Honey trap : ಮಿಸ್ ಕಾಲ್‌ನಲ್ಲೇ ಹುಡುಗರನ್ನು ಪಟಾಯಿಸುತ್ತಾಳೆ! ಮನೆಗೆ ಬಾ ಅಂತಾಳೆ ಸುಲಿಗೆ ಮಾಡ್ತಾಳೆ - Vistara News

ಬೆಂಗಳೂರು

Honey trap : ಮಿಸ್ ಕಾಲ್‌ನಲ್ಲೇ ಹುಡುಗರನ್ನು ಪಟಾಯಿಸುತ್ತಾಳೆ! ಮನೆಗೆ ಬಾ ಅಂತಾಳೆ ಸುಲಿಗೆ ಮಾಡ್ತಾಳೆ

Honey Trap : ಮಿಸ್‌ ಕಾಲ್‌ನಲ್ಲೇ ಹುಡುಗರನ್ನು ಪಟಾಯಿಸುವ ಐನಾತಿ ಲೇಡಿಯೊಬ್ಬಳು ತನ್ನ ಗ್ಯಾಂಗ್‌ ಸಮೇತ ಪೊಲೀಸ್‌ ಬಲೆಗೆ ಬಿದ್ದಿದ್ದಾಳೆ. ಹನಿಟ್ರ್ಯಾಪ್‌ ಮೂಲಕ ಹಣ ಮಾಡಲು ಹೋಗಿ ಜೈಲುಪಾಲಾಗಿದ್ದಾಳೆ.

VISTARANEWS.COM


on

Honey trap gang arrested in Bengaluru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹನಿ ಟ್ರ್ಯಾಪ್ ಗ್ಯಾಂಗ್‌ವೊಂದು (Honey trap) ಸಿಕ್ಕಿಬಿದ್ದಿದೆ. ಮದುವೆಯಾಗಿ ಮಕ್ಕಳಿದ್ದರೂ ಐಷಾರಾಮಿ ಜೀವನಕ್ಕಾಗಿ ಮಹಿಳೆ ಹನಿಟ್ರ್ಯಾಪ್ ಮಾಡುತ್ತಿದ್ದಳು. ಮಿಸ್ ಕಾಲ್ ಕೊಡುವ ಈ ಖತರ್ನಾಕ್‌ ಲೇಡಿ, ಹುಡುಗರನ್ನು ಲವ್‌ನಲ್ಲಿ ಬೀಳುವಂತೆ ಮಾಡಿ ಪಟಾಯಿಸುತ್ತಿದ್ದಳು.

ಸದ್ಯ ಲೇಡಿ ಸೇರಿ ಸಂಪಿಗಹಳ್ಳಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ನಜ್ಮಾಕೌಸರ್, ಮಹಮ್ಮದ್ ಆಶೀಕ್, ಖಲೀಲ್ ಬಂಧಿತ ಆರೋಪಿಗಳು. ಐನಾತಿ ಹೆಂಗಸು ಸಂಪಿಗೆಹಳ್ಳಿಯ ತನ್ನ ಮನೆಯನ್ನೇ ಹನಿಟ್ರ್ಯಾಪ್ ಅಡ್ಡೆಯಾಗಿ ಮಾಡಿಕೊಂಡಿದ್ದಳು.

ಮೊದಲಿಗೆ ಅಪರಿಚಿತ ಸಂಖ್ಯೆಗೆ ಕರೆ ಮಾಡುವ ಐನಾತಿ ಗ್ಯಾಂಗ್, ಬೆಂಗಳೂರಿನವರು ಎಂದು ಗೊತ್ತಾದರೆ ಸಾಕು ಸಲುಗೆಯಿಂದ ಮಾತಾಡುತ್ತಿದ್ದಳು. ಎಷ್ಟರ ಮಟ್ಟಿಗೆ ಎಂದರೆ ಕಷ್ಟ ಸುಖ ವಿಚಾರಿಸುವ ರೀತಿ ಹತ್ತಿರವಾಗುತ್ತಿದ್ದ ಚಾಲಾಕಿ ನಜ್ಮಾ, ನಂತರ ಪರಿಚಯ ಆದವರಿಂದಲೇ ಸಣ್ಣ ಮೊತ್ತದ ಹಣ ಪಡೆದು ಹಿಂದಿರುಗಿಸುತ್ತಿದ್ದಳು.

ಬಳಿಕ ನಿಧಾನವಾಗಿ ಯುವಕರನ್ನು ಲೈಂಗಿಕವಾಗಿ ಪ್ರಚೋದಿಸಿ ಮಾತನಲ್ಲೇ ಮೋಡಿ ಮಾಡುತ್ತಿದ್ದಳು. ಮನೆಯಲ್ಲಿ ಯಾರು ಇಲ್ಲ ಬಾ.. ಏಕಾಂತದಲ್ಲಿ ಕಾಲ ಕಳೆಯೋಣ ಎಂದು ಬಲೆಗೆ ಬೀಳಿಸಿಕೊಳ್ಳುತ್ತಿದ್ದಳು. ಇವಳನ್ನು ನಂಬಿ ಬಂದ ಯುವಕರನ್ನು ಸೀದಾ ಮನೆಯ ಬೆಡ್‌ ರೂಮ್‌ಗೆ ಕರೆದುಕೊಂಡು ಹೋಗುತ್ತಿದ್ದಳು.

ಇನ್ನೇನು ಯುವಕ ಖುಷಿಯಲ್ಲಿ ತೇಲಾಡುತ್ತಿದ್ದಾಗಲೇ ನಜ್ಮಾಕೌಸರ್ ಗ್ಯಾಂಗ್ ಎಂಟ್ರಿ ಕೊಡುತ್ತಿತ್ತು. ಯಾರೋ ನೀನು ಏಕೆ ಬಂದಿದ್ದೀಯಾ ಎಂದು ಬೆದರಿಸುತ್ತಿತ್ತು. ಹಣ ಕೊಡು, ಇಲ್ಲವಾದಲ್ಲಿ ರೇಪ್ ಕೇಸ್ ಹಾಕಿಸುತ್ತೇವೆ ಎಂದು ಧಮ್ಕಿ ಹಾಕಿ ವಸೂಲಿ ಮಾಡುತ್ತಿದ್ದರು. ಇದೇ ರೀತಿ ಕಳೆದ ವಾರ ಕೊರಿಯರ್ ಬಾಯ್‌ಗೆ ಟ್ರ್ಯಾಪ್ ಮಾಡಿದ್ದರು. ಸಂತ್ರಸ್ತ ಯುವಕ ಕೊಟ್ಟ ದೂರಿನನ್ವಯ ನಜ್ಮಾ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್‌ ಆಗಿದೆ.

ಇದನ್ನೂ ಓದಿ: Accident Case : ಮಹಿಳೆ ಮೇಲೆ ಮಣ್ಣಿನ ರಾಶಿ ಹಾಕಿದ ಜೆಸಿಬಿ ಚಾಲಕ; ಬಯಲು ಶೌಚಕ್ಕೆ ಹೋದಾಕೆ ಉಸಿರುಗಟ್ಟಿ ಸಾವು!

ಜಿಂಕೆ ಚರ್ಮ ಮಾರಾಟಕ್ಕೆ ಯತ್ನ

ಜಿಂಕೆ ಚರ್ಮ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯ ಬಂಧನವಾಗಿದೆ. ಮೈಸೂರಿನ ಬೈಲುಕುಪ್ಪೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ದೊಡ್ಡ ಹೊನ್ನೂರು ಗ್ರಾಮದ ಪುನೀತ್(25) ಬಂಧಿತ ಆರೋಪಿ. ಬೈಲಕುಪ್ಪೆ ಪೆಟ್ರೋಲ್ ಬಂಕ್ ಬಳಿ ಜಿಂಕೆ ಚರ್ಮವನ್ನು ಗೋಣಿಚೀಲದಲ್ಲಿ ಇಟ್ಟುಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದ. ಖಚಿತ ಮಾಹಿತಿ ಆಧರಿಸಿದ ದಾಳಿ ನಡೆಸಿದ ಪೊಲೀಸರು ಆರೋಪಿ ಪುನೀತ್‌ನನ್ನು ವಶಕ್ಕೆ ಪಡೆದು, ಆತನ ವಿರುದ್ಧ ಬೈಲುಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಸ್ ಐ ಅಜಯ್ ಕುಮಾರ್, ಸಿಬ್ಬಂದಿಯಾದ ಮುದ್ದುರಾಜು, ಮಹದೇವಪ್ಪ, ಸುರೇಶ್, ಚೇತನ್, ಮಹೇಶ್‌ರಿಂದ ಕಾರ್ಯಾಚರಣೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bengaluru Roads: ರಸ್ತೆ ಗುಂಡಿ ಮುಚ್ಚುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸಚಿವರಿಂದಲೇ ಮನವಿ!

Bengaluru Roads: ಬೆಂಗಳೂರಿನ ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡ್‌ನ ಸರ್ವಿಸ್ ರಸ್ತೆಯನ್ನು ದುರಸ್ತಿ ಮಾಡುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

VISTARANEWS.COM


on

Bengaluru Roads
Koo

ಬೆಂಗಳೂರು: ಸಚಿವರು ಸೂಚಿಸಿದರೆ ಯಾವುದೇ ಕೆಲಸ, ನಿಗದಿತ ಅವಧಿಯೊಳಗೆ ತ್ವರಿತವಾಗಿ ಮುಗಿಯುತ್ತದೆ. ಆದರೆ, ರಾಜಧಾನಿ ರಸ್ತೆಗಳ (Bengaluru Roads) ದುಸ್ಥಿತಿ ನೋಡಿ ದುರಸ್ತಿ ಮಾಡುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸಚಿವರೇ ಮನವಿ ಮಾಡಿರುವುದು ಕಂಡುಬಂದಿದೆ. ಹೀಗಾಗಿ ಇದು ಸರ್ಕಾರದ ಅಸಹಾಯಕತೆಯೋ? ಅಥವಾ ಸಚಿವರ ಅಸಹಾಯಕತೆಯೋ? ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಹೌದು, ನಗರದ ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡ್‌ನ ಸರ್ವಿಸ್ ರಸ್ತೆಯನ್ನು ದುರಸ್ತಿ ಮಾಡುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ (Krishna Byre Gowda) ಅವರು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡಿನ ಸರ್ವಿಸ್ ರಸ್ತೆಯ ವಿಡಿಯೊವನ್ನು ಸಾರ್ವಜನಿಕರು ನನಗೆ ಕಳಿಸಿದ್ದಾರೆ. ಬಿಬಿಎಂಪಿ ಆಯುಕ್ತರು ಅಥವಾ ಬಿಎಂಆರ್‌ಸಿಎಲ್‌ ಎಂಡಿ ಯಾರಾದರೂ ಆಗಲಿ, ದಯವಿಟ್ಟು ಗುಂಡಿಯನ್ನು ಮುಚ್ಚಿ ರಸ್ತೆ ದುರಸ್ತಿ ಮಾಡಿ, ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸಿ ಎಂದು ಸಚಿವರು ಮನವಿ ಮಾಡಿದ್ದಾರೆ.

ರಸ್ತೆ ಗುಂಡಿ ಮುಚ್ಚುವಂತೆ ಸಾಮಾಜಿಕ ಜಾಲತಾಣದ ಮೂಲಕ ಅಧಿಕಾರಿಗಳಿಗೆ ಸಚಿವರು ಮನವಿ ಮಾಡಿರುವುದರಿಂದ ಇದು ಸರ್ಕಾರದ ಅಸಹಾಯಕತೆಯೋ? ಅಥವಾ ಸಚಿವರ ಅಸಹಾಯಕತೆಯೋ? ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.

ಅತ್ತ ಬ್ರ್ಯಾಂಡ್ ಬೆಂಗಳೂರು ಬಗ್ಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಭಾಷಣ ಮಾಡುತ್ತಾರೆ. ಇತ್ತ ನೇರವಾಗಿ ಡಿ.ಕೆ.ಶಿವಕುಮಾರ್‌ಗೆ ಹೇಳಲಾಗದೆ, ಬಿಡಲಾಗದೇ ಸಚಿವರು ಒದ್ದಾಡುತ್ತಿದ್ದಾರೆ. ಮತ್ತೊಂದೆಡೆ ಸಾರ್ವಜನಿಕರ ಸಮಸ್ಯೆ ಬಗ್ಗೆ ಬಿಬಿಎಂಪಿ ಅಧಿಕಾರಿಗಳು ಕಣ್ಣೆತ್ತಿ ನೋಡುತ್ತಿಲ್ಲ ಎಂದು ಸಾರ್ವಜನಿಕರು ಅರೋಪಿಸಿದ್ದಾರೆ.

ಇದನ್ನೂ ಓದಿ | Bomb Threat: ಅಸ್ಸಾಂನ 19 ಕಡೆಗಳಲ್ಲಿ ಬಾಂಬ್‌ ಇರಿಸಿ, ಬಳಿಕ ನಿಷ್ಕ್ರೀಯಗೊಳಿಸುವಂತೆ ಮನವಿ ಮಾಡಿದ ಉಲ್ಫಾ ಉಗ್ರರು

ಮುಂದಿನ ವರ್ಷ ಅದ್ಧೂರಿಯಾಗಿ ಸಂಗೊಳ್ಳಿ ರಾಯಣ್ಣ ಜಯಂತ್ಯುತ್ಸವ; ಸಿದ್ದರಾಮಯ್ಯ

Sangolli Rayanna Jayanthi

ಬೆಂಗಳೂರು: ಮುಂದಿನ ವರ್ಷದಿಂದ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನವರ ಜಯಂತ್ಯುತ್ಸವ (Sangolli Rayanna Jayanthi) ಹಾಗೂ ಪುಣ್ಯತಿಥಿಯಂದು ಕಾರ್ಯಕ್ರಮಗಳನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಪ್ರಯುಕ್ತ ಇಂದು ನಗರದ ಮೆಜೆಸ್ಟಿಕ್ ಸಮೀಪದ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ಸಂಗೊಳ್ಳಿ ರಾಯಣ್ಣನವರು ಸ್ವಾತಂತ್ರ್ಯೋತ್ಸವ ದಿನವಾದ ಆಗಸ್ಟ್ 15 ರಂದು ಜನಿಸಿದ್ದು, ಅವರು ಗಣರಾಜ್ಯೋತ್ಸವ ದಿನವಾದ ಜನವರಿ 26 ರಂದು ಹುತಾತ್ಮರಾದದ್ದು ವಿಶಿಷ್ಟ. ಮಹಾನ್ ರಾಷ್ಟ್ರಪ್ರೇಮಿ ಸಂಗೊಳ್ಳಿ ರಾಯಣ್ಣನವರ ಬದುಕು ನಮಗೆಲ್ಲರಿಗೂ ಸ್ಫೂರ್ತಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇದನ್ನೂ ಓದಿ: SBI Lending rate: SBI ಲೆಂಡಿಂಗ್‌ ದರದಲ್ಲಿ ಮತ್ತೆ ಏರಿಕೆ; ದುಬಾರಿಯಾಗಲಿದೆ EMI

ಕಾರ್ಯಕ್ರಮದಲ್ಲಿ ನಿಡುಮಾಮಿಡಿ ಶ್ರೀಗಳು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ. ರೇವಣ್ಣ, ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Continue Reading

ಮಳೆ

Karnataka Weather : ಇಂದು ಧ್ವಜಾರೋಹಣ ಆಯ್ತು, ನಾಳೆ ವರಮಹಾಲಕ್ಷ್ಮಿ ಹಬ್ಬಕ್ಕೂ ಮಳೆ ಅಡ್ಡಿ; ಬೆಂಗಳೂರು ಸೇರಿ ಕರಾವಳಿ, ಮಲೆನಾಡಿಗೆ ಅಲರ್ಟ್‌

Karnataka Weather Forecast: ವರಮಹಾಲಕ್ಷ್ಮಿ ಹಬ್ಬದ (Varamahalakshim Fest) ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಎಲ್ಲ ಸಾಧ್ಯತೆಯೂ ಇದೆ. ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಲಿದ್ದು, ಆರೆಂಜ್‌ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka Weather Forecast
ಜಲಾವೃತಗೊಂಡ ಸರ್ಕಾರಿ ಪ್ರಾಥಮಿಕ ಶಾಲೆ.. ನಿಂತ ನೀರಲ್ಲೇ ಧ್ವಜಾರೋಹಣ ಮಾಡಿದ ಮಕ್ಕಳು
Koo

ಚಿಕ್ಕೋಡಿ: ಗುರುವಾರ ಸಂಜೆ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಮಳೆ (Rain news) ಅಬ್ಬರ ಜೋರಾಗಿತ್ತು. ಚಿಕ್ಕೋಡಿ, ನಿಪ್ಪಾಣಿ ಹಾಗೂ ಹುಕ್ಕೇರಿ ತಾಲೂಕುಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಕಳೆದ ಒಂದು ವಾರದಿಂದ ವಿರಾಮ ನೀಡಿದ್ದ ಮಳೆ (karnataka weather Forecast) ಅಬ್ಬರಿಸಿತ್ತು.

ಶಾಲಾ ಆವರಣದಲ್ಲಿ ನಿಂತ ನೀರು

ರಾತ್ರಿ ಸುರಿದ ಮಳೆಯು ಅವಾಂತರವೇ ಸೃಷ್ಟಿಯಾಗಿದೆ. ಶಾಲಾ ಆವರಣದಲ್ಲಿ ನಿಂತ ನೀರಲ್ಲೇ ವಿದ್ಯಾರ್ಥಿಗಳು ಧ್ವಜಾರೋಹಣ ನೆರವೇರಿಸಿದರು. ಬಾಗಲಕೋಟೆಯ ಜಮಖಂಡಿಯ ಲಿಂಗದಕಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ.

ಇತ್ತ ನಿನ್ನೆ ಬುಧವಾರ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಬೆಳೆಗಳು ಜಲಾವೃತಗೊಂಡಿತ್ತು. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗುಂಡಾ ಗ್ರಾಮ ಹೊಲಗಳಿಗೆ ಹಳ್ಳದ ನೀರು ನುಗ್ಗಿತ್ತು. ರೈತ ಬಸವರಾಜ್ ಎಂಬುವವರಿಗೆ ಸೇರಿದ ನಾಲ್ಕೈದು ಎಕರೆ ಜಮೀನು ಜಲಾವೃತಗೊಂಡಿದೆ. ಹಿರೆಹಳ್ಳ ಒಡೆದು ಜಮೀನಿಗೆ ನೀರು ನುಗ್ಗಿದ ಪರಿಣಾಮ ಬೋರ್ ವೆಲ್ ಪೈಪ್ ಗಳು ಸೇರಿ ಮೆಕ್ಕೆಜೋಳ ಬೆಳೆ ಕೊಚ್ಚಿ ಹೋಗಿದೆ. ಮಳೆಗಾಲದಲ್ಲಿ ಹಳ್ಳದ ಮೂಲಕ ಗಣಿ ತ್ಯಾಜ್ಯ ಸಹ ಹರಿದು ಬಂದು ಜಮೀನುಗಳಲ್ಲಿ ಶೇಕರಣೆ ಆಗುತ್ತಿದೆ. ಇದರಿಂದಾಗಿ ಭೂಮಿ ಬೆಳೆ ಬೆಳೆಯಲು ಯೋಗ್ಯ ಇಲ್ಲದಂತಾಗಿದೆ.

ಇತ್ತ ಭಾರಿ ಮಳೆಯಿಂದ ನಾಗಲಾಪುರ ಹಳ್ಳ ಮೈದುಂಬಿ ಹರಿಯುತ್ತಿದ್ದು, ನಾಗಲಾಪೂರ- ಬ್ಯಾಲಕುಂದಿ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಿಂದ 5 ಹಳ್ಳಿಗಳ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಸೇತುವೆ ಮೇಲ್ಭಾಗದಲ್ಲಿ 7 ಅಡಿಗಳಷ್ಟು ಹರಿಯುತ್ತಿರುವ ನೀರಿನಿಂದಾಗಿ ನಾಗಲಾಪುರ, ನಾಗಲಾಪುರ ತಾಂಡಾ, ಬ್ಯಾಲಕುಂದಿ, ಗೊಲ್ಲರಹಳ್ಳಿ ಹಾಗೂ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.

ಇದನ್ನೂ ಓದಿ: Electric shock : ಕರೆಂಟ್‌ ಶಾಕ್‌ನಿಂದ ಎಂಜಿನಿಯರ್‌ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಈ ಜಿಲ್ಲೆಗಳಲ್ಲಿ ನಾಳೆ ಭಾರಿ ಮಳೆ

ಶುಕ್ರವಾರದಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಹಾಸನ, ಬಳ್ಳಾರಿ, ತುಮಕೂರು, ಮೈಸೂರು, ಕೊಡಗು ಜಿಲ್ಲೆಗಳಲ್ಲೂ ಪ್ರತ್ಯೇಕವಾಗಿ ಭಾರಿ ವರ್ಷಾಧಾರೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Hyena Movie: ಹೈನಾ ಚಿತ್ರದ ಫಸ್ಟ್‌ ಲುಕ್‌ ರಿಲೀಸ್‌

Hyena Movie: “ಹೈನಾ” ಚಿತ್ರದ ಫಸ್ಟ್ ಲುಕ್ ಅನ್ನು ಭಾರತೀಯ ಸೂಪರ್‌ ರೀಯಲ್‌ ಹೀರೋ “ಕ್ಯಾಪ್ಟನ್ ನವೀನ್ ನಾಗಪ್ಪ” ಬಿಡುಗಡೆ ಮಾಡಿದ್ದಾರೆ. ವೆಂಕಟ್ ಭರದ್ವಾಜ್ ನಿರ್ದೇಶನದ “ಹೈನಾ” ಚಿತ್ರದಲ್ಲಿ ಡಾ. ರಾಜ್ ಕಮಲ್, ಹರ್ಷ ಅರುಣ್ ಕಲಾಲ್, ಲಕ್ಷ್ಮಣ್ ಶಿವಶಂಕರ್, ದಿಗಂತ್, ನಂದಕುಮಾರ್, ಪ್ರಭು, ನಿರಂಜನ್, ಲಾರೆನ್ಸ್ ಮತ್ತು ವೆಂಕಟ್ ಭರದ್ವಾಜ್ ಸೇರಿದಂತೆ ಹಲವಾರು ತಾರೆಗಳು ಅಭಿನಯಿಸಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Hyena Movie
Koo

ಬೆಂಗಳೂರು: ಚಲನಚಿತ್ರದ ಫಸ್ಟ್ ಲುಕ್ ಸಾಮಾನ್ಯವಾಗಿ ತಾರೆಗಳು ಬಿಡುಗಡೆ ಮಾಡುತ್ತಾರೆ, ಆದರೆ “ಹೈನಾ” ಚಿತ್ರದ (Hyena Movie) ಫಸ್ಟ್ ಲುಕ್ ಅನ್ನು ಭಾರತೀಯ ಸೂಪರ್‌ ರೀಯಲ್‌ ಹೀರೋ “ಕ್ಯಾಪ್ಟನ್ ನವೀನ್ ನಾಗಪ್ಪ” ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: Sangolli Rayanna Jayanthi: ಮುಂದಿನ ವರ್ಷ ಅದ್ಧೂರಿಯಾಗಿ ಸಂಗೊಳ್ಳಿ ರಾಯಣ್ಣ ಜಯಂತ್ಯುತ್ಸವ; ಸಿದ್ದರಾಮಯ್ಯ

ಭಾರತೀಯ ಸೇನೆಗೆ ಸೇವೆ ಸಲ್ಲಿಸಿದ್ದ ಕ್ಯಾಪ್ಟನ್ ನವೀನ್ ನಾಗಪ್ಪ, 1990 ರಿಂದ 2000 ರವರೆಗೆ ನಡೆದ ಕಾರ್ಗಿಲ್ ಯುದ್ಧದಲ್ಲಿ ಭಾರತಕ್ಕೆ ಜಯವನ್ನು ತಂದುಕೊಡುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

ವೆಂಕಟ್ ಭರದ್ವಾಜ್ ನಿರ್ದೇಶಿಸಿರುವ ಆ್ಯಕ್ಷನ್ ಪ್ಯಾಕ್ಡ್‌ “ಹೈನಾ” ಚಿತ್ರದಲ್ಲಿ ಡಾ. ರಾಜ್ ಕಮಲ್, ಹರ್ಷ ಅರುಣ್ ಕಲಾಲ್, ಲಕ್ಷ್ಮಣ್ ಶಿವಶಂಕರ್, ದಿಗಂತ್, ನಂದಕುಮಾರ್, ಪ್ರಭು, ನಿರಂಜನ್, ಲಾರೆನ್ಸ್ ಮತ್ತು ವೆಂಕಟ್ ಭರದ್ವಾಜ್ ಸೇರಿದಂತೆ ಹಲವಾರು ತಾರೆಗಳು ಅಭಿನಯಿಸಿದ್ದಾರೆ.

ಚಿತ್ರದ ಕಥೆಯನ್ನು ಲಕ್ಷ್ಮಣ್ ಶಿವಶಂಕರ್ ಬರೆದಿದ್ದಾರೆ, ಛಾಯಾಗ್ರಹಣವನ್ನು ನಿಶಾಂತ್ ನಾನಿ ಮಾಡಿದ್ದಾರೆ ಮತ್ತು ಲವ್ವ್ ಪ್ರಣ್ ಮೆಹ್ತಾ ಸಂಗೀತ ನೀಡಿದ್ದಾರೆ.

ಇದನ್ನೂ ಓದಿ: SBI Lending rate: SBI ಲೆಂಡಿಂಗ್‌ ದರದಲ್ಲಿ ಮತ್ತೆ ಏರಿಕೆ; ದುಬಾರಿಯಾಗಲಿದೆ EMI

ಅಮೃತಾ ಫಿಲ್ಮ್ ಸೆಂಟರ್ ಮತ್ತು ಕೆಕೆ ಕಾಂಬೈನ್ಸ್ ನಿರ್ಮಿಸಿರುವ ಈ ಚಲನಚಿತ್ರವು 2024ರ ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಬಿಡುಗಡೆಯಾಗಲು ಸಿದ್ಧವಾಗುತ್ತಿದೆ.

Continue Reading

ಬೆಂಗಳೂರು

Sangolli Rayanna Jayanthi: ಮುಂದಿನ ವರ್ಷ ಅದ್ಧೂರಿಯಾಗಿ ಸಂಗೊಳ್ಳಿ ರಾಯಣ್ಣ ಜಯಂತ್ಯುತ್ಸವ; ಸಿದ್ದರಾಮಯ್ಯ

Sangolli Rayanna Jayanthi: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಅಂಗವಾಗಿ ಇಂದು ಬೆಂಗಳೂರು ನಗರದ ಮೆಜೆಸ್ಟಿಕ್ ಸಮೀಪದ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಮುಂದಿನ ವರ್ಷದಿಂದ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನವರ ಜಯಂತೋತ್ಸವ ಹಾಗೂ ಪುಣ್ಯತಿಥಿಯಂದು ಕಾರ್ಯಕ್ರಮಗಳನ್ನು ದೊಡ್ಡ ಮಟ್ಟದಲ್ಲಿ ಆಚರಿಸಲಾಗುವುದು ಎಂದು ತಿಳಿಸಿದ್ದಾರೆ.

VISTARANEWS.COM


on

Sangolli Rayanna Jayanthi
Koo

ಬೆಂಗಳೂರು: ಮುಂದಿನ ವರ್ಷದಿಂದ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನವರ ಜಯಂತ್ಯುತ್ಸವ (Sangolli Rayanna Jayanthi) ಹಾಗೂ ಪುಣ್ಯತಿಥಿಯಂದು ಕಾರ್ಯಕ್ರಮಗಳನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಪ್ರಯುಕ್ತ ಇಂದು ನಗರದ ಮೆಜೆಸ್ಟಿಕ್ ಸಮೀಪದ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ಸಂಗೊಳ್ಳಿ ರಾಯಣ್ಣನವರು ಸ್ವಾತಂತ್ರ್ಯೋತ್ಸವ ದಿನವಾದ ಆಗಸ್ಟ್ 15 ರಂದು ಜನಿಸಿದ್ದು, ಅವರು ಗಣರಾಜ್ಯೋತ್ಸವ ದಿನವಾದ ಜನವರಿ 26 ರಂದು ಹುತಾತ್ಮರಾದದ್ದು ವಿಶಿಷ್ಟ. ಮಹಾನ್ ರಾಷ್ಟ್ರಪ್ರೇಮಿ ಸಂಗೊಳ್ಳಿ ರಾಯಣ್ಣನವರ ಬದುಕು ನಮಗೆಲ್ಲರಿಗೂ ಸ್ಫೂರ್ತಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇದನ್ನೂ ಓದಿ: SBI Lending rate: SBI ಲೆಂಡಿಂಗ್‌ ದರದಲ್ಲಿ ಮತ್ತೆ ಏರಿಕೆ; ದುಬಾರಿಯಾಗಲಿದೆ EMI

ಕಾರ್ಯಕ್ರಮದಲ್ಲಿ ನಿಡುಮಾಮಿಡಿ ಶ್ರೀಗಳು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ. ರೇವಣ್ಣ, ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Continue Reading
Advertisement
Bengaluru Roads
ಕರ್ನಾಟಕ9 mins ago

Bengaluru Roads: ರಸ್ತೆ ಗುಂಡಿ ಮುಚ್ಚುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸಚಿವರಿಂದಲೇ ಮನವಿ!

Wildlife
ಪರಿಸರ10 mins ago

Wildlife: ಹುಟ್ಟಿದ ತಕ್ಷಣ ತಾಯಿಯನ್ನೇ ಕೊಂದು ತಿನ್ನುವ ಜೀವಿ ಇದು!

Karnataka Rain
ಮಳೆ17 mins ago

Karnataka Rain: ಗಂಗಾವತಿಯಲ್ಲಿ ಭಾರಿ ಮಳೆಗೆ ಮನೆಗಳಿಗೆ ನುಗ್ಗಿದ ನೀರು; ಭತ್ತದ ಗದ್ದೆಗಳಿಗೆ ಹಾನಿ

Gold Rate
ಪ್ರಮುಖ ಸುದ್ದಿ19 mins ago

Gold Rate : ಬೆಲೆ ಏರಿಕೆ ಪರಿಣಾಮ; ಏಪ್ರಿಲ್-ಜುಲೈನಲ್ಲಿ ಚಿನ್ನದ ಆಮದು ಶೇ.4.23ರಷ್ಟು ಇಳಿಕೆ

Viral Video
Latest24 mins ago

‌Richard Lugner: ಇತ್ತೀಚೆಗಷ್ಟೆ 6ನೇ ಮದುವೆಯಾಗಿದ್ದ 91 ವರ್ಷದ ಬಿಲಿಯಾಧೀಶ ಇನ್ನಿಲ್ಲ!

Viral News
Latest31 mins ago

Viral News: ಈತ 610 ಕೆಜಿ ಇದ್ದ, ಈಗ 63 ಕೆಜಿಗೆ ಇಳಿದಿದ್ದಾನೆ! 30 ವೈದ್ಯರ ತಂಡದ ಕಾರ್ಯಾಚರಣೆ!

Sexual Abuse
Latest38 mins ago

Sexual Abuse: ಲೈಂಗಿಕ ಕಿರುಕುಳ ನೀಡಿದವನನ್ನು ನಡು ರಸ್ತೆಯಲ್ಲಿ ಥಳಿಸಿದ ಅಕ್ಕತಂಗಿ; ವಿಡಿಯೊ ವೈರಲ್

Paris Paralympics
ಪ್ರಮುಖ ಸುದ್ದಿ56 mins ago

Paris Paralympics : ಪ್ಯಾರಾಲಿಂಪಿಕ್ಸ್​​ನಲ್ಲಿ 12 ಕ್ರೀಡೆಗಳಲ್ಲಿ ಭಾಗವಹಿಸಲಿದೆ ಭಾರತ

karnataka Weather Forecast
ಮಳೆ1 hour ago

Karnataka Weather : ಇಂದು ಧ್ವಜಾರೋಹಣ ಆಯ್ತು, ನಾಳೆ ವರಮಹಾಲಕ್ಷ್ಮಿ ಹಬ್ಬಕ್ಕೂ ಮಳೆ ಅಡ್ಡಿ; ಬೆಂಗಳೂರು ಸೇರಿ ಕರಾವಳಿ, ಮಲೆನಾಡಿಗೆ ಅಲರ್ಟ್‌

Electric Shock
ಕರ್ನಾಟಕ2 hours ago

Electric Shock: ಸ್ವಾತಂತ್ರ್ಯ ದಿನಾಚರಣೆ ಮುಗಿಸಿ ಮನೆಗೆ ಹೋಗುವಾಗ ವಿದ್ಯುತ್ ತಗುಲಿ ವಿದ್ಯಾರ್ಥಿ ಸಾವು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌