Devara Movie: ʻಭೈರʼ ಪಾತ್ರದಲ್ಲಿ ಅಬ್ಬರಿಸಿದ ಸೈಫ್ ಅಲಿ ಖಾನ್ ; ʻದೇವರʼ ಹೊಸ ಟೀಸರ್‌ ಔಟ್‌! - Vistara News

ಕಾಲಿವುಡ್

Devara Movie: ʻಭೈರʼ ಪಾತ್ರದಲ್ಲಿ ಅಬ್ಬರಿಸಿದ ಸೈಫ್ ಅಲಿ ಖಾನ್ ; ʻದೇವರʼ ಹೊಸ ಟೀಸರ್‌ ಔಟ್‌!

Saif Ali Khan : ಕುಸ್ತಿ ಪಂದ್ಯಾವಳಿಯ ಅಖಾಡದಲ್ಲಿ ಭಾರಿ ಜನಬೆಂಬಲ ಹೊಂದಿರುವ ವ್ಯಕ್ತಿಯೊಬ್ಬನನ್ನು ಸೈಫ್ ಅಲಿ ಖಾನ್ ಸುಲಭವಾಗಿ ಹೊಡೆದು ಉರುಳಿಸುವ ದೃಶ್ಯವಿದೆ. ‘ದೇವರ’ ಪಾತ್ರಕ್ಕೆ ತಕ್ಕದಾದ ಎದುರಾಳಿ ಎನಿಸುವಂತೆ ಸೈಫ್ ಅಲಿ ಖಾನ್​ರ ಪಾತ್ರದ ಪರಿಚಯ ಮಾಡಿಸಲಾಗಿದೆ.

VISTARANEWS.COM


on

Saif Ali Khan introduced as kushti expert Bhaira
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸೈಫ್ ಅಲಿ ಖಾನ್ (Saif Ali Khan ) ಅವರ ಜನ್ಮದಿನದಂದು `ದೇವರ’ ತಂಡವು ಹೊಸ ಗ್ಲಿಂಪ್ಸ್ ಅನ್ನು ಬಿಡುಗಡೆ ಮಾಡಿದೆ. ‘ದೇವರ‘ ಸಿನಿಮಾ (Devara Movie) ಒಂದು ದೊಡ್ಡ-ಬಜೆಟ್ ಕಮರ್ಷಿಯಲ್ ಆ್ಯಕ್ಷನ್ ಎಂಟರ್‌ಟೈನರ್. ಕೊರಟಾಲ ಶಿವ ಈ ಸಿನಿಮಾ ನಿರ್ದೇಶಕರು. ಬಾಲಿವುಡ್ ಸ್ಟಾರ್ ನಟ ಸೈಫ್ ಅಲಿ ಖಾನ್, ‘ದೇವರ’ ಸಿನಿಮಾದ ವಿಲನ್ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದಲ್ಲಿ ಸೈಫ್ ಪಾತ್ರದ ಹೆಸರು ಭೈರ. 

ಕುಸ್ತಿ ಪಂದ್ಯಾವಳಿಯ ಅಖಾಡದಲ್ಲಿ ಭಾರಿ ಜನಬೆಂಬಲ ಹೊಂದಿರುವ ವ್ಯಕ್ತಿಯೊಬ್ಬನನ್ನು ಸೈಫ್ ಅಲಿ ಖಾನ್ ಸುಲಭವಾಗಿ ಹೊಡೆದು ಉರುಳಿಸುವ ದೃಶ್ಯವಿದೆ. ‘ದೇವರ’ ಪಾತ್ರಕ್ಕೆ ತಕ್ಕದಾದ ಎದುರಾಳಿ ಎನಿಸುವಂತೆ ಸೈಫ್ ಅಲಿ ಖಾನ್​ರ ಪಾತ್ರದ ಪರಿಚಯ ಮಾಡಿಸಲಾಗಿದೆ.

ಇದೀಗ ಸೈಫ್‌ ಅವರ ಲುಕ್‌ ಕಂಡು ಫ್ಯಾನ್ಸ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದು ಸೈಫ್ ಅವರ ವೃತ್ತಿಜೀವನದಲ್ಲಿ ಅತ್ಯುತ್ತಮ ಪಾತ್ರವಾಗಿದೆ ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ಜೂನಿಯರ್ ಎನ್‌ಟಿಆರ್‌ಗಿಂತ ಸೈಫ್ ಮಾಸ್ ಆಗಿ ಕಾಣಿಸುತ್ತಾರೆ ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ. ಸೆಪ್ಟೆಂಬರ್ 27 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Saif Ali Khan: ಈದ್ ಆಚರಿಸಿದ ಸೈಫ್ ಅಲಿ ಖಾನ್-ಕರೀನಾ: ಕಿರಿಯ ಮಗ ಮಿಸ್ಸಿಂಗ್‌!

ಜ್ಯೂನಿಯರ್‌ ಎನ್‌ಟಿಆರ್‌ ಅವರ ಜನ್ಮದಿನವಾದ ಜನವರಿ 8 ರಂದು, ‘ದೇವರ’ ನಿರ್ಮಾಪಕರು ಫಸ್ಟ್‌ ಲುಕ್‌ವನ್ನು ಹಂಚಿಕೊಂಡಿದ್ದರು, ಅಲ್ಲಿಂದ ಸಿನಿಮಾ ಬಗ್ಗೆ ಸಿನಿರಸಿಕರಿಗೆ ನಿರೀಕ್ಷೆ ಹೆಚ್ಚಾಗಿತ್ತು.ಜ್ಯೂನಿಯರ್‌ ಎನ್‌ಟಿಆರ್‌, ಸೈಫ್ ಅಲಿ ಖಾನ್ ಮತ್ತು ಜಾನ್ವಿ ಕಪೂರ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ದೇವರ’ ಚಿತ್ರವನ್ನು ಕೊರಟಾಲ ಶಿವ ನಿರ್ದೇಶಿಸಿದ್ದಾರೆ. 2016ರಲ್ಲಿ ಇವರು ಜನತಾ ಗ್ಯಾರೇಜ್ ಎಂಬ ಸಿನಿಮಾವನ್ನು ನಿರ್ದೇಶಿಸಿದ್ದರು. ಅದರಲ್ಲಿ ಕೂಡ ಜ್ಯೂನಿಯರ್ ಎನ್​ಟಿಆರ್ ನಾಯಕನಾಗಿದ್ದರು. ಅದಾದ ಮೇಲೆ ಕೊರಟಾಲ ಶಿವ ಅವರೊಟ್ಟಿಗೆ ಜ್ಯೂ.ಎನ್​ಟಿಆರ್ ಯಾವುದೇ ಸಿನಿಮಾವನ್ನೂ ಮಾಡಿರಲಿಲ್ಲ.

ದೇವರ ಸಿನಿಮಾದಲ್ಲಿ ಜ್ಯೂನಿಯರ್ ಎನ್​ಟಿಆರ್​ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ವದಂತಿಯೂ ಇದೆ. ಅಪ್ಪ-ಮಗ ಎರಡೂ ಪಾತ್ರದಲ್ಲಿ ಇವರೇ ಅಭಿನಯ ಮಾಡಲಿದ್ದಾರಂತೆ. ಇದೊಂದು ಪಕ್ಕಾ ಆ್ಯಕ್ಷನ್​ ಚಿತ್ರದಂತೆ ಕಾಣಿಸುತ್ತಿದೆ. ಯುವಸುಧಾ ಆರ್ಟ್ಸ್ ಮತ್ತು ಜ್ಯೂನಿಯರ್‌ ಎನ್‌ಟಿಆರ್‌ ಆರ್ಟ್ಸ್ ಈ ಚಿತ್ರವನ್ನು ನಿರ್ಮಿಸಿದ್ದು, ನಂದಮೂರಿ ಕಲ್ಯಾಣ್ ರಾಮ್ ಅವರು ಪ್ರಸ್ತುತಪಡಿಸಿದ್ದಾರೆ.

ಈ ಚಿತ್ರದ OTT ಹಕ್ಕುಗಳನ್ನು ಸ್ಟ್ರೀಮಿಂಗ್ ಕಂಪನಿ ನೆಟ್ಫ್ಲಿಕ್ಸ್ ಭಾರಿ ಬೆಲೆಗೆ ಪಡೆದುಕೊಂಡಿದೆ. ಮಾಹಿತಿಯ ಪ್ರಕಾರ, ನೆಟ್ಫ್ಲಿಕ್ಸ್ 155 ಕೋಟಿ ರೂಪಾಯಿ ನೀಡಿ ಈ ಚಿತ್ರದ OTT ಹಕ್ಕುಗಳನ್ನು ಪಡೆದುಕೊಂಡಿದೆ ಎಂಬ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Thangalaan Movie: ಸೀಕ್ವೆಲ್ ಆಗಿ ಬರಲಿದೆ ‘ತಂಗಲಾನ್ʼ; ಹೊಸ ದಾಖಲೆ ಬರೆದ ಚಿಯಾನ್ ವಿಕ್ರಮ್‍!

Thangalaan Movie: ಸ್ಟುಡಿಯೋ ಗ್ರೀನ್ ಫಿಲ್ಮ್ಸ್ ಮತ್ತು ನೀಲಂ ಪ್ರೊಡಕ್ಷನ್ಸ್ ಅಡಿಯಲ್ಲಿ ಕೆ.ಇ.ಜ್ಞಾನವೇಲ್ ರಾಜಾ ನಿರ್ಮಿಸಿದ ಈ ಸಿನಿಮಾ ಸೀಕ್ವೆಲ್ ಕೂಡ ಶೀರ್ಘದಲ್ಲಿ ಬರುತ್ತಿದೆ. ಈ ಬಗ್ಗೆ ಚಿಯಾನ್ ವಿಕ್ರಮ್‍ ಅವರೇ ಸ್ವತಃ ಈ ಬಗ್ಗೆ ಹೇಳಿಕೆ ನೀಡಿದ್ದಾರೆ.

VISTARANEWS.COM


on

Koo

ಬೆಂಗಳೂರು: ಜ್ಞಾನವೇಲ್ ರಾಜ್ ನಿರ್ಮಾಣದ,‌ ಪಾ ರಂಜಿತ್ ನಿರ್ದೇಶನದ ಹಾಗೂ ಚಿಯಾನ್ ವಿಕ್ರಮ್‍ ಅಭಿನಯದ ‘ತಂಗಲಾನ್ʼ ಚಿತ್ರವು (Thangalaan Movie) ಆಗಸ್ಟ್ 15 ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆಯುತ್ತಿದೆ. ಸ್ಟುಡಿಯೋ ಗ್ರೀನ್ ಫಿಲ್ಮ್ಸ್ ಮತ್ತು ನೀಲಂ ಪ್ರೊಡಕ್ಷನ್ಸ್ ಅಡಿಯಲ್ಲಿ ಕೆ.ಇ.ಜ್ಞಾನವೇಲ್ ರಾಜಾ ನಿರ್ಮಿಸಿದ ಈ ಸಿನಿಮಾ ಸೀಕ್ವೆಲ್ ಕೂಡ ಶೀರ್ಘದಲ್ಲಿ ಬರುತ್ತಿದೆ. ಈ ಬಗ್ಗೆ ಚಿಯಾನ್ ವಿಕ್ರಮ್‍ ಅವರೇ ಸ್ವತಃ ಈ ಬಗ್ಗೆ ಹೇಳಿಕೆ ನೀಡಿದ್ದಾರೆ.

“ಪಾ ರಂಜಿತ್ ಅವರಿಗೆ ನನ್ನ ಮೇಲೆ ಅಪಾರ ನಂಬಿಕೆ ಇತ್ತು, ಇದರಿಂದಾಗಿ ಈ ಚಿತ್ರ ಸಾಧ್ಯವಾಯಿತು. ತಂಗಲಾನ್ ಮುಂದಿನ ಭಾಗಕ್ಕೆ ಅರ್ಹವಾಗಿದೆ. ನೀವೆಲ್ಲರೂ ತುಂಬಾ ಇಷ್ಟಪಟ್ಟಿದ್ದೀರಿ. ತಂಗಲಾನ್‌ ಬಾಕ್ಸ್ ಆಫೀಸ್‌ನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಪೊನ್ನಿಯಿನ್ ಸೆಲ್ವನ್ ನಾಲ್ಕು ರಾಷ್ಟ್ರೀಯ ಪ್ರಶಸ್ತಿ ಗೆದ್ದಿದ್ದಕ್ಕೆ ಖುಷಿ ಇದೆʼʼಎಂದರು.

2011 ರಲ್ಲಿ ನಟ ವಿಕ್ರಮ್ ಅಭಿನಯದ ‘ದೈವತಿರುಮಗಳು’ ಚಿತ್ರದ ನಂತರ ಗುಣಮಟ್ಟದ ಬ್ರೇಕ್ ನೀಡುವ ಚಿತ್ರಗಳು ಬಂದಿಲ್ಲ. ಏಕೆಂದರೆ ಈ ಚಿತ್ರದ ನಂತರ ಬಿಡುಗಡೆಯಾದ ಐ, ಇರುಮುಗನ್, ಕೋಬ್ರಾ, ಸಾಮಿ ಸ್ಕ್ವೇರ್ ಮುಂತಾದ ಬಿಗ್ ಬಜೆಟ್ ಚಿತ್ರಗಳು ಮಿಶ್ರ ವಿಮರ್ಶೆಗಳನ್ನು ಕಂಡವು. ಆದರೆ, ನಿರ್ದೇಶಕ ಮಣಿರತ್ನಂ ನಿರ್ದೇಶನದಲ್ಲಿ ಎರಡು ಭಾಗಗಳಲ್ಲಿ ತೆರೆಕಂಡ ‘ಪೊನ್ನಿಯಿನ್ ಸೆಲ್ವನ್’ ಚಿತ್ರ ವಿಕ್ರಮ್ ಗೆ ಮತ್ತೆ ಹಿಟ್ ಆಯಿತು.ಇದೀಗ ‘ತಂಗಾಲನ್’ ಅದ್ಭುತವಾದ ಸಿನಿಮಾ, ಕೆಲವು ಅದ್ಭುತ ದೃಶ್ಯಗಳನ್ನು ಪಾ ರಂಜಿತ್ ಕಟ್ಟಿಕೊಟ್ಟಿದ್ದಾರೆ’ 

ಇದನ್ನೂ ಓದಿ: Shiva Rajkumar: ವರಮಹಾಲಕ್ಷ್ಮಿ ಹಬ್ಬದ ದಿನದಂದೇ ಸೆಟ್ಟೇರಿತು ಶಿವರಾಜ್ ಕುಮಾರ್ 131ನೇ ಸಿನಿಮಾ!

ಇದನ್ನೂ ಓದಿ: Shiva Rajkumar: ವರಮಹಾಲಕ್ಷ್ಮಿ ಹಬ್ಬದ ದಿನದಂದೇ ಸೆಟ್ಟೇರಿತು ಶಿವರಾಜ್ ಕುಮಾರ್ 131ನೇ ಸಿನಿಮಾ!

ಕನ್ನಡದಲ್ಲಿ ‘ಕೃಷ್ಣಂ ಪ್ರಣಯ ಸಖಿ’, ‘ಗೌರಿ’, ತೆಲುಗಿನಲ್ಲಿ ‘ಮಿಸ್ಟರ್ ಬಚ್ಚನ್’ ಮತ್ತು ‘ಡಬಲ್ ಇಸ್ಮಾರ್ಟ್’ ಇನ್ನು ತಮಿಳಿನಲ್ಲಿ ಚಿಯಾನ್ ವಿಕ್ರಂ ನಟನೆಯ ‘ತಂಗಲಾನ್’ ಸಿನಿಮಾ ತೆರೆಗೆ ಬಂದಿದೆ. 

ಈ ಚಿತ್ರದ ಪಾತ್ರಕ್ಕಾಗಿ ವಿಕ್ರಮ್‍ ಆರು ತಿಂಗಳ ತಯಾರಿ ನಡೆಸಿದ್ದಾರಂತೆ ಹಾಗೂ ತುಂಬಾ ತೂಕವನ್ನು ಕಳೆದುಕೊಂಡಿದ್ದಾರಂತೆ. ದೈಹಿಕವಾಗಿ ಬದಲಾಗುವುದಕ್ಕಿಂತ ಮಾನಸಿಕವಾಗಿ ಬದಲಾಗುವುದು ಬಹಳ ಕಷ್ಟವಾಗಿತ್ತು. ಪ್ರತಿ ದಿನ ನಾಲ್ಕೈದು ಗಂಟೆಗಳ ಕಾಲ ಮೇಕಪ್‍ ಹಾಕಿಕೊಳ್ಳಬೇಕಿತ್ತು ಎಂದು ಚಿತ್ರೀಕರಣ ಸಮಯದ ಅನುಭವವನ್ನು ವಿಕ್ರಮ್ ಈ ಹಿಂದೆ ಹಂಚಿಕೊಂಡಿದ್ದರು.

Continue Reading

ಕಾಲಿವುಡ್

Thalapathy Vijay: ದಳಪತಿ ವಿಜಯ್ ನಟನೆಯ ‘GOAT’ ಚಿತ್ರದ ಟ್ರೈಲರ್‌ ರಿಲೀಸ್‌ ಡೇಟ್‌ ಅನೌನ್ಸ್‌!

Thalapathy Vijay: ದಳಪತಿ ವಿಜಯ್ ಅವರು ಈ ಚಿತ್ರದಲ್ಲಿ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಪ್ಪ-ಮಗನ ಕಥೆ ಈ ಚಿತ್ರದಲ್ಲಿ ಇರಲಿದೆ ಎನ್ನಲಾಗಿದೆ. ದಳಪತಿ ವಿಜಯ್ ಅವರು ರಾಜಕೀಯದಲ್ಲಿ ಬ್ಯುಸಿ ಆಗೋಕೆ ರೆಡಿ ಆಗಿದ್ದಾರೆ. ಈ ಕಾರಣದಿಂದ ಈ ಸಿನಿಮಾದ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಅವರು ಇನ್ನೂ ಒಂದು ಸಿನಿಮಾದಲ್ಲಿ ಮಾತ್ರ ನಟಿಸಬಹುದು ಎನ್ನಲಾಗುತ್ತಿದೆ.

VISTARANEWS.COM


on

Thalapathy Vijay Looks Intense In New GOAT Poster Trailer To Release
Koo

ಬೆಂಗಳೂರು: ವಿಜಯ್‌ ಅವರು ಸದ್ಯ ‘ಗ್ರೇಟೆಸ್ಟ್ ಆಫ್ ಆಲ್​ ಟೈಮ್’ ((‘Greatest Of All Time (GOAT)’) ) ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ತ್ರಿಶಾ ನಾಯಕಿ. ಈ ಸಿನಿಮಾದಲ್ಲಿ ಪ್ರಭುದೇವ ಮೊದಲಾದವರು ನಟಿಸುತ್ತಿದ್ದಾರೆ. ʻವಿಸಿಲ್‌ ಪೋಡುʼ (Whistle Podu) ಎಂಬ ಶೀರ್ಷಿಕೆಯ ಮೊದಲ ಹಾಡು ಬಿಡುಗಡೆಯಾಗಿ ಸಖತ್‌ ಸೌಂಡ್‌ ಮಾಡಿತ್ತು. ಇದೀಗ ಸಿನಿಮಾದ ಟ್ರೈಲರ್‌ ಬಿಡುಗಡೆ ದಿನಾಂಕ ರಿವೀಲ್‌ ಆಗಿದೆ.

ಚಿತ್ರದಲ್ಲಿ ಮೀನಾಕ್ಷಿ ಚೌಧರಿ, ಪ್ರಶಾಂತ್, ಪ್ರಭುದೇವ, ಮೋಹನ್, ಜಯರಾಮ್, ಸ್ನೇಹಾ ಮತ್ತು ಲೈಲಾ ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ. ಈ ಚಿತ್ರವನ್ನು ವೆಂಕಟ್ ಪ್ರಭು ನಿರ್ದೇಶನ ಮಾಡುತ್ತಿದ್ದಾರೆ. ಅಂದರೆ ಆಗಸ್ಟ್ 17ರಂದು ಸಿನಿಮಾದ ಟ್ರೇಲರ್ ರಿಲೀಸ್ ಆಗಲಿದೆ. ಆಗಸ್ಟ್ 15ರ ಪ್ರಯುಕ್ತ ಈ ಘೋಷಣೆ ಮಾಡಲಾಗಿದೆ.  GOAT’ ಚಿತ್ರದ ಹೊಸ ಪೋಸ್ಟರ್​ನ ತಂಡ ರಿಲೀಸ್ ಮಾಡಿದೆ. ಇದರಲ್ಲಿ ಅವರು ಗನ್ ಹಿಡಿದು ಮಿಂಚಿದ್ದಾರೆ. ಇದರಲ್ಲಿ ಟ್ರೇಲರ್ ರಿಲೀಸ್ ದಿನಾಂಕವನ್ನು ಉಲ್ಲೇಖ ಮಾಡಲಾಗಿದೆ. 

ದಳಪತಿ ವಿಜಯ್ ಅವರು ಈ ಚಿತ್ರದಲ್ಲಿ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಪ್ಪ-ಮಗನ ಕಥೆ ಈ ಚಿತ್ರದಲ್ಲಿ ಇರಲಿದೆ ಎನ್ನಲಾಗಿದೆ. ದಳಪತಿ ವಿಜಯ್ ಅವರು ರಾಜಕೀಯದಲ್ಲಿ ಬ್ಯುಸಿ ಆಗೋಕೆ ರೆಡಿ ಆಗಿದ್ದಾರೆ. ಈ ಕಾರಣದಿಂದ ಈ ಸಿನಿಮಾದ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಅವರು ಇನ್ನೂ ಒಂದು ಸಿನಿಮಾದಲ್ಲಿ ಮಾತ್ರ ನಟಿಸಬಹುದು ಎನ್ನಲಾಗುತ್ತಿದೆ.

ಗೋಟ್’ ನಿರ್ಮಾಣದ ಕೊನೆಯ ಹಂತದಲ್ಲಿದ್ದು, ಚೆನ್ನೈ, ಥೈಲ್ಯಾಂಡ್, ಹೈದರಾಬಾದ್ ಮತ್ತು ಪಾಂಡಿಚೇರಿಯಲ್ಲಿ ಚಿತ್ರೀಕರಣ ಮಾಡಲಾಗಿದೆ. ವಿಜಯ್ ಕೊನೆಯದಾಗಿ ಲೋಕೇಶ್ ಕನಕರಾಜ್ ಅವರ ʻಲಿಯೋʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: Thalapathy Vijay: ದಳಪತಿ ವಿಜಯ್‌ಗೆ ಭುಜದ ಮೇಲಿನ ಕೈ ತೆಗೆಯಲು ಹೇಳಿದ ಹುಡುಗಿ; ವಿಡಿಯೊ ವೈರಲ್

ಗೋಟ್’ ಅನ್ನು ಎಜಿಎಸ್ ಎಂಟರ್‌ಟೈನ್‌ಮೆಂಟ್‌ನಿಂದ ಕಲ್ಪತಿ ಎಸ್ ಅಘೋರಂ, ಕಲ್ಪತಿ ಎಸ್ ಗಣೇಶ್ ಮತ್ತು ಕಲ್ಪತಿ ಎಸ್ ಸುರೇಶ್ ಅವರು ಬೃಹತ್ ಬಜೆಟ್‌ನಲ್ಲಿ ನಿರ್ಮಿಸಿದ್ದಾರೆ. ಚಿತ್ರಕ್ಕೆ ಯುವನ್ ಶಂಕರ್ ರಾಜಾ ಅವರ ಸಂಗೀತ ಸಂಯೋಜನೆ. ಸಿದ್ಧಾರ್ಥ ನುನಿ ಅವರ ಛಾಯಾಗ್ರಹಣ ಮತ್ತು ವೆಂಕಟ್ ರಾಜೇನ್ ಅವರ ಸಂಕಲನವಿದೆ. ದಿ ಗೋಟ್ ಮೇಲೆ ನಿರೀಕ್ಷೆ ಹೆಚ್ಚಿದೆ. ಸೆಪ್ಟೆಂಬರ್ 5 ರಂದು ಗಣೇಶ ಚತುರ್ಥಿಯಂದು ಚಿತ್ರ ಬಿಡುಗಡೆಯಾಗಲಿದೆ. ಈ ಚಿತ್ರ ತಮಿಳು ಮಾತ್ರವಲ್ಲದೆ ತೆಲುಗು, ಹಿಂದಿ ಮತ್ತು ಇತರ ಭಾಷೆಗಳಲ್ಲೂ ಬಿಡುಗಡೆಯಾಗಲಿದೆಎಂದು ವರದಿಯಾಗಿದೆ.

ಸಿನಿಮಾ ವೃತ್ತಿಜೀವನಕ್ಕೆ ದಳಪತಿ ವಿಜಯ್‌ (Thalapathy Vijay) ಅವರು ವಿದಾಯ ಹೇಳಲು ಸಜ್ಜಾಗುತ್ತಿದ್ದಾರೆ. ದಳಪತಿ ವಿಜಯ್‌ ಅವರ 69ನೇ ಸಿನಿಮಾ ಘೋಷಣೆ ಆಗಲಿದೆ. ಇದು ಅವರ ಕೊನೆಯ ಸಿನಿಮಾ ಆಗಿರಲಿದೆ ಎನ್ನಲಾಗುತ್ತಿದೆ. ತಮಿಳು ಚಿತ್ರ ನಟ ದಳಪತಿ ವಿಜಯ್‌ (Thalapathy Vijay) ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಿರುವುದು ಗೊತ್ತೇ ಇದೆ. ಪಕ್ಷಕ್ಕೆ ʼತಮಿಳ ವೆಟ್ರಿ ಕಳಗಂʼ (Tamizha Vetri Kazhagam) ಎಂಬ ಹೆಸರನ್ನು ಈಗಾಗಲೇ ಘೋಷಿಸಿದ್ದಾರೆ ನಟ. ಮೂಲಗಳ ಪ್ರಕಾರ ತಮಿಳುನಾಡಿನಲ್ಲಿ 2026ರ ರಾಜ್ಯ ಚುನಾವಣೆಯಲ್ಲಿ ವಿಜಯ್‌ ಅವರು ಕಣಕ್ಕೆ ಇಳಿಯಲಿದ್ದಾರೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸದೆ 2026ರಲ್ಲಿ ಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅವರು ಸ್ಪರ್ಧಿಸಲಿದ್ದಾರೆ.

Continue Reading

ಕಾಲಿವುಡ್

Bigg Boss Tamil 8: ಬಿಗ್‌ ಬಾಸ್‌ನಿಂದ ಕಮಲ್‌ ಹಾಸನ್‌ ಔಟ್‌ ಆದ ಬೆನ್ನಲ್ಲೇ ಈ ಸ್ಟಾರ್‌ ನಟ ಎಂಟ್ರಿ?

Bigg Boss Tamil 8: ಹೀಗೆ ಕಮಲ್ ಹಾಸನ್ ಆ ಮನೆಯಿಂದ ನಿರ್ಗಮಿಸಿದ ಬೆನ್ನಲ್ಲಿಯೇ, ಕಮಲ್ ಜಾಗವನ್ನು ಬಿಗ್ ಬಾಸ್ ನಲ್ಲಿ ತುಂಬುವ ಕಲಾವಿದ ಯಾರು ಎನ್ನುವ ಪ್ರಶ್ನೆ ಅನೇಕರನ್ನು ಕಾಡುತ್ತಿತ್ತು. ಇದೀಗ ಸ್ಟಾರ್‌ ಒಬ್ಬರ ಹೆಸರು ಸಖತ್‌ ವೈರಲ್‌ ಆಗುತ್ತಿದೆ.

VISTARANEWS.COM


on

Bigg Boss Tamil 8 replaced Kamal Haasan for Bigg Boss.
Koo

ಬೆಂಗಳೂರು: ತಮಿಳು ಬಿಗ್‌ ಬಾಸ್‌ ಶೀಘ್ರದಲ್ಲಿ ಬರಲಿದೆ ಎಂದು ವರದಿಯಾಗಿದೆ. ಆದರೆ ಈ ಬಾರಿ ಬಿಗ್ ಬಾಸ್‌ ನಿರೂಪಣೆ ಕಮಲ್‌ ಹಾಸನ್‌ (Bigg Boss Tamil 8) ಮಾಡುತ್ತಿಲ್ಲ. ಈ ವರ್ಷ ಬಿಗ್ ಬಾಸ್ ಕಾರ್ಯಕ್ರಮದ ಹೊಣೆ ಹೊರಲು ಸಾಧ್ಯ ಇಲ್ಲ ಅಂದಿದ್ದಾರೆ. ಕಿರುತೆರೆಯ ಮೂಲಕ ನಿಮ್ಮ ಮನೆ ಮತ್ತು ಮನಗಳನ್ನು ತಲುಪಲು ಸಹಕಾರವನ್ನೂ ನೀಡಿದ ವಿಜಯ್ ಟಿವಿಗೆ ಧನ್ಯವಾದ ಎಂದಿರುವ ಕಮಲ್ ಹಾಸನ್,ಕೆಲಸದ ಒತ್ತಡ ಮತ್ತು ಒಪ್ಪಿಕೊಂಡಿರುವ ಕೆಲಸಗಳನ್ನು ಮುಗಿಸಲೇಬೇಕಾದ ಕಾರಣದಿಂದ ನಿರೂಪಣೆ ಮಾಡುತ್ತಿಲ್ಲ ಎಂದಿದ್ದಾರೆ. ಹೀಗೆ ಕಮಲ್ ಹಾಸನ್ ಆ ಮನೆಯಿಂದ ನಿರ್ಗಮಿಸಿದ ಬೆನ್ನಲ್ಲಿಯೇ, ಕಮಲ್ ಜಾಗವನ್ನು ಬಿಗ್ ಬಾಸ್ ನಲ್ಲಿ ತುಂಬುವ ಕಲಾವಿದ ಯಾರು ಎನ್ನುವ ಪ್ರಶ್ನೆ ಅನೇಕರನ್ನು ಕಾಡುತ್ತಿತ್ತು. ಇದೀಗ ಸ್ಟಾರ್‌ ಒಬ್ಬರ ಹೆಸರು ಸಖತ್‌ ವೈರಲ್‌ ಆಗುತ್ತಿದೆ.

ವಿಜಯ್ ಮತ್ತು ಅಜಿತ್ ಹೊರತು ಪಡಿಸಿದರೆ, ಬಿಗ್‌ ಬಾಸ್‌ ಕಾರ್ಯಕ್ರಮವನ್ನು ನೆರವೇರಿಸುವ ಶಕ್ತಿ ಇರುವುದು ರಜನಿಕಾಂತ್‌ ಅವರಿಗೆ ಮಾತ್ರ. ಇದೀಗ ಆದರೆ, ವಯಸ್ಸು ಸೇರಿ ಆರೋಗ್ಯದ ಸಮಸ್ಯೆಗಳು ಇದಕ್ಕೆ ಅಡ್ಡಗಾಲು ಆಗಿವೆ. ಈ ಕಾರಣಕ್ಕೆ ಬಿಗ್ ಬಾಸ್ ಉಸ್ತುವಾರಿಯನ್ನು, ವಿಜಯ್ ಸೇತುಪತಿ ಅವರ ಹೆಗಲಿಗೆ ವಹಿಸುವ ಕಸರತ್ತು ತಮಿಳುನಾಡಿನ ಕಿರುತೆರೆ ಲೋಕದಲ್ಲಿ ಶುರುವಾಗಿದೆ. ಇನ್ನೂ ವಿಜಯ್ ಸೇತುಪತಿ ಕೇವಲ ನಾಯಕನ ಪಾತ್ರಕ್ಕೆ ಸೀಮಿತವಾದವರಲ್ಲ. ಪಾತ್ರ ಯಾವುದೇ ಇದ್ದರೂ ಅದಕ್ಕೆ ಜೀವ ತುಂಬಬಲ್ಲ ಸಾಮರ್ಥ್ಯ ಹೊಂದಿರುವವರು. ಒಂದು ಅರ್ಥದಲ್ಲಿ ವರ್ಷ ಪೂರ್ತಿ ಬ್ಯುಸಿಯಾಗಿರುವವರು ವಿಜಯ್ ಸೇತುಪತಿ.

ಉಳಿದಂತೆ ವಿಜಯ್ ಸೇತುಪತಿ ಹೊರತು ಪಡಿಸಿದರೆ ಸಿಲಂಬರಸನ್ ಅಲಿಯಾಸ್ ಸಿಂಬು ಬಿಗ್ ಬಾಸ್ ನಿರೂಪಣೆ ಮಾಡುವ ಸಾಧ್ಯತೆ ಇದೆ. ಈ ಹಿಂದೆ ಸಿಂಬು ಬಿಗ್ ಬಾಸ್ ಅಲ್ಟಿಮೇಟ್ ಓಟಿಟಿ ಸೀಸನ್ ನಿರೂಪಣೆ ಮಾಡಿದ ಕಾರಣದಿಂದ ಸಿಂಬು ಒಪ್ಪಿಕೊಂಡರು ಒಪ್ಪಿಕೊಳ್ಳಬಹುದು ಎಂದು ವರದಿಯಾಗಿದೆ.

ಇದನ್ನೂ ಓದಿ: Bigg Boss Tamil 8: ಬಿಗ್​ ಬಾಸ್​ ಸೀಸನ್ 8​ರ ಹೋಸ್ಟ್​ ನಾನಲ್ಲ ಎಂದ ಕಮಲ್‌ ಹಾಸನ್‌; ಕಾರಣ ಬಿಚ್ಚಿಟ್ಟ ನಟ!

ಹಮಲ್‌ ಹಾಸನ್‌ ಕೊಟ್ಟ ಕಾರಣವೇನು?

“ಆತ್ಮೀಯ ವೀಕ್ಷಕರೇ, ಭಾರವಾದ ಹೃದಯದಿಂದ, 7 ವರ್ಷಗಳ ಹಿಂದೆ ಪ್ರಾರಂಭವಾದ ನಮ್ಮ ಪ್ರಯಾಣದಿಂದ ನಾನು ಸಣ್ಣ ವಿರಾಮವನ್ನು ತೆಗೆದುಕೊಳ್ಳುತ್ತಿದ್ದೇನೆ ಎಂದು ನಾನು ನಿಮಗೆ ತಿಳಿಸಲು ಬಯಸುತ್ತೇನೆ. ಸಿನಿಮಾಗಳ ಕಮಿಟ್‌ಮೆಂಟ್‌ನಿಂದಾಗಿ ಬಿಗ್ ಬಾಸ್ ತಮಿಳಿನ ಮುಂಬರುವ ಸೀಸನ್‌ಗೆ ಹೋಸ್ಟ್ ಮಾಡಲು ಸಾಧ್ಯವಾಗುತ್ತಿಲ್ಲ. .”
ನಿಮ್ಮ ಮನೆಗಳಲ್ಲಿ ತಲುಪುವ ಸೌಭಾಗ್ಯ ನನಗೆ ಸಿಕ್ಕಿದೆ. ನಿಮ್ಮ ಪ್ರೀತಿ ಮತ್ತು ವಾತ್ಸಲ್ಯವನ್ನು ನೀವು ನನಗೆ ಧಾರೆ ಎರೆದಿದ್ದೀರಿ, ಅದಕ್ಕಾಗಿ ನಿಮಗೆ ನನ್ನ ಚಿರ ಕೃತಜ್ಞತೆ ಇದೆ. ಇಲ್ಲಿ ನಾನು ನನ್ನ ಕಲಿಕೆಯನ್ನು ಪ್ರಾಮಾಣಿಕವಾಗಿ ಹಂಚಿಕೊಂಡಿದ್ದೇನೆ. ಈ ಕಲಿಕೆಯ ಅನುಭವಕ್ಕಾಗಿ ನಾನು ಯಾವಾಗಲೂ ಕೃತಜ್ಞರಾಗಿರುತ್ತೇನೆ. ನಿಮ್ಮಲ್ಲಿ ಪ್ರತಿಯೊಬ್ಬರಿಗೂ ಮತ್ತು ಸ್ಪರ್ಧಿಗಳಿಗೂ ನಾನು ಪ್ರಾಮಾಣಿಕವಾಗಿ ಧನ್ಯವಾದಗಳು. ಕೊನೆಯದಾಗಿ, ವಿಜಯ್ ಟಿವಿಯಲ್ಲಿನ ಅದ್ಭುತ ತಂಡಕ್ಕೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ, ಜೊತೆಗೆ ಈ ಉದ್ಯಮವನ್ನು ಒಂದು ದೊಡ್ಡ ಯಶಸ್ಸನ್ನು ಮಾಡುವಲ್ಲಿ ತೊಡಗಿಸಿಕೊಂಡಿರುವ ಪ್ರತಿಯೊಬ್ಬ ಸಿಬ್ಬಂದಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆʼʼಎಂದು ಬರೆದುಕೊಂಡಿದ್ದಾರೆ.

ಕಮಲ್ ಹಾಸನ್ ಅವರು 2007 ರಲ್ಲಿ ‘ಬಿಗ್ ಬಾಸ್ ತಮಿಳು’ ನಿರೂಪಣೆ ಮಾಡಿದರು.ನಟ ‘ಬಿಗ್ ಬಾಸ್ ತಮಿಳು’ ನ ಪ್ರತಿ ಸೀಸನ್ ಅನ್ನು ನಿರಂತರವಾಗಿ ಹೋಸ್ಟ್ ಮಾಡಿದ್ದಾರೆ. ‘ಬಿಗ್ ಬಾಸ್ ತಮಿಳು 8’ ಹೊಸ ಹೋಸ್ಟ್ ಯಾರೆಂದು ಇನ್ನೂ ಘೋಷಿಸಲಾಗಿಲ್ಲ.

ಕಳೆದ ಸೀಸನ್‌ನಲ್ಲಿ ವಿಶೇಷ ಎಂದರೆ ಅರ್ಚನಾ ರವಿಚಂದ್ರನ್ ಅವರು ವೈಲ್ಡ್‌ ಕಾರ್ಡ್‌ ಮೂಲಕ ಬಿಗ್‌ಬಾಸ್‌ ಮನೆಯೊಳಗೆ ಪ್ರವೇಶ ಪಡೆದಿದ್ದರು. ಇದೀಗ ವೈಲ್ಡ್ ಕಾರ್ಡ್ ಮೂಲಕ ಬಂದು ಚಾಂಪಿಯನ್‌ ಆಗುವ ಮೂಲಕ ಅವರು ಅಪರೂಪದ ಸಾಧನೆ ಮಾಡಿದ್ದರು.  ಇನ್ನು ಡ್ಯಾನ್ಸರ್‌ ಮಾಯಾ ಕೃಷ್ಣನ್‌ ರನ್ನರ್‌ ಅಪ್‌ ಆಗಿ ಆಯ್ಕೆಯಾಗಿದ್ದರು. ಮತ್ತೋರ್ವ ವೈಲ್ಡ್ ಕಾರ್ಡ್ ಎಂಟ್ರಿ ದಿನೇಶ್ ಮೂರನೇ ರನ್ನರ್ ಅಪ್ ಆಗಿದ್ದರು.

Continue Reading

ಕಾಲಿವುಡ್

Kanguva Trailer Out: `ಕಂಗುವ’ ಟ್ರೈಲರ್‌ ಔಟ್‌; ಅಬ್ಬರಿಸಿದ ಸೂರ್ಯ!

Kanguva Trailer Out:  ಇದು ಎಲ್ಲ ಭಾಷೆಯ ಹಕ್ಕುಗಳನ್ನೂ ಒಳಗೊಂಡಿದೆ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ.

VISTARANEWS.COM


on

Kanguva Trailer Out Suriya Takes On A Savage Bobby Deol
Koo

ಬೆಂಗಳೂರು: ಸೂರ್ಯ (Kanguva Trailer Out) ಅವರ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ `ಕಂಗುವ’ ಟ್ರೈಲರ್‌ ಬಿಡುಗಡೆಯಾಗಿದೆ. ಮಹೇಶ್ ಬಾಬು ಅವರ ಹೊಸ ಲುಕ್ ಕೂಡ ವೈರಲ್ ಆಗಿದೆ. ಕಂಗುವ ಚಿತ್ರವನ್ನು ಶಿವಾ ನಿರ್ದೇಶಿಸಿದ್ದಾರೆ ಮತ್ತು ಬಾಬಿ ಡಿಯೋಲ್, ದಿಶಾ ಪಟಾನಿ, ನಟರಾಜನ್ ಸುಬ್ರಮಣ್ಯಂ, ಜಗಪತಿ ಬಾಬು, ಯೋಗಿ ಬಾಬು, ರೆಡಿನ್ ಕಿಂಗ್ಸ್ಲಿ, ಕೋವೈ ಸರಳಾ, ಆನಂದರಾಜ್, ರವಿ ರಾಘವೇಂದ್ರ ಮತ್ತು ಇನ್ನೂ ಅನೇಕರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಕಂಗುವ ಅಕ್ಟೋಬರ್ 10ರಂದು ಥಿಯೇಟರ್‌ಗಳಿಗೆ ಬರಲಿದೆ.

ಟ್ರೈಲರ್‌ನಲ್ಲಿ ಅತ್ಯಂತ ರಗಡ್‌ ಆಗಿ ಅಬ್ಬರಿಸಿದ್ದಾರೆ ಸೂರ್ಯ. ತಮ್ಮ ಎಕ್ಸ್ ಹ್ಯಾಂಡಲ್‌ನಲ್ಲಿ ಟ್ರೇಲರ್ ಅನ್ನು ಹಂಚಿಕೊಂಡ ಸೂರ್ಯ, ” ನಾವು ತಂಡವಾಗಿ ಒಟ್ಟಾಗಿ ಮಾಡಿದ ಈ ಸಿನಿಮಾ ಬಗ್ಗೆ ನಂಬಲಾಗದಷ್ಟು ಹೆಮ್ಮೆ ಇದೆ, ಧನ್ಯವಾದಗಳು, ಜನ್ಮದಿನದ ಶುಭಾಶಯಗಳು ಪ್ರಿಯ ಶಿವ!! ಕಂಗುವಟ್ರೇಲರ್ ನಿಮಗಾಗಿ! (sic ).” ಎಂದು ಬರೆದುಕೊಂಡಿದ್ದಾರೆ.

ಬುಡಕಟ್ಟು ಜನರ ದೃಶ್ಯದೊಂದಿಗೆ ಟ್ರೈಲರ್‌ ಶುರುವಾಗುತ್ತದೆ. ಸೂರ್ಯನ ಪಾತ್ರವನ್ನು ಉಗ್ರ ಡೇರ್‌ಡೆವಿಲ್ ಎಂದು ಚಿತ್ರಿಸಲಾಗಿದೆ. ಕಂಗುವಾದಲ್ಲಿ ಬಾಲಿವುಡ್ ನಟಿ ದಿಶಾ ಪಟಾನಿ ನಟಿಸಿದ್ದಾರೆ. ಈ ಸಿನಿಮಾ 38 ಜಾಗತಿಕ ಭಾಷೆಗಳಲ್ಲಿ 3D ನಲ್ಲಿ ಬಿಡುಗಡೆಯಾಗಲಿದೆ. ಮೂಲಗಳ ಪ್ರಕಾರ ಅಮೆಜಾನ್‌ ಪ್ರೈಂ ಸಂಸ್ಥೆ ಬರೋಬ್ಬರಿ 80 ಕೋಟಿ ರೂ. ಖರೀದಿ ಮಾಡಿದೆಯಂತೆ. ಇದು ಎಲ್ಲ ಭಾಷೆಯ ಹಕ್ಕುಗಳನ್ನೂ ಒಳಗೊಂಡಿದೆ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ.

ಇದನ್ನೂ ಓದಿ: Kanguva Movie: ʻಕಂಗುವʼ ಚಿತ್ರದಲ್ಲಿ ಮೂರು ಅವತಾರಗಳಲ್ಲಿ ಮಿಂಚಲಿದ್ದಾರಂತೆ ಸೂರ್ಯ

ಧ್ರುವ ಸರ್ಜಾ ಸಿನಿಮಾ ಜತೆ ಕ್ಲ್ಯಾಶ್‌!

ಕಾಲಿವುಡ್‌ ನಟ ಸೂರ್ಯ (Actor Suriya) ನಟನೆಯ ʻಕಂಗುವʼ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌ ಆಗಿದೆ. ಅಕ್ಟೋಬರ್ 10ರಂದು ವಿಶ್ವಾದ್ಯಂತ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಇದೇ ಸಂದರ್ಭದಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಮಾರ್ಟಿನ್’ ಸಿನಿಮಾ (Kanguva Release Date) ಬಿಡುಗಡೆ ಆಗುತ್ತಿದೆ. ತಮಿಳಿನ ಜತೆಗೆ ಕನ್ನಡ, ತೆಲುಗು, ಹಿಂದಿ ಭಾಷೆಗಳಲ್ಲೂ ಈ ಚಿತ್ರ ರಿಲೀಸ್ ಆಗುತ್ತಿದೆ. ಹೀಗಾಗಿ, ಕನ್ನಡದ ‘ಮಾರ್ಟಿನ್’ ಜೊತೆ ಈ ಚಿತ್ರ ಕ್ಲ್ಯಾಶ್ ಆಗಲಿದೆ.

ಅಕ್ಟೋಬರ್‌ 11 ಕ್ಕೆ ಮಾರ್ಟಿನ್‌ ಸಿನಿಮಾ ಬಿಡುಗಡೆ

ಅಕ್ಟೋಬರ್‌ 11 ಕ್ಕೆ ಮಾರ್ಟಿನ್‌ ಸಿನಿಮಾ ಬಿಡುಗಡೆ ಆಗಲಿದೆ . ಧ್ರುವ ಸರ್ಜಾ ಅಭಿನಯದ 5ನೇ ಚಿತ್ರ ಮಾರ್ಟಿನ್. ಎ.ಪಿ.ಅರ್ಜುನ್ ನಿರ್ದೇಶನದ ಮಾರ್ಟಿನ್ 5 ಭಾಷೆಯಲ್ಲಿ ರಿಲೀಸ್ ಆಗಲಿದೆ. ಆ ಮೂಲಕ 2024 ರ ಹೈವೋಲ್ಟೇಜ್ ಸಿನಿಮಾ ಇದಾಗಲಿದೆ. ಪೊಗರು ಸಿನಿಮಾ ಬಳಿಕ 3 ವರ್ಷಗಳ ನಂತರ ಬೆಳ್ಳಿತೆರೆ ಮೇಲೆ ಧ್ರುವ ಸರ್ಜಾ ಅವರ ಮತ್ತೊಂದು ಸಿನಿಮಾ ಬಿಡುಗಡೆಯಾಗಲಿದೆ. ಮಾರ್ಟಿನ್ ಚಿತ್ರಕ್ಕೆ ಖ್ಯಾತ ಬಹುಭಾಷಾ ನಟ ಅರ್ಜುನ್‌ ಸರ್ಜಾ ಕಥೆ ಬರೆದಿದ್ದು, ವಾಸವಿ ಎಂಟರ್‌ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ. ಮೆಹ್ತಾ ಈ ಚಿತ್ರ ನಿರ್ಮಿಸಿದ್ದಾರೆ.

ಸತ್ಯ ಹೆಗಡೆ ಛಾಯಾಚಿತ್ರಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ, ರಾಮ್ ಲಕ್ಷ್ಮಣ್ ಅವರ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಚಿತ್ರದ ತಾರಾಬಳಗದಲ್ಲಿ ಅನ್ವೇಶಿ ಜೈನ್, ಜಾರ್ಜಿಯ ಆಂಡ್ರಿಯಾನಿ, ಚಿಕ್ಕಣ್ಣ, ಮಾಳವಿಕ ಅವಿನಾಶ್, ನಿಕ್ತಿನ್ ಧೀರ್, ನವಾಬ್ ಶಾ, ರೋಹಿತ್ ಪಾಠಕ್ ಮುಂತಾದವರಿದ್ದಾರೆ.

ದೇಶ ವಿದೇಶದ 38 ಭಾಷೆಗಳಲ್ಲಿ ‘ಕಂಗುವ’ ಸಿನಿಮಾ ಡಬ್ ಮಾಡಿ ರಿಲೀಸ್ ಮಾಡಲಾಗುತ್ತಿದೆ. ಟ್ರೈಲರ್ ನೋಡಿದರೆ ವಿಷ್ಯುವಲಿ ಸಿನಿಮಾ ತೆರೆಮೇಲೆ ಅದ್ಭುತ ಅನುಭವ ನೀಡುವ ಸಾಧ್ಯತೆಯಿದೆ.ಚೆನ್ನೈ, ಗೋವಾ, ಕೇರಳ, ರಾಜಮಂಡ್ರಿ, ಕೊಡೆಕೊನಾಲ್‌ನಲ್ಲಿ ‘ಕಂಗುವ’ ಸಿನಿಮಾ ಚಿತ್ರೀಕರಣ ನಡೆದಿದೆ.




Continue Reading
Advertisement
TJ Abraham
ಪ್ರಮುಖ ಸುದ್ದಿ14 mins ago

TJ Abraham : ಎಸ್ಎಂ ಕೃಷ್ಣರಿಂದ ಹಿಡಿದು ಸಿದ್ದರಾಮಯ್ಯವರೆಗೆ; ಕರ್ನಾಟಕ ರಾಜಕೀಯದ ದೊಡ್ಡ ಹುಲಿಗಳನ್ನೇ ಬೋನಿಗೆ ಬೀಳಿಸಿದ ಟಿ ಜೆ ಅಬ್ರಾಹಂ

Positive Pay System
ವಾಣಿಜ್ಯ28 mins ago

Positive Pay System: ಏನಿದು ಪಾಸಿಟಿವ್‌ ಪೇ ಸಿಸ್ಟಮ್‌? ಚೆಕ್ ಪಾವತಿ ಸುರಕ್ಷಿತಗೊಳಿಸುವುದು ಹೇಗೆ?

Dog attack
ವೈರಲ್ ನ್ಯೂಸ್38 mins ago

Dog Attack: 17 ಮಂದಿ ಮೇಲೆ ಬೀದಿ ನಾಯಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Kannada New Movie
ಬೆಂಗಳೂರು42 mins ago

Kannada New Movie: ಮಂಸೋರೆ ನಿರ್ದೇಶನದ ʼದೂರ ತೀರ ಯಾನʼ ಟೈಟಲ್ ಟೀಸರ್ ರಿಲೀಸ್‌

pralhad Joshi
ಬೆಂಗಳೂರು2 hours ago

Pralhad Joshi: ಸಿಎಂ ಮೇಲೆ ರಾಜ್ಯಪಾಲರ ಕ್ರಮ ಸರಿಯಾಗಿಯೇ ಇದೆ; ಪ್ರಲ್ಹಾದ್‌ ಜೋಶಿ ಸಮರ್ಥನೆ

CM Siddaramaiah
ಪ್ರಮುಖ ಸುದ್ದಿ2 hours ago

CM Siddaramaiah : ತಮ್ಮ ಮೇಲೆ ತನಿಖೆಗೆ ಆದೇಶಿಸಿದ ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಸಿಎಂ

Viral Video
Latest2 hours ago

Viral Video: ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ನೋಡುತ್ತ ದೇವಾಲಯದೊಳಗೇ ಹಸ್ತಮೈಥುನ!

Weight Loss Tips kannada
ಆರೋಗ್ಯ2 hours ago

5 Seeds for Weight Loss: ಈ 5 ಕಿರು ಬೀಜಗಳು ತೂಕ ಇಳಿಕೆಗೆ ಸಹಕಾರಿ

tungabhadra dam gate
ಪ್ರಮುಖ ಸುದ್ದಿ2 hours ago

Tungabhadra Dam: ಮುರಿದುಹೋದ 19ನೇ ಗೇಟ್‌ಗೆ ಸ್ಟಾಪ್‌ ಲಾಗ್‌ ಅಳವಡಿಕೆ ಯಶಸ್ವಿ, ಪೋಲಾಗುತ್ತಿದ್ದ ನೀರು ಬಂದ್!

CM Siddaramaiah
ಪ್ರಮುಖ ಸುದ್ದಿ2 hours ago

CM Siddaramaiah : ಸಿಎಂ ಸಿದ್ದರಾಮಯ್ಯಗೆ ಉರುಳಾಗಿರುವ ಮುಡಾ ಹಗರಣ ಏನು? ಇಲ್ಲಿದೆ ಎಲ್ಲ ಮಾಹಿತಿ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌