Vastu Tips: ಮನಸ್ಸಿಗೆ ನೆಮ್ಮದಿ, ಮನೆಯಲ್ಲಿ ಸಮೃದ್ಧಿಗಾಗಿ ಇಲ್ಲಿದೆ ಸರಳ ವಾಸ್ತು ಸೂತ್ರ - Vistara News

ಧಾರ್ಮಿಕ

Vastu Tips: ಮನಸ್ಸಿಗೆ ನೆಮ್ಮದಿ, ಮನೆಯಲ್ಲಿ ಸಮೃದ್ಧಿಗಾಗಿ ಇಲ್ಲಿದೆ ಸರಳ ವಾಸ್ತು ಸೂತ್ರ

ಮನೆಯಲ್ಲಿ ಕೆಲವೊಂದು ಸಸ್ಯಗಳನ್ನು ಇಡುವುದು, ದೂಪ ದ್ರವ್ಯಗಳನ್ನು ಸುಡುವುದು ವಾಸ್ತು ಶಾಸ್ತ್ರದ (Vastu Tips) ಪ್ರಕಾರ ಮನೆಗೆ ಹಣ, ಸಂತೋಷ, ಸಮೃದ್ಧಿಯನ್ನು ಆಕರ್ಷಿಸುತ್ತದೆ. ಮನೆಯಲ್ಲಿ ಯಾವ ಸಸ್ಯಗಳನ್ನು ಇಡಬಹುದು, ಧೂಪದ್ರವ್ಯಗಳನ್ನು ಸುಡುವುದರಿಂದ ಏನು ಪ್ರಯೋಜನ, ಮನೆಯ ಸಮೃದ್ಧಿಗಾಗಿ ಏನು ಮಾಡಬಹುದು ಎನ್ನುವ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

Vastu Tips
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮನೆಯಲ್ಲಿ (vastu for home) ಸುಖ, ಶಾಂತಿ, ನೆಮ್ಮದಿ ಇರಬೇಕು ಎಂದು ಎಲ್ಲರೂ ಬಯಸುತ್ತಾರೆ. ಇದಕ್ಕಾಗಿ ವಾಸ್ತು ಶಾಸ್ತ್ರದಲ್ಲಿ (Vastu Tips) ಕೆಲವು ಸಲಹೆಗಳನ್ನೂ ನೀಡಲಾಗಿದೆ. ಮನೆಯಲ್ಲಿ ಕೆಲವೊಂದು ಸಸ್ಯಗಳನ್ನು (tree) ಇಡುವುದು, ಧೂಪ ದ್ರವ್ಯಗಳನ್ನು (Incense stick) ಸುಡುವುದು ವಾಸ್ತು ಶಾಸ್ತ್ರದ ಪ್ರಕಾರ ಮನೆಗೆ ಹಣ, ಸಂತೋಷ, ಸಮೃದ್ಧಿಯನ್ನು ಆಕರ್ಷಿಸುತ್ತದೆ. ಹೀಗಾಗಿ ಮನೆಯಲ್ಲಿ ಯಾವ ಸಸ್ಯಗಳನ್ನು ಇಡಬಹುದು, ಧೂಪದ್ರವ್ಯಗಳನ್ನು ಸುಡುವುದರಿಂದ ಏನು ಪ್ರಯೋಜನ, ಮನೆಯ ಸಮೃದ್ಧಿಗಾಗಿ ಏನು ಮಾಡಬಹುದು ಎನ್ನುವ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಸಸ್ಯಗಳು

ಹೆಸರೇ ಹೇಳುವಂತೆ ಮನಿ ಪ್ಲಾಂಟ್‌ ಮನೆಯಲ್ಲಿ ಲಕ್ಷ್ಮಿ ನೆಲೆಸಲು ಕಾರಣವಾಗುತ್ತವೆ ಎನ್ನುವ ನಂಬಿಕೆ ಇದೆ. ಬೇಗ ಶ್ರೀಮಂತರಾಗಲು ಇದು ಸಹಾಯ ಮಾಡುತ್ತದೆ ಎನ್ನಲಾಗುತ್ತದೆ. ವಾಸ್ತು ಶಾಸ್ತ್ರದಲ್ಲಿ ಮನಿಪ್ಲಾಂಟ್‌ಗೆ ವಿಶೇಷವಾದ ಸ್ಥಾನಮಾನವಿದೆ. ಮನೆಯಲ್ಲಿ ಮನಿ ಪ್ಲಾಂಟ್‌ಗಳನ್ನು ಇಟ್ಟುಕೊಳ್ಳುವುದು ಹಣ ಮತ್ತು ಸಮೃದ್ಧಿಯನ್ನು ಆಕರ್ಷಿಸುತ್ತದೆ ಎನ್ನುತ್ತದೆ ವಾಸ್ತು ಶಾಸ್ತ್ರ. ಮನಿ ಪ್ಲಾಂಟ್, ಬಿದಿರಿನ ಸಸ್ಯ ಮತ್ತು ರಬ್ಬರ್ ಸಸ್ಯಗಳಂತಹ ಸಸ್ಯಗಳು ಜೀವನದಲ್ಲಿ ಸಂತೋಷವನ್ನು ಆಕರ್ಷಿಸಲು ಸಹಾಯಕವಾಗಿವೆ.


ಧೂಪದ್ರವ್ಯ

ಧೂಪದ್ರವ್ಯದ ತುಂಡುಗಳು ಜೀವನದಲ್ಲಿ ಸಕಾರಾತ್ಮಕತೆ ಮತ್ತು ಸಮೃದ್ಧಿಯನ್ನು ಆಕರ್ಷಿಸುತ್ತವೆ. ಮನೆಯಲ್ಲಿ ಅಗರಬತ್ತಿಯನ್ನು ಸುಡುವುದು ವಾಸ್ತು ಪ್ರಕಾರ ಒಳ್ಳೆಯ ಅಭ್ಯಾಸ. ಧೂಪದ್ರವ್ಯದ ತುಂಡುಗಳಿಂದ ಹೊರ ಬರುವ ಹೊಗೆ ಮತ್ತು ಹೋಮ ಹವನದ ಹೊಗೆ ಪರಿಸರವನ್ನು ಶುದ್ಧೀಕರಿಸುತ್ತದೆ ಎಂದು ಹೇಳಲಾಗುತ್ತದೆ. ಇದು ಪವಿತ್ರ ವಾತಾವರಣವನ್ನು ಸೃಷ್ಟಿಸುತ್ತದೆ. ಧೂಪದ್ರವ್ಯದ ಪರಿಮಳಯುಕ್ತ ಹೊಗೆಯು ಗಾಳಿಯನ್ನು ಶುದ್ಧೀಕರಿಸುತ್ತದೆ, ಮನಸ್ಸನ್ನು ಶಾಂತಗೊಳಿಸುತ್ತದೆ.


ಸ್ವಚ್ಛವಾದ ಪ್ರವೇಶ ದ್ವಾರ

ಮನೆಯಲ್ಲಿ ಸಕಾರಾತ್ಮಕತೆ ಮತ್ತು ಕ್ಷೇಮವನ್ನು ಆಕರ್ಷಿಸಲು ಉತ್ತಮವಾದ ಮತ್ತು ಸ್ವಚ್ಛವಾದ ಪ್ರವೇಶದ್ವಾರವು ಮುಖ್ಯವಾಗಿದೆ. ವಾಸ್ತು ಪ್ರಕಾರ, ನಿಮ್ಮ ಪ್ರವೇಶ ದ್ವಾರವು ಮನಸ್ಸನ್ನು ಹರ್ಷಗೊಳ್ಳುವಂತೆ ಮಾಡಬೇಕು. ಇದಕ್ಕಾಗಿ ನಿತ್ಯವೂ ಮನೆಯ ಪ್ರವೇಶ ದ್ವಾರವನ್ನು ಸ್ವಚ್ಛಗೊಳಿಸಿ ರಂಗೋಲಿ ಹಾಕುವುದು, ಹೂವುಗಳಿಂದ ದ್ವಾರವನ್ನು ಅಲಂಕರಿಸುವುದು ಒಳ್ಳೆಯದು.


ನೀರಿನ ಸೋರಿಕೆ

ವಾಸ್ತು ಪ್ರಕಾರ ಮನೆಯೊಳಗೇ ನೀರು ಸೋರಿಕೆಯಾಗುತ್ತಿದ್ದರೆ ಕೂಡಲೇ ಅದನ್ನು ಸರಿಪಡಿಸಬೇಕು. ಮನೆಯ ಸುತ್ತಲೂ ನೀರಿನ ಸೋರಿಕೆ ಇದ್ದರೆ ಅದನ್ನು ಸರಿಪಡಿಸಿ. ಯಾಕೆಂದರೆ ನೀರು ಸೋರಿಕೆಯು ಮನೆಮಂದಿಯ ಜೀವನದ ಬೆಳವಣಿಗೆಗೆ ಅಡ್ಡಿಯಾಗಬಹುದು ಮತ್ತು ಹಣದ ಹರಿವಿಗೆ ತೊಂದರೆ ಉಂಟು ಮಾಡಬಹುದು.

ಇದನ್ನೂ ಓದಿ: Vastu Tips: ಈ ವಸ್ತುಗಳನ್ನು ಮನೆಯಲ್ಲಿಟ್ಟರೆ ಸಂತೋಷ, ಸಮೃದ್ಧಿ, ನೆಮ್ಮದಿ ಸಿಗುತ್ತವೆ!


ತಾಮ್ರ ಸ್ವಸ್ತಿಕ

ಮನೆಯಲ್ಲಿ ತಾಮ್ರದ ಸ್ವಸ್ತಿಕವು ವಾಸ್ತು ಪ್ರಕಾರ ಜೀವನದಲ್ಲಿ ಹಣ, ಸಂತೋಷ ಮತ್ತು ಸಮೃದ್ಧಿಯನ್ನು ಆಕರ್ಷಿಸಲು ಉತ್ತಮ ಮಾರ್ಗವಾಗಿದೆ. ಮನೆಯ ಪ್ರವೇಶ ದ್ವಾರದಲ್ಲಿ ಅಥವಾ ಪೂಜಾ ಸ್ಥಳದಲ್ಲಿ ಇವನ್ನು ಇರಿಸುವುದು ಶುಭ ಎಂದು ಪರಿಗಣಿಸಲಾಗಿದೆ. ಸ್ವಸ್ತಿಕವು ಶಕ್ತಿ ಮತ್ತು ಶಾಂತಿಯ ಸಂಕೇತವೆಂದು ಪರಿಗಣಿಸಲಾಗಿದೆ. ಮನೆಯ ಮುಖ್ಯ ಬಾಗಿಲ ಬಳಿ ತಾಮ್ರದ ಸ್ವಸ್ತಿಕ ಇಟ್ಟರೆ ದಾರಿದ್ರ್ಯವೂ ಶಾಶ್ವತವಾಗಿ ದೂರವಾಗುತ್ತದೆ ಎನ್ನಲಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಧಾರ್ಮಿಕ

Varamahalakshmi Festival 2024: ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ ಏನು? ಹೆಚ್ಚಿನ ಫಲ ಪಡೆಯಲು ಪೂಜೆ ಹೇಗೆ ಮಾಡಬೇಕು?

ವರಲಕ್ಷ್ಮಿ ವ್ರತ ಪೂಜೆಗೆ (Varamahalakshmi Festival 2024) ಸುಂದರವಾದ ಮತ್ತು ಪ್ರಶಾಂತ ವಾತಾವರಣವನ್ನು ಸೃಷ್ಟಿಸಲು ಮನೆ, ಪೂಜಾ ಸ್ಥಳದ ಅಲಂಕಾರದಲ್ಲಿ ಸಾಂಪ್ರದಾಯಿಕ ಸ್ಪರ್ಶ ನೀಡಿ. ಇದರಿಂದ ಹಬ್ಬವನ್ನು ಸ್ಮರಣೀಯವಾಗಿ ಮಾಡಬಹುದು. ಹೆಚ್ಚು ಸಂತೋಷ ಮತ್ತು ಭಕ್ತಿಯಿಂದ ಆಚರಿಸಬಹುದು. ವರಲಕ್ಷ್ಮಿ ವ್ರತವನ್ನು ಹೇಗೆ ಆಚರಿಸಬೇಕು? ಅಲಂಕಾರ ಹೇಗಿರಬೇಕು ಇತ್ಯಾದಿ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

By

Koo

ವಿವಾಹಿತ ಮಹಿಳೆಯರು ವಿಶೇಷವಾಗಿ ಮಾಡುವ ವರಮಹಾಲಕ್ಷ್ಮಿ ಹಬ್ಬವನ್ನು (Varamahalakshmi Festival 2024) ಆಗಸ್ಟ್ 16ರಂದು ಶುಕ್ರವಾರ ಆಚರಿಸಲಾಗುತ್ತಿದೆ. ವರಲಕ್ಷ್ಮಿ ವ್ರತವು (varalakshmi vrata) ಮಹಿಳೆಯರೆಲ್ಲ ಸೇರಿ ಭಕ್ತಿ ಮತ್ತು ಸಂತೋಷದಿಂದ ಆಚರಿಸುತ್ತಾರೆ. ಈ ದಿನ ಮಹಿಳೆಯರು ಉಪವಾಸ (fasting) ವ್ರತ ಮಾಡಿ ಲಕ್ಷ್ಮಿ ದೇವಿಯನ್ನು ಪೂಜಿಸಿ ತಮ್ಮ ಪತಿ, ಮಕ್ಕಳು ಮತ್ತು ಇಡೀ ಕುಟುಂಬಕ್ಕೆ ಆಶೀರ್ವಾದವನ್ನು ಕೋರುತ್ತಾರೆ.

ಪಾರ್ವತಿ ದೇವಿಯು ಶಿವನಲ್ಲಿ ಒಮ್ಮೆ ಭೂಮಿಯಲ್ಲಿ ಮಹಿಳೆಯರ ಕಷ್ಟಗಳನ್ನು ದೂರ ಮಾಡಬಹುದಾದ ವ್ರತ ಯಾವುದು ಎಂಬುದಾಗಿ ಪ್ರಶ್ನಿಸುತ್ತಾಳೆ. ಅದಕ್ಕೆ ಶಿವನು ಒಂದು ಕಥೆ ಹೇಳುತ್ತಾನೆ. ಅದರ ಪ್ರಕಾರ ಕುಂಡಿನಿ ಎಂಬ ಪಟ್ಟಣದಲ್ಲಿ ಚಾರುಮತಿ ಎಂಬ ಬ್ರಾಹ್ಮಣ ಪತಿವ್ರತಾ ಸ್ತ್ರೀ ನಿರ್ಮಲ ಮನಸ್ಸಿನವಳಾಗಿದ್ದಳು. ಒಂದು ದಿನ ಲಕ್ಷ್ಮಿ ದೇವಿಯು ಆಕೆಯ ಕನಸಿನಲ್ಲಿ ಬಂದು ವರಲಕ್ಷ್ಮಿ ವ್ರತ ಮಾಡಿದರೆ ನಿನ್ನ ಇಷ್ಟಾರ್ಥವನ್ನು ನೆರವೇರಿಸುವುದಾಗಿ ಹೇಳುತ್ತಾಳೆ. ಬಳಿಕ ಆಕೆ ನೆರೆಹೊರೆಯ ಮಹಿಳೆಯರನ್ನು ಸೇರಿಸಿ ವರಮಹಾಲಕ್ಷ್ಮಿ ವ್ರತವನ್ನು ಮಾಡಿ, ಲಕ್ಷ್ಮಿ ದೇವಿಗೆ ಪೂಜೆಯನ್ನು ಸಲ್ಲಿಸುತ್ತಾಳೆ. ಬಳಿಕ ಅವಳ ಕಷ್ಟಗಳಲ್ಲೇ ಒಂದೊಂದಾಗಿ ಪರಿಹಾರವಾಗುತ್ತದೆ. ಆ ಬಳಿಕ ವರಮಹಾಲಕ್ಷ್ಮಿ ವ್ರತವು ಮಹಿಳೆಯರು ಮಾಡಬಹುದಾದ ಶ್ರೇಷ್ಠ ವ್ರತವಾಯಿತು ಎಂದು ಶಿವ ಪಾರ್ವತಿಗೆ ಹೇಳಿದನು ಎಂಬುದು ಈ ವ್ರತದ ಐತಿಹ್ಯ.

ವರಲಕ್ಷ್ಮಿ ವ್ರತವನ್ನು ಮಾಡುವ ಸಿದ್ಧತೆಯಲ್ಲಿ ಇರುವವರು ಈ ಬಾರಿ ಪೂಜೆಯ ಮನೆ, ದೇವಿಯ ಅಲಂಕಾರದಲ್ಲಿ ವಿಶೇಷತೆಯನ್ನು ತೋರಬಹುದು. ಈ ಮೂಲಕ ಹಬ್ಬವನ್ನು ಅರ್ಥಪೂರ್ಣಗೊಳಿಸಬಹುದು. ಅಲಂಕಾರದಲ್ಲಿ ಕುಟುಂಬದ ಸಂಪ್ರದಾಯ ಮತ್ತು ಶೈಲಿಯನ್ನು ಪ್ರತಿಬಿಂಬಿಸುವ ಅಂಶಗಳನ್ನು ಸೇರಿಸಲು ಮರೆಯದಿರಿ. ಕರಕುಶಲ ವಸ್ತುಗಳು, ಗೃಹೋಪಯೋಗಿ ವಸ್ತುಗಳನ್ನು ಅಲಂಕಾರಕ್ಕೆ ಬಳಸಿ.

ವರಮಹಾಲಕ್ಷ್ಮಿ ಪೂಜೆಯ ಅಲಂಕಾರಕ್ಕೆ ಬೇಕಾಗುವ ಸಾಮಗ್ರಿಗಳ ವಿವರ ಇಂತಿದೆ.


1. ಕುಂಕುಮ

ಹಣೆಯ ಮೇಲಿನ ಪವಿತ್ರ ಗುರುತಾಗಿ ಮತ್ತು ಪೂಜಾ ವಿಧಿಗಳಲ್ಲಿ ಕುಂಕುಮವನ್ನು ಬಳಸಿ. ಪೂಜಾ ಜಾಗಕ್ಕೆ ಸಾಂಪ್ರದಾಯಿಕ ಕೆಂಪು ಬಣ್ಣದ ಸ್ಪರ್ಶವನ್ನು ನೀಡಿ.

2. ಅರಶಿನ

ಹಬ್ಬದ ಆಚರಣೆ ಮತ್ತು ಅಲಂಕಾರಗಳಲ್ಲಿ ಅರಶಿನ ಅತ್ಯಗತ್ಯ. ಇದನ್ನು ಮಂಗಳಕರ ಮತ್ತು ಶುದ್ಧೀಕರಿಸುವ ಗುಣಗಳಿಗಾಗಿ ಬಳಸಲಾಗುತ್ತದೆ.

3. ಕಲಶ

ನೀರು, ತೆಂಗಿನಕಾಯಿ ಮತ್ತು ಮಾವಿನ ಎಲೆಗಳಿಂದ ತುಂಬಿದ ಕಲಶವನ್ನು ಅಲಂಕರಿಸಿ. ಇದು ಸಮೃದ್ಧಿಯನ್ನು ಸಂಕೇತಿಸುತ್ತದೆ ಮತ್ತು ಪೂಜಾದಲ್ಲಿ ಇದು ಕೇಂದ್ರ ಭಾಗವಾಗಿದೆ.

4. ಮಾವಿನ ಎಲೆಗಳು

ತಾಜಾ ಮಾವಿನ ಎಲೆಗಳನ್ನು ಪ್ರವೇಶದ್ವಾರದಲ್ಲಿ ಮತ್ತು ಪೂಜಾ ಪ್ರದೇಶದ ಸುತ್ತಲೂ ನೇತುಹಾಕಿ. ಅವರು ಶುದ್ಧತೆಯನ್ನು ಸೂಚಿಸುತ್ತದೆ ಮತ್ತು ನಕಾರಾತ್ಮಕ ಶಕ್ತಿಯನ್ನು ಹೊರಹಾಕುತ್ತದೆ.

5. ಬಾಳೆಹಣ್ಣು

ಪೂಜೆಯಲ್ಲಿ ಬಾಳೆ ಹಣ್ಣು ಅತ್ಯಂತ ಪ್ರಮುಖ ವಸ್ತು. ಇದನ್ನು ದೇವರಿಗೆ ನೈವೇದ್ಯವಾಗಿ ಸಮರ್ಪಿಸಲು, ಉಪವಾಸ ಮಾಡುತ್ತಿರುವ ಬಂದ ಅತಿಥಿಗಳಿಗೆ ನೀಡಲು ಬಳಸಬಹುದು.

Varamahalakshmi Festival 2024
Varamahalakshmi Festival 2024


6. ಲಕ್ಷ್ಮಿ ಮುಖ ಅಲಂಕಾರ

ಲಕ್ಷ್ಮಿ ದೇವಿಯ ಉಪಸ್ಥಿತಿ ಮತ್ತು ಆಶೀರ್ವಾದವನ್ನು ಸಂಕೇತಿಸಲು ಪೂಜಾ ಪ್ರದೇಶದ ಮಧ್ಯದಲ್ಲಿ ಲಕ್ಷ್ಮಿ ದೇವಿಯನ್ನು ಸುಂದರವಾಗಿ ಅಲಂಕರಿಸಿದ ಮುಖವನ್ನು ಇರಿಸಿ.

7. ಹೂವುಗಳು

ಚೆಂಡು ಹೂವು, ಸೇವಂತಿಗೆ, ಗುಲಾಬಿ ಮತ್ತು ಮಲ್ಲಿಗೆಯಂತಹ ಹೂವುಗಳನ್ನು ಪೂಜಾ ಸ್ಥಳವನ್ನು ಅಲಂಕರಿಸಲು ಬಳಸಬಹುದು. ಇದು ಪರಿಮಳಯುಕ್ತ ಮತ್ತು ವರ್ಣರಂಜಿತ ವಾತಾವರಣವನ್ನು ಸೃಷ್ಟಿಸುತ್ತದೆ.

8. ಹಣ್ಣುಗಳು

ಪೂಜಾ ಸ್ಥಳದ ಸುತ್ತಲೂ ತಾಜಾ ಹಣ್ಣುಗಳನ್ನು ನೈವೇದ್ಯವಾಗಿ ಜೋಡಿಸಿ. ಇದರಿಂದ ಪೂಜೆ ಸ್ಥಳದಲ್ಲಿ ನೈಸರ್ಗಿಕ ಸೌಂದರ್ಯದ ಅಲಂಕಾರ ಮಾಡಿದಂತಾಗುತ್ತದೆ. ಇದು ಸಮೃದ್ಧಿಯನ್ನು ಸೂಚಿಸುತ್ತದೆ.

9. ಚಂದನ

ಪವಿತ್ರ ಗುಣಲಕ್ಷಣ ಇರುವ ಶ್ರೀಗಂಧವನ್ನು ಪೇಸ್ಟ್ ಮಾಡಿ ಪೂಜಾ ಸ್ಥಳದಲ್ಲಿ ಇರಿಸಿ. ಇದನ್ನು ಪೂಜೆಯಲ್ಲಿ ಭಾಗವಹಿಸುವವರ ಹಣೆಗೆ ಹಚ್ಚಿ.

10. ಡ್ರೈ ಫ್ರೂಟ್ಸ್ ಮತ್ತು ಗಿಫ್ಟ್ ಹ್ಯಾಂಪರ್ಸ್

ಬಂದ ಅತಿಥಿಗಳಿಗೆ ನೀಡಲು ಒಣ ಹಣ್ಣು, ಉಡುಗೊರೆ ಹ್ಯಾಂಪರ್‌ಗಳನ್ನು ಮೊದಲೇ ಸಿದ್ದಪಡಿಸಿ ಅಲಂಕಾರದ ರೂಪದಲ್ಲಿ ಜೋಡಿಸಿ.


11. ಲಕ್ಷ್ಮಿ ದೇವಿಯ ವಿಗ್ರಹ

ಪೂಜಾ ಪ್ರದೇಶದ ಮಧ್ಯದಲ್ಲಿ ಸುಂದರವಾಗಿ ಅಲಂಕರಿಸಿದ ಲಕ್ಷ್ಮಿ ದೇವಿಯ ವಿಗ್ರಹವನ್ನು ಇರಿಸಿ. ಸುತ್ತಲೂ ಹೂವು ಮತ್ತು ಅಗತ್ಯ ವಸ್ತುಗಳನ್ನು ಜೋಡಿಸಿ.


12. ಧೂಪದ್ರವ್ಯದ ತುಂಡು

ಗಾಳಿಯನ್ನು ಶುದ್ಧೀಕರಿಸಲು ಮತ್ತು ಪೂಜಾ ಸ್ಥಳದ ಆಧ್ಯಾತ್ಮಿಕ ವಾತಾವರಣವನ್ನು ಹೆಚ್ಚಿಸಲು ಅಲಂಕಾರಿಕ ಸ್ಟ್ಯಾಂಡ್‌ನಲ್ಲಿ ಧೂಪದ್ರವ್ಯವನ್ನು ಬೆಳಗಿಸಿ.


ಇದನ್ನೂ ಓದಿ: Varamahalakshmi Festival 2024 : ವರಮಹಾಲಕ್ಷ್ಮಿ ಹಬ್ಬದ ದಿನ ಸುಲಭವಾಗಿ ಮಾಡಬಹುದಾದ ರುಚಿಕರ ಖಾದ್ಯಗಳಿವು; ವಿಡಿಯೊಗಳಿವೆ

13. ಲಕ್ಷ್ಮೀ ಪೂಜಾ ತಾಳಿ

ಕುಂಕುಮ, ಅರಶಿನ, ಅಕ್ಕಿ, ವೀಳ್ಯದೆಲೆ ಮತ್ತು ಅಡಿಕೆಯಂತಹ ಎಲ್ಲಾ ಅಗತ್ಯ ವಸ್ತುಗಳೊಂದಿಗೆ ಅಲಂಕರಿಸಿದ ಲಕ್ಷ್ಮಿ ಪೂಜಾ ತಾಳಿಯನ್ನು ಸಿದ್ಧಪಡಿಸಿ.

14. ಹೊಸ ರವಿಕೆ ಕಣ

ಪೂಜೆಯ ಭಾಗವಾಗಿ ಹೊಸ ರವಿಕೆ ತುಂಡುಗಳನ್ನು ದೇವರಿಗೆ ಅರ್ಪಿಸಿ. ಇದು ಗೌರವ ಮತ್ತು ಕೃತಜ್ಞತೆಯನ್ನು ಸಂಕೇತಿಸುವ ಸಾಂಪ್ರದಾಯಿಕ ಕೊಡುಗೆಯಾಗಿದೆ. ಇದನ್ನು ಬಂದಿರುವ ಮಹಿಳೆಯರಿಗೆ ನೀಡಿ.

Continue Reading

ಅಂಕಣ

ಧವಳ ಧಾರಿಣಿ ಅಂಕಣ: ರಾಮವಿಲಾಪಕ್ಕೆ ಲಕ್ಷ್ಮಣೋಪಶಮನ

ಧವಳ ಧಾರಿಣಿ ಅಂಕಣ: ಹಲವು ವಿಧಗಳಲ್ಲಿ ಸೀತೆಗಾಗಿ ವಿಲಪಿಸುತ್ತಾನೆ. ರಾಮನ ದುಃಖವನ್ನು ಶಮನ ಮಾಡುವ ಲಕ್ಷ್ಮಣನ ಸಂಯಮ ಅದ್ಭುತವಾದದ್ದು. ಲಕ್ಷ್ಮಣ ರಾಮನಿಗೆ ತನ್ನ ಕರ್ತವ್ಯವನ್ನು ನಿಭಾಯಿಸುವಂತೆ ಆತನನ್ನು ಎಚ್ಚರಿಸುವ ಅಪೂರ್ವ ಮಾತುಗಳು ಕಿಷ್ಕಿಂಧಾಕಾಂಡದ ಮೊದಲನೆಯ ಸರ್ಗದಲ್ಲಿ ಬರುತ್ತದೆ.

VISTARANEWS.COM


on

rama laxmana ಧವಳ ಧಾರಿಣಿ ಅಂಕಣ
Koo

ವಿಯೋಗದಿಂದ ಕದಡಿದ ಮನಸ್ಸಿಗೆ ಪೂರ್ವಸ್ಮೃತಿಯನ್ನು ತಂದುಕೊಡುವ ಸನ್ನಿವೇಶ

dhavala dharini by Narayana yaji

:: ನಾರಾಯಣ ಯಾಜಿ

ತ್ಯಜತ್ವಾಂ ಕಾಮವೃತ್ತತ್ತ್ವಂ ಶೋಕಂ ಸಂನ್ಯಸ್ಯ ಪೃಷತಃ I
ಮಹಾತ್ಮನಂ ಕೃತಾತ್ಮಾನಮಾತ್ಮಾನಂ ನಾವಬಿಧ್ಯಸೇ II ಕಿ. 1.123 II

ಸೀತಾವಿಯೋಗದಿಂದುಂಟಾಗಿರುವ ಶೋಕವನ್ನು ಬಿಡು. ಮನ್ಮಥವಿಕಾರವನ್ನು ತ್ಯಜಸು! ನೀನು ಮಹಾತ್ಮನೆಂಬುದನ್ನೂ , ಕೃತಾತ್ಮನೆನ್ನುವುದನ್ನೂ ಮರೆತುಬಿಟ್ಟಿರುವೆ.

ರಾಮಾಯಣದಲ್ಲಿ ಕಿಷ್ಕಿಂಧಾ ಕಾಂಡದ ಬಹುಮುಖ್ಯವಾದ ಘಟನೆಯೇ ಪತ್ನಿಯ ವಿರಹದಿಂದ ಅಪಾರ ದುಃಖಕ್ಕೆ ಒಳಗಾದ ರಾಮನನ್ನು ಲಕ್ಷ್ಮಣ ಸಮಾಧಾನಪಡಿಸುವುದು. ಕಿಷ್ಕಿಂಧಾ ಕಾಂಡದ ನಾಲ್ಕನೆಯ ಸರ್ಗದಲ್ಲಿ ಲಕ್ಷ್ಮಣ ಎಂಟು ಶ್ಲೋಕದಲ್ಲಿ ರಾಮನು ಸುಗ್ರೀವನಲ್ಲಿಗೆ ಶರಣು ಹೊಂದಲು ಬಂದಿದ್ದಾನೆ ಎನ್ನುವ ಮಾತುಗಳನ್ನು ಹೇಳಿದ್ದಾನೆ ಎನ್ನುವುದನ್ನು ನೋಡಿದ್ದೇವೆ. ಆರು ಬಗೆಯಲ್ಲಿ ಎಂಟು ಶ್ಲೋಕಗಳಲ್ಲಿ (ರಾಮಶ್ಚ ಸುಗ್ರೀವಂ ಶರಣಂ ಗತೌ ಮುಂತಾಗಿ) ಲಕ್ಷ್ಮಣನು ಹನುಮಂತನ ಹತ್ತಿರ ಕೇಳಿಕೊಳ್ಳುವ ಭಾಗ ರಾಮನ ವ್ಯಕ್ತಿತ್ವಕ್ಕೆ ಒಂದು ಕಪ್ಪುಚುಕ್ಕೆ ಎಂದು ಕೆಲ ಟೀಕಾಕಾರರು ಹೇಳಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಲಕ್ಷ್ಮಣ ಹಾಗೆ ಹೇಳಲಿಕ್ಕೆ ಕಾರಣವಾಗಿರುವ ಸಂಗತಿಯನ್ನು ಕಿಷ್ಕಿಂಧಾ ಕಾಂಡದ ಮೊದಲ ಭಾಗದಲ್ಲಿ ವಿವರವಾಗಿ ವಿವೇಚಿಸಲಾಗಿದೆ. ಸಮಗ್ರ ಭೂಮಂಡಲದ ಚಕ್ರವರ್ತಿಗಳಾದ ರಘುವಂಶೀಯ ರಾಮ ತನ್ನ ಸಿಂಹಾಸನದ ಘನತೆ ಗೌರವವನ್ನೆಲ್ಲಾ ಬಿಟ್ಟು ಸುಗ್ರೀವನಲ್ಲಿ ಆಶ್ರಯ ಕೋರಿ ಬಂದಿದ್ದಾನೆ. ಸೀತೆಯನ್ನು ಕಳೆದುಕೊಂಡ ರಾಮನಿಗೆ ಬುದ್ಧಿ ವಿಸ್ಮೃತಿಯಾಗಿತ್ತು. ವಿರಹದಿಂದಲಾಗಿ ರಾಮ ಗೋದಾವರಿ ನದಿಯನ್ನು ಬತ್ತಿಸಿಬಿಡುವೆ, ವಿಂದ್ಯಪರ್ವತವನ್ನೇ ಕೆಡಹಿಬಿಡುವೆ ಎಂದು ಕೂಗಾಡುವುದು ನಂತರ ಪಂಪಾಸರೋವರದಲ್ಲಿದ್ದ ಕಮಲವನ್ನೇ ತಿಂಗಳ ಬೆಳಕಿನಲ್ಲಿ ಕಮಲಮುಖಿ ಸೀತೆ ಎಂದು ಭ್ರಮಿಸಿ ಸರೋವರಕ್ಕೆ ಧುಮುಕಲು ಹೋಗುವುದು, ಹೀಗೆ ಹಲವು ವಿಧಗಳಲ್ಲಿ ಸೀತೆಗಾಗಿ ವಿಲಪಿಸುತ್ತಾನೆ. ರಾಮನ ದುಃಖವನ್ನು ಶಮನ ಮಾಡುವ ಲಕ್ಷ್ಮಣನ ಸಂಯಮ ಅದ್ಭುತವಾದದ್ದು. ಲಕ್ಷ್ಮಣ ರಾಮನಿಗೆ ತನ್ನ ಕರ್ತವ್ಯವನ್ನು ನಿಭಾಯಿಸುವಂತೆ ಆತನನ್ನು ಎಚ್ಚರಿಸುವ ಅಪೂರ್ವ ಮಾತುಗಳು ಕಿಷ್ಕಿಂಧಾಕಾಂಡದ ಮೊದಲನೆಯ ಸರ್ಗದಲ್ಲಿ ಬರುತ್ತದೆ. ರಾಮ ತನ್ನ ತಂದೆ ತಾಯಿಯರಿಗೆ, ಸುಮಂತ್ರನಿಗೆ, ಗುಹನಿಗೆ ವಶಿಷ್ಠರು, ಜಾಬಾಲಿ ಮತ್ತು ಭರತನಿಗೆ ತನ್ನ ವನವಾಸ ದೀಕ್ಷೆಯ ಕುರಿತು ತಿಳಿಹೇಳುವ ಮಾತುಗಳು ಬಲು ಪ್ರಸಿದ್ಧ. ಪ್ರಸ್ತುತ ಸಂದರ್ಭದಲ್ಲಿ ಸೀತಾಪಹರಣವೆನ್ನುವುದು ಆತನ ಬುದ್ಧಿಯನ್ನು ವಿಭ್ರಣೆಗೊಳಿಸಿಬಿಟ್ಟಿದೆ. ಆತನಿಗೆ ಆ ದಟ್ಟ ಅರಣ್ಯದಲ್ಲಿ ಬುದ್ಧಿ ಹೇಳುವವರು ಯಾರೂ ಇಲ್ಲ. ಆ ಕೆಲಸವನ್ನು ಇಲ್ಲಿ ಲಕ್ಷ್ಮಣ ಮಾಡಬೇಕಾದ ಅನಿವಾರ್ಯತೆ ಬರುತ್ತದೆ. ಹಾಗೇ ವಿವೇಕವನ್ನು ಹೇಳುವಾಗ ಲಕ್ಷ್ಮಣನಿಗೆ ತನ್ನ ಮಿತಿಯ ಅರಿವಿದೆ. ಆಜ್ಞಾಪೂರ್ವಕವಾಗಿ ಹೇಳುವಂತಿಲ್ಲ. ಉಪದೇಶವೂ ಆಗಕೂಡದು, ಹೇಳುವ ವಿಧಾನದಲ್ಲಿ ಹಿರಿಯನ ಗೌರವವಕ್ಕೆ ಚ್ಯುತಿಬರಬಾರದು.

ವಾಲ್ಮೀಕಿ ಇಲ್ಲಿ ಲಕ್ಷ್ಮಣನಿಂದ ಅಣ್ಣನಿಗೆ ವಿವೇಕವನ್ನು ಹೇಳುವ ವಿವರ ಬಲು ಆಸಕ್ತಿದಾಯಕವಾಗಿದೆ. ಮಹಾಕಾವ್ಯವನ್ನು ಬರೆಯಲು ವಾಲ್ಮೀಕಿಯಲ್ಲಿ ಅದೆಷ್ಟು ಲೋಕಾನುಭವ ಮತ್ತು ಶಾಸ್ತ್ರದ ಅಧ್ಯಯನ ಇರಬಹುದೆನ್ನುವುದಕ್ಕೆ ಇದೊಂದು ನಿದರ್ಶನ. ಆತ ರಾಮನಿಗೆ ಹೀಗೆ ಮಾಡಿ ಎಂದು ಹೇಳುವುದಿಲ್ಲ. ಚಿಕ್ಕವ ಹಿರಿಯರ ಹತ್ತಿರ ತನಗೆ ತಿಳಿಯದ ವಿಷಯವನ್ನು ಕಲಿಸಿಕೊಡು ಎನ್ನುವ ರೀತಿಯಲ್ಲಿ ಇದೇಕೆ ಹೀಗೆ ಎನ್ನುವ ಅನೇಕ ಪ್ರಶ್ನೆಗಳ ಮೂಲಕ ರಾಮನಲ್ಲಿ ಪ್ರಶ್ನೆ ಮಾಡುತ್ತಾನೆ. ರಾವಣನು ಪಾತಾಳಕ್ಕೆ ಹೊಕ್ಕರೂ. ಅಲ್ಲಿಂದ ಮುಂದೆ ಇನ್ನೋ ಗಹನವಾದ ಸ್ಥಳ ಹೊಕ್ಕರೂ ಆತ ಉಳಿಯಲಾರನು. ದಿತಿಯ ಗರ್ಭವನ್ನು ಹೊಕ್ಕರೂ ಮೈಥಿಲಿಯನ್ನು ತಂದೊಪ್ಪಿಸದಿದ್ದಲ್ಲಿ ಗರ್ಭವನ್ನು ಪ್ರವೇಶಿಸಿಯಾದರೂ ನಾನು ಅವನನ್ನು ಸಂಹರಿಸುತ್ತೇನೆ. ನೀನು ಉತ್ಸಾಹವನ್ನು ಕಳೆದುಕೊಂಡು ಹೀಗೆ ಯಾಕೆ ಇರುವೆ ಎನ್ನುವ ಮಾತುಗಳಲ್ಲಿ ನೀನು ಭ್ರಮಿತನಾಗಿದ್ದೀಯಾ ಎಂದು ನೇರವಾಗಿ ಹೇಳುವುದಿಲ್ಲ; ನೀನು ಉತ್ಸಾಹವನ್ನು ಕಳೆದುಕೊಳ್ಳಬೇಡ, ನೀನು ಹೀಗೆಲ್ಲಾ ಇರುವವಂತವನಲ್ಲ ವ್ಯಕ್ತಿಯಲ್ಲ ಎನ್ನುವ ಭಾವ ಪ್ರತೀ ಮಾತಿನಲ್ಲಿಯೂ ವ್ಯಕ್ತವಾಗುತ್ತದೆ.

ಪ್ರಾರಂಭದಲ್ಲಿ ಹೇಳಿದ ತ್ಯಜತ್ವಾಂ… ಎನ್ನುವ ಶ್ಲೋಕವನ್ನು ಗಮನಿಸಿ. ಅದರಲ್ಲಿ ಎರಡನೆಯ ಸಾಲಿನಲ್ಲಿ ಬರುವ “ಮಹಾತ್ಮನಂ ಕೃತಾತ್ಮಾನಮಾತ್ಮಾನಂ ನಾವಬಿಧ್ಯಸೇ” ಎನ್ನುವದರಲ್ಲಿ ಪ್ರಯೋಗಿಸಿದ “ಮಹಾತ್ಮ ಮತ್ತು ಕೃತಾತ್ಮಾ” ಎನ್ನುವುದು ರಾಮನ ಪೂರ್ವದ ಮೂಲಸ್ವರೂಪವಾದ ಮಹಾವಿಷ್ಣುವನ್ನು ಹೇಳುತ್ತದೆ. ಮಹಾತ್ಮಾ ಎಂದರೆ ಶ್ರೇಷ್ಠ, ಯಾರ ಶರೀರವು ಇತರರಿಗೆ ಶ್ರೇಷ್ಠವಾಗಿ ಕಾಣುವುದೋ; ಯಾವಾತನಿಗೆ ರಜಸ್ತಮಗಳೆನ್ನುವ ಮಲಿನತೆ ಇರುವುದಿಲ್ಲವೋ ಆತ ಮಹಾತ್ಮನು, ಸತ್ತ್ವಸ್ವರೂಪನು ಎಂದು ಆರ್ಥವಾಗುತ್ತದೆ. ಮತ್ತೊಂದು ಕೃತಾತ್ಮಾ-ಶುದ್ಧವಾದ ಆತ್ಮವುಳ್ಳವನು. ಶಾಶ್ತ್ರಗಳಿಂದ ಪರಿಶುದ್ಧವಾದ ಹೃದಯವುಳ್ಳವನು. ಶ್ರುತಿ ಸ್ಮೃತಿಗಳಲ್ಲಿ ಸ್ಮರಿಸಲ್ಪಟ್ಟವ ಎಂದಾಗುತ್ತದೆ. ಈ ಕಾರಣದಿಂದ ನೀನು “ತ್ಯಜತಾಂ ಕಾಮವೃತ್ತತ್ತ್ವಂ- ಕಾಮವಿಕಾರವೆನ್ನುವುದು ನಿನಗಲ್ಲ ಎನ್ನುತ್ತಾನೆ. ರಾಮನ ಮೂಲ ಯಾವುದು ಎನ್ನುವುದನ್ನು ಇಲ್ಲಿ ಲಕ್ಷ್ಮಣ ಈ ರೀತಿಯಲ್ಲಿ ಸೂಚಿಸುತ್ತಾನೆ. ಆತನ ಅವತಾರದ ಉದ್ಧೇಶವು ರಾವಣನನ್ನು ಸಂಹರಿಸುವ ಸಲುವಾಗಿಯೇ ಆಗಿದೆ. ಎಲ್ಲ ಕಡೆಯೂ ಮಾನವರಂತೆ ವ್ಯವಹರಿಸುವ ರಾಮ ಜಟಾಯುವಿನ ಪ್ರಕರಣದಲ್ಲಿ ಪರೋಕ್ಷವಾಗಿ, ಶಬರಿಯ ವಿಷಯದಲ್ಲಿ ಸ್ವ-ಸ್ವರೂಪದ ಪ್ರಜ್ಞೆಯಲ್ಲಿಯೇ ಅವರವರಿಗೆ ಮೋಕ್ಷವನ್ನು ಅನುಗ್ರಹಿಸಿದ್ದಾನೆ. ರಾಮಾಯಣದಲ್ಲಿ ರಾಮ ತನ್ನ ಮೂಲ ಸ್ವರೂಪವನ್ನು ಪ್ರಕಟಮಾಡುವ ಅಪರೂಪದ ಸಂದರ್ಭಗಳು ಇವು.

ಅಣ್ಣನಿಗೆ “ನೀನು ಪುರುಷೋತ್ತಮ” ಎನ್ನುತ್ತಾ ರಾಮನೆನ್ನುವ ದಶರಥನ ಮಗ ಯತಾರ್ಥದಲ್ಲಿ ವಿರಜಾಸ್ವರೂಪನಾದವ (ಪರತತ್ತ್ವ ಸ್ವರೂಪನಾದವ) ಇದೀಗ ಕಾರ್ಯಕಾರಣ ಸಂಬಂಧದಿಂದಾಗಿ ಸಂಸಾರಿಮಂಡಲಕ್ಕೆ ಅಭಿಮುಖನಾಗಿದ್ದಾನೆ. ಅದಕ್ಕೆ ಕಾರಣವಾದ ಅಂಶವನ್ನು ಸ್ಮರಣೆಗೆ ತಂದುಕೊಳ್ಳಬೇಕು. ರಾಮನ ಈ ದುಃಖವೆಲ್ಲವೂ ಅಭಿನಯವೇ ಹೊರತು ಅನುಭವಿಸಿ ಅದರಲ್ಲಿಯೇ ಮುಳುಗಿಹೋಗುವುದಲ್ಲ ಎನ್ನುವ ಅನೇಕ ಅರ್ಥವನ್ನು ಇಲ್ಲಿ ಕೊಡುತ್ತದೆ. ಕಿರಿಯರು ಹಿರಿಯರಿಗೆ ವಿವೇಕವನ್ನು ಹೇಳುವುದಲ್ಲ; ಅದರ ಕುರಿತಾದ ಅರಿವನ್ನು ಅವರ ಸ್ಮರಣೆಗೆ ತಂದುಕೊಡುವುದು ಎನ್ನುವುದು ಇಲ್ಲಿ ಲಕ್ಷ್ಮಣನ ವಿನಂತಿಯಲ್ಲಿ ಸ್ಪಷ್ಟವಾಗುತ್ತದೆ. ಹಿರಿಯರು ಉಪದೇಶವನ್ನು ನೀಡುತ್ತಾರೆ, ಸಮವಯಸ್ಕರು ಸಲಹೆಯನ್ನು ನೀಡುತ್ತಾರೆ (ಮಿತ್ರವಾಕ್ಯ), ಕಿರಿಯರು ತಮಗೆ ಗೊತ್ತಿದೆ ಎಂದು ಹಿರಿಯರನ್ನು ಯಾವ ಸಂದರ್ಭದಲ್ಲಿಯೂ ಅತಿಕ್ರಮಿಸಬಾರದು. ಇದೇಕೆ ಹೀಗೆ ಎನ್ನುತ್ತಲೇ ಹೇಳಬೇಕಾದುದನ್ನು ಹೇಳಬೇಕೆನ್ನುವುದಕ್ಕೆ ಇಲ್ಲಿ ಲಕ್ಷ್ಮಣನ ಮಾತುಗಳು ಸಾಕ್ಷಿ. ಈ ಭಾಗದಲ್ಲಿ ಲಕ್ಷ್ಮಣನನ್ನು ಮದಿಸಿದ ಮದ್ದಾನೆಗೆ ಕವಿ ಹೋಲಿಸಿದ್ದಾನೆ.

ತಂ ಮತ್ತಮಾತಙ್ಗವಿಲಾಸಗಾಮೀ ಗಚ್ಛನ್ತಮವ್ಯಗ್ರಮನಾ ಮಹಾತ್ಮಾ.
ಸ ಲಕ್ಷ್ಮಣೋ ರಾಘವಮಪ್ರಮತ್ತೋ ರರಕ್ಷ ಧರ್ಮೇಣ ಬಲೇನ ಚೈವ৷৷ಕಿ.1.127৷৷

ಮದಿಸಿದ ಆನೆಯಂತೆ ಒಯ್ಯಾರದಿಂದ ಹೆಜ್ಜೆಯಿಡುತ್ತಿದ್ದ ಅಣ್ಣನ ಸೇವೆಯಲ್ಲಿಯೇ ಏಕಾಗ್ರವಾದ ಮನಸ್ಸಿನಿಂದ ಕೂಡಿದ ಮಹಾತ್ಮನಾದ ಲಕ್ಷ್ಮಣನಾದರೋ, “ರರಕ್ಷ ಧರ್ಮೇಣ ಬಲೇನ ಚೈವ- ಧರ್ಮದಿಂದಲೂ ಬಲದಿಂದಲೂ ರಾಘವನ ದುಃಖವು ಕಡಿಮೆಯಾಗುವಂತೆ ಮಾಡಿದನು”. ರರಕ್ಷ- ಎನ್ನುವುದಕ್ಕೆ ದುಃಖರಹಿತನನ್ನಾಗಿ ಮಾಡಿದನು ಎನ್ನುವ ಅರ್ಥಬರುತ್ತದೆ(ನಿರ್ಧುಃಖಮಕರೋತ್). ರಾಮನಿಗೆ ಆತನ ಪೂರ್ವಸ್ಮರಣೆಯನ್ನು ತಂದುಕೊಡುವ ಸನ್ನಿವೇಶ ಇದು. ರಾಮನಿಗೆ ಅವನ ಮೂಲವನ್ನು ನೆನಪಿಸಿ ಆತ ಪರಂಧಾಮಕ್ಕೆ ಮರಳುವಂತೆ ಮಾಡುವವನು ಕಾಲಪುರುಷ. ಅದೂ ರಾಮಾಯಣದ ಅವತಾರದ ಉದ್ಧೇಶವಎಲ್ಲವೂ ಸಫಲವಾದ ಮೇಲೆ. ಇಲ್ಲಿ ಲಕ್ಷ್ಮಣನಿಗೆ ರಾಮನಿಗುಂಟಾದ ಬುದ್ಧಿವಿಸ್ಮೃತಿಯಿಂದ ಹೊರತರಬೇಕಾಗಿದೆ. ಇಲ್ಲಿ ಬರುವ “ಧರ್ಮೇಣ” ಅಂದರೆ ಸದಾಕಾಲವೂ ರಾಮನಿಗೆ ವಿಧೇಯನಾಗಿರುವ ಆತ ಆತನಿಗೆ ವಿವೇಕವನ್ನು ಹೇಳುವ ಸಂಧರ್ಭದಲ್ಲಿಯೂ ರಾಮಸೇವಕರೂಪದ ತನ್ನ ಸ್ವಭಾವಕ್ಕೆ ಕಿಂಚಿತ್ ಭಂಗ ಬಾರದಿರುವ ರೀತಿಯಲ್ಲಿ ವಿಷಯವನ್ನು ತಿಳಿಸುತ್ತಿದ್ದಾನೆ. ಇನ್ನು “ಬಲೇನಚೈವ” ಎನ್ನುವುದಕ್ಕೆ ಲಕ್ಷ್ಮಣ ಸೀತೆಯನ್ನು ರಾವಣ ಕದ್ದೊಯ್ದಿದ್ದಾನೆ ಎನ್ನುವುದು ಅವರಿಗೆ ತಿಳಿದಿದೆ. ಆದರೆ ರಾವಣ ಎಲ್ಲಿರಬಹುದು ಎನ್ನುವುದರ ಸುಳಿವು ಸಿಕ್ಕಿಲ್ಲ. ಇಲ್ಲಿ ದುಃಖಿಸುತ್ತಾ ಕುಳಿತರೆ ಕಾರ್ಯಸಾಧಿಸುವುದಿಲ್ಲ. ರಾವಣ ಎಲ್ಲಿದ್ದಾನೆ ಎನ್ನುವುದನ್ನು ಮೊದಲು ತಿಳಿಯಬೇಕು. ಆತ ಪಾತಾಳದಲ್ಲಿ ಇದ್ದರೂ, ಅಲ್ಲಿಂದ ಮುಂದೆ ಇನೂ ಗಹನವಾದ ಸ್ಥಳವನ್ನು ಹೊಕ್ಕರೂ ಪಾಪಿಷ್ಟನಾದ ಆತನನ್ನು ಹುಡುಕೋಣ ಎಂದು ಸಮಾಧಾನ ಹೇಳುತ್ತಾನೆ.

dhavala dharini king dasharatha
rama laxmana ಧವಳ ಧಾರಿಣಿ ಅಂಕಣ

ಅಯೋಧ್ಯಾ ಕಾಂಡದಲ್ಲಿ ಮುಂಗೋಪಿಯಾಗಿ ಲಕ್ಷ್ಮಣ ಕಾಣಿಸಿಕೊಳ್ಳುತ್ತಾನೆ. ತಂದೆಯಾದ ದಶರಥನನ್ನು ಬಂಧಿಸಿ ಸೆರೆಯಲ್ಲಿಟ್ಟು ರಾಜ್ಯವನ್ನು ಗೆದ್ದು ಅಣ್ಣನಾದ ರಾಮನಿಗೆ ಕೊಡುವೆ ಎಂದು ಅಬ್ಬರಿಸುತ್ತಾನೆ. ರಾಮನ ವಿವೇಕದ ಮಾತಿಗೆ ಅನಿವಾರ್ಯತೆಯಿಂದ ಸುಮ್ಮನಾಗುತ್ತಾನೆ. ಮುಂದೆ ಭರತ ರಾಮನನ್ನು ಕರೆತರಲು ಚಿತ್ರಕೂಟಕ್ಕೆ ಬರುವಾಗ ಆತನನ್ನು ನೋಡಿ, ತಮ್ಮಮೇಲೆ ಆಕ್ರಮಣಮಾಡಲು ಬಂದಿರಬಹುದೆನ್ನುವ ಸಂಶಯದಿಂದ ಭರತನನ್ನು ಎದುರಿಸುವೆ ಎನ್ನುವ ವೀರಾವೇಶದ ಮಾತುಗಳನ್ನು ಆಡುತ್ತಿದ್ದ ಲಕ್ಷ್ಮಣನ ಮೂಲ ಸ್ವಭಾವ ದುಡುಕಿನದ್ದಲ್ಲ. ರಾಮ ಗುಹನ ಆತಿಥ್ಯದಲ್ಲಿ ಗಂಗಾ ನದಿಯ ದಡದ ಮೇಲೆ ಮಲಗಿರುವಾಗ ಆತನ ಸ್ಥಿತಿಯನ್ನು ನೋಡಿ ಗುಹನ ಹತ್ತಿರ ಲಕ್ಷ್ಮಣ ಮರುಗುವುದು ಕರಳು ಚುರುಕ್ಕೆನ್ನುತ್ತದೆ. ಸದಾ ಹಂಸತೂಲಿಕಾತಲ್ಪದಲ್ಲಿ ಮಲಗುವ ತನ್ನ ಅಣ್ಣ ಇಂದು ಹೀಗೆ ಕೈಯನ್ನೇ ತಲೆದಿಂಬನ್ನಾಗಿಸಿಕೊಂಡು ಮಲಗಿರುವುದನ್ನು ನೋಡಲು ಆತನಿಗೆ ಸಾಧ್ಯವಾಗುವುದಿಲ್ಲ. ಲಕ್ಷ್ಮಣನದ್ದು ಹೆಂಗರಳು. ರಾಮನ ವಿಷಯದಲ್ಲಿ ಮಾತ್ರ ಕರುಣೆ ತೋರುವುದಲ್ಲ.

ಜನಸ್ಥಾನದಲ್ಲಿ ಅವರು ವಾಸಮಾಡುವಾಗ ನಡೆದ ಘಟನೆ. ವನವಾಸದ ಹದಿಮೂರನೆಯ ವರ್ಷದಲ್ಲಿ ಅವರು ಇದ್ದಾರೆ. ಆ ವರ್ಷದ ಹೇಮಂತ ಋತುವಿನಲ್ಲಿ ಅಸಾಧ್ಯವಾದ ಚಳಿಯಿದೆ. ಕಾಡಾನೆಗಳ ಹಿಂಡು ಬಾಯಾರಿಕೆಯಿಂದ ನೀರುಕುಡಿಯಲು ನದಿಗೆ ಬರುತ್ತಿದ್ದವಂತೆ ಆದರೆ ಹೇಮಂತದ ಚಳಿಯನ್ನು ತಾಳಲಾರದೇ ಸೊಂಡಿಲನ್ನು ನೀರಿಗೆ ಚಾಚಿ ನೀರು ಕುಡಿಯಲು ಯತ್ನಿಸಿದರೆ ಅವುಗಳಿಗೆ ತಣ್ಣನೆಯ ನೀರಿನ ಛಳಿಯನ್ನು ತಾಳಿಕೊಳ್ಳಲಾಗುವುದಿಲ್ಲ, ಮೈಕೊರೆವ ಚಳಿಗೆ ಅಂಜಿ ನೀರನ್ನು ಕುಡಿಯದೇ ಬಾಯಾರಿಕೆಯನ್ನು ಸಹಿಸಿಕೊಂಡು ಕಾಡಿಗೆ ಮರಳುತ್ತಿದ್ದವು. ಸದಾ ನೀರಿನಲ್ಲಿಯೇ ಇರುವ ಹಂಸಪಕ್ಷಿಗಳು ಸಹ ಚಳಿಗೆ ಹೆದರಿ ನೀರಿಗಿಳಿಯದೇ ದಡದಲ್ಲಿಯೇ ಸಾಲಾಗಿ ಕುಳಿತುಕೊಂಡಿದ್ದವು. ಅದನ್ನು ನೋಡಿದ ಲಕ್ಷ್ಮಣನಿಗೆ ನಂದಿಗ್ರಾಮದಲ್ಲಿ ಭರತನೂ ತಮ್ಮಂತೆ ವೃತಧಾರಿಯಾಗಿ ಗಡ್ಡೆ ಗಣಸು ತಿನ್ನುತ್ತಾ, ಜಟಾಧಾರಿಯಾಗಿ ನೆಲದಮೇಲೆ ಮಲಗುತ್ತಿದ್ದಾನೆ ಎನ್ನುವುದು ನೆನಪಾಯಿತು. ಸ್ವತಃ ತಾವು ಅಂತಹ ಚಳಿಯಲ್ಲಿ ನಡುಗುತ್ತಿದ್ದರೂ ಲಕ್ಷ್ಮಣನ ಮನಸ್ಸು ಇಲ್ಲಿ ಭರತನಿಗಾಗಿ ಮರುಗುತ್ತದೆ.

ಅತ್ಯನ್ತಸುಖಸಂವೃದ್ಧಸ್ಸುಕುಮಾರಸ್ಸುಖೋಚಿತಃ.
ಕಥಂ ನ್ವಪರರಾತ್ರೇಷು ಸರಯೂಮವಗಾಹತೇ৷৷ಅ.16.30৷৷

ಸುಖದಲ್ಲಿ ಬೆಳೆದ ಭರತ ಚಳಿಯಿಂದ ಕೂಡಿದ ಈ ಅಪರಾತ್ರಿಯಲ್ಲಿ ಸರಯೂ ನದಿಯಲ್ಲಿ ಹೇಗೆ ಸ್ನಾನ ಮಾಡಿಯಾನು ಎಂದು ಭರತನ ಕುರಿತು ಕಳವಳವನ್ನು ವ್ಯಕ್ತಪಡುತ್ತಾನೆ. ಅಪರಾತ್ರಿಯೆಂದರೆ ಮುಂಜಾನೆ ಬ್ರಾಹ್ಮೀ ಮುಹೂರ್ತಕ್ಕೆ ಮುನ್ನವೇ ಎದ್ದು ಸ್ನಾನಗಳನ್ನು ಪೂರೈಸಿ ನಿತ್ಯಕರ್ಮಾನುಷ್ಠಾನಗಳನ್ನು ಮಾಡಿ ಪ್ರಜೆಗಳ ಯೋಗಕ್ಷೇಮಗಳನ್ನು ನೋಡಲು ಪ್ರಾತಃಕಾಲದಲ್ಲಿ ಸಿದ್ಧನಾಗುತ್ತಿದ್ದ. ತಮಗಾದರೋ ವನವಾಸದ ದೀಕ್ಷೆಯಿದೆ. ಆದರೆ ಭರತ ಸುಖವಾಗಿ ಇರಬಹುದಾಗಿದ್ದರೂ ತಮ್ಮಂತೆ ವನವಾಸೀ ದೀಕ್ಷೆಯನ್ನು ಕೈಗೊಂಡು ರಾಜ್ಯವನ್ನು ನಡೆಸುತ್ತಿದ್ದಾನೆ. ರಾಜ್ಯವನ್ನು ರಾಮನ ಪ್ರತಿನಿಧಿಯಾಗಿ ನಿರ್ವಹಿಸುವ ಆತ ಅದಕ್ಕೆ ಚ್ಯುತಿಬಾರದ ರೀತಿಯಲ್ಲಿ ಚಳಿಗಾಲವನ್ನು ಲೆಕ್ಕಿಸದೇ ಕರ್ತವ್ಯಪರಾಯಣನಾಗಿದ್ದಾನೆ. ಚಳಿಗಾಲದ ವರ್ಣನೆ ಮತ್ತು ಭರತನ ಕುರಿತು ಲಕ್ಷ್ಮಣನ ಕಾಳಜಿ ಎರಡನ್ನೂ ಅನೇಕ ಉಪಮೆಗಳೊಂದಿಗೆ ವಾಲ್ಮೀಕಿ ಕಟ್ಟಿಕೊಟ್ಟಿದ್ದಾರೆ. ಧರ್ಮದ ಮೂಲಕವಾಗಿ ರಾಮನನ್ನು ಸಮಾಧಾನ ಮಾಡಿದ ಜೊತೆಗೆ ಬಲದ ಪ್ರದರ್ಶನದ ಮೂಲಕವೂ ರಾಮನನ್ನು ಸಮಾಧಾನಿಸಿದ ಎನ್ನುವುದಕ್ಕೆ ಲಕ್ಷ್ಮಣ ರಾಮನಲ್ಲಿ ”ಮೊದಲು ರಾವಣನನ್ನು ಹುಡುಕೋಣ. ಆತನಲ್ಲಿ ತಮ್ಮ ಪರಾಕ್ರಮವೆಷ್ಟು ಎನ್ನುವುದನ್ನು ತೋರಿಸಿ ಆತ ಸೀತೆಯನ್ನು ಬಿಟ್ಟುಕೊಡುವಂತೆ ಎಚ್ಚರಿಸೋಣ. ಅದಕ್ಕೂ ಆತ ಬಗ್ಗದಿದ್ದರೆ ಆತ ದಿತಿಯ ಗರ್ಭದಲ್ಲಿದ್ದರೂ ಆತನನ್ನು ಸಂಹರಿಸುವೆ” ಎನ್ನುವ ಮೂಲಕ ಬಲದಿಂದಲೂ ರಾಮನನ್ನು ಸಮಾಧಾನಿಸುತ್ತಾನೆ.

rama laxmana ಧವಳ ಧಾರಿಣಿ ಅಂಕಣ
rama laxmana ಧವಳ ಧಾರಿಣಿ ಅಂಕಣ

ಕಾವ್ಯದಲ್ಲಿ ನಾಟಕೀಯತೆಯ ಸನ್ನಿವೇಶ ಹೇಗೆ ಬರಬೇಕೆನ್ನುವುದಕ್ಕೆ ಇಲ್ಲಿನ ವರ್ಣನೆ ಸಾಕ್ಷಿ. ಲಕ್ಷ್ಮಣ ಪರಾಕ್ರಮದಲ್ಲಿ ಯಾರಿಗೂ ಕಡಿಮೆ ಇಲ್ಲದವನು. ಆನೆಯಷ್ಟು ಬಲ ಆತನಲ್ಲಿದೆ. ಮದಿಸಿದ ಆನೆ ತನ್ನ ಮಾವುತನ ಮೇಲೆ ಅಪಾರಪ್ರೀತಿಯನ್ನು ತೋರುತ್ತದೆ. ತನ್ನ ಮಾವುತ ವ್ಯಾಕುಲತೆಯಿಂದ ಕುಳಿತರೆ ಆತನನ್ನು ರಮಿಸಿ ತನ್ನೊಂದಿಗೆ ಕರೆದೊಯ್ಯುವ ಸ್ವಭಾವ ಅದಕ್ಕಿರುತ್ತದೆ ಇಂತಹ ದೃಶ್ಯವನ್ನು ಅನೇಕ ಕಡೆ ನೋಡಬಹುದಾಗಿದೆ. ಸುಮಾರು 70ರ ಉತ್ತರಾರ್ಧದಶಕದಲ್ಲಿ ರಾಜೇಶ ಖನ್ನಾ ಅಭಿನಯಿಸಿದ “ಹಾಥಿ ಮೇರಾ ಸಾಥಿ” ಸಿನೇಮಾವನ್ನು ನೋಡಿದ್ದರೆ ಅದು ಅರ್ಥವಾದೀತು. ರಾಮನೆನ್ನುವ ಸೋದರತ್ವದ ಒಲವಿನಲ್ಲಿ ಬಂಧಿತನಾದ ಲಕ್ಷ್ಮಣ ಅಥವಾ ತನ್ನ ತಾಯಿಯಾದ ಸುಮಿತ್ರೆಯ ಹತ್ತಿರ ಲಕ್ಷ್ಮಣ ಕಾಡಿಗೆ ಅಣ್ಣನನ್ನು ಅನುಸರಿಸಿಕೊಂಡು ಹೋಗುತ್ತೇನೆ ಎಂದು ಆಶೀರ್ವಾದವನ್ನು ಕೇಳಿದಾಗ ಆಕೆ ಮಗನಿಗೆ “ರಾಮಂ ದಶರಥಂ ವಿದ್ಧಿ ಮಾಂ ವಿದ್ಧಿ ಜನಕಾತ್ಮಜಾಮ್..” ರಾಮನನ್ನು ದಶರಥನೆಂದೆ ತಿಳಿದು ಗೌರವಿಸು, ನನ್ನನ್ನು ಹೇಗೆ ಗೌರವಿಸುತ್ತೀಯೋ ಅದೇ ರೀತಿ ಸೀತೆಗೆ ಗೌರವವನ್ನು ನೀಡು , ಅಡವಿಯನ್ನೇ ಅಯೋಧ್ಯೆಯೆಂದು ಭಾವಿಸು” ಎಂದು ಹರಸಿಕಳುಹಿಸಿದ್ದಳು. ಸಹಜವಾಗಿಯೂ ರಾಮನಲ್ಲಿ ಭಯಭಕ್ತಿಯುಳ್ಳ ಮತ್ತು ಅತನೇ ತನ್ನ ರಾಜನೆಂದು ತಿಳಿದು ತ್ರಿಕರಣಪೂರ್ವಕವಾಗಿ ಅನುಸರಿಸಿಕೊಂಡು ಬಂದವ ಲಕ್ಷ್ಮಣ. ಹಾಗಾಗಿ ಇಲ್ಲಿ ರಾಮನೆನ್ನುವ ಮಾವುತನನ್ನು ಮದಿಸಿದ ಆನೆಯಂತಿರುವ ಲಕ್ಷ್ಮಣ ಒಯ್ಯಾರದಿಂದ ಕರೆದುಕೊಂಡು ಬಂದ ಎನ್ನುವ ಉಪಮೆ ಸುಂದರವಾಗಿ ಮೂಡಿಬಂದಿದೆ.

ರಾಮನಿಗೆ ಸೀತೆಯನ್ನು ಕಳೆದುಕೊಂಡ ದುಃಖ ತಡೆಯಲಾರದೇ ವಿಸ್ಮೃತಿಗೊಳಗಾದ ವಿಷಯವನ್ನು ವಾಲ್ಮೀಕಿ ರಾಮಾಯಣದಲ್ಲಿ ವಿವರವಾಗಿ ಬಂದರೂ ಸ್ಕಾಂದಪುರಾಣದಲ್ಲಿ ಇನ್ನಷ್ಟು ವಿವರವಾಗಿ ವರ್ಣಿಸಲಾಗಿದೆ. ರಾಮನಿಗೆ ಅರಣ್ಯದಲ್ಲಿ ಸೀತೆಯ ವಿರಹದಿಂದ ಕಾಮೋದ್ದೀಪಕವಾಯಿತು. ಕಾಡಿನಲ್ಲಿರುವ ಭ್ರಮರವೇ ಮೊದಲಾದವುಗಳು ಸ್ವಂಚ್ಛಂದದಿಂದ ಹಾರಾಡುತ್ತಾ ಸಂಪಿಗೆಯ ಹೂವಿನ ಮಕರಂದವನ್ನು ಹೀರುತ್ತಿದ್ದವು. ಮಂದಮಾರುತ ಬೀಸುತ್ತಿತ್ತು. ಚಕ್ರವಾಕ ಪಕ್ಷಿಜೋಡಿಗಳು ಹಗಲಿನಲ್ಲಿ ಪರಸ್ಪರ ಮುದ್ದಾಡುತ್ತಿದ್ದವು. ವಿರಹಿಯಾದ ರಾಮ ಅದನ್ನು ನೋಡಿ ಕೋಪಗೊಂಡನಂತೆ. ತನ್ನ ವಿರಹದುಃಖವನ್ನು ನೋಡಿಯೂ ಕರುಣೆತೋರದೇ ಸಂತಸದಿಂದ ಇರುವ ಅವುಗಳನ್ನು ನೋಡಿ

ವೈಮುಖ್ಯಂ ಗಂಧಫಲ್ಯಾಸ್ತು ಭ್ರಮರಾಶಪತ್ಪ್ರಭುಃ I
ಕೋಕಾನ್ನಿಶಿಧೇ ವಿಶ್ಲೇಷಂ ಪಿಕಮನ್ಯವಿವರ್ಧನಮ್I
ಚಂದನಂ ಸರ್ಪ ನಿಲಯಂ ವಾಯುಂ ಸರ್ಪಾಶನಂ ತಥಾ I
ಜ್ಯೋತ್ಸ್ನಾಂ ಕಳಂಕಸಛನ್ನಾಂ ಶಶಾಪ ರಘುನಂದನಃ II II

ಸಂಪಗೆಯನ್ನು ಮುಟ್ಟದಂತೆ ಭ್ರಮರಗಳಿಗೂ, ರಾತ್ರಿಯಲ್ಲಿ ವಿಯೋಗವನ್ನು ಹೊಂದುವಂತೆ ಚಕ್ರವಾಕ ಜೋಡಿಗಳಿಗೂ, ಇತರಪಕ್ಷಿಗಳ ಪೋಷಣೆಗೊಳಗಾಗುವಂತೆ ಕೋಗಿಲೆಗಳಿಗೂ (ಪರಪುಟ್ಟ), ಕ್ರೂರಸರ್ಪಗಳಿಗೆ ಆಶ್ರಯತಾಣವಾಗುವಂತೆ ಚಂದನವೃಕ್ಷಕ್ಕೂ, ಹಾವುಗಳಿಗೆ ಆಹಾರವಾಗುವಂತೆ ಗಾಳಿಗೂ, ಕಳಂಕವಿಶಿಷ್ಟ (ಕಲೆಗಳಿಂದ ಕೂಡಿರುವಂತೆ) ಚಂದ್ರಕಾಂತಿಗೂ ಶಾಪಕೊಟ್ಟ ಎನ್ನುವ ವರ್ಣನೆ ಬರುತ್ತದೆ.

ಸೀತೆಯ ವಿಯೋಗ ರಾಮನಿಗೆ ಎರಡು ರೀತಿಯಿಂದ ಕಾಡುತ್ತಿತ್ತು. ಮೊದಲನೆಯದು ತನ್ನ ಪ್ರಿಯ ಮಡದಿಯನ್ನು ಕಳೆದುಕೊಂಡಿರುವುದು. ಎರಡನೆಯದು ರಾವಣ ಸೀತೆಯನ್ನು ಕದ್ದೊಯ್ಯುವ ಮೂಲಕ ರಾಮನ ಪುರುಷತ್ವಕ್ಕೆ ಸವಾಲನ್ನು ಎಸೆದಿದ್ದ. ಇದು ಸ್ಕಂಧಪುರಾಣದ ಮೇಲಿನ ಶ್ಲೋಕದಿಂದ ಸ್ಪಷ್ಟವಾಗುತ್ತದೆ. ಈ ಕಾರಣದಿಂದ ನೊಂದಿದ್ದ ರಾಮನನ್ನು ಲಕ್ಷ್ಮಣ ಸಮಾಧಾನ ಪಡಿಸಿ ಆತನ ಸ್ಮೃತಿಯನ್ನು ವಾಸ್ತವಕ್ಕೆ ಕರೆತರುತ್ತಾನೆ. ಆತನ ದುಃಖವನ್ನು ಶಮನಮಡುತ್ತಾನೆ. ಈಗ ಆತನಿಗೆ ಸೀತೆಯನ್ನು ಹುಡುಕುವ ಸಲುವಾಗಿ ಕಬಂಧ ಹೇಳಿದಂತೆ ಸುಗ್ರೀವನ ಸಖ್ಯ ಅನಿವಾರ್ಯವೆನ್ನುವುದು ನೆನಪಾಗುತ್ತದೆ. ಆ ಕಾರಣದಿಂದ ಹನುಮಂತನ ಹತ್ತಿರ ಲಕ್ಷ್ಮಣ ರಘುಕುಲದ ಶ್ರೇಷ್ಠನಾದ ರಾಮನೇ ಸುಗ್ರೀವನಲ್ಲಿ ಆಶ್ರಯವನ್ನು ಕೋರಿ ಬಂದಿದ್ದಾನೆ. ಆತನಲ್ಲಿ ಶರಣಾಗಲು ಬಂದಿದ್ದಾನೆ. ಎನ್ನುವ ಮಾತುಗಳನ್ನು ಲಕ್ಷ್ಮಣ ಆಡುವುದು.

ಸುಗ್ರೀವನ ಸ್ಥಿತಿ ಮತ್ತು ಇನ್ನಷ್ಟು ರೋಚಕ ವಿಚಾರಗಳನ್ನು ಮುಂದಿನ ಸಂಚಿಕೆಯಲ್ಲಿ ಗಮನಿಸೋಣ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಕಿಷ್ಕಿಂಧಾ ಕಾಂಡ ಭಾಗ 2: ದೀಪದ ಬುಡದಲ್ಲಿ ಕತ್ತಲೆ

Continue Reading

ಧಾರ್ಮಿಕ

Vastu Tips: ಈ ವಸ್ತುಗಳನ್ನು ಮನೆಯಲ್ಲಿಟ್ಟರೆ ಸಂತೋಷ, ಸಮೃದ್ಧಿ, ನೆಮ್ಮದಿ ಸಿಗುತ್ತವೆ!

ಕೆಲವೊಂದು ವಸ್ತುಗಳು ಮನೆಗೆ ಸಂತೋಷ, ಸಮೃದ್ಧಿ ತರುತ್ತದೆ ಎನ್ನುವುದು ನಂಬಿಕೆಯಾದರೂ ವಾಸ್ತು ಶಾಸ್ತ್ರದಲ್ಲಿ (Vastu Tips) ಕೆಲವು ವಸ್ತುಗಳನ್ನು ಮನೆಯ ನಿರ್ಧಿಷ್ಟ ಮೂಲೆಯಲ್ಲಿ ಇರಿಸುವುದರಿಂದ ಇದು ನಿಜವಾಗುತ್ತದೆ ಎನ್ನಲಾಗಿದೆ. ಹಾಗಾದರೆ ಅಂತಹ ವಸ್ತುಗಳು ಯಾವುದು, ಅದು ಮನೆಯ ಯಾವ ಮೂಲೆಯಲ್ಲಿ ಇರಬೇಕು ಎನ್ನುವ ಕುರಿತು ಇಲ್ಲಿದೆ ಮಾಹಿತಿ.

VISTARANEWS.COM


on

By

Vastu Tips
Koo

ಮನೆಯಲ್ಲಿ ಕೆಲವೊಂದು ವಸ್ತುಗಳನ್ನು ಇರಿಸುವುದು ಶುಭ ಸಂಕೇತವೆಂದು (Good sign) ಪರಿಗಣಿಸಲಾಗಿದೆ. ವಾಸ್ತು ಶಾಸ್ತ್ರದಲ್ಲೂ (Vastu Tips) ಇದನ್ನು ಉಲ್ಲೇಖಿಸಲಾಗಿದೆ. ಹಿಂದೂ ಧರ್ಮದಲ್ಲಿ (hindu dharma) ವಾಸ್ತು ಶಾಸ್ತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಯಾಕೆಂದರೆ ಇದು ಭಾರತೀಯರ ಅತ್ಯಂತ ಪುರಾತನ ವಿಜ್ಞಾನವೂ ಹೌದು.

ಕೆಲವೊಂದು ವಸ್ತುಗಳು ಮನೆಯಲ್ಲಿ ಇದ್ದರೆ ಅದು ನಮ್ಮ ಜೀವನದಿಂದ ನಕಾರಾತ್ಮಕತೆಯನ್ನು ತೆಗೆದುಹಾಕುತ್ತದೆ ಮತ್ತು ಸಕಾರಾತ್ಮಕತೆಯನ್ನು ತರುತ್ತದೆ. ಮನೆಯಲ್ಲಿ ಸಂತೋಷ, ಸಮೃದ್ಧಿ ಮತ್ತು ಸಂಪತ್ತನ್ನು ತುಂಬಲು ಬಯಸಿದರೆ ವಾಸ್ತು ಪ್ರಕಾರ ಈ ದಿಕ್ಕುಗಳಲ್ಲಿ ಈ ವಸ್ತುಗಳನ್ನು ಇರಿಸಿ.


ಆನೆಯ ಪ್ರತಿಮೆಗಳು

ಮನೆಯಲ್ಲಿ ಎರಡು ಜೋಡಿ ಎತ್ತರಿಸಿದ ಸೊಂಡಿಲು ಇರುವ ಆನೆಯ ಪ್ರತಿಮೆಗಳನ್ನು ಇಟ್ಟುಕೊಳ್ಳುವುದರಿಂದ ಕುಟುಂಬ ಸದಸ್ಯರಲ್ಲಿ ಸಂತೋಷ, ಶಾಂತಿ ಮತ್ತು ಪ್ರೀತಿಯನ್ನು ತರಬಹುದು. ಈ ಮೂರ್ತಿಗಳನ್ನು ಉತ್ತರ ದಿಕ್ಕಿನಲ್ಲಿ ಇಡುವುದು ವಿಶೇಷವಾಗಿ ಪ್ರಯೋಜನಕಾರಿಯಾಗಿದೆ.


ಕಾಮಧೇನು ಹಸುವಿನ ಪ್ರತಿಮೆ

ಕಾಮಧೇನು ಹಸುವಿನ ಪ್ರತಿಮೆಯನ್ನು ಮನೆಯಲ್ಲಿ ಇಡುವುದರಿಂದ ಉತ್ತಮ ಆರೋಗ್ಯ ಮತ್ತು ಸಂಪತ್ತು ಆಶೀರ್ವಾದವನ್ನು ತರುತ್ತದೆ. ಉತ್ತಮ ಫಲಿತಾಂಶಗಳಿಗಾಗಿ ಈ ಪ್ರತಿಮೆಯನ್ನು ಮನೆಯ ಈಶಾನ್ಯ ದಿಕ್ಕಿನಲ್ಲಿ ಇರಿಸಿ.


ಗೂಬೆ ಪ್ರತಿಮೆ

ಇದು ಕೆಟ್ಟ ಕಣ್ಣು ಮತ್ತು ನಕಾರಾತ್ಮಕ ಶಕ್ತಿಗಳಿಂದ ರಕ್ಷಿಸುತ್ತದೆ. ಮನೆಯ ಮುಖ್ಯ ದ್ವಾರದಲ್ಲಿ ಗೂಬೆಯ ಪ್ರತಿಮೆಯನ್ನು ಇರಿಸುವುದು ನಕಾರಾತ್ಮಕ ಶಕ್ತಿಗಳನ್ನು ದೂರವಿಡಲು ಮತ್ತು ಮನೆಯವರ ಮೇಲೆ ಹೊರಗಿನವರ ಕೆಟ್ಟ ದೃಷ್ಟಿ ಬೀಳದಂತೆ ಮಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Varamahalakshmi Festival 2024 : ವರಮಹಾಲಕ್ಷ್ಮಿ ಹಬ್ಬದ ದಿನ ಸುಲಭವಾಗಿ ಮಾಡಬಹುದಾದ ರುಚಿಕರ ಖಾದ್ಯಗಳಿವು; ವಿಡಿಯೊಗಳಿವೆ


ಆಮೆಯ ಪ್ರತಿಮೆ

ಆಮೆಯು ದೀರ್ಘಾಯುಷ್ಯ ಮತ್ತು ಸ್ಥಿರತೆಯ ಸಂಕೇತವಾಗಿದೆ. ಮನೆಯ ಉತ್ತರ ದಿಕ್ಕಿನಲ್ಲಿ ಗಾಜು ಅಥವಾ ಲೋಹದಿಂದ ಮಾಡಿದ ಆಮೆಯ ಪ್ರತಿಮೆಯನ್ನು ಇರಿಸುವುದರಿಂದ ಕುಟುಂಬದ ಸದಸ್ಯರ ಆರೋಗ್ಯ ಸುಧಾರಿಸುತ್ತದೆ ಮತ್ತು ಆದಾಯವನ್ನು ಹೆಚ್ಚಿಸುತ್ತದೆ ಎಂಬ ನಂಬಿಕೆ ಇದೆ.

Continue Reading

Latest

Varamahalakshmi Festival 2024 : ವರಮಹಾಲಕ್ಷ್ಮಿ ಹಬ್ಬದ ದಿನ ಸುಲಭವಾಗಿ ಮಾಡಬಹುದಾದ ರುಚಿಕರ ಖಾದ್ಯಗಳಿವು; ವಿಡಿಯೊಗಳಿವೆ

Varamahalakshmi Festival 2024: ವರಮಹಾಲಕ್ಷ್ಮಿ ಹಬ್ಬದಂದು ಲಕ್ಷ್ಮಿಯನ್ನು ಭಕ್ತಿಯಿಂದ ಪೂಜಿಸಿದರೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇದೆ. ಈ ವರ್ಷ ವರಮಹಾಲಕ್ಷ್ಮಿ ಹಬ್ಬ ಆಗಸ್ಟ್ 16ರ ಶುಕ್ರವಾರ ಬಂದಿದೆ. ದಕ್ಷಿಣ ಭಾರತದ ವಿವಾಹಿತ ಮಹಿಳೆಯರು ಸಮೃದ್ಧಿಗಾಗಿ ಮತ್ತು ತಮ್ಮ ಕುಟುಂಬಗಳ ಯೋಗಕ್ಷೇಮಕ್ಕಾಗಿ ಈ ಪೂಜೆಯನ್ನು ವಿಶೇಷವಾಗಿ ಮಾಡುತ್ತಾರೆ. ಈ ದಿನ ವಿಶೇಷ ಭಕ್ಷ್ಯಗಳನ್ನು ತಯಾರಿಸಿ ದೇವಿಗೆ ನೈವೇದ್ಯ ಇಡುತ್ತಾರೆ. ಈ ಹಬ್ಬದಂದು ತಯಾರಿಸಬಹುದಾದ ಸುಲಭ ಹಾಗೂ ವಿಶೇಷ ಪಾಕವಿಧಾನಗಳ ವಿವರ ಇಲ್ಲಿದೆ.

VISTARANEWS.COM


on

Varamahalakshmi Festival 2024
Koo


ವರಮಹಾಲಕ್ಷ್ಮಿ ಹಬ್ಬ ಶ್ರಾವಣ ಮಾಸದ 2ನೇ ಶುಕ್ರವಾದಂದು ಆಚರಿಸಲು ಸಿದ್ಧತೆಗಳು ನಡೆಯುತ್ತಿವೆ. ಇದು ಮಹಿಳೆಯರಿಗೆ ಅತ್ಯಂತ ಪ್ರಿಯವಾದ ಹಬ್ಬವಾಗಿದೆ. ವರಮಹಾಲಕ್ಷ್ಮಿ ಎಂದರೆ ನೀವು ಈ ದಿನ ಲಕ್ಷ್ಮಿಯನ್ನು ಭಕ್ತಿಯಿಂದ ಪೂಜಿಸಿದರೆ ಆಕೆ ನಿಮಗೆ ವರಗಳನ್ನು ಕರುಣಿಸುತ್ತಾಳೆ ಎಂಬ ನಂಬಿಕೆ ಇದೆ. ಈ ವರ್ಷ ಈ ವರಮಹಾಲಕ್ಷ್ಮಿ ಹಬ್ಬ (Varamahalakshmi Festival 2024 )ಆಗಸ್ಟ್ 16ರ ಶುಕ್ರವಾರದಂದು ಬಂದಿದೆ. ದಕ್ಷಿಣ ಭಾರತದ ಹೆಚ್ಚಿನ ವಿವಾಹಿತ ಮಹಿಳೆಯರು ಸಮೃದ್ಧಿಗಾಗಿ ಮತ್ತು ತಮ್ಮ ಕುಟುಂಬಗಳ ಯೋಗಕ್ಷೇಮಕ್ಕಾಗಿ ಈ ಪೂಜೆಯನ್ನು ಶ್ರದ್ಧೆ ಭಕ್ತೆಯಿಂದ ಮಾಡುತ್ತಾರೆ. ಈ ದಿನ ವಿಶೇಷ ಭಕ್ಷ್ಯಗಳನ್ನು ತಯಾರಿಸಿ ದೇವಿಗೆ ನೈವೇದ್ಯ ಇಡುತ್ತಾರೆ. ಹಾಗಾಗಿ ಆ ದಿನ ತಯಾರಿಸಬಹುದಾದ ಸುಲಭ ಹಾಗೂ ವಿಶೇಷ ಪಾಕವಿಧಾನಗಳ ವಿವರ ಇಲ್ಲಿದೆ.

Varamahalakshmi Festival 2024
Varamahalakshmi Festival 2024

ಒಬ್ಬಟ್ಟು

ಒಬ್ಬಟ್ಟು ಒಂದು ಪ್ರಸಿದ್ಧ ಸಿಹಿತಿಂಡಿ. ಒಬ್ಬಟ್ಟು ಬೆಲ್ಲದಿಂದ ತಯಾರಿಸುವ ಸಿಹಿತಿಂಡಿಯಾಗಿದೆ. ಇದು ಲಕ್ಷ್ಮಿ ದೇವಿಗೆ ಪ್ರಿಯವಾದ ನೈವೇದ್ಯವಾಗಿದೆ ಮತ್ತು ಈ ಹಬ್ಬವನ್ನು ಆಚರಿಸುವ ಎಲ್ಲಾ ಮನೆಗಳಲ್ಲಿ ಇದನ್ನು ಸಾಮಾನ್ಯವಾಗಿ ತಯಾರಿಸುತ್ತಾರೆ.

Varamahalakshmi Festival 2024
Varamahalakshmi Festival 2024

ರವಾ ಉಂಡೆ

ವರ ಮಹಾಲಕ್ಷ್ಮಿ ಹಬ್ಬಕ್ಕೆ ತಯಾರಿಸಲಾಗುವ ಅತ್ಯಂತ ರುಚಿಕರವಾದ ಪಾಕವಿಧಾನವೆಂದರೆ ಅದು ರವಾ ಉಂಡೆ. ಇದನ್ನು ತಯಾರಿಸುವುದು ಬಹಳ ಸುಲಭ ಮತ್ತು ಇದನ್ನು ಹೆಚ್ಚಿನವರು ದೇವಿಯ ನೈವೇದ್ಯಕ್ಕೆ ಇಡುತ್ತಾರೆ.

Varamahalakshmi Festival 2024
Varamahalakshmi Festival 2024

ಶಾವಿಗೆ ಪಾಯಸ

ಪಾಯಸವು ದಕ್ಷಿಣ ಭಾರತದ ಸಾಂಪ್ರದಾಯಿಕ ಸಿಹಿ ತಿಂಡಿಯಾಗಿದೆ. ಇದನ್ನು ಹಾಲಿನಿಂದ ತಯಾರಿಸಲಾಗುತ್ತದೆ. ವರಮಹಾಲಕ್ಷ್ಮಿಗೆ ಪಾಯಸ ಬಹಳ ಇಷ್ಟವಾದ ಸಿಹಿಯಾಗಿದೆ. ಶಾವಿಗೆ ಪಾಯಸವನ್ನು ಬಹಳ ಸುಲಭವಾಗಿ ಕೇವಲ 20 ನಿಮಿಷಗಳಲ್ಲಿ ತಯಾರಿಸಬಹುದು.

Varamahalakshmi Festival 2024
Varamahalakshmi Festival 2024

ತಂಬಿಟ್ಟು

ನೈವೇದ್ಯಕ್ಕಾಗಿ ಲಕ್ಷ್ಮಿ ದೇವಿಗೆ ಬಡಿಸಲಾಗುವ ಮತ್ತೊಂದು ಸಿಹಿತಿಂಡಿ ತಂಬಿಟ್ಟು. ಇದನ್ನು ಸಾಮಾನ್ಯವಾಗಿ ಅಕ್ಕಿ ಹಿಟ್ಟು ಮತ್ತು ತುಪ್ಪವನ್ನು ಬಳಸಿ ತಯಾರಿಸಲಾಗುತ್ತದೆ. ಎಲ್ಲಾ ದೇವರ ಪೂಜೆಯಲ್ಲಿ ಇದನ್ನು ಬಳಸುತ್ತಾರೆ.

Varamahalakshmi Festival 2024
Varamahalakshmi Festival 2024

ಲೆಮನ್ ರೈಸ್

ನಿಂಬೆ, ತೆಂಗಿನಕಾಯಿ, ಕಡಲೆಕಾಯಿ ಮತ್ತು ಅಕ್ಕಿಯನ್ನು ಬಳಸಿಕೊಂಡು ಲೆಮನ್ ರೈಸ್ ಅನ್ನು ತಯಾರಿಸಲಾಗುತ್ತದೆ. ಇದನ್ನು ತಯಾರಿಸುವುದು ತುಂಬಾ ಸುಲಭ ಮತ್ತು ವರಮಹಾಲಕ್ಷ್ಮಿಹಬ್ಬವನ್ನು ಆಚರಿಸುವವವರು ಇದನ್ನು ಯಾವಾಗಲೂ ತಯಾರಿಸುತ್ತಾರೆ.

Varamahalakshmi Festival 2024
Varamahalakshmi Festival 2024

ಕೋಸಂಬರಿ

ವರಮಹಾಲಕ್ಷ್ಮಿ ಹಬ್ಬದ ಪ್ರಮುಖ ಪಾಕವಿಧಾನವೆಂದರೆ ಕೋಸಂಬರಿ. ಇದನ್ನು ಹೆಸರು ಬೇಳೆ ಮತ್ತು ಸೌತೆಕಾಯಿ ಬಳಸಿ ತಯಾರಿಸಲಾಗುತ್ತದೆ. ಇದು ಸೈಡ್ ಡಿಶ್ ಆಗಿದ್ದರೂ, ಕೋಸಂಬರಿ ಇಲ್ಲದೆ ಹಬ್ಬದ ಊಟವು ಪೂರ್ಣಗೊಳ್ಳುವುದಿಲ್ಲ.

Varamahalakshmi Festival 2024
Varamahalakshmi Festival 2024

ಅಂಬೋಡೆ

ಹಬ್ಬದಲ್ಲಿ ಮಸಾಲೆಯುಕ್ತ ರುಚಿಯನ್ನು ಸೇರಿಸಲು ಅಂಬೋಡೆಯನ್ನು ತಯಾರಿಸಬಹುದು. ಇದನ್ನು ಬೇಳೆಕಾಳುಗಳು, ಹಸಿರು ಮೆಣಸಿನಕಾಯಿ, ಪುದಿನಾ ಬಳಸಿ ತಯಾರಿಸಲಾಗುತ್ತದೆ. ಇದು ನಿಮಗೆ ರುಚಿಕರವಾದ ಮಸಾಲೆ ರುಚಿಯನ್ನು ನೀಡುತ್ತದೆ.

Varamahalakshmi Festival 2024
Varamahalakshmi Festival 2024

ತರಕಾರಿ ಸಾಂಬಾರ್

ಇದು ದಕ್ಷಿಣ ಭಾರತದಲ್ಲಿ ಬೇಳೆ ಬಳಸಿ ತಯಾರಿಸುವ ಪ್ರಸಿದ್ಧವಾದ ಖಾದ್ಯವಾಗಿದೆ. ನೀವು ಈ ಹಬ್ಬಕ್ಕೆ ಭೋಜನಕ್ಕೆ ವಿವಿಧ ತರಕಾರಿಗಳು ಮತ್ತು ಮಸಾಲೆಗಳೊಂದಿಗೆ ಸಾಂಬಾರ್ ತಯಾರಿಸಬಹುದು. ಇದನ್ನು ಬಿಸಿ ಅನ್ನ ಮತ್ತು ತುಪ್ಪದೊಂದಿಗೆ ಬಡಿಸಿದರೆ ಊಟದ ರುಚಿ ಹೆಚ್ಚಾಗುತ್ತದೆ.

Varamahalakshmi Festival 2024
Varamahalakshmi Festival 2024

ರಸಂ

ವರಮಹಾಲಕ್ಷ್ಮಿ ಹಬ್ಬದ ಊಟಕ್ಕೆ ರಸಂ ಅನ್ನು ತಯಾರಿಸುತ್ತಾರೆ. ರಸಂ ಅನ್ನು ಟೊಮೆಟೊ, ಹುಣಸೆ ಮತ್ತು ತೆಂಗಿನಕಾಯಿಯಿಂದ ತಯಾರಿಸಲಾಗುತ್ತದೆ. ಈ ರಸಂ ಅನ್ನು ಬಿಸಿ ಅನ್ನ ಮತ್ತು ಪಲ್ಯದ ಜೊತೆಗೆ ತಿಂದರೆ ಹಬ್ಬದ ಸಡಗರ ಹೆಚ್ಚಾಗುತ್ತದೆ.

Varamahalakshmi Festival 2024
Varamahalakshmi Festival 2024

ಮಜ್ಜಿಗೆ ಹುಳಿ

ವರಮಹಾಲಕ್ಷ್ಮಿ ಹಬ್ಬದಂದು ವಿಶೇಷ ಮಜ್ಜಿಗೆ ಹುಳಿ (ಮೊಸರು ಸಾಂಬಾರ್) ತಯಾರಿಸಲಾಗುತ್ತದೆ. ಈ ಸಾಂಬಾರ್ ಉತ್ತಮ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಉತ್ತಮ ರುಚಿಯನ್ನು ನೀಡುತ್ತದೆ. ಇದನ್ನು ಹಸಿ ಮೆಣಸಿನಕಾಯಿ, ತೆಂಗಿನಕಾಯಿ, ಕೊತ್ತಂಬರಿ ಸೊಪ್ಪು ಮತ್ತು ಕಡಲೆ ಬಳಸಿ ತಯಾರಿಸಲಾಗುತ್ತದೆ.

ಇದನ್ನೂ ಓದಿ:Shravan 2024: ಶ್ರಾವಣ ಶುಕ್ರವಾರದ ವಿಶೇಷವೇನು? ಅಂದು ಏನು ಮಾಡಬೇಕು? ಏನು ಮಾಡಬಾರದು?

ಈ ರೀತಿಯ ಪಾಕವಿಧಾನಗಳನ್ನು ವರಮಹಾಲಕ್ಷ್ಮಿ ಹಬ್ಬಕ್ಕೆ ತಯಾರಿಸಿ ಅತಿಥಿಗಳಿಗೆ ಬಡಿಸಿದರೆ ಹಬ್ಬದ ಸಂಭ್ರಮ ಹೆಚ್ಚುವುದರಲ್ಲಿ ಸಂದೇಹವೇ ಇಲ್ಲ.

Continue Reading
Advertisement
Self Harming
ಹಾಸನ57 seconds ago

Self Harming : ಮಗಳೊಂದಿಗೆ ಹೇಮಾವತಿ ನಾಲೆಗೆ ಹಾರಿ ದಂಪತಿ ಆತ್ಮಹತ್ಯೆ

Gold Rate Today
ಚಿನ್ನದ ದರ16 mins ago

Gold Rate Today: ಚಿನ್ನದ ಬೆಲೆಯಲ್ಲಿ ಯಾವುದೇ ಏರಿಳಿತವಿಲ್ಲ; ಇಂದಿನ ದರ ಇಷ್ಟಿದೆ

jyothi poorvaaj jyothi rai says she blocked 1 thousand accounts
ಸ್ಯಾಂಡಲ್ ವುಡ್29 mins ago

Jyothi Rai: ಕೆಟ್ಟ ಮೆಸೇಜ್‌ ಮಾಡಿದ 1 ಸಾವಿರ ಅಕೌಂಟ್‌ಅನ್ನು ಬ್ಲಾಕ್‌ ಮಾಡಿದ ಜ್ಯೋತಿ ರೈ!

bike wheeling
ಬೆಂಗಳೂರು ಗ್ರಾಮಾಂತರ34 mins ago

Bike Wheeling: ಸ್ವಾತಂತ್ರ್ಯ ದಿನಾಚರಣೆ ಹೆಸರಲ್ಲಿ ಹೈವೇಯಲ್ಲಿ ಡೆಡ್ಲಿ ವ್ಹೀಲಿಂಗ್‌!

Independence Day 2024
ಕರ್ನಾಟಕ41 mins ago

Independence Day 2024: ಅನುದಾನ ಹಂಚಿಕೆಯಲ್ಲಿ ಕೇಂದ್ರದಿಂದ ತಾರತಮ್ಯ: ಸಿದ್ದರಾಮಯ್ಯ ಗಂಭೀರ ಆರೋಪ

Independence Day 2024
ಕರ್ನಾಟಕ1 hour ago

Independence Day 2024: ಎಸ್‌ಸಿ, ಎಸ್‌ಟಿ ಸಮುದಾಯದ ಅಭಿವೃದ್ಧಿಗೆ ರಾಜ್ಯ ಬದ್ಧ; ಸಿದ್ದರಾಮಯ್ಯ

Laughing Buddha Trailer out Pramod Shetty Diganth Rishab Shetty
ಸ್ಯಾಂಡಲ್ ವುಡ್2 hours ago

Pramod Shetty: ‘ಲಾಫಿಂಗ್ ಬುದ್ಧ’ ಟ್ರೈಲರ್‌ ಔಟ್‌; ಕಚಗುಳಿ ಇಡುವಂತಿದೆ ಪೊಲೀಸಪ್ಪನ ಕತೆ!

Independence Day 2024
ಕರ್ನಾಟಕ2 hours ago

ಜನರ ಕಲ್ಯಾಣಕ್ಕಾಗಿ ಜಾರಿಗೆ ತಂದ ಗ್ಯಾರಂಟಿ ಯೋಜನೆ ಮುಂದುವರಿಯಲಿದೆ; ಧ್ವಜಾರೋಹಣ ನೆರವೇರಿಸಿ ಸಿಎಂ ಸಿದ್ದರಾಮಯ್ಯ

Independence Day 2024
ದೇಶ2 hours ago

Independence Day 2024: ಜಾತ್ಯಾತೀತ ನಾಗರಿಕ ಸಂಹಿತೆ ಜಾರಿಯಾದರೆ ಮಾತ್ರ ತಾರತಮ್ಯದಿಂದ ಮುಕ್ತಿ; ಪ್ರಧಾನಿ ಮೋದಿ

Golden Star Ganesh Krishnam Pranaya Sakhi review
ಸ್ಯಾಂಡಲ್ ವುಡ್2 hours ago

Golden Star Ganesh: ಹೇಗಿದೆ “ಕೃಷ್ಣಂ ಪ್ರಣಯ ಸಖಿ” ಸಿನಿಮಾ? ಫ್ಯಾನ್ಸ್‌ ಹೇಳೋದೇನು?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ7 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ7 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ7 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌