Accident Case : ಮಹಿಳೆ ಮೇಲೆ ಮಣ್ಣಿನ ರಾಶಿ ಹಾಕಿದ ಜೆಸಿಬಿ ಚಾಲಕ; ಬಯಲು ಶೌಚಕ್ಕೆ ಹೋದಾಕೆ ಉಸಿರುಗಟ್ಟಿ ಸಾವು! - Vistara News

ರಾಯಚೂರು

Accident Case : ಮಹಿಳೆ ಮೇಲೆ ಮಣ್ಣಿನ ರಾಶಿ ಹಾಕಿದ ಜೆಸಿಬಿ ಚಾಲಕ; ಬಯಲು ಶೌಚಕ್ಕೆ ಹೋದಾಕೆ ಉಸಿರುಗಟ್ಟಿ ಸಾವು!

Accident Case : ರಾಯಚೂರಿನಲ್ಲಿ ನಡೆದ ಅವಘಡದಲ್ಲಿ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಬಯಲು ಶೌಚಕ್ಕೆ ಹೋದ ಮಹಿಳೆ ಮೇಲೆ ಜೆಸಿಬಿ ಚಾಲಕ ಮಣ್ಣಿನ ರಾಶಿ ಹಾಕಿದ್ದರಿಂದ ಉಸಿರುಗಟ್ಟಿ ಮೃತಪಟ್ಟರೆ, ಟ್ರಾಕ್ಟರ್‌ ಡಿಕ್ಕಿಯಾಗಿ ಸವಾರನೊಬ್ಬ ಜೀವ ಬಿಟ್ಟಿದ್ದಾನೆ.

VISTARANEWS.COM


on

Accident case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯಚೂರು: ನಿವೇಶನ ಸ್ವಚ್ಚಗೊಳಿಸುತ್ತಿದ್ದಾಗ ಜೆಸಿಬಿ ಚಾಲಕನಿಂದ ಅಚಾತುರ್ಯ (Accident Case) ನಡೆದಿದೆ. ಬಯಲು ಶೌಚಕ್ಕೆ ಹೋದ ಮಹಿಳೆ ಮೇಲೆ ಮಣ್ಣಿನ ರಾಶಿ ಹಾಕಿದ್ದರಿಂದ ಮೂವರು ಮಕ್ಕಳ ತಾಯಿ ಮೃತಪಟ್ಟಿದ್ದಾರೆ. ತಾಯಮ್ಮ(32) ಮೃತಪಟ್ಟವರು. ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿನ ಜನತಾ ಕಾಲೋನಿಯಲ್ಲಿ ಘಟನೆ ನಡೆದಿದೆ.

ಖಾಲಿ ನಿವೇಶನದಲ್ಲಿ ಜಾಲಿ ಗಿಡ ಕಸ ಬೆಳೆದಿತ್ತು. ಹೀಗಾಗಿ ಬಡಾವಣೆಯ ಕೆಲ ಬಡ ಮಹಿಳೆಯರು ಇಲ್ಲಿ ಬಯಲು ಶೌಚಕ್ಕೆ ಹೋಗುತ್ತಿದ್ದರು. ತಾಯಮ್ಮ ಮುಂಜಾನೆ ಎಂದಿನಂತೆ ಬಯಲು ಶೌಚಕ್ಕೆಂದು ಹೋಗಿದ್ದಾರೆ. ಇದನ್ನು ಗಮನಿಸಿದ ಚಾಲಕ ಜೆಸಿಬಿಯಿಂದ ಮಣ್ಣಿನ ರಾಶಿಯನ್ನು ತಾಯಮ್ಮ ಮೇಲೆ ಹಾಕಿದ್ದಾನೆ.

ತಾಯಮ್ಮಳ ಮುಖದ ಮೇಲೆ ಮಣ್ಣಿನ ರಾಶಿ ಬಿದ್ದಿದ್ದರಿಂದ ಸಹಾಯಕ್ಕೆ ಚೀರಾಡಲು ಆಗದಂತಾಗಿದೆ. ಇತ್ತ ಎರಡ್ಮೂರು ಬಾರಿ ಮಣ್ಣಿ ರಾಶಿ ಬಿದ್ದಾಗ ಕುಸಿದು ಬಿದ್ದ ತಾಯಮ್ಮ ಹೊರಬರಲು ಆಗದೆ ಒದ್ದಾಡಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ತಾಯಿ ಕಳೆದುಕೊಂಡ ಮೂವರು ಮಕ್ಕಳು ಅನಾಥರಾಗಿದ್ದಾರೆ.

ಘಟನಾ ಸ್ಥಳಕ್ಕೆ ಬಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜೆಸಿಬಿ ಮತ್ತು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ರಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವೆಸ್ಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Independence Day 2024 : ಚಿಕ್ಕಬಳ್ಳಾಪುರ, ರಾಯಚೂರಿನಲ್ಲಿ ಧ್ವಜಾರೋಹಣ ವೇಳೆ ಕುಸಿದು ಬಿದ್ದ ಮಕ್ಕಳು, ಪೊಲೀಸರು

ಬೈಕ್‌ಗೆ ಟ್ರಾಕ್ಟರ್‌ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು

ರಾಯಚೂರಿನಲ್ಲಿ ಬೈಕ್‌ಗೆ ಟ್ರಾಕ್ಟರ್ ಡಿಕ್ಕಿ ಹೊಡೆದಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತದ ಬಳಿಕ ಟ್ರಾಕ್ಟರ್ ಸಮೇತ ಚಾಲಕ ಎಸ್ಕೇಪ್ ಆಗಿದ್ದ. ರಾಯಚೂರು ತಾಲೂಕಿನ ಎಲೆ ಬಿಚ್ಚಾಲಿ ಬಳಿ ಘಟನೆ ನಡೆದಿದೆ. ಚಂದ್ರಶೇಖರ್ (21)ಮೃತ ದುರ್ದೈವಿ.

ರಾಯಚೂರು ತಾಲ್ಲೂಕಿನ ಬಿ.ಹನುಮಾಪುರ ಗ್ರಾಮದ ಚಂದ್ರಶೇಖರ್‌, ಪ್ಲೊಮಾ ಮುಗಿಸಿ ಸಿಇಟಿಗೆ ಸಿದ್ಧವಾಗುತ್ತಿದ್ದ. ನಿನ್ನೆ ರಾತ್ರಿ ಬೈಕ್ ನಲ್ಲಿ ಚಂದ್ರಶೇಖರ್ ಸ್ವ ಗ್ರಾಮಕ್ಕೆ ಹೋಗೊವಾಗ ಟ್ರಾಕ್ಟರ್ ಡಿಕ್ಕಿಯಾಗಿದೆ. ಅಪಘಾತದ ಬಳಿಕ ಚಾಲಕ ಶಬ್ಜವಲಿ ಎಂಬಾತ ಮಾರ್ಗ ಮಧ್ಯೆ ಜಮೀನುವೊಂದರಲ್ಲಿ ಟ್ರಾಕ್ಟರ್ ಸಮೇತ ಬಚ್ಚಿಟ್ಟುಕೊಂಡಿದ್ದ. ಬಳಿಕ ಟ್ರಾಕ್ಟರ್ ಪತ್ತೆ ಹಚ್ಚಿದ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿಕ್ಕಬಳ್ಳಾಪುರ

Independence Day 2024 : ಚಿಕ್ಕಬಳ್ಳಾಪುರ, ರಾಯಚೂರಿನಲ್ಲಿ ಧ್ವಜಾರೋಹಣ ವೇಳೆ ಕುಸಿದು ಬಿದ್ದ ಮಕ್ಕಳು, ಪೊಲೀಸರು

Independence Day 2024 : ಚಿಕ್ಕಬಳ್ಳಾಪುರ ಹಾಗೂ ರಾಯಚೂರಿನಲ್ಲಿ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ವೇಳೆ ಮಕ್ಕಳು, ಪೊಲೀಸರು ಕುಸಿದು ಬಿದ್ದಿದ್ದಾರೆ. ವಿಜಯಪುರದಲ್ಲಿ ಹುಡುಗರು ಹೊಡೆದಾಡಿಕೊಂಡಿದ್ದಾರೆ.

VISTARANEWS.COM


on

By

independence day 2024
Koo

ಚಿಕ್ಕಬಳ್ಳಾಪುರ/ರಾಯಚೂರು: 78ರ ಸ್ವಾತಂತ್ರ್ಯೋತ್ಸವ (Independence Day 2024) ದಿನದ ಧ್ವಜಾರೋಹಣದ ವೇಳೆ ವಿಪರೀತ ಬಿಸಿಲಿನ ತಾಪಕ್ಕೆ ಮಕ್ಕಳು, ಪೊಲೀಸರು ನಿತ್ರಾಣವಾಗಿ ಕುಸಿದು ಬಿದ್ದಿದ್ದಾರೆ. ಚಿಕ್ಕಬಳ್ಳಾಪುರ ನಗರದ ಸರ್‌. ಎಂ. ವಿ ಕ್ರೀಡಾಂಗಣದಲ್ಲಿ ಸಚಿವ ಡಾ ಎಂ ಸಿ ಸುಧಾಕರ್ ಭಾಷಣದ ವೇಳೆ ಪೊಲೀಸರು ಮತ್ತು ಮಕ್ಕಳು (Independence Day 2024) ಕುಸಿದು ಬಿದ್ದಿದ್ದಾರೆ.

ಸಚಿವ ಡಾ ಎಂ ಸಿ ಸುಧಾಕರ್ ಸ್ವಾತಂತ್ರ್ಯ ದಿನಾಚರಣೆ ಕುರಿತು ಭಾಷಣ ಮಾಡುತ್ತಿದ್ದರು. ಈ ವೇಳೆ ತುಂಬ ಹೊತ್ತು ಬಿಸಿಲಿನಲ್ಲೇ ನಿಂತಿದ್ದ ಮಕ್ಕಳು ಸುಸ್ತಾಗಿ ಕುಸಿದು ಬಿದ್ದಿದ್ದಾರೆ. ಕುಸಿದು ಬಿದ್ದ ಮಕ್ಕಳನ್ನು ಆಂಬ್ಯುಲೆನ್ಸ್‌ ಮೂಲಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಮಹಿಳಾ ತುಕಡಿಯ ನೇತೃತ್ವ ವಹಿಸಿದ್ದ ಪಿಎಸ್ಐ ನಾಗಮ್ಮ ಅವರು ವಿಪರೀತ ಬಿಸಿಲಿನ ತಾಪಕ್ಕೆ ನಿತ್ರಾಣವಾಗಿ ಬಿದ್ದರು. ಸ್ಟೇಡಿಯಂನಲ್ಲಿ ನಿಂತಿದ್ದಾಗ ಕುಸಿದು ಬಿದ್ದಿದ್ದಾರೆ. ತಕ್ಷಣ ಓಡಿಹೋಗಿ ವೈದ್ಯಕೀಯ ಸಿಬ್ಬಂದಿ ಚಿಕಿತ್ಸೆ ನೀಡಿದ್ದಾರೆ. ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ರಾಯಚೂರಿನಲ್ಲೂ ಕುಸಿದು ಬಿದ್ದ ಮಕ್ಕಳು

ರಾಯಚೂರಿನಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ಕಾರ್ಯಕ್ರಮದ ವೇಳೆ ಬಿಸಿಲಿನ ತಾಪಕ್ಕೆ ಮಕ್ಕಳಿಬ್ಬರು ಕುಸಿದು ಬಿದ್ದಿದ್ದರು. ಕೂಡಲೇ ಇಬ್ಬರು ಮಕ್ಕಳನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನೆ ಮಾಡಲಾಯಿತು. ರಾಯಚೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಘಟನೆ ನಡೆದಿದೆ.

ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ಸಮ್ಮುಖದಲ್ಲಿ ಶಾಲಾ ಮಕ್ಕಳಿಗೆ ಪ್ರಶಸ್ತಿ ಪುರಸ್ಕಾರ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯುವಾಗ ಬಿಸಿಲಿನ ತಾಪಕ್ಕೆ ಮಕ್ಕಳು ಸುಸ್ತಾಗಿ ಕುಸಿದು ಬಿದ್ದಿದ್ದಾರೆ. ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಮಕ್ಕಳಿಗೆ ಚಿಕಿತ್ಸೆ ಕೊಡಿಸಲಾಗಿದೆ.

ಇದನ್ನೂ ಓದಿ: Bike Wheeling: ಸ್ವಾತಂತ್ರ್ಯ ದಿನಾಚರಣೆ ಹೆಸರಲ್ಲಿ ಹೈವೇಯಲ್ಲಿ ಡೆಡ್ಲಿ ವ್ಹೀಲಿಂಗ್‌!

ವಿಜಯಪುರದಲ್ಲಿ ಧ್ವಜಾರೋಹಣ ವೇಳೆ ಹೊಡೆದಾಟ

ಧ್ವಜಾರೋಹಣ ವೇಳೆ ಹುಡುಗರ ನಡುವೆ ಗಲಾಟೆ ನಡೆದಿದೆ. ವಿಜಯಪುರ ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವ ಎಂ ಬಿ ಪಾಟೀಲ್ ಭಾಷಣ ವೇಳೆ ಯುವಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಧ್ವಜಾರೋಹಣ ನೋಡಲು ಬಂದಿದ್ದ ಹುಡುಗರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿದೆ. ಹೊಡೆದಾಡಿಕೊಳ್ಳುತ್ತಿದ್ದ, ಓರ್ವನನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯದ ಹಲವೆಡೆ ಅಬ್ಬರಿಸಲಿದೆ ಗುಡುಗು ಸಹಿತ ಮಳೆ

Rain News : ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರಿದಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು ಒಳನಾಡಿನಲ್ಲಿ ಸಾಮಾನ್ಯವಾಗಿದ್ದು, ಕರಾವಳಿ ಭಾಗದಲ್ಲಿ ದುರ್ಬಲಗೊಂಡಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ತಿಳಿಸಿದೆ. ಈ ದಿನ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದ ಸುತ್ತಮುತ್ತಲೂ ಮಧ್ಯಮ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ರಾಮನಗರ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ಕೋಲಾರ, ವಿಜಯನಗರದ ಒಂದೆರಡು ಕಡಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಕೊಪ್ಪಳ, ಗದಗ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್‌, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರಿನಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯಂದು ಸಾಧಾರಣದೊಂದಿಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಕೆಲವೊಮ್ಮೆ ಬಿಸಿಲ ಧಗೆಯು ಹೆಚ್ಚಿರಲಿದೆ.

ಇದನ್ನೂ ಓದಿ: Physical Abuse : ಅಪ್ರಾಪ್ತೆಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೊ ಹರಿಬಿಟ್ಟ ಯುವಕ!

ಹುಡುಗಿಯರ ಮಾನ್ಸೂನ್‌ ಡ್ರೆಸ್‌ ಹೇಗಿರಬೇಕು? ಹೇಗಿರಬಾರದು?

ಮಾನ್ಸೂನ್‌ನಲ್ಲಿ ಹುಡುಗಿಯರು ಧರಿಸುವ (Monsoon Fashion do’s & don’ts) ಉಡುಪುಗಳು ನೋಡಲು ಆಕರ್ಷಕವಾಗಿದ್ದರಷ್ಟೇ ಸಾಲದು, ಧರಿಸಿದಾಗ ಕಂಫರ್ಟಬಲ್‌ ಆಗಿರಬೇಕು, ಎಲ್ಲದಕ್ಕಿಂತ ಹೆಚ್ಚಾಗಿ ಸೀಸನ್‌ಗೆ ತಕ್ಕಂತಿರಬೇಕು ಎನ್ನುತ್ತಾರೆ ಫ್ಯಾಷನಿಸ್ಟ್‌ಗಳು. ಸಮೀಕ್ಷೆಯೊಂದರ ಪ್ರಕಾರ, ಸಾಕಷ್ಟು ಹುಡುಗಿಯರು ಸ್ಟೈಲಿಶ್‌ ಆಗಿ ಕಾಣಿಸಲು ಮಾನ್ಸೂನ್‌ನಲ್ಲೂ ಸಮ್ಮರ್‌ ಫ್ಯಾಷನ್‌ವೇರ್‌ಗಳನ್ನು ಧರಿಸುತ್ತಾರಂತೆ. ಇನ್ನು, ಕೆಲವು ಯುವತಿಯರು ಮಾನ್ಸೂನ್‌ ಸೀಸನ್‌ನಲ್ಲಿ ಹೊದ್ದುಕೊಂಡಂತಿರುವ ಉಡುಪುಗಳನ್ನು ಧರಿಸುತ್ತಾರಂತೆ. ಆದರೆ, ಫ್ಯಾಷನಿಸ್ಟ್‌ಗಳ ಪ್ರಕಾರ, ಆಯಾ ವರ್ಗದ ಅನುಗುಣವಾಗಿ ಹುಡುಗಿಯರು ಧರಿಸುವ ಉಡುಪುಗಳು ಬದಲಾಗುತ್ತವಂತೆ. ಅದರಲ್ಲೂ, ಜೆನ್‌ ಜಿ ಹುಡುಗಿಯರು, ಯಾವುದೇ ಸೀಸನ್‌ ಟ್ರೆಂಡ್‌ ಫಾಲೋ ಮಾಡುವುದಿಲ್ಲ, ಬದಲಾಗಿ ತಮ್ಮದೇ ಆದ ಸ್ಟೈಲಿಶ್‌ ಮಾರ್ಗವನ್ನು ಹಿಡಿಯುತ್ತಾರಂತೆ. ಅಂದ ಹಾಗೆ, ಇದೆಲ್ಲಾ ಓಕೆ, ಹಾಗೆಂದು ಸೀಸನ್‌ಗೆ ವಿರುದ್ಧವಾಗಿ ಕಾಣಿಸುವುದು ದಿನಚರಿಯಾಗಬಾರದು! ಇದು ಆರೋಗ್ಯಕ್ಕೂ ಮಾರಕ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು. ಹಾಗಾದಲ್ಲಿ, ಈ ಸೀಸನ್‌ನಲ್ಲಿ ಯಾವ ರೀತಿಯ ಡ್ರೆಸ್‌ಗಳು ಬೆಸ್ಟ್? ಯಾವುದು ನಾಟ್‌ ಓಕೆ ! ಎಂಬುದನ್ನು ಫ್ಯಾಷನಿಸ್ಟ್‌ಗಳು ಸಿಂಪಲ್ಲಾಗಿ ತಿಳಿಸಿದ್ದಾರೆ.

Monsoon Fashion

ಮಾನ್ಸೂನ್‌ ಡ್ರೆಸ್‌ಗಳು

ಮಳೆಗಾಲದಲ್ಲಿ ಟ್ರೆಂಡಿಯಾಗುವ ಜಾಕೆಟ್‌ ಡ್ರೆಸ್‌, ಕೋಟ್‌ ಡ್ರೆಸ್‌-ಫ್ರಾಕ್ಸ್, ಸ್ಕೆಟರ್‌ ಡ್ರೆಸ್, ಮಿಡಿ ಡ್ರೆಸ್‌, ಹೈ ವೇಸ್ಟ್ ಶಾಟ್ಸ್ ಆಯ್ಕೆ ಮಾಡಬಹುದು. ಇವು ಸ್ಟೈಲಿಶ್‌ ಆಗಿ ಕಾಣಿಸುವುದರ ಜೊತೆಗೆ ಟ್ರೆಂಡಿಯಾಗಿಯೂ ಬಿಂಬಿಸುತ್ತವೆ.

Monsoon Fashion

ಗಿಡ್ಡ ಪ್ಯಾಂಟ್‌ಗೆ ಓಕೆ ಹೇಳಿ

ಆಂಕೆಲ್‌ ಲೆಂಥ್‌, ಕ್ರಾಪ್ಡ್ ಪ್ಯಾಂಟ್‌, ಲೆಗ್ಗಿಂಗ್ಸ್, ಜೆಗ್ಗಿಂಗ್ಸ್, ಪುಶ್‌ ಬ್ಯಾಕ್‌ನಂತಹ ಪ್ಯಾಂಟ್‌ಗಳನ್ನು ಧರಿಸಬಹುದು. ಆದರೆ, ಯಾವುದೇ ಕಾರಣಕ್ಕೂ ಪಲ್ಹಾಜೋ, ಪ್ಯಾರಲಲ್‌, ಬೂಟ್‌ ಕಟ್‌, ಶರರಾ, ಘರಾರದಂತಹ ಅಗಲವಾದ ನೆಲಹಾಸುವಂತಹ ಪ್ಯಾಂಟ್‌ಗಳನ್ನು ಧರಿಸಬೇಡಿ.

Monsoon Fashion

ನೆಲ ಮುಟ್ಟುವ ಗೌನ್‌ಗಳನ್ನು ದೂರವಿಡಿ

ನಡೆಯುವಾಗ ನೆಲವನ್ನು ಮುಟ್ಟುವಂತಹ ಉದ್ದುದ್ದ ಮ್ಯಾಕ್ಸಿ, ಗೌನ್‌ಗಳಿಗೆ ಸದ್ಯಕ್ಕೆ ಬೈ ಹೇಳಿ. ಇವು ನೋಡಲು ಮಾತ್ರ ಆಕರ್ಷಕವಾಗಿ ಕಾಣಿಸುತ್ತವೆ. ಇವನ್ನು ನಿರ್ವಹಣೆ ಮಾಡುವುದು ಕಷ್ಟ.

Monsoon Fashion

ಭಾರವಿಲ್ಲದ ಲೈಟ್‌ವೈಟ್‌ ಉಡುಗೆ ಧರಿಸಿ

ಲೇಯರಿಂಗ್‌ ಹೆಸರಲ್ಲಿ ದಪ್ಪನೆಯ ಫ್ಯಾಬ್ರಿಕ್‌ನ ಉಡುಗೆಗಳು ಉಸಿರುಕಟ್ಟಿಸಬಹುದು. ಮಳೆಯಲ್ಲಿ ಒದ್ದೆಯಾದರಂತೂ ಕಿರಿಕಿರಿ ಎನಿಸಬಹುದು. ಇದನ್ನು ಅವಾಯ್ಡ್ ಮಾಡಲು, ಬೇಗನೇ ಒಣಗುವ ಲೈಟ್‌ವೈಟ್‌ ಡ್ರೆಸ್‌ಗಳಿಗೆ ಸೈ ಎನ್ನಿ.

ಹೆವಿ ಎಥ್ನಿಕ್‌ ಡಿಸೈನರ್‌ವೇರ್‌ ಅವಾಯ್ಡ್ ಮಾಡಿ

ಹೆವಿ ಎಥ್ನಿಕ್‌ವೇರ್‌ಗಳನ್ನು ಆವಾಯ್ಡ್ ಮಾಡಿ. ಎಥ್ನಿಕ್‌ವೇರ್‌ ಧರಿಸಲೇ ಬೇಕಿದ್ದಲ್ಲಿ ಆದಷ್ಟೂ ಆಂಕೆಲ್‌ ಲೆಂಥ್‌ ಡಿಸೈನರ್‌ವೇರ್ಸ್ ಸೆಲೆಕ್ಟ್ ಮಾಡಿ ಶಾರ್ಟ್ ಕುರ್ತಾ, ಆಂಕೆಲ್‌ ಲೆಂಥ್‌ ಚೂಡಿದಾರ್‌, ಸಲ್ವಾರ್‌ಗಳನ್ನು ಧರಿಸಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಉತ್ತರ ಧ್ರುವದಿಂದ ದಕ್ಷಿಣ ಧ್ರುವದ ಕಡೆ ಮುಖ ಮಾಡಿದ ಮಳೆರಾಯ

Karnataka Weather Forecast : ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ (Rain News) ರೈತರು ಕಂಗಲಾಗಿದ್ದಾರೆ. ಮಳೆಯ ಆರ್ಭಟಕ್ಕೆ ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿದ್ದು ಜಮೀನುಗಳು ನೀರುಪಾಲಾಗಿವೆ.

VISTARANEWS.COM


on

By

karnataka Weather Forecast
Koo

ಹಾಸನ: ಮಳೆರಾಯ ಉತ್ತರ ಧ್ರುವದಿಂದ ದಕ್ಷಿಣ ಧ್ರುವದ ಕಡೆ ಮುಖ ಮಾಡಿದ್ದಾನೆ. ಮುಂದಿನ ಒಂದು ವಾರದಲ್ಲಿ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

ಹಾಸನದ ವಿವಿಧೆಡೆ ಕಳೆದ ರಾತ್ರಿಯಿಂದ ಧಾರಾಕಾರ ಮಳೆ ಸುರಿದಿದೆ. ಭಾರಿ ಮಳೆಗೆ ನಾಟಿ ಮಾಡಿದ್ದ ಭತ್ತದ ಸಸಿಗಳು ಕೊಚ್ಚಿ ಹೋಗಿವೆ. ಹಾಸನದ ಆಲೂರು ತಾಲೂಕಿನ ಬೆಂಬಳೂರು ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ಹಳ್ಳಕೊಳ್ಳಗಳು ಉಕ್ಕಿ ಹರಿದಿದೆ. ಭತ್ತದ ಗದ್ದೆಗಳಿಗೆ ಬಾರಿ ಪ್ರಮಾಣದ ನೀರು ನುಗ್ಗಿದೆ.

ನೀರಿನ‌ ರಭಸಕ್ಕೆ ಗದ್ದೆಯ ಬದುಗಳು ಕೊಚ್ಚಿ ಹೋಗಿವೆ. ನಾಟಿ ಮಾಡಲು ಸಿದ್ಧತೆ ನಡೆಸಿದ್ದ ರೈತರ ಆಸೆಗೆ ಮಳೆರಾಯ ತಣ್ಣೀರು ಎರಚಿದ್ದಾನೆ. ಐವತ್ತಕ್ಕೂ ಹೆಚ್ಚು ಎಕರೆ ಪ್ರದೇಶದ ಭತ್ತದ ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿದೆ. ಧಾರಾಕಾರ ಮಳೆಯಿಂದ ಕಂಗಾಲಾದ ರೈತರು ಆಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: CM Siddaramaiah: ತುಂಗಭದ್ರಾ ಜಲಾಶಯ ಮತ್ತೆ ತುಂಬುವ ನಿರೀಕ್ಷೆ, ರೈತರಿಗೆ ತೊಂದರೆಯಾಗದಂತೆ ಕ್ರಮ: ಸಿಎಂ

ಸರ್ಕಾರಿ ಶಾಲೆ ಜಲಾವೃತ, ರಸ್ತೆಗಳೆಲ್ಲವೂ ಗುಂಡಿ ಮಯ

ನಿನ್ನೆ ಸುರಿದ ಮಳೆಗೆ ಸರ್ಕಾರಿ ಶಾಲೆಯೊಂದು ಜಲಾವೃತಗೊಂಡಿದೆ. ಬೆಂಗಳೂರಿನ ವರ್ತೂರಿನ ಸಿದ್ದಾಪುರ ಸರ್ಕಾರಿ ಶಾಲೆಯ ಆವರಣದ ಸುತ್ತಲೂ ಮಳೆ ನೀರು ನಿಂತಿತ್ತು. ಬೆಳಗ್ಗೆ ಶಾಲೆಗೆ ಬಂದ ಮಕ್ಕಳು, ಎರಡು ಗಂಟೆಗಳ‌ ಕಾಲ ಶಾಲಾ ಕೊಠಡಿಗಳು ಸ್ವಚ್ಚತೆ ಮಾಡಿದರು.

ಇತ್ತ ಮಳೆ ನಿಂತು ಹೋದಮೇಲೆ ಗುಂಡಿಗಳು ಬಿದ್ದಿವೆ. ಎರಡು ದಿನದಿಂದ ಸುರಿದ ಮಳೆಗೆ ಬೆಂಗಳೂರಿನ ಟೌನ್ ಹಾಲ್ ಎದುರೇ 50ಕ್ಕೂ ಹೆಚ್ಚು ರಸ್ತೆ ಗುಂಡಿ ಬಿದ್ದಿವೆ. ಬಿಬಿಎಂಪಿಯಿಂದ 500 ಮೀಟರ್ ದೂರದಲ್ಲಿರುವ ಟೌನ್ ಹಾಲ್‌ ಸುತ್ತಮುತ್ತ ಇರುವ ಗುಂಡಿಗಳು ಬೈಕ್ ಸವಾರರ ಪಾಲಿಗೆ ಮೃತ್ಯುಕೂಪವಾಗಿದೆ.

ಕ್ಯಾರೆ ಎನ್ನದ ಬಿಬಿಎಂಪಿ

ಗುಂಡಿ ಫೋಟೋ ತೆಗೆದು ಕಳಿಸಿ ಅಂದರೆ ಬಿಬಿಎಂಪಿ ಕೆಲಸ ಮುಗಿತಾ? ಕೇವಲ ಆ್ಯಪ್ ಮಾಡಿ ಕೈತೊಳೆದು ಕೊಳ್ಳುತ್ತಿದೆ. ಮೊಣಕಾಲು ಉದ್ದ ಗುಂಡಿ ಇದ್ದರೂ ಬಿಬಿಎಂಪಿ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ. ಬೆಂಗಳೂರಿನ ಸಿಂಗಯ್ಯನಪಾಳ್ಯ ರಸ್ತೆಯ ಮಧ್ಯದಲ್ಲಿ ಯಮ ಸ್ವರೂಪಿ ಗುಂಡಿ ಬಿದ್ದಿದೆ. ಸ್ವಲ್ಪ ಎಚ್ಚರ ತಪ್ಪಿದ್ದರೂ, ಜೀವಕ್ಕೆ ಅಪಾಯ ಗ್ಯಾರಂಟಿ. ಇನ್‌ಸ್ಟಾಗ್ರಾಂ‌ಮ್‌ನಲ್ಲಿ ಪೋಸ್ಟ್ ಹಾಕಿ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: Tungabhadra Dam: ಗೇಟ್‌ ರಿಪೇರಿಗಾಗಿ 60 ಟಿಎಂಸಿ ನೀರು ಖಾಲಿ, 8 ಜಿಲ್ಲೆಗಳ ರೈತರಿಗೆ ನೀರಿಲ್ಲ!

ನಾಳೆ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ರಾಮನಗರ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಚದುರಿದಂತೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲೂ ಮಳೆಯು ಅಬ್ಬರಿಸಲಿದೆ. ಇತ್ತ ಕೊಪ್ಪಳ, ಗದಗ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಗುಡುಗು ಸಾಥ್‌ ನೀಡಲಿದೆ.

ಬೆಂಗಳೂರಲ್ಲಿ ಗುಡುಗು ಸಹಿತ ಮಳೆ

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Raichur News: ಶಿಕ್ಷಕಿಗೆ ಅಶ್ಲೀಲ ಮೆಸೇಜ್‌ ಕಳಿಸಿದ ಪ್ರಭಾರಿ ಪ್ರಾಚಾರ್ಯನಿಗೆ ಧರ್ಮದೇಟು

Raichur News: ಮೆಹಬೂಬ್ ಅಲಿ ಎಂಬಾತನೇ ಏಟು ತಿಂದ ಪ್ರಭಾರಿ ಪ್ರಾಚಾರ್ಯ. ಈತ ಶಿಕ್ಷಕಿಯ ಮೊಬೈಲ್‌ಗೆ ಅಶ್ಲೀಲ ಮೆಸೇಜ್‌ಗಳನ್ನು ಕಳಿಸುತ್ತಿದ್ದನಲ್ಲದೆ, ರಾತ್ರಿ ಮಲಗಲು ಬಾ ಎಂದೂ ಕರೆದಿದ್ದ.

VISTARANEWS.COM


on

raichur news misbehave
Koo

ರಾಯಚೂರು: ರಾಯಚೂರು ನಗರ (Raichur news) ಸಮೀಪದ ಯರಮರಸ್ ಬಳಿಯ ಆದರ್ಶ ವಿದ್ಯಾಲಯದ ಪ್ರಭಾರಿ ಪ್ರಾಚಾರ್ಯನೊಬ್ಬ (Principal in charge) ತರಬೇತಿಗೆ ಬಂದಿದ್ದ ಶಿಕ್ಷಕಿ ಜತೆ ಅನುಚಿತವಾಗಿ (Misbehave) ವರ್ತಿಸಿದ್ದರಿಂದ ಥಳಿತಕ್ಕೊಳಗಾದ (Beaten) ಘಟನೆ ಸೋಮವಾರ ನಡೆದಿದೆ.

ಮೆಹಬೂಬ್ ಅಲಿ ಎಂಬಾತನೇ ಏಟು ತಿಂದ ಪ್ರಭಾರಿ ಪ್ರಾಚಾರ್ಯ. ಈತ ಶಿಕ್ಷಕಿಯ ಮೊಬೈಲ್‌ಗೆ ಅಶ್ಲೀಲ ಮೆಸೇಜ್‌ಗಳನ್ನು ಕಳಿಸುತ್ತಿದ್ದನಲ್ಲದೆ, ರಾತ್ರಿ ಮಲಗಲು ಬಾ ಎಂದೂ ಕರೆದಿದ್ದ. ಇದರಿಂದ ನೊಂದ ಶಿಕ್ಷಕಿ ತಮ್ಮವರಿಗೆ ಮಾಹಿತಿ ತಿಳಿಸಿದ್ದರು. ಶಾಲೆಗೆ ಬಂದ ಶಿಕ್ಷಕಿಯ ಬಂಧುಗಳು, ಸಾರ್ವಜನಿಕರು ಪ್ರಭಾರ ಪ್ರಾಚಾರ್ಯನಿಗೆ ಚೆನ್ನಾಗಿ ಥಳಿಸಿ ಬುದ್ಧಿ ಕಲಿಸಿದ್ದಾರೆ.

ಪ್ರಭಾರಿ ಪ್ರಾಚಾರ್ಯ ಮೆಹಬೂಬ್ ಅಲಿ, ತಾನು ಮಾಡಿದ್ದು ತಪ್ಪಾಗಿದೆ. ಇನ್ನು ಮುಂದೆ ಹಾಗೆ ಮಾಡುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟಿದ್ದಾನೆ. ಶಿಕ್ಷಕಿಯ ಕಾಲಿಗೆ ಬಿದ್ದು ಕ್ಷಮೆ ಕೇಳಿದ್ದಾನೆ. ಈ ಕುರಿತು ಗ್ರಾಮೀಣ ಠಾಣೆ ಅಥವಾ ಮಹಿಳಾ ಠಾಣೆಯಲ್ಲಾಗಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.

ಬೆಂಗಳೂರಿನಲ್ಲಿ ಮತ್ತೊಬ್ಬ ಟೆಕ್ಕಿ ಮಿಸ್ಸಿಂಗ್‌! ಪತಿಯನ್ನು ಹುಡುಕಿಕೊಡಿ ಎಂದು ಅಂಗಲಾಚಿದ ಪತ್ನಿ

ಬೆಂಗಳೂರು: ಈ ಹಿಂದೆ ಕೂಡ ಟೆಕ್ಕಿಯೊಬ್ಬರು (Techie Missingನಿಗೂಢವಾಗಿ ನಾಪತ್ತೆಯಾಗಿದ್ದರು. ಇದರ ಬೆನ್ನಲ್ಲೇ ಎಟಿಎಂನಲ್ಲಿ ಹಣ ಡ್ರಾ ಮಾಡಲು ಹೋದ ಮತ್ತೊಬ್ಬ ಟೆಕ್ಕಿ ನಾಪತ್ತೆಯಾಗಿದ್ದಾರೆ. ಪತಿಯನ್ನು ಹುಡುಕಿ ಕೊಡಿ ಪ್ಲೀಸ್‌ ಅಂತ ಪತ್ನಿ ಬೇಡಿಕೊಳ್ಳುತ್ತಿದ್ದಾರೆ.

ವಿಪುಲ್ ಗುಪ್ತಾ ಎಂಬ ಟೆಕ್ಕಿ ಕಾಣೆಯಾದವರು. ಆತ ಹೊರಗೆ ಹೋಗಿದ್ದಕ್ಕೆ ಸುಳಿವು ಎಂಬಂತೆ ಒಂದು ಸಿಸಿಟಿವಿ ವಿಡಿಯೋ ಬಿಟ್ಟರೆ, ಎಲ್ಲಿ ಹೋದ ಎಂಬ ಮಾಹಿತಿ ಮಾತ್ರ ಕಿಂಚಿತ್ತು ಕುಟುಂಬಸ್ಥರಿಗಿಲ್ಲ. ಪತಿಯನ್ನು ಹುಡುಕಿಕೊಡಿ ಎಂದು ಪತ್ನಿ ಶ್ರೀಪರ್ಣದತ್ತ ಗೋಗರೆಯುತ್ತಿದ್ದಾರೆ.

ಸೋಲೋ ರೈಡ್‌ಗೆ ಹೋಗುತ್ತಿದ್ದವನ ಸುಳಿವೇ ಇಲ್ಲ!

ಈ ಹಿಂದೆ ಅಮಿತಾಬ್ ಎಂಬ ಟೆಕ್ಕಿ ಕೂಡ ಇದೇ ರೀತಿ ನಿಗೂಢವಾಗಿ ನಾಪತ್ತೆಯಾಗಿದ್ದ . ಆದರೆ ಆತನ ಸುಳಿವು ಇಂದಿಗೂ ಸಿಕ್ಕಿಲ್ಲ. ಇನ್ನು ಕೊಡಿಗೇಹಳ್ಳಿಯ ಟಾಟಾ ನಗರ ನಿವಾಸಿಯಾಗಿರುವ ವಿಪುಲ್‌ಗೆ ಇಬ್ಬರು ಮಕ್ಕಳಿದ್ದಾರೆ. ಪತಿ -ಪತ್ನಿ ಇಬ್ಬರಿಗೂ ಪೋಷಕರಿಲ್ಲ. ಆದರೂ ದುಡಿದು ತಮ್ಮ ಸಂಸಾರ ಸಾಗಿಸುತ್ತಿದ್ದರು. ಶ್ರೀಮಂತಿಕೆ ಇಲ್ಲದಿದ್ದರೂ ಜೀವನಕ್ಕಾಗುವಷ್ಟು ಸಿರಿವಂತರೇ ಆಗಿದ್ದರು. ಅಂತಹ ಕುಟುಂಬದಲ್ಲಿ ಏಕಾಏಕಿ ಪತಿ ಕಾಣೆಯಾಗಿರುವುದು ಪತ್ನಿ ಶ್ರೀಪರ್ಣ ದತ್ತಾಳಿಗೆ ನಿಜಕ್ಕೂ ಆತಂಕ ಮೂಡಿಸಿದೆ.

ವಿಪುಲ್‌ ಕಾಣೆಯಾಗಿ ಹೆಚ್ವು ಕಮ್ಮಿ ಎಂಟು ದಿನಗಳಾಗಿದೆ. ಆಗಸ್ಟ್ 4ರಂದು ಮನೆ ಪಕ್ಕದಲ್ಲಿರುವ ಹೆಚ್ ಡಿ ಎಫ್ ಸಿ ಬ್ಯಾಂಕ್‌ನಲ್ಲಿ ಒಟ್ಟು 1,80,000 ರೂ. ಹಣ ಡ್ರಾ ಮಾಡಿದ್ದಾರೆ. ನಂತರ ನಿಂಜಾ ಬೈಕ್ ತೆಗೆದುಕೊಂಡು ಹೊರ ಹೋದವನ ಸುಳಿವೂ ಕೂಡ ಇರಲಿಲ್ಲ. ಎಲ್ಲಿಗಾದರೂ ಹೋಗುವಾಗ ಪತ್ನಿಗೆ ಹೇಳಿ ಹೋಗಿದ್ದರಂತೆ. ಆದರೆ ಈ ಬಾರಿ ಯಾರಿಗೂ ವಿಚಾರ ತಿಳಿಸದೆ ಮನೆಯಿಂದ ಹೊರ ಹೋಗಿದ್ದಾರೆ. ರಾತ್ರಿಯಾದರೂ ಬಾರದ ಹಿನ್ನೆಲೆ ಮೊಬೈಲ್‌ ನಂಬರ್‌ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಬಂದಿದೆ. ಆತನ ಸ್ನೇಹಿತರಿಗೂ ಕರೆ ಮಾಡಿ ಕೇಳಿದಾಗ ಅವರ್ಯಾರಿಗೂ ವಿಪುಲ್ ಬಗ್ಗೆ ಮಾಹಿತಿಯೇ ಇರಲಿಲ್ಲ.

ಇದನ್ನೂ ಓದಿ: Murder Case : ಶೆಡ್ಡಿಗೆ ಬಾರೋ ಎಂದ ಸ್ನೇಹಿತ; ಮಲಗಿದ್ದವನ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಕೊಲೆ

Continue Reading
Advertisement
Benefits Of Onion Hair Oil
ಆರೋಗ್ಯ12 mins ago

Benefits Of Onion Hair Oil: ಕೂದಲು ಬಿಳಿಯಾಗುತ್ತಿದೆಯೆ? ಈರುಳ್ಳಿ ತೈಲವನ್ನು ಈ ರೀತಿ ಬಳಸಿ

Aman Sehrawat
ಕ್ರೀಡೆ40 mins ago

Aman Sehrawat : ಒಲಿಂಪಿಕ್ಸ್​ನಲ್ಲಿ ಕಂಚು ಗೆದ್ದ ಅಮನ್ ಸೆಹ್ರಾವತ್​ಗೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ಬಡ್ತಿ

Job Alert
ಉದ್ಯೋಗ1 hour ago

Job Alert: ಹೆಸ್ಕಾಂನ 338 ಹುದ್ದೆಗಳಿಗೆ ಅರ್ಜಿ ಆಹ್ವಾನ

Vicky Kaushal Chhava teaser released
ಟಾಲಿವುಡ್1 hour ago

Vicky Kaushal: ವಿಕ್ಕಿ ಕೌಶಲ್ `ಛಾವಾ’ ಟೀಸರ್‌ ಔಟ್‌!

Hyena Movie
ಬೆಂಗಳೂರು1 hour ago

Hyena Movie: ಹೈನಾ ಚಿತ್ರದ ಫಸ್ಟ್‌ ಲುಕ್‌ ರಿಲೀಸ್‌

Happy Independence Day
ಪ್ರಮುಖ ಸುದ್ದಿ1 hour ago

Happy Independence Day : ನೀರಜ್​ನಿಂದ ಹಿಡಿದು ರೋಹಿತ್​ ಶರ್ಮಾ ; ಭಾರತೀಯ ಅಥ್ಲೀಟ್​​ಗಳ ಸ್ವಾತಂತ್ರ್ಯೋತ್ಸವ ಆಚರಣೆಯ ಪೋಸ್ಟ್​ಗಳು ಇಲ್ಲಿವೆ…

ದೇಶ1 hour ago

Indian Flag: ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ ಧ್ವಜಾರೋಹಣಗಳ ಪ್ರಕ್ರಿಯೆ ಬೇರೆ ಬೇರೆ ಅನ್ನೋದು ಗೊತ್ತಾ?

Independence Day 2024
ಕರ್ನಾಟಕ1 hour ago

Independence Day 2024: ಹಾಸನದಲ್ಲಿ 2500 ಅಡಿ ಉದ್ದದ ತ್ರಿವರ್ಣ ಧ್ವಜ ಪ್ರದರ್ಶನ

Bomb threat
ದೇಶ1 hour ago

Bomb Threat: ಅಸ್ಸಾಂನ 19 ಕಡೆಗಳಲ್ಲಿ ಬಾಂಬ್‌ ಇರಿಸಿ, ಬಳಿಕ ನಿಷ್ಕ್ರೀಯಗೊಳಿಸುವಂತೆ ಮನವಿ ಮಾಡಿದ ಉಲ್ಫಾ ಉಗ್ರರು

Sangolli Rayanna Jayanthi
ಬೆಂಗಳೂರು1 hour ago

Sangolli Rayanna Jayanthi: ಮುಂದಿನ ವರ್ಷ ಅದ್ಧೂರಿಯಾಗಿ ಸಂಗೊಳ್ಳಿ ರಾಯಣ್ಣ ಜಯಂತ್ಯುತ್ಸವ; ಸಿದ್ದರಾಮಯ್ಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌