Kangana Ranaut: ʻಎಮರ್ಜೆನ್ಸಿʼ ಟ್ರೈಲರ್‌ ಔಟ್‌; ಕಂಗನಾ ರಣಾವತ್‌ಗೆ ರಾಷ್ಟ್ರ ಪ್ರಶಸ್ತಿ ಫಿಕ್ಸ್‌ ಅಂದ್ರು ಫ್ಯಾನ್ಸ್‌! - Vistara News

ಸಿನಿಮಾ

Kangana Ranaut: ʻಎಮರ್ಜೆನ್ಸಿʼ ಟ್ರೈಲರ್‌ ಔಟ್‌; ಕಂಗನಾ ರಣಾವತ್‌ಗೆ ರಾಷ್ಟ್ರ ಪ್ರಶಸ್ತಿ ಫಿಕ್ಸ್‌ ಅಂದ್ರು ಫ್ಯಾನ್ಸ್‌!

Kangana Ranaut: ಅಂತಿಮವಾಗಿ ಸೆಪ್ಟೆಂಬರ್​ 6ರಂದು ಈ ಸಿನಿಮಾ ತೆರೆಗೆ ಬರಲಿದೆ. ಅನುಪಮ್​ ಖೇರ್​, ಶ್ರೇಯಸ್​ ತಲ್ಪಡೆ, ಮಿಲಿಂದ್​ ಸೋಮನ್​ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.  ಈ ಹಿಂದೆ ಈ ವರ್ಷ ನವೆಂಬರ್ 24ರಂದು ಎಮರ್ಜೆನ್ಸಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಲಾಗಿತ್ತು. 

VISTARANEWS.COM


on

Kangana Ranaut Emergency trailer PM Indira Gandhi as a Shakespearean tragedy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಂಗನಾ ರಣಾವತ್ (Kangana Ranaut) ಅವರು ತಮ್ಮ ನಿರ್ದೇಶನದ ʻಎಮರ್ಜೆನ್ಸಿʼ ಸಿನಿಮಾ ಟ್ರೈಲರ್‌ ಬಿಡುಗಡೆಗೊಂಡಿದೆ. . ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯ ದಿನಗಳನ್ನು ಆಧರಿಸಿ ಈ ಸಿನಿಮಾ ತಯಾರಾಗಿದೆ. ರಾಜಕೀಯದ ಕಾರಣದಿಂದ ಈ ಸಿನಿಮಾ ಒಂದಷ್ಟು ವಿವಾದಗಳನ್ನು ಹುಟ್ಟುಹಾಕುವ ಸಾಧ್ಯತೆ ಕೂಡ ಇದೆ. ಈ ಸಿನಿಮಾದಲ್ಲಿನ ನಟನೆಗೆ ಕಂಗನಾ ರಣಾವತ್​ ಅವರಿಗೆ ಖಂಡಿತಾ ರಾಷ್ಟ್ರ ಪ್ರಶಸ್ತಿ ಸಿಗಲಿದೆ ಎಂದು ಅಭಿಮಾನಿಗಳು ಭವಿಷ್ಯ ನುಡಿಯುತ್ತಿದ್ದಾರೆ. 

ಅಂತಿಮವಾಗಿ ಸೆಪ್ಟೆಂಬರ್​ 6ರಂದು ಈ ಸಿನಿಮಾ ತೆರೆಗೆ ಬರಲಿದೆ. ಅನುಪಮ್​ ಖೇರ್​, ಶ್ರೇಯಸ್​ ತಲ್ಪಡೆ, ಮಿಲಿಂದ್​ ಸೋಮನ್​ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.  ಈ ಹಿಂದೆ ಈ ವರ್ಷ ನವೆಂಬರ್ 24ರಂದು ಎಮರ್ಜೆನ್ಸಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಲಾಗಿತ್ತು. 

ಈ ಸಿನಿಮಾದಲ್ಲಿ ಕಂಗನಾ ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ಮೊದಲು ಜೂನ್ 14 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಜನವರಿಯಲ್ಲಿ ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸಿದ ಒಂದು ದಿನದ ನಂತರ ಕಂಗನಾ ʻಎಮರ್ಜೆನ್ಸಿʼ ಬಿಡುಗಡೆಯ ದಿನಾಂಕವನ್ನು ಘೋಷಿಸಿದ್ದರು. ಇದಾದ ಬಳಿಕ 2023ರ ನ.24ರಂದು ಥಿಯೇಟರ್‌ಗಳಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಮತ್ತೆ ಸಿನಿಮಾ ಬಿಡುಗಡೆಯಾಗುತ್ತಿಲ್ಲ ಎಂದು ಘೋಷಿಸಿದರು.Kangana Ranaut: ರಾಹುಲ್‌ ಗಾಂಧಿ ಅತ್ಯಂತ ಅಪಾಯಕಾರಿ ವ್ಯಕ್ತಿ; ಕಂಗನಾ ರಾಣಾವತ್‌ ಹೀಗೆ ಹೇಳಿದ್ದೇಕೆ?

ಇದನ್ನೂ ಓದಿ: Kangana Ranaut: ರಾಹುಲ್‌ ಗಾಂಧಿ ಅತ್ಯಂತ ಅಪಾಯಕಾರಿ ವ್ಯಕ್ತಿ; ಕಂಗನಾ ರಾಣಾವತ್‌ ಹೀಗೆ ಹೇಳಿದ್ದೇಕೆ?

ಎಮರ್ಜೆನ್ಸಿಯಲ್ಲಿ ಅನುಪಮ್ ಖೇರ್, ಮಹಿಮಾ ಚೌಧರಿ, ಮಿಲಿಂದ್ ಸೋಮನ್, ಶ್ರೇಯಸ್ ತಲ್ಪಾಡೆ, ವಿಶಾಕ್ ನಾಯರ್ ಮತ್ತು ದಿವಂಗತ ಸತೀಶ್ ಕೌಶಿಕ್ ಕೂಡ ಕಾಣಿಸಿಕೊಂಡಿದ್ದಾರೆ. ಎಮರ್ಜೆನ್ಸಿ ಸಿನಿಮಾದಲ್ಲಿ ಕಂಗನಾ ಅವರು ದಿವಂಗತ ಪ್ರಧಾನಿ ಇಂದಿರಾ ಗಾಂಧಿಯವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಿತೇಶ್ ಶಾ ಕಥೆಯನ್ನು ಬರೆದಿದ್ದು, ಈ ಹಿಂದೆ ಅವರು ಕಂಗನಾ ಅವರ ಕೊನೆಯ ಚಿತ್ರ ಧಾಕಡ್ ಅನ್ನು ಸಹ ಬರೆದಿದ್ದಾರೆ. ಆದರೆ ಬಾಕ್ಸ್‌ ಆಫೀಸ್‌ನಲ್ಲಿ ಸಿನಿಮಾ ಗಳಿಕೆ ಕಂಡಿರಲಿಲ್ಲ. ಅನುಪಮ್ ಖೇರ್, ಮಿಲಿಂದ್ ಸೋಮನ್, ಮಹಿಮಾ ಚೌಧರಿ, ಸತೀಶ್ ಕೌಶಿಕ್ ಮತ್ತು ಶ್ರೇಯಸ್ ತಲ್ಪಡೆ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಪಾತ್ರವನ್ನು ಶ್ರೇಯಸ್ ತಲ್ಪಡೆ ನಿರ್ವಹಿಸಲಿದ್ದಾರೆ.




ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Priyanka Chopra: ಲಿಪ್‌ ಲಾಕ್‌ ಫೋಟೊ ಹಂಚಿಕೊಂಡ ನಿಕ್ ಜೋನಾಸ್ – ಪ್ರಿಯಾಂಕಾ!

Priyanka Chopra: ʻದಿ ಗುಡ್ ಹಾಫ್‌ʼನ ಪ್ರಥಮ ಪ್ರದರ್ಶನದ ಮೊದಲು ತಮ್ಮ ಲಾಸ್ ಏಂಜಲೀಸ್ ಮನೆಯಲ್ಲಿ ಹಾಟ್‌ ಪೋಟೋಶೂಟ್‌ ಮಾಡಿಸಿಕೊಂಡಿದೆ ಜೋಡಿ. ಒಂದು ಫೋಟೊದಲ್ಲಿ ಇಬ್ಬರು ಲಿಪ್‌ ಲಾಕ್‌ ಮಾಡಿಕೊಂಡರೆ, ಇನ್ನೊಂದರಲ್ಲಿ ಹಾಟ್‌ ಆಗಿ ಪೋಸ್‌ ಕೊಟ್ಟಿದ್ದಾರೆ.

VISTARANEWS.COM


on

Priyanka Chopra Nick Jonas Kisses In a Steamy Video
Koo

ಬೆಂಗಳೂರು: ನಿಕ್ ಜೋನಾಸ್ ಮತ್ತು ಪ್ರಿಯಾಂಕಾ ಚೋಪ್ರಾ (Priyanka Chopra) ತಮ್ಮ ಇತ್ತೀಚಿನ ಪೋಸ್ಟ್‌ಗಳೊಂದಿಗೆ ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ್ದಾರೆ. ನಿಕ್‌ನ ಚಲನಚಿತ್ರ ʻದಿ ಗುಡ್ ಹಾಫ್‌ʼನ ಪ್ರಥಮ ಪ್ರದರ್ಶನದ ಮೊದಲು ತಮ್ಮ ಲಾಸ್ ಏಂಜಲೀಸ್ ಮನೆಯಲ್ಲಿ ಹಾಟ್‌ ಪೋಟೋಶೂಟ್‌ ಮಾಡಿಸಿಕೊಂಡಿದೆ ಜೋಡಿ. ಒಂದು ಫೋಟೊದಲ್ಲಿ ಇಬ್ಬರು ಲಿಪ್‌ ಲಾಕ್‌ ಮಾಡಿಕೊಂಡರೆ, ಇನ್ನೊಂದರಲ್ಲಿ ಹಾಟ್‌ ಆಗಿ ಪೋಸ್‌ ಕೊಟ್ಟಿದ್ದಾರೆ.

ವೀಡಿಯೊವನ್ನು ಹಂಚಿಕೊಂಡ ನಿಕ್, “ನನ್ನ ಶಾಶ್ವತ ಲವ್‌” ಎಂದು ಬರೆದಿದ್ದಾರೆ. ಪ್ರಿಯಾಂಕಾ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಗಳಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ “ಡೇಟ್ ನೈಟ್ ಫಾರ್ ದಿ ಗುಡ್ ಹಾಫ್ ಪ್ರೀಮಿಯರ್ ವಿತ್ ಮೈ ಲವ್‌” ಎಂದು ಬರೆದುಕೊಂಡಿದ್ದಾರೆ ನಿಕ್‌. ಪ್ರಥಮ ಪ್ರದರ್ಶನದಲ್ಲಿ, ನಿಕ್ ಜೋನಾಸ್ ತನ್ನ ಮಗಳು ಮಾಲತಿ ಮೇರಿ ಚೋಪ್ರಾ ಜೋನಾಸ್ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: Priyanka Chopra:  ಮಾಲತಿ ಮೇರಿ ಅಪ್ಪನ ಮಗಳು ಎಂದ ನೆಟ್ಟಿಗರು; ಪ್ರಿಯಾಂಕಾ ಚೋಪ್ರಾ ಶೇರ್‌ ಮಾಡಿದ ವಿಡಿಯೊದಲ್ಲಿ ಏನಿದೆ?

ಪ್ರಿಯಾಂಕಾ ಚೋಪ್ರಾ (Priyanka Chopra) ಬಾಲಿವುಡ್ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಟನೆಯ ಮೂಲಕ ತಮ್ಮನ್ನು ತಾವು ಸಾಬೀತುಪಡಿಸಿದ್ದಾರೆ. ನಟನೆ ಜತೆಗೆ ನಟಿ ಹೆಚ್ಚು ಸಮಯ ಕಳೆಯುವುದು ಕುಟುಂಬದ ಜತೆ. ಪತಿ ಮತ್ತು ಗಾಯಕ ನಿಕ್ ಜೋನಾಸ್ ಮತ್ತು ಮಗಳು ಮಾಲತಿ ಮೇರಿ ಚೋಪ್ರಾ ಜೋನಾಸ್ ಜತೆಗೆ ಸಾಕಷ್ಟು ಸಮಯ ಕಳಯುತ್ತಾರೆ. ಆಗಾಗ ಫೋಟೊ ಹಾಗೂ ವಿಡಿಯೊಗಳನ್ನು ಶೇರ್‌ ಮಾಡಿಕೊಳ್ಳುತ್ತಿರುತ್ತಾರೆ. ನಿಕ್ ಒಳ್ಳೆಯ ಗಾಯಕ ಎನ್ನುವುದು ಗೊತ್ತೇ ಇದೆ. ಸದ್ಯ ನಟಿ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. . ʻದಿ ಬ್ಲಫ್‌ʼಸಿನಿಮಾದಲ್ಲಿ ನಟಿ ಮುಂದೆ ವಿಭಿನ್ನವಾಗಿ ಕಾಣಿಸಿಕೊಳ್ಳುತ್ತಿದ್ದಾರೆ.ದಿ ಬ್ಲಫ್‌ʼನಲ್ಲಿ ಕಡಲುಗಳ್ಳರ ಪಾತ್ರವನ್ನು ನಿರ್ವಹಿಸಲಿದ್ದಾರೆ ಎನ್ನಲಾಗಿದೆ. ಸೋರಿಕೆಯಾದ ಚಿತ್ರಗಳಲ್ಲಿ ಕಪ್ಪು ಉಡುಪನ್ನು ಧರಿಸಿದ್ದಾರೆ. ಯುದ್ಧದ ಮೋಡ್‌ನಲ್ಲಿದ್ದಾರೆ. ಆದರೆ ನಯ ಫ್ಯಾನ್ಸ್‌ಗೆ ಗಮನ ಸೆಳೆದಿದ್ದು ಮಾತ್ರ ಹೇರ್ ಸ್ಟೈಲ್. ಲೀಕ್‌ ಆದ ಫೋಟೊದಲ್ಲಿ ಪ್ರಿಯಾಂಕ ವಿಭಿನ್ನವಾದ ಕೇಶವಿನ್ಯಾಸವನ್ನು ಹೊಂದಿದ್ದಾರೆ. , ಇದು 19 ನೇ ಶತಮಾನದ ಕೆರಿಬಿಯನ್ ಕಡಲುಗಳ್ಳರ ಲುಕ್‌ ಎನ್ನಲಾಗಿದೆ.ದಿ ಬ್ಲಫ್’ 19 ನೇ ಶತಮಾನದ ಕೆರಿಬಿಯನ್‌ನ ಕಥೆ. ರುಸ್ಸೋ ಬ್ರದರ್ಸ್ ಬ್ಯಾನರ್ AGBO ಸ್ಟುಡಿಯೋಸ್ ಮತ್ತು ಅಮೆಜಾನ್ MGM ಸ್ಟುಡಿಯೋಸ್ ನಿರ್ಮಿಸಿದ ಈ ಚಿತ್ರದಲ್ಲಿ ಕಾರ್ಲ್ ಅರ್ಬನ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಒಂದೆರಡು ತಿಂಗಳಿನಿಂದ ಪ್ರಿಯಾಂಕಾ ಆಸ್ಟ್ರೇಲಿಯದಲ್ಲಿ ಚಿತ್ರದ ಶೂಟಿಂಗ್ ನಡೆಸುತ್ತಿದ್ದಾರೆ.

Continue Reading

ಬಾಲಿವುಡ್

Raj B Shetty: ಬಾಲಿವುಡ್‌ಗೆ ಮಾಸ್‌ ಎಂಟ್ರಿ ಕೊಟ್ಟ ರಾಜ್‌ ಬಿ ಶೆಟ್ಟಿ; ಬಾಬಿ ಡಿಯೋಲ್ ಜತೆ ಅಬ್ಬರಿಸಲಿದ್ದಾರೆ ನಟ!

Raj B Shetty: ಇದೀಗ ಹಿಂದಿ ಸಿನಿಮಾದಲ್ಲಿ ರಾಜ್‌ ಬಿ ಶೆಟ್ಟಿ ನಟಿಸಲಿದ್ದಾರೆ. ಈ ಸಿನಿಮಾದಲ್ಲಿ ರಾಜ್‌ ಬಿ ಶೆಟ್ಟಿ ಕ್ಯಾಮಿಯೋ ಪಾತ್ರದಲ್ಲಿ ನಟಿಸಲಿದ್ದಾರೆ. ಮಲಯಾಳಂನ ಖ್ಯಾತ ನಟ ಜೋಜು ಜಾರ್ಜ್ ಕೂಡ ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಈ ಥ್ರಿಲ್ಲರ್‌ ಸಿನಿಮಾದಲ್ಲಿ ಬಾಬಿ ಡಿಯೋಲ್ ಕೂಡ ಇದ್ದಾರೆ.

VISTARANEWS.COM


on

Raj B Shetty mass entry to Bollywood The actor will make a splash with Bobby Deol
Koo

ಬೆಂಗಳೂರು: ನಟ ರಾಜ್‌ ಬಿ ಶೆಟ್ಟಿ (Raj B Shetty) ಅವರ `ಟೋಬಿ’ ಸಿನಿಮಾ ಬಿಡುಗಡೆಯಾಗಿ, ಅಷ್ಟೇನೂ ಕಲೆಕ್ಷನ್‌ ಮಾಡಿರಲಿಲ್ಲ. ಅಷ್ಟೋತ್ತಿಗಾಗಲೇ ರಾಜ್‌ ಅವರು ಮಲಯಾಳಂ ಸಿನಿಮಾದಲ್ಲಿ ಬ್ಯುಸಿಯಾದರು. ಮೊದಲ ಮಾಲಿವುಡ್ ಸಿನಿಮಾ ‘ರುಧೀರಂ’ ಶೂಟಿಂಗ್ ಕೂಡ ಮುಗಿದು ರಿಲೀಸ್‌ಗೂ ರೆಡಿಯಾಗಿದೆ. ಮಲಯಾಳಂ ಸ್ಟಾರ್ ಮಮ್ಮುಟ್ಟಿ ಹೊಸ ಸಿನಿಮಾ ‘ಟರ್ಬೊ’ದಲ್ಲಿ ರಾಜ್‌ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು.  ಈ ಮಧ್ಯೆ ದುನಿಯಾ ವಿಜಯ್ (Duniya Vijay) ಜತೆ ಸೇರಿ ಒಂದು ಚಿತ್ರದಲ್ಲಿ ನಟಿಸುವುದಕ್ಕೆ ಮುಂದಾಗಿದ್ದರು ಎನ್ನಲಾಗಿತ್ತು. ಇದೀಗ ಹಿಂದಿ ಸಿನಿಮಾದಲ್ಲಿ ರಾಜ್‌ ಬಿ ಶೆಟ್ಟಿ ನಟಿಸಲಿದ್ದಾರೆ. ಈ ಸಿನಿಮಾದಲ್ಲಿ ರಾಜ್‌ ಬಿ ಶೆಟ್ಟಿ ಕ್ಯಾಮಿಯೋ ಪಾತ್ರದಲ್ಲಿ ನಟಿಸಲಿದ್ದಾರೆ. ಮಲಯಾಳಂನ ಖ್ಯಾತ ನಟ ಜೋಜು ಜಾರ್ಜ್ ಕೂಡ ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಈ ಥ್ರಿಲ್ಲರ್‌ ಸಿನಿಮಾದಲ್ಲಿ ಬಾಬಿ ಡಿಯೋಲ್ ಕೂಡ ಇದ್ದಾರೆ.

ಅನುರಾಗ್‌ ಕಶ್ಯಪ್‌ ನಿರ್ದೇಶನದ ಸಿನಿಮಾ ಕುರಿತು ರಾಜ್‌ ಬಿ ಶೆಟ್ಟಿ ಮಾತನಾಡಿ, ‘ಅನುರಾಗ್‌ ಕಶ್ಯಪ್‌ ಸಿನಿಮಾಗಳನ್ನು ನೋಡಿ ಬೆಳೆದವನು ನಾನು. ನನಗೆ ಅವರ ಸಿನಿಮಾಗಳು ಇಷ್ಟ. ಅವು ನನ್ನ ಆಪ್ತರು ಕೂಡ. ಕ್ಯಾಮಿಯೋ ಪಾತ್ರದಲ್ಲಿ ನಟಿಸುತ್ತೀಯಾ ಎಂದು ಕೇಳಿದರು. ನಾನು ಒಪ್ಪಿದೆʼʼ ಎನ್ನುತ್ತಾರೆ. ಹೊಸ ಸಿನಿಮಾದ ಶೀರ್ಷಿಕೆ ಮತ್ತಿತರ ವಿವರಗಳನ್ನು ಅನುರಾಗ್‌ ಕಶ್ಯಪ್‌ ಇನ್ನಷ್ಟೇ ಬಹಿರಂಗಗೊಳಿಸಬೇಕಿದೆ.

ಇದನ್ನೂ ಓದಿ: Golden Star Ganesh: ಹೇಗಿದೆ “ಕೃಷ್ಣಂ ಪ್ರಣಯ ಸಖಿ” ಸಿನಿಮಾ? ಫ್ಯಾನ್ಸ್‌ ಹೇಳೋದೇನು?

ವಿಜಯ್‌ ಕುಮಾರ್‌ ನಟನೆಯ ‘ವಿಕೆ 29’ ಸಿನಿಮಾದಲ್ಲಿ ರಾಜ್‌ ಬಿ ಶೆಟ್ಟಿ ನಟಿಸುವುದು ಬಹುತೇಕ ಖಚಿತವಾಗಿದೆ. ಜಡೇಶ್ ಹಂಪಿ ನಿರ್ದೇಶನದ ಈ ಸಿನಿಮಾ ಶಿವರಾಮ ಕಾರಂತರ ‘ಚೋಮನ ದುಡಿ’ಯಿಂದ ಪ್ರೇರಣೆ ಪಡೆದಿದೆ.  ದುನಿಯಾ ವಿಜಯ್ 29ನೇ ಸಿನಿಮಾ ಇತ್ತೀಚೆಗಷ್ಟೇ ಸೆಟ್ಟೇರಿತ್ತು. ಆ ಸಿನಿಮಾದಲ್ಲಿ ರಚಿತಾ ರಾಮ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಾರೆ. ಈ ಚಿತ್ರದ ಮತ್ತೊಂದು ಪ್ರಮುಖ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ ನಟಿಸಲಿದ್ದಾರೆ ಎನ್ನಲಾಗಿದೆ.

ಸದ್ಯಕ್ಕೆ ಪ್ರೊಡಕ್ಷನ್ ನಂ 2. ಟೈಟಲ್ ಮೂಲಕ ಸಿನಿಮಾ ಚಿತ್ರೀಕರಣ ಚಾಲನೆ ದೊರೆತಿದೆ. ಸತ್ಯ ಪ್ರಕಾಶ್ ನಿರ್ಮಾಪಕರಾಗಿ, ಸಹ ನಿರ್ಮಾಪಕರಾಗಿ ಸೂರಜ್ ಗೌಡ ಇದ್ದಾರೆ. ಕೋಲಾರ ಸುತ್ತಮುತ್ತ ಸಿನಿಮಾದ ಕಥೆ ನಡೆಯಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ನೈಜ್ಯ ಕಥೆಯನ್ನು ಆಧರಿಸಿದ ಸಿನಿಮಾ ಎಂದು ಹೇಳಿಕೊಂಡಿದೆ. ಕೋಲಾರ ಭಾಷೆಯಲ್ಲಿ ಚಿತ್ರದ ಡೈಲಾಗ್ ಇರಲಿದೆ. ಇದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಕೋಟ ಶಿವರಾಮ ಕಾರಂತರು ಬರೆದಿರುವ ‘ಚೋಮನ ದುಡಿ’ ಕಾದಂಬರಿ ಪ್ರೇರಿತ ಸಿನಿಮಾ ಎನ್ನಲಾಗಿದೆ. ಜಡೇಶ ಹಂಪಿ ಈ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಜಡೇಶ್‍ ಹಂಪಿ ಅವರಿಗೆ ನಿರ್ದೇಶನದಲ್ಲಿ ಅನುಭವ ಇದೆ. ‘ರಾಜಹಂಸ’, ‘ಜಂಟಲ್‍ಮ್ಯಾನ್‍’, ‘ಗುರು ಶಿಷ್ಯರು’ ಸಿನಿಮಾಗಳನ್ನು ಅವರು ನಿರ್ದೇಶಿಸಿದ್ದರು. ದುನಿಯಾ ವಿಜಯ್ ಮುಂದಿನ ಸಿನಿಮಾಗೆ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Jyothi Rai: ಕೆಟ್ಟ ಮೆಸೇಜ್‌ ಮಾಡಿದ 1 ಸಾವಿರ ಅಕೌಂಟ್‌ಅನ್ನು ಬ್ಲಾಕ್‌ ಮಾಡಿದ ಜ್ಯೋತಿ ರೈ!

Jyothi Rai: ತಮ್ಮ ಪ್ರೊಫೈಲ್‌ಗೆ ಬರುತ್ತಿದ್ದ ಅಶ್ಲೀಲ ಹಾಗೂ ಕೆಟ್ಟ ಮೆಸೇಜ್‌ಗಳಿಂದ ಹೈರಾಣಾಗಿದ್ದ ಜ್ಯೋತಿ ರೈ ದೊಡ್ಡ ನಿರ್ಧಾರ ಮಾಡಿದ್ದಾರೆ.

VISTARANEWS.COM


on

jyothi poorvaaj jyothi rai says she blocked 1 thousand accounts
Koo

ನಟಿ ಜ್ಯೋತಿ ರೈ ಇತ್ತೀಚೆಗೆ ಸಖತ್‌ ಹಾಟ್‌ ಫೋಟೊಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಜ್ಯೋತಿ ಪೂರ್ವಜ್‌ ಅಲಿಯಾಸ್‌ ಜ್ಯೋತಿ ರೈ ಇದೀಗ ಕೆಟ್ಟದ್ದಾಗಿ ಕಮೆಂಟ್‌ ಮಾಡುವರಿಗೆ ಸಖತ್‌ ಕ್ಲಾಸ್‌ ತೆಗದುಕೊಂಡಿದ್ದಾರೆ.

ಕೆಲ ತಿಂಗಳ ಹಿಂದೆ ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದವು.

ತಮ್ಮ ಪ್ರೊಫೈಲ್‌ಗೆ ಬರುತ್ತಿದ್ದ ಅಶ್ಲೀಲ ಹಾಗೂ ಕೆಟ್ಟ ಮೆಸೇಜ್‌ಗಳಿಂದ ಹೈರಾಣಾಗಿದ್ದ ಜ್ಯೋತಿ ರೈ ದೊಡ್ಡ ನಿರ್ಧಾರ ಮಾಡಿದ್ದಾರೆ.

ಇದನ್ನೂ ಓದಿ: Golden Star Ganesh: ಹೇಗಿದೆ “ಕೃಷ್ಣಂ ಪ್ರಣಯ ಸಖಿ” ಸಿನಿಮಾ? ಫ್ಯಾನ್ಸ್‌ ಹೇಳೋದೇನು?

‘ಇನ್‌ಸ್ಟಾಗ್ರಾಮ್‌ ಬ್ಲಾಕ್‌ ಫೀಚರ್‌ಅನ್ನು ನಾನು ಉತ್ತಮವಾಗಿ ಬಳಸಿಕೊಂಡಿದ್ದೇನೆ. ಕಮೆಂಟ್‌ ಸೆಕ್ಷನ್‌ನಲ್ಲಿ ಕೆಟ್ಟ ಹಾಗೂ ಅಗೌರವದಿಂದ ಮೆಸೇಜ್‌ ಮಾಡುವ ಮೂಲಕ ಕೆಟ್ಟ ವರ್ತನೆ ತೋರಿದ್ದ 1 ಸಾವಿರಕ್ಕೂ ಅಧಿಕ ವೈಯಕ್ತಿಕ ಖಾತೆಗಳನ್ನು ನಾನು ತೆಗೆದುಹಾಕಿದ್ದೇನೆ. ಅವರೊಂದಿಗೆ ಮಾತುಕತೆ ಮಾಡುವ ಮೂಲಕ ಚರ್ಚೆ ಮಾಡೋದು ನನಗೆ ಇಷ್ಟವಿಲ್ಲ. ಧನಾತ್ಮಕ ಪರಿಸರವನ್ನು ರಚನೆ ಮಾಡಲು ನೀವೂ ಕೂಡ ಇಂಥ ಟೂಲ್‌ಗಳನ್ನು ಬಳಕೆ ಮಾಡಿ. ಈ ವಿಚಾರದಲ್ಲಿ ಯಾರಾದರೂ ಕಲಿಯಬೇಕು ಎಂದಿದ್ದರೆ, ಅದಕ್ಕೆ ನಾನು ಸ್ವಾಗತ ನೀಡುತ್ತಿದ್ದೇನೆ.’ ಎಂದು ಅವರು ಬರೆದುಕೊಂಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Pramod Shetty: ‘ಲಾಫಿಂಗ್ ಬುದ್ಧ’ ಟ್ರೈಲರ್‌ ಔಟ್‌; ಕಚಗುಳಿ ಇಡುವಂತಿದೆ ಪೊಲೀಸಪ್ಪನ ಕತೆ!

Pramod Shetty: ಒಂದು ಕಡೆ ರಿಷಬ್ ಶೆಟ್ಟಿ ತಮ್ಮ ನಿರ್ದೇಶನದ ಕಾಂತಾರ 2 ಸಿನಿಮಾದ ಚಿತ್ರೀಕರಣಕ್ಕೆ ರೆಡಿ ಆಗುತ್ತಿದ್ದರೆ, ಮತ್ತೊಂದು ಕಡೆ ತಮ್ಮದೇ ನಿರ್ಮಾಣದ ಲಾಫಿಂಗ್ ಬುದ್ಧ ಸಿನಿಮಾ ರಿಲೀಸ್‌ಗೆ ರೆಡಿಯಾಗಿದ್ದಾರೆ. ಸಿನಿಮಾ ಆಗಸ್ಟ್ 30ಕ್ಕೆ ಬಿಡುಗಡೆ ಆಗಲಿದೆ.ಲಾಫಿಂಗ್ ಬುದ್ಧ’ ಸಿನಿಮಾ ಭದ್ರಾವತಿ, ಕಾರ್ಗಲ್ ಹಾಗೂ ಬೆಂಗಳೂರಿನಲ್ಲಿ ಶೂಟಿಂಗ್ ಆಗಿತ್ತು.

VISTARANEWS.COM


on

Laughing Buddha Trailer out Pramod Shetty Diganth Rishab Shetty
Koo

ಬೆಂಗಳೂರು: ಪ್ರಮೋದ್ ಶೆಟ್ಟಿ (Pramod Shetty) ಅವರು ‘ಲಾಫಿಂಗ್ ಬುದ್ಧ’ ನಟಿಸಿ, ರಿಷಬ್ ಶೆಟ್ಟಿ ನಿರ್ದೇಶನ ಮಾಡಿರುವ ‘ಲಾಫಿಂಗ್ ಬುದ್ಧ’ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ. ಸಿನಿಮಾ ಬಿಡುಗಡೆ ದಿನಾಂಕ ಸಹ ಘೋಷಣೆ ಆಗಿದೆ. ಪೊಲೀಸ್ ಠಾಣೆ, ಪೊಲೀಸ್ ಠಾಣೆಯ ಕಾನ್​ಸ್ಟೆಬಲ್​ಗಳು, ಅವರ ಸುತ್ತ ನಡೆಯುವ ಘಟನೆಗಳು ಇಂಥಹಾ ಸರಳ ಕತೆಯನ್ನು ಹೊಂದಿರುವ ಈ ಸಿನಿಮಾ ಟ್ರೈಲರ್‌ಗೆ ಮೆಚ್ಚುಗೆ ವ್ಯಕ್ತವಾಗಿದೆ.

ಒಂದು ಕಡೆ ರಿಷಬ್ ಶೆಟ್ಟಿ ತಮ್ಮ ನಿರ್ದೇಶನದ ಕಾಂತಾರ 2 ಸಿನಿಮಾದ ಚಿತ್ರೀಕರಣಕ್ಕೆ ರೆಡಿ ಆಗುತ್ತಿದ್ದರೆ, ಮತ್ತೊಂದು ಕಡೆ ತಮ್ಮದೇ ನಿರ್ಮಾಣದ ಲಾಫಿಂಗ್ ಬುದ್ಧ ಸಿನಿಮಾ ರಿಲೀಸ್‌ಗೆ ರೆಡಿಯಾಗಿದ್ದಾರೆ. ಸಿನಿಮಾ ಆಗಸ್ಟ್ 30ಕ್ಕೆ ಬಿಡುಗಡೆ ಆಗಲಿದೆ.ಲಾಫಿಂಗ್ ಬುದ್ಧ’ ಸಿನಿಮಾ ಭದ್ರಾವತಿ, ಕಾರ್ಗಲ್ ಹಾಗೂ ಬೆಂಗಳೂರಿನಲ್ಲಿ ಶೂಟಿಂಗ್ ಆಗಿತ್ತು. ಇದೊಂದು ಕಾಮಿಡಿ ಹಾಗೂ ಡ್ರಾಮಾ ಶೈಲಿಯ ಸಿನಿಮಾವಾಗಿದ್ದು, ಎಂ. ಭರತ್ ರಾಜ್ ನಿರ್ದೇಶಿಸಿದ್ದಾರೆ. ಪ್ರಮೋದ್ ಶೆಟ್ಟಿ ಬಹಳ ದಿನಗಳ ಬಳಿಕ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.‘ಲಾಫಿಂಗ್ ಬುದ್ಧ’ ಸಿನಿಮಾದ ಪ್ರಮುಖ ಪಾತ್ರದಲ್ಲಿ ಪ್ರಮೋದ್ ಶೆಟ್ಟಿ ಹಾಗೂ ತೇಜು ಬೆಳವಾಡಿ ನಟಿಸುತ್ತಾರೆ.

ಇದನ್ನೂ ಓದಿ: Pramod Shetty: ರಿಷಬ್ ಶೆಟ್ಟಿ ನಿರ್ಮಾಣದ ‘ಲಾಫಿಂಗ್ ಬುದ್ಧ’ ಸಿನಿಮಾ ಶೂಟಿಂಗ್ ಕಂಪ್ಲೀಟ್‌

ತಮ್ಮ ದಢೂತಿ ದೇಹದಿಂದ ತಮಾಷೆಗೆ ಒಳಪಡುವ ಮಾತ್ರವಲ್ಲದೆ, ಹಿರಿಯ ಅಧಿಕಾರಿಗಳಿಂದ ಟೀಕೆ, ನಿಂದನೆಗೆ ಗುರಿಯಾಗುವ ಕಾನ್​ಸ್ಟೆಬಲ್ ಅದರ ಮಧ್ಯೆ ಠಾಣೆಯಲ್ಲಿ ನಡೆಯುವ ಒಂದು ಭೀಕರ ಘಟನೆ ಅದರಿಂದ ಇಡೀ ಪೊಲೀಸ್ ಠಾಣೆಯ ಸಿಬ್ಬಂದಿಯ ಮೇಲಾಗುವ ಪರಿಣಾಮ ಈವೆಲ್ಲವೂ ಕಟ್ಟಿಕೊಡುವಂತಿದೆ ಟ್ರೈಲರ್‌. ಪ್ರಮೋದ್ ಶೆಟ್ಟಿ ನಾಯಕ ನಟರಾಗಿ ನಟಿಸುತ್ತಿರುವ ಮೊದಲ ಸಿನಿಮಾ ಇದು. ಪ್ರಮೋದ್ ಶೆಟ್ಟಿ ಜೊತೆಗೆ ತೇಜು ಬೆಳವಾಡಿ, ಸುಂದರ್ ರಾಜ್ ಇನ್ನಿತರರು ನಟಿಸಿದ್ದಾರೆ. ಸಿನಿಮಾದಲ್ಲಿ ನಟ ದಿಗಂತ್ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

ವಿಷ್ಣು ವಿಜಯ್ ಸಂಗೀತ ನಿರ್ದೇಶನ, ಚಂದ್ರಶೇಖರ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ‘ಲಾಫಿಂಗ್ ಬುದ್ಧ’ ಚಿತ್ರಕ್ಕಿದೆ. ಇದೊಂದು ಹೊಸ ಬಗೆಯ ಕಥೆಯನ್ನು ಹೊಂದಿರುವ ಸಿನಿಮಾವಾಗಿದೆ. ಕನ್ನಡದಲ್ಲಿ ‘ತೂತು ಮಡಿಕೆ’ ಸಿನಿಮಾ ನಿರ್ಮಾಣ ಮಾಡಿ ಮೆಚ್ಚುಗೆ ಗಳಿಸಿದ್ದ ನಿರ್ಮಾಪಕ ಮಧುಸೂಧನ್ ರಾವ್ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣ ಮಾಡುವುದಕ್ಕೆ ರೆಡಿಯಾಗಿದ್ದಾಗಿ ಸುದ್ದಿಯಾಗಿತ್ತು.

Continue Reading
Advertisement
physical abuse
ವಿದೇಶ3 mins ago

Physical abuse: ಐದು ದಿನಗಳಿಂದ ನಿರಂತರ ಗ್ಯಾಂಗ್‌ರೇಪ್‌; ಕೈ-ಕಾಲು ಕಟ್ಟಿದ ಸ್ಥಿತಿಯಲ್ಲಿ ಬೆಲ್ಜಿಯಂ ಮಹಿಳೆ ರಸ್ತೆ ಬದಿಯಲ್ಲಿ ಪತ್ತೆ

Independence Day 2024
ದೇಶ10 mins ago

Independence Day 2024: ಹೊಸ ದಾಖಲೆ ಸೃಷ್ಟಿಸಿದೆ ಕೆಂಪುಕೋಟೆಯಲ್ಲಿನ ಮೋದಿ ಭಾಷಣದ ಅವಧಿ!

Accident case
ರಾಯಚೂರು34 mins ago

Accident Case : ಮಹಿಳೆ ಮೇಲೆ ಮಣ್ಣಿನ ರಾಶಿ ಹಾಕಿದ ಜೆಸಿಬಿ ಚಾಲಕ; ಬಯಲು ಶೌಚಕ್ಕೆ ಹೋದಾಕೆ ಉಸಿರುಗಟ್ಟಿ ಸಾವು!

Independence Day 2024
ಕರ್ನಾಟಕ34 mins ago

Independence Day 2024: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮೆಚ್ಚುಗೆ

Priyanka Chopra Nick Jonas Kisses In a Steamy Video
ಬಾಲಿವುಡ್37 mins ago

Priyanka Chopra: ಲಿಪ್‌ ಲಾಕ್‌ ಫೋಟೊ ಹಂಚಿಕೊಂಡ ನಿಕ್ ಜೋನಾಸ್ – ಪ್ರಿಯಾಂಕಾ!

independence day 2024
ಚಿಕ್ಕಬಳ್ಳಾಪುರ1 hour ago

Independence Day 2024 : ಚಿಕ್ಕಬಳ್ಳಾಪುರ, ರಾಯಚೂರಿನಲ್ಲಿ ಧ್ವಜಾರೋಹಣ ವೇಳೆ ಕುಸಿದು ಬಿದ್ದ ಮಕ್ಕಳು, ಪೊಲೀಸರು

Independence Day 2024
ಕರ್ನಾಟಕ1 hour ago

ಭೂಕುಸಿತ ಸಂಭವಿಸಬಹುದಾದ 1,351 ಗ್ರಾಮಗಳಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ; ಸ್ವಾತಂತ್ರೋತ್ಸವ ಭಾಷಣದಲ್ಲಿ ಸಿದ್ದರಾಮಯ್ಯ

Raj B Shetty mass entry to Bollywood The actor will make a splash with Bobby Deol
ಬಾಲಿವುಡ್2 hours ago

Raj B Shetty: ಬಾಲಿವುಡ್‌ಗೆ ಮಾಸ್‌ ಎಂಟ್ರಿ ಕೊಟ್ಟ ರಾಜ್‌ ಬಿ ಶೆಟ್ಟಿ; ಬಾಬಿ ಡಿಯೋಲ್ ಜತೆ ಅಬ್ಬರಿಸಲಿದ್ದಾರೆ ನಟ!

Independence Day 2024
ದೇಶ2 hours ago

Independence Day 2024: 2036ರಲ್ಲಿ ಭಾರತದಲ್ಲೇ ಒಲಿಂಪಿಕ್ಸ್ ಕ್ರೀಡಾಕೂಟ? ಪ್ರಧಾನಿ ಮೋದಿ ಮಹತ್ವದ ಘೋಷಣೆ

Self Harming
ಹಾಸನ2 hours ago

Self Harming : ಮಗಳೊಂದಿಗೆ ಹೇಮಾವತಿ ನಾಲೆಗೆ ಹಾರಿ ದಂಪತಿ ಆತ್ಮಹತ್ಯೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ7 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ7 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ7 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌