್ರೇಕ್ ತೆಗೆದುಕೊಂಡ ಮನು ಭಾಕರ್​​, ಡೆಲ್ಲಿಯಲ್ಲಿ ನಡೆಯುವ ವಿಶ್ವಕಪ್​ಗೆ ಅಲಭ್ಯ - Vistara News

ಪ್ರಮುಖ ಸುದ್ದಿ

Manu Bhaker : ಶೂಟಿಂಗ್​​ನಿಂದ ಬ್ರೇಕ್ ತೆಗೆದುಕೊಂಡ ಮನು ಭಾಕರ್​​, ಡೆಲ್ಲಿಯಲ್ಲಿ ನಡೆಯುವ ವಿಶ್ವಕಪ್​ಗೆ ಅಲಭ್ಯ

Manu Bhaker : ಮಂಗಳವಾರ ಮುಂಜಾನೆ ಪ್ಯಾರಿಸ್​ನಿಂದ ಹಿಂದಿರುಗಿದ ಮನು ಭಾಕರ್​ ಕ್ರೀಡೆಯಿಂದ ಮೂರು ತಿಂಗಳ ವಿರಾಮ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಅವರು ಮೂರು ತಿಂಗಳ ವಿರಾಮ ತೆಗೆದುಕೊಳ್ಳುತ್ತಿರುವುದರಿಂದ ಅಕ್ಟೋಬರ್​ನಲ್ಲಿ ಡೆಯಲಿರುವ ಶೂಟಿಂಗ್ ವಿಶ್ವಕಪ್​​ನಲ್ಲಿ ಭಾಗವಹಿಸುತ್ತಾರೆಯೇ ಎಂದು ನನಗೆ ಖಚಿತವಿಲ್ಲ. ಇದು ಸಾಮಾನ್ಯ ವಿರಾಮ. ಬಹಳ ಸಮಯದಿಂದ ಅವರು ತರಬೇತಿ ಪಡೆಯುತ್ತಿದ್ದಾರೆ.” ರಾಣಾ ತಿಳಿಸಿದ್ದಾರೆ.

VISTARANEWS.COM


on

Manu Bhaker
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಎರಡು ಕಂಚಿನ ಪದಕಗಳನ್ನು ಗೆದ್ದಿರುವ ಮಹಿಳಾ ಶೂಟರ್​ ಮನು ಭಾಕರ್ (Manu Bhaker) ಮೂರು ತಿಂಗಳ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಹೀಗಾಗಿ ಅಕ್ಟೋಬರ್​ನಲ್ಲಿ ನಡೆಯಲಿರುವ ಶೂಟಿಂಗ್​ ವಿಶ್ವಕಪ್​ನಿಂದ ಹೊರಕ್ಕೆ ಉಳಿಯಲಿದ್ದಾರೆ ಎಂದು ಅವರ ಕೋಚ್ ಜಸ್ಪಾಲ್ ರಾಣಾ ಮಾಹಿತಿ ನೀಡಿದ್ದಾರೆ. ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಮತ್ತು 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ 22 ವರ್ಷದ ಭಾಕರ್ ಅವರು ಎರಡು ಪದಕ ಗೆದ್ದು ಇತಿಹಾಸ ಬರೆದಿದ್ದರು.

ಮಂಗಳವಾರ ಮುಂಜಾನೆ ಪ್ಯಾರಿಸ್​ನಿಂದ ಹಿಂದಿರುಗಿದ ಮನು ಭಾಕರ್​ ಕ್ರೀಡೆಯಿಂದ ಮೂರು ತಿಂಗಳ ವಿರಾಮ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಅವರು ಮೂರು ತಿಂಗಳ ವಿರಾಮ ತೆಗೆದುಕೊಳ್ಳುತ್ತಿರುವುದರಿಂದ ಅಕ್ಟೋಬರ್​ನಲ್ಲಿ ಡೆಯಲಿರುವ ಶೂಟಿಂಗ್ ವಿಶ್ವಕಪ್​​ನಲ್ಲಿ ಭಾಗವಹಿಸುತ್ತಾರೆಯೇ ಎಂದು ನನಗೆ ಖಚಿತವಿಲ್ಲ. ಇದು ಸಾಮಾನ್ಯ ವಿರಾಮ. ಬಹಳ ಸಮಯದಿಂದ ಅವರು ತರಬೇತಿ ಪಡೆಯುತ್ತಿದ್ದಾರೆ.” ರಾಣಾ ತಿಳಿಸಿದ್ದಾರೆ. ಅಕ್ಟೋಬರ್ 13 ರಿಂದ 18 ರವರೆಗೆ ನವದೆಹಲಿಯಲ್ಲಿ ಶೂಟಿಂಗ್ ವಿಶ್ವ ಕಪ್​ ಆಯೋಜನೆಗೊಂಡಿದೆ.

ಮೂರು ವರ್ಷಗಳ ಹಿಂದೆ ಟೋಕಿಯೊ ಕ್ರೀಡಾಕೂಟದಿಂದ ಬರಿಗೈಯಲ್ಲಿ ಹಿಂದಿರುಗಿದ್ದ ಮನು ಭಾಕರ್​ಗೆ ಪ್ಯಾರಿಸ್​ ಒಲಿಂಪಿಕ್ಸ್ ಪದಕಗಳು ಹೆಚ್ಚು ಗಮನಾರ್ಹ. ವಿರಾಮದ ಬಳಿಕ 2026 ರ ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಆಡಲು ಅವರು ಬಯಸಿದ್ದಾರೆ.

ಮನು ಭಾಕರ್ ಪ್ಯಾರಿಸ್ ಸಾಧನೆ

22 ವರ್ಷದ ಭಾರತೀಯ ಶೂಟರ್ ಮನು ಭಾಕರ್ 2024ರ ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಅವರು ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮತ್ತು 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಕಂಚು ಗೆದ್ದಿದ್ದಾರೆ. ಒಂದೇ ಒಲಿಂಪಿಕ್ಸ್ ಆವೃತ್ತಿಯಲ್ಲಿ ಎರಡು ಪದಕಗಳನ್ನು ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಗಿಟ್ಟಿಸಿಕೊಂಡಿದ್ದಾರೆ.

ಭಾಕರ್​ ಜುಲೈ 26 ರಂದು 10 ಮೀಟರ್ ಏರ್ ಪಿಸ್ತೂಲ್ ಮಹಿಳೆಯರ ತರಬೇತಿಯೊಂದಿಗೆ ತಮ್ಮ ಅಭಿಯಾನವನ್ನು ಪ್ರಾರಂಭಿಸಿದ್ದರು. ನಂತರ ಜುಲೈ 27 ರಂದು ಅರ್ಹತಾ ಸುತ್ತಿನಲ್ಲಿ, 580/600 ಅಂಕಗಳನ್ನು ಗಳಿಸಿ ಮೂರನೇ ಸ್ಥಾನ ಗಿಟ್ಟಿಸಿ ಅರ್ಹತೆ ಪಡೆದಿದ್ದರು. ಅವರು ಜುಲೈ 28ರಂದು ನಡೆದ ಫೈನಲ್​​ನಲ್ಲಿ ಕಂಚಿನ ಪದಕ ಗೆದ್ದಿದ್ದರು.

ಇದನ್ನೂ ಓದಿ: Ian Bell : ಲಂಕಾ ತಂಡದ ನೂತನ ಬ್ಯಾಟಿಂಗ್​ ಕೋಚ್​ ಆಗಿ ಇಯಾನ್ ಬೆಲ್​ ನೇಮಕ

ಮಿಶ್ರ ತಂಡ ವಿಭಾಗದಲ್ಲಿ ಭಾಕರ್ ಅವರು ಸರಬ್ಜೋತ್ ಸಿಂಗ್ ಜೊತೆಗೂಡಿ ಜುಲೈ 29ರಂದು ನಡೆದ ಅರ್ಹತಾ ಸುತ್ತಿನಲ್ಲಿ ಮೂರನೇ ಸ್ಥಾನ ಪಡೆದರು. ನಂತರ ಅವರು ದಕ್ಷಿಣ ಕೊರಿಯಾ ವಿರುದ್ಧದ ಕಂಚಿನ ಪದಕದ ಪಂದ್ಯದಲ್ಲಿ ಗೆದ್ದು ಸಾಧನೆ ಮಾಡಿದರು. ಅವರ ಪದಕಗಳು ಭಾರತಕ್ಕೆ ಹೆಚ್ಚಿನ ವಿಶ್ವಾಸ ಮೂಡಿಸಿತು.

ಭಾಕರ್ 25 ಮೀಟರ್ ಪಿಸ್ತೂಲ್ ಮಹಿಳಾ ಸ್ಪರ್ಧೆಯಲ್ಲಿಯೂ ಸ್ಪರ್ಧಿಸಿದ್ದರು. ಆಗಸ್ಟ್ 3ರಂದು ನಡೆದ ಫೈನಲ್​​ನಲ್ಲಿ ನಾಲ್ಕನೇ ಸ್ಥಾನ ಪಡೆದು ಪದಕ ಕಳೆದುಕೊಂಡರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Ashwini Ponnappa : ಷಟ್ಲರ್​ಗಳನ್ನೇ ಗುರಿಯಾಗಿಸಿದ ಕ್ರೀಡಾ ಇಲಾಖೆ ವಿರುದ್ಧವೇ ತಿರುಗಿ ಬಿದ್ದ ಅಶ್ವಿನಿ ಪೊನ್ನಪ್ಪ

Ashwini Ponnappa : ನನಗೆ ಸಂಪೂರ್ಣ ಅಚ್ಚರಿಯಾಗಿದೆ. ಹಣ ಪಡೆಯದೇ ಇರಲು ನನಗೆ ಮನಸ್ಸಿಲ್ಲ. ಆದರೆ ನನಗೆ ಹಣ ಸಿಕ್ಕಿದೆ ಎಂದು ರಾಷ್ಟ್ರಕ್ಕೆ ಹೇಳುವುದು ಹಾಸ್ಯಾಸ್ಪದ. ನಾನು ಅದನ್ನು ಸ್ವೀಕರಿಸಿಲ್ಲ. ನೀವು ರಾಷ್ಟ್ರೀಯ ಶಿಬಿರದ ಬಗ್ಗೆ ಮಾತನಾಡುವುದಾದರೆ, ಆ 1.5 ಕೋಟಿ ರೂ.ಗಳನ್ನು ಎಲ್ಲಾ ಶಿಬಿರಾರ್ಥಿಗಳಿಗೆ ಖರ್ಚು ಮಾಡಲಾಗಿದೆ ” ಎಂದು ಅಶ್ವಿನಿ ಹೇಳಿದ್ದಾರೆ.

VISTARANEWS.COM


on

Ashwini Ponnappa
Koo

ಹೊಸದಿಲ್ಲಿ: ಪ್ಯಾರಿಸ್ ಒಲಿಂಪಿಕ್ಸ್ ಗೆ ತಯಾರಿ ನಡೆಸಲು ಕ್ರೀಡಾ ಸಚಿವಾಲಯದಿಂದ ಯಾವುದೇ ವೈಯಕ್ತಿಕ ಆರ್ಥಿಕ ನೆರವು ದೊರೆತಿಲ್ಲ ಮತ್ತು ಕ್ರೀಡಾಕೂಟಕ್ಕೆ ಮುಂಚಿತವಾಗಿ ವೈಯಕ್ತಿಕ ತರಬೇತುದಾರನ್ನು ಒದಗಿಸುವ ಕೋರಿಕೆಯನ್ನು ಸಹ ತಿರಸ್ಕರಿಸಲಾಗಿದೆ ಎಂದು ಭಾರತದ ಡಬಲ್ಸ್ ಬ್ಯಾಡ್ಮಿಂಟನ್ ಸ್ಪೆಷಲಿಸ್ಟ್ ಅಶ್ವಿನಿ ಪೊನ್ನಪ್ಪ ಮಂಗಳವಾರ ಹೇಳಿಕೆ ಕೊಟ್ಟಿದ್ದಾರೆ. ಪ್ಯಾರಿಸ್​ಗೆ ತೆರಳುವ ಭಾರತೀಯ ಕ್ರೀಡಾಪಟುಗಳಿಗೆ ನೀಡಲಾಗುವ ಆರ್ಥಿಕ ಬೆಂಬಲವನ್ನು ವಿವರಿಸುವ ದಾಖಲೆಯನ್ನು ಭಾರತೀಯ ಕ್ರೀಡಾ ಪ್ರಾಧಿಕಾರ ಬಿಡುಗಡೆ ಮಾಡಿದ ಬಳಿಕ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ತಮಗೆ ಟಾಪ್ಸ್​ ಅಡಿಯಲ್ಲಿ 4,50,000 ರೂಪಾಯಿ ಮತ್ತು ತರಬೇತಿ ಮತ್ತು ಸ್ಪರ್ಧೆಯ ವಾರ್ಷಿಕ ಕ್ಯಾಲೆಂಡರ್ (ಎಸಿಟಿಸಿ) ಅಡಿಯಲ್ಲಿ 1,48,04,080 ರೂ.ಗಳನ್ನು ಒದಗಿಸಲಾಗಿದೆ ಎಂಬ ವರದಿಯನ್ನೂ ಅವರು ನಿರಾಕರಿಸಿದ್ದಾರೆ.

ನನಗೆ ಸಂಪೂರ್ಣ ಅಚ್ಚರಿಯಾಗಿದೆ. ಹಣ ಪಡೆಯದೇ ಇರಲು ನನಗೆ ಮನಸ್ಸಿಲ್ಲ. ಆದರೆ ನನಗೆ ಹಣ ಸಿಕ್ಕಿದೆ ಎಂದು ರಾಷ್ಟ್ರಕ್ಕೆ ಹೇಳುವುದು ಹಾಸ್ಯಾಸ್ಪದ. ನಾನು ಅದನ್ನು ಸ್ವೀಕರಿಸಿಲ್ಲ. ನೀವು ರಾಷ್ಟ್ರೀಯ ಶಿಬಿರದ ಬಗ್ಗೆ ಮಾತನಾಡುವುದಾದರೆ, ಆ 1.5 ಕೋಟಿ ರೂ.ಗಳನ್ನು ಎಲ್ಲಾ ಶಿಬಿರಾರ್ಥಿಗಳಿಗೆ ಖರ್ಚು ಮಾಡಲಾಗಿದೆ ” ಎಂದು ಅಶ್ವಿನಿ ಹೇಳಿದ್ದಾರೆ.

“ನನಗೆ ವೈಯುಕ್ತಿಕ ಕೋಚ್ ಇಲ್ಲ. ನನ್ನ ವೈಯಕ್ತಿಕ ತರಬೇತುದಾರನ ಬಗ್ಗೆ ಹೇಳುವುದಾದರೆ, ನಾನು ಅವರಿಗೆ ನನ್ನದೇ ದುಡ್ಡನ್ನು ನೀಡುತ್ತಿದ್ದೇನೆ. ನಾನು ಯಾರಿಂದಲೂ ಹಣ ತೆಗೆದುಕೊಳ್ಳುತ್ತಿಲ್ಲ. ನಾನು ನವೆಂಬರ್ (2023) ವರೆಗೆ ನನ್ನ ಸ್ವಂತವಾಗಿ ಆಡಿದ್ದೇನೆ. ಅರ್ಹತೆ ಪಡೆದ ನಂತರವೇ ನನ್ನನ್ನು ಟಾಪ್ಸ್ ನ ಭಾಗವಾಗಿ ಸೇರಿಸಲಾಯಿತು…” ಎಂದು ಮಾಹಿತಿ ನೀಡಿದ್ದಾರೆ.

34ರ ಹರೆಯದ ಅಶ್ವಿನಿ 2010, 2014 ಮತ್ತು 2018ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಕ್ರಮವಾಗಿ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕ ಗೆದ್ದಿದ್ದರು. ಜ್ವಾಲಾ ಗುಟ್ಟಾ ಅವರೊಂದಿಗೆ ಲಂಡನ್ ಮತ್ತು ರಿಯೋ ಒಲಿಂಪಿಕ್ಸ್ ನಲ್ಲಿ ಸ್ಪರ್ಧಿಸಿದ್ದಾರೆ.

1.48 ಕೋಟಿ ರೂ.ಗಳ ವೆಚ್ಚವನ್ನು ವಿವರಿಸಿದ ಸಾಯ್ ಮೂಲವು, “ಪ್ಯಾರಿಸ್ ಒಲಿಂಪಿಕ್ಸ್ ಋತುವಿನಲ್ಲಿ ಭಾರತೀಯ ತಂಡದ ಭಾಗವಾಗಿ ಅವರು ಭಾಗವಹಿಸಿದ ಎಲ್ಲಾ ಸ್ಪರ್ಧೆಗಳಲ್ಲಿ ಪ್ರಯಾಣ, ವಾಸ್ತವ್ಯ, ಆಹಾರ, ಸ್ಪರ್ಧೆ ಶುಲ್ಕ, ಡಿಎಗಾಗಿ 1.48 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಹಣವನ್ನು ಎಸಿಟಿಸಿಯ ಭಾಗವಾಗಿ ಬಿಎಐಗೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Cricket News : ಬಾಂಗ್ಲಾದೇಶ ವಿರುದ್ಧದ ಸರಣಿಯ ವೇಳಾಪಟ್ಟಿ ಬದಲಾಯಿಸಿದ ಬಿಸಿಸಿಐ

ಆಗಸ್ಟ್ 2022 ರವರೆಗೆ ಎನ್ ಸಿಕ್ಕಿ ರೆಡ್ಡಿ ಅವರೊಂದಿಗೆ ಜೋಡಿಯಾಗಿದ್ದ ಅಶ್ವಿನಿ, ಅದೇ ವರ್ಷದ ಡಿಸೆಂಬರ್​ನಲ್ಲಿ ತನಿಶಾ ಕ್ರಾಸ್ಟೊ ಅವರೊಂದಿಗೆ ಸೇರಿಕೊಂಡರು. ಜನವರಿ 2023 ರಿಂದ ಅಂತರರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಆಡಲು ಪ್ರಾರಂಭಿಸಿದರು. ಉತ್ತಮ ಪ್ರದರ್ಶನಗಳ ಹಿನ್ನಲೆಯಲ್ಲಿ ಅವರ ಪ್ಯಾರಿಸ್ ಸ್ಥಾನ ಭದ್ರವಾಯಿತು. ಅವರಿಬ್ಬರನ್ನು ಈ ವರ್ಷದ ಮೇ ತಿಂಗಳಲ್ಲಿ ಟಾಪ್ಸ್ ಯೋಜನೆಯಲ್ಲಿ ಸೇರಿಸಲಾಯಿತು.

ಸಚಿವಾಲಯವು ಯಾವಾಗಲೂ ನನ್ನನ್ನು ಬೆಂಬಲಿಸಿದೆ. ನಾನು ವರ್ಷಗಳಿಂದ ತಂಡದ ಭಾಗವಾಗಿದ್ದೇನೆ ಮತ್ತು ನನಗೆ ದೊರೆತ ಬೆಂಬಲಕ್ಕೆ ನಾನು ಕೃತಜ್ಞನಾಗಿದ್ದೇನೆ” ಎಂದು ಅಶ್ವಿನಿ ಹೇಳಿದರು. “ಕಳೆದ ವರ್ಷ ನನಗೆ ಬೆಂಬಲ ಸಿಗಲಿಲ್ಲ. ಆದರೆ ನನಗೆ 1.5 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದು ಹೇಳಲು ಸಾಧ್ಯವಿಲ್ಲ, ಅದು ನಾಲ್ಕು ವರ್ಷಗಳಿಗಿಂತ ಹಳೆಯದು. ಸಿಕ್ಕಿ ರೆಡ್ಡು ಜತೆ ಪಾಲುದಾರನಾಗಿದ್ದಾಗ ನಾನು ಟಾಪ್ಸ್ ವ್ಯಾಪ್ತಿಯಲ್ಲಿದ್ದೆ ಎಂದು ಅವರು ಹೇಳಿದ್ದಾರೆ.

ತನ್ನ ಮೂರನೇ ಒಲಿಂಪಿಕ್ಸ್ ಆಡುತ್ತಿರುವ ಅಶ್ವಿನಿ ಮತ್ತು ಅವರ ಜತೆಗಾರ್ತಿ ತನಿಶಾ ಪ್ಯಾರಿಸ್​​ನಲ್ಲಿ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗದ ಕಾರಣ ಗುಂಪು ಹಂತದಿಂದ ನಿರ್ಗಮಿಸಿದ್ದರು. “ನಾನು ಉತ್ತಮವಾಗಿ ಆಡಿಲ್ಲ, ಕೋಚ್ ಇಲ್ಲದಿದ್ದರೂ, ಅದರ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುತ್ತೇನೆ. ಆದರೆ ನನಗೆ ಈ ಮೊತ್ತವೂ ಸಿಗದಿದ್ದಾಗ ನಾನು ಈ ಮೊತ್ತವನ್ನು ಪಡೆದಿದ್ದೇನೆ ಎಂದು ನೀವು ಹೇಳಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

Continue Reading

ರಾಜಕೀಯ

Sowmya Reddy: ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ನೇಮಕ

Sowmya Reddy: ಕರ್ನಾಟಕ ಸೇರಿ ಮೂರು ರಾಜ್ಯಗಳ ಮಹಿಳಾ ಕಾಂಗ್ರೆಸ್‌ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.

VISTARANEWS.COM


on

Sowmya Reddy
Koo

ಬೆಂಗಳೂರು: ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ (Sowmya Reddy) ನೇಮಕವಾಗಿದ್ದಾರೆ. ಕರ್ನಾಟಕ ಸೇರಿ ಮೂರು ರಾಜ್ಯಗಳ ಮಹಿಳಾ ಕಾಂಗ್ರೆಸ್‌ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಮಹಿಳಾ ಕಾಂಗ್ರೆಸ್‌ಗೆ ಸೌಮ್ಯಾ ರೆಡ್ಡಿ, ಚಂಡೀಗಢಕ್ಕೆ ನಂದಿತಾ ಹೂಡ, ಅರುಣಾಚಲ ಪ್ರದೇಶ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ಚುಕು ನಾಚಿ ನೇಮಕವಾಗಿದ್ದಾರೆ.

ಸೌಮ್ಯಾ ರೆಡ್ಡಿ ಅವರು 2018ರ ವಿಧಾನಸಭೆ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. 2023ರ ಚುನಾವಣೆಯಲ್ಲಿ ಕೇವಲ 16 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಸಿ.ಕೆ. ರಾಮಮೂರ್ತಿ ಎದುರು ಸೋತಿದ್ದರು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಕೈ ಅಭ್ಯರ್ಥಿ ಸೌಮ್ಯಾ ರೆಡ್ಡಿ ಸೋಲು ಕಂಡಿದ್ದರು.

ಇದನ್ನೂ ಓದಿ | Independence Day 2024: ಬ್ರಿಟಿಷ್‌ ಕಾಲದ ಚಿನ್ನದ ನಾಣ್ಯದಿಂದ ಹಿಡಿದು ಸ್ವತಂತ್ರ ಭಾರತದ ರೂಪಾಯಿವರೆಗಿನ ಇತಿಹಾಸ ಕುತೂಹಲಕರ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಅಹವಾಲು ಸಲ್ಲಿಸಲು ಸಾಲುಸಾಲು ಜನ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಅವರಿಗೆ ಅಹವಾಲು ಸಲ್ಲಿಸಲು ಮಂಗಳವಾರ ವಿವಿಧ ಭಾಗಗಳಿಂದ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ್ದರು. ಬೆಳಗ್ಗೆಯಿಂದ ಸಂಜೆ 4 ಗಂಟೆಯವರೆಗೂ ಊಟ, ತಿಂಡಿ ಬಿಟ್ಟು ಸಚಿವರು ಅಹವಾಲು ಸ್ವೀಕರಿಸಿದರು.

ಸಚಿವರು ಬೆಳಗಾವಿಯಲ್ಲಿದ್ದಾಗಲೆಲ್ಲ ವಿವಿಧ ಸಮಸ್ಯೆಗಳನ್ನು ಹೇಳಿಕೊಂಡು ಸಚಿವರ ಮನೆಯ ಬಳಿ ಗೃಹ ಕಚೇರಿಗೆ ನೂರಾರು ಜನರು ಆಗಮಿಸುತ್ತಾರೆ. ತಾಳ್ಮೆಯಿಂದ ಎಲ್ಲರ ಅಹವಾಲು ಆಲಿಸಿ, ಸಮಾಧಾನ ಪಡಿಸಿ ಕಳುಹಿಸುತ್ತಾರೆ. ಮಂಗಳವಾರವೂ ದೊಡ್ಡ ಸಂಖ್ಯೆಯಲ್ಲೇ ಜನರು ಆಗಮಿಸಿದ್ದರು.

ಇದನ್ನೂ ಓದಿ: Kannada New Movie: ರವೀಂದ್ರ ಸೊರಗಾವಿ ಕಂಠಸಿರಿಯಲ್ಲಿ ʼಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರುʼ ಚಿತ್ರದ ಹಾಡು

ಕಳದ 4 ದಿನಗಳಿಂದ ಲಕ್ಷ್ಮೀ ಹೆಬ್ಬಾಳಕರ್ ಅವರು, ಮೈಸೂರು, ಭದ್ರಾವತಿ, ಗದಗ ಪ್ರವಾಸದಲ್ಲಿದ್ದಾರೆ. ಸೋಮವಾರ ಗದಗ ಜಿಲ್ಲಾ ಪ್ರವಾಸ ಮಾಡಿ ಮಂಗಳವಾರ ಬೆಳಗಿನ ಜಾವ 2 ಗಂಟೆಗೆ ಬೆಳಗಾವಿ ತಲುಪಿದ್ದಾರೆ. ಮಂಗಳವಾರ ಸಂಜೆ ಬೆಂಗಳೂರಿಗೆ ತೆರಳಿ, ಬುಧವಾರ ಉಡುಪಿಗೆ ಹೋಗುವ ಕಾರ್ಯಕ್ರಮವಿದೆ. ಆದರೂ ಮಂಗಳವಾರ ಬಹು ಹೊತ್ತಿನವರೆಗೂ ಜನರ ಸಮಸ್ಯೆಗಳಿಗೆ ಕಿವಿಯಾದರು. ಬಂದ ಜನರು ಸಚಿವರ ಸ್ಪಂದನೆಗೆ ಧನ್ಯವಾದ ಸಲ್ಲಿಸಿ ಮರಳುತ್ತಿದ್ದರು.


Continue Reading

ಪ್ರಮುಖ ಸುದ್ದಿ

Cricket News : ಬಾಂಗ್ಲಾದೇಶ ವಿರುದ್ಧದ ಸರಣಿಯ ವೇಳಾಪಟ್ಟಿ ಬದಲಾಯಿಸಿದ ಬಿಸಿಸಿಐ

Cricket News : ಗ್ವಾಲಿಯರ್​ನ ನಗರದ ಹೊಸ ಕ್ರೀಡಾಂಗಣವಾದ ಶ್ರೀಮಂತ್ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಅಂತರರಾಷ್ಟ್ರೀಯ ಪಂದ್ಯ ನಡೆಯಲಿದೆ. 2010 ರಲ್ಲಿ ಐತಿಹಾಸಿಕ ಭಾರತ-ದಕ್ಷಿಣ ಆಫ್ರಿಕಾ ಏಕದಿನ ಪಂದ್ಯದ ನಂತರ ಗ್ವಾಲಿಯರ್​ನಲ್ಲಿ ನಡೆಯುತ್ತಿರುವ ಮೊದಲ ಅಂತರರಾಷ್ಟ್ರೀಯ ಪಂದ್ಯ ಇದಾಗಿದೆ. ಅಲ್ಲಿ ದಂತಕಥೆ ಸಚಿನ್ ತೆಂಡೂಲ್ಕರ್ 50 ಓವರ್​​​ಗಳ ಕ್ರಿಕೆಟ್​​ ಮಾದರಿಯಲ್ಲಿ ದ್ವಿಶತಕ ಬಾರಿಸಿದ ಮೊದಲ ಪುರುಷ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

VISTARANEWS.COM


on

Cricket News
Koo

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮಂಗಳವಾರ (ಆಗಸ್ಟ್ 13ರಂದು) ಭಾರತ ಪುರುಷರ ಕ್ರಿಕೆಟ್ ತಂಡದ ಮುಂಬರುವ ತವರು ಋತುವಿನ ನವೀಕರಿಸಿದ ವೇಳಾಪಟ್ಟಿಯನ್ನು ಪ್ರಕಟಿಸಿದೆ (Cricket News). ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟಿ 20 ಐ ಸರಣಿಯ ಆರಂಭಿಕ ಪಂದ್ಯವು 2024 ರ ಅಕ್ಟೋಬರ್ 6 ರಂದು ಧರ್ಮಶಾಲಾದಲ್ಲಿ ನಡೆಯಬೇಕಿತ್ತು. ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಡ್ರೆಸ್ಸಿಂಗ್ ಕೊಠಡಿಗಳಲ್ಲಿ ನವೀಕರಣ ಕಾಮಗಾರಿ ನಡೆಯುತ್ತಿರುವ ಕಾರಣ ಅದನ್ನು ಗ್ವಾಲಿಯರ್​ಗೆ ವರ್ಗಾಯಿಸಲಾಗಿದೆ.

ಗ್ವಾಲಿಯರ್​ನ ನಗರದ ಹೊಸ ಕ್ರೀಡಾಂಗಣವಾದ ಶ್ರೀಮಂತ್ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಅಂತರರಾಷ್ಟ್ರೀಯ ಪಂದ್ಯ ನಡೆಯಲಿದೆ. 2010 ರಲ್ಲಿ ಐತಿಹಾಸಿಕ ಭಾರತ-ದಕ್ಷಿಣ ಆಫ್ರಿಕಾ ಏಕದಿನ ಪಂದ್ಯದ ನಂತರ ಗ್ವಾಲಿಯರ್​ನಲ್ಲಿ ನಡೆಯುತ್ತಿರುವ ಮೊದಲ ಅಂತರರಾಷ್ಟ್ರೀಯ ಪಂದ್ಯ ಇದಾಗಿದೆ. ಅಲ್ಲಿ ದಂತಕಥೆ ಸಚಿನ್ ತೆಂಡೂಲ್ಕರ್ 50 ಓವರ್​​​ಗಳ ಕ್ರಿಕೆಟ್​​ ಮಾದರಿಯಲ್ಲಿ ದ್ವಿಶತಕ ಬಾರಿಸಿದ ಮೊದಲ ಪುರುಷ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಇಂಗ್ಲೆಂಡ್ ವಿರುದ್ಧದ ಮೊದಲ ಮತ್ತು ಎರಡನೇ ಟಿ 20 ಪಂದ್ಯಗಳ ಸ್ಥಳಗಳನ್ನು ಬದಲಾಯಿಸುವುದಾಗಿ ಮಂಡಳಿ ಘೋಷಿಸಿತು. ಮೊದಲ ಟಿ20 ಪಂದ್ಯಕ್ಕೆ ಆತಿಥ್ಯ ವಹಿಸಲು ನಿರ್ಧರಿಸಲಾಗಿದ್ದ ಚೆನ್ನೈ ಈಗ ಎರಡನೇ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. ಮತ್ತೊಂದೆಡೆ, ಎರಡನೇ ಟಿ 20 ಪಂದ್ಯದ ಬದಲು ಕೋಲ್ಕತಾ ಸರಣಿಯ ಆರಂಭಿಕ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ.

ಇದನ್ನೂ ಓದಿ: Vinesh Phogat : ವಿನೇಶ್​ ಪೋಗಟ್​ ಅನರ್ಹತೆ ತೀರ್ಪು ಆಗಸ್ಟ್​​​ 16ಕ್ಕೆ ಮುಂದೂಡಿಕೆ

“ಮೊದಲ ಟಿ20 ಪಂದ್ಯ (ಜನವರಿ 22, 2025) ಮತ್ತು ಎರಡನೇ ಟಿ20 ಪಂದ್ಯ (ಜನವರಿ 25, 2025) ಅದೇ ಸ್ಥಳದಲ್ಲಿ ಮುಂದುವರಿಯುತ್ತದೆ ಗಣರಾಜ್ಯೋತ್ಸವದ ಹಿಂದಿನ ಬದ್ಧತೆಗಳು ಮತ್ತು ಬಾಧ್ಯತೆಗಳ ಬಗ್ಗೆ ಕೋಲ್ಕತಾ ಪೊಲೀಸರು ಬಂಗಾಳ ಕ್ರಿಕೆಟ್ ಸಂಸ್ಥೆಗೆ ಮನವಿ ಮಾಡಿದ ನಂತರ ಸ್ಥಳ ಬದಲಾವಣೆ ಅನಿವಾರ್ಯವಾಗಿದೆ” ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.

ಪರಿಷ್ಕೃತ ವೇಳಾಪಟ್ಟಿ (ಬಾಂಗ್ಲಾದೇಶದ ಭಾರತ ಪ್ರವಾಸ 2024)

  • ಮೊದಲ ಟೆಸ್ಟ್: ಸೆಪ್ಟೆಂಬರ್ 19 ರಿಂದ ಸೆಪ್ಟೆಂಬರ್ 23, ಚೆನ್ನೈ
  • 2ನೇ ಟೆಸ್ಟ್: ಸೆಪ್ಟೆಂಬರ್ 27-ಅಕ್ಟೋಬರ್ 1, ಕಾನ್ಪುರ
  • ಮೊದಲ ಟಿ20: ಅಕ್ಟೋಬರ್ 6, ಗ್ವಾಲಿಯರ್
  • 2ನೇ ಟಿ20: ಅಕ್ಟೋಬರ್ 9, ದೆಹಲಿ
  • 3ನೇ ಟಿ20: ಅಕ್ಟೋಬರ್ 12, ಹೈದರಾಬಾದ್

ಪರಿಷ್ಕೃತ ವೇಳಾಪಟ್ಟಿ (ಇಂಗ್ಲೆಂಡ್ ತಂಡದ ಭಾರತ ಪ್ರವಾಸ 2025):

  • ಮೊದಲ ಟಿ20: ಜನವರಿ 22, ಕೋಲ್ಕತ್ತಾ
  • 2ನೇ ಟಿ20: ಜನವರಿ 25, ಚೆನ್ನೈ
  • 3ನೇ ಟಿ20: ಜನವರಿ 28, ರಾಜ್ಕೋಟ್
  • 4ನೇ ಟಿ20: ಜನವರಿ 31, ಪುಣೆ
  • 5ನೇ ಟಿ20: ಫೆಬ್ರವರಿ 2, ಮುಂಬೈ
  • ಮೊದಲ ಏಕದಿನ ಪಂದ್ಯ: ಫೆಬ್ರವರಿ 6, ನಾಗ್ಪುರ
  • 2ನೇ ಏಕದಿನ ಪಂದ್ಯ, ಫೆಬ್ರವರಿ 9, ಕಟಕ್
  • 3ನೇ ಏಕದಿನ ಪಂದ್ಯ, ಫೆಬ್ರವರಿ 12, ಅಹಮದಾಬಾದ್
Continue Reading

ಪ್ರಮುಖ ಸುದ್ದಿ

Vinesh Phogat : ವಿನೇಶ್​ ಪೋಗಟ್​ ಅನರ್ಹತೆ ತೀರ್ಪು ಆಗಸ್ಟ್​​​ 16ಕ್ಕೆ ಮುಂದೂಡಿಕೆ

Vinesh Phogat : ಫೋಗಟ್ ಮತ್ತು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ ಮತ್ತು ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ ನಡುವಿನ ಪ್ರಕರಣದ ತೀರ್ಪನ್ನು ಮತ್ತಷ್ಟು ವಿಳಂಬಗೊಳಿಸುವುದಾಗಿ ನ್ಯಾಯಾಲಯ ಮಂಗಳವಾರ ಅಧಿಕೃತ ಪತ್ರಿಕಾ ಪ್ರಕಟಣೆಯ ಮೂಲಕ ಪ್ರಕಟಿಸಿದೆ.

VISTARANEWS.COM


on

Vinesh Phogat
Koo

ಬೆಂಗಳೂರು: ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್​ (Vinesh Phogat ) ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಆಘಾತಕಾರಿ ಎದುರಿಸಿದ ಅನರ್ಹತೆಯ ಕುರಿತ ವ್ಯಾಜ್ಯದ ತೀರ್ಪನ್ನು ಆಫ್ ಆರ್ಬಿಟ್ರೇಶನ್ ಫಾರ್ ಸ್ಪೋರ್ಟ್ (ಸಿಎಎಸ್) ಮತ್ತಷ್ಟು ಮುಂದೂಡಿಕೆ ಮಾಡಿದೆ. ಕ್ರೀಡಾ ನ್ಯಾಯಾಲಯವು ಈ ವಿಷಯದ ಬಗ್ಗೆ ವಿಸ್ತರಣೆಯನ್ನು ಕೇಳಿರುವುದು ಇದು ಮೂರನೇ ಬಾರಿ. ಫೋಗಟ್ ಅವರು ಪ್ಯಾರಿಸ್ ಒಲಿಂಪಿಕ್ಸ್​​ನ ಫೈನಲ್​ಗೆ ಮೊದಲು ತಮ್ಮನ್ನು ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿದ್ದರು. ಮಹಿಳೆಯರ 50 ಕೆ.ಜಿ ವಿಭಾಗದಲ್ಲಿ ಜಂಟಿ ಬೆಳ್ಳಿ ಪದಕವನ್ನು ನೀಡುವಂತೆ ಮನವಿ ಮಾಡಿದ್ದರು. ಹೀಗಾಗಿ ಭಾರತೀಯ ಕ್ರೀಡಾಭಿಮಾನಿಗಳು ತೀರ್ಪಿಗಾಗಿ ಮತ್ತಷ್ಟು ಕಾಯುವಂತಾಗಿದೆ.

ಫೋಗಟ್ ಮತ್ತು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ ಮತ್ತು ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ ನಡುವಿನ ಪ್ರಕರಣದ ತೀರ್ಪನ್ನು ಮತ್ತಷ್ಟು ವಿಳಂಬಗೊಳಿಸುವುದಾಗಿ ನ್ಯಾಯಾಲಯ ಮಂಗಳವಾರ ಅಧಿಕೃತ ಪತ್ರಿಕಾ ಪ್ರಕಟಣೆಯ ಮೂಲಕ ಪ್ರಕಟಿಸಿದೆ.

ವಿನೇಶ್ ಫೋಗಟ್ ಅವರ ಮನವಿ ಏನು?

ಐಒಸಿಯ ಅನರ್ಹತೆಯನ್ನು ರದ್ದುಗೊಳಿಸುವಂತೆ ಮತ್ತು ಫೈನಲ್​​ನಲ್ಲಿ ಸ್ಪರ್ಧಿಸಲು ಅವಕಾಶ ನೀಡುವಂತೆ ವಿನೇಶ್ ಆರಂಭದಲ್ಲಿ ಸಿಎಎಸ್​​ನ ತಾತ್ಕಾಲಿಕ ಪೀಠವನ್ನು ಕೋರಿದ್ದರು. ಸಿಎಎಸ್​​ನ ತಾತ್ಕಾಲಿಕ ಪೀಠವು ತನ್ನ ತೀರ್ಪನ್ನು ತ್ವರಿತವಾಗಿ ನೀಡಲು ಸಾಧ್ಯವಾಗಲಿಲ್ಲ. ಫೈನಲ್ ನಿಗದಿಯಾಗಿದ್ದ ಗುರುವಾರ ಸಂಜೆಗೆ ಮೊದಲು ವಾದಗಳನ್ನು ಆಲಿಸಲು ಅದಕ್ಕೆ ಸಾಧ್ಯವಾಗಿರಲಿಲ್ಲ. ನಂತರ ವಿನೇಶ್ ತನ್ನ ಮನವಿಯಲ್ಲಿ ಅನರ್ಹತೆಯನ್ನು ಹಿಂತೆಗೆದುಕೊಳ್ಳಬೇಕು ಮತ್ತು ಜಂಟಿ ಬೆಳ್ಳಿ ಪದಕ ನೀಡಬೇಕು ಎಂದು ಕೋಡಿದ್ದರು. ಆದಾಗ್ಯೂ, ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ ಮುಖ್ಯಸ್ಥ ನೆನಾಡ್ ಲಾಲೋವಿಕ್ ಅವರು ಅದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ವಿನೇಶ್ ಅವರ ಬಗ್ಗೆ ಸಹಾನುಭೂತಿ ಇದೆ. ಆದರೆ ಭಾರತೀಯ ಕುಸ್ತಿಪಟುವನ್ನು ಅನರ್ಹಗೊಳಿಸುವ ಮೊದಲು ನಿಯಮಗಳನ್ನು ಪಾಲಿಸಲಾಗಿದೆ ಎಂದು ಹೇಳಿದ್ದರು.

ಇದನ್ನೂ ಓದಿ: Natasa Stankovic : ‘ಹೊಸ ಹೆಸರನ್ನು ಪಡೆಯುತ್ತಿದ್ದೇನೆ’; ಕುತೂಹಲ ಮೂಡಿಸಿದ ನತಾಶಾ ಸ್ಟಾಂಕೊವಿಕ್​ ಹೊಸ ಪೋಸ್ಟ್​​​

ಭಾರತೀಯ ಒಲಿಂಪಿಕ್ ಅಸೋಸಿಯೇಷನ್​ ಮುಖ್ಯಸ್ಥೆ ಪಿ.ಟಿ.ಉಷಾ ಅವರು ಮುಖ್ಯ ವೈದ್ಯಕೀಯ ಅಧಿಕಾರಿ ಡಾ. ದಿನ್​ಶ್ವಾ ಪರ್ಡಿವಾಲಾ ಅವರನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಎದುರಾದ ಟೀಕೆಗಳಿಗೆ ಉತ್ತರ ಕೊಟ್ಟರು. ತೂಕ ನಿಯಂತರಣ ಕ್ರೀಡಾಪಟು ಮತ್ತು ಅವರ ತರಬೇತುದಾರರ ಜವಾಬ್ದಾರಿಯಾಗಿದೆ ಎಂದು ಉಷಾ ಹೇಳಿದ್ದರು. ಒಲಿಂಪಿಕ್ ಕ್ರೀಡಾಕೂಟದಲ್ಲಿ ಎರಡು ದಿನಗಳ ತೂಕದ ನ್ಯಾಯೋಚಿತತೆಯ ಬಗ್ಗೆ ಪ್ರಶ್ನೆಗಳು ಈ ವೇಳೆ ಎದ್ದಿತು. ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ ತನ್ನ ನಿಯಮಗಳನ್ನು ಮರುಪರಿಶೀಲಿಸಬೇಕು ಮತ್ತು ಎರಡನೇ ದಿನದಂದು ತೂಕಕ್ಕೆ 1 ಕೆ.ಜಿ ತೂಕ ಹೆಚ್ಚುವರಿ ಅವಕಾಶ ನೀಡಬೇಕು ಎಂದು ಅಮೆರಿಕದ ಕುಸ್ತಿ ಶ್ರೇಷ್ಠ ಜೋರ್ಡಾನ್ ಬರ್ರೋಸ್ ಸೇರಿದಂತೆ ಹಲವರುಒತ್ತಾಯಿಸಿದ್ದರಯ. ನೀಡುವ ರಿಪೆಚೇಜ್ ಸ್ವರೂಪವನ್ನು ಹೊಂದುವ ಬದಲು ಇಬ್ಬರೂ ಸೆಮಿಫೈನಲ್ ಸ್ಪರ್ಧಿಗಳಿಗೆ ಒಲಿಂಪಿಕ್ ಪದಕಗಳನ್ನು ನೀಡಬೇಕು ಎಂದು ಅವರು ಹೇಳಿದ್ದರು.

Continue Reading
Advertisement
Ashwini Ponnappa
ಪ್ರಮುಖ ಸುದ್ದಿ40 mins ago

Ashwini Ponnappa : ಷಟ್ಲರ್​ಗಳನ್ನೇ ಗುರಿಯಾಗಿಸಿದ ಕ್ರೀಡಾ ಇಲಾಖೆ ವಿರುದ್ಧವೇ ತಿರುಗಿ ಬಿದ್ದ ಅಶ್ವಿನಿ ಪೊನ್ನಪ್ಪ

Sowmya Reddy
ರಾಜಕೀಯ1 hour ago

Sowmya Reddy: ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ನೇಮಕ

Cricket News
ಪ್ರಮುಖ ಸುದ್ದಿ1 hour ago

Cricket News : ಬಾಂಗ್ಲಾದೇಶ ವಿರುದ್ಧದ ಸರಣಿಯ ವೇಳಾಪಟ್ಟಿ ಬದಲಾಯಿಸಿದ ಬಿಸಿಸಿಐ

Koppala News
ಕೊಪ್ಪಳ1 hour ago

Koppala News: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್ ನಿರ್ಮಾಣದಲ್ಲೂ ಕಮಿಷನ್ ರಾಜಕೀಯ; ಕಾಂಗ್ರೆಸ್ ಮುಖಂಡನಿಂದಲೇ ಆರೋಪ

Koppala News
ಕರ್ನಾಟಕ2 hours ago

Koppala News: ಮಕ್ಕಳ ತಟ್ಟೆಯಲ್ಲಿನ ಮೊಟ್ಟೆ ಕಸಿದುಕೊಂಡ ಅಂಗನವಾಡಿಗೆ ನ್ಯಾಯಾಧೀಶರ ದಿಢೀರ್ ಭೇಟಿ!

Kannada New Movie
ಬೆಂಗಳೂರು2 hours ago

Kannada New Movie: ತೆರೆಗೆ ಬರಲು ಸಿದ್ಧವಾಗಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ʼಸ್ವಪ್ನ ಮಂಟಪʼ ಚಿತ್ರ

Independence Day 2024
ದೇಶ2 hours ago

Independence Day 2024: ಬ್ರಿಟಿಷ್‌ ಕಾಲದ ಚಿನ್ನದ ನಾಣ್ಯದಿಂದ ಹಿಡಿದು ಸ್ವತಂತ್ರ ಭಾರತದ ರೂಪಾಯಿವರೆಗಿನ ಇತಿಹಾಸ ಕುತೂಹಲಕರ!

Vinesh Phogat
ಪ್ರಮುಖ ಸುದ್ದಿ2 hours ago

Vinesh Phogat : ವಿನೇಶ್​ ಪೋಗಟ್​ ಅನರ್ಹತೆ ತೀರ್ಪು ಆಗಸ್ಟ್​​​ 16ಕ್ಕೆ ಮುಂದೂಡಿಕೆ

Cauvery Water Dispute
ಕರ್ನಾಟಕ2 hours ago

Cauvery Water Dispute: ಕಾವೇರಿ ನೀರು ನಿಗದಿಗಿಂತ ಹೆಚ್ಚು ಹರಿಸಿದರೂ ತಮಿಳುನಾಡು ಆಕ್ಷೇಪ!

Sheikh Hasina
ಪ್ರಮುಖ ಸುದ್ದಿ2 hours ago

Sheikh Hasina : ಬಾಂಗ್ಲಾದಿಂದ ಪಲಾಯನ ಮಾಡಿದ ಬಳಿಕ ಮೊದಲ ಬಾರಿ ಹೇಳಿಕೆ ನೀಡಿದ ಶೇಖ್​ ಹಸೀನಾ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌