Murder Case: ಮಮತಾ ರಾಜ್ಯದಲ್ಲಿ ಕೊಲೆ ಸರಣಿ; ಬೆಂಗಳೂರಿನಿಂದ ಊರಿಗೆ ಬಂದಿದ್ದ ಯುವತಿಯ ರುಂಡ ಕಡಿದು ಕೊಲೆ! - Vistara News

Latest

Murder Case: ಮಮತಾ ರಾಜ್ಯದಲ್ಲಿ ಕೊಲೆ ಸರಣಿ; ಬೆಂಗಳೂರಿನಿಂದ ಊರಿಗೆ ಬಂದಿದ್ದ ಯುವತಿಯ ರುಂಡ ಕಡಿದು ಕೊಲೆ!

Murder Case: ಪಶ್ಚಿಮ ಬಂಗಾಳದಲ್ಲಿ 25 ವರ್ಷದ ಯುವತಿಯ ತಲೆ ಕಡಿದ ರಕ್ತಸಿಕ್ತ ದೇಹವು ಅವರ ಕುಟುಂಬದ ಹೊಲದಲ್ಲಿ ಪತ್ತೆಯಾಗಿದೆ. ಇದು ಅಲ್ಲಿನ ಜನರಲ್ಲಿ ಆಘಾತವನ್ನುಂಟು ಮಾಡಿದೆ. ಈ ಪ್ರದೇಶದ ಮಹಿಳೆಯರ ಸುರಕ್ಷತೆಯ ಬಗ್ಗೆ ಕಳವಳಗಳನ್ನು ಹುಟ್ಟುಹಾಕಿದೆ. ಯುವತಿ ಬಾತ್‌ ರೂಮ್‌ಗೆ ಹೋಗಿ ಬರುತ್ತಿರುವುದಾಗಿ ಹೇಳಿ ಹೋಗಿದ್ದಳು. ನಂತರ ನಾಪತ್ತೆಯಾಗಿದ್ದಳು. ಈ ಪ್ರಕರಣ ಪಶ್ಚಿಮ ಬಂಗಾಲದಲ್ಲಿ ನಡೆಯುತ್ತಿರುವ ಕೊಲೆ, ಹಿಂಸಾಚಾರ ಪ್ರಕರಣಕ್ಕೆ ಮತ್ತೊಂದು ಸೇರ್ಪಡೆಯಾದಂತಾಗಿದೆ.

VISTARANEWS.COM


on

Murder Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಒಂದು ಕಾಲದಲ್ಲಿ ಶಾಂತಿಯುತವಾದ ಗ್ರಾಮ ಎಂದು ಕರೆಸಿಕೊಂಡ ಶಕ್ತಿಗಢದ ನಾಡುರ್ ಝಪನತಾಲಾ ಆದಿವಾಸಿ ಪ್ಯಾರಾ ಎಂಬ ಗ್ರಾಮದಲ್ಲಿ (ಪಶ್ಚಿಮ ಬಂಗಾಲ) ಈಗ ಹಿಂಸಾಚಾರದ ಕೃತ್ಯಗಳೇ ನಡೆಯುತ್ತಿವೆ. ಈ ಗ್ರಾಮದಲ್ಲಿ 25 ವರ್ಷದ ಪ್ರಿಯಾಂಕಾ ಹನ್ಸ್ಡಾ ಎಂಬ ಯುವತಿಯ ತಲೆ ಕಡಿದ (Murder Case) ರಕ್ತಸಿಕ್ತ ದೇಹವು ಅವರ ಕುಟುಂಬದ ಹೊಲದಲ್ಲಿ ಪತ್ತೆಯಾಗಿದೆ. ಇದು ಅಲ್ಲಿನ ಜನರಲ್ಲಿ ಆಘಾತವನ್ನುಂಟು ಮಾಡಿದೆ. ಈ ಪ್ರದೇಶದ ಮಹಿಳೆಯರ ಸುರಕ್ಷತೆಯ ಬಗ್ಗೆ ಕಳವಳಗಳನ್ನು ಹುಟ್ಟು ಹಾಕಿದೆ.

ವರದಿ ಪ್ರಕಾರ, ಇತ್ತೀಚೆಗೆ ಬೆಂಗಳೂರಿನಿಂದ ಮನೆಗೆ ಮರಳಿದ್ದ ಪ್ರಿಯಾಂಕಾ, ಬಾತ್‍ರೂಂಗೆ ಹೋಗುತ್ತಿರುವುದಾಗಿ ಕುಟುಂಬದವರಿಗೆ ತಿಳಿಸಿದ್ದಳು. ನಂತರ ನಾಪತ್ತೆಯಾಗಿದ್ದಳು. ಅವಳು ಹಿಂತಿರುಗಿ ಬರದಿದ್ದಾಗ, ಚಿಂತೆಗೀಡಾದ ಅವಳ ತಾಯಿ ಅವಳನ್ನು ಹುಡುಕಲು ಪ್ರಾರಂಭಿಸಿದರು. ಆದರೆ ಪ್ರಿಯಾಂಕಾ ಅವಳ ನಿರ್ಜೀವ ದೇಹವು ಕುಟುಂಬದವರ ಹೊಲದಲ್ಲೇ ಬಿದ್ದಿತ್ತು. ಅವಳ ಕುತ್ತಿಗೆಯನ್ನು ಕತ್ತರಿಸಲಾಗಿತ್ತು. ಈ ಭಯಾನಕ ದೃಶ್ಯವು ಅವಳ ಕುಟುಂಬವನ್ನು ಆಘಾತಕ್ಕೀಡುಮಾಡಿದೆ. ಈ ಬಗ್ಗೆ ಅವಳ ಸಮುದಾಯವು ಆಕ್ರೋಶಗೊಂಡಿದೆ.

ಸ್ಥಳೀಯ ಪೊಲೀಸರು ಈ ಪ್ರಕರಣದ ಬಗ್ಗೆ ತೀವ್ರ ತನಿಖೆ ಆರಂಭಿಸಿದ್ದಾರೆ. ಈ ಘಟನೆಯು ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಕ್ರೂರ ದಾಳಿಗಳ ಪಟ್ಟಿಗೆ ಮತ್ತೊಂದು ಸೇರ್ಪಡೆಯಾದಂತಾಗಿದೆ. ಅಪರಾಧಿಗಳನ್ನು ಕೂಡಲೇ ಕಂಡುಹಿಡಿದು ಶಿಕ್ಷಿಸುವಂತೆ ಜನಾಗ್ರಹ ಕೇಳಿ ಬರುತ್ತಿದೆ. ಪ್ರಿಯಾಂಕಾ ಅವರ ಹತ್ಯೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಮಹಿಳೆಯರನ್ನು ರಕ್ಷಿಸುವ ಮಮತಾ ಬ್ಯಾನರ್ಜಿ ಅವರ ರಾಜ್ಯ ಸರ್ಕಾರದ ಬದ್ಧತೆಯನ್ನು ಜನರು ಪ್ರಶ್ನಿಸುತ್ತಿದ್ದಾರೆ.

ಈ ನಡುವೆ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಅವಳು ಕೊನೆಯದಾಗಿ ಚಾಟ್ ಮಾಡಿದ ಮತ್ತು ಅವಳು ಮನೆಯಿಂದ ಹೊರಟಾಗ ಕರೆ ಮಾಡಿದ ಜನರನ್ನು ಪತ್ತೆ ಹಚ್ಚಿದ್ದಾರೆ. ಜಿಲ್ಲಾ ಪೊಲೀಸರ ಅಧಿಕಾರಿಗಳ ಪ್ರಕಾರ, ಮನೆಯಿಂದ ಹೊರಡುವ ಮೊದಲು ಸಂತ್ರಸ್ತೆಗೆ ಬಂದ ಕರೆ ಅವಳಿಗೆ ಚೆನ್ನಾಗಿ ತಿಳಿದಿರುವ ವ್ಯಕ್ತಿಯಿಂದ ಬಂದಿದೆ ಎಂದು ತನಿಖೆಯಿಂದ ತಿಳಿದು ಬಂದಿದೆ.

ಇದನ್ನೂ ಓದಿ: ಅಟಲ್ ಸೇತು ಮೇಲಿಂದ ಸಮುದ್ರಕ್ಕೆ ಹಾರಲೆತ್ನಿಸಿದ ಮಹಿಳೆಯನ್ನು ರಕ್ಷಿಸಿದ್ದು ಹೇಗೆ? ವಿಡಿಯೊ ನೋಡಿ

ಆಗಸ್ಟ್ 12ರಂದು ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಕ್ರೂರ ಸಾವಿನ ಬಗ್ಗೆ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ ಈ ಬೆಳವಣಿಗೆ ಸಂಭವಿಸಿದೆ. ವೈದ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾ ಪೊಲೀಸರು ಶಂಕಿತನನ್ನು ಬಂಧಿಸಿದ್ದಾರೆ. ಕೋಲ್ಕತಾ ಹೈಕೋರ್ಟ್‍ನ ಆದೇಶದ ಮೇರೆಗೆ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆಯನ್ನು ವಹಿಸಿಕೊಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kundapura Kannada Habba: ನನ್ನ ಸಿನಿಮಾ ಕಥೆಗಳಿಗೆ ಊರು, ಯಕ್ಷಗಾನವೇ ಪ್ರೇರಣೆ; ರಿಷಬ್ ಶೆಟ್ಟಿ

ಎಲ್ಲಿಗೆ ಹೋದರೂ, ಏನೇ ಮಾಡಿದರೂ, ಎಲ್ಲಿಂದ ಬಂದಿದ್ದೇವೆ (Kundapura Kannada Habba) ಎನ್ನುವುದು ಮುಖ್ಯ. ಆ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ನನ್ನ ಸಿನಿಮಾದ ಎಲ್ಲ ಕಥೆಗಳಿಗೂ ಕುಂದಾಪುರದ ನನ್ನೂರು ಕೆರಾಡಿಯೇ ಕಾರಣ. ನಾನು ಬೆಳೆದ ಪರಿಸರವೇ ಪ್ರೇರಣೆ ಎಂದು ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ತಿಳಿಸಿದ್ದಾರೆ.

VISTARANEWS.COM


on

Kundapura Kannada Habba
Koo

ಬೆಂಗಳೂರು: ನನ್ನ ಸಿನಿಮಾದ ಕಥೆಗಳಿಗೆ ನನ್ನ ಊರು ಮತ್ತು ಯಕ್ಷಗಾನವೇ ಪ್ರೇರಣೆ ಎಂದು ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ (Kundapura Kannada Habba) ಹೇಳಿದರು. ‘ಕುಂದಾಪ್ರ ಕನ್ನಡ ಪ್ರತಿಷ್ಠಾನ’ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ‘ಕುಂದಾಪುರ ಕನ್ನಡ ಹಬ್ಬ-2024’ ದ ಮೊದಲ ದಿನವಾದ ಶನಿವಾರ ‘ಊರ ಗೌರವ’ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಎಲ್ಲಿಗೆ ಹೋದರೂ, ಏನೇ ಮಾಡಿದರೂ, ಎಲ್ಲಿಂದ ಬಂದಿದ್ದೇವೆ ಎನ್ನುವುದು ಮುಖ್ಯ. ಆ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ನನ್ನ ಸಿನಿಮಾದ ಎಲ್ಲ ಕಥೆಗಳಿಗೂ ಕುಂದಾಪುರದ ನನ್ನೂರು ಕೆರಾಡಿಯೇ ಕಾರಣ. ನಾನು ಬೆಳೆದ ಪರಿಸರವೇ ಪ್ರೇರಣೆ. ಅದರಲ್ಲೂ ಓದದೆಯೇ ರಾಮಾಯಣ-ಮಹಾಭಾರತದ ಸಾರ ತಿಳಿಯಲು ಯಕ್ಷಗಾನ ಕಾರಣ. ‘ಕಾಂತಾರ’ ಸಿನಿಮಾ ಚಿತ್ರೀಕರಣ ಕೂಡ ಕುಂದಾಪುರ ಪರಿಸರದಲ್ಲೇ ಆಗಿರುವುದು ಎಂದು ಅವರು ತಿಳಿಸಿದರು.

ಇದನ್ನೂ ಓದಿ: 7th pay commission : 7ನೇ ವೇತನ ಆಯೋಗ ಜಾರಿ ಬಳಿಕ ನೌಕರರ ಸಂಬಳ ಏರಿಕೆ ಎಷ್ಟು? ಅಧಿಕೃತ ಪಟ್ಟಿ ಬಿಡುಗಡೆ

ನಮ್ಮ ಭಾಷೆ ಸಂಸ್ಕೃತಿ ಮಕ್ಕಳಿಗೆ ಗೊತ್ತಾಗಬೇಕು. ಅದಕ್ಕಾಗಿ ಇಂಥ ಹಬ್ಬಗಳು ಅತ್ಯಗತ್ಯ. ತುಳಸಿ ಕಟ್ಟೆಗಳು ಅಪರೂಪ ಆಗಿರುವ ಈ ಕಾಲದಲ್ಲಿ ಇಲ್ಲಿ ತುಳಸಿ ಕಟ್ಟೆ ಇಟ್ಟು ಉದ್ಘಾಟನೆ ನಡೆಸಿರುವುದು ಉತ್ತಮ ಸಂಗತಿ. ನಾನು‌ ಕೂಡ ನನ್ನ ಪ್ರತಿ ಸಿನಿಮಾದಲ್ಲೂ ಅಕ್ಕಿಮುಡಿ, ನೆಟ್ಟಿ ಮುಂತಾದವನ್ನು ತೋರಿಸುತ್ತಿರುತ್ತೇನೆ ಎಂದು ರಿಷಬ್ ಶೆಟ್ಟಿ ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಭಾಷೆಯ ಉಳಿವು ಬೆಳವಣಿಗೆ ದೃಷ್ಟಿಯಿಂದ ಈ ಕುಂದಾಪುರ ಕನ್ನಡ ಹಬ್ಬ ಉತ್ತಮ ಪ್ರಯೋಗ. ದಿನನಿತ್ಯದ ಬಳಕೆಯಲ್ಲಿ ಸಾಧ್ಯವಾದಷ್ಟೂ ಅಧಿಕ ಕುಂದಾಪುರ ಕನ್ನಡ ಬಳಕೆ ಆಗಲಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರು, ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಮಾರಣಕಟ್ಟೆ ಎಂ.ಎಸ್. ಮಂಜ ಚಾರಿಟಬಲ್ ಟ್ರಸ್ಟ್‌ನ ಕೃಷ್ಣಮೂರ್ತಿ ಮಂಜ, ಲೈಫ್‌ಲೈನ್ ಫೀಡ್ಸ್ ಪ್ರೈ.ಲಿ. ಎಂಡಿ ಕಿಶೋರ್ ಕುಮಾರ್ ಹೆಗ್ಡೆ, ಕುಂದಾಪ್ರ ಕನ್ನಡ ಪ್ರತಿಷ್ಠಾನದ ಗೌರವಾಧ್ಯಕ್ಷ ಉದಯ ಹೆಗ್ಡೆ, ಅಧ್ಯಕ್ಷ ಡಾ.ದೀಪಕ್ ಶೆಟ್ಟಿ, ಉಪಾಧ್ಯಕ್ಷ ನರಸಿಂಹ ಬೀಜಾಡಿ, ಕಾರ್ಯದರ್ಶಿ ರಾಘವೇಂದ್ರ ಕಾಂಚನ್, ಕೋಶಾಧಿಕಾರಿ ವಿಜಯ್ ಶೆಟ್ಟಿ ಹಾಲಾಡಿ ಮುಂತಾದವರು ಉಪಸ್ಥಿತರಿದ್ದರು.

ಹಬ್ಬಕ್ಕೆ ತಾರಾ ಮೆರುಗು

ಕುಂದಾಪುರ ಕನ್ನಡ ಹಬ್ಬದ ಭಾನುವಾರದ ಕಾರ್ಯಕ್ರಮಕ್ಕೆ ಖ್ಯಾತ ನಟಿ ಪ್ರಿಯಾಂಕಾ ಉಪೇಂದ್ರ, ನಟ-ನಿರ್ದೇಶಕ ರಾಜ್ ಬಿ. ಶೆಟ್ಟಿ, ಗೋಲ್ಡನ್ ಸ್ಟಾರ್ ಗಣೇಶ್, ನಟ-ನಿರ್ಮಾಪಕ ಪ್ರಮೋದ್ ಶೆಟ್ಟಿ ಆಗಮಿಸಲಿದ್ದಾರೆ. ಸೆಂಚುರಿ ಸ್ಟಾರ್ ಶಿವರಾಜ್‌ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಅವರನ್ನೂ ಆಹ್ವಾನಿಸಲಾಗಿದ್ದು, ಅವರೂ ಬರುವ ನಿರೀಕ್ಷೆ ಇದೆ. ಅಲ್ಲದೆ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರು ಇದೇ ಮೊದಲು ಸಂಗೀತ ಸಂಜೆ ಕಾರ್ಯಕ್ರಮ ನೀಡುತ್ತಿದ್ದು, ಇದು ಭಾನುವಾರದ ಪ್ರಮುಖ ಆಕರ್ಷಣೆ ಆಗಿರಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಇದನ್ನೂ ಓದಿ: Pralhad Joshi: ಸಿಎಂ ಮೇಲೆ ರಾಜ್ಯಪಾಲರ ಕ್ರಮ ಸರಿಯಾಗಿಯೇ ಇದೆ; ಪ್ರಲ್ಹಾದ್‌ ಜೋಶಿ ಸಮರ್ಥನೆ

ಕುಂದಾಪುರ ಕನ್ನಡ ಹಬ್ಬ ಆ.18 ರ ಕಾರ್ಯಕ್ರಮಗಳು

ಬೆಳಗ್ಗೆ 10 ಗಂಟೆಗೆ ಬಯಲಾಟ- ಗ್ರಾಮೀಣ ಉತ್ಸವ, ತಾರೆಯರ ಜತೆ ಮಾತುಕತೆ, ಕವಿತೆ., ಬೆಳಗ್ಗೆ 11 ಗಂಟೆಗೆ ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ಕಲಾವಿದರಿಂದ ʼಡಾನ್ಸ್ ಕುಂದಾಪ್ರ ಡಾನ್ಸ್ʼ, ಬೆಳಗ್ಗೆ 11.15 ಕ್ಕೆ ಕುಂದಾಪುರ ಭಾಷೆ ಬದುಕು ಬರಹ ಕುರಿತ ನುಡಿಚಾವಡಿ, ಮಧ್ಯಾಹ್ನ 12 ಗಂಟೆಗೆ ಮನು ಹಂದಾಡಿ ಅವರಿಂದ ʼಹಂದಾಡ್ತಾ ನೆಗ್ಯಾಡಿʼ ಹಾಸ್ಯ ಕಾರ್ಯಕ್ರಮ., ಮಧ್ಯಾಹ್ನ 1.30 ಕ್ಕೆ ಚಂಡೆ-ಜಂಬೆ ಜುಗಲ್ಬಂದಿ ಕಾರ್ಯಕ್ರಮ ʼಪೆಟ್ ಒಂದೇ, ಸ್ವರ ಬೇರೆʼ, ಮಧ್ಯಾಹ್ನ 2.30 ಕ್ಕೆ ಮಂದರ್ತಿ ಶ್ರೀ ದುರ್ಗಾಪರಮೇಶ್ವರಿಯ ನೃತ್ಯಗಾಥೆ ʼಮಂದಾರ್ತಿ ಮಾದೇವಿʼ, ಸಂಜೆ 4.30 ಕ್ಕೆ ರಥೋತ್ಸವ, ರಾತ್ರಿ 7.30 ಗಂಟೆಗೆ ʼರವಿ ಬಸ್ರೂರ್ ನೈಟ್ಸ್ʼ ವಿಶೇಷ ಸಂಗೀತ ಸಂಜೆ.

Continue Reading

ಸಿನಿಮಾ

Prabhas New Film: ಹೊಸ ಯುದ್ಧ ಶುರು; ಪ್ರಭಾಸ್ ಅಭಿನಯದ ಮುಂದಿನ ಚಿತ್ರ ಸುಳಿವು!

ಕಲ್ಕಿ 2898ಎಡಿ ಚಿತ್ರದ ಯಶಸ್ಸಿನ ಬಳಿಕ ಪ್ರಭಾಸ್ ಅಭಿನಯದ ಮುಂದಿನ ಚಿತ್ರದ (Prabhas New Film) ಘೋಷಣೆಯಾಗಿದೆ. ಶೀಘ್ರದಲ್ಲೇ ಇದರ ಚಿತ್ರೀಕರಣ ಪ್ರಾರಂಭವಾಗಲಿರುವುದಾಗಿ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾಗಿದೆ. ಇನ್ನೂ ಹೆಸರಿಡದ ಈ ಚಿತ್ರದಲ್ಲಿ ಪ್ರಭಾಸ್ ಜೊತೆಗೆ ಹನು ರಾಘವಪುಡಿ, ಮಿಥುನ್ ಚಕ್ರವರ್ತಿ ಮತ್ತು ಮಾನ್ವಿ ಕೂಡ ನಟಿಸಲಿದ್ದಾರೆ ಎನ್ನುವ ಸುಳಿವು ನೀಡಲಾಗಿದೆ.

VISTARANEWS.COM


on

By

Prabhas New Film
Koo

ಕಲ್ಕಿ 2898ಎಡಿ (Kalki 2898 AD) ಬೃಹತ್ ಯಶಸ್ಸಿನ ಬಳಿಕ ಇದೀಗ ಪ್ರಭಾಸ್ (actor prabhas) ಅಭಿನಯದ ಮುಂದಿನ ಚಿತ್ರದ (Prabhas New Film) ಘೋಷಣೆಯಾಗಿದೆ. ಇನ್ನೂ ಹೆಸರಿಡದ ಈ ಐತಿಹಾಸಿಕ ಚಿತ್ರದಲ್ಲಿ ಪ್ರಭಾಸ್ ಜೊತೆಗೆ ಹನು ರಾಘವಪುಡಿ, ಮಿಥುನ್ ಚಕ್ರವರ್ತಿ ಮತ್ತು ಮಾನ್ವಿ ಕೂಡ ನಟಿಸಲಿದ್ದಾರೆ. ಈ ಕುರಿತು ಮೈತ್ರಿ ಮೂವಿ ಮೇಕರ್ಸ್ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದೆ.

ʼಪ್ರಭುತ್ವಕ್ಕಾಗಿ ಯುದ್ಧ ನಡೆದಾಗ ಒಬ್ಬ ಯೋಧ ಯಾವುದಕ್ಕಾಗಿ ತಾವು ಹೋರಾಡಬೇಕು ಎಂಬ ಬಗ್ಗೆ ಹೊಸ ಭಾಷ್ಯ ಬರೆದʼ ಎಂಬರ್ಥದ ಶೀರ್ಷಿಕೆಯೊಂದಿಗೆ ಈ ಪೋಸ್ಟ್ ಅನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾಗಿದೆ. 1940ರ ದಶಕದ ಕಥೆಯನ್ನು ಆಧರಿಸಿರುವ ಐತಿಹಾಸಿಕ ಕಾಲ್ಪನಿಕ ಚಿತ್ರ ಇದು ಎನ್ನಲಾಗಿದ್ದು, ಶೀಘ್ರದಲ್ಲೇ ಚಿತ್ರೀಕರಣ ಪ್ರಾರಂಭವಾಗುತ್ತದೆ ಎನ್ನುವ ಸುಳಿವನ್ನು ಪೋಸ್ಟ್ ನಲ್ಲಿ ಹಂಚಿಕೊಳ್ಳಲಾಗಿದೆ.


ಬಿಡುಗಡೆಯಾದ ಸುಮಾರು ಎರಡು ತಿಂಗಳ ಬಳಿಕ ಕಲ್ಕಿ 2898ಎಡಿ ಈಗ ಅದರ ಒಟಿಟಿಯಲ್ಲಿ ಬಿಡುಗಡೆಗೆ ಸಿದ್ಧವಾಗಿದೆ. ಶೀಘ್ರದಲ್ಲೇ ಪ್ರೈಮ್ ವಿಡಿಯೋ ಮತ್ತು ನೆಟ್‌ಫ್ಲಿಕ್ಸ್‌ನಲ್ಲಿ ಇದು ಪ್ರದರ್ಶನ ಕಾಣಲಿದೆ ಎಂದು ಬಹಿರಂಗ ಪಡಿಸಲಾಗಿದೆ. ಒಟಿಟಿಯಲ್ಲಿ ನಾಗ್ ಅಶ್ವಿನ್ ಅವರ ನಿರ್ದೇಶನದ ತೆಲುಗು ಆವೃತ್ತಿಯನ್ನು ಮೊದಲು ಸ್ಟ್ರೀಮ್ ಮಾಡಿದರೆ ಬಳಿಕ ಹಿಂದಿ ಆವೃತ್ತಿ ಪ್ರೇಕ್ಷಕರಿಗೆ ಲಭ್ಯವಾಗಲಿದೆ.

2898 ಎಡಿಯಲ್ಲಿ ಅವಕಾಶ ಕೊಟ್ಟ ಚಿತ್ರ ನಿರ್ದೇಶಕ ನಾಗ್ ಅಶ್ವಿನ್ ಅವರನ್ನು ಶ್ಲಾಘಿಸಿರುವ ಪ್ರಭಾಸ್, ನಾಗ್‌ನಂತಹ ದೂರದೃಷ್ಟಿಯ ನಿರ್ದೇಶಕ ಮತ್ತು ಅಸಾಧಾರಣ ಪಾತ್ರವರ್ಗದೊಂದಿಗೆ ಕಲ್ಕಿಯಲ್ಲಿ ಕೆಲಸ ಮಾಡುವುದು ನಿಜವಾಗಿಯೂ ಹರ್ಷದಾಯಕವಾಗಿದೆ. ಚಲನಚಿತ್ರವು ಪುರಾಣ ಮತ್ತು ಭವಿಷ್ಯದ ಅಂಶಗಳ ಮಿಶ್ರಣದೊಂದಿಗೆ ಕಥೆ ಹೇಳುವುದು ಮಾತ್ರವಲ್ಲದೆ ಮಾನವ ಸ್ವಭಾವದ ಸಂಕೀರ್ಣತೆಗಳನ್ನು ಆಳವಾಗಿ ಪರಿಶೀಲಿಸುತ್ತದೆ. ಶಕ್ತಿ ಮತ್ತು ನಂಬಿಕೆಯಿಂದ ಪ್ರೇರಿತವಾಗಿರುವ ಭೈರವನ ಪಾತ್ರವು ರೋಮಾಂಚಕವಾಗಿದೆ. ಕಲ್ಕಿ 2898ಎಡಿ ಥಿಯೇಟರ್‌ಗಳಲ್ಲಿ ಪ್ರೇಕ್ಷಕರಿಂದ ಪಡೆದ ಎಲ್ಲಾ ಪ್ರೀತಿಯ ಅನಂತರ ಪ್ರೈಮ್ ವಿಡಿಯೋದಲ್ಲಿ ಅದರ ಜಾಗತಿಕ ಪ್ರೀಮಿಯರ್‌ಗಾಗಿ ಇನ್ನು ಕಾಯಲು ಸಾಧ್ಯವಿಲ್ಲ. ನಾವು ಅದನ್ನು ಮಾಡುವುದನ್ನು ಆನಂದಿಸಿದಂತೆ ವೀಕ್ಷಕರು ಅದನ್ನು ನೋಡಿ ಆನಂದಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.


ಜೂನ್ 27ರಂದು ಬಿಡುಗಡೆಯಾದ ಕಲ್ಕಿ 2898ಎಡಿಯಲ್ಲಿ ಪ್ರಭಾಸ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ಅಮಿತಾಭ್ ಬಚ್ಚನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರವು ಪ್ರೇಕ್ಷಕರಿಂದ ಅಗಾಧವಾದ ಪ್ರತಿಕ್ರಿಯೆಯನ್ನು ಗಳಿಸಿತು. ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 1000 ಕೋಟಿ ರೂಪಾಯಿಗಳನ್ನು ಬಾಚಿಕೊಂಡಿತ್ತು.

ಇದನ್ನೂ ಓದಿ: Rakshit Shetty: ಕಾಪಿ ರೈಟ್ ಉಲ್ಲಂಘನೆ; ರಕ್ಷಿತ್ ಶೆಟ್ಟಿಗೆ 20 ಲಕ್ಷ ರೂ. ಠೇವಣಿ ಇಡುವಂತೆ ದೆಹಲಿ ಹೈಕೋರ್ಟ್ ಆದೇಶ

ಈ ಬಗ್ಗೆ ಹಿಂದೆ ಬಿಗ್ ಬಿ ಕೂಡ ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಷಯವನ್ನು ಹಂಚಿಕೊಂಡು ಚಿತ್ರದ ಯಶಸ್ಸಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದರು. ಅಲ್ಲದೇ ಕಲ್ಕಿಯ ಸಾರವು ಒಳಗೆ ಮತ್ತು ಹೊರಗೆ ಪ್ರತಿಧ್ವನಿಸುತ್ತಿದೆ. ರೆ. ಕಲ್ಕಿ ಚಿತ್ರದ ಸೀಕ್ವೆಲ್‌ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ ಎಂದು ಹೇಳಿಕೊಂಡಿದ್ದರು.

Continue Reading

ಬೆಂಗಳೂರು

Government Employee: ಹಳೇ ಪಿಂಚಣಿ ವ್ಯವಸ್ಥೆ (OPS) ಜಾರಿ ಸಾಧ್ಯತೆ ಪರಿಶೀಲನೆಗೆ ಸರ್ಕಾರದಿಂದ ಸಮಿತಿ ಪುನರ್‌ ರಚನೆ

ರಾಜ್ಯ ಸರ್ಕಾರಿ ನೌಕರರ ಪ್ರಮುಖ (Government Employee) ಬೇಡಿಕೆಯಾದ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಲು ರಾಜ್ಯ ಸರ್ಕಾರವು ಐಎಎಸ್‌ ಅಧಿಕಾರಿ ಅಂಜುಂ ಪರ್ವೇಜ್‌ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ಪುನರ್‌ ರಚಿಸಿ ಆದೇಶಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

NPS
ಸಾಂದರ್ಭಿಕ ಚಿತ್ರ.
Koo

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ (Government Employee) ಪ್ರಮುಖ ಬೇಡಿಕೆಯಾದ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಲು ರಾಜ್ಯ ಸರ್ಕಾರವು ಐಎಎಸ್‌ ಅಧಿಕಾರಿ ಅಂಜುಂ ಪರ್ವೇಜ್‌ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ಪುನರ್‌ ರಚಿಸಿ (NPS) ಆದೇಶಿಸಿದೆ. ರಾಜ್ಯ ಸರ್ಕಾರವು ಈಗಾಗಲೇ 7ನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸಿದ್ದು, ಸರ್ಕಾರಿ ನೌಕರರ ಮತ್ತೊಂದು ಪ್ರಮುಖ ಬೇಡಿಕೆಯಾದ ಎನ್‌ಪಿಎಸ್‌ ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆ ಜಾರಿಗೊಳಿಸುವ ಕುರಿತು ಸಮಿತಿಯನ್ನು ಪುನರ್‌ ರಚಿಸಿ ಆದೇಶಿಸಿದೆ.

ಇದನ್ನೂ ಓದಿ: Bengaluru Power Cut: ಗಮನಿಸಿ… ಬೆಂಗಳೂರಿನ ಈ ಪ್ರದೇಶಗಳಲ್ಲಿ ಆ.18ರಂದು ಕರೆಂಟ್‌ ಇರಲ್ಲ

ರಾಜ್ಯದಲ್ಲಿ ಏಪ್ರಿಲ್‌ 01 2006ರಂದು ಮತ್ತು ತದನಂತರ ಸರ್ಕಾರಿ ಸೇವೆಗೆ ಸೇರಿರುವ ಎಲ್ಲಾ ಸರ್ಕಾರಿ ನೌಕರರಿಗೆ ಕಡ್ಡಾಯವಾಗಿ ರಾಷ್ಟ್ರೀಯ ಪಿಂಚಣಿ ಯೋಜನೆ ಜಾರಿಗೆ ತರಲಾಗಿದೆ. ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಮಗ್ರವಾಗಿ ಪರಿಶೀಲಿಸಿ, ರಾಜ್ಯ ಸರ್ಕಾರಕ್ಕೆ ಸೂಕ್ತ ವರದಿಯನ್ನು ಸಲ್ಲಿಸಲು ಸಮಿತಿಯನ್ನು ಪುನರ್‌ ರಚಿಸಿ ಆದೇಶಿಸಲಾಗಿದೆ.

ಈ ಸಮಿತಿಯು ಈಗಾಗಲೇ ಹಳೆಯ ಪಿಂಚಣಿ ಯೋಜನೆಯನ್ನು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮದ ಬಗ್ಗೆ ಅಧ್ಯಯನ ನಡೆಸಿ, ವರದಿ ಸಲ್ಲಿಸಲು ಆದೇಶದಲ್ಲಿ ಸೂಚಿಸಲಾಗಿದೆ.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್‌ ಅವರ ಅಧ್ಯಕ್ಷತೆಯಲ್ಲಿ ಸದಸ್ಯರುಗಳಾಗಿ ಐಎಎಸ್‌ ಅಧಿಕಾರಿಗಳಾದ ರಿತೇಶ್‌ ಕುಮಾರ್‌ ಸಿಂಗ್‌, ಅಮಲಾನ್‌ ಆದಿತ್ಯ ಬಿಸ್ವಾಸ್‌, ಡಾ.ವಿಶಾಲ್‌ ಆರ್. ಹಾಗೂ ಸದಸ್ಯ ಕಾರ್ಯದರ್ಶಿಯಾಗಿ ಡಾ.ಎಂ.ಟಿ. ರೇಜು ಸಮಿತಿಯನ್ನು ಪುನರ್‌ ರಚಿಸಿ, ಆದೇಶಿಸಲಾಗಿದೆ.

ಇದನ್ನೂ ಓದಿ: Kannada New Movie: ಸಿದ್ದು ಪೂರ್ಣಚಂದ್ರ ನಿರ್ದೇಶನದ ‘ಈ ಪಾದ ಪುಣ್ಯ ಪಾದ’ ಚಿತ್ರಕ್ಕೆ ವಿ. ನಾಗೇಂದ್ರ ಪ್ರಸಾದ್ ಕ್ಲಾಪ್

ಸಮಿತಿಯು ತನ್ನದೇ ಆದ ಕಾರ್ಯವಿಧಾನಗಳನ್ನು ರೂಪಿಸಿಕೊಳ್ಳುವಲ್ಲಿ ಸಕ್ಷಮವಾಗಿರುತ್ತದೆ. ಸಮಿತಿಯ ಪರಿಶೀಲನೆಗೊಳಪಟ್ಟ ಅಂಶಗಳಿಗೆ ಅಗತ್ಯವೆನಿಸಿದ ಮಾಹಿತಿಗಳನ್ನು ಒದಗಿಸಲು ಸರ್ಕಾರದ ಎಲ್ಲಾ ಇಲಾಖೆಗಳು ನಿಗದಿತ ಕಾಲಮಿತಿಯೊಳಗೆ ಸೂಕ್ತ ನೆರವು ನೀಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

Continue Reading

ವಾಣಿಜ್ಯ

Positive Pay System: ಏನಿದು ಪಾಸಿಟಿವ್‌ ಪೇ ಸಿಸ್ಟಮ್‌? ಚೆಕ್ ಪಾವತಿ ಸುರಕ್ಷಿತಗೊಳಿಸುವುದು ಹೇಗೆ?

ಧನಾತ್ಮಕ ಪಾವತಿ ವ್ಯವಸ್ಥೆಯು (Positive Pay System) ಬ್ಯಾಂಕಿಂಗ್ ವ್ಯವಸ್ಥೆಯ ಭದ್ರತೆಯನ್ನು ಹೆಚ್ಚಿಸುವ ಸಲುವಾಗಿ ಮತ್ತು ಚೆಕ್ ವಹಿವಾಟಿನ ವಂಚನೆಗಳನ್ನು ತಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ಪರಿಚಯಿಸಿರುವ ಹೊಸ ಕ್ರಮವಾಗಿದೆ. ಇದನ್ನು ದೇಶದ ಬಹುತೇಕ ಬ್ಯಾಂಕ್ ಗಳು ಅಳವಡಿಸಿಕೊಂಡಿದ್ದು, ಇದರ ನಿಯಮಗಳು, ಪ್ರಯೋಜನಗಳು ಏನು ಎನ್ನುವ ಕುರಿತು ಇಲ್ಲಿದೆ ಮಾಹಿತಿ.

VISTARANEWS.COM


on

By

Positive Pay System
Koo

ಹೆಚ್ಚುತ್ತಿರುವ ಚೆಕ್ ವಂಚನೆಯ (Cheque Payments) ಪ್ರಕರಣಗಳನ್ನು ತಡೆಗಟ್ಟಲು ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India) 2021ರಲ್ಲಿ ಪಾಸಿಟುವ್‌ ಪೇ ವ್ಯವಸ್ಥೆಯನ್ನು (Positive Pay System) ಪರಿಚಯಿಸಿತ್ತು. ಇದು ಎಲೆಕ್ಟ್ರಾನಿಕ್ ದೃಢೀಕರಣ ಪ್ರಕ್ರಿಯೆಯಾಗಿದ್ದು, ಹೆಚ್ಚಿನ ಮೌಲ್ಯದ ಚೆಕ್‌ನ ಪ್ರಮುಖ ವಿವರಗಳನ್ನು ಪಾವತಿಗಾಗಿ ಪ್ರಸ್ತುತಪಡಿಸುವ ಮೊದಲು ಬ್ಯಾಂಕ್‌ನೊಂದಿಗೆ ಹಂಚಿಕೊಳ್ಳಬೇಕಿದೆ.

ಪಿಪಿಎಸ್ ಅಡಿಯಲ್ಲಿ ಚೆಕ್ ನೀಡುವವರು ಚೆಕ್ ವಿವರಗಳನ್ನು ಫಲಾನುಭವಿಗೆ ಹಸ್ತಾಂತರಿಸುವ ಮೊದಲು ತಮ್ಮ ಬ್ಯಾಂಕ್‌ನೊಂದಿಗೆ ಹಂಚಿಕೊಳ್ಳಬೇಕು. ಈ ವಿವರಗಳು ಸಾಮಾನ್ಯವಾಗಿ ಚೆಕ್ ಸಂಖ್ಯೆ, ಚೆಕ್ ದಿನಾಂಕ, ಪಾವತಿಸುವವರ ಹೆಸರು, ಖಾತೆ ಸಂಖ್ಯೆ, ಮೊತ್ತ ಮತ್ತು ಇತರ ಸಂಬಂಧಿತ ವಿವರಗಳನ್ನು ಒಳಗೊಂಡಿರುತ್ತದೆ. ಪಾಸಿಟಿವ್‌ ಪೇ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವುದು ಹೇಗೆ, ಇದು ಹೇಗೆ ಕೆಲಸ ಮಾಡುತ್ತದೆ, ಇದರ ಪ್ರಯೋಜನಗಳು ಏನು ಎನ್ನುವ ಕುರಿತು ಇಲ್ಲಿದೆ ಮಾಹಿತಿ.

Positive Pay System
Positive Pay System


ಪಿಪಿಎಸ್ ಹೇಗೆ ಕೆಲಸ ಮಾಡುತ್ತದೆ?

ಫಲಾನುಭವಿಯು ನಗದಿಗಾಗಿ ಚೆಕ್ ಅನ್ನು ಬ್ಯಾಂಕ್‌ಗೆ ಹಾಜರುಪಡಿಸಿದಾಗ ಬ್ಯಾಂಕ್ ವಿವರಗಳನ್ನು ಪರಿಶೀಲಿಸುತ್ತದೆ. ಈ ವಿವರಗಳು ಹೊಂದಾಣಿಕೆಯಾದರೆ ಚೆಕ್ ಅನ್ನು ಪ್ರಕ್ರಿಯೆಗೊಳಿಸಲಾಗುತ್ತದೆ. ವ್ಯತ್ಯಾಸವಿದ್ದಲ್ಲಿ ಹೆಚ್ಚಿನ ಪರಿಶೀಲನೆಗಾಗಿ ಬ್ಯಾಂಕ್ ಚೆಕ್ ಅನ್ನು ಫ್ಲ್ಯಾಗ್ ಮಾಡುತ್ತದೆ.

50,000 ರೂ. ಅಥವಾ ಅದಕ್ಕಿಂತ ಹೆಚ್ಚು ಮೌಲ್ಯದ ಚೆಕ್ ಅನ್ನು ಬ್ಯಾಂಕ್‌ಗೆ ಸಲ್ಲಿಸುವ ಕುರಿತಂತೆ ಸ್ವಯಂಪ್ರೇರಣೆಯಿಂದ ಅದರ ವಿವರಗಳನ್ನು ಬ್ಯಾಂಕ್‌ಗೆ ಸಲ್ಲಿಸಬಹುದು. ಚೆಕ್ ಸಂಖ್ಯೆ, ದಿನಾಂಕ, ಮೊತ್ತ, ಪಾವತಿಸುವವರ ಹೆಸರು ಮತ್ತು ಖಾತೆ ಸಂಖ್ಯೆಯಂತಹ ಮಾಹಿತಿಯನ್ನು ವಿವಿಧ ಚಲನ್‌ಗಳ ಮೂಲಕ ಅಥವಾ ನೆಟ್ ಬ್ಯಾಂಕಿಂಗ್, ಮೊಬೈಲ್ ಅಪ್ಲಿಕೇಶನ್, ಎಸ್‌ಎಂಎಸ್, ಶಾಖೆ ಮೊದಲಾದ ವಿವರಗಳನ್ನು ಬ್ಯಾಂಕ್‌ಗೆ ಒದಗಿಸಬೇಕು.

ಪಾವತಿಗಾಗಿ ಚೆಕ್ ಅನ್ನು ಪ್ರಸ್ತುತಪಡಿಸಿದಾಗ ಬ್ಯಾಂಕ್ ಈ ವಿವರಗಳನ್ನು ಪರಿಶೀಲಿಸುತ್ತದೆ. ವಿವರಗಳು ಹೊಂದಾಣಿಕೆಯಾದರೆ ಮಾತ್ರ ಚೆಕ್ ಅನ್ನು ನಗದು ಮಾಡಲು ಅನುಮತಿ ನೀಡಲಾಗುತ್ತದೆ. ಯಾವುದೇ ವ್ಯತ್ಯಾಸಗಳಿದ್ದರೆ ಚೆಕ್ ಅನ್ನು ತಡೆ ಹಿಡಿಯಲಾಗುತ್ತದೆ. ಇದರಿಂದ ಚೆಕ್ ವಂಚನೆಯನ್ನು ತಡೆಯಲು ಸಾಧ್ಯ.

ಇದರಿಂದ ಪ್ರಯೋಜನವೇನು?

  • ಚೆಕ್ ವಿವರಗಳನ್ನು ಪರಿಶೀಲಿಸುವ ಮೂಲಕ ಬದಲಾದ ಅಥವಾ ನಕಲಿ ಚೆಕ್‌ಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
  • ಚೆಕ್ ಪಾವತಿಗಳಿಗೆ ಹೆಚ್ಚುವರಿ ರಕ್ಷಣೆಯನ್ನು ಒದಗಿಸುತ್ತದೆ.
  • ವ್ಯತ್ಯಾಸಗಳಿಂದಾಗಿ ಚೆಕ್ ರಿಟರ್ನ್‌ಗಳ ಸಾಧ್ಯತೆಗಳನ್ನು ಕಡಿಮೆ ಮಾಡುತ್ತದೆ.
  • ಚೆಕ್ ವಹಿವಾಟುಗಳಲ್ಲಿ ಗ್ರಾಹಕರು ಹೆಚ್ಚು ವಿಶ್ವಾಸವಿಡಲು ಸಾಧ್ಯ ಮಾಡುತ್ತದೆ.


ನೆನಪಿನಲ್ಲಿ ಇರಿಸಬೇಕಾದ ಸಂಗತಿಗಳು

  • 50,000 ರೂ.ನಿಂದ 5 ಲಕ್ಷ ರೂ.ವರೆಗಿನ ಚೆಕ್‌ಗಳಿಗೆ ಪಾಸಿಟಿವ್‌ ಪೇ ವ್ಯವಸ್ಥೆಯನ್ನು ಕಡ್ಡಾಯಗೊಳಿಸಿಲ್ಲ. ಆದರೆ 5 ಲಕ್ಷ ರೂ.ಗಿಂತ ಹೆಚ್ಚಿನ ಮೌಲ್ಯದ ಚೆಕ್‌ಗಳಿಗೆ ಇದು ಕಡ್ಡಾಯವಾಗಿದೆ. ಒಮ್ಮೆ ಚೆಕ್ ವಿವರಗಳನ್ನು ಸಲ್ಲಿಸಿದ ಬಳಿಕ ಅವುಗಳನ್ನು ಬದಲಾಯಿಸಲು ಅಥವಾ ಅಳಿಸಲು ಸಾಧ್ಯವಿಲ್ಲ. ಚೆಕ್ ಅನ್ನು ಪ್ರಸ್ತುತಪಡಿಸುವ ಮೊದಲು ಪಾವತಿಯನ್ನು ತಡೆ ಹಿಡಿಯುವ ಅಧಿಕಾರ ಚೆಕ್ ನೀಡಿರುವವರಿಗೆ ಇರುತ್ತದೆ.

ಇದನ್ನೂ ಓದಿ: Money Guide: ಕೃಷಿ ಸಾಲಕ್ಕೆ ಅರ್ಜಿ ಸಲ್ಲಿಸುವ ಮುನ್ನ ತಿಳಿದಿರಲೇಬೇಕಾದ ಅಂಶಗಳಿವು

ಪಿಪಿಎಸ್ ಅನುಷ್ಠಾನ

ಭಾರತದ ಹೆಚ್ಚಿನ ಬ್ಯಾಂಕ್‌ಗಳು 50,000 ರೂ.ಗಿಂತ ಹೆಚ್ಚಿನ ಮೌಲ್ಯದ ಚೆಕ್‌ಗಳಿಗೆ ಪಿಪಿಎಸ್ ಅನ್ನು ಅಳವಡಿಸಿಕೊಂಡಿವೆ. ಧನಾತ್ಮಕ ಪಾವತಿ ವ್ಯವಸ್ಥೆ ಮತ್ತು ಅದರ ಮಿತಿಗಳನ್ನು ಹೇಗೆ ಬಳಸುವುದು ಎಂಬುದರ ಕುರಿತು ನಿರ್ದಿಷ್ಟ ವಿವರಗಳಿಗಾಗಿ ಗ್ರಾಹಕರು ತಮ್ಮ ಬ್ಯಾಂಕ್‌ಗಳೊಂದಿಗೆ ಪರಿಶೀಲಿಸಲು ಸಲಹೆ ನೀಡಲಾಗುತ್ತದೆ.

Continue Reading
Advertisement
Kundapura Kannada Habba
ಕರ್ನಾಟಕ7 mins ago

Kundapura Kannada Habba: ನನ್ನ ಸಿನಿಮಾ ಕಥೆಗಳಿಗೆ ಊರು, ಯಕ್ಷಗಾನವೇ ಪ್ರೇರಣೆ; ರಿಷಬ್ ಶೆಟ್ಟಿ

NPS News
ಕರ್ನಾಟಕ10 mins ago

NPS News: ಹೊಸ ಪಿಂಚಣಿ ರದ್ದುಗೊಳಿಸಲು ಸಮಿತಿ ಪುನರ್‌ ರಚನೆ; ಎನ್‌ಪಿಎಸ್‌ ನೌಕರರ ಸಂಘ ವಿರೋಧ

ಪ್ರಮುಖ ಸುದ್ದಿ50 mins ago

7th pay commission : 7ನೇ ವೇತನ ಆಯೋಗ ಜಾರಿ ಬಳಿಕ ನೌಕರರ ಸಂಬಳ ಏರಿಕೆ ಎಷ್ಟು? ಅಧಿಕೃತ ಪಟ್ಟಿ ಬಿಡುಗಡೆ

Prabhas New Film
ಸಿನಿಮಾ1 hour ago

Prabhas New Film: ಹೊಸ ಯುದ್ಧ ಶುರು; ಪ್ರಭಾಸ್ ಅಭಿನಯದ ಮುಂದಿನ ಚಿತ್ರ ಸುಳಿವು!

NPS
ಬೆಂಗಳೂರು2 hours ago

Government Employee: ಹಳೇ ಪಿಂಚಣಿ ವ್ಯವಸ್ಥೆ (OPS) ಜಾರಿ ಸಾಧ್ಯತೆ ಪರಿಶೀಲನೆಗೆ ಸರ್ಕಾರದಿಂದ ಸಮಿತಿ ಪುನರ್‌ ರಚನೆ

TJ Abraham
ಪ್ರಮುಖ ಸುದ್ದಿ2 hours ago

TJ Abraham : ಎಸ್ಎಂ ಕೃಷ್ಣರಿಂದ ಹಿಡಿದು ಸಿದ್ದರಾಮಯ್ಯವರೆಗೆ; ಕರ್ನಾಟಕ ರಾಜಕೀಯದ ದೊಡ್ಡ ಹುಲಿಗಳನ್ನೇ ಬೋನಿಗೆ ಬೀಳಿಸಿದ ಟಿ ಜೆ ಅಬ್ರಾಹಂ

Positive Pay System
ವಾಣಿಜ್ಯ2 hours ago

Positive Pay System: ಏನಿದು ಪಾಸಿಟಿವ್‌ ಪೇ ಸಿಸ್ಟಮ್‌? ಚೆಕ್ ಪಾವತಿ ಸುರಕ್ಷಿತಗೊಳಿಸುವುದು ಹೇಗೆ?

Dog attack
ವೈರಲ್ ನ್ಯೂಸ್3 hours ago

Dog Attack: 17 ಮಂದಿ ಮೇಲೆ ಬೀದಿ ನಾಯಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Kannada New Movie
ಬೆಂಗಳೂರು3 hours ago

Kannada New Movie: ಮಂಸೋರೆ ನಿರ್ದೇಶನದ ʼದೂರ ತೀರ ಯಾನʼ ಟೈಟಲ್ ಟೀಸರ್ ರಿಲೀಸ್‌

pralhad Joshi
ಬೆಂಗಳೂರು4 hours ago

Pralhad Joshi: ಸಿಎಂ ಮೇಲೆ ರಾಜ್ಯಪಾಲರ ಕ್ರಮ ಸರಿಯಾಗಿಯೇ ಇದೆ; ಪ್ರಲ್ಹಾದ್‌ ಜೋಶಿ ಸಮರ್ಥನೆ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌