Actor Mohanlal: ಮಲಯಾಳಂ ನಟ ಮೋಹನ್‌ಲಾಲ್ ಆಸ್ಪತ್ರೆಗೆ ದಾಖಲು  - Vistara News

ಮಾಲಿವುಡ್

Actor Mohanlal: ಮಲಯಾಳಂ ನಟ ಮೋಹನ್‌ಲಾಲ್ ಆಸ್ಪತ್ರೆಗೆ ದಾಖಲು 

Actor Mohanlal: ಐದು ದಿನಗಳವರೆಗೆ ವಿಶ್ರಾಂತಿಗೆ ತಿಳಿಸಲಾಗಿದೆ. ಸಾರ್ವಜನಿಕ ಭೇಟಿ ತಪ್ಪಿಸಲು ಮತ್ತು ಸೂಚಿಸಲಾದ ಔಷಧಿ ಸೂಚನೆ ಅನುಸರಿಸಲು ಸಲಹೆ ನೀಡಲಾಗಿದೆ. ಆಸ್ಪತ್ರೆಯ ಅಧಿಕೃತ ಹೇಳಿಕೆಯನ್ನು ಶ್ರೀಧರ್ ಪಿಳ್ಳೈ ಹಂಚಿಕೊಂಡಿದ್ದಾರೆ.

VISTARANEWS.COM


on

Actor Mohanlal hospitalised due to breathing issues
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಿರಿಯ ನಟ ಮೋಹನ್‌ಲಾಲ್ (Actor Mohanlal) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಜ್ವರ, ಉಸಿರಾಟದ ತೊಂದರೆ ಮತ್ತು ಸ್ನಾಯು ನೋವು ಸೇರಿದಂತೆ ಆರೋಗ್ಯ ತೊಂದರೆ ಕಾರಣ ಅವರನ್ನು ಕೊಚ್ಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯಕೀಯ ಹೇಳಿಕೆಯ ಪ್ರಕಾರ, ನಟನಿಗೆ ಶ್ವಾಸಕೋಶದ ವೈರಲ್ ಸೋಂಕು ಇದೆ ಎಂದು ಹೇಳಿರುವುದಾಗಿ ವರದಿಯಾಗಿದೆ.

ಐದು ದಿನಗಳವರೆಗೆ ವಿಶ್ರಾಂತಿಗೆ ತಿಳಿಸಲಾಗಿದೆ. ಸಾರ್ವಜನಿಕ ಭೇಟಿ ತಪ್ಪಿಸಲು ಮತ್ತು ಸೂಚಿಸಲಾದ ಔಷಧಿ ಸೂಚನೆ ಅನುಸರಿಸಲು ಸಲಹೆ ನೀಡಲಾಗಿದೆ. ಆಸ್ಪತ್ರೆಯ ಅಧಿಕೃತ ಹೇಳಿಕೆಯನ್ನು ಶ್ರೀಧರ್ ಪಿಳ್ಳೈ ಹಂಚಿಕೊಂಡಿದ್ದಾರೆ.

‘ಎಲ್ 2: ಎಂಪುರಾನ್’ ಮತ್ತು ಅವರ ನಿರ್ದೇಶನದ ಚೊಚ್ಚಲ ‘ಬರೋಜ್’ ನ ಪೋಸ್ಟ್-ಪ್ರೊಡಕ್ಷನ್ ಚಿತ್ರೀಕರಣವನ್ನು ಮುಗಿಸಿದ ನಂತರ, ಮೋಹನ್ ಲಾಲ್ ಗುಜರಾತ್‌ನಿಂದ ಕೊಚ್ಚಿಗೆ ಮರಳಿದ್ದರು. ಅಲ್ಲಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತು ಎನ್ನಲಾಗಿದೆ. ಇತ್ತೀಚಿನ ವೈದ್ಯಕೀಯ ವರದಿಗಳ ಪ್ರಕಾರ ನಟ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: Kannada New Movie: ಹೊಸ ಪ್ರತಿಭೆಗಳ ಸಿನಿಮಾ ‘ವೈಕುಂಠ ಸಮಾರಾಧನೆʼ; ಕನ್ನಡದಲ್ಲಿ ಹೀಗೊಂದು ಚಿತ್ರ!

ಸಿನಿಮಾ ವಿಚಾರಕ್ಕೆ ಬಂದರೆ ʻಬರೋಜ್ʼ ಚಿತ್ರವು ಅಕ್ಟೋಬರ್ 2 ರಂದು ಬಿಡುಗಡೆಯಾಗಲಿದೆ. ಇದು ನಟನ ಮೊದಲ ನಿರ್ದೇಶನದ ಸಿನಿಮಾ. ಈ ಚಲನಚಿತ್ರವನ್ನು ಆರಂಭದಲ್ಲಿ ಮಾರ್ಚ್ 28, 2024 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು.

ಬರೋಜ್ʼ ಸಿನಿಮಾವನ್ನು ಮೋಹನ್ ಲಾಲ್‌ ಅವರೇ ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ನಾಯಕರಾಗಿಯೂ ನಟಿಸಿದ್ದಾರೆ. ಬರೋಜ್ 2018ರಲ್ಲಿ ಘೋಷಿಸಲಾಯಿತು. ಅಂತಿಮವಾಗಿ ಐದು ವರ್ಷಗಳ ನಂತರ ಸೆಟ್ಟೇರಿದೆ. ಮೈ ಡಿಯರ್ ಕುಟ್ಟಿಚತನ್ ಚಲನಚಿತ್ರ ನಿರ್ಮಾಪಕ ಜಿಜೋ ಪುನ್ನೂಸ್ ಆರಂಭದಲ್ಲಿ ಚಿತ್ರದ ನಿರ್ದೇಶಕ ಎಂದು ಹೇಳಲಾಗಿತ್ತು. 3ಡಿ ಫ್ಯಾಂಟಸಿ ಈ ಸಿನಿಮಾದ ಛಾಯಾಗ್ರಹಣವನ್ನು ಸಂತೋಷ್ ಶಿವನ್ ನಿರ್ವಹಿಸುತ್ತಿದ್ದರೆ, ಲಿಡಿಯನ್ ನಾದಸ್ವರನ್ ಮತ್ತು ಮಾರ್ಕ್ ಕಿಲಿಯನ್ ಸಂಗೀತ ಸಂಯೋಜಿಸಿದ್ದಾರೆ. ಇದನ್ನು ಆಶೀರ್ವಾದ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಆಂಟೋನಿ ಪೆರುಂಬವೂರ್ ನಿರ್ಮಿಸುತ್ತಿದ್ದಾರೆ. 

ಮಾಲಿವುಡ್‌ ಸ್ಟಾರ್‌ ಮೋಹನ್ ಲಾಲ್ (Actor Mohan Lal) ಅವರಿಗೆ ನಂದಕಿಶೋರ್ ಸಿನಿಮಾ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ಸಿನಿಮಾಗೆ ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದೆ. ಈ ಬಹುನಿರೀಕ್ಷಿತ ಚಿತ್ರದ ಶೂಟಿಂಗ್​ ಆರಂಭ ಆಗಿದೆ. ಈ ಚಿತ್ರದ ಪಾತ್ರವರ್ಗ ಗಮನ ಸೆಳೆಯುತ್ತಿದೆ. ಈಗ ರಾಗಿಣಿ ದ್ವಿವೇದಿ (Ragini Dwivedi) ಅವರು ನಟ ಮೋಹನ್​ಲಾಲ್​ ಜತೆ ನಟಿಸುತ್ತಿದ್ದಾರೆ. ಮೋಹನ್​ಲಾಲ್​ ಅಭಿನಯದ ‘ವೃಷಭ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.


ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಾಲಿವುಡ್

Manjummel Boys: ʻಮಂಜುಮ್ಮೇಲ್ ಬಾಯ್ಸ್ʼ ವಿರುದ್ಧ ಗೆದ್ದ ಇಳಯರಾಜ..!

Manjummel Boys: ಮಂಜುಮ್ಮೇಲ್ ಬಾಯ್ಸ್’ ಕಥೆ ಸಾಗೋದು ಗುಣ ಗುಹೆಯಲ್ಲಿ. ಹೀಗಾಗಿ, ‘ಗುಣ’ ಚಿತ್ರದಲ್ಲಿ ಬಳಕೆ ಆದ ‘ಕಣ್ಮಣಿ..’ ಸಾಂಗ್​ನ ತಂಡದವರು ಬಳಕೆ ಮಾಡಿಕೊಂಡಿದ್ದರು. ಇದಕ್ಕೆ ಮ್ಯೂಸಿಕ್ ಕಂಪನಿಯಿಂದ ಒಪ್ಪಿಗೆ ಕೂಡ ಪಡೆದಿದ್ದರು. ಆದರೆ, ಇವರು ಇಳಯರಾಜ ಅವರ ಒಪ್ಪಿಗೆ ಪಡೆದಿರಲಿಲ್ಲ.

VISTARANEWS.COM


on

Manjummel Boysproducers pay Rs 60 lakh as compensation to Ilaiyaraaja
Koo

ಬೆಂಗಳೂರು: ʼಮಂಜುಮ್ಮೇಲ್ ಬಾಯ್ಸ್’ (Manjummel Boys) ಮಲಯಾಳಂ ಸಿನಿಮಾ ಹಿಟ್‌ ಕಂಡಿದೆ. ಸಾರ್ವಕಾಲಿಕ ಅತಿ ಹೆಚ್ಚು ಹಣ ಗಳಿಸಿದ ಮಲಯಾಳಂ ಚಿತ್ರವಾಗಿ ಹೊರಹೊಮ್ಮಿದೆ. . ಈ ಚಿತ್ರದ ನಿರ್ಮಾಪಕರಿಗೆ ತೊಂದರೆ ಎದುರಾಗಿತ್ತು. ಈ ಸಿನಿಮಾ ತಂಡದ ವಿರುದ್ಧ ಇಳಯರಾಜ ಅವರು ಕೇಸ್ ಹಾಕಿದ್ದರು. ಈ ಕೇಸ್​ನಲ್ಲಿ ಅವರಿಗೆ ಜಯ ಆಗಿದೆ.

ಮಂಜುಮ್ಮೆಲ್ ಬಾಯ್ಸ್’ ನಿರ್ಮಾಪಕರಾದ ಸೌಬಿನ್ ಶಾಹಿರ್, ಬಾಬು ಶಾಹಿರ್ ಮತ್ತು ಶಾನ್ ಆಂಟೋನಿ ಅವರು ಚಿತ್ರದಲ್ಲಿನ ‘ಗುಣ’ ಚಿತ್ರದ ‘ಕಣ್ಮಣಿ ಅನ್ಬೋಡು’ ಹಾಡನ್ನು ಅನಧಿಕೃತವಾಗಿ ಬಳಸಿದ್ದಕ್ಕಾಗಿ ಸಂಯೋಜಕ ಇಳಯರಾಜ ಅವರಿಗೆ 60 ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡಿದ್ದಾರೆ ಎಂದು ವರದಿಯಾಗಿದೆ.

‘ಮಂಜುಮ್ಮೇಲ್ ಬಾಯ್ಸ್’ ಕಥೆ ಸಾಗೋದು ಗುಣ ಗುಹೆಯಲ್ಲಿ. ಹೀಗಾಗಿ, ‘ಗುಣ’ ಚಿತ್ರದಲ್ಲಿ ಬಳಕೆ ಆದ ‘ಕಣ್ಮಣಿ..’ ಸಾಂಗ್​ನ ತಂಡದವರು ಬಳಕೆ ಮಾಡಿಕೊಂಡಿದ್ದರು. ಇದಕ್ಕೆ ಮ್ಯೂಸಿಕ್ ಕಂಪನಿಯಿಂದ ಒಪ್ಪಿಗೆ ಕೂಡ ಪಡೆದಿದ್ದರು. ಆದರೆ, ಇವರು ಇಳಯರಾಜ ಅವರ ಒಪ್ಪಿಗೆ ಪಡೆದಿರಲಿಲ್ಲ. ಈ ಕಾರಣದಿಂದಲೇ ಇಳಯರಾಜ ಅವರು ಕೋರ್ಟ್​ನಲ್ಲಿ ಕೇಸ್ ಹಾಕಿ, ತಂಡದವರು ಎರಡು ಕೋಟಿ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದರು.

ʻಮ್ಯೂಸಿಕ್ ಕಂಪನಿಯಿಂದ ಈ ಹಾಡಿನ ಬಳಕೆಗೆ ಹಕ್ಕನ್ನು ಪಡೆದಿದ್ದೇವೆ’ ಎಂದು ಸಿನಿಮಾ ತಂಡದ ಪರ ವಕೀಲರು ಹೇಳಿದರು. ಇದಕ್ಕೆ ಪ್ರತಿವಾದ ಮಂಡಿಸಿದ ಇಳಯರಾಜ ಪರ ವಕೀಲರು, ‘ಇಳಯರಾಜ ಅವರು ಮಾಡಿದ ಕೆಲಸಗಳಿಗೆ ಅವರು ಕೂಡ ಹಕ್ಕನ್ನು ಹೊಂದಿದ್ದಾರೆ’ ಎಂದರು. ಹೀಗಾಗಿ, ಇಳಯರಾಜ ಅವರು ಈ ಹಾಡನ್ನು ಬಳಸಲು ‘ಮಂಜುಮ್ಮೇಲ್ ಬಾಯ್ಸ್’ ತಂಡಕ್ಕೆ ಯಾವುದೇ ಒಪ್ಪಿಗೆ ನೀಡಿರಲಿಲ್ಲ.

ಇದನ್ನೂ ಓದಿ: Duniya Vijay- Ganesh: ದುನಿಯಾ ವಿಜಯ್-ಗಣೇಶ್ ಕಾಂಬಿನೇಷನ್ ಸಿನಿಮಾ ಬರೋದು ಪಕ್ಕಾ; ʻಭೀಮʼನದ್ದೇ ಆ್ಯಕ್ಷನ್‌ ಕಟ್‌!

ಸೌಬಿನ್ ಶಬೀರ್ ಸಿನಿಮಾ ನಿರ್ಮಾಣ ಮಾಡಿದ್ದಾರೆ. 2006ರಲ್ಲಿ ಕೇರಳದಿಂದ ತಮಿಳುನಾಡಿನ ಕೊಡೈಕೆನಲ್​ಗೆ ಫ್ರೆಂಡ್ಸ್ ಗ್ರೂಪ್ ಒಂದು ಟ್ರಿಪ್ ಹೊರಡುತ್ತದೆ. ʻಡೆವಿಲ್ಸ್ ಕಿಚನ್ʼ ಹೆಸರಿನ ಗುಹೆಯಲ್ಲಿ ಸುಭಾಷ್ ಎಂಬಾತ ಬೀಳುತ್ತಾನೆ. ಆತನ ರಕ್ಷಿಸಲು ಫ್ರೆಂಡ್ಸ್ ಪ್ರಯತ್ನಿಸುತ್ತಾರೆ. ಇದರಲ್ಲಿ ಸಕ್ಸೆಸ್‌ ಆಗ್ತಾರಾ? ಇಲ್ಲವಾ ಎಂಬುದೇ ಕಥೆ. ಮಲಯಾಳಂ ಮಾತ್ರವಲ್ಲದೆ ತಮಿಳುನಾಡಿನಲ್ಲೂ ಸಿನಿಮಾ ಒಳ್ಳೆಯ ಗಳಿಕೆ ಮಾಡುತ್ತಿದೆ. ಈ ಚಿತ್ರ ತಮಿಳಿಗೂ ಡಬ್ ಆಗಿ ರಿಲೀಸ್ ಆಗಿದೆ.ಸೌಬಿನ್ ಶಾಹಿರ್, ಶ್ರೀನಾಥ್ ಭಾಸಿ, ಬಾಲು ವರ್ಗೀಸ್, ಗಣಪತಿ ಮತ್ತು ಜೀನ್ ಪಾಲ್ ಲಾಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಚಿದಂಬರಂ ಪೊದುವಾಲ್ ಅವರ ಎರಡನೇ ನಿರ್ದೇಶನ ಸಿನಿಮಾ ಇದು. ಈ ಮುಂಚೆ ʻಜೇನ್‌ಮ್ಯಾನ್ʼ ಹೆಚ್ಚು ಮೆಚ್ಚುಗೆ ಪಡೆದುಕೊಂಡಿತ್ತು. ಸುಶಿನ್ ಶ್ಯಾಮ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

Continue Reading

South Cinema

Filmfare South 2024: ಫಿಲ್ಮ್‌ಫೇರ್ ಅವಾರ್ಡ್ಸ್ ಸೌತ್; ತೆಲುಗು, ತಮಿಳು ಹಾಗೂ ಮಲಯಾಳಂ ಪ್ರಶಸ್ತಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ

Filmfare South 2024: 2023ರಲ್ಲಿ ತೆರೆಕಂಡ ದಕ್ಷಿಣ ಭಾರತದ ಸಿನಿಮಾಗಳಿಗೆ ಫಿಲ್ಮ್‌ಫೇರ್ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಕೆಲವು ಸಿನಿಮಾಗಳು ದಕ್ಷಿಣ ಭಾರತದಲ್ಲಿ ಸಿನಿಪ್ರಿಯರ ಮನಗೆದ್ದಿದೆ. ಅಂತಹ ಸಿನಿಮಾಗಳಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

VISTARANEWS.COM


on

Filmfare South 2024 mollywood tollywood 69th Filmfare Awards
Koo

ಬೆಂಗಳೂರು: 2023ರಲ್ಲಿ ತೆರೆಕಂಡು ಜನಪ್ರಿಯತೆ ಗಳಿಸಿದ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯ ಸಿನಿಮಾಗಳಿಗೆ ಪ್ರಶಸ್ತಿಯನ್ನು ನೀಡಲಾಗಿದೆ. 2023ರಲ್ಲಿ ತೆರೆಕಂಡ ದಕ್ಷಿಣ ಭಾರತದ ಸಿನಿಮಾಗಳಿಗೆ ಫಿಲ್ಮ್‌ಫೇರ್ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಕೆಲವು ಸಿನಿಮಾಗಳು ದಕ್ಷಿಣ ಭಾರತದಲ್ಲಿ ಸಿನಿಪ್ರಿಯರ ಮನಗೆದ್ದಿದೆ. ಅಂತಹ ಸಿನಿಮಾಗಳಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಫಿಲ್ಮ್‌ಫೇರ್ ತೆಲುಗು ಪ್ರಶಸ್ತಿ ಗೆದ್ದವರ ಸಂಪೂರ್ಣ ಪಟ್ಟಿ

ಅತ್ಯುತ್ತಮ ಸಿನಿಮಾ – ಬಳಗಂ
ಅತ್ಯುತ್ತಮ ನಿರ್ದೇಶಕ – ವೇಣು ಎಲ್ದಂಡಿ ( ಬಳಗಂ)
ಅತ್ಯುತ್ತಮ ಸಿನಿಮಾ (ಕ್ರಿಟಿಕ್ಸ್)- ಬೇಬಿ ( ಸಾಯಿ ರಾಜೇಶ್)
ಅತ್ಯುತ್ತಮ ನಟ – ನಾನಿ ( ದಸರಾ)
ಅತ್ಯುತ್ತಮ ನಟ (ಕ್ರಿಟಿಕ್ಸ್) – ಪ್ರಕಾಶ್ ರಾಜ್ (ರಂಗ ಮಾರ್ತಾಂಡ)
ನವೀನ್ ಪೋಲಿಶೆಟ್ಟಿ ( ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ)
ಅತ್ಯುತ್ತಮ ನಟಿ – ಕೀರ್ತಿ ಸುರೇಶ್ ( ದಸರಾ)
ಅತ್ಯುತ್ತಮ ನಟಿ (ಕ್ರಿಟಿಕ್ಸ್) – ವೈಷ್ಣವಿ ಚೈತನ್ಯ (ಬೇಬಿ)
ಅತ್ಯುತ್ತಮ ಹೊಸ ಪ್ರತಿಭೆ (Male) – ಸಂಗೀತ್ ಶೋಭನ್ (ಮ್ಯಾಡ್)
ಅತ್ಯುತ್ತಮ ಪೋಷಕ ನಟ – ಬ್ರಹ್ಮಾನಂದಂ ( ರಂಗ ಮಾರ್ತಾಂಡ), ರವಿ ತೇಜಾ ( ವಾಲ್ತೇರು ವೀರಯ್ಯ)
ಅತ್ಯುತ್ತಮ ಪೋಷಕ ನಟಿ – ರೂಪಾ ಲಕ್ಷ್ಮಿ (ಬಳಗಂ)
ಅತ್ಯುತ್ತಮ ಸಂಗೀತ ನಿರ್ದೇಶಕ – ವಿಜಯ್ ಬಲ್ಗನಿನ್ (ಬೇಬಿ)
ಅತ್ಯುತ್ತಮ ಸಾಹಿತ್ಯ – ಅನಂತ ಶ್ರೀರಾಮ್ ( ಓ ರೆಂಡು ಪ್ರೇಮ, ಬೇಬಿ)
ಅತ್ಯುತ್ತಮ ಗಾಯಕ – ಶ್ರೀರಾಮ ಚಂದ್ರ (ಬೇಬಿ)
ಅತ್ಯುತ್ತಮ ಗಾಯಕಿ – ಶ್ವೇತಾ ಮೋಹನ್ ( ಸರ್)

ಇದನ್ನೂ ಓದಿ: Workshop: ಬೆಂಗಳೂರಿನಲ್ಲಿ ಆ.10ರಂದು ಸಿನಿಮಾಸಕ್ತರಿಗೆ ಕಾರ್ಯಾಗಾರ

ಫಿಲ್ಮ್‌ಫೇರ್ ತಮಿಳು ಪ್ರಶಸ್ತಿ ಗೆದ್ದವರ ಪಟ್ಟಿ

ಅತ್ಯುತ್ತಮ ಸಿನಿಮಾ – ಚಿತ್ತಾ
ಅತ್ಯುತ್ತಮ ನಿರ್ದೇಶಕ – ಎಸ್‌ ಯು ಅರುಣ್ ಕುಮಾರ್ (ಚಿತ್ತಾ)
ಅತ್ಯುತ್ತಮ ಸಿನಿಮಾ (ಕ್ರಿಟಿಕ್ಸ್)- ವಿದುತಲೈ 1,
ವೆಟ್ರಿ ಮಾರನ್ ಅತ್ಯುತ್ತಮ ನಟ – ವಿಕ್ರಮ್ (ಪೊನ್ನಿಯನ್ ಸೆಲ್ವನ್ 2)
ಅತ್ಯುತ್ತಮ ನಟ (ಕ್ರಿಟಿಕ್ಸ್) – ಸಿದ್ಧಾರ್ಥ್ (ಚಿತ್ತಾ)
ಅತ್ಯುತ್ತಮ ನಟಿ – ನಿಮಿಷಾ ಸಂಜಯನ್ (ಚಿತ್ತಾ)
ಅತ್ಯುತ್ತಮ ನಟಿ (ಕ್ರಿಟಿಕ್ಸ್) – ಐಶ್ವರ್ಯಾ ರಾಜೇಶ್‌, ಅಪರ್ಣ ದಾಸ್
ಅತ್ಯುತ್ತಮ ಪೋಷಕ ನಟ – ಫಹಾದ್ ಫಾಸಿಲ್ (ಮಾಮಣ್ಣನ್)
ಅತ್ಯುತ್ತಮ ಪೋಷಕ ನಟಿ – ಅಂಜಲಿ ನಾಯರ್ (ಚಿತ್ತಾ)
ಅತ್ಯುತ್ತಮ ಸಂಗೀತ ನಿರ್ದೇಶಕ – ಧಿಬು ನಿನನ್ ಥಾಮಸ್, ಸಂತೋಷ್ ನಾರಾಯಣನ್ (ಚಿತ್ತಾ)
ಅತ್ಯುತ್ತಮ ಸಾಹಿತ್ಯ – ಇಳಂಗೊ ಕೃಷ್ಣನ್ ( ಪೊನ್ನಿಯನ್ ಸೆಲ್ವನ್ 2)
ಅತ್ಯುತ್ತಮ ಗಾಯಕ – ಹರಿಚರಣ್ ( ಪೊನ್ನಿಯನ್ ಸೆಲ್ವನ್ 2)
ಅತ್ಯುತ್ತಮ ಗಾಯಕಿ – ಕಾರ್ತಿಕಾ ವೈದ್ಯನಾಥನ್ (ಚಿತ್ತಾ)

ಫಿಲ್ಮ್‌ಫೇರ್ ಮಲಯಾಳಂ ಪ್ರಶಸ್ತಿ ಗೆದ್ದವರ ಸಂಪೂರ್ಣ ಪಟ್ಟಿ

ಅತ್ಯುತ್ತಮ ಸಿನಿಮಾ – 2018
ಅತ್ಯುತ್ತಮ ನಿರ್ದೇಶಕ – ಜೂಡ್ ಆಂಥನಿ ಜೋಸೆಫ್ (2018)
ಅತ್ಯುತ್ತಮ ಸಿನಿಮಾ (ಕ್ರಿಟಿಕ್ಸ್)- ಕಾಥಲ್ ದಿ ಕೋರ್
ಅತ್ಯುತ್ತಮ ನಟ – ಮಮ್ಮುಟ್ಟಿ (ನನ್ಪಕಲ್ ನೆರತು ಮಾಯಕ್ಕಂ)
ಅತ್ಯುತ್ತಮ ನಟ (ಕ್ರಿಟಿಕ್ಸ್) – ಜೋಜು ಜಾರ್ಜ್ಅ
ತ್ಯುತ್ತಮ ನಟಿ – ವಿನ್ಸಿ ಅಲೋಶಿಯಸ್ಅತ್ಯುತ್ತಮ ನಟಿ (ಕ್ರಿಟಿಕ್ಸ್) – ಜ್ಯೋತಿಕಾ
ಅತ್ಯುತ್ತಮ ಪೋಷಕ ನಟ – ಜಗದೀಶ್
ಅತ್ಯುತ್ತಮ ಪೋಷಕ ನಟಿ – ಪೂರ್ಣಿಮಾ ಇಂದ್ರಜಿತ್
ಅತ್ಯುತ್ತಮ ಸಂಗೀತ ನಿರ್ದೇಶಕ – ಸ್ಯಾಮ್ ಸಿಎಸ್
ಅತ್ಯುತ್ತಮ ಸಾಹಿತ್ಯ – ಅನ್ವರ್ ಅಲಿ
ಅತ್ಯುತ್ತಮ ಗಾಯಕ – ಕಪಿಲಾ ಕಪಿಲನ್
ಅತ್ಯುತ್ತಮ ಗಾಯಕಿ – ಕೆ. ಎಸ್. ಚಿತ್ರಾ

Continue Reading

ಮಾಲಿವುಡ್

Mohanlal Visits Landslide: ಸೇನಾ ಸಮವಸ್ತ್ರ ಧರಿಸಿ ವಯನಾಡಿಗೆ ಬಂದ ಮೋಹನ್​ಲಾಲ್!

Mohanlal Visits Landslide: ಟೆರಿಟೋರಿಯಲ್ ಆರ್ಮಿಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿರುವ ಮೋಹನ್ ಲಾಲ್ ಅವರು ವಿಪತ್ತು ಪ್ರದೇಶಕ್ಕೆ ಭೇಟಿ ನೀಡಿ ಸೈನಿಕರನ್ನು (Soldiers) ಭೇಟಿ ಮಾಡಲಿದ್ದಾರೆ. ಕೋಝಿಕ್ಕೋಡ್‌ನಿಂದ ರಸ್ತೆ ಮಾರ್ಗವಾಗಿ ವಯನಾಡಿಗೆ ತೆರಳಿ ಸೇನಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ ನಟ.

VISTARANEWS.COM


on

Koo

ಬೆಂಗಳೂರು: ಧಾರಾಕಾರವಾಗಿ ಸುರಿದ ಮಳೆಗೆ ದೇವರನಾಡು ಕೇರಳ ತತ್ತರಿಸಿದ್ದು, ವಯನಾಡಿನಲ್ಲಿ ಭೀಕರ ಭೂಕುಸಿತ ಸಂಭವಿಸಿ 340ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ (Mohanlal Visits Landslide). 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, ಅವರ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ (Wayanad Landslide). ಈ ದುರಂತಕ್ಕೆ ಮಾನವ ಹಸ್ತಕ್ಷೇಪವೇ ಕಾರಣ ಎಂದು ತಜ್ಞರು ತಿಳಿಸಿದ್ದು, ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ (National Green Tribunal)ಯ ದಕ್ಷಿಣ ಪೀಠವು ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಿದೆ.  ಭಾರತೀಯ ಟೆರಿಟೋರಿಯಲ್ ಆರ್ಮಿಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿರುವ ಮೆಗಾಸ್ಟಾರ್ ಮೋಹನ್ ಲಾಲ್ ಅವರು ಶನಿವಾರ ಭೂಕುಸಿತ ಪೀಡಿತ ವಯನಾಡ್‌ಗೆ ಭೇಟಿ ನೀಡಿದರು. ಸೇನಾ ಸಮವಸ್ತ್ರ ಧರಿಸಿ ಮೋಹನ್‌ಲಾಲ್ ಪೀಡಿತ ಪ್ರದೇಶಗಳಿಗೆ ತೆರಳುವ ಮುನ್ನ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. 2009 ರಲ್ಲಿ ಟೆರಿಟೋರಿಯಲ್ ಆರ್ಮಿಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿ ಗೌರವಿಸಲ್ಪಟ್ಟ ನಟ, ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಬೆಂಬಲ ನೀಡಿದರು.

ಟೆರಿಟೋರಿಯಲ್ ಆರ್ಮಿಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿರುವ ಮೋಹನ್ ಲಾಲ್ ಅವರು ವಿಪತ್ತು ಪ್ರದೇಶಕ್ಕೆ ಭೇಟಿ ನೀಡಿ ಸೈನಿಕರನ್ನು (Soldiers) ಭೇಟಿ ಮಾಡಲಿದ್ದಾರೆ. ಕೋಝಿಕ್ಕೋಡ್‌ನಿಂದ ರಸ್ತೆ ಮಾರ್ಗವಾಗಿ ವಯನಾಡಿಗೆ ತೆರಳಿ ಸೇನಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ ನಟ.

ಇದಕ್ಕೂ ಮೊದಲು, ಮೋಹನ್ ಲಾಲ್ ಅವರು “ನಿಸ್ವಾರ್ಥ ಸ್ವಯಂಸೇವಕರು, ಪೊಲೀಸರು, ಅಗ್ನಿಶಾಮಕ ಮತ್ತು ರಕ್ಷಣೆ, ಎನ್‌ಡಿಆರ್‌ಎಫ್, ಸೇನಾ ಸೈನಿಕರು, ಸರ್ಕಾರಿ ಅಧಿಕಾರಿಗಳು ಮತ್ತು ದಣಿವರಿಯಿಲ್ಲದೆ ದುಡಿಯುತ್ತಿರುವ ಪ್ರತಿಯೊಬ್ಬ ವ್ಯಕ್ತಿಯ ಧೈರ್ಯಕ್ಕೆ ನಾನು ನಮಸ್ಕರಿಸುತ್ತೇನೆ. ವಯನಾಡ್ ದುರಂತದ ಸಂತ್ರಸ್ತರಿಗೆ ಪರಿಹಾರ ಒದಗಿಸಿ. ಪರಿಹಾರ ಕಾರ್ಯಾಚರಣೆಯಲ್ಲಿ ಮುಂಚೂಣಿಯಲ್ಲಿರುವ ನನ್ನ 122 ಪದಾತಿ ದಳದ ಬೆಟಾಲಿಯನ್, ಟಿಎ ಮದ್ರಾಸ್‌ನ ಪ್ರಯತ್ನಗಳಿಗೆ ನಾನು ಕೃತಜ್ಞನಾಗಿದ್ದೇನೆ. ನಾವು ಮೊದಲು ಸವಾಲುಗಳನ್ನು ಎದುರಿಸಿದ್ದೇವೆ ಮತ್ತು ಬಲಶಾಲಿಯಾಗಿ ಹೊರಹೊಮ್ಮಿದ್ದೇವೆ. ಈ ಕಷ್ಟದ ಸಮಯದಲ್ಲಿ ನಾವು ಒಗ್ಗಟ್ಟಾಗಿ ನಿಂತು ನಮ್ಮ ಒಗ್ಗಟ್ಟಿನ ಶಕ್ತಿಯನ್ನು ತೋರಿಸಬೇಕೆಂದು ನಾನು ಪ್ರಾರ್ಥಿಸುತ್ತೇನೆ. ಜೈ ಹಿಂದ್!”ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kannada New Movie: ʻಟೆನೆಂಟ್’ ಸಿನಿಮಾದ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌; ಸೋನು ಗೌಡ ನಾಯಕಿ!

ಘಟನೆಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿಯನ್ನು ಹರಡುವುದನ್ನು ತಪ್ಪಿಸಲು ಸಾರ್ವಜನಿಕರನ್ನು ಒತ್ತಾಯಿಸಿ ನಟ ಮತ್ತೊಂದು ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಅ “ಸದ್ಯ ನಡೆಯುತ್ತಿರುವ ಭಾರೀ ಮಳೆ ಮತ್ತು ನೈಸರ್ಗಿಕ ವಿಕೋಪದ ನಡುವೆ, ದಯವಿಟ್ಟು ಸುರಕ್ಷಿತವಾಗಿರಲು ಎಲ್ಲ ಪ್ರಯತ್ನಗಳನ್ನು ಮಾಡಿ. ಸರ್ಕಾರದ ಆದೇಶಗಳನ್ನು ಸಂಪೂರ್ಣವಾಗಿ ಪಾಲಿಸಿ. ದಯವಿಟ್ಟು ಘಟನೆಗೆ ಸಂಬಂಧಿಸಿದಂತೆ ಯಾವುದೇ ಸುಳ್ಳು ಸುದ್ದಿ ಮತ್ತು ಮಾಹಿತಿಯನ್ನು ಹಂಚಿಕೊಳ್ಳುವುದನ್ನು ತಪ್ಪಿಸಿʼʼಎಂದು ಬರೆದುಕೊಂಡಿದ್ದಾರೆ.

ಭೂಕುಸಿತದಿಂದ ತೀವ್ರವಾಗಿ ಹಾನಿಗೊಳಗಾದ ವಯನಾಡಿನ ಮೆಪ್ಪಾಡಿ ಪ್ರದೇಶದ ಚುರಲ್‌ಮಲ ಮತ್ತು ಮುಂಡಕೈ ಬಂಡೆಯಂತದ ಗಟ್ಟಿಯಾದ ನೆಲದ ಮೇಲೆ ರೂಪುಗೊಂಡಿಲ್ಲ. ಬದಲಾಗಿ ಮೆದುವಾದ ಮಣ್ಣನ್ನು ಹೊಂದಿದೆ. ಇಲ್ಲಿರುವುದು ಕೆಂಪು ಮಣ್ಣು. ಆದರೂ ಇಲ್ಲಿ ಅಷ್ಟೊಂದು ಕಟ್ಟಡಗಳು ಏಕೆ ಇವೆ? ಇದಕ್ಕೆ ನಮಗೆ ಉತ್ತರ ಬೇಕು ಎಂದು ನ್ಯಾಯಪೀಠ ಹೇಳಿದೆ.

ಪರಿಸರ ತಜ್ಞ ಮಾಧವ್ ಗಾಡ್ಗೀಳ್ ನೇತೃತ್ವದ ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ಸಮಿತಿಯು ಭೂಕುಸಿತ ಸಂಭವಿಸಿದ ವಯನಾಡು ಜಿಲ್ಲೆಯ ವೈತಿರಿ ತಾಲೂಕನ್ನು ಪರಿಸರ ಸೂಕ್ಷ್ಮ ವಲಯ -1 ಎಂದು ಸೂಚಿಸಿದೆ. ಅಂದರೆ ಇಲ್ಲಿ ಭೂಮಿಗೆ ಹಾನಿಯಾಗುವ ಯಾವುದೇ ಚಟುವಟಿಕೆ ನಡೆಯಬಾರದು ಎಂದು ಈ ಹಿಂದೆಯೇ ತಿಳಿಸಿದೆ ಎಂದು ನ್ಯಾಯಪೀಠ ತನ್ನ ನೋಟಿಸ್‌ನಲ್ಲಿ ಉಲ್ಲೇಖಿಸಿದೆ.

Continue Reading

ಸಿನಿಮಾ

OTT Releases: ಒಟಿಟಿಯಲ್ಲಿ ಈ ತಿಂಗಳು ಕಲ್ಕಿ, ಇಂಡಿಯನ್‌, ಟರ್ಬೊ ಜತೆಗೆ ಇನ್ಯಾವ ಹೊಸ ಚಿತ್ರ, ವೆಬ್‌ ಸಿರೀಸ್‌?

ಆಕ್ಷನ್, ಥ್ರಿಲರ್, ಹಾಸ್ಯವನ್ನೊಳಗೊಂಡ ಕಥೆಗಳು ಸಿನಿಮಾ, ವೆಬ್ ಸರಣಿ ರೂಪದಲ್ಲಿ ಈ ತಿಂಗಳಲ್ಲಿ ಒಟಿಟಿಯಲ್ಲಿ (OTT Releases) ತೆರೆಕಾಣಲಿದೆ. ಕಲ್ಕಿ, ಟರ್ಬೊ, ಘುಡಚಡಿ ಸೇರಿದಂತೆ ಹಲವು ಭಾರತೀಯ ಸಿನಿಮಾಗಳು ಒಟಿಟಿ ಅಂಗಳದಲ್ಲಿ ಕಾಣಿಸಿಕೊಳ್ಳಲಿದ್ದು, ಈ ಬಾರಿ ಭರ್ಜರಿ ಮನೋರಂಜನೆ ಒದಗಿಸಲಿದೆ. ಈ ತಿಂಗಳು ವಿವಿಧ ಒಟಿಟಿಗಳಲ್ಲಿ ನೋಡಲು ಸಿಗುವ ಸಿನಿಮಾಗಳು ಮತ್ತು ವೆಬ್‌ ಸಿರೀಸ್‌ಗಳ ಮಾಹಿತಿ ಇಲ್ಲಿದೆ.

VISTARANEWS.COM


on

By

Koo

ಫಿರ್ ಆಯಿ ಹಸೀನ್ ದಿಲ್ರುಬಾ (Phir Aayi Hasseen Dillruba), ಘುಡಚಡಿ (Ghudchadi), ಟರ್ಬೊ (Turbo) ಸೇರಿದಂತೆ ಭಾರತೀಯ ಹಲವು ಸಿನಿಮಾಗಳು (indian film), ವೆಬ್ ಸರಣಿಗಳು (Web series) ಜಿಯೋ ಸಿನಿಮಾ, ನೆಟ್ ಫ್ಲಿಕ್ಸ್, ಡಿಸ್ನಿ+ ಹಾಟ್‌ಸ್ಟಾರ್ ಸೇರಿದಂತೆ ಹಲವು ಒಟಿಟಿ ವೇದಿಕೆಯಲ್ಲಿ (OTT Releases) ಈ ತಿಂಗಳಲ್ಲಿ ಪ್ರೇಕ್ಷಕರಿಗೆ ಭರ್ಜರಿ ಮನೋರಂಜನೆ ಒದಗಿಸಲಿದೆ. ಆಗಸ್ಟ್ ನಲ್ಲಿ ಪ್ರೇಕ್ಷಕರ ಮನಸೂರೆಗೊಳಿಸುವ ಚಿತ್ರ, ವೆಬ್ ಸರಣಿಗಳ ಮಾಹಿತಿ ಇಲ್ಲಿದೆ.

ಡ್ಯೂನ್‌-ಭಾಗ ಎರಡು

ʼಹೌಸ್ ಹಾರ್ಕೊನೆನ್ʼ ಎಂಬ ಗ್ರಹದ ವಿರುದ್ಧ ಯುದ್ಧ ಮಾಡಲು ಪಾಲ್ ಅಟ್ರೀಡ್ಸ್ ಎಂಬಾತ ಮರುಭೂಮಿ ಗ್ರಹ ಅರ್ರಾಕಿಸ್‌ನ ಫ್ರೀಮೆನ್ ಎಂದು ಕರೆಯುವ ಜನರೊಂದಿಗೆ ಒಂದಾಗುವ ಕಥೆಯನ್ನು ಒಳಗೊಂಡಿರುವ ಈ ಚಿತ್ರದಲ್ಲಿ ಆಸ್ಟಿನ್ ಬಟ್ಲರ್, ಫ್ಲಾರೆನ್ಸ್ ಪಗ್, ಝೆಂಡಾಯಾ ಅಭಿನಯಿಸಿದ್ದಾರೆ. ಆಗಸ್ಟ್ 1ರಿಂದ ಜಿಯೋ ಸಿನಿಮಾದಲ್ಲಿ ತೆರೆಕಾಣುತ್ತಿರುವ ಸಾಹಸಮಯ ಚಿತ್ರ ಇದಾಗಿದೆ.

ಕಿಂಗ್ಡಮ್ ಆಫ್ ದಿ ಪ್ಲಾನೆಟ್ ಆಫ್ ದಿ ಏಪ್ಸ್

ಸೀಸರ್ ಆಳ್ವಿಕೆಯ ವರ್ಷಗಳ ಅನಂತರ ಅಧಿಕಾರಕ್ಕೆ ಬರುವ ಯುವ ಕೋತಿಯು ಹಿಂದಿನ ಕೆಲವು ನೀತಿಗಳನ್ನು ಪ್ರಶ್ನಿಸತೊಡಗುತ್ತದೆ. ಇದು ಮಂಗಗಳು ಮತ್ತು ಮನುಷ್ಯರ ಭವಿಷ್ಯವನ್ನು ರೂಪಿಸುವ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಲು ಸಹಾಯ ಮಾಡುತ್ತದೆ.

ಫ್ರೇಯಾ ಅಲನ್, ಕೆವಿನ್ ಡ್ಯುರಾಂಡ್, ಓವನ್ ಟೀಗ್ ಅಭಿನಯಿಸಿರುವ ಈ ಚಿತ್ರ ಆಗಸ್ಟ್ 2ರಂದು ಡಿಸ್ನಿ+ ಹಾಟ್‌ಸ್ಟಾರ್ ನಲ್ಲಿ ಬಿಡುಗಡೆಯಾಗಿರುವ ಈ ಚಿತ್ರದಲ್ಲಿ ಸಾಕಷ್ಟು ಸಾಹಸಮಯ ದೃಶ್ಯಗಳಿವೆ.

ಇಂಡಿಯನ್ 2

ಸೇನಾಪತಿ, ಮಾಜಿ ಸ್ವಾತಂತ್ರ್ಯ ಹೋರಾಟಗಾರ ಯುವಕನೊಬ್ಬ ಭ್ರಷ್ಟ ರಾಜಕಾರಣಿಗಳನ್ನು ಆನ್‌ಲೈನ್‌ನಲ್ಲಿ ಬಹಿರಂಗಪಡಿಸಲು ಸಹಾಯ ಮಾಡಲು ದೇಶಕ್ಕೆ ಹಿಂತಿರುಗುವ ಕಥೆಯನ್ನು ಇದು ಒಳಗೊಂಡಿದೆ. ಕಮಲ್ ಹಾಸನ್, ಸಿದ್ಧಾರ್ಥ್, ಪ್ರಿಯಾ ಭವಾನಿ ಶಂಕರ್ ಈ ಚಿತ್ರದಲ್ಲಿ ನಟಿಸಿದ್ದಾರೆ. ಸಾಕಷ್ಟು ಥ್ರಿಲರ್ ದೃಶ್ಯಗಳನ್ನು ಒಳಗೊಂಡಿರುವ ಈ ಚಿತ್ರ ಆಗಸ್ಟ್ 2ರ ಬಳಿಕ ನೆಟ್‌ಫ್ಲಿಕ್ಸ್ ನಲ್ಲಿ ಬಿಡುಗಡೆಯಾಗಲಿದೆ.

ಫಿರ್ ಆಯಿ ಹಸೀನ್ ದಿಲ್‌ರುಬಾ


ಪತಿಯನ್ನು ಕೊಲೆ ಮಾಡಿದ ಶಂಕಿತ ಮಹಿಳೆಯನ್ನು ಬಂಧಿಸಲು ಪುರಾವೆಗಾಗಿ ಪೊಲೀಸರು ಹುಡುಕುತ್ತಿರುವಾಗ ಮಹಿಳೆ ತನ್ನ ಮದುವೆಯ ಬಗ್ಗೆ ಆಕರ್ಷಕ ಕಥೆಯನ್ನು ವಿವರಿಸುವ ಚಿತ್ರ ಕಥೆಯನ್ನು ಒಳಗೊಂಡಿರುವ ಈ ಸಿನಿಮಾದಲ್ಲಿ ತಾಪ್ಸಿ ಪನ್ನು, ವಿಕ್ರಾಂತ್ ಮಾಸ್ಸೆ ಮತ್ತು ಸನ್ನಿ ಕೌಶಲ್ ಅಭಿನಯಿಸಿದ್ದಾರೆ. ಥ್ರಿಲ್ಲರ್ ಕಥಾ ಹಂದರವಿರುವ ಚಿತ್ರ ಆಗಸ್ಟ್ 9ರಂದು ನೆಟ್‌ಫ್ಲಿಕ್ಸ್ ನಲ್ಲಿ ಬಿಡುಗಡೆಯಾಗಲಿದೆ.

ಘುಡ್‌ಚಡಿ

ತಂದೆ ಮತ್ತು ಮಗ, ತಾಯಿ ಮತ್ತು ಅವಳ ಮಗಳೊಂದಿಗೆ ಪ್ರೀತಿಯಲ್ಲಿ ಬೀಳುವ ಕಥೆಯನ್ನು ಒಳಗೊಂಡಿರುವ ಈ ಚಿತ್ರದಲ್ಲಿ ಸಂಜಯ್ ದತ್, ರವೀನಾ ಟಂಡನ್, ಪಾರ್ಥ್ ಸಮತಾನ್, ಖುಶಾಲಿ ಕುಮಾರ್ ಅಭಿನಯಿಸಿದ್ದಾರೆ. ರೋಮ್ಯಾಂಟಿಕ್, ಹಾಸ್ಯ ಚಿತ್ರ ಇದಾಗಿದ್ದು, ಜಿಯೋ ಸಿನಿಮಾದಲ್ಲಿ ಆಗಸ್ಟ್ 9ರಂದು ಬಿಡುಗಡೆಯಾಗಲಿದೆ.

ಟರ್ಬೊ

ತೊಂದರೆಯಲ್ಲಿ ಸಿಕ್ಕಿ ಹಾಕಿಕೊಳ್ಳುವ ಜೋಸ್ ಚೆನ್ನೈಗೆ ಹೋಗಿ ಅಲ್ಲಿ ಸಿಂಧು ಮತ್ತು ಅವನ ಆತ್ಮೀಯ ಸ್ನೇಹಿತನೊಂದಿಗೆ ಇರುತ್ತಾನೆ. ಇದು ಅನಿರೀಕ್ಷಿತ ಘಟನೆಗಳಿಗೆ ಕಾರಣವಾಗುವ ಕಥಾ ಹಂದರವಿರುವ ಚಿತ್ರದಲ್ಲಿ ಮಮ್ಮುಟ್ಟಿ, ಅಂಜನಾ ಜಯಪ್ರಕಾಶ್, ರಾಜ್ ಬಿ. ಶೆಟ್ಟಿ ಅಭಿನಯಯಿಸಿದ್ದಾರೆ. ಆಕ್ಷನ್, ಕಾಮಿಡಿ ಚಿತ್ರ ಇದಾಗಿದ್ದು, ಸೋನಿ ಲೈವ್ ನಲ್ಲಿ ಆಗಸ್ಟ್ 9ರಂದು ಬಿಡುಗಡೆಯಾಗಲಿದೆ.

ಗ್ಯಾರಾಹ್‌ ಗ್ಯಾರಾಹ್‌


15 ವರ್ಷಗಳಿಂದ ಇತ್ಯರ್ಥವಾಗದ ಕೊಲೆ ಪ್ರಕರಣಗಳನ್ನು ಭೇದಿಸಲು ಇಬ್ಬರು ಅಧಿಕಾರಿಗಳು ಮುಂದಾಗುವ ಕಥೆಯನ್ನು ಒಳಗೊಂಡಿರುವ ಚಿತ್ರದಲ್ಲಿ ರಾಘವ್ ಜುಯಲ್, ಕೃತಿಕಾ ಕಮ್ರಾ, ಧೈರ್ಯ ಕರ್ವಾ ಅಭಿನಯಿಸಿದ್ದಾರೆ.
ಥ್ರಿಲ್ಲರ್ ಚಿತ್ರ ಇದಾಗಿದ್ದು ಝೀ5 ನಲ್ಲಿ ಆಗಸ್ಟ್ 9ರಂದು ಚಿತ್ರ ಬಿಡುಗಡೆಯಾಗಲಿದೆ.

ಮನೋರಥಂಗಲ್

ಆಧುನಿಕ ಮಲಯಾಳಂ ಸಾಹಿತ್ಯದಲ್ಲಿ ಪ್ರಸಿದ್ಧ ಲೇಖಕರಾದ ಎಂ.ಟಿ. ವಾಸುದೇವನ್ ನಾಯರ್ ಬರೆದ ಒಂಬತ್ತು ಕಥೆಗಳನ್ನು ಆಧರಿಸಿರುವ ಈ ಚಿತ್ರದಲ್ಲಿ ಮೋಹನ್ ಲಾಲ್, ಮಮ್ಮುಟ್ಟಿ, ಫಹದ್ ಫಾಸಿಲ್ ಅಭಿನಯಿಸಿದ್ದಾರೆ.
ಝೀ5ನಲ್ಲಿ ಆಗಸ್ಟ್ 15ರಂದು ಚಿತ್ರ ಬಿಡುಗಡೆಯಾಗಲಿದೆ.

ಕಲ್ಕಿ 2898ಎಡಿ

ದುಷ್ಟ ಶಕ್ತಿಗಳಿಂದ ಜಗತ್ತನ್ನು ರಕ್ಷಿಸಲು ವಿಷ್ಣುವಿನ ಆಧುನಿಕ ಅವತಾರ ಭೂಮಿಗೆ ಬರುವ ಕಥೆಯನ್ನು ಹೊಂದಿರುವ ಈ ಚಿತ್ರದಲ್ಲಿ ಪ್ರಭಾಸ್, ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್ ಅಭಿನಯಿಸಿದ್ದಾರೆ.
ಸಾಕಷ್ಟು ಸಾಹಸಮಯ ದೃಶ್ಯಗಳನ್ನು ಒಳಗೊಂಡಿರುವ ಈ ಚಿತ್ರ ಅಮೆಜಾನ್ ಪ್ರೈಮ್ ವಿಡಿಯೋ ಆಗಸ್ಟ್ 15ರ ಬಳಿಕ ಬಿಡುಗಡೆಯಾಗಲಿದೆ.

ದಿ ಡೆಲಿವರೆನ್ಸ್

ನಾಲ್ವರು ಸ್ನೇಹಿತರು ತಮ್ಮ ದೈನಂದಿನ ಜೀವನದಿಂದ ತಪ್ಪಿಸಿಕೊಳ್ಳಲು ಗ್ರಾಮೀಣ ಜಾರ್ಜಿಯಾದಲ್ಲಿ ಒಂದು ವಾರ ಕಳೆಯಲು ಕ್ಯಾನೋ ಟ್ರಿಪ್ ಹೊರಡುತ್ತಾರೆ. ಈ ಪ್ರವಾಸ ಅವರನ್ನು ಸಾವು ಬದುಕಿನ ಹೊರಟವನ್ನಾಗಿ ಮಾಡುತ್ತದೆ.
ಚಿತ್ರದಲ್ಲಿ ಜಾನ್ ವಾಯ್ಟ್, ಬರ್ಟ್ ರೆನಾಲ್ಡ್ಸ್, ನೆಡ್ ಬೀಟಿ, ರೋನಿ ಕಾಕ್ಸ್ ಅಭಿನಯಿಸಿದ್ದಾರೆ. ಹಾರರ್, ಥ್ರಿಲ್ಲರ್ ಕಥೆಯನ್ನು ಒಳಗೊಂಡಿರುವ ಈ ಸಿನಿಮಾ ನೆಟ್‌ಫ್ಲಿಕ್ಸ್‌ನಲ್ಲಿ ಆಗಸ್ಟ್ 30ರಂದು ಬಿಡುಗಡೆಯಾಗಲಿದೆ.

ಇದನ್ನೂ ಓದಿ: Movies on Israel: ಪ್ಯಾಲೇಸ್ತಿನ್‌ ಉಗ್ರರ ವಿರುದ್ಧ ಇಸ್ರೇಲ್ ಸೇಡು! ಮೈನವಿರೇಳಿಸುವ ಈ ಸಿನೆಮಾಗಳನ್ನು ನೋಡಲೇಬೇಕು!

ಕಿಲ್

ಹೊಸದಿಲ್ಲಿ ರೈಲಿನಲ್ಲಿ ದರೋಡೆಕೋರರೊಂದಿಗೆ ಕಮಾಂಡೋಗಳು ಹೊರಾಡುವ ಕಥೆಯನ್ನು ಇದು ಒಳಗೊಂಡಿದೆ. ಲಕ್ಷ್ಯ, ರಾಘವ್ ಜುಯಲ್, ತಾನ್ಯಾ ಮಾಣಿಕ್ತಾಲಾ ಅಭಿನಯಿಸಿದ್ದಾರೆ. ಆಕ್ಷನ್, ಥ್ರಿಲ್ಲರ್ ಕಥೆಯನ್ನೊಳಗೊಂಡಿರುವ ಈ ಸಿನಿಮಾವು ಡಿಸ್ನಿ+ ಹಾಟ್‌ಸ್ಟಾರ್‌ನಲ್ಲಿ ಆಗಸ್ಟ್ 30ರ ಬಳಿಕ ಬಿಡುಗಡೆಯಾಗಲಿದೆ.

Continue Reading
Advertisement
CM Siddaramaiah
ಕರ್ನಾಟಕ51 mins ago

CM Siddaramaiah: ಆ.23ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ; ಕಾನೂನು ಹೋರಾಟಕ್ಕೆ ಹೈ ‌ಕಮಾಂಡ್ ಬೆಂಬಲ ಕೋರಲು ಭೇಟಿ

zika Virus
ಬೆಂಗಳೂರು ಗ್ರಾಮಾಂತರ1 hour ago

Zika Virus : ಆನೇಕಲ್‌ನಲ್ಲಿ ಆರು ಮಂದಿಗೆ ಝಿಕಾ ವೈರಸ್ ಪತ್ತೆ; 3 ಕಿ.ಮೀ ರೇಡಿಯಸ್ ಕಂಟೋನ್ಮೆಂಟ್ ಜೋನ್‌

Food Poisoning
ದೇಶ1 hour ago

Food Poisoning: ಶಾಲೆಯಲ್ಲಿ ಕೊಟ್ಟ ಬಿಸ್ಕೇಟ್‌ ಸೇವಿಸಿ ಬರೋಬ್ಬರಿ 80 ವಿದ್ಯಾರ್ಥಿಗಳು ಅಸ್ವಸ್ಥ

Govt Employees
ಕರ್ನಾಟಕ2 hours ago

Govt Employees: ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ; ಕ್ರೀಡಾ ಮನೋಭಾವದಿಂದ ಭಾಗವಹಿಸಲು ಸಿ.ಎಸ್. ಷಡಾಕ್ಷರಿ ಮನವಿ

Kolkata Doctor Murder Case
ದೇಶ2 hours ago

Kolkata Doctor murder case: ಟ್ರೈನಿ ವೈದ್ಯೆ ಕೊಲೆ ಪ್ರಕರಣ; ಸ್ವಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್‌

Karnataka weather Forecast
ಮಳೆ3 hours ago

Karnataka Weather : ಭಾರಿ ಮಳೆ ಎಫೆಕ್ಟ್‌; ಹಳ್ಳ ದಾಟಲು ಹೋಗಿ ಕೊಚ್ಚಿ ಹೋದ 20ಕ್ಕೂ ಹೆಚ್ಚು ಕುರಿಗಳು

U19 Women’s T20 World Cup
ಕ್ರೀಡೆ3 hours ago

U-19 Women’s T20 World Cup; ಅಂಡರ್-19 ಮಹಿಳಾ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ವಿಂಡೀಸ್​ ಮೊದಲ ಎದುರಾಳಿ

Prabhas-Hanu Iman Esmail Trending
ಟಾಲಿವುಡ್3 hours ago

Actor Prabhas: ಪ್ರಭಾಸ್ ಜತೆ ರೀಲ್ಸ್ ರಾಣಿ ಇಮಾನ್ ಇಸ್ಮಾಯಿಲ್ ರೊಮ್ಯಾನ್ಸ್‌!

Indian origin family killed
ವಿದೇಶ3 hours ago

Indian origin family killed: ಟೆಕ್ಸಾಸ್‌ನಲ್ಲಿ ಭೀಕರ ಅಪಘಾತ; ಭಾರತೀಯ ಮೂಲದ ದಂಪತಿ, ಮಗಳು ದುರ್ಮರಣ

CM Siddaramaiah
ಕರ್ನಾಟಕ3 hours ago

CM Siddaramaiah: ಪ್ರಾಸಿಕ್ಯೂಷನ್‌ ಸಂಕಷ್ಟ; ಸಿಎಂ ನಾಳಿನ ಬಳ್ಳಾರಿ, ಮಂತ್ರಾಲಯ ಪ್ರವಾಸ ರದ್ದು

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌