Thangalaan Movie: ಚಿಯಾನ್ ವಿಕ್ರಂ ‘ತಂಗಲಾನ್’ ಸಿನಿಮಾಗೆ ಮೆಚ್ಚುಗೆಯ ಮಹಾಪೂರ! - Vistara News

ಟಾಲಿವುಡ್

Thangalaan Movie: ಚಿಯಾನ್ ವಿಕ್ರಂ ‘ತಂಗಲಾನ್’ ಸಿನಿಮಾಗೆ ಮೆಚ್ಚುಗೆಯ ಮಹಾಪೂರ!

Thangalaan Movi e:ವಿಜಯ್ ಅಭಿಮಾನಿಯೊಬ್ಬ ಟ್ವೀಟ್ ಮಾಡಿ, ‘2024ರಲ್ಲಿ ಈವರೆಗೆ ಬಿಡುಗಡೆ ಆದ ಸಿನಿಮಾಗಳಲ್ಲಿ ಇದು ಅತ್ಯುತ್ತಮ ಸಿನಿಮಾ. ಈ ಸಿನಿಮಾದ ನಟನೆಗೆ ಚಿಯಾನ್ ವಿಕ್ರಂಗೆ ಪ್ರಶಸ್ತಿ ನೀಡಬೇಕು. ಜಿವಿ ಪ್ರಕಾಶ್ ಸಂಗೀತ ಅತ್ಯದ್ಭುತ. ಎಲ್ಲ ಕ್ರೆಡಿಟ್ ಹೋಗಬೇಕಿರುವುದು ನಿರ್ದೇಶಕ ಪಾ ರಂಜಿತ್​ಗೆ. ಎಂದಿನಂತೆ ಪಾ ರಂಜಿತ್ ನಿರ್ದೇಶನ ಅದ್ಭುತವಾಗಿತ್ತು. ದ್ವಿತೀಯಾರ್ಧ ನನಗೆ ಹೆಚ್ಚು ಇಷ್ಟವಾಯ್ತು’ ಎಂದಿದ್ದಾರೆ. ಸಿನಿಮಾ ನೋಡಿರುವ ಬಹುತೇಕ ನೆಟ್ಟಿಗರು ‘ತಂಗಲಾನ್’ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. 

VISTARANEWS.COM


on

Thangalaan Movie Review Pa Ranjith's Thangalaan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜ್ಞಾನವೇಲ್ ರಾಜ್ ನಿರ್ಮಾಣದ,‌ ಪಾ ರಂಜಿತ್ ನಿರ್ದೇಶನದ ಹಾಗೂ ಚಿಯಾನ್ ವಿಕ್ರಮ್‍ ಅಭಿನಯದ ‘ತಂಗಲಾನ್ʼ ಚಿತ್ರವು (Thangalaan Movie) ಇಂದು ಆಗಸ್ಟ್ 15 ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗಿದೆ. 2011 ರಲ್ಲಿ ನಟ ವಿಕ್ರಮ್ ಅಭಿನಯದ ‘ದೈವತಿರುಮಗಳು’ ಚಿತ್ರದ ನಂತರ ಗುಣಮಟ್ಟದ ಬ್ರೇಕ್ ನೀಡುವ ಚಿತ್ರಗಳು ಬಂದಿಲ್ಲ. ಏಕೆಂದರೆ ಈ ಚಿತ್ರದ ನಂತರ ಬಿಡುಗಡೆಯಾದ ಐ, ಇರುಮುಗನ್, ಕೋಬ್ರಾ, ಸಾಮಿ ಸ್ಕ್ವೇರ್ ಮುಂತಾದ ಬಿಗ್ ಬಜೆಟ್ ಚಿತ್ರಗಳು ಮಿಶ್ರ ವಿಮರ್ಶೆಗಳನ್ನು ಕಂಡವು. ಆದರೆ, ನಿರ್ದೇಶಕ ಮಣಿರತ್ನಂ ನಿರ್ದೇಶನದಲ್ಲಿ ಎರಡು ಭಾಗಗಳಲ್ಲಿ ತೆರೆಕಂಡ ‘ಪೊನ್ನಿಯಿನ್ ಸೆಲ್ವನ್’ ಚಿತ್ರ ವಿಕ್ರಮ್ ಗೆ ಮತ್ತೆ ಹಿಟ್ ಆಯಿತು.ಇದೀಗ ‘ತಂಗಾಲನ್’ ಅದ್ಭುತವಾದ ಸಿನಿಮಾ, ಕೆಲವು ಅದ್ಭುತ ದೃಶ್ಯಗಳನ್ನು ಪಾ ರಂಜಿತ್ ಕಟ್ಟಿಕೊಟ್ಟಿದ್ದಾರೆ’ ಎಂದು ಟ್ವೀಟ್ ಮಾಡಿದ್ದಾರೆ ಸಿನಿ ರಸಿಕರು.

ʻʻಈ ಚಿತ್ರವನ್ನು ಹಾಲಿವುಡ್ ಗುಣಮಟ್ಟದಲ್ಲಿ ಚಿತ್ರೀಕರಿಸಲಾಗಿದೆ. ನಿರ್ದೇಶಕ ಪಾ.ರಂಜಿತ್ ಬಗ್ಗೆ ಹೇಳಲು ಪದಗಳಿಲ್ಲ. ಅದೇ ರೀತಿ ನಟ ವಿಕ್ರಮ್ ಕೂಡ ತಮ್ಮ ಸಂಪೂರ್ಣ ಸಾಮರ್ಥ್ಯವನ್ನು ತೋರಿಸಿದ್ದಾರೆʼ ಎಂದು ಅಭಿಮಾನಿಯೊಬ್ಬರು ಬರೆದುಕೊಂಡಿದ್ದಾರೆ.

ವಿಜಯ್ ಅಭಿಮಾನಿಯೊಬ್ಬ ಟ್ವೀಟ್ ಮಾಡಿ, ‘2024ರಲ್ಲಿ ಈವರೆಗೆ ಬಿಡುಗಡೆ ಆದ ಸಿನಿಮಾಗಳಲ್ಲಿ ಇದು ಅತ್ಯುತ್ತಮ ಸಿನಿಮಾ. ಈ ಸಿನಿಮಾದ ನಟನೆಗೆ ಚಿಯಾನ್ ವಿಕ್ರಂಗೆ ಪ್ರಶಸ್ತಿ ನೀಡಬೇಕು. ಜಿವಿ ಪ್ರಕಾಶ್ ಸಂಗೀತ ಅತ್ಯದ್ಭುತ. ಎಲ್ಲ ಕ್ರೆಡಿಟ್ ಹೋಗಬೇಕಿರುವುದು ನಿರ್ದೇಶಕ ಪಾ ರಂಜಿತ್​ಗೆ. ಎಂದಿನಂತೆ ಪಾ ರಂಜಿತ್ ನಿರ್ದೇಶನ ಅದ್ಭುತವಾಗಿತ್ತು. ದ್ವಿತೀಯಾರ್ಧ ನನಗೆ ಹೆಚ್ಚು ಇಷ್ಟವಾಯ್ತು’ ಎಂದಿದ್ದಾರೆ. ಸಿನಿಮಾ ನೋಡಿರುವ ಬಹುತೇಕ ನೆಟ್ಟಿಗರು ‘ತಂಗಲಾನ್’ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. 

ಖ್ಯಾತ ಚಿತ್ರ ವಿಮರ್ಶಕ ಕ್ರಿಸ್ಟೋಫರ್ ಕನಕರಾಜ್ ನಿನ್ನೆಯಿಂದ ‘ತಂಗಳನ್’ ಚಿತ್ರದ ಬಗ್ಗೆ ತಮ್ಮ ನಿರೀಕ್ಷೆಗಳನ್ನು ವ್ಯಕ್ತಪಡಿಸಿದ್ದಾರೆ, ಇದು ನಕಾರಾತ್ಮಕ ವಿಮರ್ಶೆಗಳನ್ನು ಪಡೆಯುತ್ತಿದೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: Physical Abuse : ಭೀಮಾ ಸಿನಿಮಾ ನೋಡಲು ಬಂದು ಲೇಡಿಸ್‌ ವಾಶ್‌ ರೂಂನಲ್ಲಿ ಮೊಬೈಲ್ ಇಟ್ಟ ಅಪ್ರಾಪ್ತ!

ಕನ್ನಡದಲ್ಲಿ ‘ಕೃಷ್ಣಂ ಪ್ರಣಯ ಸಖಿ’, ‘ಗೌರಿ’, ತೆಲುಗಿನಲ್ಲಿ ‘ಮಿಸ್ಟರ್ ಬಚ್ಚನ್’ ಮತ್ತು ‘ಡಬಲ್ ಇಸ್ಮಾರ್ಟ್’ ಇನ್ನು ತಮಿಳಿನಲ್ಲಿ ಚಿಯಾನ್ ವಿಕ್ರಂ ನಟನೆಯ ‘ತಂಗಲಾನ್’ ಸಿನಿಮಾ ತೆರೆಗೆ ಬಂದಿದೆ. 

ಈ ಚಿತ್ರದ ಪಾತ್ರಕ್ಕಾಗಿ ವಿಕ್ರಮ್‍ ಆರು ತಿಂಗಳ ತಯಾರಿ ನಡೆಸಿದ್ದಾರಂತೆ ಹಾಗೂ ತುಂಬಾ ತೂಕವನ್ನು ಕಳೆದುಕೊಂಡಿದ್ದಾರಂತೆ. ದೈಹಿಕವಾಗಿ ಬದಲಾಗುವುದಕ್ಕಿಂತ ಮಾನಸಿಕವಾಗಿ ಬದಲಾಗುವುದು ಬಹಳ ಕಷ್ಟವಾಗಿತ್ತು. ಪ್ರತಿ ದಿನ ನಾಲ್ಕೈದು ಗಂಟೆಗಳ ಕಾಲ ಮೇಕಪ್‍ ಹಾಕಿಕೊಳ್ಳಬೇಕಿತ್ತು ಎಂದು ಚಿತ್ರೀಕರಣ ಸಮಯದ ಅನುಭವವನ್ನು ವಿಕ್ರಮ್ ಈ ಹಿಂದೆ ಹಂಚಿಕೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Vicky Kaushal: ವಿಕ್ಕಿ ಕೌಶಲ್ `ಛಾವಾ’ ಟೀಸರ್‌ ಔಟ್‌!

Vicky Kaushal: ರಶ್ಮಿಕಾ ಈಗಾಗಲೇ ಧ್ವನಿ ತರಬೇತಿಯನ್ನು ಪಡೆದಿದ್ದಾರೆ. ಕತ್ತಿ ಕಾಳಗ, ಕುದುರೆ ಸವಾರಿ ಮತ್ತು ಬಿಲ್ಲುಗಾರಿಕೆಯಲ್ಲಿ ಪ್ರವೀಣನಾಗಲು ನಾಲ್ಕು ತಿಂಗಳ ಕಾಲ ತರಬೇತಿಯನ್ನು ವಿಕ್ಕಿ ಅವರು ಪಡೆದುಕೊಂಡಿದ್ದಾರೆ. ಈ ಪ್ರಾಜೆಕ್ಟ್‌ ಅನ್ನು ದೊಡ್ಡದಾಗಿ ಮಾಡಲು ತಾಂತ್ರಿಕವಾಗಿಯೂ ಪಳಗಿದವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

VISTARANEWS.COM


on

Vicky Kaushal Chhava teaser released
Koo

ವಿಕ್ಕಿ ಕೌಶಲ್ (Vicky Kaushal) ತಮ್ಮ ಮುಂದಿನ ಚಿತ್ರ `ಛಾವಾ’ದ ಟೀಸರ್‌ ಬಿಡುಗಡೆಗೊಂಡಿದೆ. ತೀವ್ರವಾದ ಯುದ್ಧದ ದೃಶ್ಯಗಳಿಂದ ತುಂಬಿದೆ. ಛತ್ರಪತಿ ಶಿವಾಜಿ ಮಹಾರಾಜರ ಮಗ ಛತ್ರಪತಿ ಸಂಭಾಜಿ ಮಹಾರಾಜ್ ಲುಕ್‌ ಕಂಡು ಫ್ಯಾನ್ಸ್‌ ಫಿದಾ ಆಗಿದ್ದಾರೆ.

ಮರಾಠಾ ರಾಜ ಛತ್ರಪತಿ ಶಿವಾಜಿ ಮಹಾರಾಜರ ಹಿರಿಯ ಮಗ ಛತ್ರಪತಿ ಸಂಭಾಜಿ ಮಹಾರಾಜನ ಪಾತ್ರವನ್ನು ವಿಕ್ಕಿ ನಿಭಾಯಿಸಿದ್ದಾರೆ. ಚಿತ್ರವು ಪ್ರಾಥಮಿಕವಾಗಿ ಸಂಭಾಜಿ ಮಹಾರಾಜರ ಶೌರ್ಯ ಅವರ ತ್ಯಾಗ ಮತ್ತು ಯುದ್ಧಗಳನ್ನು ಗೆಲ್ಲುವ ತಂತ್ರಗಳ ಬಗ್ಗೆ ಇದ್ದರೂ, ಗಂಡ ಮತ್ತು ಹೆಂಡತಿಯ ನಡುವಿನ ಭಾವನಾತ್ಮಕ ಪ್ರೇಮಕಥೆಯನ್ನು ಸಹ ಒಳಗೊಂಡಿದೆ. ಮರಾಠ ಸಾಮ್ರಾಜ್ಯದಿಂದ ಸಂಭಾಜಿ ದೂರ ಇದ್ದಾಗ ಅವರ ಹೆಂಡತಿ ಎಲ್ಲವನ್ನೂ ನಿರ್ವಹಿಸುತ್ತಿದ್ದರು ಎನ್ನುವುದು ವಿಶೇಷ. ಈ ವಿಚಾರ ಕೂಡ ಸಿನಿಮಾದಲ್ಲಿ ಹೈಲೈಟ್ ಆಗಲಿದೆ.

ರಶ್ಮಿಕಾ ಈಗಾಗಲೇ ಧ್ವನಿ ತರಬೇತಿಯನ್ನು ಪಡೆದಿದ್ದಾರೆ. ಕತ್ತಿ ಕಾಳಗ, ಕುದುರೆ ಸವಾರಿ ಮತ್ತು ಬಿಲ್ಲುಗಾರಿಕೆಯಲ್ಲಿ ಪ್ರವೀಣನಾಗಲು ನಾಲ್ಕು ತಿಂಗಳ ಕಾಲ ತರಬೇತಿಯನ್ನು ವಿಕ್ಕಿ ಅವರು ಪಡೆದುಕೊಂಡಿದ್ದಾರೆ. ಈ ಪ್ರಾಜೆಕ್ಟ್‌ ಅನ್ನು ದೊಡ್ಡದಾಗಿ ಮಾಡಲು ತಾಂತ್ರಿಕವಾಗಿಯೂ ಪಳಗಿದವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: Thangalaan Movie: ಚಿಯಾನ್ ವಿಕ್ರಂ ‘ತಂಗಲಾನ್’ ಸಿನಿಮಾಗೆ ಮೆಚ್ಚುಗೆಯ ಮಹಾಪೂರ!

ಸ್ತ್ರೀ’, ‘ಭೇಡಿಯಾ’ ಮೊದಲಾದ ಸಿನಿಮಾಗಳಿಗೆ ಬಂಡವಾಳ ಹೂಡಿದ ಮ್ಯಾಡಾಕ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ʻಛಾವಾʼ ಸಿನಿಮಾ ಈ ಪ್ರೊಡಕ್ಷನ್ ಹೌಸ್‌ನ ಮೊದಲ ಐತಿಹಾಸಿಕ ಯೋಜನೆಯಾಗಿದೆ. ಈ ಯೋಜನೆ ವಿಕ್ಕಿ ಮತ್ತು ರಶ್ಮಿಕಾ ಅವರ ಮೊದಲ ಸಹಯೋಗವಾಗಿದೆ. ಈ ಹಿಂದೆ ಒಳಉಡುಪುಗಳ ಜಾಹೀರಾತಿಗಾಗಿ ಒಟ್ಟಿಗೆ ಕೆಲಸ ಮಾಡಿದ್ದರು.

Continue Reading

ಬಿಗ್ ಬಾಸ್

Bigg Boss Telugu 8: ಬಿಗ್​ಬಾಸ್ ತೆಲುಗು ಸೀಸನ್‌ 8ರ ಪ್ರೋಮೊ ಔಟ್‌; ಸಂಭಾವ್ಯರ ಪಟ್ಟಿಯಲ್ಲಿ ಇಬ್ಬರು ಕನ್ನಡತಿಯರು!

Bigg Boss Telugu 8: ಈಗಾಗಲೇ ಮೂರು ಪ್ರೋಮೋಗಳು ಬಿಡುಗಡೆಯಾಗಿದ್ದು, ಸೀಸನ್ 8ಕ್ಕೆ ಯಾರೆಲ್ಲ ಬರುತ್ತಾರೆ ಎಂಬ ಬಗ್ಗೆ ಕುತೂಹಲ ಕೂಡ ಹೆಚ್ಚಿದೆ. ಕನ್ನಡದವರು ಕೂಡ ಈ ಬಾರಿ ಇರಲಿದ್ದಾರೆ ಎಂದು ವರದಿಯಾಗಿದೆ.

VISTARANEWS.COM


on

Bigg Boss Telugu 8 Confirmed Contestants nagarjuna akkineni host
Koo

ಬಿಗ್​ಬಾಸ್ ತೆಲುಗು (Bigg Boss Telugu 8) ಮತ್ತೆ ಪ್ರಾರಂಭವಾಗುತ್ತಿದೆ. ಸ್ಟಾರ್ ಮಾ ಜನಪ್ರಿಯ ಟಿವಿ ರಿಯಾಲಿಟಿ ಶೋ ಬಿಗ್ ಬಾಸ್ ತೆಲುಗು ಸೀಸನ್ 8 ರ ಹೊಸ ಪ್ರೋಮೊವನ್ನು ಭಾನುವಾರ ಬಿಡುಗಡೆ ಮಾಡಿದೆ. ,ಈ ಶೋಗೆ ಸ್ಪರ್ಧಿಗಳು ಯಾರೆಂಬುದರ ಬಗ್ಗೆ ಚರ್ಚೆಗಳು ಶುರುವಾಗಿವೆ. ಈಗಾಗಲೇ ಮೂರು ಪ್ರೋಮೋಗಳು ಬಿಡುಗಡೆಯಾಗಿದ್ದು, ಸೀಸನ್ 8ಕ್ಕೆ ಯಾರೆಲ್ಲ ಬರುತ್ತಾರೆ ಎಂಬ ಬಗ್ಗೆ ಕುತೂಹಲ ಕೂಡ ಹೆಚ್ಚಿದೆ. ಕನ್ನಡದವರು ಕೂಡ ಈ ಬಾರಿ ಇರಲಿದ್ದಾರೆ ಎಂದು ವರದಿಯಾಗಿದೆ.

ಸಂಭಾವ್ಯ ಅಭ್ಯರ್ಥಿಗಳ ಹೆಸರು ವೈರಲ್ ಆಗುತ್ತಿದೆ. ಅದರಂತೆ ಜ್ಯೋತಿಷ್ಯ ವೇಣುಸ್ವಾಮಿ, ಯೂಟ್ಯೂಬರ್ ಬರೆಲ್ಲಕ್ಕ, ಯೂಟ್ಯೂಬರ್ ಯಾದಂ ರಾಜು ರಿತು ಚೌಧರಿ, ಕಿರುತೆರೆ ತಾರೆಯರಾದ ಅಂಜಲಿ, ಯಶ್ಮಿ ಗೌಡ, ತೇಜಸ್ವಿನಿ ಗೌಡ, ಹಿರಿಯ ನಟಿ ಸನಾ, ನಟ ಅನಿಲ್ ಗೀಲಾ, ಹಾಸ್ಯನಟ ಬುಂಚಿಕ್ ಬಬ್ಲು, ಕಿರಾಕ್ ಆರ್‌ಪಿ, ರಿಂಗ್ ರಿಯಾಜ್, ನಿರೂಪಕಿ ವಿಂಧ್ಯಾ ವಿಶಾಖ, ಪಾಗಲ್ ಪವಿತ್ರಾ ಹೀಗೆ ಹಲವು ಜನರ ಹೆಸರಿದೆ. ಇದರ ಜೊತೆಗೆ ಸುದ್ದಿ ವಾಚಕಿ ಕಲ್ಯಾಣಿ, ನಟಿ ರೇಖಾ ಬೋಜ್, ಸಾವಯವ ಕೃಷಿ ತಜ್ಞ ನೇತ್ರಾ ರೆಡ್ಡಿ, ಧಾರಾವಾಹಿ ನಟ ಇಂದ್ರನೀಲ್ ಸೇನ್‌ಗುಪ್ತ, ನಟ ಅಬ್ಬಾಸ್, ನಟ ರೋಹಿತ್, ಗಾಯಕ ಸಾಕೇತ್ ಕೊಮಂದೂರಿ, ಫೆಮಿನಾ ಮಿಸ್ ಇಂಡಿಯಾ ತೆಲಂಗಾಣ 2023 ರ ಊರ್ಮಿಳಾ ಚೌಹಾಣ್ ಅವರ ಹೆಸರು ಕೂಡ ಇದೆ.

ಇದರಲ್ಲಿ ಯಶ್ಮಿ ಗೌಡ ಕನ್ನಡದಾಕೆ, ಇದರ ಜೊತೆಗೆ ತೇಜಸ್ವಿನಿ ಗೌಡ ಕೂಡ ಕನ್ನಡದವರೇ ಆಗಿದ್ದಾರೆ. ಮೂಲತಃ ಕನ್ನಡದವರಾದ ಇವರು ತೆಲುಗಿನ ಧಾರವಾಹಿಗಳಲ್ಲಿ ಫೇಮಸ್ ಆಗಿದ್ದಾರೆ. . ಬಿಗ್ ಬಾಸ್ ಸೀಸನ್ 8 ಸೆಪ್ಟೆಂಬರ್ 8 ರ ಭಾನುವಾರ ಸಂಜೆ 6 ರಿಂದ ಪ್ರಾರಂಭವಾಗಲಿದೆ. ನಂದಮೂರಿ ಕುಟುಂಬದಿಂದ ತೆಲುಗು ಸಿನೆಮಾ ರಂಗಕ್ಕೆ ನಾಯಕನಾಗಿ ಕಾಲಿಟ್ಟಿರುವ ಚೈತನ್ಯ ಕೃಷ್ಣ ಅವರು ಬಿಗ್‌ಬಾಸ್‌ ಗೆ ಬರಲಿದ್ದಾರೆಂದು ಸುದ್ದಿ ಹಬ್ಬಿದೆ.

ಇದನ್ನೂ ಓದಿ: Bigg Boss Telugu 8: ಬಿಗ್‌ ಬಾಸ್‌ ಮನೆಗೆ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಎಂಟ್ರಿ?

ಸೆಪ್ಟೆಂಬರ್ 3 ರಂದು ತೆಲುಗು ಬಿಗ್​ಬಾಸ್ ಸೀಸನ್ 7 ಆರಂಭವಾಗಿತ್ತು. 19 ಮಂದಿ ಸ್ಪರ್ಧಿಗಳು ಶೋನಲ್ಲಿ ಭಾಗಿಯಾಗಿದ್ದರು. ಅವರಲ್ಲೇ ಇಬ್ಬರು ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮತ್ತೆ ಮನೆಗೆ ಬಂದಿದ್ದರು. ಅಲ್ಲಿಗೆ ಒಟ್ಟು 21 ಸ್ಪರ್ಧಿಗಳು ಈ ಬಾರಿಯ ಬಿಗ್​ಬಾಸ್ ತೆಲುಗು ಸೀಸನ್ 7ರಲ್ಲಿ ಆಡಿದರುಪಲ್ಲವಿ ಪ್ರಶಾಂತ್ ವಿನ್ನರ್ ಆಗಿದ್ದು, ಹಲವರಿಗೆ ಖುಷಿ ನೀಡಿತ್ತು. ಆದರೆ ಮೊದಲಿನಿಂದಲೂ ಶಿವಾಜಿ ವಿನ್ನರ್ ಎಂದುಕೊಂಡಿದ್ದ ಹಲವರಿಗೆ ಬೇಸರವಾಗಿತ್ತು.

Continue Reading

ಟಾಲಿವುಡ್

Naga Chaitanya: ಸಮಂತಾ ನಾಯಿಯಾಗಿ ಹುಟ್ಟಿದರೂ ಪರವಾಗಿಲ್ಲ ಎಂದ ಶೋಭಿತಾ ಧೂಳಿಪಾಲ; ಪೋಸ್ಟ್‌ ವೈರಲ್‌!

Naga Chaitanya: ಶೋಭಿತಾ ಅವರ ಸಹೋದರಿ ಸಮಂತಾ ಧೂಳಿಪಾಲ ನಿಶ್ಚಿತಾರ್ಥದ ಫೋಟೊಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್‌ ಮಾಡಿ ಶುಭ ಹಾರೈಸಿದ್ದಾರೆ. ಈ ಎಲ್ಲ ಬೆಳವಣಿಗೆ ನಡುವೆ ಇದೀಗ ಶೋಭಿತಾ ಅವರ ಹಳೆಯ ಇನ್‌ಸ್ಟಾಗ್ರಾಮ್‌ ಪೋಸ್ಟರ್‌ಗಳು ಒಂದೊಂದಾಗಿ ವೈರಲ್ ಆಗುತ್ತಿವೆ. ತನ್ನ ಸಹೋದರಿ ಸಮಂತಾ ಬಗ್ಗೆ ಈ ಹಿಂದೆ ಅವರು ಮಾಡಿದ ಕಾಮೆಂಟ್‌ಗಳು ಈಗ ವೈರಲ್ ಆಗುತ್ತಿವೆ.

VISTARANEWS.COM


on

Naga Chaitanya Shobhita Dhulipala said that Samantha was born as a dog and it doesn't matter
Koo

ಬೆಂಗಳೂರು: ಟಾಲಿವುಡ್‌ ನಟ ನಾಗ ಚೈತನ್ಯ (Naga Chaitanya) ಆಗಸ್ಟ್ 8ರಂದು ನಟಿ ಶೋಭಿತಾ ಧೂಳಿಪಾಲ (Sobhita Dhulipala) ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಹೈದರಾಬಾದ್‌ನಲ್ಲಿರುವ ನಾಗಾರ್ಜುನ ಅವರ ನಿವಾಸದಲ್ಲಿ ಸಮಾರಂಭ ಆಯೋಜಿಸಲಾಗಿತ್ತು. ಕುಟುಂಬದ ಆಪ್ತರು, ಸ್ನೇಹಿತರು ಈ ಸಮಾರಂಭದಲ್ಲಿ ಹಾಜರಿದ್ದರು. ಇದೀಗ ಶೋಭಿತಾ ಅವರ ಸಹೋದರಿ ಸಮಂತಾ ಧೂಳಿಪಾಲ ನಿಶ್ಚಿತಾರ್ಥದ ಫೋಟೊಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್‌ ಮಾಡಿ ಶುಭ ಹಾರೈಸಿದ್ದಾರೆ. ಈ ಎಲ್ಲ ಬೆಳವಣಿಗೆ ನಡುವೆ ಇದೀಗ ಶೋಭಿತಾ ಅವರ ಹಳೆಯ ಇನ್‌ಸ್ಟಾಗ್ರಾಮ್‌ ಪೋಸ್ಟರ್‌ಗಳು ಒಂದೊಂದಾಗಿ ವೈರಲ್ ಆಗುತ್ತಿವೆ. ತನ್ನ ಸಹೋದರಿ ಸಮಂತಾ ಬಗ್ಗೆ ಈ ಹಿಂದೆ ಅವರು ಮಾಡಿದ ಕಾಮೆಂಟ್‌ಗಳು ಈಗ ವೈರಲ್ ಆಗುತ್ತಿವೆ.

ಅದರಲ್ಲಿ ಒಂದುಪೋಸ್ಟ್ ಸಮಂತಾ ಹೆಸರಿನ ಕಾರಣಕ್ಕೆ ಹೆಚ್ಚಿನ ಗಮನ ಸೆಳೆದಿದೆ. “ನನ್ನ ಏಕೈಕ ಆಸೆ
ನನ್ನ ತಂದೆ ಮತ್ತು ತಾಯಿಗೆ ಪ್ರತಿ ಜೀವನದಲ್ಲಿ ಮಗಳಾಗಿ ಹುಟ್ಟ ಬೇಕು. ಅದನ್ನು ಬಿಟ್ಟು ಬೇರೇನೂ ನನಗೆ
ಮುಖ್ಯವಲ್ಲ . ನನ್ನ ತಂಗಿ ನಾಯಿಯಾಗಿ ಹುಟ್ಟಿದರೂ ಪರವಾಗಿಲ್ಲ ಅಥವಾ ಏನಾದರೂ ಆಗಲಿ, ನಾನು ಮಾತ್ರ
ನನ್ನ ತಂದೆ-ತಾಯಿಗೆ ಪ್ರತಿ ಜನ್ಮದಲ್ಲಿಯೂ ಮಗಳಾಗಿರಬೇಕುʼʼ ಎಂದು ಶೋಭಿತಾ ಈ ಹಿಂದೆ ಬರೆದುಕೊಂಡಿದ್ದರು. ಇದೀಗ ಮತ್ತೆ ಆಪೋಸ್ಟ್ ವೈರಲ್ ಆಗುತ್ತಿದೆ. ಶೋಭಿತಾ ಪೋಸ್ಟ್ ನೋಡಿದ ಕೆಲವರು ಗೊಂದಲಕ್ಕೆ ಒಳಗಾಗಿದ್ದಾರೆ. ಸಮಂತಾಗೆ ನಾಯಿಯಂತೆ ಹುಟ್ಟಲು ಹೇಳಿದ್ದಾರೆ ಎಂದು ಬೇಸರಹೊರಹಾಕಿದ್ದಾರೆ. ಆದರೆ, ಶೋಭಿತಾ ಹೇಳಿರುವುದು ನಟಿ ಸಮಂತಾ ಬಗ್ಗೆ ಅಲ್ಲ , ಅವರ ಸಹೋದರಿ ಸಮಂತಾ ಬಗ್ಗೆ .ಶೋಭಿತಾಗೆ ಸಮಂತಾ ಹೆಸರಿನ ಸಹೋದರಿ ಇದ್ದಾರೆ. ಆಕೆಗೆ ಈಗಾಗಲೇ ಮದುವೆಯಾಗಿದೆ.

ಮಗನ ನಿಶ್ಚಿತಾರ್ಥದ ಬಗ್ಗೆ ನಾಗಾರ್ಜುನ ಮನಸ್ಸು ಬಿಚ್ಚಿ ಮಾತನಾಡಿದ್ದಾರೆ. ʼʼಶೋಭಿತಾ ಅವರ ಪೋಷಕರೂ ನಾಗ ಚೈತನ್ಯನನ್ನು ಪ್ರೀತಿಸುತ್ತಾರೆ. ಅವನು ಖುಷಿಯಿಂದ ಇರಬೇಕು ಎನ್ನುವುದೇ ನನ್ನ ಆಸೆ. ನನ್ನ ಇಬ್ಬರ ಮಕ್ಕಳ ಬಗ್ಗೆಯೂ ಹೆಮ್ಮೆ ಇದೆʼʼ ಎಂದು ಹೇಳಿದ್ದಾರೆ. ಮದುವೆ ಹೀಗೆ ಆಗಬೇಕು ಎನ್ನುವುದರ ಬಗ್ಗೆ ಇದುವರೆಗೆ ಯಾವುದೇ ಯೋಜನೆ ಹಾಕಿಕೊಂಡಿಲ್ಲ ಎಂದೂ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Bengaluru Police: ಸಿಟಿ ಸಿವಿಲ್‌ ಕೋರ್ಟ್‌ನಿಂದ ಕೊಲೆ ಆರೋಪಿ ಎಸ್ಕೇಪ್‌! ಸಿನಿಮಾ ಸ್ಟೈಲ್‌ನಲ್ಲಿ ಚೇಸ್‌ ಮಾಡಿದ ಖಾಕಿ

ಈ ಹಿಂದೆ ನಾಗ ಚೈತನ್ಯ 2017ರಲ್ಲಿ ಬಹುಭಾಷಾ ನಟಿ, ಸೂಪರ್‌ ಸ್ಟಾರ್‌ ಸಮಂತಾ ರುತ್‌ ಪ್ರಭು ಅವರನ್ನು ಮದುವೆಯಾಗಿದ್ದರು. ಪ್ರೀತಿಸಿ ಮದುವೆಯಾಗಿದ್ದರೂ ಬಳಿಕ ಭಿನ್ನಾಭಿಪ್ರಾಯ ತಲೆದೋರಿದ ಹಿನ್ನಲೆಯಲ್ಲಿ 2021ರಲ್ಲಿ ದಂಪತಿ ವಿಚ್ಛೇದನ ಪಡೆದುಕೊಂಡಿದ್ದರು.

ನಾಗ ಚೈತನ್ಯ-ಶೋಭಿತಾ ಲವ್‌ ಸ್ಟೋರಿ

2022ರ ಮೇಯಲ್ಲಿ ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಮೊದಲ ಬಾರಿಗೆ ಹೈದರಾಬಾದ್‌ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಶೋಭಿತಾ ಧೂಳಿಪಾಲ ತಮ್ಮ ʻಮೇಜರ್ʼ ಚಿತ್ರದ ಪ್ರಚಾರಕ್ಕಾಗಿ ನಗರಕ್ಕೆ ಬಂದಿದ್ದರು. ಆ ಸಮಯದಲ್ಲಿ ಅವರು ಜನ್ಮದಿನ ಆಚರಿಸಿಕೊಂಡಿದ್ದರು. ನಾಗ ಚೈತನ್ಯ ಕೂಡ ಪಾರ್ಟಿಯಲ್ಲಿ ಭಾಗವಹಿಸಿದ್ದರು. ಅಲ್ಲಿಂದ ಇಬ್ಬರೂ ಸ್ನೇಹಿತರಾದರು. ಅವರ ಸ್ನೇಹ ಬಲವಾಗಿ ಡೇಟಿಂಗ್ ಪ್ರಾರಂಭಿಸಿದರು. ಎರಡು ವರ್ಷಗಳ ಕಾಲ ಒಟ್ಟಿಗೆ ಸಮಯ ಕಳೆದಿದ್ದರು. ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಇಬ್ಬರೂ ಜತೆಯಾಗಿ ಪ್ರವಾಸ ಮಾಡುವ ಹಲವು ಫೋಟೊಗಳು ವೈರಲ್‌ ಆಗಿದ್ದವು. ಆದರೆ ಪ್ರತಿ ಬಾರಿ ಡೇಟಿಂಗ್‌ ವಂದತಿ ಹಬ್ಬಿದ್ದಾಗಲೂ ಜೋಡಿ ಈ ಬಗ್ಗೆ ಮಾತನಾಡಿರಲಿಲ್ಲ. ಇದೀಗ ಉಂಗುರ ಬದಲಾಯಿಸುವ ಮೂಲಕ ತಮ್ಮ ಪ್ರೀತಿಗೆ ಅಧಿಕೃತ ಮುದ್ರೆ ಒತ್ತಿದ್ದಾರೆ.

2022ರಲ್ಲಿ ನಾಗ ಚೈತನ್ಯ ʼಲಾಲ್‌ ಸಿಂಗ್‌ ಛಡ್ಡಾʼ ಸಿನಿಮಾ ಮೂಲಕ ಬಾಲಿವುಡ್‌ಗೆ ಪ್ರವೇಶಿಸಿದ್ದರೂ ಹೇಳಿಕೊಳ್ಳುವಂತಹ ಬ್ರೇಕ್‌ ಸಿಗಲಿಲ್ಲ. ಕಳೆದ ವರ್ಷ ತಮಿಳು ಮತ್ತು ತೆಲುಗಿನಲ್ಲಿ ತೆರೆಕಂಡ ʼಕಸ್ಟಡಿʼ ಚಿತ್ರವೂ ಬಾಕ್ಸ್‌ ಆಫೀಸ್‌ನಲ್ಲಿ ಮುಗ್ಗರಿಸಿತ್ತು. ಜತೆಗೆ ʼಧೂತʼ ಎನ್ನುವ ವೆಬ್‌ಸೀರಿಸ್‌ನಲ್ಲಿ ಕಾಣಿಸಿಕೊಂಡಿದ್ದರು. ಇದು ತೆಲುಗಿನಲ್ಲಿ ತಯಾರಾಗಿತ್ತು. ಸದ್ಯ ʼಥಂಡೆಲ್‌ʼ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇನ್ನು ಶೋಭಿತಾ 2016ರಲ್ಲಿ ಬಿಡುಗಡೆಯಾದ ʼರಾಮನ್‌ ರಾಘವ್‌ 2.0ʼ ಹಿಂದಿ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಬಳಿಕ ತೆಲುಗು, ತಮಿಳು, ಮಲಯಾಳಂನಲ್ಲಿಯೂ ಅಭಿನಯಿಸಿರುವ ಅವರು ಸದ್ಯ ʼಮಂಕಿ ಮ್ಯಾನ್‌ʼ ಎನ್ನುವ ಇಂಗ್ಲಿಷ್‌ ಚಿತ್ರ ಮತ್ತು ಹಿಂದಿಯ ʼಸಿತಾರಾʼ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Continue Reading

ಟಾಲಿವುಡ್

Mahesh Babu: ಮಹೇಶ್ ಬಾಬು ಲುಕ್‌ಗೆ ಫ್ಯಾನ್ಸ್‌ ಫಿದಾ; ಫೋಟೊ ವೈರಲ್‌!

Mahesh Babu: ಈ ಸಿನಿಮಾಗೆ ‘ಗೋಲ್ಡ್​’ ಎಂದು ಹೆಸರು ಇಟ್ಟಿದ್ದಾರೆ ಎಂಬ ಗಾಸಿಪ್​ ಇದೆ. ಆದರೆ ಆ ಬಗ್ಗೆ ಚಿತ್ರತಂಡದವರು ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಸದ್ಯಕ್ಕೆ ಈ ಚಿತ್ರವನ್ನು ‘ಎಸ್​ಎಸ್​ಎಂಬಿ 29’ ಎಂದು ತಾತ್ಕಾಲಿಕವಾಗಿ ಕರೆಯಲಾಗುತ್ತಿದೆ.

VISTARANEWS.COM


on

Mahesh Babu’s new look goes viral ahead of SSMB29
Koo

ಬೆಂಗಳೂರು: ಸೂಪರ್‌ಸ್ಟಾರ್ ಮಹೇಶ್ ಬಾಬು (Mahesh Babu) ಮತ್ತು ಖ್ಯಾತ ನಿರ್ದೇಶಕ ಎಸ್‌ಎಸ್ ರಾಜಮೌಳಿ ( S.S. Rajamouli) ಅಭಿನಯದ ಮುಂಬರುವ ಚಿತ್ರದ ಬಗ್ಗೆ ಅಭಿಮಾನಿಗಳು ಉತ್ಸುಕರಾಗಿದ್ದಾರೆ. ಸಿನಿಮಾ ಇನ್ನೂ ಶುರುವಾಗದಿದ್ದರೂ, ಮಹೇಶ್ ಬಾಬು ಈಗಾಗಲೇ ತಮ್ಮ ಪಾತ್ರಕ್ಕೆ ಸಿದ್ಧರಾಗುತ್ತಿದ್ದಾರೆ. ಇತ್ತೀಚೆಗಷ್ಟೇ ಅವರು ಗಡ್ಡ ಮತ್ತು ಉದ್ದನೆಯ ಕೂದಲಿನೊಂದಿಗೆ ಕಾಣಿಸಿಕೊಂಡಿದ್ದಾರೆ.

ಇತ್ತೀಚೆಗೆ ಮಹೇಶ್​ ಬಾಬು ಅವರು ಕುಟುಂಬದ ಜೊತೆ ಜೈಪುರ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಈ ವೇಳೆ ಅವರು ಉದ್ದ ಕೂದಲಿನ ಗೆಪಟ್​ನಲ್ಲಿ ಇರುವ ಫೋಟೋ ಮತ್ತು ವಿಡಿಯೋ ವೈರಲ್​ ಆಗಿದೆ. ಮಹೇಶ್​ ಬಾಬು ಅವರ ಗಡ್ಡದ ಲುಕ್​ ಕೂಡ ಗಮನ ಸೆಳೆದಿದೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋ ಮತ್ತು ವಿಡಿಯೋ ವೈರಲ್​ ಆಗುತ್ತಿವೆ. 

ಈ ಸಿನಿಮಾಗೆ ‘ಗೋಲ್ಡ್​’ ಎಂದು ಹೆಸರು ಇಟ್ಟಿದ್ದಾರೆ ಎಂಬ ಗಾಸಿಪ್​ ಇದೆ. ಆದರೆ ಆ ಬಗ್ಗೆ ಚಿತ್ರತಂಡದವರು ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಸದ್ಯಕ್ಕೆ ಈ ಚಿತ್ರವನ್ನು ‘ಎಸ್​ಎಸ್​ಎಂಬಿ 29’ ಎಂದು ತಾತ್ಕಾಲಿಕವಾಗಿ ಕರೆಯಲಾಗುತ್ತಿದೆ.

ಎಸ್‌ಎಸ್ ರಾಜಮೌಳಿ (SS Rajamouli) ಅವರು ಪತ್ನಿ ರಮಾ ರಾಜಮೌಳಿ ಅವರೊಂದಿಗೆ ಮಾರ್ಚ್ 18ರಂದು ಜಪಾನ್‌ನಲ್ಲಿ ‘ಆರ್‌ಆರ್‌ಆರ್’ ಪ್ರದರ್ಶನಕ್ಕೆ ಹಾಜರಾಗಿದ್ದರು. ಮತ್ತೊಮ್ಮೆ ಸಿನಿಮಾ ಸ್ಕ್ರೀನಿಂಗ್‌ಗಾಗಿ ನಿರ್ದೇಶಕ ರಾಜಮೌಳಿ ಅಲ್ಲಿಗೆ ಹೋಗಿದ್ದರು. ಅಭಿಮಾನಿಗಳೊಂದಿಗೆ ಸಂವಾದದ ಸಮಯದಲ್ಲಿ, ಅವರು ಮಹೇಶ್ ಬಾಬು ಅವರೊಂದಿಗಿನ ತಮ್ಮ ಮುಂಬರುವ ಚಿತ್ರದ ಬಗ್ಗೆ ಮಾತನಾಡಿದ್ದರು.

ಇದನ್ನೂ ಓದಿ: Mahesh Babu: ಸಹೋದರಿ ಮಂಜುಳಾ, ಪ್ರಭಾಸ್ ಚಿಕ್ಕಮ್ಮ ಜತೆ ಸಿಹಿಕ್ಷಣ ಹಂಚಿಕೊಂಡ ಮಹೇಶ್‌ ಬಾಬು!

ಜಪಾನ್‌ನಲ್ಲಿ ನಡೆದ ಸ್ಕ್ರೀನಿಂಗ್‌ನಲ್ಲಿ ಮಾತನಾಡಿದ ಎಸ್‌ಎಸ್ ರಾಜಮೌಳಿ, “ನಮ್ಮ ಮುಂದಿನ ಚಿತ್ರದ ಸ್ಕ್ರಿಪ್ಟ್‌ ಕೆಲಸ ಮಗಿಸಿದ್ದೇವೆ. ಚಿತ್ರ ಪ್ರಿ-ಪ್ರೊಡಕ್ಷನ್ ಪ್ರಕ್ರಿಯೆಯಲ್ಲಿದೆ. ಇನ್ನೂ ಕಾಸ್ಟಿಂಗ್ ಪೂರ್ಣಗೊಂಡಿಲ್ಲ. ಮುಖ್ಯ ನಾಯಕ, ಅಂದರೆ ಮಹೇಶ್‌ ಬಾಬು ಅವರು ಮಾತ್ರ ಫಿಕ್ಸ್‌ ಆಗಿದ್ದಾರೆ. ಆತ ತುಂಬಾ ಒಳ್ಳೆಯ ನಟ. ಸುಂದರ ಕೂಡ. ಸಿನಿಮಾ ಬಿಡುಗಡೆ ಸಮಯದಲ್ಲಿ ಅವರನ್ನು ಇಲ್ಲಿಗೆ ಕರೆತಂದು ನಿಮಗೆ ಪರಿಚಯಿಸುತ್ತೇನೆʼʼ ಎಂದಿದ್ದರು

2022ರಲ್ಲಿ ತೆರೆಕಂಡ ʼಆರ್‌.ಆರ್‌.ಆರ್‌.ʼ ಸಿನಿಮಾ ಬಳಿಕ ರಾಜಮೌಳಿ ನಿರ್ದೇಶನದ ಯಾವುದೇ ಚಿತ್ರ ಬಿಡುಗಡೆಯಾಗಿಲ್ಲ. ಅವರು ಈ ಚಿತ್ರಕ್ಕಾಗಿಯೇ ಹಲವು ವರ್ಷಗಳಿಂದ ಸಿದ್ಧತೆ ನಡೆಸುತ್ತಿದ್ದಾರೆ. ದಾಖಲೆ ಬರೆದ ʼಬಾಹುಬಲಿʼ, ʼಬಾಹುಬಲಿ 2ʼ, ʼಆರ್‌.ಆರ್‌.ಆರ್‌.ʼ ಮುಂತಾದ ಸಿನಿಮಾಗಳಿಗೆ ಕಥೆ ಬರೆದಿದ್ದ ವಿಜಯೇಂದ್ರ ಪ್ರಸಾದ್‌ ಅವರೇ ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದ ಬರವಣಿಗೆಯಲ್ಲಿ ತೊಡಗಿರುವುದು ನಿರೀಕ್ಷೆ ಹೆಚ್ಚಲು ಮತ್ತೊಂದು ಕಾರಣ. ಇತ್ತೀಚೆಗೆ ತೆರೆಕಂಡ ಮಹೇಶ್‌ ಬಾಬು ಅಭಿನಯದ ʼಗುಂಟೂರು ಖಾರಂʼ ಸಿನಿಮಾ ಸಾಧಾರಣ ಗೆಲುವು ದಾಖಲಿಸಿದೆ. ಹೀಗಾಗಿ ಅವರು ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದತ್ತ ಗಮನ ಹರಿಸಿದ್ದಾರೆ.

Continue Reading
Advertisement
Bengaluru Roads
ಕರ್ನಾಟಕ11 mins ago

Bengaluru Roads: ರಸ್ತೆ ಗುಂಡಿ ಮುಚ್ಚುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸಚಿವರಿಂದಲೇ ಮನವಿ!

Wildlife
ಪರಿಸರ12 mins ago

Wildlife: ಹುಟ್ಟಿದ ತಕ್ಷಣ ತಾಯಿಯನ್ನೇ ಕೊಂದು ತಿನ್ನುವ ಜೀವಿ ಇದು!

Karnataka Rain
ಮಳೆ18 mins ago

Karnataka Rain: ಗಂಗಾವತಿಯಲ್ಲಿ ಭಾರಿ ಮಳೆಗೆ ಮನೆಗಳಿಗೆ ನುಗ್ಗಿದ ನೀರು; ಭತ್ತದ ಗದ್ದೆಗಳಿಗೆ ಹಾನಿ

Gold Rate
ಪ್ರಮುಖ ಸುದ್ದಿ20 mins ago

Gold Rate : ಬೆಲೆ ಏರಿಕೆ ಪರಿಣಾಮ; ಏಪ್ರಿಲ್-ಜುಲೈನಲ್ಲಿ ಚಿನ್ನದ ಆಮದು ಶೇ.4.23ರಷ್ಟು ಇಳಿಕೆ

Viral Video
Latest25 mins ago

‌Richard Lugner: ಇತ್ತೀಚೆಗಷ್ಟೆ 6ನೇ ಮದುವೆಯಾಗಿದ್ದ 91 ವರ್ಷದ ಬಿಲಿಯಾಧೀಶ ಇನ್ನಿಲ್ಲ!

Viral News
Latest33 mins ago

Viral News: ಈತ 610 ಕೆಜಿ ಇದ್ದ, ಈಗ 63 ಕೆಜಿಗೆ ಇಳಿದಿದ್ದಾನೆ! 30 ವೈದ್ಯರ ತಂಡದ ಕಾರ್ಯಾಚರಣೆ!

Sexual Abuse
Latest40 mins ago

Sexual Abuse: ಲೈಂಗಿಕ ಕಿರುಕುಳ ನೀಡಿದವನನ್ನು ನಡು ರಸ್ತೆಯಲ್ಲಿ ಥಳಿಸಿದ ಅಕ್ಕತಂಗಿ; ವಿಡಿಯೊ ವೈರಲ್

Paris Paralympics
ಪ್ರಮುಖ ಸುದ್ದಿ58 mins ago

Paris Paralympics : ಪ್ಯಾರಾಲಿಂಪಿಕ್ಸ್​​ನಲ್ಲಿ 12 ಕ್ರೀಡೆಗಳಲ್ಲಿ ಭಾಗವಹಿಸಲಿದೆ ಭಾರತ

karnataka Weather Forecast
ಮಳೆ1 hour ago

Karnataka Weather : ಇಂದು ಧ್ವಜಾರೋಹಣ ಆಯ್ತು, ನಾಳೆ ವರಮಹಾಲಕ್ಷ್ಮಿ ಹಬ್ಬಕ್ಕೂ ಮಳೆ ಅಡ್ಡಿ; ಬೆಂಗಳೂರು ಸೇರಿ ಕರಾವಳಿ, ಮಲೆನಾಡಿಗೆ ಅಲರ್ಟ್‌

Electric Shock
ಕರ್ನಾಟಕ2 hours ago

Electric Shock: ಸ್ವಾತಂತ್ರ್ಯ ದಿನಾಚರಣೆ ಮುಗಿಸಿ ಮನೆಗೆ ಹೋಗುವಾಗ ವಿದ್ಯುತ್ ತಗುಲಿ ವಿದ್ಯಾರ್ಥಿ ಸಾವು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌