Murder Case : ದಲಿತನಿಗೆ ಕ್ಷೌರ ಮಾಡಲು ನಿರಾಕರಣೆ ವಿಚಾರದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ - Vistara News

ಪ್ರಮುಖ ಸುದ್ದಿ

Murder Case : ದಲಿತನಿಗೆ ಕ್ಷೌರ ಮಾಡಲು ನಿರಾಕರಣೆ ವಿಚಾರದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

Murder case :

VISTARANEWS.COM


on

Murder case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಪ್ಪಳ: ಕ್ಷೌರ ಮಾಡುವ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ದಲಿತರೊಬ್ಬರನ್ನು ಕೊಲೆ ಮಾಡಿರುವ (Murder Case) ಘಟನೆ ಯಲಬುರ್ಗಾದ ಸಂಗನಾಳದಲ್ಲಿ ನಡೆದಿದೆ. ಕ್ಷೌರಿಕ ಮುದುಕಪ್ಪ ಹಡಪದ ಕೊಲೆ ಆರೋಪಿಯಾಗಿದ್ದು, ಯಮನೂರಸ್ವಾಮಿ ಬಂಡಿಹಾಳ ಕೊಲೆಯಾದ ವ್ಯಕ್ತಿಯಾಗಿದ್ದಾರೆ. ತನ್ನ ಕ್ಷೌರ ಮಾಡಲು ಹೇಳಿದ ವ್ಯಕ್ತಿಯನ್ನು ಕೊಲೆ ಮಾಡಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲೆಯಾದ ಯಮನೂರಸ್ವಾಮಿ ತಮ್ಮ ಕ್ಷೌರ ಮಾಡಲು ಮುದುಕಪ್ಪ ಅವರಿಗೆ ಹೇಳಿದ್ದ. ಆದರೆ ಜಾತಿ ಕಾರಣಕ್ಕೆ ಆ ಕೆಲಸ ಮಾಡಲು ನಿರಾಕರಿಸಿದ್ದ. ಈ ವಿಚಾರದಲ್ಲಿ ಪರಸ್ಪರ ವಾಗ್ವಾದ ನಡೆದಿತ್ತು. ಜಗಳ ತಾರಕಕ್ಕೇರಿ ಮುದುಕಪ್ಪ ಕೊಲೆ ಮಾಡಿದ್ದಾನೆ.

ಜಾತಿ ನಿಂದನೆ, ಕೊಲೆ

ಯಮನೂರ ಕ್ಷೌರ ಮಾಡಿಸಿಕೊಳ್ಳುವುದಕ್ಕೆ ಹೋಗಿದ್ದಾಗ ಮುದುಕಪ್ಪ ಮೊದಲು ಹಣ ಕೊಡುವಂತೆ ಕೇಳಿದ್ದಾನೆ. ಆದರೆ ಯಮನೂರ ಸ್ವಲ್ಪ ಹೊತ್ತು ಬಿಟ್ಟು ದುಡ್ಡು ಕೊಡುವುದಾಗಿ ಹೇಳಿದ್ದರು. ಮಾದಿಗರಿಗೆ ಕ್ಷೌರ ಮಾಡುವುದು ಕಷ್ಟ. ಅಂಥದ್ದರಲ್ಲಿ ಹಣ ಕೊಡದೇ ಕ್ಷೌರ ಮಾಡುವುದು ಹೇಗೆ ಎಂದು ಮುದುಕಪ್ಪ ಪ್ರಶ್ನಿಸಿದ್ದಾರೆ. ಈ ಮಾತಿಗೆ ಯಮನೂರ ಆಕ್ಷೇಪ ವ್ಯಕ್ತಪಡಿಸಿದ್ದು ಜಾತಿ ನಿಂದನೆ ಮಾಡಬಾರದಾಗಿ ಎಚ್ಚರಿಕೆ ಕೊಟ್ಟಿದ್ದರು. ಇದರಿಂದ ಸಿಟ್ಟಿಗೆದ್ದ ಮುದುಕಪ್ಪ ಯಮನೂರ ಅವರ ಶರ್ಟ್​ ಹಿಡಿದು ಎಳೆದಾಡಿದ್ದ. ಈ ವೇಳೆ ಗಲಾಟೆ ನಡೆದಿದ್ದು ಆರೋಪಿ ತನ್ನ ಕೆಲಸ ಮಾಡುವ ಕತ್ತರಿಯಿಂದಲೇ ಹೊಕ್ಕಳ ಕೆಳಗೆ ಚುಚ್ಚಿ ಕೊಲೆ ಮಾಡಿದ್ದಾನೆ ಎಂದು ಎಫ್​ಐಆರ್​ನಲ್ಲಿ ದಾಖಲಾಗಿದೆ.

ಇದನ್ನೂ ಓದಿ: Accident News : ನರಗುಂದಲ್ಲಿ ಭೀಕರ ಅಫಘಾತ; ಸಾರಿಗೆ ಬಸ್​ ಗುದ್ದಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರ ದುರ್ಮರಣ

ಡಾಬಾದಿಂದ ಲೋಕಲ್ ಬ್ರಾಂಡ್​ ಎಣ್ಣೆ ಕದಿಯುತ್ತಿದ್ದವನ ಮುಖ ಸಿಸಿಟಿವಿಯಲ್ಲಿ ಸೆರೆ

ರಾಯಚೂರು : ಡಾಬಾವೊಂದಕ್ಕೆ ನುಗ್ಗಿ ಪ್ರತಿನಿತ್ಯ ಲೋಕಲ್ ಎಣ್ಣೆ ಕದಿಯುತ್ತಿದ್ದ ವ್ಯಕ್ತಿಯೊಬ್ಬನ ಮುಖ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆರೋಪಿಯ ಕುರಿತು ಡಾಬಾ ಮಾಲೀಕರು ಮುದ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಎಣ್ಣೆ ಆಸೆಗೆ ಬಂದಿದ್ದ ಆತ ಮುಖಕ್ಕೆ ಮುಸುಕು ಧರಿಸಿರಲಿಲ್ಲ. ಹೀಗಾಗಿ ಕ್ಯಾಮೆರಾದಲ್ಲಿ ಆತನ ಚಹರೆ ಸಂಪೂರ್ಣವಾಗಿ ಸೆರೆಯಾಗಿದೆ. ಹೀಗಾಗಿ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸುವ ಸಾಧ್ಯತೆಗಳಿವೆ.

ಆರೋಪಿಗೆ ಡಾಬಾಕ್ಕೆ ನುಗ್ಗಿ ಲೋಕಲ್ ಬ್ರ್ಯಾಂಡ್ ಎಣ್ಣೆ ಕದಿಯುವ ಚಾಳಿ ಶುರುವಾಗಿತ್ತು. ಅಲ್ಲಿ ಹಣ ಇದ್ದರೂ ಅದನ್ನು ಮುಟ್ಟೇ ಕೇವಲ ಒಟಿ, ಚಾಯ್ಸ್ ಸೇರಿದಂತೆ ಲೋಕಲ್ ಬ್ರಾಂಡ್​ನ ಮದ್ಯ ಎತ್ತಿಕೊಂಡು ಪರಾರಿಯಾಗುತ್ತಿದ್ದ. ಲಿಂಗಸಗೂರು ತಾಲೂಕಿನ ಮಾಕಾಪೂರ ಗ್ರಾಮದಲ್ಲಿರುವ ಡಾಬಾದ ಮಾಲೀಕರು ಇದರಿಂದ ಬೇಸತ್ತಿದ್ದರು. ಮಾಲೀಕ ಬಸವರಾಜ್ ಅವರು ಆರೋಪಿಯನ್ನು ಹಿಡಿಯುವ ಉದ್ದೇಶದಿಂದ ಸಿಸಿ ಟಿವಿ ಕ್ಯಾಮೆರಾವನ್ನು ಅಳವಡಿಸಿದ್ದರು. ಆರೋಪಿ ಈ ಬಗ್ಗೆ ಅರಿಯದೇ ಒಳಗೆ ನುಗ್ಗಿ ಮತ್ತೆ ಎಣ್ಣೆಗಾಗಿ ತಡಕಾಡಿದಾಗ ಆತನ ಮುಖ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Physical Abuse : 16 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ 69 ವರ್ಷದ ಮುದುಕ

Physical Abuse :

VISTARANEWS.COM


on

Physical Abuse
Koo

ಇಂದೋರ್​: ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ 69 ವರ್ಷದ ಮುದುಕನೊಬ್ಬ 16 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ ಘಟನೆ ನಡೆದಿದೆ. ಬಾಲಕಿಯ ಪೋಷಕರು ನೀಡಿದ ದೂರಿನ ಪ್ರಕಾರ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಆಗಸ್ಟ್ 14 ರಂದು ಬಿಯೋಹರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮರುದಿನ ಪೊಲೀಸರಿಗೆ ದೂರು ನೀಡಲಾಗಿದೆ.

16 ವರ್ಷದ ಬಾಲಕಿ ಮನೆಯಲ್ಲಿ ಒಬ್ಬಳೇ ಇರುವುದನ್ನು ಕಂಡು ಆರೋಪಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಬಿಯೋಹರಿ ಪೊಲೀಸ್ ಠಾಣೆಯ ಉಸ್ತುವಾರಿ ಅರುಣ್ ಪಾಂಡೆ ತಿಳಿಸಿದ್ದಾರೆ. ಬಾಲಕಿ ಮತ್ತು ಆಕೆಯ ಕುಟುಂಬ ಸದಸ್ಯರು ಆಗಸ್ಟ್ 15 ರಂದು ಸ್ಥಳೀಯ ಪೊಲೀಸರನ್ನು ಸಂಪರ್ಕಿಸಿ ಈ ಬಗ್ಗೆ ದೂರು ದಾಖಲಿಸಿದ್ದಾರೆ.

ಆರೋಪಿಯನ್ನು ಆಗಸ್ಟ್ 16 ರಂದು ಬಂಧಿಸಲಾಗಿದೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಕೋಲ್ಕತಾ ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯ ಭೀಕರ ಅತ್ಯಾಚಾರ-ಕೊಲೆಯ ಬಗ್ಗೆ ಹೆಚ್ಚುತ್ತಿರುವ ಆಕ್ರೋಶದ ಮಧ್ಯೆ ಈ ಬೆಳವಣಿಗೆ ನಡೆದಿದೆ.

Physical Abuse: ಮತ್ತೊಂದು ಪೈಶಾಚಿಕ ಕೃತ್ಯ; ಬಸ್‌ನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

ಡೆಹ್ರಾಡೂನ್‌: ದೇಶದಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಆತಂಕ ಎದುರಾಗಿದ್ದು, ಕೋಲ್ಕತ್ತಾದಲ್ಲಿ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದ ಬೆನ್ನಿಗೆ ಉತ್ತರಾಖಂಡದಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ (Physical Abuse). ಉತ್ತರ ಪ್ರದೇಶದ ಮೊರಾದಾಬಾದ್​ನಿಂದ ಡೆಹ್ರಾಡೂನ್​ಗೆ ಬಸ್‌ನಲ್ಲಿ ಹೊರಟಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಐವರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ಘಟನೆ ಆಗಸ್ಟ್ 13ರಂದು ನಡೆದಿದೆ ಎನ್ನಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಪಂಜಾಬ್‌ ಮೂಲದ ಬಾಲಕಿ ಡೆಹ್ರಾಡೂನ್‌ಗೆ ತೆರಳಲು ಆಗಸ್ಟ್‌ 12ರಂದು ಉತ್ತರಾಖಂಡದ ಅಂತಾರಾಜ್ಯ ಸರ್ಕಾರಿ ಬಸ್‌ ಏರಿದ್ದಳು. ಆಗಸ್ಟ್‌ 13ರ ಮುಂಜಾನೆ ನಿಲ್ಲಿಸಿದ್ದ ಬಸ್‌ನಲ್ಲಿ ಯಾರೂ ಇಲ್ಲದ ವೇಳೆ ಐವರು ಬಾಲಕಿ ಮೇಲೆ ಎರಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ವೈದ್ಯಕೀಯ ವರದಿ ಇನ್ನಷ್ಟೇ ಕೈ ಸೇರಬೇಕಿದೆ.

ಅಧಿಕಾರಿಗಳು ಹೇಳಿದ್ದೇನು?

ಮಕ್ಕಳ ಕಲ್ಯಾಣ ಸಮಿತಿ (Child Welfare Committee-CWC)ಯ ಅಧಿಕಾರಿಗಳು ಘಟನೆ ಬಗ್ಗೆ ಮಾಹಿತಿ ನೀಡಿ, ಆಗಸ್ಟ್‌ 13ರ ಮುಂಜಾನೆ ಸುಮಾರು 2-2.30ರ ವೇಳೆಗೆ ಬಾಲಕಿ ಪತ್ತೆಯಾಗಿದ್ದಳು. ಈ ವೇಳೆ ಅವಳ ಮಾನಸಿಕವಾಗಿ ಬಹಳ ಕುಗ್ಗಿ ಹೋಗಿದ್ದಳು. ಆಕೆಯ ದೇಹದಲ್ಲಿ ಹೊರ ಭಾಗದಲ್ಲಿ ಯಾವುದೇ ಗಾಯ ಕಂಡು ಬಂದಿರಲಿಲ್ಲ. ಬಳಿಕ ಆಕೆಯನ್ನು ಮಕ್ಕಳ ಕಲ್ಯಾಣ ಕೇಂದ್ರಕ್ಕೆ ಕರೆದುಕೊಂಡು ಬಂದು ಆಸ್ಪತ್ರೆಗೆ ದಾಖಲಿಸಲಾಯಿತುʼʼ ಎಂದು ತಿಳಿಸಿದ್ದಾರೆ.

ಬಸ್‌ನ ಚಾಲಕ, ನಿರ್ವಾಹಕ ಸೇರಿ ಇದುವರೆಗೆ 6 ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಮೂಲಗಳ ಪ್ರಕಾರ ಪಂಜಾಬ್‌ನ ಈ ಬಾಲಕಿ ಅನಾಥೆಯಾಗಿದ್ದು, ತನ್ನ ಸಹೋದರಿ ಮತ್ತು ಭಾವನೊಂದಿಗೆ ವಾಸವಾಗಿದ್ದಳು. ಆಗಸ್ಟ್‌ 11ರಂದು ಅಕ್ಕ-ಭಾವ ಸೇರಿ ಆಕೆಯನ್ನು ಮನೆಯಿಂದ ಹೊರ ಹಾಕಿದ್ದರು. ಇದರಿಂದ ದಿಕ್ಕೇ ತೋಚದಂತಾದ ಆಕೆ ದಿಲ್ಲಿಗೆ ಬಂದು ಅಲ್ಲಿಂದ ಉತ್ತರಪ್ರದೇಶದ ಮೊರಾದಾಬಾದ್‌ಗೆ ಆಗಮಿಸಿದ್ದಳು. ಬಳಿಕ ಅಲ್ಲಿಂದ ಡೆಹ್ರಾಡೂನ್‌ ತಲುಪಿದ್ದಳು.

ಇದನ್ನೂ ಓದಿ: Heart Attack : ಬೈಕ್‌ನಲ್ಲಿ ತೆರಳುತ್ತಿದ್ದಾಗಲೇ ಬಡಿತ ನಿಲ್ಲಿಸಿದ ಹೃದಯ; ಯೋಧನ ಸಾವಿನ ಕೊನೆ ಕ್ಷಣ ಸೆರೆ

ಘಟನೆ ವಿವರ

ದಿಲ್ಲಿಯಿಂದ ಉತ್ತರ ಪ್ರದೇಶದ ಸಾರಿಗೆ ಬಸ್‌ ಮೂಲಕ ಮೊರಾದಾಬಾದ್‌ಗೆ ತಲುಪಿದ ಬಾಲಕಿ ಅಲ್ಲಿಂದ ಆಗಸ್ಟ್‌ 12ರಂದು ಅಂತಾರಾಜ್ಯ ಬಸ್‌ ಹತ್ತಿ ಡೆಹ್ರಾಡೂನ್‌ ತಲುಪಿದ್ದಳು. ಬಸ್‌ನಿಂದ ಎಲ್ಲರೂ ಇಳಿದು ಹೋದ ಬಳಿಕ ಆಕೆಯೊಬ್ಬಳೇ ಉಳಿದಿಕೊಂಡಿದ್ದಳು. ಆಕೆ ಒಬ್ಬಳೇ ಇರುವುದನ್ನು ಗಮನಿಸಿದ ಐವರು ಆಗಸ್ಟ್‌ 13ರಂದು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಬಸ್‌ನಿಂದ ಹೊರಗೆ ಎಸೆದು ಪರಾರಿಯಾಗಿದ್ದರು ಎಂದು ವರದಿಯೊಂದು ತಿಳಿಸಿದೆ. ಸದ್ಯ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸುತ್ತಿದ್ದಾರೆ.

Continue Reading

ಪ್ರಮುಖ ಸುದ್ದಿ

CM Siddaramaiah : ಮುಡಾ ಆಘಾತದ ನಡುವೆ ಸಿಎಂ ಸಿದ್ದರಾಮಯ್ಯ ನಾಳೆ ಮಂತ್ರಾಲಯಕ್ಕೆ ಭೇಟಿ

CM Siddaramaiah: ಸಿದ್ದರಾಮಯ್ಯ ಅವರು 365ನೇ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಮಾಡಲಿದ್ದಾರೆ. ಇದೇ ವೇಳೆ ಅವರು ಆರಾಧನಾ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11.20 ಕ್ಕೆ ಜಿಂದಾಲ್ ಏರ್ಪೋರ್ಟ್ ಅವರು ಆಗಮಿಸಲಿದ್ದು ಅಲ್ಲಿಂದ ಅವರು ಬಳಿಕ ವಿಶೇಷ ಹೆಲಿಕಾಪ್ಟರ್ ಮೂಲಕ ಮಂತ್ರಾಲಯಕ್ಕೆ ಬಂದು ಇಳಿಯಲಿದ್ದಾರೆ.

VISTARANEWS.COM


on

CM Siddaramaiah
Koo

ರಾಯಚೂರು : ಮುಡಾ ಸೈಟ್ ಹಗರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುತ್ತಿದೆ. ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ತನಿಖಾ ಸಂಸ್ಥೆಗಳಿಗೆ ದೂರು ನೀಡಲು ರಾಜ್ಯಪಾಲರಾದ ತಾವರ್​​ಚಂದ್ ಗೆಹ್ಲೋಟ್​ ಅನುಮತಿ ನೀಡುವುದರೊಂದಿಗೆ ವಿಷಯ ಇನ್ನಷ್ಟು ಗಂಭೀರವಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ತಮ್ಮದೇನೂ ತಪ್ಪಿಲ್ಲ ಎಂದು ಹೇಳುವ ಜತೆಗೆ ಪ್ರತಿಪಕ್ಷಗಳ ಪಟ್ಟು ಜೋರಾಗಿದೆ. ಈ ಎಲ್ಲದರ ನಡುವೆ ಸಿದ್ದರಾಮಯ್ಯ ಅವರು ಸೋಮವಾರ (ಆಗಸ್ಟ್​​19ರಂದು) ಮಂತ್ರಾಲಯಕ್ಕೆ (mantralayam) ಭೇಟಿ ನೀಡಲಿದ್ದಾರೆ.

ಸಿದ್ದರಾಮಯ್ಯ ಅವರು 365ನೇ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಮಾಡಲಿದ್ದಾರೆ. ಇದೇ ವೇಳೆ ಅವರು ಆರಾಧನಾ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11.20 ಕ್ಕೆ ಜಿಂದಾಲ್ ಏರ್ಪೋರ್ಟ್ ಅವರು ಆಗಮಿಸಲಿದ್ದು ಅಲ್ಲಿಂದ ಅವರು ಬಳಿಕ ವಿಶೇಷ ಹೆಲಿಕಾಪ್ಟರ್ ಮೂಲಕ ಮಂತ್ರಾಲಯಕ್ಕೆ ಬಂದು ಇಳಿಯಲಿದ್ದಾರೆ. 12. 05 ಮಂತ್ರಾಲಯದ ಹೆಲಿಪ್ಯಾಡ್ ಬಂದು ಇಳಿಯಲಿದ್ದಾರೆ. ಬಳಿಕ ರಾಯರ ಮೂಲಬೃಂದಾವನಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಆ ಬಳಿಕ ಅವರು ವಿವಿಧ ಕಾಮಗಾರಿ ಗಳಿಗೆ ಚಾಲನೆ ನೀಡಲಿದ್ದಾರೆ.

ರಾಜ್ಯಪಾಲರ ನಡೆಗೆ ಕೆರಳಿದ ಕಾಂಗ್ರೆಸ್ ಪಡೆ; ನಾಳೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಸನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ರಾಜ್ಯಪಾಲರ ವಿರುದ್ಧ ಕೆರಳಿದ ಕಾಂಗ್ರೆಸ್ ಪಡೆ, ನಾಳೆ(ಆ.19) ಬೆಳಗ್ಗೆ 11 ಗಂಟೆಗೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಪಾದಯಾತ್ರೆಯ ಮೂಲಕ ಬೃಹತ್ ಪ್ರತಿಭಟನೆಗೆ (Congress Protest) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದು, ಪ್ರತಿಭಟನೆಯಲ್ಲಿ ಸಚಿವರು ಸ್ಥಳೀಯ ಶಾಸಕರು ಕೆಪಿಸಿಸಿ ಪದಾಧಿಕಾರಿಗಳು ಕಾರ್ಯಕರ್ತರು ಭಾಗಿಯಾಗುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: V Somanna : ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದು ಸಂಸದರ ಕಚೇರಿ ಉದ್ಘಾಟಿಸಿದ ವಿ ಸೋಮಣ್ಣ

ನಾಳೆ ಪ್ರತಿಭಟನೆ ವಿಚಾರ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್, ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ಮಾಡಲು ಕರೆ ಕೊಟ್ಟಿದ್ದೇವೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಇಲ್ಲಸಲ್ಲದ ಆರೋಪ ಮಾಡಲು ಹೊರಟಿದ್ದಾರೆ. ಹಾಗಾಗಿ ಮುಖಂಡರಿಗೆ ಪ್ರತಿಭಟನೆ ಮಾಡಲು ಕರೆ ಕೊಟ್ಟಿದ್ದೇವೆ. ಇದು ಶಾಂತಿಯುತ ಪ್ರತಿಭಟನೆ ಅಗಿದ್ದು, ಕೆಲ ಕಿಡಿಗೇಡಿಗಳು ಕಲ್ಲೊಡೆಯುವ ಕೆಲಸ ಮಾಡುತ್ತಾರೆ. ಹಾಗಾಗಿ ಸ್ವಲ್ಪ ಹುಷಾರಾಗಿ ಪ್ರತಿಭಟನೆ ಮಾಡಿ ಅಂತ ಹೇಳಿದ್ದೇನೆ. ನಮ್ಮದು ಗಾಂಧಿ ತತ್ವ, ಈ ದೇಶಕ್ಕೆ ಒಂದು ಸಂದೇಶ ಕೊಡಬೇಕು. ಎಐಸಿಸಿಗೆ ಪ್ರತಿಭಟನೆ ಬಗ್ಗೆ ಗೊತ್ತಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ವರದಿ ಕೊಡಬೇಕು, ಹಾಗಾಗಿ ಭೇಟಿ ಮಾಡಿದ್ದೆ ಎಂದರು.

ತುಂಗಭದ್ರಾ ಡ್ಯಾಂ ಗೇಟ್ ಅಳವಡಿಕೆ ಬಗ್ಗೆ ಪ್ರತಿಕ್ರಿಯಿಸಿ, ಗೇಟ್ ಚೆನ್ನಾಗಿ ಅಳವಡಿಕೆ ಮಾಡಿದ್ದಾರೆ. ಬಿಜೆಪಿಯವರಿಗೆ ಇದು ಉತ್ತರವಾಗಿದೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ಕಾರಜೋಳ, ಅಶೋಕ್, ಕುಮಾರಸ್ವಾಮಿ ಏನು ಮಾತಾಡಿದರೋ ಗೊತ್ತಿದೆ ಎಂದರು.

ಸಿದ್ದರಾಮಯ್ಯ ಬೆನ್ನಿಗೆ ನಿಂತ ಕಾಂಗ್ರೆಸ್ ಹೈಕಮಾಂಡ್

ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರಿಂದ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಕಾಂಗ್ರೆಸ್ ಹೈಕಮಾಂಡ್ ನಿಂತಿದೆ. ಸಿದ್ದರಾಮಯ್ಯಗೆ ಕರೆ ಮಾಡಿ, ನಾವು ನಿಮ್ಮ ಜೊತೆಗಿದ್ದೇವೆ. ಕಾನೂನಿನ ಹೋರಾಟ ಮುಂದುವರಿಸಿ ಎಂದು ಹೈಕಮಾಂಡ್ ಧೈರ್ಯ ತುಂಬಿದೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೂಚನೆ ಮೇರೆಗೆ ಕರೆ ಕೇಂದ್ರದ ನಾಯಕರು ಕರೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಆತ್ಮವಿಶ್ವಾಸದಿಂದ ಕಾನೂನು ಹೋರಾಟಕ್ಕೆ ಸಿಎಂ ಸಜ್ಜಾಗಿದ್ದಾರೆ.

Continue Reading

ಕರ್ನಾಟಕ

Congress Protest: ರಾಜ್ಯಪಾಲರ ನಡೆಗೆ ಕೆರಳಿದ ಕಾಂಗ್ರೆಸ್ ಪಡೆ; ನಾಳೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

Congress Protest: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಆ.19ರಂದು ಕಾಂಗ್ರೆಸ್‌ ಪ್ರತಿಭಟನೆ ನಡೆಸಲಿದೆ.

VISTARANEWS.COM


on

Congress Protest
Koo

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಸನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ರಾಜ್ಯಪಾಲರ ವಿರುದ್ಧ ಕೆರಳಿದ ಕಾಂಗ್ರೆಸ್ ಪಡೆ, ನಾಳೆ(ಆ.19) ಬೆಳಗ್ಗೆ 11 ಗಂಟೆಗೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಪಾದಯಾತ್ರೆಯ ಮೂಲಕ ಬೃಹತ್ ಪ್ರತಿಭಟನೆಗೆ (Congress Protest) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದು, ಪ್ರತಿಭಟನೆಯಲ್ಲಿ ಸಚಿವರು ಸ್ಥಳೀಯ ಶಾಸಕರು ಕೆಪಿಸಿಸಿ ಪದಾಧಿಕಾರಿಗಳು ಕಾರ್ಯಕರ್ತರು ಭಾಗಿಯಾಗುವಂತೆ ಸೂಚನೆ ನೀಡಿದ್ದಾರೆ.

ನಾಳೆ ಪ್ರತಿಭಟನೆ ವಿಚಾರ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್, ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ಮಾಡಲು ಕರೆ ಕೊಟ್ಟಿದ್ದೇವೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಇಲ್ಲಸಲ್ಲದ ಆರೋಪ ಮಾಡಲು ಹೊರಟಿದ್ದಾರೆ. ಹಾಗಾಗಿ ಮುಖಂಡರಿಗೆ ಪ್ರತಿಭಟನೆ ಮಾಡಲು ಕರೆ ಕೊಟ್ಟಿದ್ದೇವೆ. ಇದು ಶಾಂತಿಯುತ ಪ್ರತಿಭಟನೆ ಅಗಿದ್ದು, ಕೆಲ ಕಿಡಿಗೇಡಿಗಳು ಕಲ್ಲೊಡೆಯುವ ಕೆಲಸ ಮಾಡುತ್ತಾರೆ. ಹಾಗಾಗಿ ಸ್ವಲ್ಪ ಹುಷಾರಾಗಿ ಪ್ರತಿಭಟನೆ ಮಾಡಿ ಅಂತ ಹೇಳಿದ್ದೇನೆ. ನಮ್ಮದು ಗಾಂಧಿ ತತ್ವ, ಈ ದೇಶಕ್ಕೆ ಒಂದು ಸಂದೇಶ ಕೊಡಬೇಕು. ಎಐಸಿಸಿಗೆ ಪ್ರತಿಭಟನೆ ಬಗ್ಗೆ ಗೊತ್ತಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ವರದಿ ಕೊಡಬೇಕು, ಹಾಗಾಗಿ ಭೇಟಿ ಮಾಡಿದ್ದೆ ಎಂದರು.

ತುಂಗಭದ್ರಾ ಡ್ಯಾಂ ಗೇಟ್ ಅಳವಡಿಕೆ ಬಗ್ಗೆ ಪ್ರತಿಕ್ರಿಯಿಸಿ, ಗೇಟ್ ಚೆನ್ನಾಗಿ ಅಳವಡಿಕೆ ಮಾಡಿದ್ದಾರೆ. ಬಿಜೆಪಿಯವರಿಗೆ ಇದು ಉತ್ತರವಾಗಿದೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ಕಾರಜೋಳ, ಅಶೋಕ್, ಕುಮಾರಸ್ವಾಮಿ ಏನು ಮಾತಾಡಿದರೋ ಗೊತ್ತಿದೆ ಎಂದರು.

ಸಿದ್ದರಾಮಯ್ಯ ಬೆನ್ನಿಗೆ ನಿಂತ ಕಾಂಗ್ರೆಸ್ ಹೈಕಮಾಂಡ್

ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರಿಂದ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಕಾಂಗ್ರೆಸ್ ಹೈಕಮಾಂಡ್ ನಿಂತಿದೆ. ಸಿದ್ದರಾಮಯ್ಯಗೆ ಕರೆ ಮಾಡಿ, ನಾವು ನಿಮ್ಮ ಜೊತೆಗಿದ್ದೇವೆ. ಕಾನೂನಿನ ಹೋರಾಟ ಮುಂದುವರಿಸಿ ಎಂದು ಹೈಕಮಾಂಡ್ ಧೈರ್ಯ ತುಂಬಿದೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೂಚನೆ ಮೇರೆಗೆ ಕರೆ ಕೇಂದ್ರದ ನಾಯಕರು ಕರೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಆತ್ಮವಿಶ್ವಾಸದಿಂದ ಕಾನೂನು ಹೋರಾಟಕ್ಕೆ ಸಿಎಂ ಸಜ್ಜಾಗಿದ್ದಾರೆ.

ಪ್ರಾಸಿಕ್ಯೂಷನ್‌ಗೆ ಕಾಂಗ್ರೆಸ್ ನಾಯಕರ ಆಕ್ಷೇಪಗಳೇನು?

ರಾಜ್ಯಪಾಲರು ಪ್ರಾಸಿಕ್ಯೂಷನ್‌ ನೀಡುವ ಮೊದಲು ಪ್ರಾಥಮಿಕ ತನಿಖೆ ನಡೆಯಬೇಕು. ಭಾರತ ಸರ್ಕಾರ ಸೆಪ್ಟೆಂಬರ್ 3, 2021 ರಲ್ಲಿ 17 ಎ ಸೆಕ್ಷನ್ ಅನ್ನು ಹೇಗೆ ಪರಿಗಣಿಸಬೇಕೆಂದು ನಿಯಮಾವಳಿ ರೂಪಿಸಿದೆ. ಅಂದರೆ ಪೊಲೀಸ್ ಅಧಿಕಾರಿ ಒಂದು ಹುದ್ದೆಯಲ್ಲಿ ಇರುವ ವ್ಯಕ್ತಿಯನ್ನು ತನಿಖೆಗೆ ಒಳಪಡಿಸಲು ಈ ಸೆಕ್ಷನ್ ಅಡಿ ಅನುಮತಿ ಪಡೆಯಬೇಕು. 17 ಎ ಸೆಕ್ಷನ್ ಇರುವುದೇ ಪೊಲೀಸ್ ಅಧಿಕಾರಿಗಳು ಅನುಮತಿ ಪಡೆಯುವ ಸಲುವಾಗಿದೆ. ಪ್ರಸ್ತುತ ಈ ಪ್ರಕರಣದಲ್ಲಿ ಯಾವ ಪೊಲೀಸ್ ಅಧಿಕಾರಿ ಅನುಮತಿ ಪಡೆದಿದ್ದಾರೆ? ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಾಗ ಪ್ರಕರಣದಲ್ಲಿ ತಪ್ಪು ಮಾಡಿರುವವರ ವಿರುದ್ಧ ದಾಖಲೆ ಇರಬೇಕು ಎಂದು ಕಾಂಗ್ರೆಸ್‌ ಆಕ್ಷೇಪ ವ್ಯಕ್ತಪಡಿಸಿದೆ.

ಇದನ್ನೂ ಓದಿ | Physical Abuse: ಮತ್ತೊಂದು ಪೈಶಾಚಿಕ ಕೃತ್ಯ; ಬಸ್‌ನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

ಯಾರ ಮೇಲೆ ಆಪಾದನೆ ಬಂದಿದೆ ಅವರು, ಯಾವ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ ಎಂಬುದನ್ನು ದಾಖಲೆ ಸಮೇತ ಪೊಲೀಸರು ರಾಜ್ಯಪಾಲರಿಗೆ ನೀಡಬೇಕು. ಆಗ ಮಾತ್ರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ಸಾಧ್ಯ. ಭಾರತ ಸರ್ಕಾರವು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮುಂಚೆ ಯಾವ, ಯಾವ ದಾಖಲೆಗಳನ್ನು ಒದಗಿಸಬೇಕು ಎಂಬುದಕ್ಕೆ ಪಟ್ಟಿಯನ್ನು ನೀಡಿದ್ದಾರೆ. ಇವುಗಳಲ್ಲಿ ಒಂದೇ ಒಂದು ದಾಖಲೆಯನ್ನು ರಾಜ್ಯಪಾಲರು ತೋರಿಸಲಿ. ತನಿಖೆಗೆ ಅನುಮತಿ ಕೊಡಿ ಎಂದು ಮನವಿ ಮಾಡುವ ಅಧಿಕಾರ ಇರುವುದು ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಅವರಿಗೆ ಮಾತ್ರ. ಪ್ರಸ್ತುತ ರಾಜ್ಯಪಾಲರು ಅನುಮತಿ ನೀಡಿರುವುದು ಸಂಪೂರ್ಣ ಕಾನೂನುಬಾಹಿರ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

Continue Reading

ಪ್ರಮುಖ ಸುದ್ದಿ

V Somanna : ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದು ಸಂಸದರ ಕಚೇರಿ ಉದ್ಘಾಟಿಸಿದ ವಿ ಸೋಮಣ್ಣ

V Somanna : ತಮಕೂರು ಸಂಸದರಾಗಿರುವ ವಿ. ಸೋಮಣ್ಣ ಅವರು ತುಮಕೂರಿನ ರೈಲ್ವೆ ನಿಲ್ದಾಣ ಬಳಿಯಿರುವ ಹಳೆಯ ಪರಿವೀಕ್ಷಣಾ ಮಂದಿರದ ನಾಲ್ಕು ಕೊಠಡಿಗಳನ್ನು ತಮ್ಮ ಕಚೇರಿ ಉಪಯೋಗಕ್ಕಾಗಿ ಪಡೆದಿದ್ಧರು. ಭಾನುವಾರ ನೂತನ ಕಚೇರಿ ಉದ್ಫಾಟನೆ ಕಾರ್ಯಕ್ರಮವನ್ನು ಅವರು ಹಮ್ಮಿಕೊಂಡಿದ್ದರು. ಕಚೇರಿಯನ್ನು ನವೀಕರಣ ಮಾಡಿ ಪೀಠೋಪಕರಣಗಳು, ಕುರ್ಚಿ ಹಾಗೂ ಮೇಜುಗಳನ್ನು ಹಾಕಿದ್ದರು.

VISTARANEWS.COM


on

V Somanna
Koo

ತುಮಕೂರು : ಇಲ್ಲಿನ ಪರಿವೀಕ್ಷಣಾ ಮಂದಿರದಲ್ಲಿ ತಮಗೆ ನೀಡಲಾಗಿದ್ದ ಕಚೇರಿಯ ಉದ್ಘಾಟನಾ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಏಕಾಏಕಿ ರದ್ದು ಮಾಡಿರುವ ಹೊರತಾಗಿಯೂ ಕೇಂದ್ರ ರೈಲ್ವೆ ಖಾತೆ ಸಹಾಯ ಸಚಿವ ಸೋಮಣ್ಣ (V Somanna) ಅವರು ಅದ್ಧೂರಿ ಕಾರ್ಯಕ್ರಮ ಏರ್ಪಡಿಸಿ ಕಚೇರಿ ಉದ್ಘಾಟಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರದ ವಿರುದ್ಧ ಸೋಮಣ್ಣ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ.

ತಮಕೂರು ಸಂಸದರಾಗಿರುವ ವಿ. ಸೋಮಣ್ಣ ಅವರು ತುಮಕೂರಿನ ರೈಲ್ವೆ ನಿಲ್ದಾಣ ಬಳಿಯಿರುವ ಹಳೆಯ ಪರಿವೀಕ್ಷಣಾ ಮಂದಿರದ ನಾಲ್ಕು ಕೊಠಡಿಗಳನ್ನು ತಮ್ಮ ಕಚೇರಿ ಉಪಯೋಗಕ್ಕಾಗಿ ಪಡೆದಿದ್ಧರು. ಭಾನುವಾರ ನೂತನ ಕಚೇರಿ ಉದ್ಫಾಟನೆ ಕಾರ್ಯಕ್ರಮವನ್ನು ಅವರು ಹಮ್ಮಿಕೊಂಡಿದ್ದರು. ಕಚೇರಿಯನ್ನು ನವೀಕರಣ ಮಾಡಿ ಪೀಠೋಪಕರಣಗಳು, ಕುರ್ಚಿ ಹಾಗೂ ಮೇಜುಗಳನ್ನು ಹಾಕಿದ್ದರು.

ಸಿದ್ಧತೆಗಳನ್ನು ಅವರು ನಡೆಸಿದ ಬಳಿಕ ರಾಜ್ಯ ಸರ್ಕಾರ ಅವರಿಗೆ ನೀಡಲಾಗಿದ್ದ ಪರಿವೀಕ್ಷಣಾ ಮಂದಿರದ ಕಚೇರಿಯನ್ನು ವಾಪಸ್ ಪಡೆದಿತ್ತು. ಇದು ಜಿಲ್ಲೆಯಲ್ಲಿ ಬಿಜೆಪಿ ಹಾಗೂ ಮೈತ್ರಿ ಪಾರ್ಟಿಗಳ ನಡುವಿನ ಸಂಘರ್ಷಕ್ಕೆ ಕಾರಣವಾಯಿತು. ಏಕಾಏಕಿ ಕಚೇರಿ ತೆರೆಯದಂತೆ ಆದೇಶ ಹಿಂಪಡೆದಿದ್ದ ಸರ್ಕಾರದ ವಿರುದ್ಧ ಸ್ಥಳೀಯ ನಾಯಕರು ಕಿಡಿಕಾರಿದ್ದರು. ಆದರೆ, ಭಾನುವಾರ ಸೋಮಣ್ಣ ಅವರು ಎಂದಿನಂತೆ ಕಚೇರಿಯಲ್ಲಿ ಪೂಜೆ ಮಾಡಿಸಿ ಕಾರ್ಯಾರಂಭ ಮಾಡಿದ್ದಾರೆ ವಿ.ಸೋಮಣ್ಣಗೆ ಮಾಜಿ ಸಂಸದ ಜಿಎಸ್ ಬಸವರಾಜ, ಶಾಸಕ ಜಿ. ಬಿ ಜ್ಯೋತಿ ಗಣೇಶ್, ಸುರೇಶ್ ಗೌಡ, ಎಂ.ಟಿ ಕೃಷ್ಣಪ್ಪ, ಮಾಜಿ ಶಾಸಕ ಮಸಾಲೆ ಜಯರಾಮ್ ಸೇರಿದಂತೆ ಹಲವು ನಾಯಕರು ಜತೆಗಿದ್ದರು.

ವಿವಾದದ ನಡುವೆ ನೂತನ ಕಚೇರಿ ಉದ್ಘಾಟನೆ ನಡೆದ ಕಾರಣ ಅಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. 300 ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಭದ್ರತೆ ನೀಡಿದ್ದರು.

ಸುದ್ದಿಗೋಷ್ಠಿ ನಡೆಸಿದ್ದ ಮಿತ್ರ ಪಕ್ಷಗಳು

ಸಚಿವ‌ ವಿ.ಸೋಮಣ್ಣ ಅವರಿಗೆ ಪ್ರವಾಸಿ ಮಂದಿರದಲ್ಲಿದ್ದ ನೀಡಲಾಗಿದ್ದ ಕಚೇರಿಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದ ವಿಚಾರವಾಗಿ ತುಮಕೂರಿನಲ್ಲಿ ಬಿಜೆಪಿ-ಜೆಡಿಎಸ್ ನಾಯಕರ ಜಂಟಿ ಸುದ್ದಿಗೋಷ್ಠಿ ನಡೆಸಿ ಟೀಕಿಸಿದ್ದರು. ಇದು ಹಳೆಯ ಪರಿವೀಕ್ಷಣಾ ಮಂದಿರ. 1941 ರಲ್ಲಿ ಬ್ರಿಟಿಷ್ ಕಾಲದಲ್ಲಿ ನಿರ್ಮಾಣವಾಗಿತ್ತು. ಇದು ಸಂಪೂರ್ಣ ಹಾಳಾಗಿ ಶಿಥೀಲಾವಸ್ಥೆಗೆ ತಲುಪಿತ್ತು. ಆ ಬಳಿಕ ಜಿಲ್ಲಾಧಿಕಾರಿ ಲೋಕಸಭಾ ಸದಸ್ಯರಿಗೆ ಕಚೇರಿ ಮಾಡಿಕೊಳ್ಳಲು ಅನುಮತಿ ನೀಡಿದ್ದರು. ಬಳಿಕ ಸೋಮಣ್ಣ ಅವರು ಕಚೇರಿ ನವೀಕರಣ ಕೂಡ ಮಾಡಿದ್ದರು. ಆ ಬಳಿಕ ಏಕಾಏಕಿ ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಅನುಮತಿ ರದ್ದು ಮಾಡಿದ್ದರು. ಸರ್ಕಾರವೇ ಕೊಟ್ಟು ಅಂತಿಮ ಹಂತದಲ್ಲಿ ರದ್ದು ಮಾಡಿದ್ದು ಯಾಕೆ ಎಂದು ಮಿತ್ರಪಕ್ಷಗಳು ಪ್ರಶ್ನಿಸಿದ್ದವು.

ಇದನ್ನೂ ಓದಿ: TNIT Media Award : ವಿಸ್ತಾರ ನ್ಯೂಸ್​​ಗೆ ಟಿಎನ್​ಐಟಿ ಸೌತ್ ಇಂಡಿಯಾ ಮೀಡಿಯಾ ಅವಾರ್ಡ್ಸ್​​ನ 3 ಪ್ರಶಸ್ತಿಗಳ ಗರಿ

ಗೃಹ ಸಚಿವ ಪರಮೇಶ್ವರ ಅವರು ಆದೇಶ ಮಾಡಿದ್ದು, ಘಟನೆಗೆ ಅವರೇ ನೇರ ಹೊಣೆ. ದ್ವೇಷ ರಾಜಕರಣ ಮಾಡಬೇಡಿ. ಕೇಂದ್ರ ಸಚಿವರನ್ನ ಬಳಸಿಕೊಂಡು ನಾವು ಜಿಲ್ಲೆ ಕಟ್ಟಬೇಕು. ರೈಲ್ವೆ ನೀರು ಮೆಟ್ರೋ ಕೈಗಾರಿಕೆ, ಚೆನೈ ಬೆಂಗಳೂರು ಕಾರಿಡಾರ್ ಸೇರಿದಂತೆ ಸಾಕಷ್ಟು ಯೋಜನೆ ಮಾಡಬೇಕಾಗಿದೆ. ಕಚೇರಿ ವಿಚಾರದಲ್ಲಿ ಕ್ಷುಲ್ಲಕ ರಾಜಕರಣ ಮಾಡಬಾರದು ಎಂದು ಆರೋಪಿಸಿದ್ದರು.

Continue Reading
Advertisement
Road Accident
ದೇಶ4 mins ago

Road Accident: ಭೀಕರ ರಸ್ತೆ ಅಪಘಾತ; ಖಾಸಗಿ ಬಸ್‌-ಟೆಂಪೊ ಡಿಕ್ಕಿಯಾಗಿ 10 ಮಂದಿ ಸಾವು

Sanju Samson
ಕ್ರೀಡೆ6 mins ago

Sanju Samson: ಬಾಸ್ಕೆಟ್‌ ಬಾಲ್‌ ಕೋರ್ಟ್​ನಲ್ಲಿ ಫುಟ್ಬಾಲ್​ ಆಡಿದ ಸಂಜು ಸ್ಯಾಮ್ಸನ್​; ವಿಡಿಯೊ ವೈರಲ್​

Physical Abuse
ಪ್ರಮುಖ ಸುದ್ದಿ17 mins ago

Physical Abuse : 16 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ 69 ವರ್ಷದ ಮುದುಕ

Champai Soren
ರಾಜಕೀಯ28 mins ago

Champai Soren: ಜಾರ್ಖಂಡ್‌ ರಾಜಕೀಯಲ್ಲಿ ಸಂಚಲನ; ಮಾಜಿ ಸಿಎಂ ಚಂಪೈ ಸೊರೆನ್ ಬಿಜೆಪಿ ಸೇರ್ಪಡೆ?

CM Siddaramaiah
ಪ್ರಮುಖ ಸುದ್ದಿ46 mins ago

CM Siddaramaiah : ಮುಡಾ ಆಘಾತದ ನಡುವೆ ಸಿಎಂ ಸಿದ್ದರಾಮಯ್ಯ ನಾಳೆ ಮಂತ್ರಾಲಯಕ್ಕೆ ಭೇಟಿ

Heart attack
ಬೆಳಗಾವಿ49 mins ago

Heart Attack : ಬೈಕ್‌ನಲ್ಲಿ ತೆರಳುತ್ತಿದ್ದಾಗಲೇ ಬಡಿತ ನಿಲ್ಲಿಸಿದ ಹೃದಯ; ಯೋಧನ ಸಾವಿನ ಕೊನೆ ಕ್ಷಣ ಸೆರೆ

MS Dhoni
ಕ್ರೀಡೆ56 mins ago

MS Dhoni: ಅಭಿಮಾನಿಯ ಬೈಕ್​ ಮೇಲೆ ಆಟೋಗ್ರಾಫ್​ ಹಾಕಿದ ಧೋನಿ; ಫೋಟೊ ವೈರಲ್​

Congress Protest
ಕರ್ನಾಟಕ56 mins ago

Congress Protest: ರಾಜ್ಯಪಾಲರ ನಡೆಗೆ ಕೆರಳಿದ ಕಾಂಗ್ರೆಸ್ ಪಡೆ; ನಾಳೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

Physical Abuse
ದೇಶ1 hour ago

Physical Abuse: ಮತ್ತೊಂದು ಪೈಶಾಚಿಕ ಕೃತ್ಯ; ಬಸ್‌ನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

Kannada New Movie vaikuntha samaradhane movie
ಸ್ಯಾಂಡಲ್ ವುಡ್2 hours ago

Kannada New Movie: ಹೊಸ ಪ್ರತಿಭೆಗಳ ಸಿನಿಮಾ ‘ವೈಕುಂಠ ಸಮಾರಾಧನೆʼ; ಕನ್ನಡದಲ್ಲಿ ಹೀಗೊಂದು ಚಿತ್ರ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌