Actor Yash: ಯಶ್‌-ರಾಧಿಕಾ ವರಮಹಾಲಕ್ಷ್ಮಿ ಹಬ್ಬ ಬಲು ಜೋರು; ರಾಕಿಂಗ್‌ ಸ್ಟಾರ್‌ ಲಾಕೆಟ್ ಮೇಲೆ ಎಲ್ಲರ ಕಣ್ಣು! - Vistara News

ಸ್ಯಾಂಡಲ್ ವುಡ್

Actor Yash: ಯಶ್‌-ರಾಧಿಕಾ ವರಮಹಾಲಕ್ಷ್ಮಿ ಹಬ್ಬ ಬಲು ಜೋರು; ರಾಕಿಂಗ್‌ ಸ್ಟಾರ್‌ ಲಾಕೆಟ್ ಮೇಲೆ ಎಲ್ಲರ ಕಣ್ಣು!

Actor Yash: ಯಶ್‌ ತಮ್ಮ ಮನೆಯಲ್ಲಿ ವರಲಕ್ಷ್ಮಿ ಹಬ್ಬದ ಪೂಜೆಯ ಫೋಟೊಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.ಕೆಲವರ ಕಣ್ಣು ಯಶ್ ಕುತ್ತಿಗೆಯಲ್ಲಿ ಧರಿಸಿರುವ ಚಿನ್ನದ ಸರ ಹಾಗೂ ಲಾಕೆಟ್ ಮೇಲೆ ನೆಟ್ಟಿದೆ. ಹುಲಿ ತಲೆಯ ಲಾಕೆಟ್ ಅನ್ನು ಯಶ್ ಹಾಕಿಕೊಂಡಿದ್ದಾರೆ.

VISTARANEWS.COM


on

Actor Yash wears a tiger locket during varamahalakshmi puja
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಶ್ (Actor Yash) ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಿದ್ದಾರೆ. ಇದೀಗ ಯಶ್‌ ತಮ್ಮ ಮನೆಯಲ್ಲಿ ವರಲಕ್ಷ್ಮಿ ಹಬ್ಬದ ಪೂಜೆಯ ಫೋಟೊಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಾಧಿಕಾ ಸೀರೆಯಲ್ಲಿ ಕಂಗೊಳಿಸಿದರೆ ಯಶ್ ಶರ್ಟ್, ಪಂಚೆ-ಶಲ್ಯ ತೊಟ್ಟು ಮಿಂಚಿದ್ದಾರೆ.

ಇದನ್ನೂ ಓದಿ: Shiva Rajkumar: ವರಮಹಾಲಕ್ಷ್ಮಿ ಹಬ್ಬದ ದಿನದಂದೇ ಸೆಟ್ಟೇರಿತು ಶಿವರಾಜ್ ಕುಮಾರ್ 131ನೇ ಸಿನಿಮಾ!

ಟಾಕ್ಸಿಕ್’ ಚಿತ್ರಕ್ಕಾಗಿ ಯಶ್ ಕಾಣಿಸಿಕೊಂಡಿರುವ ಹೊಸ ಹೇರ್‌ಸ್ಟೈಲ್ ಹೈಲೆಟ್ ಎನಿಸಿಕೊಂಡಿದೆ.

ಇನ್ನು ಐರಾ, ಯಥರ್ವ್ ಕೂಡ ಸಾಥ್ ಕೊಟ್ಟಿದ್ದಾರೆ.

ಕೆಲವರ ಕಣ್ಣು ಯಶ್ ಕುತ್ತಿಗೆಯಲ್ಲಿ ಧರಿಸಿರುವ ಚಿನ್ನದ ಸರ ಹಾಗೂ ಲಾಕೆಟ್ ಮೇಲೆ ನೆಟ್ಟಿದೆ. ಹುಲಿ ತಲೆಯ ಲಾಕೆಟ್ ಅನ್ನು ಯಶ್ ಹಾಕಿಕೊಂಡಿದ್ದಾರೆ.

ಇನ್ನು ಯಶ್ ನಟನೆಯ ‘ಕೆಜಿಎಫ್-2’ ಚಿತ್ರಕ್ಕೆ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ 2 ಪ್ರಶಸ್ತಿ ಸಿಕ್ಕಿದೆ. ಅತ್ಯುತ್ತಮ ಕನ್ನಡ ಚಿತ್ರ ಹಾಗೂ ಸಾಹಸ ಸಂಯೋಜನೆಗಾಗಿ ಅನ್ಬುರಿವ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Amrutha Prem: ವರಮಹಾಲಕ್ಷ್ಮೀ ಹಬ್ಬದಂದೇ ಸಿಹಿ ಸುದ್ದಿ ಕೊಟ್ಟ ಅಮೃತಾ ಪ್ರೇಮ್!

Amrutha Prem: ವರಮಹಾಲಕ್ಷ್ಮೀ ಹಬ್ಬದ ಸುಸಂದರ್ಭದಲ್ಲಿ ಚಿತ್ರತಂಡ ಅಮೃತಾ ಪ್ರೇಮ್ ಅವರನ್ನು ಸ್ವಾಗತಿಸಿದೆ. ಸ್ಮೈಲ್ ಗುರು ರಕ್ಷಿತ್ ಗೆ ಜೋಡಿಯಾಗಿ ಅಮೃತಾ ಸಾಥ್‌ ಕೊಡುತ್ತಿದ್ದಾರೆ. ನಿರ್ದೇಶಕ ಮಹೇಶ್ ಬಾಬು ಸಾರಥ್ಯದಲ್ಲಿ ನಡೆದ 15 ದಿನಗಳ ವರ್ಕ್ ಶಾಪ್ ನಲ್ಲಿ ನಾಯಕ ರಕ್ಷಿತ್, ನಾಯಕಿ ಅಮೃತಾ ಪ್ರೇಮ್ ಸೇರಿದಂತೆ ಇಡೀ ತಂಡ ಭಾಗಿಯಾಗಿದೆ. ಇನ್ನೂ ಅಮೃತಾ ಪ್ರೇಮ್ ತಮ್ಮ ಪಾತ್ರಕ್ಕೆ ಬೇಕಾದ ಕಸರತ್ತಿನೊಂದಿಗೆ ಶೀಘ್ರದಲ್ಲಿಯೇ ಚಿತ್ರತಂಡ ಸೇರಿಕೊಳ್ಳಲಿದ್ದಾರೆ.

VISTARANEWS.COM


on

Amrutha Prem gave sweet news on Varamahalakshmi festival!
Koo

ಬೆಂಗಳೂರು: ʻಟಗರು ಪಲ್ಯʼ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಬಲಗಾಲಿಟ್ಟಿದ್ದ ಲವ್ಲಿ ಸ್ಟಾರ್ ಪ್ರೇಮ್ ಮುದ್ದಿನ ಗೊಂಬೆ ಅಮೃತಾ ಪ್ರೇಮ್. ಚೊಚ್ಚಲ ಚಿತ್ರದಲ್ಲಿಯೇ ಭರವಸೆ ಮೂಡಿಸಿದ್ದ ಈ ʻಸೂರ್ಯಕಾಂತಿʼ ಮುಂದಿನ ಸಿನಿಮಾ ಯಾವುದು ಎಂದು ಸಿನಿಮಾ ಪ್ರೇಮಿಗಳು ಎದುರು ನೋಡುತ್ತಿದ್ದರು. ಈಗ ಅದಕ್ಕೆ ಉತ್ತರ ಸಿಕ್ಕಿದೆ. ಅಮೃತಾ ಮತ್ತೊಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಅಳೆದು ತೂಗಿ ಕಥೆ ಆಯ್ಕೆ ಮಾಡಿಕೊಂಡು ನಿರ್ದೇಶಕ ಮಹೇಶ್ ಬಾಬು ಚಿತ್ರದಲ್ಲಿ ನಾಯಕಿಯಾಗಿ ನಟಿಸಲು ಸಮ್ಮತಿ ಸೂಚಿಸಿದ್ದಾರೆ. ವರಮಹಾಲಕ್ಷ್ಮೀ ಹಬ್ಬದ ಸುಸಂದರ್ಭದಲ್ಲಿ ಚಿತ್ರತಂಡ ಅಮೃತಾ ಪ್ರೇಮ್ ಅವರನ್ನು ಸ್ವಾಗತಿಸಿದೆ. ಸ್ಮೈಲ್ ಗುರು ರಕ್ಷಿತ್ ಗೆ ಜೋಡಿಯಾಗಿ ಅಮೃತಾ ಸಾಥ್‌ ಕೊಡುತ್ತಿದ್ದಾರೆ. ನಿರ್ದೇಶಕ ಮಹೇಶ್ ಬಾಬು ಸಾರಥ್ಯದಲ್ಲಿ ನಡೆದ 15 ದಿನಗಳ ವರ್ಕ್ ಶಾಪ್ ನಲ್ಲಿ ನಾಯಕ ರಕ್ಷಿತ್, ನಾಯಕಿ ಅಮೃತಾ ಪ್ರೇಮ್ ಸೇರಿದಂತೆ ಇಡೀ ತಂಡ ಭಾಗಿಯಾಗಿದೆ. ಇನ್ನೂ ಅಮೃತಾ ಪ್ರೇಮ್ ತಮ್ಮ ಪಾತ್ರಕ್ಕೆ ಬೇಕಾದ ಕಸರತ್ತಿನೊಂದಿಗೆ ಶೀಘ್ರದಲ್ಲಿಯೇ ಚಿತ್ರತಂಡ ಸೇರಿಕೊಳ್ಳಲಿದ್ದಾರೆ.

ಸೌತ್ ಫಿಲ್ಮಂ ಫೇರ್ ಪ್ರಶಸ್ತಿ ಮುತ್ತಿಟ್ಟ ಅಮೃತಾ

ಅಮೃತಾ ಪ್ರೇಮ್ ನಾಯಕಿಯಾಗಿ ಅಭಿನಯಿಸಿದ್ದ ಟಗರು ಪಲ್ಯ ಸಿನಿಮಾ ವಿಶೇಷವಾಗಿಯೇ ಇತ್ತು. ಹಳ್ಳಿ ಹುಡುಗಿಯಾಗಿಯೆ ಅಮೃತಾ ಪ್ರೇಮ್ ತುಂಬಾನೆ ಹೆಚ್ಚು ಗಮನ ಸೆಳೆದಿದ್ದರು. ಮೊದಲ ಚಿತ್ರದಲ್ಲಿಯೇ ದೊಡ್ಡ ಕಲಾವಿದರ ಮುಂದೆ ಅಭಿನಯಿಸಿ ಸೈ ಎನಿಸಿಕೊಂಡಿದ್ದರು. ಚಿತ್ರದ ಮೂಲಕವೇ ಸೌತ್ ಫಿಲ್ಮಂ ಫೇರ್ ಪ್ರಶಸ್ತಿಯನ್ನ ಪಡೆದುಕೊಂಡಿದ್ದಾರೆ. ದಕ್ಷಿಣದ ವಿವಿಧ ಭಾಷೆಯ ಸಿನಿಮಾಗಳಿಗೆ ವಿವಿಧ ವಿಭಾಗದಲ್ಲಿಯೇ ಪ್ರಶಸ್ತಿಯನ್ನ ಕೊಡಲಾಗುತ್ತದೆ. ಆ ರೀತಿ ಕನ್ನಡದ ಟಗರು ಪಲ್ಯದ ಚಿತ್ರದಲ್ಲಿ ನಟಿಸಿರೋ ನಟಿ ಅಮೃತಾ ಪ್ರೇಮ್, ಅತ್ಯುತ್ತಮ ಡೆಬ್ಯು ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: Amrutha Prem: ಜನುಮದಿನದ ಸಂಭ್ರಮದಲ್ಲಿ ‘ಟಗರು ಪಲ್ಯ’ ಬೆಡಗಿ ಅಮೃತಾ ಪ್ರೇಮ್

ಕಿರುಚಿತ್ರ, ಧಾರಾವಾಹಿ, ರಿಯಾಲಿಟಿ ಶೋ ಅಂತಿದ್ದ ಸ್ಮೈಲ್ ಗುರು ರಕ್ಷಿತ್ ನಾಯಕನಾಗಿ ಇಂಡಸ್ಟ್ರಿಗೆ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಇವರ ಚೊಚ್ಚಲ ಸಿನಿಮಾಗೆ ‘ಆಕಾಶ್’, ‘ಅರಸು’ ಅಂತಹ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿರುವ ಮಹೇಶ್ ಬಾಬು ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಸದಭಿರುಚಿಯ ಸಿನಿಮಾ ಕೊಡಬೇಕು ಎಂಬ ಉದ್ದೇಶದಿಂದ ಎಂಎಂಎಂ ಪಿಕ್ಚರ್ಸ್ ಹಾಗೂ ಎ ಕ್ಲಾಸ್ ಸಿನಿ ಫಿಲ್ಮಂಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಈ ನಿರ್ಮಾಣ ಸಂಸ್ಥೆಯಡಿ ಅನುರಾಗ್ ಆರ್ ಹಾಗೂ ಮಿಥುನ್ ಕೆ.ಎಸ್ ಸೇರಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಮಾಡುತ್ತಿದ್ದರೆ, ಸತ್ಯ ಅವರು ಛಾಯಾಗ್ರಹಣ ನಿರ್ವಹಿಸಲಿದ್ದಾರೆ. ಸತೀಶ್ ಚಂದ್ರಯ್ಯ ಅವರ ಸಂಕಲನ ಈ ಚಿತ್ರಕ್ಕಿರಲಿದೆ. ನಾಯಕ ಸ್ಮೈಲ್ ಗುರು ರಕ್ಷಿತ್ ಕಥೆ ಬರೆದಿದ್ದು, ವಿಜಯ್ ಈಶ್ವರ್ ಸಂಭಾಷಣೆ ಒದಗಿಸಿದ್ದಾರೆ. ಸದ್ಯ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ.

Continue Reading

ಸ್ಯಾಂಡಲ್ ವುಡ್

Actor Nagabhushan: ನಾಗಭೂಷಣ್ ಬರ್ತ್‌ಡೇಗೆ ಡಾಲಿ ತಂಡದಿಂದ ಸ್ಪೆಷಲ್ ಗಿಫ್ಟ್‌; ನೋಡಿ ‘ವಿದ್ಯಾಪತಿ’ಯ ಕಿತಾಪತಿ!

Actor Nagabhushan: ಇಕ್ಕಟ್ ಸಿನಿಮಾ ಸೂತ್ರಧಾರರಾದ ಇಶಾಂ ಮತ್ತು ಹಸೀಂ ಖಾನ್ ವಿದ್ಯಾಪತಿ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಜೊತೆಗೆ ಸಿನಿಮಾವನ್ನು ಇವರೆ ಬರೆದು, ಸಂಕಲನದ ಜವಾಬ್ದಾರಿಯನ್ನು ತಾವೇ ಹೊತ್ತುಕೊಂಡಿದ್ದಾರೆ. ಟಗರು ಪಲ್ಯ ಮೂಲಕ ಮಸ್ತ್ ಮನರಂಜನೆ ನೀಡಿದ್ದ ನಾಗಭೂಷಣ್ ಮತ್ತೊಮ್ಮೆ ಡಾಲಿ ಧನಂಜಯ್ ಜೊತೆ ಕೈ ಜೋಡಿಸಿದ್ದಾರೆ.

VISTARANEWS.COM


on

Actor Nagabhushan birthday vidhyapathi promo Out
Koo

ಬೆಂಗಳೂರು: ಡಾಲಿ ಪಿಕ್ಚರ್ಸ್ (Actor Nagabhushan) ಕನ್ನಡ ಚಿತ್ರಪ್ರೇಮಿಗಳಿಗೆ ಸದಾಭಿರುಚಿ ಸಿನಿಮಾಗಳನ್ನು ಉಣಬಡಿಸುತ್ತಿದೆ. ಕಳೆದ ವರ್ಷ ಟಗರು ಪಲ್ಯದಂತಹ ಫ್ಯಾಮಿಲಿ ಕಥೆಯನ್ನು ಪ್ರೇಕ್ಷಕರಿಗೆ ನೀಡಿದ್ದ ಈ ಸಂಸ್ಥೆ ಈಗ ʻವಿದ್ಯಾಪತಿʼ ಎಂಬ ಹೊಸ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ವಿದ್ಯಾಪತಿಯ ಮೇಕಿಂಗ್, ಫೋಟೋಗಳು ಈಗಾಗಲೇ ನಿರೀಕ್ಷೆ ಹೆಚ್ಚಿಸಿವೆ. ಇದೀಗ ಚಿತ್ರತಂಡ ವಿದ್ಯಾಪತಿಯ ಕಿತಾಪತಿ ಝಲಕ್ ಬಿಟ್ಟು ಮತ್ತಷ್ಟು ಥ್ರಿಲ್ ಹೆಚ್ಚಿಸಿದೆ.

ವಿದ್ಯಾಪತಿಯಾಗಿ ಟಗರು ಪಲ್ಯ ನಾಯಕ ನಾಗಭೂಷಣ್ ಬಣ್ಣ ಹಚ್ಚಿದ್ದಾರೆ. ಅವರ ಹುಟ್ಟುಹಬ್ಬದ ವಿಶೇಷವಾಗಿ ಚಿತ್ರತಂಡ ವಿದ್ಯಾಪತಿ ಚಿತ್ರದ ಪ್ರೋಮೋ ಅನಾವರಣ ಮಾಡಿದೆ. ಜೇಬು ತುಂಬ ಕಾಸಿರೋನು ಕೊಟ್ಯಾಧಿಪತಿ..ನಿಮ್ಮನ್ನೆಲ್ಲ ಹೊಟ್ಟೆತುಂಬ ನಗಿಸುವವನೇ ನಮ್ಮ ‘ವಿದ್ಯಾಪತಿ’ ಅಂತಾ ಹೀರೋನನ್ನು ಪರಿಚಯಿಸಿದೆ. ಕರಾಟೆ ಕಿಂಗ್ ವೇಷ ತೊಟ್ಟಿರುವ ನಾಗಭೂಷಣ್ ಮಾಡುವ ಕಿತಾಪತಿ ತುಣುಕುವೊಂದನ್ನು ಬಿಡುಗಡೆ ಮಾಡಿದೆ. ಕರಾಟೆ ಕಲಿಯುವ ವೇಳೆ ವಿದ್ಯಾಪತಿ ಮಾಡುವ ಯಡವಟ್ಟು ಪ್ರೇಕ್ಷಕರಿಗೆ ಮುಖದ ಮೇಲೆ ಮಂದಹಾಸ ಮೂಡಿಸುತ್ತದೆ.

ಇಕ್ಕಟ್ ಸಿನಿಮಾ ಸೂತ್ರಧಾರರಾದ ಇಶಾಂ ಮತ್ತು ಹಸೀಂ ಖಾನ್ ವಿದ್ಯಾಪತಿ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಜೊತೆಗೆ ಸಿನಿಮಾವನ್ನು ಇವರೆ ಬರೆದು, ಸಂಕಲನದ ಜವಾಬ್ದಾರಿಯನ್ನು ತಾವೇ ಹೊತ್ತುಕೊಂಡಿದ್ದಾರೆ. ಟಗರು ಪಲ್ಯ ಮೂಲಕ ಮಸ್ತ್ ಮನರಂಜನೆ ನೀಡಿದ್ದ ನಾಗಭೂಷಣ್ ಮತ್ತೊಮ್ಮೆ ಡಾಲಿ ಧನಂಜಯ್ ಜೊತೆ ಕೈ ಜೋಡಿಸಿದ್ದಾರೆ.

ಇದನ್ನೂ ಓದಿ: Shiva Rajkumar: ವರಮಹಾಲಕ್ಷ್ಮಿ ಹಬ್ಬದ ದಿನದಂದೇ ಸೆಟ್ಟೇರಿತು ಶಿವರಾಜ್ ಕುಮಾರ್ 131ನೇ ಸಿನಿಮಾ!

ನಾಗಭೂಷಣ್ ಈ ಚಿತ್ರದಲ್ಲಿ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಲವಿತ್ ಛಾಯಾಗ್ರಹಣ, ಡಾಸ್ ಮೋಡ್ ಸಂಗೀತ ನಿರ್ದೇಶನ, ಮುರುಳಿ ನೃತ್ಯ ನಿರ್ದೇಶನ, ಸುಜಿತ್ ವೆಂಕಟರಾಮಯ್ಯ ಸಾಹಿತ್ಯ, ಅರ್ಜುನ್ ಮಾಸ್ಟರ್ ಆಕ್ಷನ್ ವಿದ್ಯಾಪತಿ ಸಿನಿಮಾಕ್ಕಿದೆ. ಈ ಚಿತ್ರದಲ್ಲಿ ನಾಗಭೂಷಣ್ ಗೆ ನಾಯಕಿಯಾಗಿ ಉಪಾಧ್ಯಕ್ಷ ಬ್ಯೂಟಿ ಮಲೈಕಾ ವಸೂಪಾಲ್ ಕಾಣಿಸಿಕೊಳ್ಳಲಿದ್ದಾರೆ. ರಂಗಾಯಣ ರಘು ಕೂಡ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಸದ್ಯ ವಿದ್ಯಾಪತಿ ಶೂಟಿಂಗ್ ಭರದಿಂದ ಸಾಗುತ್ತಿದೆ.

Continue Reading

ಸ್ಯಾಂಡಲ್ ವುಡ್

70th National Film Awards: ಕನ್ನಡಕ್ಕೆ ಸಿಕ್ಕಿದ್ದು ಒಟ್ಟು 7 ಪ್ರಶಸ್ತಿಗಳು; ಜ್ಯೂರಿಗಳನ್ನೇ ಇಂಪ್ರೆಸ್‌ ಮಾಡಿದ ʻಮಧ್ಯಂತರʼ ಕಿರು ಚಿತ್ರ ಬಗ್ಗೆ ನಿಮಗೆಷ್ಟು ಗೊತ್ತು?

70th National Film Awards: ನಾನ್ ಫೀಚರ್ ವಿಭಾಗದಲ್ಲಿ ‘ಮಧ್ಯಂತರ’ ಕಿರುಚಿತ್ರ ಬಹುವಾಗಿ ಗಮನ ಸೆಳೆದಿದೆ. ಪ್ರಶಸ್ತಿ ಘೋಷಿಸಿದ ಜ್ಯೂರಿಗಳು ಸಹ ‘ಮಧ್ಯಂತರ’ ಸಿನಿಮಾವನ್ನು ಬಹುವಾಗಿ ಕೊಂಡಾಡಿದ್ದಾರೆ. ಈ ಸಿನಿಮಾ ವಿಶೇಷತೆ ಏನು ತಿಳಿಯಲು ಮುಂದೆ ಓದಿ..

VISTARANEWS.COM


on

70th National Film Awards ational Award winner Madhyantara Short Movie
Koo

ಬೆಂಗಳೂರು: 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು (70th National Film Awards) ಘೋಷಣೆಯಾಗಿವೆ. ಫೀಚರ್‌ ಫಿಲ್ಮ್ಸ್‌ ವಿಭಾಗದಲ್ಲಿ ಕನ್ನಡ ಚಿತ್ರರಂಗಕ್ಕೆ ಒಟ್ಟು ನಾಲ್ಕು ಪ್ರಶಸ್ತಿಗಳು ಲಭಿಸಿವೆ. ಅತ್ಯುತ್ತಮ ಪ್ರಾದೇಶಿಕ ಚಿತ್ರಗಳ ಪೈಕಿ ‘ಅತ್ಯುತ್ತಮ ಕನ್ನಡ ಸಿನಿಮಾ’ ಪ್ರಶಸ್ತಿ ‘ಕೆಜಿಎಫ್‌ ಚಾಪ್ಟರ್ 2’ ಪಾಲಾಗಿದೆ. ‘ಕೆಜಿಎಫ್ ಚಾಪ್ಟರ್‌ 2’ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದವರು ನಿರ್ದೇಶಕ ಪ್ರಶಾಂತ್ ನೀಲ್‌. ಚಿತ್ರವನ್ನ ನಿರ್ಮಿಸಿದವರು ಹೊಂಬಾಳೆ ಫಿಲ್ಮ್ಸ್. ನಾನ್ ಫೀಚರ್ ವಿಭಾಗದಲ್ಲಿ ‘ಮಧ್ಯಂತರ’ ಕಿರುಚಿತ್ರ ಬಹುವಾಗಿ ಗಮನ ಸೆಳೆದಿದೆ. ಪ್ರಶಸ್ತಿ ಘೋಷಿಸಿದ ಜ್ಯೂರಿಗಳು ಸಹ ‘ಮಧ್ಯಂತರ’ ಸಿನಿಮಾವನ್ನು ಬಹುವಾಗಿ ಕೊಂಡಾಡಿದ್ದಾರೆ. ಈ ಸಿನಿಮಾ ವಿಶೇಷತೆ ಏನು ತಿಳಿಯಲು ಮುಂದೆ ಓದಿ..

ಮಧ್ಯಂತರ ಕಿರು ಚಿತ್ರ

ಇದು ಸಿನಿಮಾ ಪ್ರೇಮಿಗಳಿಬ್ಬರ ಕಥೆ. ಬಂಟ್ವಾಳದ ದಿನೇಶ್ ಅವರು ಸ್ವತಃ ಸಿನಿಮಾ ಪ್ರಿಯರು. 27 ವರ್ಷಗಳಿಂದಲೂ ಅವರು ಮನೊರಂಜನಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.2022ರ ಮಾರ್ಚ್ ತಿಂಗಳಲ್ಲಿ ‘ಮಧ್ಯಂತರ’ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡಿದರು ದಿನೇಶ್ ಶೆಣೈ.ಸಿನಿಮಾದ ನಿರೂಪಣೆ ತಮಾಷೆಯ ಧಾಟಿಯಲ್ಲಿದ್ದರೂ ಗಂಭೀರವಾದ ವಸ್ತು ವಿಷಯ ಒಳಗೊಂಡಿದೆ. ಮುಖ್ಯ ಪಾತ್ರದಲ್ಲಿ ದಾವಣಗೆರೆಯ ವೀರೇಶ್ ಹಾಗೂ ರಂಗಭೂಮಿ ಹಿನ್ನೆಲೆಯ ಅಜಯ್ ನೀನಾಸಂ ನಟಿಸಿದ್ದಾರೆ.

70th National Film Awards : ಕನ್ನಡಿಗರಿಗೆ ಹೆಮ್ಮೆ ತಂದ ರಿಷಭ್​ ಶೆಟ್ಟಿ, ಕೆಜಿಎಫ್​​; ಮಲಯಾಳಂನ ‘ಆಟಂ’ ಅತ್ಯುತ್ತಮ ಸಿನೆಮಾ; ಸಂಪೂರ್ಣ ಲಿಸ್ಟ್‌ ಇಲ್ಲಿದೆಇದನ್ನೂ ಓದಿ:

ಹೋಟೆಲ್ ಸಪ್ಲೈಯರ್​ಗಳಾಗಿ ಕೆಲಸ ಮಾಡುವ ಇಬ್ಬರಿಗೆ ಸಿನಿಮಾ ಅಂದರೆ ಪಂಚ ಪ್ರಾಣ. ಡಾ ರಾಜ್​ಕುಮಾರ್ ಇವರ ಬಲು ಮೆಚ್ಚಿನ ನಟ. ಸಿನಿಮಾ ನೋಡಿ ಬಂದು ಅದನ್ನು ಗೆಳೆಯರ ಬಳಿ ಹೇಳುವುದು ಇವರ ಮೆಚ್ಚಿನ ಅಭ್ಯಾಸ. ಇದೇ ಪ್ರತಿಭೆಯಿಂದ ಇವರು ಸಿನಿಮಾ ನಿರ್ಮಾಣಕ್ಕೂ ಇಳಿಯುತ್ತಾರೆ. ನಿರ್ಮಾಪಕನಿಗೆ ಇವರು ಹೇಳಿದ ಕತೆಯೊಂದು ಒಪ್ಪಿಗೆ ಆಗಿಬಿಡುತ್ತದೆ. ಮುಂದೇನು? ಎಂದು ತಿಳಿಯಲು ಕಿರು ಚಿತ್ರ ನೋಡಬೇಕು.

16 ಎಂಎಂ ಕ್ಯಾಮೆರಾ ನಲ್ಲಿ ಕೊಡಾಕ್ ರೀಲ್ಸ್​ ಬಳಸಿ ಚಿತ್ರೀಕರಣ ಮಾಡಲಾಗಿದೆ. ಬಳಿಕ ಡಿಜಿಟಲ್‌ ಅಲ್ಲಿ ಕನ್ವರ್ಟ್‌ ಮಾಡಲಾಗಿದೆ. 11 ದಿನದಲ್ಲಿ ಸಿನಿಮಾದ ಚಿತ್ರೀಕರಣವನ್ನು ದಿನೇಶ್ ಪೂರ್ತಿ ಮಾಡಿದ್ದಾರೆ.

ಉಳಿದ ಪ್ರಶಸ್ತಿಗಳು

ಅತ್ಯುತ್ತಮ ಆಕ್ಷನ್ ಡೈರೆಕ್ಷನ್ ಪ್ರಶಸ್ತಿ ಅರ್ಥಾತ್ ಬೆಸ್ಟ್ ಸ್ಟಂಟ್ ಕೊರಿಯೋಗ್ರಫಿ ಅವಾರ್ಡ್‌ ಸಹ ‘ಕೆಜಿಎಫ್‌ ಚಾಪ್ಟರ್ 2’ ಸಿನಿಮಾದ ಪಾಲಾಗಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರಕ್ಕೆ Anbariv ಸ್ಟಂಟ್ಸ್‌ ಕೊರಿಯೋಗ್ರಫಿ ಮಾಡಿದ್ದರು. ಇದೀಗ Anbariv ಅವರಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ.ಇನ್ನೂ ಅತ್ಯುತ್ತಮ ನಟ ಪ್ರಶಸ್ತಿ ರಿಷಬ್ ಶೆಟ್ಟಿ ಅವರಿಗೆ ಒಲಿದು ಬಂದಿದೆ. ‘ಕಾಂತಾರ’ ಚಿತ್ರದಲ್ಲಿನ ಆಕ್ಟಿಂಗ್‌ಗಾಗಿ ರಿಷಬ್ ಶೆಟ್ಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.ರಿಷಬ್ ಶೆಟ್ಟಿ ಅಭಿನಯಿಸಿ, ನಿರ್ದೇಶಿಸಿರುವ ‘ಕಾಂತಾರ’ ಚಿತ್ರ ‘ಭರಪೂರ ಮನರಂಜನೆ ನೀಡುವ ಅತ್ಯುತ್ತಮ ಜನಪ್ರಿಯ ಚಿತ್ರ’ ಪ್ರಶಸ್ತಿ ಸಿಕ್ಕಿದೆ.

ನಾನ್ ಫೀಚರ್‌ ಫಿಲ್ಮ್ಸ್ ವಿಭಾಗದಲ್ಲಿ ಕನ್ನಡ ಚಿತ್ರರಂಗಕ್ಕೆ ಒಟ್ಟು 3 ಪ್ರಶಸ್ತಿಗಳು ಲಭಿಸಿವೆ. ‘ಅತ್ಯುತ್ತಮ ಸಂಕಲನ’ ಪ್ರಶಸ್ತಿಗೆ ‘ಮಧ್ಯಂತರ’ ಚಿತ್ರಕ್ಕಾಗಿ ಸಂಕಲನಕಾರ (ಎಡಿಟರ್) ಸುರೇಶ್ ಅರಸ್‌ ಭಾಜನರಾಗಿದ್ದಾರೆ.ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಚಲನಚಿತ್ರ ಪ್ರಶಸ್ತಿ ಕನ್ನಡದ ‘ರಂಗ ವೈಭೋಗ’ ಚಿತ್ರದ ಪಾಲಾಗಿದೆ. ಈ ಚಿತ್ರವನ್ನ ಸುನೀಲ್ ಪುರಾಣಿಕ್ ನಿರ್ಮಿಸಿ, ನಿರ್ದೇಶಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Kannada New Movie: ಆಗಸ್ಟ್ 19 ರಂದು ʻಲಂಗೋಟಿ ಮ್ಯಾನ್ʼ ಚಿತ್ರದ ಟ್ರೈಲರ್‌ ಬಿಡುಗಡೆ ಸಮಾರಂಭ; ಡಿ.ಕೆ.ಶಿವಕುಮಾರ್‌ಗೆ ಆಹ್ವಾನ ಕೊಟ್ಟ ಚಿತ್ರತಂಡ!

Kannada New Movie: ಕರ್ನಾಟಕದ ಉಪ ಮುಖ್ಯಮಂತ್ರಿಗಳು ತಮ್ಮ ಕಾರ್ಯದ ಒತ್ತಡದ ನಡುವೆಯೂ ನಮ್ಮನ್ನು ಪ್ರೀತಿಯಿಂದ ಮಾತನಾಡಿಸಿ, ಸಮಾರಂಭಕ್ಕೆ ಬರುತ್ತೇನೆ ಎಂದು ಹೇಳಿರುವುದು. ನಟ ಶರಣ್ ಕೂಡ ನಮ್ಮ ಆತ್ಮೀಯ ಆಹ್ವಾನಕ್ಕೆ ಸ್ಪಂದಿಸಿ ಸಮಾರಂಭಕ್ಕೆ ತಪ್ಪದೇ ಬರುವುದಾಗಿ ಹೇಳಿರುವುದು ನಮ್ಮ ತಂಡಕ್ಕೆ ಸಂತೋಷ ತಂದಿದೆ. ಇಂತಹ ದಿಗ್ಗಜರು ನಮ್ಮ ಆಹ್ವಾನಕ್ಕೆ ತೋರಿದ ಪ್ರೀತಿಗೆ ಮನತುಂಬಿ ಬಂದಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

VISTARANEWS.COM


on

Kannada New Movie Langoti man trailer Out d k shivakumar invite
Koo

ಬೆಂಗಳೂರು: ತನು ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ (Kannada New Movie) ಹಾಗೂ ಸಂಜೋತ ಭಂಡಾರಿ ಕಥೆ ಬರೆದು ನಿರ್ದೇಶಿಸಿರುವ “ಲಂಗೋಟಿ ಮ್ಯಾನ್” ಚಿತ್ರದ ಟ್ರೈಲರ್‌ ಬಿಡುಗಡೆ ಆಗಸ್ಟ್ 19 ರಂದು ನಡೆಯಲಿದೆ. ಈ ಸಮಾರಂಭಕ್ಕೆ ಸನ್ಮಾನ್ಯ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್, ಓ.ಮಂಜುನಾಥ್ ಸೌತ್ ಡಿಸಿಸಿ ಪ್ರೆಸಿಡೆಂಟ್ ಬೆಂಗಳೂರು ಹಾಗೂ ನಟ ಶರಣ್ ಅವರನ್ನು ಚಿತ್ರತಂಡ ಆತ್ಮೀಯವಾಗಿ ಆಹ್ವಾನಿಸಿದೆ.

ಹೊಸತಂಡದ ಪ್ರೀತಿಯ ಆಹ್ವಾನವನ್ನು ಒಪ್ಪಿಕೊಂಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್, ಓ.ಮಂಜುನಾಥ್ ಸೌತ್ ಡಿಸಿಸಿ ಪ್ರೆಸಿಡೆಂಟ್ ಹಾಗೂ ನಟ ಶರಣ್ ಅವರು ಸಮಾರಂಭಕ್ಕೆ ಬರುವುದಾಗಿ ಹೇಳಿದ್ದಾರೆ.

ಕರ್ನಾಟಕದ ಉಪ ಮುಖ್ಯಮಂತ್ರಿಗಳು ತಮ್ಮ ಕಾರ್ಯದ ಒತ್ತಡದ ನಡುವೆಯೂ ನಮ್ಮನ್ನು ಪ್ರೀತಿಯಿಂದ ಮಾತನಾಡಿಸಿ, ಸಮಾರಂಭಕ್ಕೆ ಬರುತ್ತೇನೆ ಎಂದು ಹೇಳಿರುವುದು. ನಟ ಶರಣ್ ಕೂಡ ನಮ್ಮ ಆತ್ಮೀಯ ಆಹ್ವಾನಕ್ಕೆ ಸ್ಪಂದಿಸಿ ಸಮಾರಂಭಕ್ಕೆ ತಪ್ಪದೇ ಬರುವುದಾಗಿ ಹೇಳಿರುವುದು ನಮ್ಮ ತಂಡಕ್ಕೆ ಸಂತೋಷ ತಂದಿದೆ. ಇಂತಹ ದಿಗ್ಗಜರು ನಮ್ಮ ಆಹ್ವಾನಕ್ಕೆ ತೋರಿದ ಪ್ರೀತಿಗೆ ಮನತುಂಬಿ ಬಂದಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

ಇದನ್ನೂ ಓದಿ: Shiva Rajkumar: ವರಮಹಾಲಕ್ಷ್ಮಿ ಹಬ್ಬದ ದಿನದಂದೇ ಸೆಟ್ಟೇರಿತು ಶಿವರಾಜ್ ಕುಮಾರ್ 131ನೇ ಸಿನಿಮಾ!

ಇದನ್ನೂ ಓದಿ: Kannada New Movie: ‘ರಕ್ಕಸಪುರದೋಳ್’ ರಾಜ್ ಬಿ ಶೆಟ್ಟಿ; ರವಿ ಸಾರಂಗ ನಿರ್ದೇಶನದ ಈ ಚಿತ್ರಕ್ಕೆ ರಕ್ಷಿತ-ಪ್ರೇಮ್ ಸಾಥ್

ಆಕಾಶ್ ರಾಂಬೋ, ಧೀರೇಂದ್ರ, ಮಹಾಲಕ್ಷ್ಮಿ, ಹುಲಿ ಕಾರ್ತಿಕ್, ಗಿಲ್ಲಿ ನಟ, ಸಂಹಿತ ವಿನ್ಯ, ಸ್ನೇಹ ಖುಷಿ, ಪವನ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

Continue Reading
Advertisement
Saif Ali Khan introduced as kushti expert Bhaira
ಕಾಲಿವುಡ್2 mins ago

Devara Movie: ʻಭೈರʼ ಪಾತ್ರದಲ್ಲಿ ಅಬ್ಬರಿಸಿದ ಸೈಫ್ ಅಲಿ ಖಾನ್ ; ʻದೇವರʼ ಹೊಸ ಟೀಸರ್‌ ಔಟ್‌!

Kolkata Doctor Murder Case
ದೇಶ4 mins ago

Kolkata Doctor Murder Case: ಕರ್ತವ್ಯಕ್ಕೆ ಹಾಜರಾಗಲು ಪ್ರತಿಭಟನಾನಿರತ ವೈದ್ಯರಲ್ಲಿ ಕೇಂದ್ರದ ಮನವಿ

CM Siddaramaiah Ashok
ಪ್ರಮುಖ ಸುದ್ದಿ15 mins ago

CM Siddaramaiah: ರಾಜ್ಯಪಾಲರ ಆದೇಶ ಬಿಜೆಪಿ ಪಾದಯಾತ್ರೆಗೆ ದೊರೆತ ಯಶಸ್ಸು, ಮುಡಾ ತನಿಖೆ ಸಿಬಿಐಗೆ ಕೊಡಲಿ: ಆರ್‌. ಅಶೋಕ್

sexual abuse
ಕ್ರೈಂ21 mins ago

sexual abuse: ಪ್ರತಿ ಗಂಟೆಗೆ ನಡೆಯುವ 4 ಅತ್ಯಾಚಾರದಲ್ಲಿ 3 ಪ್ರಕರಣಗಳ ಆರೋಪಿಗಳು ಪರಿಚಿತರೇ! ಆಘಾತಕಾರಿ ಅಂಕಿಅಂಶ

Bajrang Punia
ಕ್ರೀಡೆ38 mins ago

Bajrang Punia: ತ್ರಿವರ್ಣ ಧ್ವಜದ ಪೋಸ್ಟರ್​ ಮೇಲೆ ಕಾಲಿಟ್ಟ ಬಜರಂಗ್ ಪೂನಿಯಾ; ವಿಡಿಯೊ ವೈರಲ್

DK Shivakumar and CM Siddaramaiah
ಪ್ರಮುಖ ಸುದ್ದಿ38 mins ago

CM Siddaramaiah: ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೀತಾರಾ? ಡಿಕೆ ಶಿವಕುಮಾರ್ ಏನಂದ್ರು?

cm siddaramaiah 1
ಪ್ರಮುಖ ಸುದ್ದಿ42 mins ago

CM Siddaramaiah: ಸರ್ಕಾರಿ ನೌಕರರ ಹಿತಾಸಕ್ತಿ ಕಾಯಲು ನಾನು ಸದಾ ಸಿದ್ಧ: ಸಿಎಂ ಸಿದ್ದರಾಮಯ್ಯ

Bengaluru Power Cut
ಬೆಂಗಳೂರು47 mins ago

Bengaluru Power Cut: ಗಮನಿಸಿ… ಬೆಂಗಳೂರಿನ ಈ ಪ್ರದೇಶಗಳಲ್ಲಿ ಆ.18ರಂದು ಕರೆಂಟ್‌ ಇರಲ್ಲ

Viral Video
Latest48 mins ago

Viral Video: 12 ವರ್ಷದ ಬಾಲಕಿಯನ್ನು ಬಲವಂತವಾಗಿ ಮದುವೆಯಾದ 62ರ ಮುದುಕ! ಹೃದಯ ಕರಗಿಸುತ್ತದೆ ಈ ವಿಡಿಯೊ

Amrutha Prem gave sweet news on Varamahalakshmi festival!
ಸ್ಯಾಂಡಲ್ ವುಡ್55 mins ago

Amrutha Prem: ವರಮಹಾಲಕ್ಷ್ಮೀ ಹಬ್ಬದಂದೇ ಸಿಹಿ ಸುದ್ದಿ ಕೊಟ್ಟ ಅಮೃತಾ ಪ್ರೇಮ್!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌