CM Siddaramaiah: ರಾಜ್ಯಪಾಲರ ನಡೆ ಖಂಡಿಸಿ ಸೋಮವಾರ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ - Vistara News

ಪ್ರಮುಖ ಸುದ್ದಿ

CM Siddaramaiah: ರಾಜ್ಯಪಾಲರ ನಡೆ ಖಂಡಿಸಿ ಸೋಮವಾರ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

CM Siddaramaiah: ಶನಿವಾರ ರಾಜ್ಯಪಾಲರು ಪ್ರಾಸಿಕ್ಯೂಶನ್‌ ಅನುಮತಿ ನೀಡಿದ ಕೂಡಲೇ ರಾಜ್ಯದ ನಾನಾ ಕಡೆ ಪ್ರತಿಭಟನೆಗಳು ಆರಂಭವಾಗಿವೆ. ರಾಜ್ಯಪಾಲರ ನಡೆ ಸಂವಿಧಾನವಿರೋಧಿ, ಕಾನೂನುಬಾಹಿರ ಹಾಗೂ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್‌ ನಾಯಕರು ಆರೋಪಿಸಿದ್ದಾರೆ. ಕೆಲವೆಡೆ ರಾಜ್ಯಪಾಲರಿಗೆ ʼಗೋ ಬ್ಯಾಕ್‌ʼ ಚಳವಳಿ ಕೂಡ ನಡೆದಿದೆ.

VISTARANEWS.COM


on

cm siddaramaiah congress protest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಡಾ ಹಗರಣದಲ್ಲಿ (MUDA Scam) ಸಿಎಂ ಸಿದ್ದರಾಮಯ್ಯ (CM Siddaramaih) ವಿರುದ್ಧ ಪ್ರಾಸಿಕ್ಯೂಶನ್‌ಗೆ (Prosecution) ಅನುಮತಿ ನೀಡಿರುವ ರಾಜ್ಯಪಾಲರ (Governor Thawar Chand Gehlot) ನಡೆಯ ವಿರುದ್ಧ ಕಾಂಗ್ರೆಸ್‌ ಸಿಟ್ಟು ಭುಗಿಲೆದ್ದಿದ್ದು, ಗವರ್ನರ್‌ ಕ್ರಮವನ್ನು ಖಂಡಿಸಿ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕೈ ಪಡೆ ಮುಂದಾಗಿದೆ.

ರಾಜ್ಯದ ಎಲ್ಲಾ ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ಕಾಂಗ್ರೆಸ್‌ ಪ್ರತಿಭಟನೆ ಹಮ್ಮಿಕೊಂಡಿದ್ದು, ಜಿಲ್ಲಾಧಿಕಾರಿಗಳಿಗೆ ಪ್ರತಿಭಟನಾ ಪತ್ರ ನೀಡಲು ತೀರ್ಮಾನಿಸಿದೆ. ರಾಷ್ಟ್ರಪತಿಗಳಿಗೆ ಡಿಸಿಗಳ ಮೂಲಕ ಪ್ರತಿಭಟನಾ ಪತ್ರ ನೀಡಲಾಗುತ್ತದೆ. ಈಗಾಗಲೇ ಎಲ್ಲಾ ಶಾಸಕರಿಗೂ ಈ ಬಗ್ಗೆ ಸೂಚನೆ ನೀಡಲಾಗಿದ್ದು, ಕನಿಷ್ಠ ಅರ್ಧ ಕಿಲೋಮೀಟರ್ ನಡೆದು ಹೋಗಿ ಮನವಿ ಸಲ್ಲಿಕೆ ಮಾಡಲಾಗುತ್ತದೆ.

ಶನಿವಾರ ರಾಜ್ಯಪಾಲರು ಪ್ರಾಸಿಕ್ಯೂಶನ್‌ ಅನುಮತಿ ನೀಡಿದ ಕೂಡಲೇ ರಾಜ್ಯದ ನಾನಾ ಕಡೆ ಪ್ರತಿಭಟನೆಗಳು ಆರಂಭವಾಗಿವೆ. ರಾಜ್ಯಪಾಲರ ನಡೆ ಸಂವಿಧಾನವಿರೋಧಿ, ಕಾನೂನುಬಾಹಿರ ಹಾಗೂ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್‌ ನಾಯಕರು ಆರೋಪಿಸಿದ್ದಾರೆ. ಕೆಲವೆಡೆ ರಾಜ್ಯಪಾಲರಿಗೆ ʼಗೋ ಬ್ಯಾಕ್‌ʼ ಚಳವಳಿ ಕೂಡ ನಡೆದಿದೆ.

ಕೇಂದ್ರ ಸರ್ಕಾರದ ವಿರುದ್ಧ ಅಹಿಂದ ಹಾಗೂ ಕನ್ನಡ ಅಸ್ಮಿತೆ ಅಸ್ತ್ರವನ್ನು ಕಾಂಗ್ರೆಸ್ ಪ್ರಯೋಗಿಸಿದೆ. ದೇಶಾದ್ಯಂತ ಇದೇ ವಿಚಾರವನ್ನು ಚರ್ಚೆಯ ಮುನ್ನೆಲೆಗೆ ತಂದು ಹೋರಾಡಲು ಕಾಂಗ್ರೆಸ್‌ ಮುಂದಾಗಿದೆ. ದೇಶದಲ್ಲಿ ಮುಂದೆ ಬರುತ್ತಿರುವ ಚುನಾವಣೆಗಳ ಲಾಭ ಪಡೆಯಲು ಈ ಪ್ರಕರಣ ಬಳಸಿಕೊಳ್ಳಲು ತೀರ್ಮಾನಿಸಿದೆ.

ಹಿಂದುಳಿದ ವರ್ಗಗಳ ನಾಯಕನನ್ನು ಕೆಳಗಿಳಿಸಲು ಬಿಜೆಪಿ ಸಂಚು ಹೂಡಿದೆ. ರಾಜ್ಯದ ಪರ ಕೇಂದ್ರದ ವಿರುದ್ಧ ಧ್ವನಿ ಎತ್ತಿದ್ದರಿಂದಲೇ ಬಿಜೆಪಿ ನಾಯಕರು ರಾಜ್ಯ ನಾಯಕರಿಗೆ ಸಮಸ್ಯೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕರು ಆಪಾದಿಸಿದ್ದು, ಈ ಎರಡು ಭಾವನಾತ್ಮಕ ಅಸ್ತ್ರಗಳ ಮೂಲಕ ಹೋರಾಡಲು ಮುಂದಾಗಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿತಾರೆ: ಡಿಕೆ ಶಿವಕುಮಾರ್

ಬೆಂಗಳೂರು: ಮುಡಾ ಹಗರಣ ವಿಚಾರದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದರೂ, ಸಿದ್ದರಾಮಯ್ಯ ಅವರು ಸಿಎಂ ಆಗಿ ಮುಂದುವರಿಯಲಿದ್ದಾರೆ. ಇಡೀ ಸಚಿವ ಸಂಪುಟ ಹಾಗೂ ಕಾಂಗ್ರೆಸ್‌ ಪಕ್ಷ ಸಿಎಂ ಅವರ ಹಿಂದೆ ನಿಂತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ನಡೆಸಲಾದ ಹತ್ತು ಜನ ಸಚಿವರ ಸಾಮೂಹಿಕ ಸುದ್ದಿಗೋಷ್ಠಿಯ ನೇತೃತ್ವ ವಹಿಸಿ ಅವರು ಮಾತನಾಡಿದರು. ರಾಜ್ಯಪಾಲರ ಕ್ರಮ ಪ್ರಜಾಪ್ರಭುತ್ವಕ್ಕೆ ಮಾರಕ‌ವಾದ ನಡೆ. ಸಂವಿಧಾನ ವಿರೋಧಿ ಪತ್ರವನ್ನು ರಾಜ್ಯಪಾಲರು ಕಳುಹಿಸಿಕೊಟ್ಟಿದ್ದಾರೆ ಎಂದು ಅವರು ಆಪಾದಿಸಿದರು.

ದ್ವೇಷದ ಪಿತೂರಿ ಒಳಗೊಂಡ ಪ್ರಾಸಿಕ್ಯೂಶನ್ ಕೋರಿ ಸಲ್ಲಿಸಿರುವ ಅರ್ಜಿ ತಿರಸ್ಕರಿಸುವಂತೆ ಮನವರಿಕೆ ಮಾಡಿಕೊಡುವ ಕೆಲಸವನ್ನು ನಾವು ಮಾಡಿದ್ದೆವು. ಇವು ರಾಜಕೀಯ ಪ್ರೇರಿತ ದೂರುಗಳು ಎಂದು ಹೇಳಿದ್ದೆವು. ನಮ್ಮ ಸಿಎಂ ಅವಧಿಯಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ. ಹೀಗಾಗಿ ಪ್ರಾಸಿಕ್ಯೂಶನ್ ಕೋರಿ ಸಲ್ಲಿಸಿರುವ ಅರ್ಜಿ ತಿರಸ್ಕರಿಸಬೇಕು ಎಂದು ಮನವಿ ಮಾಡಿದ್ದೆವು. ಸಾಮಾನ್ಯ ತನಿಖೆ ನಡೆಸಿ ಪ್ರಾಸಿಕ್ಯೂಶನ್‌ಗೆ ಕೇಳಿದರೆ ಕೊಡುವುದು ನೋಡಿದ್ದೇವೆ. ಆದರೆ ಈ ಪ್ರಕರಣದಲ್ಲಿ ಯಾವುದೇ ತನಿಖೆ ಆಗಿಲ್ಲ. ಆದರೂ ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಟ್ಟಿದ್ದಾರೆ ಎಂದು ಅವರು ಆಪಾದಿಸಿದರು.

ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಗಣಿಗಾರಿಕೆಗೆ ಅನುಮತಿ ನೀಡಿದ ಪ್ರಕರಣದಲ್ಲಿ ಲೋಕಾಯುಕ್ತದವರೇ ಪ್ರಾಸಿಕ್ಯೂಶನ್‌ಗೆ ಅನುಮತಿ ಕೇಳಿದರೂ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ. ಮುರುಗೇಶ ನಿರಾಣಿ, ಜನಾರ್ದನ ರೆಡ್ಡಿ ವಿರುದ್ಧದ ಪ್ರಕರಣದಲ್ಲೂ ಅನುಮತಿ ತೀರ್ಮಾನ ಮಾಡಿಲ್ಲ. ಆದರೆ ಸಿದ್ದರಾಮಯ್ಯ ಕೇಸ್ ಅನ್ನು ತ್ವರಿತವಾಗಿ ತೀರ್ಮಾನ ತೆಗೆದುಕೊಂಡಿದ್ದಾರೆ. ಇದು ಪ್ರಜಾಪ್ರಭುತ್ವ ಸರ್ಕಾರದ ವಿರುದ್ಧ ತೆಗೆದುಕೊಂಡ ತೀರ್ಮಾನ ಎಂದು ಅವರು ಆರೋಪಿಸಿದರು.

ಇದನ್ನೂ ಓದಿ: CM Siddaramaiah: ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ 6 ಪುಟಗಳ ಪತ್ರದಲ್ಲಿ ಏನೇನಿದೆ? ಕೊಟ್ಟ ಸಮರ್ಥನೆಗಳು ಹೀಗಿವೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

7th pay commission : 7ನೇ ವೇತನ ಆಯೋಗ ಜಾರಿ ಬಳಿಕ ನೌಕರರ ಸಂಬಳ ಏರಿಕೆ ಎಷ್ಟು? ಅಧಿಕೃತ ಪಟ್ಟಿ ಬಿಡುಗಡೆ

7th Pay Commission: 2022ರ ನ.19ರಂದು ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿ ಪರಿಷ್ಕರಣೆ ಕುರಿತಂತೆ ತನ್ನ ವರದಿಯನ್ನು ಸಲ್ಲಿಸಿತ್ತು. 7ನೇ ರಾಜ್ಯ ವೇತನ ಆಯೋಗವು ಶಿಫಾರಸು ಮಾಡಿರುವ ಮುಖ್ಯ ವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿಗಳನ್ನು ಜುಲೈ 1ರಿಂದ ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲಾಗುತ್ತದೆ ಎಂದು ತಿಳಿಸಲಾಗಿದೆ.

VISTARANEWS.COM


on

Koo

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಪರಿಷ್ಕರಿಸಲು ರಚನೆ ಮಾಡಿದ್ದ 7ನೇ ವೇತನ ಆಯೋಗದ (7th Pay Commission) ಶಿಫಾರಸುಗಳನ್ನು ಆ.1ರಿಂದ ಜಾರಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಅದರ ಅಧಿಕೃತ ಪ್ರಕಟಣೆ ಶನಿವಾರ ಬಿಡುಗಡೆಗೊಂಡಿದೆ. ಕರ್ನಾಟಕ ಸರ್ಕಾರದ ಆರ್ಥಿಕ ಇಲಾಖೆಯ ಕಾರ್ಯದರ್ಶಿ ಡಾ ರೇಜು ಎಂ. ಟಿ ಪ್ರಕಟಣೆಯನ್ನು ಹೊರಡಿಸಿದ್ದಾರೆ. ಈ ಪ್ರಕಟಣೆಯಲ್ಲಿ ಯಾರಿಗೆ ಎಷ್ಟು ವೇತನ ಹೆಚ್ಚಾಗಲಿದೆ ಎಂಬ ಕುರಿತ ಪರಿಷ್ಕೃತ ಮುಖ್ಯ ವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿಗಳನ್ನು ಪ್ರಕಟ ಮಾಡಲಾಗಿದೆ.

2022ರ ನ.19ರಂದು ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿ ಪರಿಷ್ಕರಣೆ ಕುರಿತಂತೆ ತನ್ನ ವರದಿಯನ್ನು ಸಲ್ಲಿಸಿತ್ತು. 7ನೇ ರಾಜ್ಯ ವೇತನ ಆಯೋಗವು ಶಿಫಾರಸು ಮಾಡಿರುವ ಮುಖ್ಯ ವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿಗಳನ್ನು ಜುಲೈ 1ರಿಂದ ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲಾಗುತ್ತದೆ ಎಂದು ತಿಳಿಸಲಾಗಿದೆ.

7ನೇ ವೇತನ ಆಯೋಗದ ಪರಿಷ್ಕೃತ ಪಟ್ಟಿಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ (ಇಂಗ್ಲಿಷ್​​)
https://finance.karnataka.gov.in/storage/pdf-files/FD21SRP2024-Dtd-17-08-2024(Eng).pdf
7ನೇ ವೇತನ ಆಯೋಗದ ಪರಿಷ್ಕೃತ ವೇತನದ ಪಟ್ಟಿಯನ್ನು ಇಲ್ಲಿ ವೀಕ್ಷಿಸಿ (ಕನ್ನಡ)
https://finance.karnataka.gov.in/storage/pdf-files/FD21SRP2024-Dtd-17-08-2024(Kan).pdf

ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ಈ ವೇತನ ನಿಗದಿ ಮಾಡಲಾಗಿದೆ

ದಿನಾಂಕ: 01.07.2022ರಲ್ಲಿದ್ದಂತೆ ಮೂಲ ವೇತನ.
ದಿನಾಂಕ: 01.07.2022ರಲ್ಲಿದ್ದಂತಹ ಬೆಲೆ ಸೂಚ್ಯಂಕ ಹಂತ 361.704 ಕ್ಕೆ ಸಂವಾದಿಯಾಗಿ ಲಭ್ಯವಿದ್ದ 312 ತುಟ್ಟಿ ಭತ್ಯೆ.
ದಿನಾಂಕ: 01.07.2022 ರಲ್ಲಿ ಲಭ್ಯವಿದ್ದ ಮೂಲ ವೇತನದ ಮೇಲೆ 27.50% ರಷ್ಟು ಫಿಟ್‌ಮೆಂಟ್ ಸೌಲಭ್ಯ.
ಮೇಲಿನ ಎಲ್ಲ ಹಂತಗಳನ್ನು ಒಟ್ಟುಗೂಡಿಸಿ ಲೆಕ್ಕ ಹಾಕಿದಾಗ ಬರುವ ಮೊತ್ತದ ನಂತರದ ಹಂತದಲ್ಲಿ ವೇತನ ಪರಿಷ್ಕೃತ ವೇತನ ಶ್ರೇಣಿಯಲ್ಲಿ ನಿಗದಿಪಡಿಸಲಾಗಿದೆ.

ಆಗಸ್ಟ್ 1ರಿಂದ ಪರಿಷ್ಕೃತ ವೇತನ ಶ್ರೇಣಿಗಳ ಅನುಷ್ಠಾನ

1.ಪಿಂಚಣಿ ಮತ್ತು ಪಿಂಚಣಿ ಸೌಲಭ್ಯಗಳ ಪರಿಷ್ಕರಣೆ ಕುರಿತಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸುಗಳ ಪ್ರಕಾರ ಕನಿಷ್ಠ ಮತ್ತು ಗರಿಷ್ಠ ಪಿಂಚಣಿಯ ಪ್ರಸ್ತುತ ಮೊತ್ತವನ್ನು ಕ್ರಮವಾಗಿ ಮಾಸಿಕ 8,500 ರೂ. ಮತ್ತು 75,300 ರಿಂದ 13,500 ಮತ್ತು 1,20,600ಗಳಿಗೆ ಮತ್ತು ಕುಟುಂಬ ಪಿಂಚಣಿಯ ಕನಿಷ್ಠ ಮತ್ತು ಗರಿಷ್ಠ ಮಿತಿಯನ್ನು ಅನುಕ್ರಮವಾಗಿ ಮಾಸಿಕ 8,500 ಮತ್ತು 45,180 ರಿಂದ 13,500 ಮತ್ತು 80,400 ಪರಿಷ್ಕರಿಸಲಾಗಿದೆ. ಮರಣ ಮತ್ತು ನಿವೃತ್ತಿ ಉಪದಾನದ ಪ್ರಸ್ತುತ ಗರಿಷ್ಠ ಮಿತಿ ರೂ.20 ಲಕ್ಷಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

2.ದಿನಾಂಕ: 01.07.2022ಕ್ಕೆ ಪೂರ್ವದಲ್ಲಿ ನಿವೃತ್ತರಾದ ಅಥವಾ ಸೇವೆಯಲ್ಲಿದ್ದಾಗ ಮೃತರಾದ ಸರ್ಕಾರಿ ನೌಕರರ ಪಿಂಚಣಿ ಮತ್ತು ಕುಟುಂಬ ಪಿಂಚಣಿಯನ್ನು ಈ ಕೆಳಗಿನಂತೆ ನಿಗದಿಪಡಿಸಿದೆ.

ಅ) ದಿನಾಂಕ: 01.07 2022 ರಂದು ಇದ್ದ ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನ:
ಅ) ದಿನಾಂಕ: 01.07.2022 ರಂದು ಲಭ್ಯವಿದ್ದ 31% ರಷ್ಟು ತುಟ್ಟಿ ಭತ್ಯೆ,
ಇ) ದಿನಾಂಕ: 01.07.2022 ರಂದು ಇದ್ದ ನಿವೃತ್ತಿ ವೇತನ/ಕುಟುಂಬ ವೇತನದ ಮೇಲೆ 27.50% ರಷ್ಟು ಫಿಟ್‌ಮೆಂಟ್ ಸೌಲಭ್ಯ.

3.ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನದ ಈ ಮೇಲಿನ (ಅ) + (ಅ) + (ಇ) ರ ಒಟ್ಟಾರೆ ಮೊತ್ತವು ಮಾಸಿಕ 13,500 ಗಳ ಕನಿಷ್ಠ ಪಿಂಚಣಿಗೆ ಕಡಿಮೆ ಇಲ್ಲದಂತೆ ಮತ್ತು ನಿವೃತ್ತಿ ವೇತನವು ಗರಿಷ್ಠ ಮಾಸಿಕ 1,20,600 ರೂ. ಮಿತಿಗೆ ಹಾಗೂ ಕುಟುಂಬ ನಿವೃತ್ತಿ ವೇತನದ ಗರಿಷ್ಠ ಮೊತ್ತವು ಮಾಸಿಕ 80,400 ರೂ. ಮಿತಿಗೆ ಒಳಪಟ್ಟಿರುತ್ತದೆ. ಈ ಪರಿಷ್ಕೃತ ಪಿಂಚಣಿಯ ಆರ್ಥಿಕ ಲಾಭವು ದಿನಾಂಕ: 01.08.20224 ರಿಂದ ಪ್ರಾಪ್ತವಾಗತಕ್ಕದ್ದು.

ಇದನ್ನೂ ಓದಿ: TJ Abraham : ಎಸ್ಎಂ ಕೃಷ್ಣರಿಂದ ಹಿಡಿದು ಸಿದ್ದರಾಮಯ್ಯವರೆಗೆ; ಕರ್ನಾಟಕ ರಾಜಕೀಯದ ದೊಡ್ಡ ಹುಲಿಗಳನ್ನೇ ಬೋನಿಗೆ ಬೀಳಿಸಿದ ಟಿ ಜೆ ಅಬ್ರಾಹಂ

4.ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಸಂಬಂಧಿತ ಭತ್ಯೆಗಳಾದ ಮನೆ ಬಾಡಿಗೆ ಭತ್ಯೆ. ನಗರ ಪರಿಹಾರ ಭತ್ಯೆ, ವೈದ್ಯಕೀಯ ಭತ್ಯೆಗಳ ಪರಿಷ್ಕರಣೆಯ ಶಿಫಾರಸ್ಸು ಮತ್ತು ಪರಿಷ್ಕೃತ ವೇತನ ಹಾಗೂ ಪರಿಷ್ಕೃತ ಪಿಂಚಣಿಯಲ್ಲಿ ತುಟ್ಟಿ ಭತ್ಯೆ ಲೆಕ್ಕಾಚಾರ ಮಾಡಲು ಶಿಫಾರಸ್ಸು ಮಾಡಲಾದ ಪರಿಷ್ಕೃತ ಸೂತ್ರಕ್ಕೆ ಸಂಬಂಧಿಸಿದ ವೇತನ ಆಯೋಗದ ಶಿಫಾರಸ್ಸುಗಳನ್ನು ಅಂಗೀಕರಿಸಲಾಗಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ಪ್ರಭಾರ ಭತ್ಯೆ ಮಂಜೂರಾತಿಯ ಪ್ರಸ್ತುತ ದರಗಳು ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ಯಾವುದೇ ಬದಲಾವಣೆ ಇಲ್ಲದೇ ಮುಂದುವರೆಯುತ್ತದೆ.

5.ನೌಕರರ ಸಾಮೂಹಿಕ ವಿಮಾ ಯೋಜನೆಗೆ ನೌಕರರ ವಂತಿಗೆ ಹೆಚ್ಚಳದ ಪರಿಷ್ಕರಣೆಯ ಶಿಫಾರಸ್ಸುಗಳನ್ನು ಅಂಗೀಕರಿಸಲಾಗಿದೆ.

Continue Reading

ಪ್ರಮುಖ ಸುದ್ದಿ

TJ Abraham : ಎಸ್ಎಂ ಕೃಷ್ಣರಿಂದ ಹಿಡಿದು ಸಿದ್ದರಾಮಯ್ಯವರೆಗೆ; ಕರ್ನಾಟಕ ರಾಜಕೀಯದ ದೊಡ್ಡ ಹುಲಿಗಳನ್ನೇ ಬೋನಿಗೆ ಬೀಳಿಸಿದ ಟಿ ಜೆ ಅಬ್ರಾಹಂ

TJ Abraham: ಬೆಂಗಳೂರು ಮೂಲದ ಉದ್ಯಮಿ ಮತ್ತು ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಟಿ.ಜೆ. ಅಬ್ರಹಾಂ ಕರ್ನಾಟಕದ ರಾಜಕೀಯ ವಲಯದಲ್ಲಿ ಸಾಕಷ್ಟು ಜನಪ್ರಿಯರಾಗಿದ್ದಾರೆ. ಹಾಲಿ ಮುಖ್ಯಮಂತ್ರಿಗಳು ಸೇರಿದಂತೆ ಪ್ರಬಲ ರಾಜಕಾರಣಿಗಳನ್ನು ಎದುರಿಸಲು ಮತ್ತು ಮಾಹಿತಿ ಹಕ್ಕು ಕಾಯ್ದೆಯನ್ನು ತನ್ನ ಆಯ್ಕೆಯ ಅಸ್ತ್ರವಾಗಿ ಬಳಸಲು ಹೆಸರುವಾಸಿಯಾಗಿದ್ದಾರೆ. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸಲು ರಾಜ್ಯಪಾಲರು ಒಪ್ಪಿಗೆ ನೀಡಬೇಕು ಎಂಬುದಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ದ ರಾಜ್ಯಪಾಲರು ನೀಡಿದ್ದ ಅನುಮತಿಯನ್ನು ಅವರು ಉಲ್ಲೇಖಿಸಿದ್ದರು.

VISTARANEWS.COM


on

TJ Abraham
Koo

ಬೆಂಗಳೂರು : ರಾಜ್ಯ ರಾಜ್ಯಕೀಯದಲ್ಲಿ ಇದೀಗ ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಮುಡಾ ಹಗರಣದ ಬಗ್ಗೆಯೇ ಚರ್ಚೆ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಅವರ ಪತ್ನಿ ಪಾರ್ವತಿ ಅವರ ಹೆಸರಿಗೆ ಮೈಸೂರಿನ ವಿಜಯನಗರದ ಬಡಾವಣೆಯಲ್ಲಿ 14 ಸೈಟ್​ಗಳನ್ನು ಹಂಚಿಕೆ ಮಾಡಲಾಗಿದೆ ಎಂಬುದೇ ವಿವಾದದ ಮೂಲ. ಮೈಸೂರಿನ ಕೆಸರೆಯಲ್ಲಿ ಸ್ವಾಧೀನಪಡಿಸಿಕೊಂಡಿರುವ 3.16 ಗುಂಟೆ ಜಮೀನಿಗೆ ಪರ್ಯಾಯವಾಗಿ ವಿಜಯನಗರದಲ್ಲಿ ಹೆಚ್ಚು ಬೆಲೆಯ ಸೈಟ್​ಗಳನ್ನು ಆಗಿನ ಮುಡಾ ಆಯುಕ್ತ ನಟೇಶ್ ಅವರು ಕೊಟ್ಟಿದ್ದರು. ಅದಕ್ಕೆ ಸಿಎಂ ಪ್ರಭಾವ ಬೀರಿದ್ದಾರೆ ಎಂದು ಆರೋಪಿಸಲಾಗಿದೆ. ಮೊದಲಿಗೆ ಆರ್​ಟಿಐ ಕಾರ್ಯಕರ್ತರಾದ ಗಂಗರಾಜು ಅವರು ದೂರು ನೀಡಿದ್ದರು. ಬಳಿಕ ಸ್ನೇಹಮಯಿ ಕೃಷ್ಣ ಮತ್ತು ಟಿ.ಜೆ ಅಬ್ರಾಹಂ (TJ Abraham) ಅವರು ದೂರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದರು. ಅಲ್ಲದೆ ಅವರು ಟಿ.ಜೆ ಅಬ್ರಾಹಂ, ಪ್ರದೀಪ್​ ಸೇರಿ ಮೂವರು ಸಿಎಂ ವಿರುದ್ಧ ಪ್ಯಾಸಿಕ್ಯೂಷನ್​ಗೆ ದೂರು ನೀಡಲು ಕರ್ನಾಟಕ ರಾಜ್ಯಪಾಲರ (Karnataka Governer) ಅನುಮತಿ ಕೋರಿದ್ದರು. ಶನಿವಾರ ರಾಜ್ಯಪಾಲರು ಅವರಿಗೆ ಕೊಟ್ಟಿ ನೋಟಿಸ್​ ಕೊಟ್ಟಿದ್ದಾರೆ.

ಬೆಂಗಳೂರು ಮೂಲದ ಉದ್ಯಮಿ ಮತ್ತು ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಟಿ.ಜೆ. ಅಬ್ರಹಾಂ ಕರ್ನಾಟಕದ ರಾಜಕೀಯ ವಲಯದಲ್ಲಿ ಸಾಕಷ್ಟು ಜನಪ್ರಿಯರಾಗಿದ್ದಾರೆ. ಹಾಲಿ ಮುಖ್ಯಮಂತ್ರಿಗಳು ಸೇರಿದಂತೆ ಪ್ರಬಲ ರಾಜಕಾರಣಿಗಳನ್ನು ಎದುರಿಸಲು ಮತ್ತು ಮಾಹಿತಿ ಹಕ್ಕು ಕಾಯ್ದೆಯನ್ನು ತನ್ನ ಆಯ್ಕೆಯ ಅಸ್ತ್ರವಾಗಿ ಬಳಸಲು ಹೆಸರುವಾಸಿಯಾಗಿದ್ದಾರೆ. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸಲು ರಾಜ್ಯಪಾಲರು ಒಪ್ಪಿಗೆ ನೀಡಬೇಕು ಎಂಬುದಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ತನಿಖೆಗೆ ಆಗಿನ ರಾಜ್ಯಪಾಲರು ನೀಡಿದ್ದ ಅನುಮತಿಯ ಪ್ರಕರಣವನ್ನು ಅವರು ಉಲ್ಲೇಖಿಸಿದ್ದರು.

ಅಬ್ರಹಾಂ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಸೆಕ್ಷನ್ 218 ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ 1988ರ ಸೆಕ್ಷನ್ 17ಎ ಮತ್ತು 19ರ ಅಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಮನವಿ ಸಲ್ಲಿಸಿದ್ದರು.

ಯಾರೆಲ್ಲ ವಿರುದ್ಧ ದೂರು?

ಮುಡಾ ಹಗರಣದಲ್ಲಿ ರಾಜ್ಯದ ಬೊಕ್ಕಸಕ್ಕೆ 45 ಕೋಟಿ ರೂ.ಗಳ ನಷ್ಟವಾಗಿದೆ ಎಂದು ಆರೋಪಿಸಿ ಅಬ್ರಹಾಂ ಅವರು ಜುಲೈ 18ರಂದು ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ವರುಣಾ ಶಾಸಕ ಹಾಗೂ ಸಿದ್ದರಾಮಯ್ಯ ಅವರ ಪುತ್ರ ಎಸ್.ಯತೀಂದ್ರ, ಮುಡಾ ಆಯುಕ್ತ ಡಿ.ಬಿ.ನಟೇಶ್, ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್ ವಿರುದ್ಧ ದೂರು ದಾಖಲಿಸಿದ್ದಾರೆ.

ಅಬ್ರಾಹಂ ಹೋರಾಟ ಇದೇ ಮೊದಲಲ್ಲ

ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ, ಎಸ್.ಎಂ.ಕೃಷ್ಣ ಮತ್ತು ಧರಂ ಸಿಂಗ್ ಸೇರಿದಂತೆ ರಾಜ್ಯದ ಪ್ರಬಲ ರಾಜಕಾರಣಿಗಳ ವಿರುದ್ಧ ದೂರು ನೀಡುವ ಮುಲಕ ಅಬ್ರಾಹಂ ಹೆಸರುವಾಸಿಯಾಗಿದ್ದರು.

ರಾಮಲಿಂಗಂ ಕನ್​ಸ್ಟ್ರಕ್ಷನ್​ ಕಂಪನಿ ಲಿಮಿಟೆಡ್ ಎಂಬ ಖಾಸಗಿ ಸಂಸ್ಥೆಗೆ ವಸತಿ ಯೋಜನೆಯ ಗುತ್ತಿಗೆ ನೀಡಲು ಮಾಜಿ ಸಿಎಂ ಯಡಿಯೂರಪ್ಪ ಲಂಚ ಪಡೆದಿದ್ದು ಅಕ್ರಮ ಹಣ ವರ್ಗಾವಣೆ ಆಗಿದೆ ಎಂದು ಅಬ್ರಾಹಂ 2021ರಲ್ಲಿ ದೂರು ನೀಡಿದ್ರು ಬಿಎಸ್ವೈ ಮತ್ತು ಐಎಎಸ್ ಅಧಿಕಾರಿ ಮತ್ತು ಅವರ ಹಲವಾರು ಹತ್ತಿರದ ಸಂಬಂಧಿಕರು ಸೇರಿದಂತೆ ಎಂಟು ಜನರ ವಿರುದ್ಧ ಅಬ್ರಹಾಂ 2021 ರಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಗುತ್ತಿಗೆ ಪಡೆಯಲು ಯಡಿಯೂರಪ್ಪ ಮತ್ತು ಅವರ ಕುಟುಂಬವು ರಾಮಲಿಂಗಂ ಕನ್​ಸ್ಟ್ರಕ್ಷನ್​ ಕಂಪನಿ ಹಾಗೂ ಇತರ ಕಂಪನಿಗಳಿಂದ ಲಂಚ ಪಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದರು. ಕೋಲ್ಕತಾದ ಶೆಲ್ ಕಂಪನಿಗಳಿಂದ ಬಿಎಸ್​ವೈ ಮೊಮ್ಮಗ 5 ಕೋಟಿ ರೂ.ಗಳು ಸೇರಿದಂತೆ ಒಟ್ಟು 12 ಕೋಟಿ ರೂ.ಗೂ ಹೆಚ್ಚು ಲಂಚ ತೆಗೆದುಕೊಳ್ಳಲಾಗಿದೆ ಎಂದು ಆರೋಪಿಸಿದ್ದರು. ಆರೋಪಗಳ ಬಗ್ಗೆ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ನಡೆಸಬೇಕೆಂದು ಅವರು ಕೋರಿದ್ದರು.

ಬಿ.ವೈ.ವಿಜಯೇಂದ್ರ, ಮೊಮ್ಮಗ ಶಶಿಧರ್ ಮರಡಿ, ಅಳಿಯ ಸಂಜಯ್ ಶ್ರೀ, ಸಚಿವ ಎಸ್.ಟಿ.ಸೋಮಶೇಖರ್, ಆಗಿನ ಬಿಡಿಎ ಆಯುಕ್ತ ಮತ್ತು ಐಎಎಸ್ ಅಧಿಕಾರಿ ಜಿ.ಸಿ.ಪ್ರಕಾಶ್, ಚಂದ್ರಕಾಂತ್ ರಾಮಲಿಂಗಂ, ಆಗಿನ ಬಿಡಿಎ ಅಧ್ಯಕ್ಷ ಕೆ.ರವಿ, ಕೆ.ವಿರೂಪಾಕ್ಷಪ್ಪ ಅವರ ಹೆಸರನ್ನು ದೂರಿನಲ್ಲಿ ಉಲ್ಲೇಖಿಸಿದ್ದರು. ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಆಗಿನ ರಾಜ್ಯಪಾಲ ವಜುಭಾಯಿ ವಾಲಾ ಅವರಿಂದ ಅನುಮತಿ ಕೋರಿದ್ದರು. ಆದರೆ, ರಾಜ್ಯಪಾಲರು ಅನುಮತಿ ನಿರಾಕರಿಸಿದ್ದರು.

ಎಸ್​ಎಂ ಕೃಷ್ಣ ವಿರುದ್ಧ ದೂರು

ಅಬ್ರಹಾಂ ಅವರು 2011ರಲ್ಲಿ ಆಗಿನ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಮತ್ತು ಕರ್ನಾಟಕದ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಧರಂ ಸಿಂಗ್ ಮತ್ತು ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಅನೇಕ ಎಫ್ಐಆರ್​​ ದಾಖಲಿಸಿದ್ದರು. ಅವರ ದೂರಿನ ಆಧಾರದ ಮೇಲೆ, ಕರ್ನಾಟಕದ ವಿಶೇಷ ನ್ಯಾಯಾಲಯವು ಕೃಷ್ಣ ವಿರುದ್ಧ ತನಿಖೆಗೆ ಆದೇಶಿಸಿತ್ತು.

ಕೃಷ್ಣ ಅವರು 1999 ಮತ್ತು 2004ರ ನಡುವೆ ಮುಖ್ಯಮಂತ್ರಿಯಾಗಿದ್ದಾಗ ವೈಯಕ್ತಿಕ ಲಾಭಕ್ಕಾಗಿ ರಾಜ್ಯದ ನೈಸರ್ಗಿಕ ಸಂಪನ್ಮೂಲಗಳನ್ನು ನಾಶಪಡಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದರು. ಕಾಂಗ್ರೆಸ್ ನಾಯಕ, ಮುಖ್ಯಮಂತ್ರಿಯಾಗಿ ಅರಣ್ಯ ಪ್ರದೇಶಗಳನ್ನು ಡಿನೋಟಿಫೈ ಮಾಡುವ ನಿರ್ಧಾರ ಅಕ್ರಮ ಗಣಿಗಾರಿಕೆ ಹಗರಣದ ಆರಂಭ ಎಂದು ಆರೋಪಿಸಿದ್ದರು. ಕೃಷ್ಣ ಅವರು ತಮ್ಮ ಕುಟುಂಬ ಸದಸ್ಯರು ಮತ್ತು ಹಿಂದಿನ ಕ್ಯಾಬಿನೆಟ್ ಸಹೋದ್ಯೋಗಿಗಳ ಹೆಸರಿನಲ್ಲಿ ಆಸ್ತಿ ಸಂಪಾದಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ಇವೆಲ್ಲವನ್ನೂ ಆರ್ಟಿಐ ಅಡಿಯಲ್ಲಿ ಪಡೆದ ಮಾಹಿತಿ ಎನ್ನಲಾಗಿತ್ತು. ಎಸ್.ಎಂ.ಕೃಷ್ಣ ಅವರು ಇಲಾಖೆ ಕಾರ್ಯದರ್ಶಿಯ ಸಲಹೆ ಕಡೆಗಣಿಸಿ ಆದೇಶಿಸಿದ್ದಾರೆ. ಇದು ಅಕ್ರಮಗಳಿಗೆ ಕಾರಣವಾಯಿತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.

ಇದನ್ನೂ ಓದಿ: CM Siddaramaiah : ತಮ್ಮ ಮೇಲೆ ತನಿಖೆಗೆ ಆದೇಶಿಸಿದ ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಸಿಎಂ

ಕೃಷ್ಣ ಅವರಲ್ಲದೆ, ಈಗ ಕೇಂದ್ರ ಸಚಿವರಾದ ಎಚ್​​. ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಎನ್.ಧರಂ ಸಿಂಗ್ ಮತ್ತು 11 ಹಿರಿಯ ಅಧಿಕಾರಿಗಳ ವಿರುದ್ಧ ಅಬ್ರಹಾಂ ಅವರು ಪಿತೂರಿ ಮತ್ತು ಭ್ರಷ್ಟಾಚಾರದ ಆರೋಪ ಮಾಡಿದ್ದರು. ಕೃಷಿ ಪಟ್ಟಾ ಭೂಮಿಯಿಂದ ಕಬ್ಬಿಣ ಮತ್ತು ಮ್ಯಾಂಗನೀಸ್ ಅದಿರನ್ನು ಸಾಗಿಸಲು ತಾತ್ಕಾಲಿಕ ಸಾರಿಗೆ ಪರವಾನಗಿಗಳನ್ನು ನೀಡಲು ಸಿಂಗ್ ಆದೇಶಿಸಿದ್ದಾರೆ, ಇದರಿಂದಾಗಿ ಸರ್ಕಾರಕ್ಕೆ 23.22 ಕೋಟಿ ರೂ.ಗಳ ನಷ್ಟವಾಗಿದೆ ಎಂದು ಅಬ್ರಹಾಂ ತಮ್ಮ ದೂರಿನಲ್ಲಿ ಆರೋಪಿಸಿದ್ದರು.

ಕುಮಾರಸ್ವಾಮಿ ಅವರು ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಹೆಸರಿನಲ್ಲಿ 550 ಎಕರೆ ಭೂಮಿಯನ್ನು ಅಕ್ರಮವಾಗಿ ಗಣಿಗಾರಿಕೆ ಗುತ್ತಿಗೆಗೆ ನೀಡಿದ್ದರು. ಜಂತ್ಕಲ್ ಮೈನಿಂಗ್ ಕಂಪನಿಯೊಂದಿಗೆ ಅಕ್ರಮ ಎಸಗಿದ್ದಾರೆ ಎಂದು ಅವರು ಆ ವೇಳೆ ಆರೋಪಿಸಿದ್ದರು.

Continue Reading

ಪ್ರಮುಖ ಸುದ್ದಿ

CM Siddaramaiah : ತಮ್ಮ ಮೇಲೆ ತನಿಖೆಗೆ ಆದೇಶಿಸಿದ ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಸಿಎಂ

CM Siddaramaiah : ರಾಜ್ಯಪಾಲರನ್ನು ಬಿಜೆಪಿ ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಂಡಿದೆ. ನನ್ನ ರಾಜೀನಾಮೆಗೆ ಒತ್ತಾಯಿಸಲು ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ. ನಮ್ಮ ಯಶಸ್ಸನ್ನು ಬಿಜೆಪಿ ಸಹಿಸುವುದಿಲ್ಲ. ರಾಜ್ಯ ಕಾಂಗ್ರೆಸ್​ ಸಾಮಾನ್ಯ ಜನರಿಗೆ ಪ್ರಯೋಜನವಾಗುವ ಸರ್ಕಾರ ಮತ್ತು ಖಾತರಿ ಯೋಜನೆಗಳನ್ನು ನೀಡುತ್ತಿದೆ. ಈ ರಾಜಕೀಯ ದುರುದ್ದೇಶದ ವಿರುದ್ಧ ನಾವು ಬಲವಾಗಿ ಮತ್ತು ಒಗ್ಗಟ್ಟಾಗಿ ನಿಲ್ಲುತ್ತೇವೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

VISTARANEWS.COM


on

CM Siddaramaiah
Koo

ಬೆಂಗಳೂರು : ಮೈಸೂರಿನ ಮುಡಾ ಸೈಟ್​ ಹಂಚಿಕೆ ಹಗರಣದಲ್ಲಿ ತಮ್ಮ ವಿರುದ್ಧ ತನಿಖಾಸಂಸ್ಥೆಗೆ ದೂರು ನೀಡಲು ಅನುಮತಿ ಕೊಟ್ಟಿರುವ ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ (Thawarchand Gehlot) ಅವರ ನಿರ್ಧಾರನ್ನು ವಿರುದ್ಧ ಸಿಎಂ ಸಿದ್ದರಾಮಯ್ಯ (CM Siddaramaiah) ಆಕ್ಷೇಪಿಸಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ. ಅವರದ್ದ ಸರ್ಕಾರವನ್ನು ಅಸ್ಥಿರಗೊಳಿಸುವ ಕ್ರಮ ಎಂಬುದಾಗಿ ಅವರು ಹೇಳಿದ್ದಾರೆ.

ಗೌರವಾನ್ವಿತ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ನನ್ನ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವುದು ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಟ್ಟ ಪಿತೂರಿಯಲ್ಲದೆ ಬೇರೇನೂ ಅಲ್ಲ. ಇದು ಪ್ರಜಾಪ್ರಭುತ್ವಕ್ಕೆ ನೇರ ಬೆದರಿಕೆ ಎಂಬುದಾಗಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ರಾಜ್ಯಪಾಲರನ್ನು ಬಿಜೆಪಿ ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಂಡಿದೆ. ನನ್ನ ರಾಜೀನಾಮೆಗೆ ಒತ್ತಾಯಿಸಲು ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ. ನಮ್ಮ ಯಶಸ್ಸನ್ನು ಬಿಜೆಪಿ ಸಹಿಸುವುದಿಲ್ಲ. ರಾಜ್ಯ ಕಾಂಗ್ರೆಸ್​ ಸಾಮಾನ್ಯ ಜನರಿಗೆ ಪ್ರಯೋಜನವಾಗುವ ಸರ್ಕಾರ ಮತ್ತು ಖಾತರಿ ಯೋಜನೆಗಳನ್ನು ನೀಡುತ್ತಿದೆ. ಈ ರಾಜಕೀಯ ದುರುದ್ದೇಶದ ವಿರುದ್ಧ ನಾವು ಬಲವಾಗಿ ಮತ್ತು ಒಗ್ಗಟ್ಟಾಗಿ ನಿಲ್ಲುತ್ತೇವೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ನನ್ನ ವಿರುದ್ಧ ಯಾವುದೇ ಪ್ರಕರಣಗಳಿಲ್ಲ ಮತ್ತು ರಾಜ್ಯಪಾಲರ ನಿರ್ಧಾರವು ಅಸಂವಿಧಾನಿಕವಾಗಿದೆ. ಈ ಕಾನೂನುಬಾಹಿರ ಅನುಮತಿಯನ್ನು ನಾವು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ನನ್ನ ವಿರುದ್ಧ ದೂರು ದಾಖಲಾದ ದಿನದಿಂದಲೇ ಶೋಕಾಸ್ ನೋಟಿಸ್ ನೀಡಲಾಗಿದೆ. ರಾಜ್ಯಪಾಲರ ಈ ನಡೆಯನ್ನು ಮೊದಲೇ ನಿರೀಕ್ಷಿಸಲಾಗಿತ್ತು ಎಂಬುದಾಗಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಏನಿದು ಪ್ರಕರಣ?‘

ಏನಿದು ಮುಡಾ ಅಕ್ರಮ ಪ್ರಕರಣ: ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 50-50 ಅನುಪಾತದಲ್ಲಿ 14 ಮುಡಾ ಸೈಟ್​ಗಳನ್ನು ಹಂಚಿಕೆ ಮಾಡಲಾಗಿದೆ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಈ ಸೈಟು ಹಂಚಿಕೆಯಾಗಿದೆ ಎಂಬ ಕಾರಣಕ್ಕೆ ವಿವಾದ ಉಂಟಾಯಿತು. ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಎಂಬುವವರು ಅಕ್ರಮ ಮಂಜೂರಾಗಿದೆ ಎಂದು ಆರೋಪ ಮಾಡಿದ್ದರು. ಸಿಎಂ ಪತ್ನಿಗೆ 14 ನಿವೇಶನ ಮಂಜೂರಾದ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.

ಇದನ್ನೂ ಓದಿ: CM Siddaramaiah: ರಾಜ್ಯಪಾಲರ ನಡೆ ಖಂಡಿಸಿ ಸೋಮವಾರ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಬದಲಿ ನಿವೇಶನ ನೀಡಿ ಲಾಭ ಮಾಡಿಕೊಡಲಾಗಿದೆ ಎಂಬುದೇ ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಅವರು ಆರೋಪವಾಗಿದೆ. ಮೈಸೂರಿನ ಕೆಸರೆ ಸರ್ವೇ ನಂಬರ್ 464 ವ್ಯಾಪ್ತಿಯಲ್ಲಿ 3.16 ಗುಂಟೆ ಜಮೀನನ್ನು ಸ್ವಾಧೀನ ಮಾಡಿಕೊಂಡಿರುವುದಕ್ಕೆ ಪರ್ಯಾಯವಾಗಿದೆ ವಿಜಯನಗರದ ಬಡಾವಣೆಯಲ್ಲಿ 14 ನಿವೇಶನವನ್ನು ಸಿಎಂ ಪತ್ನಿಯ ಹೆಸರಿಗೆ ನೀಡಿದ್ದಾರೆ. ಈ ಮೂಲಕ ಸಿಎಂ ತಮ್ಮ ಪ್ರಭಾವ ಬಳಸಿ ಲಾಭ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಪರ್ಯಾಯವಾಗಿ ನೀಡಲು ದೇವನೂರು ಬಡಾವಣೆಯಲ್ಲಿ ಸಾವಿರಾರು ಸೈಟ್ ಇದ್ದರೂ ವಿಜಯನಗರದಲ್ಲಿ ಕೊಟ್ಟಿರುವುದು ಯಾಕೆ ಎಂಬುದು ಆರ್​ಟಿಐ ಕಾರ್ಯಕರ್ತರ ಪ್ರಶ್ನೆಯಾಗಿದೆ. ಇದು ಲಾಭದ ಉದ್ದೇಶ. ಹಿಂದಿನ ಮುಡಾ ಆಯುಕ್ತ ನಟೇಶ್ ಈ ಆದೇಶ ಮಾಡಿದ್ದು ಸಿಎಂ ಪತ್ನಿ ಆರ್ಥಿಕ ಲಾಭ ಮಾಡಿಕೊಟ್ಟಿದ್ದಾರೆ. ಹೀಗಾಗಿ ಮುಡಾದ 50:50 ಹಗರಣದಲ್ಲಿ ಅವರು ಸಿಎಂ ಪತ್ನಿಯು ಭಾಗಿಯಾಗಿದ್ದಾರೆ ಎಂದು ಗಂಗರಾಜು ಆರೋಪಿಸಿದ್ದರು.

Continue Reading

ಪ್ರಮುಖ ಸುದ್ದಿ

Tungabhadra Dam: ಮುರಿದುಹೋದ 19ನೇ ಗೇಟ್‌ಗೆ ಸ್ಟಾಪ್‌ ಲಾಗ್‌ ಅಳವಡಿಕೆ ಯಶಸ್ವಿ, ಪೋಲಾಗುತ್ತಿದ್ದ ನೀರು ಬಂದ್!

Tungabhadra Dam: ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್‌ಗೆ 3 ಸ್ಟಾಪ್ ಲಾಗ್ ಅಳವಡಿಸುವಲ್ಲಿ ತಂಡ ಯಶಸ್ವಿಯಾಗಿದ್ದು, ಮೂರು ಸ್ಟಾಪ್ ಲಾಗ್ ಅಳವಡಿಸಿದ್ದರಿಂದಾಗಿ ಹೊರ ಹರಿಯುವ ನೀರು ಸ್ಟಾಪ್ ಆಗಿದೆ. 19ನೇ ಗೇಟ್‌ ಸುರಕ್ಷಿತವಾದ ಪರಿಣಾಮ, ಡ್ಯಾಂನಿಂದ ನೀರು ಹೊರಬಿಡಲಾಗಿದ್ದ ಎಲ್ಲ 33 ಗೇಟ್‌ಗಳನ್ನು ಮುಚ್ಚಿ ಆ ಮೂಲಕ ಪೋಲಾಗುತ್ತಿದ್ದ ನೀರನ್ನು ಟಿಬಿ ಡ್ಯಾಂ ಮಂಡಳಿ ತಡೆದಿದೆ.

VISTARANEWS.COM


on

tungabhadra dam gate
Koo

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ (Tungabhadra Dam) ಮುರಿದುಹೋದ 19ನೇ ಗೇಟ್‌ನಿಂದ ಹೊರಹರಿಯುತ್ತಿದ್ದ ನೀರನ್ನು ಸಂಪೂರ್ಣವಾಗಿ ನಿಲ್ಲಿಸಲು ತಜ್ಞರ ತಂಡ ಸಫಲವಾಗಿದೆ. ಮೂರು ದಿನಗಳಿಂದ ನಡೆಯುತ್ತಿದ್ದ ಕಾರ್ಯಾಚರಣೆಗೆ ಯಶಸ್ಸು ದೊರೆತಿದ್ದು, ಪೋಲಾಗಲಿದ್ದ ನೀರನ್ನು ಉಳಿಸುವಲ್ಲಿ ತಜ್ಞ ಕನ್ನಯ್ಯ ನಾಯ್ಡು ತಂಡ ಸಫಲವಾಗಿದೆ.

ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್‌ಗೆ 3 ಸ್ಟಾಪ್ ಲಾಗ್ ಅಳವಡಿಸುವಲ್ಲಿ ತಂಡ ಯಶಸ್ವಿಯಾಗಿದ್ದು, ಮೂರು ಸ್ಟಾಪ್ ಲಾಗ್ ಅಳವಡಿಸಿದ್ದರಿಂದಾಗಿ ಹೊರ ಹರಿಯುವ ನೀರು ಸ್ಟಾಪ್ ಆಗಿದೆ. 19ನೇ ಗೇಟ್‌ ಸುರಕ್ಷಿತವಾದ ಪರಿಣಾಮ, ಡ್ಯಾಂನಿಂದ ನೀರು ಹೊರಬಿಡಲಾಗಿದ್ದ ಎಲ್ಲ 33 ಗೇಟ್‌ಗಳನ್ನು ಮುಚ್ಚಿ ಆ ಮೂಲಕ ಪೋಲಾಗುತ್ತಿದ್ದ ನೀರನ್ನು ಟಿಬಿ ಡ್ಯಾಂ ಮಂಡಳಿ ತಡೆದಿದೆ.

ಚೈನ್ ಲಿಂಕ್ ಕಟ್ ಆಗಿ ಮುರಿದುಬಿದ್ದಿದ್ದ 19 ನಂಬರ್‌ ಕ್ರಸ್ಟ್ ಗೇಟ್ ಅನ್ನು ಕೂಡಿಸಲು ಮೂರು ದಿನಗಳಿಂದ ತಜ್ಞರ ತಂಡ ಪ್ರಯತ್ನಿಸುತ್ತಿತ್ತು. ನಿನ್ನೆ ರಾತ್ರಿ ಮೊದಲ ಸ್ಟಾಪ್ ಲಾಗ್ ಗೇಟ್‌ನ ಮೊದಲ ಎಲಿಮೆಂಟ್ ಕೂಡಿಸುವಲ್ಲಿ ಯಶಸ್ವಿಯಾಗಿತ್ತು. ಇಂದು ಬೆಳಗ್ಗಿನಿಂದ ಇನ್ನೆರಡು ಎಲಿಮೆಂಟ್‌ಗಳುನ್ನು ಕನ್ನಯ್ಯ ನಾಯ್ಡು ನೇತೃತ್ವದ ತಜ್ಞರ ತಂಡ ಕೂರಿಸಿದೆ.

ಹೀಗಾಗಿ 70 ಟಿಎಂಸಿಯಷ್ಟು ನೀರು ಉಳಿಸಲು ಟಿಬಿ ಬೋರ್ಡ್ ಯಶಸ್ವಿಯಾಗಿದೆ. ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಇದುವರೆಗೆ ಪೋಲಾದ ನೀರು ಮತ್ತೆ ತುಂಬಿಕೊಳ್ಳುವ ವಿಶ್ವಾಸ ಮೂಡಿದೆ. ಸದ್ಯ ಜಲಾಶಯಕ್ಕೆ 41 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ನಿನ್ನೆ 80 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿತ್ತು.

ಸದ್ಯ ಜಲಾಶಯದಲ್ಲಿ 70.759 ಟಿಎಂಸಿ ನೀರು ಸಂಗ್ರಹವಿದೆ. ಒಳಹರಿವು ಹೀಗೇ ಇದ್ದರೆ ವಾರದಲ್ಲಿ ಮತ್ತೆ ಜಲಾಶಯ ಭರ್ತಿಯಾಗಲಿದೆ. ಹೀಗಾಗಿ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಆಶಾಭಾವನೆ ಮೂಡಿದ್ದು, ಎರಡು ಬೆಳೆಗೆ ನೀರು ಸಿಗುವ ವಿಶ್ವಾಸವನ್ನು ಜಲಾನಯನ ಪ್ರದೇಶದ ಜನರು ಹೊಂದಿದ್ದಾರೆ.

ಇಂದು ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿದ್ದ ತಜ್ಞ ಕನ್ಹಯ್ಯ ನಾಯ್ಡು, ಕಾರ್ಯಾಚರಣೆಯ ಬಗ್ಗೆ ಮಾಹಿತಿ ನೀಡಿದ್ದರು. ʼಸಿಎ ಸಿದ್ದರಾಮಯ್ಯ ಬಂದಿದ್ದರು. ನನಗೆ ಕೈಮುಗಿದು ಒಂದೇ ಕೇಳಿಕೊಂಡರು. ನೀರು ಹೋದರೆ ಜನರಿಗೆ ಊಟ ಸಿಗಲ್ಲ. ಹೇಗಾದರೂ ಮಾಡಿ ನೀರು ಉಳಿಸಿ ಅಂತ ಕೇಳಿಕೊಂಡರು. ನಾನು ಅದಕ್ಕೇ ಬಂದಿದ್ದೇನೆ ಅಂತ ಹೇಳಿದೆʼ ಎಂದು ಹೇಳಿದ್ದರು.

“70 ವರ್ಷದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಗೇಟ್ ಒಡೆದಿದೆ. ನೀರಿನ ರಭಸಕ್ಕೆ ಗೇಟ್ ಕೊಚ್ಚಿ ಹೋಗಿದೆ. ಇದನ್ನು ಆಗಲೇ ತಯಾರು ಮಾಡಲಾಗ್ತಿದೆ. ನಾಳೆಯಿಂದ ಗೇಟ್ ಕೂಡಿಸೋ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ. ಕನ್ನಯ್ಯ ನಾಯ್ಡು ಮತ್ತವರ ತಂಡದಿಂದ ಕಾರ್ಯ ನಡೆಯುತ್ತಿದೆ. ಬಹಳ ಅನುಭವಿ ಅವರು, ಅವರ ನೇತೃತ್ವದಲ್ಲಿ ನಾಳೆಯಿಂದ ತಾತ್ಕಾಲಿಕ ಗೇಟ್ ಕೂಡಿಸಲಾಗ್ತದೆ. ತಜ್ಞರ ಪ್ರಕಾರ 50 ವರ್ಷಕ್ಕೊಮ್ಮೆ ಗೇಟ್ ಬದಲಿಸಬೇಕು. ಇನ್ಮುಂದೆ ತಜ್ಞರು ಹೇಳಿದಂತೆ, ಜಲಾಶಯ ನಿರ್ವಹಣೆ ಮಾಡಲಾಗುತ್ತದೆ” ಎಂದು ಸಿಎಂ ಸಿದ್ದರಾಮಯ್ಯ ಅಣೆಕಟ್ಟಿಗೆ ಭೇಟಿ ನೀಡಿದ ಬಳಿಕ ಹೇಳಿದ್ದರು.

ಇದನ್ನೂ ಓದಿ: Tungabhadra Dam: ತುಂಗಭದ್ರಾ ಡ್ಯಾಂಗೆ ತಾತ್ಕಾಲಿಕ ಗೇಟ್ ಅಳವಡಿಕೆ ಕಾರ್ಯ ಚುರುಕು

Continue Reading
Advertisement
Kundapura Kannada Habba
ಕರ್ನಾಟಕ2 mins ago

Kundapura Kannada Habba: ನನ್ನ ಸಿನಿಮಾ ಕಥೆಗಳಿಗೆ ಊರು, ಯಕ್ಷಗಾನವೇ ಪ್ರೇರಣೆ; ರಿಷಬ್ ಶೆಟ್ಟಿ

NPS News
ಕರ್ನಾಟಕ5 mins ago

NPS News: ಹೊಸ ಪಿಂಚಣಿ ರದ್ದುಗೊಳಿಸಲು ಸಮಿತಿ ಪುನರ್‌ ರಚನೆ; ಎನ್‌ಪಿಎಸ್‌ ನೌಕರರ ಸಂಘ ವಿರೋಧ

ಪ್ರಮುಖ ಸುದ್ದಿ45 mins ago

7th pay commission : 7ನೇ ವೇತನ ಆಯೋಗ ಜಾರಿ ಬಳಿಕ ನೌಕರರ ಸಂಬಳ ಏರಿಕೆ ಎಷ್ಟು? ಅಧಿಕೃತ ಪಟ್ಟಿ ಬಿಡುಗಡೆ

Prabhas New Film
ಸಿನಿಮಾ1 hour ago

Prabhas New Film: ಹೊಸ ಯುದ್ಧ ಶುರು; ಪ್ರಭಾಸ್ ಅಭಿನಯದ ಮುಂದಿನ ಚಿತ್ರ ಸುಳಿವು!

NPS
ಬೆಂಗಳೂರು1 hour ago

Government Employee: ಹಳೇ ಪಿಂಚಣಿ ವ್ಯವಸ್ಥೆ (OPS) ಜಾರಿ ಸಾಧ್ಯತೆ ಪರಿಶೀಲನೆಗೆ ಸರ್ಕಾರದಿಂದ ಸಮಿತಿ ಪುನರ್‌ ರಚನೆ

TJ Abraham
ಪ್ರಮುಖ ಸುದ್ದಿ2 hours ago

TJ Abraham : ಎಸ್ಎಂ ಕೃಷ್ಣರಿಂದ ಹಿಡಿದು ಸಿದ್ದರಾಮಯ್ಯವರೆಗೆ; ಕರ್ನಾಟಕ ರಾಜಕೀಯದ ದೊಡ್ಡ ಹುಲಿಗಳನ್ನೇ ಬೋನಿಗೆ ಬೀಳಿಸಿದ ಟಿ ಜೆ ಅಬ್ರಾಹಂ

Positive Pay System
ವಾಣಿಜ್ಯ2 hours ago

Positive Pay System: ಏನಿದು ಪಾಸಿಟಿವ್‌ ಪೇ ಸಿಸ್ಟಮ್‌? ಚೆಕ್ ಪಾವತಿ ಸುರಕ್ಷಿತಗೊಳಿಸುವುದು ಹೇಗೆ?

Dog attack
ವೈರಲ್ ನ್ಯೂಸ್2 hours ago

Dog Attack: 17 ಮಂದಿ ಮೇಲೆ ಬೀದಿ ನಾಯಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Kannada New Movie
ಬೆಂಗಳೂರು3 hours ago

Kannada New Movie: ಮಂಸೋರೆ ನಿರ್ದೇಶನದ ʼದೂರ ತೀರ ಯಾನʼ ಟೈಟಲ್ ಟೀಸರ್ ರಿಲೀಸ್‌

pralhad Joshi
ಬೆಂಗಳೂರು4 hours ago

Pralhad Joshi: ಸಿಎಂ ಮೇಲೆ ರಾಜ್ಯಪಾಲರ ಕ್ರಮ ಸರಿಯಾಗಿಯೇ ಇದೆ; ಪ್ರಲ್ಹಾದ್‌ ಜೋಶಿ ಸಮರ್ಥನೆ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌