Kamikaze Drones : ಸ್ವಾತಂತ್ರ್ಯೋತ್ಸವದ ಸಂಭ್ರಮದ ನಡುವೆ ಸ್ವದೇಶಿ ನಿರ್ಮಿತ ಬಾಂಬರ್​​ ಡ್ರೋನ್​ ಸಿದ್ಧಪಡಿಸಿದ ಭಾರತ - Vistara News

ದೇಶ

Kamikaze Drones : ಸ್ವಾತಂತ್ರ್ಯೋತ್ಸವದ ಸಂಭ್ರಮದ ನಡುವೆ ಸ್ವದೇಶಿ ನಿರ್ಮಿತ ಬಾಂಬರ್​​ ಡ್ರೋನ್​ ಸಿದ್ಧಪಡಿಸಿದ ಭಾರತ

Kamikaze Drones :

VISTARANEWS.COM


on

Kamikaze Drones
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತ 78 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಕ್ಕೆ ಸಿದ್ಧಗೊಳ್ಳುತ್ತಿದೆ. ಇದೇ ವೇಳೆ ಭಾರತ ತನ್ನ ರಕ್ಷಣಾ ವಲಯದಲ್ಲಿ ಅತ್ಯುತ್ತಮ ಸಾಧನೆಯೊಂದನ್ನು ಮಾಡಿದೆ. ರಾಷ್ಟ್ರೀಯ ಏರೋಸ್ಪೇಸ್ ಲ್ಯಾಬೊರೇಟರೀಸ್ (ಎನ್ಎಎಲ್) ಸ್ವದೇಶಿ ನಿರ್ಮಿತ ಕಮಿಕಾಜೆ ಡ್ರೋನ್​ಗಳನ್ನು (ಸ್ಫೋಟಗೊಳ್ಳುವ ಡ್ರೋನ್​ಗಳು) ನಿರ್ಮಿಸಿದೆ (Kamikaze Drones). ಇದು ಅತ್ಯಂತ ಅಪಾಯಕಾರಿ ಡ್ರೋನ್ ಆಗಿದ್ದು ಎದುರಾಳಿಯನ್ನು ಸ್ಪಷ್ಟವಾಗಿ ಗುರಿಯಾಗಿಸಿಕೊಂಡು ಸ್ಫೋಟಗೊಳ್ಳುವ ಆತ್ಮಾಹುತಿ ಬಾಂಬರ್ ಆಗಿದೆ. ರಷ್ಯಾ-ಉಕ್ರೇನ್ ಯುದ್ಧ ಮತ್ತು ಗಾಝಾದಲ್ಲಿ ನಡೆಯುತ್ತಿರುವ ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ಇಂಥ ಡ್ರೋನ್​ಗಳನ್ನು ವ್ಯಾಪಕವಾಗಿ ಬಳಸಲಾಗುತ್ತಿದೆ. ಇಂಥ ಡ್ರೋನ್​ಗಳು ಇನ್ನು ಭಾರತದ ಸೇನೆಯನ್ನೂ ಸೇರಲಿದೆ. ಹೆಚ್ಚು ಶಕ್ತಿಯುತವಾದ ಈ ಯುದ್ದ ಉಪಕರಣದ ಸೇರ್ಪಡೆಯುವ ಭಾರತದ ಶಕ್ತಿಯನ್ನು ಹೆಚ್ಚಿಸಲಿದೆ.

ಇದನ್ನೂ ಓದಿ : ಸೆಬಿ ಅಧ್ಯಕ್ಷರ ವಜಾಗೆ ಆಗ್ರಹಿಸಿದ ಕಾಂಗ್ರೆಸ್​ನಿಂದ ಆಗಸ್ಟ್​​ 22ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ

ಕಮಿಕಾಜೆ ಮಾನವರಹಿತ ವೈಮಾನಿಕ ಡ್ರೊನ್​​ಗಳನ್ನು ರಷ್ಯಾದ ಸೈನಿಕರು ಮತ್ತು ಶಸ್ತ್ರಸಜ್ಜಿತ ವಾಹನಗಳನ್ನು ಗುರಿಯಾಗಿಸಿ ಉಕ್ರೇನಿಯನ್ನರು ಈಗ ಬಳಸುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಉಕ್ರೇನ್​ ಪಡೆ ಈ ರೀತಿಯ ದಾಳಿಯನ್ನು ಮಾಡಿರುವುದು ವರದಿಯಾಗಿದೆ. ಈ ಡ್ರೋನ್​ ಗುರಿಯನ್ನು ಹುಡುಕಿಕೊಂಡು ಹೆಚ್ಚು ಹೊತ್ತು ಅಲೆದಾಡುತ್ತದೆ. ಸ್ಫೋಟಕಗಳನ್ನು ಒತ್ತೊಯ್ಯುವ ಈ ಡ್ರೋನ್​ ದೂರದಲ್ಲಿ ಕುಳಿತಿರುವ ನಿಯಂತ್ರಕರಿಂದ ಆದೇಶ ಪಡೆದು ಆತ್ಮಾಹುತಿ ದಾಳಿಕೋರನಾಗುತ್ತದೆ. ಇಂಥ ಡ್ರೋನ್​​ಗಳನ್ನು ಹಿಂಡುಗಳಂತೆಯೂ ಕಳುಹಿಸಬಹುದು. ಇದರ ಲಾಭವೇನೆಂದರೆ ಅನೇಕ ಡ್ರೋನ್​ಗಳು ಏಕಾಕಾಲಕ್ಕೆ ದಾಳಿ ಮಾಡುವಾಗ ಶತ್ರು ಪಡೆಯ ರಾಡಾರ್​ಗಳ ಕಣ್ತಪ್ಪಿಸಬಹುದು. ಇಂಥ ಡ್ರೋನ್​ಗಳಿಗೂ ಪ್ರತ್ಯಸ್ತ್ರವನ್ನೂ ಇಸ್ರೇಲ್​ನಂಥ ದೇಶಗಳು ಹೊಂದಿವೆ. ಆದಾಗ್ಯೂ ತಪ್ಪಿಸಿಕೊಂಡ ಕೆಲವು ಶತ್ರುಗಳ ಸಾಮರ್ಥ್ಯ ಕುಗ್ಗಿಸಬಹುದು.

ಕಮಿಕಾಜೆ ಆತ್ಮಹತ್ಯಾ ಕಾರ್ಯಾಚರಣೆಗಳನ್ನು ಮೊದಲ ಬಾರಿಗೆ ಎರಡನೇ ಮಹಾಯುದ್ಧದ ಕೊನೆಯಲ್ಲಿ ಪ್ರಯೋಗಗೊಂಡಿತು. ಜಪಾನಿನ ವಾಯುಪಡೆಯು ಪೈಲಟ್​ಗಳ ಸಂಖ್ಯೆ ಕಡಿಮೆಯಾದ ಬಳಿಕ ತಮ್ಮ ಯುದ್ಧ ವಿಮಾನಗಳನ್ನು ಶತ್ರು ರಾಷ್ಟ್ರಗಳ ವಿಮಾನಗಳು ಮತ್ತು ಹಡಗುಗಳ ಮೇಲೆ ಬೀಳಿಸಿ ಸ್ಫೋಟಿಸುವಂತೆ ಮಾಡುತ್ತಿದ್ದರು.

ಸ್ವದೇಶಿ ಕಮಿಕಾಜೆ ಡ್ರೋನ್​ ಸಂಶೋಧನೆಯ ನೇತೃತ್ವ ವಹಿಸಿರುವ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್​​ನ ನಿರ್ದೇಶಕ ಡಾ.ಅಭಯ್ ಪಾಶಿಲ್ಕರ್ ಮಾಹಿತಿ ನೀಡಿ “ಭಾರತವು ಈ ಸಂಪೂರ್ಣ ದೇಶೀಯ ಕಮಿಕಾಜೆ ಡ್ರೋನ್​​ಗಳನ್ನು ಅಭಿವೃದ್ಧಿಪಡಿಸುತ್ತಿದೆ. ಇದು 21 ನೇ ಶತಮಾನದ ಹೊಸ ಯುಗದ ಯುದ್ಧ ತಂತ್ರಕ್ಕೆ ಅಗತ್ಯವಾಗಿದೆ ” ಎಂದು ಹೇಳುತ್ತಾರೆ.

ಭಾರತದ ಡ್ರೋನ್ ಸಾಮರ್ಥ್ಯವೇನು?

ಭಾರತೀಯ ಕಮಿಕಾಜೆ ಡ್ರೋನ್ ಸುಮಾರು 2.8 ಮೀಟರ್ ಉದ್ದವಿರುತ್ತದೆ. 3.5 ಮೀಟರ್ ಅಗಲದ ರೆಕ್ಕೆಗಳನ್ನು ಹೊಂದಿದೆ. ಒಟ್ಟಾರೆ ಸುಮಾರು 120 ಕೆಜಿ ತೂಕ ಹೊಂದಿರುವ ಈ ಡ್ರೋನ್​ 25 ಕೆ.ಜಿ ಸ್ಫೋಟಕಗಳನ್ನು ಹೊತ್ತೊಯ್ಯುತ್ತಿದೆ.

ಸಂಶೋಧನಾ ತಂಡದ ಡಾ.ಪಾಶಿಲ್ಕರ್ ಮಾತನಾಡಿ, ಭಾರತದ ಈ ಅಲೆಮಾರಿ ಶಸ್ತ್ರಾಸ್ತ್ರಗಳು ಸುಮಾರು ಒಂಬತ್ತು ಗಂಟೆಗಳ ಹಾರಾಟ ಸಾಮರ್ಥ್ಯ ಹೊಂದಿರುತ್ತವೆ, ಅಂದರೆ ಒಮ್ಮೆ ಉಡಾವಣೆಯಾದ ನಂತರ ಅದು ಅಗತ್ಯವಾಗಿರು ಕ್ಷೇತ್ರದಲ್ಲಿ ನಿರಂತರವಾಗಿ ಹಾರಬಹುದು. ಗುರಿಯನ್ನು ಗುರುತಿಸಿದ ನಂತರ ನಿಯಂತ್ರಕ ಅನುಮತಿಯ ನಂತರ ‘ಡು ಆರ್​ ಡೈ ಡ್ರೋನ್ ಅನ್ನು ತನ್ನ ಆತ್ಮಹತ್ಯೆ ಕಾರ್ಯಾಚರಣೆ ಆರಂಭಿಸುತ್ತದೆ.

ಸಿಎಸ್ಐಆರ್-ಎನ್ಎಎಲ್ ಅನ್ನು ನೋಡಲ್ ಪ್ರಯೋಗಾಲಯವಾಗಿ ಮತ್ತು ಸಿಎಸ್ಐಆರ್​​ನ ಎಲ್ಲಾ ಪ್ರಮುಖ ಎಂಜಿನಿಯರಿಂಗ್ ಪ್ರಯೋಗಾಲಯಗಳಲ್ಲಿ ಕಮಿಕಾಜೆ ಡ್ರೋನ್​​ಗಳ ಯೋಜನೆ ಪ್ರಾರಂಭಿಸಲು ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (CSIR) ತಾತ್ವಿಕ ಅನುಮೋದನೆ ನೀಡಿದೆ. ಈ ಸಾಮರ್ಥ್ಯವು ನಮ್ಮ ರಾಷ್ಟ್ರೀಯ ಭದ್ರತಾ ಅಗತ್ಯಗಳನ್ನು ಪೂರೈಸಲಿದೆ.

ಭಾರತೀಯ ಕಮಿಕಾಜೆ ಡ್ರೋನ್ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿದ 30-ಅಶ್ವಶಕ್ತಿಯ ವಾಂಕೆಲ್ ಎಂಜಿನ್ ಅನ್ನು ಬಳಸುತ್ತದೆ. ಇದು ಗಂಟೆಗೆ 180 ಕಿಲೋಮೀಟರ್ ಗರಿಷ್ಠ ವೇಗದಲ್ಲಿ ಸಾಗುತ್ತದೆ. 1,000 ಕಿಲೋಮೀಟರ್ ನಿರಂತರವಾಗಿ ಹಾರುವ ಸಾಮರ್ಥ್ಯ ಹೊಂದಿದೆ.

ಭಾರತೀಯ ಆವೃತ್ತಿಯು ಜಿಪಿಎಸ್ ಇಲ್ಲದ ಸನ್ನಿವೇಶಗಳಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತದೆ. ಗುರಿಯನ್ನು ನ್ಯಾವಿಗೇಟ್ ಮಾಡಲು ಮತ್ತು ಹೋಮಿಂಗ್ ಮಾಡಲು ಭಾರತೀಯ ಎನ್ಎವಿಐಸಿಯನ್ನು (NAViC) ಬಳಸಬಹುದಾಗಿದೆ. “ಇತರ ದೇಶಗಳು ನಿಯೋಜಿಸಿದ ಇಂತಹ ಡ್ರೋನ್​​ಗಳು ಬೇರೆಡೆ ನಡೆಯುತ್ತಿರುವ ಆಧುನಿಕ ಯುದ್ಧಗಳಲ್ಲಿ ಹೆಚ್ಚಿನ ಸಾಮರ್ಥ್ಯ ಪ್ರದರ್ಶಿಸಿವೆ ” ಎಂದು ಡಾ.ಪಾಶಿಲ್ಕರ್ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral News: ಯೋಧನ ಮೇಲೆ ಪೊಲೀಸರ ದೌರ್ಜನ್ಯ; ನಗ್ನಗೊಳಿಸಿ ಹಿಗ್ಗಾಮುಗ್ಗಾ ಥಳಿತ

Viral News: ಮಿಲಿಟರಿ ಕಮಾಂಡೋ ಒಬ್ಬರನ್ನು ಪೊಲೀಸರು ಬೆತ್ತಲೆಗೊಳಿಸಿ ಥಳಿಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಜೈಪುರದ ಶಿಪ್ರಪಥ್ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ರಾಜಸ್ಥಾನದ ಕ್ಯಾಬಿನೆಟ್ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜತೆಗೆ ಠಾಣೆಗೆ ತೆರಳಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

VISTARANEWS.COM


on

Viral News
Koo

ಜೈಪುರ: ಮಿಲಿಟರಿ ಕಮಾಂಡೋ ಒಬ್ಬರನ್ನು ಪೊಲೀಸರು ಬೆತ್ತಲೆಗೊಳಿಸಿ ಥಳಿಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದ್ದು, ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ರಾಜಸ್ಥಾನದ ಕ್ಯಾಬಿನೆಟ್ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ (Rajyavardhan Singh Rathore) ಕೂಡ ಈ ಘಟನೆಯನ್ನು ಖಂಡಿಸಿದ್ದು, ಅವರು ಪೊಲೀಸರು ತರಾಟೆಗೆ ತೆಗೆದುಕೊಳ್ಳುತ್ತಿರುವ ವಿಡಿಯೊ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ (Viral News) ಆಗಿದೆ.

ಸೇನಾ ಕಮಾಂಡೋ ವಿರುದ್ಧ ಪೊಲೀಸರು ನಡೆಸಿದ ಕ್ರೌರ್ಯದ ಬಗ್ಗೆ ಮಾಹಿತಿ ಪಡೆದ ರಾಜ್ಯವರ್ಧನ್ ಸಿಂಗ್ ರಾಥೋಡ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ವಿಡಿಯೊದಲ್ಲಿ ಅವರು ಪೊಲೀಸ್ ಠಾಣೆಯೊಳಗೆ ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವುದು ಕಂಡು ಬಂದಿದೆ. ಜೈಪುರದ ಶಿಪ್ರಪಥ್ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಪೊಲೀಸರು ಬ್ಯಾರಕ್‌ಗಳಲ್ಲಿ ಕಮಾಂಡರನ್ನು ವಿವಸ್ತ್ರಗೊಳಿಸಿ ಥಳಿಸಿದರು ಮತ್ತು ನಿಂದನಾತ್ಮಕ ಭಾಷೆಯನ್ನು ಬಳಸಿದ್ದರು ಎಂದು ಆರೋಪಿಸಲಾಗಿದೆ. ರಾಜಸ್ಥಾನ ಸರ್ಕಾರದ ಸೈನಿಕ ಕಲ್ಯಾಣ ಸಚಿವರೂ ಆದ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಪೊಲೀಸರಿಗೆ ಬೆವರಿಳಿಸಿದ ಸಚಿವ

ಶಿಪ್ರಪಥ್ ಪೊಲೀಸ್ ಠಾಣೆಯಲ್ಲಿ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರು ಪೊಲೀಸರನ್ನು ಬೆಂಡೆತ್ತುವ ಈ ವಿಡಿಯೊ ಇದೀಗ ನೆಟ್ಟಿಗರ ಗಮನ ಸೆಳೆದಿದೆ. ಭಾರತೀಯ ಸೇನಾ ಕಮಾಂಡೋ ಜತೆ ಪೊಲೀಸರ ದುರ್ವರ್ತನೆಯಿಂದ ಅಸಮಾಧಾನಗೊಂಡ ಅವರು ನೇರ ಪೊಲೀಸ್ ಠಾಣೆಗೆ ತೆರಳಿ ಅಧಿಕಾರಿಗಳ ಬೆವರಳಿಸಿದ್ದಾರೆ. “ನೀವು ಮೂಲಭೂತ ನಡವಳಿಕೆಯನ್ನು ಕಲಿತಿಲ್ಲವೇ ? ಸಮವಸ್ತ್ರವು ಧರಿಸಿದರೆ ಏನೂ ಮಾಡಬಹುದು ಎಂದು ಭಾವಿಸಿದ್ದೀರಾ? ನಿಮ್ಮ ಮನಸ್ಸಿನಲ್ಲಿ ತಾಳ್ಮೆ, ಸಾರ್ವಜನಿಕ ಸೇವೆಯ ಪ್ರಜ್ಞೆ ಇದೆಯೇ?ʼʼ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ನಿಯೋಜಿತರಾಗಿರುವ ಸೇನಾ ಕಮಾಂಡೋ ರಜೆಯ ಹಿನ್ನೆಲೆಯಲ್ಲಿ ತಮ್ಮೂರಾದ ಜೈಪುರಕ್ಕೆ ಆಗಮಿಸಿದ್ದರು. ಆಗಸ್ಟ್ 11ರಂದು ಅವರು ತಮ್ಮ ಸಹ ಕಮಾಂಡೋ ಒಬ್ಬರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಪುರದ ಶಿಪ್ರಪಥ್ ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ ಅಲ್ಲಿನ ಪೊಲೀಸರೊಂದಿಗೆ ವಾಗ್ವಾದ ನಡೆಯಿತು. ಬಳಿಕ ಪೊಲೀಸರು ಕಮಾಂಡರನ್ನು ಬ್ಯಾರಕ್‌ನಲ್ಲಿ ಇರಿಸಿ ಥಳಿಸಿದ್ದರು ಎನ್ನಲಾಗಿದೆ.

ಪೊಲೀಸರು ಕಮಾಂಡರನ್ನು ನಗ್ನಗೊಳಿಸಿ ದೊಣ್ಣೆಗಳಿಂದ ಹೊಡೆದಿದ್ದಲ್ಲದೆ, ‘ಪೊಲೀಸರು ಭಾರತೀಯ ಸೇನೆಗಿಂತ ಶ್ರೇಷ್ಠ’ ಎನ್ನುವ ಅರ್ಥ ಬರುವಂತ ಮಾತು ಹೇಳುವಂತೆ ಬಲವಂತಪಡಿಸಿದ್ದರು. ಜತೆಗೆ ಇದನ್ನು ಚಿತ್ರೀಕರಿಸಿದ್ದಾರೆ ಎಂದು ದೂರಲಾಗಿದೆ. ಈ ವಿಡಿಯೊ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಅವರು ಸ್ವತಃ ಪೊಲೀಸ್‌ ಠಾಣೆಗೆ ಧಾವಿಸಿದರು. ಇದೇ ವೇಳೆ ಪೊಲೀಸರ ಕೃತ್ಯವನ್ನು ಸಮರ್ಥಿಸಿಕೊಂಡ ಎಸಿಪಿ ಸಂಜಯ್ ಶರ್ಮ, ಮೊದಲು ಕಮಾಂಡರ್‌ ತಮ್ಮನ್ನು ನಿಂದಿಸಿದ್ದಾಗಿ ತಿಳಿಸಿದರು.

ʼʼಪೊಲೀಸರು ಭಾರತೀಯ ಸೇನೆಯ ಸೈನಿಕನನ್ನು ಬೆತ್ತಲೆಗೊಳಿಸಿ ಕೋಲುಗಳಿಂದ ಥಳಿಸಿದ್ದಾರೆ. ಇದನ್ನು ಯಾವುದೇ ಸಂದರ್ಭದಲ್ಲೂ ಸಹಿಸಲಾಗುವುದಿಲ್ಲ. ಇದು ಹೇಯ ಕೃತ್ಯ. ಇದು ಅಸಹ್ಯಕರ ಮನಸ್ಥಿತಿಯನ್ನು ತೋರಿಸುತ್ತದೆʼʼ ಎಂದು ರಾಜ್ಯ ವರ್ಧನ್‌ ಸಿಂಗ್‌ ಕಿಡಿಕಾರಿದ್ದಾರೆ. ಸದ್ಯ ಜೈಪುರ ಪೊಲೀಸ್ ಆಯುಕ್ತ ಬಿಜು ಜಾರ್ಜ್ ಜೋಸೆಫ್ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಇನ್ಸ್‌ಪೆಕ್ಟರ್‌ ಬನ್ನಾ ಲಾಲ್ ಸೇರಿದಂತೆ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಿದ್ದಾರೆ.

ಇದನ್ನೂ ಓದಿ: Arshad Nadeem : ಲಷ್ಕರ್ ಉಗ್ರನ ಜತೆ ಕಾಣಿಸಿಕೊಂಡ ಪಾಕಿಸ್ತಾನದ ಒಲಿಂಪಿಕ್ಸ್​ ಚಿನ್ನದ ಪದಕ ವಿಜೇತ ಅರ್ಷದ್​ ನದೀಮ್​!

Continue Reading

ಕ್ರೈಂ

ಅನೈತಿಕ ಸಂಬಂಧದ ಶಂಕೆಗೆ ಬಲಿಯಾಯ್ತು ಐವರ ಜೀವ; ಪತ್ನಿ, ತಾಯಿ, ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ

Illicit Relationship: ಪತ್ನಿ ಪರಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ವ್ಯಕ್ತಿಯೊಬ್ಬ ಆಕೆ, ತಮ್ಮ ಇಬ್ಬರು ಮಕ್ಕಳು, ತಾಯಿಯನ್ನು ಕತ್ತು ಕೊಯ್ದು ಕೊಂದು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಮೃತರನ್ನು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಕಚೇರಿಯಲ್ಲಿ ನಿಯೋಜಿಸಲಾಗಿದ್ದ ಮಹಿಳಾ ಪೊಲೀಸ್‌ ಕಾನ್ಸ್‌ಟೇಬಲ್‌ ನೀತು ಕುಮಾರಿ ಅವರ ಕುಟುಂಬ ಎಂದು ಗುರುತಿಸಲಾಗಿದೆ. ಪತ್ನಿ ನೀತು ಕುಮಾರಿ, ಮಕ್ಕಳಾದ 4 ವರ್ಷದ ಸಿಬು ಮತ್ತು 3 ವರ್ಷದ ಶ್ರೇಯಾ, ತಾಯಿಯನ್ನು ಕೊಂದ ಬಳಿಕ ಪಂಕಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.

VISTARANEWS.COM


on

Illicit Relationship
Koo

ಪಾಟ್ನಾ: ಪತ್ನಿ ಪರಪುರುಷನೊಂದಿಗೆ ಅನೈತಿಕ ಸಂಬಂಧ (Illicit Relationship) ಹೊಂದಿದ್ದಾಳೆ ಎಂದು ಶಂಕಿಸಿ ವ್ಯಕ್ತಿಯೊಬ್ಬ ಆಕೆ, ತಮ್ಮ ಇಬ್ಬರು ಮಕ್ಕಳು, ತಾಯಿಯನ್ನು ಕತ್ತು ಕೊಯ್ದು ಕೊಂದು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದೇಶವನ್ನೇ ಬೆಚ್ಚಿ ಬೀಳಿಸಿದ ಈ ಘಟನೆ ಬಿಹಾರದಲ್ಲಿ ನಡೆದಿದೆ. ಮೃತರನ್ನು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಕಚೇರಿಯಲ್ಲಿ ನಿಯೋಜಿಸಲಾಗಿದ್ದ ಮಹಿಳಾ ಪೊಲೀಸ್‌ ಕಾನ್ಸ್‌ಟೇಬಲ್‌ ನೀತು ಕುಮಾರಿ ಅವರ ಕುಟುಂಬ ಎಂದು ಗುರುತಿಸಲಾಗಿದೆ (Crime News).

ಬಿಹಾರದ ಭಾಗಲ್ಪುರ ಜಿಲ್ಲೆಯ ಪೊಲೀಸ್ ಲೈನ್‌ನಲ್ಲಿ ಈ ಘಟನೆ ನಡೆದಿದ್ದು ಪತ್ನಿ ನೀತು ಕುಮಾರಿ, ಮಕ್ಕಳಾದ 4 ವರ್ಷದ ಸಿಬು ಮತ್ತು 3 ವರ್ಷದ ಶ್ರೇಯಾ, ತಾಯಿಯನ್ನು ಕೊಂದ ಬಳಿಕ ಪಂಕಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ನೀತು ಕುಮಾರಿ ಪರ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಜಗಳವಾಡಿದ ಬಳಿಕ ಪಂಕಜ್‌ ಈ ಕೃತ್ಯ ಎಸಗಿದ್ದಾನೆ ಎಂದು ಮೂಲಗಳು ತಿಳಿಸಿವೆ. ಸ್ಥಳದಲ್ಲಿ ಪಂಕಜ್‌ ಬರೆದ ಡೆತ್‌ ನೋಟ್‌ ಕೂಡ ಲಭಿಸಿದೆ.

ಡೆತ್‌ನೋಟ್‌ನಲ್ಲಿ ಏನಿದೆ?

ಪಂಕಜ್ ಬರೆದ ಡೆತ್‌ನೋಟ್ ಅನ್ನು ಪೊಲೀಸರು ಸ್ಥಳದಿಂದ ವಶಪಡಿಸಿಕೊಂಡಿದ್ದಾರೆ. ಇದರಲ್ಲಿ ಪಂಕಜ್, ಆತ್ಮಹತ್ಯೆಗೂ ಮುನ್ನ ಪತ್ನಿ, ಇಬ್ಬರು ಮಕ್ಕಳು ಹಾಗೂ ತಾಯಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಭಾಗಲ್ಪುರ್ ಉಪ ಪೊಲೀಸ್ ಮಹಾನಿರೀಕ್ಷಕ (ಡಿಐಜಿ) ವಿವೇಕಾನಂದ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ʼʼಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಹಾಲಿನವನು ಮೃತದೇಹಗಳನ್ನು ಗುರುತಿಸಿ ಮಾಹಿತಿ ನೀಡಿದ್ದಾನೆ. ಪೊಲೀಸ್‌ ಕ್ವಾಟರ್ಸ್‌ನಲ್ಲಿ ಐವರ ಶವ ಕಂಡುಬಂದಿದ್ದು, ಈ ಪೈಕಿ ಪಂಕಜ್‌ನ ಮೃತದೇಹ ಸೀಲಿಂಗ್‌ ಫ್ಯಾನ್‌ನಲ್ಲಿ ನೇತಾಡಿಕೊಂಡಿತ್ತು. ಮೇಲ್ನೋಟಕ್ಕೆ ಇದು ಕೌಟುಂಬಿಕ ಕಲಹದಿಂದ ಸಂಭವಿಸಿದ ಘಟನೆ ಎನ್ನುವುದು ತಿಳಿದು ಬಂದಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆʼʼ ಎಂದು ತಿಳಿಸಿದ್ದಾರೆ.

ನೀತು ಕುಮಾರಿ 2015ರಿಂದ ಕಾನ್ಸ್‌ಟೇಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪೊಲೀಸ್‌ ಲೈನ್‌ನಲ್ಲಿರುವ ಕ್ವಾಟರ್ಸ್‌ನಲ್ಲಿ ಅವರು ಪತಿ ಪಂಕಜ್‌, ಇಬ್ಬರು ಮಕ್ಕಳು ಮತ್ತು ತಮ್ಮ ಅತ್ತೆಯೊಂದಿಗೆ ವಾಸವಾಗಿದ್ದರು. ವಿಶೇಷ ಎಂದರೆ ಇವರದ್ದು ಲವ್‌ ಮ್ಯಾರೇಜ್‌.

ಪದೇ ಪದೆ ಜಗಳ

ʼʼನೀತು ಕುಮಾರಿ ಪರ ಪುರುಷನೊಂದಿಗೆ ಅನೃತಿಕ ಸಂಬಂಧ ಹೊಂದಿದ್ದಾರೆ ಎಂದು ಪಂಕಜ್‌ಗೆ ಕೆಲವು ದಿನಗಳಿಂದ ಅನುಮಾನ ಕಾಡುತ್ತಿತ್ತು. ಇದೇ ವಿಚಾರವಾಗಿ ದಂಪತಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಘಟನೆ ನಡೆಯುವ ಹಿಂದಿನ ದಿನವೂ ಇದೇ ರೀತಿ ಜಗಳವಾಡಿ ಪಂಕಜ್‌ ಹಲ್ಲೆ ನಡೆಸಲು ಮುಂದಾಗಿದ್ದ. ಆದರೆ ನೀತು ಕುಮಾರಿ ಈ ಬಗ್ಗೆ ಯಾವುದೇ ದೂರು ನೀಡಿರಲಿಲ್ಲʼʼ ಎಂದು ವಿವೇಕಾನಂದ ಅವರು ಘಟನೆ ಬಗ್ಗೆ ವಿವರಿಸಿದ್ದಾರೆ. ದಂಪತಿ ಮಧ್ಯೆ ಆಗಾಗ ಕ್ಲುಲ್ಲಕ ಕಾರಣಕ್ಕೆ ಜಗಳ ನಡೆಯುತ್ತಿತ್ತು ಎಂದು ಸ್ಥಳೀಯರೂ ತಿಳಿಸಿದ್ದಾರೆ.

ಇದನ್ನೂ ಓದಿ: Illicit Relationship: ವಿಚ್ಛೇದಿತ ನರ್ಸ್‌ ಜೊತೆ ಲವ್ವಿ ಡವ್ವಿ; ಪೊಲೀಸಪ್ಪನಿಗೇ ಕಾನೂನು ರುಚಿ ತೋರಿಸಿದ ಪತ್ನಿ

Continue Reading

ದೇಶ

Garlic: ಬೆಳ್ಳುಳ್ಳಿ ತರಕಾರಿಯೋ, ಮಸಾಲೆ ಪದಾರ್ಥವೋ? ಗೊಂದಲಕ್ಕೆ ತೆರೆ ಎಳೆದ ಹೈಕೋರ್ಟ್‌ ತೀರ್ಪಿನಲ್ಲಿ ಏನಿದೆ?

Garlic: ಬೆಳ್ಳುಳ್ಳಿ ತರಕಾರಿಯೋ ಅಥವಾ ಮಸಾಲೆ ಪದಾರ್ಥವೋ ಎಂಬ ಸುಮಾರು 1 ದಶಕದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಸುದೀರ್ಘ ವಿಚಾರಣೆ, ಕಾನೂನು ಹೋರಾಟದ ನಂತರ ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಪೀಠ ತೀರ್ಪು ನೀಡಿದೆ. ಹಾಗಾದರೆ ತೀರ್ಪಿನಲ್ಲಿ ಏನಿದೆ? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Garlic
Koo

ಭೋಪಾಲ್‌: ನಾವು ಪ್ರತಿ ದಿನ ಅಡುಗೆಗಳಲ್ಲಿ ಬಳಸುವ ಬೆಳ್ಳುಳ್ಳಿ (Garlic) ತರಕಾರಿಯೋ ಅಥವಾ ಮಸಾಲೆ ಪದಾರ್ಥವೋ ಎಂಬ ಸುಮಾರು 1 ದಶಕದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಸುದೀರ್ಘ ವಿಚಾರಣೆ, ಕಾನೂನು ಹೋರಾಟದ ನಂತರ ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಪೀಠ (Indore bench of the Madhya Pradesh High Court)ವು ನಿರ್ಣಾಯಕ ತೀರ್ಪು ಪ್ರಕಟಿಸಿದ್ದು, ಬೆಳ್ಳುಳ್ಳಿಯೂ ತರಕಾರಿ ಎಂದು ಹೇಳಿದೆ.

ಬೆಳ್ಳುಳ್ಳಿ ತರಕಾರಿಯೇ ಅಥವಾ ಮಸಾಲೆ ಪದಾರ್ಥವೇ ಎನ್ನುವ ಪ್ರಕರಣದಲ್ಲಿ ಬೆಳ್ಳುಳ್ಳಿಯನ್ನು ಮೂಲವಾಗಿರಿಸಿ ಚರ್ಚೆಯನ್ನು ನಡೆಸಲಾಗಿದೆ. ಅಂತೂ ಬೆಳ್ಳುಳ್ಳಿ ಒಂದು ತರಕಾರಿಯ ವಿಧ ಎಂದು ಕೋರ್ಟ್‌ ಪೀಠ ತೀರ್ಪು ನೀಡುವ ಮೂಲಕ ಹಲವು ವರ್ಷಗಳ ಪ್ರಶ್ನೆಗೆ ಉತ್ತರ ನೀಡಿದೆ. ಮುಖ್ಯವಾಗಿ ಬೆಳ್ಳುಳ್ಳಿಯ ಕೊಳೆಯುವ ಸ್ವಭಾವವನ್ನು ತೀರ್ಪಿನಲ್ಲಿ ಪ್ರಮುಖ ಅಂಶವಾಗಿ ಉಲ್ಲೇಖಿಸಲಾಗಿದೆ. ಜತೆಗೆ ತರಕಾರಿ ಮತ್ತು ಮಸಾಲೆ ಮಾರುಕಟ್ಟೆಗಳಲ್ಲಿ ಮಾರಾಟಕ್ಕೆ ಅನುಮತಿ ನೀಡಲಾಗಿದೆ.

ಗೊಂದಲ ಆರಂಭವಾಗಿದ್ದು ಯಾವಾಗ?

ಬೆಳ್ಳುಳ್ಳಿ ಬಗ್ಗೆ ಗೊಂದಲ ಆರಂಭವಾಗಿದ್ದು 2015ರಲ್ಲಿ. ಅಂದು ಮಧ್ಯಪ್ರದೇಶದ ರೈತ ಸಂಘಟನೆಯೊಂದು ಬೆಳ್ಳುಳ್ಳಿಯನ್ನು ತರಕಾರಿ ಎಂದು ವರ್ಗೀಕರಿಸಲು ಮಂಡಿ ಮಂಡಳಿಯನ್ನು ಮನವೊಲಿಸಿದಾಗ ಈ ವಿವಾದವು ಪ್ರಾರಂಭವಾಯಿತು. ಆದಾಗ್ಯೂ ಕೃಷಿ ಇಲಾಖೆ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿತು. 1972ರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾಯ್ದೆಯಡಿ ಬೆಳ್ಳುಳ್ಳಿಯನ್ನು ಮಸಾಲೆ ಎಂದು ಮರು ವರ್ಗೀಕರಿಸಿತು. ಆ ಮೂಲಕ ಬೆಳ್ಳುಳ್ಳಿಯ ವಿಚಾರದಲ್ಲಿ ಗೊಂದಲ ಮೂಡಿತು. ಇದು ಕಾನೂನು ಸಮರಕ್ಕೆ ದಾರಿ ಮಾಡಿ ಕೊಟ್ಟಿತು.

2017ರಲ್ಲಿ ಹೈಕೋರ್ಟ್‌ ʼಬೆಳ್ಳುಳ್ಳಿ ಒಂದು ತರಕಾರಿʼ ಎಂಬ ತೀರ್ಪು ನೀಡಿತು. ಆ ತೀರ್ಪನ್ನು ಇದೀಗ ನ್ಯಾ.ಎಸ್.ಎ.ಧರ್ಮಾಧಿಕಾರಿ ಮತ್ತು ಡಿ.ವೆಂಕಟರಮಣ ಅವರಿದ್ದ ದ್ವಿಸದಸ್ಯ ಪೀಠ ಎತ್ತಿ ಹಿಡಿದಿದೆ.

ಟೀಕೆ ವ್ಯಕ್ತವಾಗಿತ್ತು

2017ರಲ್ಲಿ ಏಕ ಸದಸ್ಯ ಪೀಠವು ಬೆಳ್ಳುಳ್ಳಿಯನ್ನು ತರಕಾರಿ ಎಂದು ವರ್ಗೀಕರಿಸಿ ರೈತ ಸಂಘದ ಪರವಾಗಿ ತೀರ್ಪು ನೀಡಿದಾಗ ಈ ನಿರ್ಧಾರಕ್ಕೆ ಉದ್ಯಮಿಗಳಿಂದ ಟೀಕೆ ವ್ಯಕ್ತವಾಯಿತು. ಈ ತೀರ್ಪು ಮುಖ್ಯವಾಗಿ ರೈತರಿಗಿಂತ ಕಮಿಷನ್ ಏಜೆಂಟರಿಗೆ ಲಾಭವಾಗಿದೆ ಎಂದು ವಾದಿಸಲಾಯಿತು. ಬಳಿಕ ಅರ್ಜಿದಾರ ಮುಖೇಶ್ ಸೋಮಾನಿ 2017ರಲ್ಲಿ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿದರು. ಆ ಮೂಲಕ ಪ್ರಕರಣ ಹೈಕೋರ್ಟ್‌ನ ಇಬ್ಬರು ನ್ಯಾಯಾಧೀಶರ ಪೀಠದ ಮುಂದೆ ಬಂತು. 2024ರ ಜನವರಿಯಲ್ಲಿ ಈ ನ್ಯಾಯಪೀಠವು ಬೆಳ್ಳುಳ್ಳಿಯನ್ನು ಮಸಾಲೆ ಎಂದು ಮರು ವರ್ಗೀಕರಿಸುವ ತೀರ್ಪನ್ನು ರದ್ದುಗೊಳಿಸಿತು. ಆರಂಭಿಕ ನಿರ್ಧಾರವು ಮುಖ್ಯವಾಗಿ ವ್ಯಾಪಾರಿಗಳಿಗೆ ಅನುಕೂಲವಾಗುತ್ತಿತ್ತು, ಬೆಳ್ಳುಳ್ಳಿ ಬೆಳೆಯುವ ರೈತರಿಗೆ ಅಲ್ಲ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿತು.

ಇದನ್ನೂ ಓದಿ: DK Shivakumar: ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂಪಡೆದ ಪ್ರಕರಣ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

ಬೆಳ್ಳುಳ್ಳಿ ವ್ಯಾಪಾರಿಗಳು ಮತ್ತು ಕಮಿಷನ್ ಏಜೆಂಟರು ಈ ವರ್ಷದ ಮಾರ್ಚ್‌ನಲ್ಲಿ ಆ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿದರು. ಮತ್ತೆ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಪೀಠವು 2017ರ ಆದೇಶವನ್ನು ಎತ್ತಿ ಹಿಡಿದು ಬೆಳ್ಳುಳ್ಳಿಯನ್ನು ತರಕಾರಿ ಎಂದೇ ತೀರ್ಮಾನಿಸಿದೆ. ಸದ್ಯ ಬೆಳ್ಳುಳ್ಳಿ ವ್ಯಾಪಾರದಲ್ಲಿ ಇರುವ ನಿರ್ಬಂಧಗಳನ್ನು ತೆಗೆದುಹಾಕುವ ನಿರೀಕ್ಷೆ ಇದೆ. ಹೀಗಾದಲ್ಲಿ ಉತ್ಪಾದಕರು ಮತ್ತು ಮಾರಾಟಗಾರರಿಗೂ ಹೊಸ ಅವಕಾಶ ತೆರೆದುಕೊಳ್ಳಲಿದೆ.

Continue Reading

ಅಂಕಣ

ಧವಳ ಧಾರಿಣಿ ಅಂಕಣ: ರಾಮವಿಲಾಪಕ್ಕೆ ಲಕ್ಷ್ಮಣೋಪಶಮನ

ಧವಳ ಧಾರಿಣಿ ಅಂಕಣ: ಹಲವು ವಿಧಗಳಲ್ಲಿ ಸೀತೆಗಾಗಿ ವಿಲಪಿಸುತ್ತಾನೆ. ರಾಮನ ದುಃಖವನ್ನು ಶಮನ ಮಾಡುವ ಲಕ್ಷ್ಮಣನ ಸಂಯಮ ಅದ್ಭುತವಾದದ್ದು. ಲಕ್ಷ್ಮಣ ರಾಮನಿಗೆ ತನ್ನ ಕರ್ತವ್ಯವನ್ನು ನಿಭಾಯಿಸುವಂತೆ ಆತನನ್ನು ಎಚ್ಚರಿಸುವ ಅಪೂರ್ವ ಮಾತುಗಳು ಕಿಷ್ಕಿಂಧಾಕಾಂಡದ ಮೊದಲನೆಯ ಸರ್ಗದಲ್ಲಿ ಬರುತ್ತದೆ.

VISTARANEWS.COM


on

rama laxmana ಧವಳ ಧಾರಿಣಿ ಅಂಕಣ
Koo

ವಿಯೋಗದಿಂದ ಕದಡಿದ ಮನಸ್ಸಿಗೆ ಪೂರ್ವಸ್ಮೃತಿಯನ್ನು ತಂದುಕೊಡುವ ಸನ್ನಿವೇಶ

dhavala dharini by Narayana yaji

:: ನಾರಾಯಣ ಯಾಜಿ

ತ್ಯಜತ್ವಾಂ ಕಾಮವೃತ್ತತ್ತ್ವಂ ಶೋಕಂ ಸಂನ್ಯಸ್ಯ ಪೃಷತಃ I
ಮಹಾತ್ಮನಂ ಕೃತಾತ್ಮಾನಮಾತ್ಮಾನಂ ನಾವಬಿಧ್ಯಸೇ II ಕಿ. 1.123 II

ಸೀತಾವಿಯೋಗದಿಂದುಂಟಾಗಿರುವ ಶೋಕವನ್ನು ಬಿಡು. ಮನ್ಮಥವಿಕಾರವನ್ನು ತ್ಯಜಸು! ನೀನು ಮಹಾತ್ಮನೆಂಬುದನ್ನೂ , ಕೃತಾತ್ಮನೆನ್ನುವುದನ್ನೂ ಮರೆತುಬಿಟ್ಟಿರುವೆ.

ರಾಮಾಯಣದಲ್ಲಿ ಕಿಷ್ಕಿಂಧಾ ಕಾಂಡದ ಬಹುಮುಖ್ಯವಾದ ಘಟನೆಯೇ ಪತ್ನಿಯ ವಿರಹದಿಂದ ಅಪಾರ ದುಃಖಕ್ಕೆ ಒಳಗಾದ ರಾಮನನ್ನು ಲಕ್ಷ್ಮಣ ಸಮಾಧಾನಪಡಿಸುವುದು. ಕಿಷ್ಕಿಂಧಾ ಕಾಂಡದ ನಾಲ್ಕನೆಯ ಸರ್ಗದಲ್ಲಿ ಲಕ್ಷ್ಮಣ ಎಂಟು ಶ್ಲೋಕದಲ್ಲಿ ರಾಮನು ಸುಗ್ರೀವನಲ್ಲಿಗೆ ಶರಣು ಹೊಂದಲು ಬಂದಿದ್ದಾನೆ ಎನ್ನುವ ಮಾತುಗಳನ್ನು ಹೇಳಿದ್ದಾನೆ ಎನ್ನುವುದನ್ನು ನೋಡಿದ್ದೇವೆ. ಆರು ಬಗೆಯಲ್ಲಿ ಎಂಟು ಶ್ಲೋಕಗಳಲ್ಲಿ (ರಾಮಶ್ಚ ಸುಗ್ರೀವಂ ಶರಣಂ ಗತೌ ಮುಂತಾಗಿ) ಲಕ್ಷ್ಮಣನು ಹನುಮಂತನ ಹತ್ತಿರ ಕೇಳಿಕೊಳ್ಳುವ ಭಾಗ ರಾಮನ ವ್ಯಕ್ತಿತ್ವಕ್ಕೆ ಒಂದು ಕಪ್ಪುಚುಕ್ಕೆ ಎಂದು ಕೆಲ ಟೀಕಾಕಾರರು ಹೇಳಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಲಕ್ಷ್ಮಣ ಹಾಗೆ ಹೇಳಲಿಕ್ಕೆ ಕಾರಣವಾಗಿರುವ ಸಂಗತಿಯನ್ನು ಕಿಷ್ಕಿಂಧಾ ಕಾಂಡದ ಮೊದಲ ಭಾಗದಲ್ಲಿ ವಿವರವಾಗಿ ವಿವೇಚಿಸಲಾಗಿದೆ. ಸಮಗ್ರ ಭೂಮಂಡಲದ ಚಕ್ರವರ್ತಿಗಳಾದ ರಘುವಂಶೀಯ ರಾಮ ತನ್ನ ಸಿಂಹಾಸನದ ಘನತೆ ಗೌರವವನ್ನೆಲ್ಲಾ ಬಿಟ್ಟು ಸುಗ್ರೀವನಲ್ಲಿ ಆಶ್ರಯ ಕೋರಿ ಬಂದಿದ್ದಾನೆ. ಸೀತೆಯನ್ನು ಕಳೆದುಕೊಂಡ ರಾಮನಿಗೆ ಬುದ್ಧಿ ವಿಸ್ಮೃತಿಯಾಗಿತ್ತು. ವಿರಹದಿಂದಲಾಗಿ ರಾಮ ಗೋದಾವರಿ ನದಿಯನ್ನು ಬತ್ತಿಸಿಬಿಡುವೆ, ವಿಂದ್ಯಪರ್ವತವನ್ನೇ ಕೆಡಹಿಬಿಡುವೆ ಎಂದು ಕೂಗಾಡುವುದು ನಂತರ ಪಂಪಾಸರೋವರದಲ್ಲಿದ್ದ ಕಮಲವನ್ನೇ ತಿಂಗಳ ಬೆಳಕಿನಲ್ಲಿ ಕಮಲಮುಖಿ ಸೀತೆ ಎಂದು ಭ್ರಮಿಸಿ ಸರೋವರಕ್ಕೆ ಧುಮುಕಲು ಹೋಗುವುದು, ಹೀಗೆ ಹಲವು ವಿಧಗಳಲ್ಲಿ ಸೀತೆಗಾಗಿ ವಿಲಪಿಸುತ್ತಾನೆ. ರಾಮನ ದುಃಖವನ್ನು ಶಮನ ಮಾಡುವ ಲಕ್ಷ್ಮಣನ ಸಂಯಮ ಅದ್ಭುತವಾದದ್ದು. ಲಕ್ಷ್ಮಣ ರಾಮನಿಗೆ ತನ್ನ ಕರ್ತವ್ಯವನ್ನು ನಿಭಾಯಿಸುವಂತೆ ಆತನನ್ನು ಎಚ್ಚರಿಸುವ ಅಪೂರ್ವ ಮಾತುಗಳು ಕಿಷ್ಕಿಂಧಾಕಾಂಡದ ಮೊದಲನೆಯ ಸರ್ಗದಲ್ಲಿ ಬರುತ್ತದೆ. ರಾಮ ತನ್ನ ತಂದೆ ತಾಯಿಯರಿಗೆ, ಸುಮಂತ್ರನಿಗೆ, ಗುಹನಿಗೆ ವಶಿಷ್ಠರು, ಜಾಬಾಲಿ ಮತ್ತು ಭರತನಿಗೆ ತನ್ನ ವನವಾಸ ದೀಕ್ಷೆಯ ಕುರಿತು ತಿಳಿಹೇಳುವ ಮಾತುಗಳು ಬಲು ಪ್ರಸಿದ್ಧ. ಪ್ರಸ್ತುತ ಸಂದರ್ಭದಲ್ಲಿ ಸೀತಾಪಹರಣವೆನ್ನುವುದು ಆತನ ಬುದ್ಧಿಯನ್ನು ವಿಭ್ರಣೆಗೊಳಿಸಿಬಿಟ್ಟಿದೆ. ಆತನಿಗೆ ಆ ದಟ್ಟ ಅರಣ್ಯದಲ್ಲಿ ಬುದ್ಧಿ ಹೇಳುವವರು ಯಾರೂ ಇಲ್ಲ. ಆ ಕೆಲಸವನ್ನು ಇಲ್ಲಿ ಲಕ್ಷ್ಮಣ ಮಾಡಬೇಕಾದ ಅನಿವಾರ್ಯತೆ ಬರುತ್ತದೆ. ಹಾಗೇ ವಿವೇಕವನ್ನು ಹೇಳುವಾಗ ಲಕ್ಷ್ಮಣನಿಗೆ ತನ್ನ ಮಿತಿಯ ಅರಿವಿದೆ. ಆಜ್ಞಾಪೂರ್ವಕವಾಗಿ ಹೇಳುವಂತಿಲ್ಲ. ಉಪದೇಶವೂ ಆಗಕೂಡದು, ಹೇಳುವ ವಿಧಾನದಲ್ಲಿ ಹಿರಿಯನ ಗೌರವವಕ್ಕೆ ಚ್ಯುತಿಬರಬಾರದು.

ವಾಲ್ಮೀಕಿ ಇಲ್ಲಿ ಲಕ್ಷ್ಮಣನಿಂದ ಅಣ್ಣನಿಗೆ ವಿವೇಕವನ್ನು ಹೇಳುವ ವಿವರ ಬಲು ಆಸಕ್ತಿದಾಯಕವಾಗಿದೆ. ಮಹಾಕಾವ್ಯವನ್ನು ಬರೆಯಲು ವಾಲ್ಮೀಕಿಯಲ್ಲಿ ಅದೆಷ್ಟು ಲೋಕಾನುಭವ ಮತ್ತು ಶಾಸ್ತ್ರದ ಅಧ್ಯಯನ ಇರಬಹುದೆನ್ನುವುದಕ್ಕೆ ಇದೊಂದು ನಿದರ್ಶನ. ಆತ ರಾಮನಿಗೆ ಹೀಗೆ ಮಾಡಿ ಎಂದು ಹೇಳುವುದಿಲ್ಲ. ಚಿಕ್ಕವ ಹಿರಿಯರ ಹತ್ತಿರ ತನಗೆ ತಿಳಿಯದ ವಿಷಯವನ್ನು ಕಲಿಸಿಕೊಡು ಎನ್ನುವ ರೀತಿಯಲ್ಲಿ ಇದೇಕೆ ಹೀಗೆ ಎನ್ನುವ ಅನೇಕ ಪ್ರಶ್ನೆಗಳ ಮೂಲಕ ರಾಮನಲ್ಲಿ ಪ್ರಶ್ನೆ ಮಾಡುತ್ತಾನೆ. ರಾವಣನು ಪಾತಾಳಕ್ಕೆ ಹೊಕ್ಕರೂ. ಅಲ್ಲಿಂದ ಮುಂದೆ ಇನ್ನೋ ಗಹನವಾದ ಸ್ಥಳ ಹೊಕ್ಕರೂ ಆತ ಉಳಿಯಲಾರನು. ದಿತಿಯ ಗರ್ಭವನ್ನು ಹೊಕ್ಕರೂ ಮೈಥಿಲಿಯನ್ನು ತಂದೊಪ್ಪಿಸದಿದ್ದಲ್ಲಿ ಗರ್ಭವನ್ನು ಪ್ರವೇಶಿಸಿಯಾದರೂ ನಾನು ಅವನನ್ನು ಸಂಹರಿಸುತ್ತೇನೆ. ನೀನು ಉತ್ಸಾಹವನ್ನು ಕಳೆದುಕೊಂಡು ಹೀಗೆ ಯಾಕೆ ಇರುವೆ ಎನ್ನುವ ಮಾತುಗಳಲ್ಲಿ ನೀನು ಭ್ರಮಿತನಾಗಿದ್ದೀಯಾ ಎಂದು ನೇರವಾಗಿ ಹೇಳುವುದಿಲ್ಲ; ನೀನು ಉತ್ಸಾಹವನ್ನು ಕಳೆದುಕೊಳ್ಳಬೇಡ, ನೀನು ಹೀಗೆಲ್ಲಾ ಇರುವವಂತವನಲ್ಲ ವ್ಯಕ್ತಿಯಲ್ಲ ಎನ್ನುವ ಭಾವ ಪ್ರತೀ ಮಾತಿನಲ್ಲಿಯೂ ವ್ಯಕ್ತವಾಗುತ್ತದೆ.

ಪ್ರಾರಂಭದಲ್ಲಿ ಹೇಳಿದ ತ್ಯಜತ್ವಾಂ… ಎನ್ನುವ ಶ್ಲೋಕವನ್ನು ಗಮನಿಸಿ. ಅದರಲ್ಲಿ ಎರಡನೆಯ ಸಾಲಿನಲ್ಲಿ ಬರುವ “ಮಹಾತ್ಮನಂ ಕೃತಾತ್ಮಾನಮಾತ್ಮಾನಂ ನಾವಬಿಧ್ಯಸೇ” ಎನ್ನುವದರಲ್ಲಿ ಪ್ರಯೋಗಿಸಿದ “ಮಹಾತ್ಮ ಮತ್ತು ಕೃತಾತ್ಮಾ” ಎನ್ನುವುದು ರಾಮನ ಪೂರ್ವದ ಮೂಲಸ್ವರೂಪವಾದ ಮಹಾವಿಷ್ಣುವನ್ನು ಹೇಳುತ್ತದೆ. ಮಹಾತ್ಮಾ ಎಂದರೆ ಶ್ರೇಷ್ಠ, ಯಾರ ಶರೀರವು ಇತರರಿಗೆ ಶ್ರೇಷ್ಠವಾಗಿ ಕಾಣುವುದೋ; ಯಾವಾತನಿಗೆ ರಜಸ್ತಮಗಳೆನ್ನುವ ಮಲಿನತೆ ಇರುವುದಿಲ್ಲವೋ ಆತ ಮಹಾತ್ಮನು, ಸತ್ತ್ವಸ್ವರೂಪನು ಎಂದು ಆರ್ಥವಾಗುತ್ತದೆ. ಮತ್ತೊಂದು ಕೃತಾತ್ಮಾ-ಶುದ್ಧವಾದ ಆತ್ಮವುಳ್ಳವನು. ಶಾಶ್ತ್ರಗಳಿಂದ ಪರಿಶುದ್ಧವಾದ ಹೃದಯವುಳ್ಳವನು. ಶ್ರುತಿ ಸ್ಮೃತಿಗಳಲ್ಲಿ ಸ್ಮರಿಸಲ್ಪಟ್ಟವ ಎಂದಾಗುತ್ತದೆ. ಈ ಕಾರಣದಿಂದ ನೀನು “ತ್ಯಜತಾಂ ಕಾಮವೃತ್ತತ್ತ್ವಂ- ಕಾಮವಿಕಾರವೆನ್ನುವುದು ನಿನಗಲ್ಲ ಎನ್ನುತ್ತಾನೆ. ರಾಮನ ಮೂಲ ಯಾವುದು ಎನ್ನುವುದನ್ನು ಇಲ್ಲಿ ಲಕ್ಷ್ಮಣ ಈ ರೀತಿಯಲ್ಲಿ ಸೂಚಿಸುತ್ತಾನೆ. ಆತನ ಅವತಾರದ ಉದ್ಧೇಶವು ರಾವಣನನ್ನು ಸಂಹರಿಸುವ ಸಲುವಾಗಿಯೇ ಆಗಿದೆ. ಎಲ್ಲ ಕಡೆಯೂ ಮಾನವರಂತೆ ವ್ಯವಹರಿಸುವ ರಾಮ ಜಟಾಯುವಿನ ಪ್ರಕರಣದಲ್ಲಿ ಪರೋಕ್ಷವಾಗಿ, ಶಬರಿಯ ವಿಷಯದಲ್ಲಿ ಸ್ವ-ಸ್ವರೂಪದ ಪ್ರಜ್ಞೆಯಲ್ಲಿಯೇ ಅವರವರಿಗೆ ಮೋಕ್ಷವನ್ನು ಅನುಗ್ರಹಿಸಿದ್ದಾನೆ. ರಾಮಾಯಣದಲ್ಲಿ ರಾಮ ತನ್ನ ಮೂಲ ಸ್ವರೂಪವನ್ನು ಪ್ರಕಟಮಾಡುವ ಅಪರೂಪದ ಸಂದರ್ಭಗಳು ಇವು.

ಅಣ್ಣನಿಗೆ “ನೀನು ಪುರುಷೋತ್ತಮ” ಎನ್ನುತ್ತಾ ರಾಮನೆನ್ನುವ ದಶರಥನ ಮಗ ಯತಾರ್ಥದಲ್ಲಿ ವಿರಜಾಸ್ವರೂಪನಾದವ (ಪರತತ್ತ್ವ ಸ್ವರೂಪನಾದವ) ಇದೀಗ ಕಾರ್ಯಕಾರಣ ಸಂಬಂಧದಿಂದಾಗಿ ಸಂಸಾರಿಮಂಡಲಕ್ಕೆ ಅಭಿಮುಖನಾಗಿದ್ದಾನೆ. ಅದಕ್ಕೆ ಕಾರಣವಾದ ಅಂಶವನ್ನು ಸ್ಮರಣೆಗೆ ತಂದುಕೊಳ್ಳಬೇಕು. ರಾಮನ ಈ ದುಃಖವೆಲ್ಲವೂ ಅಭಿನಯವೇ ಹೊರತು ಅನುಭವಿಸಿ ಅದರಲ್ಲಿಯೇ ಮುಳುಗಿಹೋಗುವುದಲ್ಲ ಎನ್ನುವ ಅನೇಕ ಅರ್ಥವನ್ನು ಇಲ್ಲಿ ಕೊಡುತ್ತದೆ. ಕಿರಿಯರು ಹಿರಿಯರಿಗೆ ವಿವೇಕವನ್ನು ಹೇಳುವುದಲ್ಲ; ಅದರ ಕುರಿತಾದ ಅರಿವನ್ನು ಅವರ ಸ್ಮರಣೆಗೆ ತಂದುಕೊಡುವುದು ಎನ್ನುವುದು ಇಲ್ಲಿ ಲಕ್ಷ್ಮಣನ ವಿನಂತಿಯಲ್ಲಿ ಸ್ಪಷ್ಟವಾಗುತ್ತದೆ. ಹಿರಿಯರು ಉಪದೇಶವನ್ನು ನೀಡುತ್ತಾರೆ, ಸಮವಯಸ್ಕರು ಸಲಹೆಯನ್ನು ನೀಡುತ್ತಾರೆ (ಮಿತ್ರವಾಕ್ಯ), ಕಿರಿಯರು ತಮಗೆ ಗೊತ್ತಿದೆ ಎಂದು ಹಿರಿಯರನ್ನು ಯಾವ ಸಂದರ್ಭದಲ್ಲಿಯೂ ಅತಿಕ್ರಮಿಸಬಾರದು. ಇದೇಕೆ ಹೀಗೆ ಎನ್ನುತ್ತಲೇ ಹೇಳಬೇಕಾದುದನ್ನು ಹೇಳಬೇಕೆನ್ನುವುದಕ್ಕೆ ಇಲ್ಲಿ ಲಕ್ಷ್ಮಣನ ಮಾತುಗಳು ಸಾಕ್ಷಿ. ಈ ಭಾಗದಲ್ಲಿ ಲಕ್ಷ್ಮಣನನ್ನು ಮದಿಸಿದ ಮದ್ದಾನೆಗೆ ಕವಿ ಹೋಲಿಸಿದ್ದಾನೆ.

ತಂ ಮತ್ತಮಾತಙ್ಗವಿಲಾಸಗಾಮೀ ಗಚ್ಛನ್ತಮವ್ಯಗ್ರಮನಾ ಮಹಾತ್ಮಾ.
ಸ ಲಕ್ಷ್ಮಣೋ ರಾಘವಮಪ್ರಮತ್ತೋ ರರಕ್ಷ ಧರ್ಮೇಣ ಬಲೇನ ಚೈವ৷৷ಕಿ.1.127৷৷

ಮದಿಸಿದ ಆನೆಯಂತೆ ಒಯ್ಯಾರದಿಂದ ಹೆಜ್ಜೆಯಿಡುತ್ತಿದ್ದ ಅಣ್ಣನ ಸೇವೆಯಲ್ಲಿಯೇ ಏಕಾಗ್ರವಾದ ಮನಸ್ಸಿನಿಂದ ಕೂಡಿದ ಮಹಾತ್ಮನಾದ ಲಕ್ಷ್ಮಣನಾದರೋ, “ರರಕ್ಷ ಧರ್ಮೇಣ ಬಲೇನ ಚೈವ- ಧರ್ಮದಿಂದಲೂ ಬಲದಿಂದಲೂ ರಾಘವನ ದುಃಖವು ಕಡಿಮೆಯಾಗುವಂತೆ ಮಾಡಿದನು”. ರರಕ್ಷ- ಎನ್ನುವುದಕ್ಕೆ ದುಃಖರಹಿತನನ್ನಾಗಿ ಮಾಡಿದನು ಎನ್ನುವ ಅರ್ಥಬರುತ್ತದೆ(ನಿರ್ಧುಃಖಮಕರೋತ್). ರಾಮನಿಗೆ ಆತನ ಪೂರ್ವಸ್ಮರಣೆಯನ್ನು ತಂದುಕೊಡುವ ಸನ್ನಿವೇಶ ಇದು. ರಾಮನಿಗೆ ಅವನ ಮೂಲವನ್ನು ನೆನಪಿಸಿ ಆತ ಪರಂಧಾಮಕ್ಕೆ ಮರಳುವಂತೆ ಮಾಡುವವನು ಕಾಲಪುರುಷ. ಅದೂ ರಾಮಾಯಣದ ಅವತಾರದ ಉದ್ಧೇಶವಎಲ್ಲವೂ ಸಫಲವಾದ ಮೇಲೆ. ಇಲ್ಲಿ ಲಕ್ಷ್ಮಣನಿಗೆ ರಾಮನಿಗುಂಟಾದ ಬುದ್ಧಿವಿಸ್ಮೃತಿಯಿಂದ ಹೊರತರಬೇಕಾಗಿದೆ. ಇಲ್ಲಿ ಬರುವ “ಧರ್ಮೇಣ” ಅಂದರೆ ಸದಾಕಾಲವೂ ರಾಮನಿಗೆ ವಿಧೇಯನಾಗಿರುವ ಆತ ಆತನಿಗೆ ವಿವೇಕವನ್ನು ಹೇಳುವ ಸಂಧರ್ಭದಲ್ಲಿಯೂ ರಾಮಸೇವಕರೂಪದ ತನ್ನ ಸ್ವಭಾವಕ್ಕೆ ಕಿಂಚಿತ್ ಭಂಗ ಬಾರದಿರುವ ರೀತಿಯಲ್ಲಿ ವಿಷಯವನ್ನು ತಿಳಿಸುತ್ತಿದ್ದಾನೆ. ಇನ್ನು “ಬಲೇನಚೈವ” ಎನ್ನುವುದಕ್ಕೆ ಲಕ್ಷ್ಮಣ ಸೀತೆಯನ್ನು ರಾವಣ ಕದ್ದೊಯ್ದಿದ್ದಾನೆ ಎನ್ನುವುದು ಅವರಿಗೆ ತಿಳಿದಿದೆ. ಆದರೆ ರಾವಣ ಎಲ್ಲಿರಬಹುದು ಎನ್ನುವುದರ ಸುಳಿವು ಸಿಕ್ಕಿಲ್ಲ. ಇಲ್ಲಿ ದುಃಖಿಸುತ್ತಾ ಕುಳಿತರೆ ಕಾರ್ಯಸಾಧಿಸುವುದಿಲ್ಲ. ರಾವಣ ಎಲ್ಲಿದ್ದಾನೆ ಎನ್ನುವುದನ್ನು ಮೊದಲು ತಿಳಿಯಬೇಕು. ಆತ ಪಾತಾಳದಲ್ಲಿ ಇದ್ದರೂ, ಅಲ್ಲಿಂದ ಮುಂದೆ ಇನೂ ಗಹನವಾದ ಸ್ಥಳವನ್ನು ಹೊಕ್ಕರೂ ಪಾಪಿಷ್ಟನಾದ ಆತನನ್ನು ಹುಡುಕೋಣ ಎಂದು ಸಮಾಧಾನ ಹೇಳುತ್ತಾನೆ.

dhavala dharini king dasharatha
rama laxmana ಧವಳ ಧಾರಿಣಿ ಅಂಕಣ

ಅಯೋಧ್ಯಾ ಕಾಂಡದಲ್ಲಿ ಮುಂಗೋಪಿಯಾಗಿ ಲಕ್ಷ್ಮಣ ಕಾಣಿಸಿಕೊಳ್ಳುತ್ತಾನೆ. ತಂದೆಯಾದ ದಶರಥನನ್ನು ಬಂಧಿಸಿ ಸೆರೆಯಲ್ಲಿಟ್ಟು ರಾಜ್ಯವನ್ನು ಗೆದ್ದು ಅಣ್ಣನಾದ ರಾಮನಿಗೆ ಕೊಡುವೆ ಎಂದು ಅಬ್ಬರಿಸುತ್ತಾನೆ. ರಾಮನ ವಿವೇಕದ ಮಾತಿಗೆ ಅನಿವಾರ್ಯತೆಯಿಂದ ಸುಮ್ಮನಾಗುತ್ತಾನೆ. ಮುಂದೆ ಭರತ ರಾಮನನ್ನು ಕರೆತರಲು ಚಿತ್ರಕೂಟಕ್ಕೆ ಬರುವಾಗ ಆತನನ್ನು ನೋಡಿ, ತಮ್ಮಮೇಲೆ ಆಕ್ರಮಣಮಾಡಲು ಬಂದಿರಬಹುದೆನ್ನುವ ಸಂಶಯದಿಂದ ಭರತನನ್ನು ಎದುರಿಸುವೆ ಎನ್ನುವ ವೀರಾವೇಶದ ಮಾತುಗಳನ್ನು ಆಡುತ್ತಿದ್ದ ಲಕ್ಷ್ಮಣನ ಮೂಲ ಸ್ವಭಾವ ದುಡುಕಿನದ್ದಲ್ಲ. ರಾಮ ಗುಹನ ಆತಿಥ್ಯದಲ್ಲಿ ಗಂಗಾ ನದಿಯ ದಡದ ಮೇಲೆ ಮಲಗಿರುವಾಗ ಆತನ ಸ್ಥಿತಿಯನ್ನು ನೋಡಿ ಗುಹನ ಹತ್ತಿರ ಲಕ್ಷ್ಮಣ ಮರುಗುವುದು ಕರಳು ಚುರುಕ್ಕೆನ್ನುತ್ತದೆ. ಸದಾ ಹಂಸತೂಲಿಕಾತಲ್ಪದಲ್ಲಿ ಮಲಗುವ ತನ್ನ ಅಣ್ಣ ಇಂದು ಹೀಗೆ ಕೈಯನ್ನೇ ತಲೆದಿಂಬನ್ನಾಗಿಸಿಕೊಂಡು ಮಲಗಿರುವುದನ್ನು ನೋಡಲು ಆತನಿಗೆ ಸಾಧ್ಯವಾಗುವುದಿಲ್ಲ. ಲಕ್ಷ್ಮಣನದ್ದು ಹೆಂಗರಳು. ರಾಮನ ವಿಷಯದಲ್ಲಿ ಮಾತ್ರ ಕರುಣೆ ತೋರುವುದಲ್ಲ.

ಜನಸ್ಥಾನದಲ್ಲಿ ಅವರು ವಾಸಮಾಡುವಾಗ ನಡೆದ ಘಟನೆ. ವನವಾಸದ ಹದಿಮೂರನೆಯ ವರ್ಷದಲ್ಲಿ ಅವರು ಇದ್ದಾರೆ. ಆ ವರ್ಷದ ಹೇಮಂತ ಋತುವಿನಲ್ಲಿ ಅಸಾಧ್ಯವಾದ ಚಳಿಯಿದೆ. ಕಾಡಾನೆಗಳ ಹಿಂಡು ಬಾಯಾರಿಕೆಯಿಂದ ನೀರುಕುಡಿಯಲು ನದಿಗೆ ಬರುತ್ತಿದ್ದವಂತೆ ಆದರೆ ಹೇಮಂತದ ಚಳಿಯನ್ನು ತಾಳಲಾರದೇ ಸೊಂಡಿಲನ್ನು ನೀರಿಗೆ ಚಾಚಿ ನೀರು ಕುಡಿಯಲು ಯತ್ನಿಸಿದರೆ ಅವುಗಳಿಗೆ ತಣ್ಣನೆಯ ನೀರಿನ ಛಳಿಯನ್ನು ತಾಳಿಕೊಳ್ಳಲಾಗುವುದಿಲ್ಲ, ಮೈಕೊರೆವ ಚಳಿಗೆ ಅಂಜಿ ನೀರನ್ನು ಕುಡಿಯದೇ ಬಾಯಾರಿಕೆಯನ್ನು ಸಹಿಸಿಕೊಂಡು ಕಾಡಿಗೆ ಮರಳುತ್ತಿದ್ದವು. ಸದಾ ನೀರಿನಲ್ಲಿಯೇ ಇರುವ ಹಂಸಪಕ್ಷಿಗಳು ಸಹ ಚಳಿಗೆ ಹೆದರಿ ನೀರಿಗಿಳಿಯದೇ ದಡದಲ್ಲಿಯೇ ಸಾಲಾಗಿ ಕುಳಿತುಕೊಂಡಿದ್ದವು. ಅದನ್ನು ನೋಡಿದ ಲಕ್ಷ್ಮಣನಿಗೆ ನಂದಿಗ್ರಾಮದಲ್ಲಿ ಭರತನೂ ತಮ್ಮಂತೆ ವೃತಧಾರಿಯಾಗಿ ಗಡ್ಡೆ ಗಣಸು ತಿನ್ನುತ್ತಾ, ಜಟಾಧಾರಿಯಾಗಿ ನೆಲದಮೇಲೆ ಮಲಗುತ್ತಿದ್ದಾನೆ ಎನ್ನುವುದು ನೆನಪಾಯಿತು. ಸ್ವತಃ ತಾವು ಅಂತಹ ಚಳಿಯಲ್ಲಿ ನಡುಗುತ್ತಿದ್ದರೂ ಲಕ್ಷ್ಮಣನ ಮನಸ್ಸು ಇಲ್ಲಿ ಭರತನಿಗಾಗಿ ಮರುಗುತ್ತದೆ.

ಅತ್ಯನ್ತಸುಖಸಂವೃದ್ಧಸ್ಸುಕುಮಾರಸ್ಸುಖೋಚಿತಃ.
ಕಥಂ ನ್ವಪರರಾತ್ರೇಷು ಸರಯೂಮವಗಾಹತೇ৷৷ಅ.16.30৷৷

ಸುಖದಲ್ಲಿ ಬೆಳೆದ ಭರತ ಚಳಿಯಿಂದ ಕೂಡಿದ ಈ ಅಪರಾತ್ರಿಯಲ್ಲಿ ಸರಯೂ ನದಿಯಲ್ಲಿ ಹೇಗೆ ಸ್ನಾನ ಮಾಡಿಯಾನು ಎಂದು ಭರತನ ಕುರಿತು ಕಳವಳವನ್ನು ವ್ಯಕ್ತಪಡುತ್ತಾನೆ. ಅಪರಾತ್ರಿಯೆಂದರೆ ಮುಂಜಾನೆ ಬ್ರಾಹ್ಮೀ ಮುಹೂರ್ತಕ್ಕೆ ಮುನ್ನವೇ ಎದ್ದು ಸ್ನಾನಗಳನ್ನು ಪೂರೈಸಿ ನಿತ್ಯಕರ್ಮಾನುಷ್ಠಾನಗಳನ್ನು ಮಾಡಿ ಪ್ರಜೆಗಳ ಯೋಗಕ್ಷೇಮಗಳನ್ನು ನೋಡಲು ಪ್ರಾತಃಕಾಲದಲ್ಲಿ ಸಿದ್ಧನಾಗುತ್ತಿದ್ದ. ತಮಗಾದರೋ ವನವಾಸದ ದೀಕ್ಷೆಯಿದೆ. ಆದರೆ ಭರತ ಸುಖವಾಗಿ ಇರಬಹುದಾಗಿದ್ದರೂ ತಮ್ಮಂತೆ ವನವಾಸೀ ದೀಕ್ಷೆಯನ್ನು ಕೈಗೊಂಡು ರಾಜ್ಯವನ್ನು ನಡೆಸುತ್ತಿದ್ದಾನೆ. ರಾಜ್ಯವನ್ನು ರಾಮನ ಪ್ರತಿನಿಧಿಯಾಗಿ ನಿರ್ವಹಿಸುವ ಆತ ಅದಕ್ಕೆ ಚ್ಯುತಿಬಾರದ ರೀತಿಯಲ್ಲಿ ಚಳಿಗಾಲವನ್ನು ಲೆಕ್ಕಿಸದೇ ಕರ್ತವ್ಯಪರಾಯಣನಾಗಿದ್ದಾನೆ. ಚಳಿಗಾಲದ ವರ್ಣನೆ ಮತ್ತು ಭರತನ ಕುರಿತು ಲಕ್ಷ್ಮಣನ ಕಾಳಜಿ ಎರಡನ್ನೂ ಅನೇಕ ಉಪಮೆಗಳೊಂದಿಗೆ ವಾಲ್ಮೀಕಿ ಕಟ್ಟಿಕೊಟ್ಟಿದ್ದಾರೆ. ಧರ್ಮದ ಮೂಲಕವಾಗಿ ರಾಮನನ್ನು ಸಮಾಧಾನ ಮಾಡಿದ ಜೊತೆಗೆ ಬಲದ ಪ್ರದರ್ಶನದ ಮೂಲಕವೂ ರಾಮನನ್ನು ಸಮಾಧಾನಿಸಿದ ಎನ್ನುವುದಕ್ಕೆ ಲಕ್ಷ್ಮಣ ರಾಮನಲ್ಲಿ ”ಮೊದಲು ರಾವಣನನ್ನು ಹುಡುಕೋಣ. ಆತನಲ್ಲಿ ತಮ್ಮ ಪರಾಕ್ರಮವೆಷ್ಟು ಎನ್ನುವುದನ್ನು ತೋರಿಸಿ ಆತ ಸೀತೆಯನ್ನು ಬಿಟ್ಟುಕೊಡುವಂತೆ ಎಚ್ಚರಿಸೋಣ. ಅದಕ್ಕೂ ಆತ ಬಗ್ಗದಿದ್ದರೆ ಆತ ದಿತಿಯ ಗರ್ಭದಲ್ಲಿದ್ದರೂ ಆತನನ್ನು ಸಂಹರಿಸುವೆ” ಎನ್ನುವ ಮೂಲಕ ಬಲದಿಂದಲೂ ರಾಮನನ್ನು ಸಮಾಧಾನಿಸುತ್ತಾನೆ.

rama laxmana ಧವಳ ಧಾರಿಣಿ ಅಂಕಣ
rama laxmana ಧವಳ ಧಾರಿಣಿ ಅಂಕಣ

ಕಾವ್ಯದಲ್ಲಿ ನಾಟಕೀಯತೆಯ ಸನ್ನಿವೇಶ ಹೇಗೆ ಬರಬೇಕೆನ್ನುವುದಕ್ಕೆ ಇಲ್ಲಿನ ವರ್ಣನೆ ಸಾಕ್ಷಿ. ಲಕ್ಷ್ಮಣ ಪರಾಕ್ರಮದಲ್ಲಿ ಯಾರಿಗೂ ಕಡಿಮೆ ಇಲ್ಲದವನು. ಆನೆಯಷ್ಟು ಬಲ ಆತನಲ್ಲಿದೆ. ಮದಿಸಿದ ಆನೆ ತನ್ನ ಮಾವುತನ ಮೇಲೆ ಅಪಾರಪ್ರೀತಿಯನ್ನು ತೋರುತ್ತದೆ. ತನ್ನ ಮಾವುತ ವ್ಯಾಕುಲತೆಯಿಂದ ಕುಳಿತರೆ ಆತನನ್ನು ರಮಿಸಿ ತನ್ನೊಂದಿಗೆ ಕರೆದೊಯ್ಯುವ ಸ್ವಭಾವ ಅದಕ್ಕಿರುತ್ತದೆ ಇಂತಹ ದೃಶ್ಯವನ್ನು ಅನೇಕ ಕಡೆ ನೋಡಬಹುದಾಗಿದೆ. ಸುಮಾರು 70ರ ಉತ್ತರಾರ್ಧದಶಕದಲ್ಲಿ ರಾಜೇಶ ಖನ್ನಾ ಅಭಿನಯಿಸಿದ “ಹಾಥಿ ಮೇರಾ ಸಾಥಿ” ಸಿನೇಮಾವನ್ನು ನೋಡಿದ್ದರೆ ಅದು ಅರ್ಥವಾದೀತು. ರಾಮನೆನ್ನುವ ಸೋದರತ್ವದ ಒಲವಿನಲ್ಲಿ ಬಂಧಿತನಾದ ಲಕ್ಷ್ಮಣ ಅಥವಾ ತನ್ನ ತಾಯಿಯಾದ ಸುಮಿತ್ರೆಯ ಹತ್ತಿರ ಲಕ್ಷ್ಮಣ ಕಾಡಿಗೆ ಅಣ್ಣನನ್ನು ಅನುಸರಿಸಿಕೊಂಡು ಹೋಗುತ್ತೇನೆ ಎಂದು ಆಶೀರ್ವಾದವನ್ನು ಕೇಳಿದಾಗ ಆಕೆ ಮಗನಿಗೆ “ರಾಮಂ ದಶರಥಂ ವಿದ್ಧಿ ಮಾಂ ವಿದ್ಧಿ ಜನಕಾತ್ಮಜಾಮ್..” ರಾಮನನ್ನು ದಶರಥನೆಂದೆ ತಿಳಿದು ಗೌರವಿಸು, ನನ್ನನ್ನು ಹೇಗೆ ಗೌರವಿಸುತ್ತೀಯೋ ಅದೇ ರೀತಿ ಸೀತೆಗೆ ಗೌರವವನ್ನು ನೀಡು , ಅಡವಿಯನ್ನೇ ಅಯೋಧ್ಯೆಯೆಂದು ಭಾವಿಸು” ಎಂದು ಹರಸಿಕಳುಹಿಸಿದ್ದಳು. ಸಹಜವಾಗಿಯೂ ರಾಮನಲ್ಲಿ ಭಯಭಕ್ತಿಯುಳ್ಳ ಮತ್ತು ಅತನೇ ತನ್ನ ರಾಜನೆಂದು ತಿಳಿದು ತ್ರಿಕರಣಪೂರ್ವಕವಾಗಿ ಅನುಸರಿಸಿಕೊಂಡು ಬಂದವ ಲಕ್ಷ್ಮಣ. ಹಾಗಾಗಿ ಇಲ್ಲಿ ರಾಮನೆನ್ನುವ ಮಾವುತನನ್ನು ಮದಿಸಿದ ಆನೆಯಂತಿರುವ ಲಕ್ಷ್ಮಣ ಒಯ್ಯಾರದಿಂದ ಕರೆದುಕೊಂಡು ಬಂದ ಎನ್ನುವ ಉಪಮೆ ಸುಂದರವಾಗಿ ಮೂಡಿಬಂದಿದೆ.

ರಾಮನಿಗೆ ಸೀತೆಯನ್ನು ಕಳೆದುಕೊಂಡ ದುಃಖ ತಡೆಯಲಾರದೇ ವಿಸ್ಮೃತಿಗೊಳಗಾದ ವಿಷಯವನ್ನು ವಾಲ್ಮೀಕಿ ರಾಮಾಯಣದಲ್ಲಿ ವಿವರವಾಗಿ ಬಂದರೂ ಸ್ಕಾಂದಪುರಾಣದಲ್ಲಿ ಇನ್ನಷ್ಟು ವಿವರವಾಗಿ ವರ್ಣಿಸಲಾಗಿದೆ. ರಾಮನಿಗೆ ಅರಣ್ಯದಲ್ಲಿ ಸೀತೆಯ ವಿರಹದಿಂದ ಕಾಮೋದ್ದೀಪಕವಾಯಿತು. ಕಾಡಿನಲ್ಲಿರುವ ಭ್ರಮರವೇ ಮೊದಲಾದವುಗಳು ಸ್ವಂಚ್ಛಂದದಿಂದ ಹಾರಾಡುತ್ತಾ ಸಂಪಿಗೆಯ ಹೂವಿನ ಮಕರಂದವನ್ನು ಹೀರುತ್ತಿದ್ದವು. ಮಂದಮಾರುತ ಬೀಸುತ್ತಿತ್ತು. ಚಕ್ರವಾಕ ಪಕ್ಷಿಜೋಡಿಗಳು ಹಗಲಿನಲ್ಲಿ ಪರಸ್ಪರ ಮುದ್ದಾಡುತ್ತಿದ್ದವು. ವಿರಹಿಯಾದ ರಾಮ ಅದನ್ನು ನೋಡಿ ಕೋಪಗೊಂಡನಂತೆ. ತನ್ನ ವಿರಹದುಃಖವನ್ನು ನೋಡಿಯೂ ಕರುಣೆತೋರದೇ ಸಂತಸದಿಂದ ಇರುವ ಅವುಗಳನ್ನು ನೋಡಿ

ವೈಮುಖ್ಯಂ ಗಂಧಫಲ್ಯಾಸ್ತು ಭ್ರಮರಾಶಪತ್ಪ್ರಭುಃ I
ಕೋಕಾನ್ನಿಶಿಧೇ ವಿಶ್ಲೇಷಂ ಪಿಕಮನ್ಯವಿವರ್ಧನಮ್I
ಚಂದನಂ ಸರ್ಪ ನಿಲಯಂ ವಾಯುಂ ಸರ್ಪಾಶನಂ ತಥಾ I
ಜ್ಯೋತ್ಸ್ನಾಂ ಕಳಂಕಸಛನ್ನಾಂ ಶಶಾಪ ರಘುನಂದನಃ II II

ಸಂಪಗೆಯನ್ನು ಮುಟ್ಟದಂತೆ ಭ್ರಮರಗಳಿಗೂ, ರಾತ್ರಿಯಲ್ಲಿ ವಿಯೋಗವನ್ನು ಹೊಂದುವಂತೆ ಚಕ್ರವಾಕ ಜೋಡಿಗಳಿಗೂ, ಇತರಪಕ್ಷಿಗಳ ಪೋಷಣೆಗೊಳಗಾಗುವಂತೆ ಕೋಗಿಲೆಗಳಿಗೂ (ಪರಪುಟ್ಟ), ಕ್ರೂರಸರ್ಪಗಳಿಗೆ ಆಶ್ರಯತಾಣವಾಗುವಂತೆ ಚಂದನವೃಕ್ಷಕ್ಕೂ, ಹಾವುಗಳಿಗೆ ಆಹಾರವಾಗುವಂತೆ ಗಾಳಿಗೂ, ಕಳಂಕವಿಶಿಷ್ಟ (ಕಲೆಗಳಿಂದ ಕೂಡಿರುವಂತೆ) ಚಂದ್ರಕಾಂತಿಗೂ ಶಾಪಕೊಟ್ಟ ಎನ್ನುವ ವರ್ಣನೆ ಬರುತ್ತದೆ.

ಸೀತೆಯ ವಿಯೋಗ ರಾಮನಿಗೆ ಎರಡು ರೀತಿಯಿಂದ ಕಾಡುತ್ತಿತ್ತು. ಮೊದಲನೆಯದು ತನ್ನ ಪ್ರಿಯ ಮಡದಿಯನ್ನು ಕಳೆದುಕೊಂಡಿರುವುದು. ಎರಡನೆಯದು ರಾವಣ ಸೀತೆಯನ್ನು ಕದ್ದೊಯ್ಯುವ ಮೂಲಕ ರಾಮನ ಪುರುಷತ್ವಕ್ಕೆ ಸವಾಲನ್ನು ಎಸೆದಿದ್ದ. ಇದು ಸ್ಕಂಧಪುರಾಣದ ಮೇಲಿನ ಶ್ಲೋಕದಿಂದ ಸ್ಪಷ್ಟವಾಗುತ್ತದೆ. ಈ ಕಾರಣದಿಂದ ನೊಂದಿದ್ದ ರಾಮನನ್ನು ಲಕ್ಷ್ಮಣ ಸಮಾಧಾನ ಪಡಿಸಿ ಆತನ ಸ್ಮೃತಿಯನ್ನು ವಾಸ್ತವಕ್ಕೆ ಕರೆತರುತ್ತಾನೆ. ಆತನ ದುಃಖವನ್ನು ಶಮನಮಡುತ್ತಾನೆ. ಈಗ ಆತನಿಗೆ ಸೀತೆಯನ್ನು ಹುಡುಕುವ ಸಲುವಾಗಿ ಕಬಂಧ ಹೇಳಿದಂತೆ ಸುಗ್ರೀವನ ಸಖ್ಯ ಅನಿವಾರ್ಯವೆನ್ನುವುದು ನೆನಪಾಗುತ್ತದೆ. ಆ ಕಾರಣದಿಂದ ಹನುಮಂತನ ಹತ್ತಿರ ಲಕ್ಷ್ಮಣ ರಘುಕುಲದ ಶ್ರೇಷ್ಠನಾದ ರಾಮನೇ ಸುಗ್ರೀವನಲ್ಲಿ ಆಶ್ರಯವನ್ನು ಕೋರಿ ಬಂದಿದ್ದಾನೆ. ಆತನಲ್ಲಿ ಶರಣಾಗಲು ಬಂದಿದ್ದಾನೆ. ಎನ್ನುವ ಮಾತುಗಳನ್ನು ಲಕ್ಷ್ಮಣ ಆಡುವುದು.

ಸುಗ್ರೀವನ ಸ್ಥಿತಿ ಮತ್ತು ಇನ್ನಷ್ಟು ರೋಚಕ ವಿಚಾರಗಳನ್ನು ಮುಂದಿನ ಸಂಚಿಕೆಯಲ್ಲಿ ಗಮನಿಸೋಣ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಕಿಷ್ಕಿಂಧಾ ಕಾಂಡ ಭಾಗ 2: ದೀಪದ ಬುಡದಲ್ಲಿ ಕತ್ತಲೆ

Continue Reading
Advertisement
Bangladesh Unrest
ವಿದೇಶ41 seconds ago

Bangladesh Unrest: ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂದೂಗಳ ಮೇಲಿನ ದೌರ್ಜನ್ಯ; ಮತ್ತೊಂದು ದೇಗುಲ, ಮನೆಗೆ ಬೆಂಕಿ

Viral Video
Latest6 mins ago

Viral Video: ಹಸ್ತಮೈಥುನ ಮಾಡಿಕೊಳ್ಳಲು 6 ವರ್ಷದ ಬಾಲಕಿ ಮೇಲೆ ದೌರ್ಜನ್ಯ; ಆಕೆ ತಪ್ಪಿಸಿಕೊಂಡಾಗ ಮೇಕೆ ಮೇಲೆ ಅತ್ಯಾಚಾರ!

Golden Star Ganesh krishnam pranaya sakhi Fans show House Full
ಸ್ಯಾಂಡಲ್ ವುಡ್16 mins ago

Golden Star Ganesh: ಗಣೇಶ್​​ಗೆ ಶುರುವಾಗಿದೆ ಗೋಲ್ಡನ್ ಟೈಮ್:  ಫ್ಯಾನ್ಸ್ ಶೋ ಹೌಸ್ ಫುಲ್!

Independence day 2024 Nanna Deshavu Kannada Video Song Vijay Prakash
ಸಿನಿಮಾ46 mins ago

Independence day 2024: ವಿಜಯ್ ಪ್ರಕಾಶ್‌ ಹೊಸ ಸಾಂಗ್‌ ಔಟ್‌; ಭಾರತೀಯ ಸೇನೆಗೆ ಹಾಡನ್ನು ಅರ್ಪಿಸಿದ ಹೊಸಬರ ತಂಡ!

Viral News
ವೈರಲ್ ನ್ಯೂಸ್46 mins ago

Viral News: ಯೋಧನ ಮೇಲೆ ಪೊಲೀಸರ ದೌರ್ಜನ್ಯ; ನಗ್ನಗೊಳಿಸಿ ಹಿಗ್ಗಾಮುಗ್ಗಾ ಥಳಿತ

Manu Bhaker
ಕ್ರೀಡೆ49 mins ago

Manu Bhaker: ಭಾರೀ ಏರಿಕೆ ಕಂಡ ಮನು ಭಾಕರ್ ಬ್ರ್ಯಾಂಡ್​ ಮೌಲ್ಯ

Duleep Trophy
ಕ್ರೀಡೆ1 hour ago

Duleep Trophy 2024: ದುಲೀಪ್ ಟ್ರೋಫಿ ವೇಳಾಪಟ್ಟಿ ಪ್ರಕಟ; ಕೊಹ್ಲಿ, ರೋಹಿತ್​ ಭಾಗವಹಿಸುವ ನಿರೀಕ್ಷೆ

viral video modi assault case
ವೈರಲ್ ನ್ಯೂಸ್1 hour ago

Viral Video: ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸಿದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿತ

Kundapura Festival Kannada Habba On August 17 And 18 In Bengaluru Palace Ground
ಉಡುಪಿ2 hours ago

Kundapura Festival: ಬೆಂಗಳೂರಲ್ಲಿ 17, 18ರಂದು ʻಕುಂದಾಪ್ರ ಕನ್ನಡ ಹಬ್ಬʼ: ಇಲ್ಲಿದೆ ಕಾರ್ಯಕ್ರಮಗಳ ವಿವರ, ಹೋಯ್‌ ಬನಿಯೇ ಹಬ್ಬಕ್‌ ಹೋಪ!

Illicit Relationship
ಕ್ರೈಂ2 hours ago

ಅನೈತಿಕ ಸಂಬಂಧದ ಶಂಕೆಗೆ ಬಲಿಯಾಯ್ತು ಐವರ ಜೀವ; ಪತ್ನಿ, ತಾಯಿ, ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ6 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ6 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ6 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌