Independence Day 2024: 2036ರಲ್ಲಿ ಭಾರತದಲ್ಲೇ ಒಲಿಂಪಿಕ್ಸ್ ಕ್ರೀಡಾಕೂಟ? ಪ್ರಧಾನಿ ಮೋದಿ ಮಹತ್ವದ ಘೋಷಣೆ - Vistara News

ದೇಶ

Independence Day 2024: 2036ರಲ್ಲಿ ಭಾರತದಲ್ಲೇ ಒಲಿಂಪಿಕ್ಸ್ ಕ್ರೀಡಾಕೂಟ? ಪ್ರಧಾನಿ ಮೋದಿ ಮಹತ್ವದ ಘೋಷಣೆ

Independence Day 2024: ಭಾರತವು ಭಾರತದಲ್ಲಿ ಜಿ 20 ಶೃಂಗಸಭೆಯನ್ನು ಆಯೋಜಿಸಿದೆ ಮತ್ತು ರಾಷ್ಟ್ರದಾದ್ಯಂತ 200 ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಭಾರತವು ದೊಡ್ಡ ಕಾರ್ಯಕ್ರಮಗಳನ್ನು ಆಯೋಜಿಸುವ ಸಾಮರ್ಥ್ಯವನ್ನು ಹೊಂದಿದೆ ಎಂಬುದನ್ನು ಇದು ಸಾಬೀತುಪಡಿಸಿದೆ. ಇದು ಸಾಬೀತಾಗಿರುವಂತೆ, ಭಾರತದಲ್ಲಿ 2036 ರ ಒಲಿಂಪಿಕ್ಸ್ ಅನ್ನು ಆಯೋಜಿಸುವುದು ಈಗ ಭಾರತದ ಕನಸು, ಮತ್ತು ನಾವು ಅದಕ್ಕಾಗಿ ತಯಾರಿ ನಡೆಸುತ್ತಿದ್ದಾರೆ ಎಂದು ಪ್ರಧಾನಿ ಹೇಳಿದರು

VISTARANEWS.COM


on

Independence Day 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: 78ನೇ ಸ್ವಾತಂತ್ರ್ಯೋತ್ಸವ(Independence Day 2024) ಸಂಭ್ರಮದ ಮಧ್ಯೆಯೇ 2036ರಲ್ಲಿ ಒಲಿಂಪಿಕ್‌ ಕ್ರೀಡಾಕೂಟ(Olympics)ವನ್ನು ಆಯೋಜಿಸುವ ಕನಸು ಭಾರತ ಹೊಂದಿರುವುದಾಗಿ ಪ್ರಧಾನಿ ನರೇಂದ್ರ ಮೋದಿ(PM Narendra Modi) ಮಹತ್ವದ ಘೋಷಣೆ ಹೊರಡಿಸಿದ್ದಾರೆ. ಭಾರತದಲ್ಲಿ ಅತಿದೊಡ್ಡ ಕ್ರೋಡಾಕೂಟ ಆಯೋಜನೆಗೆ ದೇಶ ತಯಾರಾಗುತ್ತಿದೆ. ಮುಂದಿನ ದಿನಗಳಲ್ಲಿ ನಡೆಯಲಿರುವ ಪ್ಯಾರ ಒಲಿಂಪಿಕ್ಸ್‌ ಕ್ರೀಡಾಪಟುಗಳಿಗೆ ಶುಭ ಹಾರೈಸುತ್ತೇನೆ ಎಂದಿದ್ದಾರೆ.

“ಇಂದು, ನಮ್ಮೊಂದಿಗೆ ಒಲಿಂಪಿಕ್ಸ್‌ನಲ್ಲಿ ಭಾರತದ ಧ್ವಜವನ್ನು ಎತ್ತರಕ್ಕೆ ಹಾರಿಸಿದ ಯುವಕರೂ ಇದ್ದಾರೆ. 140 ಕೋಟಿ ದೇಶವಾಸಿಗಳ ಪರವಾಗಿ, ನಾನು ನಮ್ಮ ಎಲ್ಲಾ ಕ್ರೀಡಾಪಟುಗಳು ಮತ್ತು ಆಟಗಾರರನ್ನು ಅಭಿನಂದಿಸುತ್ತೇನೆ. ಮುಂದಿನ ದಿನಗಳಲ್ಲಿ, ಭಾರತದ ಬೃಹತ್ ಪಡೆ ಪ್ಯಾರಿಸ್‌ಗೆ ತೆರಳಲಿದೆ. ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸಲು ನಾನು ನಮ್ಮ ಎಲ್ಲಾ ಪ್ಯಾರಾಲಿಂಪಿಯನ್‌ಗಳಿಗೆ ಶುಭ ಹಾರೈಸುತ್ತೇನೆ.” ಪ್ರಧಾನಿ ಮೋದಿಯವರು ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಹೇಳಿದರು.

“ಭಾರತವು ಭಾರತದಲ್ಲಿ ಜಿ 20 ಶೃಂಗಸಭೆಯನ್ನು ಆಯೋಜಿಸಿದೆ ಮತ್ತು ರಾಷ್ಟ್ರದಾದ್ಯಂತ 200 ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಭಾರತವು ದೊಡ್ಡ ಕಾರ್ಯಕ್ರಮಗಳನ್ನು ಆಯೋಜಿಸುವ ಸಾಮರ್ಥ್ಯವನ್ನು ಹೊಂದಿದೆ ಎಂಬುದನ್ನು ಇದು ಸಾಬೀತುಪಡಿಸಿದೆ. ಇದು ಸಾಬೀತಾಗಿರುವಂತೆ, ಭಾರತದಲ್ಲಿ 2036 ರ ಒಲಿಂಪಿಕ್ಸ್ ಅನ್ನು ಆಯೋಜಿಸುವುದು ಈಗ ಭಾರತದ ಕನಸು, ಮತ್ತು ನಾವು ಅದಕ್ಕಾಗಿ ತಯಾರಿ ನಡೆಸುತ್ತಿದ್ದಾರೆ ಎಂದು ಪ್ರಧಾನಿ ಹೇಳಿದರು.

ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಕೋಲ್ಕತ್ತಾದಲ್ಲಿ ನಡೆದಿರುವ ಟ್ರೈನಿ ವೈದ್ಯೆ ಅತ್ಯಾಚಾರ ಕೊಲೆ ಪ್ರಕರಣದ ಬಗ್ಗೆ ಪ್ರಸ್ತಾಪಿಸಿ ಆಕ್ರೋಶ ಹೊರಹಾಕಿದ್ದಾರೆ. ನಮ್ಮ ಮಾತೆ ಸಹೋದರಿಯರ ಮೇಲೆ ಅತ್ಯಾಚಾರ ನಡೆಯುತ್ತಿದೆ. ಪಾಪಿಗಳನ್ನು ಗಲ್ಲಿಗೇರಿಸಬೇಕು. ಆಗ ಮಾತ್ರ ಜನರಲ್ಲಿ ಅಪರಾಧಗಳ ಬಗ್ಗೆ ಭಯ ಮೂಡಲು ಸಾಧ್ಯ. ದೇಶದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಬಹಳ ಉಗ್ರವಾಗಿ ಧ್ವನಿ ಎತ್ತಬೇಕಿದೆ. ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳ ತನಿಖೆ ನಡೆಸಿ ತಪ್ಪಿತಸ್ಥರನ್ನು ವಿಳಂಬ ಮಾಡದೆ ಶಿಕ್ಷಿಸಬೇಕು ಎಂದರು.

ಇದೇ ವೇಳೆ ಅವರು ಕಳೆದ ಕೆಲವು ತಿಂಗಳಿಂದ ಬಾಂಗ್ಲಾದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರದ ಬಗ್ಗೆ ಪ್ರಸ್ತಾಪಿಸಿದರು. ಬಾಂಗ್ಲಾದೇಶದ ಶೀಘ್ರದಲ್ಲೇ ಸಹಜ ಸ್ಥಿತಿ ಬರುತ್ತದೆ ಎಂಬ ಭರವಸೆ ಇದೆ. ಅದಕ್ಕೆ ಬೇಕಾದ ಎಲ್ಲಾ ಸಹಕಾರವನ್ನು ಭಾರತ ನೀಡಲಿದೆ ಎಂದು ಹೇಳಿದರು.

ಇದನ್ನೂ ಓದಿ:PM Narendra Modi: ಕೆಂಪುಕೋಟೆಯ ಕಾರ್ಯಕ್ರಮಕ್ಕೆ ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

SBI Lending rate: SBI ಲೆಂಡಿಂಗ್‌ ದರದಲ್ಲಿ ಮತ್ತೆ ಏರಿಕೆ; ದುಬಾರಿಯಾಗಲಿದೆ EMI

SBI Lending rate: ಪರಿಷ್ಕೃತ ದರಗಳು ಆಗಸ್ಟ್ 14, 2024 ರಿಂದ ಜಾರಿಗೆ ಬರುತ್ತವೆ. SBI ತನ್ನ MCLR 8.10% ರಿಂದ 8.20% ಕ್ಕೆ ಏರಿದೆ. ಮಾಸಿಕ MCLR 8.35% ರಿಂದ 8.45% ಕ್ಕೆ ಏರಿದೆ ಮತ್ತು 3 ತಿಂಗಳ MCLR ಸಹ 10 ಬೇಸಿಸ್ ಪಾಯಿಂಟ್‌ಗಳಿಂದ 8.40% ರಿಂದ 8.50% ಕ್ಕೆ ಏರಿದೆ.

VISTARANEWS.COM


on

Sbi Lending Rate
Koo

ನವದೆಹಲಿ: ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ(SBI Lending rate) ತನ್ನ ಗ್ರಾಹಕರಿಗೆ ಬಿಗ್‌ ಶಾಕ್‌ ಕೊಟ್ಟಿದೆ. ಇನ್ನು ಮುಂದೆ ಎಸ್‌ಬಿಐನ ಸಾಲ ದುಬಾರಿಯಾಗಲಿದೆ. ಅಂದರೆ ಎಸ್‌ಬಿಐ ತಮ್ಮ ಮಾರ್ಜಿನಲ್‌ ಕಾಸ್ಟ್‌ ಆಫ್‌ ಲೆಂಡಿಂಗ್‌ ರೇಟ್‌(MCLR) ಅನ್ನು 10 ಪಾಯಿಂಟ್‌ ಹೆಚ್ಚಿಸಿದೆ. ಹೀಗಾಗಿ ಸಾಲದ ಮೇಲಿನ ದರ ಏರಿಕೆ ಆಗಲಿದ್ದು, ಇದು ನೇರವಾಗಿ ತಿಂಗಳ EMI ಮೇಲೆ ಪರಿಣಾಮ ಬೀಳಲಿದೆ.

ಪರಿಷ್ಕೃತ ದರಗಳು ಆಗಸ್ಟ್ 14, 2024 ರಿಂದ ಜಾರಿಗೆ ಬರುತ್ತವೆ. SBI ತನ್ನ MCLR 8.10% ರಿಂದ 8.20% ಕ್ಕೆ ಏರಿದೆ. ಮಾಸಿಕ MCLR 8.35% ರಿಂದ 8.45% ಕ್ಕೆ ಏರಿದೆ ಮತ್ತು 3 ತಿಂಗಳ MCLR ಸಹ 10 ಬೇಸಿಸ್ ಪಾಯಿಂಟ್‌ಗಳಿಂದ 8.40% ರಿಂದ 8.50% ಕ್ಕೆ ಏರಿದೆ.

ಸಾಲಗಳ ಮೇಲಿನ ಬಡ್ಡಿದರಗಳು ಇದೇ ಅಳತೆಯಿಂದ ಹೆಚ್ಚಾಗುವ ಸಾಧ್ಯತೆಯಿದೆ ಮತ್ತು ಲಿಂಕ್ ಮಾಡಿದ ಸಾಲಗಳ ಮೇಲೆ EMI ಗಳು ಹೆಚ್ಚಾಗುತ್ತವೆ. ಭಾರತದಲ್ಲಿ ವ್ಯಕ್ತಿಗಳು ಮತ್ತು ವ್ಯವಹಾರಗಳಿಗೆ ಎರವಲು ವೆಚ್ಚವನ್ನು ನಿರ್ಧರಿಸುವಲ್ಲಿ MCLR ನಿರ್ಣಾಯಕ ಅಂಶವಾಗಿದೆ. MCLR ಮೂಲಭೂತವಾಗಿ ಬ್ಯಾಂಕ್ ಸಾಲದ ಮೇಲೆ ವಿಧಿಸಬಹುದಾದ ಕನಿಷ್ಠ ಬಡ್ಡಿ ದರವಾಗಿದೆ. ಬ್ಯಾಂಕಿನ ನಿಧಿಗಳ ವೆಚ್ಚ, ನಿರ್ವಹಣಾ ವೆಚ್ಚಗಳು ಮತ್ತು ನಿರ್ದಿಷ್ಟ ಲಾಭಾಂಶವನ್ನು ಪರಿಗಣಿಸಿ ಈ ದರವನ್ನು ನಿರ್ಧರಿಸಲಾಗುತ್ತದೆ.

ಜುಲೈನಲ್ಲೂ ಏರಿಕೆ ಆಗಿತ್ತು

ಎಸ್‌ಬಿಐ ಜುಲೈನಲ್ಲೂ ತನ್ನ ಮಾರ್ಜಿನಲ್‌ ಕಾಸ್ಟ್‌ ಆಫ್‌ ಲೆಂಡಿಂಗ್‌ ರೇಟ್‌(MCLR) ಅನ್ನು 5-10 ಪಾಯಿಂಟ್‌ ಹೆಚ್ಚಿಸಿತ್ತು. ಭಾರತದ ಅತಿದೊಡ್ಡ ಬ್ಯಾಂಕ್, ಎಸ್‌ಬಿಐ, 1 ವರ್ಷದ ಅವಧಿಯ ಸಾಲದ ಮೇಲಿನ ಎಂಸಿಎಲ್‌ಆರ್ ಅನ್ನು 10 ಬೇಸಿಸ್ ಪಾಯಿಂಟ್‌ಗಳಷ್ಟು ಏರಿಕೆ ಮಾಡಿದ್ದು, ಶೇಕಡಾ 8.85 ಕ್ಕೆ ಏರಿಕೆ ಆಗಿದೆ. ಅಂತೆಯೇ, 3-ತಿಂಗಳು, 6-ತಿಂಗಳು ಮತ್ತು 2-ವರ್ಷದ ಸಾಲದ ಅವಧಿಗೆ MCLR ಅನ್ನು ತಲಾ 10 ಮೂಲ ಅಂಕಗಳನ್ನು ಹೆಚ್ಚಿಸಲಾಗಿದೆ, ಕ್ರಮವಾಗಿ 8.4 ಶೇಕಡಾ, 8.75 ಶೇಕಡಾ ಮತ್ತು 8.95 ಶೇಕಡಾವನ್ನು ತಲುಪಿತ್ತು.

ಇದಕ್ಕೂ ಮೊದಲು, ಜೂನ್ ಮಧ್ಯದಲ್ಲಿ ಎಸ್‌ಬಿಐ ವಿವಿಧ ಅವಧಿಗಳಿಗೆ ಎಂಸಿಎಲ್‌ಆರ್ ಅನ್ನು 10 ಬೇಸಿಸ್ ಪಾಯಿಂಟ್‌ಗಳಿಂದ ಹೆಚ್ಚಿಸಿತ್ತು, ಆ ಸಮಯದಲ್ಲಿ 1 ವರ್ಷದ ಸಾಲಗಳಿಗೆ ಬೆಂಚ್‌ಮಾರ್ಕ್ ದರವನ್ನು ಶೇಕಡಾ 8.75ಕ್ಕೆ ಏರಿಕೆ ಮಾಡಿತ್ತು.

ಇದನ್ನೂ ಓದಿ: Sbi Recruitment: ಎಸ್‌ಬಿಐನಲ್ಲಿ 1,040 ಎಸ್‌ಸಿಒ ಹುದ್ದೆಗಳಿಗೆ ಅರ್ಜಿ ಅಹ್ವಾನ

Continue Reading

ದೇಶ

Independence Day 2024: ಹೊಸ ದಾಖಲೆ ಸೃಷ್ಟಿಸಿದೆ ಕೆಂಪುಕೋಟೆಯಲ್ಲಿನ ಮೋದಿ ಭಾಷಣದ ಅವಧಿ!

ಭಾರತದ 78 ನೇ ಸ್ವಾತಂತ್ರ್ಯ ದಿನಾಚರಣೆಯ (Independence Day 2024) ಸಂದರ್ಭದಲ್ಲಿ ಕೆಂಪುಕೋಟೆಯಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು 98 ನಿಮಿಷಗಳ ಕಾಲ ಭಾಷಣ ಮಾಡಿದ್ದಾರೆ. ಇದು ಅವರ 2016ರ ಭಾಷಣದ ದಾಖಲೆಯಾಗಿದ್ದ ಹಿಂದಿನ 96 ನಿಮಿಷಗಳ ದಾಖಲೆಯನ್ನು ಮುರಿದಿದೆ.

VISTARANEWS.COM


on

By

Independence Day 2024
Koo

ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ (Prime minister) ದಾಖಲೆ ಬರೆದಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಈ ಬಾರಿಯ ಸ್ವಾತಂತ್ರ್ಯ ದಿನದ (Independence Day 2024) ಭಾಷಣದಲ್ಲಿಯೂ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ. ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು (Jawaharlal Nehru) ಮತ್ತು ಇಂದಿರಾ ಗಾಂಧಿಯವರ (Indira Gandhi) ಅನಂತರ ಕೆಂಪು ಕೋಟೆಯಲ್ಲಿ ಸತತ 11 ಸ್ವಾತಂತ್ರ್ಯ ದಿನದ ಭಾಷಣ ಮಾಡಿರುವ ಮೂರನೇ ಭಾರತೀಯ ಪ್ರಧಾನಿಯಾದ ಅವರು, ತಮ್ಮ 11 ನೇ ಭಾಷಣವನ್ನು ಸುದೀರ್ಘವಾಗಿ ನಡೆಸಿದ ದಾಖಲೆ ನಿರ್ಮಿಸಿದರು.

ಭಾರತದ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆಯಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು 98 ನಿಮಿಷಗಳ ಕಾಲ ಭಾಷಣ ಮಾಡಿದ್ದಾರೆ. ಇದು ಅವರ 2016ರ ಭಾಷಣದ ದಾಖಲೆಯಾಗಿದ್ದ ಹಿಂದಿನ 96 ನಿಮಿಷಗಳ ದಾಖಲೆಯನ್ನು ಮುರಿದಿದೆ. ಮೋದಿಯವರ ಸ್ವಾತಂತ್ರ್ಯ ದಿನದ ಭಾಷಣಗಳು ಸರಾಸರಿ 82 ನಿಮಿಷಗಳು. ಇದು ಭಾರತದ ಇತಿಹಾಸದಲ್ಲೇ ಇತರ ಪ್ರಧಾನ ಮಂತ್ರಿಗಳಿಗಿಂತ ಹೆಚ್ಚು.

ನೆಹರೂ 72, ಗುಜ್ರಾಲ್ 71 ನಿಮಿಷದ ದಾಖಲೆ

ಮೋದಿಯವರಿಗಿಂತ ಮೊದಲು ಜವಾಹರಲಾಲ್ ನೆಹರು ಅವರು 72 ನಿಮಿಷಗಳ ಸುದೀರ್ಘ ಭಾಷಣವನ್ನು ಮಾಡಿದ್ದರು. ಮಾಜಿ ಪ್ರಧಾನಿ ಐ.ಕೆ. ಗುಜ್ರಾಲ್ ಅವರು 1997ರಲ್ಲಿ 71 ನಿಮಿಷಗಳ ಕಾಲ ಕೆಂಪುಕೋಟೆಯಲ್ಲಿ ಭಾಷಣ ಮಾಡಿದ್ದರು.

ಚಿಕ್ಕ ಭಾಷಣ ಅವಧಿ

ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಇಂದಿರಾಗಾಂಧಿ ಅವರು 1954 ಮತ್ತು 1966 ರಲ್ಲಿ ಕ್ರಮವಾಗಿ 14 ನಿಮಿಷಗಳ ಅತಿ ಸಣ್ಣ ಭಾಷಣ ಮಾಡಿದರು. ಮೋದಿಯವರು 2017ರಲ್ಲಿ ಅತ್ಯಂತ ಚಿಕ್ಕ ಭಾಷಣ ಮಾಡಿದ್ದು, ಇದು 56 ನಿಮಿಷಗಳಾಗಿತ್ತು.

ಮೋದಿ ದಾಖಲೆ

ಮೋದಿಯವರ ಈ ಬಾರಿಯ 11ನೇ ಭಾಷಣ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸಂಖ್ಯೆಯನ್ನು ಮೀರಿಸಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 10 ಸ್ವಾತಂತ್ರ್ಯ ದಿನದ ಭಾಷಣಗಳನ್ನು ಮಾಡಿದ್ದರು. ಭಾರತದ ಮೊದಲ ಪ್ರಧಾನಿ ನೆಹರೂ ಅವರು 17 ಬಾರಿ ನಿರಂತರವಾಗಿ ಸ್ವಾತಂತ್ರ್ಯ ದಿನದ ಭಾಷಣಗಳನ್ನು ಮಾಡಿದ ದಾಖಲೆಯನ್ನು ಹೊಂದಿದ್ದಾರೆ.

ಜನವರಿ 1966ರಿಂದ ಮಾರ್ಚ್ 1977ರವರೆಗೆ ಮತ್ತು ಅನಂತರ ಜನವರಿ 1980ರಿಂದ ಅಕ್ಟೋಬರ್ 1984ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಇಂದಿರಾ ಗಾಂಧಿ ಅವರು ಒಟ್ಟು 16 ಬಾರಿ ರಾಷ್ಟ್ರವನ್ನು ಉದ್ದೇಶಿಸಿ ಭಾಷಣಗಳನ್ನು ಮಾಡಿದ್ದರು.

ದೇಶದ ಪ್ರಧಾನಿಯವರ ಸ್ವಾತಂತ್ರ್ಯ ದಿನದ ಭಾಷಣದ ಅವಧಿಗೆ ಹೋಲಿಸಿದರೆ ಮೋದಿಯವರೇ ಅತಿ ಉದ್ದದ ಭಾಷಣ ಮಾಡಿರುವ ಪ್ರಧಾನಿಯಾಗಿದ್ದರೆ.


ಈ ಬಾರಿಯ ದಾಖಲೆಯ 98 ನಿಮಿಷ

ಈ ಬಾರಿಯ ತಮ್ಮ 98 ನಿಮಿಷಗಳ ಸುದೀರ್ಘ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷದ ಆಚರಣೆಗಳ ಥೀಮ್ ವಿಕಸಿತ ಭಾರತ್ 2047ರ ಕುರಿತು ಹೆಚ್ಚು ಬೆಳಕು ಚೆಲ್ಲಿದರು.

ವಿಕಸಿತ್ ಭಾರತ್ 2047 ಗಾಗಿ ನಾವು ದೇಶವಾಸಿಗಳಿಂದ ಸಲಹೆಗಳನ್ನು ಆಹ್ವಾನಿಸಿದ್ದೇವೆ. ನಾವು ಸ್ವೀಕರಿಸಿದ ಅನೇಕ ಸಲಹೆಗಳು ನಮ್ಮ ನಾಗರಿಕರ ಕನಸು ಮತ್ತು ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತವೆ. ರಾಷ್ಟ್ರದ ಜನರು ಅಂತಹ ದೊಡ್ಡ ಕನಸುಗಳನ್ನು ಹೊಂದಿರುವಾಗ, ಅದು ನಮ್ಮ ಆತ್ಮವಿಶ್ವಾಸವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ ಮತ್ತು ನಾವು ಹೆಚ್ಚು ದೃಢನಿಶ್ಚಯವನ್ನು ಹೊಂದಿದ್ದೇವೆ ಎಂದು ಹೇಳಿದರು.


ಕೋಲ್ಕತ್ತಾದ ಆಸ್ಪತ್ರೆಯಲ್ಲಿ ಪ್ರಶಿಕ್ಷಣಾರ್ಥಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆಯಾದ ಹಿನ್ನೆಲೆಯಲ್ಲಿ ಮಹಿಳಾ ಸುರಕ್ಷತೆಯ ವಿಷಯದ ಬಗ್ಗೆಯೂ ಮಾತನಾಡಿದ ಅವರು, ದೇಶ, ಸಮಾಜ, ರಾಜ್ಯ ಸರ್ಕಾರಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಮಹಿಳೆಯರ ವಿರುದ್ಧದ ಅಪರಾಧಗಳ ತ್ವರಿತ ತನಿಖೆ, ಈ ದೈತ್ಯಾಕಾರದ ಕಾರ್ಯಗಳನ್ನು ನಿರ್ವಹಿಸುವವರಿಗೆ ಆದಷ್ಟು ಬೇಗ ಕಠಿಣ ಶಿಕ್ಷೆಯನ್ನು ನೀಡಬೇಕು. ಇದು ಸಮಾಜದಲ್ಲಿ ಆತ್ಮವಿಶ್ವಾಸವನ್ನು ತುಂಬಲು ಮುಖ್ಯವಾಗಿದೆ ಎಂದು ತಿಳಿಸಿದರು.

ಇದು ದೇಶದ ಸುವರ್ಣ ಯುಗ ಎಂದು ಘೋಷಿಸಿದ ಪ್ರಧಾನಮಂತ್ರಿ ಮೋದಿ ಅವರು, ವಿವಿಧ ಕ್ಷೇತ್ರಗಳಾದ್ಯಂತ ಅಭಿವೃದ್ಧಿ, ಆರ್ಥಿಕ ಸುಧಾರಣೆ ಮತ್ತು ದೇಶದ ಯುವಜನರಿಗೆ ಭರವಸೆಗಳನ್ನು ನೀಡುವ ಹಲವಾರು ಯೋಜನೆಗಳನ್ನು ವಿವರಿಸಿದರು.

ಇದನ್ನೂ ಓದಿ: Independence Day 2024: ಜಾತ್ಯಾತೀತ ನಾಗರಿಕ ಸಂಹಿತೆ ಜಾರಿಯಾದರೆ ಮಾತ್ರ ತಾರತಮ್ಯದಿಂದ ಮುಕ್ತಿ; ಪ್ರಧಾನಿ ಮೋದಿ

ಪ್ರಾಕೃತಿಕ ವಿಕೋಪಗಳನ್ನು ನಿಭಾಯಿಸುವುದರಿಂದ ಹಿಡಿದು ಜಾತ್ಯತೀತ ನಾಗರಿಕ ಸಂಹಿತೆ, ಉದ್ಯೋಗಸ್ಥ ಮಹಿಳೆಯರಿಗೆ ಹೆರಿಗೆ ರಜೆಯವರೆಗೆ ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಪ್ರಾಮುಖ್ಯತೆಯ ವಿವಿಧ ವಿಷಯಗಳ ಬಗ್ಗೆ ಪ್ರಸ್ತಾಪಿಸಿದರು.

ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ನಾವು ನಿರ್ಣಯದೊಂದಿಗೆ ಮುಂದುವರಿಯುತ್ತಿದ್ದೇವೆ. ಆದರೆ ಕೆಲವು ಜನರು ಪ್ರಗತಿಯನ್ನು ಕಾಣುವುದಿಲ್ಲ ಅಥವಾ ಅವರಿಗೆ ಪ್ರಯೋಜನವಾಗದ ಹೊರತು ಭಾರತದ ಒಳಿತನ್ನು ಯೋಚಿಸುವುದಿಲ್ಲ. ದೇಶವು ಈ ಬೆರಳೆಣಿಕೆಯ ನಿರಾಶಾವಾದಿ ಜನರಿಂದ ತನ್ನನ್ನು ತಾನು ರಕ್ಷಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.

Continue Reading

ದೇಶ

Independence Day 2024: ಜಾತ್ಯಾತೀತ ನಾಗರಿಕ ಸಂಹಿತೆ ಜಾರಿಯಾದರೆ ಮಾತ್ರ ತಾರತಮ್ಯದಿಂದ ಮುಕ್ತಿ; ಪ್ರಧಾನಿ ಮೋದಿ

Independence Day 2024: ಏಕರೂಪ ನಾಗರಿಕ ಸಂಹಿತೆ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ ಮೋದಿ, ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಸುಪ್ರೀಂ ಕೋರ್ಟ್ ಮತ್ತೆ ಮತ್ತೆ ಚರ್ಚೆ ನಡೆಸಿದೆ, ಹಲವು ಬಾರಿ ಆದೇಶಗಳನ್ನು ನೀಡಿದೆ. ದೇಶದ ಬಹುಪಾಲು ವರ್ಗವು ಇದರ ಬಗ್ಗೆ ಅತೀವ ನಂಬಿಕೆ ಹೊಂದಿದೆ. ಇಲ್ಲಿವರೆಗೆ ಇದ್ದ ಕೋಮು ನಾಗರಿಕ ಸಂಹಿತೆಯಿಂದ ಮುಕ್ತವಾಗಿ ದೇಶದಲ್ಲಿ ಸೆಕ್ಯುಲರ್ ಸಿವಿಲ್ ಕೋಡ್ ಜಾರಿಯಾಗುವುದು ಅಗತ್ಯವಿದೆ. ಆಗ ಮಾತ್ರ ನಾವು ಧರ್ಮದ ಆಧಾರದ ತಾರತಮ್ಯದಿಂದ ಮುಕ್ತರಾಗುತ್ತೇವೆ ಎಂದರು.

VISTARANEWS.COM


on

Independence Day 2024
Koo

ನವದೆಹಲಿ: ದೇಶದಲ್ಲಿ ಅಸಮಾನತೆಯನ್ನು ತೊಡೆದುಹಾಕಲು ಜಾತ್ಯಾತೀತ ನಾಗರಿಕ ಕಾನೂನು(Secular civil code) ಜಾರಿಯಾಗಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಅವರು ಇಂದು ದೆಹಲಿಯ ಕೆಂಪುಕೋಟೆಯಲ್ಲಿ ಧ್ಜಜಾರೋಹಣ(Independence Day 2024) ನೆರವೇರಿಸಿದ ಬಳಿಕ ದೇಶದ ಜನರನ್ನುದ್ದೇಶಿಸಿ ಮಾತನಾಡಿದ್ದಾರೆ.

ಏಕರೂಪ ನಾಗರಿಕ ಸಂಹಿತೆ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ ಮೋದಿ, ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಸುಪ್ರೀಂ ಕೋರ್ಟ್ ಮತ್ತೆ ಮತ್ತೆ ಚರ್ಚೆ ನಡೆಸಿದೆ, ಹಲವು ಬಾರಿ ಆದೇಶಗಳನ್ನು ನೀಡಿದೆ. ದೇಶದ ಬಹುಪಾಲು ವರ್ಗವು ಇದರ ಬಗ್ಗೆ ಅತೀವ ನಂಬಿಕೆ ಹೊಂದಿದೆ. ಇಲ್ಲಿವರೆಗೆ ಇದ್ದ ಕೋಮು ನಾಗರಿಕ ಸಂಹಿತೆಯಿಂದ ಮುಕ್ತವಾಗಿ ದೇಶದಲ್ಲಿ ಸೆಕ್ಯುಲರ್ ಸಿವಿಲ್ ಕೋಡ್ ಜಾರಿಯಾಗುವುದು ಅಗತ್ಯವಿದೆ. ಆಗ ಮಾತ್ರ ನಾವು ಧರ್ಮದ ಆಧಾರದ ತಾರತಮ್ಯದಿಂದ ಮುಕ್ತರಾಗುತ್ತೇವೆ ಎಂದರು.

ಬಾಂಗ್ಲಾ ಹಿಂಸಾಚಾರದ ಬಗ್ಗೆಯೂ ಪ್ರಸ್ತಾಪ

ಇದೇ ವೇಳೆ ಅವರು ಕಳೆದ ಕೆಲವು ತಿಂಗಳಿಂದ ಬಾಂಗ್ಲಾದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರದ ಬಗ್ಗೆ ಪ್ರಸ್ತಾಪಿಸಿದರು. ಬಾಂಗ್ಲಾದೇಶದ ಶೀಘ್ರದಲ್ಲೇ ಸಹಜ ಸ್ಥಿತಿ ಬರುತ್ತದೆ ಎಂಬ ಭರವಸೆ ಇದೆ. ಅದಕ್ಕೆ ಬೇಕಾದ ಎಲ್ಲಾ ಸಹಕಾರವನ್ನು ಭಾರತ ನೀಡಲಿದೆ ಎಂದು ಹೇಳಿದರು.

ಇನ್ನು ಇದೇ ವೇಳೆ ಒಲಿಂಪಿಕ್ಸ್‌ ಕ್ರೀಟಾಪಟುಗಳಿಗೆ ಅಭಿನಂದನೆ ಸಲ್ಲಿಸಿದ ಅವರು, ಒಲಿಂಪಿಕ್ಸ್‌ನಲ್ಲಿ ಭಾರತದ ಧ್ವಜವನ್ನು ಎತ್ತರಕ್ಕೆ ಹಾರುವಂತೆ ಮಾಡಿದ ಯುವಕರೂ ನಮ್ಮೊಂದಿಗಿದ್ದಾರೆ. 140 ಕೋಟಿ ದೇಶವಾಸಿಗಳ ಪರವಾಗಿ ನಾನು ನಮ್ಮ ಎಲ್ಲಾ ಕ್ರೀಡಾಪಟುಗಳು ಮತ್ತು ಆಟಗಾರರನ್ನು ಅಭಿನಂದಿಸುತ್ತೇನೆ ಎಂದರು.

ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಕೋಲ್ಕತ್ತಾದಲ್ಲಿ ನಡೆದಿರುವ ಟ್ರೈನಿ ವೈದ್ಯೆ ಅತ್ಯಾಚಾರ ಕೊಲೆ ಪ್ರಕರಣದ ಬಗ್ಗೆ ಪ್ರಸ್ತಾಪಿಸಿ ಆಕ್ರೋಶ ಹೊರಹಾಕಿದ್ದಾರೆ. ನಮ್ಮ ಮಾತೆ ಸಹೋದರಿಯರ ಮೇಲೆ ಅತ್ಯಾಚಾರ ನಡೆಯುತ್ತಿದೆ. ಪಾಪಿಗಳನ್ನು ಗಲ್ಲಿಗೇರಿಸಬೇಕು. ಆಗ ಮಾತ್ರ ಜನರಲ್ಲಿ ಅಪರಾಧಗಳ ಬಗ್ಗೆ ಭಯ ಮೂಡಲು ಸಾಧ್ಯ. ದೇಶದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಬಹಳ ಉಗ್ರವಾಗಿ ಧ್ವನಿ ಎತ್ತಬೇಕಿದೆ. ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳ ತನಿಖೆ ನಡೆಸಿ ತಪ್ಪಿತಸ್ಥರನ್ನು ವಿಳಂಬ ಮಾಡದೆ ಶಿಕ್ಷಿಸಬೇಕು ಎಂದರು.

ಇದನ್ನೂ ಓದಿ: Independence day 2024: ವಿಕಸಿತ ಭಾರತ @2047 ಎಂಬುದು ಕೇವಲ ಪದಗಳಲ್ಲ..140 ಕೋಟಿ ಜನರ ಸಂಕಲ್ಪ-ಪ್ರಧಾನಿ ಮೋದಿ

Continue Reading

ಪ್ರಮುಖ ಸುದ್ದಿ

Independence day 2024: ವಿಕಸಿತ ಭಾರತ @2047 ಎಂಬುದು ಕೇವಲ ಪದಗಳಲ್ಲ..140 ಕೋಟಿ ಜನರ ಸಂಕಲ್ಪ-ಪ್ರಧಾನಿ ಮೋದಿ

Independence day 2024: ಪ್ರಕೃತಿ ವಿಕೋಪದಿಂದ ಹಲವಾರು ಮಂದಿ ತಮ್ಮ ಕುಟುಂಬ, ಆಸ್ತಿಯನ್ನು ಕಳೆದುಕೊಂಡಿದ್ದಾರೆ. ಹೊರ ರಾಷ್ಟ್ರವೂ ನಷ್ಟ ಅನುಭವಿಸಿದೆ. ಇಂದು, ನಾನು ಅವರೆಲ್ಲರಿಗೂ ನನ್ನ ಸಹಾನುಭೂತಿಯನ್ನು ವ್ಯಕ್ತಪಡಿಸುತ್ತೇನೆ ಮತ್ತು ಈ ಬಿಕ್ಕಟ್ಟಿನ ಸಮಯದಲ್ಲಿ ಈ ರಾಷ್ಟ್ರವು ಅವರೊಂದಿಗೆ ನಿಲ್ಲುತ್ತದೆ ಎಂದು ನಾನು ಅವರಿಗೆ ಭರವಸೆ ನೀಡುತ್ತೇನೆ ಎಂದರು.

VISTARANEWS.COM


on

Independence Day 2024
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು ಇಂದು ದಿಲ್ಲಿಯ ಕೆಂಪುಕೋಟೆಯ (Red Fort) ಮೇಲೆ 78ನೇ ಸ್ವಾತಂತ್ರ್ಯೋತ್ಸವದ(Independence day 2024)ದ ಧ್ವಜಾರೋಹಣ ನೆರವೇರಿಸಿದ್ದಾರೆ. ಧ್ವಜಾರೋಹಣದ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಸಂಖ್ಯಾತ ಸ್ವಾತಂತ್ರ್ಯ ಪ್ರೇಮಿಗಳ ಬಲಿದಾನಕ್ಕೊಂದು ದೊಡ್ಡ ಪ್ರಣಾಮ. ವಿಕಸಿತ ಭಾರತ @ 2047 ಕೇವಲ ಪದಗಳಲ್ಲ. 140 ಕೋಟಿ ಜನರ ಸಂಕಲ್ಪ ಎಂದು ಹೇಳಿದರು.

ಪ್ರಕೃತಿ ವಿಕೋಪದಿಂದ ಹಲವಾರು ಮಂದಿ ತಮ್ಮ ಕುಟುಂಬ, ಆಸ್ತಿಯನ್ನು ಕಳೆದುಕೊಂಡಿದ್ದಾರೆ. ಹೊರ ರಾಷ್ಟ್ರವೂ ನಷ್ಟ ಅನುಭವಿಸಿದೆ. ಇಂದು, ನಾನು ಅವರೆಲ್ಲರಿಗೂ ನನ್ನ ಸಹಾನುಭೂತಿಯನ್ನು ವ್ಯಕ್ತಪಡಿಸುತ್ತೇನೆ ಮತ್ತು ಈ ಬಿಕ್ಕಟ್ಟಿನ ಸಮಯದಲ್ಲಿ ಈ ರಾಷ್ಟ್ರವು ಅವರೊಂದಿಗೆ ನಿಲ್ಲುತ್ತದೆ ಎಂದು ನಾನು ಅವರಿಗೆ ಭರವಸೆ ನೀಡುತ್ತೇನೆ. ಇಂದು ನಾವು 140 ಕೋಟಿ ಜನರಿದ್ದೇವೆ, ನಾವು ಸಂಕಲ್ಪ ಮಾಡಿ ಒಂದು ದಿಕ್ಕಿನಲ್ಲಿ ಒಟ್ಟಾಗಿ ಸಾಗಿದರೆ, 2047 ರ ವೇಳೆಗೆ ನಾವು ಎಲ್ಲಾ ಅಡೆತಡೆಗಳನ್ನು ನಿವಾರಿಸಿ ‘ವಿಕಸಿತ ಭಾರತ್’ ಕನಸು ನನಸಾಗುವುದರಲ್ಲಿ ಸಂಶಯವಿಲ್ಲ ಎಂದರು.

ಕೋಲ್ಕತಾ ವೈದ್ಯೆ ಕೊಲೆ ಬಗ್ಗೆ ಪ್ರಸ್ತಾಪ

ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಕೋಲ್ಕತ್ತಾದಲ್ಲಿ ನಡೆದಿರುವ ಟ್ರೈನಿ ವೈದ್ಯೆ ಅತ್ಯಾಚಾರ ಕೊಲೆ ಪ್ರಕರಣದ ಬಗ್ಗೆ ಪ್ರಸ್ತಾಪಿಸಿ ಆಕ್ರೋಶ ಹೊರಹಾಕಿದ್ದಾರೆ. ನಮ್ಮ ಮಾತೆ ಸಹೋದರಿಯರ ಮೇಲೆ ಅತ್ಯಾಚಾರ ನಡೆಯುತ್ತಿದೆ. ಪಾಪಿಗಳನ್ನು ಗಲ್ಲಿಗೇರಿಸಬೇಕು. ಆಗ ಮಾತ್ರ ಜನರಲ್ಲಿ ಅಪರಾಧಗಳ ಬಗ್ಗೆ ಭಯ ಮೂಡಲು ಸಾಧ್ಯ. ದೇಶದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಬಹಳ ಉಗ್ರವಾಗಿ ಧ್ವನಿ ಎತ್ತಬೇಕಿದೆ. ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳ ತನಿಖೆ ನಡೆಸಿ ತಪ್ಪಿತಸ್ಥರನ್ನು ವಿಳಂಬ ಮಾಡದೆ ಶಿಕ್ಷಿಸಬೇಕು ಎಂದರು.

ಪ್ರಧಾನಿ ಭಾಷಣದ ಪ್ರಮುಖಾಂಶಗಳು

  • ಹೊಸ ಕ್ರಿಮಿನಲ್ ಕಾನೂನು, ಭಾರತೀಯ ನ್ಯಾಯ ಸಂಹಿತಾ 2023, ಕಾನೂನು ವ್ಯವಸ್ಥೆಯನ್ನು ಸುಧಾರಿಸಿದೆ. ನಾವು ಹೊಸ ಕ್ರಿಮಿನಲ್ ಕಾನೂನುಗಳಲ್ಲಿ ಶಿಕ್ಷೆಗಿಂತ ನ್ಯಾಯಕ್ಕೆ ಆದ್ಯತೆ ನೀಡಿದ್ದೇವೆ
  • ಭಾರತವು ಯಾವುದೇ ವಿಳಂಬವಿಲ್ಲದೆ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಬೇಕು
  • 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿಪಡಿಸಲು ಜನರು ಅನೇಕ ಸಲಹೆಗಳನ್ನು ನೀಡಿದ್ದಾರೆ. ವಿಕ್ಷಿತ್ ಭಾರತ್‌ಗಾಗಿ ಆಡಳಿತ ಸುಧಾರಣೆಗಳು, ತ್ವರಿತ ನ್ಯಾಯ ವಿತರಣಾ ವ್ಯವಸ್ಥೆ, ಸಾಂಪ್ರದಾಯಿಕ ಔಷಧಗಳನ್ನು ಉತ್ತೇಜಿಸುವುದು ಸೇರಿ ಅನೇಕ ಸಲಹೆಗಳು ಜನರಿಂದ ಬಂದಿವೆ.
  • ಜಲ ಜೀವನ್ ಮಿಷನ್ 15 ಕೋಟಿ ಫಲಾನುಭವಿಗಳನ್ನು ತಲುಪಿದೆ
  • ಸುಧಾರಣೆಗಳ ಕಡೆಗೆ ನಮ್ಮ ಸಮರ್ಪಣೆ ಕೇವಲ ಕಾಗದಗಳಿಗೆ ಸೀಮಿತವಾಗಿಲ್ಲ, ನಾವು ಅದನ್ನು ಸಾಕಾರ ಮಾಡಿ ತೋರಿಸಿದ್ದೇವೆ.
  • ವೋಕಲ್‌ ಫಾರ್‌ ಲೋಕಲ್‌(ಸ್ಥಳೀಯರಿಗಾಗಿ ಧ್ವನಿ) ಎಂಬ ಪರಿಕಲ್ಪನೆ ಆರ್ಥಿಕ ವ್ಯವಸ್ಥೆಗೆ ಹೊಸ ಮಂತ್ರವಾಗಿದೆ
  • ಇತ್ತೀಚಿನ ದಿನಗಳಲ್ಲಿ ಅನಿಯಮಿತ ಉದ್ಯೋಗಾವಕಾಶಗಳಿವೆ. ಇದು ನಮ್ಮ ಸುವರ್ಣ ಯುಗ
  • ಸಶಸ್ತ್ರ ಪಡೆಗಳು ಸರ್ಜಿಕಲ್ ಮತ್ತು ವೈಮಾನಿಕ ದಾಳಿಗಳನ್ನು ನಡೆಸಿದಾಗ, ಪ್ರತಿಯೊಬ್ಬ ಭಾರತೀಯನು ಹೆಮ್ಮೆಯಿಂದ ಬೀಗಿದ್ದ.
  • ಬಾಹ್ಯಾಕಾಶ ಕ್ಷೇತ್ರವು ಅಸಂಖ್ಯಾತ ಸುಧಾರಣೆಗಳನ್ನು ಕಂಡಿದೆ
  • ಕಳೆದ 10 ವರ್ಷಗಳಲ್ಲಿ 10 ಕೋಟಿ ಮಹಿಳೆಯರು ಮಹಿಳಾ ಸ್ವಸಹಾಯ ಸಂಘಗಳಿಗೆ ಸೇರ್ಪಡೆಯಾಗಿದ್ದಾರೆ. 10 ಕೋಟಿ ಮಹಿಳೆಯರು ಆರ್ಥಿಕವಾಗಿ ಸ್ವತಂತ್ರರಾಗುತ್ತಿದ್ದಾರೆ.
  • ಬಡವರು, ಮಧ್ಯಮ ವರ್ಗದವರು, ವಂಚಿತರು… ನಮ್ಮ ಯುವಕರ ಆಕಾಂಕ್ಷೆಗಳಿಗಾಗಿ, ಅವರ ಜೀವನದಲ್ಲಿ ಸುಧಾರಣೆಗಳನ್ನು ತರಲು ನಾವು ಸುಧಾರಣಾ ಮಾರ್ಗವನ್ನು ಕೈಗೆತ್ತಿಕೊಂಡಿದ್ದೇವೆ.
  • ಪ್ರವಾಸೋದ್ಯಮ, ಎಂಎಸ್‌ಎಂಇ, ಶಿಕ್ಷಣ, ಆರೋಗ್ಯ, ಸಾರಿಗೆ, ಕೃಷಿ ಅಥವಾ ಇತರ ಯಾವುದೇ ಕ್ಷೇತ್ರವಾಗಿರಲಿ, ಎಲ್ಲಾ ಕ್ಷೇತ್ರಗಳಲ್ಲಿ ಸುಧಾರಿತ ತಂತ್ರಜ್ಞಾನ ವ್ಯವಸ್ಥೆ ಇದೆ.
  • ಬಾಹ್ಯಾಕಾಶ ಕ್ಷೇತ್ರದಲ್ಲಿ ನೂರಾರು ಸ್ಟಾರ್ಟ್‌ಅಪ್‌ಗಳು ಬಂದಿವೆ. “ಖಾಸಗಿ ಉಪಗ್ರಹಗಳು ಮತ್ತು ರಾಕೆಟ್‌ಗಳನ್ನು ಉಡಾವಣೆ ಮಾಡಲಾಗುತ್ತಿದೆ
  • ಜಾಗತಿಕ ಸಂಸ್ಥೆಗಳಿಗೆ ಭಾರತದ ಮೇಲೆ ಅತೀವ ಭರವಸೆ ಇದೆ, ರಫ್ತು, ವಿದೇಶಿ ವಿನಿಮಯ ಪ್ರಮಾಣ ಹೆಚ್ಚಾಗಿದೆ.
  • ಮೆಡಿಕಲ್‌ ಸೀಟ್‌ಗಳ ಸಂಖ್ಯೆಯನ್ನು 1ಲಕ್ಷಕ್ಕೆ ಏರಿಕೆ ಮಾಡಲಾಗಿದೆ.
  • ರಕ್ಷಣೆ ವಿಚಾರದಲ್ಲಿ ಭಾರತ ಆತ್ಮ ನಿರ್ಭರವಾಗಿದೆ.

ಕಾರ್ಯಕ್ರಮದಲ್ಲಿ ಬುಡಕಟ್ಟು ಸಮುದಾಯಗಳು, ರೈತರು, ಮಹಿಳೆಯರು, ಆಶಾ ಕಾರ್ಯಕರ್ತರು, ನರ್ಸ್ ಶುಶ್ರೂಷಕಿಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಒಲಿಂಪಿಕ್‌ ಕ್ರೀಡಾಪಟುಗಳು ಸೇರಿ ಬರೋಬ್ಬರಿ 6,000 ವಿಶೇಷ ಅತಿಥಿಗಳು ಭಾಗವಹಿಸಿದ್ದಾರೆ. ಇನ್ನು ಧ್ವಜಾರೋಹಣದ ಬಳಿಕ ಸತತ 11ನೇ ಬಾರಿ ಭಾಷಣ ಮಾಡುವ ಮೂಲಕ ಮಾಜಿ ಪ್ರಧಾನಿಗಳಾದ ಜವಾಹರಲಾಲ್‌ ನೆಹರೂ ಮತ್ತು ಇಂದಿರಾ ಗಾಂಧಿ ಅವರ ದಾಖಲೆಯನ್ನು ಪ್ರಧಾನಿ ಮೋದಿ ಸರಿಗಟ್ಟಿದ್ದಾರೆ.

ಇದನ್ನೂ ಓದಿ: PM Narendra Modi: ಕೆಂಪುಕೋಟೆಯ ಕಾರ್ಯಕ್ರಮಕ್ಕೆ ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ

Continue Reading
Advertisement
Happy Independence day 2024
ಕ್ರೀಡೆ14 seconds ago

Happy Independence day 2024: ಸ್ವಾತಂತ್ರ್ಯ ದಿನಾಚರಣೆಯಂದು ಒಲಿಂಪಿಯನ್​ಗಳನ್ನು ಭೇಟಿಯಾದ ಪ್ರಧಾನಿ ಮೋದಿ ಗೆ ಜೆರ್ಸಿ ಉಡುಗೊರೆ

Sbi Lending Rate
ದೇಶ3 mins ago

SBI Lending rate: SBI ಲೆಂಡಿಂಗ್‌ ದರದಲ್ಲಿ ಮತ್ತೆ ಏರಿಕೆ; ದುಬಾರಿಯಾಗಲಿದೆ EMI

Viral Video
Latest5 mins ago

Viral Video: ಮನೆಯ ಗೇಟ್ ಬಳಿ ಸಿಂಹಗಳು ಮತ್ತು ಸಾಕು ನಾಯಿಗಳ ಕಾದಾಟ; ಎದೆ ನಡುಗಿಸುವ ವಿಡಿಯೊ

ಕರ್ನಾಟಕ8 mins ago

Palestine Flag: ಕುಣಿಗಲ್‌ನಲ್ಲಿ ಪ್ಯಾಲಿಸ್ತೀನ್ ಬಾವುಟ ಹಾರಿಸಲು ಯತ್ನ!

Thangalaan Movie Review Pa Ranjith's Thangalaan
ಟಾಲಿವುಡ್9 mins ago

Thangalaan Movie: ಚಿಯಾನ್ ವಿಕ್ರಂ ‘ತಂಗಲಾನ್’ ಸಿನಿಮಾಗೆ ಮೆಚ್ಚುಗೆಯ ಮಹಾಪೂರ!

Lakshmi Hebbalkar
ಕರ್ನಾಟಕ10 mins ago

Lakshmi Hebbalkar: ದೇವರ ಹೆಸರಲ್ಲಿ‌ ಶಾಸಕ ಸುನಿಲ್ ಕುಮಾರ್ ರಾಜಕೀಯ; ಲಕ್ಷ್ಮೀ ಹೆಬ್ಬಾಳಕರ್ ಆರೋಪ

ಬೆಂಗಳೂರು21 mins ago

Physical Abuse : ಭೀಮಾ ಸಿನಿಮಾ ನೋಡಲು ಬಂದು ಲೇಡಿಸ್‌ ವಾಶ್‌ ರೂಂನಲ್ಲಿ ಮೊಬೈಲ್ ಇಟ್ಟ ಅಪ್ರಾಪ್ತ!

Tungabhadra Dam
ಕರ್ನಾಟಕ51 mins ago

Tungabhadra Dam: ತುಂಗಭದ್ರಾ ಡ್ಯಾಂಗೆ ತಾತ್ಕಾಲಿಕ ಗೇಟ್ ಅಳವಡಿಕೆ ಕಾರ್ಯ ಚುರುಕು

Honey trap gang arrested in Bengaluru
ಬೆಂಗಳೂರು58 mins ago

Honey trap : ಮಿಸ್ ಕಾಲ್‌ನಲ್ಲೇ ಹುಡುಗರನ್ನು ಪಟಾಯಿಸುತ್ತಾಳೆ! ಮನೆಗೆ ಬಾ ಅಂತಾಳೆ ಸುಲಿಗೆ ಮಾಡ್ತಾಳೆ

Lakshmi Hebbalkar
ಕರ್ನಾಟಕ1 hour ago

Lakshmi Hebbalkar: ಯೋಜನೆಗಳು ನಿಲ್ಲದೆ ಮುಂದುವರಿಯಲಿವೆ; ಲಕ್ಷ್ಮೀ ಹೆಬ್ಬಾಳಕರ್ ‘ಗ್ಯಾರಂಟಿ’

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ7 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ7 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌