Vinesh Phogat : ತೂಕ ಇಳಿಸಲು ಹೋಗಿ ಸಾವಿನ ಬಾಗಿಲು ತಟ್ಟಿದ್ದ ವಿನೇಶ್​ ಫೋಗಟ್​; ಭಯಾನಕ ಕ್ಷಣಗಳನ್ನು ವಿವರಿಸಿದ ಕೋಚ್​! - Vistara News

ಕ್ರೀಡೆ

Vinesh Phogat : ತೂಕ ಇಳಿಸಲು ಹೋಗಿ ಸಾವಿನ ಬಾಗಿಲು ತಟ್ಟಿದ್ದ ವಿನೇಶ್​ ಫೋಗಟ್​; ಭಯಾನಕ ಕ್ಷಣಗಳನ್ನು ವಿವರಿಸಿದ ಕೋಚ್​!

Vinesh Phogat : 100 ಗ್ರಾಮ್​​ ತೂಕ ಹೆಚ್ಚಿದ ಕಾರಣ ವಿನೇಶ್ ಫೋಗಟ್ ಅವರನ್ನು 50 ಕೆ.ಜಿ ಫೈನಲ್​ನಿಂದ ಅನರ್ಹಗೊಂಡ ಬಳಿಕ ಹಂಗೇರಿಯಾದ ಕೋಚ್ ಕೂಟ ಟೀಕೆಗಳನ್ನು ಎದುರಿಸಿದ್ದಾರೆ. ತೂಕ ಮತ್ತಿತರ ವಿಷಯ ಸ್ಪರ್ಧಿ ಮತ್ತು ಕೋಚ್​ಗೆ ಸಂಬಂಧಿಸಿದ್ದು ಎಂಬುದು ಟೀಕಾಕಾರರ ವಾದವಾಗಿದೆ. ಅದಕ್ಕೆ ಉತ್ತರ ನೀಡಿರುವ ಅವರು, ಮ್ಯಾಟ್​ಗೆ ಹತ್ತುವ ಮೊದಲು ವಿನೇಶ್​ ತಮಗೆ ಸಾಧ್ಯವಿರುವ ಎಲ್ಲವನ್ನೂ ಮಾಡಿದ್ದಾರೆ ಎಂಬುದನ್ನು ವಿವರಿಸಿದ್ದಾರೆ. ಎಲ್ಲಿತನಕ ಎಂದರೆ ತೂಕ ಇಳಿಸಲು ಹೋಗಿ ಸಾಯುವ ಹಂತಕ್ಕೆ ಹೋಗಿದ್ದರು ಎಂಬುದನ್ನು ಹೇಳಿದ್ದಾರೆ.

VISTARANEWS.COM


on

Vinesh Phogat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತದ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ಅವರ ಪ್ಯಾರಿಸ್ ಒಲಿಂಪಿಕ್ಸ್​ ಕನಸು ನುಚ್ಚು ನೂರಾಗಿದೆ. ಅವರು ಸಲ್ಲಿಸಿದ್ದ ಮೇಲ್ಮನವಿಯೂ ತಿರಸ್ಕಾರಗೊಂಡಿದೆ. ಮಹಿಳೆಯರ 50 ಕೆ.ಜಿ ವಿಭಾಗದಲ್ಲಿ ಫೈನಲ್ ತಲುಪಿದ್ದ ಅವರು ಕೇವಲ 100 ಗ್ರಾಮ್ ಹೆಚ್ಚುವರಿ ತೂಕ ಹೊಂದಿದ್ದ ಕಾರಣ ಬೆಳ್ಳಿ ಪದಕವನ್ನೂ ಪಡೆಯದೇ ಅನರ್ಹತೆಗೆ ಒಳಗಾಗಿದ್ದರು. ಅವರ ಪಾಲಿಗೆ ವೃತ್ತಿ ಕುಸ್ತಿಯ ಅತ್ಯಂತ ಕಠಿಣ ದಿನಗಳು ಎಂಬುದರಲ್ಲಿ ಎರಡು ಮಾತಿಲ್ಲ. ಇಷ್ಟೆಲ್ಲ ಮುಗಿಯುವ ವೇಳೆ ಅವರ ತರಬೇತುದಾರ ವೊಲ್ರ್ ಅಕೋಸ್ ಭಯಾನಕ ಸತ್ಯವೊಂದನ್ನು ಬಿಚ್ಚಿಟ್ಟಿದ್ದಾರೆ. ಫೈನಲ್​ ಮೊದಲು ತೂಕ ಇಳಿಸಲು ಮುಂದಾದ ಅವರು ಸಾವಿನ ಮನೆಯ ಕದ ತಟ್ಟಿ ಬಂದಿದ್ದರು ಎಂಬುದನ್ನು ಬೇಸರದಿಂದ ಹೇಳಿಕೊಂಡಿದ್ದಾರೆ.

100 ಗ್ರಾಮ್​​ ತೂಕ ಹೆಚ್ಚಿದ ಕಾರಣ ವಿನೇಶ್ ಫೋಗಟ್ ಅವರನ್ನು 50 ಕೆ.ಜಿ ಫೈನಲ್​ನಿಂದ ಅನರ್ಹಗೊಂಡ ಬಳಿಕ ಹಂಗೇರಿಯಾದ ಕೋಚ್ ಕೂಟ ಟೀಕೆಗಳನ್ನು ಎದುರಿಸಿದ್ದಾರೆ. ತೂಕ ಮತ್ತಿತರ ವಿಷಯ ಸ್ಪರ್ಧಿ ಮತ್ತು ಕೋಚ್​ಗೆ ಸಂಬಂಧಿಸಿದ್ದು ಎಂಬುದು ಟೀಕಾಕಾರರ ವಾದವಾಗಿದೆ. ಅದಕ್ಕೆ ಉತ್ತರ ನೀಡಿರುವ ಅವರು, ಮ್ಯಾಟ್​ಗೆ ಹತ್ತುವ ಮೊದಲು ವಿನೇಶ್​ ತಮಗೆ ಸಾಧ್ಯವಿರುವ ಎಲ್ಲವನ್ನೂ ಮಾಡಿದ್ದಾರೆ ಎಂಬುದನ್ನು ವಿವರಿಸಿದ್ದಾರೆ. ಎಲ್ಲಿತನಕ ಎಂದರೆ ತೂಕ ಇಳಿಸಲು ಹೋಗಿ ಸಾಯುವ ಹಂತಕ್ಕೆ ಹೋಗಿದ್ದರು ಎಂಬುದನ್ನು ಹೇಳಿದ್ದಾರೆ.

ಹಂಗರಿ ಭಾಷೆಯಲ್ಲಿ ಪೋಸ್ಟ್ ಬರೆದ ಅಕೋಸ್​

ಹಂಗೇರಿಯನ್ ಭಾಷೆಯಲ್ಲಿ ಫೇಸ್ಬುಕ್ ಪೋಸ್ಟ್​​ನಲ್ಲಿ ಅಕೋಸ್ ತನ್ನ ಮೊದಲ ಒಲಿಂಪಿಕ್ ಪದಕವನ್ನು ಪಡೆಯುವ ವಿನೇಶ್ ಫೋಗಟ್ ಅವರ ಬದ್ಧತೆಯನ್ನು ಎತ್ತಿ ತೋರಿಸಿದರು. ಸೆಮಿಫೈನಲ್ ಬಳಿಕ 2.7 ಕೆಜಿ ಹೆಚ್ಚುವರಿ ತೂಕ ಉಳಿದಿತ್ತು. ಒಂದು ಗಂಟೆ ಇಪ್ಪತ್ತು ನಿಮಿಷಗಳ ಕಾಲ ವ್ಯಾಯಾಮ ಮಾಡಿಸಿದೆ. ಆದರೆ 1.5 ಕೆ.ಜಿ ಇನ್ನೂ ಉಳಿದಿತ್ತು. , 50 ನಿಮಿಷಗಳ ದೇಹ ದಂಡನೆ ಬಳಿಕ ಆಕೆಯ ದೇಹ ಸಂಪೂರ್ಣವಾಗಿ ನೀರಿನಂಶ ಕೊರತೆಯಿಂದ ಸೊರಗಿತು. ಮಧ್ಯರಾತ್ರಿಯಿಂದ ಬೆಳಿಗ್ಗೆ 5:30 ರವರೆಗೆ, ಅವರು ವಿವಿಧ ಕಾರ್ಡಿಯೋ ಯಂತ್ರಗಳು ಮತ್ತು ಕುಸ್ತಿ ಚಲನೆಗಳಲ್ಲಿ ಕೆಲಸ ಮಾಡಿದರು. ಒಂದೇ ಬಾರಿಗೆ ಸುಮಾರು ಮುಕ್ಕಾಲು ಗಂಟೆಗಳ ಕಾಲ ಶ್ರಮವಹಿಸಿದು. ಎರಡು-ಮೂರು ನಿಮಿಷಗಳ ವಿಶ್ರಾಂತಿಯೊಂದಿಗೆ ನಂತರ ಅವಳು ತೂಕ ಇಳಿಸಲು ಯತ್ನಿಸಿದರು. ಒಂದು ಹಂತದಲ್ಲಿ ಕುಸಿದುಬಿದ್ದರು. ಹೇಗೋ ನಾವು ಆಕೆಯನ್ನು ಎಬ್ಬಿಸಿದೆವು. ಆ ಬಳಿಕ ಏನು ಮಾಡಲು ಸಾಧ್ಯವಾಗಲಿಲ್ಲ. ಯಾಕೆಂದರೆ ನನ್ನ ಹೇಳಿಕೆಗಳು ನಾಟಕೀಯವಲ್ಲ. ಮುಂದೇನಾದರೂ ತೂಕ ಇಳಿಸಲು ಯತ್ನಿಸಿದ್ದರೆ ಆಕೆ ಸತ್ತು ಹೋಗುತ್ತಿದ್ದಳು ಎಂದು ಕೋಚ್ ಬರೆದಿದ್ದಾರೆ.

ಇದನ್ನೂ ಓದಿ: Jasprit Bumrah : ಬಾಂಗ್ಲಾದೇಶ ವಿರುದ್ಧದ ಟೆಸ್ಟ್​ ಪಂದ್ಯಕ್ಕೂ ಜಸ್​ಪ್ರಿತ್​ ಬುಮ್ರಾ ಅಲಭ್ಯ?

ಅನರ್ಹಗೊಂಡ ನಂತರ ವಿನೇಶ್ ಫೋಗಟ್ ಕಣ್ಣೀರು ಹಾಕುತ್ತಿದ್ದರೂ ಧೈರ್ಯ ಕಳೆದುಕೊಂಡಿರಲಿಲ್ಲ ಎಂದು ಕೋಚ್ ಹೇಳಿದ್ದಾರೆ. ವಿನೇಶ್ ಫೋಗಟ್ ನಡೆಸಿದ ಮಾತುಕತೆಯನ್ನು ಕೋಚ್​ ಬರೆದುಕೊಂಡಿದ್ದಾರೆ. ಕೋಚ್, ದುಃಖಪಡಬೇಡಿ ಏಕೆಂದರೆ ನಾನು ಕಠಿಣ ಪರಿಸ್ಥಿತಿಯಲ್ಲಿ ಇದ್ದರೂ ಹೆಚ್ಚುವರಿ ಶಕ್ತಿ ತುಂಬಿಕೊಳ್ಳುತ್ತೇನೆ. ನಾನು ವಿಶ್ವದ ಅತ್ಯುತ್ತಮ ಮಹಿಳಾ ಕುಸ್ತಿಪಟುವನ್ನು (ಜಪಾನ್ನ ಯುಯಿ ಸುಸಾಕಿ) ಸೋಲಿಸಿದ್ದೇನೆ. ನಾನು ನನ್ನ ಗುರಿಯನ್ನು ಸಾಧಿಸಿದೆ. ನಾನು ವಿಶ್ವದ ಅತ್ಯುತ್ತಮರಲ್ಲಿ ಒಬ್ಬಳೆಂದು ಸಾಬೀತುಪಡಿಸಿದ್ದೇನೆ. ಆಟದ ಯೋಜನೆಗಳು ಕೆಲಸ ಮಾಡುತ್ತವೆ ಎಂದು ನಾವು ಸಾಬೀತುಪಡಿಸಿದ್ದೇವೆ. ಪದಕಗಳು, ವೇದಿಕೆಗಳು ಕೇವಲ ವಸ್ತುಗಳು. ಪ್ರದರ್ಶನವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ’ ಎಂದು ವಿನೇಶ್​ ಹೇಳಿದ್ದನ್ನು ಅಕೋಸ್ ಅಕ್ಷರ ರೂಪಕ್ಕೆ ಇಳಿಸಿದ್ದಾರೆ.

ಒಲಿಂಪಿಕ್ ಪದಕಕ್ಕೆ ವಿನೇಶ್ ಫೋಗಟ್ ಎಷ್ಟು ಬೆಲೆ ನೀಡುತ್ತಾರೆ ಎಂಬುದನ್ನು ಅವರು ಇದೇ ವೇಳೆ ಬರೆದುಕೊಂಡಿದ್ದಾರೆ. ಕಳೆದ ವರ್ಷ ಒಲಿಂಪಿಕ್ ಪದಕ ವಿಜೇತರಾದ ಬಜರಂಗ್ ಪೂನಿಯಾ ಮತ್ತು ಸಾಕ್ಷಿ ಮಲಿಕ್ ಅವರೊಂದಿಗೆ ಹರಿದ್ವಾರದಲ್ಲಿ ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ಬಿಡಲು ಮುಂದಾಗಿದ್ದನ್ನು ಅವರು ಸ್ಮರಿಸಿಕೊಂಡಿದ್ದಾರೆ. ಒಲಿಂಪಿಕ್ ಪದಕಗಳನ್ನು ನದಿಗೆ ಎಸೆಯಬೇಡಿ ಎಂದು ಸಾಕ್ಷಿ ಮತ್ತು ಬಜರಂಗ್ ಗೆ ವಿನೇಶ್​ ತಿಳೀ ಹೇಳಿದ್ದನ್ನೂ ಅವರು ಬರೆದಿದ್ದಾರೆ.

ವಿನೇಶ್ ಫೋಗಟ್ ಅವರ ಅನರ್ಹತೆಯ ಹೊರತಾಗಿಯೂ, ಅವರ ಪಂದ್ಯಗಳ ಮೊದಲ ದಿನದಂದು ಅವರು ಏನು ಸಾಧಿಸಿದರು ಎಂಬುದನ್ನು ಜಗತ್ತು ನೆನಪಿಸಿಕೊಳ್ಳುತ್ತದೆ ಕೋಚ್ ಬರೆದಿದ್ದಾರೆ. ನಮ್ಮ ಕೆಲಸದಿಂದಾಗಿ ವಿಶ್ವದ ಅತ್ಯುತ್ತಮ ಮಹಿಳಾ ಕುಸ್ತಿಪಟುವನ್ನು ಸೋಲಿಸಲು ಮತ್ತು ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತೀಯ ಮಹಿಳಾ ಕುಸ್ತಿಪಟುವನ್ನು ಒಲಿಂಪಿಕ್ ಫೈನಲ್ಸ್​​ಗೆ ಕರೆದೊಯ್ಯಲು ಸಾಧ್ಯವಾಗಿದೆ ಎಂದು ಅಕೋಸ್ ಬರೆದುಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Virat Kohli: ಲಂಡನ್​ನ ಸಿಗ್ನಲ್​ನಲ್ಲಿ ಸಾಮಾನ್ಯರಲ್ಲಿ ಸಾಮಾನ್ಯರಂತೆ ನಿಂತ ಕೊಹ್ಲಿ; ವಿಡಿಯೊ ವೈರಲ್

Virat Kohli:ಅಭಿಮಾನಿಗಳ ಜಂಜಾಟದಿಂದ ತಪ್ಪಿಸಿಕೊಂಡು ಸಾಮಾನ್ಯರಂತೆ ಜೀವಿಸಲು ಇಷ್ಟ ಪಡುತ್ತಿರುವ ಕೊಹ್ಲಿ ಮುಂದಿನ ದಿನದಲ್ಲಿ ಲಂಡನ್​ನಲ್ಲಿಯೇ ನೆಲೆಸುವ ಸಾಧ್ಯತೆ ಇದೆ.

VISTARANEWS.COM


on

Virat Kohli
Koo

ಲಂಡನ್​: ಟೀಮ್​ ಇಂಡಿಯಾದ ಸ್ಟಾರ್​ ಆಟಗಾರ ವಿರಾಟ್​ ಕೊಹ್ಲಿ(virat kohli) ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಬಳಿಕ ಭಾರತ ತೊರೆದು ಕುಟುಂಬ ಸಮೇತರಾಗಿ ಲಂಡನ್​ನಲ್ಲಿ ನೆಲೆಸಲಿದ್ದಾರೆ ಎಂಬ ಮಾತುಗಳು ಈಗಾಗಲೇ ಕೇಳಿ ಬಂದಿವೆ. ಟಿ20 ವಿಶ್ವಕಪ್​ ಮುಗಿದ ಬಳಿಕ ಭಾರತಕ್ಕೆ ಬಂದಿದ್ದ ಕೊಹ್ಲಿ ಮುಂಬೈಯಲ್ಲಿ ನಡೆದಿದ್ದ ಅಭಿನಂದನಾ ಕಾರ್ಯಕ್ರಮ ಮುಗಿದ ದಿನದಂದೇ ಲಂಡನ್​ಗೆ ತೆರಳಿದ್ದರು. ಬಳಿಕ ಮಕ್ಕಳು ಮತ್ತು ಪತ್ನಿಯ ಜತೆ ಲಂಡನ್​ನ ಸ್ಟ್ರೀಟ್​ ಒಂದರಲ್ಲಿ ತಿರುಗಾಡುತ್ತಿರುವ ವಿಡಿಯೊ ಕೂಡ ವೈರಲ್​ ಆಗಿತ್ತು. ಇದೀಗ ಲಂಡನ್​ನ ರಸ್ತೆಯೊಂದರ ಸಿಗ್ನಲ್​ನಲ್ಲಿ ಕೊಹ್ಲಿ ಏಕಾಂಗಿಯಾಗಿ ನಿಂತಿರುವ ವಿಡಿಯೊ ವೈರಲ್​ ಆಗಿದೆ(video goes viral). ಈ ವಿಡಿಯೊದಲ್ಲಿ ವಿರಾಟ್​ ಕೊಹ್ಲಿ ಸಾಮಾನ್ಯರಲ್ಲಿ ಸಾಮಾನ್ಯರಂತೆ ನಿಂತಿರುವುದನ್ನು ಕಾಣಬಹುದಾಗಿದೆ.

ವಿರಾಟ್​ ಕೊಹ್ಲಿ ಕಳೆದ ಇಂಗ್ಲೆಂಡ್​ ವಿರುದ್ಧದ ತವರಿನ ಟೆಸ್ಟ್​ ಸರಣಿ ವೇಳೆ ವೈಯಕ್ತಿಕ ಕಾರಣ ನೀಡಿ ಸರಣಿಯಿಂದ ಹಿಂದೆ ಸರಿದ್ದರು. ಇದಾದ ಬಳಿಕ ಕೊಹ್ಲಿ 2 ತಿಂಗಳ ಕಾಲ ಎಲ್ಲಿಯೂ ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ಐಪಿಎಲ್​ ವೇಳೆ ಕೊಹ್ಲಿ ತಾವು 2 ತಿಂಗಳು ಏನೆಲ್ಲ ಮಾಡಿದೆ ಎನ್ನುವ ವಿಚಾರವನ್ನು ಬಹಿರಂಗಪಡಿಸಿದ್ದರು. “ಎರಡು ತಿಂಗಳ ಬಿಡುವಿನ ವೇಳೆಯಲ್ಲಿ ಕುಟುಂಬದ ಜತೆ ಅಮೂಲ್ಯ ಸಮಯ ಕಳೆದೆ. ನಾವು ದೇಶದಲ್ಲಿ ಇರಲಿಲ್ಲ. ಜನರು ನಮ್ಮನ್ನು ಗುರುತಿಸಲು ಸಾಧ್ಯವಾಗದ ಪ್ರದೇಶದಲ್ಲಿ ನಾವಿದ್ದೆವು. ಈ ಎರಡು ತಿಂಗಳ ಕಾಲ ಕುಟುಂಬದೊಂದಿಗೆ ಅತ್ಯಮೂಲ್ಯ ಸಮಯವನ್ನು ಕಳೆದಿದ್ದೇನೆ. ರಸ್ತೆಯಲ್ಲಿ ಓಡಾಡುವಾಗ ಎಲ್ಲರಂತೆ ನಾನೂ ಕೂಡ ಸಾಮಾನ್ಯ ವ್ಯಕ್ತಿಯಾಗಿ ಓಡಾಡಿದ್ದು ನಿಜಕ್ಕೂ ಅದ್ಭುತ ಅನುಭವ. ಇದಕ್ಕಾಗಿ ದೇವರಿಗೆ ಧನ್ಯವಾದ ತಿಳಿಸುತ್ತೇನೆ” ಎಂದಿದ್ದರು.

ಅಭಿಮಾನಿಗಳ ಜಂಜಾಟದಿಂದ ತಪ್ಪಿಸಿಕೊಂಡು ಸಾಮಾನ್ಯರಂತೆ ಜೀವಿಸಲು ಇಷ್ಟ ಪಡುತ್ತಿರುವ ಕೊಹ್ಲಿ ಮುಂದಿನ ದಿನದಲ್ಲಿ ಲಂಡನ್​ನಲ್ಲಿಯೇ ನೆಲೆಸುವ ಸಾಧ್ಯತೆ ಇದೆ. ಶ್ರೀಲಂಕಾ ವಿರುದ್ಧದ ಏಕದಿನ ಸರಣಿ ಮುಕ್ತಾಯದ ಬಳಿಕ ಕೂಡ ಕೊಹ್ಲಿ ಭಾರತಕ್ಕೆ ಆಗಮಿಸದೆ ನೇರವಾಗಿ ಲಂಡನ್​ಗೆ ತೆರಳಿದ್ದರು. ಇದನೆಲ್ಲ ನೋಡುವಾಗ ಕೊಹ್ಲಿ ಮತ್ತು ಅವರ ಕುಟುಂಬ ಲಂಡನ್​ನಲ್ಲಿಯೇ ನೆಲೆಸಲಿದ್ದಾರೆ ಎನ್ನಲಡ್ಡಿಯಿಲ್ಲ.

ಹಿಂದೂಸ್ತಾನ್ ಟೈಮ್ಸ್ ವರದಿ ಪ್ರಕಾರ, ಅನುಷ್ಕಾ ಮತ್ತು ವಿರಾಟ್ ಯುಕೆ ಮೂಲದ ಕಂಪನಿಯ ನಿರ್ದೇಶಕರಾಗಿದ್ದಾರೆ. ಯುಕೆ ಸರ್ಕಾರದ ಫೈಂಡ್ ಅಂಡ್ ಅಪ್ಡೇಟ್ ಕಂಪನಿಯ ಮಾಹಿತಿ ಸೇವೆಯ ಪ್ರಕಾರ, ದಂಪತಿಗಳು ಮ್ಯಾಜಿಕ್ ಲ್ಯಾಂಪ್​​ನ ಮೂವರು ನಿರ್ದೇಶಕರಲ್ಲಿ ಇಬ್ಬರು. ಇದು ಆಗಸ್ಟ್ 1, 2022 ರಂದು ಆರಂಭಗೊಂಡ ಸಲಹಾ ಸಂಸ್ಥೆಯಾಗಿದೆ. ಕಂಪನಿಯ ಅಧಿಕೃತ ಕಚೇರಿ ವಿಳಾಸವು ಯುಕೆಯ ವೆಸ್ಟ್ ಯಾರ್ಕ್​ಶೈರ್​ನಲ್ಲಿದೆ.

ಇದನ್ನೂ ಓದಿ Virat Kohli : ವಿರಾಟ್​​ ಮಾಲೀಕತ್ವದ ರೆಸ್ಟೋರೆಂಟ್​ಗೆ ಹೋದ ಡೂಪ್ಲಿಕೇಟ್​ ಕೊಹ್ಲಿ; ಗ್ರಾಹಕರು ಫುಲ್ ಕನ್​​ಫ್ಯೂಸ್​! ಇಲ್ಲಿದೆ ವಿಡಿಯೊ

ವಿರಾಟ್​ ಕೊಹ್ಲಿ ಅವರು ಟಿ20 ವಿಶ್ವಕಪ್​ ಸ್ಮರಣೀಯ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಫೈನಲ್​ ಪಂದ್ಯದಲ್ಲಿ 76 ರನ್​ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ವೇಳೆ ಕೊಹ್ಲಿ ತಮ್ಮ ನಿವೃತ್ತಿ ಘೋಷಿಸಿದ್ದರು. ‘ದೇವರು ದೊಡ್ಡವನು. ಭಾರತಕ್ಕಾಗಿ ಇದು ನನ್ನ ಕೊನೆಯ ಟಿ20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೆ. ಇದು ಸಾಕಾರಗೊಂಡಿದೆ. ಮುಂದಿನ ಪೀಳಿಗೆಗೆ ಟಿ20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ ಇದು. ಅದ್ಭುತ ದಿನದಂದು ವಿದಾಯ ಹೇಳುವ ಸೌಭಾಗ್ಯ ನನಗೆ ಒದಗಿದ್ದು ನಿಜ್ಜಕ್ಕೂ ಸಂತಸ ತಂದಿದೆ” ಎಂದಿದ್ದರು. ಕೊಹ್ಲಿ ತಮ್ಮ 125 ಪಂದ್ಯಗಳ ಟಿ 20 ಅಂತಾರಾಷ್ಟ್ರೀಯ ವೃತ್ತಿಜೀವನವನ್ನು ಭಾರತದ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಸ್ವರೂಪದಲ್ಲಿ ಕೊನೆಗೊಳಿಸಿದ್ದಾರೆ. 4188 ರನ್, 48.69 ಸರಾಸರಿ ಮತ್ತು ಸ್ಟ್ರೈಕ್ ರೇಟ್ 137.04 ಹೊಂದಿದ್ದರು.

Continue Reading

ಕ್ರೀಡೆ

Rohit Sharma: ಮುಂಬೈ ಸ್ಟ್ರೀಟ್​ನಲ್ಲಿ ಜಾಲಿ ರೈಡ್‌ ಮಾಡಿದ ರೋಹಿತ್​; ವಿಡಿಯೊ ವೈರಲ್​

Rohit Sharma:ಅತಿ ವೇಗದ ಕಾರು ಚಾಲನೆ ಮಾಡಿದ್ದ ರೋಹಿತ್​ ಶರ್ಮಗೆ ಈ ಹಿಂದೆ 3 ಬಾರಿ ಪೊಲೀಸರು ದಂಡ ವಿಧಿಸಿದ್ದರು. ​ಲಂಬೋರ್ಗಿನಿ ಕಾರಿನಲ್ಲಿ ಅವರು ಗಂಟೆಗೆ 200 ಕಿ.ಮೀ ಕಾರು ಚಲಾಯಿಸಿದ್ದರು.

VISTARANEWS.COM


on

Rohit Sharma
Koo

ಮುಂಬಯಿ: ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮ(Rohit Sharma) ಅವರು ಸದ್ಯ ವಿಶ್ರಾಂತಿಯಲ್ಲಿದ್ದಾರೆ. ತವರಾದ ಮುಂಬೈನಲ್ಲಿ ಜಾಲಿ ಮೂಡ್​ನಲ್ಲಿದ್ದಾರೆ. ಮುಂಬೈಯ ಸ್ಟ್ರೀಟ್​ ಒಂದರಲ್ಲಿ ರೋಹಿತ್​ ನೀಲಿ ಬಣ್ಣದ ಲ್ಯಾಂಬೋರ್ಗಿನಿ(Lamborghini) ಕಾರಿನಲ್ಲಿ ಜಾಲಿ ರೈಡ್​ ಮಾಡಿರುವ ವಿಡಿಯೊ ವೈರಲ್​ ಆಗಿದೆ.

ರೋಹಿತ್​ ಅವರು ಲ್ಯಾಂಬೋರ್ಗಿನಿ ಕಾರಿನಲ್ಲಿ ಬರುತ್ತಿರುವ ವಿಡಿಯೊವನ್ನು ನೆಟ್ಟಿಗರೊಬ್ಬರು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರೋಹಿತ್​ ರಸ್ತೆ ಬದಿಯಲ್ಲಿ ನಿಂತಿದ್ದ ಅಭಿಮಾನಿಗಳನ್ನು ಕಂಡು ಥಮ್ಸ್ ಅಪ್‌ ಮಾಡಿ ಮುಂದೆ ಸಾಗಿದ್ದಾರೆ. ಈ ದೃಶ್ಯವನ್ನು ವಿಡಿಯೊದಲ್ಲಿ ಕಾಣಬಹುದಾಗಿದೆ. ರೋಹಿತ್​ ಏಕದಿನದಲ್ಲಿ ಲಂಕಾ ವಿರುದ್ಧ 264 ರನ್ ಬಾರಿಸಿದ್ದರು. ಇದೇ ಸಂಖ್ಯೆಯನ್ನು ತಮ್ಮ ಕಾರ್​ ನಂಬರ್​ ಆಗಿ ಬಳಸಿಕೊಂಡಿದ್ದಾರೆ.​

ಟಿ20 ವಿಶ್ವಕಪ್​ ಮುಗಿದ ಬಳಿಕ ಕುಟುಂಬ ಸಮೇತರಾಗಿ ವಿದೇಶಕ್ಕೆ ಪ್ರವಾಸ ಹೋಗಿದ್ದ ರೋಹಿತ್​ ಮುಂಬೈಗೆ ಮರಳಿದ್ದ ವೇಳೆಯೂ ಇದೇ ಕಾರಿನಲ್ಲಿ ವಿಮಾನ ನಿಲ್ದಾಣದಿಂದ ಮನೆಗೆ ತೆರಳಿದ್ದ ವಿಡಿಯೊ ಮೂರು ವಾರಗಳ ಹಿಂದೆ ವೈರಲ್​ ಆಗಿತ್ತು. ಸದ್ಯ ವಿಶ್ರಾಂತಿಯಲ್ಲಿರುವ ರೋಹಿತ್​ ಬಾಂಗ್ಲಾದೇಶ ವಿರುದ್ಧದ ಟೆಸ್ಟ್​ ಸರಣಿ ವೇಳೆಗೆ ತಂಡ ಸೇರಲಿದ್ದಾರೆ.

ಅತಿ ವೇಗದ ಕಾರು ಚಾಲನೆ ಮಾಡಿದ್ದ ರೋಹಿತ್​ ಶರ್ಮಗೆ ಈ ಹಿಂದೆ 3 ಬಾರಿ ಪೊಲೀಸರು ದಂಡ ವಿಧಿಸಿದ್ದರು. ​ಲಂಬೋರ್ಗಿನಿ ಕಾರಿನಲ್ಲಿ ಅವರು ಗಂಟೆಗೆ 200 ಕಿ.ಮೀ ಕಾರು ಚಲಾಯಿಸಿದ್ದರು. ಇದೇ ಕಾರಣಕ್ಕೆ ಅತಿ ವೇಗದ ಚಾಲನೆಯ ಟ್ರಾಫಿಕ್​ ನಿಯಮದ ಅಡಿಯಲ್ಲಿ ಅವರಿಗೆ ಮೂರು ಟ್ರಾಫಿಕ್ ದಂಡದ ಚಲನ್‌ಗಳನ್ನು ನೀಡಲಾಗಿತ್ತು.

ರೋಹಿತ್ ನಾಯಕತ್ವದಲ್ಲಿ, ಜೂನ್​ 29ರಂದು ಬಾರ್ಬಡೋಸ್‌ನಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್‌ಗಳ ಜಯದೊಂದಿಗೆ 11 ವರ್ಷಗಳ ಐಸಿಸಿ ಪ್ರಶಸ್ತಿ ಬರವನ್ನು ಕೊನೆಗೊಳಿಸಿತ್ತು. 2007 ರ ಉದ್ಘಾಟನಾ ಆವೃತ್ತಿಯ ನಂತರ ಇದು ಭಾರತಕ್ಕೆ ಒಲಿದ ಎರಡನೇ ಟಿ20 ವಿಶ್ವಕಪ್ ಪ್ರಶಸ್ತಿಯಾಗಿತ್ತು. ಮೆನ್ ಇನ್ ಬ್ಲೂ ಈ ಹಿಂದೆ ರೋಹಿತ್ ಅವರ ನಾಯಕತ್ವದಲ್ಲಿ ಎರಡು ಫೈನಲ್‌ಗಳನ್ನು ಆಡಿತ್ತು. ಏಕದಿನ ವಿಶ್ವಕಪ್ ಮತ್ತು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್. ಇಲ್ಲಿ ರನ್ನರ್-ಅಪ್ ಸ್ಥಾನ ಗಳಿಸಿತ್ತು.

ಇದನ್ನೂ ಓದಿ Rohit Sharma: ಸೋಲಿನ ಬಳಿಕ ದೇಶೀಯ ಕ್ರಿಕೆಟ್​ನ ಮಹತ್ವ ತಿಳಿಸಿದ ರೋಹಿತ್​; ನೆಟ್ಟಿಗರಿಂದ ತೀವ್ರ ತರಾಟೆ

ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Vinesh Phogat : ವಿನೇಶ್​ ಫೈನಲ್ ತಲುಪಿದ್ದೇ ಹೆಮ್ಮೆಯ ವಿಷಯ; ಫೋಗಟ್ ಸಾಧನೆಯನ್ನು ಕೊಂಡಾಡಿದ ಮೋದಿ

Vinesh Phogat: ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಮಹಿಳೆಯರ 50 ಕೆ.ಜಿ ಚಿನ್ನದ ಪದಕದ ಸ್ಪರ್ಧೆಯಿಂದ ವಿನೇಶ್ ಅನರ್ಹಗೊಂಡಿದ್ದರು. ಅವರು ಮಿತಿಗಿಂತ 100 ಗ್ರಾಂ ಹೆಚ್ಚುವರಿ ತೂಕ ಹೊಂದಿದ್ದಕ್ಕೆ ಅನರ್ಹಗೊಳಿಸಲಾಯಿತು. ಗ್ರ್ಯಾಂಡ್ ಸ್ಪೋರ್ಟ್ಸ್ ಅಖಾಡದಲ್ಲಿ ಆದ ನೋವಿನಿಂದಾಗಿ ಅವರು ಕುಸ್ತಿಯಿಂದ ನಿವೃತ್ತರಾಗುವ ನಿರ್ಧಾರವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದರು.

VISTARANEWS.COM


on

Vinesh Phogat
Koo

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ಅವರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಸ್ಪರ್ಧಿಸಿದ್ದ ಭಾರತೀಯ ಕ್ರೀಡಾಪಟುಗಳು ಮತ್ತು ಪದಕ ವಿಜೇತರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯಂದು ತಮ್ಮ ನಿವಾಸದಲ್ಲಿ ಸತ್ಕರಿಸಿದ್ದಾರೆ. ಈ ವೇಳೆ ವಿನೇಶ್ ಅವರ ಸಾಧನೆಯನ್ನು ಉಲ್ಲೇಖಿಸಿದ್ದಾರೆ. ಒಲಿಂಪಿಕ್ಸ್​ ಕುಸ್ತಿಯಲ್ಲಿ ಫೈನಲ್ ತಲುಪಿದ ಮೊದಲ ಭಾರತೀಯ (ಮಹಿಳೆ) ಎಂಬ ಹೆಗ್ಗಳಿಕೆಗೆ ವಿನೇಶ್ ಪಾತ್ರರಾಗಿದ್ದನ್ನು ಅವರು ಕೊಂಡಾಡಿದ್ದಾರೆ. ಇದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ ಎಂದು ಹೇಳಿದರು.

ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಮಹಿಳೆಯರ 50 ಕೆ.ಜಿ ಚಿನ್ನದ ಪದಕದ ಸ್ಪರ್ಧೆಯಿಂದ ವಿನೇಶ್ ಅನರ್ಹಗೊಂಡಿದ್ದರು. ಅವರು ಮಿತಿಗಿಂತ 100 ಗ್ರಾಂ ಹೆಚ್ಚುವರಿ ತೂಕ ಹೊಂದಿದ್ದಕ್ಕೆ ಅನರ್ಹಗೊಳಿಸಲಾಯಿತು. ಗ್ರ್ಯಾಂಡ್ ಸ್ಪೋರ್ಟ್ಸ್ ಅಖಾಡದಲ್ಲಿ ಆದ ನೋವಿನಿಂದಾಗಿ ಅವರು ಕುಸ್ತಿಯಿಂದ ನಿವೃತ್ತರಾಗುವ ನಿರ್ಧಾರವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದರು.

ಹರಿಯಾಣದ ಕುಸ್ತಿಪಟು ಮೂರು ಕಾಮನ್ವೆಲ್ತ್ ಗೇಮ್ಸ್ ಚಿನ್ನ, ಎರಡು ವಿಶ್ವ ಚಾಂಪಿಯನ್ಶಿಪ್ ಕಂಚಿನ ಪದಕ ಮತ್ತು ಒಂದು ಏಷ್ಯನ್ ಗೇಮ್ಸ್ ಚಿನ್ನದ ಪದಕ ಗೆದ್ದಿದ್ದಾರೆ. ಅವರು 2021ರಲ್ಲಿ ಏಷ್ಯನ್ ಚಾಂಪಿಯನ್ ಕಿರೀಟವನ್ನು ಪಡೆದವರು. ಅವರು ಒಲಿಂಪಿಕ್ ಅನರ್ಹತೆಯ ವಿರುದ್ಧ ಕೋರ್ಟ್ ಆಫ್ ಆರ್ಬಿಟ್ರೇಶನ್ ಫಾರ್ ಸ್ಪೋರ್ಟ್ಸ್ (ಸಿಎಎಸ್) ಗೆ ಮೇಲ್ಮನವಿ ಸಲ್ಲಿಸಿದರು. 50 ಕೆಜಿ ವಿಭಾಗದಲ್ಲಿ ಜಂಟಿ ಬೆಳ್ಳಿ ಪದಕವನ್ನು ಒತ್ತಾಯಿಸಿದರು. ಸಿಎಎಸ್​​ನ ತಾತ್ಕಾಲಿಕ ವಿಭಾಗವು ಅನರ್ಹತೆಯ ವಿರುದ್ಧ ವಿನೇಶ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತು. ಇದು ಅವರ ಚೊಚ್ಚಲ ಒಲಿಂಪಿಕ್ ಪದಕವನ್ನು ಗೆಲ್ಲುವ ಕನಸನ್ನು ಭಗ್ನಗೊಳಿಸಿತು.

ಇದನ್ನು ಓದಿ: Vinesh Phogat : ತೂಕ ಇಳಿಸಲು ಹೋಗಿ ಸಾವಿನ ಬಾಗಿಲು ತಟ್ಟಿದ್ದ ವಿನೇಶ್​ ಫೋಗಟ್​; ಭಯಾನಕ ಕ್ಷಣಗಳನ್ನು ವಿವರಿಸಿದ ಕೋಚ್​!

ಪ್ಯಾರಿಸ್ ಕ್ರೀಡಾಕೂಟದಲ್ಲಿ ಬಿಲ್ಲುಗಾರಿಕೆ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಬಾಕ್ಸಿಂಗ್, ಈಕ್ವೆಸ್ಟ್ರಿಯನ್​​, ಗಾಲ್ಫ್, ಹಾಕಿ, ಜೂಡೋ, ರೋಯಿಂಗ್, ನೌಕಾಯಾನ, ಶೂಟಿಂಗ್, ಈಜು, ಕುಸ್ತಿ, ಟೇಬಲ್ ಟೆನಿಸ್ ಮತ್ತು ಟೆನಿಸ್ ಸೇರಿದಂತೆ 16 ಕ್ರೀಡೆಗಳಲ್ಲಿ ಒಟ್ಟು 117 ಭಾರತೀಯ ಕ್ರೀಡಾಪಟುಗಳು ಭಾಗವಹಿಸಿದ್ದರು.

ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಭಾರತ ಆರು ಪದಕಗಳನ್ನು ಗೆದ್ದಿದೆ. ಒಂದು ಬೆಳ್ಳಿ ಮತ್ತು ಐದು ಕಂಚು. ಪ್ರದರ್ಶನದ ನಿರೀಕ್ಷೆಗಳು ಹೆಚ್ಚಿದ್ದರೂ, 2021 ರಲ್ಲಿ ಟೋಕಿಯೊ ಒಲಿಂಪಿಕ್ಸ್​ನಲ್ಲಿ ದೇಶವು ಏಳು ಪದಕಗಳನ್ನು (1 ಚಿನ್ನ, 2 ಬೆಳ್ಳಿ ಮತ್ತು 4 ಕಂಚು) ಗಳಿಸಿ 48 ನೇ ಸ್ಥಾನದಲ್ಲಿತ್ತು.

Continue Reading

ಪ್ರಮುಖ ಸುದ್ದಿ

Jasprit Bumrah : ಬಾಂಗ್ಲಾದೇಶ ವಿರುದ್ಧದ ಟೆಸ್ಟ್​ ಪಂದ್ಯಕ್ಕೂ ಜಸ್​ಪ್ರಿತ್​ ಬುಮ್ರಾ ಅಲಭ್ಯ?

Jasprit Bumrah : ಭಾರತೀಯ ಕ್ರಿಕೆಟ್ ತಂಡವು ಪ್ರಸ್ತುತ ತಮ್ಮ ಬಿಡುವಿಲ್ಲದ ವೇಳಾಪಟ್ಟಿಯ ನಡುವೆ ಅಪರೂಪದ ವಿರಾಮದಲ್ಲಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರವಿಚಂದ್ರನ್ ಅಶ್ವಿನ್ ಮತ್ತು ಬುಮ್ರಾ ಸೇರಿದಂತೆ ಅನೇಕ ನಿಯಮಿತ ಆಟಗಾರರು ದುಲೀಪ್ ಟ್ರೋಫಿ 2024 ರಲ್ಲಿ ಭಾಗವಹಿಸಲಿದ್ದಾರೆ. ಅವರ ಮುಂದಿನ ನಿಯೋಜನೆ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಾಗಿದೆ.

VISTARANEWS.COM


on

Jasprit Bumrah
Koo

ನವದೆಹಲಿ: ಮುಂದಿನ ತಿಂಗಳು ತವರು ನೆಲದಲ್ಲಿ ನಡೆಯಲಿರುವ ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾಗೆ (Jasprit Bumrah) ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಅಜಿತ್ ಅಗರ್ಕರ್ ನೇತೃತ್ವದ ಹಿರಿಯ ಆಯ್ಕೆ ಸಮಿತಿಯು ಜಸ್ಪ್ರೀತ್ ಬುಮ್ರಾ ಈ ವರ್ಷದ ಕೊನೆಯಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಗೆ ಫಿಟ್ ಆಗಿರಬೇಕು ಮತ್ತು ಲಭ್ಯವಿರಬೇಕು ಎಂದು ಬಯಸಿದೆ. ಹೀಗಾಗಿ ಅವರಿಗೆ ಬಾಂಗ್ಲಾ ವಿರುದ್ಧದ ಸರಣಿಯಿಂದ ವಿಶ್ರಾಂತಿ ನೀಡುವ ಸಾಧ್ಯತೆಗಳಿವೆ.

ಭಾರತೀಯ ಕ್ರಿಕೆಟ್ ತಂಡವು ಪ್ರಸ್ತುತ ತಮ್ಮ ಬಿಡುವಿಲ್ಲದ ವೇಳಾಪಟ್ಟಿಯ ನಡುವೆ ಅಪರೂಪದ ವಿರಾಮದಲ್ಲಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರವಿಚಂದ್ರನ್ ಅಶ್ವಿನ್ ಮತ್ತು ಬುಮ್ರಾ ಸೇರಿದಂತೆ ಅನೇಕ ನಿಯಮಿತ ಆಟಗಾರರು ದುಲೀಪ್ ಟ್ರೋಫಿ 2024 ರಲ್ಲಿ ಭಾಗವಹಿಸಲಿದ್ದಾರೆ. ಅವರ ಮುಂದಿನ ನಿಯೋಜನೆ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಾಗಿದೆ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯ ಸೆಪ್ಟೆಂಬರ್ 19 ರಿಂದ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಪ್ರಾರಂಭವಾಗಲಿದೆ. ಸೆಪ್ಟೆಂಬರ್ 27 ರಿಂದ ಕಾನ್ಪುರದ ಗ್ರೀನ್ ಪಾರ್ಕ್​​ನಲ್ಲಿ ಎರಡನೇ ಟೆಸ್ಟ್​​ ನಡೆಲಿದೆ. ಈ ಟೆಸ್ಟ್ ಸರಣಿಯು ಮುಂಬರುವ ಡಬ್ಲ್ಯುಟಿಸಿ 2023-25 ಚಕ್ರದ ಭಾಗವಾಗಿದೆ.

ಜಸ್ಪ್ರೀತ್ ಬುಮ್ರಾಗೆ ತಮ್ಮ ದೇಹದ ಬಗ್ಗೆ ಚೆನ್ನಾಗಿ ತಿಳಿದಿದೆ

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಜಸ್ಪ್ರೀತ್ ಬುಮ್ರಾ ಮರಳಬಹುದು ಎಂಬ ಊಹಾಪೋಹಗಳು ಇದ್ದವು. ಆದಾಗ್ಯೂ, ತಂಡದ ಮ್ಯಾನೇಜ್ಮೆಂಟ್ ಮತ್ತು ಆಯ್ಕೆದಾರರು ಅವರು ಆಸ್ಟ್ರೇಲಿಯಾ ಪ್ರವಾಸಕ್ಕೆ ಸಂಪೂರ್ಣವಾಗಿ ಫಿಟ್ ಆಗಿರಬೇಕು ಎಂದು ಬಯಸುತ್ತಾರೆ. ಪಿಟಿಐ ವರದಿಯ ಪ್ರಕಾರ, ಬುಮ್ರಾ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ.

ಜಸ್ಪ್ರೀತ್ ಬುಮ್ರಾ ಅವರು ಬಾಂಗ್ಲಾದೇಶ ಟೆಸ್ಟ್​​ನಲ್ಲಿ ಆಡಲು ಬಯಸುತ್ತಾರೆಯೇ ಎಂದು ನಿರ್ಧರಿಸುತ್ತಾರೆ ಎಂದು ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿವೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಗೆ ತಯಾರಿ ನಡೆಸಲು ಬುಮ್ರಾ ತವರಿನಲ್ಲಿ ನ್ಯೂಜಿಲೆಂಡ್ ಸರಣಿಯಲ್ಲಿ ಆಡುವ ನಿರೀಕ್ಷೆಯಿದೆ.

ಬುಮ್ರಾ ಅವರು ತಮ್ಮ ದೇಹದ ಬಗ್ಗೆ ಚೆನ್ನಾಗಿ ತಿಳಿದಿದ್ದಾರೆ. ಅವರು ಬಾಂಗ್ಲಾದೇಶ ವಿರುದ್ಧದ ಟೆಸ್ಟ್​​ನಲ್ಲಿ ಆಡಲು ಬಯಸುತ್ತಾರೆಯೇ ಎಂಬುದು ಅವರಿಗೆ ಬಿಟ್ಟದ್ದು. ಆಸ್ಟ್ರೇಲಿಯಾ ವಿರುದ್ಧದ ಎಲ್ಲಾ ಐದು ಟೆಸ್ಟ್ ಪಂದ್ಯಗಳಿಗೆ ಭಾರತಕ್ಕೆ ಶೇಕಡಾ 120ರಷ್ಟು ಫಿಟ್ ಆಗಿರುವ ಜಸ್ಪ್ರೀತ್ ಬುಮ್ರಾ ಅಗತ್ಯವಿದೆ ಎಂದು ಟೀಮ್ ಮ್ಯಾನೇಜ್ಮೆಂಟ್ ಮತ್ತು ಆಯ್ಕೆದಾರರು ಸ್ಪಷ್ಟಪಡಿಸಿದ್ದಾರೆ. ಅದಕ್ಕೂ ಮೊದಲು, ಭಾರತದಲ್ಲಿ ನ್ಯೂಜಿಲೆಂಡ್ ನಲ್ಲಿ ಸರಣಿ ಇದೆ. ಅಲ್ಲಿ ಅವರು ಬಹುಶಃ ಆಡುತ್ತಾರೆ. ಕಠಿಣ ಪರೀಕ್ಷೆಗಳಿಗೆ ಸಿದ್ಧರಾಗುತ್ತಾರೆ,” ಎಂದು ಬಿಸಿಸಿಐ ಮೂಲವೊಂದು ತಿಳಿಸಿದೆ.

2024ರ ಟಿ20 ವಿಶ್ವಕಪ್ ಗೆಲುವಿನ ಬಳಿಕ ಜಸ್ಪ್ರೀತ್ ಬುಮ್ರಾ ವಿಶ್ರಾಂತಿಯಲ್ಲಿದ್ದಾರೆ. ಅವರ ಪ್ರದರ್ಶನಕ್ಕಾಗಿ ಅವರು ಪಂದ್ಯಾವಳಿಯ ಉತ್ತಮ ಆಟಗಾರ ಪ್ರಶಸ್ತಿ ಪಡೆದಿದ್ದಾರೆ. . ಬಲಗೈ ವೇಗಿ ಎಂಟು ಪಂದ್ಯಗಳಲ್ಲಿ 4.17 ಎಕಾನಮಿ ರೇಟ್ನಲ್ಲಿ 15 ವಿಕೆಟ್​​ ಪಡೆದಿದ್ದಾರೆ. ಬುಮ್ರಾ ಜಿಂಬಾಬ್ವೆಯಲ್ಲಿ ನಡೆದ ಟಿ 20 ಐ ಸರಣಿ ಮತ್ತು ಶ್ರೀಲಂಕಾದಲ್ಲಿ ನಡೆದ ವೈಟ್-ಬಾಲ್ ಸರಣಿಯಿಂದ ಹೊರಗುಳಿದಿದ್ದರು.

ಇದನ್ನೂ ಓದಿ: PR Sreejesh : ಕುಟುಂಬ ಸಮೇತ ಪ್ರಧಾನಿ ಮೋದಿಯನ್ನು ಭೇಟಿಯಾದ ಒಲಿಂಪಿಯನ್​ ಪಿ.ಆರ್ ಶ್ರೀಜೇಶ್​​

ಈ ವರ್ಷದ ಆರಂಭದಲ್ಲಿ ತವರಿನಲ್ಲಿ ನಡೆದ ಐದು ಪಂದ್ಯಗಳ ಸರಣಿಯಲ್ಲಿ ಬುಮ್ರಾ ಕೊನೆಯ ಬಾರಿಗೆ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯವನ್ನು ಆಡಿದ್ದರು. 30 ವರ್ಷದ ಕ್ರಿಕೆಟಿಗ ಇಂಗ್ಲೆಂಡ್ ವಿರುದ್ಧದ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ 16.89 ಸರಾಸರಿ ಮತ್ತು 32.79 ಸ್ಟ್ರೈಕ್ ರೇಟ್​​ನಲ್ಲಿ 19 ವಿಕೆಟ್​ ಪಡೆದಿದ್ದಾರೆ. ಈ ಮೂಲಕ ಐದು ಪಂದ್ಯಗಳ ಸರಣಿಯನ್ನು ಭಾರತ 4-1 ಅಂತರದಿಂದ ಭಾರತ ಗೆದ್ದುಕೊಂಡಿದೆ.

ಬುಮ್ರಾ ಬಾಂಗ್ಲಾದೇಶ ಸರಣಿಯಿಂದ ಬುಮ್ರಾ ಹೊರಗುಳಿದರೆ ಯುವ ಬೌಲರ್​​ಗಳಾದ ಅರ್ಷ್ದೀಪ್ ಸಿಂಗ್ ಮತ್ತು ಖಲೀಲ್ ಅಹ್ಮದ್ ಟೆಸ್ಟ್​​ಗೆ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ. 2024ರ ಟಿ20 ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅರ್ಶ್​ದೀಪ್​ ಟೆಸ್ಟ್ ಕ್ರಿಕೆಟ್​ಗೆ ಪದಾರ್ಪಣೆ ಮಾಡುವ ಸ್ಪರ್ಧೆಯಲ್ಲಿದ್ದಾರೆ.

Continue Reading
Advertisement
Employee ID card
ಕರ್ನಾಟಕ6 mins ago

Employee ID card: ರಾಜ್ಯ ಸರ್ಕಾರಿ ನೌಕರರಿಗೆ ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಟ್ಯಾಗ್‌ ಕಡ್ಡಾಯ

Rishab Shetty first reaction after kantara national award
ಸ್ಯಾಂಡಲ್ ವುಡ್11 mins ago

Rishab Shetty: ಈ ಪ್ರಶಸ್ತಿ ದೈವಕ್ಕೆ ಸಲ್ಲಬೇಕು ಎಂದ ರಿಷಬ್ ಶೆಟ್ಟಿ; ನಟನ ಫಸ್ಟ್‌ ರಿಯಾಕ್ಷನ್‌ ಹೀಗಿತ್ತು!

Kannada New Movie
ಬೆಂಗಳೂರು13 mins ago

Kannada New Movie: ತೆರೆಯ‌ ಮೇಲೆ‌ ಚಿತ್ರವಾಗಿ ಬರಲಿದೆ ಡಿ.ವಿ.ಜಿ ಅವರ ʼಮಂಕುತಿಮ್ಮನ ಕಗ್ಗʼ; ಮೊದಲ ಹಾಡು ರಿಲೀಸ್‌

70th National Film Award
ಪ್ರಮುಖ ಸುದ್ದಿ21 mins ago

70th National Film Awards : ಕನ್ನಡಿಗರಿಗೆ ಹೆಮ್ಮೆ ತಂದ ರಿಷಭ್​ ಶೆಟ್ಟಿ, ಕೆಜಿಎಫ್​​; ಮಲಯಾಳಂನ ‘ಆಟಂ’ ಅತ್ಯುತ್ತಮ ಸಿನೆಮಾ; ಸಂಪೂರ್ಣ ಲಿಸ್ಟ್‌ ಇಲ್ಲಿದೆ

Rishab Shetty cinema Journey before Kantara
ಸ್ಯಾಂಡಲ್ ವುಡ್26 mins ago

Rishab Shetty: ಅಣ್ಣಾವ್ರ ಅಪ್ಪಟ ಅಭಿಮಾನಿ ರಿಷಬ್‌ ಶೆಟ್ಟಿ ಸಿನಿ ಜರ್ನಿ ಹೀಗಿತ್ತು! ನಾಡಿಗೆ ಕೀರ್ತಿ ತಂದ ಕುಂದಾಪುರದ ಹುಡುಗ!

Virat Kohli
ಕ್ರಿಕೆಟ್41 mins ago

Virat Kohli: ಲಂಡನ್​ನ ಸಿಗ್ನಲ್​ನಲ್ಲಿ ಸಾಮಾನ್ಯರಲ್ಲಿ ಸಾಮಾನ್ಯರಂತೆ ನಿಂತ ಕೊಹ್ಲಿ; ವಿಡಿಯೊ ವೈರಲ್

Teachers Transfer
ಕರ್ನಾಟಕ50 mins ago

Teachers Transfer: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್‌ ನ್ಯೂಸ್‌; ನಾಳೆಯಿಂದ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆ

Bengaluru Power Cut
ಕರ್ನಾಟಕ1 hour ago

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಆ.17ರಂದು ಪವರ್‌ ಕಟ್‌!

70th National Film Awards Rishabh Shetty Best Actor, KGF 2 Best Kannada Movie
ಸ್ಯಾಂಡಲ್ ವುಡ್1 hour ago

70th National Film Awards: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ರಿಷಬ್‌ ಶೆಟ್ಟಿ ಅತ್ಯುತ್ತಮ ನಟ, ಕೆಜಿಎಫ್‌ 2 ಅತ್ಯುತ್ತಮ ಕನ್ನಡ ಚಿತ್ರ

Kolkata doctor rape case
ಪ್ರಮುಖ ಸುದ್ದಿ1 hour ago

Kolkata doctor rape case : ದುಡ್ಡು ಪಡೆದರೆ ಮೃತಪಟ್ಟ ಮಗಳಿಗೆ ಅವಮಾನ ಮಾಡಿದಂತೆ; ಪರಿಹಾರದ ಮೊತ್ತ ನಿರಾಕರಿಸಿದ ಕೋಲ್ಕೊತಾ ಅತ್ಯಾಚಾರ ಸಂತ್ರಸ್ತೆಯ ಅಪ್ಪ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌