Digital Arrest: ಡಿಜಿಟಲ್‌ ಅರೆಸ್ಟ್‌ ಮಾಡಿ 2.2 ಕೋಟಿ ರೂ. ವಂಚನೆ; ಐವರು ಸೈಬರ್‌ ಕಳ್ಳರ ಬಂಧನ - Vistara News

ಕರ್ನಾಟಕ

Digital Arrest: ಡಿಜಿಟಲ್‌ ಅರೆಸ್ಟ್‌ ಮಾಡಿ 2.2 ಕೋಟಿ ರೂ. ವಂಚನೆ; ಐವರು ಸೈಬರ್‌ ಕಳ್ಳರ ಬಂಧನ

Digital Arrest: ದುಬೈ ಮೂಲದ ವ್ಯಕ್ತಿ ಸೇರಿ ಐವರು ಸೈಬರ್ ವಂಚಕರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು, ಕೊಡಗು ಮೂಲದ ವ್ಯಕ್ತಿಗೆ ಬೆದರಿಕೆ ಹಾಕಿ 2.21 ಕೋಟಿ ರೂ.ಗಳನ್ನು ಪಡೆದಿದ್ದರು. ಪ್ರಕರಣವನ್ನು ಸಿಐಡಿ ಭೇದಿಸಿದೆ.

VISTARANEWS.COM


on

Digital Arrest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಾರ್ವಜನಿಕರನ್ನು ಡಿಜಿಟಲ್ ಅರೆಸ್ಟ್ (Digital Arrest) ಮಾಡುತ್ತಿದ್ದ ದುಬೈ ಮೂಲದ ವ್ಯಕ್ತಿ ಸೇರಿ ಐವರು ಸೈಬರ್ ವಂಚಕರನ್ನು ಬಂಧಿಸುವಲ್ಲಿ ಸಿಐಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ 1.70 ಕೋಟಿ ರೂಪಾಯಿ, 7700 ಯುಎಸ್ ಡಾಲರ್ (6,46,441 ರೂ.) ಸೇರಿ 1.76 ಕೋಟಿ ರೂ.ಗಳನ್ನು ವಶಕ್ಕೆ ಪಡೆಯಲಾಗಿದೆ.

ದುಬೈನ ಯುಸುಫ್ ಸೇಠ್, ಬೆಂಗಳೂರಿನ ಮಹಮ್ಮದ್ ಶಾಕಿಬ್, ಮಹಮ್ಮದ್ ಅಯಾನ್, ಅಹಸಾನ್ ಅನ್ಸಾರಿ, ಸೊಲೋಮನ್ ರಾಜ ಬಂಧಿತರು. ನಿಮ್ಮ ಹೆಸರಿನ ಪಾರ್ಸೆಲ್‌ನಲ್ಲಿ ಡ್ರಗ್ಸ್ ಇದೆ ಎಂದು ಸಾರ್ವಜನಿಕರಿಗೆ ಕರೆ ಮಾಡುತ್ತಿದ್ದ ಆರೋಪಿಗಳು, ನಾವು ಪೊಲೀಸರು. ಇದನ್ನು ಬಗೆಹರಿಸಲು ಹಣ ಕೊಡಬೇಕು ಎಂದು ಬೇಡಿಕೆ ಇಡುತ್ತಿದ್ದರು.

ಈ ರೀತಿ ಬೆದರಿಕೆ ಹಾಕಿ ಕೊಡುಗು ಮೂಲದ ವ್ಯಕ್ತಿಯಿಂದ 2.21 ಕೋಟಿ ರೂ.ಗಳನ್ನು ಆರ್‌ಟಿಜಿಎಸ್ ಮಾಡಿಸಿಕೊಂಡಿದ್ದರು. ಆರೋಪಿಗಳು ದುಬೈನಲ್ಲಿ ವಂಚನೆ ಮಾಡಲು ಭಾರತೀಯ ಬ್ಯಾಂಕ್ ಅಕೌಂಟ್‌ ಅನ್ನು ಬಳಸಿದ್ದರು. ಈ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿತ್ತು. ಸದ್ಯ ಆರೋಪಿಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ವಂಚನೆ ಹಣದಿಂದ ಬೆನ್ಜ್ ಕಾರು ಖರೀದಿಸಿದ್ದರು. ಅವರಿಂದ ಒಟ್ಟು 1.76 ಕೋಟಿ ರೂ.ಗಳನ್ನು ಸಿಐಡಿ ವಶಕ್ಕೆ ಪಡೆದಿದ್ದು, ಸಿಐಡಿ ಪೊಲೀಸರಿಂದ ತನಿಖೆ ಮುಂದುವರಿದಿದೆ.

ಇದನ್ನೂ ಓದಿ | Crime News: ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆ ಕಡಿದು ಕೈಯಲ್ಲಿ ಕತ್ತಿ ಹಿಡಿದು ನರ್ತಿಸಿದ ಪತಿ

ಆನ್‌ಲೈನ್‌ ಹೂಡಿಕೆ ಹೆಸರಲ್ಲಿ ವಂಚನೆ; 1.53 ಕೋಟಿ ರೂ. ಕಳೆದುಕೊಂಡ ಟೆಕ್ಕಿ ದಂಪತಿ

ಬೆಂಗಳೂರು: ಸೈಬರ್‌ ಕ್ರೈಂ (Cyber Crime) ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದೀಗ ವಂಚಕನೊಬ್ಬ ಆನ್‌ಲೈನ್‌ ಹೂಡಿಕೆ ಹೆಸರಿನಲ್ಲಿ ಬೆಂಗಳೂರಿನ ಟೆಕ್ಕಿ ದಂಪತಿ ಬಳಿಯಿಂದ ಬರೋಬ್ಬರಿ 1.53 ಕೋಟಿ ರೂಪಾಯಿ ಪೀಕಿಸಿದ್ದು, ಸದ್ಯ ಪೊಲೀಸರು 1.4 ಕೋಟಿ ರೂ. ಅನ್ನು 50ಕ್ಕೂ ಹೆಚ್ಚು ಖಾತೆಗಳಿಂದ ರಿಕವರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ವಂಚನೆಗೆ ಒಳಗಾದ ದಂಪತಿ ನೀಡಿ ದೂರು ಆಧರಿಸಿ ಪೂರ್ವ ವಲಯದ ಸೈಬರ್ ಕ್ರೈಂ ‌ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಬಾಣಸವಾಡಿಯಲ್ಲಿ ವಾಸಿಸುತ್ತಿರುವ ದಂಪತಿಗೆ ಬ್ಯಾಂಕ್‌ ಅಧಿಕಾರಿಗಳ ಜತೆ ಸೇರಿ ವಂಚಕ ಬಲೆ ಬೀಸಿದ್ದ. ಹೆಚ್ಚಿನ ಲಾಭದ ಆಸೆ ತೋರಿಸಿ ಈ ಕೃತ್ಯ ಎಸಗಿದ್ದ ಎನ್ನುವುದು ತನಿಖೆ ವೇಳೆ ತಿಳಿದು ಬಂದಿದೆ.

ಬ್ರಿಟನ್‌ನಲ್ಲಿ ಕುಳಿತು ವಂಚಕ ಈ ವಂಚನೆ ಜಾಲವನ್ನು ನಡೆಸುತ್ತಿದ್ದ. ಈತ ಹಣ ಸ್ವೀಕರಿಸಲು ಉತ್ತರ ಭಾರತೀಯರ ಒಂದಿಷ್ಟು ಖಾತೆಗಳನ್ನು ಬಾಡಿಗೆಗೆ ಪಡೆದಿದ್ದ. ಅಷ್ಟೇ ಅಲ್ಲ ಹೂಡಿಕೆ ನಿಜ ಎಂದು ಬಿಂಬಿಸಲು ಈತ ನಕಲಿ ವೆಬ್‌ಸೈಟ್‌ ಒಂದನ್ನು ತೆರೆದು ದಂಪತಿಗೆ ಇದರ ಆಕ್ಸೆಸ್‌ ಕೂಡ ನೀಡಿದ್ದ.

ಇದರಲ್ಲಿ ತಮ್ಮ ಹೂಡಿಕೆ ಬೆಳೆಯುತ್ತಿರುವುದನ್ನು ಕಂಡು ದಂಪತಿ ಖುಷಿಯಾಗಿದ್ದರು. ಕೆಲವು ತಿಂಗಳ ನಂತರ ಒಂದಿಷ್ಟು ಹಣವನ್ನು ಹಿಂಪಡೆಯಲು ನೋಡಿದ್ದಾರೆ. ಆದರೆ ಹಣ ತೆಗೆಯಲು ಆಗುತ್ತಿರಲಿಲ್ಲ. ಇದರಿಂದ ಅವರಿಗೆ ಅನುಮಾನ ಮೂಡತೊಡಗಿತ್ತು. ಅಷ್ಟೇ ಅಲ್ಲ ನಕಲಿ ವೆಬ್‌ಸೈಟ್‌ನ ಆಕ್ಸೆಸ್‌ ಕೂಡ ಹೋಗಿತ್ತು. ಕೊನೆಗೆ ದಂಪತಿಯನ್ನು ಈ ವೆಬ್‌ಸೈಟ್‌ ಬ್ಲಾಕ್ ಮಾಡಿತ್ತು.

ಇದರೊಂದಿಗೆ ತಾವು ವಂಚನೆಗೆ ಸಿಲುಕಿರುವುದು ದಂಪತಿಗೆ ದೃಢವಾಗಿತ್ತು. ಕೂಡಲೇ ದಂಪತಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ಆರಂಭಿಸಿದ್ದಲ್ಲದೆ ಬ್ಯಾಂಕ್‌ ಅಧಿಕಾರಿಗಳ ಜತೆ ಸೇರಿ ನಡೆಸಿದ್ದ ಈ ವಂಚನೆ ಜಾಲವನ್ನು ಭೇದಿಸಿದ್ದಾರೆ. ಈ ಹಗರಣದಲ್ಲಿ ಭಾಗಿಯಾಗಿದ್ದ 50ಕ್ಕೂ ಹೆಚ್ಚು ಖಾತೆಗಳನ್ನು ಬ್ಲಾಕ್‌ ಮಾಡಿದ್ದಾರೆ.

ಇದನ್ನೂ ಓದಿ | Kolkata doctor rape case : ದುಡ್ಡು ಪಡೆದರೆ ಮೃತಪಟ್ಟ ಮಗಳಿಗೆ ಅವಮಾನ ಮಾಡಿದಂತೆ; ಪರಿಹಾರದ ಮೊತ್ತ ನಿರಾಕರಿಸಿದ ಕೋಲ್ಕೊತಾ ಅತ್ಯಾಚಾರ ಸಂತ್ರಸ್ತೆಯ ಅಪ್ಪ

ಲಂಡನ್​​ನಿಂದ ಕೃತ್ಯ

ʼʼಆರೋಪಿ ಲಂಡನ್​​ನಲ್ಲಿ ಕುಳಿತು ಕೃತ್ಯ ಎಸಗಿರುವ ಬಗ್ಗೆ ಮಾಹಿತಿ ಇದ್ದು, ಇದಕ್ಕಾಗಿ ಉತ್ತರ ಭಾರತದ ಹಲವಾರು ಅಕೌಂಟ್​ಗಳನ್ನು ಬಳಕೆ ಮಾಡಿದ್ದಾನೆ. ಷೇರು ಮಾರ್ಕೆಟ್ ಬ್ರೋಕರೇಜ್ ರೀತಿಯ ನಕಲಿ ವೆಬ್​ಸೈಟ್ ರಚನೆ ಮಾಡಿದ್ದಾನೆ. ಸದ್ಯ ಆರೋಪಿ ಯಾರು ಎಂಬುದರ ಸ್ಪಷ್ಟತೆ ಇಲ್ಲʼʼ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ವಶಪಡಿಸಿಕೊಳ್ಳಲಾದ ಹಣವನ್ನು ಪೊಲೀಸರು ವಂಚನೆಗೆ ಒಳಗಾದ ದಂಪತಿಗೆ ಮರಳಿಸುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

CM Siddaramaiah: ಆಪಲ್‌ ಫೋನ್‌ ಬಿಡಿಭಾಗ ತಯಾರಕ ಫಾಕ್ಸ್‌ಕಾನ್ ಸಂಸ್ಥೆ ಅಧ್ಯಕ್ಷರೊಂದಿಗೆ ಸಿದ್ದರಾಮಯ್ಯ ಚರ್ಚೆ

CM Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೈವಾನ್ ಮೂಲದ ಆಪಲ್ ಫೋನ್ ಕಂಪನಿ ಫಾಕ್ಸ್‌ಕಾನ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಅಧ್ಯಕ್ಷ ಯಂಗ್ ಲಿಯು ಅವರ ಜತೆ ಚರ್ಚೆ ನಡೆಸಿದರು.ಈ ವೇಳೆ ಫಾಕ್ಸ್‌ಕಾನ್ ಕಂಪನಿಗೆ ರಾಜ್ಯದಲ್ಲಿ ಕಾರ್ಯನಿರ್ವಹಿಸಲು ಅಗತ್ಯವಾದ ಎಲ್ಲಾ ರೀತಿಯ ಸಹಕಾರ, ನೆರವು ಒದಗಿಸಲಾಗುವುದು ಎಂದು ಸಿಎಂ ಭರವಸೆ ನೀಡಿದರು.

VISTARANEWS.COM


on

CM Siddaramaiah
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ತೈವಾನ್ ಮೂಲದ ಆಪಲ್ ಫೋನ್ ಕಂಪನಿ ಫಾಕ್ಸ್‌ಕಾನ್ (Foxconn) ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಅಧ್ಯಕ್ಷ ಯಂಗ್ ಲಿಯು ಅವರ ಜತೆ ಚರ್ಚೆ ನಡೆಸಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಭೋಜನ ಕೂಟದ ವೇಳೆ ಫಾಕ್ಸ್‌ಕಾನ್ ಕಂಪನಿಗೆ ರಾಜ್ಯದಲ್ಲಿ ಕಾರ್ಯನಿರ್ವಹಿಸಲು ಅಗತ್ಯವಾದ ಎಲ್ಲಾ ರೀತಿಯ ಸಹಕಾರ, ನೆರವು ಒದಗಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಸಾಂಸ್ಕೃತಿಕವಾಗಿ ಉನ್ನತ ಮೌಲ್ಯಗಳನ್ನು ಆಚರಿಸುತ್ತಿರುವ ರಾಜ್ಯದಲ್ಲಿ ಕೈಗಾರಿಕೆಗಳಿಗೆ ಅತ್ಯಗತ್ಯವಾದ ಕಾನೂನು ಮತ್ತು ಸುವ್ಯವಸ್ಥೆಯೂ ಉತ್ತಮವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Government Employees Sports: ಆ.17ರಂದು ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಏಕ್ ರೂಪ್ ಕೌರ್ ಸೇರಿದಂತೆ ಕೈಗಾರಿಕೆ ಮತ್ತು ಐಟಿ ಬಿಟಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Shivamogga News: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಾಲಯದಲ್ಲಿ ವಿಶೇಷ ಪೂಜೆ

Shivamogga News: ಸೊರಬ ತಾಲೂಕಿನ ಚಂದ್ರಗುತ್ತಿಯ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಾಲಯದಲ್ಲಿ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಶುಕ್ರವಾರ ಶ್ರೀ ದೇವಿಗೆ ವಿಶೇಷ ಪೂಜೆ ಕೈಂಕರ್ಯಗಳು ಜರುಗಿದವು. ಸೊರಬ ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್, ವಿಜಯಪುರ, ಶಿವಮೊಗ್ಗ, ರಾಯಚೂರು, ಚಿಕ್ಕಮಂಗಳೂರು, ದಾವಣಗೆರೆ, ಚಿತ್ರದುರ್ಗ ಹಾಗೂ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿ, ಶ್ರೀ ರೇಣುಕಾಂಬ ದೇವಿಯ ದರ್ಶನ ಪಡೆದರು.

VISTARANEWS.COM


on

Shivamogga News
Koo

ಸೊರಬ: ತಾಲೂಕಿನ ಚಂದ್ರಗುತ್ತಿಯ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಾಲಯದಲ್ಲಿ (Chandragutti Renukamba Temple) ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಶುಕ್ರವಾರ ಶ್ರೀ ದೇವಿಗೆ ವಿಶೇಷ ಪೂಜೆ ಕೈಂಕರ್ಯಗಳು (Shivamogga News) ಜರುಗಿದವು.

ಶ್ರಾವಣ ಮಾಸದ ವರಮಹಾಲಕ್ಷ್ಮಿ ಹಬ್ಬದ ನಿಮಿತ್ತ ಶ್ರೀ ರೇಣುಕಾಂಬ ದೇವಿ ದರ್ಶನಕ್ಕೆ ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್, ವಿಜಯಪುರ, ಶಿವಮೊಗ್ಗ, ರಾಯಚೂರು, ಚಿಕ್ಕಮಂಗಳೂರು, ದಾವಣಗೆರೆ, ಚಿತ್ರದುರ್ಗ ಹಾಗೂ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ: Kannada New Movie: ತೆರೆಯ‌ ಮೇಲೆ‌ ಚಿತ್ರವಾಗಿ ಬರಲಿದೆ ಡಿ.ವಿ.ಜಿ ಅವರ ʼಮಂಕುತಿಮ್ಮನ ಕಗ್ಗʼ; ಮೊದಲ ಹಾಡು ರಿಲೀಸ್‌

ದೇವಸ್ಥಾನದ ಪರಿವಾರ ದೇವರುಗಳಾದ ಕಾಲಭೈರವ, ನಾಗದೇವತೆ, ಮಾತಂಗಿ, ಪರಶುರಾಮ, ತ್ರಿಶೂಲದ ಭೈರಪ್ಪ, ದೇವರುಗಳಿಗೆ ವಿಶೇಷ ಪೂಜೆ ಪುನಸ್ಕಾರಗಳು ನೆರವೇರಿದವು.

ಇದನ್ನೂ ಓದಿ: Indian Economy : 2027ರ ವೇಳೆಗೆ ಭಾರತ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: ಐಎಂಎಫ್​ನ ಗೀತಾ ಗೋಪಿನಾಥ್

ಶ್ರೀ ರೇಣುಕಾಂಬ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಮೀಳಾ ಕುಮಾರಿ ಮಾತನಾಡಿ, ಧಾರ್ಮಿಕ ದತ್ತಿ ಇಲಾಖೆ ಆದೇಶದಂತೆ ದೇಗುಲಕ್ಕೆ ಆಗಮಿಸಿದ ಮಹಿಳೆಯರಿಗೆ ವರಮಹಾಲಕ್ಷ್ಮಿ ವ್ರತಾಚರಣೆ ಅಂಗವಾಗಿ ಪ್ರಸಾದ ರೂಪದಲ್ಲಿ ಅರಿಷಿಣ, ಕುಂಕುಮ, ಹಸಿರು ಬಳೆ ನೀಡಿ ಉಡಿ ತುಂಬಲಾಯಿತು. ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ಈ ಧಾರ್ಮಿಕ ಕಾರ್ಯಕ್ಕೆ ಮಹಿಳೆಯರು ಹಾಗೂ ಭಕ್ತಾದಿಗಳು ಹಾಗೂ ಗ್ರಾಮಸ್ಥರು ಸಹಕರಿಸಿದರು ಎಂದು ತಿಳಿಸಿದರು.

Continue Reading

ಮಳೆ

Bangalore Rain: ರಾಜಧಾನಿಯ ಹಲವೆಡೆ ಅಬ್ಬರಿಸಿದ ವರುಣ; ಆಟೋ ಮೇಲೆ ಮರ ಬಿದ್ದು ಚಾಲಕ ಸೇರಿ ಮೂವರಿಗೆ ಗಾಯ

Bangalore Rain: ಬೆಂಗಳೂರಿನ ವಿಜಯನಗರದ ಎಂ.ಸಿ.ಲೇಔಟ್‌ನಲ್ಲಿ ಬೃಹತ್ ಮರ ಬಿದ್ದಿದ್ದರಿಂದ ಆಟೋ ಜಖಂಗೊಂಡಿದೆ. ಚಾಲಕ ಹಾಗೂ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರಗೆ ದಾಖಲಿಸಲಾಗಿದೆ.

VISTARANEWS.COM


on

Bangalore Rain
Koo

ಬೆಂಗಳೂರು: ರಾಜಧಾನಿಯ ಬಹುಕೇಕ ಕಡೆ ಶುಕ್ರವಾರ ರಾತ್ರಿ ಭಾರಿ ಮಳೆ ಸುರಿದಿದ್ದು, ಹಲವೆಡೆ ಮರಗಳು ಧರೆಗುರುಳಿವೆ. ರಸ್ತೆಗಳು ಜಲಾವೃತವಾಗಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡಿದರು. ಮೆಜೆಸ್ಟಿಕ್, ವಿಜಯನಗರ, ಯಶವಂತಪುರ, ವಸಂತ ನಗರ ಸುತ್ತಮುತ್ತ ಧಾರಾಕಾರ ಮಳೆ (Bangalore Rain) ಸುರಿದಿದ್ದು, ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೃಹತ್ ಮರವೊಂದು ಆಟೋ ಮೇಲೆ‌ ಬಿದ್ದಿದೆ. ಇದರಿಂದ ಚಾಲಕ ಸೇರಿ ಮೂವರಿಗೆ ಗಾಯಗಳಾಗಿವೆ.

ವಿಜಯನಗರದ ಎಂ.ಸಿ.ಲೇಔಟ್‌ನಲ್ಲಿ ಬೃಹತ್ ಮರ ಬಿದ್ದಿದ್ದರಿಂದ ಆಟೋ ಜಖಂಗೊಂಡಿದೆ. ಚಾಲಕ ಹಾಗೂ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ‌‌ ಬಿಬಿಎಂಪಿ ಸಿಬ್ಬಂದಿ ಭೇಟಿ ನೀಡಿ ಮರ ತೆರವುಗೊಳಿಸುತ್ತಿದ್ದಾರೆ.

ಇನ್ನು ಶುಕ್ರವಾರ ರಾತ್ರಿ ಭಾರಿ ಮಳೆ ಸುರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಮೋರಿಯಲ್ಲಿ ಕಸ ತೆಗೆದ ಪುಟಾಣಿ ಮಕ್ಕಳು

ಸಿಲಿಕಾನ್ ಸಿಟಿಯಲ್ಲಿ ಭಾರಿ ಮಳೆ ಸುರಿದಾಗ ಚರಂಡಿ ಅವ್ಯವಸ್ಥೆಯಿಂದ ರಸ್ತೆಗಳು ಜಲಾವೃತವಾಗುತ್ತವೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಬಿಬಿಎಂಪಿ ಮಾಡಬೇಕಿದ್ದ ಕೆಲಸವನ್ನು ಪುಟಾಣಿ ಮಕ್ಕಳು ಮಾಡಿದ್ದಾರೆ. ಸತತ ಮಳೆಯಿಂದ ರಸ್ತೆಯಲ್ಲಿ ಮಳೆ ನೀರು ತುಂಬಿದ್ದರಿಂದ ಜಯನಗರ ಈಸ್ಟ್ ಎಂಡ್ ಬಳಿ ಮೋರಿಯಲ್ಲಿದ್ದ ಕಸವನ್ನು ಪುಟಾಣಿ ಮಕ್ಕಳು ತೆಗೆದು ಕ್ಲೀನ್‌ ಮಾಡಿದ್ದಾರೆ.

ಪ್ರತಿ ಬಾರಿ ಮಳೆಯಾದಾಗ ತಮ್ಮ ಮನೆಗಳ ಮುಂಭಾಗ ಇದೇ ರೀತಿ ನೀರು ನಿಲ್ಲುತ್ತದೆ. ಬಿಬಿಎಂಪಿಗೆ ಹಲವು ಭಾರಿ ಫೋನ್ ಮಾಡಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಮೋರಿಯಲ್ಲಿದ್ದ ಕಸವನ್ನು ತೆಗೆದು ರಸ್ತೆಯಲ್ಲಿ ಓಡಾಡಲು ಮಕ್ಕಳು ಅನುಕೂಲ ಮಾಡಿಕೊಟ್ಟಿದ್ದಾರೆ.

ಇದನ್ನು ಓದಿ | Lifestyle Tips: ಆರೋಗ್ಯಕರ ಒತ್ತಡರಹಿತ ಜೀವನಕ್ಕೆ ಸರಳ ಸಪ್ತಸೂತ್ರಗಳು!

ಶನಿವಾರ ಹಾಸನ, ಮೈಸೂರು ಸೇರಿ ವಿವಿಧೆಡೆ ಭಾರಿ ಮಳೆ ಮುನ್ಸೂಚನೆ

ಆ.17ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಹಾಸನ,
ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡುನ ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅದೇ ರೀತಿ ಆ.18ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚು. ದಕ್ಷಿಣ ಒಳನಾಡುನ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡುನ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಪರಿಸ್ಥಿತಿ ಆ.21ರವರೆಗೆ ಇರಲಿದೆ.

ಮೀನುಗಾರರಿಗೆ ಎಚ್ಚರಿಕೆ

ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವು ಗಂಟೆಗೆ 35 ಕಿಮೀ ನಿಂದ 45 ಕಿಮೀ ವೇಗದಲ್ಲಿ 55 ಕಿಮೀ ವೇಗದಲ್ಲಿ ಬೀಸುವ ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳು: ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ.. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30° C ಮತ್ತು 22° C ಆಗಿರಬಹುದು

Continue Reading

ಬೆಂಗಳೂರು

Government Employees Sports: ಆ.17ರಂದು ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

Government Employees Sports: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಆ. 17ರಂದು ಶನಿವಾರ ಸಂಜೆ 5 ಗಂಟೆಗೆ ಬೆಂಗಳೂರು ನಗರದ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ “ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು-2024” ಆಯೋಜಿಸಲಾಗಿದೆ.

VISTARANEWS.COM


on

Government Employees Sports
ಸಾಂದರ್ಭಿಕ ಚಿತ್ರ.
Koo

ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಆ. 17ರಂದು ಶನಿವಾರ ಸಂಜೆ 5 ಗಂಟೆಗೆ ನಗರದ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ “ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು-2024” (Government Employees Sports) ಆಯೋಜಿಸಲಾಗಿದೆ.

ಇದನ್ನೂ ಓದಿ: Kannada New Movie: ತೆರೆಯ‌ ಮೇಲೆ‌ ಚಿತ್ರವಾಗಿ ಬರಲಿದೆ ಡಿ.ವಿ.ಜಿ ಅವರ ʼಮಂಕುತಿಮ್ಮನ ಕಗ್ಗʼ; ಮೊದಲ ಹಾಡು ರಿಲೀಸ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಕೂಟವನ್ನು ಉದ್ಘಾಟಿಸುವರು. ಕೇಂದ್ರ ಹಣಕಾಸು ಹಾಗೂ ಕಾರ್ಪೋರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಉಪಸ್ಥಿತರಿರುವರು. ಡಿಸಿಎಂ ಡಿ.ಕೆ. ಶಿವಕುಮಾರ್ ಧ್ವಜಾರೋಹಣ ಮತ್ತು ಕ್ರೀಡಾ ಜ್ಯೋತಿ ಸ್ವೀಕಾರ ಮಾಡುವರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉಪಸ್ಥಿತರಿರುವರು.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಆ.17ರಂದು ಪವರ್‌ ಕಟ್‌!

ಕಾರ್ಯಕ್ರಮದಲ್ಲಿ ಬೆಂಗಳೂರಿನ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಹರ್ಷದ್ ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಪ್ರಾಸ್ತಾವಿಕವಾಗಿ ಮಾತನಾಡುವರು.

Continue Reading
Advertisement
CM Siddaramaiah
ಬೆಂಗಳೂರು2 mins ago

CM Siddaramaiah: ಆಪಲ್‌ ಫೋನ್‌ ಬಿಡಿಭಾಗ ತಯಾರಕ ಫಾಕ್ಸ್‌ಕಾನ್ ಸಂಸ್ಥೆ ಅಧ್ಯಕ್ಷರೊಂದಿಗೆ ಸಿದ್ದರಾಮಯ್ಯ ಚರ್ಚೆ

Shivamogga News
ಕರ್ನಾಟಕ5 mins ago

Shivamogga News: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಾಲಯದಲ್ಲಿ ವಿಶೇಷ ಪೂಜೆ

Viral News
ಕ್ರೀಡೆ24 mins ago

Viral News: ಮಾವ ಎಮ್ಮೆ ಬದಲು ಆ ಗಿಫ್ಟ್​ ಕೊಡುತ್ತಿದ್ದರೆ ಸಂತಸವಾಗುತ್ತಿತ್ತು ಎಂದ ಒಲಿಂಪಿಕ್ಸ್ ಚಿನ್ನ​ ವಿಜೇತ ಅರ್ಷದ್​ ನದೀಮ್

Kolkata Doctor Murder Case
ದೇಶ38 mins ago

Kolkata Doctor murder case: ವೈದ್ಯೆ ಕೊಲೆ ಕೇಸ್‌; ಪ್ರತಿಭಟನಾಕಾರರ ಮೇಲೆ ವಾಹನ ಹರಿಸಲು ಪೊಲೀಸ್‌ ಯತ್ನ?

Bangalore Rain
ಮಳೆ53 mins ago

Bangalore Rain: ರಾಜಧಾನಿಯ ಹಲವೆಡೆ ಅಬ್ಬರಿಸಿದ ವರುಣ; ಆಟೋ ಮೇಲೆ ಮರ ಬಿದ್ದು ಚಾಲಕ ಸೇರಿ ಮೂವರಿಗೆ ಗಾಯ

MS Dhoni Fans
ಕ್ರಿಕೆಟ್2 hours ago

MS Dhoni Fans: ಧೋನಿ ಅಭಿಮಾನಿಗಳಿಗೆ ಗುಡ್ ನ್ಯೂಸ್; ಹಳೆಯ ಐಪಿಎಲ್​ ನಿಯಮ ಜಾರಿಗೆ ಮುಂದಾದ ಬಿಸಿಸಿಐ

Government Employees Sports
ಬೆಂಗಳೂರು2 hours ago

Government Employees Sports: ಆ.17ರಂದು ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

Government Employees
ಕರ್ನಾಟಕ2 hours ago

Government Employees: 7ನೇ ವೇತನ ಆಯೋಗ; ಸರ್ಕಾರಿ ನೌಕರರ ಸಂಘದಿಂದ ಆ.17ರಂದು ಸಿಎಂ, ಡಿಸಿಎಂಗೆ ಸನ್ಮಾನ

Saarthi AI
ವಿದೇಶ2 hours ago

Saarthi AI: ಕೆಲ್ಸ ಕಳ್ಕೊಂಡ ಕೋಪಕ್ಕೆ ಬಾಸ್‌ನ ಪಾಸ್‌ಪೋರ್ಟ್‌, ವೀಸಾಕ್ಕೆ ಕನ್ನ- ಉದ್ಯೋಗಿಯ ಕಿತಾಪತಿಗೆ ಬೆಂಗಳೂರು ಸಿಇಒ ಹೈರಾಣ

Paralympics 2024
ಕ್ರೀಡೆ3 hours ago

Paralympics 2024: ಪ್ಯಾರಾಲಿಂಪಿಕ್ಸ್​ನಲ್ಲಿ ಭಾಗ್ಯಶ್ರೀ, ಸುಮಿತ್ ತ್ರಿವರ್ಣ ಧ್ವಜಧಾರಿಗಳು

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌