Fake Garlic: ಎಚ್ಚರ..ಎಚ್ಚರ.. ಮಾರ್ಕೆಟ್‌ಗೆ ಲಗ್ಗೆ ಇಟ್ಟಿದೆ ಸಿಮೆಂಟ್‌ ಬೆಳ್ಳುಳ್ಳಿ! ವಿಡಿಯೋ ನೋಡಿದ್ರೆ ಶಾಕ್‌ ಆಗೋದು ಗ್ಯಾರಂಟಿ - Vistara News

ವೈರಲ್ ನ್ಯೂಸ್

Fake Garlic: ಎಚ್ಚರ..ಎಚ್ಚರ.. ಮಾರ್ಕೆಟ್‌ಗೆ ಲಗ್ಗೆ ಇಟ್ಟಿದೆ ಸಿಮೆಂಟ್‌ ಬೆಳ್ಳುಳ್ಳಿ! ವಿಡಿಯೋ ನೋಡಿದ್ರೆ ಶಾಕ್‌ ಆಗೋದು ಗ್ಯಾರಂಟಿ

Fake Garlic: ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸಿಮೆಂಟ್‌ನಿಂದ ತಯಾರಿಸಿದ ನಕಲಿ ಬೆಳ್ಳುಳ್ಳಿ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಬಹಳ ಸದ್ದು ಮಾಡುತ್ತಿದೆ. ಅಗತ್ಯ ಅಡುಗೆಮನೆಯ ಮುಖ್ಯ ವಸ್ತುಗಳ ಬೆಲೆಗಳು ಗಗನಕ್ಕೇರುವುದರೊಂದಿಗೆ, ಕೆಲವು ಮಾರಾಟಗಾರರು ಪರಿಸ್ಥಿತಿಯ ಲಾಭವನ್ನು ಪಡೆಯಲು ಮುಂದಾಗಿದ್ದು, ಗ್ರಾಹಕರಿಗೆ ಕೊಂಚವೂ ಅನುಮಾನವೇ ಬರದಂತೆ ಸಿಮೆಂಟ್‌ ಬೆಳ್ಳುಳ್ಳಿಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದಿದೆ.

VISTARANEWS.COM


on

Fake Garlic
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ದುಡ್ಡಿನಾಸೆ ಮನುಷ್ಯನಿಂದ ಎಂಥಹ ನೀಜ ಕೆಲಸನ್ನಾದರೂ ಮಾಡಿಸುತ್ತೆ. ಎಲ್ಲಿವರೆಗೆ ಅಂದ್ರೆ ತಿನ್ನೋ ಅನ್ನವನ್ನೂ ವಿಷ ಮಾಡಿಬಿಡುತ್ತೆ. ಈ ಹಿಂದೆ ಪ್ಲಾಸ್ಟಿಕ್‌ ಅಕ್ಕಿ(Plastic Rice), ಪ್ಲಾಸ್ಟಿಕ್‌ ಮೊಟ್ಟೆಗಳು(Plastic egg) ಮಾರುಕಟ್ಟೆಯಿಂದ ಸಾರಾ ಸಲೀಸಾಗಿ ಜನರ ಹೊಟ್ಟೆ ಸೇರುತ್ತಿರುವ ಬಗ್ಗೆ ಭಾರೀ ಸುದ್ದಿಯಾಗಿತ್ತು. ಈಗಲೂ ಈ ದಂಧೆ ನಡೆಯುತ್ತಲೇ ಇದೆ. ಅದು ಒಂದು ಕಡೆಯಾದ್ರೆ ಇಲ್ಲೊಂದು ಕಡೆ ಫೇಕ್‌ ಬೆಳ್ಳುಳ್ಳಿಗಳು(Fake Garlic) ಮಾರ್ಕೆಟ್‌ಗೆ ಲಗ್ಗೆ ಇಟ್ಟಿವೆ ಎಂದರೆ ನಂಬಲೇಬೇಕು(Viral Video).

ಹೌದು…ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸಿಮೆಂಟ್‌ನಿಂದ ತಯಾರಿಸಿದ ನಕಲಿ ಬೆಳ್ಳುಳ್ಳಿ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಬಹಳ ಸದ್ದು ಮಾಡುತ್ತಿದೆ. ಅಗತ್ಯ ಅಡುಗೆಮನೆಯ ಮುಖ್ಯ ವಸ್ತುಗಳ ಬೆಲೆಗಳು ಗಗನಕ್ಕೇರುವುದರೊಂದಿಗೆ, ಕೆಲವು ಮಾರಾಟಗಾರರು ಪರಿಸ್ಥಿತಿಯ ಲಾಭವನ್ನು ಪಡೆಯಲು ಮುಂದಾಗಿದ್ದು, ಗ್ರಾಹಕರಿಗೆ ಕೊಂಚವೂ ಅನುಮಾನವೇ ಬರದಂತೆ ಸಿಮೆಂಟ್‌ ಬೆಳ್ಳುಳ್ಳಿಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದಿದೆ.

ಅಕೋಲಾದ ಬಜೋರಿಯಾ ನಗರದಲ್ಲಿ ನೆಲೆಸಿರುವ ನಿವೃತ್ತ ಪೊಲೀಸ್ ಅಧಿಕಾರಿ ಸುಭಾಷ್ ಪಾಟೀಲ್ ಅವರ ಪತ್ನಿ ಕೃತಕ ಬೆಳ್ಳುಳ್ಳಿ ಮಾರಾಟ ಮಾಡುವ ಬೀದಿ ಬದಿ ವ್ಯಾಪಾರಿಯಿಂದ ವಂಚನೆಗೊಳಗಾಗಿದ್ದು, ಅವರು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಾಗ ಈ ವಂಚನೆ ಬೆಳಕಿಗೆ ಬಂದಿದೆ.

ಇನ್ನು ಸಿಮೆಂಟ್​ ಬೆಳ್ಳುಳ್ಳಿಯನ್ನು ಬೇರ್ಪಡಿಸಲು ಪ್ರಯತ್ನಿಸಿದಾಗ ನಕಲಿ ಎಂದು ಬಯಲಾಗಿದೆ. ಚಾಕುವಿನಿಂದ ಕತ್ತರಿಸಿದಾಗ ಅದು ಸಿಮೆಂಟ್​ನಿಂದ ಮಾಡಿದ ಬೆಳ್ಳುಳ್ಳಿ ಎಂದು ಬೆಳಕಿಗೆ ಬಂದಿದೆ. ಅಕೋಲಾದಲ್ಲಿ ಬೆಳ್ಳುಳ್ಳಿ ನಕಲಿ ಮಾರಾಟಗಾರರು ಜನರನ್ನು ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ. ಅಕೋಲಾ ನಗರದ ಹೆಚ್ಚಿನ ಭಾಗಗಳಲ್ಲಿ, ಈ ವ್ಯಾಪಾರಿಗಳು ಪ್ರತಿದಿನ ತರಕಾರಿಗಳನ್ನು ಮಾರಾಟ ಮಾಡಲು ಬರುತ್ತಾರೆ, ಅವರಲ್ಲಿ ಕೆಲವರು ನಕಲಿ ಬೆಳ್ಳುಳ್ಳಿಯನ್ನು ಮಾರಾಟ ಮಾಡುತ್ತಿರುವುದು ಇದೀಗ ಬೆಳಕಿಗೆ ಬಂದಿದೆ.

ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ನಕಲಿ ಮೊಟ್ಟೆ, ನಕಲಿ ಅಕ್ಕಿಗಳ ಮಾರಾಟ ಹೆಚ್ಚಾಗಿದೆ. ನಕಲಿ ಮೊಟ್ಟೆ ಹಾವಳಿ ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲೇ ಅತಿ ಹೆಚ್ಚು. ಇಲ್ಲೇ ಅದನ್ನು ಮೊಟ್ಟೆ ಉತ್ಪಾದಿಸಲಾಗುತ್ತಿದೆ. ಆದರೆ ಇದರ ಗರಿಷ್ಠ ಬಳಕೆ ಕರ್ನಾಟಕದಲ್ಲಿದೆ. ವರದಿಯ ಪ್ರಕಾರ ಬೆಂಗಳೂರಿನಲ್ಲಿ ದಿನಕ್ಕೆ 75 ಲಕ್ಷ ಮೊಟ್ಟೆಗಳಿಗೆ ಬೇಡಿಕೆ ಇದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮೊಟ್ಟೆ ಬೇಡಿಕೆಯಿಂದ ನಕಲಿ ಮೊಟ್ಟೆಗಳ ವ್ಯಾಪಾರ ಹೆಚ್ಚುತ್ತಿದೆ.

ಇದನ್ನೂ ಓದಿ:Plastic rice | ಶಾಲಾ ಮಕ್ಕಳ ಬಿಸಿಯೂಟದ ಅಕ್ಕಿ ಜತೆ ಮಿಕ್ಸ್‌ ಆಗಿದೆಯಾ ಪ್ಲಾಸ್ಟಿಕ್‌ ರೈಸ್‌: ತೇಲುವ ಮಣಿಗಳು ಏನಿವು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Road Accident : ಸರ್ಜಾಪುರದಲ್ಲಿ ಎದೆ ಝುಲ್‌ ಎನ್ನುವ ಡೆಡ್ಲಿ ಆ್ಯಕ್ಸಿಡೆಂಟ್‌; ಬೈಕ್‌ ಸವಾರ ಬದುಕಿದ್ದೆ ಪವಾಡ

Road Accident : ಬೆಂಗಳೂರಿನಲ್ಲಿ ಶರವೇಗದಲ್ಲಿ ಬಂದ ಕಾರೊಂದು ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತವು ಸೆರೆಯಾಗಿದ್ದು, ಎದೆ ಝಲ್ ಎನ್ನುತ್ತೆ.

VISTARANEWS.COM


on

By

Road Accident
Koo

ಬೆಂಗಳೂರು: ಅಬ್ಬಾ.. ಬೆಂಗಳೂರಿನ ಸರ್ಜಾಪುರದಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್‌ವೊಂದು (Road Accident) ಸಂಭವಿಸಿದ್ದು, ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶರವೇಗದಲ್ಲಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರ ಗಾಳಿಗೆ ತೂರಿ ಹಾರಿ ಬಿದ್ದಿದ್ದಾನೆ.

ಕಾರು ಬೈಕ್‌ಗೆ ಡಿಕ್ಕಿಯಾದರೂ ಪವಾಡ ಸದೃಶ್ಯ ರೀತಿ ಬೈಕ್‌ ಸವಾರ ಬಚಾವಾಗಿದ್ದಾನೆ. ಅದೃಷ್ಟವಶಾತ್ ಸವಾರ ಸಣ್ಣ-ಪುಟ್ಟ ಗಾಯವಾಗಿದ್ದು, ಯಾವುದೇ ಪ್ರಾಣಾಪಾಯವಿಲ್ಲ.

ಕಾರು ಡಿಕ್ಕಿಯಾದ ರಭಸಕ್ಕೆ ಸವಾರ ಬೈಕ್ ಸಮೇತ ರಸ್ತೆಗೆ ಹಾರಿ ಬಿದ್ದರೆ, ಧರಿಸಿದ್ದ ಹೆಲ್ಮೆಟ್ ಒಂದು ಕಡೆ ಎಗರಿ ಬಿದ್ದಿದೆ. ಅಪಘಾತದ ದೃಶ್ಯ ಮುಂದಿದ್ದ ಕಾರೊಂದರ ಡ್ಯಾಶ್ ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಆಗಸ್ಟ್‌ 15ರ ಬೆಳಗ್ಗೆ 7:50 ರ ಸುಮಾರಿಗೆ ಸರ್ಜಾಪುರ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಸರ್ಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬೈಕ್‌ ಸಂಪೂರ್ಣ ಜಖಂಗೊಂಡಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Assault Case : ಕುಂದಾಪುರದಲ್ಲಿ ಗಾಂಜಾ ನಶೆಯಲ್ಲಿ ಝಳಪಿಸಿದ ತಲ್ವಾರ್‌; ಇಬ್ಬರು ಗಂಭೀರ

ಗೂಡ್ಸ್‌ ವಾಹನ ಡಿಕ್ಕಿಗೆ ಮಹಿಳೆ ಸಾವು

ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನ ಹಲಸೂರು ಗೇಟ್ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿನ್ನೆ ಭಾನುವಾರ ಮಧ್ಯಾಹ್ನ 2ಗಂಟೆ ಸುಮಾರಿಗೆ ಅಪಘಾತ ನಡೆದಿದೆ.

ಸತ್ಯಪ್ರೇಮ ಎಂಬುವವರು ಮೃತ ದುರ್ದೈವಿ. ಸತ್ಯಪ್ರೇಮ ಅವರು ತಮ್ಮ ಪತಿ ಜತೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಕಾರ್ಪೊರೇಷನ್ ಬಸ್ ನಿಲ್ದಾಣದ ಬಳಿ ಹಿಂದಿನಿಂದ ಬಂದ ಐಷರ್ ವಾಹನ ಬೈಕ್‌ಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ಸತ್ಯಪ್ರೇಮಾರ ತಲೆಗೆ ಗಂಭೀರ ಗಾಯವಾಗಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಸತ್ಯಪ್ರೇಮಾರ ಪತಿಗೆ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ನಿಯಂತ್ರಣ ತಪ್ಪಿದ ಕಾರು, 17 ಬೈಕ್‌ಗಳು ಜಖಂ

ಹಾಸನದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನಿಂತಿದ್ದ ಬೈಕ್‌ಗಳ ಮೇಲೆ ನುಗ್ಗಿದೆ. ಪರಿಣಾಮ ಹದಿನೇಳು ಬೈಕ್‌ಗಳು ಜಖಂಗೊಂಡಿವೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಹೋಬಳಿ, ಕೆಂಕೆರೆಹಳ್ಳಿ ಗೇಟ್ ಬಳಿ ಅಪಘಾತ ನಡೆದಿದೆ.

ಧಾರಾಕಾರ ಮಳೆ ಸುರಿಯುತ್ತಿದ್ದ ಹಿನ್ನೆಲೆಯಲ್ಲಿ ಸವಾರರು ಬೈಕ್‌ಗಳನ್ನು ನಿಲ್ಲಿಸಿ ಬಸ್ ನಿಲ್ದಾಣದಲ್ಲಿ ನಿಂತಿದ್ದರು. ಈ ವೇಳೆ ಅತಿ ವೇಗವಾಗಿ ಚಲಿಸುತ್ತಿದ್ದ ಫಾರ್ಚೂನರ್ ಕಾರು, ಮಳೆಯಿಂದ ರಸ್ತೆ ಕಾಣದೆ ನಿಯಂತ್ರಣ ತಪ್ಪಿ ಬೈಕ್‌ಗಳ ಮೇಲೆ ನುಗ್ಗಿದೆ. ಬೈಕ್‌ಗಳ ಮೇಲೆ‌ ನುಗ್ಗಿ ಬಳಿಕ ಬಸ್‌ ನಿಲ್ದಾಣದ ಗೋಡೆಗೆ ಡಿಕ್ಕಿ ಹೊಡೆದು ಕಾರು ನಿಂತಿದೆ.

ಕಾರು ಗುದ್ದಿದ ರಭಸಕ್ಕೆ ಗೋಡೆ ಕುಸಿದು ಬಿದ್ದಿದೆ. ಘಟನೆಯಲ್ಲಿ ಓರ್ವನಿಗೆ ಗಾಯವಾಗಿದ್ದು, ಅದೃಷ್ಟವಶಾತ್ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ನಿಲ್ದಾಣದಲ್ಲಿ ಬೈಕ್ ಸವಾರರು ನಿಂತಿದ್ದರಿಂದ ಎಲ್ಲರ ಜೀವ ಉಳಿದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Latest

Viral Video: ಹೂ ಮಾರಿ ಜೀವನ ಮಾಡುವ ತಾಯಿ ಬಳಿ ಐಫೋನ್‌ಗಾಗಿ ಮಗ ಮಾಡಿದ ಬ್ಲ್ಯಾಕ್‌ಮೇಲ್‌ ಏನು ನೋಡಿ!

Viral Video: ಚಿಕ್ಕ ಹುಡುಗನೊಬ್ಬ ತನಗೆ ಐಪೋನ್ ಬೇಕೆಂದು ಮೂರು ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಮೂಲಕ ತನ್ನ ತಾಯಿಯನ್ನು ನಾಚಿಕೆಯಿಲ್ಲದೆ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ತಾಯಿ ಅಂತಿಮವಾಗಿ ಅವನ ಬೇಡಿಕೆಗಳಿಗೆ ಮಣಿದು ಐಫೋನ್ ಖರೀದಿಸಿಕೊಡಲು ಮುಂದಾಗಿದ್ದಾಳೆ. ಇದೀಗ ತಾಯಿ ಮಗನಿಗೆ ಹಣ ನೀಡಿ ಅವನೊಂದಿಗೆ ಮೊಬೈಲ್ ಅಂಗಡಿಗೆ ಕರೆದೊಯ್ಯುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡಿದೆ.

VISTARANEWS.COM


on

Viral Video
Koo


ಮುಂಬೈ: ಇಂದಿನ ಯುವಕರು ಸ್ಮಾರ್ಟ್‍ಫೋನ್‍ಗಳ ಬಗ್ಗೆ ವಿಪರೀತ ಗೀಳನ್ನು ಹೊಂದಿದ್ದಾರೆ. ತಮಗಿಷ್ಟವಾದ ಫೋನ್ ಪಡೆಯಲು ಏನು ಬೇಕಾದರೂ ಮಾಡುತ್ತಾರೆ. ಇದರಿಂದ ಪೋಷಕರು ತಮ್ಮ ಮಕ್ಕಳ ಆಸೆಗಳನ್ನು ಪೂರೈಸಲು ಒದ್ದಾಡುತ್ತಾರೆ. ತಮ್ಮ ಆಸೆಗಳನ್ನು ಬದಿಗೊತ್ತಿ ಮಕ್ಕಳ ಆಸೆ ಪೂರೈಸಲು ಹೆಣಗಾಡುತ್ತಾರೆ. ಅದರಲ್ಲೂ ಇತ್ತೀಚೆಗೆ ಮಾರುಕಟ್ಟೆಗೆ ಬಂದಂತಹ ದುಬಾರಿ ಬೆಲೆಯ ಐಫೋನ್ ಯುವ ಜನರನ್ನು ಹೆಚ್ಚು ಆಕರ್ಷಿಸುತ್ತದೆ. ಇದು ಬಡವರು ಮತ್ತು ಮಧ್ಯಮವರ್ಗದವರಿಗೆ ಖರೀದಿಸಲು ಸಾಧ್ಯವಾಗದಷ್ಟು ದುಬಾರಿಯಾಗಿದೆ. ಆದರೆ ಇಲ್ಲೊಬ್ಬ ಹುಡುಗ ಇಂತಹ ದುಬಾರಿ ಫೋನ್ ಅನ್ನು ತನಗೆ ಕೊಡಿಸುವಂತೆ ದೇವಾಲಯದಲ್ಲಿ ಹೂ ಮಾರಿ ಜೀವನ ಸಾಗಿಸುತ್ತಿದ್ದ ತಾಯಿಯ ಬಳಿ ಹಠ ಹಿಡಿದಿದ್ದಾನೆ. ಕೊನೆಗೂ ಆ ತಾಯಿ ಐಫೋನ್ ಮಗನಿಗೆ ಕೊಡಿಸಲು ಮುಂದಾಗಿದ್ದಾಳೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗುತ್ತಿದೆ.

ಚಿಕ್ಕ ಹುಡುಗನೊಬ್ಬ ತನಗೆ ಐಪೋನ್ ಬೇಕೆಂದು ಮೂರು ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಮೂಲಕ ತನ್ನ ತಾಯಿಯನ್ನು ನಾಚಿಕೆಯಿಲ್ಲದೆ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ತಾಯಿ ಅಂತಿಮವಾಗಿ ಅವನ ಬೇಡಿಕೆಗಳಿಗೆ ಮಣಿದು ಐಫೋನ್ ಖರೀದಿಸಿಕೊಡಲು ಮುಂದಾಗಿದ್ದಾಳೆ. ಇದೀಗ ತಾಯಿ ಮಗನಿಗೆ ಹಣ ನೀಡಿ ಅವನೊಂದಿಗೆ ಮೊಬೈಲ್ ಅಂಗಡಿಗೆ ಕರೆದೊಯ್ಯುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡಿದೆ.

ಘಟನೆ ನಡೆದ ನಿಖರವಾದ ಸ್ಥಳ ಇನ್ನೂ ಸ್ಪಷ್ಟವಾಗಿಲ್ಲ, ಆದರೆ ಐಫೋನ್‍ಗಾಗಿ ಹುಡುಗ ತಿನ್ನುವುದನ್ನು ನಿಲ್ಲಿಸಿದ್ದನು ಮತ್ತು ತನ್ನ ತಾಯಿಯ ಬಳಿ ಐಫೋನ್‍ಗಾಗಿ ಪದೇ ಪದೇ ಒತ್ತಾಯಿಸುತ್ತಿದ್ದನು. ಮೂರು ದಿನಗಳ ಉಪವಾಸ ಸತ್ಯಾಗ್ರಹದ ನಂತರ, ತಾಯಿ ಅಂತಿಮವಾಗಿ ಈ ದುಬಾರಿ ಫೋನ್ ಖರೀದಿಸಲು ಹಣವನ್ನು ನೀಡಿದಳು. ತಾಯಿ ಅವನಿಗೆ ಹಣವನ್ನು ನೀಡಿದರೂ ಕೂಡ ಅವಳು ನಿಜವಾಗಿಯೂ ಸಂತೋಷವಾಗಿಲ್ಲ ಎಂಬುದು ವಿಡಿಯೊದಲ್ಲಿ ಕಾಣಿಸುತ್ತದೆ. ಆದರೂ ಅವಳು ತನ್ನ ಮಗನಿಗಾಗಿ ಸಂತೋಷವಾಗಿದ್ದಾಳೆ ಎಂದು ತೋರಿಸಿಕೊಳ್ಳುತ್ತಿದ್ದಾಳೆ . ಆದರೆ ತನ್ನ ತಾಯಿ ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಫೋನ್‍ಗಾಗಿ ವ್ಯರ್ಥ ಮಾಡಿದ್ದಕ್ಕಾಗಿ ಇಂಟರ್ನೆಟ್ ಬಳಕೆದಾರರು ಹುಡುಗನನ್ನು ಟೀಕಿಸಿದ್ದಾರೆ. ಮತ್ತು ತಾಯಿಯನ್ನು ನೋಡಿ ಮರುಗಿದ್ದಾರೆ.

ಈ ಘಟನೆಯನ್ನು ಅಂಗಡಿಯವರು ತಮ್ಮ ಅಂಗಡಿಯ ಬಗ್ಗೆ ಜನರ ಗಮನಸೆಳೆಯಲು ಅದನ್ನು ವಿಡಿಯೊ ರೆಕಾರ್ಡ್ ಮಾಡಿ ಹಂಚಿಕೊಂಡಿದ್ದಾರೆ. ಆದರೆ ಇಂಟರ್ನೆಟ್ ಬಳಕೆದಾರರು ಹುಡುಗ ಮತ್ತು ಅಂಗಡಿಯವರಿಬ್ಬರೂ ಪರಿಸ್ಥಿತಿಯನ್ನು ಬಂಡವಾಳ ಮಾಡಿಕೊಂಡಿದ್ದಕ್ಕಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಒಬ್ಬ ಬಳಕೆದಾರರು ವಿಡಿಯೊವನ್ನು “ದುಃಖಕರ” ಎಂದು ಕಾಮೆಂಟ್ ಮಾಡಿದರೆ, ಇನ್ನೊಬ್ಬರು “ಈ ಪರಿಸ್ಥಿತಿಯನ್ನು ಬಂಡವಾಳ ಮಾಡಿಕೊಂಡ ಅಂಗಡಿಯವರು ತುಂಬಾ ಮೂರ್ಖರು” ಎಂದು ಕಾಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ:  12 ವರ್ಷದ ಬಾಲಕಿಯನ್ನು ಬಲವಂತವಾಗಿ ಮದುವೆಯಾದ 62ರ ಮುದುಕ! ಹೃದಯ ಕರಗಿಸುತ್ತದೆ ಈ ವಿಡಿಯೊ

ಆದರೆ ಈ ವಿಡಿಯೊ ನೋಡಿದಾಗ ತಿಳಿಯುವುದೆನೆಂದರೆ ಪೋಷಕರು ಮಕ್ಕಳ ಪ್ರತಿಯೊಂದು ಬೇಡಿಕೆಯನ್ನು ಪೂರೈಸುವ ಬಗ್ಗೆ ಜಾಗರೂಕರಾಗಿರಬೇಕು. ಯಾಕೆಂದರೆ ಇದರಿಂದ ಅವರಿಗೆ ಪೋಷಕರ ಕಷ್ಟ ಅರ್ಥವಾಗುವುದಿಲ್ಲ. ಅಲ್ಲದೇ ತಮ್ಮ ಮಕ್ಕಳನ್ನು ಅತಿಯಾದ ಫೋನ್ ಬಳಕೆಯಿಂದ ದೂರವಿಡಬೇಕು. ಹಾಗಾಗಿ ಪೋಷಕರು ಮಕ್ಕಳಿಗೆ ಕಷ್ಟಪಟ್ಟು ಸಂಪಾದಿಸಿದ ಹಣದ ಮೌಲ್ಯದ ಬಗ್ಗೆ ತಿಳುವಳಿಕೆಯನ್ನು ನೀಡುವುದು ಬಹಳ ಮುಖ್ಯ.

Continue Reading

ವೈರಲ್ ನ್ಯೂಸ್

Viral Video: ದೇವಸ್ಥಾನದಿಂದ ಬರ್ತಿದ್ದ ಪುರೋಹಿತರ ಮೇಲೆ ಚಾಕು, ದೊಣ್ಣೆಯಿಂದ ಡೆಡ್ಲಿ ಅಟ್ಯಾಕ್‌! ವಿಡಿಯೋ ಇದೆ

Viral Video: ಆ.17ರಂದು ಈ ಭೀಕರ ಘಟನೆ ನಡೆದಿದ್ದು, ಪ್ರಾಥಮಿಕ ಮಾಹಿತಿಯ ಪ್ರಕಾರ ಅರ್ಚಕರು ದೇವಸ್ಥಾನದಿಂದ ಹಿಂತಿರುಗುತ್ತಿದ್ದರು. ಈ ವೇಳೆ ಅವರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ಗುಂಪೊಂದು ಚಾಕುವಿನಿಂದ ಇರಿದಿದೆ. ಗುಂಪು ಗುಂಪುಗಳಾಗಿ ಪುರೋಹಿತರ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ಕಿತ್ತಳೆ ಬಣ್ಣದ ಬಟ್ಟೆ ಧರಿಸಿದ್ದ ಒಬ್ಬ ಪುರೋಹಿತ ರಸ್ತೆಯಲ್ಲಿ ಬಿದ್ದ ಸ್ಕೂಟರ್‌ನ ಹತ್ತಿರ ನಿಂತಿರುವುದು ಕಂಡುಬಂದರೆ, ಮತ್ತೊಬ್ಬ ಬಿಳಿಬಣ್ಣದ ಬಟ್ಟೆ ಧರಿಸಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಹಲ್ಲೆ ನಡೆಸಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

VISTARANEWS.COM


on

Viral Video
Koo

ಮುಂಬೈ: ದೇವಸ್ಥಾನದಿಂದ ಪೂಜೆ ಮುಗಿಸಿ ಹಿಂದಿರುಗುತ್ತಿದ್ದ ಹಿಂದೂ ಪುರೋಹಿತರ ಮೇಲೆ ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ(Priests attacked) ನಡೆಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಇಲ್ಲಿನ ಲಾಲ್ಜಿಪಾಡಾದ ಕಾಂದಿವಲಿಯಲ್ಲಿ ಈ ಆಘಾತಕಾರಿ ಘಟನೆ ವರದಿಯಾಗಿದ್ದು, ಜನನಿಬಿಡ ರಸ್ತೆಯಲ್ಲಿ ಚಾಕು ಮತ್ತು ಕೋಲುಗಳಿಂದ ಶಸ್ತ್ರಸಜ್ಜಿತವಾದ ಗುಂಪೊಂದು ಇಬ್ಬರು ಹಿಂದೂ ಪುರೋಹಿತರ ಮೇಲೆ ಹಲ್ಲೆ ನಡೆಸಿದೆ. ಈ ಆಘಾತಕಾರಿ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌(Viral Video) ಆಗುತ್ತಿದೆ.

ಆ.17ರಂದು ಈ ಭೀಕರ ಘಟನೆ ನಡೆದಿದ್ದು, ಪ್ರಾಥಮಿಕ ಮಾಹಿತಿಯ ಪ್ರಕಾರ ಅರ್ಚಕರು ದೇವಸ್ಥಾನದಿಂದ ಹಿಂತಿರುಗುತ್ತಿದ್ದರು. ಈ ವೇಳೆ ಅವರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ಗುಂಪೊಂದು ಚಾಕುವಿನಿಂದ ಇರಿದಿದೆ. ಗುಂಪು ಗುಂಪುಗಳಾಗಿ ಪುರೋಹಿತರ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ಕಿತ್ತಳೆ ಬಣ್ಣದ ಬಟ್ಟೆ ಧರಿಸಿದ್ದ ಒಬ್ಬ ಪುರೋಹಿತ ರಸ್ತೆಯಲ್ಲಿ ಬಿದ್ದ ಸ್ಕೂಟರ್‌ನ ಹತ್ತಿರ ನಿಂತಿರುವುದು ಕಂಡುಬಂದರೆ, ಮತ್ತೊಬ್ಬ ಬಿಳಿಬಣ್ಣದ ಬಟ್ಟೆ ಧರಿಸಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಹಲ್ಲೆ ನಡೆಸಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಒಬ್ಬ ವ್ಯಕ್ತಿಯು ಚಾಕುವನ್ನು ಹಿಡಿದಿರುವುದು ಕಂಡುಬರುತ್ತದೆ, ಇತರರು ತಮ್ಮ ಕೈಯಲ್ಲಿ ಕೋಲುಗಳನ್ನು ಹಿಡಿದಿರುವುದು ಕಂಡುಬರುತ್ತದೆ. ಆದರೆ, ದಾಳಿಯ ಹಿಂದಿನ ಕಾರಣ ತಿಳಿದುಬಂದಿಲ್ಲ.

ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ದಾಳಿಯಲ್ಲಿ ಕನಿಷ್ಠ 5 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಲಭ್ಯವಾದ ಮಾಹಿತಿಯ ಪ್ರಕಾರ, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಮತ್ತು ಅರ್ಚಕರ ಮೇಲಿನ ಅಮಾನುಷ ಹಲ್ಲೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದಾರೆ.

ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶ(Uttar Pradesh)ದ ಲಕ್ನೋದಲ್ಲಿ ಸಾಧುಗಳಂತೆ ನಟಿಸಿ ಜನರ ಬೆಲೆಬಾಳುವ ವಸ್ತುಗಳು ಮತ್ತು ಹಣವನ್ನು ದೋಚುತ್ತಿದ್ದ ನಾಲ್ವರು ಯುವಕರನ್ನು ಗ್ರಾಮಸ್ಥರು ಅಮಾನುಷವಾಗಿ ಥಳಿಸಿದ್ದಾರೆ. ನಾಲ್ವರನ್ನು ದೈಹಿಕವಾಗಿ ಚಪ್ಪಲಿಯಿಂದ ಹಲ್ಲೆ ನಡೆಸಲಾಗಿದ್ದು, ಈ ಘಟನೆಯ ವಿಡಿಯೋದಲ್ಲಿ ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಸಾಧುಗಳ ವೇಷ ಧರಿಸಿದ ಪುರುಷರು ಮಹುರಕಲಾ ಗ್ರಾಮದ ಅಂಗಡಿಯೊಂದಕ್ಕೆ ಭೇಟಿ ನೀಡಿದಾಗ ಗಲಾಟೆ ಶುರುವಾಗಿತ್ತು. ಅಂಗಡಿಯವನಿಗೆ ತಿಲಕವನ್ನು ಹಚ್ಚಿ, ಪ್ರಸಾದವನ್ನು ಕೊಡುವ ಮೊದಲು 1,100 ರೂಪಾಯಿಗಳನ್ನು ಕೊಡುವಂತೆ ಮನವೊಲಿಸಿದರು. ಒಮ್ಮೆ ಅಂಗಡಿಯವನು ಪ್ರಜ್ಞಾಹೀನನಾಗಿ ಬಿದ್ದಾಗ, ಖದೀಮರು ಪರಾರಿಯಾಗುವ ಮೊದಲು ಅಂಗಡಿಯಲ್ಲಿದ್ದ ಮೂರು ಗೋಣಿ ಸಾಸಿವೆ ಮತ್ತು ಹಣವನ್ನು ಕದ್ದೊಯ್ದಿದ್ದರು.

ಇದನ್ನೂ ಓದಿ: Mistaken Identity | ಕಳ್ಳರೆಂದು ಭಾವಿಸಿ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ ಹೊಸಮನಿ ಹಟ್ಟಿ ಗ್ರಾಮಸ್ಥರು

Continue Reading

ವೈರಲ್ ನ್ಯೂಸ್

Viral Video: ಪಬ್ಲಿಕ್‌ನಲ್ಲೇ ಲಂಚದ ಹಣ ಹಂಚಿಕೊಂಡ ಟ್ರಾಫಿಕ್‌ ಪೊಲೀಸರು; ಖಾಕಿಯ ಲಂಚಾವತಾರ ಸಿಸಿಟಿವಿಯಲ್ಲಿ ಸೆರೆ

Viral Video: ಗಾಜಿಪುರ ಪೊಲೀಸ್ ಠಾಣೆಯಾ ಎದುರು ಕಲ್ಯಾಣಪುರಿ ವೃತ್ತದಲ್ಲಿ ಈ ಘಟನೆ ನಡೆದಿದೆ. ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರಿ ಪೊಲೀಸರು ಅಲ್ಲೇ ಒಂದು ಸಣ್ಣ ಶೆಡ್ ಮಾಡಿಕೊಂಡು ಅಲ್ಲಿ ವಾಹನ ಸವಾರರನ್ನು ದಾಖಲೆ ಪರಿಶೀಲನೆ ನೆಪದಲ್ಲಿ ಸುಲಿಗೆ ಮಾಡುತ್ತಿದ್ದಾರೆ ಎಂಬ ಆರೋಪ ಹಲವು ದಿನಗಳಿಂದ ಕೇಳಿಬಂದಿತ್ತು. ಈ ವಿಡಿಯೋದಲ್ಲಿ ರೆಡ್‌ ಹ್ಯಾಂಡಾಗಿ ಸಿಕ್ಕಿಕೊಂಡಿರುವ ಲಂಚಕೋರ ಮೂವರು ಸಂಚಾರಿ ಪೊಲೀಸರು ಬಂದ ಹಣವನ್ನು ಹಂಚಿಕೊಳ್ಳುತ್ತಿರುವುದು ಬಯಲಾಗಿದೆ.

VISTARANEWS.COM


on

Viral Video
Koo

ನವದೆಹಲಿ: ಟ್ರಾಫಿಕ್‌ ಪೊಲೀಸ(Traffic Police)ರ ವಿರುದ್ಧ ಲಂಚ(Bribe)ದ ಆರೋಪ ಕೇಳಿ ಬರುವುದು ಸರ್ವೇ ಸಾಮಾನ್ಯ. ಟ್ರಾಫಿಕ್‌ ರೂಲ್ಸ್‌ ಬ್ರೇಕ್‌ ಮಾಡುವವರಿಂದ ಹಣ ಪೀಕಿಸಿ ತಮ್ಮ ಜೇಬ ತುಂಬಿಸಿಕೊಂಡು ಕೆಲವೊಮ್ಮೆ ಸಿಕ್ಕಿಹಾಕಿಕೊಂಡಿರುವ ಘಟನೆಗಳೂ ಆಗಾಗ ಬೆಳಕಿಗೆ ಬರುತ್ತಿರುತ್ತವೆ. ಇದೀಗ ಅಂತಹದ್ದೇ ಒಂದು ಘಟನೆ ವರದಿಯಾಗಿದೆ. ವಾಹನ ತಪಾಸಣೆ ನೆಪದಲ್ಲಿ ವಾಹನ ಸವಾರರಿಂದ ಪಡೆದ ಲಂಚದ ಹಣವನ್ನು ಮೂವರು ಟ್ರಾಫಿಕ್ ಪೊಲೀಸರು ಹಂಚಿಕೊಳ್ಳುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral Video) ಆಗಿದೆ.

ಗಾಜಿಪುರ ಪೊಲೀಸ್ ಠಾಣೆಯಾ ಎದುರು ಕಲ್ಯಾಣಪುರಿ ವೃತ್ತದಲ್ಲಿ ಈ ಘಟನೆ ನಡೆದಿದೆ. ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರಿ ಪೊಲೀಸರು ಅಲ್ಲೇ ಒಂದು ಸಣ್ಣ ಶೆಡ್ ಮಾಡಿಕೊಂಡು ಅಲ್ಲಿ ವಾಹನ ಸವಾರರನ್ನು ದಾಖಲೆ ಪರಿಶೀಲನೆ ನೆಪದಲ್ಲಿ ಸುಲಿಗೆ ಮಾಡುತ್ತಿದ್ದಾರೆ ಎಂಬ ಆರೋಪ ಹಲವು ದಿನಗಳಿಂದ ಕೇಳಿಬಂದಿತ್ತು. ಈ ವಿಡಿಯೋದಲ್ಲಿ ರೆಡ್‌ ಹ್ಯಾಂಡಾಗಿ ಸಿಕ್ಕಿಕೊಂಡಿರುವ ಲಂಚಕೋರ ಮೂವರು ಸಂಚಾರಿ ಪೊಲೀಸರು ಬಂದ ಹಣವನ್ನು ಹಂಚಿಕೊಳ್ಳುತ್ತಿರುವುದು ಬಯಲಾಗಿದೆ. ಅಲ್ಲದೆ ಇದಕ್ಕೆ ಪೂರಕ ಎಂಬಂತೆ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಈ ಮೂವರು ಸಂಚಾರಿ ಪೊಲೀಸರು ಹಣ ಹಂಚಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದೆ.

ಮತ್ತೊಂದು ವಿಡಿಯೋದಲ್ಲಿ ವಾಹನ ಚಾಲಕನೊಬ್ಬ ಚೌಕಿಯ ಬಳಿ ಬಂದು ಪೊಲೀಸರ ಜೊತೆ ಮಾತನಾಡುವ ದೃಶ್ಯವಿದೆ. ಕೆಲ ಹೊತ್ತಿನ ಮಾತುಕತೆ ಬಳಿಕ ಟ್ರಾಫಿಕ್ ಪೊಲೀಸ್ ಆತನಿಂದ ಲಂಚವಾಗಿ ಹಣ ಪಡೆದಿದ್ದಾರೆ. ಆದರೆ ನೇರವಾಗಿ ಹಣ ಪಡೆಯದೇ, ಕುಳಿತಿಕೊಂಡ ಬಳಿ ಇಡುವಂತೆ ಸೂಚಿದ್ದಾನೆ. ಲಂಚದ ರೂಪದಲ್ಲಿ ಹಣ ಇಟ್ಟು ವಾಹನ ಚಾಲಕ ತೆರಳಿದ್ದಾನೆ.

ಮೂವರೂ ಸಸ್ಪೆಂಡ್‌

ಇತ್ತ ವಿಡಿಯೋ ವೈರಲ್ ಆಗುತ್ತಿದ್ದಂತೆ ತನಿಖೆ ನಡೆಸಿದ ಹಿರಿಯ ಪೊಲೀಸ್ ಅಧಿಕಾರಿ ಮೂವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ. ಇದರ ಹಿನ್ನೆಲೆಯಲ್ಲಿ ಅಪರಾಧವೆಸಗಿದ ಮೂವರು ಟ್ರಾಫಿಕ್ ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಶನಿವಾರ ಎಕ್ಸ್ ನಲ್ಲಿ ಪೋಸ್ಟ್ ನಲ್ಲಿ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದ್ದಾರೆ

ಇದನ್ನೂ ಓದಿ: Viral News: 5 ಕೆಜಿ ಆಲೂಗಡ್ಡೆ ಲಂಚ ಕೇಳಿ ಅಮಾನತುಗೊಂಡ ಸಬ್‌ ಇನ್ಸ್‌ಪೆಕ್ಟರ್ !

Continue Reading
Advertisement
murder case
ಚಿಕ್ಕಬಳ್ಳಾಪುರ5 mins ago

Murder case : ಪಿತ್ರಾರ್ಜಿತ ಆಸ್ತಿಗಾಗಿ ತಾರಕಕ್ಕೇರಿದ ಗಲಾಟೆ; ವ್ಯಕ್ತಿಯ ಕೊಲೆಯಲ್ಲಿ ಅಂತ್ಯ

BJP-JDS Protest
ಪ್ರಮುಖ ಸುದ್ದಿ10 mins ago

BJP-JDS Protest: ಭಂಡತನ ಬಿಟ್ಟು ರಾಜೀನಾಮೆ ಕೊಡಿ; ಸಿಎಂ ಸಿದ್ದರಾಮಯ್ಯಗೆ ಬಿಜೆಪಿ-ಜೆಡಿಎಸ್‌ ನಾಯಕರ ಆಗ್ರಹ

Chhaava teaser Vicky Kaushal Rashmika M
ಸ್ಯಾಂಡಲ್ ವುಡ್1 hour ago

Chhaava teaser: ‘ಛಾವಾ’ ಟೀಸರ್ ಔಟ್‌; ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರದಲ್ಲಿ ಗರ್ಜಿಸಿದ ವಿಕ್ಕಿ ಕೌಶಲ್!

Road Accident
ಬೆಂಗಳೂರು1 hour ago

Road Accident : ಸರ್ಜಾಪುರದಲ್ಲಿ ಎದೆ ಝುಲ್‌ ಎನ್ನುವ ಡೆಡ್ಲಿ ಆ್ಯಕ್ಸಿಡೆಂಟ್‌; ಬೈಕ್‌ ಸವಾರ ಬದುಕಿದ್ದೆ ಪವಾಡ

Uttarakhand Horror
ದೇಶ1 hour ago

Uttarakhand Horror: ದೇಶವನ್ನೇ ಬೆಚ್ಚಿಬೀಳಿಸೋ ಮತ್ತೊಂದು ಘಟನೆ! ಬಸ್‌ನಲ್ಲೇ ಯುವತಿ ಮೇಲೆ ಡ್ರೈವರ್‌ ಸೇರಿ ಐವರಿಂದ ಗ್ಯಾಂಗ್‌ರೇಪ್‌

muda case congress protest
ಪ್ರಮುಖ ಸುದ್ದಿ1 hour ago

MUDA Case: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ; ರಾಜಭವನ ಮುತ್ತಿಗೆಗೆ ಯತ್ನಿಸಿದ ಕಾರ್ಯಕರ್ತರು

Vettaiyan VS Kanguva Vettaiyan to clash with Suriya's Kanguva
ಕಾಲಿವುಡ್2 hours ago

Vettaiyan VS Kanguva: ರಜನಿಕಾಂತ್ ಹೊಸ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌; ʻಕಂಗುವʼ ಜತೆ ಕ್ಲ್ಯಾಶ್‌!

Viral Video
Latest2 hours ago

Viral Video: ಹೂ ಮಾರಿ ಜೀವನ ಮಾಡುವ ತಾಯಿ ಬಳಿ ಐಫೋನ್‌ಗಾಗಿ ಮಗ ಮಾಡಿದ ಬ್ಲ್ಯಾಕ್‌ಮೇಲ್‌ ಏನು ನೋಡಿ!

Duniya Vijay 20 crore collection till today
ಸ್ಯಾಂಡಲ್ ವುಡ್2 hours ago

Duniya Vijay: 20 ಕೋಟಿ ರೂ. ಕಲೆಕ್ಷನ್‌ ಮಾಡಿ ʻಭೀಮʼ ದಾಖಲೆ ? ಇಲ್ಲಿಯವರೆಗಿನ ಕಲೆಕ್ಷನ್‌ ಎಷ್ಟು?

assault case
ಉಡುಪಿ2 hours ago

Assault Case : ಕುಂದಾಪುರದಲ್ಲಿ ಗಾಂಜಾ ನಶೆಯಲ್ಲಿ ಝಳಪಿಸಿದ ತಲ್ವಾರ್‌; ಇಬ್ಬರು ಗಂಭೀರ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌