WFI Chief Sanjay Singh: ಪ್ರತಿಭಟನೆಯಿಂದಲೇ ಕುಸ್ತಿಯಲ್ಲಿ ಹೆಚ್ಚಿನ ಪದಕ ಗೆಲ್ಲಲು ಸಾಧ್ಯವಾಗಲಿಲ್ಲ; ಸಂಜಯ್​ ಸಿಂಗ್​ ಆರೋಪ - Vistara News

ಕ್ರೀಡೆ

WFI Chief Sanjay Singh: ಪ್ರತಿಭಟನೆಯಿಂದಲೇ ಕುಸ್ತಿಯಲ್ಲಿ ಹೆಚ್ಚಿನ ಪದಕ ಗೆಲ್ಲಲು ಸಾಧ್ಯವಾಗಲಿಲ್ಲ; ಸಂಜಯ್​ ಸಿಂಗ್​ ಆರೋಪ

WFI Chief Sanjay Singh: ಕಳೆದ ವರ್ಷ ದೆಹಲಿಯಲ್ಲಿ ಕುಸ್ತಿಪಟುಗಳು ನಡೆಸಿದ ಪ್ರತಿಭಟನೆಯೇ ಈ ಬಾರಿಯ ಒಲಿಂಪಿಕ್ಸ್​ ಕುಸ್ತಿಯಲ್ಲಿ ಭಾರತ ಹೆಚ್ಚಿನ ಪದಕ ಗೆಲ್ಲಲು ಸಾಧ್ಯವಾಗಲಿಲ್ಲ ಎಂದು ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಸಂಜಯ್​ ಸಿಂಗ್ ದೂರಿದ್ದಾರೆ.

VISTARANEWS.COM


on

WFI chief Sanjay Singh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಟೋಕಿಯೋದಲ್ಲಿ ನಡೆದಿದ್ದ ಕಳೆದ ಒಲಿಂಪಿಕ್ಸ್​ನಲ್ಲಿ ಭಾರತ 7 ಪದಕ ಜಯಿಸಿತ್ತು. ಹೀಗಾಗಿ ಈ ಬಾರಿಯ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(paris olympics) ಹಲವು ಪದಕ ನಿರೀಕ್ಷೆ ಮಾಡಲಾಗಿತ್ತು. ಆದರೆ, ಭಾರತಕ್ಕೆ ಗೆಲ್ಲಲು ಸಾಧ್ಯವಾದದ್ದು ಕೇವಲ 6 ಪದಕ ಮಾತ್ರ. ಕುಸ್ತಿ ವಿಭಾಗದಲ್ಲಿ ಅಮನ್ ಸೆಹ್ರಾವತ್ ಮಾತ್ರ ಪದಕ ಗೆಲ್ಲುವಲ್ಲಿ ಯಶಸ್ವಿಯಾದರು. ವಿನೇಶ್ ಫೋಗಟ್ 100 ಗ್ರಾಂ ಅಧಿಕ ತೂಕದ ಕಾರಣದಿಂದ ಫೈನಲ್​ನಿಂದ ಅನರ್ಹಗೊಂಡ ಕಾರಣ ಐತಿಹಾಸಿಕ ಪದಕವೊಂದು ಕೈ ಜಾರಿತ್ತು. ಇದೀಗ ಕುಸ್ತಿ ತಂಡದ ಪ್ರದರ್ಶನದ ಕುರಿತು ಫೆಡರೇಷನ್​ ಅಧ್ಯಕ್ಷ ಸಂಜಯ್​ ಸಿಂಗ್(WFI Chief Sanjay Singh)​ ಗಂಭೀರ ಆರೋಪ ಮಾಡಿದ್ದಾರೆ. ಕಳೆದ ವರ್ಷ ದೆಹಲಿಯಲ್ಲಿ ಕುಸ್ತಿಪಟುಗಳು ನಡೆಸಿದ ಪ್ರತಿಭಟನೆಯೇ ಭಾರತ ಕುಸ್ತಿಯಲ್ಲಿ ಹೆಚ್ಚಿನ ಪದಕ ಗೆಲ್ಲಲು ಸಾಧ್ಯವಾಗಲಿಲ್ಲ ಎಂದು ದೂರಿದ್ದಾರೆ.

ಖಾಸಗಿ ಸುದ್ದಿ ಮಾಧ್ಯಮಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಸಂಜಯ್​ ಸಿಂಗ್​, ಭಾರತ ಕುಸ್ತಿ ಒಂದರಲ್ಲೇ 6 ಪದಕಗಳನ್ನು ಗೆಲ್ಲಬಹುದಿತ್ತು. ಆದರೆ, ಕಳೆದ 15-16 ತಿಂಗಳಿನಿಂದ ಕುಸ್ತಿ ವಿಚಾರದಲ್ಲಿ ಆದ ಹಲವು ಘಟನೆಗಳೇ ನಾವು ಪದಕ ಗೆಲ್ಲಲು ಸಾಧ್ಯವಾಗಿಲ್ಲ. ಕಳೆದ ಬಾರಿ ನಾವು ಎರಡು ಪದಕಗಳನ್ನು ಗೆದ್ದಿದ್ದೆವು. ಆದರೆ, ಈ ಬಾರಿ ಬರಿ ಒಂದನ್ನು ಮಾತ್ರ ಗೆದ್ದಿದ್ದೇವೆ. ಇದಕ್ಕೆ ಕಾರಣ ಕುಸ್ತಿಪಟುಗಳು ಅಭ್ಯಾಸದ ಕಡೆಗೆ ಗಮನ ಹರಿಸದೇ ಕೇವಲ ಪ್ರತಿಭಟನೆಗೆ ಮುಂದಾದದ್ದು. ರವಿ ದಹಿಯಾ, ಬಜರಂಗ್​ ಪೂನಿಯ ಕಳೆದ ಬಾರಿ ಪದಕ ಗೆದ್ದಿದ್ದರು. ಆದರೆ ಈ ಬಾರಿ ಅವರು ಒಲಿಂಪಿಕ್ಸ್​ಗೆ ಅರ್ಹತೆ ಪಡೆಯುವಲ್ಲಿ ವಿಫಲರಾದರು. ಒಟ್ಟಾರೆ ಪ್ರತಿಭಟನೆಯೇ ಭಾರತ ಕುಸ್ತಿ ಪ್ರದರ್ಶನಕ್ಕೆ ಹಿನ್ನಡೆ ಉಂಟುಮಾಡಿದ್ದು ಎಂದು ಸಂಜಯ್​ ಸಿಂಗ್ ಹೇಳಿದ್ದಾರೆ.

“14-15 ತಿಂಗಳ ಕಾಲ ಕುಸ್ತಿಪಟುಗಳು ಪ್ರತಿಭಟನೆ ನಡೆಸಿ ಯಾವುದೇ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪಂದ್ಯಾವಳಿ ಆಡಲಿಲ್ಲ. ಜತೆಗೆ ಅಭ್ಯಾಸ ಕೂಡ ನಡೆಸದೆ ಫಿಟ್​ನೆಸ್​ ಕಳೆದುಕೊಂಡರು. ಹೀಗಾಗಿ ಕುಸ್ತಿಪಟುಗಳಿಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ” ಸಂಜಯ್​ ಸಿಂಗ್​ ಹೇಳಿದ್ದಾರೆ.

ಇದನ್ನೂ ಓದಿ Sakshi Malik: ಸಂಜಯ್ ಸಿಂಗ್ ನೇತೃತ್ವದ ಕುಸ್ತಿ ಟೂರ್ನಿಯಲ್ಲಿ ಸ್ಪರ್ಧಿಸಬೇಡಿ: ಸಾಕ್ಷಿ ಮಲಿಕ್

ಸಂಜಯ್​ ಸಿಂಗ್​ ಅವರು ವಿನೇಶ್‌ ಫೋಗಟ್​ ಅನರ್ಹತೆಯ ವಿರುದ್ಧ ಸಹಾಯಕ ಸಿಬ್ಬಂದಿ ವಿರುದ್ಧ ತನಿಖೆ ನಡೆಸಬೇಕು ಎಂದು ಈಗಾಗಲೇ ಆಗ್ರಹಿಸಿದ್ದಾರೆ. ಇದು ವಿನೇಶ್‌ ಅವರ ತಪ್ಪಾಗಿರಲು ಸಾಧ್ಯವಿಲ್ಲ. ಅವರು ಉತ್ತಮವಾಗಿ ಭಾಗಿಯಾಗಿದ್ದರು. ಅವರ ಕೋಚ್‌, ನ್ಯೂಟ್ರಿಶಿಯನ್‌ ಮತ್ತು ಬೆಂಬಲ ಸಿಬ್ಬಂದಿ ಇದರ ಜವಾಬ್ದಾರಿ ಹೊರಬೇಕು ಎಂದು ಅವರು ಹೇಳಿದ್ದರು. ವಿನೇಶ್‌ ತೂಕ ಹೆಚ್ಚಳವಾಗದಂತೆ ಅವರು ನೋಡಿಕೊಳ್ಳಬೇಕಿತ್ತು. ಇದಕ್ಕೆ ಕಾರಣರಾದವರ ವಿರುದ್ಧ ಭಾರತ ಸರಕಾರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದರು. ಈ ಮೂಲಕ ವಿನೇಶ್​ ಬೆಂಬಲಕ್ಕೆ ನಿಂತಿದ್ದರು.

ಬ್ರಿಜ್​ ಭೂಷಣ್​ ಶರಣ್​ ಸಿಂಗ್​ ಅವರ ಆಪ್ತ ಎನ್ನುವ ಕಾರಣಕ್ಕೆ ಸಂಜಯ್ ಸಿಂಗ್​ ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷರಾದ ವೇಳೆ ಇದನ್ನು ಖಂಡಿಸಿ ಸಾಕ್ಷಿ ಮಲಿಕ್​, ವಿನೇಶ್​ ಫೋಗಟ್​, ಬಜರಂಗ್​ ಪೂನಿಯಾ ಸೇರಿ ಹಲವು ಕುಸ್ತಿಪಟುಗಳು ವಿರೋಧ ವ್ಯಕ್ತಪಡಿಸಿದ್ದರು. ಅವರನ್ನು ಕುಸ್ತಿ ಒಕ್ಕೂಟದಿಂದ ದೂರ ಇಟ್ಟರೆ ನಮಗೆ ಯಾವುದೇ ಸಮಸ್ಯೆ ಇರದು ಎಂದು ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Viral News: ಮಾವ ಎಮ್ಮೆ ಬದಲು ಆ ಗಿಫ್ಟ್​ ಕೊಡುತ್ತಿದ್ದರೆ ಸಂತಸವಾಗುತ್ತಿತ್ತು ಎಂದ ಒಲಿಂಪಿಕ್ಸ್ ಚಿನ್ನ​ ವಿಜೇತ ಅರ್ಷದ್​ ನದೀಮ್

Viral News: ಯುನೈಟೈಡ್ ನೇಷನ್ ಪಟ್ಟಿಯಲ್ಲಿ ಮೋಸ್ಟ್ ವಾಟೆಂಡ್​ ಉಗ್ರ ಎಂದು ಗುರುತಿಸಲ್ಪಟ್ಟ ಲಷ್ಕರ್ ಇ ತೊಯ್ಬಾದ ಹರೀಸ್ ಧಾರ್ ಜತೆ ಅರ್ಷದ್ ನದೀಮ್ ಕಾಣಿಸಿಕೊಂಡದ್ದು ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು

VISTARANEWS.COM


on

Viral News
Koo

ಕರಾಚಿ: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದ ಪಾಕಿಸ್ತಾನದ ಜಾವೆಲಿನ್​ ಎಸೆತಗಾರ ಅರ್ಷದ್​ ನದೀಮ್​ಗೆ(Arshad Nadeem) ಅವರ ಮಾವ(ಪತ್ನಿಯ ತಂದೆ) ಉಡುಗೊರೆಯಾಗಿ ಎಮ್ಮೆಯೊಂದನ್ನು ನೀಡಿದ್ದರು. ಇದೀಗ ಮಾವ ನೀಡಿದ ಈ ಉಡುಗೊರೆಯ ಬಗ್ಗೆ ಅರ್ಷದ್ ಹಾಸ್ಯ ಚಟಾಕಿ ಹಾರಿಸಿದ್ದಾರೆ. ಈ ವಿಡಿಯೊ ವೈರಲ್(Viral News) ಆಗಿದೆ.

ಪಾಕಿಸ್ತಾನಿ ಮಾಧ್ಯಮ ಸಂದರ್ಶನದಲ್ಲಿ ಪಾಲ್ಗೊಂಡಿದ್ದ ವೇಳೆ ನದೀಮ್​ಗೆ ಸಂದರ್ಶಕ, ಮಾವ ಎಮ್ಮೆಯನ್ನು ಉಡುಗೊರೆಯಾಗಿ ನೀಡಿದ್ದ ಬಗ್ಗೆ ಪ್ರಶ್ನೆಯೊಂದನ್ನು ಕೇಳಿದ್ದಾರೆ. ಈ ವೇಳೆ ನಗುತ್ತಲೇ ಉತ್ತರಿಸಿದ ನದೀಮ್​ ಮಾವ ಎಮ್ಮೆಯನ್ನು ನೀಡುವ ಬದಲು 6 ರಿಂದ 6 ಎಕ್ರೆ ಜಮೀನ್​ ನೀಡುತ್ತಿದ್ದರೆ ಉತ್ತಮವಾಗಿರುತ್ತಿತ್ತು. ನನ್ನ ಮಾವ ತುಂಬಾ ಶ್ರೀಮಂತ ಹಾಗಾಗಿ ಎಮ್ಮೆ ನೀಡಿದ್ದಾರೆ ಎಂದು ಹೇಳಿ ಹಾಸ್ಯ ಚಟಾಕಿ ಹಾರಿಸಿದ್ದಾರೆ. ನದೀಮ್​ ಪ್ರತಿಕ್ರಿಯೆ ಕೇಳಿ ಸಂದರ್ಶಕ ಕೂಡ ಜೋರಾಗಿ ನಕ್ಕಿದ್ದಾನೆ. ನದೀಮ್​ ಮಾವನ ಬಗ್ಗೆ ಹಾಸ್ಯ ಮಾಡುವ ವೇಳೆ ಪತ್ನಿಯೂ ಜತೆಗಿದ್ದರು.

ಒಲಿಂಪಿಕ್ಸ್​ ಸಾಧನೆಗಾಗಿ ಅರ್ಷದ್​ಗೆ ಅವರ ಪತ್ನಿಯ ತಂದೆ(ಮಾವ) ಮಹಮ್ಮದ್​ ನವಾಜ್​ ಅವರು ಎಮ್ಮೆಯನ್ನು ಅಳಿಯನಿಗೆ ಉಡುಗೊರೆಯಾಗಿ ನೀಡಿದ್ದರು. ಈ ಬಗ್ಗೆ ಮಾತನಾಡಿದ್ದ ಮಹಮ್ಮದ್​ ನವಾಜ್​, “ನಮ್ಮ ಗ್ರಾಮದಲ್ಲಿ ಎಮ್ಮೆಯನ್ನು ಉಡುಗೊರೆಯಾಗಿ ನೀಡುವುದು ಶ್ರೇಷ್ಠ ಗೌರವವಾಗಿದೆ” ಎಂದು ಹೇಳಿದ್ದರು.

ಚಿನ್ನ ಗೆದ್ದ ನದೀಮ್​ಗೆ ಪಾಕಿಸ್ತಾನ ಪ್ರಾಂತ್ಯದ ಪಂಜಾಬ್ ಮುಖ್ಯಮಂತ್ರಿ ಮರ್ಯಮ್ ನವಾಜ್ 10 ಕೋಟಿ ರೂ., ಸಿಂಧ್ ಸರ್ಕಾರ ಐದು ಕೋಟಿ ರೂ., ವಿಶ್ವ ಅಥ್ಲೀಟ್ ಫೆಡರೇಶನ್ ಒಂದು ಕೋಟಿ 40 ಲಕ್ಷ ಬಹುಮಾನ ಘೋಷಿಸಿದ್ದು, ಸಿಂಧ್ ಗವರ್ನರ್ ಕಮ್ರಾನ್ ತೆಸ್ಸೋರಿ, ಕ್ರಿಕೆಟಿಗ ಅಹ್ಮದ್ ಶೆಹಜಾದ್ ಮತ್ತು ಓರ್ಷ ಗಾಯಕ 30 ಲಕ್ಷಗಳನ್ನು ನೀಡಿದ್ದಾರೆ.

ಇದನ್ನೂ ಓದಿ Arshad Nadeem : ಲಷ್ಕರ್ ಉಗ್ರನ ಜತೆ ಕಾಣಿಸಿಕೊಂಡ ಪಾಕಿಸ್ತಾನದ ಒಲಿಂಪಿಕ್ಸ್​ ಚಿನ್ನದ ಪದಕ ವಿಜೇತ ಅರ್ಷದ್​ ನದೀಮ್​!

ಪಾಕಿಸ್ತಾನದ ಪಂಜಾಬ್‌ನಲ್ಲಿರುವ ಮಿಯಾನ್‌ ಚಾನುವಿನಲ್ಲಿನ ಬಡ ಪಂಜಾಬಿ ಕುಟುಂಬದಲ್ಲಿ ಜನಿಸಿದ ಅರ್ಷದ್‌ ನದೀಮ್‌, ಇಂದು ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡಬೇಕಾದರೆ ಅವರು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ತಂದೆ ಮುಹಮ್ಮದ್‌ ಅಶ್ರಫ್‌ ಗಾರೆ ಮೇಸ್ತ್ರಿ ಆಗಿದ್ದ ಕಾರಣ, ಕುಟುಂಬಕ್ಕೆ ನೆರವಾಗುವ ನಿಟ್ಟಿನಲ್ಲಿ ಅರ್ಷದ್‌ ನದೀಮ್‌ ಕೂಡ ತಂದೆಯ ಜತೆ ಗಾರೆ ಕೆಲಸವನ್ನು ಮಾಡಿದ್ದರು. ಇದರೆ ಜತೆಗೆ ಕ್ರೀಡೆಯಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

ಯುನೈಟೈಡ್ ನೇಷನ್ ಪಟ್ಟಿಯಲ್ಲಿ ಮೋಸ್ಟ್ ವಾಟೆಂಡ್​ ಉಗ್ರ ಎಂದು ಗುರುತಿಸಲ್ಪಟ್ಟ ಲಷ್ಕರ್ ಇ ತೊಯ್ಬಾದ ಹರೀಸ್ ಧಾರ್ ಜತೆ ಅರ್ಷದ್ ನದೀಮ್ ಕಾಣಿಸಿಕೊಂಡದ್ದು ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಪ್ಯಾರಿಸ್​​ನಿಂದ ಲಾಹೋರ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ನದೀಮ್ ಅವರಿಗೆ ಭವ್ಯ ಸ್ವಾಗತ ದೊರಕಿತ್ತು. ಅಲ್ಲಿನ ಸರ್ಕಾರವು ಅವರಿಗೆ ವಿಜಯ ಮೆರವಣಿಗೆಯನ್ನು ಸಹ ಆಯೋಜಿಸಿತ್ತು. ಇದಲ್ಲದೆ, ನದೀಮ್ ಅವರು ಪಾಕಿಸ್ತಾನದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಯನ್ನೂ ಪಡೆದಿದ್ದರು. ಇದರ ಬೆನ್ನಲ್ಲೇ ಲಷ್ಕರ್​ ನಾಯಕನೊಂದಿಗೆ ಕಾಣಿಸಿಕೊಂಡಿರುವುದು ವಿವಾದಕ್ಕೆ ಕಾರಣವಾಗಿತ್ತು.

Continue Reading

ಕ್ರಿಕೆಟ್

MS Dhoni Fans: ಧೋನಿ ಅಭಿಮಾನಿಗಳಿಗೆ ಗುಡ್ ನ್ಯೂಸ್; ಹಳೆಯ ಐಪಿಎಲ್​ ನಿಯಮ ಜಾರಿಗೆ ಮುಂದಾದ ಬಿಸಿಸಿಐ

MS Dhoni Fans: ಅನ್‌ಕ್ಯಾಪ್ಡ್ ಆಟಗಾರನಿಗೆ ಫ್ರಾಂಚೈಸಿ ಕೇವಲ 4 ಕೋಟಿ ರೂ. ನೀಡಲಿದೆ. ಈ ನಿಯಮ ಜಾರಿಗೆ ಬಂದರೆ ಧೋನಿ ಇದೇ ಮೊತ್ತದಲ್ಲಿ ಚೆನ್ನೈಗಾಗಿ ಆಡುವುದನ್ನು ಮುಂದುವರಿಸಲು ಅನುವು ಮಾಡಿಕೊಡುತ್ತದೆ. ಇದೇ ಮೊತ್ತಕ್ಕೆ ಚೆನ್ನೈ ತಂಡ ಧೋನಿಯನ್ನು ಮತ್ತೆ ರೀಟೈನ್​ ಮಾಡಿಕೊಳ್ಳಬಹುದು

VISTARANEWS.COM


on

MS Dhoni Fans
Koo

ಮುಂಬಯಿ: 18ನೇ ಆವೃತ್ತಿಯ ಐಪಿಎಲ್(Indian Premier League)​ ವಿಚಾರದಲ್ಲಿ ದಿನಕ್ಕೊಂದು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿವೆ. ಇದೀಗ ಈ ಪಟ್ಟಿಗೆ ಹೊಸದೊಂದು ವಿಚಾರ ಸೇರ್ಪಡೆಗೊಂಡಿದೆ. ವರದಿಯೊಂದರ ಪ್ರಕಾರ ಬಿಸಿಸಿಐ(BCCI) ಕನಿಷ್ಠ ಐದು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದ ಆಟಗಾರರನ್ನು ಅನ್‌ಕ್ಯಾಪ್ಡ್ ವಿಭಾಗದಲ್ಲಿ ಇರಿಸುವ ನಿಯಮವನ್ನು ಮರಳಿ ತರಲು ಮುಂದಾಗಿದೆ ಎನ್ನಲಾಗಿದೆ.

ಮೊದಲ ಸೀಸನ್‌ನಿಂದ ಜಾರಿಯಲ್ಲಿದ್ದ ಈ ನಿಯಮವನ್ನು 2021ರಲ್ಲಿ ರದ್ದುಗೊಳಿಸಲಾಗಿತ್ತು. ಕಳೆದ ತಿಂಗಳು ಮುಂಬೈಯಲ್ಲಿ ನಡೆದಿದ್ದ ಐಪಿಎಲ್ ಫ್ರಾಂಚೈಸಿಗಳ ಮಾಲೀಕರು ಮತ್ತು ಬಿಸಿಸಿಐ ನಡುವಿನ ಸಭೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಆಡಳಿತವು ಈ ನಿಯಮವನ್ನು ಹಿಂದಿರುಗಿಸುವಂತೆ ಒತ್ತಾಯಿಸಿತ್ತು. ಇದೀಗ ಬಿಸಿಸಿಐ ಮತ್ತೆ ಈ ನಿಯಮವನ್ನು ಜಾರಿಗೊಳಿಸಲು ಮುಂದಾಗಿದೆ ಎನ್ನಲಾಗಿದೆ. ಹೀಗಾದರೆ ಧೋನಿ(MS Dhoni) ಮುಂದಿನ ಬಾರಿಯೂ ಐಪಿಎಲ್​ ಆಡುವುದು ಖಚಿತ ಎನ್ನಲಾಗಿದೆ. ಅಲ್ಲದೆ ಈ ನಿಯಮ ಜಾರಿಗೊಳ್ಳಲಿದೆ ಎನ್ನುವಾಗಲೇ ಧೋನಿ ಅಭಿಮಾನಿಗಳು(MS Dhoni Fans) ಸಂತಸಗೊಂಡಿದ್ದಾರೆ.

ಧೋನಿ(MS Dhoni) ಅವರು ಕಳೆದ ವರ್ಷವೇ ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಒಂದು ವರ್ಷದ ಮಟ್ಟಿಗೆ ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿ ಎಂದೇ ಹೇಳಲಾಗಿತ್ತು. ಆದ್ಯಾಗೂ ಧೋನಿ ತಮ್ಮ ನಿವೃತ್ತಿ ಬಗ್ಗೆ ಯಾವುದೇ ಅಂತಿಮ ನಿರ್ಧಾರ ಪ್ರಕಟಿಸಿಲ್ಲ.

ಅನ್‌ಕ್ಯಾಪ್ಡ್ ಆಟಗಾರನಿಗೆ ಫ್ರಾಂಚೈಸಿ ಕೇವಲ 4 ಕೋಟಿ ರೂ. ನೀಡಲಿದೆ. ಈ ನಿಯಮ ಜಾರಿಗೆ ಬಂದರೆ ಧೋನಿ ಇದೇ ಮೊತ್ತದಲ್ಲಿ ಚೆನ್ನೈಗಾಗಿ ಆಡುವುದನ್ನು ಮುಂದುವರಿಸಲು ಅನುವು ಮಾಡಿಕೊಡುತ್ತದೆ. ಇದೇ ಮೊತ್ತಕ್ಕೆ ಚೆನ್ನೈ ತಂಡ ಧೋನಿಯನ್ನು ಮತ್ತೆ ರೀಟೈನ್​ ಮಾಡಿಕೊಳ್ಳಬಹುದು. 2022ರ ಮೆಗಾ ಹರಾಜಿನ ಮೊದಲು, ಚೆನ್ನೈ 12 ಕೋಟಿಗೆ ಧೋನಿಯನ್ನು ತಂಡದಲ್ಲಿ ಉಳಿಸಿಕೊಂಡಿತ್ತು. “ಧೋನಿ ಅನ್‌ಕ್ಯಾಪ್ಡ್ ಆಟಗಾರನಾಗಿ ಆಡುತ್ತಾರಾ? ಇದೊಂದು ದೊಡ್ಡ ಪ್ರಶ್ನಾರ್ಥಕ ಚಿಹ್ನೆ” ಎಂದು ಆರ್​.ಅಶ್ವಿನ್​ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ Rohit Sharma : ಧೋನಿಯ ನಾಯಕತ್ವದ ದಾಖಲೆಯೊಂದನ್ನು ಮುರಿದ ರೋಹಿತ್ ಶರ್ಮಾ

ಈ ಬಾರಿ ರೈಟ್​ ಟು ಮ್ಯಾಚ್​(ಆರ್​ಟಿಎಂ) ಕಾರ್ಡ್​ ಪದ್ಧತಿಯನ್ನೂ ಮತ್ತೆ ತರಲಾಗುವುದು ಎಂದು ವರದಿಯಾಗಿದೆ. ಆರ್​ಟಿಎಂ ಅನ್ವಯ ಫ್ರಾಂಚೈಸಿಯೊಂದು ತನ್ನ ತಂಡದ ಆಟಗಾರನೊಬ್ಬ ಬೇರೆ ತಂಡಕ್ಕೆ ಹೆಚ್ಚಿನ ಮೊತ್ತಕ್ಕೆ ಮಾರಾಟವಾದಾಗ ಅದೇ ಮೊತ್ತಕ್ಕೆ ಆತನನ್ನು ತನ್ನ ತಂಡದಲ್ಲಿ ಉಳಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಇದನ್ನು ಆರ್​ಟಿಎಂ ಎನ್ನಲಾಗುತ್ತದೆ. ಈ ಬಾರಿ ಒಂದೇ ಕಾರ್ಡ್​ ಬಳಕೆಗೆ ಅವಕಾಶ ನೀಡುವುದಾಗಿ ಹೇಳಲಾಗಿದೆ. ಹೆಚ್ಚಿನ ಆರ್​ಟಿಎಂ ಬಳಸಲು ಅವಕಾಶ ನೀಡಿದರೆ ಹರಾಜು ಪ್ರಕ್ರಿಯೆ ಮಹತ್ವ ಕಳೆದುಕೊಳ್ಳುತ್ತದೆ ಎಂದು ಬಿಸಿಸಿಐ ಅಧಿಕಾರಿಗಳ ಅಭಿಪ್ರಾಯ. ಐಪಿಎಲ್​ನಲ್ಲಿ ಇದುವರೆಗೆ ವಿರಾಟ್​ ಕೊಹ್ಲಿ (ಆರ್​ಸಿಬಿ), ಜಸ್​ಪ್ರೀತ್​ ಬುಮ್ರಾ(ಮುಂಬೈ) ಮಾತ್ರ ಒಂದೇ ತಂಡದ ಪರ ಆಡಿದ್ದಾರೆ. ಉಳಿದ ಆಟಗಾರರು ಬೇರೆ ಬೇರೆ ಫ್ರಾಂಚೈಸಿ ಪರ ಕನಿಷ್ಠ ಒಂದೆರಡು ವರ್ಷಗಳ ಕಾಲ ಆಡಿದ್ದಾರೆ.

ಐಪಿಎಲ್ ಮೆಗಾ ಹರಾಜನ್ನು ಇನ್ನು ಮುಂದೆ ಐದು ವರ್ಷಗಳಿಗೊಮ್ಮೆ ನಡೆಸುವಂತೆಯೂ ಕೆಲವು ಫ್ರಾಂಚೈಸಿಗಳು ಮನವಿ ಮಾಡಿದೆ ಎನ್ನಲಾಗಿದೆ. ಈ ಹಿಂದೆ ಪ್ರತಿ ಮೂರು ವರ್ಷಗಳಿಗೊಮ್ಮೆ ಮೆಗಾ ಹರಾಜು ಆಯೋಜಿಸಲಾಗುತ್ತಿತ್ತು. ಒಂದೊಮ್ಮೆ ಈ ಬೇಡಿಕೆಗೆ ಬಿಸಿಸಿಐ ಸಮ್ಮತಿಸಿದರೆ. ಮುಂದಿನ ಮೆಗಾ ಹರಾಜು 2029ರಲ್ಲಿ ನಡೆಯಲಿದೆ. ಇದರ ನಡುವೆ ಮಿನಿ ಹರಾಜು ಮಾತ್ರ ನಡೆಯಲಿದೆ. ಈ ತಿಂಗಳಾಂತ್ಯದಲ್ಲಿ ಐಪಿಎಲ್ ಮಾಲೀಕರೊಂದಿಗೆ ಬಿಸಿಸಿಐ ಸಭೆ ನಡೆಸಿ ಮೆಗಾ ಹರಾಜಿನ ಅಂತಿಮ ರೂಪುರೇಷೆಗಳ ಬಗ್ಗೆ ಚರ್ಚಿಸಲಿದೆ ಎಂದು ವರದಿಯಾಗಿದೆ

Continue Reading

ಬೆಂಗಳೂರು

Government Employees Sports: ಆ.17ರಂದು ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

Government Employees Sports: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಆ. 17ರಂದು ಶನಿವಾರ ಸಂಜೆ 5 ಗಂಟೆಗೆ ಬೆಂಗಳೂರು ನಗರದ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ “ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು-2024” ಆಯೋಜಿಸಲಾಗಿದೆ.

VISTARANEWS.COM


on

Government Employees Sports
ಸಾಂದರ್ಭಿಕ ಚಿತ್ರ.
Koo

ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಆ. 17ರಂದು ಶನಿವಾರ ಸಂಜೆ 5 ಗಂಟೆಗೆ ನಗರದ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ “ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು-2024” (Government Employees Sports) ಆಯೋಜಿಸಲಾಗಿದೆ.

ಇದನ್ನೂ ಓದಿ: Kannada New Movie: ತೆರೆಯ‌ ಮೇಲೆ‌ ಚಿತ್ರವಾಗಿ ಬರಲಿದೆ ಡಿ.ವಿ.ಜಿ ಅವರ ʼಮಂಕುತಿಮ್ಮನ ಕಗ್ಗʼ; ಮೊದಲ ಹಾಡು ರಿಲೀಸ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಕೂಟವನ್ನು ಉದ್ಘಾಟಿಸುವರು. ಕೇಂದ್ರ ಹಣಕಾಸು ಹಾಗೂ ಕಾರ್ಪೋರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಉಪಸ್ಥಿತರಿರುವರು. ಡಿಸಿಎಂ ಡಿ.ಕೆ. ಶಿವಕುಮಾರ್ ಧ್ವಜಾರೋಹಣ ಮತ್ತು ಕ್ರೀಡಾ ಜ್ಯೋತಿ ಸ್ವೀಕಾರ ಮಾಡುವರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉಪಸ್ಥಿತರಿರುವರು.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಆ.17ರಂದು ಪವರ್‌ ಕಟ್‌!

ಕಾರ್ಯಕ್ರಮದಲ್ಲಿ ಬೆಂಗಳೂರಿನ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಹರ್ಷದ್ ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಪ್ರಾಸ್ತಾವಿಕವಾಗಿ ಮಾತನಾಡುವರು.

Continue Reading

ಕ್ರೀಡೆ

Paralympics 2024: ಪ್ಯಾರಾಲಿಂಪಿಕ್ಸ್​ನಲ್ಲಿ ಭಾಗ್ಯಶ್ರೀ, ಸುಮಿತ್ ತ್ರಿವರ್ಣ ಧ್ವಜಧಾರಿಗಳು

Paralympics 2024: ಈ ಬಾರಿಯ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತದ 84 ಕ್ರೀಡಾಪಟುಗಳ ದೊಡ್ಡ ದಂಡು ಪಾಲ್ಗೊಳ್ಳಲಿದೆ. ಈ ಕೂಟದಲ್ಲಿ 25ಕ್ಕೂ ಅಧಿಕ ಪದಕಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಭಾರತ ಪ್ಯಾರಾಲಿಂಪಿಕ್ ಸಮಿತಿ ಅಧ್ಯಕ್ಷ ದೇವೇಂದ್ರ ಝಜಾರಿಯಾ ಹೇಳಿದ್ದಾರೆ.

VISTARANEWS.COM


on

Paralympics 2024
Koo

ನವದೆಹಲಿ: ಇದೇ 28ರಿಂದ ಸೆಪ್ಟೆಂಬರ್​ 8ರವರೆಗೆ ನಡೆಯುವ ಪ್ಯಾರಿಸ್ ಪ್ಯಾರಾಲಿಂಪಿಕ್(Paralympics 2024) ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಶಾಟ್‌ಪುಟ್ ತಾರೆ ಭಾಗ್ಯಶ್ರೀ ಜಾಧವ್(Bhagyashree Jadhav) ಮತ್ತು ಸ್ಟಾರ್ ಜಾವೆಲಿನ್ ಎಸೆತಗಾರ ಸುಮಿತ್ ಆಂಟಿಲ್(Sumit Antil) ಭಾರತದ ಧ್ವಜಧಾರಿಗಳಾಗಿ(flag bearers for Paralympics) ಆಯ್ಕೆಯಾಗಿದ್ದಾರೆ. ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸಲಿರುವ ಭಾರತದ 84 ಸದಸ್ಯರ ತಂಡವನ್ನು ಭಾಗ್ಯಶ್ರೀ ಮತ್ತು ಸುಮಿತ್ ಪರೇಡ್ ಆಫ್ ನೇಷನ್‌ನಲ್ಲಿ ಮುನ್ನಡೆಸಲಿದ್ದಾರೆ ಎಂದು ಭಾರತದ ಪ್ಯಾರಾಲಿಂಪಿಕ್ಸ್‌ ಸಮಿತಿ ಶುಕ್ರವಾರ ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ.

ಭಾಗ್ಯಶ್ರೀ ಜಾಧವ್


ಮಹಾರಾಷ್ಟ್ರದ ಮೂಲದ ಭಾಗ್ಯಶ್ರೀ ಜಾಧವ್ ಕಳೆದ ಕೆಲ ವರ್ಷಗಳಿಂದ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಸ್ಥಿರ ಪ್ರದರ್ಶನ ನೀಡಿದ್ದಾರೆ. ಅವರು 2022 ರ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಶಾಟ್‌ಪುಟ್ F34 ವಿಭಾಗದಲ್ಲಿ ಬೆಳ್ಳಿ ಪದಕವನ್ನು ಗೆದಿದ್ದರು. ಮತ್ತು ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಏಳನೇ ಸ್ಥಾನ ಪಡೆದಿದ್ದರು. ಫೆಜಾ ವಿಶ್ವಕಪ್ ಮತ್ತು ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಗೇಮ್ಸ್ ಸೇರಿದಂತೆ ವಿವಿಧ ಅಂತಾರಾಷ್ಟ್ರೀಯ ಟೂರ್ನಿಗಳಲ್ಲಿ ಪದಕ ಗೆದ್ದು ತಮ್ಮ ಛಾಪು ಮೂಡಿಸಿದ್ದಾರೆ.

ಸುಮಿತ್ ಆಂಟಿಲ್


ಟೋಕಿಯೊ ಪ್ಯಾರಾಲಿಂಪಿಕ್ಸ್ 2020 ರಲ್ಲಿ ವಿಶ್ವ ದಾಖಲೆಯ 68.55 ಮೀ. ಜಾವೆಲಿನ್​ ಎಸೆಯುವ ಮೂಲಕ ಚಿನ್ನದ ಪದಕವನ್ನು ಗೆದ್ದ ಸುಮಿತ್ ಆಂಟಿಲ್ ಪುರುಷರ ವಿಭಾಗದ ಧ್ವಜಧಾರಿಯಾಗಿದ್ದಾರೆ. ಎಫ್64 ವಿಭಾಗದಲ್ಲಿ ಪ್ರಸ್ತುತ ವಿಶ್ವ ದಾಖಲೆ ಹೊಂದಿರುವ ಸುಮಿತ್ ಆಂಟಿಲ್ ಈ ಬಾರಿಯು ಚಿನ್ನದ ಪದಕ ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ. 2022ರ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ 73.29 ಮೀಟರ್‌ ದೂರ ಜಾವೆಲಿನ್ ಎಸೆಯುವ ಮೂಲಕ ಹೊಸ ವಿಶ್ವ ದಾಖಲೆಯನ್ನು ಸೃಷ್ಟಿಸಿದ್ದರು.

ಇದನ್ನೂ ಓದಿ Paris Paralympics : ಪ್ಯಾರಾಲಿಂಪಿಕ್ಸ್​​ನಲ್ಲಿ 12 ಕ್ರೀಡೆಗಳಲ್ಲಿ ಭಾಗವಹಿಸಲಿದೆ ಭಾರತ

25 ಪದಕ ನಿರೀಕ್ಷೆ


ಈ ಬಾರಿಯ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತದ 84 ಕ್ರೀಡಾಪಟುಗಳ ದೊಡ್ಡ ದಂಡು ಪಾಲ್ಗೊಳ್ಳಲಿದೆ. ಈ ಕೂಟದಲ್ಲಿ 25ಕ್ಕೂ ಅಧಿಕ ಪದಕಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಭಾರತ ಪ್ಯಾರಾಲಿಂಪಿಕ್ ಸಮಿತಿ ಅಧ್ಯಕ್ಷ ದೇವೇಂದ್ರ ಝಜಾರಿಯಾ ಹೇಳಿದ್ದಾರೆ. ಕಳೆದ ಟೋಕಿಯೊದಲ್ಲಿ 19 ಪದಕಗಳನ್ನು ಗೆದ್ದಿದೆ. ಕಳೆದ ವರ್ಷ ಹಾಂಗ್‌ಝೌನ ಪ್ಯಾರಾ ಏಷ್ಯನ್ ಗೇಮ್ಸ್‌ನಲ್ಲೂ 111 ಪದಕಗಳನ್ನು ಜಯಿಸಿ, ಉತ್ತಮ ಸಾಧನೆ ಮೆರೆದಿತ್ತು.

ಆರ್ಚರಿ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಕೆನೊಯಿಂಗ್, ಸೈಕ್ಲಿಂಗ್, ಬ್ಲೈಂಡ್ ಜುಡೊ, ಪವರ್ ಲಿಫ್ಟಿಂಗ್, ರೋಯಿಂಗ್, ಶೂಟಿಂಗ್, ಈಜು, ಟೇಬಲ್ ಟೆನಿಸ್ ಮತ್ತು ಟೇಕ್ವಾಂಡೊ ಸೇರಿದಂತೆ 12 ಕ್ರೀಡೆಗಳಲ್ಲಿ ಭಾರತ ಕ್ರೀಡಾಪಟುಗಳು ಕಣಕ್ಕೆ ಇಳಿಯಲಿದ್ದಾರೆ.

Continue Reading
Advertisement
Money Guide
ಮನಿ-ಗೈಡ್1 min ago

Money Guide: ಎಸ್‌ಐಪಿ-ಪಿಪಿಎಫ್; ಹಣ ಹೂಡಿಕೆಗೆ ಯಾವುದು ಬೆಸ್ಟ್?

CM Siddaramaiah
ಬೆಂಗಳೂರು6 mins ago

CM Siddaramaiah: ಆಪಲ್‌ ಫೋನ್‌ ಬಿಡಿಭಾಗ ತಯಾರಕ ಫಾಕ್ಸ್‌ಕಾನ್ ಸಂಸ್ಥೆ ಅಧ್ಯಕ್ಷರೊಂದಿಗೆ ಸಿದ್ದರಾಮಯ್ಯ ಚರ್ಚೆ

Shivamogga News
ಕರ್ನಾಟಕ9 mins ago

Shivamogga News: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಾಲಯದಲ್ಲಿ ವಿಶೇಷ ಪೂಜೆ

Viral News
ಕ್ರೀಡೆ27 mins ago

Viral News: ಮಾವ ಎಮ್ಮೆ ಬದಲು ಆ ಗಿಫ್ಟ್​ ಕೊಡುತ್ತಿದ್ದರೆ ಸಂತಸವಾಗುತ್ತಿತ್ತು ಎಂದ ಒಲಿಂಪಿಕ್ಸ್ ಚಿನ್ನ​ ವಿಜೇತ ಅರ್ಷದ್​ ನದೀಮ್

Kolkata Doctor Murder Case
ದೇಶ42 mins ago

Kolkata Doctor murder case: ವೈದ್ಯೆ ಕೊಲೆ ಕೇಸ್‌; ಪ್ರತಿಭಟನಾಕಾರರ ಮೇಲೆ ವಾಹನ ಹರಿಸಲು ಪೊಲೀಸ್‌ ಯತ್ನ?

Bangalore Rain
ಮಳೆ57 mins ago

Bangalore Rain: ರಾಜಧಾನಿಯ ಹಲವೆಡೆ ಅಬ್ಬರಿಸಿದ ವರುಣ; ಆಟೋ ಮೇಲೆ ಮರ ಬಿದ್ದು ಚಾಲಕ ಸೇರಿ ಮೂವರಿಗೆ ಗಾಯ

MS Dhoni Fans
ಕ್ರಿಕೆಟ್2 hours ago

MS Dhoni Fans: ಧೋನಿ ಅಭಿಮಾನಿಗಳಿಗೆ ಗುಡ್ ನ್ಯೂಸ್; ಹಳೆಯ ಐಪಿಎಲ್​ ನಿಯಮ ಜಾರಿಗೆ ಮುಂದಾದ ಬಿಸಿಸಿಐ

Government Employees Sports
ಬೆಂಗಳೂರು2 hours ago

Government Employees Sports: ಆ.17ರಂದು ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

Government Employees
ಕರ್ನಾಟಕ2 hours ago

Government Employees: 7ನೇ ವೇತನ ಆಯೋಗ; ಸರ್ಕಾರಿ ನೌಕರರ ಸಂಘದಿಂದ ಆ.17ರಂದು ಸಿಎಂ, ಡಿಸಿಎಂಗೆ ಸನ್ಮಾನ

Saarthi AI
ವಿದೇಶ2 hours ago

Saarthi AI: ಕೆಲ್ಸ ಕಳ್ಕೊಂಡ ಕೋಪಕ್ಕೆ ಬಾಸ್‌ನ ಪಾಸ್‌ಪೋರ್ಟ್‌, ವೀಸಾಕ್ಕೆ ಕನ್ನ- ಉದ್ಯೋಗಿಯ ಕಿತಾಪತಿಗೆ ಬೆಂಗಳೂರು ಸಿಇಒ ಹೈರಾಣ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌