Vinesh Phogat Emotional Post: ಅಪ್ಪನ ಸಾವು, ತಾಯಿಗೆ ಕ್ಯಾನ್ಸರ್ ಇರುವ ವಿಚಾರ ತಿಳಿದು ಆಕಾಶವೇ ಕಳಚಿ ಬಿದ್ದಂತಾಗಿತ್ತು; ಭಾವುಕರಾದ ವಿನೇಶ್ ಫೋಗಟ್​​ - Vistara News

ಕ್ರೀಡೆ

Vinesh Phogat Emotional Post: ಅಪ್ಪನ ಸಾವು, ತಾಯಿಗೆ ಕ್ಯಾನ್ಸರ್ ಇರುವ ವಿಚಾರ ತಿಳಿದು ಆಕಾಶವೇ ಕಳಚಿ ಬಿದ್ದಂತಾಗಿತ್ತು; ಭಾವುಕರಾದ ವಿನೇಶ್ ಫೋಗಟ್​​

Vinesh Phogat: ನನ್ನೊಳಗಿನ ಹೋರಾಟ ಮತ್ತು ಕುಸ್ತಿ ಯಾವಾಗಲೂ ಇದ್ದೇ ಇರುತ್ತದೆ. ಒಂದಂತೂ ಖಚಿತ. ನಾನು ನಂಬಿರುವ ಸಂಗತಿಗಳಿಗಾಗಿ ಹೋರಾಟ ನಿಲ್ಲಿಸುವುದಿಲ್ಲ ಎಂದು ಕುಸ್ತಿಪಟು ವಿನೇಶ್​ ಫೋಗಟ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

VISTARANEWS.COM


on

Vinesh Phogat Emotional Post
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕೇವಲ 100 ಗ್ರಾಂ ತೂಕ ಹೆಚ್ಚು ಇದ್ದ ಕಾರಣ ಒಲಿಂಪಿಕ್ಸ್​ ಫೈನಲ್​ ಸ್ಪರ್ಧೆಯಿಂದ ಅನರ್ಹಗೊಂಡು ಪದಕ ವಂಚಿತರಾದ ಕುಸ್ತಿಪಟು ವಿನೇಶ್​ ಫೋಗಟ್​(Vinesh Phogat) ಪ್ಯಾರಿಸ್​ನಿಂದ ತವರಿಗೆ ಮರಳಿದ್ದಾರೆ. ಇದೇ ವೇಳೆ ಭಾವನಾತ್ಮಕ ಪ್ರತವೊಂದನ್ನು(Vinesh Phogat Emotional Post) ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ನಮ್ಮ ಪ್ರಯತ್ನಗಳು ನಿಲ್ಲಲಿಲ್ಲ ಮತ್ತು ನಾವು ಶರಣಾಗಲೂ ಇಲ್ಲ. ಆದರೆ ಸಮಯ ಸ್ತಬ್ಧವಾಯಿತು ಹಾಗೂ ಕಾಲ ಸರಿಯಿರಲಿಲ್ಲ. ಅದು ನನ್ನ ಹಣೆಬರಹ’ ಎಂದು ಬರೆದುಕೊಂಡಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮಹಿಳೆಯರ ಕುಸ್ತಿ 50 ಕೆ.ಜಿ ವಿಭಾಗದಲ್ಲಿ ಉತ್ಕೃಷ್ಟ ಪ್ರದರ್ಶನ ತೋರುವ ಮೂಲಕ ಫೈನಲ್‌ ತಲುಪಿದ್ದ ವಿನೇಶ್ ಅವರು ಇನ್ನೇನು ಫೈನಲ್​ ಆಡಲು ಕೆಲವೇ ಗಂಟೆಗಳು ಬಾಕಿ ಇರುವಾಗ ಅವರನ್ನು ಅನರ್ಹ ಎಂದು ಘೋಷಿಸಲಾಯಿತು. ದೇಹತೂಕದಲ್ಲಿ ನಿಗದಿತ ಸ್ಪರ್ಧೆಯ ತೂಕಕ್ಕಿಂತ 100 ಗ್ರಾಂ ಹೆಚ್ಚಾದ ಕಾರಣಕ್ಕೆ ಅವರು ಅನರ್ಹಗೊಂಡಿದ್ದರು.

ಇದೇ ಆಘಾತದಲ್ಲಿ ವಿನೇಶ್​ ತಮ್ಮ ಕ್ರೀಡಾಜೀವನಕ್ಕೆ ವಿದಾಯ ಹೇಳಿದ್ದರು. ಸೆಮಿಫೈನಲ್‌ ಜಯಿಸುವವರೆಗೂ ತೂಕ ನಿಯಮಬದ್ಧವಾಗಿದ್ದ ಕಾರಣಕ್ಕೆ ಬೆಳ್ಳಿ ಪದಕವನ್ನು ನೀಡಲು ಕ್ರೀಡಾ ಮಧ್ಯಸ್ಥಿಕೆ ನ್ಯಾಯಮಂಡಳಿಗೆ (ಸಿಎಎಸ್‌) ಮೇಲ್ಮನವಿ ಸಲ್ಲಿಸಿದ್ದರು. ಆದರೆ ಅವರ ಮನವಿ ಕೂಡ ತಿರಸ್ಕಾಗೊಂಡಿದೆ. ಹೀಗಾಗಿ ಪದಕ ಗೆಲ್ಲುವ ಕೊನೆಯ ಪ್ರಯತ್ನ ಕೂಡ ಕಮರಿ ಹೋಹಿದೆ. ಇದೇ ನೋವಿನಲ್ಲಿ ಅವರು ಭಾವನಾತ್ಮ ಪತ್ರವೊಂದನ್ನು ಬರೆದಿದ್ದಾರೆ.

“ನಾನು ತಂದೆಯ ಫೇವರೇಟ್​ ಮಗಳು. ಏಕೆಂದರೆ ನಾನೇ ಚಿಕ್ಕವಳಾಗಿದ್ದೆ . ಅಪ್ಪ ರಸ್ತೆಯಲ್ಲಿ ಬಸ್‌ ಓಡಿಸುತ್ತಿರಬೇಕಾದರೆ ನನ್ನ ಮಗಳು ಆಕಾಶದಲ್ಲಿ ವಿಮಾನದಲ್ಲಿ ಓಡಾಡಬೇಕು ಎಂದು ಕನಸು ಕಂಡಿದ್ದರು. ಆದರೆ ನಾನು ಮಾತ್ರ ಅಪ್ಪನ ಕನಸು ನಿಜವಾಗಿಸುತ್ತೇನೆ ಎಂದು ಕನಸು ಕಂಡಿರಲಿಲ್ಲ. ಆದರೆ, ಒಂದು ದಿನ ಅಪ್ಪ ನಮ್ಮನ್ನ ಬಿಟ್ಟು ಹೋದರು. ಈ ನೋವು ಸಹಿಸಿಕೊಳ್ಳುವ ಮುನ್ನವೇ ನನ್ನ ಅಮ್ಮನಿಗೂ ಕ್ಯಾನ್ಸರ್ 3ನೇ ಸ್ಟೇಜ್‌ಗೆ ಬಂದಿರುವುದು ತಿಳಿದಾಗ ನನಗೆ ಆಕಾಶವೇ ಕಳಚಿ ಬಿದ್ದಂತಾಗಿತ್ತು” ಎಂದು ಭಾವುಕ ನುಡಿಗಳನ್ನು ಬರೆದಿದ್ದಾರೆ

‘ಯಾವ ಗುರಿಗಾಗಿ ಶ್ರಮಿಸಿದ್ದೇವೋ ಅದು ಪೂರ್ಣವಾಗಲಿಲ್ಲ ಎಂಬ ಭಾವ ನನ್ನ ದೇಶವಾಸಿಗಳಿಗೆ ಮತ್ತು ನನ್ನ ಕುಟುಂಬದವರಿಗೆ ಇದೆ. ಆ ಕೊರಗು ಯಾವಾಗಲೂ ಇರುತ್ತದೆ. ಮುಂದೆ ಎಲ್ಲವೂ ಒಂದೇ ರೀತಿ ಇರುವುದಿಲ್ಲ. ವಿಭಿನ್ನ ಸನ್ನಿವೇಶಗಳಲ್ಲಿ ನಾನು 2032ರವರೆಗೆ ಆಡಬಹುದು. ಏಕೆಂದರೆ ನನ್ನೊಳಗಿನ ಹೋರಾಟ ಮತ್ತು ಕುಸ್ತಿ ಯಾವಾಗಲೂ ಇದ್ದೇ ಇರುತ್ತದೆ. ಒಂದಂತೂ ಖಚಿತ. ನಾನು ನಂಬಿರುವ ಸಂಗತಿಗಳಿಗಾಗಿ ಹೋರಾಟ ನಿಲ್ಲಿಸುವುದಿಲ್ಲ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ Vinesh Phogat : ವಿನೇಶ್​ ಫೈನಲ್ ತಲುಪಿದ್ದೇ ಹೆಮ್ಮೆಯ ವಿಷಯ; ಫೋಗಟ್ ಸಾಧನೆಯನ್ನು ಕೊಂಡಾಡಿದ ಮೋದಿ

ಮಾರ್ಗದರ್ಶನ ನೀಡಿದ ಬೆಲ್ಜಿಯನ್ ಕೋಚ್‌ ಅಕೋಸ್‌ ಕುರಿತು ವಿನೇಶ್​ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ‘ನನ್ನ ಕೋಚ್​ ಬಗ್ಗೆ ನಾನೇನು ಬರೆದರೂ ಅದು ಕಡಿಮೆಯೇ. ಮಹಿಳೆಯರ ಕುಸ್ತಿ ಲೋಕದಲ್ಲಿ ನಾನು ಕಂಡ ಉತ್ತಮ ಕೋಚ್‌ ಅವರು. ಸಹನೆ ಮತ್ತು ವಿಶ್ವಾಸದಿಂದ ಯಾವುದೇ ಪರಿಸ್ಥಿತಿ ನಿಭಾಯಿಸುತ್ತಿದ್ದರು. ನಾನು ಗೆದ್ದಾಗ ಅವರು ಸಂತಸದಲ್ಲಿ ಕಣ್ಣೀರು ಹಾಕಿದ್ದನ್ನು ನೋಡಿದ್ದೇನೆ. ನನ್ನ ಯಶಸ್ಸಿಗೆ ಅಕೋಸ್‌ ಎಂದೂ ಶ್ರೇಯಸ್ಸು ತೆಗೆದುಕೊಂಡವರಲ್ಲ. ಆದರೆ ಅವರಿಗೆ ಸಲ್ಲಬೇಕಾದ ಮಾನ್ಯತೆ ನೀಡಲು ಬಯಸಿದ್ದೆ ಎಂದು ಉಲ್ಲೇಖಿಸಿದ್ದಾರೆ. ತಂಡದ ವೈದ್ಯ ಡಾ. ದಿನ್‌ಷಾ ಪಾರ್ದಿವಾಲಾ ಅವರ ಕುರಿತೂ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಭಾರತ ತಂಡದ ನೆರವಿಗೆ 13 ವೈದ್ಯಕೀಯ ಸಿಬ್ಬಂದಿಯ ಮುಖ್ಯಸ್ಥರಾಗಿ ಪಾರ್ದಿವಾಲಾ ಕಾರ್ಯನಿರ್ವಹಿಸಿದ್ದರು. ಕಷ್ಟದ ಕಾಲದಲ್ಲಿ ಜತೆಯಾಗಿ ನಿಂತ ಎಲ್ಲರಿಗೂ ಆಭಾರಿಯಾಗಿರುವೆ ಎಂದು ಉಲ್ಲೇಖಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Bajrang Punia: ತ್ರಿವರ್ಣ ಧ್ವಜದ ಪೋಸ್ಟರ್​ ಮೇಲೆ ಕಾಲಿಟ್ಟ ಬಜರಂಗ್ ಪೂನಿಯಾ; ವಿಡಿಯೊ ವೈರಲ್

Bajrang Punia: ವಿನೇಶ್​ ಫೋಗಟ್(Vinesh Phogat)​ ಸೆಮಿಫೈನಲ್​ ಪ್ರವೇಶಿಸಿದ್ದ ವೇಳೆ ಬಜರಂಗ್‌ ಪೂನಿಯ ಟ್ವಿಟರ್​ ಎಕ್ಸ್​ನಲ್ಲಿ ಪೋಸ್ಟ್ ಮಾಡುವ ಮೂಲಕ ವಿನೇಶ್ ಸಾಧನೆಯನ್ನು ಕೊಂಡಾಡಿ ಕೇಂದ್ರ ಸರ್ಕಾರಕ್ಕೆ ಪರೋಕ್ಷವಾಗಿ ಟಾಂಗ್​ ಕೊಟ್ಟಿದ್ದರು.

VISTARANEWS.COM


on

Bajrang Punia
Koo

ನವದೆಹಲಿ: ಪ್ಯಾರಿಸ್​ನಿಂದ ಇಂದು ನವದೆಹಲಿಗೆ ಆಗಮಿಸಿದ್ದ ಕುಸ್ತಿಪಟು ವಿನೇಶ್​ ಫೋಗಟ್(Vinesh Phogat)​ ಅವರಿಗೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ಕೋರಲಾಗಿತ್ತು. ಇದೇ ವೇಳೆ ಕುಸ್ತಿಪಟು ಬಜರಂಗ್​ ಪೂನಿಯ(Bajrang Punia) ಮಾಧ್ಯಮದವರನ್ನು ಸಂಬಾಳಿಸುವ ಫಜೀತಿಯಲ್ಲಿ ತ್ರಿವರ್ಣ ಧ್ವಜದ ಪೋಸ್ಟರ್ ಮೇಲೆ ಕಾಲಿಟ್ಟಿ ಇದೀಗ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ವಿನೇಶ್ ಅವರನ್ನು ಒಲಿಂಪಿಯನ್‌ಗಳಾದ ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಸೇರಿದಂತೆ ಅಪಾರ ಸಂಖ್ಯೆಯ ಅಭಿಮಾನಿಗಳು ಆತ್ಮೀಯವಾಗಿ ಸ್ವಾಗತಿಸಿದರು. ಇದೇ ವೇಳೆ ನೆರದಿದ್ದ ಪತ್ರಕರ್ತರು ವಿನೇಶ್​ ಅವರ ಬೈಟ್ಸ್​ಗಳಿಗೆ ಮೈಕ್​ ಹಿಡಿದು ಕಾರಿಗೆ ಸುತ್ತುವರಿದಿದ್ದರು. ಇವರನ್ನು ಸಂಬಾಳಿಸುವ ಭರದಲ್ಲಿ ಕಾರ್‌ನ ಬಾನೆಟ್‌ ಮೇಲೆ ಹಾಕಲಾಗಿದ್ದ ತ್ರಿವರ್ಣ ಧ್ವಜದ ಪೋಸ್ಟರ್ ಇರುವ ಬ್ಯಾನರ್‌ ಮೇಲೆ ಬಜರಂಗ್ ಪೂನಿಯಾ ನಿಂತಿದ್ದರು. ಸದ್ಯ ಈ ಫೋಟೊ ಮತ್ತು ವಿಡಿಯೊ ವೈರಲ್​ ಆಗಿದ್ದು, ರಾಷ್ಟ್ರ ಧ್ವಜದ ಮೇಲೆ ಕಾಲಿಡಬಾರದು ಎಂಬ ಕಿಂಚಿತ್ತು ಬುದ್ಧಿ ಕೂಡ ನಿಮಗಿಲ್ಲವೇ ಎಂದು ನೆಟ್ಟಿಗರು ಬಜರಂಗ್​ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ವಿನೇಶ್​ ಫೋಗಟ್(Vinesh Phogat)​ ಸೆಮಿಫೈನಲ್​ ಪ್ರವೇಶಿಸಿದ್ದ ವೇಳೆ ಬಜರಂಗ್‌ ಪೂನಿಯ ಟ್ವಿಟರ್​ ಎಕ್ಸ್​ನಲ್ಲಿ ಪೋಸ್ಟ್ ಮಾಡುವ ಮೂಲಕ ವಿನೇಶ್ ಸಾಧನೆಯನ್ನು ಕೊಂಡಾಡಿ ಕೇಂದ್ರ ಸರ್ಕಾರಕ್ಕೆ ಪರೋಕ್ಷವಾಗಿ ಟಾಂಗ್​ ಕೊಟ್ಟಿದ್ದರು.

“ಜಗತನ್ನೇ ಗೆಲ್ಲಲು ಹೊರಟಿರುವ ವಿನೇಶಾ ಫೋಗಟ್ ಹಿಂದೊಮ್ಮೆ ತನ್ನದೇ ದೇಶದಲ್ಲಿ ಸೋಲು ಎದುರಿಸಿದ್ದಳು. ಲೈಗಿಂಕ ಕಿರುಕುಳದ ವಿರುದ್ಧ ನ್ಯಾಯಕ್ಕಾಗಿ ಹೋರಾಡಿದ್ದ ಈಕೆಯ ಮೇಲೆ ತನ್ನದೇ ದೇಶದಲ್ಲಿ ಲಾಠಿಯಿಂದ ಹೊಡೆದು ದಮನಿಸಲಾಗಿತ್ತು. ಬೀದಿಯಲ್ಲಿ ಎಳೆದಾಡಿ ತುಳಿದು ಅವಾಮಾನಿಸಲಾಗಿತ್ತು. ಇಂದು ಈ ಹುಡುಗಿಯ ಸಾಧನೆಯ ಮುಂದೆ ದೇಶದ ವ್ಯವಸ್ಥೆ ಸೋಲು ಕಂಡಿದೆ” ಎಂದು ಬರೆದುಕೊಂಡಿದ್ದರು.

ಡಬ್ಲ್ಯೂಎಫ್‌ಐ ವಿವಾದಕ್ಕೆ ಸಂಬಂಧಿಸಿದಂತೆ ಬಜರಂಗ್‌ ಪೂನಿಯಾ ಅವರು ಪದ್ಮಶ್ರೀ ಪ್ರಶಸ್ತಿಯನ್ನು ಕರ್ತವ್ಯ ಪಥದಲ್ಲಿ ಪದ್ಮಶ್ರೀ ಬಿಟ್ಟು ಹೋಗಿದ್ದರು. ಬಿಡುವಿಲ್ಲದ ವೇಳಾಪಟ್ಟಿಯಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ, ಆದರೆ ಪದಕವನ್ನು ಮನೆಗೆ ಕೊಂಡೊಯ್ಯುವುದಿಲ್ಲ. ಹೀಗಾಗಿ ಅಲ್ಲಿಯೇ ಬಿಟ್ಟು ಬಂದಿದ್ದೇನೆ ಎಂದು ಹೇಳಿದ್ದರು. ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್​ಭೂಷಣ್​ ಸಿಂಗ್ ವಿರುದ್ಧ ನಡೆಸಿದ್ದ ಪ್ರತಿಭಟನೆ ರೂವಾರಿಗಳಲ್ಲಿ ಬಜರಂಗ್​ ಕೂಡ ಒಬ್ಬರಾಗಿದ್ದರು.

ಇದನ್ನೂ ಓದಿ Bajrang Punia: ‘ದೇಶದಲ್ಲಿ’ ಸೋತು ಒಲಿಂಪಿಕ್ಸ್​ನಲ್ಲಿ ಗೆಲುವಿನ ಹೆಜ್ಜೆಯಿಟ್ಟ​ ವಿನೇಶ್​​; ಬಜರಂಗ್‌ ಪೂನಿಯ ಟಾಂಗ್​

ನಿಗದಿತ ತೂಕಗಿಂತ ಹೆಚ್ಚಿನ ಭಾರ ಇದ್ದ ಕಾರಣ ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ ಚಿನ್ನದ ಪದಕದ ಸ್ಪರ್ಧೆಯಿಂದ ಅನರ್ಹಗೊಂಡ ಕುಸ್ತಿಪಟು ವಿನೇಶ್‌ ಪೋಗಟ್‌(Vinesh Phogat) ಶನಿವಾರ ಭಾರತಕ್ಕೆ ಆಗಮಿಸಿದ್ದಾರೆ. ದೆಹಲಿಯ ವಿಮಾನ ನಿಲ್ದಾಣದಲ್ಲಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಪದಕ ಗೆಲ್ಲಲಾಗದ ನೋವಿನಲ್ಲಿದ್ದ ವಿನೇಶ್ ಅಭಿಮಾನಿಗಳನ್ನು ಕಂಡ ತಕ್ಷಣ ಜೋರಾಗಿ ಅಳುತ್ತಾ ಕೈ ಮುಗಿದು ಧನ್ಯವಾದ ತಿಳಿಸಿದರು. ಕುಟುಂಬದ ಸದಸ್ಯರು, ಮಾಜಿ ಒಲಿಂಪಿನ್,​ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್​, ಬಜರಂಗ್​ ಪೂನಿಯಾ ಸೇರಿ ಹಲವು ಕುಸ್ತಿಪಟುಗಳು ಈ ವೇಳೆ ​ಜತೆಗಿದ್ದರು.

Continue Reading

ಕ್ರೀಡೆ

Pakistan Cricket: ಬಾಡಿಗೆ ಫ್ಲಡ್‌ಲೈಟ್‌ ಅಳವಡಿಸಿ ಚಾಂಪಿಯನ್‌ ಟ್ರೋಫಿ ನಡೆಸಲು ಮುಂದಾದ ಪಾಕಿಸ್ತಾನ

Pakistan Cricket:ಕೆಲವು ತಿಂಗಳ ಹಿಂದೆ ಲಾಹೋರ್​ ಕ್ರಿಕೆಟ್​ ಮೈದಾನದಲ್ಲಿ ಬೆಳೆದಿದ್ದ ಭಾರೀ ಗಾತ್ರದ ಹುಲ್ಲುಗಳನ್ನು ಕಟಾವು ಮಾಡುತ್ತಿರುವ ವಿಡಿಯೊ ವೈರಲ್​ ಆಗಿತ್ತು.

VISTARANEWS.COM


on

Pakistan Cricket
Koo

ಕರಾಚಿ: ಮುಂದಿನ ವರ್ಷ ನಡೆಯುವ ಚಾಂಪಿಯನ್‌ ಟ್ರೋಫಿಗಾಗಿ(champions trophy 2025) ಎಲ್ಲ ಸಿದ್ಧತೆ ಆರಂಭಿಸಿದ್ದೇವೆ ಎಂದು ಕಟು ಸತ್ಯ ಮರೆಮಾಚಿ ಬಡಾಯಿ ಕೊಚ್ಚಿಕೊಳ್ಳುತ್ತಿದ್ದ ಪಾಕಿಸ್ತಾನ ಕ್ರಿಕೆಟ್(Pakistan Cricket)​ ಮಂಡಳಿಯ ಪರಿಸ್ಥಿತಿ ಕಂಡು ಇದೀಗ ನಗುವಂತಾಗಿದೆ. ಹೌದು, ತನ್ನ ಕ್ರೀಡಾಂಗಣಗಳನ್ನು ಸಿದ್ಧಪಡಿಸುತ್ತಿರುವ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (Pakistan Cricket Board), ಕರಾಚಿ ಹಾಗೂ ಲಾಹೋರ್‌ ಕ್ರೀಡಾಂಗಣಗಳಿಗೆ ಫ್ಲಡ್‌ಲೈಟ್‌ಗಳನ್ನು ಬಾಡಿಗೆಗೆ ಪಡೆಯಲಿದೆ ಎಂದು ತಿಳಿದುಬಂದಿದೆ.

ಕರಾಚಿ ಹಾಗೂ ಲಾಹೋರ್‌ನಲ್ಲಿ ಈಗಾಗಲೇ ಇರುವ ಫ್ಲಡ್‌ಲೈಟ್‌ಗಳು ಹಳೆಯದಾಗಿವೆ. ಹೀಗಾಗಿ ಅಲ್ಲಿನ ಫ್ಲಡ್‌ಲೈಟ್‌ಗಳನ್ನು ಹಣ ಉಳಿತಾಯಕ್ಕಾಗಿ ಕ್ವೆಟ್ಟಾ ಹಾಗೂ ರಾವಲ್ಪಿಂಡಿ ಕ್ರೀಡಾಂಗಣಗಳಿಗೆ ಸ್ಥಳಾಂತರ ಮಾಡಿ, ಕರಾಚಿ ಹಾಗೂ ಲಾಹೋರ್‌ಗೆ ಬೇಕಾದ ಫ್ಲಡ್‌ಲೈಟ್‌ಗಳನ್ನು ಬಾಡಿಗೆಗೆ ಪಡೆಯಲು ಪಿಸಿಬಿ ಈಗಾಗಲೇ ಟೆಂಡರ್‌ ಕೂಡಾ ಆಹ್ವಾನಿಸಿದೆ ಎನ್ನಲಾಗಿದೆ. ಈ ವಿಚಾರ ತಿಳಿದ ನೆಟ್ಟಿಗರು ಇದೀಗ ಪಾಕಿಸ್ತಾನ ಕ್ರಿಕೆಟ್ ಮಂಡಳಿಯನ್ನು ಟ್ರೋಲ್ ಮಾಡಲಾರಂಭಿಸಿದ್ದಾರೆ.

ಕೆಲವು ತಿಂಗಳ ಹಿಂದೆ ಲಾಹೋರ್​ ಕ್ರಿಕೆಟ್​ ಮೈದಾನದಲ್ಲಿ ಬೆಳೆದಿದ್ದ ಭಾರೀ ಗಾತ್ರದ ಹುಲ್ಲುಗಳನ್ನು ಕಟಾವು ಮಾಡುತ್ತಿರುವ ವಿಡಿಯೊ ವೈರಲ್​ ಆಗಿತ್ತು. ಎಷ್ಟೇ ದಯನೀಯ ಪರಿಸ್ಥಿತಿಯ ಇದ್ದರೂ ಕೂಡ ಪಾಕ್​ ಬಡಾಯಿ ಕೊಚ್ಚಿಕೊಳ್ಳುತ್ತಿರುವುದನ್ನು ಮಾತ್ರ ನಿಲ್ಲಿಸುತ್ತಿಲ್ಲ.

ಚಾಂಪಿಯನ್ಸ್ ಟ್ರೋಫಿಯಲ್ಲಿ(ICC Champions Trophy) ಭಾರತ(champions trophy ind vs pak) ತಂಡ ಪಾಲ್ಗೊಳ್ಳಲಿದೆಯಾ? ಇಲ್ಲವಾ? ಎಂಬ ಬಗ್ಗೆ ಚರ್ಚೆ ನಡೆಯುತ್ತಲೇ ಇದೆ. ಇದುವರೆಗೂ ಈ ವಿಚಾರದಲ್ಲಿ ಯಾವುದೇ ಅಧಿಕೃತ ಮಾಹಿತಿ ಲಭಿಸಿಲ್ಲ. ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ ಭಾರತ ಮತ್ತು ಪಾಕ್​ ನಡುವಣ ಪಂದ್ಯ ಮಾರ್ಚ್ 1 ರಂದು ಲಾಹೋರ್​ನಲ್ಲಿ ನಡೆಯಬೇಕಿದೆ.

ಇದನ್ನೂ ಓದಿ Pakistan Cricket Team: ಪಾಕಿಸ್ತಾನ ಕ್ರಿಕೆಟಿಗರ ವೇತನ ಕಡಿತಕ್ಕೆ ಮುಂದಾದ ಪಾಕ್​ ಕ್ರಿಕೆಟ್ ಮಂಡಳಿ

ಒಂದೊಮ್ಮೆ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಆಡಲು ಪಾಕಿಸ್ತಾನಕ್ಕೆ ತೆರಳದಿದ್ದರೆ ಆ ದೇಶದ ಕ್ರಿಕೆಟ್ ಮಂಡಳಿಗೆ ಭಾರಿ ನಷ್ಟವಾಗುವ ಸಾಧ್ಯತೆ ಇದೆ. ಈಗಾಗಲೇ ಪಾಕಿಸ್ತಾನ ನಷ್ಟದ ಹಾದಿಯಲ್ಲಿದೆ. ಕ್ರಿಕೆಟ್​ನಲ್ಲಿ ಟೀಮ್​ ಇಂಡಿಯಾಗೆ ಇರುವ ಕ್ರೇಜ್ ಮತ್ತು ಬೇಡಿಕೆ​ ಬೇರೆ ಯಾವ ದೇಶಕ್ಕೂ ಇಲ್ಲ. ಹೀಗಾಗಿ ಟೀಮ್​ ಇಂಡಿಯಾ ಪಾಕಿಸ್ತಾನಕ್ಕೆ ಹೋದಲ್ಲಿ ಅದರಿಂದ ಆರ್ಥಿಕವಾಗಿಯೂ ಲಾಭವಾಗಲಿದೆ ಮತ್ತು ಪಾಕ್​ ಮೇಲೆ ಇರುವ ಕಳಂಕವೂ ದೂರವಾಗಲಿದೆ. ಅಲ್ಲದೆ, ಉಭಯ ದೇಶಗಳ ನಡುವಿನ ಸಂಬಂಧವೂ ಕೂಡ ಮತ್ತೆ ಚಿಗುರಲಿದೆ ಎಂಬ ನಿರೀಕ್ಷೆಯಲ್ಲಿದೆ.

ಸದ್ಯ ಕೇಳಿ ಬಂದಿರುವ ಮಾಹಿತಿ ಪ್ರಕಾರ ಪಿಸಿಬಿಯ ಮನವಿಗೆ ಐಸಿಸಿ ಸ್ಪಂದಿಸಿದ್ದು, ಹೈಬ್ರಿಡ್​ ಮಾದರಿಯ ಪಂದ್ಯಗಳಿಗೆ ಐಸಿಸಿ ಅನುಮತಿಸಿಲ್ಲ ಎಂದು ವರದಿಯಾಗಿದೆ. ಈ ವಿಚಾವಾಗಿ ಈಗಾಗಲೇ ಬಿಸಿಸಿಐ ಜತೆ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಒಟ್ಟಾರೆ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಭಾರತ ಚಾಂಪಿಯನ್ಸ್​ ಟ್ರೋಫಿ ಆಡುವ ಬಗ್ಗೆ ನಿರ್ಧಾರವಾಗಲಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಮಾಹಿತಿ ಹೊರಬೀಳಬೇಕಿದೆ.

Continue Reading

ಕ್ರೀಡೆ

Manu Bhaker: 3 ತಿಂಗಳ ರಜೆಯಲ್ಲಿ ಭರತನಾಟ್ಯ, ಕುದುರೆ ಸವಾರಿ, ಸ್ಕೇಟಿಂಗ್ ಕಲಿಯಲಿದ್ದಾರೆ ಮನು ಭಾಕರ್

Manu Bhaker: ಮುಂದಿನ ಮೂರು ತಿಂಗಳ ಕಾಲ 22 ವರ್ಷದ ಮನು ಭಾಕರ್​ ತಮ್ಮ ನೆಚ್ಚಿನ ಭರತನಾಟ್ಯ(Manu Bhaker Bharatnatyam), ಕುದುರೆ ಸವಾರಿ, ವಯೋಲಿನ್​ ನುಡಿಸುವುದು, ಮಾರ್ಷಿಯಲ್​ ಆರ್ಟ್ಸ್​ ಮತ್ತು ಸ್ಕೇಟಿಂಗ್​ನಂಥ ಹವ್ಯಾಸಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

VISTARANEWS.COM


on

Manu Bhaker
Koo

ನವದೆಹಲಿ: ಒಂದೇ ಒಲಿಂಪಿಕ್ಸ್ ಅಭಿಯಾನದಲ್ಲಿ ಎರಡು ಶೂಟಿಂಗ್ ಪದಕಗಳನ್ನು ಗೆದ್ದ ಏಕೈಕ ಭಾರತೀಯ ಎಂಬ ಇತಿಹಾಸವನ್ನು ಬರೆದಿರುವ ಮನು ಭಾಕರ್​(Manu Bhaker) ಅವರು ಕೆಲ ದಿನಗಳ ಹಿಂದೆ ಮುಂದಿನ 3 ತಿಂಗಳು ಶೂಟಿಂಗ್​ನಿಂದ ಸಂಪೂರ್ಣ ದೂರ ಉಳಿಯಲಿದ್ದೇನೆ ಎಂದು ಹೇಳಿದ್ದರು. ಆದರೆ, ಅವರ ಈ ವಿಶ್ರಾಂತಿಗೆ ಕಾರಣ ಏನೆಂಬುದು ತಿಳಿಸಿರಲಿಲ್ಲ. ಇದೀಗ ತಮ್ಮ ಈ ರಜೆಯ ಹಿಂದಿರುವ ಕಾರಣವನ್ನು ಸ್ವತಃ ಅವರೇ ರಿವೀಲ್​ ಮಾಡಿದ್ದಾರೆ. 3 ತಿಂಗಳ ವಿಶ್ರಾಂತಿಯಿಂದ ಅಕ್ಟೋಬರ್​ನಲ್ಲಿ ನವದೆಹಲಿಯಲ್ಲಿ ನಡೆಯಲಿರುವ ಶೂಟಿಂಗ್​ ವಿಶ್ವಕಪ್ ಫೈನಲ್​ಗೆ ಅಲಭ್ಯರಾಗಲಿದ್ದಾರೆ.

ಹೌದು, ಮುಂದಿನ ಮೂರು ತಿಂಗಳ ಕಾಲ 22 ವರ್ಷದ ಮನು ಭಾಕರ್​ ತಮ್ಮ ನೆಚ್ಚಿನ ಭರತನಾಟ್ಯ(Manu Bhaker Bharatnatyam), ಕುದುರೆ ಸವಾರಿ, ವಯೋಲಿನ್​ ನುಡಿಸುವುದು, ಮಾರ್ಷಿಯಲ್​ ಆರ್ಟ್ಸ್​ ಮತ್ತು ಸ್ಕೇಟಿಂಗ್​ನಂಥ ಹವ್ಯಾಸಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಈ ವಿವಾರವನ್ನು ಮನು ಸಂದರ್ಶನವೊಂದಲ್ಲಿ ತಿಳಿಸಿದ್ದಾರೆ.

‘ನಾನು ಭರತನಾಟ್ಯವನ್ನು ಕಲಿಯುತ್ತಿರುವೆ. ಅದು ನನಗಿಷ್ಟ. ಫ್ರಾನ್ಸ್​ನಲ್ಲಿ ಶೂಟಿಂಗ್​ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾಗ, ಭರತನಾಟ್ಯ ಕ್ಲಾಸ್​ನಲ್ಲಿ ಪಾಲ್ಗೊಳ್ಳಲು ಸಮಯ ಸಿಕ್ಕಿರಲಿಲ್ಲ. ನೃತ್ಯ ಎಂದರೆ ನನಗಿಷ್ಟ. ಇದುವರೆಗೂ ತಮಿಳುನಾಡಿನ ಶಿಕ್ಷಕರೊಬ್ಬರ ಸಹಾಶಯದಿಂದ ಆನ್​ಲೈನ್​ನಲ್ಲಿಯೇ ಭರತನಾಟ್ಯವನ್ನು ಅಭ್ಯಾಸ ಮಾಡುತ್ತಿದ್ದೆ. ಇದೀಗ ನೇರವಾಗಿ ಹಾಜರಾಗಿ ನೃತ್ಯ ಕಲಿಯುವೆ. ಜತೆಗೆ ವಯೋಲಿನ್​ ಕಲಿಕೆ ಮುಂದುವರಿಸುವೆ. ಶೂಟಿಂಗ್​ಗೆ ಮುನ್ನ ಕರಾಟೆ ಕಲಿತಿದ್ದೆ. ಮತ್ತೆ ಅದರಲ್ಲಿ ತೊಡಗಿಸಿಕೊಳ್ಳುವೆ’ ಎಂದರು.

ಇದನ್ನೂ ಓದಿ Manu Bhaker-Neeraj Chopra: ನೀರಜ್​ ಚೋಪ್ರಾ ಜತೆ ಮದುವೆ ವದಂತಿ; ಸ್ಪಷ್ಟನೆ ನೀಡಿದ ಮನು ಭಾಕರ್​ ತಂದೆ

ಕುದುರೆ ಸವಾರಿಯೂ ನನಗಿಷ್ಟ


ಕುದುರೆ ಸವಾರಿ ಕೂಡ ಇಷ್ಟ. ಕೆಲವು ವರ್ಷಗಳಿಂದ ಕುದುರೆ ಸವಾರಿ ಕಲಿಯತ್ತಿರುವೆ. ಜತೆಗೆ ಸ್ಕೇಟಿಂಗ್ ಕೂಟ ಕಲಿಯುತ್ತಿರುವೆ. ಸ್ಕೂಬಾ ಡೈವಿಂಗ್​ ಬಗ್ಗೆಯೂ ಆಸಕ್ತಿ ಇದೆ. ಆದರೆ ಇದುವರೆಗೂ ಸ್ಕೂಬಾ ಡೈವಿಂಗ್ ಮಾಡಿಲ್ಲ. ಇದನ್ನೂ ಕೂಡ ಶೀಘ್ರದಲ್ಲೇ ಮಾಡುವೆ ಎಂದು ಎಂದು ಮನು ಭಾಕರ್​ ಸುದ್ದಿಸಂಸ್ಥೆ ಜತೆಗಿನ ಸಂದರ್ಶನದಲ್ಲಿ ಹೇಳಿದ್ದಾರೆ. ಕೆಲ ದಿನಗಳ ಹಿಂದೆ ಮನು ಭಾಕರ್​ ಅವರು ಸ್ವಿಮ್ಮಿಂಗ್‌ ಪೂಲ್‌ ಬಳಿ ಕುಳಿತು ವಯೋಲಿನ್ ಮೂಲಕ ರಾಷ್ಟ್ರಗೀತೆ ಜನ ಗಣ ಮನವನ್ನು ಬಹಳ ಇಂಪಾಗಿ ನುಡಿಸಿದ್ದ ವಿಡಿಯೊ ವೈರಲ್​ ಆಗಿತ್ತು.

ಪ್ಯಾರಿಸ್​ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮೊದಲ ಮಹಿಳಾ ಶೂಟರ್ ಎಂಬ ಹೆಗ್ಗಳಿಕೆಗೆ ಮನು ಭಾಕರ್​ ಪಾತ್ರರಾಗಿದ್ದರು. ಜತೆಗೆ 12 ವರ್ಷಗಳ ಬಳಿಕ ಒಲಿಂಪಿಕ್​ ಶೂಟಿಂಗ್​ನಲ್ಲಿ ದೇಶಕ್ಕೆ ಪದಕ ಗೆದ್ದ ಸಾಧನೆ ಮಾಡಿದ್ದರು.

ಭಾಕರ್(Manu Bhaker)​ ಅವರ ಜಾಹೀರಾತು ಮೌಲ್ಯದಲ್ಲಿ ಇದೀಗ ಭಾರೀ ಏರಿಕೆ ಕಂಡಿದೆ. ಮನು ಅವರ ಬ್ರ್ಯಾಂಡ್​ ಮೌಲ್ಯ ಈಗ 1.5 ರೂ. ಆಗಿದೆ. ಅವರು ಪ್ರತಿ ಡಿಜಿಟಲ್​ ಜಾಹೀರಾತಿಗೂ 30 ಲಕ್ಷ ರೂ. ಸಂಭಾವನೆ ಪಡೆಯಲಿದ್ದಾರೆ ಎನ್ನಲಾಗಿದೆ.

ಪ್ರಮುಖವಾಗಿ ತಂಪು ಪಾನೀಯ, ಸ್ಕಿನ್​ ಕೇರ್​, ನ್ಯೂಟ್ರೀಷಿಯನ್​ ಕಂಪನಿಗಳು ಮನು ಅವರನ್ನು ಸಂಪರ್ಕಿಸಿವೆ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ 40 ಕಂಪನಿಗಳು(40 brands chasing Manu Bhaker) ಮನು ಅವರನ್ನು ಸಂಪರ್ಕಿಸಿದ್ದವು ಎಂದು ವರದಿಯಾಗಿತ್ತು. ಭಾರತ ತಂಡದ ಸ್ಟಾರ್​ ಕ್ರಿಕೆಟಿಗರು ಜಾಹೀರಾತು ಒಪ್ಪಂದಗಳಿಗೆ ವಾರ್ಷಿಕ 3 ರಿಂದ 6 ಕೋಟಿ ರೂ. ಪಡೆಯುತ್ತಾರೆ. ಬ್ಯಾಡ್ಮಿಂಟನ್​ ಆಟಗಾರ್ತಿ ಪಿ,ವಿ ಸಿಂಧು 2022ರಲ್ಲಿ 2.21 ಕೋಟಿ ರೂ. ಮೊತ್ತದ ಒಪ್ಪಂದ ಪಡೆದಿದ್ದೇ ಭಾರತದಲ್ಲಿ ಕ್ರಿಕೆಟಿಗರ ಹೊರತಾಗಿ ಇತರ ಕ್ರೀಡಾಪಟುಗಳು ಪಡೆದ ಇದುವರೆಗಿನ ಗರಿಷ್ಠ ಮೊತ್ತವಾಗಿದೆ. ಒಲಿಂಪಿಕ್ಸ್​ ಪದಕ ಗೆಲ್ಲುವ ಮೊದಲು ಮನು ಪ್ರತಿ ಒಪ್ಪಂದವನ್ನು 20-25 ಲಕ್ಷ ರೂ.ಗೆ ಮಾಡಿಕೊಳ್ಳುತ್ತಿದ್ದರು. ಸದ್ಯ ಮನು ಪಾಮ್ಯಾಕ್ಸ್​ ಆಕ್ಟಿವ್​ವೇರ್​ಗೆ ಮಾತ್ರ ಪ್ರಚಾರ ರಾಯಭಾರಿಯಾಗಿದ್ದಾರೆ.

Continue Reading

ಕ್ರೀಡೆ

Vinesh Phogat: ತವರಿಗೆ ಮರಳಿದ ವಿನೇಶ್​​​ ಫೋಗಟ್​ಗೆ ಭರ್ಜರಿ ಸ್ವಾಗತ; ಅಭಿಮಾನಿಗಳನ್ನು ಕಂಡು ಕಣ್ಣೀರು

Vinesh Phogat: ಗುರುವಾರ 78ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ಯಾರಿಸ್ ಒಲಿಂಪಿಕ್ ಕೂಟದಲ್ಲಿ ಸ್ಪರ್ಧಿಸಿ ತವರಿಗೆ ಮರಳಿರುವ ಭಾರತದ ಕ್ರೀಡಾಪಟುಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿ ಸಂವಾದ ನಡೆಸಿದ್ದರು. ಈ ವೇಳೆ ವಿನೇಶ್ ಫೋಗಟ್ ಸಾಧನೆ ಕುರಿತು ಪ್ರಧಾನಿ ಮೋದಿ ಮೆಚ್ಚುಗೆಯ ಮಾತುಗಳನ್ನಾಡಿದ್ದರು.

VISTARANEWS.COM


on

Vinesh Phogat
Koo

ನವದೆಹಲಿ: ನಿಗದಿತ ತೂಕಗಿಂತ ಹೆಚ್ಚಿನ ಭಾರ ಇದ್ದ ಕಾರಣ ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ ಚಿನ್ನದ ಪದಕದ ಸ್ಪರ್ಧೆಯಿಂದ ಅನರ್ಹಗೊಂಡ ಕುಸ್ತಿಪಟು ವಿನೇಶ್‌ ಪೋಗಟ್‌(Vinesh Phogat) ಶನಿವಾರ ಭಾರತಕ್ಕೆ ಆಗಮಿಸಿದ್ದಾರೆ. ದೆಹಲಿಯ ವಿಮಾನ ನಿಲ್ದಾಣದಲ್ಲಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಪದಕ ಗೆಲ್ಲಲಾಗದ ನೋವಿನಲ್ಲಿದ್ದ ವಿನೇಶ್ ಅಭಿಮಾನಿಗಳನ್ನು ಕಂಡ ತಕ್ಷಣ ಜೋರಾಗಿ ಅಳುತ್ತಾ ಕೈ ಮುಗಿದು ಧನ್ಯವಾದ ತಿಳಿಸಿದರು. ಕುಟುಂಬದ ಸದಸ್ಯರು, ಮಾಜಿ ಒಲಿಂಪಿನ್,​ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್​, ಬಜರಂಗ್​ ಪೂನಿಯಾ ಸೇರಿ ಹಲವು ಕುಸ್ತಿಪಟುಗಳು ಈ ವೇಳೆ ​ಜತೆಗಿದ್ದರು.

ವಿಮಾನ ನಿಲ್ದಾಣದಿಂದ ಹೊರ ಬಂದ ತಕ್ಷಣ ವಿನೇಶ್​ ಸಾಕ್ಷಿ ಮಲಿಕ್​ ಅವರ ಎದೆಗಪ್ಪಿಕೊಂಡು ಕಣ್ಣೀರು ಸುರಿಸಿದ ದೃಶ್ಯ ಕಂಡು ಒಂದು ಕ್ಷಣ ನೆರದಿದ್ದ ಕ್ರೀಡಾಭಿಮಾನಿಗಳು ಕೂಡ ಅತ್ಯಂತ ಭಾವುಕರಾಗಿ ನಿಂತು ಬಿಟ್ಟರು.ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮಹಿಳೆಯರ ಕುಸ್ತಿ 50 ಕೆ.ಜಿ ವಿಭಾಗದಲ್ಲಿ ಉತ್ಕೃಷ್ಟ ಪ್ರದರ್ಶನ ತೋರುವ ಮೂಲಕ ಫೈನಲ್‌ ತಲುಪಿದ್ದ ವಿನೇಶ್ ಅವರು ಇನ್ನೇನು ಫೈನಲ್​ ಆಡಲು ಕೆಲವೇ ಗಂಟೆಗಳು ಬಾಕಿ ಇರುವಾಗ ಅವರನ್ನು ಅನರ್ಹ ಎಂದು ಘೋಷಿಸಲಾಯಿತು. ದೇಹತೂಕದಲ್ಲಿ ನಿಗದಿತ ಸ್ಪರ್ಧೆಯ ತೂಕಕ್ಕಿಂತ 100 ಗ್ರಾಂ ಹೆಚ್ಚಾದ ಕಾರಣಕ್ಕೆ ಅವರು ಅನರ್ಹಗೊಂಡಿದ್ದರು.

ಸೆಮಿಫೈನಲ್​ ವೇಳೆ ವಿನೇಶ್​ 49.9 ಕೆಜಿ ತೂಕವಿದ್ದರು. 3 ಬೌಟ್‌ಗಳು ಮುಗಿಯುವ ವೇಳೆಗೆ ಶಕ್ತಿ ಕಾಪಾಡಿಕೊಳ್ಳಲು ಹೈ ಎನರ್ಜಿ ಆಹಾರ ಸೇವಿಸಿದ ಕಾರಣ ಅವರ ತೂಕ 2.8 ಕೆಜಿ ಹೆಚ್ಚಳವಾಗಿತ್ತು. ಈ 2.8 ಕೆಜಿಯನ್ನು ಕಡಿಮೆ ಮಾಡಲು ವಿನೇಶ್‌ ರಾತ್ರಿಯಿಡೀ ಯಾವುದೇ ಆಹಾರ ಸೇವಿಸದೇ, ಸೈಕ್ಲಿಂಗ್‌ ನಡೆಸಿ, ಸ್ಕಿಪ್ಪಿಂಗ್‌ ಮಾಡಿದ್ದರು. ತೂಕ ಇಳಿಸಲು ಬೇಕಾಗುವ ಎಲ್ಲ ಕಸರತ್ತುಗಳನ್ನು ಕೈಗೊಂಡಿದ್ದರು. ಈ ಮೂಲಕ ಅವರು ಸಾಕಷ್ಟು ತೂಕ ಇಳಿಸಿದ್ದರು. ಕೊನೆ ಕ್ಷಣದಲ್ಲಿ ಅವರ ಕೂದಲು ಕತ್ತರಿಸಿ, ಬಟ್ಟೆಗಳ ಗಾತ್ರವನ್ನು ಕುಗ್ಗಿಸಿ ಪರೀಕ್ಷೆಗೆ ಕಳುಹಿಸಲಾಯಿತು. ಆದರೂ 100 ಗ್ರಾಂ ಹೆಚ್ಚಿದ್ದ ಕಾರಣ ಅನರ್ಹಗೊಂಡರು.

ಇದನ್ನೂ ಓದಿ Vinesh Phogat Emotional Post: ಅಪ್ಪನ ಸಾವು, ತಾಯಿಗೆ ಕ್ಯಾನ್ಸರ್ ಇರುವ ವಿಚಾರ ತಿಳಿದು ಆಕಾಶವೇ ಕಳಚಿ ಬಿದ್ದಂತಾಗಿತ್ತು; ಭಾವುಕರಾದ ವಿನೇಶ್ ಫೋಗಟ್​​

ಹರಿಯಾಣ ಸರ್ಕಾರ ವಿನೇಶ್​ಗೆ ವಿಶೇಷ ಗೌರವ ಸೂಚಿಸುವುದಾಗಿ ಘೋಷಣೆ ಮಾಡಿತ್ತು. ದಿಲ್ಲಿಯಿಂದ ಬಂದೊಡಣೆ ಅವರನ್ನು ಪದಕ ವಿಜೇತರಂತೆ ಸ್ವಾಗತಿಸಲು ಇಲ್ಲಿನ ಸರ್ಕಾರ ಸಲಕ ಸಿದ್ಧತೆ ನಡೆಸಿದೆ. ವಿಜೇತರಂತೆ ಸ್ವಾಗತಿಸಲು ಮತ್ತು ಗೌರವಿಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ನಯಾಬ್‌ ಸಿಂಗ್‌ ಸೈನಿ ಈಗಾಗಲೇ ಘೋಷಿಸಿದ್ದಾರೆ.

ಗುರುವಾರ 78ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ಯಾರಿಸ್ ಒಲಿಂಪಿಕ್ ಕೂಟದಲ್ಲಿ ಸ್ಪರ್ಧಿಸಿ ತವರಿಗೆ ಮರಳಿರುವ ಭಾರತದ ಕ್ರೀಡಾಪಟುಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿ ಸಂವಾದ ನಡೆಸಿದ್ದರು. ಈ ವೇಳೆ ವಿನೇಶ್ ಫೋಗಟ್ ಸಾಧನೆ ಕುರಿತು ಪ್ರಧಾನಿ ಮೋದಿ ಮೆಚ್ಚುಗೆಯ ಮಾತುಗಳನ್ನಾಡಿದ್ದರು. “ವಿನೇಶ್​ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಫೈನಲ್‌ ಪ್ರವೇಶಿಸಿದ ಭಾರತದ ಮೊದಲ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಇದು ನಮ್ಮ ಪಾಲಿಗೆ ಹೆಮ್ಮೆಯ ಕ್ಷಣವಾಗಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು.

ಅನರ್ಹಗೊಂಡ ಬೇಸರದಲ್ಲೇ ವಿನೇಶ್​ ಕುಸ್ತಿ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ. ವಿನೇಶ್ ಜಂಟಿ ಬೆಳ್ಳಿ ಪದಕ ನೀಡಬೇಕು ಎಂದು ಸಲ್ಲಿಸಿದ್ದ ಮೇಲ್ಮನವಿಯನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯಮಂಡಳಿ (ಸಿಎಎಸ್) ತಿರಸ್ಕರಿಸಿತ್ತು. ಹೋಗಾಗಿ ಕೊನೆಯ ಆಸೆ ಕೂಡ ಕಮರಿಹೋಗಿದೆ. ಕಳೆದ ವರ್ಷ ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಅವರು ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿ ಕುಸ್ತಿಪಟುಗಳು ನಡೆಸಿದ್ದ ಮುಷ್ಕರದಲ್ಲಿ ವಿನೇಶ್ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದರು.

Continue Reading
Advertisement
CM Siddaramaiah Ashok
ಪ್ರಮುಖ ಸುದ್ದಿ10 mins ago

CM Siddaramaiah: ರಾಜ್ಯಪಾಲರ ಆದೇಶ ಬಿಜೆಪಿ ಪಾದಯಾತ್ರೆಗೆ ದೊರೆತ ಯಶಸ್ಸು, ಮುಡಾ ತನಿಖೆ ಸಿಬಿಐಗೆ ಕೊಡಲಿ: ಆರ್‌. ಅಶೋಕ್

sexual abuse
ಕ್ರೈಂ15 mins ago

sexual abuse: ಪ್ರತಿ ಗಂಟೆಗೆ ನಡೆಯುವ 4 ಅತ್ಯಾಚಾರದಲ್ಲಿ 3 ಪ್ರಕರಣಗಳ ಆರೋಪಿಗಳು ಪರಿಚಿತರೇ! ಆಘಾತಕಾರಿ ಅಂಕಿಅಂಶ

Bajrang Punia
ಕ್ರೀಡೆ32 mins ago

Bajrang Punia: ತ್ರಿವರ್ಣ ಧ್ವಜದ ಪೋಸ್ಟರ್​ ಮೇಲೆ ಕಾಲಿಟ್ಟ ಬಜರಂಗ್ ಪೂನಿಯಾ; ವಿಡಿಯೊ ವೈರಲ್

DK Shivakumar and CM Siddaramaiah
ಪ್ರಮುಖ ಸುದ್ದಿ33 mins ago

CM Siddaramaiah: ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೀತಾರಾ? ಡಿಕೆ ಶಿವಕುಮಾರ್ ಏನಂದ್ರು?

cm siddaramaiah 1
ಪ್ರಮುಖ ಸುದ್ದಿ37 mins ago

CM Siddaramaiah: ಸರ್ಕಾರಿ ನೌಕರರ ಹಿತಾಸಕ್ತಿ ಕಾಯಲು ನಾನು ಸದಾ ಸಿದ್ಧ: ಸಿಎಂ ಸಿದ್ದರಾಮಯ್ಯ

Bengaluru Power Cut
ಬೆಂಗಳೂರು41 mins ago

Bengaluru Power Cut: ಗಮನಿಸಿ… ಬೆಂಗಳೂರಿನ ಈ ಪ್ರದೇಶಗಳಲ್ಲಿ ಆ.18ರಂದು ಕರೆಂಟ್‌ ಇರಲ್ಲ

Viral Video
Latest43 mins ago

Viral Video: 12 ವರ್ಷದ ಬಾಲಕಿಯನ್ನು ಬಲವಂತವಾಗಿ ಮದುವೆಯಾದ 62ರ ಮುದುಕ! ಹೃದಯ ಕರಗಿಸುತ್ತದೆ ಈ ವಿಡಿಯೊ

Amrutha Prem gave sweet news on Varamahalakshmi festival!
ಸ್ಯಾಂಡಲ್ ವುಡ್50 mins ago

Amrutha Prem: ವರಮಹಾಲಕ್ಷ್ಮೀ ಹಬ್ಬದಂದೇ ಸಿಹಿ ಸುದ್ದಿ ಕೊಟ್ಟ ಅಮೃತಾ ಪ್ರೇಮ್!

BMRCL Recruitment 2024
ಉದ್ಯೋಗ57 mins ago

BMRCL Recruitment 2024: ನಮ್ಮ ಮೆಟ್ರೋದಲ್ಲಿದೆ ಉದ್ಯೋಗಾವಕಾಶ; ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

Pakistan Cricket
ಕ್ರೀಡೆ1 hour ago

Pakistan Cricket: ಬಾಡಿಗೆ ಫ್ಲಡ್‌ಲೈಟ್‌ ಅಳವಡಿಸಿ ಚಾಂಪಿಯನ್‌ ಟ್ರೋಫಿ ನಡೆಸಲು ಮುಂದಾದ ಪಾಕಿಸ್ತಾನ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌