Rishabh Pant: ಕೀಪಿಂಗ್​ ಬಿಟ್ಟು ಬೌಲಿಂಗ್​ ನಡೆಸಿದ ರಿಷಭ್​ ಪಂತ್​; ವಿಡಿಯೊ ವೈರಲ್​ - Vistara News

ಕ್ರಿಕೆಟ್

Rishabh Pant: ಕೀಪಿಂಗ್​ ಬಿಟ್ಟು ಬೌಲಿಂಗ್​ ನಡೆಸಿದ ರಿಷಭ್​ ಪಂತ್​; ವಿಡಿಯೊ ವೈರಲ್​

Rishabh Pant: ಮುಂದಿನ ವರ್ಷ ನಡೆಯುವ ಐಪಿಎಲ್​ ಟರ್ನಿಯಲ್ಲಿ ಪಂತ್​ ಡೆಲ್ಲಿ ತಂಡದ ಬದಲು ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಪರ ಆಡಲಿದ್ದಾರೆ ಎನ್ನಲಾಗಿದೆ. ಪಂತ್​ ಡೆಲ್ಲಿ ತಂಡದ ಪರ ರಿಟೈನ್ ಆಸಕ್ತಿ ಹೊಂದಿಲ್ಲ ಎಂದು ಹೇಳಲಾಗಿದೆ. ಆದರೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

VISTARANEWS.COM


on

Rishabh Pant
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಟೀಮ್​ ಇಂಡಿಯಾದ ವಿಕೆಟ್​ ಕೀಪರ್​ ಕಮ್​ ಬ್ಯಾಟರ್​ ರಿಷಭ್​ ಪಂತ್(Rishabh Pant)​ ಅವರು ದೆಹಲಿ ಪ್ರೀಮಿಯರ್ ಲೀಗ್ 2024 ರ(Delhi Premier League T20 2024) ಉದ್ಘಾಟನಾ ಆವೃತ್ತಿಯ ಪಂದ್ಯದಲ್ಲಿ ಬೌಲಿಂಗ್(rishabh pant bowling)​ ನಡೆಸುವ ಮೂಲಕ ಗಮನಸೆಳೆದಿದ್ದಾರೆ. ಪಂತ್​ ಬೌಲಿಂಗ್​ ನಡೆಸುವ ವಿಡಿಯೊ ವೈರಲ್(viral video)​ ಆಗಿದ್ದು, ಇದು ನೂತನ ಕೋಚ್​ ಗೌತಮ್​ ಗಂಭೀರ್(gautam gambhir)​ ಪ್ರಭಾವ ಎಂದು ನಟ್ಟಿಗರು ಕಮೆಂಟ್​ ಮಾಡಿದ್ದಾರೆ.

ಪಂತ್ ಪಂದ್ಯದ ಅಂತಿಮ ಓವರ್​ ಬೌಲಿಂಗ್​ ನಡೆಸಿದರು. ಎದುರಾಳಿ ಸೌತ್​ ಡೆಲ್ಲಿ ತಂಡಕ್ಕೆ 6 ಎಸೆತಗಳಲ್ಲಿ ಗೆಲುವಿಗೆ ಒಂದು ರನ್​ ಬೇಕಿದ್ದಾಗ ಪಂತ್​ ಸ್ಪಿನ್​ ಬೌಲಿಂಗ್​ ನಡೆಸಿದರು. ಈ ಪಂದ್ಯದಲ್ಲಿ ಪಂತ್​ ತಂಡ 3 ವಿಕೆಟ್​ ಅಂತರದ ಸೋಲು ಕಂಡಿತು. ಮೊದಲು ಬ್ಯಾಟಿಂಗ್​ ನಡೆಸಿದ ಪಂತ್​ ಸಾರಥ್ಯದ ಪುರಾಣಿ ದಿಲ್ಲಿ ಸಿಕ್ಸ್​ ತಂಡ 197 ರನ್​ ಬಾರಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಸೌತ್​ ಡೆಲ್ಲಿ ತಂಡ 7 ವಿಕೆಟ್​ಗೆ 198 ರನ್​ ಬಾರಿಸಿ ಗೆಲುವು ಸಾಧಿಸಿತು.

ಪಂತ್​ ಅವರ ಬೌಲಿಂಗ್​ ಕಂಡ ನೆಟ್ಟಿಗರು ಇದು ನೂತನ ಕೋಚ್​ ಗಂಭೀರ್​ ಅವರ ಪ್ರಭಾವ ಎಂದು ಹೇಳಿದ್ದಾರೆ. ಹೌದು, ಗಂಭೀರ್​ ಭಾರತ ತಂಡದ ಕೋಚ್​ ಆದಾಗಿನಿಂದ ತಂಡ ಆಟಗಾರರು ಕೇಲವ ಬ್ಯಾಟಿಂಗ್​ ಮತ್ತು ಬೌಲಿಂಗ್​ಗೆ ಸೀಮಿತರಲ್ಲ ಎಲ್ಲ ಪಾತ್ರವನ್ನು ನಿಭಾಯಿಸಬೇಕು ಎಂಬ ನಿಯಮ ಜಾರಿಗೆ ತಂದಿದ್ದಾರೆ. ಇದೇ ಕಾರಣಕ್ಕೆ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ರಿಂಕು ಸಿಂಗ್​, ನಾಯಕ ಸೂರ್ಯಕುಮಾರ್​​ ಯಾದವ್ ಕೇವಲ ಬ್ಯಾಟಿಂಗ್​ ಮಾತ್ರವಲ್ಲದೆ​ ಬೌಲಿಂಗ್ ಕೂಡ ನಡೆಸಿದ್ದರು. ಏಕದಿನ ಸರಣಿಯಲ್ಲಿ ನಾಯಕ ರೋಹಿತ್​ ಶರ್ಮ ಕೂಡ ಬೌಲಿಂಗ್​ ನಡೆಸಿದ್ದರು.​ ಇದೀಗ ಪಂತ್​ ಕೂಡ ಬೌಲಿಂಗ್​ ಕಡೆ ಗಮನಹರಿಸಿದಂತಿದೆ.

ಇದನ್ನೂ ಓದಿ Rishabh Pant : ರಿಷಭ್​ ಪಂತ್​ಗೆ ವಿಶೇಷ ಸನ್ಮಾನ ಮಾಡಿದ ಡೆಲ್ಲಿ ಕ್ರಿಕೆಟ್ ಸಂಸ್ಥೆ

ಬ್ಯಾಟಿಂಗ್​ನಲ್ಲಿ ವಿಫಲವಾದ ಪಂತ್​

ಪಂತ್​ ಈ ಪಂದ್ಯದಲ್ಲಿ ಅತ್ಯಂತ ನಿಧಾನಗತಿಯ ಬ್ಯಾಟಿಂಗ್​ ಪ್ರದರ್ಶನ ತೋರಿದರು. 32 ಎಸೆತಗಳಲ್ಲಿ ಕೇವಲ 35 ರನ್ ಗಳಿಸಲಷ್ಟೇ ಶಕ್ತರಾದರು. ರಿಷಭ್ ಪಂತ್ ಅವರನ್ನು ಡಿಡಿಸಿಎ ಅಧ್ಯಕ್ಷ ಮತ್ತು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಸನ್ಮಾನಿಸಿದರು. 2024ರ ಟಿ 20 ವಿಶ್ವಕಪ್ ಗೆಲುವಿನಲ್ಲಿ ಪಂತ್​ ನೀಡಿದ ಕೊಡುಗೆಗಳಿಗಾಗಿ ಅವರನ್ನು ಗೌರವಿಸಲಾಯಿತು.

ಮುಂದಿನ ವರ್ಷ ನಡೆಯುವ ಐಪಿಎಲ್​ ಟರ್ನಿಯಲ್ಲಿ ಪಂತ್​ ಡೆಲ್ಲಿ ತಂಡದ ಬದಲು ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಪರ ಆಡಲಿದ್ದಾರೆ ಎನ್ನಲಾಗಿದೆ. ಪಂತ್​ ಡೆಲ್ಲಿ ತಂಡದ ಪರ ರಿಟೈನ್ ಆಸಕ್ತಿ ಹೊಂದಿಲ್ಲ ಎಂದು ಹೇಳಲಾಗಿದೆ. ಆದರೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಮಹೇಂದ್ರ ಸಿಂಗ್​ ಧೋನಿ ಮುಂದಿನ ವರ್ಷ ಐಪಿಎಲ್​ ಆಡುವುದು ಖಚಿತತೆ ಇಲ್ಲ. ಇಂಪ್ಯಾಕ್ಟ್​ ನಿಯಮ ಇದ್ದರೆ ಆಡುವುದಾಗಿ ಫ್ರಾಂಚೈಸಿ ಮೂಲಗಳು ಈಗಾಗಲೇ ಮಾಹಿತಿ ನೀಡಿದೆ. ಈ ಬಾರಿಯೇ ಧೋನಿ ನಿವೃತ್ತಿಯಾಗಬೇಕಿತ್ತು. ಆದರೆ ಅವರು ಇನ್ನೂ ನಿವೃತ್ತಿ ಪ್ರಕಟಿಸಿಲ್ಲ. ತಂಡದಲ್ಲಿ ಸೂಕ್ತ ವಿಕೆಟ್​ ಕೀಪರ್​ ಇಲ್ಲದ ಕಾರಣ ಧೋನಿ ತಮ್ಮ ಕಾಲು ನೋವಿನ ಮಧ್ಯೆಯೂ ಸಂಪೂರ್ಣವಾಗಿ ಕೀಪಿಂಗ್​ ನಡೆಸಿದ್ದರು. ಧೋನಿ ಸ್ಥಾನಕ್ಕೆ ಪಂತ್​ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯೊಂದು ಕಂಡುಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

Sanju Samson: ಬಾಸ್ಕೆಟ್‌ ಬಾಲ್‌ ಕೋರ್ಟ್​ನಲ್ಲಿ ಫುಟ್ಬಾಲ್​ ಆಡಿದ ಸಂಜು ಸ್ಯಾಮ್ಸನ್​; ವಿಡಿಯೊ ವೈರಲ್​

Sanju Samson: ಸಂಜು ಇದುವರೆಗೆ ಭಾರತ ಪರ 16 ಏಕದಿನ ಕ್ರಿಕೆಟ್​ ಪಂದ್ಯಗಳನ್ನಾಡಿ 510 ರನ್​ ಗಳಿಸಿದ್ದಾರೆ. ಇದರಲ್ಲಿ 1 ಶತಕ ಮತ್ತು 3 ಅರ್ಧಶತಕ ಬಾರಿಸಿದ್ದಾರೆ. 30 ಟಿ20 ಪಂದ್ಯ ಆಡಿ 444 ರನ್​ ಗಳಿಸಿದ್ದಾರೆ. 2 ಅರ್ಧಶತಕ ಒಳಗೊಂಡಿದೆ.

VISTARANEWS.COM


on

Sanju Samson
Koo

ತಿರುವನಂತಪುರಂ: ಟೀಮ್​ ಇಂಡಿಯಾದ(Team India) ಕ್ರಿಕೆಟಿಗ, ಕೇರಳ ಮೂಲದ ಸ್ಟಂಪರ್​ ಸಂಜು ಸ್ಯಾಮ್ಸನ್(Sanju Samson)​ ಅವರು ತಮ್ಮ ತವರಿನಲ್ಲಿ ಸ್ಥಳೀಯರೊಂದಿಗೆ ಬಾಸ್ಕೆಟ್​​ ಬಾಲ್​ ಕೋರ್ಟ್​ನಲ್ಲಿ ಫುಟ್​ಬಾಲ್​ ಆಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ಸಂಜು ಟೀಮ್​ ಇಂಡಿಯಾದ ಅಭ್ಯಾಸದ ಜೆರ್ಸಿಯನ್ನು ತೊಟ್ಟು ತನ್ನ ಸ್ನೇಹಿತರೊಂದಿಗೆ ಬಾಸ್ಕೆಟ್​​​ ಬಾಲ್​ ಕೋರ್ಟ್​ನಲ್ಲಿ ಫುಟ್​ಬಾಲ್​ ಆಡುತ್ತಿರುವ ದೃಶ್ಯವನ್ನು ಈ ವಿಡಿಯೊದಲ್ಲಿ ಕಾಣಬಹುದಾಗಿದೆ. ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ಪರ ಕಣಕ್ಕಿಳಿದಿದ್ದ ಸಂಜು ಸ್ಯಾಮ್ಸನ್​ ನಿರೀಕ್ಷಿತ ಪ್ರದರ್ಶನವನ್ನು ತೋರುವಲ್ಲಿ ವಿಫಲರಾಗಿದ್ದರು. ಹೀಗಾಗಿ ಅವರಿಗೆ ಏಕದಿನ ಸರಣಿಯಿಂದ ಕೈಬಿಡಲಾಗಿತ್ತು. ಟಿ20 ವಿಶ್ವಕಪ್​ ತಂಡದ ಸದ್ಯರಾಗಿದ್ದರೂ ಕೂಡ ಒಂದೇ ಒಂದು ಪಂದ್ಯ ಆಡುವ ಅವಕಾಶ ಸಿಕ್ಕಿರಲಿಲ್ಲ. ಸಂಜು ಅವರು ಬಾಸ್ಕೆಟ್​​ ಬಾಲ್ ಕೋರ್ಟ್​ನಲ್ಲಿ ಫುಟ್​ಬಾಲ್​ ಆಡಿರುವ ಬಗ್ಗೆ ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ.

ಬಡ ಮಕ್ಕಳಿಗೆ ನೆರವು


ವಿಶ್ವದ ಕ್ಯಾಶ್​ ರಿಚ್​ ಲೀಗ್​ಗಳಲ್ಲಿ ಒಂದಾದ ಐಪಿಎಲ್​ನಲ್ಲಿ ರಾಜಸ್ಥಾನ್​ ರಾಯಲ್ಸ್​(rajasthan royals) ಪರ ಆಡುತ್ತಿರುವ ಸಂಜು ಸ್ಯಾಮ್ಸನ್​ ಅವರು ಸದ್ಯ ಗಳಿಸುತ್ತಿರುವ 15 ಕೋಟಿ ವೇತನದಲ್ಲಿ ಯುವ ಮತ್ತು ಪ್ರತಿಭಾವಂತ ಕ್ರಿಕೆಟಿಗರಿಗೆ 2 ಕೋಟಿ ನೆರವಿನ ಹಸ್ತ ಚಾಚುತ್ತಿದ್ದಾರೆ. ಈ ಮೂಲಕ ಯುವ ಪ್ರತಿಭೆಗಳನ್ನು ಬೆಳಕಿಗೆ ತರುವಂತ ಕೆಲಸವನ್ನು ಮಾಡುತ್ತಿದ್ದಾರೆ. ಟೀಮ್​ ಇಂಡಿಯಾದಲ್ಲಿ ತಮಗೆ ಸರಿಯಾದ ಅವಕಾಶ ಸಿಗದಿದ್ದರೂ ಯುವ ಆಟಗಾರರು ಬೆಳಕಿಗೆ ಬರುವಲ್ಲಿ ಶ್ರಮಿಸುತ್ತಿರುವ ಅವರ ಗುಣವನ್ನು ನಿಜಕ್ಕೂ ಮೆಚ್ಚಲೇ ಬೇಕು.

ಸಂಜು ಇದುವರೆಗೆ ಭಾರತ ಪರ 16 ಏಕದಿನ ಕ್ರಿಕೆಟ್​ ಪಂದ್ಯಗಳನ್ನಾಡಿ 510 ರನ್​ ಗಳಿಸಿದ್ದಾರೆ. ಇದರಲ್ಲಿ 1 ಶತಕ ಮತ್ತು 3 ಅರ್ಧಶತಕ ಬಾರಿಸಿದ್ದಾರೆ. 30 ಟಿ20 ಪಂದ್ಯ ಆಡಿ 444 ರನ್​ ಗಳಿಸಿದ್ದಾರೆ. 2 ಅರ್ಧಶತಕ ಒಳಗೊಂಡಿದೆ. ಟೆಸ್ಟ್​ ಇದುವರೆಗೂ ಆಡಿಲ್ಲ. ಹೆಚ್ಚಾಗಿ ಐಪಿಎಲ್​ನಲ್ಲಿಯೇ ಆಡಿದ್ದಾರೆ. 167 ಪಂದ್ಯಗಳಿಂದ 3 ಶತಕ, 25 ಅರ್ಧಶತಕ ಒಳಗೊಂಡಂತೆ 4419 ರನ್​ ಬಾರಿಸಿದ್ದಾರೆ.

ಇದನ್ನೂ ಓದಿ MS Dhoni: ಅಭಿಮಾನಿಯ ಬೈಕ್​ ಮೇಲೆ ಆಟೋಗ್ರಾಫ್​ ಹಾಕಿದ ಧೋನಿ; ಫೋಟೊ ವೈರಲ್​

ಬೌಲಿಂಗ್​ ನಡೆಸಿದ ಪಂತ್​


ವಿಕೆಟ್​ ಕೀಪರ್​ ಕಮ್​ ಬ್ಯಾಟರ್​ ರಿಷಭ್​ ಪಂತ್(Rishabh Pant)​ ಅವರು ದೆಹಲಿ ಪ್ರೀಮಿಯರ್ ಲೀಗ್ 2024 ರ(Delhi Premier League T20 2024) ಉದ್ಘಾಟನಾ ಆವೃತ್ತಿಯ ಪಂದ್ಯದಲ್ಲಿ ಬೌಲಿಂಗ್(rishabh pant bowling)​ ನಡೆಸುವ ಮೂಲಕ ಗಮನಸೆಳೆದಿದ್ದಾರೆ. ಪಂತ್​ ಬೌಲಿಂಗ್​ ನಡೆಸುವ ವಿಡಿಯೊ ವೈರಲ್(viral video)​ ಆಗಿದ್ದು, ಇದು ನೂತನ ಕೋಚ್​ ಗೌತಮ್​ ಗಂಭೀರ್(gautam gambhir)​ ಪ್ರಭಾವ ಎಂದು ನಟ್ಟಿಗರು ಕಮೆಂಟ್​ ಮಾಡಿದ್ದಾರೆ.

ಪಂತ್ ಪಂದ್ಯದ ಅಂತಿಮ ಓವರ್​ ಬೌಲಿಂಗ್​ ನಡೆಸಿದರು. ಎದುರಾಳಿ ಸೌತ್​ ಡೆಲ್ಲಿ ತಂಡಕ್ಕೆ 6 ಎಸೆತಗಳಲ್ಲಿ ಗೆಲುವಿಗೆ ಒಂದು ರನ್​ ಬೇಕಿದ್ದಾಗ ಪಂತ್​ ಸ್ಪಿನ್​ ಬೌಲಿಂಗ್​ ನಡೆಸಿದರು. ಈ ಪಂದ್ಯದಲ್ಲಿ ಪಂತ್​ ತಂಡ 3 ವಿಕೆಟ್​ ಅಂತರದ ಸೋಲು ಕಂಡಿತು. ಮೊದಲು ಬ್ಯಾಟಿಂಗ್​ ನಡೆಸಿದ ಪಂತ್​ ಸಾರಥ್ಯದ ಪುರಾಣಿ ದಿಲ್ಲಿ ಸಿಕ್ಸ್​ ತಂಡ 197 ರನ್​ ಬಾರಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಸೌತ್​ ಡೆಲ್ಲಿ ತಂಡ 7 ವಿಕೆಟ್​ಗೆ 198 ರನ್​ ಬಾರಿಸಿ ಗೆಲುವು ಸಾಧಿಸಿತು.

Continue Reading

ಕ್ರೀಡೆ

MS Dhoni: ಅಭಿಮಾನಿಯ ಬೈಕ್​ ಮೇಲೆ ಆಟೋಗ್ರಾಫ್​ ಹಾಕಿದ ಧೋನಿ; ಫೋಟೊ ವೈರಲ್​

MS Dhoni: ನಿವೃತ್ತಿ ಜೀವನವನ್ನು ಎಂಜಾಯ್‌ ಮಾಡುತ್ತಿರುವ ಧೋನಿ(MS Dhoni) ತಮ್ಮ ತವರಾದ ರಾಂಚಿಯಲ್ಲಿ ಆಗಾಗ ಕಾರು ಮತ್ತು ಬೈಕ್‌ಗಳ ಮೂಲಕ ಸವಾರಿ ಮಾಡುತ್ತಿರುತ್ತಾರೆ.

VISTARANEWS.COM


on

MS Dhoni
Koo

ರಾಂಚಿ: ಮಹೇಂದ್ರ ಸಿಂಗ್​ ಧೋನಿ(MS Dhoni) ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿ ಕೆಲವು ವರ್ಷಗಳು ಕಳೆದರೂ ಅಭಿಮಾನಿಗಳಿಗೆ ಅವರ ಮೇಲಿರುವ ಕ್ರೇಜ್​ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಧೋನಿಯ ಒಂದು ಆಟೋಗ್ರಾಫ್​ಗಾಗಿ ಈಗಲೂ ಅಭಿಮಾನಿಗಳು ಕಾದು ಕುಳಿತಿರುತ್ತಾರೆ.

ನಿವೃತ್ತಿ ಜೀವನವನ್ನು ಎಂಜಾಯ್‌ ಮಾಡುತ್ತಿರುವ ಧೋನಿ(MS Dhoni) ತಮ್ಮ ತವರಾದ ರಾಂಚಿಯಲ್ಲಿ ಆಗಾಗ ಕಾರು ಮತ್ತು ಬೈಕ್‌ಗಳ ಮೂಲಕ ಸವಾರಿ ಮಾಡುತ್ತಿರುತ್ತಾರೆ. ಹೀಗೆ ಜಾಲಿ ರೈಡ್‌ ಹೋಗುತ್ತಿದ್ದ ಸಂದರ್ಭದಲ್ಲಿ ಅಭಿಮಾನಿಯೊಬ್ಬರ ಬಯಕೆಯಂತೆ ಅವರ ಬೈಕ್​ನ(Dhoni signs bike for a fan) ಹೈಡ್​ ಲೈಟ್​ ಬಳಿ ಧೋನಿ ತಮ್ಮ ಸಹಿ ಹಾಕಿ ಆಟೋಗ್ರಾಫ್‌ ನೀಡಿದ್ದಾರೆ. ಈ ಫೋಟೊ ವೈರಲ್‌(viral Photo) ಆಗಿದೆ. ಈ ಫೋಟೊ ಕಂಡ ನೆಟ್ಟಿಗರು ನೀವು ಅದೃಷ್ಟಶಾಲಿ ಎಂದು ಕಮೆಂಟ್‌ ಮಾಡಿದ್ದಾರೆ.

ಮೋಟಾಸೈಕಲ್​​ಗಳು ಹಾಗೂ ಕಾರುಗಳ ಬಗ್ಗೆ ಎಂಎಸ್ ಧೋನಿ ಅವರ ಕ್ರೇಜ್​ ಎಲ್ಲರಿಗೂ ತಿಳಿದಿದೆ. ಅವರು ತಮ್ಮ ಗ್ಯಾರೇಜ್​ನಲ್ಲಿ ಹಲವಾರು ಆಕರ್ಷಕ ವಾಹನಗಳ ಸಂಗ್ರಹವನ್ನು ಹೊಂದಿದ್ದಾರೆ. ಬಿಡುವಿನ ವೇಳೆಯಲ್ಲಿ ಧೋನಿ ತಮಗಿಷ್ಟವಾದ ಕಾರು ಮತ್ತು ಬೈಕ್​ಗಳನ್ನು ಓಡಿಸುವ ಹಲವು ವಿಡಿಯೊಗಳು ವೈರಲ್ ಆಗುತ್ತಿರುತ್ತದೆ. ಅವರ ಅಭಿಮಾನಿಗಳು ಈ ವಿಡಿಯೊವನ್ನು ತಮ್ಮ ಸಾಮಾಜಿಕ ಜಾಲತಾಣದ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

ಕೆಲವು ತಿಂಗಳ ಹಿಂದೆ ಧೋನಿ ಅವರು ಅಭಿಮಾನಿಯ ಬೈಕ್​ ಒಂದಕ್ಕೆ ಆಟೋಗ್ರಾಫ್ ಹಾಕುವ ಮೊದಲು ಬೈಕಿನ ಮುಂಭಾಗದ ಪ್ರದೇಶವನ್ನು ತಮ್ಮ ಟಿಶರ್ಟ್​ನಿಂದ ಒರೆಸಿ ಆ ಬಳಿಕ ಸಹಿ ಹಾಕಿದ್ದರು. ಬಳಿಕ ಧೋನಿ ಈ ಬೈಕ್​ ರೈಡ್​ ಮಾಡಿದ್ದರು.

ಮುಂದಿನ ಆವೃತ್ತಿ ಐಪಿಎಲ್​ನಲ್ಲಿ ಧೋನಿ ಅನ್​ಕ್ಯಾಪ್ಡ್​ ಆಟಗಾರ?


ವರದಿಯೊಂದರ ಪ್ರಕಾರ ಬಿಸಿಸಿಐ(BCCI) ಕನಿಷ್ಠ ಐದು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದ ಆಟಗಾರರನ್ನು ಅನ್‌ಕ್ಯಾಪ್ಡ್ ವಿಭಾಗದಲ್ಲಿ ಇರಿಸುವ ನಿಯಮವನ್ನು ಮರಳಿ ತರಲು ಮುಂದಾಗಿದೆ ಎನ್ನಲಾಗಿದೆ. ಹೀಗಾಗಿ ಧೋನಿ ಅನ್​ಕ್ಯಾಪ್ಡ್​ ಆಟಗಾರರ ಪಟ್ಟಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ Rohit Sharma : ಧೋನಿಯ ನಾಯಕತ್ವದ ದಾಖಲೆಯೊಂದನ್ನು ಮುರಿದ ರೋಹಿತ್ ಶರ್ಮಾ

ಅನ್‌ಕ್ಯಾಪ್ಡ್ ಆಟಗಾರನಿಗೆ ಫ್ರಾಂಚೈಸಿ ಕೇವಲ 4 ಕೋಟಿ ರೂ. ನೀಡಲಿದೆ. ಈ ನಿಯಮ ಜಾರಿಗೆ ಬಂದರೆ ಧೋನಿ ಇದೇ ಮೊತ್ತದಲ್ಲಿ ಚೆನ್ನೈಗಾಗಿ ಆಡುವುದನ್ನು ಮುಂದುವರಿಸಲು ಅನುವು ಮಾಡಿಕೊಡುತ್ತದೆ. ಇದೇ ಮೊತ್ತಕ್ಕೆ ಚೆನ್ನೈ ತಂಡ ಧೋನಿಯನ್ನು ಮತ್ತೆ ರೀಟೈನ್​ ಮಾಡಿಕೊಳ್ಳಬಹುದು. 

ಧೋನಿ(MS Dhoni) ಅವರು ಕಳೆದ ವರ್ಷವೇ ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಒಂದು ವರ್ಷದ ಮಟ್ಟಿಗೆ ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿ ಎಂದೇ ಹೇಳಲಾಗಿತ್ತು. ಆದ್ಯಾಗೂ ಧೋನಿ ತಮ್ಮ ನಿವೃತ್ತಿ ಬಗ್ಗೆ ಯಾವುದೇ ಅಂತಿಮ ನಿರ್ಧಾರ ಪ್ರಕಟಿಸಿಲ್ಲ.

Continue Reading

ಕ್ರೀಡೆ

WTC 2025: ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪ್ರವೇಶಿಸಬೇಕಿದ್ದರೆ ಭಾರತಕ್ಕೆ ಇನೆಷ್ಟು ಗೆಲುವು ಬೇಕು?

WTC 2025: ಭಾರತ ಮುಂದಿನ ತಿಂಗಳು ಬಾಂಗ್ಲಾದೇಶ ವಿರುದ್ಧ 2 ಟೆಸ್ಟ್​ ಪಂದ್ಯವನ್ನಾಡುವ ಮೂಲಕ ಟೆಸ್ಟ್​ ಸರಣಿ ಆರಂಭಿಸಲಿದೆ. ಇದಾದ ಬಳಿಕ ನ್ಯೂಜಿಲ್ಯಾಂಡ್​ ಮತ್ತು ಆಸ್ಟ್ರೇಲಿಯಾ ವಿರುದ್ಧ ಸರಣಿಯನ್ನಾಡಲಿದೆ.

VISTARANEWS.COM


on

Koo

ಮುಂಬಯಿ: ಮುಂದಿನ ವರ್ಷ ನಡೆಯುವ ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್(WTC 2025)​ ಟೂರ್ನಿಯ ಫೈನಲ್​ ಪ್ರವೇಶಿಸಲು ಎಲ್ಲ ತಂಡಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಈಗಾಗಲೇ ಎರಡು ಬಾರಿ ಟೆಸ್ಟ್​ ವಿಶ್ವಕಪ್​ ಫೈನಲ್‌ ತಲುಪಿರುವ ಭಾರತ ತಂಡ(Team India) ಈ ಬಾರಿ ಫೈನಲ್​ ಪ್ರವೇಶಿಸಬೇಕಿದ್ದರೆ ಎಷ್ಟು ಗೆಲುವು ಅಗತ್ಯ ಎನ್ನುವ ಮಾಹಿತಿ ಇಲ್ಲಿದೆ.

10 ಪಂದ್ಯ ಆಡಲಿದೆ ಭಾರತ


ಪೂರ್ವ ವೇಳಾಪಟ್ಟಿಯ ಪ್ರಕಾರ ಭಾರತ ಇನ್ನು 10 ಟೆಸ್ಟ್‌ ಪಂದ್ಯಗಳನ್ನು ಆಡಲಿದೆ. ಇದರಲ್ಲಿ ತವರಿನಲ್ಲಿ ಬಾಂಗ್ಲಾ ವಿರುದ್ಧ 2, ನ್ಯೂಜಿಲ್ಯಾಂಡ್ ವಿರುದ್ಧ 3, ಆಸ್ಟ್ರೇಲಿಯಾ ಪ್ರವಾಸದಲ್ಲಿ 5 ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲಿದೆ. ಈ 10 ಟೆಸ್ಟ್​ ಪಂದ್ಯಗಳ ಪೈಕಿ ಭಾರತ ಕನಿಷ್ಠ 7 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ನೇರವಾಗಿ ಫೈನಲ್​ ಪ್ರವೇಶಿಸಲಿದೆ. ಓ ಮೂಲಕ ಸತತ ಮೂರನೇ ಬಾರಿಗೆ ಫೈನಲ್‌ಗೆ ಅರ್ಹತೆ ಪಡೆದ ಸಾಧನೆ ಮಾಡಲಿದೆ.

ಸದ್ಯ ಭಾರತ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ. ಇದುವರೆಗೆ ಆಡಿದ 9 ಪಂದ್ಯಗಲ್ಲಿ 6 ಜಯ, 2 ಸೋಲು, 1 ಡ್ರಾ ಸಾಧಿಸಿ 68.51 ಗೆಲುವಿನ ಸರಾಸರಿಯೊಂದಿಗೆ ಮೊದಲ ಸ್ಥಾನದಲ್ಲಿದೆ. ಹಾಲಿ ಚಾಂಪಿಯನ್​ ಆಸ್ಟ್ರೇಲಿಯಾ 12 ಪಂದ್ಯಗಳಲ್ಲಿ 8 ಜಯ ದಾಖಲಿಸಿ, 62.5 ಗೆಲುವಿನ ಸರಾಸರಿಯನ್ನು ಹೊಂದಿದ್ದು, ಎರಡನೇ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ ಉಳಿದ ಏಳು ಪಂದ್ಯಗಳಲ್ಲಿ 4 ಪಂದ್ಯ ಗೆದ್ದರೂ ಫೈನಲ್‌ ಪ್ರವೇಶಿಸಲಿದೆ. ಸದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಫೈನಲ್​ ಪ್ರವೇಶದ ತೀವ್ರ ಪೈಪೋಟಿ ಏರ್ಪಟ್ಟಿದೆ.

ಮೂರನೇ ಸ್ಥಾನದಲ್ಲಿರುವ ನ್ಯೂಜಿಲ್ಯಾಂಡ್​ 6 ಪಂದ್ಯಗಳಲ್ಲಿ 3ರಲ್ಲಿ ಗೆದ್ದು 36 ಅಂಕ ಗಳಿಸಿದೆ. ಶ್ರೀಲಂಕಾ 4, ದಕ್ಷಿಣ ಆಫ್ರಿಕಾ ಐದನೇ ಸ್ಥಾನದಲ್ಲಿದೆ. ಈ ತಂಡಗಳಿಗೆ ಫೈನಲ್​ ಪ್ರವೇಶಿಸಬೇಕಿದ್ದರೆ, ಕಿವೀಸ್​ 8 ರಲ್ಲಿ 6, ಪಾಕಿಸ್ತಾನ 9 ರಲ್ಲಿ 7, ಶ್ರೀಲಂಕಾ 9 ರಲ್ಲಿ 6, ಬಾಂಗ್ಲಾದೇಶ 9 ರಲ್ಲಿ 7, ದಕ್ಷಿಣ ಆಫ್ರಿಕಾ 8 ರಲ್ಲಿ 7 ಪಂದ್ಯಗಳನ್ನು ಗೆಲ್ಲಲೇ ಬೇಕು. ಆಗ ಮಾತ್ರ ಫೈನಲ್​ ಪ್ರವೇಶಿಸುವ ಅವಕಾಶ ಲಭಿಸಲಿದೆ.

ಇದನ್ನೂ ಓದಿ Team India: ಆಸೀಸ್​ ಪ್ರವಾಸದಲ್ಲಿ 2 ದಿನಗಳ ಪಿಂಕ್‌ ಬಾಲ್‌ ಅಭ್ಯಾಸ ಪಂದ್ಯ ಆಡಲಿದೆ ಭಾರತ ತಂಡ

ಭಾರತ ಟೆಸ್ಟ್​ ಸರಣಿ ವೇಳಾಪಟ್ಟಿ


ಭಾರತ ಮುಂದಿನ ತಿಂಗಳು ಬಾಂಗ್ಲಾದೇಶ ವಿರುದ್ಧ 2 ಟೆಸ್ಟ್​ ಪಂದ್ಯವನ್ನಾಡುವ ಮೂಲಕ ಟೆಸ್ಟ್​ ಸರಣಿ ಆರಂಭಿಸಲಿದೆ. ಇದಾದ ಬಳಿಕ ನ್ಯೂಜಿಲ್ಯಾಂಡ್​ ಮತ್ತು ಆಸ್ಟ್ರೇಲಿಯಾ ವಿರುದ್ಧ ಸರಣಿಯನ್ನಾಡಲಿದೆ.


ಬಾಂಗ್ಲಾದೇಶ ವಿರುದ್ಧ


ಸೆಪ್ಟೆಂಬರ್​-19 ಮೊದಲ ಟೆಸ್ಟ್​ ಪಂದ್ಯ. ತಾಣ: ಚೆನ್ನೈ

ಸೆಪ್ಟೆಂಬರ್​​-27 ದ್ವಿತೀಯ ಟೆಸ್ಟ್​. ತಾಣ; ಕಾನ್ಪುರ

ನ್ಯೂಜಿಲ್ಯಾಂಡ್​ ವಿರುದ್ಧ


ಅಕ್ಟೋಬರ್​-16 ಮೊದಲ ಟಿ20. ತಾಣ: ಬೆಂಗಳೂರು

ಅಕ್ಟೋಬರ್-24 ದ್ವಿತೀಯ ಟಿ20. ತಾಣ: ಪುಣೆ

ನವೆಂಬರ್​-1 ಮೂರನೇ ಟಿ20. ತಾಣ: ಮುಂಬಯಿ

ಆಸ್ಟ್ರೇಲಿಯಾ ವಿರುದ್ಧ


ಮೊದಲ ಟೆಸ್ಟ್: ನವೆಂಬರ್ 22-26, ಪರ್ತ್

ಎರಡನೇ ಟೆಸ್ಟ್: ಡಿಸೆಂಬರ್ 6-10, ಅಡಿಲೇಡ್ (ಪಿಂಕ್​ ಬಾಲ್​ ಟೆಸ್ಟ್​)

ಮೂರನೇ ಟೆಸ್ಟ್: ಡಿಸೆಂಬರ್ 14-18, ಬ್ರಿಸ್ಬೇನ್

ನಾಲ್ಕನೇ ಟೆಸ್ಟ್: ಡಿಸೆಂಬರ್ 26-30, ಮೆಲ್ಬೋರ್ನ್

ಐದನೇ ಟೆಸ್ಟ್: ಜನವರಿ 3-7, ಸಿಡ್ನಿ

Continue Reading

ಕ್ರೀಡೆ

Youth Olympic 2030: ಯೂತ್​ ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್ ಸೇರ್ಪಡೆಗೆ ಐಸಿಸಿ ಪ್ರಯತ್ನ; ಆತಿಥ್ಯಕ್ಕೆ ಭಾರತ ಸಿದ್ಧತೆ

Youth Olympic 2030: 2030ರ ಯೂತ್​ ಒಲಿಂಪಿಕ್​ ಗೇಮ್ಸ್​ ಆತಿಥ್ಯಕ್ಕೆ ಭಾರತ ಬಿಡ್​ ಸಲ್ಲಿಸಲು ಮುಂದಾಗಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಯೂತ್​ ಒಲಿಂಪಿಕ್ಸ್​ಅನ್ನು ಮುಂಬೈನಲ್ಲಿ ನಡೆಸಲು ಯೋಜನೆ ರೂಪಿಸಿಕೊಂಡಿದೆ ಎನ್ನಲಾಗಿದೆ.

VISTARANEWS.COM


on

Koo

ಮುಂಬಯಿ: 2028ರಲ್ಲಿ ಲಾಸ್​ ಏಂಜಲಿಸ್​ನಲ್ಲಿ(los angeles 2028 olympics) ನಡೆಯುವ​ ಒಲಿಂಪಿಕ್ಸ್​ಗೆ(olympics) ಕ್ರಿಕೆಟ್​ ಸೇರ್ಪಡೆಯಾಗಿರುವುದು ಈಗಾಗಲೇ ತಿಳಿದ ವಿಚಾರ. ಇದೀಗ 2030ರ ಯೂತ್​ ಒಲಿಂಪಿಕ್ಸ್​ಗೂ(Youth Olympic 2030) ಕ್ರಿಕೆಟ್​ ಸೇರ್ಪಡೆಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಕಳೆದ ವರ್ಷ ಮುಂಬೈನಲ್ಲಿ ನಡೆದ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಸಭೆಯಲ್ಲಿ ಕ್ರಿಕೆಟ್​ ಆಟವನ್ನು ಮತ್ತೆ ಒಲಿಂಪಿಕ್ಸ್​ಗೆ ಸೇರ್ಪಡೆಗೊಳಿಸಲಾಗಿತ್ತು. ಇದೀಗ ಯೂತ್​ ಒಲಿಂಪಿಕ್ಸ್​ ಕ್ರಿಕೆಟ್(olympics cricket)​ ಸೇರ್ಪಡೆಯ ಸಂಬಂಧ ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಮಿತಿ (ಐಒಸಿ) ಜತೆಗೆ ಚರ್ಚಿಸಲಾಗುವುದು ಎಂದು ಐಸಿಸಿ(ICC) ಹೇಳಿದೆ.

2030ರ ಯೂತ್​ ಒಲಿಂಪಿಕ್​ ಗೇಮ್ಸ್​ ಆತಿಥ್ಯಕ್ಕೆ ಭಾರತ ಬಿಡ್​ ಸಲ್ಲಿಸಲು ಮುಂದಾಗಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಯೂತ್​ ಒಲಿಂಪಿಕ್ಸ್​ಅನ್ನು ಮುಂಬೈನಲ್ಲಿ ನಡೆಸಲು ಯೋಜನೆ ರೂಪಿಸಿಕೊಂಡಿದೆ ಎನ್ನಲಾಗಿದೆ. ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಮಿತಿಯ ಸದಸ್ಯೆಯಾಗಿರುವ ನೀತಾ ಅಂಬಾನಿ ಅವರು ಈಗಾಗಲೇ ಒಲಿಂಪಿಕ್ಸ್​ ವಿಚಾರದಲ್ಲಿ ಹಲವು ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಹೀಗಾಗಿ ಯೂತ್​ ಒಲಿಂಪಿಕ್ಸ್​ಗೆ ಭಾರತ ಆತಿಥ್ಯ ವಹಿಸಿಕೊಳ್ಳುವಲ್ಲಿ ಮಹತ್ವದ ಪಾತ್ರವಹಿಸುವ ಸಾಧ್ಯತೆ ಇದೆ.

ಒಂದು ವೇಳೆ ಭಾರತಕ್ಕೆ ಯೂತ್​ ಒಲಿಂಪಿಕ್ಸ್​ ಆತಿಥ್ಯ ಲಭಿಸಿದರೆ, ಬಿಸಿಸಿಐ ಮಧ್ಯವಸ್ಥಿಕೆಯಿಂದ ಕ್ರಿಕೆಟ್​ ಸೇರ್ಪಡೆಗೊಳ್ಳುವುದು ಬಹುತೇಕ ಖಚಿತ. ಯೂತ್​ ಒಲಿಂಪಿಕ್ಸ್​ಗೆ ಕ್ರಿಕೆಟ್​ ಸೇರ್ಪಡೆಗೊಂಡರೆ, ಜಾಗತಿಕವಾಗಿ ತಳಮಟ್ಟದಿಂದ ಕ್ರಿಕೆಟ್​ ಅಭಿವೃದ್ಧಿಗೂ ನೆರವಾಗಲಿದೆ. ಯೂತ್​ ಒಲಿಂಪಿಕ್ಸ್​ 15ರಿಂದ 18 ವಯೋಮಿತಿ ಕ್ರೀಡಾಪಟುಗಳಿಗೆ ಸೀಮಿತವಾಗಿದೆ. ಇದಕ್ಕೆ ಕ್ರಿಕೆಟ್​ ಸೇರ್ಪಡೆಯಾದರೆ, ಯುವ ಕ್ರಿಕೆಟಿಗರಿಗೆ ಜಾಗತಿಕ ಮಟ್ಟದ ವೇದಿಕೆ ಲಭಿಸಿದಂತಾಗುತ್ತದೆ.

ಇದನ್ನೂ ಓದಿ Virat Kohli: ಕೊಹ್ಲಿಯ ಮೊದಲ ಅಂತಾರಾಷ್ಟ್ರೀಯ ಪಂದ್ಯಕ್ಕೆ ತುಂಬಿತು 16 ವರ್ಷ

ಕಳೆದ ವರ್ಷ ಚೀನದ ಹ್ಯಾಂಗ್‌ಝೂನಲ್ಲಿ ನಡೆದಿದ್ದ 19ನೇ ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಮತ್ತು ಪುರುಷರ ಕ್ರಿಕೆಟ್​ ಟೂರ್ನಿ ನಡೆಸಿ ಯುಶಸ್ಸು ಕಂಡಿತ್ತು. ಟಿ20 ಮಾದರಲ್ಲಿ ಪಂದ್ಯಾವಳಿ ನಡೆದಿತ್ತು. ಲಾಸ್​ ಏಂಜಲಿಸ್ ಒಲಿಂಪಿಕ್ಸ್​ನಲ್ಲಿಯೂ ಟಿ20 ಮಾದರಿಯಲ್ಲೇ ಟೂರ್ನಿ ನಡೆಯಲಿದೆ.

ಒಲಿಂಪಿಕ್ಸ್‌ನಲ್ಲಿ ಒಂದು ಬಾರಿ ನಡೆದಿತ್ತು ಕ್ರಿಕೆಟ್​

ಒಲಿಂಪಿಕ್ಸ್‌ನಲ್ಲಿ ಇಷ್ಟರವರೆಗೆ ಒಮ್ಮೆ ಮಾತ್ರ ಕ್ರಿಕೆಟ್‌ ಸ್ಪರ್ಧೆ ನಡೆದಿದೆ. 1896ರ ಉದ್ಘಾಟನ ಏಥೆನ್ಸ್‌ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ ಸ್ಪರ್ಧೆಯನ್ನು ಸೇರ್ಪಡೆಗೊಳಿಸಲು ಯೋಜನೆ ಹಾಕಿಕೊಳ್ಳಲಾಗಿತ್ತು. ಆದರೆ ಭಾಗವಹಿಸುವ ತಂಡಗಳ ಕೊರತೆಯಿಂದ ರದ್ದು ಮಾಡಲಾಗಿತ್ತು. ಆದರೆ ನಾಲ್ಕು ವರ್ಷಗಳ ಬಳಿಕ 1900ರ ಪ್ಯಾರಿಸ್‌ ಒಲಿಪಿಕ್ಸ್‌ನಲ್ಲಿ ಕ್ರಿಕೆಟ್‌ ಸ್ಪರ್ಧೆ ಮೊದಲ ಬಾರಿ ಜರಗಿದೆ. ಗ್ರೇಟ್‌ ಬ್ರಿಟನ್‌ ಮತ್ತು ಆತಿಥೇಯ ಫ್ರಾನ್ಸ್‌ ಮಾತ್ರ ಸ್ಪರ್ಧಿಸಿದ್ದು, ಬ್ರಿಟನ್‌ ಚಿನ್ನ ಜಯಿಸಿತ್ತು.ಸೈಂಟ್‌ ಲೂಯಿಸ್‌ನಲ್ಲಿ 1904ರಲ್ಲಿ ನಡೆದ ಒಲಿಂಪಿಕ್ಸನಲ್ಲಿ ಕ್ರಿಕೆಟ್‌ ಸ್ಪರ್ಧೆಗೆ ಸಿದ್ಧಥೆ ನಡೆಸಲಾಗಿದ್ದರೂ ಅಂತಿಮವಾಗಿ ರದ್ದುಗೊಂಡಿತ್ತು. ಆ ಬಳಿಕ ಯಾವುದೇ ಒಲಿಂಪಿಕ್ಸ್‌ನಲ್ಲೂ ಕ್ರಿಕೆಟ್‌ ಸ್ಪರ್ಧೆ ನಡೆದಿಲ್ಲ.

Continue Reading
Advertisement
RRB Recruitment 2024
ಉದ್ಯೋಗ3 mins ago

RRB Recruitment 2024: ರೈಲ್ವೇ ಇಲಾಖೆಯಿಂದ 7,951 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಹೀಗೆ ಅಪ್ಲೈ ಮಾಡಿ

Kangana Ranaut Says She REJECTED Films with Ranbir Kapoor
ಬಾಲಿವುಡ್19 mins ago

Kangana Ranaut: ಖಾನ್‌ಗಳ ಸಿನಿಮಾ ಆಫರ್‌ ಎಂದಿಗೂ ಒಪ್ಪಲ್ಲ ಎಂದ ಕಂಗನಾ

Actor Mohanlal hospitalised due to breathing issues
ಮಾಲಿವುಡ್28 mins ago

Actor Mohanlal: ಮಲಯಾಳಂ ನಟ ಮೋಹನ್‌ಲಾಲ್ ಆಸ್ಪತ್ರೆಗೆ ದಾಖಲು 

Lightning Strike
ದೇಶ34 mins ago

Lightning Strike: ಮಿಂಚು ಹೊಡೆದು 9 ಸಾವು; 12 ಮಂದಿಗೆ ಗಾಯ

ಕರ್ನಾಟಕ36 mins ago

Namma Metro: ನಾಗಸಂದ್ರ-ಮಾದಾವರ ಮಾರ್ಗದಲ್ಲಿ ಮೆಟ್ರೋ ರೈಲು ಪರೀಕ್ಷಾರ್ಥ ಸಂಚಾರ; ಶೀಘ್ರದಲ್ಲೇ ವಾಣಿಜ್ಯ ಸೇವೆ

Vinesh Phogat
ಕ್ರೀಡೆ44 mins ago

Vinesh Phogat: ಸನ್ಮಾನ ಸಮಾರಂಭದಲ್ಲಿ ದಿಢೀರ್​ ಪ್ರಜ್ಞೆ ತಪ್ಪಿ ಬಿದ್ದ ವಿನೇಶ್​ ಪೋಗಟ್​

ಪ್ರಮುಖ ಸುದ್ದಿ2 hours ago

Doctor Assaulted : ಸುರಕ್ಷತೆಗಾಗಿ ವೈದ್ಯರ ಪ್ರತಿಭಟನೆ ನಡೆಯುತ್ತಿರುವ ನಡುವೆಯೇ ವೈದ್ಯೆಯ ಮೇಲೆ ಹಲ್ಲೆ!

Physical Abuse
ಕರ್ನಾಟಕ2 hours ago

Physical Abuse: ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಎಚ್ಎಸ್ಆರ್ ಲೇಔಟ್‌ ಠಾಣೆಯಲ್ಲಿ ಎಫ್ಐಆರ್ ದಾಖಲು

Road Accident
ದೇಶ2 hours ago

Road Accident: ಭೀಕರ ರಸ್ತೆ ಅಪಘಾತ; ಖಾಸಗಿ ಬಸ್‌-ಟೆಂಪೊ ಡಿಕ್ಕಿಯಾಗಿ 10 ಮಂದಿ ಸಾವು

Sanju Samson
ಕ್ರೀಡೆ2 hours ago

Sanju Samson: ಬಾಸ್ಕೆಟ್‌ ಬಾಲ್‌ ಕೋರ್ಟ್​ನಲ್ಲಿ ಫುಟ್ಬಾಲ್​ ಆಡಿದ ಸಂಜು ಸ್ಯಾಮ್ಸನ್​; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌