Actor Darshan: ಪವಿತ್ರಾಗೌಡ ಚಪ್ಪಲಿ, ಬಿಯರ್ ಬಾಟಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆ! - Vistara News

ಸ್ಯಾಂಡಲ್ ವುಡ್

Actor Darshan: ಪವಿತ್ರಾಗೌಡ ಚಪ್ಪಲಿ, ಬಿಯರ್ ಬಾಟಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆ!

Actor Darshan: ಆರೋಪಿ ಪವಿತ್ರಾಗೌಡಗೆ (Pavithra Gowda) ಮತ್ತೊಂದು ಸಂಕಷ್ಟ ಎದುರಾಗಿದೆ. ನಟಿಯ ಚಪ್ಪಲಿಯಲ್ಲಿ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆಯಾಗಿದೆ ಎಂದು ವರದಿಯಾಗಿದೆ. ಬಿಯರ್ ಬಾಟಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆಯಾಗಿದೆ ಎನ್ನಲಾಗಿದೆ.

VISTARANEWS.COM


on

Actor Darshan case Renukaswamy blood found on Pavitra Gowda's slippers, beer bottle
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದೀಗ ಅತಿ ದೊಡ್ಡ ರಹಸ್ಯ ರಿವೀಲ್ ಆಗಿದೆ. ದರ್ಶನ್ ಬಟ್ಟೆಗಳ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆಗಳು ಸಿಕ್ಕಿದ್ದು, ಇದರಿಂದ ಪ್ರಕರಣದಲ್ಲಿ ದರ್ಶನ್‌ಗೆ (Actor Darshan) ಕಂಟಕವಾಗಲಿರುವ ಅತಿ ದೊಡ್ಡ ಸಾಕ್ಷ್ಯ ಪೊಲೀಸರಿಗೆ ಸಿಕ್ಕಂತಾಗಿದೆ. ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ಬಗೆದಷ್ಟು ಹತ್ತಾರು ಸಾಕ್ಷಿಗಳು ಹೊರಬರುತ್ತಿವೆ. ಆರೋಪಿ ಪವಿತ್ರಾಗೌಡಗೆ (Pavithra Gowda) ಮತ್ತೊಂದು ಸಂಕಷ್ಟ ಎದುರಾಗಿದೆ. ನಟಿಯ ಚಪ್ಪಲಿಯಲ್ಲಿ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆಯಾಗಿದೆ ಎಂದು ವರದಿಯಾಗಿದೆ. ಬಿಯರ್ ಬಾಟಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆಯಾಗಿದೆ ಎನ್ನಲಾಗಿದೆ.

ಪವಿತ್ರಾಗೌಡ ಮನೆಯಲ್ಲಿ ಕೊಲೆ ದಿನ ಆಕೆ ಧರಿಸಿದ್ದ ಚಪ್ಪಲಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಅದನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿತ್ತು. ಚಪ್ಪಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಇರುವುದು ಪತ್ತೆಯಾಗಿದೆ.
ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ ಬಳಿಕ ಆರೋಪಿಗಳು ಅಲ್ಲೇ ಪಾರ್ಟಿ ಮಾಡಿ ಕುಷ್ಕ ತಿಂದಿದ್ದರು. ಇದರಲ್ಲಿ ಒಂದು ಬಿಯರ್ ಬಾಟಲಿ ಮೇಲೆ ರಕ್ತದ ಕಲೆ ಪತ್ತೆಯಾಗಿದೆ. ಆರೋಪಿಯೊಬ್ಬನ ಫಿಂಗರ್ ಪ್ರಿಂಟ್ ಕೂಡ ಇದ್ದು, ತನಿಖೆ ನಡೆಯುತ್ತಿದೆ. ಸದ್ಯ ಬಿಯರ್ ಬಾಟಲಿಯನ್ನು ಪ್ರಮುಖ ಸಾಕ್ಷಿಯಾಗಿ ಮಾಡಿರುವ ಪೊಲೀಸರು, ಇನ್ನೂ ಹೆಚ್ಚಿನ ಸಾಕ್ಷಿಗಳ ಹುಡುಕಾಟದಲ್ಲಿದ್ದಾರೆ.

ಕೊಲೆ ಪ್ರಕರಣ ಸಂಬಂಧ ದರ್ಶನ್‌ ಆಪ್ತ ಬಳಗದ ಮತ್ತೊಬ್ಬ ನಟನ ಸಾಕ್ಷಿ ಹೇಳಿಕೆಯನ್ನು ನ್ಯಾಯಾಲಯದಲ್ಲಿ ಸಿಆರ್‌ಪಿಸಿ 164ರಡಿ ಪೊಲೀಸರು ದಾಖಲಿಸಿದ್ದಾರೆ. ಹತ್ಯೆಗೂ ಮುನ್ನ ದರ್ಶನ್‌ ಜೊತೆ ಭೋಜನ ಕೂಟದಲ್ಲಿದ್ದ ಕಾರಣಕ್ಕೆ ನಟ ಯಶಸ್‌ ಅವರನ್ನು ಸಾಕ್ಷಿಯಾಗಿ ಪರಿಗಣಿಸಿ ಪೊಲೀಸರು ಹೇಳಿಕೆ ಪಡೆದಿದ್ದಾರೆ.

ಇದನ್ನೂ ಓದಿ: Actor Darshan: ಹೋಮ-ಹವನ ಮಾಡ್ತಿರೋದು ದರ್ಶನ್‌ ಬಿಡುಗಡೆಗಾಗಿ ಅಲ್ಲ: ರಾಕ್‌ಲೈನ್ ವೆಂಕಟೇಶ್

ನಟ ದರ್ಶನ್ (Actor Darshan) ಬಿಡುಗಡೆಗಾಗಿ ಕಲಾವಿದರ ಸಂಘದಲ್ಲಿ ಹೋಮ-ಹವನ ಮಾಡಲಾಗುತ್ತಿದೆ ಎಂಬ ಸುದ್ದಿ ಹರಿದಾಡಿದ ಹಿನ್ನೆಲೆಯಲ್ಲಿ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಸ್ಪಷ್ಟನೆ ನೀಡಿದ್ದಾರೆ. ಆ. 13 ಮತ್ತು 14 ರಂದು ಚಿತ್ರೋದ್ಯಮದ ಒಳಿತಿಗಾಗಿ ಕಲಾವಿದರ ಸಂಘದಿಂದ ಹೋಮ-ಹವನ ಮಾಡಲಾಗುತ್ತಿದೆ ಎಂದು ತಿಳಿಸಿದ್ದರು. ಕಲಾವಿದರ ಸಂಘದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ನಂತರ ಸಾಕಷ್ಟು ಸಾವು, ನೋವು ಎಲ್ಲಾ ಸಂಭವಿಸಿದೆ. ಚಿತ್ರರಂಗದಲ್ಲೂ ಹಲವರನ್ನು ನಾವು ಕಳೆದುಕೊಂಡಿದ್ದೇವೆ. ಚಿತ್ರರಂಗದ ಉಳಿವಿಗಾಗಿ, ಏಳಿಗೆಗಾಗಿ ಪೂಜೆ ಮಾಡೋಣ ಅಂತ ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Album Song: ಅನಿವಾಸಿ ಕನ್ನಡಿಗರ ‘ಹನಿ ಹನಿ’ ಆಲ್ಬಂ ಸಾಂಗ್ ರಿಲೀಸ್‌ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್

Album Song: ಪಾಯಿಂಟ್ ಬ್ಲಾಂಕ್ ಕ್ರಿಯೇಷನ್ಸ್ ಜರ್ಮನಿ ಪ್ರಸ್ತುತ ಪಡಿಸಿರುವ, ರಾಘವ ರೆಡ್ಡಿ ನಿರ್ದೇಶನದ, ವಿಶಾಲ್ ನೈದೃವ್ ಸಂಗೀತ ನಿರ್ದೇಶನದ ಹಾಗೂ ರಕ್ಕಿ ಸುರೇಶ್ ಅಭಿನಯದ “ಹನಿ ಹನಿ” ಮ್ಯೂಸಿಕಲ್ ವಿಡಿಯೋ ಆಲ್ಬಂ ಇತ್ತೀಚೆಗೆ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಅನಾವರಣವಾಯಿತು. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Album Song
Koo

ಬೆಂಗಳೂರು: ಪಾಯಿಂಟ್ ಬ್ಲಾಂಕ್ ಕ್ರಿಯೇಷನ್ಸ್ ಜರ್ಮನಿ ಪ್ರಸ್ತುತ ಪಡಿಸಿರುವ, ರಾಘವ ರೆಡ್ಡಿ ನಿರ್ದೇಶನದ, ವಿಶಾಲ್ ನೈದೃವ್ ಸಂಗೀತ ನಿರ್ದೇಶನದ ಹಾಗೂ ರಕ್ಕಿ ಸುರೇಶ್ ಅಭಿನಯದ “ಹನಿ ಹನಿ” ಮ್ಯೂಸಿಕಲ್ ವಿಡಿಯೋ ಆಲ್ಬಂ (Album Song) ಇತ್ತೀಚೆಗೆ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಅನಾವರಣವಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ. ಸುರೇಶ್, ಗೌರವ ಕಾರ್ಯದರ್ಶಿ ಭಾ.ಮ. ಗಿರೀಶ್ ಹಾಗೂ ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ಹಾಡಿನಲ್ಲಿ ಅಭಿನಯಿಸಿರುವ ರಕ್ಕಿ ಸುರೇಶ್ ನಮ್ಮ ಕುಟುಂಬಕ್ಕೆ ಆಪ್ತರು. ಈ ಹಾಡಿನಲ್ಲಿ ರಕ್ಕಿ ಅವರು ಚೆನ್ನಾಗಿ ಅಭಿನಯಿಸಿದ್ದಾರೆ. ಹಾಡು ಚೆನ್ನಾಗಿದೆ. ಯಶಸ್ವಿಯಾಗಲಿ ಎಂದು ಅಶ್ವಿನಿ ಪುನೀತ್ ರಾಜಕುಮಾರ್ ಹಾರೈಸಿದರು.

ನಾನು ಹುಟ್ಟಿದ್ದು ಇಲ್ಲಿ. ಆದರೆ ಬೆಳೆದದ್ದು ಜರ್ಮನ್‌ನಲ್ಲಿ. ಮೈಸೂರಿನ ಬಳಿಯ ಸಾಲಿಗ್ರಾಮ ನಮ್ಮ ಊರು. ಡಾ. ರಾಜಕುಮಾರ್ ಅವರ “ಹೊಸಬೆಳಕು” ಚಿತ್ರ ನಿರ್ಮಿಸಿದ್ದ ರಾಜಶೇಖರ್ ಅವರು ನನ್ನ ತಾತಾ ಎಂದು ತಮ್ಮ ಹಾಗೂ ಕುಟುಂಬದ ಬಗ್ಗೆ ಮಾಹಿತಿ ನೀಡಿದ ನಟ ರಕ್ಕಿ ಸುರೇಶ್, ಜರ್ಮನ್‌ನಲ್ಲಿ ಎಂಜಿನಿಯರಿಂಗ್ ಹಾಗೂ ಮಾಸ್ಟರ್ಸ್ ಮುಗಿಸಿ ಐಟಿ ಉದ್ಯೋಗದಲ್ಲಿದ್ದೇನೆ. ನಟನೆ ನನ್ನ ಹವ್ಯಾಸ. ಅದರ ಮೊದಲ ಹೆಜ್ಜೆಯಾಗಿ “ಹನಿ ಹನಿ” ಆಲ್ಬಂ ಸಾಂಗ್ ನಲ್ಲಿ ಅಭಿನಯಿಸಿದ್ದೇನೆ‌. ಹಾಡು ಬಿಡುಗಡೆ ಮಾಡಿಕೊಟ್ಟ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಹಾಗೂ ಗಣ್ಯರಿಗೆ ಧನ್ಯವಾದ ಎಂದು ತಿಳಿಸಿದರು.

ನಾನು ಐದು ವರ್ಷಗಳಿಂದ ಜರ್ಮನ್‌ನಲ್ಲಿ ವಾಸಿಸುತ್ತಿದ್ದೇನೆ. ಅನಿವಾಸಿ ಕನ್ನಡಿಗರು ಸೇರಿ ಈ ಹಾಡನ್ನು ನಿರ್ಮಿಸಿದ್ದೇವೆ. ನಾನೇ ನಿರ್ದೇಶನವನ್ನು ಮಾಡಿದ್ದೇನೆ. ಭಾರತದ ರೂಪಾಯಿ ಪ್ರಕಾರ ಹದಿನೈದು ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಹಾಡು ಯೂರೋಪ್‌ನಲ್ಲಿ ಚಿತ್ರೀಕರಣಗೊಂಡಿದೆ. ರಕ್ಕಿ ಸುರೇಶ್, ಅನಾಮಿಕ ಸ್ಟಾರ್ಕ್ ದತ್ತ‌ ಹಾಗೂ ಅಮೃತ ಮಂಡಲ್ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ವಿಶಾಲ್ ನೈದೃವ್ ಸಂಗೀತ ನೀಡುವುದರ ಜತೆಗೆ ಹಾಡಿದ್ದಾರೆ. ಆಲ್ಬರ್ಟ್ ಜೊಸ್ ಹಾಗೂ ತೇಜಸ್ ಅಹೋಬಲ ಅವರ ಛಾಯಾಗ್ರಹಣ ಈ ಹಾಡಿಗಿದೆ. ನಮ್ಮ ಪಾಯಿಂಟ್ ಬ್ಲಾಂಕ್ ಕ್ರಿಯೇಷನ್ಸ್ ಯೂಟ್ಯೂಬ್ ಚಾನಲ್‌ನಲ್ಲಿ ಈ ಹಾಡನ್ನು ನೋಡಬಹುದು ಎಂದರು ನಿರ್ದೇಶಕ ರಾಘವ ರೆಡ್ಡಿ.

ನಾನು 23 ವರ್ಷಗಳಿಂದ ಕೀ ಬೋರ್ಡ್ ಪ್ಲೇಯರ್ ಆಗಿ ಕಾರ್ಯ ನಿರ್ವಹಿಸಿದ್ದೇನೆ. ಖ್ಯಾತ ಸಂಗೀತ ನಿರ್ದೇಶಕರ ಜತೆಗೆ ನೂರಕ್ಕೂ ಅಧಿಕ ಚಲನಚಿತ್ರಗಳಲ್ಲಿ ಕೆಲಸ ಮಾಡಿದ್ದೇನೆ. “ಹನಿ ಹನಿ” ಆಲ್ಬಂ ಸಾಂಗ್‌ಗೂ ಸಂಗೀತ ನೀಡಿದ್ದೇನೆ ಎಂದು ಸಂಗೀತ ನಿರ್ದೇಶಕ ವಿಶಾಲ್ ನೈದೃವ್ ಹೇಳಿದರು.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ ತುಸು ಇಳಿಕೆ; ಇಂದಿನ ಬೆಲೆ ಚೆಕ್‌ ಮಾಡಿ

ಈ ಸಂದರ್ಭದಲ್ಲಿ ನಿರ್ದೇಶಕ ವೆಂಕಟ್ ಹಾಗೂ ಗಿರೀಶ್ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಸ್ಯಾಂಡಲ್ ವುಡ್

Kannada New Movie: `ಕ್ರೆಡಿಟ್ ಕುಮಾರ’ನಾಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಪತ್ರಕರ್ತ ಹರೀಶ್!

Kannada New Movie: ಕಂಠೀರವ ಸ್ಟುಡಿಯೋದಲ್ಲಿ ನಡೆದ ಅದ್ದೂರಿ ಮುಹೂರ್ತ ಸಮಾರಂಭದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಿರ್ದೇಶಕ ಎಸ್ ಮಹೇಂದರ್, ನಿರ್ಮಾಪಕ ಉದಯ್ ಮೆಹ್ತಾ, ಬಾಂಡ್ ರವಿ ಸ್ಟಾರ್ ಪ್ರಮೋದ್ ಹಾಗೂ ನಿರ್ಮಾಪಕ ನರಸಿಂಹ, ಸೆಲೆಬ್ರಿಟಿ ಜಿಮ್ ಟ್ರೈನರ್ ಪಾನಿಪುರಿ ಕಿಟ್ಟಿ, ಮಾಸ್ತಿ, ಅಣಜಿ ನಾಗರಾಜ್ ಸೇರಿಂದೆ ಅನೇಕ ಗಣ್ಯರು ಹಾಜರಿದ್ದು ಶುಭಹಾರೈಸಿದರು.

VISTARANEWS.COM


on

Kannada New Movie credit kumar journalsit harish in entry
Koo

ಬೆಂಗಳೂರು: ‘ಕ್ರೆಡಿಟ್ ಕುಮಾರ’, ಸ್ಯಾಂಡಲ್‌ವುಡ್‌ನಲ್ಲಿ ಸೆಟ್ಟೇರಿರುವ ಹೊಸ ಸಿನಿಮಾ. ‘ಬಾಂಡ್ ರವಿ’ (Kannada New Movie) ಖ್ಯಾತಿಯ ನಿರ್ದೇಶಕ ಪ್ರಜ್ವಲ್ ಸಾರಥ್ಯದಲ್ಲಿ ಮೂಡಿಬರುತ್ತಿರುವ 2ನೇ ಸಿನಿಮಾ. ಈ ಸಿನಿಮಾ ಮೂಲಕ ನಾಯಕನಾಗಿ ಹರೀಶ್ ಸೀನಪ್ಪ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. 10ವರ್ಷಕ್ಕೂ ಅಧಿಕ ಸಮಯ ಸಿನಿಮಾ ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದ ಹರೀಶ್ ಇದೀಗ ಬೆಳ್ಳಿ ಪರದೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ. ಮೊದಲ ಹೆಜ್ಜೆಯಾಗಿ ‘ಕ್ರೆಡಿಟ್ ಕುಮಾರ’ ಚಿತ್ರಕ್ಕೆ ಮುಹೂರ್ತ ಮಾಡಿಕೊಳ್ಳುವ ಮೂಲಕ ಅಧಿಕೃತ ಚಾಲನೆ ಸಿಕ್ಕಿದೆ. ಕಂಠೀರವ ಸ್ಟುಡಿಯೋದಲ್ಲಿ ನಡೆದ ಅದ್ದೂರಿ ಮುಹೂರ್ತ ಸಮಾರಂಭದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಿರ್ದೇಶಕ ಎಸ್ ಮಹೇಂದರ್, ನಿರ್ಮಾಪಕ ಉದಯ್ ಮೆಹ್ತಾ, ಬಾಂಡ್ ರವಿ ಸ್ಟಾರ್ ಪ್ರಮೋದ್ ಹಾಗೂ ನಿರ್ಮಾಪಕ ನರಸಿಂಹ, ಸೆಲೆಬ್ರಿಟಿ ಜಿಮ್ ಟ್ರೈನರ್ ಪಾನಿಪುರಿ ಕಿಟ್ಟಿ, ಮಾಸ್ತಿ, ಅಣಜಿ ನಾಗರಾಜ್ ಸೇರಿಂದೆ ಅನೇಕ ಗಣ್ಯರು ಹಾಜರಿದ್ದು ಶುಭಹಾರೈಸಿದರು.

ಸಿನಿಮಾಗೆ ಕ್ಲ್ಯಾಪ್ ಮಾಡಿ ಮಾತನಾಡಿದ ಧ್ರುವ ಸರ್ಜಾ, ‘ಹರೀಶ್ ಅವರಿಗೆ ಒಳ್ಳೆದಾಗಬೇಕು, ತುಂಬಾ ಕಷ್ಟಪಟ್ಟಿದ್ದಾರೆ’ ಎಂದು ಹೇಳಿದರು. ಎಸ್, ಮಹೆಂದರ್ ಮಾತನಾಡಿ, ‘ಪಾಸಿಟಿವ್ ವೈಬ್ ಇದೆ. ಟೈಟಲ್ ತುಂಬಾ ಚೆನ್ನಾಗಿದೆ. ನಿರ್ದೇಶಕ ಪ್ರಜ್ವಲ್ ನಮ್ಮ ಹುಡುಗ. ನನ್ನ ಜೊತೆ ಕೆಲಸ ಮಾಡಿದ ಹುಡುಗ. ಸೆನ್ಸಿಬಲ್ ಇದಾರೆ. ಹರೀಶ್ ಕೂಡ ತುಂಬಾ ಸಮಯದಿಂದ ನೋಡಿದ ಹುಡುಗ. ನಿರ್ಮಾಪಕರಿಗೆ ನಾನು ಭರವಸೆ ನೀಡುತ್ತೇನೆ ಖಂಡಿತವಾಗಿಯೂ ಈ ಸಿನಿಮಾ ಚೆನ್ನಾಗಿ ಆಗುತ್ತೆ’ ಎಂದು ಹೇಳಿದರು.

ಇದನ್ನೂ ಓದಿ: Kannada New Movie: ತೆರೆಗೆ ಬರಲು ಸಿದ್ಧವಾಗಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ʼಸ್ವಪ್ನ ಮಂಟಪʼ ಚಿತ್ರ

ನಟ ಪ್ರಮೋದ್ ಮಾತನಾಡಿ, ‘ನಿರ್ದೇಶಕ ಪ್ರಜ್ವಲ್ ಉತ್ತಮ ಕೆಲಸಗಾರ ಹಾಗೂ ಹರೀಶ್ ನನ್ನ ಗೆಳೆಯ ಒಳ್ಳೆದಾಗಲಿ’ ಎಂದರು.

ಕ್ರೆಡಿಟ್ ಕುಮಾರ ಒನ್ ಲೈನ್ ಸ್ಟೋರಿ ಹೇಳುವುದಾದರೆ ಸಾಲ ಮಾಡಿಕೊಂಡು ಒದ್ದಾಡುವ ಒಬ್ಬ ಕ್ಯಾಬ್ ಡ್ರೈವರ್ ನ ಕಥೆಯಾಗಿದೆ. ಕ್ರೆಡಿಟ್ ಕುಮಾರನಾಗಿ ಹರೀಸ್ ಸೀನಪ್ಪ ಕಾಣಿಸಿಕೊಳ್ಳುತ್ತಿದ್ದಾರೆ. ನಾಯಕಿ ಪಾತ್ರದಲ್ಲಿ ಪಾಯಲ್ ಚಂಗಪ್ಪ ಮಿಂಚುತ್ತಿದ್ದಾರೆ. ಕಿರು ಚಿತ್ರಗಳ ಮೂಲಕ ಖ್ಯಾತಿ ಗಳಿಸಿರುವ ಪಾಯಲ್ ಇದೀಗ ಮೊದಲ ಬಾರಿಗೆ ನಾಯಕಿಯಾಗಿ ಮಿಂಚಲು ಸಜ್ಜಾಗಿದ್ದಾರೆ.

ಕ್ರೆಡಿಟ್ ಕುಮಾರ ಸಿನಿಮಾ ಮೂಲಕ ನಿರ್ಮಾಪಕರಾಗಿ ವಾಗೀಶ್ ಮುತ್ತಿಗೆ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ನಿರ್ಮಾಪಕ ವಾಗೀಶ್, ‘2 ತಿಂಗಳ ಹಿಂದೆ ಅಷ್ಟೆ ಬ್ಯಾನರ್ ರಿಜಿಸ್ಟರ್ ಮಾಡಿಸಿದ್ದೆ. ಉತ್ತಮ ಸಿನಿಮಗಾಗಿ ಕಾಯುತ್ತಿದ್ದೆ. ಕ್ರೆಡಿಟ್ ಕುಮಾರ ಸಿನಿಮಾ ಸಿಕ್ಕಿದೆ. ಉತ್ತಮ ಕಂಟೆಂಟ್ ಇರುವ ಸಿನಿಮಾ. ಗೆದ್ದೆ ಗೆಲ್ಲುತ್ತೆ ಎನ್ನುವ ವಿಶ್ವಾಸವಿದೆ’ ಎಂದರು‌.

ನಾಯಕಿ ಪಾಯಲ್ ಮಾತನಾಡಿ, ‘ಭೂಮಿ ಎನ್ನುವ ಪಾತ್ರದಲ್ಲಿ ಮಾಡುತ್ತಿದ್ದೇನೆ. ಶಾರ್ಟ್ ಸಿನಿಮಾ ಮಾಡಿದ್ದೇನೆ. ತುಂಬಾ ಪ್ರೀತಿ ಕೊಟ್ಟಿದ್ದೀರಾ. ಇವಾಗ ಸಿನಿಮಾ ಮಾಡುತ್ತಿದ್ದೇನೆ. ಎಲ್ಲರ ಪ್ರೀತಿ ಇರಲಿ. ಮಿಡ್ಲ್ ಕ್ಲಾಸ್ ಹುಡುಗಿ ಬ್ಯೂಟಿಶಿಯನ್ ಪಾತ್ರದಲ್ಲಿ ನಟಿಸುತ್ತಿದ್ದೇನೆ ಎಂದರು.

ನಿರ್ದೇಸಾಕ ಪ್ರಜ್ವಲ್ ಮಾತನಾಡಿ, ‘ಬಾಂಡ್ ರವಿ ಅಂತ ಸಿನಿಮಾ ಮಾಡಿದ್ದೆ. ಆ ಸಿನಿಮಾಗೆ ಸಿಕ್ಕ ಪ್ರಶಂಸೆಯಿಂದ ಈಗ ಮತ್ತೊಂದು ಸಿನಿಮಾ ಮಾಡುವಂತೆ ಆಗಿದೆ. ಸಾಲ ಮಾಡಿಕೊಂಡು ಬದುಕುವ ಒಬ್ಬ ಯುವಕನ ಕಥೆ. ಹರೀಶ್ ಅವರಿಗಂತನೇ ಈ ಕಥೆ ಮಾಡಿದ್ದು’ ಎಂದರು.

ನಾಯಕ ಹರೀಶ್ ಮಾತನಾಡಿ, ‘ಇಡೀ ಸಿನಿಮಾರಂಗ ಸಹಾಯ ಮಾಡಿದೆ. ಇದು ಮೊದಲ ಹೆಜ್ಜೆ. 2009ರಲ್ಲಿ ಮೊದಲು ಕೇಬಲ್ ಚಾನಲ್ ನಲ್ಲಿ ಕೆಲಸ ಮಾಡುವಾಗ ಬಣ್ಣ ಹಚ್ಚಿದ್ದು ಅವತ್ತು ಆರ್ಟಿಸ್ಟ್ ಆಗಬೇಕು ಅಂತ ಅಂದುಕೊಂಡಿದ್ದೆ. ಈಗ ಆ ಕನಸು ನನಸಾಗಿದೆ. ಈ ಅನುಭವ ನನಗೆ ಬೇಕಿತ್ತು, ಈ ಅನುಭವ ಇಲ್ಲ ಅಂದಿದ್ರೆ ನನ್ನ ಜೀವನ ಅಪೂರ್ಣ ಆಗುತ್ತಿತ್ತು’ ಎಂದರು.

ಇನ್ನು ಈ ಸಿನಿಮಾಗೆ ಧರ್ಮ ವಿಶ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಮೂರು ಹಾಡುಗಳು ಇರಲಿದ್ದು ವಿ ನಾಗೇಂದ್ರ ಪ್ರಸಾದ್, ಪ್ರಮೋದ್ ಮರುವಂತೆ ಹಾಗೂ ಭರ್ಜರಿ ಚೇತನ್ ಸಾಹಿತ್ಯ ಇರಲಿದೆ ಎಂದು ಧರ್ಮ ವಿಶ್ ಹೇಳಿದರು. ಸದ್ಯ ಮುಹೂರ್ತ ಮಾಡಿಕೊಂಡಿರುವ ಸಿನಿಮಾ ಚಿತ್ರೀಕರಣಕ್ಕೆ ಹೊರಡಲಿದೆ.

Continue Reading

ಸ್ಯಾಂಡಲ್ ವುಡ್

Golden Star Ganesh: ಗಣೇಶ್​​ಗೆ ಶುರುವಾಗಿದೆ ಗೋಲ್ಡನ್ ಟೈಮ್:  ಫ್ಯಾನ್ಸ್ ಶೋ ಹೌಸ್ ಫುಲ್!

Golden Star Ganesh: ದ್ವಾಪರ ಹಾಡಿನಿಂದಲೇ ಕುತೂಹಲ ಹುಟ್ಟಿಸಿದ ಕೃಷ್ಣಂ ಪ್ರಣಯ ಸಖಿ ಸಿನಿಮಾ, ನಾಳೆ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಫಸ್ಟ್ ಡೇ ಫಸ್ಟ್ ಶೋ ಸಿನಿಮಾ ನೋಡುವ ಕಾತುರದಲ್ಲಿ ಸಿನಿರಸಿಕರು ಇದ್ದಾರೆ.

VISTARANEWS.COM


on

Golden Star Ganesh krishnam pranaya sakhi Fans show House Full
Koo

ಬೆಂಗಳೂರು: ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಿಸಿರುವ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಸಿನಿಮಾ ನಾಳೆ (ಆಗಸ್ಟ್‌ 15) ಅದ್ಧೂರಿಯಾಗಿ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.   “ಕಷ್ಣಂ ಪ್ರಣಯ ಸಖಿ” ಚಿತ್ರದ “ಮೈ ಮ್ಯಾರೇಜ್ ಇಸ್ ಫಿಕ್ಸ್ಡ್”, “ಚಿನ್ನಮ್ಮ” ಹಾಗೂ “ದ್ವಾಪರ ದಾಟುತ” ಮೂರು ಹಾಡುಗಳುಗಳು ಬಿಡುಗಡೆಯಾಗಿ ಸಖತ್‌ ಕ್ರೇಜ್‌ ಹುಟ್ಟು ಹಾಕಿದೆ. ಇದೀಗ ಬಿಡುಗಡೆಯ ಒಂದು ದಿನ ಮುಂಚಿತವಾಗಿಯೇ ಫ್ಯಾನ್ಸ್ ಪೇಯ್ಡ್ ಪ್ರೀಮಿಯರ್ ಶೋ ಹೌಸ್ ಫುಲ್ ಆಗಿದೆ. ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆಯಲು ಮುಂದಾಗಿದ್ದಾರೆ ಗಣೇಶ್‌.

20006 ರಲ್ಲಿ ಮುಂಗಾರು ಮಳೆ ಸಾಂಗ್ಸ್ ಸೂಪರ್ ಹಿಟ್ ಕಂಡಿದ್ದು, ಇಂದು ಕೃಷ್ಣಂ ಪ್ರಣಯ ಸಖಿ ಸೂಪರ್‌ ಡೂಪರ್‌ ಆಗುವುದರಲ್ಲಿ ಅನುಮಾನವೇ ಇಲ್ಲ ಎನ್ನುತ್ತಿದ್ದಾರೆ ಫ್ಯಾನ್ಸ್.‌ ದ್ವಾಪರ ಹಾಡಿನಿಂದಲೇ ಕುತೂಹಲ ಹುಟ್ಟಿಸಿದ ಕೃಷ್ಣಂ ಪ್ರಣಯ ಸಖಿ ಸಿನಿಮಾ, ನಾಳೆ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಫಸ್ಟ್ ಡೇ ಫಸ್ಟ್ ಶೋ ಸಿನಿಮಾ ನೋಡುವ ಕಾತುರದಲ್ಲಿ ಸಿನಿರಸಿಕರು ಇದ್ದಾರೆ. ಒಂದು ದಿನ ಮುಂಚಿತವಾಗಿಯೇ ಫ್ಯಾನ್ಸ್ ಶೋ ಹೌಸ್ ಫುಲ್ ಆಗಿದೆ. ರಾಜ್ಯಾದ್ಯಂತ 300ಕ್ಕೂ ಹೆಚ್ಚು ಪ್ರದರ್ಶನಕ್ಕೆ ಚಿತ್ರತಂಡ ಪ್ಲ್ಯಾನ್‌ ಮಾಡಿದೆ.

ಇದನ್ನೂ ಓದಿ: Golden Star Ganesh: ಸೋಷಿಯಲ್‌ ಮೀಡಿಯಾದಲ್ಲಿ ಹೊಸ ದಾಖಲೆ ಬರೆದ `ಕೃಷ್ಣಂ ಪ್ರಣಯ ಸಖಿ’ ಹಾಡುಗಳು!

ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅದರಲ್ಲೂ ಇತ್ತೀಚೆಗೆ ಬಿಡುಗಡೆಯಾದ ಡಾ.ವಿ.ನಾಗೇಂದ್ರ ಪ್ರಸಾದ್ ಬರೆದು, “ಸರಿಗಮಪ” ಖ್ಯಾತಿಯ ಜಸಕರಣ್ ಸಿಂಗ್ ಹಾಡಿರುವ “ದ್ವಾಪರ ದಾಟುತ” ಹಾಡು ಟ್ವಿಟರ್, ಯೂಟ್ಯೂಬ್ (Golden Star Ganesh) ಹಾಗೂ ಇನ್ಸ್ಟಾ ರೀಲ್ಸ್ ಗಳಲ್ಲಿ ಭಾರಿ ಟ್ರೆಂಡ್ ಹುಟ್ಟುಹಾಕಿದೆ.

ಯೂಟ್ಯೂಬ್‌ನಲ್ಲಿ ಎಂಟು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿರುವ ಈ ಹಾಡು ಇನ್ಸ್ಟಾ ರೀಲ್ಸ್ ನಲ್ಲಿ 2 ನೇ ಸ್ಥಾನದಲ್ಲಿದೆ. ಟ್ವಿಟರ್ ನಲ್ಲೂ ಹೊಸ ದಾಖಲೆ ಬರೆದಿದೆ. ಟ್ವಿಟರ್ ಹಾಗೂ ಇನ್ಸ್ಟಾ ರೀಲ್ಸ್ ನಲ್ಲಿ ಈ ರೀತಿಯ ಜನಪ್ರಿಯತೆ ಸಿಗುತ್ತಿರುವ ಕನ್ನಡದ ಮೊದಲ ಹಾಡು ಇದಾಗಿದೆ ಎಂದು ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದ್ದಾರೆ. ಹಾಡು ಬರೆದಿರುವ ನಾಗೇಂದ್ರ ಪ್ರಸಾದ್ ಸಹ ಈವರೆಗೂ ನಾನು ಬರೆದಿರುವ ಹಾಡುಗಳಲ್ಲಿ ಇದು ನನ್ನ ಮೆಚ್ಚುಗೆಯ ಹಾಡು ಎನ್ನುತ್ತಾರೆ.

“ಮುಂಗಾರು ಮಳೆ” ಯ ನಂತರ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಹಾಡುಗಳಿಗೆ ಸಿಗುತ್ತಿರುವ ಜನಪ್ರಿಯತೆಗೆ ಮನ ತುಂಬಿ ಬಂದಿದೆ ಎಂದು ನಾಯಕ ಗಣೇಶ್ ತಿಳಿಸಿದ್ದಾರೆ.

ಈಗಾಗಲೇ ಬಿಡುಗಡೆಯಾಗಿರುವ ಮೂರು ಹಾಡುಗಳು‌ ಯಶಸ್ವಿಯಾಗಿರುವುದಕ್ಕೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಆಡಿಯೋ ಹಕ್ಕು ಪಡಿದಿರುವ ಆನಂದ್ ಆಡಿಯೋದವರು ಆನಂದ ಪಟ್ಟಿದ್ದಾರೆ‌. ಈ ಸಂಭ್ರಮದ ಸಮಯದಲ್ಲಿ ನಿರ್ಮಾಪಕರು ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ. ಆಗಸ್ಟ್ 15 ರಂದು ಬಿಡುಗಡೆಯಾಗುತ್ತಿರುವ ಈ ಚಿತ್ರವನ್ನು ವೀಕ್ಷಿಸಲು ಗೋಲ್ಡನ್ ಸ್ಟಾರ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

Continue Reading

ಸಿನಿಮಾ

Independence day 2024: ವಿಜಯ್ ಪ್ರಕಾಶ್‌ ಹೊಸ ಸಾಂಗ್‌ ಔಟ್‌; ಭಾರತೀಯ ಸೇನೆಗೆ ಹಾಡನ್ನು ಅರ್ಪಿಸಿದ ಹೊಸಬರ ತಂಡ!

Independence day 2024: ವಿಜಯ್ ಪ್ರಕಾಶ್ ಅವರ ಸುಂದರ ಗಾಯನದೊಂದಿಗೆ ಭರತ್ ಕುಮಾರ್ ಜನಾರ್ದನ ಅವರು ಬರೆದು ನಿರ್ದೇಶಿಸಿರುವ ಈ ಹಾಡನ್ನು ಸತ್ಯ ರಾಧಾಕಿರ್ಷ್ಣ ಸಂಗೀತ ಸಂಯೋಜಿಸಿದ್ದಾರೆ.

VISTARANEWS.COM


on

Independence day 2024 Nanna Deshavu Kannada Video Song Vijay Prakash
Koo

ಬೆಂಗಳೂರು: ಆಗಸ್ಟ್ 15 ರಂದು ದೇಶಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆ (Independence day 2024) ನಡೆಯಲಿದೆ. ಈ ದಿನ ಇಡೀ ದೇಶ ತ್ರಿವರ್ಣ ಧ್ವಜಗಳಿಂದ ರಾರಾಜಿಸುತ್ತಿರುತ್ತದೆ.  ಸ್ವಾತಂತ್ರ್ಯದಿನದ ಸಂಭ್ರಮ ಎಲ್ಲಡೆ ಮನೆ ಮಾಡಿದೆ.  ಇನ್ನು ಆಗಸ್ಟ್​ 15ರಂದು ಕೆಂಪು ಕೋಟೆ ಜನರಿಂದ ತುಂಬಿ ತುಳುಕುತ್ತಿರುತ್ತದೆ.  ಇದೀಗ ಹೊಸ ಚಿತ್ರ ತಯಾರಕರ ತಂಡವು ‘ನನ್ನ ದೇಶವು’ (Nanna Deshavu) ಎಂಬ ಕನ್ನಡ ದೇಶಭಕ್ತಿಯ ಗೀತೆಯನ್ನು ಬಿಡುಗಡೆ ಮಾಡಿದೆ. ಈ ಹಾಡಿನಲ್ಲಿ ಭಾರತದ ವೈವಿಧ್ಯಮಯ ಸಂಸ್ಕೃತಿ, ಭವ್ಯವಾದ ಭೂದೃಶ್ಯಗಳು, ಇತಿಹಾಸ ಮತ್ತು ಭಾರತದ ಹಿರಿಮೆಯನ್ನು ಎತ್ತಿ ತೋರಿಸುವಂತಿದೆ. ‘ನನ್ನ ದೇಶವು’ ಹಾಡು ಕನ್ನಡ ಚಿತ್ರರಂಗದ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಧ್ವನಿಯಲ್ಲಿ ಮೂಡಿ ಬಂದಿದೆ.

Jungrus Studios ಯೂಟ್ಯೂಬ್ ಚಾನೆಲ್‌ನಲ್ಲಿ ಹಾಡನ್ನು ಬಿಡುಗಡೆ ಮಾಡಲಾಗಿದೆ. ವಿಜಯ್ ಪ್ರಕಾಶ್ ಅವರ ಸುಂದರ ಗಾಯನದೊಂದಿಗೆ ಭರತ್ ಕುಮಾರ್ ಜನಾರ್ದನ ಅವರು ಬರೆದು ನಿರ್ದೇಶಿಸಿರುವ ಈ ಹಾಡನ್ನು ಸತ್ಯ ರಾಧಾಕಿರ್ಷ್ಣ ಸಂಗೀತ ಸಂಯೋಜಿಸಿದ್ದಾರೆ. ಲೇಹ್ ಲಡಕ್, ಕಾಶ್ಮೀರ, ಹಂಪಿ, ಸಾಗರ, ಶಿವಮೊಗ್ಗ, ಬೆಂಗಳೂರು, ಶಿವನಸಮುದ್ರ ಮುಂತಾದ ಭಾರತದ ವಿವಿಧ ಸ್ಥಳಗಳಲ್ಲಿ ಹಾಡನ್ನು ಚಿತ್ರೀಕರಿಸಲಾಗಿದೆ. ದೇಶಕ್ಕಾಗಿ ಅವಿರತವಾಗಿ ದುಡಿಯುವ ಮತ್ತು ತ್ಯಾಗ ಮಾಡುವ ಭಾರತೀಯ ಸೇನೆಗೆ ಈ ಹಾಡನ್ನು ಅರ್ಪಿಸಲಾಗಿದೆ.

ಇದನ್ನೂ ಓದಿ: Independence Day 2024: ಬ್ರಿಟಿಷ್‌ ಕಾಲದ ಚಿನ್ನದ ನಾಣ್ಯದಿಂದ ಹಿಡಿದು ಸ್ವತಂತ್ರ ಭಾರತದ ರೂಪಾಯಿವರೆಗಿನ ಇತಿಹಾಸ ಕುತೂಹಲಕರ!

ಭಾರತದಾದ್ಯಂತ ಈ ಬಾರಿ 78ನೇ ಸ್ವಾತಂತ್ರ್ಯ ದಿನವನ್ನು (Independence day 2024) ಆಚರಿಸಲು ಸಿದ್ಧತೆಗಳು ಜೋರಾಗಿವೆ. ಈ ದಿನ ಎಲ್ಲರ ಚಿತ್ತ ಕೆಂಪುಕೋಟೆಯ (delhi Red Fort) ಮೇಲಿರುತ್ತದೆ. ಯಾಕೆಂದರೆ ಇಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಧ್ವಜಾರೋಹಣ ನಡೆಸಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಲ್ಲಿ ಆಗಸ್ಟ್‌ 15ರಂದು ಬೆಳಗ್ಗೆ 7.30ಕ್ಕೆ ರಾಷ್ಟ್ರಧ್ವಜವನ್ನು ಹಾರಿಸಿ, ಆ ಬಳಿಕ ದೇಶವನ್ನು ಉದ್ದೇಶಿಸಿ ಸತತ 11ನೇ ಸ್ವಾತಂತ್ರ್ಯ ದಿನದ ಭಾಷಣ ಮಾಡಲಿದ್ದಾರೆ.

ಸ್ವಾತಂತ್ರ್ಯ ದಿನದ ನೇರ ಪ್ರಸಾರ ಎಲ್ಲಿ?

ಕೆಂಪು ಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ನೇರ ಪ್ರಸಾರ ಕಾರ್ಯಕ್ರಮವನ್ನು ದೂರದರ್ಶನದಲ್ಲಿ ಪ್ರಸಾರ ಮಾಡಲಾಗುತ್ತದೆ. ವಿಸ್ತಾರ ನ್ಯೂಸ್‌ ಟಿವಿ ಮತ್ತು ವಿಸ್ತಾರ ನ್ಯೂಸ್‌ ಯುಟ್ಯೂಬ್‌ ಚಾನೆಲ್‌ ಮೂಲಕವೂ ಮೋದಿಯವರ ಭಾಷಣ ನೇರ ಪ್ರಸಾರ ನೋಡಬಹುದು.

ಅಲ್ಲದೇ ಕಾರ್ಯಕ್ರಮವನ್ನು ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (PIB) ಯೂಟ್ಯೂಬ್ ಚಾನೆಲ್‌ ಜೊತೆಗೆ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಾದ ಎಕ್ಸ್‌ನಲ್ಲಿ @PIB_India ಮತ್ತು PMO ಟ್ವಿಟರ್ ಹ್ಯಾಂಡಲ್ ಮೂಲಕವೂ ಪ್ರಸಾರ ಮಾಡಲಾಗುತ್ತದೆ.

Continue Reading
Advertisement
Independence day 2024
ವಿದೇಶ4 mins ago

Independence Day 2024: ಒಂದೇ ದಿನ ಸ್ವಾತಂತ್ರ್ಯ ಪಡೆದಿದ್ದರೂ ಪಾಕಿಸ್ತಾನದಲ್ಲೇಕೆ ಭಾರತಕ್ಕಿಂತ ಮೊದಲು ಸ್ವಾತಂತ್ರ್ಯ ದಿನಾಚರಣೆ?

Sexual Abuse
Latest38 mins ago

Sexual Abuse: ಫೇಲ್ ಮಾಡುವುದಾಗಿ ಹೆದರಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕನಿಗೆ 11 ಸಾವಿರ ರೂ. ದಂಡ!

Actor Darshan
ಬೆಂಗಳೂರು51 mins ago

Actor Darshan: ನಟ ದರ್ಶನ್‌ಗೆ ಆ.28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Job Alert
ಉದ್ಯೋಗ51 mins ago

Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಆ. 16 ಕೊನೆಯ ದಿನ

yogi adityanath
ದೇಶ54 mins ago

Yogi Adityanath: ಪಾಕ್‌ ಭಾರತದ ಜೊತೆ ವಿಲೀನವಾಗುತ್ತೆ…ಇಲ್ಲದಿದ್ದರೆ ಅಸ್ತಿತ್ವದಲ್ಲೇ ಇರಲ್ಲ- ಯೋಗಿ ಆದಿತ್ಯಾನಾಥ್‌

Sexual Abuse
Latest56 mins ago

Sexual Abuse: 3 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ 9ನೇ ತರಗತಿ ವಿದ್ಯಾರ್ಥಿ!

Viral Video
Latest1 hour ago

Viral Video: ಹಳೆಯ ವಿದ್ಯಾರ್ಥಿಗಳನ್ನು ಸಾಲಾಗಿ ಕರೆಸಿ ಬೆತ್ತದಿಂದ ಹೊಡೆದ ಪ್ರಾಂಶುಪಾಲರು! ಅಪರೂಪದ ವಿಡಿಯೊ

ICC ODI Rankings
ಕ್ರೀಡೆ1 hour ago

ICC ODI Rankings: ದ್ವಿತೀಯ ಸ್ಥಾನಕ್ಕೆ ನೆಗೆದ ರೋಹಿತ್​ ಶರ್ಮ; ಕುಸಿತ ಕಂಡ ಗಿಲ್​

Album Song
ಬೆಂಗಳೂರು1 hour ago

Album Song: ಅನಿವಾಸಿ ಕನ್ನಡಿಗರ ‘ಹನಿ ಹನಿ’ ಆಲ್ಬಂ ಸಾಂಗ್ ರಿಲೀಸ್‌ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್

Narendra Modi
ದೇಶ1 hour ago

Narendra Modi: ಭಾರತ ವಿಭಜನೆಯ ಕರಾಳ ದಿನ; ಬಾಧಿತರ ಧೈರ್ಯ, ತ್ಯಾಗವನ್ನು ದೇಶ ಎಂದಿಗೂ ಮರೆಯುವುದಿಲ್ಲ: ಮೋದಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ6 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ6 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ6 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌