Udupi News: ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ವ್ಯಕ್ತಿ ಉಸಿರುಗಟ್ಟಿ ಸಾವು - Vistara News

ಉಡುಪಿ

Udupi News: ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ವ್ಯಕ್ತಿ ಉಸಿರುಗಟ್ಟಿ ಸಾವು

Udupi news: ಕಾರಣ ಮಣಿಪಾಲ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಕಾರು ಪಾರ್ಕ್ ಮಾಡಿ ಒಳಗೆ ಮಲಗಿದ್ದರು. ಕಾರಿನ ಎಲ್ಲ ಗ್ಲಾಸುಗಳನ್ನು ಏರಿಸಿಕೊಂಡು ಬಂದ್‌ ಮಾಡಿ ಮಲಗಿದ ಪರಿಣಾಮ ಉಸಿರುಗಟ್ಟಿ ಮೃತಪಟ್ಟಿದ್ದಾರೆ.

VISTARANEWS.COM


on

car death udupi news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ಮಣಿಪಾಲ ಆಸ್ಪತ್ರೆ (Manipal Hospital) ಬಳಿ ಕಾರಿನ ಎಲ್ಲ ಗ್ಲಾಸ್‌ಗಳನ್ನು ಮುಚ್ಚಿಕೊಂಡು ಮಲಗಿದ್ದ ಚಾಲಕರೊಬ್ಬರು ಉಸಿರು ಗಟ್ಟಿ (Death in Car) ಸಾವಿಗೀಡಾಗಿದ್ದಾರೆ. ಚಿಕ್ಕಮಗಳೂರು (Udupi News) ಮೂಲದ ಆನಂದ (37) ಮೃತಪಟ್ಟವರು.

ಇವರು ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ಕಾರಿನಲ್ಲಿ ಕರೆದುಕೊಂಡು ಬಂದಿದ್ದರು. ರೋಗಿಯನ್ನು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲು ಮಾಡಲಾಗಿತ್ತು. ಮಣಿಪಾಲದಲ್ಲಿ ಉಳಿದುಕೊಳ್ಳಲು ಯಾವುದೇ ರೂಮ್ ಸಿಗದ ಕಾರಣ ಮಣಿಪಾಲ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಕಾರು ಪಾರ್ಕ್ ಮಾಡಿ ಒಳಗೆ ಮಲಗಿದ್ದರು.

ಕಾರಿನ ಎಲ್ಲ ಗ್ಲಾಸುಗಳನ್ನು ಏರಿಸಿಕೊಂಡು ಬಂದ್‌ ಮಾಡಿ ಮಲಗಿದ ಪರಿಣಾಮ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಇಂದು ಯಾವುದೇ ಆಸ್ಪತ್ರೆಯಲ್ಲಿ ಒಪಿಡಿ ಇಲ್ಲ; ವೈದ್ಯರ ಮುಷ್ಕರಕ್ಕೆ ರಾಜ್ಯದ ಡಾಕ್ಟರ್‌ಗಳ ಸಾಥ್

ಬೆಂಗಳೂರು: ಕೋಲ್ಕತಾದಲ್ಲಿ ವೈದ್ಯೆ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ವೈದ್ಯರು ನೀಡಿರುವ ದೇಶವ್ಯಾಪಿ ಪ್ರತಿಭಟನೆಗೆ ರಾಜ್ಯದ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರು ಬೆಂಬಲ ಸೂಚಿಸಿದ್ದಾರೆ. ಇಂದು ಬೆಳಗ್ಗೆಯಿಂದ ಭಾನುವಾರ ಬೆಳಗ್ಗೆ 6 ಗಂಟೆಯವರೆಗೆ ಎಲ್ಲ ಖಾಸಗಿ ಆಸ್ಪತ್ರೆಗಳ ಹೊರರೋಗಿ ವಿಭಾಗಗಳು (OPD) ಬಂದ್‌ ಆಗಿರಲಿವೆ.

ರಾಜಧಾನಿಯ ಫ್ರೀಡಂ ಪಾರ್ಕಿನಲ್ಲಿ ಇಂದು ಬೆಳಿಗ್ಗೆ 10 ಗಂಟೆಯಿಂದ ವೈದ್ಯರ ಪ್ರತಿಭಟನೆ ಆರಂಭವಾಗಲಿದೆ. ಇಂದು ಬೆಳಿಗ್ಗೆ 6 ಗಂಟೆಯಿಂದ 24 ಗಂಟೆಗಳ ಕಾಲ ಓಪಿಡಿ ಬಂದ್ ಮಾಡಿ ವೈದ್ಯ ಸಮೂಹ ಪ್ರತಿಭಟನೆಗೆ ಕರೆ ಕೊಟ್ಟಿದೆ. ತುರ್ತು ಸೇವೆ ಹೊರತುಪಡಿಸಿ ಉಳಿದಂತೆ ಓಪಿಡಿ ಬಂದ್ ಇರಲಿದೆ.

ಪ್ರತಿಭಟನೆಗೆ ಸರ್ಕಾರಿ ವೈದ್ಯರು ಕೂಡ ಸಾಥ್ ಕೊಟ್ಟಿದ್ದಾರೆ. ಸರ್ಕಾರಿ ವೈದ್ಯರು ಕಪ್ಪು ಪಟ್ಟಿ ಧರಿಸಿ ಕಾರ್ಯನಿರ್ವಹಣೆ ಮಾಡಲಿದ್ದಾರೆ. ಫ್ರೀಡಂ ಪಾರ್ಕಿನಲ್ಲಿ ಇಂದು ಖಾಸಗಿ ಆಸ್ಪತ್ರೆಯ ವೈದ್ಯರು ಸೇರಿದಂತೆ ಹಲವು ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳು ಭಾಗಿಯಾಗಲಿದ್ದಾರೆ. ಪ್ರತಿಭಟನೆಗೆ ಸಂಸದ ಹಾಗೂ ಖ್ಯಾತ ವೈದ್ಯ ಸಿಎನ್ ಮಂಜುನಾಥ್ ಜೊತೆ ನೀಡಲಿದ್ದಾರೆ.

ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಬೆಂಬಲ

ಕೋಲ್ಕತ್ತಾದ ಆರ್.ಜಿ.ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕರ್ತವ್ಯ ನಿರತ ಯುವ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ತುರ್ತು ಸೇವೆಗಳನ್ನು ಹೊರತುಪಡಿಸಿ, ಇತರೆ ಎಲ್ಲಾ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲು ಭಾರತೀಯ ವೈದ್ಯಕೀಯ ಸಂಘವು ಆ.17ರಂದು ದೇಶಾದ್ಯಂತ ಹಮ್ಮಿಕೊಂಡಿರುವ ಪ್ರತಿಭಟನೆಗೆ (Doctors Protest) ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಬೆಂಬಲ ವ್ಯಕ್ತಪಡಿಸಿದೆ.

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಪತ್ರ ಬರೆದಿದೆ. ವೈದ್ಯಾಧಿಕಾರಿಗಳು ದಿನದ 24/7 ಗಂಟೆ ಬಡ ರೋಗಿಗಳಿಗೆ ತಪಾಸಣೆ ಮತ್ತು ಚಿಕಿತ್ಸೆ ನೀಡುತ್ತಿದ್ದು, ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ ಹಾಗೂ ಕೋವಿಡ್ -19 ನಂತಹ ಸಾಂಕ್ರಾಮಿಕ ರೋಗವು ಇಡೀ ಪ್ರಪಂಚವನ್ನೇ ಬಾಧಿಸಿದ ಸಂದರ್ಭದಲ್ಲಿ ವೈದ್ಯರು ಹಗಲಿರುಳು ಎನ್ನದೇ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಶ್ರಮಿಸಿದ್ದರು.

ಆದರೆ ಆ.9 ರಂದು ಪಶ್ಚಿಮ ಬಂಗಾಳದ ಕೋಲ್ಕತ್ತಾದ ಆರ್.ಜಿ.ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಯುವ ವೈದ್ಯೆಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಘೋರ ಅಪರಾಧವಾಗಿದ್ದು, ಇದು ಕಾನೂನಿನ ವೈಫಲ್ಯವನ್ನು ಎತ್ತಿ ಹಿಡಿಯುತ್ತದೆ. ಅಲ್ಲದೇ ಈ ಪ್ರಕರಣವು ವೈದ್ಯರ ಮನೋಸ್ಥೈರ್ಯವನ್ನು ಕುಗ್ಗುವಂತೆ ಮಾಡಿದ್ದು, ಇದನ್ನು ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ಗಂಭೀರವಾಗಿ ಪರಿಗಣಿಸಿದೆ.

ಇದನ್ನೂ ಓದಿ: Kolkata Doctor Murder Case: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರಿಗೆ ಮರಣದಂಡನೆ ವಿಧಿಸುವಂತೆ ಬಾಲಿವುಡ್ ತಾರೆಯರ ಆಗ್ರಹ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Road Accident: ಟಿಪ್ಪರ್‌ ರೂಪದಲ್ಲಿ ಬಂದ ಯಮ, ಮನೆ ಮುಂದೆ ಆಟವಾಡುತ್ತಿದ್ದ ಇಬ್ಬರು ಮಕ್ಕಳು ನಜ್ಜುಗುಜ್ಜು

Road Accident: ಮೈಸೂರು ರಸ್ತೆ ಗುಡ್ಡದಹಳ್ಳಿ ಬಳಿ ಘೋರ ಅಪಘಾತ ಸಂಭವಿಸಿದೆ. ಮಕ್ಕಳು ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ಮೇಲೆ ಕುಳಿತು ಆಟವಾಡುತ್ತಿದ್ದರು. ಯಮನಂತೆ ಬಂದ ಟಿಪ್ಪರ್‌ ಇವರನ್ನು ನೆಲಕ್ಕೆ ಕೆಡವಿದೆ. ಮಕ್ಕಳ ಮೇಲೆ ಹರಿದ ಪರಿಣಾಮ ಮಕ್ಕಳು ನಜ್ಜುಗುಜ್ಜಾಗಿದ್ದಾರೆ. ನಿಯಂತ್ರಣಕ್ಕೆ ಸಿಗದ ಟಿಪ್ಪರ್‌ ಐದಾರು ವಾಹನಗಳ ಮೇಲೆ ಹರಿದಿದೆ.

VISTARANEWS.COM


on

tipper road accident
Koo

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ (Varamahalakshmi Festival) ಮರುದಿನವೇ ಬೆಂಗಳೂರಿನ ಮೈಸೂರು ರಸ್ತೆ (Mysore Road) ಸಮೀಪ ದಾರುಣ ದುರಂತ ಘಟಿಸಿದೆ. ಟಿಪ್ಪರ್‌ ಚಾಲಕನೊಬ್ಬ (Tipper Accident) ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿ, ಇಬ್ಬರು ಪುಟ್ಟ ಮಕ್ಕಳನ್ನು ಕೊಂದು (Road Accident) ಹಾಕಿದ್ದಾನೆ. ಮನೆ ಮುಂದೆ ಆಟವಾಡುತ್ತಿದ್ದ ಮಕ್ಕಳು ಯಮನ ಬಾಯಿಗೆ ಆಹಾರವಾಗಿದ್ದಾರೆ.

ಮೈಸೂರು ರಸ್ತೆ ಗುಡ್ಡದಹಳ್ಳಿ ಬಳಿ ಘೋರ ಅಪಘಾತ ಸಂಭವಿಸಿದೆ. ಮಕ್ಕಳು ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ಮೇಲೆ ಕುಳಿತು ಆಟವಾಡುತ್ತಿದ್ದರು. ಯಮನಂತೆ ಬಂದ ಟಿಪ್ಪರ್‌ ಇವರನ್ನು ನೆಲಕ್ಕೆ ಕೆಡವಿದೆ. ಮಕ್ಕಳ ಮೇಲೆ ಹರಿದ ಪರಿಣಾಮ ಮಕ್ಕಳು ನಜ್ಜುಗುಜ್ಜಾಗಿದ್ದಾರೆ. ನಿಯಂತ್ರಣಕ್ಕೆ ಸಿಗದ ಟಿಪ್ಪರ್‌ ಐದಾರು ವಾಹನಗಳ ಮೇಲೆ ಹರಿದಿದೆ.

ಹಾಲೋಬಾಕ್ಸ್ ಸಾಗಿಸುತ್ತಿದ್ದ ಟಿಪ್ಪರ್ ಲಾರಿಯ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ನಜ್ಜಗುಜ್ಜಾಗಿರುವ ಮಕ್ಕಳ ಶವಗಳನ್ನು ಆಂಬ್ಯುಲೆನ್ಸ್‌ಗೆ ಹಾಕಿ ಒಯ್ಯಲಾಗಿದೆ. ಅಪಘಾತದ ದಾರುಣತೆಗೆ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ನಿನ್ನೆಯಷ್ಟೇ ವರಮಹಾಲಕ್ಷ್ಮಿ ಹಬ್ಬದಲ್ಲಿ ಹೊಸ ಬಟ್ಟೆ ತೊಟ್ಟು ಕುಣಿದಾಡಿದ್ದ ಮಕ್ಕಳು ಇಂದು ಶವವಾಗಿದ್ದು, ಇವರ ಕುಟುಂಬಗಳು ಶೋಕದ ಮಡುವಿನಲ್ಲಿವೆ.

ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ವ್ಯಕ್ತಿ ಉಸಿರುಗಟ್ಟಿ ಸಾವು

ಉಡುಪಿ: ಆಸ್ಪತ್ರೆ ಬಳಿ ಕಾರಿನ ಎಲ್ಲ ಗ್ಲಾಸ್‌ಗಳನ್ನು ಮುಚ್ಚಿಕೊಂಡು ಮಲಗಿದ್ದ ಚಾಲಕರೊಬ್ಬರು ಉಸಿರು ಗಟ್ಟಿ ಸಾವಿಗೀಡಾಗಿದ್ದಾರೆ. ಚಿಕ್ಕಮಗಳೂರು ಮೂಲದ ಆನಂದ (37) ಮೃತಪಟ್ಟವರು.

ಇವರು ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ಕಾರಿನಲ್ಲಿ ಕರೆದುಕೊಂಡು ಬಂದಿದ್ದರು. ರೋಗಿಯನ್ನು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲು ಮಾಡಲಾಗಿತ್ತು. ಮಣಿಪಾಲದಲ್ಲಿ ಉಳಿದುಕೊಳ್ಳಲು ಯಾವುದೇ ರೂಮ್ ಸಿಗದ ಕಾರಣ ಮಣಿಪಾಲ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಕಾರು ಪಾರ್ಕ್ ಮಾಡಿ ಒಳಗೆ ಮಲಗಿದ್ದರು.

ಕಾರಿನ ಎಲ್ಲ ಗ್ಲಾಸುಗಳನ್ನು ಏರಿಸಿಕೊಂಡು ಬಂದ್‌ ಮಾಡಿ ಮಲಗಿದ ಪರಿಣಾಮ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಗಮನಿಸಿ, ಇಂದು ಯಾವುದೇ ಆಸ್ಪತ್ರೆಯಲ್ಲಿ ಒಪಿಡಿ ಇಲ್ಲ

ಬೆಂಗಳೂರು: ಕೋಲ್ಕತಾದಲ್ಲಿ ವೈದ್ಯೆ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ವೈದ್ಯರು ನೀಡಿರುವ ದೇಶವ್ಯಾಪಿ ಪ್ರತಿಭಟನೆಗೆ ರಾಜ್ಯದ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರು ಬೆಂಬಲ ಸೂಚಿಸಿದ್ದಾರೆ. ಇಂದು ಬೆಳಗ್ಗೆಯಿಂದ ಭಾನುವಾರ ಬೆಳಗ್ಗೆ 6 ಗಂಟೆಯವರೆಗೆ ಎಲ್ಲ ಖಾಸಗಿ ಆಸ್ಪತ್ರೆಗಳ ಹೊರರೋಗಿ ವಿಭಾಗಗಳು (OPD) ಬಂದ್‌ ಆಗಿರಲಿವೆ.

ರಾಜಧಾನಿಯ ಫ್ರೀಡಂ ಪಾರ್ಕಿನಲ್ಲಿ ಇಂದು ಬೆಳಿಗ್ಗೆ 10 ಗಂಟೆಯಿಂದ ವೈದ್ಯರ ಪ್ರತಿಭಟನೆ ಆರಂಭವಾಗಲಿದೆ. ಇಂದು ಬೆಳಿಗ್ಗೆ 6 ಗಂಟೆಯಿಂದ 24 ಗಂಟೆಗಳ ಕಾಲ ಓಪಿಡಿ ಬಂದ್ ಮಾಡಿ ವೈದ್ಯ ಸಮೂಹ ಪ್ರತಿಭಟನೆಗೆ ಕರೆ ಕೊಟ್ಟಿದೆ. ತುರ್ತು ಸೇವೆ ಹೊರತುಪಡಿಸಿ ಉಳಿದಂತೆ ಓಪಿಡಿ ಬಂದ್ ಇರಲಿದೆ.

ಪ್ರತಿಭಟನೆಗೆ ಸರ್ಕಾರಿ ವೈದ್ಯರು ಕೂಡ ಸಾಥ್ ಕೊಟ್ಟಿದ್ದಾರೆ. ಸರ್ಕಾರಿ ವೈದ್ಯರು ಕಪ್ಪು ಪಟ್ಟಿ ಧರಿಸಿ ಕಾರ್ಯನಿರ್ವಹಣೆ ಮಾಡಲಿದ್ದಾರೆ. ಫ್ರೀಡಂ ಪಾರ್ಕಿನಲ್ಲಿ ಇಂದು ಖಾಸಗಿ ಆಸ್ಪತ್ರೆಯ ವೈದ್ಯರು ಸೇರಿದಂತೆ ಹಲವು ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳು ಭಾಗಿಯಾಗಲಿದ್ದಾರೆ. ಪ್ರತಿಭಟನೆಗೆ ಸಂಸದ ಹಾಗೂ ಖ್ಯಾತ ವೈದ್ಯ ಸಿಎನ್ ಮಂಜುನಾಥ್ ಜೊತೆ ನೀಡಲಿದ್ದಾರೆ.

ಇದನ್ನೂ ಓದಿ: Kolkata Doctor Murder Case: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರಿಗೆ ಮರಣದಂಡನೆ ವಿಧಿಸುವಂತೆ ಬಾಲಿವುಡ್ ತಾರೆಯರ ಆಗ್ರಹ

Continue Reading

ಮಳೆ

Karnataka Weather : ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ; ಆರೆಂಜ್‌ ಅಲರ್ಟ್‌ ಘೋಷಣೆ

Karnataka Weather Forecast : ರಾಜ್ಯಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಕರಾವಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಉತ್ತರ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain alert) ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ರಾಮನಗರದಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಮತ್ತು ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇನ್ನೂ ಉತ್ತರ ಒಳನಾಡಿನಲ್ಲಿ ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ.

ಇದನ್ನೂ ಓದಿ: Electric shock : ಕರೆಂಟ್‌ ಶಾಕ್‌ನಿಂದ ಎಂಜಿನಿಯರ್‌ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಬೆಂಗಳೂರಿನಲ್ಲಿ ಸಾಧಾರಣ ಮಳೆ

ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಆರೆಂಜ್‌ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು 30-40 ಕಿ.ಮೀ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನೂ ಬಾಗಲಕೋಟೆ, ಬೆಳಗಾವಿ, ಧಾರವಾಡ, ರಾಯಚೂರು, ಯಾದಗಿರಿ, ಬಳ್ಳಾರಿ, ದಾವಣಗೆರೆ ಮತ್ತು ಹಾಸನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಇಂದು ಧ್ವಜಾರೋಹಣ ಆಯ್ತು, ನಾಳೆ ವರಮಹಾಲಕ್ಷ್ಮಿ ಹಬ್ಬಕ್ಕೂ ಮಳೆ ಅಡ್ಡಿ; ಬೆಂಗಳೂರು ಸೇರಿ ಕರಾವಳಿ, ಮಲೆನಾಡಿಗೆ ಅಲರ್ಟ್‌

Karnataka Weather Forecast: ವರಮಹಾಲಕ್ಷ್ಮಿ ಹಬ್ಬದ (Varamahalakshim Fest) ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಎಲ್ಲ ಸಾಧ್ಯತೆಯೂ ಇದೆ. ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಲಿದ್ದು, ಆರೆಂಜ್‌ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka Weather Forecast
ಜಲಾವೃತಗೊಂಡ ಸರ್ಕಾರಿ ಪ್ರಾಥಮಿಕ ಶಾಲೆ.. ನಿಂತ ನೀರಲ್ಲೇ ಧ್ವಜಾರೋಹಣ ಮಾಡಿದ ಮಕ್ಕಳು
Koo

ಚಿಕ್ಕೋಡಿ: ಗುರುವಾರ ಸಂಜೆ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಮಳೆ (Rain news) ಅಬ್ಬರ ಜೋರಾಗಿತ್ತು. ಚಿಕ್ಕೋಡಿ, ನಿಪ್ಪಾಣಿ ಹಾಗೂ ಹುಕ್ಕೇರಿ ತಾಲೂಕುಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಕಳೆದ ಒಂದು ವಾರದಿಂದ ವಿರಾಮ ನೀಡಿದ್ದ ಮಳೆ (karnataka weather Forecast) ಅಬ್ಬರಿಸಿತ್ತು.

ಶಾಲಾ ಆವರಣದಲ್ಲಿ ನಿಂತ ನೀರು

ರಾತ್ರಿ ಸುರಿದ ಮಳೆಯು ಅವಾಂತರವೇ ಸೃಷ್ಟಿಯಾಗಿದೆ. ಶಾಲಾ ಆವರಣದಲ್ಲಿ ನಿಂತ ನೀರಲ್ಲೇ ವಿದ್ಯಾರ್ಥಿಗಳು ಧ್ವಜಾರೋಹಣ ನೆರವೇರಿಸಿದರು. ಬಾಗಲಕೋಟೆಯ ಜಮಖಂಡಿಯ ಲಿಂಗದಕಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ.

ಇತ್ತ ನಿನ್ನೆ ಬುಧವಾರ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಬೆಳೆಗಳು ಜಲಾವೃತಗೊಂಡಿತ್ತು. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗುಂಡಾ ಗ್ರಾಮ ಹೊಲಗಳಿಗೆ ಹಳ್ಳದ ನೀರು ನುಗ್ಗಿತ್ತು. ರೈತ ಬಸವರಾಜ್ ಎಂಬುವವರಿಗೆ ಸೇರಿದ ನಾಲ್ಕೈದು ಎಕರೆ ಜಮೀನು ಜಲಾವೃತಗೊಂಡಿದೆ. ಹಿರೆಹಳ್ಳ ಒಡೆದು ಜಮೀನಿಗೆ ನೀರು ನುಗ್ಗಿದ ಪರಿಣಾಮ ಬೋರ್ ವೆಲ್ ಪೈಪ್ ಗಳು ಸೇರಿ ಮೆಕ್ಕೆಜೋಳ ಬೆಳೆ ಕೊಚ್ಚಿ ಹೋಗಿದೆ. ಮಳೆಗಾಲದಲ್ಲಿ ಹಳ್ಳದ ಮೂಲಕ ಗಣಿ ತ್ಯಾಜ್ಯ ಸಹ ಹರಿದು ಬಂದು ಜಮೀನುಗಳಲ್ಲಿ ಶೇಕರಣೆ ಆಗುತ್ತಿದೆ. ಇದರಿಂದಾಗಿ ಭೂಮಿ ಬೆಳೆ ಬೆಳೆಯಲು ಯೋಗ್ಯ ಇಲ್ಲದಂತಾಗಿದೆ.

ಇತ್ತ ಭಾರಿ ಮಳೆಯಿಂದ ನಾಗಲಾಪುರ ಹಳ್ಳ ಮೈದುಂಬಿ ಹರಿಯುತ್ತಿದ್ದು, ನಾಗಲಾಪೂರ- ಬ್ಯಾಲಕುಂದಿ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಿಂದ 5 ಹಳ್ಳಿಗಳ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಸೇತುವೆ ಮೇಲ್ಭಾಗದಲ್ಲಿ 7 ಅಡಿಗಳಷ್ಟು ಹರಿಯುತ್ತಿರುವ ನೀರಿನಿಂದಾಗಿ ನಾಗಲಾಪುರ, ನಾಗಲಾಪುರ ತಾಂಡಾ, ಬ್ಯಾಲಕುಂದಿ, ಗೊಲ್ಲರಹಳ್ಳಿ ಹಾಗೂ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.

ಇದನ್ನೂ ಓದಿ: Electric shock : ಕರೆಂಟ್‌ ಶಾಕ್‌ನಿಂದ ಎಂಜಿನಿಯರ್‌ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಈ ಜಿಲ್ಲೆಗಳಲ್ಲಿ ನಾಳೆ ಭಾರಿ ಮಳೆ

ಶುಕ್ರವಾರದಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಹಾಸನ, ಬಳ್ಳಾರಿ, ತುಮಕೂರು, ಮೈಸೂರು, ಕೊಡಗು ಜಿಲ್ಲೆಗಳಲ್ಲೂ ಪ್ರತ್ಯೇಕವಾಗಿ ಭಾರಿ ವರ್ಷಾಧಾರೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Lakshmi Hebbalkar: ದೇವರ ಹೆಸರಲ್ಲಿ‌ ಶಾಸಕ ಸುನಿಲ್ ಕುಮಾರ್ ರಾಜಕೀಯ; ಲಕ್ಷ್ಮೀ ಹೆಬ್ಬಾಳಕರ್ ಆರೋಪ

Lakshmi Hebbalkar: ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬ ಭಾವನೆಯಲ್ಲಿದ್ದಾರೆ.‌ ದೇವರ-ರಾಮನ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದವರು, ಈಗ ಭಗವಂತನಿಗೆ ಮೋಸ ಮಾಡಿದ್ದಾರೆ. ಮೂರ್ತಿ ಕಂಚಿನದ್ದೋ ಅಥವಾ ಫೈಬರಿನದ್ದೊ‌ ಎಂಬುದು ಜಗಜ್ಜಾಹಿರಾಗಿದೆ. ಬಿಜೆಪಿಗೆ ಒಂದು ಸುಳ್ಳನ್ನು ಸಾವಿರ ಬಾರಿ ಹೇಳಿ ಸತ್ಯ ಮಾಡುವುದು ಕರಗತವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ‌ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದ್ದಾರೆ.

VISTARANEWS.COM


on

Lakshmi Hebbalkar
Koo

ಉಡುಪಿ: ದೇವರ ಹೆಸರಿನಲ್ಲಿ ರಾಜಕೀಯ ಮಾಡಿಕೊಂಡು ಬರುತ್ತಿರುವ ಕಾರ್ಕಳದ ಶಾಸಕ ಸುನಿಲ್ ಕುಮಾರ್, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಮೋಸ ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ‌ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಆರೋಪಿಸಿದ್ದಾರೆ.

ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬ ಭಾವನೆಯಲ್ಲಿದ್ದಾರೆ.‌ ದೇವರ- ರಾಮನ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದವರು, ಈಗ ಭಗವಂತನಿಗೆ ಮೋಸ ಮಾಡಿದ್ದಾರೆ. ಮೂರ್ತಿ ಕಂಚಿನದ್ದೋ ಅಥವಾ ಫೈಬರಿನದ್ದೊ‌ ಎಂಬುದು ಜಗಜ್ಜಾಹಿರಾಗಿದೆ. ಬಿಜೆಪಿಗೆ ಒಂದು ಸುಳ್ಳನ್ನು ಸಾವಿರ ಬಾರಿ ಹೇಳಿ ಸತ್ಯ ಮಾಡುವುದು ಕರಗತವಾಗಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: Independence Day 2024: ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿ ಜನ ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ: ಹೆಬ್ಬಾಳಕರ್

ಈಗಲಾದರೂ ಉಡುಪಿ ಜಿಲ್ಲೆಯ ಜನತೆ ಎಚ್ಚೆತ್ತುಕೊಳ್ಳಬೇಕು. ಇವರು ದೇವರನ್ನೇ ಬಿಡ್ಲಿಲ್ಲ. ಇನ್ನು ಮನುಷ್ಯರು ಯಾವ ಲೆಕ್ಕ? ಬಿಜೆಪಿ ಆಡಳಿತದ ಕೊನೆಯ ಕ್ಯಾಬಿನೆಟ್ ಸಭೆಯಲ್ಲಿ ಗೋಮಾಳದಲ್ಲಿ ಪರಶುರಾಮನ ಮೂರ್ತಿ ಸ್ಥಾಪನೆ ಮಾಡಬಾರದು ಎಂದು ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಆ ಮೂರ್ತಿ ಕಾಮಗಾರಿ ಮುಂದುವರಿಸಬೇಕು ಎಂಬುದು ನಮ್ಮ ಆಶಯ. ಮೂರ್ತಿಯನ್ನು ಪೂರ್ಣಗೊಳಿಸುವುದು ನಮ್ಮ ಉದ್ದೇಶ ಎಂದು ಸಿಎಂ ಹೇಳಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬೈಂದೂರು ಶಾಸಕರ ವಿರುದ್ಧ ಅಸಮಾಧಾನ

ಬೈಂದೂರಿನಲ್ಲಿ ಕಾಂಗ್ರೆಸ್-ಬಿಜೆಪಿ ಜಟಾಪಟಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಹಕ್ಕುಚ್ಯುತಿ ಎಂದರೇನು ಎಂದು ಎರಡು ಬಾರಿ ಶಾಸಕಿಯಾದ ನನಗೂ ಗೊತ್ತು. ಅಧಿಕಾರದ ಲಾಭ ದುರ್ಲಾಭದ ಬಗ್ಗೆ ನನಗೂ ಸಾಮಾನ್ಯ ಜ್ಞಾನ ಇದೆ. ಯಾರ ಹಕ್ಕನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು.

ಅಧಿಕಾರಿಗಳ ಸಭೆ ಎಲ್ಲಿ ಕರೆಯಬೇಕು, ಅಲ್ಲಿಯೇ ಕರೆಯಬೇಕು, ಏನೂ ತೊಂದರೆ ಆಗಲ್ಲ. ತನ್ನ ಖಾಸಗಿ ಸ್ಥಳದಲ್ಲಿ ಅಧಿಕಾರಿಗಳನ್ನು ಸಭೆಗೆ ಕರೆದರೆ ತೊಂದರೆಯಾಗುತ್ತದೆ. ಸರ್ಕಾರಿ ಕಾರ್ಯಕ್ರಮಗಳು ಸರ್ಕಾರಿ ಕಚೇರಿಯಲ್ಲಿ ಆಗುವುದೇ ಒಂದು ಪ್ರೊಟೋಕಾಲ್ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಸಿಎಂ ಹುಲಿ ಇದ್ದಂತೆ

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಷಣದ ವೇಳೆ ಬುಲೆಟ್ ಪ್ರೂಫ್ ತೆಗೆಸಿದ್ದಕ್ಕೆ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ್, ಕರ್ನಾಟಕ ರಾಜ್ಯ ಶಾಂತಿ ಪ್ರಿಯವಾಗಿದೆ. ಕರ್ನಾಟಕ ರಾಜ್ಯದಲ್ಲಿ ಬುಲೆಟ್ ಪ್ರೂಫ್ ಬೇಕಾ? ನಮ್ಮ ಸಿದ್ದರಾಮಯ್ಯನವರು ಯಾವತ್ತೂ ಸ್ಟ್ರಾಂಗ್. ಅದರಲ್ಲಿ ಎರಡು ಮಾತಿಲ್ಲ‌, ಸಿದ್ದರಾಮಯ್ಯ ಅವರಿಗೆ ಹುಲಿ ಎಂದು ಹೆಸರು ಬಂದಿರುವುದು ಇದಕ್ಕೆ ಎಂದು ತಿಳಿಸಿದರು.

ಟೋಲ್ ಗೇಟ್ ಸಮಸ್ಯೆಗೆ ಶೀಘ್ರ ಪರಿಹಾರ

ಕಂಚಿನಡ್ಕ ಬಳಿ ಟೋಲ್‌ ಗೇಟ್‌ಗೆ ವಿರೋಧವಾಗಿರುವ ಬಗ್ಗೆ ನನಗೆ ಮಾಹಿತಿ ಬಂದಿದ್ದು, ನಾಲ್ಕು ಕಿಲೋಮೀಟರ್‌ನಲ್ಲಿ ಎರಡು ಟೋಲ್ ಗೇಟ್ ಬಂದಿರುವುದು ಬಹಳ ಚರ್ಚೆಯಾಗುತ್ತಿದೆ. ಜಿಲ್ಲಾಧಿಕಾರಿ, ಎಸ್‌ಪಿ, ಇತರ ಅಧಿಕಾರಿಗಳ ಜತೆ ನಾನು ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸುವೆ. ಅಲ್ಲಿರುವ ಸಮಸ್ಯೆ ಏನು ಎಂದು ನೋಡುತ್ತೇನೆ. ಎರಡು ಕಡೆ ಸುಂಕ ಕೊಡುವುದು ಜನರಿಗೆ ಸಮಸ್ಯೆಯಾಗುತ್ತದೆ. ಈ ಬಗ್ಗೆ ಸಂಬಂಧಪಟ್ಟ ಸಚಿವರ ಜತೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: Tungabhadra Dam: ತುಂಗಭದ್ರಾ ಡ್ಯಾಂಗೆ ತಾತ್ಕಾಲಿಕ ಗೇಟ್ ಅಳವಡಿಕೆ ಕಾರ್ಯ ಚುರುಕು

ಸೋಮೇಶ್ವರ ಬೀಚ್ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

ಮರವಂತೆ-ಸೋಮೇಶ್ವರ ಬೀಚ್ ಬಂದರು ಕಾಮಗಾರಿ ವಿಳಂಬವಾಗಿರುವುದು ನನ್ನ ಗಮನಕ್ಕೆ ಬಂದಿದ್ದು, ಈ ಸಂಬಂಧ ಗುತ್ತಿಗೆದಾರ ಬಿರಾದಾರ್ ಜತೆ ಮಾತನಾಡಿದ್ದೇನೆ. ಕಾಮಗಾರಿಗೆ ಚುರುಕು ಮುಟ್ಟಿಸುವ ಕೆಲಸ ಮಾಡುತ್ತೇವೆ. ನಿರ್ದಿಷ್ಟ ಅವಧಿಯಲ್ಲಿ ಕೆಲಸ ಮುಗಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

Continue Reading
Advertisement
Bridge Collapse
ವೈರಲ್ ನ್ಯೂಸ್15 mins ago

Bridge Collapse: 9 ವರ್ಷಗಳಿಂದ ನಿರ್ಮಾಣವಾಗುತ್ತಿರುವ ಸೇತುವೆ 3ನೇ ಬಾರಿ ಕುಸಿದು ಬಿತ್ತು; ವಿಡಿಯೊ ನೋಡಿ

Manu Bhaker
ಕ್ರೀಡೆ31 mins ago

Manu Bhaker: 3 ತಿಂಗಳ ರಜೆಯಲ್ಲಿ ಭರತನಾಟ್ಯ, ಕುದುರೆ ಸವಾರಿ, ಸ್ಕೇಟಿಂಗ್ ಕಲಿಯಲಿದ್ದಾರೆ ಮನು ಭಾಕರ್

Physical Abuse
ದೇಶ1 hour ago

Physical Abuse: ದೇಶದಲ್ಲಿ ಪ್ರತಿ ಗಂಟೆಗೊಮ್ಮೆ 4 ಮಹಿಳೆಯರ ಮೇಲೆ ಅತ್ಯಾಚಾರ; ಬೆಚ್ಚಿಬೀಳಿಸುವ ಅಂಕಿ-ಅಂಶ ಬಹಿರಂಗ

Actor Nagabhushan birthday vidhyapathi promo Out
ಸ್ಯಾಂಡಲ್ ವುಡ್2 hours ago

Actor Nagabhushan: ನಾಗಭೂಷಣ್ ಬರ್ತ್‌ಡೇಗೆ ಡಾಲಿ ತಂಡದಿಂದ ಸ್ಪೆಷಲ್ ಗಿಫ್ಟ್‌; ನೋಡಿ ‘ವಿದ್ಯಾಪತಿ’ಯ ಕಿತಾಪತಿ!

Vinesh Phogat
ಕ್ರೀಡೆ2 hours ago

Vinesh Phogat: ತವರಿಗೆ ಮರಳಿದ ವಿನೇಶ್​​​ ಫೋಗಟ್​ಗೆ ಭರ್ಜರಿ ಸ್ವಾಗತ; ಅಭಿಮಾನಿಗಳನ್ನು ಕಂಡು ಕಣ್ಣೀರು

Government Employees
ಕರ್ನಾಟಕ2 hours ago

Government Employees: 7ನೇ ವೇತನ ಆಯೋಗ; ಸರ್ಕಾರಿ ನೌಕರರ ಸಂಘದಿಂದ ಇಂದು ಸಿಎಂ, ಡಿಸಿಎಂಗೆ ಸನ್ಮಾನ; Live ಇಲ್ಲಿದೆ

Viral Video
Latest2 hours ago

Viral Video: ಅಣೆಕಟ್ಟಿನ ಅಂಚಿನಲ್ಲಿ ನಿಂತು ಸ್ಟಂಟ್ ಮಾಡಿದ; ನೀರಿನಲ್ಲಿ ಮುಳುಗಿ ಜೀವ ಕಳೆದುಕೊಂಡ!

Crorepati Sweeper
Latest2 hours ago

Crorepati Sweeper: ಕಸ ಗುಡಿಸುವ ಕಾರ್ಮಿಕನ ಬಳಿ ಇತ್ತು ಐಷಾರಾಮಿ ಕಾರುಗಳು, ಕೋಟಿ ಮೌಲ್ಯದ ಆಸ್ತಿ! ಆತ ಸಂಪಾದಿಸಿದ್ದು ಹೇಗೆ?

70th National Film Awards ational Award winner Madhyantara Short Movie
ಸ್ಯಾಂಡಲ್ ವುಡ್2 hours ago

70th National Film Awards: ಕನ್ನಡಕ್ಕೆ ಸಿಕ್ಕಿದ್ದು ಒಟ್ಟು 7 ಪ್ರಶಸ್ತಿಗಳು; ಜ್ಯೂರಿಗಳನ್ನೇ ಇಂಪ್ರೆಸ್‌ ಮಾಡಿದ ʻಮಧ್ಯಂತರʼ ಕಿರು ಚಿತ್ರ ಬಗ್ಗೆ ನಿಮಗೆಷ್ಟು ಗೊತ್ತು?

Viral Video
Latest2 hours ago

Viral Video: ಅಟಲ್ ಸೇತು ಮೇಲಿಂದ ಸಮುದ್ರಕ್ಕೆ ಹಾರಲೆತ್ನಿಸಿದ ಮಹಿಳೆಯನ್ನು ರಕ್ಷಿಸಿದ್ದು ಹೇಗೆ? ವಿಡಿಯೊ ನೋಡಿ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌