Manu Bhaker: ಭಾರೀ ಏರಿಕೆ ಕಂಡ ಮನು ಭಾಕರ್ ಬ್ರ್ಯಾಂಡ್​ ಮೌಲ್ಯ - Vistara News

ಕ್ರೀಡೆ

Manu Bhaker: ಭಾರೀ ಏರಿಕೆ ಕಂಡ ಮನು ಭಾಕರ್ ಬ್ರ್ಯಾಂಡ್​ ಮೌಲ್ಯ

Manu Bhaker: ಪ್ರಮುಖವಾಗಿ ತಂಪು ಪಾನೀಯ, ಸ್ಕಿನ್​ ಕೇರ್​, ನ್ಯೂಟ್ರೀಷಿಯನ್​ ಕಂಪನಿಗಳು ಮನು ಅವರನ್ನು ಸಂಪರ್ಕಿಸಿವೆ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ 40 ಕಂಪನಿಗಳು(40 brands chasing Manu Bhaker) ಮನು ಅವರನ್ನು ಸಂಪರ್ಕಿಸಿದ್ದವು ಎಂದು ವರದಿಯಾಗಿತ್ತು

VISTARANEWS.COM


on

Manu Bhaker
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್​ನ(Paris Olympics) ಶೂಟಿಂಗ್​ ವಿಭಾಗದಲ್ಲಿ ಅವಳಿ ಕಂಚಿನ ಪದಕ ಗೆದ್ದ ಮನು ಭಾಕರ್(Manu Bhaker)​ ಅವರ ಜಾಹೀರಾತು ಮೌಲ್ಯದಲ್ಲಿ ಇದೀಗ ಭಾರೀ ಏರಿಕೆ ಕಂಡಿದೆ. ಮನು ಅವರ ಬ್ರ್ಯಾಂಡ್​ ಮೌಲ್ಯ ಈಗ 1.5 ರೂ. ಆಗಿದೆ. ಅವರು ಪ್ರತಿ ಡಿಜಿಟಲ್​ ಜಾಹೀರಾತಿಗೂ 30 ಲಕ್ಷ ರೂ. ಸಂಭಾವನೆ ಪಡೆಯಲಿದ್ದಾರೆ ಎನ್ನಲಾಗಿದೆ.

ಪ್ರಮುಖವಾಗಿ ತಂಪು ಪಾನೀಯ, ಸ್ಕಿನ್​ ಕೇರ್​, ನ್ಯೂಟ್ರೀಷಿಯನ್​ ಕಂಪನಿಗಳು ಮನು ಅವರನ್ನು ಸಂಪರ್ಕಿಸಿವೆ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ 40 ಕಂಪನಿಗಳು(40 brands chasing Manu Bhaker) ಮನು ಅವರನ್ನು ಸಂಪರ್ಕಿಸಿದ್ದವು ಎಂದು ವರದಿಯಾಗಿತ್ತು. ಭಾರತ ತಂಡದ ಸ್ಟಾರ್​ ಕ್ರಿಕೆಟಿಗರು ಜಾಹೀರಾತು ಒಪ್ಪಂದಗಳಿಗೆ ವಾರ್ಷಿಕ 3 ರಿಂದ 6 ಕೋಟಿ ರೂ. ಪಡೆಯುತ್ತಾರೆ. ಬ್ಯಾಡ್ಮಿಂಟನ್​ ಆಟಗಾರ್ತಿ ಪಿ,ವಿ ಸಿಂಧು 2022ರಲ್ಲಿ 2.21 ಕೋಟಿ ರೂ. ಮೊತ್ತದ ಒಪ್ಪಂದ ಪಡೆದಿದ್ದೇ ಭಾರತದಲ್ಲಿ ಕ್ರಿಕೆಟಿಗರ ಹೊರತಾಗಿ ಇತರ ಕ್ರೀಡಾಪಟುಗಳು ಪಡೆದ ಇದುವರೆಗಿನ ಗರಿಷ್ಠ ಮೊತ್ತವಾಗಿದೆ. ಒಲಿಂಪಿಕ್ಸ್​ ಪದಕ ಗೆಲ್ಲುವ ಮೊದಲು ಮನು ಪ್ರತಿ ಒಪ್ಪಂದವನ್ನು 20-25 ಲಕ್ಷ ರೂ.ಗೆ ಮಾಡಿಕೊಳ್ಳುತ್ತಿದ್ದರು. ಸದ್ಯ ಮನು ಪಾಮ್ಯಾಕ್ಸ್​ ಆಕ್ಟಿವ್​ವೇರ್​ಗೆ ಮಾತ್ರ ಪ್ರಚಾರ ರಾಯಭಾರಿಯಾಗಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಮನು ಭಾಕರ್​ ಅವರು 12 ಕಂಪನಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದರು. ಪದಕ ಸಾಧನೆಯ ಬಳಿಕ ತನ್ನ ಚಿತ್ರಗಳನ್ನು ಬಳಸಿ, ತನಗೆ ಅಭಿನಂದನೆ ಸಲ್ಲಿಸುವ ಜಾಹೀರಾತುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅನಧಿಕೃತವಾಗಿ ಪ್ರಕಟಿಸಿದ್ದು ಇದಕ್ಕೆ ಕಾರಣ. ಬ್ರ್ಯಾಂಡ್​​ಗಳು ತನಗೆ ಪ್ರಾಯೋಜಕತ್ವ ನೀಡಿರದಿದ್ದರೂ ಮತ್ತು ತನ್ನನ್ನು ಪ್ರಚಾರ ರಾಯಭಾರಿಯಾಗಿ ನೇಮಿಸಿಕೊಳ್ಳದಿದ್ದರೂ, ಇದೀಗ ತನ್ನ ಯಶಸ್ಸಿನಲ್ಲಿ ಪಾಲು ಪಡೆಯಲು ಮುಂದಾಗುವ ಮೂಲಕ ಉಚಿತ ಮಾರ್ಕೆಟಿಂಗ್​ ಮಾಡಿವೆ ಎಂದು ಮನು ಅವರ ವ್ಯವಹಾರಗಳನ್ನು ನೋಡಿಕೊಳ್ಳುವ ತಂಡ ಆರೋಪಿಸಿ ಕಾನೂನು ನೋಟಿಸ್​ ಕಳುಹಿಸಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ. ವ್ಯಕ್ತಿಯೊಬ್ಬರಿಗೆ ಪ್ರಾಯೋಜಕತ್ವ ಒಪ್ಪಂದ ನೀಡದೆ ಅವರ ಚಿತ್ರಗಳ ಹಕ್ಕು ಪಡೆದುಕೊಳ್ಳುವಂತಿಲ್ಲ. ಇದು ಭಾರತದಲ್ಲಿ ಕಾನೂನುಬಾಹಿರ ಎನಿಸಿದೆ.

ಇದನ್ನೂ ಓದಿ Manu Bhaker : ಶೂಟಿಂಗ್​​ನಿಂದ ಬ್ರೇಕ್ ತೆಗೆದುಕೊಂಡ ಮನು ಭಾಕರ್​​, ಡೆಲ್ಲಿಯಲ್ಲಿ ನಡೆಯುವ ವಿಶ್ವಕಪ್​ಗೆ ಅಲಭ್ಯ

ಭಾಕರ್ (Manu Bhaker) ಮೂರು ತಿಂಗಳ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಹೀಗಾಗಿ ಅಕ್ಟೋಬರ್​ನಲ್ಲಿ ನಡೆಯಲಿರುವ ಶೂಟಿಂಗ್​ ವಿಶ್ವಕಪ್​ನಿಂದ ಹೊರಕ್ಕೆ ಉಳಿಯಲಿದ್ದಾರೆ ಎಂದು ಅವರ ಕೋಚ್ ಜಸ್ಪಾಲ್ ರಾಣಾ ಮಾಹಿತಿ ನೀಡಿದ್ದಾರೆ. ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಮತ್ತು 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ 22 ವರ್ಷದ ಭಾಕರ್ ಅವರು ಎರಡು ಪದಕ ಗೆದ್ದು ಇತಿಹಾಸ ಬರೆದಿದ್ದರು.

ಮಂಗಳವಾರ ಮುಂಜಾನೆ ಪ್ಯಾರಿಸ್​ನಿಂದ ಹಿಂದಿರುಗಿದ ಮನು ಭಾಕರ್​ ಕ್ರೀಡೆಯಿಂದ ಮೂರು ತಿಂಗಳ ವಿರಾಮ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಅವರು ಮೂರು ತಿಂಗಳ ವಿರಾಮ ತೆಗೆದುಕೊಳ್ಳುತ್ತಿರುವುದರಿಂದ ಅಕ್ಟೋಬರ್​ನಲ್ಲಿ ಡೆಯಲಿರುವ ಶೂಟಿಂಗ್ ವಿಶ್ವಕಪ್​​ನಲ್ಲಿ ಭಾಗವಹಿಸುತ್ತಾರೆಯೇ ಎಂದು ನನಗೆ ಖಚಿತವಿಲ್ಲ. ಇದು ಸಾಮಾನ್ಯ ವಿರಾಮ. ಬಹಳ ಸಮಯದಿಂದ ಅವರು ತರಬೇತಿ ಪಡೆಯುತ್ತಿದ್ದಾರೆ.” ರಾಣಾ ತಿಳಿಸಿದ್ದಾರೆ. ಅಕ್ಟೋಬರ್ 13 ರಿಂದ 18 ರವರೆಗೆ ನವದೆಹಲಿಯಲ್ಲಿ ಶೂಟಿಂಗ್ ವಿಶ್ವ ಕಪ್​ ಆಯೋಜನೆಗೊಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

PR Sreejesh: ಶ್ರೀಜೇಶ್​ ಜೆರ್ಸಿ ಸಂಖ್ಯೆ 16ಕ್ಕೆ ವಿದಾಯ ಹೇಳಿದ ಹಾಕಿ ಇಂಡಿಯಾ

PR Sreejesh: ‘ಶ್ರೀಜೇಶ್ ಅವರು ತಮ್ಮ 18 ವರ್ಷಗಳ ಹಾಕಿ ವೃತ್ತಿ ಜೀವನದಲ್ಲಿ ಭಾರತದ ಹಾಕಿಗೆ ಅಪಾರ ಕೊಡುಗೆ ಸಲ್ಲಿಸಿದ್ದಾರೆ. ಅವರು ಧರಿಸಿದ್ದ ಜೆರ್ಸಿ ಸಂಖ್ಯೆ 16 ಅನ್ನು ಹಿರಿಯ ತಂಡದಿಂದ ನಿವೃತ್ತಿ ಘೋಷಿಸುತ್ತಿದ್ದೇವೆ. ಕಿರಿಯರ ತಂಡದಲ್ಲಿ ಆ ಸಂಖ್ಯೆಗೆ ನಿವೃತ್ತಿ ಘೋಷಿಸಲಾಗಿಲ್ಲ’ ಎಂದು ಹಾಕಿ ಇಂಡಿಯಾ ಕಾರ್ಯದರ್ಶಿ ಭೋಲಾ ನಾಥ್ ಸಿಂಗ್ ಹೇಳಿದ್ದಾರೆ.

VISTARANEWS.COM


on

PR Sreejesh
Koo

ನವದೆಹಲಿ: ಭಾರತ ಪುರುಷರ ಹಾಕಿ ತಂಡದ ದಿಗ್ಗಜ ಗೋಲು ಕೀಪರ್​ ಪಿ.ಆರ್ ಶ್ರೀಜೇಶ್(PR Sreejesh)​ ಅವರು ಈಗಾಗಲೇ ಅಂತಾರಾಷ್ಟ್ರೀಯ ಹಾಕಿಗೆ ವಿದಾಯ ಹೇಳಿದ್ದಾರೆ. ಇದೀಗ ಭಾರತೀಯ ಹಾಕಿಗೆ ಅವರು ನೀಡಿದ ಅಪಾರ ಸೇವೆಯನ್ನು ಪರಿಗಣಿಸಿ ಹಾಕಿ ಇಂಡಿಯಾ(Hockey India) ಶ್ರೀಜೇಶ್ ಅವರ ಜೆರ್ಸಿ ನಂ.16ಕ್ಕೆ ವಿದಾಯ ಹೇಳಲು ನಿರ್ಧರಿಸಿದೆ.

ಭಾರತ ಹಾಕಿ ತಂಡ ಸತತವಾಗಿ ಒಲಿಂಪಿಕ್ಸ್​ ಕಂಚಿನ ಪದಕ ಗೆಲ್ಲುವಲ್ಲಿ ಶ್ರೀಜೇಶ್ ಪ್ರಮುಖ ಪಾತ್ರ ವಹಿಸಿದ್ದರು. ತಡೆಗೋಡೆಯಂತೆ ನಿಂತು ಎದುರಾಳಿ ತಂಡಗಳ ಗೋಲುಗಳನ್ನು ತಡೆದು ಭಾರತ ತಂಡದ ಗೆಲುವಿಗೆ ಯಶಸ್ಸು ತಂದುಕೊಟ್ಟಿದ್ದರು. ಈ ಎಲ್ಲ ಕಾರ್ಯ ಸಾಧನೆಯನ್ನು ಪರಿಗಣಿಸಿ ಅವರ ಜೆರ್ಸಿ ನಂ.16ಕ್ಕೆ ಹಾಕಿ ಇಂಡಿಯಾ ವಿದಾಯ ಹೇಳಿದೆ. ಈ ಮೂಲಕ ಅವರಿಗೆ ಗೌರವ ಸೂಚಿಸಿದೆ.

‘ಶ್ರೀಜೇಶ್ ಅವರು ತಮ್ಮ 18 ವರ್ಷಗಳ ಹಾಕಿ ವೃತ್ತಿ ಜೀವನದಲ್ಲಿ ಭಾರತದ ಹಾಕಿಗೆ ಅಪಾರ ಕೊಡುಗೆ ಸಲ್ಲಿಸಿದ್ದಾರೆ. ಅವರು ಧರಿಸಿದ್ದ ಜೆರ್ಸಿ ಸಂಖ್ಯೆ 16 ಅನ್ನು ಹಿರಿಯ ತಂಡದಿಂದ ನಿವೃತ್ತಿ ಘೋಷಿಸುತ್ತಿದ್ದೇವೆ. ಕಿರಿಯರ ತಂಡದಲ್ಲಿ ಆ ಸಂಖ್ಯೆಗೆ ನಿವೃತ್ತಿ ಘೋಷಿಸಲಾಗಿಲ್ಲ’ ಎಂದು ಹಾಕಿ ಇಂಡಿಯಾ ಕಾರ್ಯದರ್ಶಿ ಭೋಲಾ ನಾಥ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ಗೆ ತೆರೆ; ಅದ್ಧೂರಿ ಸಮಾರೋಪದಲ್ಲಿ ಮನು ಭಾಕರ್​, ಶ್ರೀಜೇಶ್​ ಭಾಗಿ

ಇನ್ನು ಮುಂದೆ ಶ್ರೀಜೇಶ್ ಧರಿಸುತ್ತಿದ್ದ ಜೆರ್ಸಿ ಸಂಖ್ಯೆ 16 ಅನ್ನು ಹಾಕಿ ಹಿರಿಯರ ತಂಡದ ಯಾವೊಬ್ಬ ಆಟಗಾರರಿಗೂ ನೀಡಲಾಗುವುದಿಲ್ಲ. ಪ್ಯಾರಿಸ್​ ಒಲಿಂಪಿಕ್ಸ್​ ಕಂಚಿನ ಪದಕ ಪಂದ್ಯವನ್ನಾಡುವ ಮೂಲಕ ಶ್ರೀಜೇಶ್​ ತಮ್ಮ 18 ವರ್ಷಗಳ ಹಾಕಿ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದರು.​

ಶ್ರೀಜೇಶ್​ ಅವರಿಗೆ ಹಾಕಿ ಇಂಡಿಯಾ(Hockey India) ಭಾರತ ಜೂನಿಯರ್ ಪುರುಷರ ತಂಡದ ಹೊಸ ಮುಖ್ಯ ಕೋಚ್ ಆಗಿ ನೇಮಿಸಿದೆ. 36 ವಷದ ಕೇರಳದ ಶ್ರೀಜೇಶ್‌ ಭಾರತ ಪರ 336 ಪಂದ್ಯಗಳನ್ನು ಆಡಿದ್ದಾರೆ. 2 ಒಲಿಂಪಿಕ್ಸ್‌ ಕಂಚಿನ ಪದಕ, ಏಷ್ಯನ್‌ ಗೇಮ್ಸ್‌ನಲ್ಲಿ 2 ಚಿನ್ನ, 1 ಕಂಚು, ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ 2 ಬೆಳ್ಳಿ, ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿಯಲ್ಲಿ 2 ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ.

ಕೇರಳದ ಕೊಚ್ಚಿಯ ಆಟಗಾರ

ಕೇರಳದ ಕೊಚ್ಚಿಯ ಉಪನಗರವಾದ ಕಿಝಕ್ಕಂಬಲಂನಲ್ಲಿ ಜನಿಸಿದ ಶ್ರೀಜೇಶ್ ಕೃಷಿ ಕುಟುಂಬದಿಂದ ಬಂದವರು. ಹಾಕಿ ಕಿಟ್ ಖರೀದಿಸಲು ತಮ್ಮ ಹಸುವನ್ನು ಮಾರಿದ ಅವರ ತಂದೆಯ ತ್ಯಾಗವು ಕ್ರೀಡೆಯಲ್ಲಿ ಅವರ ಆರಂಭಿಕ ಹಂತದ ಪ್ರಯಾಣವಾಗಿತ್ತು. ಸಾಂಪ್ರದಾಯಿಕ ಉಡುಗೆ ಮತ್ತು ಮಲಯಾಳಂ ಉಚ್ಚಾರಣೆಗಾಗಿ ಅಪಹಾಸ್ಯವನ್ನು ಎದುರಿಸುತ್ತಿದ್ದರೂ, ಶ್ರೀಜೇಶ್ ತನ್ನ ತಂದೆಯ ಅಚಲ ಬೆಂಬಲದಿಂದ ತಿರುವನಂತಪುರಂನ ಜಿವಿ ರಾಜಾ ಸ್ಪೋರ್ಟ್ಸ್ ಸ್ಕೂಲ್​ಗೆ ಸೇರಿದ್ದರು ಅಲ್ಲಿ ಅವರ ತರಬೇತುದಾರರು ಗೋಲ್ ಕೀಪಿಂಗ್ ಆಯ್ಕೆ ಮಾಡಲು ಸಲಹೆ ನೀಡಿದರು. ಈ ನಿರ್ಧಾರವು ಅವರ ವೃತ್ತಿಜೀವನವನ್ನು ರೂಪಿಸುವಲ್ಲಿ ನಿರ್ಣಾಯಕವಾಯಿತು.

Continue Reading

ಕ್ರೀಡೆ

Hardik Pandya: ಬ್ರಿಟಿಷ್​ ಸಿಂಗರ್​ ಜತೆ ಡೇಟಿಂಗ್​​ ಆರಂಭಿಸಿದರೇ ಹಾರ್ದಿಕ್​ ಪಾಂಡ್ಯ?; ಅನುಮಾನ ಮೂಡಿಸಿದ ಇನ್​ಸ್ಟಾಗ್ರಾಮ್​ ಹಸಿ ಬಿಸಿ ಪೋಸ್ಟ್​

Hardik Pandya: ಜಾಸ್ಮಿನ್ ವಾಲಿಯಾ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ವೇಳೆಯೂ ಕಾಣಿಸಿಕೊಂಡಿದ್ದರು. ಹೀಗಾಗಿ ಪಾಂಡ್ಯ ಮತ್ತು ಜಾಸ್ಮಿನ್ ಡೇಟಿಂಗ್​ ನಡೆಸುತ್ತಿರುವುದು ಖಚಿತ ಎಂದು ನೆಟ್ಟಿಗರು ಕಮೆಂಟ್​ ಮಾಡಲಾರಂಭಿಸಿದ್ದಾರೆ.

VISTARANEWS.COM


on

Hardik Pandya
Koo

ಮುಂಬಯಿ: ಹಾರ್ದಿಕ್​ ಪಾಂಡ್ಯ(Hardik Pandya) ಅವರು ನತಾಶಾ ಸ್ಟಾಂಕೋವಿಕ್(Natasa Stankovic) ಅವರಿಗೆ ವಿಚ್ಛೇದನ(Hardik-Natasa Divorce) ನೀಡಿದ ಬಳಿಕ ಇದೀಗ ಜಾಲಿ ಮೂಡ್​ನಲ್ಲಿದ್ದಾರೆ. ನತಾಶಗೆ ವಿಚ್ಛೇದನ ನೀಡಿ ಒಂದು ವಾರ ಕಳೆಯುವಷ್ಟರಲ್ಲಿ ಪಾಂಡ್ಯ ಬಾಲಿವುಡ್​ನ ಖ್ಯಾತ ನಟಿ ಅನನ್ಯ ಪಾಂಡೆ(Ananya Panday) ಜತೆ ಚಾಟಿಂಗ್​, ಡೇಟಿಂಗ್​ ಆರಂಭಿಸಿದ್ದಾರೆ ಎನ್ನಲಾಗಿತ್ತು. ಆದರೆ, ಪಾಂಡ್ಯ ಬ್ರಿಟಿಷ್​ ಗಾಯಕಿ ಮತ್ತು ನಟಿ ಜಾಸ್ಮಿನ್​ ವಾಲಿಯಾ(Jasmin Walia) ಜತೆ ಡೇಟಿಂಗ್​(Hardik Pandya And Jasmin Walia Dating) ಮಾಡುತ್ತಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದೆ.

ಹೌದು, ನಟಿ ಜಾಸ್ಮಿನ್​ ವಾಲಿಯಾ(Hardik Pandya And Jasmin Walia) ಮತ್ತು ಹಾರ್ದಿಕ್​ ಪಾಂಡ್ಯ ಗ್ರೀಸ್​ನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಸುತ್ತಾಡಿದ ಫೋಟೊವನ್ನು ತಮ್ಮ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಫೋಟೋಗಳಲ್ಲಿ ಇವರಿಬ್ಬರು ಜತೆಯಾಗಿ ಕಾಣಿಸಿಕೊಳ್ಳದಿದ್ದರೂ, ಒಂದೇ ಸಮಯದಲ್ಲಿ ಒಂದೇ ಸ್ಥಳದಲ್ಲಿರುವ ಫೋಟೋಗಳನ್ನು ಹಂಚಿಕೊಂಡಿರುವುದು ಅನುಮಾನಕ್ಕೆ ಕಾರಣವಾಗಿದೆ.

ಜಾಸ್ಮಿನ್ ವಾಲಿಯಾ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ವೇಳೆಯೂ ಕಾಣಿಸಿಕೊಂಡಿದ್ದರು. ಹೀಗಾಗಿ ಪಾಂಡ್ಯ ಮತ್ತು ಜಾಸ್ಮಿನ್ ಡೇಟಿಂಗ್​ ನಡೆಸುತ್ತಿರುವುದು ಖಚಿತ ಎಂದು ನೆಟ್ಟಿಗರು ಕಮೆಂಟ್​ ಮಾಡಲಾರಂಭಿಸಿದ್ದಾರೆ. ಹಾರ್ದಿಕ್ ಮತ್ತು ಜಾಸ್ಮಿನ್ ಪರಸ್ಪರ ಇನ್​ಸ್ಟಾಗ್ರಾಮ್​ನಲ್ಲಿ ಫೋಟೊಗಳಿಗೂ ಲೈಕ್​ ಮಾಡಿಕೊಂಡಿದ್ದಾರೆ. ಹೀಗಾಗಿ ಡೇಟಿಂಗ್​ ವದಂತಿ ಬಲವಾಗಿದೆ.

ಬ್ರಿಟಿಷ್ ಸಿಂಗರ್ ಹಾಗೂ ಟಿವಿ ನಟಿಯಾಗಿರುವ ಜಾಸ್ಮಿನ್ ವಾಲಿಯಾ ಅವರ ಪೋಷಕರು ಭಾರತೀಯ ಮೂಲದವರಾಗಿದ್ದಾರೆ ಎನ್ನಲಾಗಿದೆ. ಬ್ರಿಟಿಷ್ ರಿಯಾಲಿಟಿ ಟಿವಿ ಸಿರೀಸ್​ನಲ್ಲಿ ಕಾಣಿಸಿಕೊಂಡ ನಂತರ ಜಾಸ್ಮಿನ್ ಮೊದಲ ಬಾರಿಗೆ ಎಲ್ಲರ ಗಮನ ಸೆಳೆದರು.

ಇದನ್ನೂ ಓದಿ Hardik Pandya : ನನ್ನ ಅಪರಾಧದಲ್ಲಿ ನೀನು ಪಾಲುದಾರ; ಪುತ್ರನಿಗೆ ಈ ರೀತಿ ಬರ್ತ್​​ಡೇ ವಿಶ್ ಮಾಡಿದ ಪಾಂಡ್ಯ

2014ರಲ್ಲಿ ಜಾಸ್ಮಿನ್ ಯೂಟ್ಯೂಬ್ ಚಾನೆಲ್ ಆರಂಭಿಸಿ ಕೆಲ ಪಾಪ್ಯುಲರ್ ಹಾಡುಗಳನ್ನು ಹಾಡುವ ಮೂಲಕ ಗಮನಸೆಳೆದಿದ್ದರು. 2017ರಲ್ಲಿ ಬಾಂ ಡಿಗ್ಗಿ ಡಿಗ್ಗಿ ಹಾಡು ಇವರಿಗೆ ಖ್ಯಾತಿ ತಂದುಕೊಟ್ಟಿತ್ತು. ಇದಾದ ಬಳಿಕ ಜಾಸ್ಮಿನ್ ಬಿಗ್​ಬಾಸ್ 13ರ ಫೈನಲಿಸ್ಟ್ ಅಸಿಮ್ ರಿಯಾಸ್ ಜತೆ 2022ರ ಮ್ಯೂಸಿಕ್ ವಿಡಿಯೋ ನೈಟ್ಸ್ & ಫೈಟ್ಸ್​ನಲ್ಲಿಯೂ ಕೆಲಸ ಮಾಡಿದ್ದರು. ಸದ್ಯ ಪಾಂಡ್ಯ ಜತೆ ಡೇಟಿಂಗ್​ ಮಾಡುತ್ತಿದ್ದಾರೆ ಎನ್ನಲಾಗಿದೆ.

ಹಾರ್ದಿಕ್​ ಮತ್ತು ನತಾಶಾ ನಡುವಿನ ಬ್ರೇಕಪ್​ಗೆ ಸಂವಹನ ಕೊರತೆಯೇ ಮುಖ್ಯ ಕಾರಣ ಎಂದು ಆಪ್ತ ಮೂಲಗಳು ಮಾಹಿತಿ ನೀಡಿತ್ತು. ಇಬ್ಬರ ನಡುವಿನ ಮನಸ್ತಾಪ ಮತ್ತು ಜಗಳಕ್ಕೆ ಪರಿಹಾರ ಕಂಡುಕೊಳ್ಳುವ ತಾಳ್ಮೆ ಇಬ್ಬರಲ್ಲೂ ಇರಲಿಲ್ಲ. ಹೀಗಾಗಿ ಮನಸ್ತಾಪ ದೊಡ್ಡದಾಗಿ ಡಿವೋರ್ಸ್​ಗೆ ಕಾರಣವಾಯಿತು. ಇದನ್ನು ಬಿಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಇವರಿಬ್ಬರ ಬಗ್ಗೆ ಯಾವುದೇ ತಪ್ಪು ಸುದ್ದಿ ಹಬ್ಬಿಸಬಾರದು ಎಂದು ಆಪ್ತ ಮೂಲಗಳು ಮನವಿ ಮಾಡಿತ್ತು.

ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇದಕ್ಕೂ ಮುನ್ನ ಈ ಜೋಡಿ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು.

Continue Reading

ಕ್ರೀಡೆ

Dodda Ganesh: ಕೀನ್ಯಾ ಕ್ರಿಕೆಟ್​ ತಂಡಕ್ಕೆ ಕನ್ನಡಿಗ ದೊಡ್ಡ ಗಣೇಶ್ ನೂತನ ಕೋಚ್

Dodda Ganesh: 50 ವರ್ಷದ ದೊಡ್ಡ ಗಣೇಶ್ ನೇರ ನುಡಿಗಳಿಂದಲೇ ಹೆಸರುವಾಸಿ. 1997ರಲ್ಲಿ ಭಾರತ ಪರ 4 ಟೆಸ್ಟ್ ಮತ್ತು ಒಂದು ಏಕದಿನ ಪಂದ್ಯಗಳಲ್ಲಿ ಆಡಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 104 ಪಂದ್ಯಗಳಿಂದ 365 ವಿಕೆಟ್​ ಪಡೆದಿದ್ದಾರೆ.

VISTARANEWS.COM


on

Dodda Ganesh
Koo

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ, ಕನ್ನಡಿಗ ದೊಡ್ಡ ಗಣೇಶ್(Dodda Ganesh) ಅವರು ಕೀನ್ಯಾ ತಂಡದ(Dodda Ganesh Kenya Head Coach) ಮುಖ್ಯ ಕೋಚ್​ ಆಗಿ ನೇಕಮಗೊಂಡಿದ್ದಾರೆ. 90ರ ದಶಕದಲ್ಲಿ ಭಾರತ ಮತ್ತು ಕರ್ನಾಟಕ ರಣಜಿ ತಂಡದಲ್ಲಿ ಉತ್ತಮ ಪ್ರದರ್ಶನ ತೋರಿದ ಹೆಗ್ಗಳಿಕೆ ಇವರದ್ದು. ದೊಡ್ಡ ಗಣೇಶ್ ಅವರ ನೇತೃತ್ವದಲ್ಲಿ ಕೀನ್ಯಾ ತಂಡವು ಮುಂಬರುವ ಐಸಿಸಿ ಡಿವಿಷನ್ 2 ಚಾಲೆಂಜ್ ಲೀಗ್​​ನಲ್ಲಿ ಕಣಕ್ಕಿಳಿಯಲಿದೆ.

50 ವರ್ಷದ ದೊಡ್ಡ ಗಣೇಶ್ ನೇರ ನುಡಿಗಳಿಂದಲೇ ಹೆಸರುವಾಸಿ. 1997ರಲ್ಲಿ ಭಾರತ ಪರ 4 ಟೆಸ್ಟ್ ಮತ್ತು ಒಂದು ಏಕದಿನ ಪಂದ್ಯಗಳಲ್ಲಿ ಆಡಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 104 ಪಂದ್ಯಗಳಿಂದ 365 ವಿಕೆಟ್​ ಪಡೆದಿದ್ದಾರೆ. ಭಾರತ ತಂಡದ ಪರ 6 ವಿಕೆಟ್​ ಕಿತ್ತಿದ್ದಾರೆ. ಲಿಸ್ಟ್​ ‘ಎ’ ಕ್ರಿಕೆಟ್​ನಲ್ಲಿ 89 ಪಂದ್ಯಗಳನ್ನಾಡಿ 128 ವಿಕೆಟ್​ ಪಡೆದಿದ್ದಾರೆ. ಬ್ಯಾಟಿಂಗ್​ನಲ್ಲಿಯೂ ಉತ್ತಮ ದಾಖಲೆ ಹೊಂದಿರುವ ಇವರು ಲಿಸ್ಟ್​ ‘ಎ’ ಮತ್ತು ಪ್ರಥಮ ದರ್ಜೆ ಕ್ರಿಕೆಟ್​ ಸೇರಿ ಒಟ್ಟು 2,548 ರನ್​ ಬಾರಿಸಿದ್ದಾರೆ. 6 ಬಾರಿ 10 ಕ್ಕೂ ಅಧಿಕ ವಿಕೆಟ್ ಕಬಳಿಸಿದ್ದಾರೆ.

ಇದನ್ನೂ ಓದಿ Dodda Ganesh: ಬಿಜೆಪಿ ಸೇರಿದ ನೇರ ನುಡಿಯ ಕ್ರಿಕೆಟಿಗ ದೊಡ್ಡ ಗಣೇಶ್

4 ತಿಂಗಳ ಹಿಂದಷ್ಟೇ ದೊಡ್ಡ ಗಣೇಶ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ(B. S. Yediyurappa) ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದರು. ದೊಡ್ಡ ಗಣೇಶ್ ಮೊದಲು ವಿಕೆಟ್ ಕೀಪರ್ ಮತ್ತು ಆರಂಭಿಕ ಬ್ಯಾಟ್ಸ್‌ಮನ್ ಆಗಿ ವೃತ್ತಿಜೀವನ ಪ್ರಾರಂಭಿಸಿದರು. ಭಾರತದ 1983ರ ವಿಶ್ವಕಪ್ ವಿಜೇತ ವಿಕೆಟ್-ಕೀಪರ್ ಸೈಯದ್ ಕಿರ್ಮಾನಿ ಅವರನ್ನು ಆರಾಧ್ಯ ಕ್ರಿಕೆಟಿಗನಾಗಿ ಕಂಡುಕೊಂಡಿದ್ದರು. ಗುಂಡಪ್ಪ ವಿಶ್ವನಾಥ್ ಅವರು ದೊಡ್ಡ ಗಣೇಶ್ ಬೌಲಿಂಗ್ ಪ್ರತಿಭೆಯನ್ನು ಗುರುತಿಸಿ ಅವರಿಗೆ ಹಲವು ಕ್ಲಬ್​ಗಳ ಪರ ಆಡುವ ಅವಕಾಶ ಕಲ್ಪಿಸಿದ್ದರು ಎನ್ನಲಾಗಿದೆ.

ಕೀನ್ಯಾ ತಂಡದ ಕೋಚ್​ ಆಗಿ ನೇಮಕಗೊಂಡ ವಿಚಾರವನ್ನು ದೊಡ್ಡ ಗಣೇಶ್ ತಮ್ಮ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ಕೀನ್ಯಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ತನ್ನ ಎಲ್ಲ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ತಂಡದ ಏಳಿಗೆಗೆ ಶ್ರಮಿಸಲಿದ್ದೇನೆ” ಎಂದು ಹೇಳಿದ್ದಾರೆ.

Continue Reading

ಕ್ರೀಡೆ

Buchi Babu Tournament: ಬುಚ್ಚಿಬಾಬು ಕ್ರಿಕೆಟ್‌ ಟೂರ್ನಿ ಆಡಲಿದ್ದಾರೆ ಸೂರ್ಯಕುಮಾರ್​, ಅಯ್ಯರ್​

Buchi Babu Tournament:ಶ್ರೇಯಸ್‌ ಅಯ್ಯರ್‌ ಮತ್ತು ಸೂರ್ಯಕುಮಾರ್‌ ಯಾದವ್‌ ಜಮ್ಮು ಮತ್ತು ಕಾಶ್ಮೀರ ವಿರುದ್ಧ ಆಗಸ್ಟ್​ 27ರಂದು ನಡೆಯುವ ಪಂದ್ಯದಲ್ಲಿ ಆಡಲಿದ್ದಾರೆ ಎಂದು ಎಂಸಿಎ ಜಂಟಿ ಕಾರ್ಯದರ್ಶಿ ದೀಪಕ್‌ ಪಾಟೀಲ್‌ ಹೇಳಿದ್ದಾರೆ.

VISTARANEWS.COM


on

Buchi Babu Tournament
Koo

ಬೆಂಗಳೂರು: ಇಶನ್​ ಕಿಶನ್​ ಬಳಿಕ ಇದೀಗ ಟೀಮ್​ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್​ ಯಾದವ್(Suryakumar Yadav)​ ಮತ್ತು ಶ್ರೇಯಸ್​​ ಅಯ್ಯರ್(Shreyas Iyer)​ ದೇಶೀಯ ಕ್ರಿಕೆಟ್​ ಟೂರ್ನಿಯ ಪಂದ್ಯವೊಂದನ್ನು ಆಡಲು ಮುಂದಾಗಿದ್ದಾರೆ. ಇದೇ ಗುರುವಾರದಿಂದ ಆರಂಭವಾಗಲಿರುವ “ಬುಚ್ಚಿಬಾಬು ಟ್ರೋಫಿ’ ಆಹ್ವಾನಿತ(Buchi Babu Tournament) ಪಂದ್ಯಾವಳಿಯಲ್ಲಿ ಆಡುವ ನಿರ್ಧಾರಕ್ಕೆ ಬಂದಿದ್ದಾರೆ. ಉಭಯ ಆಟಗಾರರು ಮುಂಬಯಿ ತಂಡದ ಪರ ಆಡಲಿದ್ದಾರೆ ಎಂದು ಮುಂಬೈ ಕ್ರಿಕೆಟ್​ ಅಸೋಸಿಯೇಶನ್​ ಅಧಿಕೃತ ಹೇಳಿಕೆ ನೀಡಿದೆ.

ಶ್ರೇಯಸ್‌ ಅಯ್ಯರ್‌ ಮತ್ತು ಸೂರ್ಯಕುಮಾರ್‌ ಯಾದವ್‌ ಜಮ್ಮು ಮತ್ತು ಕಾಶ್ಮೀರ ವಿರುದ್ಧ ಆಗಸ್ಟ್​ 27ರಂದು ನಡೆಯುವ ಪಂದ್ಯದಲ್ಲಿ ಆಡಲಿದ್ದಾರೆ ಎಂದು ಎಂಸಿಎ ಜಂಟಿ ಕಾರ್ಯದರ್ಶಿ ದೀಪಕ್‌ ಪಾಟೀಲ್‌ ಹೇಳಿದ್ದಾರೆ. ದುಲೀಪ್​ ಟ್ರೋಫಿಯಲ್ಲಿಯೂ ಅಯ್ಯರ್​ ಆಡಲಿದ್ದಾರೆ ಎನ್ನಲಾಗಿದೆ. ಒಟ್ಟಿನಲ್ಲಿ ಬಿಸಿಸಿಐ ಹೊಸ ನಿಲುವಿಗೆ ಹೆದರಿ ಸೀನಿಯರ್​ ತಂಡದ ಆಟಗಾರರೆಲ್ಲ ದೇಶೀಯ ಟೂರ್ನಿಯಲ್ಲಿ ಆಡಲು ಸಾಲುಗಟ್ಟಿದಂತಿದೆ.

12 ತಂಡಗಳ ಪಂದ್ಯಾವಳಿ


ತಮಿಳುನಾಡಿನ 4 ಕೇಂದ್ರಗಳಲ್ಲಿ ನಡೆಯುವ ಪಂದ್ಯಾವಳಿಯಲ್ಲಿ 12 ತಂಡಗಳು ಪಾಲ್ಗೊಳ್ಳಲಿವೆ. ಇವುಗಳೆಂದರೆ ಮಧ್ಯಪ್ರದೇಶ, ದಿಲ್ಲಿ, ಹರಿಯಾಣ, ಹೈದರಾಬಾದ್‌, ಬಂಗಾಲ, ಮುಂಬಯಿ, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್‌, ಛತ್ತೀಸ್‌ಗಢ, ಗುಜರಾತ್‌, ತಮಿಳುನಾಡು ಕ್ರಿಕೆಟ್‌ ಮಂಡಳಿ ಇಲೆವೆನ್‌ ಮತ್ತು ತಮಿಳುನಾಡು ಕ್ರಿಕೆಟ್‌ ಮಂಡಳಿ ಅಧ್ಯಕ್ಷರ ಬಳಗ.

ಇದನ್ನೂ ಓದಿ Duleep Trophy 2024: ದುಲೀಪ್ ಟ್ರೋಫಿ ವೇಳಾಪಟ್ಟಿ ಪ್ರಕಟ; ಕೊಹ್ಲಿ, ರೋಹಿತ್​ ಭಾಗವಹಿಸುವ ನಿರೀಕ್ಷೆ

ಭಾರತದ ಮಾಜಿ ಕ್ರಿಕೆಟಿಗ ಮೊತವರಪು ವೆಂಕಟ ಮಹಿಪತಿ ನಾಯ್ಡು ಅವರ ಸ್ಮರಣಾರ್ಥವಾಗಿ ನಡೆಸುವ ಕ್ರಿಕೆಟ್​ ಟೂರ್ನಿ ಇದಾಗಿದೆ. ಭಾರತ ಪರ ಆಡುವ ವೇಳೆ ಇವರು ಬುಚ್ಚಿ ಬಾಬು ನಾಯ್ಡು ಎಂದೇ ಖ್ಯಾತಿ ಗಳಿಸಿದ್ದರು. ಹೀಗಾಗಿ ಈ ಟೂರ್ನಿಗೆ ಇದೇ ಹೆಸರನ್ನು ಇರಿಸಲಾಗಿದೆ. ರಣಜಿ ಮಾದರಿಯಂತೆ 4 ದಿನಗಳ ಕಾಲ ನಡೆಯುವ ಟೂರ್ನಿ ಇದಾಗಿದೆ. 12 ತಂಡಗಳನ್ನು ತಲಾ ಮೂರರಂತೆ ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗುತ್ತದೆ.

ರಣಜಿ ಆಡಲು ನಿರಾಕರಿಸಿದ್ದ ಕಾರಣದಿಂದಾಗಿ ಟೀಮ್​ ಇಂಡಿಯಾದಲ್ಲಿ ಅವಕಾಶ ವಂಚಿತರಾಗಿರುವ ವಿಕೆಟ್​ ಕೀಪರ್​ ಕಮ್​ ಬ್ಯಾಟರ್​ ಇಶಾನ್ ಕಿಶನ್(Ishan Kishan)​ ಬುಚ್ಚಿ ಬಾಬು(Buchi Babu) ಕ್ರಿಕೆಟ್ ಟೂರ್ನಿಯಲ್ಲಿ ಜಾರ್ಖಂಡ್ ಪರ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ. ಈ ಮೂಲಕ ಮತ್ತೆ ಭಾರತ ತಂಡಕ್ಕೆ ಕಮ್​ಬ್ಯಾಕ್​ ಮಾಡುವ ಪ್ರಯತ್ನ ಮಾಡಲಿದ್ದಾರೆ.

ಕಳೆದ ವರ್ಷ ನವೆಂಬರ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಸರಣಿಯ ಮೂರನೇ ಟಿ20 ಸಂದರ್ಭದಲ್ಲಿ ಕಿಶನ್ ಕೊನೆಯದಾಗಿ ಭಾರತಕ್ಕಾಗಿ ಆಡಿದ್ದರು. ನಂತರದ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಆಯ್ಕೆಯಾಗಿದ್ದರೂ ಕೂಡ ಅಂತಿಮ ಹಂತದಲ್ಲಿ ವೈಯಕ್ತಿಕ ಕಾರಣಗಳಿಂದಾಗಿ ಟೆಸ್ಟ್ ಸರಣಿಯಿಂದ ಹೊರಗುಳಿದರು. ಸ್ವಲ್ಪ ವಿರಾಮವನ್ನು ತೆಗೆದುಕೊಂಡ ಇಶಾನ್​ಗೆ ಅಂದಿನ ಕೋಚ್​ ದ್ರಾವಿಡ್​ ಮತ್ತು ಆಯ್ಕೆ ಸಮಿತಿ ರಣಜಿ ಟ್ರೋಫಿ ಪಂದ್ಯಗಳಲ್ಲಿ ಆಡುವಂತೆ ಸೂಚನೆ ನೀಡಿತ್ತು. ಆದರೆ ಇದನ್ನು ಇಶಾನ್​ ಕಡೆಗಣಿಸಿದ್ದರು. ಈ ಕಾರಣದಿಂದ ಬಿಸಿಸಿಐ ಅವರನ್ನು ಕೇಂದ್ರೀಯ ಗುತ್ತಿಗೆಯಿಂದಲೂ ಕೈಬಿಟ್ಟಿತ್ತು.

Continue Reading
Advertisement
PR Sreejesh
ಕ್ರೀಡೆ11 mins ago

PR Sreejesh: ಶ್ರೀಜೇಶ್​ ಜೆರ್ಸಿ ಸಂಖ್ಯೆ 16ಕ್ಕೆ ವಿದಾಯ ಹೇಳಿದ ಹಾಕಿ ಇಂಡಿಯಾ

Terror Attacks
ದೇಶ16 mins ago

Terror Attacks: ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್‌: ಕ್ಯಾಪ್ಟನ್ ಹುತಾತ್ಮ

Bank Irregularities
ಕರ್ನಾಟಕ24 mins ago

Bank Irregularities: ಪದೇಪದೆ ಅಕ್ರಮ; 2 ಬ್ಯಾಂಕ್‌ಗಳ ಎಲ್ಲ ಸರ್ಕಾರಿ ಅಕೌಂಟ್ ಕ್ಲೋಸ್ ಮಾಡಲು ಸರ್ಕಾರ ಸೂಚನೆ

Hardik Pandya
ಕ್ರೀಡೆ2 hours ago

Hardik Pandya: ಬ್ರಿಟಿಷ್​ ಸಿಂಗರ್​ ಜತೆ ಡೇಟಿಂಗ್​​ ಆರಂಭಿಸಿದರೇ ಹಾರ್ದಿಕ್​ ಪಾಂಡ್ಯ?; ಅನುಮಾನ ಮೂಡಿಸಿದ ಇನ್​ಸ್ಟಾಗ್ರಾಮ್​ ಹಸಿ ಬಿಸಿ ಪೋಸ್ಟ್​

Bigg Boss Telugu 8 Confirmed Contestants nagarjuna akkineni host
ಬಿಗ್ ಬಾಸ್2 hours ago

Bigg Boss Telugu 8: ಬಿಗ್​ಬಾಸ್ ತೆಲುಗು ಸೀಸನ್‌ 8ರ ಪ್ರೋಮೊ ಔಟ್‌; ಸಂಭಾವ್ಯರ ಪಟ್ಟಿಯಲ್ಲಿ ಇಬ್ಬರು ಕನ್ನಡತಿಯರು!

Arvind Kejriwal
ದೇಶ2 hours ago

Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ಮತ್ತೊಮ್ಮೆ ಹಿನ್ನಡೆ; ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್‌ ನಕಾರ

Viral News
Latest2 hours ago

Viral News: ರೈಲು ಬೋಗಿಯಲ್ಲಿ ನಮಾಜ್: ಮುಸ್ಲಿಂ ಪ್ರಯಾಣಿಕರನ್ನು ತರಾಟೆಗೆ ತೆಗೆದುಕೊಂಡ ಟಿಟಿಇ; ವಿಡಿಯೊ ಇಲ್ಲಿದೆ

Viral Video
Latest2 hours ago

Viral Video: ರೀಲ್ಸ್ ಅವಾಂತರ; 6ನೇ ಮಹಡಿಯಿಂದ ಬಿದ್ದ ಬಾಲಕಿ; ಅಪ್ಪನನ್ನು ಕರೆ ಎಂದು ಅಮ್ಮನ ಬಳಿ ಅಂಗಲಾಚಿದ್ದು ಯಾಕೆ?

ramanagara murder case
ಕ್ರೈಂ3 hours ago

Murder Case: ಪೂಜೆಗೆಂದು ಕರೆದೊಯ್ದು ಹೆಂಡತಿಯ ಕೊಂದ ಗಂಡ; ಕೊಲೆಯಾದಳೇಕೆ ಚಿಟ್ಟೆ ಟ್ಯಾಟೂ ಚೆಲುವೆ?

Dodda Ganesh
ಕ್ರೀಡೆ3 hours ago

Dodda Ganesh: ಕೀನ್ಯಾ ಕ್ರಿಕೆಟ್​ ತಂಡಕ್ಕೆ ಕನ್ನಡಿಗ ದೊಡ್ಡ ಗಣೇಶ್ ನೂತನ ಕೋಚ್

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ6 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ6 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ6 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌