ರಾಜಮಾರ್ಗ ಅಂಕಣ: ಸ್ವಾತಂತ್ರ್ಯದ ಕನವರಿಕೆಯಲ್ಲಿ ಮಿಂದೆದ್ದ ಭಾರತ - Vistara News

ಅಂಕಣ

ರಾಜಮಾರ್ಗ ಅಂಕಣ: ಸ್ವಾತಂತ್ರ್ಯದ ಕನವರಿಕೆಯಲ್ಲಿ ಮಿಂದೆದ್ದ ಭಾರತ

ರಾಜಮಾರ್ಗ ಅಂಕಣ: ಆ ಘಟನೆ ನಡೆದು 78 ವರ್ಷಗಳೇ ಕಳೆದುಹೋದವು. ಬ್ರಿಟಿಷ್ ಚಕ್ರಾಧಿಪತ್ಯವು ನಮ್ಮನ್ನು ತೊರೆದು ಸ್ವಾತಂತ್ರ್ಯದ ನಸುಕು ಹರಿದು ಅಷ್ಟೇ ವರ್ಷಗಳು ಪೂರ್ತಿಯಾದವು. ಆದರೆ ಆ ಸ್ವಾತಂತ್ರ್ಯವು ನಮಗೆ ಸುಲಭವಾಗಿ ದೊರೆಯಿತು ಎಂದು ಯಾರೂ ತಿಳಿಯುವುದು ಬೇಡ.

VISTARANEWS.COM


on

Rajamarga
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸ್ವಾತಂತ್ರ್ಯ ಎಂಬ ಹೆರಿಗೆ ನೋವನ್ನು ದಾಟಿ!

ರಾಜಮಾರ್ಗ ಅಂಕಣ: ಮೊಘಲ್ ದೊರೆ ಶಹಜಾಹನ್ ಭಾರತಕ್ಕೆ ವ್ಯಾಪಾರಕ್ಕಾಗಿ ಬಂದ ಈಸ್ಟ್ ಇಂಡಿಯಾ ಕಂಪನಿಗೆ ಸತಾರಾ ನಗರದಲ್ಲಿ ವಸಾಹತು ಮಾಡಲು ಅನುಮತಿ ನೀಡಿದ್ದೇ ಆರಂಭ. ಆ ಕಂಪೆನಿಯ ಹಿಂದೆ ಬಂದದ್ದು ಇಂಗ್ಲೆಂಡಿನ ಪ್ರಭುತ್ವ. ಅದರ ಬೆನ್ನಿಗೆ ಬಂದದ್ದು ಮತಾಂತರದ ಆಮಿಷಗಳು. ಕೊನೆಯದಾಗಿ ಬಂದದ್ದು ಭಾರತದ ಅನರ್ಘ್ಯ ಸಂಪತ್ತನ್ನು ಲೂಟಿ ಮಾಡುವ, ಭಾರತದ ಒಂದೊಂದೇ ಪ್ರದೇಶವನ್ನು ಆಪೋಶನ ಮಾಡುವ ಹುನ್ನಾರಗಳು. ಅದಕ್ಕೆ ಪೂರಕವಾದ ಇಂಗ್ಲಿಷರ ಕುಟಿಲ ನೀತಿಗಳು ಮತ್ತು ಷಡ್ಯಂತ್ರಗಳು! ಆಗೊಮ್ಮೆ ಕೂತು ನನ್ನ ಮನಸ್ಸು ಯೋಚಿಸುತ್ತದೆ, 1757ರ ಕದನದಲ್ಲಿ ಬ್ರಿಟಿಷರ 3000 ಸೈನಿಕರ ಒಂದು ಪುಟಗೋಸಿ ಸೇನೆಯನ್ನು ಬಂಗಾಲದ ನವಾಬನ ಸಿರಾಜುದ್ದೌಲನ 30,000 ಸೈನಿಕರ ಬಲಿಷ್ಠ ಸೇನೆ ಸೋಲಿಸಿದ್ದರೆ? ಹಾಗೇನಾದರೂ ಆಗಿದ್ದರೆ ಆಗಲೇ ಬ್ರಿಟಿಷ್ ಸಾಮ್ರಾಜ್ಯ ಭಾರತದಿಂದ ಗಂಟು ಮೂಟೆ ಕಟ್ಟಬೇಕಿತ್ತು. ಯಾಕೆ ಹಾಗಾಗಲಿಲ್ಲ ಎಂದರೆ ಭಾರತದ ಹೊರಗಿನ ಶತ್ರುಗಳಿಗಿಂತ ಒಳಗಿನ ಶತ್ರುಗಳೇ ಹೆಚ್ಚು ಬಲಿಷ್ಠರಾಗಿದ್ದರು!

223 ವರ್ಷಗಳ ಸುದೀರ್ಘ ಸ್ವಾತಂತ್ರ್ಯದ ಹೋರಾಟ!

ನೂರಾರು ವಿದೇಶಿ ಆಕ್ರಮಣಕಾರರು ಭಾರತದ ಮೇಲೆ ದಂಡೆತ್ತಿಕೊಂಡು ಬಂದರು ಎಂದು ನಮಗೆ ಇತಿಹಾಸ ಪಠ್ಯಗಳು ಹೇಳುತ್ತಿದ್ದವು. ಆದರೆ ಯಾಕೆ ಬಂದರು ಎಂದು ನಮಗೆ ಅರ್ಥವಾದದ್ದು ನಾವು ಮುಂದೆ ಭಾರತದ ನೈಜ ಇತಿಹಾಸವನ್ನು ಓದಿದ ನಂತರವೇ! ಬ್ರಿಟಿಷರು ಭಾರತಕ್ಕೆ ಬರುವ ಮೊದಲು ನಮ್ಮ ದೇಶವು ಜಗತ್ತಿನ ಅತ್ಯಂತ ಬಲಿಷ್ಠ ರಾಷ್ಟ್ರವಾಗಿತ್ತು. ಸಂಪತ್ತಿನಲ್ಲಿಯೂ ಮತ್ತು ಜ್ಞಾನದಲ್ಲಿಯೂ! ಅದೇ ಆಕರ್ಷಣೆ ಈ ಬ್ರಿಟಿಷರಿಗೆ ಕೂಡ. ಆಗ ಭಾರತದಲಿದ್ದ ಸಣ್ಣ ಸಣ್ಣ ರಾಜ್ಯಗಳ ನಡುವೆ ಒಮ್ಮತವಿರಲಿಲ್ಲ. ಸ್ವಾರ್ಥ ತುಂಬಿದ್ದ ಆ ರಾಜಮಹಾರಾಜರು ಏನಾದರೂ ಒಟ್ಟಾಗಿ ನಿಂತಿದ್ದರೆ ನಮಗೆ 100 ವರ್ಷಗಳ ಹಿಂದೆಯೇ ಸ್ವಾತಂತ್ರ್ಯವು ದೊರೆಯುತ್ತಿತ್ತು! ಆಗಲೂ ಭಾರತದ ಸ್ವಾತಂತ್ರ್ಯಕ್ಕೆ ಗೋಡೆಯಾಗಿ ನಿಂತವರು ಈ ಒಳಗಿನ ಶತ್ರುಗಳೇ! ಹಿಂದೂ ಮತ್ತು ಮುಸಲ್ಮಾನರು ಒಟ್ಟಾಗಿ ಸ್ವಾತಂತ್ರ್ಯಕ್ಕೆ ಹೋರಾಡುವುದನ್ನು ಬ್ರಿಟಿಷರು ಸಹಿಸಿಕೊಳ್ಳಲೇ ಇಲ್ಲ. ಈ ಒಡೆದು ಆಳುವ ನೀತಿಯಿಂದಾಗಿ ಭಾರತದ ಸ್ವಾತಂತ್ರ್ಯ ಹೋರಾಟವು ಬೇರೆ ರಾಷ್ಟ್ರಗಳ ಹೋರಾಟಕ್ಕಿಂತ ದೀರ್ಘ ಆಯಿತು.

ಸ್ವಾತಂತ್ರ್ಯದ ಕನವರಿಕೆಯಲ್ಲಿ ದೇಶ ಇಬ್ಭಾಗವಾಯಿತು!

ಜಗತ್ತಿನ ಯಾವ ರಾಷ್ಟ್ರವು ಕೂಡ ಸ್ವಾತಂತ್ರ್ಯವನ್ನು ಪಡೆದಾಗ ಎರಡಾಗಿ ಒಡೆದು ಹೋದ ನಿದರ್ಶನ ದೊರೆಯುವುದಿಲ್ಲ! ಆದರೆ ಆಗಸ್ಟ್ 14ರ ಮಧ್ಯರಾತ್ರಿ ಪ್ರಧಾನಿ ನೆಹರೂ ಯುನಿಯನ್ ಜ್ಯಾಕನ್ನು ಕೆಳಗೆ ಇಳಿಸಿ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೊದಲೇ ಭಾರತವು ಎರಡು ಭಾಗವಾಗಿ ಪಾಕಿಸ್ಥಾನದ ಉದಯ ಆಗಿತ್ತು! ಆ ಕ್ಷಣದಲ್ಲಿ ಬ್ರಿಟಿಷ್ ಪ್ರಭುತ್ವ ಮೀಸೆ ತಿರುವಿ ನಗುತ್ತಿತ್ತು. ಏಕೆಂದರೆ ಅಖಂಡ ಭಾರತವು ಮುಂದೆ ವಿಶ್ವದ ಬಲಿಷ್ಠ ಶಕ್ತಿಯಾಗಿ ಹೊಮ್ಮುವ ಕನಸಿಗೆ ಅಂದೇ ಅವರು ಕೊಳ್ಳಿಯಿಟ್ಟಾಗಿತ್ತು! ಭಾರತೀಯರ ಆ ಒಂದು ಸಂಭ್ರಮದ ಮೈಮರೆತವು ಪಾಕಿಸ್ತಾನದ ರೂಪದಲ್ಲಿ ಇಂದಿಗೂ ನಮಗೆ ಮಗ್ಗುಲ ಮುಳ್ಳಾಗಿ ನಿಂತದ್ದು ವಿಪರ್ಯಾಸ!

ರಾವಿ ನದಿಯನ್ನು ದಾಟಿ ರೈಲು ತುಂಬ ಭಾರತಕ್ಕೆ ಬಂದ ರಕ್ತಸಿಕ್ತ ಹೆಣಗಳು ಭಾರತದ ಸ್ವಾತಂತ್ರ್ಯದ ಕನವರಿಕೆಯಲ್ಲಿ ಮುಳುಗಿದ್ದ ಆಗಿನ ಕೆಲವು ನಾಯಕರಿಗೆ ದ್ರೋಹ ಎಂದು ಅನ್ನಿಸಲೇ ಇಲ್ಲ. ಭೀಷ್ಮ ಸಾಹನಿ ಬರೆದ ಹಿಂದೀ ಕಾದಂಬರಿ
‘ತಮಸ್ ‘ಇದನ್ನುಒಮ್ಮೆ ಓದಿದಾಗ ನಮ್ಮ ರಕ್ತ ಕುದಿಯದೆ ಹೋದರೆ ನಾವು ಭಾರತೀಯರೇ ಅಲ್ಲ ಬಿಡಿ! ಆಗಲೂ ಭಾರತವನ್ನು ಕಾಡಿದ್ದು ಒಳಗಿನ ಶತ್ರುಗಳೇ! ಭಾರತಕ್ಕೆ ಸ್ವಾತಂತ್ರ್ಯವನ್ನು ಕೊಟ್ಟೆವು ಎಂದು ಹೊರಗಿಂದ ಶೋ ಮಾಡಿ ಒಳಗೊಳಗೆ ‘ಡೊಮಿನಿಯನ್ ರಿಪಬ್ಲಿಕ್ ‘ ಎಂಬ ಢೋಂಗಿ ಒಪ್ಪಂದಕ್ಕೆ ನಮ್ಮ ವರಿಷ್ಟರಿಂದ ಸಹಿಮಾಡಿಸಿದ, ಮತ್ತೆ ಮೂರು ವರ್ಷಗಳ ಕಾಲ ಭಾರತವನ್ನು ಕಾಡಿದ ಈಸ್ಟ್ ಇಂಡಿಯಾ ಕಂಪೆನಿಯ ವರಿಷ್ಠರಿಗೆ ಅದೇ ತಾನೇ ಬೇಕಾಗಿತ್ತು!

ಸ್ವಾತಂತ್ರ್ಯದ ನಂತರದ 78 ವರ್ಷಗಳು!

1945ರ ಹಿರೋಶಿಮಾ ಬಾಂಬ್ ಸ್ಫೋಟದ ನಂತರ ಜಪಾನ್ ಮತ್ತೆ ಎದ್ದು ಬಂದದ್ದು ದೇಶಪ್ರೇಮದ ಜಾಗೃತಿಯಿಂದ. ಭಾರತಕ್ಕೂ ಅಂತಹದ್ದೇ ಅವಕಾಶ ಇತ್ತು. 223 ವರ್ಷಗಳ ಸುದೀರ್ಘ ಸ್ವಾತಂತ್ರ್ಯದ ಹೋರಾಟದ ಕಾವು ಕಣ್ಣ ಮುಂದೆ ಇತ್ತು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನಗಳು ಇದ್ದವು. ಕ್ರಾಂತಿಕಾರಿಗಳ ರಕ್ತಸಿಕ್ತ ಹೋರಾಟದ ಘಟನೆಗಳು ಇದ್ದವು. ನೇತಾಜಿ ಸುಭಾಸರ ‘ನನಗೆ ರಕ್ತ ಕೊಡಿ, ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ!’ ಮೊದಲಾದ ಘೋಷಣೆಗಳು ಇದ್ದವು. ಬಂಕಿಮ ಚಂದ್ರರ ಕ್ಷಾತ್ರತೇಜಸ್ಸಿನ ವಂದೇ ಮಾತರಂ ಗೀತೆ ಇತ್ತು. ಒಡೆದು ಹೋದ ಭಾರತವನ್ನು ಮತ್ತೆ ಏಕೀಕರಣ ಮಾಡಿದ ಸರ್ದಾರ್ ಪಟೇಲ್ ಅವರ ನೇತೃತ್ವ ಇತ್ತು. ಇದನ್ನೆಲ್ಲ ಬಂಡವಾಳವಾಗಿ ತೆಗೆದುಕೊಂಡಿದ್ದರೆ ಭಾರತವು ಯಾವಾಗಲೋ ‘ವಿಶ್ವಗುರು’ ಆಗುತ್ತಿತ್ತು. ಇನ್ನೂ ಪೂರ್ತಿ ಆಗಲಿಲ್ಲ ಅಂದರೆ ಅದಕ್ಕೂ ಕಾರಣ ಒಳಗಿನ ಶತ್ರುಗಳು.

ಭಾರತದ ಕ್ಷಾತ್ರತೇಜಸ್ಸು ಮತ್ತೆ ಎದ್ದು ಬರಬೇಕಾಗಿದೆ.

ನಾನು ಈವರೆಗೆ ಪಟ್ಟಿ ಮಾಡಿದ ಯಾವ ದೋಷವೂ ತಾಯಿ ಭಾರತಿಯದ್ದು ಅಲ್ಲ. ಆಕೆ ಹಿಂದೆಯೂ, ಇಂದಿಗೂ, ಮುಂದೆಯೂ ಸ್ವಯಂಭೂ ಸುವರ್ಣಗರ್ಭೆ! ಮಾತೃ ಸ್ವರೂಪಿಣಿ! ಜಗತ್ತಿನ ಬೇರೆ ಯಾವ ರಾಷ್ಟ್ರಕ್ಕೂ 10,000 ವರ್ಷಗಳ ಬರೆದಿಟ್ಟ ಇತಿಹಾಸ ಇಲ್ಲ, ಅದು ಭಾರತಕ್ಕಿದೆ ಎಂಬಲ್ಲಿಗೆ ಭಾರತವು ಫೀನಿಕ್ಸ್ ಪಕ್ಷಿಯಂತೆ ಮತ್ತೆ ಎದ್ದುಬರುವ ಸಾಧ್ಯತೆಗಳು ನಮ್ಮ ಕಣ್ಣ ಮುಂದಿವೆ. ಭಾರತವು ಜಗತ್ತಿನ ಐದನೇ ಅತೀ ದೊಡ್ಡ ಆರ್ಥಿಕ ಶಕ್ತಿ ಆಗ್ತಾ ಇದೆ. ಜಾಗತಿಕ ವೇದಿಕೆಗಳಲ್ಲಿ ಭಾರತದ ಇಮೇಜ್ ಹೆಚ್ಚಾಗ್ತಾ ಇದೆ. ನಮ್ಮ ಸುತ್ತಮುತ್ತಲಿನ ಪಾಕಿಸ್ತಾನ್, ಬಾಂಗ್ಲಾ ದೇಶ, ಶ್ರೀಲಂಕಾ, ಅಫ್ಘಾನಿಸ್ತಾನಗಳು ಆರ್ಥಿಕವಾಗಿ ನಡುಗಿದರೂ ಭಾರತದ ಆರ್ಥಿಕತೆಯ ಒಂದು ಇಟ್ಟಿಗೆ ಕೂಡ ಅಲುಗಾಡಿಲ್ಲ ಅನ್ನೋದು ನಮ್ಮ ಭರವಸೆಯ ಕಾರಣ. ಕೊರಾನಾ ಮಹಾಮಾರಿಯನ್ನು ಹೇಗೆ ಲಸಿಕೆಗಳ ಅಭಿಯಾನದ ಮೂಲಕ ಭಾರತವು ಗೆದ್ದಿತು ಎನ್ನುವ ನಿದರ್ಶನ ನಮ್ಮ ಮುಂದಿದೆ. ಇಸ್ರೋ ಕೈಗೊಳ್ಳುತ್ತಿರುವ ವ್ಯೋಮ ಕಾರ್ಯಕ್ರಮಗಳನ್ನು ಜಗತ್ತು ಬೆರಗುಗಣ್ಣಿಂದ ನೋಡುತ್ತಿದೆ. ಸ್ವಾತಂತ್ರ್ಯದ ನಂತರ ನಡೆದ ಪ್ರತೀಯೊಂದು ಯುದ್ಧವನ್ನು
(ಒಂದನ್ನು ಬಿಟ್ಟು) ಭಾರತವು ದೊಡ್ಡಮಟ್ಟದಲ್ಲಿ ಗೆದ್ದಿದೆ. ವಿಶ್ವದ ಬಲಿಷ್ಠ ರಾಷ್ಟ್ರಗಳು ಈಗ ಭಾರತದ ಗೆಳೆತನಕ್ಕಾಗಿ ಕಾಯುತ್ತಿವೆ ಅಂದರೆ ಅದು ಎಷ್ಟೊಂದು ಅದ್ಭುತವಾದ ಪರಿವರ್ತನೆ.

2047ರ ಹೊತ್ತಿಗೆ ಭಾರತವು ವಿಕಸಿತ ರಾಷ್ಟ್ರವಾಗುವ ಭರವಸೆ ನಮ್ಮೆಲ್ಲರನ್ನೂ ಸದ್ಯಕ್ಕೆ ಕೈ ಹಿಡಿದು ಮುನ್ನಡೆಸಲಿ.

ಜೈ ಹಿಂದ್!

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೃಷ್ಟಿ ವಿಕಲತೆಯನ್ನು ಮೆಟ್ಟಿ ನಿಂತು ಐಎಎಸ್ ಅಧಿಕಾರಿ ಆದ ಪ್ರಾಂಜಲ್ ಪಾಟೀಲ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ಧವಳ ಧಾರಿಣಿ ಅಂಕಣ: ರಾಮವಿಲಾಪಕ್ಕೆ ಲಕ್ಷ್ಮಣೋಪಶಮನ

ಧವಳ ಧಾರಿಣಿ ಅಂಕಣ: ಹಲವು ವಿಧಗಳಲ್ಲಿ ಸೀತೆಗಾಗಿ ವಿಲಪಿಸುತ್ತಾನೆ. ರಾಮನ ದುಃಖವನ್ನು ಶಮನ ಮಾಡುವ ಲಕ್ಷ್ಮಣನ ಸಂಯಮ ಅದ್ಭುತವಾದದ್ದು. ಲಕ್ಷ್ಮಣ ರಾಮನಿಗೆ ತನ್ನ ಕರ್ತವ್ಯವನ್ನು ನಿಭಾಯಿಸುವಂತೆ ಆತನನ್ನು ಎಚ್ಚರಿಸುವ ಅಪೂರ್ವ ಮಾತುಗಳು ಕಿಷ್ಕಿಂಧಾಕಾಂಡದ ಮೊದಲನೆಯ ಸರ್ಗದಲ್ಲಿ ಬರುತ್ತದೆ.

VISTARANEWS.COM


on

rama laxmana ಧವಳ ಧಾರಿಣಿ ಅಂಕಣ
Koo

ವಿಯೋಗದಿಂದ ಕದಡಿದ ಮನಸ್ಸಿಗೆ ಪೂರ್ವಸ್ಮೃತಿಯನ್ನು ತಂದುಕೊಡುವ ಸನ್ನಿವೇಶ

dhavala dharini by Narayana yaji

:: ನಾರಾಯಣ ಯಾಜಿ

ತ್ಯಜತ್ವಾಂ ಕಾಮವೃತ್ತತ್ತ್ವಂ ಶೋಕಂ ಸಂನ್ಯಸ್ಯ ಪೃಷತಃ I
ಮಹಾತ್ಮನಂ ಕೃತಾತ್ಮಾನಮಾತ್ಮಾನಂ ನಾವಬಿಧ್ಯಸೇ II ಕಿ. 1.123 II

ಸೀತಾವಿಯೋಗದಿಂದುಂಟಾಗಿರುವ ಶೋಕವನ್ನು ಬಿಡು. ಮನ್ಮಥವಿಕಾರವನ್ನು ತ್ಯಜಸು! ನೀನು ಮಹಾತ್ಮನೆಂಬುದನ್ನೂ , ಕೃತಾತ್ಮನೆನ್ನುವುದನ್ನೂ ಮರೆತುಬಿಟ್ಟಿರುವೆ.

ರಾಮಾಯಣದಲ್ಲಿ ಕಿಷ್ಕಿಂಧಾ ಕಾಂಡದ ಬಹುಮುಖ್ಯವಾದ ಘಟನೆಯೇ ಪತ್ನಿಯ ವಿರಹದಿಂದ ಅಪಾರ ದುಃಖಕ್ಕೆ ಒಳಗಾದ ರಾಮನನ್ನು ಲಕ್ಷ್ಮಣ ಸಮಾಧಾನಪಡಿಸುವುದು. ಕಿಷ್ಕಿಂಧಾ ಕಾಂಡದ ನಾಲ್ಕನೆಯ ಸರ್ಗದಲ್ಲಿ ಲಕ್ಷ್ಮಣ ಎಂಟು ಶ್ಲೋಕದಲ್ಲಿ ರಾಮನು ಸುಗ್ರೀವನಲ್ಲಿಗೆ ಶರಣು ಹೊಂದಲು ಬಂದಿದ್ದಾನೆ ಎನ್ನುವ ಮಾತುಗಳನ್ನು ಹೇಳಿದ್ದಾನೆ ಎನ್ನುವುದನ್ನು ನೋಡಿದ್ದೇವೆ. ಆರು ಬಗೆಯಲ್ಲಿ ಎಂಟು ಶ್ಲೋಕಗಳಲ್ಲಿ (ರಾಮಶ್ಚ ಸುಗ್ರೀವಂ ಶರಣಂ ಗತೌ ಮುಂತಾಗಿ) ಲಕ್ಷ್ಮಣನು ಹನುಮಂತನ ಹತ್ತಿರ ಕೇಳಿಕೊಳ್ಳುವ ಭಾಗ ರಾಮನ ವ್ಯಕ್ತಿತ್ವಕ್ಕೆ ಒಂದು ಕಪ್ಪುಚುಕ್ಕೆ ಎಂದು ಕೆಲ ಟೀಕಾಕಾರರು ಹೇಳಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಲಕ್ಷ್ಮಣ ಹಾಗೆ ಹೇಳಲಿಕ್ಕೆ ಕಾರಣವಾಗಿರುವ ಸಂಗತಿಯನ್ನು ಕಿಷ್ಕಿಂಧಾ ಕಾಂಡದ ಮೊದಲ ಭಾಗದಲ್ಲಿ ವಿವರವಾಗಿ ವಿವೇಚಿಸಲಾಗಿದೆ. ಸಮಗ್ರ ಭೂಮಂಡಲದ ಚಕ್ರವರ್ತಿಗಳಾದ ರಘುವಂಶೀಯ ರಾಮ ತನ್ನ ಸಿಂಹಾಸನದ ಘನತೆ ಗೌರವವನ್ನೆಲ್ಲಾ ಬಿಟ್ಟು ಸುಗ್ರೀವನಲ್ಲಿ ಆಶ್ರಯ ಕೋರಿ ಬಂದಿದ್ದಾನೆ. ಸೀತೆಯನ್ನು ಕಳೆದುಕೊಂಡ ರಾಮನಿಗೆ ಬುದ್ಧಿ ವಿಸ್ಮೃತಿಯಾಗಿತ್ತು. ವಿರಹದಿಂದಲಾಗಿ ರಾಮ ಗೋದಾವರಿ ನದಿಯನ್ನು ಬತ್ತಿಸಿಬಿಡುವೆ, ವಿಂದ್ಯಪರ್ವತವನ್ನೇ ಕೆಡಹಿಬಿಡುವೆ ಎಂದು ಕೂಗಾಡುವುದು ನಂತರ ಪಂಪಾಸರೋವರದಲ್ಲಿದ್ದ ಕಮಲವನ್ನೇ ತಿಂಗಳ ಬೆಳಕಿನಲ್ಲಿ ಕಮಲಮುಖಿ ಸೀತೆ ಎಂದು ಭ್ರಮಿಸಿ ಸರೋವರಕ್ಕೆ ಧುಮುಕಲು ಹೋಗುವುದು, ಹೀಗೆ ಹಲವು ವಿಧಗಳಲ್ಲಿ ಸೀತೆಗಾಗಿ ವಿಲಪಿಸುತ್ತಾನೆ. ರಾಮನ ದುಃಖವನ್ನು ಶಮನ ಮಾಡುವ ಲಕ್ಷ್ಮಣನ ಸಂಯಮ ಅದ್ಭುತವಾದದ್ದು. ಲಕ್ಷ್ಮಣ ರಾಮನಿಗೆ ತನ್ನ ಕರ್ತವ್ಯವನ್ನು ನಿಭಾಯಿಸುವಂತೆ ಆತನನ್ನು ಎಚ್ಚರಿಸುವ ಅಪೂರ್ವ ಮಾತುಗಳು ಕಿಷ್ಕಿಂಧಾಕಾಂಡದ ಮೊದಲನೆಯ ಸರ್ಗದಲ್ಲಿ ಬರುತ್ತದೆ. ರಾಮ ತನ್ನ ತಂದೆ ತಾಯಿಯರಿಗೆ, ಸುಮಂತ್ರನಿಗೆ, ಗುಹನಿಗೆ ವಶಿಷ್ಠರು, ಜಾಬಾಲಿ ಮತ್ತು ಭರತನಿಗೆ ತನ್ನ ವನವಾಸ ದೀಕ್ಷೆಯ ಕುರಿತು ತಿಳಿಹೇಳುವ ಮಾತುಗಳು ಬಲು ಪ್ರಸಿದ್ಧ. ಪ್ರಸ್ತುತ ಸಂದರ್ಭದಲ್ಲಿ ಸೀತಾಪಹರಣವೆನ್ನುವುದು ಆತನ ಬುದ್ಧಿಯನ್ನು ವಿಭ್ರಣೆಗೊಳಿಸಿಬಿಟ್ಟಿದೆ. ಆತನಿಗೆ ಆ ದಟ್ಟ ಅರಣ್ಯದಲ್ಲಿ ಬುದ್ಧಿ ಹೇಳುವವರು ಯಾರೂ ಇಲ್ಲ. ಆ ಕೆಲಸವನ್ನು ಇಲ್ಲಿ ಲಕ್ಷ್ಮಣ ಮಾಡಬೇಕಾದ ಅನಿವಾರ್ಯತೆ ಬರುತ್ತದೆ. ಹಾಗೇ ವಿವೇಕವನ್ನು ಹೇಳುವಾಗ ಲಕ್ಷ್ಮಣನಿಗೆ ತನ್ನ ಮಿತಿಯ ಅರಿವಿದೆ. ಆಜ್ಞಾಪೂರ್ವಕವಾಗಿ ಹೇಳುವಂತಿಲ್ಲ. ಉಪದೇಶವೂ ಆಗಕೂಡದು, ಹೇಳುವ ವಿಧಾನದಲ್ಲಿ ಹಿರಿಯನ ಗೌರವವಕ್ಕೆ ಚ್ಯುತಿಬರಬಾರದು.

ವಾಲ್ಮೀಕಿ ಇಲ್ಲಿ ಲಕ್ಷ್ಮಣನಿಂದ ಅಣ್ಣನಿಗೆ ವಿವೇಕವನ್ನು ಹೇಳುವ ವಿವರ ಬಲು ಆಸಕ್ತಿದಾಯಕವಾಗಿದೆ. ಮಹಾಕಾವ್ಯವನ್ನು ಬರೆಯಲು ವಾಲ್ಮೀಕಿಯಲ್ಲಿ ಅದೆಷ್ಟು ಲೋಕಾನುಭವ ಮತ್ತು ಶಾಸ್ತ್ರದ ಅಧ್ಯಯನ ಇರಬಹುದೆನ್ನುವುದಕ್ಕೆ ಇದೊಂದು ನಿದರ್ಶನ. ಆತ ರಾಮನಿಗೆ ಹೀಗೆ ಮಾಡಿ ಎಂದು ಹೇಳುವುದಿಲ್ಲ. ಚಿಕ್ಕವ ಹಿರಿಯರ ಹತ್ತಿರ ತನಗೆ ತಿಳಿಯದ ವಿಷಯವನ್ನು ಕಲಿಸಿಕೊಡು ಎನ್ನುವ ರೀತಿಯಲ್ಲಿ ಇದೇಕೆ ಹೀಗೆ ಎನ್ನುವ ಅನೇಕ ಪ್ರಶ್ನೆಗಳ ಮೂಲಕ ರಾಮನಲ್ಲಿ ಪ್ರಶ್ನೆ ಮಾಡುತ್ತಾನೆ. ರಾವಣನು ಪಾತಾಳಕ್ಕೆ ಹೊಕ್ಕರೂ. ಅಲ್ಲಿಂದ ಮುಂದೆ ಇನ್ನೋ ಗಹನವಾದ ಸ್ಥಳ ಹೊಕ್ಕರೂ ಆತ ಉಳಿಯಲಾರನು. ದಿತಿಯ ಗರ್ಭವನ್ನು ಹೊಕ್ಕರೂ ಮೈಥಿಲಿಯನ್ನು ತಂದೊಪ್ಪಿಸದಿದ್ದಲ್ಲಿ ಗರ್ಭವನ್ನು ಪ್ರವೇಶಿಸಿಯಾದರೂ ನಾನು ಅವನನ್ನು ಸಂಹರಿಸುತ್ತೇನೆ. ನೀನು ಉತ್ಸಾಹವನ್ನು ಕಳೆದುಕೊಂಡು ಹೀಗೆ ಯಾಕೆ ಇರುವೆ ಎನ್ನುವ ಮಾತುಗಳಲ್ಲಿ ನೀನು ಭ್ರಮಿತನಾಗಿದ್ದೀಯಾ ಎಂದು ನೇರವಾಗಿ ಹೇಳುವುದಿಲ್ಲ; ನೀನು ಉತ್ಸಾಹವನ್ನು ಕಳೆದುಕೊಳ್ಳಬೇಡ, ನೀನು ಹೀಗೆಲ್ಲಾ ಇರುವವಂತವನಲ್ಲ ವ್ಯಕ್ತಿಯಲ್ಲ ಎನ್ನುವ ಭಾವ ಪ್ರತೀ ಮಾತಿನಲ್ಲಿಯೂ ವ್ಯಕ್ತವಾಗುತ್ತದೆ.

ಪ್ರಾರಂಭದಲ್ಲಿ ಹೇಳಿದ ತ್ಯಜತ್ವಾಂ… ಎನ್ನುವ ಶ್ಲೋಕವನ್ನು ಗಮನಿಸಿ. ಅದರಲ್ಲಿ ಎರಡನೆಯ ಸಾಲಿನಲ್ಲಿ ಬರುವ “ಮಹಾತ್ಮನಂ ಕೃತಾತ್ಮಾನಮಾತ್ಮಾನಂ ನಾವಬಿಧ್ಯಸೇ” ಎನ್ನುವದರಲ್ಲಿ ಪ್ರಯೋಗಿಸಿದ “ಮಹಾತ್ಮ ಮತ್ತು ಕೃತಾತ್ಮಾ” ಎನ್ನುವುದು ರಾಮನ ಪೂರ್ವದ ಮೂಲಸ್ವರೂಪವಾದ ಮಹಾವಿಷ್ಣುವನ್ನು ಹೇಳುತ್ತದೆ. ಮಹಾತ್ಮಾ ಎಂದರೆ ಶ್ರೇಷ್ಠ, ಯಾರ ಶರೀರವು ಇತರರಿಗೆ ಶ್ರೇಷ್ಠವಾಗಿ ಕಾಣುವುದೋ; ಯಾವಾತನಿಗೆ ರಜಸ್ತಮಗಳೆನ್ನುವ ಮಲಿನತೆ ಇರುವುದಿಲ್ಲವೋ ಆತ ಮಹಾತ್ಮನು, ಸತ್ತ್ವಸ್ವರೂಪನು ಎಂದು ಆರ್ಥವಾಗುತ್ತದೆ. ಮತ್ತೊಂದು ಕೃತಾತ್ಮಾ-ಶುದ್ಧವಾದ ಆತ್ಮವುಳ್ಳವನು. ಶಾಶ್ತ್ರಗಳಿಂದ ಪರಿಶುದ್ಧವಾದ ಹೃದಯವುಳ್ಳವನು. ಶ್ರುತಿ ಸ್ಮೃತಿಗಳಲ್ಲಿ ಸ್ಮರಿಸಲ್ಪಟ್ಟವ ಎಂದಾಗುತ್ತದೆ. ಈ ಕಾರಣದಿಂದ ನೀನು “ತ್ಯಜತಾಂ ಕಾಮವೃತ್ತತ್ತ್ವಂ- ಕಾಮವಿಕಾರವೆನ್ನುವುದು ನಿನಗಲ್ಲ ಎನ್ನುತ್ತಾನೆ. ರಾಮನ ಮೂಲ ಯಾವುದು ಎನ್ನುವುದನ್ನು ಇಲ್ಲಿ ಲಕ್ಷ್ಮಣ ಈ ರೀತಿಯಲ್ಲಿ ಸೂಚಿಸುತ್ತಾನೆ. ಆತನ ಅವತಾರದ ಉದ್ಧೇಶವು ರಾವಣನನ್ನು ಸಂಹರಿಸುವ ಸಲುವಾಗಿಯೇ ಆಗಿದೆ. ಎಲ್ಲ ಕಡೆಯೂ ಮಾನವರಂತೆ ವ್ಯವಹರಿಸುವ ರಾಮ ಜಟಾಯುವಿನ ಪ್ರಕರಣದಲ್ಲಿ ಪರೋಕ್ಷವಾಗಿ, ಶಬರಿಯ ವಿಷಯದಲ್ಲಿ ಸ್ವ-ಸ್ವರೂಪದ ಪ್ರಜ್ಞೆಯಲ್ಲಿಯೇ ಅವರವರಿಗೆ ಮೋಕ್ಷವನ್ನು ಅನುಗ್ರಹಿಸಿದ್ದಾನೆ. ರಾಮಾಯಣದಲ್ಲಿ ರಾಮ ತನ್ನ ಮೂಲ ಸ್ವರೂಪವನ್ನು ಪ್ರಕಟಮಾಡುವ ಅಪರೂಪದ ಸಂದರ್ಭಗಳು ಇವು.

ಅಣ್ಣನಿಗೆ “ನೀನು ಪುರುಷೋತ್ತಮ” ಎನ್ನುತ್ತಾ ರಾಮನೆನ್ನುವ ದಶರಥನ ಮಗ ಯತಾರ್ಥದಲ್ಲಿ ವಿರಜಾಸ್ವರೂಪನಾದವ (ಪರತತ್ತ್ವ ಸ್ವರೂಪನಾದವ) ಇದೀಗ ಕಾರ್ಯಕಾರಣ ಸಂಬಂಧದಿಂದಾಗಿ ಸಂಸಾರಿಮಂಡಲಕ್ಕೆ ಅಭಿಮುಖನಾಗಿದ್ದಾನೆ. ಅದಕ್ಕೆ ಕಾರಣವಾದ ಅಂಶವನ್ನು ಸ್ಮರಣೆಗೆ ತಂದುಕೊಳ್ಳಬೇಕು. ರಾಮನ ಈ ದುಃಖವೆಲ್ಲವೂ ಅಭಿನಯವೇ ಹೊರತು ಅನುಭವಿಸಿ ಅದರಲ್ಲಿಯೇ ಮುಳುಗಿಹೋಗುವುದಲ್ಲ ಎನ್ನುವ ಅನೇಕ ಅರ್ಥವನ್ನು ಇಲ್ಲಿ ಕೊಡುತ್ತದೆ. ಕಿರಿಯರು ಹಿರಿಯರಿಗೆ ವಿವೇಕವನ್ನು ಹೇಳುವುದಲ್ಲ; ಅದರ ಕುರಿತಾದ ಅರಿವನ್ನು ಅವರ ಸ್ಮರಣೆಗೆ ತಂದುಕೊಡುವುದು ಎನ್ನುವುದು ಇಲ್ಲಿ ಲಕ್ಷ್ಮಣನ ವಿನಂತಿಯಲ್ಲಿ ಸ್ಪಷ್ಟವಾಗುತ್ತದೆ. ಹಿರಿಯರು ಉಪದೇಶವನ್ನು ನೀಡುತ್ತಾರೆ, ಸಮವಯಸ್ಕರು ಸಲಹೆಯನ್ನು ನೀಡುತ್ತಾರೆ (ಮಿತ್ರವಾಕ್ಯ), ಕಿರಿಯರು ತಮಗೆ ಗೊತ್ತಿದೆ ಎಂದು ಹಿರಿಯರನ್ನು ಯಾವ ಸಂದರ್ಭದಲ್ಲಿಯೂ ಅತಿಕ್ರಮಿಸಬಾರದು. ಇದೇಕೆ ಹೀಗೆ ಎನ್ನುತ್ತಲೇ ಹೇಳಬೇಕಾದುದನ್ನು ಹೇಳಬೇಕೆನ್ನುವುದಕ್ಕೆ ಇಲ್ಲಿ ಲಕ್ಷ್ಮಣನ ಮಾತುಗಳು ಸಾಕ್ಷಿ. ಈ ಭಾಗದಲ್ಲಿ ಲಕ್ಷ್ಮಣನನ್ನು ಮದಿಸಿದ ಮದ್ದಾನೆಗೆ ಕವಿ ಹೋಲಿಸಿದ್ದಾನೆ.

ತಂ ಮತ್ತಮಾತಙ್ಗವಿಲಾಸಗಾಮೀ ಗಚ್ಛನ್ತಮವ್ಯಗ್ರಮನಾ ಮಹಾತ್ಮಾ.
ಸ ಲಕ್ಷ್ಮಣೋ ರಾಘವಮಪ್ರಮತ್ತೋ ರರಕ್ಷ ಧರ್ಮೇಣ ಬಲೇನ ಚೈವ৷৷ಕಿ.1.127৷৷

ಮದಿಸಿದ ಆನೆಯಂತೆ ಒಯ್ಯಾರದಿಂದ ಹೆಜ್ಜೆಯಿಡುತ್ತಿದ್ದ ಅಣ್ಣನ ಸೇವೆಯಲ್ಲಿಯೇ ಏಕಾಗ್ರವಾದ ಮನಸ್ಸಿನಿಂದ ಕೂಡಿದ ಮಹಾತ್ಮನಾದ ಲಕ್ಷ್ಮಣನಾದರೋ, “ರರಕ್ಷ ಧರ್ಮೇಣ ಬಲೇನ ಚೈವ- ಧರ್ಮದಿಂದಲೂ ಬಲದಿಂದಲೂ ರಾಘವನ ದುಃಖವು ಕಡಿಮೆಯಾಗುವಂತೆ ಮಾಡಿದನು”. ರರಕ್ಷ- ಎನ್ನುವುದಕ್ಕೆ ದುಃಖರಹಿತನನ್ನಾಗಿ ಮಾಡಿದನು ಎನ್ನುವ ಅರ್ಥಬರುತ್ತದೆ(ನಿರ್ಧುಃಖಮಕರೋತ್). ರಾಮನಿಗೆ ಆತನ ಪೂರ್ವಸ್ಮರಣೆಯನ್ನು ತಂದುಕೊಡುವ ಸನ್ನಿವೇಶ ಇದು. ರಾಮನಿಗೆ ಅವನ ಮೂಲವನ್ನು ನೆನಪಿಸಿ ಆತ ಪರಂಧಾಮಕ್ಕೆ ಮರಳುವಂತೆ ಮಾಡುವವನು ಕಾಲಪುರುಷ. ಅದೂ ರಾಮಾಯಣದ ಅವತಾರದ ಉದ್ಧೇಶವಎಲ್ಲವೂ ಸಫಲವಾದ ಮೇಲೆ. ಇಲ್ಲಿ ಲಕ್ಷ್ಮಣನಿಗೆ ರಾಮನಿಗುಂಟಾದ ಬುದ್ಧಿವಿಸ್ಮೃತಿಯಿಂದ ಹೊರತರಬೇಕಾಗಿದೆ. ಇಲ್ಲಿ ಬರುವ “ಧರ್ಮೇಣ” ಅಂದರೆ ಸದಾಕಾಲವೂ ರಾಮನಿಗೆ ವಿಧೇಯನಾಗಿರುವ ಆತ ಆತನಿಗೆ ವಿವೇಕವನ್ನು ಹೇಳುವ ಸಂಧರ್ಭದಲ್ಲಿಯೂ ರಾಮಸೇವಕರೂಪದ ತನ್ನ ಸ್ವಭಾವಕ್ಕೆ ಕಿಂಚಿತ್ ಭಂಗ ಬಾರದಿರುವ ರೀತಿಯಲ್ಲಿ ವಿಷಯವನ್ನು ತಿಳಿಸುತ್ತಿದ್ದಾನೆ. ಇನ್ನು “ಬಲೇನಚೈವ” ಎನ್ನುವುದಕ್ಕೆ ಲಕ್ಷ್ಮಣ ಸೀತೆಯನ್ನು ರಾವಣ ಕದ್ದೊಯ್ದಿದ್ದಾನೆ ಎನ್ನುವುದು ಅವರಿಗೆ ತಿಳಿದಿದೆ. ಆದರೆ ರಾವಣ ಎಲ್ಲಿರಬಹುದು ಎನ್ನುವುದರ ಸುಳಿವು ಸಿಕ್ಕಿಲ್ಲ. ಇಲ್ಲಿ ದುಃಖಿಸುತ್ತಾ ಕುಳಿತರೆ ಕಾರ್ಯಸಾಧಿಸುವುದಿಲ್ಲ. ರಾವಣ ಎಲ್ಲಿದ್ದಾನೆ ಎನ್ನುವುದನ್ನು ಮೊದಲು ತಿಳಿಯಬೇಕು. ಆತ ಪಾತಾಳದಲ್ಲಿ ಇದ್ದರೂ, ಅಲ್ಲಿಂದ ಮುಂದೆ ಇನೂ ಗಹನವಾದ ಸ್ಥಳವನ್ನು ಹೊಕ್ಕರೂ ಪಾಪಿಷ್ಟನಾದ ಆತನನ್ನು ಹುಡುಕೋಣ ಎಂದು ಸಮಾಧಾನ ಹೇಳುತ್ತಾನೆ.

dhavala dharini king dasharatha
rama laxmana ಧವಳ ಧಾರಿಣಿ ಅಂಕಣ

ಅಯೋಧ್ಯಾ ಕಾಂಡದಲ್ಲಿ ಮುಂಗೋಪಿಯಾಗಿ ಲಕ್ಷ್ಮಣ ಕಾಣಿಸಿಕೊಳ್ಳುತ್ತಾನೆ. ತಂದೆಯಾದ ದಶರಥನನ್ನು ಬಂಧಿಸಿ ಸೆರೆಯಲ್ಲಿಟ್ಟು ರಾಜ್ಯವನ್ನು ಗೆದ್ದು ಅಣ್ಣನಾದ ರಾಮನಿಗೆ ಕೊಡುವೆ ಎಂದು ಅಬ್ಬರಿಸುತ್ತಾನೆ. ರಾಮನ ವಿವೇಕದ ಮಾತಿಗೆ ಅನಿವಾರ್ಯತೆಯಿಂದ ಸುಮ್ಮನಾಗುತ್ತಾನೆ. ಮುಂದೆ ಭರತ ರಾಮನನ್ನು ಕರೆತರಲು ಚಿತ್ರಕೂಟಕ್ಕೆ ಬರುವಾಗ ಆತನನ್ನು ನೋಡಿ, ತಮ್ಮಮೇಲೆ ಆಕ್ರಮಣಮಾಡಲು ಬಂದಿರಬಹುದೆನ್ನುವ ಸಂಶಯದಿಂದ ಭರತನನ್ನು ಎದುರಿಸುವೆ ಎನ್ನುವ ವೀರಾವೇಶದ ಮಾತುಗಳನ್ನು ಆಡುತ್ತಿದ್ದ ಲಕ್ಷ್ಮಣನ ಮೂಲ ಸ್ವಭಾವ ದುಡುಕಿನದ್ದಲ್ಲ. ರಾಮ ಗುಹನ ಆತಿಥ್ಯದಲ್ಲಿ ಗಂಗಾ ನದಿಯ ದಡದ ಮೇಲೆ ಮಲಗಿರುವಾಗ ಆತನ ಸ್ಥಿತಿಯನ್ನು ನೋಡಿ ಗುಹನ ಹತ್ತಿರ ಲಕ್ಷ್ಮಣ ಮರುಗುವುದು ಕರಳು ಚುರುಕ್ಕೆನ್ನುತ್ತದೆ. ಸದಾ ಹಂಸತೂಲಿಕಾತಲ್ಪದಲ್ಲಿ ಮಲಗುವ ತನ್ನ ಅಣ್ಣ ಇಂದು ಹೀಗೆ ಕೈಯನ್ನೇ ತಲೆದಿಂಬನ್ನಾಗಿಸಿಕೊಂಡು ಮಲಗಿರುವುದನ್ನು ನೋಡಲು ಆತನಿಗೆ ಸಾಧ್ಯವಾಗುವುದಿಲ್ಲ. ಲಕ್ಷ್ಮಣನದ್ದು ಹೆಂಗರಳು. ರಾಮನ ವಿಷಯದಲ್ಲಿ ಮಾತ್ರ ಕರುಣೆ ತೋರುವುದಲ್ಲ.

ಜನಸ್ಥಾನದಲ್ಲಿ ಅವರು ವಾಸಮಾಡುವಾಗ ನಡೆದ ಘಟನೆ. ವನವಾಸದ ಹದಿಮೂರನೆಯ ವರ್ಷದಲ್ಲಿ ಅವರು ಇದ್ದಾರೆ. ಆ ವರ್ಷದ ಹೇಮಂತ ಋತುವಿನಲ್ಲಿ ಅಸಾಧ್ಯವಾದ ಚಳಿಯಿದೆ. ಕಾಡಾನೆಗಳ ಹಿಂಡು ಬಾಯಾರಿಕೆಯಿಂದ ನೀರುಕುಡಿಯಲು ನದಿಗೆ ಬರುತ್ತಿದ್ದವಂತೆ ಆದರೆ ಹೇಮಂತದ ಚಳಿಯನ್ನು ತಾಳಲಾರದೇ ಸೊಂಡಿಲನ್ನು ನೀರಿಗೆ ಚಾಚಿ ನೀರು ಕುಡಿಯಲು ಯತ್ನಿಸಿದರೆ ಅವುಗಳಿಗೆ ತಣ್ಣನೆಯ ನೀರಿನ ಛಳಿಯನ್ನು ತಾಳಿಕೊಳ್ಳಲಾಗುವುದಿಲ್ಲ, ಮೈಕೊರೆವ ಚಳಿಗೆ ಅಂಜಿ ನೀರನ್ನು ಕುಡಿಯದೇ ಬಾಯಾರಿಕೆಯನ್ನು ಸಹಿಸಿಕೊಂಡು ಕಾಡಿಗೆ ಮರಳುತ್ತಿದ್ದವು. ಸದಾ ನೀರಿನಲ್ಲಿಯೇ ಇರುವ ಹಂಸಪಕ್ಷಿಗಳು ಸಹ ಚಳಿಗೆ ಹೆದರಿ ನೀರಿಗಿಳಿಯದೇ ದಡದಲ್ಲಿಯೇ ಸಾಲಾಗಿ ಕುಳಿತುಕೊಂಡಿದ್ದವು. ಅದನ್ನು ನೋಡಿದ ಲಕ್ಷ್ಮಣನಿಗೆ ನಂದಿಗ್ರಾಮದಲ್ಲಿ ಭರತನೂ ತಮ್ಮಂತೆ ವೃತಧಾರಿಯಾಗಿ ಗಡ್ಡೆ ಗಣಸು ತಿನ್ನುತ್ತಾ, ಜಟಾಧಾರಿಯಾಗಿ ನೆಲದಮೇಲೆ ಮಲಗುತ್ತಿದ್ದಾನೆ ಎನ್ನುವುದು ನೆನಪಾಯಿತು. ಸ್ವತಃ ತಾವು ಅಂತಹ ಚಳಿಯಲ್ಲಿ ನಡುಗುತ್ತಿದ್ದರೂ ಲಕ್ಷ್ಮಣನ ಮನಸ್ಸು ಇಲ್ಲಿ ಭರತನಿಗಾಗಿ ಮರುಗುತ್ತದೆ.

ಅತ್ಯನ್ತಸುಖಸಂವೃದ್ಧಸ್ಸುಕುಮಾರಸ್ಸುಖೋಚಿತಃ.
ಕಥಂ ನ್ವಪರರಾತ್ರೇಷು ಸರಯೂಮವಗಾಹತೇ৷৷ಅ.16.30৷৷

ಸುಖದಲ್ಲಿ ಬೆಳೆದ ಭರತ ಚಳಿಯಿಂದ ಕೂಡಿದ ಈ ಅಪರಾತ್ರಿಯಲ್ಲಿ ಸರಯೂ ನದಿಯಲ್ಲಿ ಹೇಗೆ ಸ್ನಾನ ಮಾಡಿಯಾನು ಎಂದು ಭರತನ ಕುರಿತು ಕಳವಳವನ್ನು ವ್ಯಕ್ತಪಡುತ್ತಾನೆ. ಅಪರಾತ್ರಿಯೆಂದರೆ ಮುಂಜಾನೆ ಬ್ರಾಹ್ಮೀ ಮುಹೂರ್ತಕ್ಕೆ ಮುನ್ನವೇ ಎದ್ದು ಸ್ನಾನಗಳನ್ನು ಪೂರೈಸಿ ನಿತ್ಯಕರ್ಮಾನುಷ್ಠಾನಗಳನ್ನು ಮಾಡಿ ಪ್ರಜೆಗಳ ಯೋಗಕ್ಷೇಮಗಳನ್ನು ನೋಡಲು ಪ್ರಾತಃಕಾಲದಲ್ಲಿ ಸಿದ್ಧನಾಗುತ್ತಿದ್ದ. ತಮಗಾದರೋ ವನವಾಸದ ದೀಕ್ಷೆಯಿದೆ. ಆದರೆ ಭರತ ಸುಖವಾಗಿ ಇರಬಹುದಾಗಿದ್ದರೂ ತಮ್ಮಂತೆ ವನವಾಸೀ ದೀಕ್ಷೆಯನ್ನು ಕೈಗೊಂಡು ರಾಜ್ಯವನ್ನು ನಡೆಸುತ್ತಿದ್ದಾನೆ. ರಾಜ್ಯವನ್ನು ರಾಮನ ಪ್ರತಿನಿಧಿಯಾಗಿ ನಿರ್ವಹಿಸುವ ಆತ ಅದಕ್ಕೆ ಚ್ಯುತಿಬಾರದ ರೀತಿಯಲ್ಲಿ ಚಳಿಗಾಲವನ್ನು ಲೆಕ್ಕಿಸದೇ ಕರ್ತವ್ಯಪರಾಯಣನಾಗಿದ್ದಾನೆ. ಚಳಿಗಾಲದ ವರ್ಣನೆ ಮತ್ತು ಭರತನ ಕುರಿತು ಲಕ್ಷ್ಮಣನ ಕಾಳಜಿ ಎರಡನ್ನೂ ಅನೇಕ ಉಪಮೆಗಳೊಂದಿಗೆ ವಾಲ್ಮೀಕಿ ಕಟ್ಟಿಕೊಟ್ಟಿದ್ದಾರೆ. ಧರ್ಮದ ಮೂಲಕವಾಗಿ ರಾಮನನ್ನು ಸಮಾಧಾನ ಮಾಡಿದ ಜೊತೆಗೆ ಬಲದ ಪ್ರದರ್ಶನದ ಮೂಲಕವೂ ರಾಮನನ್ನು ಸಮಾಧಾನಿಸಿದ ಎನ್ನುವುದಕ್ಕೆ ಲಕ್ಷ್ಮಣ ರಾಮನಲ್ಲಿ ”ಮೊದಲು ರಾವಣನನ್ನು ಹುಡುಕೋಣ. ಆತನಲ್ಲಿ ತಮ್ಮ ಪರಾಕ್ರಮವೆಷ್ಟು ಎನ್ನುವುದನ್ನು ತೋರಿಸಿ ಆತ ಸೀತೆಯನ್ನು ಬಿಟ್ಟುಕೊಡುವಂತೆ ಎಚ್ಚರಿಸೋಣ. ಅದಕ್ಕೂ ಆತ ಬಗ್ಗದಿದ್ದರೆ ಆತ ದಿತಿಯ ಗರ್ಭದಲ್ಲಿದ್ದರೂ ಆತನನ್ನು ಸಂಹರಿಸುವೆ” ಎನ್ನುವ ಮೂಲಕ ಬಲದಿಂದಲೂ ರಾಮನನ್ನು ಸಮಾಧಾನಿಸುತ್ತಾನೆ.

rama laxmana ಧವಳ ಧಾರಿಣಿ ಅಂಕಣ
rama laxmana ಧವಳ ಧಾರಿಣಿ ಅಂಕಣ

ಕಾವ್ಯದಲ್ಲಿ ನಾಟಕೀಯತೆಯ ಸನ್ನಿವೇಶ ಹೇಗೆ ಬರಬೇಕೆನ್ನುವುದಕ್ಕೆ ಇಲ್ಲಿನ ವರ್ಣನೆ ಸಾಕ್ಷಿ. ಲಕ್ಷ್ಮಣ ಪರಾಕ್ರಮದಲ್ಲಿ ಯಾರಿಗೂ ಕಡಿಮೆ ಇಲ್ಲದವನು. ಆನೆಯಷ್ಟು ಬಲ ಆತನಲ್ಲಿದೆ. ಮದಿಸಿದ ಆನೆ ತನ್ನ ಮಾವುತನ ಮೇಲೆ ಅಪಾರಪ್ರೀತಿಯನ್ನು ತೋರುತ್ತದೆ. ತನ್ನ ಮಾವುತ ವ್ಯಾಕುಲತೆಯಿಂದ ಕುಳಿತರೆ ಆತನನ್ನು ರಮಿಸಿ ತನ್ನೊಂದಿಗೆ ಕರೆದೊಯ್ಯುವ ಸ್ವಭಾವ ಅದಕ್ಕಿರುತ್ತದೆ ಇಂತಹ ದೃಶ್ಯವನ್ನು ಅನೇಕ ಕಡೆ ನೋಡಬಹುದಾಗಿದೆ. ಸುಮಾರು 70ರ ಉತ್ತರಾರ್ಧದಶಕದಲ್ಲಿ ರಾಜೇಶ ಖನ್ನಾ ಅಭಿನಯಿಸಿದ “ಹಾಥಿ ಮೇರಾ ಸಾಥಿ” ಸಿನೇಮಾವನ್ನು ನೋಡಿದ್ದರೆ ಅದು ಅರ್ಥವಾದೀತು. ರಾಮನೆನ್ನುವ ಸೋದರತ್ವದ ಒಲವಿನಲ್ಲಿ ಬಂಧಿತನಾದ ಲಕ್ಷ್ಮಣ ಅಥವಾ ತನ್ನ ತಾಯಿಯಾದ ಸುಮಿತ್ರೆಯ ಹತ್ತಿರ ಲಕ್ಷ್ಮಣ ಕಾಡಿಗೆ ಅಣ್ಣನನ್ನು ಅನುಸರಿಸಿಕೊಂಡು ಹೋಗುತ್ತೇನೆ ಎಂದು ಆಶೀರ್ವಾದವನ್ನು ಕೇಳಿದಾಗ ಆಕೆ ಮಗನಿಗೆ “ರಾಮಂ ದಶರಥಂ ವಿದ್ಧಿ ಮಾಂ ವಿದ್ಧಿ ಜನಕಾತ್ಮಜಾಮ್..” ರಾಮನನ್ನು ದಶರಥನೆಂದೆ ತಿಳಿದು ಗೌರವಿಸು, ನನ್ನನ್ನು ಹೇಗೆ ಗೌರವಿಸುತ್ತೀಯೋ ಅದೇ ರೀತಿ ಸೀತೆಗೆ ಗೌರವವನ್ನು ನೀಡು , ಅಡವಿಯನ್ನೇ ಅಯೋಧ್ಯೆಯೆಂದು ಭಾವಿಸು” ಎಂದು ಹರಸಿಕಳುಹಿಸಿದ್ದಳು. ಸಹಜವಾಗಿಯೂ ರಾಮನಲ್ಲಿ ಭಯಭಕ್ತಿಯುಳ್ಳ ಮತ್ತು ಅತನೇ ತನ್ನ ರಾಜನೆಂದು ತಿಳಿದು ತ್ರಿಕರಣಪೂರ್ವಕವಾಗಿ ಅನುಸರಿಸಿಕೊಂಡು ಬಂದವ ಲಕ್ಷ್ಮಣ. ಹಾಗಾಗಿ ಇಲ್ಲಿ ರಾಮನೆನ್ನುವ ಮಾವುತನನ್ನು ಮದಿಸಿದ ಆನೆಯಂತಿರುವ ಲಕ್ಷ್ಮಣ ಒಯ್ಯಾರದಿಂದ ಕರೆದುಕೊಂಡು ಬಂದ ಎನ್ನುವ ಉಪಮೆ ಸುಂದರವಾಗಿ ಮೂಡಿಬಂದಿದೆ.

ರಾಮನಿಗೆ ಸೀತೆಯನ್ನು ಕಳೆದುಕೊಂಡ ದುಃಖ ತಡೆಯಲಾರದೇ ವಿಸ್ಮೃತಿಗೊಳಗಾದ ವಿಷಯವನ್ನು ವಾಲ್ಮೀಕಿ ರಾಮಾಯಣದಲ್ಲಿ ವಿವರವಾಗಿ ಬಂದರೂ ಸ್ಕಾಂದಪುರಾಣದಲ್ಲಿ ಇನ್ನಷ್ಟು ವಿವರವಾಗಿ ವರ್ಣಿಸಲಾಗಿದೆ. ರಾಮನಿಗೆ ಅರಣ್ಯದಲ್ಲಿ ಸೀತೆಯ ವಿರಹದಿಂದ ಕಾಮೋದ್ದೀಪಕವಾಯಿತು. ಕಾಡಿನಲ್ಲಿರುವ ಭ್ರಮರವೇ ಮೊದಲಾದವುಗಳು ಸ್ವಂಚ್ಛಂದದಿಂದ ಹಾರಾಡುತ್ತಾ ಸಂಪಿಗೆಯ ಹೂವಿನ ಮಕರಂದವನ್ನು ಹೀರುತ್ತಿದ್ದವು. ಮಂದಮಾರುತ ಬೀಸುತ್ತಿತ್ತು. ಚಕ್ರವಾಕ ಪಕ್ಷಿಜೋಡಿಗಳು ಹಗಲಿನಲ್ಲಿ ಪರಸ್ಪರ ಮುದ್ದಾಡುತ್ತಿದ್ದವು. ವಿರಹಿಯಾದ ರಾಮ ಅದನ್ನು ನೋಡಿ ಕೋಪಗೊಂಡನಂತೆ. ತನ್ನ ವಿರಹದುಃಖವನ್ನು ನೋಡಿಯೂ ಕರುಣೆತೋರದೇ ಸಂತಸದಿಂದ ಇರುವ ಅವುಗಳನ್ನು ನೋಡಿ

ವೈಮುಖ್ಯಂ ಗಂಧಫಲ್ಯಾಸ್ತು ಭ್ರಮರಾಶಪತ್ಪ್ರಭುಃ I
ಕೋಕಾನ್ನಿಶಿಧೇ ವಿಶ್ಲೇಷಂ ಪಿಕಮನ್ಯವಿವರ್ಧನಮ್I
ಚಂದನಂ ಸರ್ಪ ನಿಲಯಂ ವಾಯುಂ ಸರ್ಪಾಶನಂ ತಥಾ I
ಜ್ಯೋತ್ಸ್ನಾಂ ಕಳಂಕಸಛನ್ನಾಂ ಶಶಾಪ ರಘುನಂದನಃ II II

ಸಂಪಗೆಯನ್ನು ಮುಟ್ಟದಂತೆ ಭ್ರಮರಗಳಿಗೂ, ರಾತ್ರಿಯಲ್ಲಿ ವಿಯೋಗವನ್ನು ಹೊಂದುವಂತೆ ಚಕ್ರವಾಕ ಜೋಡಿಗಳಿಗೂ, ಇತರಪಕ್ಷಿಗಳ ಪೋಷಣೆಗೊಳಗಾಗುವಂತೆ ಕೋಗಿಲೆಗಳಿಗೂ (ಪರಪುಟ್ಟ), ಕ್ರೂರಸರ್ಪಗಳಿಗೆ ಆಶ್ರಯತಾಣವಾಗುವಂತೆ ಚಂದನವೃಕ್ಷಕ್ಕೂ, ಹಾವುಗಳಿಗೆ ಆಹಾರವಾಗುವಂತೆ ಗಾಳಿಗೂ, ಕಳಂಕವಿಶಿಷ್ಟ (ಕಲೆಗಳಿಂದ ಕೂಡಿರುವಂತೆ) ಚಂದ್ರಕಾಂತಿಗೂ ಶಾಪಕೊಟ್ಟ ಎನ್ನುವ ವರ್ಣನೆ ಬರುತ್ತದೆ.

ಸೀತೆಯ ವಿಯೋಗ ರಾಮನಿಗೆ ಎರಡು ರೀತಿಯಿಂದ ಕಾಡುತ್ತಿತ್ತು. ಮೊದಲನೆಯದು ತನ್ನ ಪ್ರಿಯ ಮಡದಿಯನ್ನು ಕಳೆದುಕೊಂಡಿರುವುದು. ಎರಡನೆಯದು ರಾವಣ ಸೀತೆಯನ್ನು ಕದ್ದೊಯ್ಯುವ ಮೂಲಕ ರಾಮನ ಪುರುಷತ್ವಕ್ಕೆ ಸವಾಲನ್ನು ಎಸೆದಿದ್ದ. ಇದು ಸ್ಕಂಧಪುರಾಣದ ಮೇಲಿನ ಶ್ಲೋಕದಿಂದ ಸ್ಪಷ್ಟವಾಗುತ್ತದೆ. ಈ ಕಾರಣದಿಂದ ನೊಂದಿದ್ದ ರಾಮನನ್ನು ಲಕ್ಷ್ಮಣ ಸಮಾಧಾನ ಪಡಿಸಿ ಆತನ ಸ್ಮೃತಿಯನ್ನು ವಾಸ್ತವಕ್ಕೆ ಕರೆತರುತ್ತಾನೆ. ಆತನ ದುಃಖವನ್ನು ಶಮನಮಡುತ್ತಾನೆ. ಈಗ ಆತನಿಗೆ ಸೀತೆಯನ್ನು ಹುಡುಕುವ ಸಲುವಾಗಿ ಕಬಂಧ ಹೇಳಿದಂತೆ ಸುಗ್ರೀವನ ಸಖ್ಯ ಅನಿವಾರ್ಯವೆನ್ನುವುದು ನೆನಪಾಗುತ್ತದೆ. ಆ ಕಾರಣದಿಂದ ಹನುಮಂತನ ಹತ್ತಿರ ಲಕ್ಷ್ಮಣ ರಘುಕುಲದ ಶ್ರೇಷ್ಠನಾದ ರಾಮನೇ ಸುಗ್ರೀವನಲ್ಲಿ ಆಶ್ರಯವನ್ನು ಕೋರಿ ಬಂದಿದ್ದಾನೆ. ಆತನಲ್ಲಿ ಶರಣಾಗಲು ಬಂದಿದ್ದಾನೆ. ಎನ್ನುವ ಮಾತುಗಳನ್ನು ಲಕ್ಷ್ಮಣ ಆಡುವುದು.

ಸುಗ್ರೀವನ ಸ್ಥಿತಿ ಮತ್ತು ಇನ್ನಷ್ಟು ರೋಚಕ ವಿಚಾರಗಳನ್ನು ಮುಂದಿನ ಸಂಚಿಕೆಯಲ್ಲಿ ಗಮನಿಸೋಣ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಕಿಷ್ಕಿಂಧಾ ಕಾಂಡ ಭಾಗ 2: ದೀಪದ ಬುಡದಲ್ಲಿ ಕತ್ತಲೆ

Continue Reading

ಅಂಕಣ

ರಾಜಮಾರ್ಗ ಅಂಕಣ: ಪ್ಯಾರಿಸ್ ಒಲಿಂಪಿಕ್ಸ್ – ಭಾರತದ ಸಾಧನೆ ಕಳಪೆಯೇ?

ರಾಜಮಾರ್ಗ ಅಂಕಣ: ಪ್ಯಾರಿಸ್ ಒಲಿಂಪಿಕ್ ಕೂಟದಲ್ಲಿ ಭಾರತದ ಸಾಧನೆಯು ಕಳಪೆ ಎಂದು ಹಲವರು ವಿಶ್ಲೇಷಣೆ ಮಾಡುತ್ತಾ ಇದ್ದಾರೆ. ಆದರೆ ಇದು ಕಳಪೆ ಒಲಿಂಪಿಕ್ಸ್ ಅನ್ನೋದಕ್ಕಿಂತ ಭಾರತಕ್ಕಿದು ದುರದೃಷ್ಟದ ಒಲಿಂಪಿಕ್ಸ್ ಎಂದೇ ಹೇಳಬಹುದು.

VISTARANEWS.COM


on

ರಾಜಮಾರ್ಗ ಅಂಕಣ Paris Olympics
Koo

ಭಾರತದಲ್ಲಿ ಯಾಕೆ ಶ್ರೇಷ್ಠ ಕ್ರೀಡಾ ಪ್ರತಿಭೆಗಳು ಅರಳುತ್ತಿಲ್ಲ?

Rajendra-Bhat-Raja-Marga-Main-logo

:: ರಾಜೇಂದ್ರ ಭಟ್‌ ಕೆ.

ರಾಜಮಾರ್ಗ ಅಂಕಣ: ಬಹಳ ನಿರೀಕ್ಷೆಯ ಪ್ಯಾರಿಸ್ ಒಲಿಂಪಿಕ್ಸ್ (Paris Olympics 2024) ಕೂಟಕ್ಕೆ ತೆರೆಬಿದ್ದಾಗಿದೆ. ಭಾರತಕ್ಕೆ (India) ದೊರಕಿದ್ದು 5 ಕಂಚಿನ ಪದಕಗಳು (Bronze medal) ಮತ್ತು ಒಂದು ಬೆಳ್ಳಿಯ ಪದಕ (Silver Meadl). ಒಲಿಂಪಿಕ್ ಗ್ರಾಮದಲ್ಲಿ ಒಮ್ಮೆ ಕೂಡ ಭಾರತದ ರಾಷ್ಟ್ರಗೀತೆ ಮೊಳಗಲೇ ಇಲ್ಲ ಎಂಬ ದುಃಖ ನಮಗೆ. ಭಾರತಕ್ಕೆ ದೊರಕಿದ್ದು 71ನೇ ಸ್ಥಾನ. ಈ ಒಲಿಂಪಿಕ್ ಕೂಟದಲ್ಲಿ ಭಾರತದ ಸಾಧನೆಯು ಕಳಪೆ ಎಂದು ಹಲವರು ವಿಶ್ಲೇಷಣೆ ಮಾಡುತ್ತಾ ಇದ್ದಾರೆ. ಕಳೆದ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಒಂದು ಚಿನ್ನದ ಪದಕ (Gold Medal) ಸೇರಿ ಏಳು ಪದಕಗಳು ದೊರೆತಿದ್ದವು. ಅದಕ್ಕೆ ಹೋಲಿಸಿದರೆ ಈ ಬಾರಿ ಭಾರತ ಸ್ವಲ್ಪ ಹಿಂದೆ ಬಿದ್ದಿದೆ.

ನಮಗೆ ಈ ಬಾರಿ 7-8 ಪದಕಗಳು ಕೂದಲೆಳೆಯ ಅಂತರದಲ್ಲಿ ಮಿಸ್ ಆದವು!

ಇದು ಕಳಪೆ ಒಲಿಂಪಿಕ್ಸ್ ಅನ್ನೋದಕ್ಕಿಂತ ಭಾರತಕ್ಕಿದು ದುರದೃಷ್ಟದ ಒಲಿಂಪಿಕ್ಸ್ ಎಂದೇ ಹೇಳಬಹುದು. ದೇಶದ 6 ಮಂದಿ ಕ್ರೀಡಾಪಟುಗಳು ಕೂಟದಲ್ಲಿ ನಾಲ್ಕನೇ ಸ್ಥಾನವನ್ನು ಪಡೆದು ಪದಕವಂಚಿತರಾದರು. ಅರ್ಜುನ್ ಬಬುತಾ, ಅಂಕಿತ ಧೀರಜ್, ಮನು ಭಾಕರ್ (Manu Bhaker – ಮೂರನೇ ಪದಕ), ಅನಂತ್ ಜೀತ್, ಮಹೇಶ್ವರಿ, ಲಕ್ಷ್ಯ ಸೇನ್, ಮೀರಾಬಾಯಿ ಚಾನು ಇವರು ನಾಲ್ಕನೇ ಸ್ಥಾನಿಗಳಾಗಿ ಸ್ಪರ್ಧೆಯನ್ನು ಮುಗಿಸಿದವರು. ಹಾಗೆಯೇ ವಿನೇಶ್ ಫೊಗಟ್ (Vinesh Phogat), ನಿಶಾ ದಹಿಯ, ರಿತಿಕ ಹೂಡ ಮೊದಲಾದ ಕುಸ್ತಿ ಪಟುಗಳು ಒಲಿಂಪಿಕ್‌ನ ಕರಾಳ ನಿಯಮಕ್ಕೆ ಬಲಿಯಾಗಿ ಪದಕ ಮಿಸ್ ಮಾಡಿಕೊಂಡರು ಅನ್ನೋದು ನಮ್ಮ ನೋವು. ಇವರೆಲ್ಲರೂ ಪದಕ ಪಡೆದಿದ್ದರೆ ಭಾರತದ ಟೋಟಲ್ ಪದಕಗಳ ಸಂಖ್ಯೆ 15 ದಾಟುತ್ತಿತ್ತು ಅಲ್ಲವೇ? ಕೆಲವೊಮ್ಮೆ ಪ್ರತಿಭೆ, ಸಾಮರ್ಥ್ಯಗಳು ಇದ್ದರೆ ಸಾಕಾಗುವುದಿಲ್ಲ, ಅದೃಷ್ಟವೂ ಜೊತೆಗೆ ಇರಬೇಕು ಎಂಬ ಸಿದ್ಧಾಂತವನ್ನು ನಾವು ಈ ಬಾರಿ ಒಪ್ಪಿಕೊಳ್ಳಲೇಬೇಕಾಯಿತು.

130 ಕೋಟಿ ಜನಸಂಖ್ಯೆ ಇರುವ, ಅದರಲ್ಲಿ 60%ಕ್ಕಿಂತ ಅಧಿಕ ಯುವಜನತೆ (Below 40) ಇರುವ ದೇಶವಾದ ಭಾರತದಲ್ಲಿ ಶ್ರೇಷ್ಠ ಕ್ರೀಡಾಪ್ರತಿಭೆಗಳು ಯಾಕೆ ಅರಳುತ್ತಿಲ್ಲ ಅನ್ನುವುದು ಹಲವರು ಕೇಳುವ ಪ್ರಶ್ನೆ. ಭಾರತಕ್ಕೆ ಈಗ ಅದರದ್ದೇ ಆದ ಕ್ರೀಡಾನೀತಿ ಇದೆ. ಒಳ್ಳೆಯ ಬಜೆಟ್ ಇದೆ. ವಿದೇಶದ ಕೋಚುಗಳ ನೇಮಕ ಆಗಿದೆ. ಸ್ವತಃ ಕ್ರೀಡಾಪಟು ಆಗಿದ್ದ ಪಿಟಿ ಉಷಾ ಅಧ್ಯಕ್ಷೆಯಾಗಿರುವ ಬಲಿಷ್ಠವಾದ ಒಲಿಂಪಿಕ್ ಸಮಿತಿ ಇದೆ. ಆದರೂ ಅದಕ್ಕೆ ಅನುಗುಣವಾದ ಫಲಿತಾಂಶ ಈ ಬಾರಿ ದೊರೆತಿಲ್ಲ. ಯಾಕೆ?

ಎಲ್ಲರೂ ಉತ್ತರಿಸಲೇ ಬೇಕಾದ ಪ್ರಶ್ನೆಗಳು

1) ಅಮೇರಿಕಾ, ಚೀನಾದಂತಹ ದೇಶಗಳಲ್ಲಿ ಬಾಲ್ಯದಲ್ಲಿಯೇ ಮಗುವಿನ ಕ್ರೀಡಾಪ್ರತಿಭೆಗಳನ್ನು ಹುಡುಕಿ ತರಬೇತು ಆರಂಭ ಮಾಡುತ್ತಾರೆ. ಆದರೆ ನಮ್ಮಲ್ಲಿ ಬಾಲ್ಯದಲ್ಲಿ ಮಗು ಮೈದಾನಕ್ಕೆ ಇಳಿಯುವುದನ್ನು ಹೆತ್ತವರು ಇಷ್ಟ ಪಡುವುದಿಲ್ಲ. ಕ್ರೀಡೆಯ ಮೂಲಕ ಮಗುವಿನ ಭವಿಷ್ಯ ಕಟ್ಟುವ ಭರವಸೆ ಭಾರತದ ಹೆಚ್ಚಿನ ಪೋಷಕರಿಗೆ ಇಲ್ಲ.

2) ಒಳ್ಳೆಯ ಕ್ರೀಡಾಪಟು ರೂಪುಗೊಳ್ಳಬೇಕು ಅಂತಾದರೆ ಪರಿಣತ ಕೋಚ್, ತರಬೇತುದಾರ ಬೇಕು. ಭಾರತವು ಇನ್ನೂ ಉತ್ತಮ ಕೋಚುಗಳನ್ನು ಬೆಳೆಸಿಲ್ಲ. ಕ್ರೀಡಾ ಸಲಕರಣೆಗಳು, ಜಿಮ್ ಗಳು ಮಕ್ಕಳಿಗೆ ಹತ್ತಿರದಲ್ಲಿ ದೊರೆಯುತ್ತಿಲ್ಲ. ವಿದೇಶದ ಕೋಚಗಳನ್ನು ನೇಮಕ ಮಾಡುವಷ್ಟು ಭಾರತದ ಗ್ರಾಮಾಂತರ, ಮಧ್ಯಮವರ್ಗದ ಪೋಷಕರು ಶ್ರೀಮಂತರಾಗಿಲ್ಲ.

Neeraj Chopra
Paris Olympics

3) ಒಬ್ಬ ಒಳ್ಳೆಯ ಕ್ರೀಡಾಪಟುವು ಅರಳಬೇಕಾದರೆ ದೈಹಿಕ ಕ್ಷಮತೆ (ಫಿಸಿಕಲ್ ಫಿಟ್ನೆಸ್)ಯು ತುಂಬಾನೆ ಪ್ರಾಮುಖ್ಯ. ಅಂದರೆ ಸಣ್ಣ ಪ್ರಾಯದಲ್ಲಿ ಪೌಷ್ಟಿಕ ಆಹಾರ, ವಿಟಮಿನಗಳು ದೊರೆಯಬೇಕು. ಆ ಮಗು ಬೆವರು ಬಸಿದು ಕೆಲಸ ಮಾಡಬೇಕು. ಜಿಮ್, ಟೆನಿಸ್ ಕೋರ್ಟ್, ಬ್ಯಾಡ್ಮಿಂಟನ್ ಕೋರ್ಟು ಹತ್ತಿರದಲ್ಲಿ ಇರಬೇಕು. ಇದೆಲ್ಲ ಸಾಧ್ಯ ಆಗ್ತಾ ಇದೆಯಾ?

4) ಯಾವುದೇ ರಾಜ್ಯದಲ್ಲಿ ಕ್ರೀಡೆಗೆ ಪ್ರತ್ಯೇಕ ಸಚಿವಾಲಯ ಬೇಕು. ಒಳ್ಳೆಯ ಬಜೆಟ್ ಬೇಕು. ಆದರೆ ನಮ್ಮಲ್ಲಿ ಕ್ರೀಡಾ ಇಲಾಖೆಯು ಯುವಜನ ಸೇವಾ ಇಲಾಖೆಯ ಜೊತೆಗೆ ಇದೆ. ಬಜೆಟ್ ಕೇಳಿದರೆ ನೀವು ಖಂಡಿತವಾಗಿ ನಗುತ್ತೀರಿ. ಇನ್ನು ಪದಕ ನಿರೀಕ್ಷೆ ಮಾಡುವುದು ಹೇಗೆ?

5) ನಮ್ಮ ಶೈಕ್ಷಣಿಕ ವರ್ಷವು ಆರಂಭವಾಗುವುದೇ ಮಳೆಗಾಲದಲ್ಲಿ. ಮೊದಲ ನಾಲ್ಕು ತಿಂಗಳ ಒಳಗೆ ಎಲ್ಲ ಪಂದ್ಯಾಟಗಳು, ಕ್ರೀಡಾಕೂಟಗಳು ಮುಗಿಯಬೇಕು. ಅಂದರೆ ನಮ್ಮ ಪುಟ್ಟ ಮಕ್ಕಳು ಮಳೆಗೆ ತಲೆಕೊಟ್ಟು, ಜಾರುವ ಮೈದಾನದಲ್ಲಿ ಓಡಬೇಕು. ಮಳೆಗಾಲದ ಹೊತ್ತಲ್ಲಿ ತರಬೇತಿ ಪಡೆಯುವುದು ಯಾವಾಗ? ಒಳಾಂಗಣ ಕ್ರೀಡಾಂಗಣಗಳು ಎಷ್ಟು ಕಡೆ ಇವೆ? ಇದು ಕ್ರೀಡೆಗೆ ಪೂರಕವೇ?

6) ಕೆಲವು ರಾಜ್ಯಗಳಲ್ಲಿ ಕ್ರೀಡಾಪಟುಗಳಿಗೆ ಮೀಸಲು ಕೋಟಾ ಇದೆ. ಕೃಪಾಂಕದ ವ್ಯವಸ್ಥೆ ಇದೆ. ಉದ್ಯೋಗದಲ್ಲಿ ಮೀಸಲಾತಿ ವ್ಯವಸ್ಥೆ ಇದೆ. ಆದರೆ ನಮ್ಮಲ್ಲಿ?

7) ಬಾಲ್ಯದಿಂದ ತಮ್ಮ ಮಕ್ಕಳು ಡಾಕ್ಟರ್, ಇಂಜಿನಿಯರ್ ಆಗಬೇಕು ಎಂದು ಕನಸು ಕಾಣುವ, ಅದೇ ಕನಸುಗಳನ್ನು ಮಗುವಿನ ತಲೆಗೆ ತುಂಬುವ ಹೆತ್ತವರು ಮಕ್ಕಳು ಮೈದಾನಕ್ಕೆ ಇಳಿಯುವುದನ್ನು ಇಷ್ಟ ಪಡುವುದೇ ಇಲ್ಲ. ಕ್ರೀಡೆಗಳಲ್ಲಿ ಸಾಧನೆ ಮಾಡಬೇಕಾದರೆ ಮಗು ತರಗತಿ ಪಾಠ, ಪರೀಕ್ಷೆಗಳು ಇತ್ಯಾದಿಗಳಲ್ಲಿ ರಿಯಾಯಿತಿ ಪಡೆಯಬೇಕು. ಆಗ್ತಾ ಇದೆಯಾ?

8) ಎಷ್ಟೋ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ದೈಹಿಕ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಇನ್ನು ಪದವಿಪೂರ್ವ ಕಾಲೇಜುಗಳ ಹಂತಕ್ಕೆ ಬಂದರೆ 50% ದೈಹಿಕ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ದೊಡ್ಡ ದೊಡ್ಡ ಶಾಲೆಗಳ ಕಟ್ಟಡಗಳನ್ನು ಕಟ್ಟುವ ಕಾಲೇಜುಗಳು ಗ್ರೌಂಡ್ ಇಲ್ಲದೆ ಕೂಡ ಕ್ಲಾಸ್ ನಡೆಸುತ್ತವೆ ಎಂದರೆ ನೀವು ನಂಬಲೇಬೇಕು.

9) ಶೂಟಿಂಗ್, ಗಾಲ್ಫ್, ಜಿಮ್ನಾಸ್ಟಿಕ್ ಉಪಕರಣಗಳು ತುಂಬಾ ದುಬಾರಿ. ಸರಕಾರಿ ಬ್ಯಾಡ್ಮಿಂಟನ್ ಕೋರ್ಟು, ಸ್ವಿಮ್ಮಿಂಗ್ ಪೂಲ್, ಜಿಮ್ ಗಳು ಇರುವುದು ತಾಲೂಕಿಗೆ ಒಂದೇ! ಎಷ್ಟೋ ಕಡೆಗಳಲ್ಲಿ ಅದೂ ಇಲ್ಲ. ಖಾಸಗಿಯವರು ಹೆಚ್ಚು ಫೀಸ್ ತೆಗೆದುಕೊಳ್ಳುತ್ತಾರೆ. ಹಾಗಿರುವಾಗ ಕ್ರೀಡಾಪ್ರತಿಭೆಗಳು ತರಬೇತು ಪಡೆಯಲು ತುಂಬಾ ದೂರಕ್ಕೆ ಹೋಗಬೇಕು. ಹಾಗಿರುವಾಗ ಪ್ರತಿಭೆಗಳು ಅರಳುವುದು ಹೇಗೆ?

10) ಸ್ಥಳೀಯ, ತಾಲೂಕು, ಜಿಲ್ಲಾಮಟ್ಟದ ಕ್ರೀಡಾಕೂಟಗಳಿಗೆ ಅದರಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಅನುದಾನದ ಬೆಂಬಲ ತುಂಬ ಕಡಿಮೆ. ಹೆತ್ತವರು ಅಥವಾ ಶಿಕ್ಷಕರೇ ಖರ್ಚು ಮಾಡಬೇಕು ಅಂತಾದಾಗ ಸಹಜವಾಗಿ ಎಲ್ಲರ ಆಸಕ್ತಿ ಕಡಿಮೆ ಆಗುತ್ತದೆ.

Paris Olympics
Paris Olympics

11) ಏಷಿಯಾಡ್, ಕಾಮನ್ ವೆಲ್ತ್ ಅಥವಾ ಒಲಿಂಪಿಕ್ಸ್ ಮೊದಲಾದ ಕೂಟಗಳಲ್ಲಿ ಅರ್ಹತೆಯನ್ನು ಪಡೆಯಬೇಕಾದರೆ ಒಬ್ಬ ಕ್ರೀಡಾಪಟು ದಿನಕ್ಕೆ ಕನಿಷ್ಟ 10-12 ಘಂಟೆ ಮೈದಾನದಲ್ಲಿ ಕಠಿಣ ಪರಿಶ್ರಮಪಡಬೇಕು. ಬೆವರು ಸುರಿಸಬೇಕು. ಒಳ್ಳೆಯ ತರಬೇತುದಾರರು ಸಿಗಬೇಕು. ಸರಕಾರಗಳು ಅಂತಹ ಕ್ರೀಡಾ ಪ್ರತಿಭೆಗಳನ್ನು ದತ್ತುಸ್ವೀಕಾರ ಮಾಡಬೇಕು. ಒಳ್ಳೆಯ ಸೌಲಭ್ಯಗಳನ್ನು ಖಾತರಿ ಪಡಿಸಬೇಕು. ಪೌಷ್ಟಿಕವಾದ ಆಹಾರದ ವ್ಯವಸ್ಥೆ ಮಾಡಬೇಕು. ನೀನು ಕ್ರೀಡೆಯಲ್ಲಿ ಗಮನ ಕೊಡು, ನಾನಿದ್ದೇನೆ ಎಂದು ಭರವಸೆಯನ್ನು ತುಂಬಬೇಕು. ಇದು ಆಗ್ತಾ ಇದೆಯಾ?

12) ಎಲ್ಲಕ್ಕಿಂತ ಹೆಚ್ಚಾಗಿ ರಾಷ್ಟ್ರಮಟ್ಟದ ಕ್ರೀಡಾತಾರೆಗಳನ್ನು ನ್ಯಾಶನಲ್ ಹೀರೋಗಳಾಗಿ ಘೋಷಣೆ ಮಾಡಬೇಕು. ಅವರ ಬದುಕಿನ ಕಥೆಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪಠ್ಯಪುಸ್ತಕದಲ್ಲಿ ಇರಬೇಕು. ಕ್ರಿಕೆಟ್ ನಮ್ಮ ಧರ್ಮ ಆಗಿರುವ, ಕ್ರಿಕೆಟರಗಳು ನಮಗೆ ದೇವರಾಗಿರುವ ಈ ದೇಶದಲ್ಲಿ ಕ್ರೀಡಾಪಟುಗಳಿಗೆ ಸ್ಟಾರ್ ವ್ಯಾಲ್ಯೂ ತರುವುದು ಸಾಧ್ಯ ಆಗಿದೆಯಾ?

ಎಲ್ಲಕ್ಕಿಂತ ಹೆಚ್ಚಾಗಿ ಹೆತ್ತವರ ಮೈಂಡ್ ಸೆಟ್ ಬದಲಾಗಬೇಕು. ಇಲ್ಲಾಂದರೆ ನಾವು ಭಾರತದ ಕ್ರೀಡಾ ಸಾಧನೆಯನ್ನು ಕಳಪೆ ಎಂದು ದೂರುವುದನ್ನು ಬಿಡಬೇಕು.

ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೃಷ್ಟಿ ವಿಕಲತೆಯನ್ನು ಮೆಟ್ಟಿ ನಿಂತು ಐಎಎಸ್ ಅಧಿಕಾರಿ ಆದ ಪ್ರಾಂಜಲ್ ಪಾಟೀಲ್!

Continue Reading

ಅಂಕಣ

ರಾಜಮಾರ್ಗ ಅಂಕಣ: ದೃಷ್ಟಿ ವಿಕಲತೆಯನ್ನು ಮೆಟ್ಟಿ ನಿಂತು ಐಎಎಸ್ ಅಧಿಕಾರಿ ಆದ ಪ್ರಾಂಜಲ್ ಪಾಟೀಲ್!

ರಾಜಮಾರ್ಗ ಅಂಕಣ: ಅತ್ಯಂತ ಪ್ರಬಲ ಇಚ್ಛಾಶಕ್ತಿ, ನಿರಂತರ ಪ್ರಯತ್ನ, ಎಂದಿಗೂ ಬತ್ತಿ ಹೋಗದ ಸ್ಫೂರ್ತಿ, ಬೆಟ್ಟದಷ್ಟು ಆತ್ಮವಿಶ್ವಾಸ ಇವುಗಳ ಜೊತೆಗೆ 2016ರಲ್ಲಿ ಅವರು ಮೊದಲ ಬಾರಿಗೆ ಐಎಎಸ್ ಪರೀಕ್ಷೆಯನ್ನು ಬರೆದು ಮೊದಲನೆಯ ಪ್ರಯತ್ನದಲ್ಲಿಯೇ ತೇರ್ಗಡೆಯಾದರು!

VISTARANEWS.COM


on

pranjal patil ರಾಜಮಾರ್ಗ ಅಂಕಣ
Koo

ಆಕೆಯ ಯಾವ ಕನಸಿಗೂ ಕುರುಡುತನ ಅಡ್ಡಿ ಆಗಲೇ ಇಲ್ಲ!

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಭಾರತದ ಅತ್ಯಂತ ಕ್ಲಿಷ್ಟವಾದ ಪರೀಕ್ಷೆ ಅಂದರೆ ಐಎಎಸ್. ಕೇಂದ್ರ ಸರಕಾರದ ಅಧೀನ ಸಂಸ್ಥೆಯಾದ UPSC ನಡೆಸುವ ಈ ಪರೀಕ್ಷೆಯಲ್ಲಿ ಪ್ರತೀ ವರ್ಷವೂ 7ರಿಂದ 8 ಲಕ್ಷದಷ್ಟು ಯುವಕ – ಯುವತಿಯರು ತಮ್ಮ ಪ್ರತಿಭೆಯನ್ನು ನಿಕಷಕ್ಕೆ ಒಡ್ಡುತ್ತಿದ್ದು ತೇರ್ಗಡೆ ಆಗುವವರ ಪ್ರಮಾಣ 2-3% ಮಾತ್ರ! ಅಂತಹ ಕ್ಲಿಷ್ಟವಾದ ಪರೀಕ್ಷೆಯಲ್ಲಿ ಸಂಪೂರ್ಣ ಕುರುಡುತನ (Visually impaired) ಇರುವ ಹುಡುಗಿಯೊಬ್ಬಳು ಎರಡೆರಡು ಬಾರಿ ತೇರ್ಗಡೆ ಆದರು (Pranjal Patil IAS) ಅಂದರೆ ನಂಬೋದು ಹೇಗೆ?

ಆಕೆ ಪ್ರಾಂಜಲ್ ಪಾಟೀಲ್, ಮಹಾರಾಷ್ಟ್ರದವರು

ಆಕೆ ಮಹಾರಾಷ್ಟ್ರದ ಉಲ್ಲಾಸ ನಗರದವರು. ಹುಟ್ಟುವಾಗ ಆಕೆಗೆ ಮಸುಕು ಮಸುಕಾಗಿ ಕಾಣುತ್ತಿತ್ತು. ಆರು ವರ್ಷ ಪ್ರಾಯ ಆದಾಗ ಪೂರ್ತಿಯಾಗಿ ಕುರುಡುತನ ಆವರಿಸಿತ್ತು. ಸಣ್ಣ ಪ್ರಾಯದಲ್ಲಿಯೇ ಆಕೆಯ ದೊಡ್ಡ ಕನಸುಗಳಿಗೆ ಕೊಳ್ಳಿ ಇಟ್ಟ ಅನುಭವ ಆಗಿತ್ತು. ಆದರೆ ಮನೆಯವರು ಮತ್ತು ಹೆತ್ತವರು ಆಕೆಯ ಮನೋಸ್ಥೈರ್ಯವನ್ನು ಕುಸಿಯಲು ಬಿಡಲಿಲ್ಲ.

ಆಕೆ ಮಹಾನ್ ಪ್ರತಿಭಾವಂತೆ. ದಾದರ್ ನಗರದ ಕಮಲ ಮೆಹ್ತಾ ಕುರುಡು ಮಕ್ಕಳ ಶಾಲೆಗೆ ಸೇರಿ ಪ್ರಾಥಮಿಕ ಶಿಕ್ಷಣ ಪೂರ್ತಿ ಮಾಡುತ್ತಾರೆ. ಬ್ರೈಲ್ ಲಿಪಿಯಲ್ಲಿ ಓದಲು ಮತ್ತು ಬರೆಯಲು ಕಲಿಯುತ್ತಾರೆ. ಮುಂದೆ ಸೈಂಟ್ ಕ್ಸೇವಿಯರ್ ಕಾಲೇಜಿನಲ್ಲಿ ರಾಜನೀತಿ ಶಾಸ್ತ್ರದಲ್ಲಿ ಪದವಿ ಪಡೆಯುತ್ತಾರೆ.

ಆಗ ಏನೂ ಕಾಣದಿದ್ದರೂ ಉಲ್ಲಾಸ ನಗರದ ಮನೆಯಿಂದ ಹೊರಟು ಒಬ್ಬಳೇ ಛತ್ರಪತಿ ಶಿವಾಜಿ ಟರ್ಮಿನಲನವರೆಗೆ ಹೋಗಿ ಹಿಂದೆ ಬರುತ್ತಿದ್ದರು. ಮುಂಬೈ ನಗರದ ಜನರು ತನ್ನ ಬಗ್ಗೆ ತುಂಬಾ ಅನುಕಂಪವನ್ನು ಹೊಂದಿದ್ದರು ಅನ್ನುತ್ತಾರೆ ಆಕೆ.

ಆಕೆಯ ಕನಸುಗಳಿಗೆ ಆಕಾಶವೂ ಮಿತಿ ಅಲ್ಲ!

ಮುಂದೆ ಪ್ರಾಂಜಲ್ ಪಾಟೀಲ್ ಹೊರಟದ್ದು ರಾಜಧಾನಿ ದೆಹಲಿಗೆ. ಅಲ್ಲಿನ ಜವಾಹರಲಾಲ್ ನೆಹರು ವಿವಿಯ ಮೂಲಕ ಆಕೆಯು ಅಂತಾರಾಷ್ಟ್ರೀಯ ಸಂಬಂಧಗಳಲ್ಲಿ ಸ್ನಾತಕೋತ್ತರ ಪದವಿ ಮತ್ತು ಡಾಕ್ಟರೇಟ್ ಪದವಿಯನ್ನು ಪಡೆಯುತ್ತಾರೆ.

ಅದೇ ಹೊತ್ತಿಗೆ ವಿದುಷಿ ಎಂಬ ತನ್ನ ಗೆಳತಿಯ ಮಾತಿನಿಂದ ಆಕೆಯು ಪ್ರಭಾವಿತರಾಗುತ್ತಾರೆ. ಐಎಎಸ್ ಪರೀಕ್ಷೆಗೆ ಗಂಭೀರವಾದ ಸಿದ್ಧತೆ ನಡೆಸುವಂತೆ ವಿದುಷಿ ಆಕೆಗೆ ಸಲಹೆ ಕೊಡುತ್ತಾರೆ. ಪ್ರಾಂಜಲ್ ಎಷ್ಟು ವೇಗವಾಗಿ ಹೇಳುತ್ತಿದ್ದಳೋ ಅಷ್ಟೇ ವೇಗವಾಗಿ ವಿದುಷಿ ಪ್ರಾಜೆಕ್ಟ ನೋಟ್ಸ್ ಬರೆದು ಕೊಡುತ್ತಿದ್ದಳು.

ಆಗ ಆಕೆಗೆ JAWS ( Job Access With Speech) ಎಂಬ ಸಾಫ್ಟವೇರ್ ನೆರವಿಗೆ ಬರುತ್ತದೆ. ಅದು ಯಾವುದೇ ಪುಸ್ತಕವನ್ನು ಗಟ್ಟಿಯಾಗಿ ಓದಿ ಹೇಳುವ ಸಾಫ್ಟವೇರ್. ತನ್ನ ಆಲಿಸುವ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡು ಆಕೆಯು ಆ ಸಾಫ್ಟವೇರ್ ಬಳಸಿಕೊಂಡು ದಿನಕ್ಕೆ 10-12 ಘಂಟೆಯಷ್ಟು ಪುಸ್ತಕಗಳನ್ನು ಓದುತ್ತಾರೆ. ತುಂಬಾ ವಿಡಿಯೋ ಪಾಠಗಳನ್ನು ಕೇಳುತ್ತಾರೆ. ತನ್ನ ಗೆಳತಿಯ ನೆರವನ್ನು ಪಡೆಯುತ್ತಾರೆ.

ರೈಲ್ವೇಸ್ ಅವರಿಗೆ ಉದ್ಯೋಗವನ್ನು ನಿರಾಕರಿಸಿತು

2016ರಲ್ಲೀ ಅವರು ಭಾರತೀಯ ರೈಲ್ವೇ ಸೇವೆಗೆ ಅರ್ಜಿ ಹಾಕುತ್ತಾರೆ. ಆದರೆ ಆಕೆ ಕುರುಡಿ ಎಂಬ ಕಾರಣಕ್ಕೆ ರೈಲ್ವೇಸ್ ಅವರಿಗೆ ಉದ್ಯೋಗವನ್ನು ನಿರಾಕರಣೆ ಮಾಡುತ್ತದೆ. ಆಗ ಸಿಟ್ಟಿಗೆದ್ದ ಆಕೆ ಪ್ರಧಾನಿ ನರೇಂದ್ರ ಮೋದಿಗೆ ಮತ್ತು ಆಗಿನ ರೈಲ್ವೇ ಮಂತ್ರಿ ಸುರೇಶ್ ಪ್ರಭು ಅವರಿಗೆ ನೇರವಾಗಿ ಪತ್ರವನ್ನು ಬರೆಯುತ್ತಾರೆ. ಆಗ ಸುರೇಶ್ ಪ್ರಭು ಅವರು ಆಕೆಯನ್ನು ಸಂಪರ್ಕ ಮಾಡಿ ನಿಮ್ಮ ವಿದ್ಯೆಗೆ ತಕ್ಕದಾದ ಉದ್ಯೋಗ ಕೊಡುವ ಭರವಸೆ ನೀಡಿದ್ದರು. ಆದರೆ ಆಗಲೇ ಐಎಎಸ್ ಪರೀಕ್ಷೆಯ ತಯಾರಿಯಲ್ಲಿ ಮುಳುಗಿದ್ದ ಪ್ರಾಂಜಲ್ ಆ ಪ್ರಸ್ತಾಪವನ್ನು ಸ್ವೀಕಾರ ಮಾಡುವುದಿಲ್ಲ.

ಆಕೆ ಎರಡು ಬಾರಿ ಐಎಎಸ್ ಪರೀಕ್ಷೆ ತೇರ್ಗಡೆ ಆದರು!

ಅತ್ಯಂತ ಪ್ರಬಲ ಇಚ್ಛಾಶಕ್ತಿ, ನಿರಂತರ ಪ್ರಯತ್ನ, ಎಂದಿಗೂ ಬತ್ತಿ ಹೋಗದ ಸ್ಫೂರ್ತಿ, ಬೆಟ್ಟದಷ್ಟು ಆತ್ಮವಿಶ್ವಾಸ ಇವುಗಳ ಜೊತೆಗೆ 2016ರಲ್ಲಿ ಅವರು ಮೊದಲ ಬಾರಿಗೆ ಐಎಎಸ್ ಪರೀಕ್ಷೆಯನ್ನು ಬರೆದು ಮೊದಲನೆಯ ಪ್ರಯತ್ನದಲ್ಲಿಯೇ ತೇರ್ಗಡೆಯಾದರು! ಅದೂ ಯಾವ ಕೋಚಿಂಗ್ ಇಲ್ಲದೆ! ಆದರೆ ಆಲ್ ಇಂಡಿಯಾ ರಾಂಕಿಂಗ್ 744 ಬಂದಿತ್ತು. ಅದು ಅವರಿಗೆ ತೃಪ್ತಿ ತರಲಿಲ್ಲ. ಯಾವುದೋ ಒಂದು ಅಜ್ಞಾತ ಇಲಾಖೆಯಲ್ಲಿ ಒಬ್ಬ ಸಾಮಾನ್ಯ ಅಧಿಕಾರಿಯಾಗಿ ಕೆಲಸ ಮಾಡಲು ಆಕೆ ರೆಡಿ ಇರಲಿಲ್ಲ. ಅದಕ್ಕೋಸ್ಕರ ಎರಡನೇ ಬಾರಿಗೆ ಅಷ್ಟೇ ಪ್ರಯತ್ನ ಮಾಡಿ 2017ರಲ್ಲಿ ಮತ್ತೆ ಐಎಎಸ್ ಪರೀಕ್ಷೆ ಬರೆದರು. ಈ ಬಾರಿ ಕೂಡ ತೇರ್ಗಡೆ ಆದರು. ಈ ಬಾರಿ ರಾಂಕಿಂಗ್ 124 ಬಂದಿತ್ತು!

ಅವರ ಕನಸಿನ ರೆಕ್ಕೆಗೆ ಸಾವಿರ ಗರಿಗಳು!

ಪ್ರಾಂಜಲ್ ಭಾರತದ ಮೊಟ್ಟ ಮೊದಲ ದೃಷ್ಟಿ ವಿಕಲತೆಯ ಸಾಧಕಿಯಾಗಿ ಐಎಎಸ್ ಪರೀಕ್ಷೆ ತೇರ್ಗಡೆ ಆಗಿದ್ದರು! ಲಿಖಿತ ಪರೀಕ್ಷೆಯಲ್ಲಿ ಆಕೆಯು ಪಡೆದ ಅಂಕಗಳು 854! ಹಾಗೂ ಸಂದರ್ಶನದಲ್ಲಿ ಪಡೆದ ಅಂಕಗಳು 179! ಒಟ್ಟು 1033 ಅನ್ನುವುದು ಕೂಡ ಆಕೆಯ ನಿಜವಾದ ಕ್ರೆಡಿಟ್.

ನಂತರ ತರಬೇತಿಯನ್ನು ಮುಗಿಸಿ ಮೇ 28, 2018ರಂದು ಅವರು ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಅಸಿಸ್ಟಂಟ್ ಕಲೆಕ್ಟರ್ ಆಗಿ ನೇಮಕ ಪಡೆಯುತ್ತಾರೆ. ಅದರ ನಂತರ ಅಕ್ಟೋಬರ್ 14, 2019ರಂದು ಸಬ್ ಕಲೆಕ್ಟರ್ ಆಗಿ ತಿರುವನಂತಪುರಂ ಜಿಲ್ಲೆಗೆ ನೇಮಕ ಪಡೆಯುತ್ತಾರೆ!

ಯಾರ ಸಹಾಯ ಇಲ್ಲದೆ ತನ್ನ ಎಲ್ಲ ಕೆಲಸಗಳನ್ನು ತಾನೇ ಮಾಡುವ, ಅದ್ಭುತವಾದ ಮೆಮೊರಿ ಪವರ್ ಹೊಂದಿರುವ, ಸಮಾಜ ಸೇವೆಯ ತೀವ್ರವಾದ ತುಡಿತವನ್ನು ಹೊಂದಿರುವ, ಬೆಟ್ಟವನ್ನು ಕರಗಿಸುವ ಧೈರ್ಯ ಮತ್ತು ಆತ್ಮವಿಶ್ವಾಸಗಳನ್ನು ಹೊಂದಿರುವ ಪ್ರಾಂಜಲ್ ಪಾಟೀಲ್ ಮತ್ತು ಆಕೆಯ ಗಂಡ ಕೋಮಲ್ ಸಿಂಗ್ ಪಾಟೀಲ್ ಅವರು ಇತ್ತೀಚೆಗೆ ತಮ್ಮ ಅಂಗದಾನಕ್ಕೆ ಜೊತೆಯಾಗಿ ಸಹಿ ಹಾಕಿ ಸುದ್ದಿ ಆಗಿದ್ದಾರೆ.

ಆಕೆಯ ಒಂದು ಮಾತು ನನಗೆ ಭಾರೀ ಕನೆಕ್ಟ್ ಆಗಿದ್ದು ಅದನ್ನು ಇಲ್ಲಿ ಉಲ್ಲೇಖ ಮಾಡುತ್ತೇನೆ.

SUCCESS doesn’t give us INSPIRATION. But the STRUGGLE behind the SUCCESS gives us the INSPIRATION.

ಹೌದು ತಾನೇ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ನಾಗಾರಾಧನೆ- ಪ್ರಕೃತಿಯ ಆರಾಧನೆ ಆಗಲಿ

Continue Reading

ಅಂಕಣ

ರಾಜಮಾರ್ಗ ಅಂಕಣ: ನಾಗಾರಾಧನೆ- ಪ್ರಕೃತಿಯ ಆರಾಧನೆ ಆಗಲಿ

ರಾಜಮಾರ್ಗ ಅಂಕಣ: ಮನುಷ್ಯನ ಬೆನ್ನು ಮೂಳೆಯು ದೇಹದ ಮೂಲಾಧಾರ ಚಕ್ರದ ಕೇಂದ್ರ. ಮನುಷ್ಯನ ಎಲ್ಲ ಸಂವೇದನೆಗಳ ಕೇಂದ್ರವೂ ಹೌದು. ಅದರ ತುದಿಯಲ್ಲಿ ಇರುವ ಮೆದುಳು ನಾಗದೇವರ ಹೆಡೆಗೆ ಹೋಲಿಕೆ ಪಡೆಯುತ್ತದೆ. ಬೆನ್ನು ಮೂಳೆಯನ್ನು ನಾಗನ ದೇಹಕ್ಕೆ ಹೋಲಿಕೆ ಮಾಡುತ್ತಾರೆ. ನಾಗದೇವರ ಆರಾಧನೆಯನ್ನು ಮಾಡುವುದರಿಂದ ಬೆನ್ನು ಮೂಳೆಯ ಆರೋಗ್ಯದ ಮೇಲೆ ಧನಾತ್ಮಕ ಪರಿಣಾಮ ಉಂಟಾಗುತ್ತದೆ.

VISTARANEWS.COM


on

ರಾಜಮಾರ್ಗ ಅಂಕಣ nagara panchami
Koo

ತುಳುನಾಡಿನ ನಾಗಾರಾಧನೆಗೆ – ನೂರಾರು ಆಯಾಮಗಳು

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ತಮಗೆಲ್ಲರಿಗೂ ನಾಗರಪಂಚಮಿ (Nagara Panchami) ಹಬ್ಬದ ಶುಭಾಶಯಗಳು. ನಾಗಾರಾಧನೆಯು ನಮ್ಮ ಹಿರಿಯರ ಪ್ರಕೃತಿ ಪ್ರೇಮ, ಕೃತಜ್ಞತೆಯ ಪ್ರತೀಕ ಎಂದೇ ಭಾವಿಸಲಾಗುತ್ತದೆ. ಜಗತ್ತಿನಾದ್ಯಂತ ನಾಗಾರಾಧನೆಯು ಇದ್ದರೂ ತುಳುನಾಡಿನ (Tulunadu) ನಾಗಾರಾಧನೆಯ (nagaradhane) ವಿಸ್ತಾರ ಮತ್ತು ಹರಹು ದೊಡ್ಡದು. ಅದಕ್ಕೆ ನೂರಾರು ಕಾರಣಗಳೂ ಇವೆ.

ತುಳುನಾಡು ಅಂದರೆ ನಾಗದೇವರ ಭೂಮಿ

ಭಾರತದ ಎಲ್ಲ 18 ಪುರಾಣಗಳಲ್ಲಿ ನಾಗದೇವರ ಉಲ್ಲೇಖವು ಬರುತ್ತದೆ ಅನ್ನುತ್ತದೆ ಒಂದು ಆಯಾಮ. ಇನ್ನೊಂದು ಈ ಕರಾವಳಿಯ ಭಾಗವು ‘ನಾಗರಖಂಡ ‘ಎಂದು ಕರೆಯಲ್ಪಟ್ಟಿದೆ. ಈ ಭೂಮಿಯನ್ನು ನಾಗದೇವರು ನಮಗೆ ದಾನವಾಗಿ ನೀಡಿದರು ಅನ್ನುವುದು ಇನ್ನೊಂದು ಆಯಾಮ. ಅದರಿಂದಾಗಿ ನಾಗಾರಾಧನೆ ಅಂದರೆ ನಮ್ಮ ಹಿರಿಯರ ಕೃತಜ್ಞತೆಯ ಸಂಕೇತವೇ ಆಗಿದೆ. ಇಲ್ಲಿನ ಸಡಿಲ ಮಣ್ಣು, ತೇವಾಂಶ ಮತ್ತು ವಾತಾವರಣದ ಉಷ್ಣತೆ ಇವುಗಳು ನಾಗನ ನಡೆಗೆ ಪೂರಕವಾಗಿಯೇ ಇವೆ. ಆದ್ದರಿಂದ ಇಡೀ ತುಳುನಾಡು ನಾಗದೇವರ ನಡೆಯೇ ಆಗಿದೆ. ನಾಗದೇವರು ನಮ್ಮ ಪೂರ್ವಜ ಎಂಬಲ್ಲಿಗೆ ಸರ್ಪ ಸಂಸ್ಕಾರ ಇತ್ಯಾದಿ ವಿಧಿಗಳೂ ನಡೆದುಬಂದವು. ಭೂಮಿಯನ್ನು ಹೊತ್ತವನು ಮಹಾಶೇಷ ಎಂಬ ಕಾರಣಕ್ಕೆ ಕೂಡ ನಾಗದೇವರ ಆರಾಧನೆಯು ಪ್ರಾಮುಖ್ಯತೆ ಪಡೆಯುತ್ತದೆ.

ತುಳುನಾಡಿನಲ್ಲಿ ನಾಗದೇವರು ಮತ್ತು ದೈವಗಳೇ ಸಾರ್ವಭೌಮರು. ಇಲ್ಲಿನ ಜನಗಳು ಅವೆರಡನ್ನು ನಂಬಿದಷ್ಟು ಬೇರೆ ಯಾವುದನ್ನೂ ನಂಬುವುದಿಲ್ಲ. ಕುಟುಂಬದ ಹಿರಿಯರು ಮೂಲನಾಗನಿಗೆ ತನು ಹಾಕುವುದನ್ನು ಎಂದಿಗೂ ತಪ್ಪಿಸುವುದಿಲ್ಲ. ನಾಗನ ಬಗ್ಗೆ ಇರುವ ಭಕ್ತಿ, ಗೌರವ ಮತ್ತು ಭಯಗಳು ನಮ್ಮ ಜನ್ಮದಿಂದಲೂ ನಮ್ಮ ಹೊಕ್ಕಳಬಳ್ಳಿಯ ಒಳಗೇ ಕೂತಿರುತ್ತವೆ.

ತುಳುನಾಡಿನ ನಾಗಾರಾಧನೆ ನೂರು ವಿಧ

ಹುತ್ತಪೂಜೆ, ನಾಗದೇವರ ಶಿಲಾ ಪೂಜನ, ತನು ಹಾಕುವುದು, ಆಶ್ಲೇಷಾ ಪೂಜೆ, ನಾಗಮಂಡಲ, ತಂಬಿಲ ನೀಡುವುದು, ಢಕ್ಕೆಬಲಿ, ಸರ್ಪ ಸಂಸ್ಕಾರ…ಹೀಗೆ ನೂರಾರು ಆಯಾಮಗಳಲ್ಲಿ ತುಳುನಾಡಿನ ನಾಗಾರಾಧನೆಯು ಸಾಗಿಬಂದಿದೆ. ಇವೆಲ್ಲವೂ ತುಳುನಾಡಿನಲ್ಲಿ ಅನೂಚಾನವಾಗಿ ನಡೆದುಕೊಂಡು ಬರುತ್ತಿವೆ. ಶ್ರಾವಣ ಶುಕ್ಲ ಪಂಚಮಿಯಂದು ನಡೆಸುವ ನಾಗಬನದಲ್ಲಿ ತನು ಹಾಕುವ ವಿಧಿಯನ್ನು ಯಾವ ಕುಟುಂಬವೂ ತಪ್ಪಿಸಿಕೊಳ್ಳುವುದಿಲ್ಲ. ಶ್ರದ್ಧೆ ಒಂದಿಂಚೂ ಕಡಿಮೆ ಆಗುವುದಿಲ್ಲ. ಇಡೀ ಕುಟುಂಬವು ಮೂಲನಾಗನನ್ನು ಹುಡುಕಿಕೊಂಡು ಬಂದು ಭಾಗವಹಿಸುವುದರಿಂದ ನಾಗರಪಂಚಮಿಯು ಕೂಡು ಕುಟುಂಬದ ಹಬ್ಬ.

ನಾಗಾರಾಧನೆಯ ವೈಜ್ಞಾನಿಕ ಹಿನ್ನೆಲೆ

ಮನುಷ್ಯನ ಬೆನ್ನು ಮೂಳೆಯು ದೇಹದ ಮೂಲಾಧಾರ ಚಕ್ರದ ಕೇಂದ್ರ. ಮನುಷ್ಯನ ಎಲ್ಲ ಸಂವೇದನೆಗಳ ಕೇಂದ್ರವೂ ಹೌದು. ಅದರ ತುದಿಯಲ್ಲಿ ಇರುವ ಮೆದುಳು ನಾಗದೇವರ ಹೆಡೆಗೆ ಹೋಲಿಕೆ ಪಡೆಯುತ್ತದೆ. ಬೆನ್ನು ಮೂಳೆಯನ್ನು ನಾಗನ ದೇಹಕ್ಕೆ ಹೋಲಿಕೆ ಮಾಡುತ್ತಾರೆ. ನಾಗದೇವರ ಆರಾಧನೆಯನ್ನು ಮಾಡುವುದರಿಂದ ಬೆನ್ನು ಮೂಳೆಯ ಆರೋಗ್ಯದ ಮೇಲೆ ಧನಾತ್ಮಕ ಪರಿಣಾಮ ಉಂಟಾಗುತ್ತದೆ. ನಾಗಾರಾಧನೆಯ ಬಣ್ಣ ಬಣ್ಣದ ಮಂಡಲಗಳು, ಸುವಾಸನೆ ಬೀರುವ ಹೂವುಗಳು, ಆ ಬಣ್ಣಗಳ ವಿನ್ಯಾಸಗಳು, ನಾಗದೇವರ ಬನದ ಪರಿಸರ, ಅಲ್ಲಿರುವ ಔಷಧಿಯ ಸಸ್ಯಗಳು ಇವೆಲ್ಲವೂ ಸೇರಿ ನಮ್ಮ ದೇಹದ ಮತ್ತು ಮಾನಸಿಕ ಆರೋಗ್ಯವು ಅಭಿವೃದ್ದಿ ಆಗುತ್ತದೆ ಎನ್ನುತ್ತದೆ ವಿಜ್ಞಾನ. ನಾಗನ ನಡೆಯ ಮಣ್ಣು ಔಷಧೀಯ ಗುಣವನ್ನು ಹೊಂದಿದ್ದು ಅದರ ಸ್ಪರ್ಶದಿಂದ ಚರ್ಮರೋಗ ಗುಣವಾಗುವುದು ಸಾಬೀತು ಆಗಿದೆ. ಹಾಗೆಯೇ ಸಂತಾನ ದೋಷ ಪರಿಹಾರ, ದೃಷ್ಟಿದೋಷ ಪರಿಹಾರ ಕೂಡ ಆಗಿರುವ ಸಾವಿರಾರು ಉದಾಹರಣೆಗಳು ನಮಗೆ ಇಲ್ಲಿ ದೊರೆಯುತ್ತವೆ. ನಾಗಾರಾಧನೆಯ ವಿಷಯದಲ್ಲಿ ನಂಬಿಕೆ ಮತ್ತು ವಿಜ್ಞಾನಗಳು ಜೊತೆ ಜೊತೆಯಾಗಿ ಮುನ್ನಡೆಯುತ್ತವೆ.

ಕಾಂಕ್ರೀಟ್ ಕಾಡುಗಳು ಮತ್ತು ನಾಗದೇವರ ಬನ

ಸಾವಿರಾರು ವರ್ಷಗಳಿಂದ ಹರಿದುಬಂದ ‘ನಾಗದೇವರ ನೈಸರ್ಗಿಕ ಬನದ ಕಲ್ಪನೆ ‘ಯು ಇತ್ತೀಚೆಗೆ ಮತ್ತೆ ಮುನ್ನೆಲೆಗೆ ಬಂದಿದೆ. ನಾಗನನ್ನು ಕೃತಕವಾದ ಕಾಂಕ್ರೀಟ್ ಕಾಡನ್ನು ಮಾಡಿ ಪೂಜೆ ಮಾಡುವುದಕ್ಕಿಂತ ನೈಸರ್ಗಿಕವಾದ ನಾಗನ ಬನ (ಬನ ಅಂದರೆ ಕಾಡು ಎಂದರ್ಥ)ದಲ್ಲಿಯೇ ನಾಗನ ಪೂಜೆ ನೆರವೇರಿಸಬೇಕು ಎಂಬ ಬೃಹತ್ ಅಭಿಯಾನವು ಇಂದು ಕರಾವಳಿಯ ಉದ್ದಕ್ಕೂ ಜಾಗೃತಿ ಮೂಡಿಸುತ್ತಿದೆ. ಅಂದರೆ ನಿರ್ದಿಷ್ಟವಾದ ಗಿಡಗಳ ಜೊತೆಗೆ ಔಷಧೀಯ ಸಸ್ಯಗಳನ್ನು ಅಲ್ಲಿ ಬೆಳೆಸಿ ಅಲ್ಲಿಯೇ ತಂಪಾದ ಜಾಗದಲ್ಲಿ ನಾಗನ ಆವಾಸ ಸ್ಥಾನವನ್ನು ನಿರ್ಮಾಣ ಮಾಡುವ ಮತ್ತು ಅಲ್ಲಿಯೇ ನಾಗಾರಾಧನೆ ಮಾಡುವ ಅದ್ಭುತ ಕಲ್ಪನೆ ಇಂದು ಜನಪ್ರಿಯತೆ ಪಡೆಯುತ್ತಿದೆ. ಅದು ವೈಜ್ಞಾನಿಕವಾಗಿ ಕೂಡ ಪುಷ್ಟಿಯನ್ನು ಪಡೆಯುತ್ತಿದೆ. ವಿಶೇಷವಾಗಿ ಉಡುಪಿಯ ಉರಗತಜ್ಞರಾದ ಗುರುರಾಜ್ ಸನಿಲ್ ಹಲವಾರು ಪುಸ್ತಕಗಳನ್ನು ಬರೆದು ಮತ್ತು ಉಪನ್ಯಾಸಗಳ ಮೂಲಕ ಜಾಗೃತಿ ಮೂಡಿಸುತ್ತಿರುವುದು ಅಭಿನಂದನೀಯ. ಅವರು ಮತ್ತು ಅವರ ಗೆಳೆಯರು ಅಂತಹ ಹತ್ತಾರು ಕಡೆ ನಾಗಬನ ನಿರ್ಮಾಣ ಕೂಡ ಮಾಡಿದ್ದಾರೆ. ಹಾಗೆಯೇ ಉಡುಪಿಯ ಸಂವೇದನಾ ಫೌಂಡೇಶನ್ (ಸಂಚಾಲಕರು – ಪ್ರಕಾಶ್ ಮಲ್ಪೆ) ನೂರು ಪ್ರಾಕೃತಿಕ ನಾಗಬನಗಳನ್ನು ನಿರ್ಮಿಸುವ ಸಂಕಲ್ಪ ಮಾಡಿಕೊಂಡು ಮುಂದುವರೆಯುತ್ತಿದ್ದಾರೆ. ಅವರಿಗೆ ನಮ್ಮ ನೆರವು ದೊರೆಯಲಿ.

ನಾಡಿನ ಎಲ್ಲ ಧಾರ್ಮಿಕ ಬಂಧುಗಳಿಗೆ ನಾಡಿನ ಅತೀ ದೊಡ್ಡ ಹಬ್ಬ ನಾಗರಪಂಚಮಿಯ ಹಾರ್ದಿಕ ಶುಭಾಶಯಗಳು.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಿನೇಶ್ ಪೋಗಟ್ ತೂಕ ಇದ್ದಕ್ಕಿದ್ದಂತೆ 2 ಕೆ.ಜಿ ಹೆಚ್ಚಿದ್ದು ಹೇಗೆ? ಉತ್ತರ ಸಿಗದ ಪ್ರಶ್ನೆ!

Continue Reading
Advertisement
Gold Rate Today
ಚಿನ್ನದ ದರ14 mins ago

Gold Rate Today: ಚಿನ್ನದ ಬೆಲೆಯಲ್ಲಿ ಯಾವುದೇ ಏರಿಳಿತವಿಲ್ಲ; ಇಂದಿನ ದರ ಇಷ್ಟಿದೆ

jyothi poorvaaj jyothi rai says she blocked 1 thousand accounts
ಸ್ಯಾಂಡಲ್ ವುಡ್28 mins ago

Jyothi Rai: ಕೆಟ್ಟ ಮೆಸೇಜ್‌ ಮಾಡಿದ 1 ಸಾವಿರ ಅಕೌಂಟ್‌ಅನ್ನು ಬ್ಲಾಕ್‌ ಮಾಡಿದ ಜ್ಯೋತಿ ರೈ!

bike wheeling
ಬೆಂಗಳೂರು ಗ್ರಾಮಾಂತರ32 mins ago

Bike Wheeling: ಸ್ವಾತಂತ್ರ್ಯ ದಿನಾಚರಣೆ ಹೆಸರಲ್ಲಿ ಹೈವೇಯಲ್ಲಿ ಡೆಡ್ಲಿ ವ್ಹೀಲಿಂಗ್‌!

Independence Day 2024
ಕರ್ನಾಟಕ39 mins ago

Independence Day 2024: ಅನುದಾನ ಹಂಚಿಕೆಯಲ್ಲಿ ಕೇಂದ್ರದಿಂದ ತಾರತಮ್ಯ: ಸಿದ್ದರಾಮಯ್ಯ ಗಂಭೀರ ಆರೋಪ

Independence Day 2024
ಕರ್ನಾಟಕ1 hour ago

Independence Day 2024: ಎಸ್‌ಸಿ, ಎಸ್‌ಟಿ ಸಮುದಾಯದ ಅಭಿವೃದ್ಧಿಗೆ ರಾಜ್ಯ ಬದ್ಧ; ಸಿದ್ದರಾಮಯ್ಯ

Laughing Buddha Trailer out Pramod Shetty Diganth Rishab Shetty
ಸ್ಯಾಂಡಲ್ ವುಡ್2 hours ago

Pramod Shetty: ‘ಲಾಫಿಂಗ್ ಬುದ್ಧ’ ಟ್ರೈಲರ್‌ ಔಟ್‌; ಕಚಗುಳಿ ಇಡುವಂತಿದೆ ಪೊಲೀಸಪ್ಪನ ಕತೆ!

Independence Day 2024
ಕರ್ನಾಟಕ2 hours ago

ಜನರ ಕಲ್ಯಾಣಕ್ಕಾಗಿ ಜಾರಿಗೆ ತಂದ ಗ್ಯಾರಂಟಿ ಯೋಜನೆ ಮುಂದುವರಿಯಲಿದೆ; ಧ್ವಜಾರೋಹಣ ನೆರವೇರಿಸಿ ಸಿಎಂ ಸಿದ್ದರಾಮಯ್ಯ

Independence Day 2024
ದೇಶ2 hours ago

Independence Day 2024: ಜಾತ್ಯಾತೀತ ನಾಗರಿಕ ಸಂಹಿತೆ ಜಾರಿಯಾದರೆ ಮಾತ್ರ ತಾರತಮ್ಯದಿಂದ ಮುಕ್ತಿ; ಪ್ರಧಾನಿ ಮೋದಿ

Golden Star Ganesh Krishnam Pranaya Sakhi review
ಸ್ಯಾಂಡಲ್ ವುಡ್2 hours ago

Golden Star Ganesh: ಹೇಗಿದೆ “ಕೃಷ್ಣಂ ಪ್ರಣಯ ಸಖಿ” ಸಿನಿಮಾ? ಫ್ಯಾನ್ಸ್‌ ಹೇಳೋದೇನು?

Independence Day 2024
ಬೆಂಗಳೂರು3 hours ago

Independence Day 2024: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ; ಡಿಕೆಶಿ ಭರವಸೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ7 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ7 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ7 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌