Garlic: ಬೆಳ್ಳುಳ್ಳಿ ತರಕಾರಿಯೋ, ಮಸಾಲೆ ಪದಾರ್ಥವೋ? ಗೊಂದಲಕ್ಕೆ ತೆರೆ ಎಳೆದ ಹೈಕೋರ್ಟ್‌ ತೀರ್ಪಿನಲ್ಲಿ ಏನಿದೆ? - Vistara News

ದೇಶ

Garlic: ಬೆಳ್ಳುಳ್ಳಿ ತರಕಾರಿಯೋ, ಮಸಾಲೆ ಪದಾರ್ಥವೋ? ಗೊಂದಲಕ್ಕೆ ತೆರೆ ಎಳೆದ ಹೈಕೋರ್ಟ್‌ ತೀರ್ಪಿನಲ್ಲಿ ಏನಿದೆ?

Garlic: ಬೆಳ್ಳುಳ್ಳಿ ತರಕಾರಿಯೋ ಅಥವಾ ಮಸಾಲೆ ಪದಾರ್ಥವೋ ಎಂಬ ಸುಮಾರು 1 ದಶಕದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಸುದೀರ್ಘ ವಿಚಾರಣೆ, ಕಾನೂನು ಹೋರಾಟದ ನಂತರ ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಪೀಠ ತೀರ್ಪು ನೀಡಿದೆ. ಹಾಗಾದರೆ ತೀರ್ಪಿನಲ್ಲಿ ಏನಿದೆ? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Garlic
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭೋಪಾಲ್‌: ನಾವು ಪ್ರತಿ ದಿನ ಅಡುಗೆಗಳಲ್ಲಿ ಬಳಸುವ ಬೆಳ್ಳುಳ್ಳಿ (Garlic) ತರಕಾರಿಯೋ ಅಥವಾ ಮಸಾಲೆ ಪದಾರ್ಥವೋ ಎಂಬ ಸುಮಾರು 1 ದಶಕದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಸುದೀರ್ಘ ವಿಚಾರಣೆ, ಕಾನೂನು ಹೋರಾಟದ ನಂತರ ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಪೀಠ (Indore bench of the Madhya Pradesh High Court)ವು ನಿರ್ಣಾಯಕ ತೀರ್ಪು ಪ್ರಕಟಿಸಿದ್ದು, ಬೆಳ್ಳುಳ್ಳಿಯೂ ತರಕಾರಿ ಎಂದು ಹೇಳಿದೆ.

ಬೆಳ್ಳುಳ್ಳಿ ತರಕಾರಿಯೇ ಅಥವಾ ಮಸಾಲೆ ಪದಾರ್ಥವೇ ಎನ್ನುವ ಪ್ರಕರಣದಲ್ಲಿ ಬೆಳ್ಳುಳ್ಳಿಯನ್ನು ಮೂಲವಾಗಿರಿಸಿ ಚರ್ಚೆಯನ್ನು ನಡೆಸಲಾಗಿದೆ. ಅಂತೂ ಬೆಳ್ಳುಳ್ಳಿ ಒಂದು ತರಕಾರಿಯ ವಿಧ ಎಂದು ಕೋರ್ಟ್‌ ಪೀಠ ತೀರ್ಪು ನೀಡುವ ಮೂಲಕ ಹಲವು ವರ್ಷಗಳ ಪ್ರಶ್ನೆಗೆ ಉತ್ತರ ನೀಡಿದೆ. ಮುಖ್ಯವಾಗಿ ಬೆಳ್ಳುಳ್ಳಿಯ ಕೊಳೆಯುವ ಸ್ವಭಾವವನ್ನು ತೀರ್ಪಿನಲ್ಲಿ ಪ್ರಮುಖ ಅಂಶವಾಗಿ ಉಲ್ಲೇಖಿಸಲಾಗಿದೆ. ಜತೆಗೆ ತರಕಾರಿ ಮತ್ತು ಮಸಾಲೆ ಮಾರುಕಟ್ಟೆಗಳಲ್ಲಿ ಮಾರಾಟಕ್ಕೆ ಅನುಮತಿ ನೀಡಲಾಗಿದೆ.

ಗೊಂದಲ ಆರಂಭವಾಗಿದ್ದು ಯಾವಾಗ?

ಬೆಳ್ಳುಳ್ಳಿ ಬಗ್ಗೆ ಗೊಂದಲ ಆರಂಭವಾಗಿದ್ದು 2015ರಲ್ಲಿ. ಅಂದು ಮಧ್ಯಪ್ರದೇಶದ ರೈತ ಸಂಘಟನೆಯೊಂದು ಬೆಳ್ಳುಳ್ಳಿಯನ್ನು ತರಕಾರಿ ಎಂದು ವರ್ಗೀಕರಿಸಲು ಮಂಡಿ ಮಂಡಳಿಯನ್ನು ಮನವೊಲಿಸಿದಾಗ ಈ ವಿವಾದವು ಪ್ರಾರಂಭವಾಯಿತು. ಆದಾಗ್ಯೂ ಕೃಷಿ ಇಲಾಖೆ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿತು. 1972ರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾಯ್ದೆಯಡಿ ಬೆಳ್ಳುಳ್ಳಿಯನ್ನು ಮಸಾಲೆ ಎಂದು ಮರು ವರ್ಗೀಕರಿಸಿತು. ಆ ಮೂಲಕ ಬೆಳ್ಳುಳ್ಳಿಯ ವಿಚಾರದಲ್ಲಿ ಗೊಂದಲ ಮೂಡಿತು. ಇದು ಕಾನೂನು ಸಮರಕ್ಕೆ ದಾರಿ ಮಾಡಿ ಕೊಟ್ಟಿತು.

2017ರಲ್ಲಿ ಹೈಕೋರ್ಟ್‌ ʼಬೆಳ್ಳುಳ್ಳಿ ಒಂದು ತರಕಾರಿʼ ಎಂಬ ತೀರ್ಪು ನೀಡಿತು. ಆ ತೀರ್ಪನ್ನು ಇದೀಗ ನ್ಯಾ.ಎಸ್.ಎ.ಧರ್ಮಾಧಿಕಾರಿ ಮತ್ತು ಡಿ.ವೆಂಕಟರಮಣ ಅವರಿದ್ದ ದ್ವಿಸದಸ್ಯ ಪೀಠ ಎತ್ತಿ ಹಿಡಿದಿದೆ.

ಟೀಕೆ ವ್ಯಕ್ತವಾಗಿತ್ತು

2017ರಲ್ಲಿ ಏಕ ಸದಸ್ಯ ಪೀಠವು ಬೆಳ್ಳುಳ್ಳಿಯನ್ನು ತರಕಾರಿ ಎಂದು ವರ್ಗೀಕರಿಸಿ ರೈತ ಸಂಘದ ಪರವಾಗಿ ತೀರ್ಪು ನೀಡಿದಾಗ ಈ ನಿರ್ಧಾರಕ್ಕೆ ಉದ್ಯಮಿಗಳಿಂದ ಟೀಕೆ ವ್ಯಕ್ತವಾಯಿತು. ಈ ತೀರ್ಪು ಮುಖ್ಯವಾಗಿ ರೈತರಿಗಿಂತ ಕಮಿಷನ್ ಏಜೆಂಟರಿಗೆ ಲಾಭವಾಗಿದೆ ಎಂದು ವಾದಿಸಲಾಯಿತು. ಬಳಿಕ ಅರ್ಜಿದಾರ ಮುಖೇಶ್ ಸೋಮಾನಿ 2017ರಲ್ಲಿ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿದರು. ಆ ಮೂಲಕ ಪ್ರಕರಣ ಹೈಕೋರ್ಟ್‌ನ ಇಬ್ಬರು ನ್ಯಾಯಾಧೀಶರ ಪೀಠದ ಮುಂದೆ ಬಂತು. 2024ರ ಜನವರಿಯಲ್ಲಿ ಈ ನ್ಯಾಯಪೀಠವು ಬೆಳ್ಳುಳ್ಳಿಯನ್ನು ಮಸಾಲೆ ಎಂದು ಮರು ವರ್ಗೀಕರಿಸುವ ತೀರ್ಪನ್ನು ರದ್ದುಗೊಳಿಸಿತು. ಆರಂಭಿಕ ನಿರ್ಧಾರವು ಮುಖ್ಯವಾಗಿ ವ್ಯಾಪಾರಿಗಳಿಗೆ ಅನುಕೂಲವಾಗುತ್ತಿತ್ತು, ಬೆಳ್ಳುಳ್ಳಿ ಬೆಳೆಯುವ ರೈತರಿಗೆ ಅಲ್ಲ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿತು.

ಇದನ್ನೂ ಓದಿ: DK Shivakumar: ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂಪಡೆದ ಪ್ರಕರಣ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

ಬೆಳ್ಳುಳ್ಳಿ ವ್ಯಾಪಾರಿಗಳು ಮತ್ತು ಕಮಿಷನ್ ಏಜೆಂಟರು ಈ ವರ್ಷದ ಮಾರ್ಚ್‌ನಲ್ಲಿ ಆ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿದರು. ಮತ್ತೆ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಪೀಠವು 2017ರ ಆದೇಶವನ್ನು ಎತ್ತಿ ಹಿಡಿದು ಬೆಳ್ಳುಳ್ಳಿಯನ್ನು ತರಕಾರಿ ಎಂದೇ ತೀರ್ಮಾನಿಸಿದೆ. ಸದ್ಯ ಬೆಳ್ಳುಳ್ಳಿ ವ್ಯಾಪಾರದಲ್ಲಿ ಇರುವ ನಿರ್ಬಂಧಗಳನ್ನು ತೆಗೆದುಹಾಕುವ ನಿರೀಕ್ಷೆ ಇದೆ. ಹೀಗಾದಲ್ಲಿ ಉತ್ಪಾದಕರು ಮತ್ತು ಮಾರಾಟಗಾರರಿಗೂ ಹೊಸ ಅವಕಾಶ ತೆರೆದುಕೊಳ್ಳಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

PM Narendra Modi: ಕೆಂಪುಕೋಟೆಯ ಕಾರ್ಯಕ್ರಮಕ್ಕೆ ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ

PM Narendra Modi: ಅಮೃತ ವಾಟಿಕಾ ಕಾರ್ಯಕ್ರಮದಡಿ ಸತೀಶ್ ಕನ್ನೇರ್ ಹಾಗೂ ಆದಿತ್ಯ ಕೊರವರ ಎಂಬ ವಿದ್ಯಾರ್ಥಿಗಳು 50 ಗಿಡಗಳನ್ನು ನೆಟ್ಟು ಪೋಷಿಸಿದ್ದಾರೆ. ಇದನ್ನು ಗಮನಿಸಿ ಪ್ರಧಾನಿ ಕಚೇರಿಯಿಂದ ವಿಶೇಷ ಅತಿಥಿಗಳಾಗಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಇಬ್ಬರು ವಿದ್ಯಾರ್ಥಿಗಳಿಗೆ ಆಹ್ವಾನ ನೀಡಲಾಗಿದೆ.

VISTARANEWS.COM


on

Independence Day 2024 gadag students pm narendra modi
Koo

ಗದಗ: ಗದಗದ (Gadag news) ಸರ್ಕಾರಿ ಪದವಿಪೂರ್ವ ಕಾಲೇಜಿನ ಎನ್‍ಎಸ್‍ಎಸ್ (NSS) ಘಟಕದ ಇಬ್ಬರು ವಿದ್ಯಾರ್ಥಿಗಳಿಗೆ ದೆಹಲಿ ಕೆಂಪುಕೋಟೆಯಲ್ಲಿ (Red Fort) ನಡೆಯುವ ಸ್ವಾತಂತ್ರ್ಯೋತ್ಸವ (Independence Day 2024) ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಆಹ್ವಾನಿಸಿದ್ದಾರೆ.

ಕೇಂದ್ರ ಸರ್ಕಾರದ ʼಮೇರಿ ಮಾಟಿ, ಮೇರಾ ದೇಶ್’ ಎನ್ನುವ ಕಾರ್ಯಕ್ರಮವನ್ನು ಕಾಲೇಜಿನ ಎನ್‍ಎಸ್‍ಎಸ್ ಘಟಕ ಯಶಸ್ವಿಯಾಗಿ ಮಾಡುತ್ತ ಬಂದಿದೆ. ಅಮೃತ ವಾಟಿಕಾ ಕಾರ್ಯಕ್ರಮದಡಿ ಸತೀಶ್ ಕನ್ನೇರ್ ಹಾಗೂ ಆದಿತ್ಯ ಕೊರವರ ಎಂಬ ವಿದ್ಯಾರ್ಥಿಗಳು 50 ಗಿಡಗಳನ್ನು ನೆಟ್ಟು ಪೋಷಿಸಿದ್ದಾರೆ. ಇದನ್ನು ಗಮನಿಸಿ ಪ್ರಧಾನಿ ಕಚೇರಿಯಿಂದ ವಿಶೇಷ ಅತಿಥಿಗಳಾಗಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಇಬ್ಬರು ವಿದ್ಯಾರ್ಥಿಗಳಿಗೆ ಆಹ್ವಾನ ನೀಡಲಾಗಿದೆ.

ಕಾಲೇಜಿನ ವತಿಯಿಂದ ಒಂದು ವರ್ಷದಿಂದ ಅಮೃತ ವಾಟಿಕಾ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಮಾಡಿಕೊಂಡು ಬರಲಾಗಿದೆ. ಎನ್‍ಎಸ್‍ಎಸ್ ಘಟಕದಿಂದ ಕಾಲೇಜಿನ ಮುಂದೆ 50 ಗಿಡಗಳನ್ನು ನೆಟ್ಟು ಪಾಲನೆ ಪೋಷಣೆ ಮಾಡಲಾಗಿದೆ. ಆ ಗಿಡಗಳ ಪೋಷಣೆಯನ್ನು ಕಾಲೇಜಿನ ವೆಬ್‍ಸೈಟ್‍ನಲ್ಲಿ ಅಪ್ಲೋಡ್ ಮಾಡಲಾಗಿದೆ. 100 ವಿದ್ಯಾರ್ಥಿಗಳ ಪೈಕಿ ಸತೀಶ್ ಹಾಗೂ ಆದಿತ್ಯ ಎಂಬ ವಿದ್ಯಾರ್ಥಿಗಳು ಬಹಳಷ್ಟು ಅಚ್ಚುಕಟ್ಟಾಗಿ ಗಿಡಗಳನ್ನು ಬೆಳೆಸಿದ್ದರು. ಇದನ್ನು ಗಮನಿಸಿ ಅವರಿಗೆ ಪ್ರಧಾನಿ ಕಚೇರಿಯಿಂದ ವಿಶೇಷ ಅತಿಥಿಗಳಾಗಿ ಅಹ್ವಾನ ನೀಡಲಾಗಿದೆ.‌

ಈ ಬಗ್ಗೆ ಮಾತನಾಡಿರುವ ಎನ್‍ಎಸ್‍ಎಸ್ ಘಟಕದ ಶಿಕ್ಷಕರು, ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಮಯದಲ್ಲಿ ವಿದ್ಯಾರ್ಥಿಗಳು ಮಹಾಗನಿ ಹಾಗೂ ತಬೀಬ್ ರೋಜಾ ಜಾತಿಯ ಗಿಡಗಳನ್ನು ನೆಟ್ಟು ಪಾಲನೆ ಪೋಷಣೆ ಮಾಡಿದ್ದಾರೆ. ಇಡೀ ರಾಜ್ಯದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 24 ಜನರಿಗೆ ಪ್ರಧಾನಿ ಕಚೇರಿಯಿಂದ ಆಹ್ವಾನ ಬಂದಿದೆ. ಆ ಪೈಕಿ ಗದಗ ಜಿಲ್ಲೆಯ ಸತೀಶ್ ಮತ್ತು ಆದಿತ್ಯ ಎಂಬ ಇಬ್ಬರು ವಿದ್ಯಾರ್ಥಿಗಳಿಗೆ ವಿಶೇಷ ಅತಿಥಿಗಳಾಗಿ ಆಹ್ವಾನ ಬಂದಿದೆ. ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ಸಂವಾದ ಹಾಗೂ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅಹ್ವಾನ ಬಂದಿರುವುದು ಬಹಳ ಖುಷಿ ತಂದಿದೆ. ಇದು ನಮ್ಮ ಕಾಲೇಜಿಗೆ ಅಷ್ಟೇ ಅಲ್ಲ, ನಮ್ಮ ಜಿಲ್ಲೆಗೆ ಹೆಮ್ಮೆ ಎಂದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎನ್‍ಎಸ್‍ಎಸ್ ಘಟಕದ ನೋಡಲ್ ಅಧಿಕಾರಿ ಶ್ರೀನಿವಾಸ ಬಡಿಗೇರ ಅವರು, ಅಧಿಕಾರಿಗಳನ್ನು, ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವುದು ಸಾಮಾನ್ಯ. ಆದರೆ ವಿದ್ಯಾರ್ಥಿಗಳ ಕೆಲಸ ಕಾರ್ಯವನ್ನು ಪ್ರಧಾನಿಗಳು ಮೆಚ್ಚಿ, ಅವರ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದು ಸಂತಸ ತಂದಿದೆ. ಕಾಯಕವನ್ನು ನಿಷ್ಠೆಯಿಂದ ಮಾಡಿದರೆ ತಕ್ಕ ಪ್ರತಿಫಲ ಸಿಗುತ್ತದೆ ಎನ್ನುವುದಕ್ಕೆ ಇದೊಂದು ಉತ್ತಮ ಉದಾಹರಣೆ ಎಂದಿದ್ದಾರೆ.

ಇದನ್ನೂ ಓದಿ: President’s Medal: ರಾಜ್ಯದ 20 ಪೊಲೀಸ್‌ ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಪದಕ ಘೋಷಣೆ

Continue Reading

ದೇಶ

Ram Path: ಬೀದಿ ದೀಪಗಳನ್ನೂ ಬಿಡದ ಕಳ್ಳರು; ಅಯೋಧ್ಯೆಯ ರಾಮಪಥ, ಭಕ್ತಿಪಥದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಲೈಟ್ಸ್‌ ನಾಪತ್ತೆ

Ram Path: ಅಯೋಧ್ಯೆ ರಾಮ ಮಂದಿರದ ರಾಮಪಥ ಮತ್ತು ಭಕ್ತಿಪಥದಲ್ಲಿರುವ ದೀಪಗಳನ್ನು ಕಳ್ಳರು ಎಗರಿಸಿದ್ದಾರೆ. 50 ಲಕ್ಷ ರೂ. ಮೌಲ್ಯದ ಬೀದಿ ದೀಪಗಳನ್ನು ಕಳವು ಮಾಡಲಾಗಿದ್ದು, ಗುತ್ತಿಗೆದಾರರು ಇದೀಗ ಪೊಲೀಸ್‌ ಠಾಣೆಯ ಮೆಟ್ಟಿಲೇರಿದ್ದಾರೆ. ರಾಮಜನ್ಮಭೂಮಿ ಠಾಣೆಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. 3,800ಕ್ಕೂ ಅಧಿಕ ಬೀದಿ ದೀಪಗಳು ಹಾಗೂ 36 ಪ್ರೊಜೆಕ್ಟರ್​ ದೀಪಗಳನ್ನು ಕಳವು ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

VISTARANEWS.COM


on

Ram Path
Koo

ಲಖನೌ: ಅಯೋಧ್ಯೆ (Ayodhya)ಯ ರಾಮಪಥ (Ram Path) ಹಾಗೂ ಭಕ್ತಿಪಥ (Bhakti Path)ದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಬೀದಿ ದೀಪಗಳನ್ನು ಕಳವು ಮಾಡಲಾಗಿದ್ದು, ಗುತ್ತಿಗೆದಾರರು ಇದೀಗ ಪೊಲೀಸ್‌ ಠಾಣೆಯ ಮೆಟ್ಟಿಲೇರಿದ್ದಾರೆ. 3,800ಕ್ಕೂ ಅಧಿಕ ಬೀದಿ ದೀಪಗಳು ಹಾಗೂ 36 ಪ್ರೊಜೆಕ್ಟರ್​ ದೀಪಗಳನ್ನು ಕಳವು ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ʼʼರಾಮಪಥದ ಮರಗಳಿಗೆ ಅಳವಡಿಸಿದ್ದ 3,800 ಬಾಂಬೂ ಲೈಟ್‌ ಮತ್ತು ಭಕ್ತಿಪಥದಲ್ಲಿದ್ದ 36 ಗೋಬೊ ಪ್ರೊಜೆಕ್ಟರ್ ಲೈಟ್‌ಗಳನ್ನು ಕಳವು ಮಾಡಲಾಗಿದೆ. ಇದರ ಒಟ್ಟು ಮೌಲು ಸುಮಾರು 50 ಲಕ್ಷ ರೂ.ʼʼ ಎಂದು ಗುತ್ತಿಗೆದಾರರು ತಿಳಿಸಿದ್ದಾರೆ. ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರ ನೀಡಿದ ಗುತ್ತಿಗೆಯಡಿಯಲ್ಲಿ ದೀಪಗಳನ್ನು ಅಳವಡಿಸಿದ ಯಶ್ ಎಂಟರ್‌ಪ್ರೈಸಸ್ ಮತ್ತು ಕೃಷ್ಣ ಆಟೋಮೊಬೈಲ್ಸ್ ಸಂಸ್ಥೆಯ ಪ್ರತಿನಿಧಿಗಳು ದೂರು ದಾಖಲಿಸಿದ್ದಾರೆ. ರಾಮಪಥದಲ್ಲಿ 6,400 ಬಾಂಬೂ ಲೈಟ್‌ ಮತ್ತು ಭಕ್ತಿಪಥದಲ್ಲಿ 96 ಗೋಬೊ ಪ್ರೊಜೆಕ್ಟರ್ ಲೈಟ್‌ಗಳನ್ನು ಸ್ಥಾಪಿಸಲಾಗಿದ್ದು, ಈ ಪೈಕಿ ಅರ್ಧದಷ್ಟನ್ನು ಕಳ್ಳರು ಎಗರಿಸಿದ್ದಾರೆ.

ʼʼರಾಮಪಥದಲ್ಲಿ 6,400 ಬಿದಿರಿನ ದೀಪಗಳು ಮತ್ತು ಭಕ್ತಿ ಪಥದಲ್ಲಿ 96 ಪ್ರೊಜೆಕ್ಟರ್ ಲೈಟ್‌ಗಳನ್ನು ಅಳವಡಿಸಲಾಗಿದೆ. ಮಾರ್ಚ್ 19ರವರೆಗೆ ಎಲ್ಲ ದೀಪಗಳು ಇದ್ದವು. ಆದರೆ ಮೇ 9ರಂದು ಪರಿಶೀಲಿಸಿದಾಗ ಈ ಪೈಕಿ ಕೆಲವು ದೀಪಗಳು ನಾಪತ್ತೆಯಾಗಿದ್ದವು. ಇದುವರೆಗೆ ಒಟ್ಟು 3,800 ಬಿದಿರಿನ ದೀಪಗಳು ಮತ್ತು 36 ಪ್ರೊಜೆಕ್ಟರ್ ದೀಪಗಳು ಕಾಣೆಯಾಗಿವೆʼʼ ಎಂದು ದೀಪ ಅವಳಡಿಸಿದ್ದ ಸಂಸ್ಥೆಯ ಪ್ರತಿನಿಧಿ ಶೇಖರ್ ಶರ್ಮಾ ಮಾಹಿತಿ ನೀಡಿದ್ದಾರೆ.

ದೀಪಗಳು ಕಾಣೆಯಾಗುವ ಬಗ್ಗೆ ಕಂಪೆನಿಗೆ ಮೇ ತಿಂಗಳಿನಲ್ಲಿಯೇ ಗೊತ್ತಾಗಿದ್ದರೂ ಆಗಸ್ಟ್‌ 9ರಂದು ದೂರು ದಾಖಲಿಸಿದೆ. ಸದ್ಯ ಈ ಬಗ್ಗೆ ರಾಮಜನ್ಮಭೂಮಿ ಠಾಣೆಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಯಾವುದೇ ಮಾಹಿತಿ ಬಹಿರಂಗಪಡಿಸಲು ನಿರಾಕರಿಸಿದ್ದಾರೆ.

ಭಕ್ತಿಪಥವು ರಾಮ ಮಂದಿರಕ್ಕೆ ಹೋಗುವ ರಸ್ತೆಯಾಗಿದ್ದು, ಶೃಂಗಾರ್ ಘಾಟ್ ಅನ್ನು ಹನುಮಾನ್ ಗರ್ಹಿ ಮತ್ತು ರಾಮಮಂದಿರಕ್ಕೆ ಸಂಪರ್ಕಿಸುತ್ತದೆ. 742 ಮೀಟರ್ ರಸ್ತೆಯ ಇಕ್ಕೆಲೆಗಳಲ್ಲಿ ಕೇಸರಿ ಬಣ್ಣ ಬಳಿಯಲಾದ ಅಂಗಡಿಗಳು ಮತ್ತು ನಿವಾಸಗಳಿದ್ದು, ಪ್ರವಾಸಿಗರ ಗಮನ ಸೆಳೆಯುತ್ತದೆ. ಕನಕ ಭವನ ಮತ್ತು ದಶರಥ ಮಹಲ್‌ನಂತಹ ಪ್ರಮುಖ ಕಟ್ಟಡಗಳು ಇದೇ ಮಾರ್ಗದಲ್ಲಿದೆ.

ಸಾದತ್ಗಂಜ್ ಮತ್ತು ನಯಾ ಘಾಟ್ ಅನ್ನು ಸಂಪರ್ಕಿಸುವ 13 ಕಿ.ಮೀ ಉದ್ದದ, ನಾಲ್ಕು ಪಥದ ಹೆದ್ದಾರಿಯನ್ನು ರಾಮಪಥ ಎಂದು ಕರೆಯಲಾಗುತ್ತದೆ. ಈ ವರ್ಷದ ಜನವರಿ 22ರಂದು ರಾಮ ಮಂದಿರಲ್ಲಿ ಬಾಲಕ ರಾಮ ವಿಗ್ರಹದ ಪ್ರಾಣ ಪ್ರತಿಷ್ಠೆ ಸಮಾರಂಭ ನಡೆದಿತ್ತು. ಪ್ರಧಾನಿ ನರೇಂದ್ರ ಮೋದಿ ಸಹಿತ ದೇಶದ ವಿವಿಧ ರಂಗಗಳ ಗಣ್ಯರು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗಿಯಾಗಿದ್ದರು.

ಕೆಲವು ದಿನಗಳ ಹಿಂದೆ ಮಳೆಗಾಲ ಆರಂಭವಾದಾಗ ರಾಮ ಮಂದಿರದ ಒಳಗೆ ನೀರು ಸೋರಿಕೆಯಾಗುತ್ತದೆ ಎನ್ನುವ ವಿಚಾರ ಸಾಕಷ್ಟು ಸುದ್ದಿ ಮಾಡಿತ್ತು. ʼʼಮಂದಿರ ನಿರ್ಮಾಣದ ವೇಳೆ ಅನೇಕ ಎಂಜಿನಿಯರ್‌ಗಳು ಮೇಲ್ವಿಚಾರಣೆ ನಡೆಸಿದ್ದರು. ಅದರ ಹೊರತಾಗಿಯೂ, ಛಾವಣಿಯಿಂದ ನೀರು ಸೋರುತ್ತಿದೆ. ಇದನ್ನು ಯಾರೂ ನಿರೀಕ್ಷಿಸಿರಲಿಲ್ಲʼʼ ಎಂದು ರಾಮ ಮಂದಿರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅಚ್ಚರಿ ವ್ಯಕ್ತಪಡಿಸಿದ್ದರು.

Continue Reading

ಪ್ರಮುಖ ಸುದ್ದಿ

President’s Medal: ರಾಜ್ಯದ 20 ಪೊಲೀಸ್‌ ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಪದಕ ಘೋಷಣೆ

President’s Medal: ರಾಜ್ಯದ 20 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ರಾಷ್ಟ್ರಪತಿಗಳ ಪದಕ ಒಲಿದಿದೆ. ಇಬ್ಬರು ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಅತ್ಯುತ್ತಮ ಸೇವಾ ಪದಕ ಘೋಷಣೆಯಾಗಿದೆ. ಐಎಸ್‌ಡಿ, ಎಡಿಜಿಪಿ ಎಂ. ಚಂದ್ರಶೇಖರ್ ಹಾಗೂ ಅಗ್ನಿಶಾಮಕ ದಳದ ಸೀನಿಯರ್ ಕಮಾಂಡರ್ ಬಸವಲಿಂಗಪ್ಪ ಅವರಿಗೆ ಅತ್ಯುತ್ತಮ ಸೇವಾ ಪದಕ ಘೋಷಿಸಲಾಗಿದೆ.

VISTARANEWS.COM


on

president's medal 2024
Koo

ಹೊಸದಿಲ್ಲಿ: ಸ್ವಾತಂತ್ರ್ಯ ದಿನಾಚರಣೆ (Independence Day 2024) ಪ್ರಯುಕ್ತ ರಾಜ್ಯದ ಹಲವು ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ರಾಷ್ಟ್ರಪತಿಗಳ ಪದಕ (President’s Medal) ಘೋಷಣೆ ಮಾಡಲಾಗಿದೆ. ಕೇಂದ್ರ ಸರ್ಕಾರ (India Govt) ಈ ಘೋಷಣೆ ಹೊರಡಿಸಿದ್ದು, ನಾಳೆ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಇವರಿಗೆ ಗೌರವ ಸಮರ್ಪಣೆ ಮಾಡಲಾಗುತ್ತದೆ.

ರಾಜ್ಯದ 20 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ರಾಷ್ಟ್ರಪತಿಗಳ ಪದಕ ಒಲಿದಿದೆ. ಇಬ್ಬರು ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಅತ್ಯುತ್ತಮ ಸೇವಾ ಪದಕ ಘೋಷಣೆಯಾಗಿದೆ. ಐಎಸ್‌ಡಿ, ಎಡಿಜಿಪಿ ಎಂ. ಚಂದ್ರಶೇಖರ್ ಹಾಗೂ ಅಗ್ನಿಶಾಮಕ ದಳದ ಸೀನಿಯರ್ ಕಮಾಂಡರ್ ಬಸವಲಿಂಗಪ್ಪ ಅವರಿಗೆ ಅತ್ಯುತ್ತಮ ಸೇವಾ ಪದಕ ಘೋಷಿಸಲಾಗಿದೆ.

ಇನ್ನುಳಿದ 18 ಮಂದಿ ಅಧಿಕಾರಿ ಸಿಬ್ಬಂದಿಗೆ ಅರ್ಹ ಸೇವಾ ಪದಕಗಳನ್ನು ಕೇಂದ್ರ ಗೃಹ ಇಲಾಖೆ ಘೋಷಣೆ ಮಾಡಿದೆ. ಅವರ ಹೆಸರುಗಳು ಇಲ್ಲಿವೆ:

ಶ್ರೀನಾಥ್ ಎಂ ಜೋಷಿ, ಎಸ್‌ಪಿ ಲೋಕಾಯುಕ್ತ
ಸಿ.ಕೆ ಬಾಬಾ, ಎಸ್‌ಪಿ ಬೆಂಗಳೂರು ಗ್ರಾಮಾಂತರ ಜಿಲ್ಲೆ
ರಾಮಗೊಂಡ ಬೈರಪ್ಪ, ಎಎಸ್‌ಪಿ ಕರ್ನಾಟಕ
ಗಿರಿ ಕೃಷ್ಣಮೂರ್ತಿ, ಡಿಎಸ್‌ಪಿ
ಪಿ ಮುರಳೀಧರ್, ಡಿಎಸ್‌ಪಿ
ಬಸವೇಶ್ವರ, ಅಸಿಸ್ಟೆಂಟ್ ಡೈರೆಕ್ಟರ್
ಬಸವರಾಜು ಕಮ್ತಾನೆ, ಡಿಎಸ್‌ಪಿ
ರವೀಶ್ ನಾಯಕ್, ಎಸಿಪಿ
ಶರತ್ ದಾಸನಗೌಡ, ಎಸ್‌ಪಿ
ಪ್ರಭಾಕರ್ ಗೋವಿಂದಪ್ಪ, ಎಸಿಪಿ
ಗೋಪಾಲ್ ರೆಡ್ಡಿ, ಡಿಸಿಪಿ
ಬಿ. ವಿಜಯ್ ಕುಮಾರ್, ಹೆಡ್ ಕಾನ್ಸ್‌ಟೇಬಲ್
ಮಂಜುನಾಥ ಶೇಕಪ್ಪ ಕಲ್ಲೆದೇವರ್, ಸಬ್ ಇನ್ಸ್‌ಪೆಕ್ಟರ್
ಹರೀಶ್ ಎಚ್.ಆರ್, ಅಸಿಸ್ಟೆಂಟ್ ಕಮಾಂಡೆಂಟ್
ಎಸ್ ಮಂಜುನಾಥ, ಇನ್ಸ್‌ಪೆಕ್ಟರ್
ಗೌರಮ್ಮ ಜಿ., ಎಎಸ್ಐ

ವಿಜಯ್ ಪ್ರಕಾಶ್‌ ಹೊಸ ಸಾಂಗ್‌ ಔಟ್‌; ಭಾರತೀಯ ಸೇನೆಗೆ ಹಾಡನ್ನು ಅರ್ಪಿಸಿದ ಹೊಸಬರ ತಂಡ!

ಬೆಂಗಳೂರು: ಆಗಸ್ಟ್ 15 ರಂದು ದೇಶಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆ (Independence day 2024) ನಡೆಯಲಿದೆ. ಈ ದಿನ ಇಡೀ ದೇಶ ತ್ರಿವರ್ಣ ಧ್ವಜಗಳಿಂದ ರಾರಾಜಿಸುತ್ತಿರುತ್ತದೆ.  ಸ್ವಾತಂತ್ರ್ಯದಿನದ ಸಂಭ್ರಮ ಎಲ್ಲಡೆ ಮನೆ ಮಾಡಿದೆ.  ಇನ್ನು ಆಗಸ್ಟ್​ 15ರಂದು ಕೆಂಪು ಕೋಟೆ ಜನರಿಂದ ತುಂಬಿ ತುಳುಕುತ್ತಿರುತ್ತದೆ.  ಇದೀಗ ಹೊಸ ಚಿತ್ರ ತಯಾರಕರ ತಂಡವು ‘ನನ್ನ ದೇಶವು’ (Nanna Deshavu) ಎಂಬ ಕನ್ನಡ ದೇಶಭಕ್ತಿಯ ಗೀತೆಯನ್ನು ಬಿಡುಗಡೆ ಮಾಡಿದೆ. ಈ ಹಾಡಿನಲ್ಲಿ ಭಾರತದ ವೈವಿಧ್ಯಮಯ ಸಂಸ್ಕೃತಿ, ಭವ್ಯವಾದ ಭೂದೃಶ್ಯಗಳು, ಇತಿಹಾಸ ಮತ್ತು ಭಾರತದ ಹಿರಿಮೆಯನ್ನು ಎತ್ತಿ ತೋರಿಸುವಂತಿದೆ. ‘ನನ್ನ ದೇಶವು’ ಹಾಡು ಕನ್ನಡ ಚಿತ್ರರಂಗದ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಧ್ವನಿಯಲ್ಲಿ ಮೂಡಿ ಬಂದಿದೆ.

Jungrus Studios ಯೂಟ್ಯೂಬ್ ಚಾನೆಲ್‌ನಲ್ಲಿ ಹಾಡನ್ನು ಬಿಡುಗಡೆ ಮಾಡಲಾಗಿದೆ. ವಿಜಯ್ ಪ್ರಕಾಶ್ ಅವರ ಸುಂದರ ಗಾಯನದೊಂದಿಗೆ ಭರತ್ ಕುಮಾರ್ ಜನಾರ್ದನ ಅವರು ಬರೆದು ನಿರ್ದೇಶಿಸಿರುವ ಈ ಹಾಡನ್ನು ಸತ್ಯ ರಾಧಾಕಿರ್ಷ್ಣ ಸಂಗೀತ ಸಂಯೋಜಿಸಿದ್ದಾರೆ. ಲೇಹ್ ಲಡಕ್, ಕಾಶ್ಮೀರ, ಹಂಪಿ, ಸಾಗರ, ಶಿವಮೊಗ್ಗ, ಬೆಂಗಳೂರು, ಶಿವನಸಮುದ್ರ ಮುಂತಾದ ಭಾರತದ ವಿವಿಧ ಸ್ಥಳಗಳಲ್ಲಿ ಹಾಡನ್ನು ಚಿತ್ರೀಕರಿಸಲಾಗಿದೆ. ದೇಶಕ್ಕಾಗಿ ಅವಿರತವಾಗಿ ದುಡಿಯುವ ಮತ್ತು ತ್ಯಾಗ ಮಾಡುವ ಭಾರತೀಯ ಸೇನೆಗೆ ಈ ಹಾಡನ್ನು ಅರ್ಪಿಸಲಾಗಿದೆ.

ಇದನ್ನೂ ಓದಿ: Independence Day 2024: ಬ್ರಿಟಿಷ್‌ ಕಾಲದ ಚಿನ್ನದ ನಾಣ್ಯದಿಂದ ಹಿಡಿದು ಸ್ವತಂತ್ರ ಭಾರತದ ರೂಪಾಯಿವರೆಗಿನ ಇತಿಹಾಸ ಕುತೂಹಲಕರ!

Continue Reading

ವೈರಲ್ ನ್ಯೂಸ್

Viral News: ಯೋಧನ ಮೇಲೆ ಪೊಲೀಸರ ದೌರ್ಜನ್ಯ; ನಗ್ನಗೊಳಿಸಿ ಹಿಗ್ಗಾಮುಗ್ಗಾ ಥಳಿತ

Viral News: ಮಿಲಿಟರಿ ಕಮಾಂಡೋ ಒಬ್ಬರನ್ನು ಪೊಲೀಸರು ಬೆತ್ತಲೆಗೊಳಿಸಿ ಥಳಿಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಜೈಪುರದ ಶಿಪ್ರಪಥ್ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ರಾಜಸ್ಥಾನದ ಕ್ಯಾಬಿನೆಟ್ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜತೆಗೆ ಠಾಣೆಗೆ ತೆರಳಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

VISTARANEWS.COM


on

Viral News
Koo

ಜೈಪುರ: ಮಿಲಿಟರಿ ಕಮಾಂಡೋ ಒಬ್ಬರನ್ನು ಪೊಲೀಸರು ಬೆತ್ತಲೆಗೊಳಿಸಿ ಥಳಿಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದ್ದು, ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ರಾಜಸ್ಥಾನದ ಕ್ಯಾಬಿನೆಟ್ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ (Rajyavardhan Singh Rathore) ಕೂಡ ಈ ಘಟನೆಯನ್ನು ಖಂಡಿಸಿದ್ದು, ಅವರು ಪೊಲೀಸರು ತರಾಟೆಗೆ ತೆಗೆದುಕೊಳ್ಳುತ್ತಿರುವ ವಿಡಿಯೊ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ (Viral News) ಆಗಿದೆ.

ಸೇನಾ ಕಮಾಂಡೋ ವಿರುದ್ಧ ಪೊಲೀಸರು ನಡೆಸಿದ ಕ್ರೌರ್ಯದ ಬಗ್ಗೆ ಮಾಹಿತಿ ಪಡೆದ ರಾಜ್ಯವರ್ಧನ್ ಸಿಂಗ್ ರಾಥೋಡ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ವಿಡಿಯೊದಲ್ಲಿ ಅವರು ಪೊಲೀಸ್ ಠಾಣೆಯೊಳಗೆ ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವುದು ಕಂಡು ಬಂದಿದೆ. ಜೈಪುರದ ಶಿಪ್ರಪಥ್ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಪೊಲೀಸರು ಬ್ಯಾರಕ್‌ಗಳಲ್ಲಿ ಕಮಾಂಡರನ್ನು ವಿವಸ್ತ್ರಗೊಳಿಸಿ ಥಳಿಸಿದರು ಮತ್ತು ನಿಂದನಾತ್ಮಕ ಭಾಷೆಯನ್ನು ಬಳಸಿದ್ದರು ಎಂದು ಆರೋಪಿಸಲಾಗಿದೆ. ರಾಜಸ್ಥಾನ ಸರ್ಕಾರದ ಸೈನಿಕ ಕಲ್ಯಾಣ ಸಚಿವರೂ ಆದ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಪೊಲೀಸರಿಗೆ ಬೆವರಿಳಿಸಿದ ಸಚಿವ

ಶಿಪ್ರಪಥ್ ಪೊಲೀಸ್ ಠಾಣೆಯಲ್ಲಿ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರು ಪೊಲೀಸರನ್ನು ಬೆಂಡೆತ್ತುವ ಈ ವಿಡಿಯೊ ಇದೀಗ ನೆಟ್ಟಿಗರ ಗಮನ ಸೆಳೆದಿದೆ. ಭಾರತೀಯ ಸೇನಾ ಕಮಾಂಡೋ ಜತೆ ಪೊಲೀಸರ ದುರ್ವರ್ತನೆಯಿಂದ ಅಸಮಾಧಾನಗೊಂಡ ಅವರು ನೇರ ಪೊಲೀಸ್ ಠಾಣೆಗೆ ತೆರಳಿ ಅಧಿಕಾರಿಗಳ ಬೆವರಳಿಸಿದ್ದಾರೆ. “ನೀವು ಮೂಲಭೂತ ನಡವಳಿಕೆಯನ್ನು ಕಲಿತಿಲ್ಲವೇ ? ಸಮವಸ್ತ್ರವು ಧರಿಸಿದರೆ ಏನೂ ಮಾಡಬಹುದು ಎಂದು ಭಾವಿಸಿದ್ದೀರಾ? ನಿಮ್ಮ ಮನಸ್ಸಿನಲ್ಲಿ ತಾಳ್ಮೆ, ಸಾರ್ವಜನಿಕ ಸೇವೆಯ ಪ್ರಜ್ಞೆ ಇದೆಯೇ?ʼʼ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ನಿಯೋಜಿತರಾಗಿರುವ ಸೇನಾ ಕಮಾಂಡೋ ರಜೆಯ ಹಿನ್ನೆಲೆಯಲ್ಲಿ ತಮ್ಮೂರಾದ ಜೈಪುರಕ್ಕೆ ಆಗಮಿಸಿದ್ದರು. ಆಗಸ್ಟ್ 11ರಂದು ಅವರು ತಮ್ಮ ಸಹ ಕಮಾಂಡೋ ಒಬ್ಬರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಪುರದ ಶಿಪ್ರಪಥ್ ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ ಅಲ್ಲಿನ ಪೊಲೀಸರೊಂದಿಗೆ ವಾಗ್ವಾದ ನಡೆಯಿತು. ಬಳಿಕ ಪೊಲೀಸರು ಕಮಾಂಡರನ್ನು ಬ್ಯಾರಕ್‌ನಲ್ಲಿ ಇರಿಸಿ ಥಳಿಸಿದ್ದರು ಎನ್ನಲಾಗಿದೆ.

ಪೊಲೀಸರು ಕಮಾಂಡರನ್ನು ನಗ್ನಗೊಳಿಸಿ ದೊಣ್ಣೆಗಳಿಂದ ಹೊಡೆದಿದ್ದಲ್ಲದೆ, ‘ಪೊಲೀಸರು ಭಾರತೀಯ ಸೇನೆಗಿಂತ ಶ್ರೇಷ್ಠ’ ಎನ್ನುವ ಅರ್ಥ ಬರುವಂತ ಮಾತು ಹೇಳುವಂತೆ ಬಲವಂತಪಡಿಸಿದ್ದರು. ಜತೆಗೆ ಇದನ್ನು ಚಿತ್ರೀಕರಿಸಿದ್ದಾರೆ ಎಂದು ದೂರಲಾಗಿದೆ. ಈ ವಿಡಿಯೊ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಅವರು ಸ್ವತಃ ಪೊಲೀಸ್‌ ಠಾಣೆಗೆ ಧಾವಿಸಿದರು. ಇದೇ ವೇಳೆ ಪೊಲೀಸರ ಕೃತ್ಯವನ್ನು ಸಮರ್ಥಿಸಿಕೊಂಡ ಎಸಿಪಿ ಸಂಜಯ್ ಶರ್ಮ, ಮೊದಲು ಕಮಾಂಡರ್‌ ತಮ್ಮನ್ನು ನಿಂದಿಸಿದ್ದಾಗಿ ತಿಳಿಸಿದರು.

ʼʼಪೊಲೀಸರು ಭಾರತೀಯ ಸೇನೆಯ ಸೈನಿಕನನ್ನು ಬೆತ್ತಲೆಗೊಳಿಸಿ ಕೋಲುಗಳಿಂದ ಥಳಿಸಿದ್ದಾರೆ. ಇದನ್ನು ಯಾವುದೇ ಸಂದರ್ಭದಲ್ಲೂ ಸಹಿಸಲಾಗುವುದಿಲ್ಲ. ಇದು ಹೇಯ ಕೃತ್ಯ. ಇದು ಅಸಹ್ಯಕರ ಮನಸ್ಥಿತಿಯನ್ನು ತೋರಿಸುತ್ತದೆʼʼ ಎಂದು ರಾಜ್ಯ ವರ್ಧನ್‌ ಸಿಂಗ್‌ ಕಿಡಿಕಾರಿದ್ದಾರೆ. ಸದ್ಯ ಜೈಪುರ ಪೊಲೀಸ್ ಆಯುಕ್ತ ಬಿಜು ಜಾರ್ಜ್ ಜೋಸೆಫ್ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಇನ್ಸ್‌ಪೆಕ್ಟರ್‌ ಬನ್ನಾ ಲಾಲ್ ಸೇರಿದಂತೆ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಿದ್ದಾರೆ.

ಇದನ್ನೂ ಓದಿ: Arshad Nadeem : ಲಷ್ಕರ್ ಉಗ್ರನ ಜತೆ ಕಾಣಿಸಿಕೊಂಡ ಪಾಕಿಸ್ತಾನದ ಒಲಿಂಪಿಕ್ಸ್​ ಚಿನ್ನದ ಪದಕ ವಿಜೇತ ಅರ್ಷದ್​ ನದೀಮ್​!

Continue Reading
Advertisement
Viral News
Latest18 mins ago

Viral News: ರೈಲು ಬೋಗಿಯಲ್ಲಿ ನಮಾಜ್: ಮುಸ್ಲಿಂ ಪ್ರಯಾಣಿಕರನ್ನು ತರಾಟೆಗೆ ತೆಗೆದುಕೊಂಡ ಟಿಟಿಇ; ವಿಡಿಯೊ ಇಲ್ಲಿದೆ

Viral Video
Latest29 mins ago

Viral Video: ರೀಲ್ಸ್ ಅವಾಂತರ; 6ನೇ ಮಹಡಿಯಿಂದ ಬಿದ್ದ ಬಾಲಕಿ; ಅಪ್ಪನನ್ನು ಕರೆ ಎಂದು ಅಮ್ಮನ ಬಳಿ ಅಂಗಲಾಚಿದ್ದು ಯಾಕೆ?

ramanagara murder case
ಕ್ರೈಂ33 mins ago

Murder Case: ಪೂಜೆಗೆಂದು ಕರೆದೊಯ್ದು ಹೆಂಡತಿಯ ಕೊಂದ ಗಂಡ; ಕೊಲೆಯಾದಳೇಕೆ ಚಿಟ್ಟೆ ಟ್ಯಾಟೂ ಚೆಲುವೆ?

Dodda Ganesh
ಕ್ರೀಡೆ37 mins ago

Dodda Ganesh: ಕೀನ್ಯಾ ಕ್ರಿಕೆಟ್​ ತಂಡಕ್ಕೆ ಕನ್ನಡಿಗ ದೊಡ್ಡ ಗಣೇಶ್ ನೂತನ ಕೋಚ್

Rachael Lillis The voice of Pokémon Misty and Jessie passes away
ಸಿನಿಮಾ37 mins ago

Rachael Lillis: ಧ್ವನಿ ನಿಲ್ಲಿಸಿದ ʻಪೋಕೆಮಾನ್ʼ ತಾರೆ ರಾಚೆಲ್; ಸ್ತನ ಕ್ಯಾನ್ಸರ್‌ ವಿರುದ್ಧ ಹೋರಾಡಿ ಸೋತ ನಟಿ

Gold Rate Today
ಚಿನ್ನದ ದರ41 mins ago

Gold Rate Today: ಚಿನ್ನದ ಬೆಲೆಯಲ್ಲಿ ತುಸು ಇಳಿಕೆ; ಇಂದಿನ ಬೆಲೆ ಚೆಕ್‌ ಮಾಡಿ

Independence Day 2024 gadag students pm narendra modi
ಪ್ರಮುಖ ಸುದ್ದಿ1 hour ago

PM Narendra Modi: ಕೆಂಪುಕೋಟೆಯ ಕಾರ್ಯಕ್ರಮಕ್ಕೆ ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ

Buchi Babu Tournament
ಕ್ರೀಡೆ1 hour ago

Buchi Babu Tournament: ಬುಚ್ಚಿಬಾಬು ಕ್ರಿಕೆಟ್‌ ಟೂರ್ನಿ ಆಡಲಿದ್ದಾರೆ ಸೂರ್ಯಕುಮಾರ್​, ಅಯ್ಯರ್​

Police Raid puttur mangalore
ಕ್ರೈಂ1 hour ago

Police Raid: ಹಿಂದೂ ಯುವತಿ- ಮುಸ್ಲಿಂ ಯುವಕ ಜೋಡಿಗೆ ರೂಂ ನೀಡಿದ ಲಾಡ್ಜ್‌ಗೆ ಪೊಲೀಸರ ದಾಳಿ

Actor Darshan case Renukaswamy blood found on Pavitra Gowda's slippers, beer bottle
ಸ್ಯಾಂಡಲ್ ವುಡ್1 hour ago

Actor Darshan: ಪವಿತ್ರಾಗೌಡ ಚಪ್ಪಲಿ, ಬಿಯರ್ ಬಾಟಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ6 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ6 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ6 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌