Viral Video: ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸಿದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿತ - Vistara News

ವೈರಲ್ ನ್ಯೂಸ್

Viral Video: ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸಿದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿತ

Viral video: ಹದಿನೈದು ಜನರ ಗುಂಪು ಯುವಕನ ಮೇಲೆ ಹಲ್ಲೆ ನಡೆಸಿದೆ. ಯುವಕನೊಬ್ಬ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದ ಎನ್ನಲಾಗಿದೆ. ಈ ಯುವಕನ ಮೇಲೆ ರೊಚ್ಚಿಗೆದ್ದ ಗುಂಪು ಹಲ್ಲೆ ಮಾಡಿದೆ.

VISTARANEWS.COM


on

viral video modi assault case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರನ್ನು ಅವಾಚ್ಯವಾಗಿ ಟೀಕಿಸಿದ ವ್ಯಕ್ತಿಯೊಬ್ಬನನ್ನು ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿರುವ (Assault case) ಘಟನೆ ಬೆಂಗಳೂರಿನ (Bangalore Crime) ಮೆಜೆಸ್ಟಿಕ್ ಕೆಎಸ್ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ನಡೆದಿದೆ. ಈ ಘಟನೆಯ ವಿಡಿಯೋ ವೈರಲ್‌ (Viral Video) ಆಗಿದೆ.

ಹದಿನೈದು ಜನರ ಗುಂಪು ಯುವಕನ ಮೇಲೆ ಹಲ್ಲೆ ನಡೆಸಿದೆ. ಯುವಕನೊಬ್ಬ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದ ಎನ್ನಲಾಗಿದೆ. ಈ ಯುವಕನ ಮೇಲೆ ರೊಚ್ಚಿಗೆದ್ದ ಗುಂಪು ಹಲ್ಲೆ ಮಾಡಿ ಮೋದಿ, ಮೋದಿ ಎಂದು ಕೂಗು ಎಂದು ಬಲವಂತ ಮಾಡಿದೆ. ಆದರೆ ಯುವಕ ಇದಕ್ಕೆ ಒಪ್ಪದಿದ್ದಾಗ ಮತ್ತಷ್ಟು ಹಲ್ಲೆ ಮಾಡಿದೆ.

ಸುಮಾರು ಹದಿನೈದು ಜನರ ಯುವಕರ ಗುಂಪು ಯುವಕನ ಮೇಲೆ ಹಲ್ಲೆ ನಡೆಸಿದೆ. ಮಾತ್ರವಲ್ಲ, ನೀನು ಮೋದಿಗೆ ಬೈಯ್ಯುವ ಹಾಗಿಲ್ಲ, ನೀನು ಸಿದ್ದರಾಮಯ್ಯ ಫಾಲೋವರ್ ಆಗಿದ್ದರೆ ನಿಮ್ಮ ಮನೆಯಲ್ಲಿ ಇಟ್ಟುಕೊ ಎಂದು ಎಚ್ಚರಿಸಿದೆ. ಅಲ್ಲದೆ, ಮೋದಿ ಎಂದು ಹೆಸರು ಹೇಳು ಎಂದು ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಈ ಗುಂಪು ಯುವಕನ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಸದ್ಯ ಯುವಕನನ್ನು ಉಪ್ಪಾರಪೇಟೆ ಉಪ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿದೆ. ‌ಘಟನೆ ಸಂಬಂಧ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಹಲ್ಲೆ ನಡೆಸಿದವರನ್ನು ಪೊಲೀಸರು ಶೋಧಿಸುತ್ತಿದ್ದಾರೆ. ವಿಡಿಯೋವನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ.

ಮೂರು ವರ್ಷಗಳಿಂದ ಕಾಣೆಯಾಗಿದ್ದ ವ್ಯಕ್ತಿಯ ಅಸ್ಥಿಪಂಜರ ಮನೆಯಲ್ಲೇ ಇತ್ತು!

ಧಾರವಾಡ: ವ್ಯಕ್ತಿಯೊಬ್ಬರು ಕಣ್ಮರೆಯಾಗಿ ಮೂರು ವರ್ಷಗಳ ನಂತರ ಅವರ ಅಸ್ಥಿಪಂಜರ (Body Found) ಪತ್ತೆಯಾಗಿದೆ. ಅದೂ ಧಾರವಾಡ (Dharwad news) ನಗರದಲ್ಲಿ ಅವರ ಸ್ವಂತ ಮನೆಯಲ್ಲೇ! ಶವ ಮನೆಯಲ್ಲಿ ಮಲಗಿದ ಸ್ಥಿತಿಯಲ್ಲೇ ಕಂಡುಬಂದಿದೆ. ಆದರೆ ಮೂರು ವರ್ಷಗಳಿಂದ ಯಾರೂ ಇದನ್ನು (Viral News) ಗಮನಿಸಿಲ್ಲ!

ಧಾರವಾಡದ ಮಾಳಮಡ್ಡಿ ಬಡಾವಣೆಯ ಕೆನರಾ ಬ್ಯಾಂಕ್ ಬಳಿ ಘಟನೆ ನಡೆದಿದೆ. ಚಂದ್ರಶೇಖರ್ ಎಂಬ ಈ ವ್ಯಕ್ತಿ ಮೂರು‌ ವರ್ಷಗಳಿಂದ ಎಲ್ಲೂ ಕಾಣಿಸಿರಲಿಲ್ಲ. ಕಳೆದ ತಿಂಗಳು ಈತ ಕಾಣುತ್ತಿಲ್ಲ ಎಂದು ಧಾರವಾಡ ವಿದ್ಯಾಗಿರಿ ಠಾಣೆಯಲ್ಲಿ ಒಬ್ಬರು ದೂರು ಕೊಟ್ಟಿದ್ದರು. ಚಂದ್ರಶೇಖರ್‌ ಅವರನ್ನು ಎಲ್ಲ ಕಡೆ ಹುಡುಕಾಡಿದ್ದ ಪೊಲೀಸರು, ನಿನ್ನೆ ಅವರ ಮನೆಗೆ ಹೋಗಿದ್ದರು. ಅಲ್ಲಿ ಹೋದಾಗ‌ ಪೊಲೀಸರಿಗೆ ಅಚ್ಚರಿಯಾಗುವಂತೆ ಚಂದ್ರಶೇಖರ್ ಅಸ್ಥಿಪಂಜರ ಮನೆಯಲ್ಲೇ ಪತ್ತೆಯಾಗಿದೆ.

ಚಂದ್ರಶೇಖರ್ ತಮ್ಮ ಪತ್ನಿಯ ಸಾವಿನ ನಂತರ ಮನೆಯಲ್ಲಿ ಒಬ್ಬನೇ ಇರುತ್ತಿದ್ದರು. ಅದಾದ ಬಳಿಕ ಕೋವಿಡ್ ಬಂದಿತ್ತು. ಕೋವಿಡ್ ವೇಳೆಯೇ ಇವರು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಮೃತ ವ್ಯಕ್ತಿಯ ಸಂಬಂಧಿಕರು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಇರುವ ಬಗ್ಗೆ ಮಾಹಿತಿ ಇದೆ. ಯಾರೂ ಇವರ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಿರಲಿಲ್ಲ.

ಇವರು ಹಾಲು, ಪೇಪರ್‌ ಕೂಡ ಹಾಕಿಸಿಕೊಳ್ಳುತ್ತಿರಲಿಲ್ಲ. ಹೀಗಾಗಿ ವ್ಯಕ್ತಿ ಸತ್ತದ್ದು ಯಾರ ಗಮನಕ್ಕೂ ಬಂದಿಲ್ಲ. ಸುತ್ತಮುತ್ತ ಮನೆಗಳಿದ್ದರೂ ಯಾರಿಗೂ ಗೊತ್ತಾಗಿಲ್ಲ ಎಂಬುದು ವಿಚಿತ್ರ. ಸದ್ಯ ಅಸ್ಥಿಪಂಜರವನ್ನು ವಶಕ್ಕೆ ಪಡೆದ ಪೊಲೀಸರು, ಇದು ಅವರದೇನಾ ಎಂದು ತಿಳಿಯಲು ವಿಧಿವಿಜ್ಞಾನ ತಪಾಸಣೆಗೆ ಕಳಿಸಿದ್ದಾರೆ.

ಇದನ್ನೂ ಓದಿ: BMTC Conductor: 5 ರೂ. ಚಿಲ್ಲರೆ ಕೊಡದೆ ಪ್ರಯಾಣಿಕನ ಮೇಲೆ ಹಲ್ಲೆ; ಬಿಎಂಟಿಸಿ ಕಂಡಕ್ಟರ್‌ ಸಸ್ಪೆಂಡ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Hardik Pandya: ಬ್ರಿಟಿಷ್​ ಸಿಂಗರ್​ ಜತೆ ಡೇಟಿಂಗ್​​ ಆರಂಭಿಸಿದರೇ ಹಾರ್ದಿಕ್​ ಪಾಂಡ್ಯ?; ಅನುಮಾನ ಮೂಡಿಸಿದ ಇನ್​ಸ್ಟಾಗ್ರಾಮ್​ ಹಸಿ ಬಿಸಿ ಪೋಸ್ಟ್​

Hardik Pandya: ಜಾಸ್ಮಿನ್ ವಾಲಿಯಾ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ವೇಳೆಯೂ ಕಾಣಿಸಿಕೊಂಡಿದ್ದರು. ಹೀಗಾಗಿ ಪಾಂಡ್ಯ ಮತ್ತು ಜಾಸ್ಮಿನ್ ಡೇಟಿಂಗ್​ ನಡೆಸುತ್ತಿರುವುದು ಖಚಿತ ಎಂದು ನೆಟ್ಟಿಗರು ಕಮೆಂಟ್​ ಮಾಡಲಾರಂಭಿಸಿದ್ದಾರೆ.

VISTARANEWS.COM


on

Hardik Pandya
Koo

ಮುಂಬಯಿ: ಹಾರ್ದಿಕ್​ ಪಾಂಡ್ಯ(Hardik Pandya) ಅವರು ನತಾಶಾ ಸ್ಟಾಂಕೋವಿಕ್(Natasa Stankovic) ಅವರಿಗೆ ವಿಚ್ಛೇದನ(Hardik-Natasa Divorce) ನೀಡಿದ ಬಳಿಕ ಇದೀಗ ಜಾಲಿ ಮೂಡ್​ನಲ್ಲಿದ್ದಾರೆ. ನತಾಶಗೆ ವಿಚ್ಛೇದನ ನೀಡಿ ಒಂದು ವಾರ ಕಳೆಯುವಷ್ಟರಲ್ಲಿ ಪಾಂಡ್ಯ ಬಾಲಿವುಡ್​ನ ಖ್ಯಾತ ನಟಿ ಅನನ್ಯ ಪಾಂಡೆ(Ananya Panday) ಜತೆ ಚಾಟಿಂಗ್​, ಡೇಟಿಂಗ್​ ಆರಂಭಿಸಿದ್ದಾರೆ ಎನ್ನಲಾಗಿತ್ತು. ಆದರೆ, ಪಾಂಡ್ಯ ಬ್ರಿಟಿಷ್​ ಗಾಯಕಿ ಮತ್ತು ನಟಿ ಜಾಸ್ಮಿನ್​ ವಾಲಿಯಾ(Jasmin Walia) ಜತೆ ಡೇಟಿಂಗ್​(Hardik Pandya And Jasmin Walia Dating) ಮಾಡುತ್ತಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದೆ.

ಹೌದು, ನಟಿ ಜಾಸ್ಮಿನ್​ ವಾಲಿಯಾ(Hardik Pandya And Jasmin Walia) ಮತ್ತು ಹಾರ್ದಿಕ್​ ಪಾಂಡ್ಯ ಗ್ರೀಸ್​ನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಸುತ್ತಾಡಿದ ಫೋಟೊವನ್ನು ತಮ್ಮ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಫೋಟೋಗಳಲ್ಲಿ ಇವರಿಬ್ಬರು ಜತೆಯಾಗಿ ಕಾಣಿಸಿಕೊಳ್ಳದಿದ್ದರೂ, ಒಂದೇ ಸಮಯದಲ್ಲಿ ಒಂದೇ ಸ್ಥಳದಲ್ಲಿರುವ ಫೋಟೋಗಳನ್ನು ಹಂಚಿಕೊಂಡಿರುವುದು ಅನುಮಾನಕ್ಕೆ ಕಾರಣವಾಗಿದೆ.

ಜಾಸ್ಮಿನ್ ವಾಲಿಯಾ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ವೇಳೆಯೂ ಕಾಣಿಸಿಕೊಂಡಿದ್ದರು. ಹೀಗಾಗಿ ಪಾಂಡ್ಯ ಮತ್ತು ಜಾಸ್ಮಿನ್ ಡೇಟಿಂಗ್​ ನಡೆಸುತ್ತಿರುವುದು ಖಚಿತ ಎಂದು ನೆಟ್ಟಿಗರು ಕಮೆಂಟ್​ ಮಾಡಲಾರಂಭಿಸಿದ್ದಾರೆ. ಹಾರ್ದಿಕ್ ಮತ್ತು ಜಾಸ್ಮಿನ್ ಪರಸ್ಪರ ಇನ್​ಸ್ಟಾಗ್ರಾಮ್​ನಲ್ಲಿ ಫೋಟೊಗಳಿಗೂ ಲೈಕ್​ ಮಾಡಿಕೊಂಡಿದ್ದಾರೆ. ಹೀಗಾಗಿ ಡೇಟಿಂಗ್​ ವದಂತಿ ಬಲವಾಗಿದೆ.

ಬ್ರಿಟಿಷ್ ಸಿಂಗರ್ ಹಾಗೂ ಟಿವಿ ನಟಿಯಾಗಿರುವ ಜಾಸ್ಮಿನ್ ವಾಲಿಯಾ ಅವರ ಪೋಷಕರು ಭಾರತೀಯ ಮೂಲದವರಾಗಿದ್ದಾರೆ ಎನ್ನಲಾಗಿದೆ. ಬ್ರಿಟಿಷ್ ರಿಯಾಲಿಟಿ ಟಿವಿ ಸಿರೀಸ್​ನಲ್ಲಿ ಕಾಣಿಸಿಕೊಂಡ ನಂತರ ಜಾಸ್ಮಿನ್ ಮೊದಲ ಬಾರಿಗೆ ಎಲ್ಲರ ಗಮನ ಸೆಳೆದರು.

ಇದನ್ನೂ ಓದಿ Hardik Pandya : ನನ್ನ ಅಪರಾಧದಲ್ಲಿ ನೀನು ಪಾಲುದಾರ; ಪುತ್ರನಿಗೆ ಈ ರೀತಿ ಬರ್ತ್​​ಡೇ ವಿಶ್ ಮಾಡಿದ ಪಾಂಡ್ಯ

2014ರಲ್ಲಿ ಜಾಸ್ಮಿನ್ ಯೂಟ್ಯೂಬ್ ಚಾನೆಲ್ ಆರಂಭಿಸಿ ಕೆಲ ಪಾಪ್ಯುಲರ್ ಹಾಡುಗಳನ್ನು ಹಾಡುವ ಮೂಲಕ ಗಮನಸೆಳೆದಿದ್ದರು. 2017ರಲ್ಲಿ ಬಾಂ ಡಿಗ್ಗಿ ಡಿಗ್ಗಿ ಹಾಡು ಇವರಿಗೆ ಖ್ಯಾತಿ ತಂದುಕೊಟ್ಟಿತ್ತು. ಇದಾದ ಬಳಿಕ ಜಾಸ್ಮಿನ್ ಬಿಗ್​ಬಾಸ್ 13ರ ಫೈನಲಿಸ್ಟ್ ಅಸಿಮ್ ರಿಯಾಸ್ ಜತೆ 2022ರ ಮ್ಯೂಸಿಕ್ ವಿಡಿಯೋ ನೈಟ್ಸ್ & ಫೈಟ್ಸ್​ನಲ್ಲಿಯೂ ಕೆಲಸ ಮಾಡಿದ್ದರು. ಸದ್ಯ ಪಾಂಡ್ಯ ಜತೆ ಡೇಟಿಂಗ್​ ಮಾಡುತ್ತಿದ್ದಾರೆ ಎನ್ನಲಾಗಿದೆ.

ಹಾರ್ದಿಕ್​ ಮತ್ತು ನತಾಶಾ ನಡುವಿನ ಬ್ರೇಕಪ್​ಗೆ ಸಂವಹನ ಕೊರತೆಯೇ ಮುಖ್ಯ ಕಾರಣ ಎಂದು ಆಪ್ತ ಮೂಲಗಳು ಮಾಹಿತಿ ನೀಡಿತ್ತು. ಇಬ್ಬರ ನಡುವಿನ ಮನಸ್ತಾಪ ಮತ್ತು ಜಗಳಕ್ಕೆ ಪರಿಹಾರ ಕಂಡುಕೊಳ್ಳುವ ತಾಳ್ಮೆ ಇಬ್ಬರಲ್ಲೂ ಇರಲಿಲ್ಲ. ಹೀಗಾಗಿ ಮನಸ್ತಾಪ ದೊಡ್ಡದಾಗಿ ಡಿವೋರ್ಸ್​ಗೆ ಕಾರಣವಾಯಿತು. ಇದನ್ನು ಬಿಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಇವರಿಬ್ಬರ ಬಗ್ಗೆ ಯಾವುದೇ ತಪ್ಪು ಸುದ್ದಿ ಹಬ್ಬಿಸಬಾರದು ಎಂದು ಆಪ್ತ ಮೂಲಗಳು ಮನವಿ ಮಾಡಿತ್ತು.

ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇದಕ್ಕೂ ಮುನ್ನ ಈ ಜೋಡಿ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು.

Continue Reading

Latest

Viral News: ರೈಲು ಬೋಗಿಯಲ್ಲಿ ನಮಾಜ್: ಮುಸ್ಲಿಂ ಪ್ರಯಾಣಿಕರನ್ನು ತರಾಟೆಗೆ ತೆಗೆದುಕೊಂಡ ಟಿಟಿಇ; ವಿಡಿಯೊ ಇಲ್ಲಿದೆ

Viral Video ರೈಲಿನಲ್ಲಿ ನಮಾಜ್ ವಿಚಾರಕ್ಕೆ ಪ್ರಯಾಣಿಕರಿಗೆ ನಡೆದಾಡಲು ಅಡ್ಡಿಯುಂಟಾದಾಗ ಕಾರಣ ಮುಸ್ಲಿಂ ಪ್ರಯಾಣಿಕರನ್ನು ಟಿಟಿಇ ತರಾಟೆ ತೆಗೆದುಕೊಂಡ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು ಇದು ಸಖತ್ ವೈರಲ್ ಆಗಿದೆ. ರೈಲಿನಲ್ಲಿದ್ದ ಮುಸ್ಲಿಂ ಸಮುದಾಯದವರುರು ರೈಲು ಬೋಗಿಯ ಮಧ್ಯದಲ್ಲಿ ನಡೆದಾಡುವ ಸ್ಥಳದಲ್ಲಿ ನಮಾಜ್ ಮಾಡಲು ತಯಾರಿ ನಡೆಸುತ್ತಿದ್ದಾಗ ಈ ಸಮಯದಲ್ಲಿ ಅಲ್ಲಿಗೆ ಬಂದ ಟಿಟಿಇ ಕೋಪಗೊಂಡು ಅವರಿಗೆ ತಮ್ಮ ಕುಳಿತುಕೊಳ್ಳುವ ಸೀಟಿನಲ್ಲಿ ನಮಾಜ್ ಮಾಡುವಂತೆ ಮತ್ತು ದಾರಿಯಿಂದ ಎದ್ದೇಳುವಂತೆ ತಿಳಿಸಿದ್ದಾರೆ.

VISTARANEWS.COM


on

Viral News
Koo


ಮುಂಬೈ: ಮುಸ್ಲಿಂ ಸಮುದಾಯದವರು ತಮ್ಮ ನಮಾಜ್‌ನ ಸಮಯವಾದಾಗ ನಮಾಜ್ ಮಾಡಲು ಶುರು ಮಾಡುತ್ತಾರೆ. ಅವರಿಗೆ ಆ ಸಮಯದಲ್ಲಿ ನಮಾಜ್ ಮಾಡುವುದೊಂದೆ ಮುಖ್ಯವಾಗಿರುತ್ತದೆ. ಹಾಗಾಗಿ ರೈಲಿನಲ್ಲಿ ನಮಾಜ್ ಮಾಡಲು ಮುಂದಾಗಿದ್ದಾರೆ. ಈ ವೇಳೆ ಪ್ರಯಾಣಿಕರಿಗೆ ನಡೆದಾಡಲು ಅಡ್ಡಿಯುಂಟಾದ ಕಾರಣ ಮುಸ್ಲಿಂ ಪ್ರಯಾಣಿಕರನ್ನು ಟಿಟಿಇ ತರಾಟೆ ತೆಗೆದುಕೊಂಡ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೊವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು ಇದು ಸಖತ್ ವೈರಲ್ (Viral News) ಆಗಿದೆ.

ಹಂಚಿಕೊಳ್ಳಲಾದ ಈ ವಿಡಿಯೊದಲ್ಲಿ, ರೈಲ್ವೆ ಟಿಟಿಇ ಬೋಗಿಯಲ್ಲಿ ನಡೆದಾಡುವ ಸ್ಥಳದಲ್ಲಿ ನಮಾಜ್ ಮಾಡಲು ಮುಂದಾದ ಮುಸ್ಲಿಂ ಪ್ರಯಾಣಿಕರನ್ನು ಬೈಯುತ್ತಿರುವುದನ್ನು ಗಮನಿಸಬಹುದು. ರೈಲಿನಲ್ಲಿದ್ದ ಮುಸ್ಲಿಂ ಸಮುದಾಯದವರು ಬೋಗಿಯ ಮಧ್ಯದಲ್ಲಿ ನಡೆದಾಡುವ ಸ್ಥಳದಲ್ಲಿ ನಮಾಜ್ ಮಾಡಲು ತಯಾರಿ ನಡೆಸುತ್ತಿದ್ದಾರೆ. ಅದಕ್ಕಾಗಿ ಕುಳಿತುಕೊಳ್ಳಲು ಅವರು ದಾರಿಯಲ್ಲಿ ಪ್ಲಾಸ್ಟಿಕ್ ಅನ್ನು ಹಾಸುತ್ತಿದ್ದರು. ಈ ಸಮಯದಲ್ಲಿ ಅಲ್ಲಿಗೆ ಬಂದ ಟಿಟಿಇ ಕೋಪಗೊಂಡು ಅವರಿಗೆ ತಮ್ಮ ಕುಳಿತುಕೊಳ್ಳುವ ಸೀಟಿನಲ್ಲಿ ನಮಾಜ್ ಮಾಡುವಂತೆ ಮತ್ತು ದಾರಿಯಿಂದ ಎದ್ದೇಳುವಂತೆ ತಿಳಿಸಿದ್ದಾರೆ. ಇದು ವಿಡಿಯೊದಲ್ಲಿ ಕಂಡು ಬಂದಿದೆ.

“ಈ ರೈಲಿನಲ್ಲಿ ತಮಾಷೆಯಾಗಿ ವರ್ತಿಸಬೇಡಿ. ಈ ಮಾರ್ಗ ಇರುವುದು ನಡೆದಾಡಲು. ನಿಮಗೆ ನಮಾಜ್ ಮಾಡಲು ಅಲ್ಲ. ಇದರಲ್ಲಿ ನಮಾಜ್ ಮಾಡುವ ನಿಮ್ಮ ಮನಸ್ಥಿತಿಗೆ ಏನಾಗಿದೆ? ನಿಮ್ಮ ಈ ಆಲೋಚನೆಯನ್ನು ಬಿಟ್ಟುಬಿಡಿ. ನನ್ನ ರೈಲಿನಲ್ಲಿ ಇದು ಸಂಭವಿಸಲು ನಾನು ಅನುಮತಿಸುವುದಿಲ್ಲʼʼ ಎಂದು ಹೇಳಿದ್ದಾರೆ. ಅಲ್ಲದೇ ತಮ್ಮ ಕಾರ್ಯಗಳಿಂದಾಗಿ ಇತರ ಪ್ರಯಾಣಿಕರಿಗೆ ಯಾವುದೇ ಅನಾನುಕೂಲತೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಮುಸ್ಲಿಂ ಪ್ರಯಾಣಿಕರಿಗೆ ತಿಳಿಸಿದ್ದಾರೆ. ಪ್ರಯಾಣಿಸುವ ರೈಲುಗಳಲ್ಲಿ ನಮಾಜ್ ಮಾಡಲು ಅನುಮತಿ ಇಲ್ಲ. ಒಂದು ವೇಳೆ ಪ್ರಯಾಣಿಕರು ಅವರು ಹೇಳುವುದನ್ನು ಅನುಸರಿಸದಿದ್ದರೆ, ರೈಲ್ವೆ ಪೊಲೀಸರಿಗೆ ಕರೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಹಸ್ತಮೈಥುನ ಮಾಡಿಕೊಳ್ಳಲು 6 ವರ್ಷದ ಬಾಲಕಿ ಮೇಲೆ ದೌರ್ಜನ್ಯ; ಆಕೆ ತಪ್ಪಿಸಿಕೊಂಡಾಗ ಮೇಕೆ ಮೇಲೆ ಅತ್ಯಾಚಾರ!

ಹಾಗಾಗಿ ಮುಸ್ಲಿಂ ಪ್ರಯಾಣಿಕರು ತಮ್ಮ ಸೀಟಿನ ಬಳಿ ಹೋಗಿರುವುದು ವಿಡಿಯೊದ ಕೊನೆಯಲ್ಲಿ ಕಂಡು ಬಂದಿದೆ. ಕೆಲವರು ಟಿಟಿಇ ಧೈರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಎಲ್ಲರಿಗೂ ಕಾನೂನು ಒಂದೇ ಎಂದು ಇನ್ನು ಹಲವರು ತಿಳಿಸಿದ್ದಾರೆ. ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದರೂ, ರೆಕಾರ್ಡ್ ಮಾಡಿದ ದಿನಾಂಕ ಮತ್ತು ರೈಲಿನ ನಿಖರವಾದ ವಿವರಗಳು ಸ್ಪಷ್ಟವಾಗಿಲ್ಲ. ಹಾಗಾಗಿ ಹಲವರು ಈ ವಿಡಿಯೊದ ಸತ್ಯಾತೆಗಳ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.

Continue Reading

Latest

Viral Video: ರೀಲ್ಸ್ ಅವಾಂತರ; 6ನೇ ಮಹಡಿಯಿಂದ ಬಿದ್ದ ಬಾಲಕಿ; ಅಪ್ಪನನ್ನು ಕರೆ ಎಂದು ಅಮ್ಮನ ಬಳಿ ಅಂಗಲಾಚಿದ್ದು ಯಾಕೆ?

Viral Video ಗಾಜಿಯಾಬಾದ್‌ನಲ್ಲಿ ಇನ್ಸ್ಟಾಗ್ರಾಮ್ ರೀಲ್ ಮಾಡುವಾಗ ಬಾಲಕಿಯೊಬ್ಬಳು ಕಟ್ಟಡದ ಆರನೇ ಮಹಡಿಯಿಂದ ಬಿದ್ದಿದ್ದಾಳೆ. ಅವಳು ತನ್ನ ಮನೆಯ ಬಾಲ್ಕನಿಯಲ್ಲಿ ನಿಂತು ರೀಲ್ಸ್ ಮಾಡುವಾಗ ಅವಳ ಮೊಬೈಲ್ ಅವಳ ಕೈಯಿಂದ ಜಾರಿದೆ. ಫೋನ್ ಹಿಡಿಯಲು ಪ್ರಯತ್ನಿಸುವಾಗ ಅವಳು ಬಾಲ್ಕನಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ. ಬಾಲಕಿ ನೋವಿನಿಂದ ಅಳುತ್ತಿರುವ ಮತ್ತು ಅವಳ ತಾಯಿ ಅವಳನ್ನು ಬೈಯುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

VISTARANEWS.COM


on

Viral Video
Koo


ಲಖನೌ: ರೀಲ್‍ಗಳನ್ನು ಮಾಡುವ ಕ್ರೇಜ್ ಅನೇಕ ಯುವ ಜನರನ್ನು ಆವರಿಸಿದೆ. ಇವರು ಲೈಕ್‍ಗಳನ್ನು ಪಡೆಯಲು ಮತ್ತು ಸೋಷಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ಯಾವುದೇ ಮಟ್ಟಕ್ಕೆ ಹೋಗಲು ಸಿದ್ಧರಿದ್ದಾರೆ. ಅದಕ್ಕಾಗಿ ತಮ್ಮ ಜೀವವನ್ನು ಪಣಕ್ಕಿಡುತ್ತಿದ್ದಾರೆ. ಇದೀಗ ಈ ರೀಲ್ಸ್ ಅವಾಂತರಕ್ಕೆ ಸಂಬಂಧಿಸಿದಂತಹ ಮತ್ತೊಂದು ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‍ನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ ರೀಲ್ಸ್ ಮಾಡುವಾಗ ಬಾಲಕಿಯೊಬ್ಬಳು ಕಟ್ಟಡದ ಆರನೇ ಮಹಡಿಯಿಂದ ಬಿದ್ದಿದ್ದಾಳೆ. ಅವಳು ತನ್ನ ಮನೆಯ ಬಾಲ್ಕನಿಯಲ್ಲಿ ನಿಂತು ರೀಲ್ಸ್ ಮಾಡುವಾಗ ಮೊಬೈಲ್ ಕೈಯಿಂದ ಜಾರಿದೆ. ಫೋನ್ ಹಿಡಿಯಲು ಪ್ರಯತ್ನಿಸುವಾಗ ಅವಳು ಬಾಲ್ಕನಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ. ಬಾಲಕಿ ನೋವಿನಿಂದ ಅಳುತ್ತಿರುವ ಮತ್ತು ಅವಳ ತಾಯಿ ಅವಳನ್ನು ಬೈಯುತ್ತಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗಿದೆ.

ಆಘಾತಕ್ಕೊಳಗಾದ ಬಾಲಕಿಯನ್ನು ಗಾಜಿಯಾಬಾದ್‍ನ ಇಂದಿರಾಪುರಂ ಪ್ರದೇಶದಲ್ಲಿರುವ ಕ್ಲೌಡ್ -9 ಸೊಸೈಟಿಯಲ್ಲಿ ವಾಸಿಸುತ್ತಿದ್ದ ಮೋನಿಷಾ (16) ಎಂದು ಗುರುತಿಸಲಾಗಿದೆ. ಆರನೇ ಮಹಡಿಯಿಂದ ಬಿದ್ದ ನಂತರ ಆಕೆಯನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೊದಲ್ಲಿ ಬಾಲಕಿ ನೆಲದ ಮೇಲೆ ಬಿದ್ದಿದ್ದಾಳೆ. ಜನರು ಅವಳ ಸುತ್ತ ಸುತ್ತುವರಿದು, ಅವಳನ್ನು ಆಸ್ಪತ್ರೆಗೆ ಕರೆದೊಯ್ಯುಲು ಗಾಬರಿಯಿಂದ ಓಡಾಡುತ್ತಿದ್ದಾರೆ. ಆ ವೇಳೆ ಅವರು ಅವಳನ್ನು ಎತ್ತುತ್ತಿದ್ದಂತೆ, ಅವಳು ನೋವಿನಿಂದ ಕೂಗಿದಳು, “ಅಮ್ಮಾ, ಪಾಪಾ ಕೋ ಬುಲಾ ದೋ”(ಅಮ್ಮಾ, ದಯವಿಟ್ಟು ಅಪ್ಪನನ್ನು ಕರೆಯಿರಿ) ಎಂದು ತನ್ನ ತಂದೆಯನ್ನು ಕರೆಯುವಂತೆ ತನ್ನ ತಾಯಿಯನ್ನು ಪದೇ ಪದೆ ಕೇಳಿಕೊಳ್ಳುತ್ತಿದ್ದಾಳೆ.

ವಿಡಿಯೊದಲ್ಲಿ, ಹುಡುಗಿಯ ತಾಯಿ ಮಗಳ ರೀಲ್ಸ್ ಮಾಡುವ ಹುಚ್ಚಿಗೆ ಹಿಗ್ಗಾಮುಗ್ಗಾ ಬೈದಿದ್ದಾಳೆ. ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಈಗ ಆಕೆ ಅಪಾಯದಿಂದ ಪಾರಾಗಿದ್ದಾಳೆ ಮತ್ತು ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: ಒಂದು ಹಾವು, ಮೂರು ಮುಂಗುಸಿ; ಏರ್‌ಪೋರ್ಟ್‌ ರನ್‌ವೇಯಲ್ಲೇ ಫೈಟ್‌! ಸೋತಿದ್ಯಾರು? ವಿಡಿಯೊ ನೋಡಿ

ಬಾಲಕಿಯ ಸ್ಥಿತಿಯನ್ನು ನೋಡಿ ಅಲ್ಲಿದ್ದವರು ಆಘಾತಕ್ಕೊಳಗಾಗಿದ್ದಾರೆ. ಕೆಲವರು ಅವಳ ಗಂಭೀರ ಸ್ಥಿತಿಯ ಬಗ್ಗೆ ಪ್ರತಿಕ್ರಿಯಿಸಿ, ಮೇಲಿಂದ ಬಿದ್ದಿದ್ದರಿಂದ ಅವಳ ಕಾಲು ಮುರಿದಂತೆ ಕಾಣುತ್ತದೆ ಎಂದಿದ್ದಾರೆ. ಈ ರೀತಿಯ ರೀಲ್ಸ್ ಅವಾಂತರದ ಹಲವಾರು ಘಟನೆಗಳು ಸಂಭವಿಸಿವೆ. ಜನರು ರೀಲ್ಸ್ ಮಾಡುವ ವೇಳೆ ಹಲವು ಬಾರಿ ಅಪಾಯಕ್ಕೆ ಸಿಲುಕಿದ್ದಾರೆ ಮತ್ತು ಕೆಲವರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಸೋಷಿಯಲ್ ಮೀಡಿಯಾಗಳಿಗಾಗಿ ರೀಲ್ಸ್ ವಿಡಿಯೊಗಳನ್ನು ಮಾಡುವಾಗ ಯುವಕರು ಜಾಗರೂಕರಾಗಿರಬೇಕು ಮತ್ತು ಕೇವಲ ಲೈಕ್‍ಗಳು ಮತ್ತು ಫಾಲೋವರ್ಸ್‍ಗಳಿಗಾಗಿ ತಮ್ಮ ಜೀವವನ್ನು ಅಪಾಯಕ್ಕೆ ತಳ್ಳಬಾರದು ಎಂದು ಅಧಿಕಾರಿಗಳು ಎಚ್ಚರಿಸಲುತ್ತಲೇ ಇದ್ದರೂ ಇಂತಹ ಪ್ರವೃತ್ತಿ ನಿಂತಿಲ್ಲ.

Continue Reading

Latest

Viral Video: ಹಸ್ತಮೈಥುನ ಮಾಡಿಕೊಳ್ಳಲು 6 ವರ್ಷದ ಬಾಲಕಿ ಮೇಲೆ ದೌರ್ಜನ್ಯ; ಆಕೆ ತಪ್ಪಿಸಿಕೊಂಡಾಗ ಮೇಕೆ ಮೇಲೆ ಅತ್ಯಾಚಾರ!

Viral Video: ಇತ್ತೀಚೆಗೆ ಕೆಲವರು ಕಾಮದ ವಾಂಛೆ ಹಿಡಿದವರ ಹಾಗೇ ವರ್ತಿಸುತ್ತಾರೆ. ಸರ್ಕಾರಿ ನೌಕರ ಗಜೇಂದ್ರ ಸಿಂಗ್ ಎಂಬಾತ ತನ್ನ ಕಾಮತೃಷೆಯನ್ನು ತೀರಿಸಿಕೊಳ್ಳಲು ಆರು ವರ್ಷದ ಮುಗ್ಧ ಬಾಲಕಿಯ ಮೇಲೆ ಹಲ್ಲೆ ನಡೆಸಿದ್ದಲ್ಲದೇ ನಂತರ ಮೇಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ರಾಕ್ಷಸನಂತೆ ವರ್ತಿಸಿದ್ದಾನೆ. ಮೂಲಗಳ ಪ್ರಕಾರ, ಸಿಂಗ್ ಮೊದಲು 6 ವರ್ಷದ ಮಗುವನ್ನು ಪರಿಚಯಸ್ಥರ ಮನೆಗೆ ಕರೆದೊಯ್ದು ಅತ್ಯಾಚಾರಕ್ಕೆ ಪ್ರಯತ್ನಿಸಿದ್ದಾನೆ. ಹಸ್ತಮೈಥುನ ಮಾಡಲು ಅವನು ಬಾಲಕಿಯನ್ನು ಬಳಸಿಕೊಂಡಿದ್ದಾನೆ ಎನ್ನಲಾಗಿದೆ.

VISTARANEWS.COM


on

Viral Video
Koo


ಕಾಮುಕರ ಅಟ್ಟಹಾಸ ಉತ್ತರಪ್ರದೇಶದಲ್ಲಿ ಮಿತಿ ಮೀರುತ್ತಿದೆ. ತಮ್ಮ ಕಾಮದಾಟಕ್ಕೆ ಅಪ್ರಾಪ್ತ ಬಾಲಕಿಯರನ್ನು ಹೆಚ್ಚು ಬಳಸಿಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲದೇ ತಮ್ಮ ಕಾಮದಾಹವನ್ನು ತೀರಿಸಿಕೊಳ್ಳಲು ಮೂಕ ಪ್ರಾಣಿಗಳ ಮೇಲೂ ಕೂಡ ದೌರ್ಜನ್ಯ ಎಸಗುತ್ತಿದ್ದಾರೆ. ಇದೀಗ ಅಂತಹದೊಂದು ಘಟನೆ ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಇದಕ್ಕೆ ಸಂಬಂಧಪಟ್ಟ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ (Viral Video)ಆಗುತ್ತಿದೆ.

ಸರ್ಕಾರಿ ನೌಕರ ಗಜೇಂದ್ರ ಸಿಂಗ್ ಎಂಬಾತ ತನ್ನ ಕಾಮತೃಷೆಯನ್ನು ತೀರಿಸಿಕೊಳ್ಳಲು ಆರು ವರ್ಷದ ಮುಗ್ಧ ಬಾಲಕಿಯ ಮೇಲೆ ದೌರ್ಜನ್ಯ ನಡೆಸಿದ್ದಲ್ಲದೇ ನಂತರ ಮೇಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ರಾಕ್ಷಸನಂತೆ ವರ್ತಿಸಿದ್ದಾನೆ. ಮೂಲಗಳ ಪ್ರಕಾರ, ಸಿಂಗ್ ಮೊದಲು 6 ವರ್ಷದ ಮಗುವನ್ನು ಪರಿಚಯಸ್ಥರ ಮನೆಗೆ ಕರೆದೊಯ್ದು ಅಪ್ರಾಪ್ತ ಬಾಲಕಿ ಒಬ್ಬಂಟಿಯಾಗಿದ್ದಾಗ ಅತ್ಯಾಚಾರಕ್ಕೆ ಪ್ರಯತ್ನಿಸಿದ್ದಾನೆ. ಹಸ್ತಮೈಥುನ ಮಾಡಲು ಅವನು ಅಪ್ರಾಪ್ತ ಬಾಲಕಿಯನ್ನು ಬಳಸಿಕೊಂಡಿದ್ದಾನೆ ಎನ್ನಲಾಗಿದೆ. ಹಾಗೇ ಆತ ಮಗುವಿನ ಮೇಲೆ ಹಲ್ಲೆ ಮಾಡಿದ್ದಲ್ಲದೆ, ಮೇಕೆಯ ಜೊತೆಗೂ ಕ್ರೂರವಾಗಿ ವರ್ತಿಸಿದ್ದಾನೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡ ವಿಡಿಯೊದಲ್ಲಿ, ಆರೋಪಿ ಮೊದಲು ಮುಗ್ಧ ಹುಡುಗಿಯನ್ನು ಹಸ್ತಮೈಥುನ ಮಾಡಿಕೊಳ್ಳಲು ಬಳಸಿಕೊಳ್ಳುವುದರೊಂದಿಗೆ ಅವನು ಅವಳ ಖಾಸಗಿ ಭಾಗಗಳನ್ನು ಮುಟ್ಟಿ ಅವಳನ್ನು ಚುಂಬಿಸಿದ್ದಾನೆ. ಹುಡುಗಿ ಹೇಗೋ ಅಲ್ಲಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದಾಗ, ಆತನ ಕೆಟ್ಟ ಕಣ್ಣು ಮೇಕೆಯ ಮೇಲೆ ಬಿದ್ದಿದೆ. ನಂತರ ಆತನ ಕಾಮದಾಹಕ್ಕೆ ಮೇಕೆ ಬಲಿಪಶುವಾಗಿದೆ.

ಪೊಲೀಸರು ಈಗ ಆರೋಪಿಗಳನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ. ಈ ನಡುವೆ ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಜನರಲ್ಲಿ ಆಕ್ರೋಶ ವ್ಯಕ್ತವಾಗಿ ಅಂತಹ ಕ್ರೂರ ಪ್ರಾಣಿಗೆ ಘೋರ ಶಿಕ್ಷೆ ನೀಡುವಂತೆ ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: ಜನದಟ್ಟಣೆ ಪ್ರದೇಶದಲ್ಲೇ ಕಾರಿನಲ್ಲಿ ಇಬ್ಬರು ಮಹಿಳೆಯರ ಜೊತೆ ಯುವಕನ ಸರಸ! ವಿಡಿಯೊ ಇದೆ

ಈ ಘಟನೆ ಬಲಿಪಶುವಾದ ಬಾಲಕಿಯ ಮೇಲೆ ಕೆಟ್ಟ ಪರಿಣಾಮ ಉಂಟುಮಾಡುವುದು ಎಂಬ ಬಗ್ಗೆ ಚರ್ಚೆ ಹುಟ್ಟುಹಾಕಿದೆ. ಅಲ್ಲದೇ ಈ ಘಟನೆಯನ್ನು ಎಲ್ಲರಿಗಿಂತ ವಿಶೇಷವಾಗಿ ಹೆಣ್ಣು ಮಕ್ಕಳ ಪೋಷಕರು ಹೆಚ್ಚು ಗಮನಹರಿಸಬೇಕು. ಯಾಕೆಂದರೆ ತಮ್ಮ ಹೆಣ್ಣು ಮಕ್ಕಳಿಗೆ ಸುರಕ್ಷಿತ ಸಮಾಜವನ್ನು ಸೃಷ್ಟಿಸುವುದು ಅವರ ಕರ್ತವ್ಯವಾಗಿದೆ ಎಂಬುದನ್ನು ಈ ಘಟನೆ ತಿಳಿಸುತ್ತದೆ.

Continue Reading
Advertisement
PR Sreejesh
ಕ್ರೀಡೆ14 mins ago

PR Sreejesh: ಶ್ರೀಜೇಶ್​ ಜೆರ್ಸಿ ಸಂಖ್ಯೆ 16ಕ್ಕೆ ವಿದಾಯ ಹೇಳಿದ ಹಾಕಿ ಇಂಡಿಯಾ

Terror Attacks
ದೇಶ19 mins ago

Terror Attacks: ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್‌: ಕ್ಯಾಪ್ಟನ್ ಹುತಾತ್ಮ

Bank Irregularities
ಕರ್ನಾಟಕ27 mins ago

Bank Irregularities: ಪದೇಪದೆ ಅಕ್ರಮ; 2 ಬ್ಯಾಂಕ್‌ಗಳ ಎಲ್ಲ ಸರ್ಕಾರಿ ಅಕೌಂಟ್ ಕ್ಲೋಸ್ ಮಾಡಲು ಸರ್ಕಾರ ಸೂಚನೆ

Hardik Pandya
ಕ್ರೀಡೆ2 hours ago

Hardik Pandya: ಬ್ರಿಟಿಷ್​ ಸಿಂಗರ್​ ಜತೆ ಡೇಟಿಂಗ್​​ ಆರಂಭಿಸಿದರೇ ಹಾರ್ದಿಕ್​ ಪಾಂಡ್ಯ?; ಅನುಮಾನ ಮೂಡಿಸಿದ ಇನ್​ಸ್ಟಾಗ್ರಾಮ್​ ಹಸಿ ಬಿಸಿ ಪೋಸ್ಟ್​

Bigg Boss Telugu 8 Confirmed Contestants nagarjuna akkineni host
ಬಿಗ್ ಬಾಸ್2 hours ago

Bigg Boss Telugu 8: ಬಿಗ್​ಬಾಸ್ ತೆಲುಗು ಸೀಸನ್‌ 8ರ ಪ್ರೋಮೊ ಔಟ್‌; ಸಂಭಾವ್ಯರ ಪಟ್ಟಿಯಲ್ಲಿ ಇಬ್ಬರು ಕನ್ನಡತಿಯರು!

Arvind Kejriwal
ದೇಶ2 hours ago

Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ಮತ್ತೊಮ್ಮೆ ಹಿನ್ನಡೆ; ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್‌ ನಕಾರ

Viral News
Latest2 hours ago

Viral News: ರೈಲು ಬೋಗಿಯಲ್ಲಿ ನಮಾಜ್: ಮುಸ್ಲಿಂ ಪ್ರಯಾಣಿಕರನ್ನು ತರಾಟೆಗೆ ತೆಗೆದುಕೊಂಡ ಟಿಟಿಇ; ವಿಡಿಯೊ ಇಲ್ಲಿದೆ

Viral Video
Latest3 hours ago

Viral Video: ರೀಲ್ಸ್ ಅವಾಂತರ; 6ನೇ ಮಹಡಿಯಿಂದ ಬಿದ್ದ ಬಾಲಕಿ; ಅಪ್ಪನನ್ನು ಕರೆ ಎಂದು ಅಮ್ಮನ ಬಳಿ ಅಂಗಲಾಚಿದ್ದು ಯಾಕೆ?

ramanagara murder case
ಕ್ರೈಂ3 hours ago

Murder Case: ಪೂಜೆಗೆಂದು ಕರೆದೊಯ್ದು ಹೆಂಡತಿಯ ಕೊಂದ ಗಂಡ; ಕೊಲೆಯಾದಳೇಕೆ ಚಿಟ್ಟೆ ಟ್ಯಾಟೂ ಚೆಲುವೆ?

Dodda Ganesh
ಕ್ರೀಡೆ3 hours ago

Dodda Ganesh: ಕೀನ್ಯಾ ಕ್ರಿಕೆಟ್​ ತಂಡಕ್ಕೆ ಕನ್ನಡಿಗ ದೊಡ್ಡ ಗಣೇಶ್ ನೂತನ ಕೋಚ್

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ6 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ6 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ6 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌