Ram Path: ಬೀದಿ ದೀಪಗಳನ್ನೂ ಬಿಡದ ಕಳ್ಳರು; ಅಯೋಧ್ಯೆಯ ರಾಮಪಥ, ಭಕ್ತಿಪಥದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಲೈಟ್ಸ್‌ ನಾಪತ್ತೆ - Vistara News

ದೇಶ

Ram Path: ಬೀದಿ ದೀಪಗಳನ್ನೂ ಬಿಡದ ಕಳ್ಳರು; ಅಯೋಧ್ಯೆಯ ರಾಮಪಥ, ಭಕ್ತಿಪಥದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಲೈಟ್ಸ್‌ ನಾಪತ್ತೆ

Ram Path: ಅಯೋಧ್ಯೆ ರಾಮ ಮಂದಿರದ ರಾಮಪಥ ಮತ್ತು ಭಕ್ತಿಪಥದಲ್ಲಿರುವ ದೀಪಗಳನ್ನು ಕಳ್ಳರು ಎಗರಿಸಿದ್ದಾರೆ. 50 ಲಕ್ಷ ರೂ. ಮೌಲ್ಯದ ಬೀದಿ ದೀಪಗಳನ್ನು ಕಳವು ಮಾಡಲಾಗಿದ್ದು, ಗುತ್ತಿಗೆದಾರರು ಇದೀಗ ಪೊಲೀಸ್‌ ಠಾಣೆಯ ಮೆಟ್ಟಿಲೇರಿದ್ದಾರೆ. ರಾಮಜನ್ಮಭೂಮಿ ಠಾಣೆಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. 3,800ಕ್ಕೂ ಅಧಿಕ ಬೀದಿ ದೀಪಗಳು ಹಾಗೂ 36 ಪ್ರೊಜೆಕ್ಟರ್​ ದೀಪಗಳನ್ನು ಕಳವು ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

VISTARANEWS.COM


on

Ram Path
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: ಅಯೋಧ್ಯೆ (Ayodhya)ಯ ರಾಮಪಥ (Ram Path) ಹಾಗೂ ಭಕ್ತಿಪಥ (Bhakti Path)ದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಬೀದಿ ದೀಪಗಳನ್ನು ಕಳವು ಮಾಡಲಾಗಿದ್ದು, ಗುತ್ತಿಗೆದಾರರು ಇದೀಗ ಪೊಲೀಸ್‌ ಠಾಣೆಯ ಮೆಟ್ಟಿಲೇರಿದ್ದಾರೆ. 3,800ಕ್ಕೂ ಅಧಿಕ ಬೀದಿ ದೀಪಗಳು ಹಾಗೂ 36 ಪ್ರೊಜೆಕ್ಟರ್​ ದೀಪಗಳನ್ನು ಕಳವು ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ʼʼರಾಮಪಥದ ಮರಗಳಿಗೆ ಅಳವಡಿಸಿದ್ದ 3,800 ಬಾಂಬೂ ಲೈಟ್‌ ಮತ್ತು ಭಕ್ತಿಪಥದಲ್ಲಿದ್ದ 36 ಗೋಬೊ ಪ್ರೊಜೆಕ್ಟರ್ ಲೈಟ್‌ಗಳನ್ನು ಕಳವು ಮಾಡಲಾಗಿದೆ. ಇದರ ಒಟ್ಟು ಮೌಲು ಸುಮಾರು 50 ಲಕ್ಷ ರೂ.ʼʼ ಎಂದು ಗುತ್ತಿಗೆದಾರರು ತಿಳಿಸಿದ್ದಾರೆ. ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರ ನೀಡಿದ ಗುತ್ತಿಗೆಯಡಿಯಲ್ಲಿ ದೀಪಗಳನ್ನು ಅಳವಡಿಸಿದ ಯಶ್ ಎಂಟರ್‌ಪ್ರೈಸಸ್ ಮತ್ತು ಕೃಷ್ಣ ಆಟೋಮೊಬೈಲ್ಸ್ ಸಂಸ್ಥೆಯ ಪ್ರತಿನಿಧಿಗಳು ದೂರು ದಾಖಲಿಸಿದ್ದಾರೆ. ರಾಮಪಥದಲ್ಲಿ 6,400 ಬಾಂಬೂ ಲೈಟ್‌ ಮತ್ತು ಭಕ್ತಿಪಥದಲ್ಲಿ 96 ಗೋಬೊ ಪ್ರೊಜೆಕ್ಟರ್ ಲೈಟ್‌ಗಳನ್ನು ಸ್ಥಾಪಿಸಲಾಗಿದ್ದು, ಈ ಪೈಕಿ ಅರ್ಧದಷ್ಟನ್ನು ಕಳ್ಳರು ಎಗರಿಸಿದ್ದಾರೆ.

ʼʼರಾಮಪಥದಲ್ಲಿ 6,400 ಬಿದಿರಿನ ದೀಪಗಳು ಮತ್ತು ಭಕ್ತಿ ಪಥದಲ್ಲಿ 96 ಪ್ರೊಜೆಕ್ಟರ್ ಲೈಟ್‌ಗಳನ್ನು ಅಳವಡಿಸಲಾಗಿದೆ. ಮಾರ್ಚ್ 19ರವರೆಗೆ ಎಲ್ಲ ದೀಪಗಳು ಇದ್ದವು. ಆದರೆ ಮೇ 9ರಂದು ಪರಿಶೀಲಿಸಿದಾಗ ಈ ಪೈಕಿ ಕೆಲವು ದೀಪಗಳು ನಾಪತ್ತೆಯಾಗಿದ್ದವು. ಇದುವರೆಗೆ ಒಟ್ಟು 3,800 ಬಿದಿರಿನ ದೀಪಗಳು ಮತ್ತು 36 ಪ್ರೊಜೆಕ್ಟರ್ ದೀಪಗಳು ಕಾಣೆಯಾಗಿವೆʼʼ ಎಂದು ದೀಪ ಅವಳಡಿಸಿದ್ದ ಸಂಸ್ಥೆಯ ಪ್ರತಿನಿಧಿ ಶೇಖರ್ ಶರ್ಮಾ ಮಾಹಿತಿ ನೀಡಿದ್ದಾರೆ.

ದೀಪಗಳು ಕಾಣೆಯಾಗುವ ಬಗ್ಗೆ ಕಂಪೆನಿಗೆ ಮೇ ತಿಂಗಳಿನಲ್ಲಿಯೇ ಗೊತ್ತಾಗಿದ್ದರೂ ಆಗಸ್ಟ್‌ 9ರಂದು ದೂರು ದಾಖಲಿಸಿದೆ. ಸದ್ಯ ಈ ಬಗ್ಗೆ ರಾಮಜನ್ಮಭೂಮಿ ಠಾಣೆಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಯಾವುದೇ ಮಾಹಿತಿ ಬಹಿರಂಗಪಡಿಸಲು ನಿರಾಕರಿಸಿದ್ದಾರೆ.

ಭಕ್ತಿಪಥವು ರಾಮ ಮಂದಿರಕ್ಕೆ ಹೋಗುವ ರಸ್ತೆಯಾಗಿದ್ದು, ಶೃಂಗಾರ್ ಘಾಟ್ ಅನ್ನು ಹನುಮಾನ್ ಗರ್ಹಿ ಮತ್ತು ರಾಮಮಂದಿರಕ್ಕೆ ಸಂಪರ್ಕಿಸುತ್ತದೆ. 742 ಮೀಟರ್ ರಸ್ತೆಯ ಇಕ್ಕೆಲೆಗಳಲ್ಲಿ ಕೇಸರಿ ಬಣ್ಣ ಬಳಿಯಲಾದ ಅಂಗಡಿಗಳು ಮತ್ತು ನಿವಾಸಗಳಿದ್ದು, ಪ್ರವಾಸಿಗರ ಗಮನ ಸೆಳೆಯುತ್ತದೆ. ಕನಕ ಭವನ ಮತ್ತು ದಶರಥ ಮಹಲ್‌ನಂತಹ ಪ್ರಮುಖ ಕಟ್ಟಡಗಳು ಇದೇ ಮಾರ್ಗದಲ್ಲಿದೆ.

ಸಾದತ್ಗಂಜ್ ಮತ್ತು ನಯಾ ಘಾಟ್ ಅನ್ನು ಸಂಪರ್ಕಿಸುವ 13 ಕಿ.ಮೀ ಉದ್ದದ, ನಾಲ್ಕು ಪಥದ ಹೆದ್ದಾರಿಯನ್ನು ರಾಮಪಥ ಎಂದು ಕರೆಯಲಾಗುತ್ತದೆ. ಈ ವರ್ಷದ ಜನವರಿ 22ರಂದು ರಾಮ ಮಂದಿರಲ್ಲಿ ಬಾಲಕ ರಾಮ ವಿಗ್ರಹದ ಪ್ರಾಣ ಪ್ರತಿಷ್ಠೆ ಸಮಾರಂಭ ನಡೆದಿತ್ತು. ಪ್ರಧಾನಿ ನರೇಂದ್ರ ಮೋದಿ ಸಹಿತ ದೇಶದ ವಿವಿಧ ರಂಗಗಳ ಗಣ್ಯರು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗಿಯಾಗಿದ್ದರು.

ಕೆಲವು ದಿನಗಳ ಹಿಂದೆ ಮಳೆಗಾಲ ಆರಂಭವಾದಾಗ ರಾಮ ಮಂದಿರದ ಒಳಗೆ ನೀರು ಸೋರಿಕೆಯಾಗುತ್ತದೆ ಎನ್ನುವ ವಿಚಾರ ಸಾಕಷ್ಟು ಸುದ್ದಿ ಮಾಡಿತ್ತು. ʼʼಮಂದಿರ ನಿರ್ಮಾಣದ ವೇಳೆ ಅನೇಕ ಎಂಜಿನಿಯರ್‌ಗಳು ಮೇಲ್ವಿಚಾರಣೆ ನಡೆಸಿದ್ದರು. ಅದರ ಹೊರತಾಗಿಯೂ, ಛಾವಣಿಯಿಂದ ನೀರು ಸೋರುತ್ತಿದೆ. ಇದನ್ನು ಯಾರೂ ನಿರೀಕ್ಷಿಸಿರಲಿಲ್ಲʼʼ ಎಂದು ರಾಮ ಮಂದಿರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅಚ್ಚರಿ ವ್ಯಕ್ತಪಡಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Kolkata Doctor Murder Case: ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಆರೋಪಿ ಸಿಬಿಐ ವಶಕ್ಕೆ

Kolkata Doctor Murder Case: ಬುಧವಾರ ಮಧ್ಯಾಹ್ನ, ಮಣಿಪಾಲ, ಮೆಡಿಕಾ, ಪೀರ್‌ಲೆಸ್ ಮತ್ತು ಆರ್‌ಎನ್ ಟ್ಯಾಗೋರ್ ಸೇರಿದಂತೆ ಕೋಲ್ಕತ್ತಾದ ಪೂರ್ವ ಮೆಟ್ರೋಪಾಲಿಟನ್ ಬೈಪಾಸ್‌ನ ಎಲ್ಲಾ ಖಾಸಗಿ ಆಸ್ಪತ್ರೆಗಳ ವೈದ್ಯರು, ದಾದಿಯರು ಮತ್ತು ಇತರ ಸಿಬ್ಬಂದಿಗಳು ಮುಕುಂದಪುರದಿಂದ ಬೃಹತ್‌ ಮೆರವಣಿಗೆ ಕೈಗೊಂಡರು.

VISTARANEWS.COM


on

kolkata doctor murder case
Koo

ಕೋಲ್ಕತಾ: ಪಶ್ಚಿಮ ಬಂಗಾಳ(West Bengal)ದ ಕೋಲ್ಕತ್ತಾ(Kolkata)ದಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ(Kolkata Doctor Murder Case) ಪ್ರಕರಣವನ್ನು ಹೈಕೋರ್ಟ್‌ ಸಿಬಿಐ(CBI Probe) ತನಿಖೆಗೆ ಆದೇಶಿಸಿರುವ ಬೆನ್ನಲ್ಲೇ ಸಿಬಿಐ ಆರೋಪಿಯನ್ನು ತನ್ನ ವಶಕ್ಕೆ ಪಡೆದಿದೆ. ಮತ್ತೊಂದೆಡೆ ಘಟನೆಯನ್ನು ಖಂಡಿಸಿ ಇಂದು ರಾತ್ರಿ ರಾಜಕೀಯ ನಾಯಕರು, ಸೆಲೆಬ್ರಿಟಿಗಳು ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಜನ ಪ್ರತಿಭಟನೆ ನಡೆಸಲಿದ್ದಾರೆ.

ಬುಧವಾರ ಮಧ್ಯಾಹ್ನ, ಮಣಿಪಾಲ, ಮೆಡಿಕಾ, ಪೀರ್‌ಲೆಸ್ ಮತ್ತು ಆರ್‌ಎನ್ ಟ್ಯಾಗೋರ್ ಸೇರಿದಂತೆ ಕೋಲ್ಕತ್ತಾದ ಪೂರ್ವ ಮೆಟ್ರೋಪಾಲಿಟನ್ ಬೈಪಾಸ್‌ನ ಎಲ್ಲಾ ಖಾಸಗಿ ಆಸ್ಪತ್ರೆಗಳ ವೈದ್ಯರು, ದಾದಿಯರು ಮತ್ತು ಇತರ ಸಿಬ್ಬಂದಿಗಳು ಮುಕುಂದಪುರದಿಂದ ಬೃಹತ್‌ ಮೆರವಣಿಗೆ ಕೈಗೊಂಡರು.

ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಪುರಸ್ಕರಿಸಿದ ಕೋಲ್ಕತಾ ಹೈಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ. ಆರಂಭದಲ್ಲಿಯೇ ಕೊಲೆ ಪ್ರಕರಣವನ್ನು ಏಕೆ ದಾಖಲಿಸಲಿಲ್ಲ ಎಂದು ಪ್ರಶ್ನಿಸಿದ ಕೋರ್ಟ್‌, ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆಗಿನ ಪ್ರಾಂಶುಪಾಲರಾದ ಡಾ ಸಂದೀಪ್ ಘೋಷ್ ಅವರನ್ನು ಮೊದಲು ವಿಚಾರಣೆಗೆ ಒಳಪಡಿಸಬೇಕಿತ್ತು ಎಂದು ಅಭಿಪ್ರಾಯ ಪಟ್ಟಿದೆ. ಅಲ್ಲದೇ ಘೋಷ್ ಅವರು ರಾಜೀನಾಮೆ ನೀಡಿದ ಗಂಟೆಗಳ ನಂತರ ಮತ್ತೊಂದು ಕಾಲೇಜಿನ ಪ್ರಾಂಶುಪಾಲರಾಗಿ ಏಕೆ ನೇಮಕಗೊಂಡರು ಎಂದು ಪೀಠವು ರಾಜ್ಯ ಸರ್ಕಾರದ ವಕೀಲರನ್ನು ಪ್ರಶ್ನಿಸಿತು.

ಏನಿದು ಘಟನೆ?

ಕೋಲ್ಕತಾದಲ್ಲಿನ ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಶುಕ್ರವಾರ ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಗುರುವಾರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್‌ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್‌ಗೆ ಓದುವ ಸಲುವಾಗಿ ತೆರಳಿದ್ದರು. ಶುಕ್ರವಾರ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು.
ಆಸ್ಪತ್ರೆಯ ವೈದ್ಯರೊಬ್ಬರು ಮಾಹಿತಿ ನೀಡಿ, ʼʼಸಂತ್ರಸ್ತೆ ಶುಕ್ರವಾರ ಮುಂಜಾನೆ 2 ಗಂಟೆ ಸುಮಾರಿಗೆ ತಮ್ಮ ಸಹೋದ್ಯೋಗಿಗಳೊಂದಿಗೆ ಊಟ ಮಾಡಿದ್ದಾರೆ. ಬಳಿಕ ಸೆಮಿನಾರ್ ಹಾಲ್‌ಗೆ ತೆರಳಿದ್ದರು. ನಂತರ ಸೆಮಿನಾರ್‌ ಹಾಲ್‌ನಲ್ಲಿ ಅವರ ಶವ ಪತ್ತೆಯಾಗಿತ್ತುʼʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Kolkata Doctor Murder Case: ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ; ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

Continue Reading

ವಿದೇಶ

Independence Day 2024: ಒಂದೇ ದಿನ ಸ್ವಾತಂತ್ರ್ಯ ಪಡೆದಿದ್ದರೂ ಪಾಕಿಸ್ತಾನದಲ್ಲೇಕೆ ಭಾರತಕ್ಕಿಂತ ಮೊದಲು ಸ್ವಾತಂತ್ರ್ಯ ದಿನಾಚರಣೆ?

1947ರ ಆಗಸ್ಟ್‌ನಲ್ಲಿ ಬ್ರಿಟಿಷರು ಭಾರತವನ್ನು ಬಿಟ್ಟು ಹೋಗುವಾಗ ದೇಶವನ್ನು ಎರಡು ಸ್ವತಂತ್ರ ರಾಷ್ಟ್ರಗಳಾಗಿ ವಿಭಜಿಸಿದರು. ಭಾರತ ಮತ್ತು ಪಾಕಿಸ್ತಾನ ಎರಡು ರಾಷ್ಟ್ರಗಳು ಏಕಕಾಲದಲ್ಲಿ ವಿಭಜನೆಯಾಗಿದ್ದರೂ ಎರಡು ವಿಭಿನ್ನ ದಿನಗಳಲ್ಲಿ ಯಾಕೆ ಸ್ವಾತಂತ್ರ್ಯವನ್ನು ಆಚರಿಸುತ್ತಾರೆ (Independence day 2024) ಎನ್ನುವುದು ಕುತೂಹಲಕರವಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

Independence day 2024
Koo

ಭಾರತ ಮತ್ತು ಪಾಕಿಸ್ತಾನ (India and Pakistan) ಒಟ್ಟಿಗೆ ಈ ಬಾರಿ 78ನೇ ಸ್ವಾತಂತ್ರ್ಯ ದಿನವನ್ನು (Independence day 2024) ಆಚರಿಸುವ ಸಂಭ್ರಮದಲ್ಲಿದೆ. ಆದರೆ ಭಾರತವು ಆಗಸ್ಟ್ 15ರಂದು ಸಂಭ್ರಮಾಚರಣೆ ನಡೆಸಿದರೆ ನೆರೆಯ ರಾಷ್ಟ್ರ ಪಾಕಿಸ್ತಾನವು ಒಂದು ದಿನ ಮುಂಚಿತವಾಗಿ ಅಂದರೆ ಆಗಸ್ಟ್ 14ರಂದು ಈ ಆಚರಣೆಯನ್ನು ನಡೆಸುತ್ತದೆ. 1947ರ ಆಗಸ್ಟ್‌ನಲ್ಲಿ ಬ್ರಿಟಿಷರು ಭಾರತವನ್ನು ಬಿಟ್ಟು ಹೋಗುವಾಗ ದೇಶವನ್ನು ಎರಡು ಸ್ವತಂತ್ರ ರಾಷ್ಟ್ರಗಳಾಗಿ ವಿಭಜಿಸಿದರು. ಭಾರತ ಮತ್ತು ಪಾಕಿಸ್ತಾನ ಎರಡು ರಾಷ್ಟ್ರಗಳು ಏಕಕಾಲದಲ್ಲಿ ವಿಭಜನೆಯಾಗಿದ್ದರೂ ಎರಡು ವಿಭಿನ್ನ ದಿನಗಳಲ್ಲಿ ಯಾಕೆ ಸ್ವಾತಂತ್ರ್ಯವನ್ನು ಆಚರಿಸುತ್ತಾರೆ ಎನ್ನುವ ಕುರಿತು ಮಾಹಿತಿ ಇಲ್ಲಿದೆ.

ಇತಿಹಾಸದಲ್ಲಿ ಏನಿದೆ?

1947ರ ಜುಲೈ 18ರಂದು ಘೋಷಿಸಲಾದ 1947ರ ಭಾರತೀಯ ಸ್ವಾತಂತ್ರ್ಯ ಕಾಯಿದೆಯು ಭಾರತ ಮತ್ತು ಪಾಕಿಸ್ತಾನಕ್ಕೆ ಜನ್ಮ ನೀಡಿತು. ಕಾಯಿದೆಯ ಪ್ರಕಾರ, 1947ರ ಆಗಸ್ಟ್ 15ರಂದು ಭಾರತದಲ್ಲಿ ಎರಡು ಸ್ವತಂತ್ರ ರಾಷ್ಟ್ರಗಳನ್ನು ಸ್ಥಾಪಿಸಲಾಗುವುದು. ಇದನ್ನು ಕ್ರಮವಾಗಿ ಭಾರತ ಮತ್ತು ಪಾಕಿಸ್ತಾನ ಎಂದು ಕರೆಯಲಾಗುತ್ತದೆ ಎಂಬ ಉಲ್ಲೇಖ ಇತ್ತು.


ಆಗಸ್ಟ್ 15 ಪಾಕಿಸ್ತಾನದ ಸ್ವಾತಂತ್ರ್ಯ ದಿನವಾಗಿತ್ತು ಎಂಬುದು ಪಾಕಿಸ್ತಾನದ ಸ್ಥಾಪಕ ಪಿತಾಮಹ ಮೊಹಮ್ಮದ್ ಅಲಿ ಜಿನ್ನಾ ಅವರ ಐತಿಹಾಸಿಕ ರೇಡಿಯೊ ಸಂದೇಶದಲ್ಲಿ ಹೇಳಿದ್ದಾರೆ. ಇದರಲ್ಲಿ ಅವರು, ಆಗಸ್ಟ್ 15 ಸ್ವತಂತ್ರ ಮತ್ತು ಸಾರ್ವಭೌಮ ರಾಷ್ಟ್ರವಾದ ಪಾಕಿಸ್ತಾನದ ಜನ್ಮದಿನವಾಗಿದೆ. ಕಳೆದ ಕೆಲವು ವರ್ಷಗಳಲ್ಲಿ ತನ್ನ ತಾಯ್ನಾಡನ್ನು ಹೊಂದಲು ದೊಡ್ಡ ತ್ಯಾಗ ಮಾಡಿದ ಮುಸ್ಲಿಂ ರಾಷ್ಟ್ರದ ಜನತೆಯ ಕನಸನ್ನು ಇದು ನನಸು ಮಾಡಿರುವುದನ್ನು ಸೂಚಿಸುತ್ತದೆ ಎಂದು ಜಿನ್ನಾ ಹೇಳಿದ್ದರು.

2016ರಲ್ಲಿ ಪಾಕಿಸ್ತಾನದ ಹಿರಿಯ ಪತ್ರಕರ್ತೆ ಶಾಹಿದಾ ಖಾಜಿ ಅವರು ಮಾಧ್ಯಮವೊಂದಕ್ಕೆ ನೀಡಿದ ಹೇಳಿಕೆಯಲ್ಲಿ, ನಾವು ಯಾವುದೇ ರೀತಿಯ ತರ್ಕವನ್ನು ಬಳಸಿದರೂ ಆಗಸ್ಟ್ 15 ಪಾಕಿಸ್ತಾನ ತನ್ನ ಸ್ವಾತಂತ್ರ್ಯವನ್ನು ಆಚರಿಸಬೇಕಾದ ದಿನವಾಗಿದೆ ಎಂದು ಹೇಳಿದ್ದರು. ಜಿನ್ನಾ ಮತ್ತು ಪಾಕಿಸ್ತಾನ ಕ್ಯಾಬಿನೆಟ್ 1947ರ ಆಗಸ್ಟ್ 15ರಂದು ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದ್ದರು.

Independence day 2024
Independence day 2024

ಅಂಚೆ ಚೀಟಿಗಳಲ್ಲೂ ಮುದ್ರಣ

ಜುಲೈ 1948ರಲ್ಲಿ ಬಿಡುಗಡೆಯಾದ ಪಾಕಿಸ್ತಾನದ ಮೊದಲ ಸ್ಮರಣಾರ್ಥ ಅಂಚೆ ಚೀಟಿಗಳಲ್ಲಿ 1947ರ ಆಗಸ್ಟ್ 15 ಅನ್ನು ದೇಶದ ಸ್ವಾತಂತ್ರ್ಯ ದಿನವೆಂದು ಉಲ್ಲೇಖಿಸಲಾಗಿದೆ. ಮುಸ್ಲಿಮರಿಗೆ 1947ರ ಆಗಸ್ಟ್ 15ರಂದು ಪವಿತ್ರವಾದ ರಂಜಾನ್ ತಿಂಗಳ ಕೊನೆಯ ಶುಕ್ರವಾರವಾದ್ದರಿಂದ ಇದು ಮಂಗಳಕರ ದಿನವಾಗಿತ್ತು.

ಪಾಕಿಸ್ತಾನದ ಮಾಜಿ ಪ್ರಧಾನಿ ಚೌಧರಿ ಮುಹಮ್ಮದ್ ಅಲಿ ಅವರು ತಮ್ಮ 1967ರ ಪುಸ್ತಕ ʼದಿ ಎಮರ್ಜೆನ್ಸ್ ಆಫ್ ಪಾಕಿಸ್ತಾನʼದಲ್ಲಿ ಹೀಗೆ ಬರೆದಿದ್ದಾರೆ: ಹದಿನೈದನೇ ಆಗಸ್ಟ್ 1947 ರಂಜಾನ್-ಉಲ್-ಮುಬಾರಕ್‌ನ ಕೊನೆಯ ಶುಕ್ರವಾರ ಇದು ಇಸ್ಲಾಂ ಧರ್ಮದ ಪವಿತ್ರ ದಿನಗಳಲ್ಲಿ ಒಂದಾಗಿದೆ. ಆ ಮಂಗಳಕರ ದಿನದಂದು, ಕ್ವೈಡ್-ಇ-ಆಜಮ್ [ಜಿನ್ನಾ] ಪಾಕಿಸ್ತಾನದ ಗವರ್ನರ್-ಜನರಲ್ ಆದರು ಮತ್ತು ಸಂಪುಟವು ಪ್ರಮಾಣ ವಚನ ಸ್ವೀಕರಿಸಿತು. ನಕ್ಷತ್ರ ಮತ್ತು ಅರ್ಧಚಂದ್ರ ಧ್ವಜವನ್ನು ಹಾರಿಸಲಾಯಿತು. ಪಾಕಿಸ್ತಾನವು ವಿಶ್ವ ಭೂಪಟದಲ್ಲಿ ಸ್ವತಂತ್ರ ರಾಷ್ಟ್ರವಾಗಿ ಹೊರಹೊಮ್ಮಿತು.

1947ರ ಆಗಸ್ಟ್ 14ರಂದು ಏನಾಯಿತು?

1947ರ ಆಗಸ್ಟ್ 14ರಂದು ವೈಸರಾಯ್ ಲಾರ್ಡ್ ಮೌಂಟ್ ಬ್ಯಾಟನ್ ಪಾಕಿಸ್ತಾನದ ಸಂವಿಧಾನ ಸಭೆಯಲ್ಲಿ ಭಾಷಣ ಮಾಡಿದರು. ಅವರು ಆಗಸ್ಟ್ 15ರ ಮಧ್ಯರಾತ್ರಿ ಭಾರತ ಮತ್ತು ಪಾಕಿಸ್ತಾನಕ್ಕೆ ಅಧಿಕಾರವನ್ನು ಹಸ್ತಾಂತರಿಸಬೇಕಿತ್ತು. ಆದರೆ, ಮೌಂಟ್ ಬ್ಯಾಟನ್ ಏಕಕಾಲದಲ್ಲಿ ನವದೆಹಲಿ ಮತ್ತು ಕರಾಚಿ ಎರಡರಲ್ಲೂ ಇರಲು ಸಾಧ್ಯವಿರಲಿಲ್ಲ. ಹಾಗಾಗಿ
ಮೌಂಟ್ ಬ್ಯಾಟನ್ ಅವರು ಆಗಸ್ಟ್ 14ರಂದು ಕರಾಚಿಯಲ್ಲಿ ಮೊದಲು ಪಾಕಿಸ್ತಾನಕ್ಕೆ ಅಧಿಕಾರವನ್ನು ವರ್ಗಾಯಿಸಿದರು ಮತ್ತು ಅನಂತರ ನವದೆಹಲಿಗೆ ಪ್ರಯಾಣಿಸಿದರು.


ಖ್ಯಾತ ಪಾಕಿಸ್ತಾನಿ ಇತಿಹಾಸಕಾರ ಖುರ್ಷೀದ್ ಕಮಲ್ ಅಜೀಜ್ ಅವರು ತಮ್ಮ ʼಮರ್ಡರ್ ಆಫ್ ಹಿಸ್ಟರಿʼ ಪುಸ್ತಕದಲ್ಲಿ ಹೀಗೆ ಬರೆದಿದ್ದಾರೆ: ಭಾರತದಲ್ಲಿ ಬ್ರಿಟಿಷ್ ರಾಜನ ಏಕೈಕ ಪ್ರತಿನಿಧಿಯಾಗಿದ್ದ ವೈಸ್‌ರಾಯ್ ಅಧಿಕಾರವನ್ನು ವೈಯಕ್ತಿಕವಾಗಿ ಹೊಸ ದೇಶಗಳಿಗೆ ವರ್ಗಾಯಿಸಬೇಕಾಗಿತ್ತು. ಲಾರ್ಡ್ ಮೌಂಟ್ ಬ್ಯಾಟನ್ ಕರಾಚಿ ಮತ್ತು ನವದೆಹಲಿಯಲ್ಲಿ ಒಂದೇ ಕ್ಷಣದಲ್ಲಿ ಖುದ್ದಾಗಿ ಹಾಜರಾಗಲು ಸಾಧ್ಯವಾಗಲಿಲ್ಲ. ಆಗಸ್ಟ್ 15ರ ಬೆಳಗ್ಗೆ ಭಾರತಕ್ಕೆ ಅಧಿಕಾರವನ್ನು ವರ್ಗಾಯಿಸಿ ಅನಂತರ ಕರಾಚಿಗೆ ಹೋಗುವುದು ಸಾಧ್ಯವಿರಲಿಲ್ಲ. ಯಾಕೆಂದರೆ ಆ ಹೊತ್ತಿಗೆ ಅವರು ಹೊಸ ಭಾರತೀಯ ಡೊಮಿನಿಯನ್‌ನ ಗವರ್ನರ್ ಜನರಲ್ ಆಗುತ್ತಿದ್ದರು. ಹೀಗಾಗಿ ಅವರು ಭಾರತದ ವೈಸ್‌ರಾಯ್ ಆಗಿ ಆಗಸ್ಟ್ 14ರಂದು ಪಾಕಿಸ್ತಾನಕ್ಕೆ ಹೋಗಿ ಅಧಿಕಾರವನ್ನು ವರ್ಗಾಯಿಸಿದರು. ಇದರ ಅರ್ಥ ಪಾಕಿಸ್ತಾನವು ಆಗಸ್ಟ್ 14ರಂದು ತನ್ನ ಸ್ವಾತಂತ್ರ್ಯವನ್ನು ಗಳಿಸಿತು ಎಂಬುದಲ್ಲ.

ದಿನಾಂಕ ಏಕೆ ಬದಲಾಯಿತು?

ಭಾರತದಂತೆಯೇ ಪಾಕಿಸ್ತಾನವೂ ತನ್ನ ಸ್ವಾತಂತ್ರ್ಯವನ್ನು ಪ್ರತಿ ವರ್ಷ ಆಗಸ್ಟ್ 15ರಂದು ಆಚರಿಸಬೇಕಿತ್ತು. ಆದರೆ 1948ರಲ್ಲಿ ಪಾಕಿಸ್ತಾನವು ತನ್ನ ಸ್ವಾತಂತ್ರ್ಯ ದಿನವನ್ನು ಆಗಸ್ಟ್ 14ಕ್ಕೆ ಮುಂದೂಡಿತು. ಮಾಧ್ಯಮಗಳ ವರದಿ ಪ್ರಕಾರ ಕೆಲವು ಪಾಕಿಸ್ತಾನ ನಾಯಕರು ಭಾರತಕ್ಕಿಂತ ಮೊದಲು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ಬಯಸಿದ್ದರು. 1948ರ ಜೂನ್ ಅಂತ್ಯದ ವೇಳೆಗೆ ಆಗಿನ ಪಾಕಿಸ್ತಾನದ ಪ್ರಧಾನಿ ಲಿಯಾಕತ್ ಅಲಿ ಖಾನ್ ನೇತೃತ್ವದಲ್ಲಿ ಮಂತ್ರಿಗಳ ಗುಂಪು ಇದಕ್ಕಾಗಿ ಸಭೆಯನ್ನು ಕರೆದಿತ್ತು. ಈ ಸಭೆಯಲ್ಲಿ ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಯನ್ನು ಒಂದು ದಿನದ ಟ್ಟಿಗೆ ಹಿಂದೂಡಲು ನಿರ್ಧರಿಸಲಾಯಿತು. ಹೀಗಾಗಿ ಪಾಕಿಸ್ತಾನದ ಸ್ವಾತಂತ್ರ್ಯ ದಿನವನ್ನು ಆಗಸ್ಟ್ 14ಕ್ಕೆ ನಡೆಸುವ ಪ್ರಸ್ತಾಪವನ್ನು ಜಿನ್ನಾ ಅನುಮೋದಿಸಿದರು ಎನ್ನಲಾಗುತ್ತದೆ.


ಎಲ್ಲರ ಒಪ್ಪಿಗೆ ಸಿಕ್ಕಿಲ್ಲ

ʼಜಿನ್ನಾ: ಮಿಥ್ ಅಂಡ್ ರಿಯಾಲಿಟಿʼಯ ಲೇಖಕ ಯಾಸರ್ ಲತೀಫ್ ಹಮ್ದಾನಿ ಅವರು 2013ರಲ್ಲಿ ಮಾಧ್ಯಮವೊಂದಕ್ಕೆ ಮಾತನಾಡಿ, ದಿನಾಂಕ ಬದಲಾವಣೆಯನ್ನು ಸಮರ್ಥಿಸಿಕೊಂಡಿದ್ದರು. ಪಾಕಿಸ್ತಾನವು ತನ್ನ ಗುರುತನ್ನು ತಾನೇ ಕೆತ್ತ ಬಹುದಾದ ಹೊಸ ರಾಷ್ಟ್ರವಾಗಿದೆ ಎಂದು ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿ: Independence Day 2024: ಬ್ರಿಟಿಷ್‌ ಕಾಲದ ಚಿನ್ನದ ನಾಣ್ಯದಿಂದ ಹಿಡಿದು ಸ್ವತಂತ್ರ ಭಾರತದ ರೂಪಾಯಿವರೆಗಿನ ಇತಿಹಾಸ ಕುತೂಹಲಕರ!

ಪಾಕಿಸ್ತಾನದ ನಾಯಕರು ಸ್ವಾತಂತ್ರ್ಯ ದಿನಾಚರಣೆಯನ್ನು ಆ. 14ರಂದು ಆಚರಿಸಲು ಏಕೆ ನಿರ್ಧರಿಸಿದ್ದಾರೆ ಎಂಬುದು ಸಂಪೂರ್ಣವಾಗಿ ವಿಶಿಷ್ಟ ಕತೆಯಾಗಿದೆ. ಅವರು ಬಹುಶಃ ಭಾರತಕ್ಕಿಂತ ವಿಭಿನ್ನ ದಿನದಲ್ಲಿ ಇದನ್ನು ಆಚರಿಸಬೇಕೆಂದು ಬಯಸಿದ್ದರು ಎಂದು ಪತ್ರಕರ್ತ ಖಾಜಿ ಹೇಳಿದ್ದರು. ಹೀಗಾಗಿ 1948ರಿಂದ ಪಾಕಿಸ್ತಾನವು ಆಗಸ್ಟ್ 14ರಂದು ತನ್ನ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ.

Continue Reading

ಉದ್ಯೋಗ

Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಆ. 16 ಕೊನೆಯ ದಿನ

Job Alert: ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್‌, ಅಸಿಸ್ಟಂಟ್‌ ಮ್ಯಾನೇಜರ್‌, ಡೆಪ್ಯುಟಿ ಮ್ಯಾನೇಜರ್‌, ಸೀನಿಯರ್‌ ಮ್ಯಾನೇಜರ್‌ ಮತ್ತು ಸೀನಿಯರ್‌ ಮೆಡಿಕಲ್‌ ಆಫೀಸರ್‌ ಸೇರಿ ಒಟ್ಟು 55 ಹುದ್ದೆಗಳಿವೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್‌ 16.

VISTARANEWS.COM


on

Job Alert
Koo

ಬೆಂಗಳೂರು: ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ ಲಿಮಿಟೆಡ್‌ (Tehri Hydro Development Corporation Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್‌, ಅಸಿಸ್ಟಂಟ್‌ ಮ್ಯಾನೇಜರ್‌, ಡೆಪ್ಯುಟಿ ಮ್ಯಾನೇಜರ್‌, ಸೀನಿಯರ್‌ ಮ್ಯಾನೇಜರ್‌ ಮತ್ತು ಸೀನಿಯರ್‌ ಮೆಡಿಕಲ್‌ ಆಫೀಸರ್‌ ಸೇರಿ ಒಟ್ಟು 55 ಹುದ್ದೆಗಳಿವೆ (THDC Recruitment 2024). ಪದವಿ, ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್‌ 16 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಮ್ಯಾನೇಜರ್ 25 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌, ಸ್ನಾತಕೋತ್ತರ ಪದವಿ
ಅಸಿಸ್ಟೆಂಟ್ ಮ್ಯಾನೇಜರ್ 19 ಹುದ್ದೆ, ವಿದ್ಯಾರ್ಹತೆ: ಪದವಿ, ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌
ಡೆಪ್ಯುಟಿ ಮ್ಯಾನೇಜರ್ 3 ಹುದ್ದೆ, ವಿದ್ಯಾರ್ಹತೆ: ಪದವಿ
ಸೀನಿಯರ್ ಮ್ಯಾನೇಜರ್ 3 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌
ಹಿರಿಯ ವೈದ್ಯಾಧಿಕಾರಿ 5 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್

ಗರಿಷ್ಠ ವಯೋಮಿತಿ

ಮ್ಯಾನೇಜರ್ 45 ವರ್ಷ
ಅಸಿಸ್ಟೆಂಟ್ ಮ್ಯಾನೇಜರ್ 32 ವರ್ಷ
ಡೆಪ್ಯುಟಿ ಮ್ಯಾನೇಜರ್ 40 ವರ್ಷ
ಸೀನಿಯರ್ ಮ್ಯಾನೇಜರ್ 48 ವರ್ಷ
ಹಿರಿಯ ವೈದ್ಯಾಧಿಕಾರಿ 34 ವರ್ಷ

ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ (ಸಾಮಾನ್ಯ / ಇಡಬ್ಲ್ಯುಎಸ್‌) ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಬಿಡಿ (ಎಸ್‌ಸಿ / ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಾಜಿ ಸೈನಿಕರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್‌ ಅಭ್ಯರ್ಥಿಗಳು ಅರ್ಜಿ ಸುಲ್ಕವಾಗಿ ಆನ್‌ಲೈನ್‌ನಲ್ಲಿ 600 ರೂ. ಪಾವತಿಸಬೇಕು. ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

THDC Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಇಮೇಲ್‌, ಮೊಬೈಲ್‌ ನಂಬರ್‌ ಬಳಸಿ ಹೆಸರು ನಮೂದಿಸಿ.
  • ಇಲ್ಲಿ ಕಂಡುಬರುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗೆ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ, ವೆಬ್‌ಸೈಟ್‌ ವಿಳಾಸ: thdc.co.inಕ್ಕೆ ಭೇಟಿ ನೀಡಿ ಅಥವಾ thdcrecruitment@thdc.co.in ಇಮೇಲ್‌ಗೆ ಸಂಪರ್ಕಿಸಿ.

ಇದನ್ನೂ ಓದಿ: Indian Bank Recruitment 2024: 300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಇಂಡಿಯನ್‌ ಬ್ಯಾಂಕ್‌; ಕರ್ನಾಟಕದಲ್ಲಿಯೂ ಇದೆ ನೇಮಕಾತಿ

Continue Reading

ದೇಶ

Yogi Adityanath: ಪಾಕ್‌ ಭಾರತದ ಜೊತೆ ವಿಲೀನವಾಗುತ್ತೆ…ಇಲ್ಲದಿದ್ದರೆ ಅಸ್ತಿತ್ವದಲ್ಲೇ ಇರಲ್ಲ- ಯೋಗಿ ಆದಿತ್ಯಾನಾಥ್‌

Yogi Adityanath: ಪಾಕಿಸ್ತಾನವು ಭಾರತದೊಂದಿಗೆ ವಿಲೀನಗೊಳ್ಳುತ್ತದೆ ಅಥವಾ ಅದು ಶಾಶ್ವತವಾಗಿ ಅಸ್ತಿತ್ವದಲ್ಲಿ ಇರುವುದಿಲ್ಲ ಎಂಬ ವಾರ್ಸಿ ಅರವಿಂದ್ ಅವರ 1947 ರ ಭವಿಷ್ಯ ನಿಜವಾಗಲಿದೆ ಎಂದು ಯೋಗಿ ಆದಿತ್ಯಾನಾಥ್‌ ಹೇಳಿದರು

VISTARANEWS.COM


on

yogi adityanath
Koo

ಲಖನೌ: ಕಾಂಗ್ರೆಸ್‌ ಪಕ್ಷದ ಅಧಿಕಾರ ದಾಹದಿಂದ ದೇಶ ವಿಭಜನೆಯೆಂಬ ಬೆಂಕಿಯ ಕೆನ್ನಾಲಿಗೆ ಇಡೀ ದೇಶವೇ ಹೊತ್ತಿ ಉರಿಯುವಂತಹ ಸ್ಥಿತಿ ನಿರ್ಮಾಣವಾಗಿತ್ತು ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ(Uttar Pradesh Chief Minister) ಯೋಗಿ ಆದಿತ್ಯಾನಾಥ್‌(Yogi Adityanath) ಎಂದು ವಾಗ್ದಾಳಿ ನಡೆಸಿದ್ದಾರೆ. ಲಖನೌದಲ್ಲಿ ದೇಶ ವಿಭಜನೆ ಕರಾಳ ದಿನ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಭಯೋತ್ಪಾದನೆಯ ರೂಪದಲ್ಲಿ ಇಂದಿಗೂ ಕಾಟ ಎದುರಿಸುತ್ತಿರುವ ಭಾರತಕ್ಕೆ ಕಾಂಗ್ರೆಸ್‌ ಪಕ್ಷ ಗಾಯವನ್ನುಂಟು ಮಾಡಿದೆ. ಹಿಂಸಾಚಾರ ಪೀಡಿತ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರು ಎದುರಿಸುತ್ತಿರುವ ದೌರ್ಜನ್ಯದ ಬಗ್ಗೆ ಪ್ರತಿಪಕ್ಷಗಳ ಮೌನದ ಬಗ್ಗೆಯೂ ಅವರು ಪ್ರಶ್ನೆ ಎತ್ತಿದರು.

1947 ರಲ್ಲಿ ಪಾಕಿಸ್ತಾನದಲ್ಲಿ ನಡೆದಿದ್ದು, ಈಗ ಬಾಂಗ್ಲಾದೇಶದಲ್ಲಿ ನಡೆಯುತ್ತಿದೆ. ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳು ದೌರ್ಜನ್ಯವನ್ನು ಎದುರಿಸುತ್ತಿದ್ದಾರೆ. ಆದರೆ ರಾಜಕೀಯ ಹಿತಾಸಕ್ತಿಗಳಿಂದಾಗಿ, ಭಾರತದಲ್ಲಿ ಕೆಲವರು ಮೌನ ವಹಿಸುತ್ತಿದ್ದಾರೆ. 1947ರಲ್ಲಿ ಪಾಕಿಸ್ತಾನದಲ್ಲಿ ಮಿಲಿಯನ್ ಹಿಂದೂಗಳು ಮತ್ತು ಸಿಖ್ಖರನ್ನು ಕಗ್ಗೊಲೆ ಮಾಡಲಾಯಿತು. ಇಂದಿಗೂ ನಮ್ಮ ಅಕ್ಕ-ತಂಗಿಯರ ಮೇಲೆ ಅದೇ ರೀತಿಯ ಅತ್ಯಾಚಾರ, ಲೂಟಿ, ದೌರ್ಜನ್ಯಗಳು ನಡೆಯುತ್ತಿವೆ. ಅದೇ ರೀತಿಯ ದುರಂತ ಇಂದಿಗೂ ತೆರೆದುಕೊಳ್ಳುತ್ತಿದೆ. ಬಾಂಗ್ಲಾದೇಶದ 15 ಮಿಲಿಯನ್ ಹಿಂದೂಗಳು ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹತಾಶವಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ಸಿಎಂ ಯೋಗಿ ಸೇರಿಸಿದರು.

ಪ್ರತಿಪಕ್ಷಗಳನ್ನು ಗುರಿಯಾಗಿಸಿ ಸಿಎಂ ಯೋಗಿ, ಭಾರತದ ‘ಜಾತ್ಯತೀತ ಜನರು’ ತಮ್ಮ ಮತ ಬ್ಯಾಂಕ್ ಕಳೆದುಕೊಳ್ಳುವ ಭಯದಿಂದ ಈ ವಿಷಯದ ಬಗ್ಗೆ ಮೌನವಾಗಿದ್ದಾರೆ. ಇಂದು ಭಾರತದಲ್ಲಿ ಜಾತ್ಯತೀತ ಜನರ ಬಾಯಿ ಮುಚ್ಚಿದೆ. ದುರ್ಬಲರ ಪರವಾಗಿ ಮಾತನಾಡಿದರೆ ತಮ್ಮ ವೋಟ್ ಬ್ಯಾಂಕ್ ಅನ್ನು ಕಳೆದುಕೊಳ್ಳುತ್ತಾರೆ ಎಂದು ಅವರು ಹೆದರುತ್ತಾರೆ, ಅವರು ತಮ್ಮ ಮತಬ್ಯಾಂಕ್ ಬಗ್ಗೆ ಕಾಳಜಿ ಹೊಂದಿದ್ದಾರೆ, ಆದರೆ ಅವರ ಮಾನವ ಸಂವೇದನೆ ಸತ್ತಿದೆ” ಪಾಕಿಸ್ತಾನವು ಭಾರತದೊಂದಿಗೆ ವಿಲೀನಗೊಳ್ಳುತ್ತದೆ ಅಥವಾ ಅದು ಶಾಶ್ವತವಾಗಿ ಅಸ್ತಿತ್ವದಲ್ಲಿ ಇರುವುದಿಲ್ಲ ಎಂಬ ವಾರ್ಸಿ ಅರವಿಂದ್ ಅವರ 1947 ರ ಭವಿಷ್ಯ ನಿಜವಾಗಲಿದೆ ಎಂದು ಅವರು ಹೇಳಿದರು.

1947ರಲ್ಲಿ ಭಾರತ ಮತ್ತು ಪಾಕಿಸ್ತಾನ ವಿಭಜನೆಯಾದಾಗ ಸುಮಾರು 15 ಲಕ್ಷ ಜನರು ತಮ್ಮ ಮನೆಗಳನ್ನು ಬಿಟ್ಟು ಪಲಾಯನ ಮಾಡಬೇಕಾಯಿತು. ವಿಶೇಷವಾಗಿ ಸಾಂಸ್ಕೃತಿಕ ವೈವಿಧ್ಯತೆಯಲ್ಲಿ ಸಮೃದ್ಧವಾಗಿರುವ ಪಂಜಾಬ್‌ನಲ್ಲಂತೂ ಪರಿಸ್ಥಿತಿ ಭೀಕರವಾಗಿತ್ತು. ವಿಭಜನೆಯಿಂದಾಗಿ ಅನೇಕ ಕಡೆ ಗಲಭೆಗಳೂ ನಡೆದವು. ಈ ಗಲಭೆಗಳಿಂದಾಗಿ ಲಕ್ಷಾಂತರ ಜನರು ಸ್ಥಳಾಂತರಗೊಳ್ಳಬೇಕಾಯಿತು. ಈ ಅವಧಿಯಲ್ಲಿ ಹಲವು ಮಂದಿ ಪ್ರಾಣವನ್ನೂ ಕಳೆದುಕೊಂಡಿದ್ದರು.

ಇದನ್ನೂ ಓದಿ: PM Narendra Modi: ಕೆಂಪುಕೋಟೆಯ ಕಾರ್ಯಕ್ರಮಕ್ಕೆ ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ

Continue Reading
Advertisement
IPL 2025
ಕ್ರೀಡೆ4 mins ago

IPL 2025: ಗೆಳೆಯ ಕೆ.ಎಲ್​ ರಾಹುಲ್​ರನ್ನು ಮತ್ತೆ ಆರ್​ಸಿಬಿಗೆ ಕರೆತರಲು ಮುಂದಾದ ಕೊಹ್ಲಿ

Vidhana Soudha
ಕರ್ನಾಟಕ6 mins ago

Vidhana Soudha: ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂದೆಯೇ ಬೈಕ್‌ಗೆ ಬೆಂಕಿ ಹಚ್ಚಿದ ಯುವಕ!

kolkata doctor murder case
ದೇಶ6 mins ago

Kolkata Doctor Murder Case: ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಆರೋಪಿ ಸಿಬಿಐ ವಶಕ್ಕೆ

Independence day 2024
ವಿದೇಶ11 mins ago

Independence Day 2024: ಒಂದೇ ದಿನ ಸ್ವಾತಂತ್ರ್ಯ ಪಡೆದಿದ್ದರೂ ಪಾಕಿಸ್ತಾನದಲ್ಲೇಕೆ ಭಾರತಕ್ಕಿಂತ ಮೊದಲು ಸ್ವಾತಂತ್ರ್ಯ ದಿನಾಚರಣೆ?

Sexual Abuse
Latest45 mins ago

Sexual Abuse: ಫೇಲ್ ಮಾಡುವುದಾಗಿ ಹೆದರಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕನಿಗೆ 11 ಸಾವಿರ ರೂ. ದಂಡ!

Actor Darshan
ಬೆಂಗಳೂರು58 mins ago

Actor Darshan: ನಟ ದರ್ಶನ್‌ಗೆ ಆ.28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Job Alert
ಉದ್ಯೋಗ58 mins ago

Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಆ. 16 ಕೊನೆಯ ದಿನ

yogi adityanath
ದೇಶ1 hour ago

Yogi Adityanath: ಪಾಕ್‌ ಭಾರತದ ಜೊತೆ ವಿಲೀನವಾಗುತ್ತೆ…ಇಲ್ಲದಿದ್ದರೆ ಅಸ್ತಿತ್ವದಲ್ಲೇ ಇರಲ್ಲ- ಯೋಗಿ ಆದಿತ್ಯಾನಾಥ್‌

Sexual Abuse
Latest1 hour ago

Sexual Abuse: 3 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ 9ನೇ ತರಗತಿ ವಿದ್ಯಾರ್ಥಿ!

Viral Video
Latest1 hour ago

Viral Video: ಹಳೆಯ ವಿದ್ಯಾರ್ಥಿಗಳನ್ನು ಸಾಲಾಗಿ ಕರೆಸಿ ಬೆತ್ತದಿಂದ ಹೊಡೆದ ಪ್ರಾಂಶುಪಾಲರು! ಅಪರೂಪದ ವಿಡಿಯೊ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ6 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ6 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ6 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌