sexual abuse: ಪ್ರತಿ ಗಂಟೆಗೆ ನಡೆಯುವ 4 ಅತ್ಯಾಚಾರದಲ್ಲಿ 3 ಪ್ರಕರಣಗಳ ಆರೋಪಿಗಳು ಪರಿಚಿತರೇ! ಆಘಾತಕಾರಿ ಅಂಕಿಅಂಶ - Vistara News

ಕ್ರೈಂ

sexual abuse: ಪ್ರತಿ ಗಂಟೆಗೆ ನಡೆಯುವ 4 ಅತ್ಯಾಚಾರದಲ್ಲಿ 3 ಪ್ರಕರಣಗಳ ಆರೋಪಿಗಳು ಪರಿಚಿತರೇ! ಆಘಾತಕಾರಿ ಅಂಕಿಅಂಶ

ಕೋಲ್ಕತ್ತಾದಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಅತ್ಯಾಚಾರ (sexual abuse) ಮತ್ತು ಹತ್ಯೆಯ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಹೆಣ್ಣು ಮಕ್ಕಳು, ಇವರ ಪೋಷಕರು ಆತಂಕ ಪಡುವ ಸುದ್ದಿಯೊಂದನ್ನು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಬಿಡುಗಡೆ ಮಾಡಿದೆ. ಅದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

sexual abuse
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೆಣ್ಣು ಮಕ್ಕಳು, ಇವರ ಪೋಷಕರು ಆತಂಕ ಪಡುವ (sexual abuse) ಸುದ್ದಿಯೊಂದಿದೆ. ದೇಶದಲ್ಲಿ ಪ್ರತಿ ಗಂಟೆಗೆ ನಾಲ್ಕು ಅತ್ಯಾಚಾರ (Rape Case) ಪ್ರಕರಣಗಳು ನಡೆಯುತ್ತಿದ್ದು, ಶೇ. 95 ಪ್ರಕರಣಗಳಲ್ಲಿ ತಿಳಿದಿರುವ ವ್ಯಕ್ತಿಗಳಿಂದಲೇ (Known person) ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಯುತ್ತಿರುವುದು ಆತಂಕದ ಸಂಗತಿಯಾಗಿದೆ. ಅದರಲ್ಲೂ 18ರಿಂದ 30 ವರ್ಷದೊಳಗಿನವರೇ ಹೆಚ್ಚಿನ ಪ್ರಕರಣಗಳಲ್ಲಿ ಬಲಿಪಶುಗಳಾಗಿದ್ದಾರೆ. 2017ರಿಂದ 2022ರ ನಡುವೆ ಪ್ರತಿದಿನ ಸರಾಸರಿ 86 ಅತ್ಯಾಚಾರ ಪ್ರಕರಣಗಳು ವರದಿಯಾಗಿದೆ. ಇದರಲ್ಲಿ 82 ಪ್ರಕರಣಗಳಲ್ಲಿ ಸಂತ್ರಸ್ತ ಮಹಿಳೆಗೆ ಗೊತ್ತಿರುವವರಿಂದಲೇ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ.

ಗಂಟೆಗೆ ನಾಲ್ಕು ಪ್ರಕರಣ

ದೇಶದಲ್ಲಿ ಪ್ರತಿ ಗಂಟೆಗೆ ಸುಮಾರು ನಾಲ್ಕು ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿದ್ದು, ಇವುಗಳಲ್ಲಿ ಮೂರಕ್ಕೂ ಹೆಚ್ಚು ಪ್ರಕರಣಗಳಲ್ಲಿ ಸಂತ್ರಸ್ತೆಯು ಅತ್ಯಾಚಾರ ನಡೆಸಿದವರನ್ನು ಬಲ್ಲವಳಾಗಿದ್ದಳು ಎಂದು ದಾಖಲೆಗಳು ಹೇಳಿವೆ.

ವಾರ್ಷಿಕ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ವರದಿಯ ಪ್ರಕಾರ 2017ರಿಂದ 2022ರ ನಡುವೆ ಭಾರತದಲ್ಲಿ ಒಟ್ಟು 1.91 ಲಕ್ಷ ಅತ್ಯಾಚಾರ ಪ್ರಕರಣಗಳು ನಡೆದಿದೆ ಎನ್ನಲಾಗಿದ್ದು, 1.89 ಲಕ್ಷ ಅತ್ಯಾಚಾರ ಪ್ರಕರಣಗಳು ವರದಿಯಾಗಿದೆ. ಕನಿಷ್ಠ 1.79 ಲಕ್ಷ ಪ್ರಕರಣಗಳಲ್ಲಿ ಅತ್ಯಾಚಾರಿ ತಿಳಿದಿರುವ ವ್ಯಕ್ತಿಯಾಗಿದ್ದು, 9,670 ಪ್ರಕರಣಗಳಲ್ಲಿ ಅಷ್ಟೇ ಬಲಿಪಶುವಿಗೆ ತಿಳಿದಿಲ್ಲ.

18ರಿಂದ 30 ವರ್ಷದೊಳಗಿನವರೇ ಹೆಚ್ಚಿನ ಬಲಿಪಶುಗಳು

1.89 ಲಕ್ಷ ಪ್ರಕರಣಗಳಲ್ಲಿ 1.13 ಲಕ್ಷ ಅತ್ಯಾಚಾರ ಸಂತ್ರಸ್ತರು 18ರಿಂದ 30 ವರ್ಷ ವಯಸ್ಸಿನವರಾಗಿದ್ದಾರೆ. ಹೀಗಾಗಿ ಪ್ರತಿದಿನ ದಾಖಲಾಗುವ 86 ಅತ್ಯಾಚಾರ ಪ್ರಕರಣದಲ್ಲಿ 52 ಮಂದಿ 18ರಿಂದ 30 ವರ್ಷದೊಳಗಿನವರು. ಉಳಿದ ಪ್ರಕರಣಗಳು ದಿನಕ್ಕೆ 35 ಆಗಿದ್ದು, ಇತರ ವಯಸ್ಸಿನವರು ಎನ್ನಲಾಗಿದೆ.

ಕೆಲಸದ ಸ್ಥಳ ಸುರಕ್ಷಿತವೇ?

ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳದ ಪ್ರಕರಣಗಳು ಬಹಳ ಕಡಿಮೆಯಾದರೂ ಸರಾಸರಿಯಾಗಿ ಪ್ರತಿದಿನ ಕನಿಷ್ಠ ಒಬ್ಬ ಮಹಿಳೆ ಕೆಲಸದಲ್ಲಿ ಅಥವಾ ಕಚೇರಿ ಆವರಣದಲ್ಲಿ ಲೈಂಗಿಕ ಕಿರುಕುಳವನ್ನು ಎದುರಿಸುತಿದ್ದರೆ ಎನ್ನುವುದನ್ನು ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಅಂಕಿ ಅಂಶ ತಿಳಿಸಿದೆ. 2014ರಿಂದ ಎನ್‌ಸಿಆರ್‌ಬಿ ಕಚೇರಿಯು ಐಪಿಸಿಯ ಸೆಕ್ಷನ್ 509 ಅವಮಾನದ ವರ್ಗದ ಅಡಿಯಲ್ಲಿ ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳದ ಕುರಿತು ಡೇಟಾವನ್ನು ಸಂಗ್ರಹಿಸಲು ಪ್ರಾರಂಭಿಸಿತು.

ಆರಂಭಿಕ ವರ್ಷಗಳಲ್ಲಿ ಅಂದರೆ 2014 ಮತ್ತು 2015ರಲ್ಲಿ ಕಚೇರಿ ಆವರಣದಲ್ಲಿ ಲೈಂಗಿಕ ಕಿರುಕುಳ ಮತ್ತು ಇನ್ನೊಂದು ಕೆಲಸಕ್ಕೆ ಸಂಬಂಧಿಸಿದ ಸ್ಥಳಗಳು ಎಂಬ ಎರಡು ವಿಭಿನ್ನ ವಿಭಾಗಗಳನ್ನು ಹೊಂದಿದ್ದವು. ಆದರೆ 2016 ರ ಅನಂತರ ಈ ವರ್ಗಗಳನ್ನು ಲೈಂಗಿಕ ಕಿರುಕುಳ ‘ಕೆಲಸ ಅಥವಾ ಕಚೇರಿ ಆವರಣದಲ್ಲಿ’ ಎಂಬುದಾಗಿ ವಿಲೀನಗೊಳಿಸಲಾಗಿದೆ.

2014 ಮತ್ತು 2022ರ ನಡುವೆ ಕೆಲಸ ಅಥವಾ ಕಚೇರಿ ಆವರಣದಲ್ಲಿ ಕನಿಷ್ಠ 4,231 ಲೈಂಗಿಕ ಕಿರುಕುಳ ಪ್ರಕರಣಗಳು ದಾಖಲಾಗಿವೆ. ಆರಂಭದಲ್ಲಿ ಕಚೇರಿ ಆವರಣದಲ್ಲಿ ಲೈಂಗಿಕ ಕಿರುಕುಳದ ಪ್ರಕರಣಗಳ ಸಂಖ್ಯೆಯು ಕಡಿಮೆಯಿತ್ತು. ಆದರೆ 2017 ರ ಅನಂತರ ಪ್ರತಿ ವರ್ಷ 400 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತವೆ.

2014, 2015 ಮತ್ತು 2016 ರಲ್ಲಿ ಎನ್‌ಸಿಆರ್‌ಬಿ ಉದ್ಯೋಗದಾತರು ಅಥವಾ ಸಹೋದ್ಯೋಗಿಗಳಿಂದ ಅತ್ಯಾಚಾರಗಳ ಸಂಖ್ಯೆಯನ್ನು ಬಹಿರಂಗಪಡಿಸಿದೆ. ಆರಂಭದ ಮೂರು ವರ್ಷಗಳಲ್ಲಿ ಉದ್ಯೋಗದಾತರು ಅಥವಾ ಸಹೋದ್ಯೋಗಿಗಳಿಂದ 1,795 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಪ್ರತಿದಿನ ಸುಮಾರು ಎರಡು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Child Trafficking: ಗೋವಾಗೆ ಕಳ್ಳಸಾಗಣೆ ಮಾಡುತ್ತಿದ್ದ ಹೆಣ್ಣು ಶಿಶು ರಕ್ಷಣೆ ವೇಳೆ ಅಧಿಕಾರಿಗಳ ಮೇಲೆ‌ ಹಲ್ಲೆ

ಕೆಲಸದ ಸ್ಥಳದಲ್ಲಿ ಮಹಿಳೆಯರ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ ಕಾಯಿದೆಯ ಅಡಿಯಲ್ಲಿ 2013ರಿಂದ ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳದ ದೂರುಗಳನ್ನು ಸ್ವೀಕರಿಸಲು 10ಕ್ಕಿಂತ ಹೆಚ್ಚು ಕೆಲಸಗಾರರನ್ನು ಹೊಂದಿರುವ ಎಲ್ಲಾ ಕೆಲಸದ ಸ್ಥಳಗಳಲ್ಲಿ ಆಂತರಿಕ ಸಮಿತಿಗಳನ್ನು ರಚಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ನೊಂದ ಮಹಿಳೆ ಅಥವಾ ಆಕೆಯ ಪರವಾಗಿ ಅಧಿಕಾರ ಹೊಂದಿರುವ ಯಾವುದೇ ವ್ಯಕ್ತಿ ಲೈಂಗಿಕ ಕಿರುಕುಳದ ಲಿಖಿತ ದೂರನ್ನು ಸಲ್ಲಿಸಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Dog Attack: 17 ಮಂದಿ ಮೇಲೆ ಬೀದಿ ನಾಯಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಉತ್ತರ ಪ್ರದೇಶದ ಗೋರಖ್‌ಪುರದ ಶಹಪುರದಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ಸುಮಾರು 17 ಮಂದಿಯ ಮೇಲೆ ಹುಚ್ಚು ನಾಯಿಯೊಂದು ದಾಳಿ (Dog Attack) ನಡೆಸಿದೆ. ಇದರ ಭಯಾನಕ ದೃಶ್ಯವೊಂದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಗೋರಖ್‌ಪುರದ ಹೆಚ್ಚುವರಿ ಮುನ್ಸಿಪಲ್ ಕಮಿಷನರ್ ದುರ್ಗೇಶ್ ಮಿಶ್ರಾ ಅವರು, ಬೀದಿ ನಾಯಿಗಳ ಸಂತಾನ ಶಕ್ತಿ ಹರಣ ಅಭಿಯಾನವನ್ನು ನಾವು ನಿಯಮಿತವಾಗಿ ನಡೆಸುತ್ತಿದ್ದೇವೆ. ಪ್ರಾಣಿ ಜನನ ನಿಯಂತ್ರಣ ಕೇಂದ್ರವನ್ನು ಸಹ ನಿರ್ಮಿಸಲಾಗುತ್ತಿದೆ. ಬೀದಿ ನಾಯಿಗಳನ್ನು ಹಿಡಿದು ಅವುಗಳಿಗೆ ಚುಚ್ಚು ಮದ್ದು ನೀಡಲಾಗುತ್ತಿದೆ ಎಂದಿದ್ದಾರೆ.

VISTARANEWS.COM


on

By

Dog attack
Koo

ಮಕ್ಕಳು, ಮಹಿಳೆಯರು ಸೇರಿದಂತೆ ಸುಮಾರು 17 ಮಂದಿಯ ಮೇಲೆ ಉತ್ತರ ಪ್ರದೇಶದ (uttarpradesh) ಗೋರಖ್‌ಪುರದ ಶಹಪುರದಲ್ಲಿ ಆಗಸ್ಟ್ 14ರಂದು ಹುಚ್ಚು ನಾಯಿಯೊಂದು ದಾಳಿ (Dog Attack) ನಡೆಸಿದೆ. ಇದರ ಭಯಾನಕ ದೃಶ್ಯವೊಂದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆವಾಸ್ ವಿಕಾಸ್ ಕಾಲೋನಿಯಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ 22 ವರ್ಷದ ಆಶಿಶ್ ಯಾದವ್ ಮೇಲೆ ನಾಯಿಯು ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬಿಬಿಎ ವಿದ್ಯಾರ್ಥಿಯಾಗಿರುವ ಆಶಿಶ್ ಯಾದವ್ ಅವರು ರಾತ್ರಿ 9.45ರ ಸುಮಾರಿಗೆ ಮನೆಯ ಹೊರಗೆ ಫೋನ್‌ನಲ್ಲಿ ಮಾತನಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಬಂದ ನಾಯಿ ಏಕಾಏಕಿ ಅವರ ಮೇಲೆ ದಾಳಿ ನಡೆಸಲು ಪ್ರಾರಂಭಿಸಿದೆ.


ಆಶಿಶ್ ನಾಯಿಯನ್ನು ಹಿಮ್ಮೆಟ್ಟಿಸಲು ಮತ್ತು ಅದರ ಮೇಲೆ ಪ್ರತಿ ದಾಳಿ ನಡೆಸಲು ಪ್ರಯತ್ನಿಸಿದ್ದಾರೆ. ಆದರೆ ಅದು ಬೊಗಳುವುದು ಮತ್ತು ಕಚ್ಚುವುದನ್ನು ನಿಲ್ಲಿಸಲಿಲ್ಲ. ಆಶಿಶ್ ನೆಲಕ್ಕೆ ಬೀಳುತ್ತಿದ್ದಂತೆ ಅದು ಅವರ ಕಾಲಿಗೆ ಕಚ್ಚಿದೆ. ಅಲ್ಲದೇ ಜಿಗಿದು ಮುಖದ ಮೇಲೂ ಕಚ್ಚಿದೆ. ನಾಯಿಯ ದಾಳಿಯಿಂದ ಅವರ ಬಾಯಿ, ಕಣ್ಣು ಮತ್ತು ತುಟಿಗಳಿಂದ ರಕ್ತಸ್ರಾವವಾಗುತ್ತಿರುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದಾದ ನಂತರ ಇನ್ನೊಂದು ಮನೆಯ ಗೇಟ್‌ ಬಳಿ ನಿಂತಿದ್ದ ಮಹಿಳೆಯ ಮೇಲೆ ದಾಳಿ ನಡೆಸಿದ ನಾಯಿ ಆಕೆಯ ಕಾಲನ್ನು ಕಚ್ಚಿದೆ. ಇದರಿಂದ ಆಕೆಗೆ ಆಳವಾದ ಗಾಯವಾಗಿದ್ದು, ಹಲವಾರು ಹೊಲಿಗೆಗಳನ್ನು ವೈದ್ಯರು ಹಾಕಿದ್ದಾರೆ ಎನ್ನಲಾಗಿದೆ. ಅನಂತರ ಮನೆಯ ಹೊರಗೆ ಆಟವಾಡುತ್ತಿದ್ದ ಇಬ್ಬರು ಬಾಲಕಿಯರ ಮೇಲೂ ನಾಯಿ ದಾಳಿ ಮಾಡಿದೆ.

ಆಶಿಶ್ ಅವರನ್ನು ರೇಬಿಸ್ ಲಸಿಕೆಗಾಗಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಾಗ ಅಲ್ಲಿ ಔಷಧ ಖಾಲಿಯಾಗಿತ್ತು ಎಂದು ಆಶಿಶ್ ತಂದೆ ವಿಜಯ್ ಯಾದವ್ ಹೇಳಿದ್ದಾರೆ. ಬೀದಿ ನಾಯಿಗಳ ಹಾವಳಿ ಬಗ್ಗೆ ನಗರಸಭೆಗೆ ಮಾಹಿತಿ ನೀಡಿದ್ದರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ ಎಂದು ನಾಯಿ ದಾಳಿಯಿಂದ ಗಾಯಗೊಂಡಿರುವ ಅನೇಕರು ದೂರಿದ್ದಾರೆ.

ಇದನ್ನೂ ಓದಿ: Viral Video: ಅಟಲ್ ಸೇತು ಮೇಲಿಂದ ಸಮುದ್ರಕ್ಕೆ ಹಾರಲೆತ್ನಿಸಿದ ಮಹಿಳೆಯನ್ನು ರಕ್ಷಿಸಿದ್ದು ಹೇಗೆ? ವಿಡಿಯೊ ನೋಡಿ

ಈ ಕುರಿತು ಪ್ರತಿಕ್ರಿಯಿಸಿರುವ ಗೋರಖ್‌ಪುರದ ಹೆಚ್ಚುವರಿ ಮುನ್ಸಿಪಲ್ ಕಮಿಷನರ್ ದುರ್ಗೇಶ್ ಮಿಶ್ರಾ ಅವರು, ಘಟನೆಯ ಬಗ್ಗೆ ತನಗೆ ತಿಳಿದಿಲ್ಲ ಮತ್ತು ಯಾವುದೇ ದೂರುಗಳನ್ನು ಸ್ವೀಕರಿಸಿಲ್ಲ ಎಂದು ಹೇಳಿದರು. ಬೀದಿ ನಾಯಿಗಳ ಸಂತಾನಹರಣ ಅಭಿಯಾನವನ್ನು ನಾವು ನಿಯಮಿತವಾಗಿ ನಡೆಸುತ್ತಿದ್ದೇವೆ. ಪ್ರಾಣಿ ಜನನ ನಿಯಂತ್ರಣ ಕೇಂದ್ರವನ್ನು ಸಹ ನಿರ್ಮಿಸಲಾಗುತ್ತಿದೆ. ಬೀದಿ ನಾಯಿಗಳನ್ನು ಹಿಡಿದು ಅವುಗಳಿಗೆ ಚುಚ್ಚು ಮದ್ದು ನೀಡಲಾಗುತ್ತಿದೆ ಮತ್ತು ಸಾಕು ನಾಯಿಗಳಿಗೆ ಲಸಿಕೆ ಹಾಕಲು ನಾವು ಜಾಗೃತಿ ಅಭಿಯಾನವನ್ನು ನಡೆಸುತ್ತೇವೆ ಎಂದು ಹೇಳಿದರು.

Continue Reading

Latest

Murder Case: ಮಮತಾ ರಾಜ್ಯದಲ್ಲಿ ಕೊಲೆ ಸರಣಿ; ಬೆಂಗಳೂರಿನಿಂದ ಊರಿಗೆ ಬಂದಿದ್ದ ಯುವತಿಯ ರುಂಡ ಕಡಿದು ಕೊಲೆ!

Murder Case: ಪಶ್ಚಿಮ ಬಂಗಾಳದಲ್ಲಿ 25 ವರ್ಷದ ಯುವತಿಯ ತಲೆ ಕಡಿದ ರಕ್ತಸಿಕ್ತ ದೇಹವು ಅವರ ಕುಟುಂಬದ ಹೊಲದಲ್ಲಿ ಪತ್ತೆಯಾಗಿದೆ. ಇದು ಅಲ್ಲಿನ ಜನರಲ್ಲಿ ಆಘಾತವನ್ನುಂಟು ಮಾಡಿದೆ. ಈ ಪ್ರದೇಶದ ಮಹಿಳೆಯರ ಸುರಕ್ಷತೆಯ ಬಗ್ಗೆ ಕಳವಳಗಳನ್ನು ಹುಟ್ಟುಹಾಕಿದೆ. ಯುವತಿ ಬಾತ್‌ ರೂಮ್‌ಗೆ ಹೋಗಿ ಬರುತ್ತಿರುವುದಾಗಿ ಹೇಳಿ ಹೋಗಿದ್ದಳು. ನಂತರ ನಾಪತ್ತೆಯಾಗಿದ್ದಳು. ಈ ಪ್ರಕರಣ ಪಶ್ಚಿಮ ಬಂಗಾಲದಲ್ಲಿ ನಡೆಯುತ್ತಿರುವ ಕೊಲೆ, ಹಿಂಸಾಚಾರ ಪ್ರಕರಣಕ್ಕೆ ಮತ್ತೊಂದು ಸೇರ್ಪಡೆಯಾದಂತಾಗಿದೆ.

VISTARANEWS.COM


on

Murder Case
Koo


ಒಂದು ಕಾಲದಲ್ಲಿ ಶಾಂತಿಯುತವಾದ ಗ್ರಾಮ ಎಂದು ಕರೆಸಿಕೊಂಡ ಶಕ್ತಿಗಢದ ನಾಡುರ್ ಝಪನತಾಲಾ ಆದಿವಾಸಿ ಪ್ಯಾರಾ ಎಂಬ ಗ್ರಾಮದಲ್ಲಿ (ಪಶ್ಚಿಮ ಬಂಗಾಲ) ಈಗ ಹಿಂಸಾಚಾರದ ಕೃತ್ಯಗಳೇ ನಡೆಯುತ್ತಿವೆ. ಈ ಗ್ರಾಮದಲ್ಲಿ 25 ವರ್ಷದ ಪ್ರಿಯಾಂಕಾ ಹನ್ಸ್ಡಾ ಎಂಬ ಯುವತಿಯ ತಲೆ ಕಡಿದ (Murder Case) ರಕ್ತಸಿಕ್ತ ದೇಹವು ಅವರ ಕುಟುಂಬದ ಹೊಲದಲ್ಲಿ ಪತ್ತೆಯಾಗಿದೆ. ಇದು ಅಲ್ಲಿನ ಜನರಲ್ಲಿ ಆಘಾತವನ್ನುಂಟು ಮಾಡಿದೆ. ಈ ಪ್ರದೇಶದ ಮಹಿಳೆಯರ ಸುರಕ್ಷತೆಯ ಬಗ್ಗೆ ಕಳವಳಗಳನ್ನು ಹುಟ್ಟು ಹಾಕಿದೆ.

ವರದಿ ಪ್ರಕಾರ, ಇತ್ತೀಚೆಗೆ ಬೆಂಗಳೂರಿನಿಂದ ಮನೆಗೆ ಮರಳಿದ್ದ ಪ್ರಿಯಾಂಕಾ, ಬಾತ್‍ರೂಂಗೆ ಹೋಗುತ್ತಿರುವುದಾಗಿ ಕುಟುಂಬದವರಿಗೆ ತಿಳಿಸಿದ್ದಳು. ನಂತರ ನಾಪತ್ತೆಯಾಗಿದ್ದಳು. ಅವಳು ಹಿಂತಿರುಗಿ ಬರದಿದ್ದಾಗ, ಚಿಂತೆಗೀಡಾದ ಅವಳ ತಾಯಿ ಅವಳನ್ನು ಹುಡುಕಲು ಪ್ರಾರಂಭಿಸಿದರು. ಆದರೆ ಪ್ರಿಯಾಂಕಾ ಅವಳ ನಿರ್ಜೀವ ದೇಹವು ಕುಟುಂಬದವರ ಹೊಲದಲ್ಲೇ ಬಿದ್ದಿತ್ತು. ಅವಳ ಕುತ್ತಿಗೆಯನ್ನು ಕತ್ತರಿಸಲಾಗಿತ್ತು. ಈ ಭಯಾನಕ ದೃಶ್ಯವು ಅವಳ ಕುಟುಂಬವನ್ನು ಆಘಾತಕ್ಕೀಡುಮಾಡಿದೆ. ಈ ಬಗ್ಗೆ ಅವಳ ಸಮುದಾಯವು ಆಕ್ರೋಶಗೊಂಡಿದೆ.

ಸ್ಥಳೀಯ ಪೊಲೀಸರು ಈ ಪ್ರಕರಣದ ಬಗ್ಗೆ ತೀವ್ರ ತನಿಖೆ ಆರಂಭಿಸಿದ್ದಾರೆ. ಈ ಘಟನೆಯು ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಕ್ರೂರ ದಾಳಿಗಳ ಪಟ್ಟಿಗೆ ಮತ್ತೊಂದು ಸೇರ್ಪಡೆಯಾದಂತಾಗಿದೆ. ಅಪರಾಧಿಗಳನ್ನು ಕೂಡಲೇ ಕಂಡುಹಿಡಿದು ಶಿಕ್ಷಿಸುವಂತೆ ಜನಾಗ್ರಹ ಕೇಳಿ ಬರುತ್ತಿದೆ. ಪ್ರಿಯಾಂಕಾ ಅವರ ಹತ್ಯೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಮಹಿಳೆಯರನ್ನು ರಕ್ಷಿಸುವ ಮಮತಾ ಬ್ಯಾನರ್ಜಿ ಅವರ ರಾಜ್ಯ ಸರ್ಕಾರದ ಬದ್ಧತೆಯನ್ನು ಜನರು ಪ್ರಶ್ನಿಸುತ್ತಿದ್ದಾರೆ.

ಈ ನಡುವೆ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಅವಳು ಕೊನೆಯದಾಗಿ ಚಾಟ್ ಮಾಡಿದ ಮತ್ತು ಅವಳು ಮನೆಯಿಂದ ಹೊರಟಾಗ ಕರೆ ಮಾಡಿದ ಜನರನ್ನು ಪತ್ತೆ ಹಚ್ಚಿದ್ದಾರೆ. ಜಿಲ್ಲಾ ಪೊಲೀಸರ ಅಧಿಕಾರಿಗಳ ಪ್ರಕಾರ, ಮನೆಯಿಂದ ಹೊರಡುವ ಮೊದಲು ಸಂತ್ರಸ್ತೆಗೆ ಬಂದ ಕರೆ ಅವಳಿಗೆ ಚೆನ್ನಾಗಿ ತಿಳಿದಿರುವ ವ್ಯಕ್ತಿಯಿಂದ ಬಂದಿದೆ ಎಂದು ತನಿಖೆಯಿಂದ ತಿಳಿದು ಬಂದಿದೆ.

ಇದನ್ನೂ ಓದಿ: ಅಟಲ್ ಸೇತು ಮೇಲಿಂದ ಸಮುದ್ರಕ್ಕೆ ಹಾರಲೆತ್ನಿಸಿದ ಮಹಿಳೆಯನ್ನು ರಕ್ಷಿಸಿದ್ದು ಹೇಗೆ? ವಿಡಿಯೊ ನೋಡಿ

ಆಗಸ್ಟ್ 12ರಂದು ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಕ್ರೂರ ಸಾವಿನ ಬಗ್ಗೆ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ ಈ ಬೆಳವಣಿಗೆ ಸಂಭವಿಸಿದೆ. ವೈದ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾ ಪೊಲೀಸರು ಶಂಕಿತನನ್ನು ಬಂಧಿಸಿದ್ದಾರೆ. ಕೋಲ್ಕತಾ ಹೈಕೋರ್ಟ್‍ನ ಆದೇಶದ ಮೇರೆಗೆ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆಯನ್ನು ವಹಿಸಿಕೊಂಡಿದೆ.

Continue Reading

Latest

Viral Video: 12 ವರ್ಷದ ಬಾಲಕಿಯನ್ನು ಬಲವಂತವಾಗಿ ಮದುವೆಯಾದ 62ರ ಮುದುಕ! ಹೃದಯ ಕರಗಿಸುತ್ತದೆ ಈ ವಿಡಿಯೊ

Viral Video: 12 ವರ್ಷದ ಬಾಲಕಿಗೆ ಆಕೆಯ ಮನೆಯವರು 62ರ ವೃದ್ಧನನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿರುವ ವಿಡಿಯೊವೊಂದು ವೈರಲ್ ಆಗಿದೆ. ಸಹಿ ಹಾಕುವಂತೆ ಬಾಲಕಿಗೆ ಹಿಂಸಿಸುತ್ತಿದ್ದಾರೆ. ಆಕೆ ನನಗೆ ಈ ಮದುವೆ ಬೇಡ ಎಂದು ಅತ್ತು ಕರೆದು ಕೇಳಿಕೊಂಡರೂ ಆಕೆಯ ಮನೆಯವರು ಅದನ್ನು ಕೇಳದೆ ಸಹಿ ಹಾಕುವಂತೆ ಬಲವಂತ ಮಾಡುತ್ತಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸಿದೆ.

VISTARANEWS.COM


on

Viral Video
Koo


ದೇಶ ಎಷ್ಟೇ ಮುಂದುವರಿದಿದ್ದರೂ ಕೆಲವು ಜನರಿಗೆ ಮಾತ್ರ ಬುದ್ಧಿ ಬರುವುದಿಲ್ಲ. ಯಾಕೆಂದರೆ ಬಾಲ್ಯವಿವಾಹ ಪದ್ಧತಿಯಂತಹ ಅನಿಷ್ಟ ಪದ್ಧತಿಗಳನ್ನು ತೊಲಗಿಸಲು ಅನೇಕ ಹೋರಾಟಗಾರರು ಹೋರಾಡಿ ಅದರ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಅಲ್ಲದೇ ಈ ಅನಿಷ್ಟ ಪದ್ಧತಿಯನ್ನು ಕಾನೂನಿನ ಪ್ರಕಾರ ಅಪರಾಧವೆಂದು, ಇದನ್ನು ಪಾಲಿಸಿದವರಿಗೆ ಕಠಿಣ ಜೈಲು ಶಿಕ್ಷೆ ವಿಧಿಸುವುದಾಗಿ ನ್ಯಾಯಾಲಯದಲ್ಲಿ ತಿಳಿಸಿದರೂ ಕೂಡ ಇನ್ನೂ ಈ ಅನಿಷ್ಟ ಪದ್ಧತಿ ನಮ್ಮನ್ನು ಬಿಟ್ಟು ತೊಲಗಲಿಲ್ಲ. ಕೆಲವು ಕಡೆ ಯಾರಿಗೂ ತಿಳಿಯದಂತೆ ಬಾಲಕಿಯರನ್ನು ಈ ಅನಿಷ್ಟ ಪದ್ಧತಿಗೆ ಬಲಿ ಕೊಡುತ್ತಿದ್ದಾರೆ. ಇದೀಗ ಅಂತಹದೊಂದು ಆಘಾತಕಾರಿ ಘಟನೆ ನಡೆದಿದ್ದು, 12 ವರ್ಷದ ಬಾಲಕಿಗೆ 62 ವರ್ಷದ ವೃದ್ಧನ ಜೊತೆ ಆಕೆಯ ಕುಟುಂಬದವರು ಬಲವಂತವಾಗಿ ಮದುವೆ ಮಾಡಿಸಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ (Viral Video)ಆಗುತ್ತಿದೆ.

ವೈರಲ್ ವಿಡಿಯೊದಲ್ಲಿ 12 ವರ್ಷದ ಬಾಲಕಿಗೆ ಆಕೆಯ ಮನೆಯವರು 62ರ ವೃದ್ಧನನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದಾರೆ. ಮತ್ತು ಅದಕ್ಕಾಗಿ ಸಹಿ ಮಾಡುವಂತೆ ಹಿಂಸಿಸುತ್ತಿದ್ದಾರೆ. ಆಕೆ ನನಗೆ ಈ ಮದುವೆ ಬೇಡಾ ಎಂದು ಅತ್ತು ಕರೆದು ಕೇಳಿಕೊಂಡರೂ ಆಕೆಯ ಮನೆಯವರು ಅದನ್ನು ಕೇಳದೆ ಸಹಿ ಹಾಕುವಂತೆ ಬಲವಂತ ಮಾಡುತ್ತಿದ್ದಾರೆ. ಅವರೆಲ್ಲರೂ ಮುಸ್ಲಿಂ ಸಮುದಾಯದವರು ಎಂಬುದು ತಿಳಿಯುತ್ತದೆ. ಈ ಘೋರ ದೃಶ್ಯವನ್ನು ಅಲ್ಲಿದ್ದವರಲ್ಲಿ ಒಬ್ಬರು ವಿಡಿಯೊ ರೆಕಾರ್ಡ್ ಮಾಡಿದ್ದಾರೆ.

TaraBull ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೊವನ್ನು ಹಂಚಿಕೊಳ್ಳಲಾಗಿದ್ದು, “12 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ 62 ವರ್ಷದ ವ್ಯಕ್ತಿಯೊಂದಿಗೆ ಮದುವೆಯಾಗುವಂತೆ ಒತ್ತಾಯಿಸಿದ್ದಾರೆ. ಇದಕ್ಕೆಲ್ಲ ಆಕ್ರೋಶ ಎಲ್ಲಿದೆ?” ಎಂಬ ಶೀರ್ಷಿಕೆಯನ್ನು ಬರೆದಿದ್ದಾರೆ. ಆಗಸ್ಟ್ 15 ರಂದು ಹಂಚಿಕೊಳ್ಳಲಾದ ಈ ವಿಡಿಯೊ 5.6 ಮಿಲಿಯನ್ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್‍ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ‘ಇದು ಅಪರಾಧವಾಗಿದ್ದು, ನಾವೆಲ್ಲರೂ ಇದರ ವಿರುದ್ಧ ಧ್ವನಿ ಎತ್ತಬೇಕಿದೆ’ ಎಂಬ ಕಾಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರಿಗೆ ಮರಣದಂಡನೆ ವಿಧಿಸುವಂತೆ ಬಾಲಿವುಡ್ ತಾರೆಯರ ಆಗ್ರಹ

ಇನ್ನೊಬ್ಬ ಬಳಕೆದಾರರು ‘ಇದಕ್ಕಿಂತ ದುಷ್ಟತನ ಮತ್ತೊಂದಿಲ್ಲ” ಎಂದು ಹೇಳಿದ್ದಾರೆ. ಆದರೆ ಈ ಘಟನೆ ಎಲ್ಲಿ ನಡೆದಿದ್ದು ಎಂಬ ಬಗ್ಗೆ ಯಾವುದೇ ಮಾಹಿತಿ ತಿಳಿದುಬಂದಿಲ್ಲ. ಆದರೆ ಬಾಲ್ಯ ವಿವಾಹದಂತಹ ಅನಿಷ್ಟ ಪದ್ಧತಿ ಇನ್ನೂ ನಮ್ಮನ್ನ ಬಿಟ್ಟು ತೊಲಗಿಲ್ಲ ಎಂಬುದು ಇದರಿಂದ ತಿಳಿಯುತ್ತದೆ. ಇದು ಇನ್ನೂ ಎಷ್ಟು ಮಂದಿ ಬಾಲಕಿಯರನ್ನು ಬಲಿತೆಗೆದುಕೊಳ್ಳಲಿದೆಯೋ ತಿಳಿಯುತ್ತಿಲ್ಲ.

Continue Reading

ದೇಶ

Physical Abuse: ದೇಶದಲ್ಲಿ ಪ್ರತಿ ಗಂಟೆಗೊಮ್ಮೆ 4 ಮಹಿಳೆಯರ ಮೇಲೆ ಅತ್ಯಾಚಾರ; ಬೆಚ್ಚಿಬೀಳಿಸುವ ಅಂಕಿ-ಅಂಶ ಬಹಿರಂಗ

Physical Abuse: ದೇಶದಲ್ಲಿ ಸರಾಸರಿ ಪ್ರತಿ ಗಂಟೆಗೊಮ್ಮೆ 4 ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದೆ. ಎನ್ನುವ ವಿಚಾರ ಬೆಳಕಿಗೆ ಬಂದಿದೆ. 2017 ಮತ್ತು 2022ರ ಅಂಕಿ-ಅಂಶಗಳ ಪ್ರಕಾರ ಪ್ರತಿ ದಿನ ಸುಮಾರು 86 ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಪೈಕಿ ಬಹುತೇಕ ಪ್ರಕರಣಗಳಲ್ಲಿ ಪರಿಚಿತರಿಂದಲೇ ದೌರ್ಜನ್ಯ ನಡೆದಿದೆ ಎನ್ನುವುದು ಮತ್ತುಷ್ಟು ಭಯ ಹುಟ್ಟು ಹಾಕಿದೆ. ಪ್ರತಿ ಗಂಟೆಗೊಮ್ಮೆ ನಡೆಯುವ ನಾಲ್ಕು ಅತ್ಯಾಚಾರ ಪ್ರಕರಣಗಳ ಪೈಕಿ ಮೂರರಲ್ಲಿ ಪರಿಚಿತ ವ್ಯಕ್ತಿಯೇ ದೌರ್ಜನ್ಯ ಎಸಗಿರುವುದನ್ನು ಅಂಕಿ-ಅಂಶ ಬಹಿರಂಗಪಡಿಸಿದೆ.

VISTARANEWS.COM


on

Physical Abuse
Koo

ನವದೆಹಲಿ: ಕೋಲ್ಕಾತ್ತಾದ ಆರ್‌ಜಿ ಕರ್‌ (RG Kar Medical College and Hospital) ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿರುವ ಟ್ರೈನಿ ವೈದ್ಯೆಯ ಅತ್ಯಾಚಾರ ಹಾಗೂ ಬರ್ಬರ ಕೊಲೆ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಜತೆಗೆ ಮಹಿಳೆಯರ ಸುರಕ್ಷತೆ ಬಗ್ಗೆ ಅನುಮಾನ ಹುಟ್ಟುವಂತೆ ಮಾಡಿದೆ. ಈ ಮಧ್ಯೆ ಬೆಚ್ಚಿ ಬೀಳಿಸುವ ಅಂಶವೊಂದು ಬಹಿರಂಗಗೊಂಡಿದ್ದು, ದೇಶದಲ್ಲಿ ಸರಾಸರಿ ಪ್ರತಿ ಗಂಟೆಗೊಮ್ಮೆ 4 ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದೆ (Physical Abuse) ಎನ್ನುವ ವಿಚಾರ ಬೆಳಕಿಗೆ ಬಂದಿದೆ. 2017 ಮತ್ತು 2022ರ ಅಂಕಿ-ಅಂಶಗಳ ಪ್ರಕಾರ ಪ್ರತಿ ದಿನ ಸುಮಾರು 86 ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಪೈಕಿ ಬಹುತೇಕ ಪ್ರಕರಣಗಳಲ್ಲಿ ಪರಿಚಿತರಿಂದಲೇ ದೌರ್ಜನ್ಯ ನಡೆದಿದೆ ಎನ್ನುವುದು ಮತ್ತುಷ್ಟು ಭಯ ಹುಟ್ಟು ಹಾಕಿದೆ.

ಪ್ರತಿ ಗಂಟೆಗೊಮ್ಮೆ ನಡೆಯುವ ನಾಲ್ಕು ಅತ್ಯಾಚಾರ ಪ್ರಕರಣಗಳ ಪೈಕಿ ಮೂರರಲ್ಲಿ ಪರಿಚಿತ ವ್ಯಕ್ತಿಯೇ ದೌರ್ಜನ್ಯ ಎಸಗಿರುವುದನ್ನು ಅಂಕಿ-ಅಂಶ ಬಹಿರಂಗಪಡಿಸಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (National Crime Records Bureau-NCRB)ದ ವಾರ್ಷಿಕ ವರದಿಯ ಪ್ರಕಾರ, 2017 ಮತ್ತು 2022ರ ನಡುವೆ ಭಾರತದಲ್ಲಿ ಒಟ್ಟು 1.89 ಲಕ್ಷ ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ಕನಿಷ್ಠ 1.79 ಲಕ್ಷ ಪ್ರಕರಣಗಳಲ್ಲಿ ಅತ್ಯಾಚಾರಿ ಪರಿಚಿತ ವ್ಯಕ್ತಿಯೇ ಆಗಿದ್ದು, 9,670 ಪ್ರಕರಣಗಳಲ್ಲಿ ಸಂತ್ರಸ್ತೆಗೆ ಅತ್ಯಾಚಾರಿಯ ಬಗ್ಗೆ ಮಾಹಿತಿ ಇರಲಿಲ್ಲ.

ಸಂತ್ರಸ್ತರ ಪೈಕಿ 18ರಿಂದ 30 ವರ್ಷದೊಳಗಿನವರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಅಂದರೆ 1.89 ಲಕ್ಷ ಸಂತ್ರಸ್ತೆಯರ ಪೈಕಿ ಈ ವಯೋಮಾನದವರ ಸಂಖ್ಯೆ 1.13 ಲಕ್ಷ. ಇನ್ನು ಪ್ರತಿದಿನ ದಾಖಲಾಗಿ 86 ಪ್ರಕರಣಗಳಲ್ಲಿ 52 ಮಂದಿ 18ರಿಂದ 30 ವರ್ಷದೊಳಗಿನವರು.

ಉದ್ಯೋಗ ಸ್ಥಳದಲ್ಲಿ ಪರಿಸ್ಥಿತಿ ಹೇಗಿದೆ?

ಭಾರತದಾದ್ಯಂತ ವರದಿಯಾದ ಒಟ್ಟಾರೆ ಪ್ರಕರಣಗಳಿಗೆ ಹೋಲಿಸಿದರೆ ಉದ್ಯೋಗ ಸ್ಥಳದಲ್ಲಿ ಲೈಂಗಿಕ ಕಿರುಕುಳದ ಪ್ರಕರಣಗಳು ಬಹಳ ಕಡಿಮೆಯಾದರೂ ಈ ಅಂಕಿ-ಅಂಶಗಳೂ ಗಾಬರಿ ತರಿಸುತ್ತವೆ. ಪ್ರತಿದಿನ ಸರಾಸರಿ ಓರ್ವ ಮಹಿಳೆ ಉದ್ಯೋಗದ ಸ್ಥಳ ಅಥವಾ ಕಚೇರಿ ಆವರಣದಲ್ಲಿ ಲೈಂಗಿಕ ಕಿರುಕುಳವನ್ನು ಎದುರಿಸುತ್ತಾರೆ ಎನ್‌ಸಿಆರ್‌ಬಿ ತಿಳಿಸಿದೆ. ಎನ್‌ಸಿಆರ್‌ಬಿ 2014ರಿಂದ ಕಚೇರಿಗಳಲ್ಲಿ ನಡೆಯುತ್ತಿರುವ ಮಹಿಳೆಯರ ವಿರುದ್ಧದ ದೌರ್ಜನ್ಯ ಪ್ರಕರಣಗಳ ಮಾಹಿತಿ ಕಲೆ ಹಾಕುತ್ತಿದೆ.

ಆರಂಭದ ವರ್ಷಗಳಲ್ಲಿ (2014, 2015) ಎರಡು ವಿಭಾಗಗಳ ಮೂಲಕ ಈ ಅಂಕಿ ಅಂಶವನ್ನು ಕಲೆ ಹಾಕಲಾಗುತ್ತಿತ್ತು. ಕಚೇರಿಗಳಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯ ಎನ್ನುವ ಎರಡು ವಿಭಾಗಗಳನ್ನು ಮಾಡಿ ಮಾಹಿತಿ ಸಂಗ್ರಹಿಸಲಾಗುತ್ತಿತ್ತು. ಬಳಿಕ ಇವೆರಡನ್ನು ಸಂಯೋಜಿಸಿ ʼಉದ್ಯೋಗದ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯʼ ಒಂಬ ಒಂದೇ ವಿಭಾಗದಲ್ಲಿ ಮಾಹಿರಿ ಸಂಗ್ರಹಿಸಿಡಲಾಗುತ್ತಿದೆ.

2014-2022ರ ಮಧ್ಯೆ ಉದ್ಯೋಗದ ಸ್ಥಳಗಳಲ್ಲಿ ಕನಿಷ್ಠ 4,231 ಲೈಂಗಿಕ ದೌರ್ಜನ್ಯ ಪ್ರಕರಗಳು ವರದಿಯಾಗಿವೆ. ಕಚೇರಿ ಆವರಣದಲ್ಲಿ ಲೈಂಗಿಕ ಕಿರುಕುಳದ ಪ್ರಕರಣಗಳ ಸಂಖ್ಯೆ ಕಡಿಮೆ ದಾಖಲಾದರೆ ಕೆಲಸಕ್ಕೆ ಸಂಬಂಧಿಸಿದ ಇತರ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬಂದಿದೆ. 2017ರ ನಂತರ ಪ್ರತಿ ವರ್ಷ 400ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ.

2014, 2015 ಮತ್ತು 2016ರಲ್ಲಿ ಎನ್‌ಸಿಆರ್‌ಬಿ ಮೇಲಾಧಿಕಾರಿಗಳು ಮತ್ತು ಸಹೋದ್ಯೋಗಿಗಳಿಂದ ನಡೆದ ಅತ್ಯಾಚಾರಗಳ ಸಂಖ್ಯೆಯನ್ನು ಬಹಿರಂಗಪಡಿಸಿದೆ. ಮೂರು ವರ್ಷಗಳಲ್ಲಿ ಇಂತಹ 1,795 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ನಂತರ ಈ ವರದಿಯಲ್ಲಿ ಮೇಲಾಧಿಕಾರಿಗಳು, ಸಹೋದ್ಯೋಗಿಗಳ ಜತೆಗೆ ಕುಟುಂಬ ಸದಸ್ಯರು ಮತ್ತು ಸ್ನೇಹಿತರನ್ನು ಸೇರಿಸಲಾಯಿತು.

ಕಾನೂನು ಏನು ಹೇಳುತ್ತದೆ?

ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆ ಕಾಯ್ದೆ 2013ರ ಪ್ರಕಾರ 10ಕ್ಕಿಂತ ಹೆಚ್ಚು ಕಾರ್ಮಿಕರನ್ನು ಹೊಂದಿರುವ ಎಲ್ಲ ಕಚೇರಿ / ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳದ ದೂರುಗಳನ್ನು ಸ್ವೀಕರಿಸಲು ಆಂತರಿಕ ಸಮಿತಿಗಳನ್ನು (Internal Committees) ರಚಿಸುವುದನ್ನು ಕಡ್ಡಾಯ. ಸಂತ್ರಸ್ತ ಮಹಿಳೆ ಅಥವಾ ಆಕೆಯ ಪರವಾಗಿ ಆಪ್ತರು ಲೈಂಗಿಕ ಕಿರುಕುಳದ ಲಿಖಿತ ದೂರು ಸಲ್ಲಿಸಬಹುದು.

ಇದನ್ನೂ ಓದಿ: Kolkata Doctor Murder Case: ಇಂದು ದೇಶಾದ್ಯಂತ ವೈದ್ಯರ ಮುಷ್ಕರ; ಏನಿರುತ್ತೆ? ಏನಿರಲ್ಲ?

Continue Reading
Advertisement
TJ Abraham
ಪ್ರಮುಖ ಸುದ್ದಿ15 mins ago

TJ Abraham : ಎಸ್ಎಂ ಕೃಷ್ಣರಿಂದ ಹಿಡಿದು ಸಿದ್ದರಾಮಯ್ಯವರೆಗೆ; ಕರ್ನಾಟಕ ರಾಜಕೀಯದ ದೊಡ್ಡ ಹುಲಿಗಳನ್ನೇ ಬೋನಿಗೆ ಬೀಳಿಸಿದ ಟಿ ಜೆ ಅಬ್ರಾಹಂ

Positive Pay System
ವಾಣಿಜ್ಯ30 mins ago

Positive Pay System: ಏನಿದು ಪಾಸಿಟಿವ್‌ ಪೇ ಸಿಸ್ಟಮ್‌? ಚೆಕ್ ಪಾವತಿ ಸುರಕ್ಷಿತಗೊಳಿಸುವುದು ಹೇಗೆ?

Dog attack
ವೈರಲ್ ನ್ಯೂಸ್39 mins ago

Dog Attack: 17 ಮಂದಿ ಮೇಲೆ ಬೀದಿ ನಾಯಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Kannada New Movie
ಬೆಂಗಳೂರು43 mins ago

Kannada New Movie: ಮಂಸೋರೆ ನಿರ್ದೇಶನದ ʼದೂರ ತೀರ ಯಾನʼ ಟೈಟಲ್ ಟೀಸರ್ ರಿಲೀಸ್‌

pralhad Joshi
ಬೆಂಗಳೂರು2 hours ago

Pralhad Joshi: ಸಿಎಂ ಮೇಲೆ ರಾಜ್ಯಪಾಲರ ಕ್ರಮ ಸರಿಯಾಗಿಯೇ ಇದೆ; ಪ್ರಲ್ಹಾದ್‌ ಜೋಶಿ ಸಮರ್ಥನೆ

CM Siddaramaiah
ಪ್ರಮುಖ ಸುದ್ದಿ2 hours ago

CM Siddaramaiah : ತಮ್ಮ ಮೇಲೆ ತನಿಖೆಗೆ ಆದೇಶಿಸಿದ ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಸಿಎಂ

Viral Video
Latest2 hours ago

Viral Video: ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ನೋಡುತ್ತ ದೇವಾಲಯದೊಳಗೇ ಹಸ್ತಮೈಥುನ!

Weight Loss Tips kannada
ಆರೋಗ್ಯ2 hours ago

5 Seeds for Weight Loss: ಈ 5 ಕಿರು ಬೀಜಗಳು ತೂಕ ಇಳಿಕೆಗೆ ಸಹಕಾರಿ

tungabhadra dam gate
ಪ್ರಮುಖ ಸುದ್ದಿ2 hours ago

Tungabhadra Dam: ಮುರಿದುಹೋದ 19ನೇ ಗೇಟ್‌ಗೆ ಸ್ಟಾಪ್‌ ಲಾಗ್‌ ಅಳವಡಿಕೆ ಯಶಸ್ವಿ, ಪೋಲಾಗುತ್ತಿದ್ದ ನೀರು ಬಂದ್!

CM Siddaramaiah
ಪ್ರಮುಖ ಸುದ್ದಿ2 hours ago

CM Siddaramaiah : ಸಿಎಂ ಸಿದ್ದರಾಮಯ್ಯಗೆ ಉರುಳಾಗಿರುವ ಮುಡಾ ಹಗರಣ ಏನು? ಇಲ್ಲಿದೆ ಎಲ್ಲ ಮಾಹಿತಿ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌