Rachael Lillis: ಧ್ವನಿ ನಿಲ್ಲಿಸಿದ ʻಪೋಕೆಮಾನ್ʼ ತಾರೆ ರಾಚೆಲ್; ಸ್ತನ ಕ್ಯಾನ್ಸರ್‌ ವಿರುದ್ಧ ಹೋರಾಡಿ ಸೋತ ನಟಿ - Vistara News

ಸಿನಿಮಾ

Rachael Lillis: ಧ್ವನಿ ನಿಲ್ಲಿಸಿದ ʻಪೋಕೆಮಾನ್ʼ ತಾರೆ ರಾಚೆಲ್; ಸ್ತನ ಕ್ಯಾನ್ಸರ್‌ ವಿರುದ್ಧ ಹೋರಾಡಿ ಸೋತ ನಟಿ

Rachael Lillis: 1997 ಮತ್ತು 2015 ರ ನಡುವೆ ಪೋಕೆಮಾನ್ 423 ಸಂಚಿಕೆಗಳಲ್ಲಿ ಆಕೆಯ ಧ್ವನಿ ಕಾಣಿಸಿಕೊಂಡಿದೆ. 2019 ರ ಚಲನಚಿತ್ರ ಡಿಟೆಕ್ಟಿವ್ ಪಿಕಾಚು ಮತ್ತು ಸೂಪರ್ ಸ್ಮ್ಯಾಶ್ ಬ್ರದರ್ಸ್ ವಿಡಿಯೋ ಗೇಮ್ ಸರಣಿ ಸೇರಿದಂತೆ ಪೋಕೆಮಾನ್ ಪಾತ್ರದ ಜಿಗ್ಲಿಪಫ್‌ಗೆ ಧ್ವನಿ ನೀಡಿದ್ದಾರೆ.

VISTARANEWS.COM


on

Rachael Lillis The voice of Pokémon Misty and Jessie passes away
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪೋಕೆಮಾನ್ ಸರಣಿಯಲ್ಲಿನ ಮಿಸ್ಟಿ ಮತ್ತು ಜೆಸ್ಸಿ ಪಾತ್ರಗಳಿಗೆ ತನ್ನ ಧ್ವನಿಯ ಮೂಲಕ ಜೀವ ತುಂಬುತ್ತಿದ್ದ ಪ್ರಸಿದ್ಧ ನಟಿ ರಾಚೆಲ್ (Rachael Lillis) ನಿಧನರಾಗಿದ್ದಾರೆ.  46ನೇ ವಯಸ್ಸಿನಲ್ಲಿ ಸ್ತನ ಕ್ಯಾನ್ಸರ್‌ನಿಂದ ನಿಧನರಾದರು. ಪ್ರೀತಿಯ ಜಪಾನೀಸ್ ಅನಿಮೇಟೆಡ್ ಸರಣಿಯಲ್ಲಿ (Pokémon television series) ಮಿಸ್ಟಿ ಮತ್ತು ಜೆಸ್ಸಿ ( Misty and Jessie) ಮತ್ತು ಇನ್ನೂ ಅನೇಕ ಪ್ರಮುಖ ಪಾತ್ರಗಳಿಗೆ ಲಿಲ್ಲಿಸ್ ಧ್ವನಿ ನೀಡಿದ್ದಾರೆ. ಪೋಕೆಮಾನ್ ಪ್ರಮುಖ ಪಾತ್ರ ಆಶ್ ಕೆಚಮ್ ಆಗಿ ನಟಿಸಿದ್ದರು.

1990ರ ದಶಕದ ಉತ್ತರಾರ್ಧದಲ್ಲಿ ಪೋಕೆಮಾನ್ ಟಿವಿ ಸರಣಿ, ಚಲನಚಿತ್ರ ಮತ್ತು ವಿಡಿಯೋ ಗೇಮ್‌ಗಳಲ್ಲಿ  ಮಿಸ್ಟಿ ಮತ್ತು ಜೆಸ್ಸಿಯಾಗಿ  ಲಿಲ್ಲಿಸ್  ತಮ್ಮ ಧ್ವನಿ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿದ್ದರು. ಮಾತ್ರವಲ್ಲ ಈ ಎರಡು ಪಾತ್ರಗಳಿಗೆ ಆಕೆ ಜೀವ ತುಂಬುತ್ತಿದ್ದರಿಂದ ಅಪಾರ ಹೆಸರವಾಸಿಯಾಗಿದ್ದರು. ಲಿಲ್ಲಿಸ್ ನ್ಯೂಯಾರ್ಕ್‌ನ ನಯಾಗರಾ ಫಾಲ್ಸ್‌ನಲ್ಲಿ 1969 ನಲ್ಲಿ ಜನಿಸಿದರು. ಹಿನ್ನೆಲೆ ಧ್ವನಿ ಕಲಾವಿದೆಯಾಗುವ ಮೊದಲು ವಿಶ್ವವಿದ್ಯಾಲಯದಿಂದ ಒಪೆರಾದಲ್ಲಿ ತರಬೇತಿ ಪಡೆದರು.

1997 ಮತ್ತು 2015 ರ ನಡುವೆ ಪೋಕೆಮಾನ್ 423 ಸಂಚಿಕೆಗಳಲ್ಲಿ ಆಕೆಯ ಧ್ವನಿ ಕಾಣಿಸಿಕೊಂಡಿದೆ. 2019 ರ ಚಲನಚಿತ್ರ ಡಿಟೆಕ್ಟಿವ್ ಪಿಕಾಚು ಮತ್ತು ಸೂಪರ್ ಸ್ಮ್ಯಾಶ್ ಬ್ರದರ್ಸ್ ವಿಡಿಯೋ ಗೇಮ್ ಸರಣಿ ಸೇರಿದಂತೆ ಪೋಕೆಮಾನ್ ಪಾತ್ರದ ಜಿಗ್ಲಿಪಫ್‌ಗೆ ಧ್ವನಿ ನೀಡಿದ್ದಾರೆ.

ಇದನ್ನೂ ಓದಿ: Bengaluru Police: ಸಿಟಿ ಸಿವಿಲ್‌ ಕೋರ್ಟ್‌ನಿಂದ ಕೊಲೆ ಆರೋಪಿ ಎಸ್ಕೇಪ್‌! ಸಿನಿಮಾ ಸ್ಟೈಲ್‌ನಲ್ಲಿ ಚೇಸ್‌ ಮಾಡಿದ ಖಾಕಿ

ಪೊಕ್ಮೊನ್ ಕಂಪನಿ ಇಂಟರ್‌ನ್ಯಾಶನಲ್‌ನ “ರಾಚೆಲ್ ಲಿಲ್ಲಿಸ್ ಅವರ ನಿಧನದ ಬಗ್ಗೆ ನಮಗೆ ತುಂಬಾ ದುಃಖವಾಗಿದೆ.ಅವರ ವಿಶೇಷ ಪ್ರತಿಭೆಯಿಂದ ಜೀವ ತುಂಬಿದ ಪಾತ್ರಗಳೊಂದಿಗೆ ಬೆಳೆದ ಅನೇಕ ಅಭಿಮಾನಿಗಳಿಂದ ಮೆಚ್ಚುಗೆ ಪಡೆಯುತ್ತದೆʼʼ ಎಂದು ಹೆಳಿಕೆ ನೀಡಿದೆ.

ಲಿಲ್ಲಿಸ್ ಇತರ ಅನಿಮೆ ಮತ್ತು ಅನಿಮೇಟೆಡ್ ಸರಣಿಗಳಿಗೆ ಕೊಡುಗೆ ನೀಡಿದರು.  ಯುವರ್ ಲೈ ಇನ್ ಏಪ್ರಿಲ್, ಹಂಟರ್ ಎಕ್ಸ್ ಹಂಟರ್, ಟೀನೇಜ್ ಮ್ಯುಟೆಂಟ್ ನಿಂಜಾ ಟರ್ಟಲ್ಸ್, ಮತ್ತು ಮೊಬೈಲ್ ಸೂಟ್ ಗುಂಡಮ್ ಯುನಿಕಾರ್ನ್, ಇತರ ಪಾತ್ರಗಳಿಗೆ ಅವರು ತಮ್ಮ ಧ್ವನಿಯನ್ನು ನೀಡಿದ್ದಾರೆ. ಅನೇಕ ಪ್ರಶಸ್ತಿಗಳು ಕೂಡ ಗಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Actor Darshan: ನಟ ದರ್ಶನ್‌ಗೆ ಆ.28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Actor Darshan: ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ 13 ಹಾಗೂ ತುಮಕೂರು ಜೈಲಿನಿಂದ 4 ಆರೋಪಿಗಳನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ನ್ಯಾಯಾಂಗ ಬಂಧನ‌ ಮುಂದುವರಿಸುವಂತೆ ಪೊಲೀಸರು ಕೋರಿದ್ದರಿಂದ ಕೋರ್ಟ್‌ ವಿಸ್ತರಣೆ ಮಾಡಿದೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್‌ಗೆ (Actor Darshan) ಆ.28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ‌ ಮುಂದುವರಿಸುವಂತೆ ಪೊಲೀಸರು ರಿಮ್ಯಾಂಡ್ ಅರ್ಜಿ‌ ಸಲ್ಲಿಸಿದ್ದರು. ಹೀಗಾಗಿ ಆರೋಪಿಗಳಿಗೆ 24ನೇ ಎಸಿಎಂಎಂ ನ್ಯಾಯಾಲಯದ ಇನ್‌ಚಾರ್ಜ್ ಕೋರ್ಟ್‌, ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ.

ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ 13 ಹಾಗೂ ತುಮಕೂರು ಜೈಲಿನಿಂದ 4 ಆರೋಪಿಗಳನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಮುಂದೆ ಹಾಜರು ಪಡಿಸಲಾಗಿತ್ತು. ಆದರೆ, ಆಗಸ್ಟ್ 28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿರುವುದರಿಂದ ದರ್ಶನ್ ಗ್ಯಾಂಗ್‌ಗೆ ಸೆರೆವಾಸ ಮುಂದುವರಿದಿದೆ.

8 ಕಾರಣ ನೀಡಿ ನ್ಯಾಯಾಂಗ ಬಂಧನ ವಿಸ್ತರಣೆಗೆ ಮನವಿ

  1. ಆರೋಪಿಗಳು ಕೃತ್ಯದಲ್ಲಿ ಭಾಗಿಯಾಗಿರುವುದು ತಾಂತ್ರಿಕ ಸಾಕ್ಷ್ಯಾಧಾರಗಳಿಂದ ಧೃಡ.
  2. ಆರೋಪಿಗಳು ಕೊಲೆಗೆ ಮೊದಲು, ನಂತರ ಪ್ರಭಾವಿಗಳ ಸಂಪರ್ಕ ಹೊಂದಿರೋದು ಬೆಳಕಿಗೆ.
  3. ಈ ಸಮಯದಲ್ಲಿ ಜಾಮೀನು ನೀಡಿದರೆ, ಆಮಿಷ ಹಾಗೂ ಬೆದರಿಕೆ ಹಾಕುವ ಸಾದ್ಯತೆ.
  4. ಇನ್ನು ಕೆಲವು ಸಾಕ್ಷಿಗಳ 164 ಅಡಿಯಲ್ಲಿ ಹೇಳಿಕೆ ದಾಖಲಿಸಿಕೊಳ್ಳಬೇಕಿದೆ.
  5. ಕೆಲವು ವಸ್ತುಗಳ ಎಫ್ಎಸ್‌ಎಲ್ ವರದಿ ಬಾಕಿ ಇದೆ.
  6. ಇನ್ನು ಕೆಲವು ವಶ ಪಡಿಸಿಕೊಂಡ ವಸ್ತುಗಳನ್ನು ಸಿಎಫ್ಎಸ್‌ಎಲ್‌ಗೆ ಕಳುಹಿಸಿದ್ದ ವರದಿ ಬರಬೇಕಿದೆ
  7. ಕೊಲೆ ಪ್ರಕರಣದ ಎಲ್ಲಾ ಆರೋಪಿಗಳು ಕೃತ್ಯದಲ್ಲಿ ಭಾಗಿಯಾಗಿರೋದು ತಾಂತ್ರಿಕ ಹಾಗೂ ಭೌತಿಕವಾಗಿ ದೃಢ.
  8. ತನಿಖೆ ಪ್ರಗತಿಯಲ್ಲಿದ್ದು ಈ ಸಮಯ ಜಾಮೀನು ನೀಡಿದರೆ ತನಿಖೆಗೆ ಅಡಚಣೆ.

ಈ ಕಾರಣಗಳನ್ನ ನೀಡಿ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲು ಪೊಲೀಸರು ಮನವಿ ಮಾಡಿದ್ದಾರೆ. ಹೀಗಾಗಿ ಮತ್ತೆ 14 ದಿನ ನ್ಯಾಯಾಂಗ ಬಂಧನವನ್ನು ನ್ಯಾಯಾಧೀಶರು ವಿಸ್ತರಣೆ ಮಾಡಿದ್ದಾರೆ.

ಚಾರ್ಜ್ ಶೀಟ್ ಸಿದ್ಧಪಡಿಸುವ ಪ್ರಕ್ರಿಯೆ ಶುರು

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಿದ್ಧಪಡಿಸುವ ಪ್ರಕ್ರಿಯೆಯನ್ನು ಪೊಲೀಸರು ಶುರು ಮಾಡಿದ್ದಾರೆ. ಎಲ್ಲ ರಿಪೋರ್ಟ್‌ಗಳು ಬಂದ ಕಾರಣ ತನಿಖಾಧಿಕಾರಿ ಎಸಿಪಿ ಚಂದನ್ ನೇತೃತ್ವದಲ್ಲಿ ಸಿದ್ಧವಾಗಲಿರುವ ಚಾರ್ಜ್ ಶೀಟ್‌ 3-4 ಸಾವಿರಕ್ಕೂ ಅಧಿಕ ಪುಟಗಳ ಚಾರ್ಜ್ ಶೀಟ್ ಸಿದ್ಧವಾಗುವ ಸಾಧ್ಯತೆ ಇದೆ.

ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಕೂಡ ಸೂಚಿಸಿದ್ದರಿಂದ ಹೈದರಾಬಾದ್‌ನ ಸಿಎಫ್‌ಎಸ್‌ಎಲ್‌ನಿಂದ ರಿಪೋರ್ಟ್ ಬಂದ ಕೂಡಲೇ ಪೊಲೀಸರು ಚಾರ್ಜ್ ಶೀಟ್ ಸಿದ್ಧಮಾಡುತ್ತಿದ್ದಾರೆ. ಪ್ರಕರಣದಲ್ಲಿ ಒಂದಲ್ಲ ಎರಡಲ್ಲ ಬರೋಬ್ಬರಿ 40ಕ್ಕೂ ಹೆಚ್ಚು ಮಂದಿಯ ಸಿಆರ್‌ಪಿಸಿ 164 ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ. ನ್ಯಾಯಾಧೀಶರ ಎದುರು ಸಾಕ್ಷಿಗಳ ಹೇಳಿಕೆಯನ್ನು ಪೊಲೀಸರು ದಾಖಲಿಸಿದ್ದಾರೆ.

ಇದನ್ನೂ ಓದಿ | Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ಮತ್ತೊಮ್ಮೆ ಹಿನ್ನಡೆ; ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್‌ ನಕಾರ

ಈ ಹೇಳಿಕೆಗಳು ಯಾವುದೇ ಕಾರಣಕ್ಕೂ ಬದಲಾಗಬಾರದು ಎಂಬ ಕಾರಣಕ್ಕೆ 164 ಅಡಿಯಲ್ಲಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಚಿಕ್ಕಣ್ಣ, ಯಶಸ್ ಸೂರ್ಯ, ದರ್ಶನ್ ಮನೆ ಕೆಲಸದವರು, ವಾಟರ್ ಸರ್ವೀಸ್ ಅಂಗಡಿಯವರು, ಆರೋಪಿಗಳಿಗೆ ಖುಷ್ಕ,ಬೀಡಿ, ಸಿಗರೇಟ್ ತಂದುಕೊಟ್ಟವರು, ಹೀಗೆ 40ಕ್ಕೂ ಹೆಚ್ಚು ಸಾಕ್ಷಿಗಳ ಹೇಳಿಕೆಯನ್ನು ಪೊಲೀಸರು ಸಂಗ್ರಹ ಮಾಡಿದ್ದಾರೆ. ಇವರೆಲ್ಲರೂ ಪ್ರಕರಣದ ಪ್ರತ್ಯಕ್ಷ ಸಾಕ್ಷಿಗಳಾಗಿ ಪರಿಗಣನೆ ಮಾಡಲಾಗಿದೆ.

Continue Reading

ಬೆಂಗಳೂರು

Album Song: ಅನಿವಾಸಿ ಕನ್ನಡಿಗರ ‘ಹನಿ ಹನಿ’ ಆಲ್ಬಂ ಸಾಂಗ್ ರಿಲೀಸ್‌ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್

Album Song: ಪಾಯಿಂಟ್ ಬ್ಲಾಂಕ್ ಕ್ರಿಯೇಷನ್ಸ್ ಜರ್ಮನಿ ಪ್ರಸ್ತುತ ಪಡಿಸಿರುವ, ರಾಘವ ರೆಡ್ಡಿ ನಿರ್ದೇಶನದ, ವಿಶಾಲ್ ನೈದೃವ್ ಸಂಗೀತ ನಿರ್ದೇಶನದ ಹಾಗೂ ರಕ್ಕಿ ಸುರೇಶ್ ಅಭಿನಯದ “ಹನಿ ಹನಿ” ಮ್ಯೂಸಿಕಲ್ ವಿಡಿಯೋ ಆಲ್ಬಂ ಇತ್ತೀಚೆಗೆ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಅನಾವರಣವಾಯಿತು. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Album Song
Koo

ಬೆಂಗಳೂರು: ಪಾಯಿಂಟ್ ಬ್ಲಾಂಕ್ ಕ್ರಿಯೇಷನ್ಸ್ ಜರ್ಮನಿ ಪ್ರಸ್ತುತ ಪಡಿಸಿರುವ, ರಾಘವ ರೆಡ್ಡಿ ನಿರ್ದೇಶನದ, ವಿಶಾಲ್ ನೈದೃವ್ ಸಂಗೀತ ನಿರ್ದೇಶನದ ಹಾಗೂ ರಕ್ಕಿ ಸುರೇಶ್ ಅಭಿನಯದ “ಹನಿ ಹನಿ” ಮ್ಯೂಸಿಕಲ್ ವಿಡಿಯೋ ಆಲ್ಬಂ (Album Song) ಇತ್ತೀಚೆಗೆ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಅನಾವರಣವಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ. ಸುರೇಶ್, ಗೌರವ ಕಾರ್ಯದರ್ಶಿ ಭಾ.ಮ. ಗಿರೀಶ್ ಹಾಗೂ ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ಹಾಡಿನಲ್ಲಿ ಅಭಿನಯಿಸಿರುವ ರಕ್ಕಿ ಸುರೇಶ್ ನಮ್ಮ ಕುಟುಂಬಕ್ಕೆ ಆಪ್ತರು. ಈ ಹಾಡಿನಲ್ಲಿ ರಕ್ಕಿ ಅವರು ಚೆನ್ನಾಗಿ ಅಭಿನಯಿಸಿದ್ದಾರೆ. ಹಾಡು ಚೆನ್ನಾಗಿದೆ. ಯಶಸ್ವಿಯಾಗಲಿ ಎಂದು ಅಶ್ವಿನಿ ಪುನೀತ್ ರಾಜಕುಮಾರ್ ಹಾರೈಸಿದರು.

ನಾನು ಹುಟ್ಟಿದ್ದು ಇಲ್ಲಿ. ಆದರೆ ಬೆಳೆದದ್ದು ಜರ್ಮನ್‌ನಲ್ಲಿ. ಮೈಸೂರಿನ ಬಳಿಯ ಸಾಲಿಗ್ರಾಮ ನಮ್ಮ ಊರು. ಡಾ. ರಾಜಕುಮಾರ್ ಅವರ “ಹೊಸಬೆಳಕು” ಚಿತ್ರ ನಿರ್ಮಿಸಿದ್ದ ರಾಜಶೇಖರ್ ಅವರು ನನ್ನ ತಾತಾ ಎಂದು ತಮ್ಮ ಹಾಗೂ ಕುಟುಂಬದ ಬಗ್ಗೆ ಮಾಹಿತಿ ನೀಡಿದ ನಟ ರಕ್ಕಿ ಸುರೇಶ್, ಜರ್ಮನ್‌ನಲ್ಲಿ ಎಂಜಿನಿಯರಿಂಗ್ ಹಾಗೂ ಮಾಸ್ಟರ್ಸ್ ಮುಗಿಸಿ ಐಟಿ ಉದ್ಯೋಗದಲ್ಲಿದ್ದೇನೆ. ನಟನೆ ನನ್ನ ಹವ್ಯಾಸ. ಅದರ ಮೊದಲ ಹೆಜ್ಜೆಯಾಗಿ “ಹನಿ ಹನಿ” ಆಲ್ಬಂ ಸಾಂಗ್ ನಲ್ಲಿ ಅಭಿನಯಿಸಿದ್ದೇನೆ‌. ಹಾಡು ಬಿಡುಗಡೆ ಮಾಡಿಕೊಟ್ಟ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಹಾಗೂ ಗಣ್ಯರಿಗೆ ಧನ್ಯವಾದ ಎಂದು ತಿಳಿಸಿದರು.

ನಾನು ಐದು ವರ್ಷಗಳಿಂದ ಜರ್ಮನ್‌ನಲ್ಲಿ ವಾಸಿಸುತ್ತಿದ್ದೇನೆ. ಅನಿವಾಸಿ ಕನ್ನಡಿಗರು ಸೇರಿ ಈ ಹಾಡನ್ನು ನಿರ್ಮಿಸಿದ್ದೇವೆ. ನಾನೇ ನಿರ್ದೇಶನವನ್ನು ಮಾಡಿದ್ದೇನೆ. ಭಾರತದ ರೂಪಾಯಿ ಪ್ರಕಾರ ಹದಿನೈದು ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಹಾಡು ಯೂರೋಪ್‌ನಲ್ಲಿ ಚಿತ್ರೀಕರಣಗೊಂಡಿದೆ. ರಕ್ಕಿ ಸುರೇಶ್, ಅನಾಮಿಕ ಸ್ಟಾರ್ಕ್ ದತ್ತ‌ ಹಾಗೂ ಅಮೃತ ಮಂಡಲ್ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ವಿಶಾಲ್ ನೈದೃವ್ ಸಂಗೀತ ನೀಡುವುದರ ಜತೆಗೆ ಹಾಡಿದ್ದಾರೆ. ಆಲ್ಬರ್ಟ್ ಜೊಸ್ ಹಾಗೂ ತೇಜಸ್ ಅಹೋಬಲ ಅವರ ಛಾಯಾಗ್ರಹಣ ಈ ಹಾಡಿಗಿದೆ. ನಮ್ಮ ಪಾಯಿಂಟ್ ಬ್ಲಾಂಕ್ ಕ್ರಿಯೇಷನ್ಸ್ ಯೂಟ್ಯೂಬ್ ಚಾನಲ್‌ನಲ್ಲಿ ಈ ಹಾಡನ್ನು ನೋಡಬಹುದು ಎಂದರು ನಿರ್ದೇಶಕ ರಾಘವ ರೆಡ್ಡಿ.

ನಾನು 23 ವರ್ಷಗಳಿಂದ ಕೀ ಬೋರ್ಡ್ ಪ್ಲೇಯರ್ ಆಗಿ ಕಾರ್ಯ ನಿರ್ವಹಿಸಿದ್ದೇನೆ. ಖ್ಯಾತ ಸಂಗೀತ ನಿರ್ದೇಶಕರ ಜತೆಗೆ ನೂರಕ್ಕೂ ಅಧಿಕ ಚಲನಚಿತ್ರಗಳಲ್ಲಿ ಕೆಲಸ ಮಾಡಿದ್ದೇನೆ. “ಹನಿ ಹನಿ” ಆಲ್ಬಂ ಸಾಂಗ್‌ಗೂ ಸಂಗೀತ ನೀಡಿದ್ದೇನೆ ಎಂದು ಸಂಗೀತ ನಿರ್ದೇಶಕ ವಿಶಾಲ್ ನೈದೃವ್ ಹೇಳಿದರು.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ ತುಸು ಇಳಿಕೆ; ಇಂದಿನ ಬೆಲೆ ಚೆಕ್‌ ಮಾಡಿ

ಈ ಸಂದರ್ಭದಲ್ಲಿ ನಿರ್ದೇಶಕ ವೆಂಕಟ್ ಹಾಗೂ ಗಿರೀಶ್ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಸ್ಯಾಂಡಲ್ ವುಡ್

Kannada New Movie: `ಕ್ರೆಡಿಟ್ ಕುಮಾರ’ನಾಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಪತ್ರಕರ್ತ ಹರೀಶ್!

Kannada New Movie: ಕಂಠೀರವ ಸ್ಟುಡಿಯೋದಲ್ಲಿ ನಡೆದ ಅದ್ದೂರಿ ಮುಹೂರ್ತ ಸಮಾರಂಭದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಿರ್ದೇಶಕ ಎಸ್ ಮಹೇಂದರ್, ನಿರ್ಮಾಪಕ ಉದಯ್ ಮೆಹ್ತಾ, ಬಾಂಡ್ ರವಿ ಸ್ಟಾರ್ ಪ್ರಮೋದ್ ಹಾಗೂ ನಿರ್ಮಾಪಕ ನರಸಿಂಹ, ಸೆಲೆಬ್ರಿಟಿ ಜಿಮ್ ಟ್ರೈನರ್ ಪಾನಿಪುರಿ ಕಿಟ್ಟಿ, ಮಾಸ್ತಿ, ಅಣಜಿ ನಾಗರಾಜ್ ಸೇರಿಂದೆ ಅನೇಕ ಗಣ್ಯರು ಹಾಜರಿದ್ದು ಶುಭಹಾರೈಸಿದರು.

VISTARANEWS.COM


on

Kannada New Movie credit kumar journalsit harish in entry
Koo

ಬೆಂಗಳೂರು: ‘ಕ್ರೆಡಿಟ್ ಕುಮಾರ’, ಸ್ಯಾಂಡಲ್‌ವುಡ್‌ನಲ್ಲಿ ಸೆಟ್ಟೇರಿರುವ ಹೊಸ ಸಿನಿಮಾ. ‘ಬಾಂಡ್ ರವಿ’ (Kannada New Movie) ಖ್ಯಾತಿಯ ನಿರ್ದೇಶಕ ಪ್ರಜ್ವಲ್ ಸಾರಥ್ಯದಲ್ಲಿ ಮೂಡಿಬರುತ್ತಿರುವ 2ನೇ ಸಿನಿಮಾ. ಈ ಸಿನಿಮಾ ಮೂಲಕ ನಾಯಕನಾಗಿ ಹರೀಶ್ ಸೀನಪ್ಪ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. 10ವರ್ಷಕ್ಕೂ ಅಧಿಕ ಸಮಯ ಸಿನಿಮಾ ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದ ಹರೀಶ್ ಇದೀಗ ಬೆಳ್ಳಿ ಪರದೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ. ಮೊದಲ ಹೆಜ್ಜೆಯಾಗಿ ‘ಕ್ರೆಡಿಟ್ ಕುಮಾರ’ ಚಿತ್ರಕ್ಕೆ ಮುಹೂರ್ತ ಮಾಡಿಕೊಳ್ಳುವ ಮೂಲಕ ಅಧಿಕೃತ ಚಾಲನೆ ಸಿಕ್ಕಿದೆ. ಕಂಠೀರವ ಸ್ಟುಡಿಯೋದಲ್ಲಿ ನಡೆದ ಅದ್ದೂರಿ ಮುಹೂರ್ತ ಸಮಾರಂಭದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಿರ್ದೇಶಕ ಎಸ್ ಮಹೇಂದರ್, ನಿರ್ಮಾಪಕ ಉದಯ್ ಮೆಹ್ತಾ, ಬಾಂಡ್ ರವಿ ಸ್ಟಾರ್ ಪ್ರಮೋದ್ ಹಾಗೂ ನಿರ್ಮಾಪಕ ನರಸಿಂಹ, ಸೆಲೆಬ್ರಿಟಿ ಜಿಮ್ ಟ್ರೈನರ್ ಪಾನಿಪುರಿ ಕಿಟ್ಟಿ, ಮಾಸ್ತಿ, ಅಣಜಿ ನಾಗರಾಜ್ ಸೇರಿಂದೆ ಅನೇಕ ಗಣ್ಯರು ಹಾಜರಿದ್ದು ಶುಭಹಾರೈಸಿದರು.

ಸಿನಿಮಾಗೆ ಕ್ಲ್ಯಾಪ್ ಮಾಡಿ ಮಾತನಾಡಿದ ಧ್ರುವ ಸರ್ಜಾ, ‘ಹರೀಶ್ ಅವರಿಗೆ ಒಳ್ಳೆದಾಗಬೇಕು, ತುಂಬಾ ಕಷ್ಟಪಟ್ಟಿದ್ದಾರೆ’ ಎಂದು ಹೇಳಿದರು. ಎಸ್, ಮಹೆಂದರ್ ಮಾತನಾಡಿ, ‘ಪಾಸಿಟಿವ್ ವೈಬ್ ಇದೆ. ಟೈಟಲ್ ತುಂಬಾ ಚೆನ್ನಾಗಿದೆ. ನಿರ್ದೇಶಕ ಪ್ರಜ್ವಲ್ ನಮ್ಮ ಹುಡುಗ. ನನ್ನ ಜೊತೆ ಕೆಲಸ ಮಾಡಿದ ಹುಡುಗ. ಸೆನ್ಸಿಬಲ್ ಇದಾರೆ. ಹರೀಶ್ ಕೂಡ ತುಂಬಾ ಸಮಯದಿಂದ ನೋಡಿದ ಹುಡುಗ. ನಿರ್ಮಾಪಕರಿಗೆ ನಾನು ಭರವಸೆ ನೀಡುತ್ತೇನೆ ಖಂಡಿತವಾಗಿಯೂ ಈ ಸಿನಿಮಾ ಚೆನ್ನಾಗಿ ಆಗುತ್ತೆ’ ಎಂದು ಹೇಳಿದರು.

ಇದನ್ನೂ ಓದಿ: Kannada New Movie: ತೆರೆಗೆ ಬರಲು ಸಿದ್ಧವಾಗಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ʼಸ್ವಪ್ನ ಮಂಟಪʼ ಚಿತ್ರ

ನಟ ಪ್ರಮೋದ್ ಮಾತನಾಡಿ, ‘ನಿರ್ದೇಶಕ ಪ್ರಜ್ವಲ್ ಉತ್ತಮ ಕೆಲಸಗಾರ ಹಾಗೂ ಹರೀಶ್ ನನ್ನ ಗೆಳೆಯ ಒಳ್ಳೆದಾಗಲಿ’ ಎಂದರು.

ಕ್ರೆಡಿಟ್ ಕುಮಾರ ಒನ್ ಲೈನ್ ಸ್ಟೋರಿ ಹೇಳುವುದಾದರೆ ಸಾಲ ಮಾಡಿಕೊಂಡು ಒದ್ದಾಡುವ ಒಬ್ಬ ಕ್ಯಾಬ್ ಡ್ರೈವರ್ ನ ಕಥೆಯಾಗಿದೆ. ಕ್ರೆಡಿಟ್ ಕುಮಾರನಾಗಿ ಹರೀಸ್ ಸೀನಪ್ಪ ಕಾಣಿಸಿಕೊಳ್ಳುತ್ತಿದ್ದಾರೆ. ನಾಯಕಿ ಪಾತ್ರದಲ್ಲಿ ಪಾಯಲ್ ಚಂಗಪ್ಪ ಮಿಂಚುತ್ತಿದ್ದಾರೆ. ಕಿರು ಚಿತ್ರಗಳ ಮೂಲಕ ಖ್ಯಾತಿ ಗಳಿಸಿರುವ ಪಾಯಲ್ ಇದೀಗ ಮೊದಲ ಬಾರಿಗೆ ನಾಯಕಿಯಾಗಿ ಮಿಂಚಲು ಸಜ್ಜಾಗಿದ್ದಾರೆ.

ಕ್ರೆಡಿಟ್ ಕುಮಾರ ಸಿನಿಮಾ ಮೂಲಕ ನಿರ್ಮಾಪಕರಾಗಿ ವಾಗೀಶ್ ಮುತ್ತಿಗೆ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ನಿರ್ಮಾಪಕ ವಾಗೀಶ್, ‘2 ತಿಂಗಳ ಹಿಂದೆ ಅಷ್ಟೆ ಬ್ಯಾನರ್ ರಿಜಿಸ್ಟರ್ ಮಾಡಿಸಿದ್ದೆ. ಉತ್ತಮ ಸಿನಿಮಗಾಗಿ ಕಾಯುತ್ತಿದ್ದೆ. ಕ್ರೆಡಿಟ್ ಕುಮಾರ ಸಿನಿಮಾ ಸಿಕ್ಕಿದೆ. ಉತ್ತಮ ಕಂಟೆಂಟ್ ಇರುವ ಸಿನಿಮಾ. ಗೆದ್ದೆ ಗೆಲ್ಲುತ್ತೆ ಎನ್ನುವ ವಿಶ್ವಾಸವಿದೆ’ ಎಂದರು‌.

ನಾಯಕಿ ಪಾಯಲ್ ಮಾತನಾಡಿ, ‘ಭೂಮಿ ಎನ್ನುವ ಪಾತ್ರದಲ್ಲಿ ಮಾಡುತ್ತಿದ್ದೇನೆ. ಶಾರ್ಟ್ ಸಿನಿಮಾ ಮಾಡಿದ್ದೇನೆ. ತುಂಬಾ ಪ್ರೀತಿ ಕೊಟ್ಟಿದ್ದೀರಾ. ಇವಾಗ ಸಿನಿಮಾ ಮಾಡುತ್ತಿದ್ದೇನೆ. ಎಲ್ಲರ ಪ್ರೀತಿ ಇರಲಿ. ಮಿಡ್ಲ್ ಕ್ಲಾಸ್ ಹುಡುಗಿ ಬ್ಯೂಟಿಶಿಯನ್ ಪಾತ್ರದಲ್ಲಿ ನಟಿಸುತ್ತಿದ್ದೇನೆ ಎಂದರು.

ನಿರ್ದೇಸಾಕ ಪ್ರಜ್ವಲ್ ಮಾತನಾಡಿ, ‘ಬಾಂಡ್ ರವಿ ಅಂತ ಸಿನಿಮಾ ಮಾಡಿದ್ದೆ. ಆ ಸಿನಿಮಾಗೆ ಸಿಕ್ಕ ಪ್ರಶಂಸೆಯಿಂದ ಈಗ ಮತ್ತೊಂದು ಸಿನಿಮಾ ಮಾಡುವಂತೆ ಆಗಿದೆ. ಸಾಲ ಮಾಡಿಕೊಂಡು ಬದುಕುವ ಒಬ್ಬ ಯುವಕನ ಕಥೆ. ಹರೀಶ್ ಅವರಿಗಂತನೇ ಈ ಕಥೆ ಮಾಡಿದ್ದು’ ಎಂದರು.

ನಾಯಕ ಹರೀಶ್ ಮಾತನಾಡಿ, ‘ಇಡೀ ಸಿನಿಮಾರಂಗ ಸಹಾಯ ಮಾಡಿದೆ. ಇದು ಮೊದಲ ಹೆಜ್ಜೆ. 2009ರಲ್ಲಿ ಮೊದಲು ಕೇಬಲ್ ಚಾನಲ್ ನಲ್ಲಿ ಕೆಲಸ ಮಾಡುವಾಗ ಬಣ್ಣ ಹಚ್ಚಿದ್ದು ಅವತ್ತು ಆರ್ಟಿಸ್ಟ್ ಆಗಬೇಕು ಅಂತ ಅಂದುಕೊಂಡಿದ್ದೆ. ಈಗ ಆ ಕನಸು ನನಸಾಗಿದೆ. ಈ ಅನುಭವ ನನಗೆ ಬೇಕಿತ್ತು, ಈ ಅನುಭವ ಇಲ್ಲ ಅಂದಿದ್ರೆ ನನ್ನ ಜೀವನ ಅಪೂರ್ಣ ಆಗುತ್ತಿತ್ತು’ ಎಂದರು.

ಇನ್ನು ಈ ಸಿನಿಮಾಗೆ ಧರ್ಮ ವಿಶ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಮೂರು ಹಾಡುಗಳು ಇರಲಿದ್ದು ವಿ ನಾಗೇಂದ್ರ ಪ್ರಸಾದ್, ಪ್ರಮೋದ್ ಮರುವಂತೆ ಹಾಗೂ ಭರ್ಜರಿ ಚೇತನ್ ಸಾಹಿತ್ಯ ಇರಲಿದೆ ಎಂದು ಧರ್ಮ ವಿಶ್ ಹೇಳಿದರು. ಸದ್ಯ ಮುಹೂರ್ತ ಮಾಡಿಕೊಂಡಿರುವ ಸಿನಿಮಾ ಚಿತ್ರೀಕರಣಕ್ಕೆ ಹೊರಡಲಿದೆ.

Continue Reading

ಬಿಗ್ ಬಾಸ್

Bigg Boss Telugu 8: ಬಿಗ್​ಬಾಸ್ ತೆಲುಗು ಸೀಸನ್‌ 8ರ ಪ್ರೋಮೊ ಔಟ್‌; ಸಂಭಾವ್ಯರ ಪಟ್ಟಿಯಲ್ಲಿ ಇಬ್ಬರು ಕನ್ನಡತಿಯರು!

Bigg Boss Telugu 8: ಈಗಾಗಲೇ ಮೂರು ಪ್ರೋಮೋಗಳು ಬಿಡುಗಡೆಯಾಗಿದ್ದು, ಸೀಸನ್ 8ಕ್ಕೆ ಯಾರೆಲ್ಲ ಬರುತ್ತಾರೆ ಎಂಬ ಬಗ್ಗೆ ಕುತೂಹಲ ಕೂಡ ಹೆಚ್ಚಿದೆ. ಕನ್ನಡದವರು ಕೂಡ ಈ ಬಾರಿ ಇರಲಿದ್ದಾರೆ ಎಂದು ವರದಿಯಾಗಿದೆ.

VISTARANEWS.COM


on

Bigg Boss Telugu 8 Confirmed Contestants nagarjuna akkineni host
Koo

ಬಿಗ್​ಬಾಸ್ ತೆಲುಗು (Bigg Boss Telugu 8) ಮತ್ತೆ ಪ್ರಾರಂಭವಾಗುತ್ತಿದೆ. ಸ್ಟಾರ್ ಮಾ ಜನಪ್ರಿಯ ಟಿವಿ ರಿಯಾಲಿಟಿ ಶೋ ಬಿಗ್ ಬಾಸ್ ತೆಲುಗು ಸೀಸನ್ 8 ರ ಹೊಸ ಪ್ರೋಮೊವನ್ನು ಭಾನುವಾರ ಬಿಡುಗಡೆ ಮಾಡಿದೆ. ,ಈ ಶೋಗೆ ಸ್ಪರ್ಧಿಗಳು ಯಾರೆಂಬುದರ ಬಗ್ಗೆ ಚರ್ಚೆಗಳು ಶುರುವಾಗಿವೆ. ಈಗಾಗಲೇ ಮೂರು ಪ್ರೋಮೋಗಳು ಬಿಡುಗಡೆಯಾಗಿದ್ದು, ಸೀಸನ್ 8ಕ್ಕೆ ಯಾರೆಲ್ಲ ಬರುತ್ತಾರೆ ಎಂಬ ಬಗ್ಗೆ ಕುತೂಹಲ ಕೂಡ ಹೆಚ್ಚಿದೆ. ಕನ್ನಡದವರು ಕೂಡ ಈ ಬಾರಿ ಇರಲಿದ್ದಾರೆ ಎಂದು ವರದಿಯಾಗಿದೆ.

ಸಂಭಾವ್ಯ ಅಭ್ಯರ್ಥಿಗಳ ಹೆಸರು ವೈರಲ್ ಆಗುತ್ತಿದೆ. ಅದರಂತೆ ಜ್ಯೋತಿಷ್ಯ ವೇಣುಸ್ವಾಮಿ, ಯೂಟ್ಯೂಬರ್ ಬರೆಲ್ಲಕ್ಕ, ಯೂಟ್ಯೂಬರ್ ಯಾದಂ ರಾಜು ರಿತು ಚೌಧರಿ, ಕಿರುತೆರೆ ತಾರೆಯರಾದ ಅಂಜಲಿ, ಯಶ್ಮಿ ಗೌಡ, ತೇಜಸ್ವಿನಿ ಗೌಡ, ಹಿರಿಯ ನಟಿ ಸನಾ, ನಟ ಅನಿಲ್ ಗೀಲಾ, ಹಾಸ್ಯನಟ ಬುಂಚಿಕ್ ಬಬ್ಲು, ಕಿರಾಕ್ ಆರ್‌ಪಿ, ರಿಂಗ್ ರಿಯಾಜ್, ನಿರೂಪಕಿ ವಿಂಧ್ಯಾ ವಿಶಾಖ, ಪಾಗಲ್ ಪವಿತ್ರಾ ಹೀಗೆ ಹಲವು ಜನರ ಹೆಸರಿದೆ. ಇದರ ಜೊತೆಗೆ ಸುದ್ದಿ ವಾಚಕಿ ಕಲ್ಯಾಣಿ, ನಟಿ ರೇಖಾ ಬೋಜ್, ಸಾವಯವ ಕೃಷಿ ತಜ್ಞ ನೇತ್ರಾ ರೆಡ್ಡಿ, ಧಾರಾವಾಹಿ ನಟ ಇಂದ್ರನೀಲ್ ಸೇನ್‌ಗುಪ್ತ, ನಟ ಅಬ್ಬಾಸ್, ನಟ ರೋಹಿತ್, ಗಾಯಕ ಸಾಕೇತ್ ಕೊಮಂದೂರಿ, ಫೆಮಿನಾ ಮಿಸ್ ಇಂಡಿಯಾ ತೆಲಂಗಾಣ 2023 ರ ಊರ್ಮಿಳಾ ಚೌಹಾಣ್ ಅವರ ಹೆಸರು ಕೂಡ ಇದೆ.

ಇದರಲ್ಲಿ ಯಶ್ಮಿ ಗೌಡ ಕನ್ನಡದಾಕೆ, ಇದರ ಜೊತೆಗೆ ತೇಜಸ್ವಿನಿ ಗೌಡ ಕೂಡ ಕನ್ನಡದವರೇ ಆಗಿದ್ದಾರೆ. ಮೂಲತಃ ಕನ್ನಡದವರಾದ ಇವರು ತೆಲುಗಿನ ಧಾರವಾಹಿಗಳಲ್ಲಿ ಫೇಮಸ್ ಆಗಿದ್ದಾರೆ. . ಬಿಗ್ ಬಾಸ್ ಸೀಸನ್ 8 ಸೆಪ್ಟೆಂಬರ್ 8 ರ ಭಾನುವಾರ ಸಂಜೆ 6 ರಿಂದ ಪ್ರಾರಂಭವಾಗಲಿದೆ. ನಂದಮೂರಿ ಕುಟುಂಬದಿಂದ ತೆಲುಗು ಸಿನೆಮಾ ರಂಗಕ್ಕೆ ನಾಯಕನಾಗಿ ಕಾಲಿಟ್ಟಿರುವ ಚೈತನ್ಯ ಕೃಷ್ಣ ಅವರು ಬಿಗ್‌ಬಾಸ್‌ ಗೆ ಬರಲಿದ್ದಾರೆಂದು ಸುದ್ದಿ ಹಬ್ಬಿದೆ.

ಇದನ್ನೂ ಓದಿ: Bigg Boss Telugu 8: ಬಿಗ್‌ ಬಾಸ್‌ ಮನೆಗೆ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಎಂಟ್ರಿ?

ಸೆಪ್ಟೆಂಬರ್ 3 ರಂದು ತೆಲುಗು ಬಿಗ್​ಬಾಸ್ ಸೀಸನ್ 7 ಆರಂಭವಾಗಿತ್ತು. 19 ಮಂದಿ ಸ್ಪರ್ಧಿಗಳು ಶೋನಲ್ಲಿ ಭಾಗಿಯಾಗಿದ್ದರು. ಅವರಲ್ಲೇ ಇಬ್ಬರು ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮತ್ತೆ ಮನೆಗೆ ಬಂದಿದ್ದರು. ಅಲ್ಲಿಗೆ ಒಟ್ಟು 21 ಸ್ಪರ್ಧಿಗಳು ಈ ಬಾರಿಯ ಬಿಗ್​ಬಾಸ್ ತೆಲುಗು ಸೀಸನ್ 7ರಲ್ಲಿ ಆಡಿದರುಪಲ್ಲವಿ ಪ್ರಶಾಂತ್ ವಿನ್ನರ್ ಆಗಿದ್ದು, ಹಲವರಿಗೆ ಖುಷಿ ನೀಡಿತ್ತು. ಆದರೆ ಮೊದಲಿನಿಂದಲೂ ಶಿವಾಜಿ ವಿನ್ನರ್ ಎಂದುಕೊಂಡಿದ್ದ ಹಲವರಿಗೆ ಬೇಸರವಾಗಿತ್ತು.

Continue Reading
Advertisement
IPL 2025
ಕ್ರೀಡೆ5 mins ago

IPL 2025: ಗೆಳೆಯ ಕೆ.ಎಲ್​ ರಾಹುಲ್​ರನ್ನು ಮತ್ತೆ ಆರ್​ಸಿಬಿಗೆ ಕರೆತರಲು ಮುಂದಾದ ಕೊಹ್ಲಿ

Vidhana Soudha
ಕರ್ನಾಟಕ6 mins ago

Vidhana Soudha: ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂದೆಯೇ ಬೈಕ್‌ಗೆ ಬೆಂಕಿ ಹಚ್ಚಿದ ಯುವಕ!

kolkata doctor murder case
ದೇಶ6 mins ago

Kolkata Doctor Murder Case: ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಆರೋಪಿ ಸಿಬಿಐ ವಶಕ್ಕೆ

Independence day 2024
ವಿದೇಶ12 mins ago

Independence Day 2024: ಒಂದೇ ದಿನ ಸ್ವಾತಂತ್ರ್ಯ ಪಡೆದಿದ್ದರೂ ಪಾಕಿಸ್ತಾನದಲ್ಲೇಕೆ ಭಾರತಕ್ಕಿಂತ ಮೊದಲು ಸ್ವಾತಂತ್ರ್ಯ ದಿನಾಚರಣೆ?

Sexual Abuse
Latest46 mins ago

Sexual Abuse: ಫೇಲ್ ಮಾಡುವುದಾಗಿ ಹೆದರಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕನಿಗೆ 11 ಸಾವಿರ ರೂ. ದಂಡ!

Actor Darshan
ಬೆಂಗಳೂರು58 mins ago

Actor Darshan: ನಟ ದರ್ಶನ್‌ಗೆ ಆ.28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Job Alert
ಉದ್ಯೋಗ59 mins ago

Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಆ. 16 ಕೊನೆಯ ದಿನ

yogi adityanath
ದೇಶ1 hour ago

Yogi Adityanath: ಪಾಕ್‌ ಭಾರತದ ಜೊತೆ ವಿಲೀನವಾಗುತ್ತೆ…ಇಲ್ಲದಿದ್ದರೆ ಅಸ್ತಿತ್ವದಲ್ಲೇ ಇರಲ್ಲ- ಯೋಗಿ ಆದಿತ್ಯಾನಾಥ್‌

Sexual Abuse
Latest1 hour ago

Sexual Abuse: 3 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ 9ನೇ ತರಗತಿ ವಿದ್ಯಾರ್ಥಿ!

Viral Video
Latest1 hour ago

Viral Video: ಹಳೆಯ ವಿದ್ಯಾರ್ಥಿಗಳನ್ನು ಸಾಲಾಗಿ ಕರೆಸಿ ಬೆತ್ತದಿಂದ ಹೊಡೆದ ಪ್ರಾಂಶುಪಾಲರು! ಅಪರೂಪದ ವಿಡಿಯೊ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ6 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ6 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ6 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌