Bank Irregularities: ಪದೇಪದೆ ಅಕ್ರಮ; 2 ಬ್ಯಾಂಕ್‌ಗಳ ಎಲ್ಲ ಸರ್ಕಾರಿ ಅಕೌಂಟ್ ಕ್ಲೋಸ್ ಮಾಡಲು ಸರ್ಕಾರ ಸೂಚನೆ - Vistara News

ಕರ್ನಾಟಕ

Bank Irregularities: ಪದೇಪದೆ ಅಕ್ರಮ; 2 ಬ್ಯಾಂಕ್‌ಗಳ ಎಲ್ಲ ಸರ್ಕಾರಿ ಅಕೌಂಟ್ ಕ್ಲೋಸ್ ಮಾಡಲು ಸರ್ಕಾರ ಸೂಚನೆ

Bank Irregularities: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ ಎಲ್ಲ ಶಾಖೆಗಳಲ್ಲಿ ಅಕೌಂಟ್ ಕ್ಲೋಸ್‌ ಮಾಡಲು ರಾಜ್ಯ ಸರ್ಕಾರ ಸೂಚನೆ ನೀಡಿದೆ.

VISTARANEWS.COM


on

Bank Irregularities
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬ್ಯಾಂಕ್‌ಗಳಲ್ಲಿ ಪದೇಪದೆ ಹಣ ಅಕ್ರಮ ವರ್ಗಾವಣೆ (Bank Irregularities) ಆಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ ಮಾಡಿದೆ. ಎರಡು ರಾಷ್ಟ್ರೀಕೃತ ಬ್ಯಾಂಕ್‌ಗಳ ಎಲ್ಲ ಸರ್ಕಾರಿ ಅಕೌಂಟ್ ಕ್ಲೋಸ್ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಈ ಬಗ್ಗೆ ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಪಿ.ಸಿ. ಜಾಫರ್‌ ಸುತ್ತೋಲೆ ಹೊರಡಿಸಿದ್ದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ ಎಲ್ಲ ಶಾಖೆಗಳಲ್ಲಿ ಅಕೌಂಟ್ ಕ್ಲೋಸ್‌ಗೆ ಸೂಚನೆ ನೀಡಿದ್ದಾರೆ. ಈ ಎರಡು ಬ್ಯಾಂಕ್‌ಗಳ ಎಲ್ಲ ಬ್ರ್ಯಾಂಚ್‌ಗಳಿಂದ ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು, ನಿಗಮಗಳು, ಮಂಡಳಿಗಳು, ಸ್ಥಳೀಯ ಸಂಸ್ಥೆಗಳು, ಯುನಿವರ್ಸಿಟಿ ಮತ್ತಿತರ ಸಂಸ್ಥೆಗಳು ಠೇವಣಿ, ಹೂಡಿಕೆಗಳನ್ನು ತಕ್ಷಣದಿಂದ ಹಿಂಪಡೆಯಲು ಸೂಚಿಸಿದ್ದಾರೆ. ಇನ್ನು ಮುಂದೆ ಈ ಎರಡು ಬ್ಯಾಂಕ್‌ಗಳಲ್ಲಿ ಯಾವುದೇ ರೀತಿಯ ಠೇವಣಿ ಹೂಡಿಕೆ ಇಡಬಾರದು. ಎಲ್ಲ ಇಲಾಖೆಗಳು ಅಕೌಂಟ್ ಕ್ಲೋಷರ್ ವರದಿಯನ್ನು ಸೆ.20ರ ಒಳಗೆ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಸರ್ಕಾರದ ಈ ನಿರ್ಧಾರಕ್ಕೆ ಕಾರಣವೇನು?

ಸರ್ಕಾರದ ನಿರ್ಧಾರಕ್ಕೆ ಪ್ರಮುಖವಾಗಿ ಎರಡು ಘಟನೆಗಳು ಕಾರಣವಾಗಿವೆ. ಕೆಐಎಡಿಬಿ 2011ರಲ್ಲಿ ರಾಜಾಜಿನಗರದ ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 25 ರೂ.ಗಳನ್ನು ಒಂದು ವರ್ಷದ ನಿಶ್ಚಿತ ಠೇವಣಿ ಹೂಡಿಕೆ ಇಟ್ಟಿತ್ತು. ಇದಕ್ಕೆ ಪ್ರತಿಯಾಗಿ ಇದೇ ಬ್ಯಾಂಕಿನ ಮತ್ತೊಂದು ಶಾಖೆಯಿಂದ 12 ಕೋಟಿಗಳ ಒಂದು ರಸೀದಿ ಹಾಗೂ 13 ಕೋಟಿಗಳ ಮತ್ತೊಂದು ರಸೀದಿ ನೀಡಲಾಗಿತ್ತು. ಅವಧಿ ಮುಕ್ತಾಯವಾದ ನಂತರ 13 ಕೋಟಿಗಳ ಠೇವಣಿ ನಗದೀಕರಿಸಲಾಗಿದೆ. ಆದರೆ ಎರಡನೇ ರಸೀದಿಗೆ 10 ವರ್ಷ ಕಳೆದರೂ ಹಣ ನಗದೀಕರಣವಾಗಿಲ್ಲ. ಅಕ್ರಮವಾಗಿ ಬ್ಯಾಂಕ್ ಅಧಿಕಾರಿಗಳು 14 ಕೋಟಿ ವರ್ಗಾವಣೆ ಮಾಡಿ ವಂಚನೆ ಎಸಗಿರುವ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ.

ಇದುವರೆಗೂ ಅದೆಷ್ಟೇ ಮೀಟಿಂಗ್, ಪತ್ರ ವ್ಯವಹಾರ ನಡೆದರೂ ಹಣ ವಾಪಸ್ ಆಗಿಲ್ಲ. ಇನ್ನೊಂದು ಪ್ರಕರಣ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಡೆದಿದೆ ಎಂದು ವರದಿಯಾಗಿದೆ. 2013ರಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯು ಅವೆನ್ಯೂ ರೋಡ್‌ನ ಎಸ್‌ಬಿಐ ಬ್ರ್ಯಾಂಚ್‌ನಲ್ಲಿ 10 ಕೋಟಿ ನಿಶ್ಚಿತ ಠೇವಣಿ ಇಟ್ಟಿತ್ತು. ಅವಧಿ ಮುಕ್ತಾಯವಾಗುವ ಮೊದಲೇ ಬ್ಯಾಂಕ್ ಅಧಿಕಾರಿಗಳಿಂದ ಅಕ್ರಮ ಎಸಗಲಾಗಿದೆ. ಖಾಸಗಿ ಕಂಪನಿಯ ಸಾಲಕ್ಕೆ ಸರ್ಕಾರದ ಹಣವನ್ನು ನಕಲಿ ದಾಖಲೆ ಸೃಷ್ಟಿಸಿ ಹೊಂದಾಣಿಕೆ ಮಾಡಲಾಗಿದೆ. ಇದುವರೆಗೂ 10 ಕೋಟಿ ಹಣ ಸರ್ಕಾರಕ್ಕೆ ವಾಪಸ್ ಆಗಿಲ್ಲ.

ಇದನ್ನೂ ಓದಿ | Ram Path: ಬೀದಿ ದೀಪಗಳನ್ನೂ ಬಿಡದ ಕಳ್ಳರು; ಅಯೋಧ್ಯೆಯ ರಾಮಪಥ, ಭಕ್ತಿಪಥದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಲೈಟ್ಸ್‌ ನಾಪತ್ತೆ

ಈ ಎರಡು ಪ್ರಕರಣಗಳ ಬಗ್ಗೆ ಸಾರ್ವಜನಿಕ ಲೆಕ್ಕ ಪತ್ರ ಸಮಿತಿಯಲ್ಲಿ ಚರ್ಚೆಯಾಗಿ ನಡಾವಳಿ ಸಲ್ಲಿಕೆಯಾಗಿದೆ. ಇದೇ ಮಾದರಿಯಲ್ಲಿ ಹತ್ತಾರು ಬ್ಯಾಂಕ್ ಅಕೌಂಟ್‌ಗಳಲ್ಲಿ ಅಕ್ರಮ ನಡೆದಿರುವ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಸ್ಟೇಟ್ ಬ್ಯಾಂಕ್ ಇಂಡಿಯಾ ಹಾಗೂ ಪಂಜಾಬ್ ನ್ಯಾಷನಲ್ ಬ್ಯಾಂಕ್ ಅಕೌಂಟ್ ಗಳ ಕ್ಲೋಸ್ ಮಾಡಲು ಸರ್ಕಾರದ ನಿರ್ಧಾರ ಮಾಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Government Employees: ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆ.17ಕ್ಕೆ ಅಭಿನಂದನಾ ಸಮಾರಂಭ, ಕಾರ್ಯಾಗಾರ: ಸಿ.ಎಸ್. ಷಡಾಕ್ಷರಿ

Government Employees: ನಮ್ಮ ಅಭಿಮಾನದ ಅಭಿನಂದನಾ ಸಮಾರಂಭದ ಹಿನ್ನೆಲೆಯಲ್ಲಿ ನೌಕರರಿಗೆ ಒಂದು ದಿನ ವಿಶೇಷ ಸಾಂದರ್ಭಿಕ ರಜೆಯನ್ನು ಸರ್ಕಾರ ಮಂಜೂರು ಮಾಡಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.

VISTARANEWS.COM


on

Government Employees
Koo

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆ.17ರಂದು ನಮ್ಮ ಅಭಿಮಾನದ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ನೌಕರರಿಗೆ (Government Employees) ಒಂದು ದಿನ ವಿಶೇಷ ಸಾಂದರ್ಭಿಕ ರಜೆಯನ್ನು ಸರ್ಕಾರ ಮಂಜೂರು ಮಾಡಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ತಿಳಿಸಿದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನಕ್ಕೆ ಸುಮಾರು 50 ಸಾವಿರಕ್ಕೂ ಹೆಚ್ಚು ನೌಕರರು ಜಿಲ್ಲಾ, ತಾಲೂಗಳಿಂದ ಭಾಗವಹಿಸಲಿದ್ದು, ಸರ್ಕಾರದಿಂದ ಆ.17 ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ ಹಾಗೂ ಎನ್‌ಪಿಎಸ್‌ ರದ್ದುಪಡಿಸಿ ಒಪಿಎಸ್ ಮರುಸ್ಥಾಪಿಸುವಲ್ಲಿ ರಾಷ್ಟ್ರಮಟ್ಟದ ಬೆಳವಣಿಗೆ ಕುರಿತು ಬಿ.ಪಿ.ರಾವತ್ ಅವರು ಉಪನ್ಯಾಸ ನೀಡಲಿದ್ದಾರೆ. ಪಿಎಸ್‌ಟಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಿ&ಆರ್ ನಿಯಮಗಳಲ್ಲಿನ ಸಮಸ್ಯೆಗಳ ಕುರಿತು ಸರ್ಕಾರದ ಉಪಕಾರ್ಯದರ್ಶಿ ದೇವರಾಜು ಅವರಿಂದ ಕಾರ್ಯಗಾರವನ್ನು ಏರ್ಪಡಿಸಲಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರದಾನ ಕಾರ್ಯದರ್ಶಿ ಶ್ರೀನಿವಾಸ್ ತಿಮ್ಮೇಗೌಡ, ಖಜಾಂಚಿ ಸಿದ್ದರಾಮಣ್ಣ, ಹಿರಿಯ ಉಪಾಧ್ಯಕ್ಷ ಎಂ.ವಿ.ರುದ್ರಪ್ಪ, ಎಸ್.ಬಸವರಾಜ್, ಉಪಾಧ್ಯಕ್ಷ ಸಿದ್ದೇಶ್, ಮಾಲತೇಶ್, ಕಾರ್ಯದರ್ಶಿ ಸದಾನಂದ, ಕ್ರೀಡಾ ಕಾರ್ಯದರ್ಶಿ ಚೇತನ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ | Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಆ. 16 ಕೊನೆಯ ದಿನ

ಆ.17ರಂದು ವಿಶೇಷ ಸಾಂದರ್ಭಿಕ ರಜೆ

ರಾಜ್ಯ ಸರ್ಕಾರಿ ನೌಕರರಿಗೆ (Government Employees) ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೃತಜ್ಞತೆ ಸಲ್ಲಿಸಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವೃಂದ ಸಂಘಗಳ ವತಿಯಿಂದ ಆ.17ರಂದು ನಗರದ ಅರಮನೆ ಆವರಣದಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಕಾರ್ಯಾಗಾರ ಆಯೋಜಿಸಲಾಗಿದೆ. ಹೀಗಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಕೂಲವಾಗಲೆಂದು ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು (Special casual leave) ರಾಜ್ಯ ಸರ್ಕಾರ ಮಂಜೂರು ಮಾಡಿದೆ.

ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ. ಬಿ ಸುತ್ತೋಲೆ ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವೃಂದ ಸಂಘಗಳ ವತಿಯಿಂದ ಆ.17ರಂದು ಬೆಂಗಳೂರು ನಗರದ ಅರಮನೆ ಆವರಣದಲ್ಲಿ ಅಭಿನಂದನೆ ಹಾಗೂ ಕಾರ್ಯಾಗಾರ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ನೌಕರರು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Independence day 2024: ಆಗಸ್ಟ್ 15ರಂದು ಪ್ರಧಾನಿ ಮೋದಿ ಭಾಷಣವನ್ನು ಎಷ್ಟು ಹೊತ್ತಿಗೆ, ಎಲ್ಲಿ ವೀಕ್ಷಿಸಬಹುದು?

ಸಮ್ಮೇಳನದಲ್ಲಿ ಭಾಗವಹಿಸಿದ ಬಗ್ಗೆ ಅಧಿಕೃತ ಹಾಜರಾತಿ ಪತ್ರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಅಥವಾ ಅವರಿಂದ ನಾಮನಿರ್ದೇಶನ ಹೊಂದಿದ ಅಧಿಕಾರಿಗಳಿಂದ ಪಡೆದು ಒದಗಿಸಬೇಕು. ಈ ಷರತ್ತಿಗೊಳಪಟ್ಟು ಬೆಂಗಳೂರು ನಗರ ಜಿಲ್ಲೆಯ ಹಾಗೂ ರಾಜ್ಯದ ಇತರೆ ಜಿಲ್ಲೆಗಳ ಅಧಿಕಾರಿ, ನೌಕರರಿಗೆ ಆ.17ರಂದು ಸಾರ್ವಜನಿಕ ಕೆಲಸ ಕಾರ್ಯಗಳಿಗೆ ತೊಂದರೆಯಾಗದಂತೆ ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Continue Reading

ಬಳ್ಳಾರಿ

Ballari News: ಬಳ್ಳಾರಿಯಲ್ಲಿ ಉಚಿತ ಮೊಣಕಾಲಿನ ಕೀಲು ನೋವು ಚಿಕಿತ್ಸಾ ಶಿಬಿರ

Ballari News: ಬಳ್ಳಾರಿಯ ಶ್ರೀ ಗುರು ಪುಷ್ಕರ ಸೇವಾ ಸಮಿತಿಯ ವತಿಯಿಂದ ಬಳ್ಳಾರಿ ನಗರದಲ್ಲಿ ಉಚಿತ ಮೊಣಕಾಲಿನ ಕೀಲು ನೋವು ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ತಾರಾನಾಥ ಸರ್ಕಾರಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದಲ್ಲಿ ಆಯೋಜಿಸಿದ್ದ ಈ ಶಿಬಿರದಲ್ಲಿ ಮೊಣಕಾಲು ಕೀಲು ಮತ್ತು ಇತರೆ ಕಾಯಿಲೆಗಳನ್ನು ಪರೀಕ್ಷಿಸಲಾಯಿತು.

VISTARANEWS.COM


on

Ballari News
Koo

ಬಳ್ಳಾರಿ: ಬಳ್ಳಾರಿಯ ಶ್ರೀ ಗುರು ಪುಷ್ಕರ ಸೇವಾ ಸಮಿತಿಯ ವತಿಯಿಂದ ಬಳ್ಳಾರಿ ನಗರದಲ್ಲಿ ಉಚಿತ ಮೊಣಕಾಲಿನ ಕೀಲು ನೋವು ಚಿಕಿತ್ಸಾ ಶಿಬಿರವನ್ನು (Ballari News) ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: Golden Star Ganesh: ಗಣೇಶ್​​ಗೆ ಶುರುವಾಗಿದೆ ಗೋಲ್ಡನ್ ಟೈಮ್:  ಫ್ಯಾನ್ಸ್ ಶೋ ಹೌಸ್ ಫುಲ್!

ತಾರಾನಾಥ ಸರ್ಕಾರಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದಲ್ಲಿ ಆಯೋಜಿಸಿದ್ದ ಈ ಶಿಬಿರದಲ್ಲಿ ಮೊಣಕಾಲಿನ ಕೀಲು ನೋವು ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ನಡೆಯಿತು.

ಶಿಬಿರದಲ್ಲಿ 350ಕ್ಕೂ ಹೆಚ್ಚು ರೋಗಿಗಳಿಗೆ ತಪಾಸಣೆ ನಡೆಸಲಾಯಿತು.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ ತುಸು ಇಳಿಕೆ; ಇಂದಿನ ಬೆಲೆ ಚೆಕ್‌ ಮಾಡಿ

ಈ ಸಂದರ್ಭದಲ್ಲಿ ತಾರಾನಾಥ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ರಾಜಶೇಖರ ಗಿಣಗೇರ, ಡಾ.ಕೊಟ್ರೇಶ್‌, ಡಾ. ತಮೀಮ್, ಡಾ. ರಾಮಲಿಂಗ ಹೂಗಾರ, ಡಾ.ತಾಟ್ಲೆ, ಡಾ. ಲಲಿತಾ, ಡಾ. ಸುಷ್ಮಿತಾ ಹಾಗೂ ಎಸ್.ಎಸ್. ಕೇವಲ್ಚಂದ್‌ ವಿನಾಕಿಯಾ, ಶ್ರೀ ಗುರು ಪುಷ್ಕರ ಸೇವಾ ಸಮಿತಿಯ ಅಧ್ಯಕ್ಷ ಅಶೋಕ್‌ ಭಂಡಾರಿ, ದೀಪೇಶ್ ಪರಾಖ್ ಮತ್ತು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Bengaluru News: ಬೆಂಗಳೂರಿನಲ್ಲಿ ʼಸಾರ್ಕೋಮಾ ಕ್ಯಾನ್ಸರ್‌ʼ ಜಾಗೃತಿಗಾಗಿ ಎಚ್‌ಸಿಜಿಯಿಂದ 5ಕೆ ವಾಕಥಾನ್

Bengaluru News: ಅಪರೂಪದ ಕ್ಯಾನ್ಸರ್‌ಗಳಲ್ಲಿ ಒಂದಾದ “ಸಾರ್ಕೋಮಾ’ ಕುರಿತು ಜಾಗೃತಿ ಮೂಡಿಸಲು ಬೆಂಗಳೂರಿನಲ್ಲಿ ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ “ಸಾರ್ಕೋಮಾ ಸ್ಟ್ರಾಂಗ್‌ ರೈಟ್‌ ಸ್ಟೆಪ್‌ ಫಸ್ಟ್‌ ಟೈಮ್‌” ಎಂಬ ಶೀರ್ಷಿಕೆಯಡಿ 5ಕೆ ವಾಕಥಾನ್ ನಡೆಸಲಾಯಿತು.

VISTARANEWS.COM


on

Bengaluru News
Koo

ಬೆಂಗಳೂರು: ಅಪರೂಪದ ಕ್ಯಾನ್ಸರ್‌ಗಳಲ್ಲಿ ಒಂದಾದ “ಸಾರ್ಕೋಮಾ’ (Sarcoma Cancer) ಕುರಿತು ಜಾಗೃತಿ (awareness) ಮೂಡಿಸಲು ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ “ಸಾರ್ಕೋಮಾ ಸ್ಟ್ರಾಂಗ್‌ ರೈಟ್‌ ಸ್ಟೆಪ್‌ ಫಸ್ಟ್‌ ಟೈಮ್‌” ಎಂಬ ಶೀರ್ಷಿಕೆಯಡಿ 5ಕೆ ವಾಕಥಾನ್ (Bengaluru News) ನಡೆಸಲಾಯಿತು.

ಇದನ್ನೂ ಓದಿ: President’s Police Medal: ರಾಜ್ಯದ 20 ಪೊಲೀಸರಿಗೆ ರಾಷ್ಟ್ರಪತಿಯವರ ಸೇವಾ ಪದಕ; ಇಲ್ಲಿದೆ ಮಾಹಿತಿ

ನಗರದ ಸೇಂಟ್‌ ಜೋಸೆಫ್‌ ಮೈದಾನದಿಂದ ಬೆಳಗ್ಗೆ 7 ಗಂಟೆಗೆ ಪ್ರಾರಂಭಗೊಂಡ ವಾಕಥಾನ್‌ ಕಬ್ಬನ್‌ ಪಾರ್ಕ್‌, ವಿಧಾನಸೌಧದ ಸುತ್ತಮುತ್ತಲ ಪ್ರದೇಶದ ಮೂಲಕ ತೆರಳಲಾಯಿತು.

ಈ ವೇಳೆ ಮಾತನಾಡಿದ ಎಚ್‌ಸಿಜಿ ಪ್ರಾದೇಶಿಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೀಶಾ ಕುಮಾರ್, ಅಪರೂಪದ ಕ್ಯಾನ್ಸರ್‌ಗಳಲ್ಲಿ ಒಂದಾದ ಸಾರ್ಕೋಮಾ ಕ್ಯಾನ್ಸರ್‌ ಯಾವುದೇ ಗುಣಲಕ್ಷಣವಿಲ್ಲದೆ ಕಾಣಿಸಿಕೊಂಡು ಬಾಧಿಸುತ್ತದೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅನಿವಾರ್ಯ. ಈ ಕ್ಯಾನ್ಸರ್‌ನಿಂದ ಬದುಕುಳಿದವರಲ್ಲಿ ಆತ್ಮಸ್ಥೈರ್ಯ ತುಂಬುವ ಹಾಗೂ ಕ್ಯಾನ್ಸರ್‌ ವಿರುದ್ಧ ಹೋರಾಡುವವರ ಜತೆ ನಾವಿದ್ದೇವೆ ಎಂಬ ಸಂದೇಶದೊಂದಿಗೆ ಈ ವಾಕಥಾನ್‌ ನಡೆಸಲಾಯಿತು ಎಂದು ಅವರು ತಿಳಿಸಿದರು.

ಇದನ್ನೂ ಓದಿ: Kannada New Movie: ತೆರೆಗೆ ಬರಲು ಸಿದ್ಧವಾಗಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ʼಸ್ವಪ್ನ ಮಂಟಪʼ ಚಿತ್ರ

ವಾಕಥಾನ್‌ನಲ್ಲಿ ಸಾರ್ಕೋಮಾ ಕ್ಯಾನ್ಸರ್‌ನಿಂದ ಬದುಕುಳಿದ ಪ್ರತೀಕ್ಷಾ, ನೌಕಾಪಡೆಯ ಅಧಿಕಾರಿ ಅರ್ನಾಲ್ಡ್ ರೆಗೊ, ಎಚ್‌ಸಿಜಿ ಪ್ರಾದೇಶಿಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೀಶಾ ಕುಮಾರ್, ಆರ್ಥೋಪೆಡಿಕ್ ಆಂಕೊಲಾಜಿ ಮುಖ್ಯಸ್ಥ ಡಾ. ಪ್ರಮೋದ್ ಎಸ್. ಚಿಂದರ್ ಹಾಗೂ ಕ್ಯಾನ್ಸರ್‌ನಿಂದ ಬದುಕುಳಿದ ರೋಗಿಗಳು, ಅವರ ಕುಟುಂಬಸ್ಥರು, ಆಸ್ಪತ್ರೆ ಸಿಬ್ಬಂದಿ ಸೇರಿದಂತೆ ಸುಮಾರು 850 ಜನರು ಉತ್ಸಾಹದಿಂದ ಪಾಲ್ಗೊಂಡಿದ್ದರು.

Continue Reading

ಕರ್ನಾಟಕ

Vidhana Soudha: ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂದೆಯೇ ಬೈಕ್‌ಗೆ ಬೆಂಕಿ ಹಚ್ಚಿದ ಯುವಕ!

Vidhana Soudha: ತಾಯಿಯನ್ನು ಅವಾಚ್ಯ ಶಬ್ದಗಳಿಂದ ಪೊಲೀಸರು ಬೈದಿದ್ದಾರೆ ಎಂದು ಆಕ್ರೋಶಗೊಂಡ ಯುವಕ, ವಿಧಾನಸೌಧ ಮುಂಭಾಗ ಬೈಕ್ ನಿಲ್ಲಿಸಿ ಬೆಂಕಿ ಇಟ್ಟಿದ್ದಾನೆ.

VISTARANEWS.COM


on

Vidhana Soudha
Koo

ಬೆಂಗಳೂರು: ಪೊಲೀಸರ ಮೇಲಿನ ಕೋಪಕ್ಕೆ ಯುವಕನೊಬ್ಬ, ವಿಧಾನಸೌಧ (Vidhana Soudha) ಮುಂದೆಯೇ ಬೈಕ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿರುವ ಘಟನೆ ಬುಧವಾರ ನಡೆದಿದೆ. ಚಳ್ಳಕೆರೆ ಮೂಲದ ಪೃಥ್ವಿರಾಜ್ ಎಂಬಾತನಿಂದ ಕತ್ಯ ನಡೆದಿದೆ.

ಟ್ರೆಕ್ಕಿಂಗ್ ಹೋಗಿ ಪೃಥ್ವಿ ನಾಪತ್ತೆಯಾಗಿದ್. ಹೀಗಾಗಿ ದೂರು ನೀಡಲು ಚಳ್ಳಕೆರೆ ಪೊಲೀಸ್ ಠಾಣೆಗೆ ಯುವಕನ ತಾಯಿ ಹೋಗಿದ್ದರು. ಆ ವೇಳೆ ಪೊಲೀಸರು ಪೃಥ್ವಿ ತಾಯಿಯನ್ನು ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎನ್ನಲಾಗಿದೆ. ಆ ಕೋಪಕ್ಕೆ ವಿಧಾನಸೌಧ ಮುಂಭಾಗ ಬೈಕ್ ನಿಲ್ಲಿಸಿ ಯುವಕ ಬೆಂಕಿ ಇಟ್ಟಿದ್ದಾನೆ. ಸದ್ಯ ಯುವಕನನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ | ಇದನ್ನೂ ಓದಿ: Physical Abuse : ತಪಾಸಣೆಗೆ ಬಂದ ರೋಗಿಗಳಿಬ್ಬರನ್ನು ಅತ್ಯಾಚಾರ ಮಾಡಿದ ಸರ್ಕಾರಿ ವೈದ್ಯ; ಜೂನಿಯರ್​ ವೈದ್ಯರ ಪೆಟ್ಟು ತಿಂದು ಐಸಿಯು ಸೇರಿದ ಆರೋಪಿ

ಮೂರು ವರ್ಷಗಳಿಂದ ಕಾಣೆಯಾಗಿದ್ದ ವ್ಯಕ್ತಿಯ ಅಸ್ಥಿಪಂಜರ ಮನೆಯಲ್ಲೇ ಇತ್ತು!

body found dharwad news
body found dharwad news

ಧಾರವಾಡ: ವ್ಯಕ್ತಿಯೊಬ್ಬರು ಕಣ್ಮರೆಯಾಗಿ ಮೂರು ವರ್ಷಗಳ ನಂತರ ಅವರ ಅಸ್ಥಿಪಂಜರ (Body Found) ಪತ್ತೆಯಾಗಿದೆ. ಅದೂ ಧಾರವಾಡ (Dharwad news) ನಗರದಲ್ಲಿ ಅವರ ಸ್ವಂತ ಮನೆಯಲ್ಲೇ! ಶವ ಮನೆಯಲ್ಲಿ ಮಲಗಿದ ಸ್ಥಿತಿಯಲ್ಲೇ ಕಂಡುಬಂದಿದೆ. ಆದರೆ ಮೂರು ವರ್ಷಗಳಿಂದ ಯಾರೂ ಇದನ್ನು (Viral News) ಗಮನಿಸಿಲ್ಲ!

ಧಾರವಾಡದ ಮಾಳಮಡ್ಡಿ ಬಡಾವಣೆಯ ಕೆನರಾ ಬ್ಯಾಂಕ್ ಬಳಿ ಘಟನೆ ನಡೆದಿದೆ. ಚಂದ್ರಶೇಖರ್ ಎಂಬ ಈ ವ್ಯಕ್ತಿ ಮೂರು‌ ವರ್ಷಗಳಿಂದ ಎಲ್ಲೂ ಕಾಣಿಸಿರಲಿಲ್ಲ. ಕಳೆದ ತಿಂಗಳು ಈತ ಕಾಣುತ್ತಿಲ್ಲ ಎಂದು ಧಾರವಾಡ ವಿದ್ಯಾಗಿರಿ ಠಾಣೆಯಲ್ಲಿ ಒಬ್ಬರು ದೂರು ಕೊಟ್ಟಿದ್ದರು. ಚಂದ್ರಶೇಖರ್‌ ಅವರನ್ನು ಎಲ್ಲ ಕಡೆ ಹುಡುಕಾಡಿದ್ದ ಪೊಲೀಸರು, ನಿನ್ನೆ ಅವರ ಮನೆಗೆ ಹೋಗಿದ್ದರು. ಅಲ್ಲಿ ಹೋದಾಗ‌ ಪೊಲೀಸರಿಗೆ ಅಚ್ಚರಿಯಾಗುವಂತೆ ಚಂದ್ರಶೇಖರ್ ಅಸ್ಥಿಪಂಜರ ಮನೆಯಲ್ಲೇ ಪತ್ತೆಯಾಗಿದೆ.

ಚಂದ್ರಶೇಖರ್ ತಮ್ಮ ಪತ್ನಿಯ ಸಾವಿನ ನಂತರ ಮನೆಯಲ್ಲಿ ಒಬ್ಬನೇ ಇರುತ್ತಿದ್ದರು. ಅದಾದ ಬಳಿಕ ಕೋವಿಡ್ ಬಂದಿತ್ತು. ಕೋವಿಡ್ ವೇಳೆಯೇ ಇವರು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಮೃತ ವ್ಯಕ್ತಿಯ ಸಂಬಂಧಿಕರು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಇರುವ ಬಗ್ಗೆ ಮಾಹಿತಿ ಇದೆ. ಯಾರೂ ಇವರ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಿರಲಿಲ್ಲ.

ಇದನ್ನೂ ಓದಿ | Bank Irregularities: ಪದೇಪದೆ ಅಕ್ರಮ; 2 ಬ್ಯಾಂಕ್‌ಗಳ ಎಲ್ಲ ಸರ್ಕಾರಿ ಅಕೌಂಟ್ ಕ್ಲೋಸ್ ಮಾಡಲು ಸರ್ಕಾರ ಸೂಚನೆ

ಇವರು ಹಾಲು, ಪೇಪರ್‌ ಕೂಡ ಹಾಕಿಸಿಕೊಳ್ಳುತ್ತಿರಲಿಲ್ಲ. ಹೀಗಾಗಿ ವ್ಯಕ್ತಿ ಸತ್ತದ್ದು ಯಾರ ಗಮನಕ್ಕೂ ಬಂದಿಲ್ಲ. ಸುತ್ತಮುತ್ತ ಮನೆಗಳಿದ್ದರೂ ಯಾರಿಗೂ ಗೊತ್ತಾಗಿಲ್ಲ ಎಂಬುದು ವಿಚಿತ್ರ. ಸದ್ಯ ಅಸ್ಥಿಪಂಜರವನ್ನು ವಶಕ್ಕೆ ಪಡೆದ ಪೊಲೀಸರು, ಇದು ಅವರದೇನಾ ಎಂದು ತಿಳಿಯಲು ವಿಧಿವಿಜ್ಞಾನ ತಪಾಸಣೆಗೆ ಕಳಿಸಿದ್ದಾರೆ.

Continue Reading
Advertisement
Varamahalakshmi Festival 2024
ಫ್ಯಾಷನ್2 mins ago

Varamahalakshmi Festival 2024: ಹಬ್ಬಕ್ಕೆ ಸೀರೆಯನ್ನು ದಾವಣಿಯಂತೆ ಉಡುವುದು ಹೇಗೆ? ಇಲ್ಲಿದೆ ಸಿಂಪಲ್‌ ಐಡಿಯಾ

Terror Attack
ದೇಶ30 mins ago

Terror Attack: ಕ್ಯಾಪ್ಟನ್‌ ಹುತಾತ್ಮರಾಗಿರುವ ಬೆನ್ನಲ್ಲೇ ಉಗ್ರನನ್ನು ಹೊಡೆದುರುಳಿಸಿದ ಸೇನೆ; ಮುಂದುವರಿದ ಕಾರ್ಯಾಚರಣೆ

Viral Video
Latest31 mins ago

Viral Video: ಶಾಲೆಯಲ್ಲಿ ಶಿಕ್ಷಕಿ, ಶಿಕ್ಷಕನ ನಡುವೆ ಭೀಕರ ಮಾರಾಮಾರಿ! ವಿಡಿಯೊ ನೋಡಿದವರಿಗೆ ಗಾಬರಿ!

Sexual Abuse
Latest59 mins ago

Sexual Abuse: ದಲಿತ ಬಾಲಕಿಯನ್ನು ಅಪಹರಿಸಿ ಇಸ್ಲಾಂಗೆ ಮತಾಂತರ; ಮುಸ್ಲಿಂ ಧರ್ಮಗುರು ಬಂಧನ

Government Employees
ಕರ್ನಾಟಕ1 hour ago

Government Employees: ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆ.17ಕ್ಕೆ ಅಭಿನಂದನಾ ಸಮಾರಂಭ, ಕಾರ್ಯಾಗಾರ: ಸಿ.ಎಸ್. ಷಡಾಕ್ಷರಿ

Viral News
Latest1 hour ago

Viral News: ಭರತನಾಟ್ಯ ರಂಗಪ್ರವೇಶ ಮಾಡಿ ಇತಿಹಾಸ ನಿರ್ಮಿಸಿದ 13 ವರ್ಷದ ಚೀನೀ ಬಾಲಕಿ

kolkata doctor murder case
ದೇಶ1 hour ago

Kolkata Doctor Murder Case: ದೇಹದಲ್ಲಿ 150 ಮಿಲಿ ಗ್ರಾಂ ವೀರ್ಯ ಪತ್ತೆ- ಟ್ರೈನಿ ವೈದ್ಯೆಯ ಮೇಲೆ ಗ್ಯಾಂಗ್‌ರೇಪ್‌ ಆಗಿತ್ತಾ?

Sexual Abuse
Latest1 hour ago

Sexual Abuse: ಹಿಂದೂ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಬಲವಂತವಾಗಿ ಗೋಮಾಂಸ ತಿನ್ನಿಸಿ ದೌರ್ಜನ್ಯ

Independence Day 2024
ದೇಶ2 hours ago

Independence day 2024: ಆಗಸ್ಟ್ 15ರ ಕುರಿತ 8 ಪ್ರಶ್ನೆಗಳಿಗೆ ಇಲ್ಲಿದೆ ಕುತೂಹಲಕರ ಉತ್ತರ!

Disha Patani Goes Bold in Strapless Gown As She Flaunts Her Curves During Sexy Photoshoot
ಬಾಲಿವುಡ್2 hours ago

Disha Patani: ಬೋಲ್ಡ್‌ ಫೋಟೊಶೂಟ್‌ನಲ್ಲಿ ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ದಿಶಾ ಪಟಾನಿ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ6 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ6 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ6 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌