Murder Case: ಪೂಜೆಗೆಂದು ಕರೆದೊಯ್ದು ಹೆಂಡತಿಯ ಕೊಂದ ಗಂಡ; ಕೊಲೆಯಾದಳೇಕೆ ಚಿಟ್ಟೆ ಟ್ಯಾಟೂ ಚೆಲುವೆ? - Vistara News

ಕ್ರೈಂ

Murder Case: ಪೂಜೆಗೆಂದು ಕರೆದೊಯ್ದು ಹೆಂಡತಿಯ ಕೊಂದ ಗಂಡ; ಕೊಲೆಯಾದಳೇಕೆ ಚಿಟ್ಟೆ ಟ್ಯಾಟೂ ಚೆಲುವೆ?

Murder Case: ದಂಪತಿ ನಿನ್ನೆ ಮಾಗಡಿ ಕೋರ್ಟ್‌ಗೆ ಹಾಜರಾಗಿದ್ದರು. ಬಳಿಕ ನಾಟಕವಾಡಿದ್ದ ಉಮೇಶ್‌, ಪತ್ನಿಯನ್ನು ಊಜಗಲ್ಲು ದೇವಸ್ಥಾನಕ್ಕೆ ಕರೆದೊಯ್ದಿದ್ದ. ಊಜಗಲ್ಲು ಬೆಟ್ಟಕ್ಕೆ ಕರೆದೊಯ್ದು, ಅಲ್ಲಿ ಪೂಜೆ ಮಾಡುವ ವೇಳೆ ದಿವ್ಯಾಳನ್ನು ಹತ್ಯೆ ಮಾಡಿದ್ದಾನೆ. ಕೊಂದು ಚೀಲೂರು ಅರಣ್ಯ ಪ್ರದೇಶದಲ್ಲಿ ಶವ ಎಸೆದು ಎಸ್ಕೇಪ್ ಆಗಿದ್ದ.

VISTARANEWS.COM


on

ramanagara murder case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮನಗರ: ಆಕೆ ತೋಳಿನ ಮೇಲೆ ಚಿಟ್ಟೆ ಟ್ಯಾಟೂ ಧರಿಸಿದ್ದಳು. ಅವಳ ಚೆಲುವು ಕಣ್ಮನ ಸೆಳೆಯುವಂತಿತ್ತು. ಇದೇ ಚೆಲುವೇ ಆಕೆಯ ಸಾವಿಗೆ ಕಾರಣವಾಯಿತಾ? ಮಾಗಡಿ (Magadi news) ತಾಲೂಕಿನಲ್ಲಿ ನಡೆದ ಮಹಿಳೆಯ ಕೊಲೆ (Woman murder case) ಪ್ರಕರಣವೊಂದರ ಶೋಧದಲ್ಲಿ ಪೊಲೀಸರು ಇದೀಗ ಪತ್ನಿಯನ್ನು ಕೊಲೆ ಮಾಡಿದ ಪತಿಯ (husband killed wife) ಬೆನ್ನು ಬಿದ್ದಿದ್ದಾರೆ.

ಪತ್ನಿಯನ್ನು ದೇವಸ್ಥಾನಕ್ಕೆ ಎಂದು ಕರೆದೊಯ್ದ ಪತಿ, ಆಕೆಯನ್ನು ಬೆಟ್ಟದ ಕಾಡಿನೊಳಗೆ ಕರೆದೊಯ್ದು ಕೊಲೆ ಮಾಡಿ ಪರಾರಿಯಾಗಿದ್ದ. ಮಾಗಡಿ ತಾಲೂಕಿನ ಊಜಗಲ್ಲು ಬೆಟ್ಟದಲ್ಲಿ ನಿನ್ನೆ ಈ ಕರಾಳ ಕೃತ್ಯ ನಡೆದಿತ್ತು. ದಿವ್ಯಾ (32) ಗಂಡನಿಂದಲೇ ಕೊಲೆಯಾದ ಮಹಿಳೆ. ಉಮೇಶ್ ಪತ್ನಿಯನ್ನು ಹತ್ಯೆಗೈದಿರುವ ಪಾತಕಿ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿ ವಿಚ್ಛೇದನ ಪಡೆಯಲು ಮುಂದಾಗಿದ್ದರು. ಪತ್ನಿಯ ಸೌಂದರ್ಯದಿಂದಾಗಿ ಆಕೆಯ ಶೀಲದ ಬಗ್ಗೆ ಅನುಮಾನ ಹೊಂದಿದ್ದ ಉಮೇಶ್‌, ಆಕೆಗೆ ಈ ಕಾರಣಕ್ಕಾಗಿ ಸದಾ ಕಿರುಕುಳ ಕೊಡುತ್ತಿದ್ದ. ಇದೇ ಕಾರಣ ಉಲ್ಬಣಿಸಿ ಕಲಹ ಜೋರಾಗಿದ್ದು, ದಿವ್ಯಾ ಈ ಅನುಮಾನ ಪಿಶಾಚಿಯಿಂದ ದೂರವಾಗಲು ನಿರ್ಧರಿಸಿ ಡೈವೋರ್ಸ್‌ ಮೊರೆ ಹೋಗಿದ್ದಳು.

ದಂಪತಿ ನಿನ್ನೆ ಮಾಗಡಿ ಕೋರ್ಟ್‌ಗೆ ಹಾಜರಾಗಿದ್ದರು. ಬಳಿಕ ನಾಟಕವಾಡಿದ್ದ ಉಮೇಶ್‌, ಪತ್ನಿಯನ್ನು ಊಜಗಲ್ಲು ದೇವಸ್ಥಾನಕ್ಕೆ ಕರೆದೊಯ್ದಿದ್ದ. ಊಜಗಲ್ಲು ಬೆಟ್ಟಕ್ಕೆ ಕರೆದೊಯ್ದು, ಅಲ್ಲಿ ಪೂಜೆ ಮಾಡುವ ವೇಳೆ ದಿವ್ಯಾಳನ್ನು ಹತ್ಯೆ ಮಾಡಿದ್ದಾನೆ. ಕೊಂದು ಚೀಲೂರು ಅರಣ್ಯ ಪ್ರದೇಶದಲ್ಲಿ ಶವ ಎಸೆದು ಎಸ್ಕೇಪ್ ಆಗಿದ್ದ.

ಈ ಪ್ರಕರಣದ ಸಂಬಂಧ ಐವರ ಮೇಲೆ ಮಾಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಕೊಲೆಗೆ ಸಹಕರಿಸಿದ ಇನ್ನೂ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪತಿ ಉಮೇಶ್ ಹಾಗೂ ಮತ್ತೊಬ್ಬ ಆರೋಪಿಗಾಗಿ ಪೊಲೀಸರ ತಲಾಶೆ ನಡೆದಿದೆ.

ಪ್ರಧಾನಿ ಮೋದಿಯನ್ನು ಟೀಕಿಸಿದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿತ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಅವಾಚ್ಯವಾಗಿ ಟೀಕಿಸಿದ ವ್ಯಕ್ತಿಯೊಬ್ಬನನ್ನು ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ಕೆಎಎಸ್ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ನಡೆದಿದೆ.

ಹದಿನೈದು ಜನರ ಗುಂಪು ಯುವಕನ ಮೇಲೆ ಹಲ್ಲೆ ನಡೆಸಿದೆ. ಯುವಕನೊಬ್ಬ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದ ಎನ್ನಲಾಗಿದೆ. ಈ ಯುವಕನ ಮೇಲೆ ರೊಚ್ಚಿಗೆದ್ದ ಗುಂಪು ಹಲ್ಲೆ ಮಾಡಿ ಮೋದಿ, ಮೋದಿ ಎಂದು ಕೂಗು ಎಂದು ಬಲವಂತ ಮಾಡಿದೆ. ಆದರೆ ಯುವಕ ಇದಕ್ಕೆ ಒಪ್ಪದಿದ್ದಾಗ ಮತ್ತಷ್ಟು ಹಲ್ಲೆ ಮಾಡಿದೆ.

ಸುಮಾರು ಹದಿನೈದು ಜನರ ಯುವಕರ ಗುಂಪು ಯುವಕನ ಮೇಲೆ ಹಲ್ಲೆ ನಡೆಸಿದೆ. ಮಾತ್ರವಲ್ಲ, ನೀನು ಮೋದಿಗೆ ಬೈಯ್ಯುವ ಹಾಗಿಲ್ಲ, ನೀನು ಸಿದ್ದರಾಮಯ್ಯ ಫಾಲೋವರ್ ಆಗಿದ್ದರೆ ನಿಮ್ಮ ಮನೆಯಲ್ಲಿ ಇಟ್ಟುಕೊ ಎಂದು ಎಚ್ಚರಿಸಿದೆ. ಅಲ್ಲದೆ, ಮೋದಿ ಎಂದು ಹೆಸರು ಹೇಳು ಎಂದು ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಈ ಗುಂಪು ಯುವಕನ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಸದ್ಯ ಯುವಕನನ್ನು ಉಪ್ಪಾರಪೇಟೆ ಉಪ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿದೆ. ‌ಘಟನೆ ಸಂಬಂಧ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಹಲ್ಲೆ ನಡೆಸಿದವರನ್ನು ಪೊಲೀಸರು ಶೋಧಿಸುತ್ತಿದ್ದಾರೆ. ವಿಡಿಯೋವನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ.

ಇದನ್ನೂ ಓದಿ: Viral Video: ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸಿದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Sexual Abuse: ಫೇಲ್ ಮಾಡುವುದಾಗಿ ಹೆದರಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕನಿಗೆ 11 ಸಾವಿರ ರೂ. ದಂಡ!

Sexual Abuse: ಬಾಲಕಿಯ ಮೇಲೆ ಪದೇಪದೇ ಅತ್ಯಾಚಾರ ಎಸಗಿದ ಶಿಕ್ಷಕನಿಗೆ ಗುಜರಾತ್‌ನ ಆನಂದ್‌ನ ವಿಶೇಷ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ನ್ಯಾಯಾಲಯವು 25 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅದರ ಜೊತೆಗೆ ನ್ಯಾಯಾಲಯವು 11,000 ರೂ. ದಂಡವನ್ನು ವಿಧಿಸಿದೆ. ಸಂತ್ರಸ್ತೆಗೆ 4 ಲಕ್ಷ ರೂ.ಗಳ ಪರಿಹಾರವನ್ನು ನೀಡುವಂತೆ ಆದೇಶಿಸಿದೆ. 10ನೇ ತರಗತಿಯ ಕಂಪ್ಯೂಟರ್ ಬೋರ್ಡ್ ಪರೀಕ್ಷೆಯಲ್ಲಿ ಹೆಚ್ಚಿನ ಇಂಟರ್ನಲ್ ಮಾರ್ಕ್ಸ್ ನೀಡುವುದಾಗಿ ಭರವಸೆ ನೀಡಿ ಶಿಕ್ಷಕ ಅತ್ಯಾಚಾರ ಎಸಗಿದ್ದ.

VISTARANEWS.COM


on

Sexual Abuse
Koo

ಪರೀಕ್ಷೆಯಲ್ಲಿ ಫೇಲ್ ಮಾಡುವುದಾಗಿ ಬೆದರಿಕೆಯೊಡ್ಡಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಪದೇಪದೇ ಅತ್ಯಾಚಾರ (Sexual Abuse) ಎಸಗಿದ ಶಿಕ್ಷಕನಿಗೆ ಗುಜರಾತ್‍ನ ಆನಂದ್‍ನ ವಿಶೇಷ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ನ್ಯಾಯಾಲಯವು 25 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಹಾಗೇ ಅದರ ಜೊತೆಗೆ ನ್ಯಾಯಾಲಯವು 11,000 ರೂ.ಗಳ ದಂಡವನ್ನು ವಿಧಿಸಿದೆ ಮತ್ತು ಸಂತ್ರಸ್ತೆಗೆ 4 ಲಕ್ಷ ರೂ.ಗಳ ಪರಿಹಾರವನ್ನು ನೀಡುವಂತೆ ಆದೇಶಿಸಿದೆ.

ಗುಜರಾತ್‍ನ ಆನಂದ್‍ನ ಬಕ್ರೋಲ್ ನಿವಾಸಿ ದರ್ಶನ್ ಸುತಾರ್ 2022ರಲ್ಲಿ ವಿದ್ಯಾನಗರದ ಶಾಲೆಯಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ಈ ಸಮಯದಲ್ಲಿ, ಆತ 10ನೇ ತರಗತಿಯ ಕಂಪ್ಯೂಟರ್ ಬೋರ್ಡ್ ಪರೀಕ್ಷೆಯಲ್ಲಿ ಹೆಚ್ಚಿನ ಇಂಟರ್ನಲ್ ಮಾರ್ಕ್ಸ್ ನೀಡುವುದಾಗಿ ಭರವಸೆ ನೀಡಿ 14 ವರ್ಷದ ವಿದ್ಯಾರ್ಥಿನಿಯನ್ನು ಶೋಷಣೆಗೆ ಒಳಪಡಿಸಿದ್ದಾನೆ. ತನ್ನ ಬೇಡಿಕೆಗಳನ್ನು ಪಾಲಿಸದಿದ್ದರೆ ಆಕೆಯ ಪರೀಕ್ಷಾ ಪತ್ರಿಕೆಯನ್ನು ವೈಯಕ್ತಿಕವಾಗಿ ಪರಿಶೀಲಿಸಿ ಆಕೆ ಫೇಲ್ ಆಗುವಂತೆ ಮಾಡುವುದಾಗಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದ. ಮಾರ್ಚ್ 20, 2022 ಮತ್ತು ಮೇ 28, 2022ರ ನಡುವೆ ವಿದ್ಯಾರ್ಥಿನಿಯ ಮೇಲೆ ವಿವಿಧ ಸ್ಥಳಗಳಲ್ಲಿ ಐದು ಬಾರಿ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಅವಳನ್ನು ಮತ್ತು ಅವಳ ಕುಟುಂಬವನ್ನು ಕೊಲ್ಲುವುದಾಗಿ ಪದೇಪದೇ ಎಚ್ಚರಿಕೆ ನೀಡಿದ್ದ.

ಸಂತ್ರಸ್ತೆಯ ತಾಯಿಗೆ ಮಗಳ ನಡವಳಿಕೆಯಲ್ಲಿ ಅನುಮಾನ ಬಂದು ವಿಚಾರಿಸಿದಾಗ ಸಂತ್ರಸ್ತೆ ನಡೆದ ಘಟನೆಯನ್ನು ಬಾಯ್ಬಿಟ್ಟಿದ್ದಾಳೆ. ತಕ್ಷಣ ಆಕೆಯ ತಾಯಿ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಈ ದೂರಿನ ಆಧಾರದ ಮೇಲೆ ಪೊಲೀಸರು ಸುತಾರ್‌ನನ್ನು ಪೋಕ್ಸೊ ಕಾಯ್ದೆ ಮತ್ತು ಇತರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಬಂಧಿಸಿ ಕೋರ್ಟ್‌ಗೆ ಒಪ್ಪಿಸಿದ್ದರು.

ಇದನ್ನೂ ಓದಿ: ಪತ್ನಿಯ ಮರ್ಮಾಂಗದೊಳಗೆ ಲಟ್ಟಣಿಗೆ ತುರುಕಿ ಭೀಕರವಾಗಿ ಕೊಂದ ಪತಿ

ವಿಚಾರಣೆಯ ಸಮಯದಲ್ಲಿ, ಸರ್ಕಾರಿ ವಕೀಲರಾದ ಎ.ಎಸ್.ಜಡೇಜಾ ಅವರು ಬಲವಾದ ವಾದಗಳನ್ನು ಮಂಡಿಸಿದರೂ ಕೂಡ ವಿಶೇಷ ಪೋಕ್ಸೊ ನ್ಯಾಯಾಧೀಶ ಮತ್ತು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ತೇಜಸ್ ದೇಸಾಯಿ ಅವರು ಸುತಾರ್‌ಗೆ ಶಿಕ್ಷೆ ವಿಧಿಸಿದ್ದಾರೆ. ನ್ಯಾಯಾಧೀಶರು ಅವನಿಗೆ 25 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 11,000 ರೂ.ಗಳ ದಂಡವನ್ನು ವಿಧಿಸಿದ್ದಾರೆ. ದಂಡವನ್ನು ಪಾವತಿಸದಿದ್ದರೆ ಮತ್ತೊಂದು ವರ್ಷ ಶಿಕ್ಷೆಗೆ ಒಳಪಡಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ನಿಯಮಗಳು, 2020 ರ ನಿಯಮ 9 (2) ರ ಅಡಿಯಲ್ಲಿ, ಸಂತ್ರಸ್ತೆಗೆ 4 ಲಕ್ಷ ರೂ.ಗಳ ಪರಿಹಾರವನ್ನು ನೀಡಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

Continue Reading

ಬೆಂಗಳೂರು

Actor Darshan: ನಟ ದರ್ಶನ್‌ಗೆ ಆ.28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Actor Darshan: ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ 13 ಹಾಗೂ ತುಮಕೂರು ಜೈಲಿನಿಂದ 4 ಆರೋಪಿಗಳನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ನ್ಯಾಯಾಂಗ ಬಂಧನ‌ ಮುಂದುವರಿಸುವಂತೆ ಪೊಲೀಸರು ಕೋರಿದ್ದರಿಂದ ಕೋರ್ಟ್‌ ವಿಸ್ತರಣೆ ಮಾಡಿದೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್‌ಗೆ (Actor Darshan) ಆ.28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ‌ ಮುಂದುವರಿಸುವಂತೆ ಪೊಲೀಸರು ರಿಮ್ಯಾಂಡ್ ಅರ್ಜಿ‌ ಸಲ್ಲಿಸಿದ್ದರು. ಹೀಗಾಗಿ ಆರೋಪಿಗಳಿಗೆ 24ನೇ ಎಸಿಎಂಎಂ ನ್ಯಾಯಾಲಯದ ಇನ್‌ಚಾರ್ಜ್ ಕೋರ್ಟ್‌, ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ.

ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ 13 ಹಾಗೂ ತುಮಕೂರು ಜೈಲಿನಿಂದ 4 ಆರೋಪಿಗಳನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಮುಂದೆ ಹಾಜರು ಪಡಿಸಲಾಗಿತ್ತು. ಆದರೆ, ಆಗಸ್ಟ್ 28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿರುವುದರಿಂದ ದರ್ಶನ್ ಗ್ಯಾಂಗ್‌ಗೆ ಸೆರೆವಾಸ ಮುಂದುವರಿದಿದೆ.

8 ಕಾರಣ ನೀಡಿ ನ್ಯಾಯಾಂಗ ಬಂಧನ ವಿಸ್ತರಣೆಗೆ ಮನವಿ

  1. ಆರೋಪಿಗಳು ಕೃತ್ಯದಲ್ಲಿ ಭಾಗಿಯಾಗಿರುವುದು ತಾಂತ್ರಿಕ ಸಾಕ್ಷ್ಯಾಧಾರಗಳಿಂದ ಧೃಡ.
  2. ಆರೋಪಿಗಳು ಕೊಲೆಗೆ ಮೊದಲು, ನಂತರ ಪ್ರಭಾವಿಗಳ ಸಂಪರ್ಕ ಹೊಂದಿರೋದು ಬೆಳಕಿಗೆ.
  3. ಈ ಸಮಯದಲ್ಲಿ ಜಾಮೀನು ನೀಡಿದರೆ, ಆಮಿಷ ಹಾಗೂ ಬೆದರಿಕೆ ಹಾಕುವ ಸಾದ್ಯತೆ.
  4. ಇನ್ನು ಕೆಲವು ಸಾಕ್ಷಿಗಳ 164 ಅಡಿಯಲ್ಲಿ ಹೇಳಿಕೆ ದಾಖಲಿಸಿಕೊಳ್ಳಬೇಕಿದೆ.
  5. ಕೆಲವು ವಸ್ತುಗಳ ಎಫ್ಎಸ್‌ಎಲ್ ವರದಿ ಬಾಕಿ ಇದೆ.
  6. ಇನ್ನು ಕೆಲವು ವಶ ಪಡಿಸಿಕೊಂಡ ವಸ್ತುಗಳನ್ನು ಸಿಎಫ್ಎಸ್‌ಎಲ್‌ಗೆ ಕಳುಹಿಸಿದ್ದ ವರದಿ ಬರಬೇಕಿದೆ
  7. ಕೊಲೆ ಪ್ರಕರಣದ ಎಲ್ಲಾ ಆರೋಪಿಗಳು ಕೃತ್ಯದಲ್ಲಿ ಭಾಗಿಯಾಗಿರೋದು ತಾಂತ್ರಿಕ ಹಾಗೂ ಭೌತಿಕವಾಗಿ ದೃಢ.
  8. ತನಿಖೆ ಪ್ರಗತಿಯಲ್ಲಿದ್ದು ಈ ಸಮಯ ಜಾಮೀನು ನೀಡಿದರೆ ತನಿಖೆಗೆ ಅಡಚಣೆ.

ಈ ಕಾರಣಗಳನ್ನ ನೀಡಿ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲು ಪೊಲೀಸರು ಮನವಿ ಮಾಡಿದ್ದಾರೆ. ಹೀಗಾಗಿ ಮತ್ತೆ 14 ದಿನ ನ್ಯಾಯಾಂಗ ಬಂಧನವನ್ನು ನ್ಯಾಯಾಧೀಶರು ವಿಸ್ತರಣೆ ಮಾಡಿದ್ದಾರೆ.

ಚಾರ್ಜ್ ಶೀಟ್ ಸಿದ್ಧಪಡಿಸುವ ಪ್ರಕ್ರಿಯೆ ಶುರು

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಿದ್ಧಪಡಿಸುವ ಪ್ರಕ್ರಿಯೆಯನ್ನು ಪೊಲೀಸರು ಶುರು ಮಾಡಿದ್ದಾರೆ. ಎಲ್ಲ ರಿಪೋರ್ಟ್‌ಗಳು ಬಂದ ಕಾರಣ ತನಿಖಾಧಿಕಾರಿ ಎಸಿಪಿ ಚಂದನ್ ನೇತೃತ್ವದಲ್ಲಿ ಸಿದ್ಧವಾಗಲಿರುವ ಚಾರ್ಜ್ ಶೀಟ್‌ 3-4 ಸಾವಿರಕ್ಕೂ ಅಧಿಕ ಪುಟಗಳ ಚಾರ್ಜ್ ಶೀಟ್ ಸಿದ್ಧವಾಗುವ ಸಾಧ್ಯತೆ ಇದೆ.

ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಕೂಡ ಸೂಚಿಸಿದ್ದರಿಂದ ಹೈದರಾಬಾದ್‌ನ ಸಿಎಫ್‌ಎಸ್‌ಎಲ್‌ನಿಂದ ರಿಪೋರ್ಟ್ ಬಂದ ಕೂಡಲೇ ಪೊಲೀಸರು ಚಾರ್ಜ್ ಶೀಟ್ ಸಿದ್ಧಮಾಡುತ್ತಿದ್ದಾರೆ. ಪ್ರಕರಣದಲ್ಲಿ ಒಂದಲ್ಲ ಎರಡಲ್ಲ ಬರೋಬ್ಬರಿ 40ಕ್ಕೂ ಹೆಚ್ಚು ಮಂದಿಯ ಸಿಆರ್‌ಪಿಸಿ 164 ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ. ನ್ಯಾಯಾಧೀಶರ ಎದುರು ಸಾಕ್ಷಿಗಳ ಹೇಳಿಕೆಯನ್ನು ಪೊಲೀಸರು ದಾಖಲಿಸಿದ್ದಾರೆ.

ಇದನ್ನೂ ಓದಿ | Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ಮತ್ತೊಮ್ಮೆ ಹಿನ್ನಡೆ; ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್‌ ನಕಾರ

ಈ ಹೇಳಿಕೆಗಳು ಯಾವುದೇ ಕಾರಣಕ್ಕೂ ಬದಲಾಗಬಾರದು ಎಂಬ ಕಾರಣಕ್ಕೆ 164 ಅಡಿಯಲ್ಲಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಚಿಕ್ಕಣ್ಣ, ಯಶಸ್ ಸೂರ್ಯ, ದರ್ಶನ್ ಮನೆ ಕೆಲಸದವರು, ವಾಟರ್ ಸರ್ವೀಸ್ ಅಂಗಡಿಯವರು, ಆರೋಪಿಗಳಿಗೆ ಖುಷ್ಕ,ಬೀಡಿ, ಸಿಗರೇಟ್ ತಂದುಕೊಟ್ಟವರು, ಹೀಗೆ 40ಕ್ಕೂ ಹೆಚ್ಚು ಸಾಕ್ಷಿಗಳ ಹೇಳಿಕೆಯನ್ನು ಪೊಲೀಸರು ಸಂಗ್ರಹ ಮಾಡಿದ್ದಾರೆ. ಇವರೆಲ್ಲರೂ ಪ್ರಕರಣದ ಪ್ರತ್ಯಕ್ಷ ಸಾಕ್ಷಿಗಳಾಗಿ ಪರಿಗಣನೆ ಮಾಡಲಾಗಿದೆ.

Continue Reading

Latest

Sexual Abuse: 3 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ 9ನೇ ತರಗತಿ ವಿದ್ಯಾರ್ಥಿ!

Sexual Abuse: ದಿನೇದಿನೇ ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ. ಇದೀಗ ಮುಂಬೈನ ಸಾಕಿನಾಕಾ ಪ್ರದೇಶದಲ್ಲಿ 3 ವರ್ಷದ ಮಗುವಿನ ಮೇಲೆ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿ ಅತ್ಯಾಚಾರ ಎಸಗಿದ್ದಾನೆ. ಆರೋಪಿ 9ನೇ ತರಗತಿ ವಿದ್ಯಾರ್ಥಿಯಾಗಿದ್ದು, ಮಗುವಿನ ತಂದೆಯ ದೂರಿನ ಮೇರೆಗೆ ಆತನ ವಿರುದ್ಧ ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

VISTARANEWS.COM


on

Sexual Abuse
Koo


ಮುಂಬೈ: ಅತ್ಯಾಚಾರ ಪ್ರಕರಣಗಳು ದಿನೇದಿನೇ ಹೆಚ್ಚಾಗಿದ್ದು, ಕಾಮುಕರು ಮಹಿಳೆಯರು, ಮಕ್ಕಳು ಹಾಗೂ ಪ್ರಾಣಿಗಳನ್ನೂ ತಮ್ಮ ಕಾಮದಾಟಕ್ಕೆ ಬಲಿ ತೆಗೆದುಕೊಳ್ಳುತ್ತಿದ್ದಾರೆ. ಇದೀಗ ಮುಂಬೈನ ಸಾಕಿನಾಕಾ ಪ್ರದೇಶದಲ್ಲಿ 3 ವರ್ಷದ ಮಗುವಿನ ಮೇಲೆ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿ ಅತ್ಯಾಚಾರ (Sexual Abuse) ಎಸಗಿದ್ದಾನೆ. ಆರೋಪಿ 9ನೇ ತರಗತಿ ವಿದ್ಯಾರ್ಥಿಯಾಗಿದ್ದು, ಮಗುವಿನ ತಂದೆಯ ದೂರಿನ ಮೇರೆಗೆ ಆತನ ವಿರುದ್ಧ ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಹಾಗೆಯೇ ಕೆಲವು ದಿನಗಳ ಹಿಂದೆ, ಕೃಷಿ ಇಲಾಖೆಯ ಸಹಾಯಕ ಅಭಿವೃದ್ಧಿ ಅಧಿಕಾರಿ (ಎಡಿಒ) ಉತ್ತರ ಪ್ರದೇಶದ ಬುಲಂದ್ಶಹರ್‌ನ ತನ್ನ ಮನೆಯಲ್ಲಿ 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೇ ತನ್ನ ಕಾಮಬಯಕೆ ತೀರದಿದ್ದಕ್ಕೆ ಮತ್ತೆ ಮೇಕೆಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿರುವುದು ಕಂಡುಬಂದಿತ್ತು. ಈ ಘಟನೆಯನ್ನು ನೆರೆಹೊರೆಯವರು ಕ್ಯಾಮೆರಾದಲ್ಲಿ ರೆಕಾರ್ಡ್ ಮಾಡಿದ್ದಾರೆ. ಘಟನೆಯ ನಂತರ, ಬಾಲಕಿಯ ಕುಟುಂಬವು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಂತರ ಪೊಲೀಸರು ಎಡಿಒ ಅವನನ್ನು ಬಂಧಿಸಿದ್ದಾರೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಅವಳ ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೊಂದು ಘಟನೆಯಲ್ಲಿ, ಪಂಜಾಬ್‍ನಲ್ಲಿ ಯುವತಿಯೊಬ್ಬಳ ಸಹೋದರ ಆತನ ಗೆಳತಿಯ ಜೊತೆ ಓಡಿಹೋಗಿದ್ದಕ್ಕೆ ಸಹೋದರನ ಗೆಳತಿಯ ಕುಟುಂಬವು ಸೇಡಿಗಾಗಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಅವಮಾನಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಸಹೋದರನ ಗೆಳತಿಯ ತಂದೆ ಮತ್ತು ಇತರ ಮೂವರು ಕುಟುಂಬ ಸದಸ್ಯರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಅಪರಾಧವನ್ನು ತಮ್ಮ ಮೊಬೈಲ್ ಫೋನ್‍ನಲ್ಲಿ ರೆಕಾರ್ಡ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಹಸ್ತಮೈಥುನ ಮಾಡಿಕೊಳ್ಳಲು 6 ವರ್ಷದ ಬಾಲಕಿ ಮೇಲೆ ದೌರ್ಜನ್ಯ; ಆಕೆ ತಪ್ಪಿಸಿಕೊಂಡಾಗ ಮೇಕೆ ಮೇಲೆ ಅತ್ಯಾಚಾರ!

ಈ ಘಟನೆಯು ಮೇ 1 ರಂದು ಸಂಭವಿಸಿದೆ ಎಂದು ವರದಿಯಾಗಿದೆ, ಆದರೆ, ಸಂತ್ರಸ್ತೆ ಆಘಾತಕ್ಕೊಳಗಾಗಿದ್ದ ಕಾರಣ ಬಹಳ ಸಮಯದ ನಂತರ ಚೇತರಿಸಿಕೊಂಡು ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾಳೆ ಎನ್ನಲಾಗಿದೆ. ಕೋಲ್ಕತಾ ವೈದ್ಯೆಯ ಕ್ರೂರ ಅತ್ಯಾಚಾರ ಮತ್ತು ಕೊಲೆಯ ಬಗ್ಗೆ ದೇಶದಲ್ಲಿ ಆಕ್ರೋಶ ವ್ಯಕ್ತವಾಗುತ್ತಿರುವ ಸಮಯದಲ್ಲಿ ಈ ಘಟನೆ ನಡೆದಿದೆ. ಆದರೆ ಪ್ರಕರಣದಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ ಮತ್ತು ಸಿಬಿಐ ಮಾತ್ರ ಈ ಬಗ್ಗೆ ಸರಿಯಾಗಿ ತನಿಖೆ ನಡೆಸಬಹುದು ಎಂಬುದನ್ನು ಮನಗೊಂಡ ಕೋಲ್ಕತ್ತಾ ಹೈಕೋರ್ಟ್ ಇದರ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿದೆ ಎನ್ನಲಾಗಿದೆ.

Continue Reading

ಕ್ರೈಂ

Police Raid: ಹಿಂದೂ ಯುವತಿ- ಮುಸ್ಲಿಂ ಯುವಕ ಜೋಡಿಗೆ ರೂಂ ನೀಡಿದ ಲಾಡ್ಜ್‌ಗೆ ಪೊಲೀಸರ ದಾಳಿ

Police Raid: ಪುತ್ತೂರಿನ ಹೊರವಲಯವಾದ ನೆಹರು ನಗರದಲ್ಲಿರುವ ಈ ಲಾಡ್ಜ್‌ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಪೋಲೀಸರು ರೇಡ್‌ ಮಾಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

VISTARANEWS.COM


on

Police Raid puttur mangalore
Koo

ಮಂಗಳೂರು: ಹಿಂದೂ ಯುವತಿ- ಮುಸ್ಲಿಂ ಯುವಕ ಜೋಡಿಗೆ ರೂಂ ನೀಡಿದ ಲಾಡ್ಜ್‌ (Lodge) ಒಂದಕ್ಕೆ ಪೊಲೀಸರು ದಾಳಿ (Police Raid) ನಡೆಸಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರಿನ ನೆಹರು ನಗರದಲ್ಲಿ ನಡೆದಿದೆ. ಲಾಡ್ಜ್‌ನಲ್ಲಿ ಅನೈತಿಕ ಚಟುವಟಿಕೆ (ನಡೆಯುತ್ತಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ.

ನೆಹರು ನಗರದಲ್ಲಿರುವ ಲಾಡ್ಜ್‌ಗೆ ಪೊಲೀಸರು ದಾಳಿ ನಡೆಸಿದ್ದು, ರಿಸೆಪ್ಶನಿಸ್ಟ್ ಹಾಗೂ ಲೆಡ್ಜರ್ ಪುಸ್ತಕವನ್ನು ವಶಕ್ಕೆ ಪಡೆದಿದ್ದಾರೆ. ಯುವಕ- ಯುವತಿಯಿಂದ ಯಾವುದೇ ದಾಖಲೆಗಳನ್ನು ತೆಗೆದುಕೊಳ್ಳದೆ ರೂಮ್ ನೀಡಲಾಗಿದೆ ಎನ್ನುವ ಆರೋಪದ ಮೇರೆಗೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ತಡ ರಾತ್ರಿ ಇನೋವಾ ಕಾರಿನಲ್ಲಿ ಬಂದ ತಂಡವೊಂದಕ್ಕೆ ರೂಂ ನೀಡಿರುವುದೇ ದಾಳಿಗೆ ಕಾರಣ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಇನೋವಾದಲ್ಲಿ ಬಂದ ವ್ಯಕ್ತಿಗಳ ಬಳಿ ಸರಿಯಾದ ದಾಖಲಾತಿ ಪಡೆದುಕೊಳ್ಳದೆ ರೂಂ ನೀಡಲಾಗಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪ ಮಾಡುತ್ತಿದ್ದಾರೆ. ಇನ್ನೊವಾದಲ್ಲಿ ಹಿಂದೂ ಯುವತಿ ಹಾಗೂ ಮುಸ್ಲಿಂ ಯುವಕನ ಜೋಡಿ ಇತ್ತು ಎಂದು ಹಿಂದೂಪರ ಸಂಘಟನೆಗಳು ಆರೋಪಿಸಿವೆ.

ಪುತ್ತೂರಿನ ಹೊರವಲಯವಾದ ನೆಹರು ನಗರದಲ್ಲಿರುವ ಈ ಲಾಡ್ಜ್‌ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಪೋಲೀಸರು ರೇಡ್‌ ಮಾಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ. ಪುತ್ತೂರು ನಗರ ಠಾಣೆ ಎಎಸ್ಐ ಅಂಜನೇಯ ರೆಡ್ಡಿ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡ ಲಾಡ್ಜ್‌ಗೆ ತೆರಳಿ ತನಿಖೆ ನಡೆಸಿದೆ. ಈ ವೇಳೆ ಅವರು ರೂಂ ನೀಡುವಾಗ ಪಡೆದುಕೊಳ್ಳುವ ದಾಖಲಾತಿಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ತನಿಖೆಯ ವೇಳೆ ಲಾಡ್ಜ್‌ನವರು ಯಾವುದೇ ಅಕ್ರಮ ನಡೆಸಿದ್ದು ಕಂಡು ಬಂದಿಲ್ಲ. ಹೀಗಾಗಿ ಪೊಲೀಸರು ವಿಚಾರಣೆ ನಡೆಸಿ ವಾಪಸ್ಸು ಬಂದಿರುವುದಾಗಿ ಪೊಲೀಸ್‌ ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿಯನ್ನು ಟೀಕಿಸಿದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿತ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಅವಾಚ್ಯವಾಗಿ ಟೀಕಿಸಿದ ವ್ಯಕ್ತಿಯೊಬ್ಬನನ್ನು ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ಕೆಎಎಸ್ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ನಡೆದಿದೆ.

ಹದಿನೈದು ಜನರ ಗುಂಪು ಯುವಕನ ಮೇಲೆ ಹಲ್ಲೆ ನಡೆಸಿದೆ. ಯುವಕನೊಬ್ಬ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದ ಎನ್ನಲಾಗಿದೆ. ಈ ಯುವಕನ ಮೇಲೆ ರೊಚ್ಚಿಗೆದ್ದ ಗುಂಪು ಹಲ್ಲೆ ಮಾಡಿ ಮೋದಿ, ಮೋದಿ ಎಂದು ಕೂಗು ಎಂದು ಬಲವಂತ ಮಾಡಿದೆ. ಆದರೆ ಯುವಕ ಇದಕ್ಕೆ ಒಪ್ಪದಿದ್ದಾಗ ಮತ್ತಷ್ಟು ಹಲ್ಲೆ ಮಾಡಿದೆ.

ಸುಮಾರು ಹದಿನೈದು ಜನರ ಯುವಕರ ಗುಂಪು ಯುವಕನ ಮೇಲೆ ಹಲ್ಲೆ ನಡೆಸಿದೆ. ಮಾತ್ರವಲ್ಲ, ನೀನು ಮೋದಿಗೆ ಬೈಯ್ಯುವ ಹಾಗಿಲ್ಲ, ನೀನು ಸಿದ್ದರಾಮಯ್ಯ ಫಾಲೋವರ್ ಆಗಿದ್ದರೆ ನಿಮ್ಮ ಮನೆಯಲ್ಲಿ ಇಟ್ಟುಕೊ ಎಂದು ಎಚ್ಚರಿಸಿದೆ. ಅಲ್ಲದೆ, ಮೋದಿ ಎಂದು ಹೆಸರು ಹೇಳು ಎಂದು ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಈ ಗುಂಪು ಯುವಕನ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಸದ್ಯ ಯುವಕನನ್ನು ಉಪ್ಪಾರಪೇಟೆ ಉಪ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿದೆ. ‌ಘಟನೆ ಸಂಬಂಧ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಹಲ್ಲೆ ನಡೆಸಿದವರನ್ನು ಪೊಲೀಸರು ಶೋಧಿಸುತ್ತಿದ್ದಾರೆ. ವಿಡಿಯೋವನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ.

ಇದನ್ನೂ ಓದಿ: Bangladesh Unrest: ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂದೂಗಳ ಮೇಲಿನ ದೌರ್ಜನ್ಯ; ಮತ್ತೊಂದು ದೇಗುಲ, ಮನೆಗೆ ಬೆಂಕಿ

Continue Reading
Advertisement
Independence day 2024
ವಿದೇಶ3 mins ago

Independence Day 2024: ಒಂದೇ ದಿನ ಸ್ವಾತಂತ್ರ್ಯ ಪಡೆದಿದ್ದರೂ ಪಾಕಿಸ್ತಾನದಲ್ಲೇಕೆ ಭಾರತಕ್ಕಿಂತ ಮೊದಲು ಸ್ವಾತಂತ್ರ್ಯ ದಿನಾಚರಣೆ?

Sexual Abuse
Latest37 mins ago

Sexual Abuse: ಫೇಲ್ ಮಾಡುವುದಾಗಿ ಹೆದರಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕನಿಗೆ 11 ಸಾವಿರ ರೂ. ದಂಡ!

Actor Darshan
ಬೆಂಗಳೂರು50 mins ago

Actor Darshan: ನಟ ದರ್ಶನ್‌ಗೆ ಆ.28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Job Alert
ಉದ್ಯೋಗ50 mins ago

Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಆ. 16 ಕೊನೆಯ ದಿನ

yogi adityanath
ದೇಶ53 mins ago

Yogi Adityanath: ಪಾಕ್‌ ಭಾರತದ ಜೊತೆ ವಿಲೀನವಾಗುತ್ತೆ…ಇಲ್ಲದಿದ್ದರೆ ಅಸ್ತಿತ್ವದಲ್ಲೇ ಇರಲ್ಲ- ಯೋಗಿ ಆದಿತ್ಯಾನಾಥ್‌

Sexual Abuse
Latest55 mins ago

Sexual Abuse: 3 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ 9ನೇ ತರಗತಿ ವಿದ್ಯಾರ್ಥಿ!

Viral Video
Latest1 hour ago

Viral Video: ಹಳೆಯ ವಿದ್ಯಾರ್ಥಿಗಳನ್ನು ಸಾಲಾಗಿ ಕರೆಸಿ ಬೆತ್ತದಿಂದ ಹೊಡೆದ ಪ್ರಾಂಶುಪಾಲರು! ಅಪರೂಪದ ವಿಡಿಯೊ

ICC ODI Rankings
ಕ್ರೀಡೆ1 hour ago

ICC ODI Rankings: ದ್ವಿತೀಯ ಸ್ಥಾನಕ್ಕೆ ನೆಗೆದ ರೋಹಿತ್​ ಶರ್ಮ; ಕುಸಿತ ಕಂಡ ಗಿಲ್​

Album Song
ಬೆಂಗಳೂರು1 hour ago

Album Song: ಅನಿವಾಸಿ ಕನ್ನಡಿಗರ ‘ಹನಿ ಹನಿ’ ಆಲ್ಬಂ ಸಾಂಗ್ ರಿಲೀಸ್‌ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್

Narendra Modi
ದೇಶ1 hour ago

Narendra Modi: ಭಾರತ ವಿಭಜನೆಯ ಕರಾಳ ದಿನ; ಬಾಧಿತರ ಧೈರ್ಯ, ತ್ಯಾಗವನ್ನು ದೇಶ ಎಂದಿಗೂ ಮರೆಯುವುದಿಲ್ಲ: ಮೋದಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ6 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ6 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ6 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌