Independence Day 2024: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮೆಚ್ಚುಗೆ - Vistara News

ಕರ್ನಾಟಕ

Independence Day 2024: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮೆಚ್ಚುಗೆ

Independence Day 2024: ಮಹಿಳೆಯರು, ಬಡ ಮತ್ತು ಮಧ್ಯಮ ವರ್ಗಗಳ ಆರ್ಥಿಕ ಸಬಲೀಕರಣಕ್ಕಾಗಿ ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಸರ್ಕಾರ ಯಶಸ್ವಿಯಾಗಿ ಕಾರ್ಯಗತಗೊಳಿಸುತ್ತಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಜಭವನದ ಅಂಗಳದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೇರಿಸಿ ಅವರು ಮಾತನಾಡಿದರು.

VISTARANEWS.COM


on

Independence Day 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಹಿಳೆಯರು, ಬಡ ಮತ್ತು ಮಧ್ಯಮ ವರ್ಗಗಳ ಆರ್ಥಿಕ ಸಬಲೀಕರಣಕ್ಕಾಗಿ ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಸರ್ಕಾರ ಯಶಸ್ವಿಯಾಗಿ ಕಾರ್ಯಗತಗೊಳಿಸುತ್ತಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawar Chand Gehlot) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ (Independence Day 2024).

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಜಭವನದ ಅಂಗಳದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೇರಿಸಿ ಅವರು ಮಾತನಾಡಿದರು. ಕರ್ನಾಟಕದ ಜನತೆಗೆ 78ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಎಂದು ಭಾಷಣ ಆರಂಭಿಸಿದ ರಾಜ್ಯಪಾಲರು, ʼʼಆಗಸ್ಟ್ 15 ನಮಗೆ ಐತಿಹಾಸಿಕ ದಿನ. ನಮಗೆ ಸ್ವಾತಂತ್ರ್ಯ ತಂದುಕೊಟ್ಟ ಮಹಾಪುರುಷರು ಮತ್ತು ಹುತಾತ್ಮರನ್ನು ಸ್ಮರಿಸುವ ದಿನ. ಈ ದಿನ ಅವರಿಂದ ಸ್ಫೂರ್ತಿ ಪಡೆದು ಹೊಸ ಹಾದಿ ಮತ್ತು ಹೊಸ ಸಂಕಲ್ಪದೊಂದಿಗೆ ಮುನ್ನಡೆಯಲು ಅವಕಾಶವಿದೆʼʼ ಎಂದು ಹೇಳಿದ್ದಾರೆ.

ಕರ್ನಾಟಕ ದೇಶದ ಪ್ರಗತಿಪರ ರಾಜ್ಯ. ಇದು ಅಭಿವೃದ್ಧಿ ಉಪಕ್ರಮಗಳ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡುತ್ತಿದೆ ಎಂದು ತಿಳಿಸಿದ ಅವರು ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಗೆ ಪೂರ್ಣಾಂಕ ನೀಡಿದ್ದಾರೆ. ʼʼಮಹಿಳೆಯರು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಸಬಲೀಕರಣಕ್ಕಾಗಿ ಗ್ಯಾರಂಟಿ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆ ಮೂಲಕ ನಿರುದ್ಯೋಗಿ ಯುವಕರಿಗೆ ಸಹಾಯ ಮಾಡಲಾಗುತ್ತಿದೆʼʼ ಎಂದು ಹೇಳಿದ್ದಾರೆ. ಸ್ವಾತಂತ್ರ್ಯಾನಂತರ ದೇಶ ಮತ್ತು ಕರ್ನಾಟಕದಲ್ಲಿ ಸರ್ವತೋಮುಖ ಅಭಿವೃದ್ಧಿಯಾಗಿದೆ ಎಂದೂ ಅಭಿಪ್ರಾಯ ಪಟ್ಟಿದ್ದಾರೆ.

ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ

ರಾಜಭವನದ ಅಂಗಳದಲ್ಲಿರುವ ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಾಲಾರ್ಪಣೆ ಮಾಡಿದರು. ಬಳಿಕ ಧ್ವಜಾರೋಹಣ ನೆರವೇರಿಸಿದರು. ಜತೆಗೆ ಮುಖ್ಯ ಭದ್ರತಾ ಅಧಿಕಾರಿ ಎಸಿಪಿ ನಿಂಗಾರೆಡ್ಡಿ ನೇತೃತ್ವದ ಪೊಲೀಸ್ ತಂಡದ ಗೌರವ ರಕ್ಷೆ ಸ್ವೀಕರಿಸಿದರು. ರಾಜಭವನದ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್, ರಾಜ್ಯಪಾಲರ ಆಪ್ತ ಕಾರ್ಯದರ್ಶಿ ಪಂಕಜ್ ಮೆಹ್ತಾ, ಉಪ ಕಾರ್ಯದರ್ಶಿ ಯೋಗೇಶ್ ಉಪಧ್ಯಾಯ್, ಎಡಿಸಿ ಸಾಬು ಥಾಮಸ್, ಎಡಿಸಿ ಸಂದೀಪ್ ಶರ್ಮಾ, ಒಎಸ್‌ಡಿಗಳಾದ ಶಂಕರ್ ಲಾಲ್ ಗುಜರ್, ಆದರ್ಶ್ ಪಾಸ್ವಾನ್ ಮತ್ತಿತರರು ಉಪಸ್ಥಿತರಿದ್ದರು.

ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ ಎಂದ ಸಿಎಂ

ಬೆಂಗಳೂರಿನ ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ  (Siddaramaiah) ಅವರು, ಜನರ ಕಲ್ಯಾಣಕ್ಕಾಗಿ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಮತ್ತೊಮ್ಮೆ ಭರವಸೆ ನೀಡಿದ್ದಾರೆ.

ʼʼಚುನಾವಣೆಯ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯದ ಸಮಸ್ತ ಜನರ ಬದುಕಿಗೆ ಒಂದು ಆರ್ಥಿಕ ಭದ್ರತೆಯನ್ನು ಒದಗಿಸುವ ಕೆಲಸ ನಮ್ಮ ಸರ್ಕಾರ ಮಾಡಿದೆ. ಈ ಯೋಜನೆ ಮುಂದುವರಿಯಲಿದೆ. ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಸವಳಿದು ಹೋಗಿರುವ ಜನರ ಬದುಕಿಗೆ ಈ ಯೋಜನೆಗಳು ನೆಮ್ಮದಿ ತಂದಿವೆ. ಈ ಯೋಜನೆಗಳ ಮೂಲಕ ಸಂಪತ್ತಿನ ಮರುಹಂಚಿಕೆಗೆ ಒತ್ತು ನೀಡುತ್ತಲೇ ರಾಜ್ಯದ ಆರ್ಥಿಕ ಬೆಳವಣಿಗೆಯನ್ನು ಸುಸ್ಥಿರವಾದ ರೀತಿಯಲ್ಲಿ ಹೆಚ್ಚಿಸಲು ಕೂಡಾ ಅಷ್ಟೇ ಬದ್ಧತೆಯಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಆರ್ಥಿಕ ಬೆಳವಣಿಗೆ ಮತ್ತು ಆರ್ಥಿಕ ಸಮಾನತೆಯನ್ನು ಸಾಧಿಸುವುದರ ಜತೆಗೆ ಈ ನೆಲದ ಸಾಮಾಜಿಕ ಸೌಹಾರ್ದತೆ ಮತ್ತು ಸಹಬಾಳ್ವೆಯ ಪರಂಪರೆಯನ್ನು ಮುಂದುವರಿಸಿ ಕರ್ನಾಟಕವನ್ನು ನಿಜ ಅರ್ಥದಲ್ಲಿ ‘ಸರ್ವ ಜನಾಂಗದ ಶಾಂತಿಯ ತೋಟ’ವನ್ನಾಗಿ ರೂಪಿಸಲು ನಾವು ಕಾರ್ಯತತ್ಪರಾಗಿದ್ದೇವೆʼʼ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Independence day 2024: ವಿಕಸಿತ ಭಾರತ @2047 ಎಂಬುದು ಕೇವಲ ಪದಗಳಲ್ಲ..140 ಕೋಟಿ ಜನರ ಸಂಕಲ್ಪ-ಪ್ರಧಾನಿ ಮೋದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬೆಂಗಳೂರು

Hyena Movie: ಹೈನಾ ಚಿತ್ರದ ಫಸ್ಟ್‌ ಲುಕ್‌ ರಿಲೀಸ್‌

Hyena Movie: “ಹೈನಾ” ಚಿತ್ರದ ಫಸ್ಟ್ ಲುಕ್ ಅನ್ನು ಭಾರತೀಯ ಸೂಪರ್‌ ರೀಯಲ್‌ ಹೀರೋ “ಕ್ಯಾಪ್ಟನ್ ನವೀನ್ ನಾಗಪ್ಪ” ಬಿಡುಗಡೆ ಮಾಡಿದ್ದಾರೆ. ವೆಂಕಟ್ ಭರದ್ವಾಜ್ ನಿರ್ದೇಶನದ “ಹೈನಾ” ಚಿತ್ರದಲ್ಲಿ ಡಾ. ರಾಜ್ ಕಮಲ್, ಹರ್ಷ ಅರುಣ್ ಕಲಾಲ್, ಲಕ್ಷ್ಮಣ್ ಶಿವಶಂಕರ್, ದಿಗಂತ್, ನಂದಕುಮಾರ್, ಪ್ರಭು, ನಿರಂಜನ್, ಲಾರೆನ್ಸ್ ಮತ್ತು ವೆಂಕಟ್ ಭರದ್ವಾಜ್ ಸೇರಿದಂತೆ ಹಲವಾರು ತಾರೆಗಳು ಅಭಿನಯಿಸಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Hyena Movie
Koo

ಬೆಂಗಳೂರು: ಚಲನಚಿತ್ರದ ಫಸ್ಟ್ ಲುಕ್ ಸಾಮಾನ್ಯವಾಗಿ ತಾರೆಗಳು ಬಿಡುಗಡೆ ಮಾಡುತ್ತಾರೆ, ಆದರೆ “ಹೈನಾ” ಚಿತ್ರದ (Hyena Movie) ಫಸ್ಟ್ ಲುಕ್ ಅನ್ನು ಭಾರತೀಯ ಸೂಪರ್‌ ರೀಯಲ್‌ ಹೀರೋ “ಕ್ಯಾಪ್ಟನ್ ನವೀನ್ ನಾಗಪ್ಪ” ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: Sangolli Rayanna Jayanthi: ಮುಂದಿನ ವರ್ಷ ಅದ್ಧೂರಿಯಾಗಿ ಸಂಗೊಳ್ಳಿ ರಾಯಣ್ಣ ಜಯಂತ್ಯುತ್ಸವ; ಸಿದ್ದರಾಮಯ್ಯ

ಭಾರತೀಯ ಸೇನೆಗೆ ಸೇವೆ ಸಲ್ಲಿಸಿದ್ದ ಕ್ಯಾಪ್ಟನ್ ನವೀನ್ ನಾಗಪ್ಪ, 1990 ರಿಂದ 2000 ರವರೆಗೆ ನಡೆದ ಕಾರ್ಗಿಲ್ ಯುದ್ಧದಲ್ಲಿ ಭಾರತಕ್ಕೆ ಜಯವನ್ನು ತಂದುಕೊಡುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

ವೆಂಕಟ್ ಭರದ್ವಾಜ್ ನಿರ್ದೇಶಿಸಿರುವ ಆ್ಯಕ್ಷನ್ ಪ್ಯಾಕ್ಡ್‌ “ಹೈನಾ” ಚಿತ್ರದಲ್ಲಿ ಡಾ. ರಾಜ್ ಕಮಲ್, ಹರ್ಷ ಅರುಣ್ ಕಲಾಲ್, ಲಕ್ಷ್ಮಣ್ ಶಿವಶಂಕರ್, ದಿಗಂತ್, ನಂದಕುಮಾರ್, ಪ್ರಭು, ನಿರಂಜನ್, ಲಾರೆನ್ಸ್ ಮತ್ತು ವೆಂಕಟ್ ಭರದ್ವಾಜ್ ಸೇರಿದಂತೆ ಹಲವಾರು ತಾರೆಗಳು ಅಭಿನಯಿಸಿದ್ದಾರೆ.

ಚಿತ್ರದ ಕಥೆಯನ್ನು ಲಕ್ಷ್ಮಣ್ ಶಿವಶಂಕರ್ ಬರೆದಿದ್ದಾರೆ, ಛಾಯಾಗ್ರಹಣವನ್ನು ನಿಶಾಂತ್ ನಾನಿ ಮಾಡಿದ್ದಾರೆ ಮತ್ತು ಲವ್ವ್ ಪ್ರಣ್ ಮೆಹ್ತಾ ಸಂಗೀತ ನೀಡಿದ್ದಾರೆ.

ಇದನ್ನೂ ಓದಿ: SBI Lending rate: SBI ಲೆಂಡಿಂಗ್‌ ದರದಲ್ಲಿ ಮತ್ತೆ ಏರಿಕೆ; ದುಬಾರಿಯಾಗಲಿದೆ EMI

ಅಮೃತಾ ಫಿಲ್ಮ್ ಸೆಂಟರ್ ಮತ್ತು ಕೆಕೆ ಕಾಂಬೈನ್ಸ್ ನಿರ್ಮಿಸಿರುವ ಈ ಚಲನಚಿತ್ರವು 2024ರ ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಬಿಡುಗಡೆಯಾಗಲು ಸಿದ್ಧವಾಗುತ್ತಿದೆ.

Continue Reading

ಕರ್ನಾಟಕ

Independence Day 2024: ಹಾಸನದಲ್ಲಿ 2500 ಅಡಿ ಉದ್ದದ ತ್ರಿವರ್ಣ ಧ್ವಜ ಪ್ರದರ್ಶನ

Independence Day 2024: ಹಾಸನದಲ್ಲಿ ಜಿಲ್ಲಾಡಳಿತ ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ಆಯೋಜಿಸಿದ್ದ ಕಾರ್ಯಕ್ರಮಲ್ಲಿ ಬೃಹತ್ ಧ್ವಜ ಹಿಡಿದು 3000 ಸಾವಿರ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಸಾಗಿದರು.

VISTARANEWS.COM


on

Independence Day 2024
Koo

ಹಾಸನ: 78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಹಾಸನದಲ್ಲಿ 2500 ಅಡಿ ಉದ್ದ ಧ್ವಜ ಪ್ರದರ್ಶನ ಮಾಡಿರುವುದು ಗಮನಸೆಳೆಯಿತು. ಜಿಲ್ಲಾಡಳಿತ ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ಆಯೋಜಿಸಿದ್ದ ಕಾರ್ಯಕ್ರಮಲ್ಲಿ ಬೃಹತ್ ಧ್ವಜ ಹಿಡಿದು 3000 ಸಾವಿರ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಸಾಗಿದರು.

ಹಾಸನ ನಗರದ ಪ್ರಮುಖ ರಸ್ತೆಗಳಲ್ಲಿ ಬಾವುಟ ಹಿಡಿದು ವಿದ್ಯಾರ್ಥಿಗಳು ಸಾಗಿದರು. ಡಿಸಿ ಕಚೇರಿ ಮುಂಭಾಗದಿಂದ ಎನ್‌.ಆರ್‌.ವೃತ್ತ, ಹೇಮಾವತಿ ಪ್ರತಿಮೆ ಮೂಲಕ ಜಿಲ್ಲಾ ಕ್ರೀಡಾಂಗಣದವರೆಗೂ ಧ್ವಜ ಹಿಡಿದು ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು ಸಾಗಿದರು.

ಇದನ್ನೂ ಓದಿ | Independence Day 2024: ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿ ಜನ ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ: ಹೆಬ್ಬಾಳಕರ್

ಚಿಕ್ಕಬಳ್ಳಾಪುರ, ರಾಯಚೂರಿನಲ್ಲಿ ಧ್ವಜಾರೋಹಣ ವೇಳೆ ಕುಸಿದು ಬಿದ್ದ ಮಕ್ಕಳು, ಪೊಲೀಸರು

independence day 2024
independence day 2024

ಚಿಕ್ಕಬಳ್ಳಾಪುರ/ರಾಯಚೂರು: 78ರ ಸ್ವಾತಂತ್ರ್ಯೋತ್ಸವ (Independence Day 2024) ದಿನದ ಧ್ವಜಾರೋಹಣದ ವೇಳೆ ವಿಪರೀತ ಬಿಸಿಲಿನ ತಾಪಕ್ಕೆ ಮಕ್ಕಳು, ಪೊಲೀಸರು ನಿತ್ರಾಣವಾಗಿ ಕುಸಿದು ಬಿದ್ದಿದ್ದಾರೆ. ಚಿಕ್ಕಬಳ್ಳಾಪುರ ನಗರದ ಸರ್‌. ಎಂ. ವಿ ಕ್ರೀಡಾಂಗಣದಲ್ಲಿ ಸಚಿವ ಡಾ ಎಂ ಸಿ ಸುಧಾಕರ್ ಭಾಷಣದ ವೇಳೆ ಪೊಲೀಸರು ಮತ್ತು ಮಕ್ಕಳು (Independence Day 2024) ಕುಸಿದು ಬಿದ್ದಿದ್ದಾರೆ.

ಸಚಿವ ಡಾ ಎಂ ಸಿ ಸುಧಾಕರ್ ಸ್ವಾತಂತ್ರ್ಯ ದಿನಾಚರಣೆ ಕುರಿತು ಭಾಷಣ ಮಾಡುತ್ತಿದ್ದರು. ಈ ವೇಳೆ ತುಂಬ ಹೊತ್ತು ಬಿಸಿಲಿನಲ್ಲೇ ನಿಂತಿದ್ದ ಮಕ್ಕಳು ಸುಸ್ತಾಗಿ ಕುಸಿದು ಬಿದ್ದಿದ್ದಾರೆ. ಕುಸಿದು ಬಿದ್ದ ಮಕ್ಕಳನ್ನು ಆಂಬ್ಯುಲೆನ್ಸ್‌ ಮೂಲಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಮಹಿಳಾ ತುಕಡಿಯ ನೇತೃತ್ವ ವಹಿಸಿದ್ದ ಪಿಎಸ್ಐ ನಾಗಮ್ಮ ಅವರು ವಿಪರೀತ ಬಿಸಿಲಿನ ತಾಪಕ್ಕೆ ನಿತ್ರಾಣವಾಗಿ ಬಿದ್ದರು. ಸ್ಟೇಡಿಯಂನಲ್ಲಿ ನಿಂತಿದ್ದಾಗ ಕುಸಿದು ಬಿದ್ದಿದ್ದಾರೆ. ತಕ್ಷಣ ಓಡಿಹೋಗಿ ವೈದ್ಯಕೀಯ ಸಿಬ್ಬಂದಿ ಚಿಕಿತ್ಸೆ ನೀಡಿದ್ದಾರೆ. ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ರಾಯಚೂರಿನಲ್ಲೂ ಕುಸಿದು ಬಿದ್ದ ಮಕ್ಕಳು

ರಾಯಚೂರಿನಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ಕಾರ್ಯಕ್ರಮದ ವೇಳೆ ಬಿಸಿಲಿನ ತಾಪಕ್ಕೆ ಮಕ್ಕಳಿಬ್ಬರು ಕುಸಿದು ಬಿದ್ದಿದ್ದರು. ಕೂಡಲೇ ಇಬ್ಬರು ಮಕ್ಕಳನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನೆ ಮಾಡಲಾಯಿತು. ರಾಯಚೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ | Independence Day 2024: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮೆಚ್ಚುಗೆ

ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ಸಮ್ಮುಖದಲ್ಲಿ ಶಾಲಾ ಮಕ್ಕಳಿಗೆ ಪ್ರಶಸ್ತಿ ಪುರಸ್ಕಾರ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯುವಾಗ ಬಿಸಿಲಿನ ತಾಪಕ್ಕೆ ಮಕ್ಕಳು ಸುಸ್ತಾಗಿ ಕುಸಿದು ಬಿದ್ದಿದ್ದಾರೆ. ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಮಕ್ಕಳಿಗೆ ಚಿಕಿತ್ಸೆ ಕೊಡಿಸಲಾಗಿದೆ.

Continue Reading

ಬೆಂಗಳೂರು

Sangolli Rayanna Jayanthi: ಮುಂದಿನ ವರ್ಷ ಅದ್ಧೂರಿಯಾಗಿ ಸಂಗೊಳ್ಳಿ ರಾಯಣ್ಣ ಜಯಂತ್ಯುತ್ಸವ; ಸಿದ್ದರಾಮಯ್ಯ

Sangolli Rayanna Jayanthi: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಅಂಗವಾಗಿ ಇಂದು ಬೆಂಗಳೂರು ನಗರದ ಮೆಜೆಸ್ಟಿಕ್ ಸಮೀಪದ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಮುಂದಿನ ವರ್ಷದಿಂದ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನವರ ಜಯಂತೋತ್ಸವ ಹಾಗೂ ಪುಣ್ಯತಿಥಿಯಂದು ಕಾರ್ಯಕ್ರಮಗಳನ್ನು ದೊಡ್ಡ ಮಟ್ಟದಲ್ಲಿ ಆಚರಿಸಲಾಗುವುದು ಎಂದು ತಿಳಿಸಿದ್ದಾರೆ.

VISTARANEWS.COM


on

Sangolli Rayanna Jayanthi
Koo

ಬೆಂಗಳೂರು: ಮುಂದಿನ ವರ್ಷದಿಂದ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನವರ ಜಯಂತ್ಯುತ್ಸವ (Sangolli Rayanna Jayanthi) ಹಾಗೂ ಪುಣ್ಯತಿಥಿಯಂದು ಕಾರ್ಯಕ್ರಮಗಳನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಪ್ರಯುಕ್ತ ಇಂದು ನಗರದ ಮೆಜೆಸ್ಟಿಕ್ ಸಮೀಪದ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ಸಂಗೊಳ್ಳಿ ರಾಯಣ್ಣನವರು ಸ್ವಾತಂತ್ರ್ಯೋತ್ಸವ ದಿನವಾದ ಆಗಸ್ಟ್ 15 ರಂದು ಜನಿಸಿದ್ದು, ಅವರು ಗಣರಾಜ್ಯೋತ್ಸವ ದಿನವಾದ ಜನವರಿ 26 ರಂದು ಹುತಾತ್ಮರಾದದ್ದು ವಿಶಿಷ್ಟ. ಮಹಾನ್ ರಾಷ್ಟ್ರಪ್ರೇಮಿ ಸಂಗೊಳ್ಳಿ ರಾಯಣ್ಣನವರ ಬದುಕು ನಮಗೆಲ್ಲರಿಗೂ ಸ್ಫೂರ್ತಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇದನ್ನೂ ಓದಿ: SBI Lending rate: SBI ಲೆಂಡಿಂಗ್‌ ದರದಲ್ಲಿ ಮತ್ತೆ ಏರಿಕೆ; ದುಬಾರಿಯಾಗಲಿದೆ EMI

ಕಾರ್ಯಕ್ರಮದಲ್ಲಿ ನಿಡುಮಾಮಿಡಿ ಶ್ರೀಗಳು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ. ರೇವಣ್ಣ, ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Viral News: ಮಹಿಳೆಯ ದೈವ ನರ್ತನಕ್ಕೆ ಭಾರಿ ಆಕ್ರೋಶ; ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಕ್ಷಮೆಯಾಚನೆ

Viral News: ಮಂಗಳೂರಿನಲ್ಲಿ ನಡೆದ ‘ಆಟಿದ ಕೂಟ’ ಕಾರ್ಯಕ್ರಮವೊಂದರಲ್ಲಿ ದೈವ ನೃತ್ಯವನ್ನು ಅನುಕರಣೆ ಮಾಡಿ ಕುಣಿದ ಮಹಿಳೆ ಇದೀಗ ತಪ್ಪೊಪ್ಪಿಕೊಂಡು ಮಂಗಳೂರಿನ ಕದ್ರಿ ದೇವಸ್ಥಾನಕ್ಕೆ ತೆರಳಿ ಮಂಜುನಾಥ ದೇವರ ಸನ್ನಿಧಿಯಲ್ಲಿ ಮಂಡಿಯೂರಿ ಕ್ಷಮೆಯಾಚಿಸಿದ್ದಾರೆ. ಮಹಿಳೆ ದೈವ ನೃತ್ಯವನ್ನು ಅನುಕರಣೆ ಮಾಡುತ್ತಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

VISTARANEWS.COM


on

Viral News
Koo

ಮಂಗಳೂರು: ತುಳುನಾಡಿನ ವಿಶಿಷ್ಟ ಆಚರಣೆ ದೈವಾರಾಧನೆಗೆ ಅದರದ್ದೇ ಆದ ಮಹತ್ವವಿದೆ, ಪಾವಿತ್ರ್ಯವಿದೆ. ಆದರೆ ಇದನ್ನೆಲ್ಲ ಮರೆತು ಮಂಗಳೂರಿನಲ್ಲಿ ನಡೆದ ‘ಆಟಿದ ಕೂಟ’ ಕಾರ್ಯಕ್ರಮವೊಂದರಲ್ಲಿ ದೈವ ನೃತ್ಯವನ್ನು ಅನುಕರಣೆ ಮಾಡಿ ಕುಣಿದ ಮಹಿಳೆ ಇದೀಗ ತಪ್ಪೊಪ್ಪಿಕೊಂಡು ಮಂಗಳೂರಿನ ಕದ್ರಿ ದೇವಸ್ಥಾನಕ್ಕೆ ತೆರಳಿ ಮಂಜುನಾಥ ದೇವರ ಸನ್ನಿಧಿಯಲ್ಲಿ ಮಂಡಿಯೂರಿ ಕ್ಷಮೆಯಾಚಿಸಿದ್ದಾರೆ. ಮಹಿಳೆ ದೈವ ನೃತ್ಯವನ್ನು ಅನುಕರಣೆ ಮಾಡುತ್ತಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಅವರು ದೇವರ ಸನ್ನಿದಿಗೆ ಆಗಮಿಸಿ ಕಣ್ಣೀರಿಟ್ಟು ಕ್ಷಮೆಯಾಚಿಸಿದ್ದಾರೆ (Viral News).

ಇತ್ತೀಚೆಗೆ ಮಂಗಳೂರಿನ ಯೆಯ್ಯಾಡಿಯಲ್ಲಿ ನಡೆದಿದ್ದ ‘ಆಟಿದ ಕೂಟ’ ಕಾರ್ಯಕ್ರಮದಲ್ಲಿ ಕವಿತಾ ಎನ್ನುವ ಮಹಿಳೆ ದೈವ ನರ್ತನ ಮಾಡಿದ್ದರು. ಈ ವಿಡಿಯೊ ವೈರಲ್ ಆಗಿ ಕವಿತಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ಬುಧವಾರ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಆಗಮಿಸಿ ಕ್ಷಮೆಯಾಚಿಸಿದ್ದಾರೆ. ದೈವರಾಧಕ ಸಮ್ಮುಖದಲ್ಲಿ ಬಂದು ದೇವರ ಮುಂದೆ ದೇವರ ಮುಂದೆ ಕಣ್ಣೀರು ಹಾಕಿ ಕ್ಷಮಾಪಣೆ ಕೇಳಿದ್ದಾರೆ. ಜತೆಗೆ ತಪ್ಪು ಕಾಣಿಕೆ ಹಾಕಿ ರುದ್ರಾಭಿಷೇಕ ಸೇವೆ ಮಾಡಿಸಿದ್ದಾರೆ.

ದೇವರ ಮುಂದೆ ಕಣ್ಣೀರು

ʼʼನಿತ್ಯ ದೈವಗಳ ಆರಾಧನೆ, ದೇವರ ಪೂಜೆ ಮಾಡಿಕೊಂಡು ಬಂದವಳು ನಾನು. ಆದರೆ ಸಂಗೀತ ಮತ್ತು ನೃತ್ಯದಲ್ಲಿ ಅಪಾರ ಆಸಕ್ತಿಯ ಕಾರಣದಿಂದ ತಪ್ಪಾಗಿದೆ. ಮಂಜುನಾಥನ ಬಳಿ ಕ್ಷಮೆ ಕೇಳಿ ತಪ್ಪು ಕಾಣಿಕೆ ಹಾಕಿದ್ದೇನೆ. ಇನ್ನು ಮುಂದೆ ಇಂತಹ ತಪ್ಪು ಮಾಡುವುದಿಲ್ಲ. ʼವಾ ಪೊರ್ಲುಯಾʼ ತುಳು ಹಾಡು ಮೊಳಗಿದಾಗ ಮೈಮರೆತು ನರ್ತಿಸಿದ್ದೇನೆ. ನಾನು ದೈವವನ್ನು ಅಪಹಾಸ್ಯ ಮಾಡಿಲ್ಲ. ಯಾರೂ ಇದನ್ನು ಅನುಕರಿಸಬೇಡಿ. ನಾನು ತಿಳಿಯದೇ ತಪ್ಪು ಮಾಡಿದ್ದೇನೆ. ಇದಕ್ಕಾಗಿ ನನ್ನನ್ನು ಕ್ಷಮಿಸಿʼʼ ಎಂದು ಅತ್ತು ಬಿಟ್ಟಿದ್ದಾರೆ. ಕವಿತಾ ಅವರೊಂದಿಗೆ ಆಗಮಿಸಿದ ದೈವಾರಾಧಕ ದಯಾನಂದ ಕತ್ತಲ್‌ಸಾರ್, ಬುದ್ದಿಮಾತು ಹೇಳಿ ಇಂಥ ಘಟನೆ ಮರುಕಳಿಸಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

ಭಾರಿ ಆಕ್ರೋಶ

ಕರಾವಳಿಯಲ್ಲಿ ದೈವಾರಾಧನೆಗೆ ಧಾರ್ಮಿಕವಾಗಿ, ಸಾಂಸ್ಕೃತಿಕವಾಗಿ ಮಹತ್ತರ ಸ್ಥಾನವಿದೆ. ಅನೇಕ ಮಂದಿ ಶ್ರದ್ಧಾ ಭಕ್ತಿಯಿಂದ ತಲೆ ತಲಾಂತರಗಳಿಂದ ದೈವವನ್ನು ಆರಾಧಿಸಿಕೊಂಡು ಬರುತ್ತಿದ್ದಾರೆ. ಆದರೆ ಕವಿತಾ ಎನ್ನುವ ಈ ಮಹಿಳೆ ʼಆಟಿದ ಕೂಟʼ ಕಾರ್ಯಕ್ರಮದಲ್ಲಿ ಅದೆಲ್ಲವನ್ನೂ ಮರೆತು ತುಳು ಹಾಡಿಗೆ ದೈವದಂತೆ ಹೆಜ್ಜೆ ಹಾಕಿದ್ದು ಅನೇಕರನ್ನು ಕೆರಳಿಸಿತ್ತು. ಆಕೆ ದೈವದಂತೆ ಹೆಜ್ಜೆ ಹಾಕುತ್ತಿದ್ದರೆ ನೆರೆದಿದ್ದವರು ಚಪ್ಪಾಳೆ ತಟ್ಟಿ ಪ್ರೋತ್ಸಾಹ ನೀಡುತ್ತಿರುವುದೂ ವಿಡಿಯೊದಲ್ಲಿ ಕಂಡು ಬಂದಿತ್ತು.

ಕವಿತಾಳ ಈ ದೈವ ನರ್ತನದ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿ ಭಕ್ತರನ್ನು ಕೆರಳಿಸಿತ್ತು. ಜತೆಗೆ ಭಾರಿ ಚರ್ಚೆಯನ್ನೇ ಹುಟ್ಟು ಹಾಕಿತ್ತು. ಕಾರ್ಯಕ್ರಮ ಆಯೋಜಕರಿಗೆ ಕರೆ ಮಾಡಿ ಅನೇಕರು ತರಾಟೆಗೆ ತೆಗೆದುಕೊಂಡಿದ್ದರು. ಕವಿತಾ ದೈವದ ಎದುರು ನಿಂತು ಕ್ಷಮೆ ಯಾಚಿಸುವಂತೆ ಆಗ್ರಹಿಸಿದ್ದರು. ಅದರಂತೆ ಇದೀಗ ಅವರು ಕ್ಷಮೆಯಾಚಿಸಿದ್ದಾರೆ.

ಇದನ್ನೂ ಓದಿ: Rishab Shetty: ಕಾಂತಾರ 2ನಲ್ಲಿ ದೈವಾರಾಧನೆ ಪ್ರದರ್ಶಿಸಿದರೆ ಉಗ್ರ ಹೋರಾಟ: ರಿಷಬ್‌ಗೆ ವಾರ್ನಿಂಗ್‌!

Continue Reading
Advertisement
Benefits Of Onion Hair Oil
ಆರೋಗ್ಯ9 mins ago

Benefits Of Onion Hair Oil: ಕೂದಲು ಬಿಳಿಯಾಗುತ್ತಿದೆಯೆ? ಈರುಳ್ಳಿ ತೈಲವನ್ನು ಈ ರೀತಿ ಬಳಸಿ

Aman Sehrawat
ಕ್ರೀಡೆ37 mins ago

Aman Sehrawat : ಒಲಿಂಪಿಕ್ಸ್​ನಲ್ಲಿ ಕಂಚು ಗೆದ್ದ ಅಮನ್ ಸೆಹ್ರಾವತ್​ಗೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ಬಡ್ತಿ

Job Alert
ಉದ್ಯೋಗ1 hour ago

Job Alert: ಹೆಸ್ಕಾಂನ 338 ಹುದ್ದೆಗಳಿಗೆ ಅರ್ಜಿ ಆಹ್ವಾನ

Vicky Kaushal Chhava teaser released
ಟಾಲಿವುಡ್1 hour ago

Vicky Kaushal: ವಿಕ್ಕಿ ಕೌಶಲ್ `ಛಾವಾ’ ಟೀಸರ್‌ ಔಟ್‌!

Hyena Movie
ಬೆಂಗಳೂರು1 hour ago

Hyena Movie: ಹೈನಾ ಚಿತ್ರದ ಫಸ್ಟ್‌ ಲುಕ್‌ ರಿಲೀಸ್‌

Happy Independence Day
ಪ್ರಮುಖ ಸುದ್ದಿ1 hour ago

Happy Independence Day : ನೀರಜ್​ನಿಂದ ಹಿಡಿದು ರೋಹಿತ್​ ಶರ್ಮಾ ; ಭಾರತೀಯ ಅಥ್ಲೀಟ್​​ಗಳ ಸ್ವಾತಂತ್ರ್ಯೋತ್ಸವ ಆಚರಣೆಯ ಪೋಸ್ಟ್​ಗಳು ಇಲ್ಲಿವೆ…

ದೇಶ1 hour ago

Indian Flag: ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ ಧ್ವಜಾರೋಹಣಗಳ ಪ್ರಕ್ರಿಯೆ ಬೇರೆ ಬೇರೆ ಅನ್ನೋದು ಗೊತ್ತಾ?

Independence Day 2024
ಕರ್ನಾಟಕ1 hour ago

Independence Day 2024: ಹಾಸನದಲ್ಲಿ 2500 ಅಡಿ ಉದ್ದದ ತ್ರಿವರ್ಣ ಧ್ವಜ ಪ್ರದರ್ಶನ

Bomb threat
ದೇಶ1 hour ago

Bomb Threat: ಅಸ್ಸಾಂನ 19 ಕಡೆಗಳಲ್ಲಿ ಬಾಂಬ್‌ ಇರಿಸಿ, ಬಳಿಕ ನಿಷ್ಕ್ರೀಯಗೊಳಿಸುವಂತೆ ಮನವಿ ಮಾಡಿದ ಉಲ್ಫಾ ಉಗ್ರರು

Sangolli Rayanna Jayanthi
ಬೆಂಗಳೂರು1 hour ago

Sangolli Rayanna Jayanthi: ಮುಂದಿನ ವರ್ಷ ಅದ್ಧೂರಿಯಾಗಿ ಸಂಗೊಳ್ಳಿ ರಾಯಣ್ಣ ಜಯಂತ್ಯುತ್ಸವ; ಸಿದ್ದರಾಮಯ್ಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌