70th National Film Awards : ರಾಷ್ಟ್ರ ಪ್ರಶಸ್ತಿ ಗೆದ್ದ ಬಳಿಕ ನಿತ್ಯಾ ಮೆನನ್ ಪ್ರತಿಕ್ರಿಯಿಸಿದ್ದು ಹೀಗೆ! - Vistara News

ಕಾಲಿವುಡ್

70th National Film Awards : ರಾಷ್ಟ್ರ ಪ್ರಶಸ್ತಿ ಗೆದ್ದ ಬಳಿಕ ನಿತ್ಯಾ ಮೆನನ್ ಪ್ರತಿಕ್ರಿಯಿಸಿದ್ದು ಹೀಗೆ!

70th National Film Awards : ಇದೀಗ ನಟಿ ಪ್ರಶಸ್ತಿ ವಿಚಾರವಾಗಿ ಸಂತಸ ಹಂಚಿಕೊಂಡಿದ್ದಾರೆ. ʻʻಪ್ರಶಸ್ತಿಗಳನ್ನು ಘೋಷಿಸುತ್ತಿದ್ದಾರೆಂದು ನನಗೆ ತಿಳಿದಿರಲಿಲ್ಲ. ನಾನು ಅವಾರ್ಡ್ ಬರುತ್ತದೆ ಎಂದು ಊಹಿಸಿರಲಿಲ್ಲ. ನನಗೆ ಈ ವಿಚಾರ ಖುಷಿ ತಂದಿದೆ’ ಎಂದು ಅವರು ಹೇಳಿದ್ದಾರೆ.

VISTARANEWS.COM


on

70th National Film Awards Nithya Menen REACTS For 1st Time
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 2022 ರಲ್ಲಿ ಬಿಡುಗಡೆಯಾದ ಚಲನಚಿತ್ರಗಳಿಗೆ 70 ನೇ ವಾರ್ಷಿಕ ರಾಷ್ಟ್ರೀಯ ಚಲನಚಿತ್ರ (70th National Film Awards) ಪ್ರಶಸ್ತಿಗಳನ್ನು ಆಗಸ್ಟ್ 16 ರಂದು ಘೋಷಿಸಲಾಯಿತು. ಫೀಚರ್ ಫಿಲ್ಮ್ಸ್ ವಿಭಾಗದಲ್ಲಿ, ನಿತ್ಯಾ ಮೆನೆನ್ ಮತ್ತು ಮಾನಸಿ ಪರೇಖ್ ಅವರು ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದುಕೊಂಡರು. ನಿತ್ಯಾ ತಿರುಚಿತ್ರಂಬಲಂ (ತಮಿಳು) ಚಿತ್ರಕ್ಕಾಗಿ ಗೆದ್ದರೆ, ಮಾನಸಿ ಕಚ್ ಎಕ್ಸ್‌ಪ್ರೆಸ್ (ಗುಜರಾತಿ) ಸಿನಿಮಾಗಾಗಿ ಪ್ರಶಸ್ತಿ ಪಡೆದರು.

ಇದೀಗ ನಟಿ ಪ್ರಶಸ್ತಿ ವಿಚಾರವಾಗಿ ಸಂತಸ ಹಂಚಿಕೊಂಡಿದ್ದಾರೆ. ʻʻಪ್ರಶಸ್ತಿಗಳನ್ನು ಘೋಷಿಸುತ್ತಿದ್ದಾರೆಂದು ನನಗೆ ತಿಳಿದಿರಲಿಲ್ಲ. ನಾನು ಅವಾರ್ಡ್ ಬರುತ್ತದೆ ಎಂದು ಊಹಿಸಿರಲಿಲ್ಲ. ನನಗೆ ಈ ವಿಚಾರ ಖುಷಿ ತಂದಿದೆ’ ಎಂದು ಅವರು ಹೇಳಿದ್ದಾರೆ.

‘ತಿರುಚಿತ್ರಂಬಲಂ’ ಚಿತ್ರದಿಂದ ನನಗೆ ಅವಾರ್ಡ್ ಸಿಕ್ಕಿದ್ದು ಹೆಮ್ಮೆ ತಂದಿದೆ. ಈ ಸಿನಿಮಾನ ಮಾಡುವಾಗ ಹಾಗೂ ನೋಡುವಾಗ ಖುಷಿ ಕೊಟ್ಟಿದೆ. ನಾನು ಪ್ರಶಸ್ತಿಗೆ ಅರ್ಹ’ ಎಂದಿದ್ದಾರೆ ಅವರು.

ಆಗಸ್ಟ್ 2022 ರಲ್ಲಿ ಹೊರಬಂದ ತಿರುಚಿತ್ರಂಬಲಂ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಹಿಟ್ ಆಗಿ ಹೊರಹೊಮ್ಮಿತು. ನಟರಾದ ಮಾನಸಿ ಪರೇಖ್ ಮತ್ತು ಧನುಷ್ ಅವರಿಗೆ ಅಪಾರ ಪ್ರಶಂಸೆಯನ್ನು ಗಳಿಸಿತು. ಕೇವಲ 30 ಕೋಟಿ ರೂಪಾಯಿಗಳ ಬಜೆಟ್‌ನಲ್ಲಿ ನಿರ್ಮಿಸಲಾದ ಈ ಸಿನಿಮಾ 100 ಕೋಟಿ ರೂ. ಗಳಿಕೆ ಕಂಡಿತು.ಪ್ರಕಾಶ್ ರಾಜ್ ಹಾಗೂ ಧನುಷ್ ‘ತಿರುಚಿತ್ರಂಬಲಂ’ ಸಿನಿಮಾದಲ್ಲಿ ಕಮಾಲ್ ಮಾಡಿದ್ದರು. ಅಪ್ಪ ಮಗನಾಗಿ ಪ್ರೇಕ್ಷಕರನ್ನು ರಂಜಿಸಿ ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು. ನಿತ್ಯಾ ಮೆನನ್ ಅವರು ಕನ್ನಡ ಸಿನಿಮಾಗಳಲ್ಲೂ ನಟಿಸಿದ್ದಾರೆ. ಅವರಿಗೆ ಕನ್ನಡದ ಮೇಲೆ ವಿಶೇಷ ಪ್ರೀತಿ ಇದೆ.

ಇದನ್ನೂ ಓದಿ: Kundapura Kannada Habba: ನನ್ನ ಸಿನಿಮಾ ಕಥೆಗಳಿಗೆ ಊರು, ಯಕ್ಷಗಾನವೇ ಪ್ರೇರಣೆ; ರಿಷಬ್ ಶೆಟ್ಟಿ

70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2024 ಶುಕ್ರವಾರ ಘೋಷಣೆಯಾಗಿದ್ದು (70th National Film Awards) ಮಲಯಾಳಂ ಚಿತ್ರ ‘ಆಟಂ ಅತ್ಯುತ್ತಮ ಚಲನಚಿತ್ರವಾಗಿ ಹೊರಹೊಮ್ಮಿtftu. ‘ಉಂಚೈ’ ಚಿತ್ರದ ನಿರ್ದೇಶನಕ್ಕಾಗಿ ಸೂರಜ್ ಬರ್ಜಾತ್ಯ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ‘ಪೊನ್ನಿಯಿನ್ ಸೆಲ್ವನ್ 1’, ‘ಕೆಜಿಎಫ್ 2’, ‘ಬ್ರಹ್ಮಾಸ್ತ್ರ ‘ಮತ್ತು ‘ಅಪರಾಜಿತೋ’ ಚಿತ್ರಗಳು ಸಮಾರಂಭದಲ್ಲಿ ಪ್ರಶಸ್ತಿಗಳನ್ನು ಗೆದ್ದ ಇತರ ಚಿತ್ರಗಳಾಗಿವೆ.

1954 ರಲ್ಲಿ ಮೊದಲ ಬಾರಿಗೆ ನೀಡಲು ಅರಂಭಿಸಿದ ಈ ಪ್ರಶಸ್ತಿ 70ನೇ ಆವೃತ್ತಿ ಇದಾಗಿದೆ. ಆ ವರ್ಷಗಳಲ್ಲಿ, ವಿವಿಧ ಪ್ರಾದೇಶಿಕ ಭಾಷೆಗಳ ಅತ್ಯುತ್ತಮ ಚಲನಚಿತ್ರಗಳನ್ನು ಮಾತ್ರ ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿತ್ತು. . ಚಲನಚಿತ್ರಗಳಲ್ಲಿ ಕೆಲಸ ಮಾಡುವ ನಟರು ಮತ್ತು ತಂತ್ರಜ್ಞರಿಗೆ ಪ್ರಶಸ್ತಿಗಳನ್ನು ಮೊದಲ ಬಾರಿಗೆ 1967 ರಲ್ಲಿ ನೀಡಲಾಯಿತು. ‘ರಾತ್ ಔರ್ ದಿನ್’ ಚಿತ್ರದಲ್ಲಿನ ಅಭಿನಯಕ್ಕಾಗಿ ನರ್ಗಿಸ್ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದ ಮೊದಲ ನಟಿಯಾಗಿದ್ದಾರೆ. ಅದೇ ವರ್ಷ ‘ಆಂಟನಿ ಫೈರಿಂಗ್’ ಮತ್ತು ‘ಚಿರಿಯಾಖಾನಾ’ ಚಿತ್ರಗಳಿಗಾಗಿ ಉತ್ತಮ್ ಕುಮಾರ್ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದರು.

2023 ರಲ್ಲಿ, ಪುಷ್ಪಾ: ದಿ ರೈಸ್ ಚಿತ್ರಕ್ಕಾಗಿ ಅಲ್ಲು ಅರ್ಜುನ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ಗೆದ್ದರೆ, ‘ಗಂಗೂಬಾಯಿ ಕಾಥಿಯಾವಾಡಿ’ ಮತ್ತು ‘ಮಿಮಿ’ ಚಿತ್ರಕ್ಕಾಗಿ ಆಲಿಯಾ ಭಟ್ ಮತ್ತು ಕೃತಿ ಸನೋನ್ ಅತ್ಯುತ್ತಮ ನಟಿ ಪ್ರಶಸ್ತಿ ಗೆದ್ದರು. ರಾಕೆಟ್ರಿ: ದಿ ನಂಬಿ ಎಫೆಕ್ಟ್ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Thalapathy Vijay: ದಳಪತಿ ವಿಜಯ್‌ ಕೊನೆ ಚಿತ್ರದ ಟ್ರೈಲರ್‌ ಔಟ್‌;  ಅಬ್ಬರಿಸಿದ ನಟ!

Thalapathy Vijay: ಈ ಸ್ಪೈ ಥ್ರಿಲ್ಲರ್ ಸಿನಿಮಾ ಗಣೇಶ ಹಬ್ಬದ ಸಂಭ್ರಮದಲ್ಲಿ ಸೆಪ್ಟೆಂಬರ್ 5ಕ್ಕೆ ತೆರೆಗೆ ಬರಲಿದೆ.. ತಂದೆ-ಮಗನಾಗಿ ಡಬಲ್ ರೋಲ್‌ನಲ್ಲಿ ವಿಜಯ್ ಅಬ್ಬರಿಸಿರುವುದನ್ನು ನೋಡಬಹುದು. ಹೆಚ್ಚು ಕಮ್ಮಿ 3 ನಿಮಿಷಗಳ ‘ದಿ ಗೋಟ್’ ಚಿತ್ರದ ಟ್ರೈಲರ್ ಕಿಕ್ ಕೊಡುವಂತಿದೆ.’

VISTARANEWS.COM


on

Thalapathy Vijay plays both father and son in this time travel saga.
Koo

ಬೆಂಗಳೂರು: ವಿಜಯ್‌ ಅವರು ಸದ್ಯ ‘ಗ್ರೇಟೆಸ್ಟ್ ಆಫ್ ಆಲ್​ ಟೈಮ್’ ((‘Greatest Of All Time (GOAT)’) ) ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ತ್ರಿಶಾ ನಾಯಕಿ. ಈ ಸಿನಿಮಾದಲ್ಲಿ ಪ್ರಭುದೇವ ಮೊದಲಾದವರು ನಟಿಸುತ್ತಿದ್ದಾರೆ. ʻವಿಸಿಲ್‌ ಪೋಡುʼ (Whistle Podu) ಎಂಬ ಶೀರ್ಷಿಕೆಯ ಮೊದಲ ಹಾಡು ಬಿಡುಗಡೆಯಾಗಿ ಸಖತ್‌ ಸೌಂಡ್‌ ಮಾಡಿತ್ತು. ಇದೀಗ ಸಿನಿಮಾದ ಟ್ರೈಲರ್‌ ಬಿಡುಗಡೆ ಆಗಿದೆ.

ಈ ಸ್ಪೈ ಥ್ರಿಲ್ಲರ್ ಸಿನಿಮಾ ಗಣೇಶ ಹಬ್ಬದ ಸಂಭ್ರಮದಲ್ಲಿ ಸೆಪ್ಟೆಂಬರ್ 5ಕ್ಕೆ ತೆರೆಗೆ ಬರಲಿದೆ.. ತಂದೆ-ಮಗನಾಗಿ ಡಬಲ್ ರೋಲ್‌ನಲ್ಲಿ ವಿಜಯ್ ಅಬ್ಬರಿಸಿರುವುದನ್ನು ನೋಡಬಹುದು. ಹೆಚ್ಚು ಕಮ್ಮಿ 3 ನಿಮಿಷಗಳ ‘ದಿ ಗೋಟ್’ ಚಿತ್ರದ ಟ್ರೈಲರ್ ಕಿಕ್ ಕೊಡುವಂತಿದೆ.’ದಿ ಗೋಟ್’ ಚಿತ್ರದಲ್ಲಿ ಸ್ನೇಹಾ, ಪ್ರಭುದೇವಾ, ಪ್ರಶಾಂತ್, ಲೈಲಾ, ಜಯರಾಮ್ ಸೇರಿ ದೊಡ್ಡ ಕಲಾವಿದರ ದಂಡೇ ಇದೆ. ಟ್ರೈಲರ್ ದಳಪತಿ ಅಭಿಮಾನಿಗಳ ಮನಗೆದ್ದಿದ್ದು ಸಿನಿಮಾ ನೋಡಬೇಕು ಎನ್ನುವ ನಿರೀಕ್ಷೆ ಮೂಡಿಸಿದೆ. ಯುವನ್ ಶಂಕರ್ ರಾಜಾ ಸಂಗೀತ, ಸಿದ್ದಾರ್ಥ್ ನುನಿ ಛಾಯಾಗ್ರಹಣ ಚಿತ್ರಕ್ಕಿದೆ.

ಇದನ್ನೂ ಓದಿ: Thalapathy Vijay: ದಳಪತಿ ವಿಜಯ್ ನಟನೆಯ ‘GOAT’ ಚಿತ್ರದ ಟ್ರೈಲರ್‌ ರಿಲೀಸ್‌ ಡೇಟ್‌ ಅನೌನ್ಸ್‌!

ಈ ಚಿತ್ರವನ್ನು ವೆಂಕಟ್ ಪ್ರಭು ನಿರ್ದೇಶನ ಮಾಡುತ್ತಿದ್ದಾರೆ. GOAT’ ಚಿತ್ರದ ಹೊಸ ಪೋಸ್ಟರ್​ನ ತಂಡ ರಿಲೀಸ್ ಮಾಡಿದೆ. ಇದರಲ್ಲಿ ಅವರು ಗನ್ ಹಿಡಿದು ಮಿಂಚಿದ್ದಾರೆ. ಇದರಲ್ಲಿ ಟ್ರೇಲರ್ ರಿಲೀಸ್ ದಿನಾಂಕವನ್ನು ಉಲ್ಲೇಖ ಮಾಡಲಾಗಿದೆ.

ದಳಪತಿ ವಿಜಯ್ ಅವರು ಈ ಚಿತ್ರದಲ್ಲಿ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಪ್ಪ-ಮಗನ ಕಥೆ ಈ ಚಿತ್ರದಲ್ಲಿ ಇರಲಿದೆ ಎನ್ನಲಾಗಿದೆ. ದಳಪತಿ ವಿಜಯ್ ಅವರು ರಾಜಕೀಯದಲ್ಲಿ ಬ್ಯುಸಿ ಆಗೋಕೆ ರೆಡಿ ಆಗಿದ್ದಾರೆ. ಈ ಕಾರಣದಿಂದ ಈ ಸಿನಿಮಾದ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಅವರು ಇನ್ನೂ ಒಂದು ಸಿನಿಮಾದಲ್ಲಿ ಮಾತ್ರ ನಟಿಸಬಹುದು ಎನ್ನಲಾಗುತ್ತಿದೆ.

ಗೋಟ್’ ನಿರ್ಮಾಣದ ಕೊನೆಯ ಹಂತದಲ್ಲಿದ್ದು, ಚೆನ್ನೈ, ಥೈಲ್ಯಾಂಡ್, ಹೈದರಾಬಾದ್ ಮತ್ತು ಪಾಂಡಿಚೇರಿಯಲ್ಲಿ ಚಿತ್ರೀಕರಣ ಮಾಡಲಾಗಿದೆ. ವಿಜಯ್ ಕೊನೆಯದಾಗಿ ಲೋಕೇಶ್ ಕನಕರಾಜ್ ಅವರ ʻಲಿಯೋʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.

ಗೋಟ್’ ಅನ್ನು ಎಜಿಎಸ್ ಎಂಟರ್‌ಟೈನ್‌ಮೆಂಟ್‌ನಿಂದ ಕಲ್ಪತಿ ಎಸ್ ಅಘೋರಂ, ಕಲ್ಪತಿ ಎಸ್ ಗಣೇಶ್ ಮತ್ತು ಕಲ್ಪತಿ ಎಸ್ ಸುರೇಶ್ ಅವರು ಬೃಹತ್ ಬಜೆಟ್‌ನಲ್ಲಿ ನಿರ್ಮಿಸಿದ್ದಾರೆ. ಚಿತ್ರಕ್ಕೆ ಯುವನ್ ಶಂಕರ್ ರಾಜಾ ಅವರ ಸಂಗೀತ ಸಂಯೋಜನೆ. ಸಿದ್ಧಾರ್ಥ ನುನಿ ಅವರ ಛಾಯಾಗ್ರಹಣ ಮತ್ತು ವೆಂಕಟ್ ರಾಜೇನ್ ಅವರ ಸಂಕಲನವಿದೆ. ದಿ ಗೋಟ್ ಮೇಲೆ ನಿರೀಕ್ಷೆ ಹೆಚ್ಚಿದೆ. ಸೆಪ್ಟೆಂಬರ್ 5 ರಂದು ಗಣೇಶ ಚತುರ್ಥಿಯಂದು ಚಿತ್ರ ಬಿಡುಗಡೆಯಾಗಲಿದೆ. ಈ ಚಿತ್ರ ತಮಿಳು ಮಾತ್ರವಲ್ಲದೆ ತೆಲುಗು, ಹಿಂದಿ ಮತ್ತು ಇತರ ಭಾಷೆಗಳಲ್ಲೂ ಬಿಡುಗಡೆಯಾಗಲಿದೆಎಂದು ವರದಿಯಾಗಿದೆ.

ಸಿನಿಮಾ ವೃತ್ತಿಜೀವನಕ್ಕೆ ದಳಪತಿ ವಿಜಯ್‌ (Thalapathy Vijay) ಅವರು ವಿದಾಯ ಹೇಳಲು ಸಜ್ಜಾಗುತ್ತಿದ್ದಾರೆ. ದಳಪತಿ ವಿಜಯ್‌ ಅವರ 69ನೇ ಸಿನಿಮಾ ಘೋಷಣೆ ಆಗಲಿದೆ. ಇದು ಅವರ ಕೊನೆಯ ಸಿನಿಮಾ ಆಗಿರಲಿದೆ ಎನ್ನಲಾಗುತ್ತಿದೆ. ತಮಿಳು ಚಿತ್ರ ನಟ ದಳಪತಿ ವಿಜಯ್‌ (Thalapathy Vijay) ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಿರುವುದು ಗೊತ್ತೇ ಇದೆ. ಪಕ್ಷಕ್ಕೆ ʼತಮಿಳ ವೆಟ್ರಿ ಕಳಗಂʼ (Tamizha Vetri Kazhagam) ಎಂಬ ಹೆಸರನ್ನು ಈಗಾಗಲೇ ಘೋಷಿಸಿದ್ದಾರೆ ನಟ. ಮೂಲಗಳ ಪ್ರಕಾರ ತಮಿಳುನಾಡಿನಲ್ಲಿ 2026ರ ರಾಜ್ಯ ಚುನಾವಣೆಯಲ್ಲಿ ವಿಜಯ್‌ ಅವರು ಕಣಕ್ಕೆ ಇಳಿಯಲಿದ್ದಾರೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸದೆ 2026ರಲ್ಲಿ ಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅವರು ಸ್ಪರ್ಧಿಸಲಿದ್ದಾರೆ.

Continue Reading

ಕಾಲಿವುಡ್

Thangalaan Movie: ಸೀಕ್ವೆಲ್ ಆಗಿ ಬರಲಿದೆ ‘ತಂಗಲಾನ್ʼ; ಹೊಸ ದಾಖಲೆ ಬರೆದ ಚಿಯಾನ್ ವಿಕ್ರಮ್‍!

Thangalaan Movie: ಸ್ಟುಡಿಯೋ ಗ್ರೀನ್ ಫಿಲ್ಮ್ಸ್ ಮತ್ತು ನೀಲಂ ಪ್ರೊಡಕ್ಷನ್ಸ್ ಅಡಿಯಲ್ಲಿ ಕೆ.ಇ.ಜ್ಞಾನವೇಲ್ ರಾಜಾ ನಿರ್ಮಿಸಿದ ಈ ಸಿನಿಮಾ ಸೀಕ್ವೆಲ್ ಕೂಡ ಶೀರ್ಘದಲ್ಲಿ ಬರುತ್ತಿದೆ. ಈ ಬಗ್ಗೆ ಚಿಯಾನ್ ವಿಕ್ರಮ್‍ ಅವರೇ ಸ್ವತಃ ಈ ಬಗ್ಗೆ ಹೇಳಿಕೆ ನೀಡಿದ್ದಾರೆ.

VISTARANEWS.COM


on

Koo

ಬೆಂಗಳೂರು: ಜ್ಞಾನವೇಲ್ ರಾಜ್ ನಿರ್ಮಾಣದ,‌ ಪಾ ರಂಜಿತ್ ನಿರ್ದೇಶನದ ಹಾಗೂ ಚಿಯಾನ್ ವಿಕ್ರಮ್‍ ಅಭಿನಯದ ‘ತಂಗಲಾನ್ʼ ಚಿತ್ರವು (Thangalaan Movie) ಆಗಸ್ಟ್ 15 ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆಯುತ್ತಿದೆ. ಸ್ಟುಡಿಯೋ ಗ್ರೀನ್ ಫಿಲ್ಮ್ಸ್ ಮತ್ತು ನೀಲಂ ಪ್ರೊಡಕ್ಷನ್ಸ್ ಅಡಿಯಲ್ಲಿ ಕೆ.ಇ.ಜ್ಞಾನವೇಲ್ ರಾಜಾ ನಿರ್ಮಿಸಿದ ಈ ಸಿನಿಮಾ ಸೀಕ್ವೆಲ್ ಕೂಡ ಶೀರ್ಘದಲ್ಲಿ ಬರುತ್ತಿದೆ. ಈ ಬಗ್ಗೆ ಚಿಯಾನ್ ವಿಕ್ರಮ್‍ ಅವರೇ ಸ್ವತಃ ಈ ಬಗ್ಗೆ ಹೇಳಿಕೆ ನೀಡಿದ್ದಾರೆ.

“ಪಾ ರಂಜಿತ್ ಅವರಿಗೆ ನನ್ನ ಮೇಲೆ ಅಪಾರ ನಂಬಿಕೆ ಇತ್ತು, ಇದರಿಂದಾಗಿ ಈ ಚಿತ್ರ ಸಾಧ್ಯವಾಯಿತು. ತಂಗಲಾನ್ ಮುಂದಿನ ಭಾಗಕ್ಕೆ ಅರ್ಹವಾಗಿದೆ. ನೀವೆಲ್ಲರೂ ತುಂಬಾ ಇಷ್ಟಪಟ್ಟಿದ್ದೀರಿ. ತಂಗಲಾನ್‌ ಬಾಕ್ಸ್ ಆಫೀಸ್‌ನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಪೊನ್ನಿಯಿನ್ ಸೆಲ್ವನ್ ನಾಲ್ಕು ರಾಷ್ಟ್ರೀಯ ಪ್ರಶಸ್ತಿ ಗೆದ್ದಿದ್ದಕ್ಕೆ ಖುಷಿ ಇದೆʼʼಎಂದರು.

2011 ರಲ್ಲಿ ನಟ ವಿಕ್ರಮ್ ಅಭಿನಯದ ‘ದೈವತಿರುಮಗಳು’ ಚಿತ್ರದ ನಂತರ ಗುಣಮಟ್ಟದ ಬ್ರೇಕ್ ನೀಡುವ ಚಿತ್ರಗಳು ಬಂದಿಲ್ಲ. ಏಕೆಂದರೆ ಈ ಚಿತ್ರದ ನಂತರ ಬಿಡುಗಡೆಯಾದ ಐ, ಇರುಮುಗನ್, ಕೋಬ್ರಾ, ಸಾಮಿ ಸ್ಕ್ವೇರ್ ಮುಂತಾದ ಬಿಗ್ ಬಜೆಟ್ ಚಿತ್ರಗಳು ಮಿಶ್ರ ವಿಮರ್ಶೆಗಳನ್ನು ಕಂಡವು. ಆದರೆ, ನಿರ್ದೇಶಕ ಮಣಿರತ್ನಂ ನಿರ್ದೇಶನದಲ್ಲಿ ಎರಡು ಭಾಗಗಳಲ್ಲಿ ತೆರೆಕಂಡ ‘ಪೊನ್ನಿಯಿನ್ ಸೆಲ್ವನ್’ ಚಿತ್ರ ವಿಕ್ರಮ್ ಗೆ ಮತ್ತೆ ಹಿಟ್ ಆಯಿತು.ಇದೀಗ ‘ತಂಗಾಲನ್’ ಅದ್ಭುತವಾದ ಸಿನಿಮಾ, ಕೆಲವು ಅದ್ಭುತ ದೃಶ್ಯಗಳನ್ನು ಪಾ ರಂಜಿತ್ ಕಟ್ಟಿಕೊಟ್ಟಿದ್ದಾರೆ’ 

ಇದನ್ನೂ ಓದಿ: Shiva Rajkumar: ವರಮಹಾಲಕ್ಷ್ಮಿ ಹಬ್ಬದ ದಿನದಂದೇ ಸೆಟ್ಟೇರಿತು ಶಿವರಾಜ್ ಕುಮಾರ್ 131ನೇ ಸಿನಿಮಾ!

ಇದನ್ನೂ ಓದಿ: Shiva Rajkumar: ವರಮಹಾಲಕ್ಷ್ಮಿ ಹಬ್ಬದ ದಿನದಂದೇ ಸೆಟ್ಟೇರಿತು ಶಿವರಾಜ್ ಕುಮಾರ್ 131ನೇ ಸಿನಿಮಾ!

ಕನ್ನಡದಲ್ಲಿ ‘ಕೃಷ್ಣಂ ಪ್ರಣಯ ಸಖಿ’, ‘ಗೌರಿ’, ತೆಲುಗಿನಲ್ಲಿ ‘ಮಿಸ್ಟರ್ ಬಚ್ಚನ್’ ಮತ್ತು ‘ಡಬಲ್ ಇಸ್ಮಾರ್ಟ್’ ಇನ್ನು ತಮಿಳಿನಲ್ಲಿ ಚಿಯಾನ್ ವಿಕ್ರಂ ನಟನೆಯ ‘ತಂಗಲಾನ್’ ಸಿನಿಮಾ ತೆರೆಗೆ ಬಂದಿದೆ. 

ಈ ಚಿತ್ರದ ಪಾತ್ರಕ್ಕಾಗಿ ವಿಕ್ರಮ್‍ ಆರು ತಿಂಗಳ ತಯಾರಿ ನಡೆಸಿದ್ದಾರಂತೆ ಹಾಗೂ ತುಂಬಾ ತೂಕವನ್ನು ಕಳೆದುಕೊಂಡಿದ್ದಾರಂತೆ. ದೈಹಿಕವಾಗಿ ಬದಲಾಗುವುದಕ್ಕಿಂತ ಮಾನಸಿಕವಾಗಿ ಬದಲಾಗುವುದು ಬಹಳ ಕಷ್ಟವಾಗಿತ್ತು. ಪ್ರತಿ ದಿನ ನಾಲ್ಕೈದು ಗಂಟೆಗಳ ಕಾಲ ಮೇಕಪ್‍ ಹಾಕಿಕೊಳ್ಳಬೇಕಿತ್ತು ಎಂದು ಚಿತ್ರೀಕರಣ ಸಮಯದ ಅನುಭವವನ್ನು ವಿಕ್ರಮ್ ಈ ಹಿಂದೆ ಹಂಚಿಕೊಂಡಿದ್ದರು.

Continue Reading

ಕಾಲಿವುಡ್

Devara Movie: ʻಭೈರʼ ಪಾತ್ರದಲ್ಲಿ ಅಬ್ಬರಿಸಿದ ಸೈಫ್ ಅಲಿ ಖಾನ್ ; ʻದೇವರʼ ಹೊಸ ಟೀಸರ್‌ ಔಟ್‌!

Saif Ali Khan : ಕುಸ್ತಿ ಪಂದ್ಯಾವಳಿಯ ಅಖಾಡದಲ್ಲಿ ಭಾರಿ ಜನಬೆಂಬಲ ಹೊಂದಿರುವ ವ್ಯಕ್ತಿಯೊಬ್ಬನನ್ನು ಸೈಫ್ ಅಲಿ ಖಾನ್ ಸುಲಭವಾಗಿ ಹೊಡೆದು ಉರುಳಿಸುವ ದೃಶ್ಯವಿದೆ. ‘ದೇವರ’ ಪಾತ್ರಕ್ಕೆ ತಕ್ಕದಾದ ಎದುರಾಳಿ ಎನಿಸುವಂತೆ ಸೈಫ್ ಅಲಿ ಖಾನ್​ರ ಪಾತ್ರದ ಪರಿಚಯ ಮಾಡಿಸಲಾಗಿದೆ.

VISTARANEWS.COM


on

Saif Ali Khan introduced as kushti expert Bhaira
Koo

ಬೆಂಗಳೂರು: ಸೈಫ್ ಅಲಿ ಖಾನ್ (Saif Ali Khan ) ಅವರ ಜನ್ಮದಿನದಂದು `ದೇವರ’ ತಂಡವು ಹೊಸ ಗ್ಲಿಂಪ್ಸ್ ಅನ್ನು ಬಿಡುಗಡೆ ಮಾಡಿದೆ. ‘ದೇವರ‘ ಸಿನಿಮಾ (Devara Movie) ಒಂದು ದೊಡ್ಡ-ಬಜೆಟ್ ಕಮರ್ಷಿಯಲ್ ಆ್ಯಕ್ಷನ್ ಎಂಟರ್‌ಟೈನರ್. ಕೊರಟಾಲ ಶಿವ ಈ ಸಿನಿಮಾ ನಿರ್ದೇಶಕರು. ಬಾಲಿವುಡ್ ಸ್ಟಾರ್ ನಟ ಸೈಫ್ ಅಲಿ ಖಾನ್, ‘ದೇವರ’ ಸಿನಿಮಾದ ವಿಲನ್ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದಲ್ಲಿ ಸೈಫ್ ಪಾತ್ರದ ಹೆಸರು ಭೈರ. 

ಕುಸ್ತಿ ಪಂದ್ಯಾವಳಿಯ ಅಖಾಡದಲ್ಲಿ ಭಾರಿ ಜನಬೆಂಬಲ ಹೊಂದಿರುವ ವ್ಯಕ್ತಿಯೊಬ್ಬನನ್ನು ಸೈಫ್ ಅಲಿ ಖಾನ್ ಸುಲಭವಾಗಿ ಹೊಡೆದು ಉರುಳಿಸುವ ದೃಶ್ಯವಿದೆ. ‘ದೇವರ’ ಪಾತ್ರಕ್ಕೆ ತಕ್ಕದಾದ ಎದುರಾಳಿ ಎನಿಸುವಂತೆ ಸೈಫ್ ಅಲಿ ಖಾನ್​ರ ಪಾತ್ರದ ಪರಿಚಯ ಮಾಡಿಸಲಾಗಿದೆ.

ಇದೀಗ ಸೈಫ್‌ ಅವರ ಲುಕ್‌ ಕಂಡು ಫ್ಯಾನ್ಸ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದು ಸೈಫ್ ಅವರ ವೃತ್ತಿಜೀವನದಲ್ಲಿ ಅತ್ಯುತ್ತಮ ಪಾತ್ರವಾಗಿದೆ ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ಜೂನಿಯರ್ ಎನ್‌ಟಿಆರ್‌ಗಿಂತ ಸೈಫ್ ಮಾಸ್ ಆಗಿ ಕಾಣಿಸುತ್ತಾರೆ ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ. ಸೆಪ್ಟೆಂಬರ್ 27 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Saif Ali Khan: ಈದ್ ಆಚರಿಸಿದ ಸೈಫ್ ಅಲಿ ಖಾನ್-ಕರೀನಾ: ಕಿರಿಯ ಮಗ ಮಿಸ್ಸಿಂಗ್‌!

ಜ್ಯೂನಿಯರ್‌ ಎನ್‌ಟಿಆರ್‌ ಅವರ ಜನ್ಮದಿನವಾದ ಜನವರಿ 8 ರಂದು, ‘ದೇವರ’ ನಿರ್ಮಾಪಕರು ಫಸ್ಟ್‌ ಲುಕ್‌ವನ್ನು ಹಂಚಿಕೊಂಡಿದ್ದರು, ಅಲ್ಲಿಂದ ಸಿನಿಮಾ ಬಗ್ಗೆ ಸಿನಿರಸಿಕರಿಗೆ ನಿರೀಕ್ಷೆ ಹೆಚ್ಚಾಗಿತ್ತು.ಜ್ಯೂನಿಯರ್‌ ಎನ್‌ಟಿಆರ್‌, ಸೈಫ್ ಅಲಿ ಖಾನ್ ಮತ್ತು ಜಾನ್ವಿ ಕಪೂರ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ದೇವರ’ ಚಿತ್ರವನ್ನು ಕೊರಟಾಲ ಶಿವ ನಿರ್ದೇಶಿಸಿದ್ದಾರೆ. 2016ರಲ್ಲಿ ಇವರು ಜನತಾ ಗ್ಯಾರೇಜ್ ಎಂಬ ಸಿನಿಮಾವನ್ನು ನಿರ್ದೇಶಿಸಿದ್ದರು. ಅದರಲ್ಲಿ ಕೂಡ ಜ್ಯೂನಿಯರ್ ಎನ್​ಟಿಆರ್ ನಾಯಕನಾಗಿದ್ದರು. ಅದಾದ ಮೇಲೆ ಕೊರಟಾಲ ಶಿವ ಅವರೊಟ್ಟಿಗೆ ಜ್ಯೂ.ಎನ್​ಟಿಆರ್ ಯಾವುದೇ ಸಿನಿಮಾವನ್ನೂ ಮಾಡಿರಲಿಲ್ಲ.

ದೇವರ ಸಿನಿಮಾದಲ್ಲಿ ಜ್ಯೂನಿಯರ್ ಎನ್​ಟಿಆರ್​ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ವದಂತಿಯೂ ಇದೆ. ಅಪ್ಪ-ಮಗ ಎರಡೂ ಪಾತ್ರದಲ್ಲಿ ಇವರೇ ಅಭಿನಯ ಮಾಡಲಿದ್ದಾರಂತೆ. ಇದೊಂದು ಪಕ್ಕಾ ಆ್ಯಕ್ಷನ್​ ಚಿತ್ರದಂತೆ ಕಾಣಿಸುತ್ತಿದೆ. ಯುವಸುಧಾ ಆರ್ಟ್ಸ್ ಮತ್ತು ಜ್ಯೂನಿಯರ್‌ ಎನ್‌ಟಿಆರ್‌ ಆರ್ಟ್ಸ್ ಈ ಚಿತ್ರವನ್ನು ನಿರ್ಮಿಸಿದ್ದು, ನಂದಮೂರಿ ಕಲ್ಯಾಣ್ ರಾಮ್ ಅವರು ಪ್ರಸ್ತುತಪಡಿಸಿದ್ದಾರೆ.

ಈ ಚಿತ್ರದ OTT ಹಕ್ಕುಗಳನ್ನು ಸ್ಟ್ರೀಮಿಂಗ್ ಕಂಪನಿ ನೆಟ್ಫ್ಲಿಕ್ಸ್ ಭಾರಿ ಬೆಲೆಗೆ ಪಡೆದುಕೊಂಡಿದೆ. ಮಾಹಿತಿಯ ಪ್ರಕಾರ, ನೆಟ್ಫ್ಲಿಕ್ಸ್ 155 ಕೋಟಿ ರೂಪಾಯಿ ನೀಡಿ ಈ ಚಿತ್ರದ OTT ಹಕ್ಕುಗಳನ್ನು ಪಡೆದುಕೊಂಡಿದೆ ಎಂಬ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Continue Reading

ಕಾಲಿವುಡ್

Thalapathy Vijay: ದಳಪತಿ ವಿಜಯ್ ನಟನೆಯ ‘GOAT’ ಚಿತ್ರದ ಟ್ರೈಲರ್‌ ರಿಲೀಸ್‌ ಡೇಟ್‌ ಅನೌನ್ಸ್‌!

Thalapathy Vijay: ದಳಪತಿ ವಿಜಯ್ ಅವರು ಈ ಚಿತ್ರದಲ್ಲಿ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಪ್ಪ-ಮಗನ ಕಥೆ ಈ ಚಿತ್ರದಲ್ಲಿ ಇರಲಿದೆ ಎನ್ನಲಾಗಿದೆ. ದಳಪತಿ ವಿಜಯ್ ಅವರು ರಾಜಕೀಯದಲ್ಲಿ ಬ್ಯುಸಿ ಆಗೋಕೆ ರೆಡಿ ಆಗಿದ್ದಾರೆ. ಈ ಕಾರಣದಿಂದ ಈ ಸಿನಿಮಾದ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಅವರು ಇನ್ನೂ ಒಂದು ಸಿನಿಮಾದಲ್ಲಿ ಮಾತ್ರ ನಟಿಸಬಹುದು ಎನ್ನಲಾಗುತ್ತಿದೆ.

VISTARANEWS.COM


on

Thalapathy Vijay Looks Intense In New GOAT Poster Trailer To Release
Koo

ಬೆಂಗಳೂರು: ವಿಜಯ್‌ ಅವರು ಸದ್ಯ ‘ಗ್ರೇಟೆಸ್ಟ್ ಆಫ್ ಆಲ್​ ಟೈಮ್’ ((‘Greatest Of All Time (GOAT)’) ) ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ತ್ರಿಶಾ ನಾಯಕಿ. ಈ ಸಿನಿಮಾದಲ್ಲಿ ಪ್ರಭುದೇವ ಮೊದಲಾದವರು ನಟಿಸುತ್ತಿದ್ದಾರೆ. ʻವಿಸಿಲ್‌ ಪೋಡುʼ (Whistle Podu) ಎಂಬ ಶೀರ್ಷಿಕೆಯ ಮೊದಲ ಹಾಡು ಬಿಡುಗಡೆಯಾಗಿ ಸಖತ್‌ ಸೌಂಡ್‌ ಮಾಡಿತ್ತು. ಇದೀಗ ಸಿನಿಮಾದ ಟ್ರೈಲರ್‌ ಬಿಡುಗಡೆ ದಿನಾಂಕ ರಿವೀಲ್‌ ಆಗಿದೆ.

ಚಿತ್ರದಲ್ಲಿ ಮೀನಾಕ್ಷಿ ಚೌಧರಿ, ಪ್ರಶಾಂತ್, ಪ್ರಭುದೇವ, ಮೋಹನ್, ಜಯರಾಮ್, ಸ್ನೇಹಾ ಮತ್ತು ಲೈಲಾ ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ. ಈ ಚಿತ್ರವನ್ನು ವೆಂಕಟ್ ಪ್ರಭು ನಿರ್ದೇಶನ ಮಾಡುತ್ತಿದ್ದಾರೆ. ಅಂದರೆ ಆಗಸ್ಟ್ 17ರಂದು ಸಿನಿಮಾದ ಟ್ರೇಲರ್ ರಿಲೀಸ್ ಆಗಲಿದೆ. ಆಗಸ್ಟ್ 15ರ ಪ್ರಯುಕ್ತ ಈ ಘೋಷಣೆ ಮಾಡಲಾಗಿದೆ.  GOAT’ ಚಿತ್ರದ ಹೊಸ ಪೋಸ್ಟರ್​ನ ತಂಡ ರಿಲೀಸ್ ಮಾಡಿದೆ. ಇದರಲ್ಲಿ ಅವರು ಗನ್ ಹಿಡಿದು ಮಿಂಚಿದ್ದಾರೆ. ಇದರಲ್ಲಿ ಟ್ರೇಲರ್ ರಿಲೀಸ್ ದಿನಾಂಕವನ್ನು ಉಲ್ಲೇಖ ಮಾಡಲಾಗಿದೆ. 

ದಳಪತಿ ವಿಜಯ್ ಅವರು ಈ ಚಿತ್ರದಲ್ಲಿ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಪ್ಪ-ಮಗನ ಕಥೆ ಈ ಚಿತ್ರದಲ್ಲಿ ಇರಲಿದೆ ಎನ್ನಲಾಗಿದೆ. ದಳಪತಿ ವಿಜಯ್ ಅವರು ರಾಜಕೀಯದಲ್ಲಿ ಬ್ಯುಸಿ ಆಗೋಕೆ ರೆಡಿ ಆಗಿದ್ದಾರೆ. ಈ ಕಾರಣದಿಂದ ಈ ಸಿನಿಮಾದ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಅವರು ಇನ್ನೂ ಒಂದು ಸಿನಿಮಾದಲ್ಲಿ ಮಾತ್ರ ನಟಿಸಬಹುದು ಎನ್ನಲಾಗುತ್ತಿದೆ.

ಗೋಟ್’ ನಿರ್ಮಾಣದ ಕೊನೆಯ ಹಂತದಲ್ಲಿದ್ದು, ಚೆನ್ನೈ, ಥೈಲ್ಯಾಂಡ್, ಹೈದರಾಬಾದ್ ಮತ್ತು ಪಾಂಡಿಚೇರಿಯಲ್ಲಿ ಚಿತ್ರೀಕರಣ ಮಾಡಲಾಗಿದೆ. ವಿಜಯ್ ಕೊನೆಯದಾಗಿ ಲೋಕೇಶ್ ಕನಕರಾಜ್ ಅವರ ʻಲಿಯೋʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: Thalapathy Vijay: ದಳಪತಿ ವಿಜಯ್‌ಗೆ ಭುಜದ ಮೇಲಿನ ಕೈ ತೆಗೆಯಲು ಹೇಳಿದ ಹುಡುಗಿ; ವಿಡಿಯೊ ವೈರಲ್

ಗೋಟ್’ ಅನ್ನು ಎಜಿಎಸ್ ಎಂಟರ್‌ಟೈನ್‌ಮೆಂಟ್‌ನಿಂದ ಕಲ್ಪತಿ ಎಸ್ ಅಘೋರಂ, ಕಲ್ಪತಿ ಎಸ್ ಗಣೇಶ್ ಮತ್ತು ಕಲ್ಪತಿ ಎಸ್ ಸುರೇಶ್ ಅವರು ಬೃಹತ್ ಬಜೆಟ್‌ನಲ್ಲಿ ನಿರ್ಮಿಸಿದ್ದಾರೆ. ಚಿತ್ರಕ್ಕೆ ಯುವನ್ ಶಂಕರ್ ರಾಜಾ ಅವರ ಸಂಗೀತ ಸಂಯೋಜನೆ. ಸಿದ್ಧಾರ್ಥ ನುನಿ ಅವರ ಛಾಯಾಗ್ರಹಣ ಮತ್ತು ವೆಂಕಟ್ ರಾಜೇನ್ ಅವರ ಸಂಕಲನವಿದೆ. ದಿ ಗೋಟ್ ಮೇಲೆ ನಿರೀಕ್ಷೆ ಹೆಚ್ಚಿದೆ. ಸೆಪ್ಟೆಂಬರ್ 5 ರಂದು ಗಣೇಶ ಚತುರ್ಥಿಯಂದು ಚಿತ್ರ ಬಿಡುಗಡೆಯಾಗಲಿದೆ. ಈ ಚಿತ್ರ ತಮಿಳು ಮಾತ್ರವಲ್ಲದೆ ತೆಲುಗು, ಹಿಂದಿ ಮತ್ತು ಇತರ ಭಾಷೆಗಳಲ್ಲೂ ಬಿಡುಗಡೆಯಾಗಲಿದೆಎಂದು ವರದಿಯಾಗಿದೆ.

ಸಿನಿಮಾ ವೃತ್ತಿಜೀವನಕ್ಕೆ ದಳಪತಿ ವಿಜಯ್‌ (Thalapathy Vijay) ಅವರು ವಿದಾಯ ಹೇಳಲು ಸಜ್ಜಾಗುತ್ತಿದ್ದಾರೆ. ದಳಪತಿ ವಿಜಯ್‌ ಅವರ 69ನೇ ಸಿನಿಮಾ ಘೋಷಣೆ ಆಗಲಿದೆ. ಇದು ಅವರ ಕೊನೆಯ ಸಿನಿಮಾ ಆಗಿರಲಿದೆ ಎನ್ನಲಾಗುತ್ತಿದೆ. ತಮಿಳು ಚಿತ್ರ ನಟ ದಳಪತಿ ವಿಜಯ್‌ (Thalapathy Vijay) ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಿರುವುದು ಗೊತ್ತೇ ಇದೆ. ಪಕ್ಷಕ್ಕೆ ʼತಮಿಳ ವೆಟ್ರಿ ಕಳಗಂʼ (Tamizha Vetri Kazhagam) ಎಂಬ ಹೆಸರನ್ನು ಈಗಾಗಲೇ ಘೋಷಿಸಿದ್ದಾರೆ ನಟ. ಮೂಲಗಳ ಪ್ರಕಾರ ತಮಿಳುನಾಡಿನಲ್ಲಿ 2026ರ ರಾಜ್ಯ ಚುನಾವಣೆಯಲ್ಲಿ ವಿಜಯ್‌ ಅವರು ಕಣಕ್ಕೆ ಇಳಿಯಲಿದ್ದಾರೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸದೆ 2026ರಲ್ಲಿ ಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅವರು ಸ್ಪರ್ಧಿಸಲಿದ್ದಾರೆ.

Continue Reading
Advertisement
Physical Abuse
ಪ್ರಮುಖ ಸುದ್ದಿ9 mins ago

Physical Abuse : 16 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ 69 ವರ್ಷದ ಮುದುಕ

Champai Soren
ರಾಜಕೀಯ20 mins ago

Champai Soren: ಜಾರ್ಖಂಡ್‌ ರಾಜಕೀಯಲ್ಲಿ ಸಂಚಲನ; ಮಾಜಿ ಸಿಎಂ ಚಂಪೈ ಸೊರೆನ್ ಬಿಜೆಪಿ ಸೇರ್ಪಡೆ?

CM Siddaramaiah
ಪ್ರಮುಖ ಸುದ್ದಿ38 mins ago

CM Siddaramaiah : ಮುಡಾ ಆಘಾತದ ನಡುವೆ ಸಿಎಂ ಸಿದ್ದರಾಮಯ್ಯ ನಾಳೆ ಮಂತ್ರಾಲಯಕ್ಕೆ ಭೇಟಿ

Heart attack
ಬೆಳಗಾವಿ41 mins ago

Heart Attack : ಬೈಕ್‌ನಲ್ಲಿ ತೆರಳುತ್ತಿದ್ದಾಗಲೇ ಬಡಿತ ನಿಲ್ಲಿಸಿದ ಹೃದಯ; ಯೋಧನ ಸಾವಿನ ಕೊನೆ ಕ್ಷಣ ಸೆರೆ

MS Dhoni
ಕ್ರೀಡೆ48 mins ago

MS Dhoni: ಅಭಿಮಾನಿಯ ಬೈಕ್​ ಮೇಲೆ ಆಟೋಗ್ರಾಫ್​ ಹಾಕಿದ ಧೋನಿ; ಫೋಟೊ ವೈರಲ್​

Congress Protest
ಕರ್ನಾಟಕ48 mins ago

Congress Protest: ರಾಜ್ಯಪಾಲರ ನಡೆಗೆ ಕೆರಳಿದ ಕಾಂಗ್ರೆಸ್ ಪಡೆ; ನಾಳೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

Physical Abuse
ದೇಶ1 hour ago

Physical Abuse: ಮತ್ತೊಂದು ಪೈಶಾಚಿಕ ಕೃತ್ಯ; ಬಸ್‌ನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

Kannada New Movie vaikuntha samaradhane movie
ಸ್ಯಾಂಡಲ್ ವುಡ್1 hour ago

Kannada New Movie: ಹೊಸ ಪ್ರತಿಭೆಗಳ ಸಿನಿಮಾ ‘ವೈಕುಂಠ ಸಮಾರಾಧನೆʼ; ಕನ್ನಡದಲ್ಲಿ ಹೀಗೊಂದು ಚಿತ್ರ!

Road Accident
ಚಿತ್ರದುರ್ಗ1 hour ago

Road Accident : ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ; ರಕ್ತಕಾರಿ ಸತ್ತ ಸವಾರ, ಮತ್ತೊಬ್ಬ ಗಂಭೀರ

Kavya Gowda show faces of baby siya
ಸ್ಯಾಂಡಲ್ ವುಡ್2 hours ago

Kavya Gowda: ಮಗಳ ಮುಖ ರಿವೀಲ್‌ ಮಾಡಿದ ‘ರಾಧಾ ರಮಣ’ ಖ್ಯಾತ ನಟಿ ಕಾವ್ಯಾ ಗೌಡ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌