Assembly Election Date: ಹರಿಯಾಣ ವಿಧಾನಸಭೆ ಚುನಾವಣೆಗೂ ದಿನಾಂಕ ಘೋಷಣೆ; ಇಲ್ಲಿದೆ ಡಿಟೇಲ್ಸ್‌ - Vistara News

ದೇಶ

Assembly Election Date: ಹರಿಯಾಣ ವಿಧಾನಸಭೆ ಚುನಾವಣೆಗೂ ದಿನಾಂಕ ಘೋಷಣೆ; ಇಲ್ಲಿದೆ ಡಿಟೇಲ್ಸ್‌

Assembly Election Date:ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾತನಾಡಿ, ಹರಿಯಾಣದಲ್ಲಿ ಒಟ್ಟು 90 ವಿಧಾನಸಭಾ ಕ್ಷೇತ್ರಗಳಿವೆ, ಅದರಲ್ಲಿ 73 ಸಾಮಾನ್ಯ, ಎಸ್ಸಿ -17 ಮತ್ತು ಎಸ್ಟಿ -0 ಆಗಿದೆ. ಹರಿಯಾಣದಲ್ಲಿ ಒಟ್ಟು 2.01 ಕೋಟಿ ಮತದಾರರಿದ್ದು, ಅವರಲ್ಲಿ 1.06 ಕೋಟಿ ಪುರುಷರು, 0.95 ಕೋಟಿ ಮಹಿಳೆಯರು, 4.52 ಲಕ್ಷ ಮೊದಲ ಬಾರಿಗೆ ಮತದಾರರು ಮತ್ತು 40.95 ಲಕ್ಷ ಯುವ ಮತದಾರರು ಇದ್ದಾರೆ.

VISTARANEWS.COM


on

Assembly election date
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌(Rajiv Kumar) ಇಂದು ಪತ್ರಿಕಾಗೋಷ್ಠಿ ನಡೆಸಿ, ಜಮ್ಮು-ಕಾಶ್ಮೀರ ಮತ್ತು ಹರಿಯಾಣ(Haryana) ರಾಜ್ಯಗಳ ವಿಧಾನಸಭೆ ಚುನಾವಣಾ ದಿನಾಂಕ(Assembly Election Date) ಘೋಷಿಸಿದ್ದಾರೆ. ಹರಿಯಾಣದಲ್ಲಿ ಅ.1ರಿಂದ ಚುನಾವಣೆ ನಡೆಯಲಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಅ.4ರಂದೇ ಫಲಿತಾಂಶ ಪ್ರಕಟವಾಗಲಿದೆ. ಹರಿಯಾಣದಲ್ಲಿ 2 ಕೋಟಿ ಮತದಾರರು ಇದ್ದಾರೆ ಎಂದು ಅವರು ರಾಜೀವ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾತನಾಡಿ, ಹರಿಯಾಣದಲ್ಲಿ ಒಟ್ಟು 90 ವಿಧಾನಸಭಾ ಕ್ಷೇತ್ರಗಳಿವೆ, ಅದರಲ್ಲಿ 73 ಸಾಮಾನ್ಯ, ಎಸ್ಸಿ -17 ಮತ್ತು ಎಸ್ಟಿ -0 ಆಗಿದೆ. ಹರಿಯಾಣದಲ್ಲಿ ಒಟ್ಟು 2.01 ಕೋಟಿ ಮತದಾರರಿದ್ದು, ಅವರಲ್ಲಿ 1.06 ಕೋಟಿ ಪುರುಷರು, 0.95 ಕೋಟಿ ಮಹಿಳೆಯರು, 4.52 ಲಕ್ಷ ಮೊದಲ ಬಾರಿಗೆ ಮತದಾರರು ಮತ್ತು 40.95 ಲಕ್ಷ ಯುವ ಮತದಾರರು ಇದ್ದಾರೆ. ಹರಿಯಾಣದ ಮತದಾರರ ಪಟ್ಟಿಯನ್ನು 2024 ರ ಆಗಸ್ಟ್ 27 ರಂದು ಪ್ರಕಟಿಸಲಾಗುವುದು ಎಂದರು.

ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣೆ ದಿನಾಂಕ ಘೋಷಣೆ ಆಗಿಲ್ಲ

ಸಿಇಸಿ ರಾಜೀವ್ ಕುಮಾರ್ ಮಾತನಾಡಿ, ಕಳೆದ ಬಾರಿ ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆ ಒಟ್ಟಿಗೆ ನಡೆದಿತ್ತು. ಆ ಸಮಯದಲ್ಲಿ, ಜಮ್ಮು ಮತ್ತು ಕಾಶ್ಮೀರ ಅಂಶವಾಗಿರಲಿಲ್ಲ. ಅಲ್ಲದೇ ಭದ್ರತಾ ಪಡೆಗಳ ಅಗತ್ಯವನ್ನು ಅವಲಂಬಿಸಿ, ನಾವು 2 ಚುನಾವಣೆಗಳನ್ನು ಒಟ್ಟಿಗೆ ನಡೆಸಲು ನಿರ್ಧರಿಸಿದ್ದೇವೆ. ಇನ್ನೊಂದು ಅಂಶವೆಂದರೆ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗಿದೆ ಮತ್ತು ಹಲವಾರು ಹಬ್ಬಗಳು ಕೂಡ ಸಾಲು ಸಾಲು ಇರುವುದರಿಂದ ಈ ಚುನಾವಣೆಗಳ ಜತೆ ಮಹಾರಾಷ್ಟ್ರ ಚುನಾವಣೆ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಸ್ಪಷ್ಟನೆ ನೀಡಿದರು. ಮತ್ತೊಂದೆಡೆ ಇದರ ಜೊತೆ ನಡೆಯಬೇಕಿದ್ದ ಜಾರ್ಖಂಡ್‌ ವಿಧಾನಸಭೆ ಚುನಾವಣಾ ದಿನಾಂಕವೂ ನಿಗದಿಯಾಗಿಲ್ಲ.

ಮಹಾರಾಷ್ಟ್ರದಲ್ಲಿ ಚುನಾವಣೆ ಘೋಷಣೆಯಾಗದಿರುವ ಬಗ್ಗೆ ಶಿವಸೇನೆ ಉದ್ಧವ್‌ ಠಾಕ್ರೆ ಬಣದ ನಾಯಕ ಆದಿತ್ಯಾ ಠಾಕ್ರೆ ಟ್ವೀಟ್‌ ಮಾಡಿ ಕಿಡಿಕಾರಿದ್ದಾರೆ. ಬಾಸ್‌ ಇನ್ನೂ ಅನುಮತಿ ಕೊಟ್ಟಿಲ್ಲವೇ ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: Assembly Election Date: ಆರ್ಟಿಕಲ್‌ 370 ರದ್ಧತಿ ಬಳಿಕ ಜಮ್ಮು-ಕಾಶ್ಮೀರದಲ್ಲಿ ಮೊದಲ ಚುನಾವಣೆಗೆ ಮುಹೂರ್ತ ಫಿಕ್ಸ್‌; ದಿನಾಂಕ ಘೋಷಿಸಿದ EC

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Kolkata Doctor murder case: ವೈದ್ಯೆ ಕೊಲೆ ಕೇಸ್‌; ಪ್ರತಿಭಟನಾಕಾರರ ಮೇಲೆ ವಾಹನ ಹರಿಸಲು ಪೊಲೀಸ್‌ ಯತ್ನ?

Kolkata Doctor murder case: ಕೇಂದ್ರ ಸಚಿವ, ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ಸುಖಾಂತ ಮಜುಮ್ದಾರ್‌, ಬಿಜೆಪಿ ನಾಯಕ ಅಗ್ನಿಮಿತ್ರ ಪೌಲ್‌ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ಉಂಟಾಗಿದೆ. ಕೊನೆಗೆ ಸುಖಾಂತ ಮಜುಮ್ದಾರ್‌ ಸೇರಿದಂತೆ ಅನೇಕ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಬಿಜೆಪಿ ಪ್ರತಿಭಟನಾಕಾರರ ಮೇಲೆ ಪೊಲೀಸರು ವಾಹನ ಹರಿಸಲು ಯತ್ನಿಸಿದ್ದಾರೆಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಅಲ್ಲದೇ ಅದಕ್ಕೆ ಸಂಬಂಧಿಸಿದ ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ.

VISTARANEWS.COM


on

Kolkata Doctor Murder Case
Koo

ಕೋಲ್ಕತ್ತಾ: ಕೋಲ್ಕತಾದಲ್ಲಿ ನಡೆದಿರುವ ವೈದ್ಯೆಯ ಬರ್ಬರ ಸಾಮೂಹಿಕ ಅತ್ಯಾಚಾರ ಹಾಗು ಕೊಲೆಯ (Kolkata Doctor murder case) ವಿರುದ್ಧ ಭುಗಿಲೆದ್ದಿರುವ ವೈದ್ಯರ ಸಮೂಹದ ಆಕ್ರೋಶ, ಇದೀಗ ರಾಜ್ಯ ಸರಕಾರದ ವಿರುದ್ಧ ತಿರುಗಿದೆ. ವೈದ್ಯರ ಪ್ರತಿಭಟನೆಗೆ ಇದೀಗ ಬಿಜೆಪಿ ಮುಖಂಡರು(BJP Leaders) ಮತ್ತು ಕಾರ್ಯಕರ್ತರು ಕೈ ಜೋಡಿಸಿದ್ದು, ಮಮತಾ ಬ್ಯಾನರ್ಜಿ(Mamata Banerjee) ಸರ್ಕಾರ ವಿರುದ್ಧ ಕಿಡಿ ಕಾರಿದ್ದಾರೆ.

ಕೇಂದ್ರ ಸಚಿವ, ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ಸುಖಾಂತ ಮಜುಮ್ದಾರ್‌, ಬಿಜೆಪಿ ನಾಯಕ ಅಗ್ನಿಮಿತ್ರ ಪೌಲ್‌ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ಉಂಟಾಗಿದೆ. ಕೊನೆಗೆ ಸುಖಾಂತ ಮಜುಮ್ದಾರ್‌ ಸೇರಿದಂತೆ ಅನೇಕ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಬಿಜೆಪಿ ಪ್ರತಿಭಟನಾಕಾರರ ಮೇಲೆ ಪೊಲೀಸರು ವಾಹನ ಹರಿಸಲು ಯತ್ನಿಸಿದ್ದಾರೆಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಅಲ್ಲದೇ ಅದಕ್ಕೆ ಸಂಬಂಧಿಸಿದ ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ.

ಕೇಂದ್ರ ಸಚಿವ ಮತ್ತು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಬಂಧನದ ಕುರಿತು ಬಿಜೆಪಿ ಮುಖಂಡ ಅಗ್ನಿಮಿತ್ರ ಪಾಲ್, “ಇದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ, ಇಂದು ಕೇಂದ್ರ ಸಚಿವರನ್ನು ಹತ್ಯೆ ಮಾಡಿದ ಸಹೋದರಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂಬ ಕಾರಣಕ್ಕಾಗಿ ಬಂಧಿಸಲಾಗಿದೆ. ಇಂದು ಮುಖ್ಯಮಂತ್ರಿ ನಾಟಕ ಮಾಡುತ್ತಿದ್ದಾರೆ. ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Kolkata Doctor Murder Case: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರಿಗೆ ಮರಣದಂಡನೆ ವಿಧಿಸುವಂತೆ ಬಾಲಿವುಡ್ ತಾರೆಯರ ಆಗ್ರಹ

Continue Reading

ವಿದೇಶ

Saarthi AI: ಕೆಲ್ಸ ಕಳ್ಕೊಂಡ ಕೋಪಕ್ಕೆ ಬಾಸ್‌ನ ಪಾಸ್‌ಪೋರ್ಟ್‌, ವೀಸಾಕ್ಕೆ ಕನ್ನ- ಉದ್ಯೋಗಿಯ ಕಿತಾಪತಿಗೆ ಬೆಂಗಳೂರು ಸಿಇಒ ಹೈರಾಣ

Saarthi AI: ಹೂಡಿಕೆದಾರರ ಒತ್ತಡದಿಂದಾಗಿ ಕಂಪನಿ ಕೆಲವು ಉದ್ಯೋಗಿಗಳನ್ನು ಲಾಭದ ದೃಷ್ಟಿಯಿಂದ ತೆಗೆದುಹಾಕಬೇಕಾದ ಪರಿಸ್ಥಿತಿ ಎದುರಾಗಿತ್ತು. ಇದೀಗ ಉದ್ಯೋಗಿಗಳು ತಮ್ಮ ಅಮೆರಿಕ ವೀಸಾ ಮತ್ತು ಪಾಸ್‌ಪೋರ್ಟನ್ನು ಕದ್ದಿದ್ದಾರೆ. ಹೀಗಾಗಿ ವಿದೇಶ ಪ್ರಯಾಣಕ್ಕೆ ಸಾಧ್ಯವಾಗುತ್ತಿಲ್ಲ. ಸಂಕಷ್ಟದಲ್ಲಿ ಸಿಲುಕಿರುವುದಾಗಿ ಕಂಪನಿ ಸಂಸ್ಥಾಪಕ ಮತ್ತು ಸಿಇಒ(CEO) ವಿಶ್ವನಾಥ್‌ ಝಾ ಎಂದು ಗಂಭೀರ ಆರೋಪ ಮಾಡಿದ್ದಾರೆ.

VISTARANEWS.COM


on

Saarthi AI
Koo

ನವದೆಹಲಿ: ಕಳೆದ ವರ್ಷ ಆರ್ಥಿಕ ಸಂಕಷ್ಟಕ್ಕೀಡಾಗಿ ಅನೇಕರನ್ನು ಉದ್ಯೋಗದಿಂದ ಏಕಾಏಕಿ ವಜಾಗೊಳಿಸಿ ಭಾರೀ ಸುದ್ದಿಯಾಗಿದ್ದ ಬೆಂಗಳೂರು ಮೂಲದ ಸ್ಟಾರ್ಟ್‌ಅಪ್‌ ಕಂಪನಿ ಸಾರಥಿ AI(Saarthi AI) ಇದೀಗ ಮತ್ತೆ ಸುದ್ದಿಯಲ್ಲಿದೆ. ತಮ್ಮ ಪಾಸ್‌ಪೋರ್ಟನ್ನು ಕಂಪನಿಯ ಹಿರಿಯ ಉದ್ಯೋಗಿಯೊಬ್ಬರು ಕದ್ದಿದ್ದಾರೆ ಎಂದು ಕಂಪನಿ ಸಂಸ್ಥಾಪಕ ಮತ್ತು ಸಿಇಒ(CEO) ವಿಶ್ವನಾಥ್‌ ಝಾ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಹೂಡಿಕೆದಾರರ ಒತ್ತಡದಿಂದಾಗಿ ಕಂಪನಿ ಕೆಲವು ಉದ್ಯೋಗಿಗಳನ್ನು ಲಾಭದ ದೃಷ್ಟಿಯಿಂದ ತೆಗೆದುಹಾಕಬೇಕಾದ ಪರಿಸ್ಥಿತಿ ಎದುರಾಗಿತ್ತು. ಇದೀಗ ಉದ್ಯೋಗಿಗಳು ತಮ್ಮ ಅಮೆರಿಕ ವೀಸಾ ಮತ್ತು ಪಾಸ್‌ಪೋರ್ಟನ್ನು ಕದ್ದಿದ್ದಾರೆ. ಹೀಗಾಗಿ ವಿದೇಶ ಪ್ರಯಾಣಕ್ಕೆ ಸಾಧ್ಯವಾಗುತ್ತಿಲ್ಲ. ಸಂಕಷ್ಟದಲ್ಲಿ ಸಿಲುಕಿರುವುದಾಗಿ ಹೇಳಿದ್ದಾರೆ. ಈ ಬಗ್ಗೆ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಕಳುವಾಗಿರುವ ಪಾಸ್‌ಪೋರ್ಟ್‌ ಬಹಳ ಕಷ್ಟಪಟ್ಟು ವಾಪಾಸ್‌ ಪಡೆದಿದ್ದೇನೆ. ಆದರೆ ಅಮೆರಿಕ ವೀಸಾ ವಾಪಸ್‌ ಸಿಗುವುದು ಬಹಳ ಕಷ್ಟ ಇದೆ. ಪಡೆಯಲು ಇನ್ನೂ ಸಾಧ್ಯವಾಗುತ್ತಿಲ್ಲ ಎಂದರು. ಇನ್ನು ನೌಕರರ ವೇತನ ತಡೆಹಿಡಿಯಲಾಗಿದೆ ಎಂಬ ಆರೋಪವನ್ನು ಅವರು ತಳ್ಳಿಹಾಕಿದರು. ಯಾವುದೇ ಸಂಬಳವನ್ನು ತಡೆಹಿಡಿಯಲಾಗಿಲ್ಲ ಮತ್ತು ಈ ಆರೋಪಗಳು AI ಸ್ಟಾರ್ಟ್‌ಅಪ್‌ಗೆ ಮಾನಹಾನಿ ಮಾಡುವ ತಂತ್ರವಾಗಿದೆ. ಹಲವಾರು ಬ್ಯಾಂಕ್‌ಗಳು ಮತ್ತು ಎನ್‌ಬಿಎಫ್‌ಸಿಗಳೊಂದಿಗೆ ವ್ಯವಹಾರ ಮಾತುಕತೆ ನಡೆಸುತ್ತಿರುವುದರಿಂದ ನಾವು ಪ್ರಮುಖ ಸ್ಥಾನಗಳನ್ನು ತುಂಬುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಝಾ ಹೇಳಿದರು.

ಕಂಪನಿಯ ಪ್ರಸ್ತುತ ಮತ್ತು ಮಾಜಿ ಉದ್ಯೋಗಿಗಳು ಹೇಳಲು ವಿಭಿನ್ನ ಕಥೆಯನ್ನು ಹೊಂದಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಡೆಸಲಾದ ಸಾಮೂಹಿಕ ವಜಾಗೊಳಿಸುವಿಕೆಯು ಸಾರಥಿ AI ನ ಉದ್ಯೋಗಿಗಳನ್ನು 40 ಉದ್ಯೋಗಿಗಳಿಗೆ ಇಳಿಸಿತು. ಅನೇಕ ಉದ್ಯೋಗಿಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಆದರೆ ಅವರು ತಮ್ಮ ಬಾಕಿ ಇರುವ ಸಂಬಳವನ್ನು ಇನ್ನೂ ಸ್ವೀಕರಿಸಿಲ್ಲ ಎಂದು ಹೇಳಿದರು.

ಆದರೆ ಈ ಬಗ್ಗೆ ಮಾಜಿ ಉದ್ಯೋಗಿಯೊಬ್ಬರು ಪ್ರತಿಕ್ರಿಯಿಸಿದ್ದು, “ಸಂಸ್ಥೆಯು ಈಗ ಒಂದು ವರ್ಷದಿಂದ 50ಕ್ಕೂ ಹೆಚ್ಚು ಉದ್ಯೋಗಿಗಳ ಸಂಬಳವನ್ನು ಹೊಂದಿದೆ ಮತ್ತು ಯಾವುದೇ ಕಾನೂನು ನೋಟಿಸ್‌ಗಳಿಗೆ ಸಹ ಉತ್ತರಿಸಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Google lay off : ಗೂಗಲ್‌ ಮಾತೃಸಂಸ್ಥೆ ಆಲ್ಫಬೆಟ್‌ನಲ್ಲಿ 12,000 ಉದ್ಯೋಗಿಗಳ ವಜಾ

ಆರ್ಥಿಕ ಹಿಂಜರಿತದ ಭೀತಿಯ ಹಿನ್ನೆಲೆಯಲ್ಲಿ ದೈತ್ಯ ಟೆಕ್ ಕಂಪನಿಗಳು ತಮ್ಮ ವೆಚ್ಚವನ್ನು ಕಡಿಮೆ ಮಾಡುವುದಕ್ಕಾಗಿ ಉದ್ಯೋಗಗಳನ್ನು ಕಡಿತ(Intel Layoffs) ಮಾಡುತ್ತಿವೆ. ಎರಡು ವಾರಗಳ ಹಿಂದೆ ಅಮೆರಿಕದ ಚಿಪ್ ತಯಾರಕ ಇಂಟೆಲ್(Intel) ಶೇ.15ಕ್ಕಿಂತಲೂ ಹೆಚ್ಚಿನ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಲು ನಿರ್ಧರಿಸಿದ್ದು, ಇದರಿಂದ 20 ಶತಕೋಟಿ ಡಾಲರ್‌ ವೆಚ್ಚ ಕಡಿಮೆಯಾಗಲಿದೆ.

ಇಂಟೆಲ್ ಇತ್ತೀಚೆಗೆ ಕೊನೆಗೊಂಡ ತ್ರೈಮಾಸಿಕದಲ್ಲಿ $1.6 ಶತಕೋಟಿ ನಷ್ಟವನ್ನು ವರದಿ ಮಾಡಿದ್ದರಿಂದ ಈ ವರ್ಷ ಅಂದಾಜು $20 ಶತಕೋಟಿ ವೆಚ್ಚವನ್ನು ಕಡಿತಗೊಳಿಸುವ ಯೋಜನೆ ರೂಪಿಸಿದೆ. ಈ ಬಗ್ಗೆ ಇಂಟೆಲ್ ಮುಖ್ಯ ಕಾರ್ಯನಿರ್ವಾಹಕ ಪ್ಯಾಟ್ ಗೆಲ್ಸಿಂಗರ್ ಪ್ರತಿಕ್ರಿಯಿಸಿದ್ದು, ನಾವು ಪ್ರಮುಖ ಉತ್ಪನ್ನ ಮತ್ತು ಪ್ರಕ್ರಿಯೆ ತಂತ್ರಜ್ಞಾನದ ಮೈಲಿಗಲ್ಲುಗಳನ್ನು ಮುಟ್ಟಿದರೂ ಸಹ ನಮ್ಮ Q2 ಆರ್ಥಿಕ ಕಾರ್ಯಕ್ಷಮತೆ ನಿರಾಶಾದಾಯಕವಾಗಿತ್ತು. ಮುಂದಿನ ಅರ್ಧವಾರ್ಷಿಕ ನಾವು ಹಿಂದೆ ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಸವಾಲಿನವುಗಳಾಗಿವೆ ಎಂದು ಹೇಳಿದ್ದಾರೆ.

Continue Reading

ದೇಶ

Yogi Adityanath: ಹೊಸ ಮೈಲಿಗಲ್ಲು ಸಾಧಿಸಿದ ಯೋಗಿ- ಉತ್ತರ ಪ್ರದೇಶದ ಸುದೀರ್ಘ ಅವಧಿಯ ಸಿಎಂ ಎಂಬ ಖ್ಯಾತಿ

Yogi Adityanath: ಬರೋಬ್ಬರಿ ಏಳು ವರ್ಷ 148 ದಿನಗಳ ಕಾಲ ಸುದೀರ್ಘ ಸೇವೆ ಸಲ್ಲಿಸುವ ಮೂಲಕ ಯೋಗಿ, ಮುಲಾಯಂ ಸಿಂಗ್‌ ಯಾದವ್‌, ಅಖಿಲೇಶ್‌ ಯಾದವ್‌ ಮತ್ತು ಮಾಯವತಿಯವರನ್ನು ಸರಿಗಟ್ಟಿದ್ದಾರೆ.

VISTARANEWS.COM


on

Yogi Adityanath
Koo

ಲಖನೌ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ರಾಜ್ಯ ಅತಿ ಹೆಚ್ಚು ವರ್ಷ ಸಿಎಂ ಆಗಿ ಸೇವೆ ಸಲ್ಲಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಬರೋಬ್ಬರಿ ಏಳು ವರ್ಷ 148 ದಿನಗಳ ಕಾಲ ಸುದೀರ್ಘ ಸೇವೆ ಸಲ್ಲಿಸುವ ಮೂಲಕ ಯೋಗಿ, ಮುಲಾಯಂ ಸಿಂಗ್‌ ಯಾದವ್‌(Mulayam Singh Yadav), ಅಖಿಲೇಶ್‌ ಯಾದವ್‌(Akhilesh Yadav) ಮತ್ತು ಮಾಯವತಿ(Mayawati)ಯವರನ್ನು ಸರಿಗಟ್ಟಿದ್ದಾರೆ.

ಈ ಹಿಂದೆ, ಕಾಂಗ್ರೆಸ್ ನಾಯಕ ಸಂಪೂರ್ಣಾನಂದ ಅವರು ಒಟ್ಟು ಐದು ವರ್ಷ ಮತ್ತು 344 ದಿನಗಳೊಂದಿಗೆ ಯುಪಿ ಸಿಎಂ ಆಗಿ ಸುದೀರ್ಘ ಅಧಿಕಾರಾವಧಿಯನ್ನು ಹೊಂದಿದ್ದರು. ಆದಿತ್ಯನಾಥ್ ಅವರು 2023ರಲ್ಲಿ ದಾಖಲೆಯನ್ನು ಸರಿಗಟ್ಟಿದ್ದರು. ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಮಾಯಾವತಿ ನಾಲ್ಕು ಬಾರಿ ಸಿಎಂ ಸ್ಥಾನಕ್ಕೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಮತ್ತು ಮುಲಾಯಂ ಸಿಂಗ್ ಯಾದವ್ ಮೂರು ಬಾರಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ, ಆದರೂ ಅವರಿಗೆ ಸಂಪೂರ್ಣವಾಗಿ ಅಧಿಕಾರಾವಧಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ.

ಅವಿಭಜಿತ ಉತ್ತರ ಪ್ರದೇಶದಲ್ಲಿ ಎರಡನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಕಾಂಗ್ರೆಸ್ ನಾಯಕ ನಾರಾಯಣ್ ದತ್ ತಿವಾರಿ ಅವರ 37 ವರ್ಷಗಳ ಹಳೆಯ ದಾಖಲೆಯನ್ನು ಮುರಿದು ರಾಜ್ಯದಲ್ಲಿ ಸತತ ಎರಡನೇ ಅವಧಿಗೆ ತಮ್ಮ ಪಕ್ಷವನ್ನು ಮುನ್ನಡೆಸಿದ ನಾಯಕರಲ್ಲಿ ಆದಿತ್ಯನಾಥ್ ಕೂಡ ಸೇರಿದ್ದಾರೆ. 1985ರಲ್ಲಿ ಉತ್ತರಾಖಂಡ್ ರಚನೆಯಾದಾಗಿನಿಂದ, ಆದಿತ್ಯನಾಥ್ ಅವರು ಸತತ ಎರಡನೇ ಅವಧಿಗೆ ಅಧಿಕಾರವನ್ನು ಪಡೆದುಕೊಂಡ ರಾಜ್ಯದ ಮೊದಲ ಮುಖ್ಯಮಂತ್ರಿಯಾಗಿದ್ದಾರೆ.

ರಾಜಕೀಯ ಮುಖಂಡರು ನೋಯ್ಡಾಗೆ ತೆರಳಿದರೆ ಅವರು ನಿರೀಕ್ಷಿತ ಸ್ಥಾನವನ್ನು ಕಳೆದುಕೊಳ್ಳುತ್ತಾರೆಂಬ ಮಾತಿದೆ. ಆದರೆ ಯೋಗಿ ಆದಿತ್ಯಾನಾಥ್‌ ಅವರು ಅಲ್ಲಿಗೆ ತೆರಳುವ ಮೂಲಕ ಆದಿತ್ಯನಾಥ್ ಆ ವಾಡಿಕೆಯನ್ನು ತೊಡೆದು ಹಾಕಿದ್ದರು. ಅವರ ರಾಜಕೀಯ ಜೀವನವು 1998ರಲ್ಲಿ ಅವರು ಮೊದಲ ಬಾರಿಗೆ 12ನೇ ಲೋಕಸಭೆಗೆ ಆಯ್ಕೆಯಾದಾಗ ಪ್ರಾರಂಭವಾಯಿತು. 2017 ರಲ್ಲಿ 403 ಸದಸ್ಯ ಬಲದ ಅಸೆಂಬ್ಲಿಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) 325 ಸ್ಥಾನಗಳಲ್ಲಿ ಬಹುಮತ ಗಳಿಸಿದಾಗ ಅವರು ಮೊದಲ ಬಾರಿಗೆ ಯುಪಿ ಮುಖ್ಯಮಂತ್ರಿಯಾದರು.

1972 ರಲ್ಲಿ ಜನಿಸಿದ ಅಜಯ್ ಸಿಂಗ್ ಬಿಶ್ತ್ , ಮಹಂತ್ ಅವೈದ್ಯನಾಥ್ ಅವರ ಮಾರ್ಗದರ್ಶನದಲ್ಲಿ, ಅವರು ‘ಯೋಗಿ ಆದಿತ್ಯನಾಥ್’ ಎಂಬ ಹೆಸರಿನೊಂದಿಗೆ ಸನ್ಯಾಸಿ ಜೀವನವನ್ನು ಸ್ವೀಕರಿಸಿದರು. 22 ನೇ ವಯಸ್ಸಿನಲ್ಲಿ ಗೋರಖನಾಥ ಮಠದ ಪ್ರಧಾನ ಅರ್ಚಕರಾಗಿ ನೇಮಕಗೊಂಡರು. ಅವರು 26 ನೇ ವಯಸ್ಸಿನಲ್ಲಿ ಲೋಕಸಭೆಯ ಕಿರಿಯ ಸದಸ್ಯರಲ್ಲಿ ಒಬ್ಬರಾಗಿದ್ದರು ಮತ್ತು ಐದು ಬಾರಿ ಗೋರಖ್‌ಪುರದ ಸಂಸದರಾಗಿ ಮರು ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: UP CM v/s DCM: ಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ; ಯೋಗಿ ತಲೆದಂಡ ಪಕ್ಕಾನಾ?

Continue Reading

ದೇಶ

Bangladesh Unrest: ಪ್ರಧಾನಿ ಮೋದಿಗೆ ಬಾಂಗ್ಲಾದೇಶದ ಮೊಹಮ್ಮದ್‌ ಯೂನಸ್‌ ಕರೆ; ಹಿಂದೂಗಳ ರಕ್ಷಣೆ ಬಗ್ಗೆ ಭರವಸೆ

Bangladesh Unrest: ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದು, ಪ್ರೊಫೆಸರ್ ಮುಹಮ್ಮದ್ ಯೂನಸ್ ಅವರಿಂದ ದೂರವಾಣಿ ಕರೆ ಸ್ವೀಕರಿಸಲಾಗಿದೆ, ಅವರು ಪ್ರಸ್ತುತ ತಲೆದೋರಿರುವ ಪರಿಸ್ಥಿತಿಯ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಪ್ರಜಾಸತ್ತಾತ್ಮಕ, ಸ್ಥಿರ, ಶಾಂತಿಯುತ ಮತ್ತು ಪ್ರಗತಿಪರ ಬಾಂಗ್ಲಾದೇಶಕ್ಕೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದರು. ಬಾಂಗ್ಲಾದೇಶದಲ್ಲಿರುವ ಹಿಂದೂಗಳು ಮತ್ತು ಎಲ್ಲಾ ಅಲ್ಪಸಂಖ್ಯಾತರ ರಕ್ಷಣೆ, ಸುರಕ್ಷತೆ ಮತ್ತು ಭದ್ರತೆಯನ್ನು ಅವರು ಭರವಸೆ ನೀಡಿದರು ಎಂದು ಹೇಳಿದ್ದಾರೆ.

VISTARANEWS.COM


on

bangladesh unrest
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(Prime Minister Narendra Modi)ಗೆ ಬಾಂಗ್ಲಾದೇಶ ಸರ್ಕಾರದ ಹಂಗಾಮಿ ಮುಖ್ಯ ಸಲಹೆಗಾರ ಮೊಹಮ್ಮದ್‌ ಯೂನಸ್‌(Muhammad Yunus) ಕರೆ ಮಾಡಿ ಬಾಂಗ್ಲಾದೇಶ(Bangladesh Unrest)ದ ಪ್ರಸ್ತುತ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಸಿದ್ದಾರೆ.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದು, ಪ್ರೊಫೆಸರ್ ಮುಹಮ್ಮದ್ ಯೂನಸ್ ಅವರಿಂದ ದೂರವಾಣಿ ಕರೆ ಸ್ವೀಕರಿಸಲಾಗಿದೆ, ಅವರು ಪ್ರಸ್ತುತ ತಲೆದೋರಿರುವ ಪರಿಸ್ಥಿತಿಯ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಪ್ರಜಾಸತ್ತಾತ್ಮಕ, ಸ್ಥಿರ, ಶಾಂತಿಯುತ ಮತ್ತು ಪ್ರಗತಿಪರ ಬಾಂಗ್ಲಾದೇಶಕ್ಕೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದರು. ಬಾಂಗ್ಲಾದೇಶದಲ್ಲಿರುವ ಹಿಂದೂಗಳು ಮತ್ತು ಎಲ್ಲಾ ಅಲ್ಪಸಂಖ್ಯಾತರ ರಕ್ಷಣೆ, ಸುರಕ್ಷತೆ ಮತ್ತು ಭದ್ರತೆಯನ್ನು ಅವರು ಭರವಸೆ ನೀಡಿದರು ಎಂದು ಹೇಳಿದ್ದಾರೆ.

ಉದ್ಯೋಗ ಕೋಟಾಗಳ ವಿರುದ್ಧ ವಿದ್ಯಾರ್ಥಿ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ ನಂತರ ಢಾಕಾದಿಂದ ದೆಹಲಿಗೆ ಪಲಾಯನ ಮಾಡಿದ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಲಾಗಿತ್ತು. ಇದಾದ ನಂತರ ಬಾಂಗ್ಲಾದೇಶದ ಹಿಂದೂ ಸಮುದಾಯದವರ ಮೇಲೆ ದಾಳಿಗಳು ನಡೆಯುತ್ತಲೇ ಇದೆ.

ಬಾಂಗ್ಲಾದೇಶ (Bangladesh Unrest)ದಲ್ಲಿ ತಲೆದೋರಿರುವ ಅರಾಜಕತೆ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಜೀವಕ್ಕೆ ಅಪಾಯವನ್ನು ತಂದೊಡ್ಡಿದೆ. ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, ಮತ್ತೊಂದು ಹಿಂದೂ ದೇವಾಲಯ ಮತ್ತು ಮನೆಗೆ ಬೆಂಕಿ ಹಚ್ಚಲಾಗಿದೆ. ಮಂಗಳವಾರ (ಆಗಸ್ಟ್‌ 13) ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಕುರಿಗ್ರಾಮ್ ಜಿಲ್ಲೆಯ ಮುಕುಲ್ ಚಂದ್ರರಾಯ್ ಎಂಬವರ ಮನೆ ಮತ್ತು ದೇವಾಲಯದ ಮೇಲೆ ದಾಳಿ ನಡೆದಿದೆ. ರಾಯ್‌ ಅವರ ಮನೆ ಮತ್ತು ದೇವಸ್ಥಾನ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಎಂದು ಮೂಲಗಳು ತಿಳಿಸಿವೆ.

ದುಷ್ಕರ್ಮಿಗಳು ಬೆಂಕಿ ಹಚ್ಚಿದ ತಕ್ಷಣ ಸ್ಥಳೀಯರು ಧಾವಿಸಿ ಬಂದು ನಂದಿಸಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಅಷ್ಟೊತ್ತಿಗಾಗಲೇ ಎಲ್ಲವೂ ಹೊತ್ತಿ ಉರಿದಿತ್ತು. ಮನೆಯಲ್ಲಿದ್ದ ಎಲ್ಲವೂ ನಾಶವಾಗಿದೆ ಎಂದು ನೆರೆಹೊರೆಯವರು ತಿಳಿಸಿದ್ದಾರೆ. ಮುಕುಲ್ ಚಂದ್ರರಾಯ್ ಅವರು ಕುರಿಗ್ರಾಮ್ ಜಿಲ್ಲೆಯ ರಾಜರ್ಹತ್ ಉಪಜಿಲಾದ ಚಕೀರ್ ಪೋಷಾ ಯೂನಿಯನ್ ಅಡಿಯಲ್ಲಿ ಪಟೋವರಿ ಪ್ಯಾರಾ ಗ್ರಾಮದಲ್ಲಿ ವಾಸವಾಗಿದ್ದಾರೆ. ಅವರ ಪತ್ನಿ ಮತ್ತು ಮಗ ತಮ್ಮ ಸುಟ್ಟ ಮನೆ ಮತ್ತು ದೇವಾಲಯದ ಮುಂದೆ ಅಳುತ್ತಿರುವುದು ಕಂಡು ಬಂದಿದೆ.

ಇದನ್ನೂ ಓದಿ:Bangladesh Unrest: ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂದೂಗಳ ಮೇಲಿನ ದೌರ್ಜನ್ಯ; ಮತ್ತೊಂದು ದೇಗುಲ, ಮನೆಗೆ ಬೆಂಕಿ

Continue Reading
Advertisement
Money Guide
ಮನಿ-ಗೈಡ್51 seconds ago

Money Guide: ಎಸ್‌ಐಪಿ-ಪಿಪಿಎಫ್; ಹಣ ಹೂಡಿಕೆಗೆ ಯಾವುದು ಬೆಸ್ಟ್?

CM Siddaramaiah
ಬೆಂಗಳೂರು6 mins ago

CM Siddaramaiah: ಆಪಲ್‌ ಫೋನ್‌ ಬಿಡಿಭಾಗ ತಯಾರಕ ಫಾಕ್ಸ್‌ಕಾನ್ ಸಂಸ್ಥೆ ಅಧ್ಯಕ್ಷರೊಂದಿಗೆ ಸಿದ್ದರಾಮಯ್ಯ ಚರ್ಚೆ

Shivamogga News
ಕರ್ನಾಟಕ8 mins ago

Shivamogga News: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಾಲಯದಲ್ಲಿ ವಿಶೇಷ ಪೂಜೆ

Viral News
ಕ್ರೀಡೆ27 mins ago

Viral News: ಮಾವ ಎಮ್ಮೆ ಬದಲು ಆ ಗಿಫ್ಟ್​ ಕೊಡುತ್ತಿದ್ದರೆ ಸಂತಸವಾಗುತ್ತಿತ್ತು ಎಂದ ಒಲಿಂಪಿಕ್ಸ್ ಚಿನ್ನ​ ವಿಜೇತ ಅರ್ಷದ್​ ನದೀಮ್

Kolkata Doctor Murder Case
ದೇಶ41 mins ago

Kolkata Doctor murder case: ವೈದ್ಯೆ ಕೊಲೆ ಕೇಸ್‌; ಪ್ರತಿಭಟನಾಕಾರರ ಮೇಲೆ ವಾಹನ ಹರಿಸಲು ಪೊಲೀಸ್‌ ಯತ್ನ?

Bangalore Rain
ಮಳೆ56 mins ago

Bangalore Rain: ರಾಜಧಾನಿಯ ಹಲವೆಡೆ ಅಬ್ಬರಿಸಿದ ವರುಣ; ಆಟೋ ಮೇಲೆ ಮರ ಬಿದ್ದು ಚಾಲಕ ಸೇರಿ ಮೂವರಿಗೆ ಗಾಯ

MS Dhoni Fans
ಕ್ರಿಕೆಟ್2 hours ago

MS Dhoni Fans: ಧೋನಿ ಅಭಿಮಾನಿಗಳಿಗೆ ಗುಡ್ ನ್ಯೂಸ್; ಹಳೆಯ ಐಪಿಎಲ್​ ನಿಯಮ ಜಾರಿಗೆ ಮುಂದಾದ ಬಿಸಿಸಿಐ

Government Employees Sports
ಬೆಂಗಳೂರು2 hours ago

Government Employees Sports: ಆ.17ರಂದು ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

Government Employees
ಕರ್ನಾಟಕ2 hours ago

Government Employees: 7ನೇ ವೇತನ ಆಯೋಗ; ಸರ್ಕಾರಿ ನೌಕರರ ಸಂಘದಿಂದ ಆ.17ರಂದು ಸಿಎಂ, ಡಿಸಿಎಂಗೆ ಸನ್ಮಾನ

Saarthi AI
ವಿದೇಶ2 hours ago

Saarthi AI: ಕೆಲ್ಸ ಕಳ್ಕೊಂಡ ಕೋಪಕ್ಕೆ ಬಾಸ್‌ನ ಪಾಸ್‌ಪೋರ್ಟ್‌, ವೀಸಾಕ್ಕೆ ಕನ್ನ- ಉದ್ಯೋಗಿಯ ಕಿತಾಪತಿಗೆ ಬೆಂಗಳೂರು ಸಿಇಒ ಹೈರಾಣ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌